Money Guide: ಹಬ್ಬಕ್ಕೆ ಚಿನ್ನ ಖರೀದಿಸುತ್ತಿದ್ದೀರಾ? ಈ ಸಂಗತಿಗಳು ಗೊತ್ತಿರಲಿ - Vistara News

ಮನಿ-ಗೈಡ್

Money Guide: ಹಬ್ಬಕ್ಕೆ ಚಿನ್ನ ಖರೀದಿಸುತ್ತಿದ್ದೀರಾ? ಈ ಸಂಗತಿಗಳು ಗೊತ್ತಿರಲಿ

Money Guide: ನವರಾತ್ರಿ ಹಬ್ಬದ ಸಮಯದಲ್ಲಿ ಚಿನ್ನಾಭರಣ ಖರೀದಿಸುವ ಯೋಜನೆಯಲ್ಲಿದ್ದೀರಾ? ಹಾಗಾದರೆ ವಿಷಯಗಳು ನಿಮ್ಮ ಗಮನದಲ್ಲಿರಲಿ.

VISTARANEWS.COM


on

gold
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಬ್ಬಗಳ ಸಂದರ್ಭದಲ್ಲಿ ಚಿನ್ನ ಖರೀದಿಸುವುದು ಭಾರತದಲ್ಲಿ ಸಾಮಾನ್ಯವಾಗಿ ಕಂಡುಬರುವ ವಿದ್ಯಮಾನ. ಅಲ್ಲದೆ ಈ ಸಂದರ್ಭಗಳಲ್ಲಿ ಜ್ಯುವೆಲ್ಲರಿಗಳು ವಿವಿಧ ಕೊಡುಗೆಗಳನ್ನು ಘೋಷಿಸಿ ಗ್ರಾಹಕರನ್ನು ಆಕರ್ಷಿಸುತ್ತವೆ. ಅದರಲ್ಲೂ ಈಗ ನವರಾತ್ರಿ (Navaratri) ಹಬ್ಬ. ಚಿನ್ನಾಭರಣ ಖರೀದಿ ಜೋರಾಗಿಯೇ ಇದೆ. ವಿಶೇಷವಾಗಿ ಆರ್ಥಿಕ ಅನಿಶ್ಚಿತತೆಯ ಸಮಯದಲ್ಲಿ ಚಿನ್ನವನ್ನು ಸುರಕ್ಷಿತ ಮತ್ತು ಮೌಲ್ಯಯುತ ಹೂಡಿಕೆಯಾಗಿ ಪರಿಗಣಿಸಲಾಗುತ್ತದೆ. ಹಬ್ಬದ ಋತುವಿನಲ್ಲಿ ಚಿನ್ನವನ್ನು ಖರೀದಿಸುವುದು ಭವಿಷ್ಯಕ್ಕಾಗಿ ಉಳಿತಾಯ ಮಾಡಲು ಮತ್ತು ಭವಿಷ್ಯದ ಪೀಳಿಗೆಗೆ ಸಂಪತ್ತನ್ನು ರವಾನಿಸುವ ಮತ್ತೊಂದು ಮಾರ್ಗವೇ ಆಗಿರುತ್ತದೆ. ಹೀಗಿದ್ದೂ ಚಿನ್ನ ಖರೀದಿಸುವಾಗ ಕೆಲವೊಂದು ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು(Money Guide).

ಚಿನ್ನದ ಪರಿಶುದ್ಧತೆ

ಚಿನ್ನವನ್ನು ಕ್ಯಾರೆಟ್‌ ವಿಧಾನದಲ್ಲಿ ಅಳೆಯಲಾಗುತ್ತದೆ. ನೀವು ಖರೀದಿಸುವ ಚಿನ್ನದ ಪರಿಶುದ್ಧತೆಯನ್ನು ಅದರ ಕ್ಯಾರೆಟ್‌ ಗಮನಿಸಿ ತಿಳಿದುಕೊಳ್ಳಿ. ಸಾಮಾನ್ಯವಾಗಿ 24, 22 ಮತ್ತು 18 ಕ್ಯಾರೆಟ್‌ ಚಿನ್ನವನ್ನು ಪರಿಶುದ್ಧವೆಂದು ಪರಿಗಣಿಸಲಾಗುತ್ತದೆ. ಚಿನ್ನದ ಆಭರಣಗಳ ಮೇಲೆ ಹಾಲ್‌ ಮಾರ್ಕಿಂಗ್ ಇದೆಯೇ ಎಂಬುದನ್ನು ಪರಿಶೀಲಿಸಿ. ಇದು ಶುದ್ಧತೆಯನ್ನು ಪ್ರಮಾಣೀಕರಿಸುತ್ತದೆ. ಭಾರತದಲ್ಲಿ ಸಾಮಾನ್ಯವಾಗಿ 24 ಮತ್ತು 22 ಕ್ಯಾರೆಟ್‌ ಶುದ್ಧ ಚಿನ್ನವನ್ನು ಮಾರಾಟ ಮಾಡಲಾಗುತ್ತದೆ. ಅದರಲ್ಲೂ 24 ಕ್ಯಾರೆಟ್‌ ಚಿನ್ನ ಪರಿಶುದ್ಧವಾಗಿದ್ದರೂ ಇದು ತುಂಬಾ ಮೃದುವಾಗಿರುತ್ತದೆ. ಇದರಲ್ಲಿ ಆಭರಣ ಮಾಡಲು ಸಾಧ್ಯವಿಲ್ಲ. ಇತ್ತ 22 ಕ್ಯಾರೆಟ್‌ ಅನ್ನು ಸುಲಭವಾಗಿ ಬೇಕಾದ ಆಕಾರಕ್ಕೆ ತರಬಹುದು. ಹೀಗಾಗಿ ಜ್ಯುವೆಲ್ಲರಿಯಿಂದ ಪರಿಶುದ್ಧತೆಯ ಸರ್ಟಿಫಿಕೆಟ್‌ ಕೇಳಿ ಪಡೆಯಿರಿ.

ಮಾರುಕಟ್ಟೆ ಬೆಲೆ

ಖರೀದಿಗೆ ಮುನ್ನ ಚಿನ್ನದ ಪ್ರಸ್ತುತ ಬೆಲೆಯ ಬಗ್ಗೆ ಸಾಕಷ್ಟು ಮಾಹಿತಿ ಕಲೆ ಹಾಕಿ. ಚಿನ್ನದ ಬೆಲೆಯ ಮೇಲೆ ಹಲವು ವಿಚಾರಗಳು ಪ್ರಭಾವ ಬೀರುತ್ತದೆ. ಅದರಲ್ಲೂ ಜಾಗತಿಕ ಆರ್ಥಿಕ ಪರಿಸ್ಥಿತಿ ಪ್ರಭಾವ ತುಸು ಹೆಚ್ಚೇ ಇರುತ್ತದೆ. ಹೀಗಾಗಿ ದರ ತಿಳಿದುಕೊಂಡರೆ ಖರೀದಿಯ ಬಗ್ಗೆ ಸ್ಪಷ್ಟ ನಿಲುವು ತಾಳಲು ಸಾಧ್ಯವಾಗುತ್ತದೆ. ಅಲ್ಲದೆ ಇದರಿಂದ ಕೊನೆಯ ಕ್ಷಣದ ಗೊಂದಲದಿಂದ ಪಾರಾಗಬಹುದು.

ವೆಚ್ಚದ ಬಗ್ಗೆ ಮಾಹಿತಿ ಇರಲಿ

ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ (Making Charges) ಎಂದು ಕರೆಯುತ್ತಾರೆ. ಈ ವೆಚ್ಚವು ಪ್ರತಿ ಜ್ಯುವೆಲ್ಲರಿಯಲ್ಲಿ ಬದಲಾಗಬಹುದು. ಹೀಗಾಗಿ ತಯಾರಿಕಾ ವೆಚ್ಚದ ಬಗ್ಗೆಯೂ ಗಮನ ಹರಿಸಿ.

ಬಿಲ್ ರಶೀದಿಯನ್ನು ಕೇಳಿ ಪಡೆಯಿರಿ

ಯಾವಾಗಲೂ ವಿವರವಾದ ಬಿಲ್ ಮತ್ತು ರಸೀದಿಯನ್ನು ಕೇಳಿ ಪಡೆಯಿರಿ. ಈ ದಾಖಲೆಯು ಚಿನ್ನದ ಶುದ್ಧತೆ, ತೂಕ, ಮೇಕಿಂಗ್ ಶುಲ್ಕಗಳು ಮತ್ತು ಪಾವತಿಸಿದ ಒಟ್ಟು ಮೊತ್ತದ ಮಾಹಿತಿಯನ್ನು ಒಳಗೊಂಡಿರಬೇಕು. ಭವಿಷ್ಯದ ಅಗತ್ಯಗಳಿಗಾಗಿ ಬಿಲ್ ಅನ್ನು ಸುರಕ್ಷಿತವಾಗಿ ತೆಗೆದಿರಿಸಿಕೊಳ್ಳಿ. ವಿಶೇಷವಾಗಿ ನೀವು ಆಭರಣಗಳನ್ನು ಮಾರಾಟ ಮಾಡಲು ಅಥವಾ ವಿನಿಮಯ ಮಾಡಲು ಯೋಚಿಸುತ್ತಿದ್ದರೆ ಇದು ಮುಖ್ಯ. ಬಿಲ್ ಈ ಮಾಹಿತಿಗಳನ್ನು ಒಗೊಂಡಿರುವುದು ಕಡ್ಡಾಯ: ಖರೀದಿಯ ದಿನಾಂಕ ಮತ್ತು ಸಮಯ, ಚಿನ್ನದ ತೂಕ, ಚಿನ್ನದ ಪರಿಶುದ್ಧತೆ, ತಯಾರಿಕಾ ವೆಚ್ಚ, ಒಟ್ಟು ಬೆಲೆ, ಮರು ಖರೀದಿ ನೀತಿ.

ಬಿಐಎಸ್ ಹಾಲ್‌ಮಾರ್ಕ್ ಪರೀಕ್ಷಿಸಿ

ಚಿನ್ನದ ಆಭರಣಗಳ ಮೇಲೆ ಬಿಐಎಸ್(ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್) ಹಾಲ್‌ಮಾರ್ಕ್‌ ಇರುವುದನ್ನು ಖಚಿತಪಡಿಸಿ. ಬಿಐಎಸ್ ಹಾಲ್‌ಮಾರ್ಕ್‌ ಆಭರಣಗಳನ್ನು ಸಾಮಾನ್ಯವಾಗಿ ಹೆಚ್ಚು ವಿಶ್ವಾಸಾರ್ಹವೆಂದು ಪರಿಗಣಿಸಲಾಗುತ್ತದೆ.

ಮಾರಾಟಗಾರರ ನೀತಿಗಳನ್ನು ಗಮನಿಸಿ

ಜ್ಯುವೆಲ್ಲರಿಯ ರಿಟರ್ನ್ ಅಥವಾ ವಿನಿಮಯ ನೀತಿಗಳ ಬಗ್ಗೆ ವಿಚಾರಿಸಿ. ನೀವು ಆಭರಣಗಳನ್ನು ಹಿಂದಿರುಗಿಸಲು ಅಥವಾ ವಿನಿಮಯ ಮಾಡಿಕೊಳ್ಳಲು ಬಯಸಿದರೆ ನಿಯಮಗಳು ಮತ್ತು ಷರತ್ತುಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಕೆಲವು ವ್ಯಾಪಾರಿಗಳು ಆಭರಣಗಳಲ್ಲಿ ಹುದುಗಿರುವ ವಜ್ರಗಳು ಅಥವಾ ಇತರ ಅಮೂಲ್ಯ ಕಲ್ಲುಗಳಿಗೆ ಪ್ರಮಾಣಪತ್ರಗಳನ್ನು ನೀಡಬಹುದು. ಅದನ್ನು ಖಚಿತಪಡಿಸಿಕೊಳ್ಳಿ.

ಸುರಕ್ಷಿತ ಪಾವತಿ ಮಾಡಿ

ಖರೀದಿ ಮಾಡುವಾಗ ಸುರಕ್ಷಿತ ಪಾವತಿ ವಿಧಾನಗಳನ್ನು ಬಳಸಿ. ನಗದು ರೂಪದಲ್ಲಿ ದೊಡ್ಡ ವಹಿವಾಟುಗಳನ್ನು ಮಾಡುವುದನ್ನು ತಪ್ಪಿಸಿ ಮತ್ತು ಡಿಜಿಟಲ್ ಪಾವತಿ ವಿಧಾನಗಳು ಅಥವಾ ಚೆಕ್ ಉಪಯೋಗಿಸಿ. ನೀವು ಅಧಿಕ ಮೊತ್ತದ ಖರೀದಿ ಮಾಡುತ್ತಿದ್ದರೆ ಹೆಚ್ಚುವರಿ ಭದ್ರತೆ ಮತ್ತು ಕೊಡುಗೆಗಳಿಗಾಗಿ ಕ್ರೆಡಿಟ್ ಕಾರ್ಡ್ ಬಳಸುವುದು ಉತ್ತಮ.

ಬೆಲೆಗಳನ್ನು ಹೋಲಿಸಿ

ಬೆಲೆಗಳು ಮತ್ತು ಗುಣಮಟ್ಟವನ್ನು ಹೋಲಿಸಲು ಅನೇಕ ಆಭರಣ ತಯಾರಕರಲ್ಲಿ ವಿಚಾರಿಸಿ. ನಿಮ್ಮ ಹಣಕ್ಕೆ ಉತ್ತಮ ಮೌಲ್ಯವನ್ನು ಪಡೆಯಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ: Money Guide: ದುಡ್ಡೇ ದೊಡ್ಡಪ್ಪ, ಸೇವಿಂಗ್ಸ್ ಅದರ ಅಪ್ಪ;‌ ಹಣ ಉಳಿಸಲು ಇಲ್ಲಿವೆ 9 ಸೂತ್ರಗಳು

ಸಮಯೋಚಿತ ಪಾವತಿ ಮಾಡಿ

ನೀವು ಬುಕಿಂಗ್ ಅಥವಾ ಮುಂಗಡ ಪಾವತಿ ಮಾಡುತ್ತಿದ್ದರೆ ವ್ಯವಹಾರವನ್ನು ಪೂರ್ಣಗೊಳಿಸುವ ಸಮಯದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ. ವಿಳಂಬವು ಚಿನ್ನದ ಬೆಲೆಯಲ್ಲಿ ಬದಲಾವಣೆಗಳಿಗೆ ಕಾರಣವಾಗಬಹುದು.

ನಿಯಮಗಳ ಬಗ್ಗೆ ಗೊತ್ತಿರಲಿ

ಚಿನ್ನದ ಖರೀದಿಗೆ ಸಂಬಂಧಿಸಿದ ಯಾವುದೇ ಸರ್ಕಾರಿ ನಿಯಮಗಳು ಅಥವಾ ತೆರಿಗೆಯಲ್ಲಿನ ಬದಲಾವಣೆಗಳ ಬಗ್ಗೆ ನಿಮಗೆ ಮಾಹಿತಿ ಇರಲಿ. ಇದು ಚಿನ್ನವನ್ನು ಖರೀದಿಸುವ ಒಟ್ಟಾರೆ ವೆಚ್ಚದ ಮೇಲೆ ಇದು ಪರಿಣಾಮ ಬೀರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮನಿ-ಗೈಡ್

Tax Saving Tips: 10 ಲಕ್ಷ ರೂ. ಆದಾಯ ಇದ್ದರೂ ತೆರಿಗೆಯಿಂದ ಪಾರಾಗಲು ಸಾಧ್ಯ! ಇಲ್ಲಿದೆ ಸರಳ ಲೆಕ್ಕಾಚಾರ!

Tax Saving Tips: ಕೇಂದ್ರ ಬಜೆಟ್‌ನಲ್ಲಿ ಈ ಬಾರಿ 7.75 ಲಕ್ಷ ರೂ.ವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸಿರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಆದರೆ ವಾರ್ಷಿಕ ಆದಾಯ 10 ಲಕ್ಷ ರೂ.ಗಳಿದ್ದರೂ ಆದಾಯ ತೆರಿಗೆಯಿಂದ (Money Guide) ಮುಕ್ತರಾಗಿ ಇರಬಹುದು. ಇದು ಹೇಗೆ ಎನ್ನುವ ಲೆಕ್ಕಾಚಾರ ಇಲ್ಲಿದೆ.

VISTARANEWS.COM


on

By

Tax Saving Tips
Koo

ಕೇಂದ್ರ ಬಜೆಟ್‌ನಲ್ಲಿ (Union Budget 2024) ಈ ಬಾರಿ (Tax Saving Tips) ಹಣಕಾಸು (Money Guide) ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರು ಹೊಸ ತೆರಿಗೆ ಪದ್ಧತಿಯಡಿ (New Tax Regime) ಬಹುದೊಡ್ಡ ತೆರಿಗೆ ವಿನಾಯಿತಿಯನ್ನು ನೀಡಿದ್ದಾರೆ. ಪ್ರಮಾಣಿತ ತೆರಿಗೆ ಕಡಿತವನ್ನು (standard tax deduction) 50,000 ರೂ.ನಿಂದ 75,000 ರೂ.ಗೆ ಹೆಚ್ಚಿಸಿದ್ದಾರೆ. ಹೀಗಾಗಿ ಸಾಮಾನ್ಯ ಭಾರತೀಯ ನಾಗರಿಕರು 7.75 ಲಕ್ಷ ರೂ.ವರೆಗಿನ ಆದಾಯವನ್ನು (Money Guide) ತೆರಿಗೆ (tax free) ಮುಕ್ತಗೊಳಿಸಬಹುದು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರಾವಧಿಯ 3.0ರ ಮೊದಲ ಬಜೆಟ್‌ನಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಜನರಿಗೆ ಬಹುದೊಡ್ಡ ಪ್ರಯೋಜನವನ್ನು ನೀಡಲಾಗಿದೆ. ಇದರಲ್ಲಿ ಹೊಸ ತೆರಿಗೆ ಪದ್ಧತಿಯಡಿ ದೊಡ್ಡ ರಿಯಾಯಿತಿ ನೀಡಿದ್ದು, ಪ್ರಮಾಣಿತ ಆದಾಯ ತೆರಿಗೆ ಕಡಿತವನ್ನು 50,000 ರೂ. ನಿಂದ 75,000 ರೂ.ಗೆ ಹೆಚ್ಚಿಸಲಾಗಿದೆ.

ಇದರೊಂದಿಗೆ ತೆರಿಗೆ ಸ್ಲ್ಯಾಬ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. 7.75 ಲಕ್ಷ ರೂ. ಆದಾಯವು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವವರಿಗೆ ಈಗ ಸಂಪೂರ್ಣ ತೆರಿಗೆ ಮುಕ್ತವಾಗಿದೆ. ಆದರೆ ಯಾರೊಬ್ಬರ ವಾರ್ಷಿಕ ಆದಾಯ 10 ಲಕ್ಷ ರೂ.ಗಳಿದ್ದರೆ ಅವರೂ ಆದಾಯ ತೆರಿಗೆಯಿಂದ ಮುಕ್ತರಾಗಿ ಇರಬಹುದು. ಇದಕ್ಕಾಗಿ ಕೆಲವು ಲೆಕ್ಕಾಚಾರಗಳನ್ನು ಇಲ್ಲಿ ನೀಡಲಾಗಿದೆ.

Money Guide
Money Guide


ತೆರಿಗೆ ಉಳಿಸುವುದು ಹೇಗೆ?

1. 10 ಲಕ್ಷ ರೂ.ವರೆಗಿನ ಆದಾಯದ ಮೇಲೆ ಆದಾಯ ತೆರಿಗೆ ಪ್ರಯೋಜನಗಳನ್ನು ಪಡೆಯಲು ತೆರಿಗೆ ರಿಟರ್ನ್ ಸಲ್ಲಿಕೆ ಮಾದರಿಯನ್ನು ಹಳೆಯ ತೆರಿಗೆ ಪದ್ಧತಿಗೆ ಬದಲಾಯಿಸಬೇಕಾಗುತ್ತದೆ. ಇದರಲ್ಲಿ ಅನೇಕ ರೀತಿಯ ಕಡಿತಗಳನ್ನು ಕ್ಲೈಮ್ ಮಾಡಬಹುದು ಮತ್ತು ಅನೇಕ ರೀತಿಯ ಆದಾಯದ ಮೇಲೆ ತೆರಿಗೆಯನ್ನು ಉಳಿಸಬಹುದು.

2. ಹಳೆಯ ತೆರಿಗೆ ವ್ಯವಸ್ಥೆಯನ್ನು ಆರಿಸಿಕೊಂಡರೆ 50,000 ರೂ. ವರೆಗೆ ಪ್ರಮಾಣಿತ ಕಡಿತವನ್ನು ಪಡೆಯಬಹುದು. ಅಂದರೆ 50,000 ರೂ. ವರೆಗೆ ಯಾವುದೇ ತೆರಿಗೆ ಇರುವುದಿಲ್ಲ. ಇದು ಒಟ್ಟು ಆದಾಯದಿಂದ ಮುಂಚಿತವಾಗಿ ಕಡಿತಗೊಳಿಸಲಾಗುವ ಮೊತ್ತವಾಗಿದೆ. ಅಂದರೆ 10 ಲಕ್ಷ ರೂಪಾಯಿ ಗಳಿಸುವ ವ್ಯಕ್ತಿಯ ತೆರಿಗೆಯ ಆದಾಯವು 9.50 ಲಕ್ಷ ರೂಪಾಯಿ ಆಗುತ್ತದೆ.

3. ಇನ್ನು 80ಸಿಯ ಲಾಭವನ್ನು ನೀಡುವ ಪಿಪಿಎಫ್, ಇಪಿಎಫ್ ಮತ್ತು ಎನ್ ಎಸ್ ಸಿಯಂತಹ ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದರೆ 1.5 ಲಕ್ಷ ರೂ.ವರೆಗೆ ತೆರಿಗೆ ಉಳಿಸಬಹುದು. ಇದರಿಂದ 9.50 ಲಕ್ಷದಿಂದ 1.50 ಲಕ್ಷ ರೂ. ಕಡಿತಗೊಳಿಸಿದರೆ ತೆರಿಗೆಯ ಆದಾಯವು 8 ಲಕ್ಷ ರೂ.ಗಳಾಗುತ್ತದೆ.

4. ಅಲ್ಲದೇ ಎನ್ ಪಿ ಎಸ್ ನಲ್ಲಿ ವಾರ್ಷಿಕವಾಗಿ 50,000 ರೂ.ವರೆಗೆ ಹೂಡಿಕೆ ಮಾಡಿದರೆ ಸೆಕ್ಷನ್ 80ಸಿಸಿಡಿ (1ಬಿ) ಅಡಿಯಲ್ಲಿ 50,000 ರೂ. ಹೆಚ್ಚುವರಿ ತೆರಿಗೆ ವಿನಾಯಿತಿ ನೀಡಲಾಗುತ್ತದೆ. ಈ ಸಂದರ್ಭದಲ್ಲಿ 8 ಲಕ್ಷದಿಂದ 50 ಸಾವಿರವನ್ನು ಕಳೆದರೆ ತೆರಿಗೆಯ ಆದಾಯವು 7.50 ಲಕ್ಷ ರೂಪಾಯಿಗಳಾಗುತ್ತದೆ.

5. ಗೃಹ ಸಾಲ ಪಡೆದವರು ಆದಾಯ ತೆರಿಗೆಯ ಸೆಕ್ಷನ್ 24ಬಿ ಅಡಿಯಲ್ಲಿ 2 ಲಕ್ಷ ರೂಪಾಯಿಗಳವರೆಗೆ ಬಡ್ಡಿಯನ್ನು ಉಳಿಸಬಹುದು. ಈಗ 7.50 ಲಕ್ಷದಿಂದ 2 ಲಕ್ಷ ರೂಪಾಯಿ ಕಳೆದರೆ 5.50 ಲಕ್ಷ ರೂಪಾಯಿ ಉಳಿಯುತ್ತದೆ.

6. ವೈದ್ಯಕೀಯ ವಿಮೆಗಳನ್ನು ತೆಗೆದುಕೊಂಡಿದ್ದರೆ ಆದಾಯ ತೆರಿಗೆಯ ಸೆಕ್ಷನ್ 80ಡಿ ಅಡಿಯಲ್ಲಿ 25 ಸಾವಿರ ರೂಪಾಯಿಗಳವರೆಗೆ ತೆರಿಗೆ ಉಳಿಸಬಹುದು. ಜೊತೆಗೆ ಹೆಂಡತಿ, ಮಕ್ಕಳ ಹೆಸರಿನಲ್ಲಿ ಆರೋಗ್ಯ ವಿಮೆಯಲ್ಲಿದ್ದರೆ 50,000 ರೂಪಾಯಿಗಳವರೆಗೆ ಹೆಚ್ಚುವರಿ ವಿನಾಯಿತಿ ಪಡೆಯಬಹುದು. ಇದರಿಂದ 5.50 ಲಕ್ಷ ರೂಪಾಯಿಗಳಿಂದ 75,000 ರೂಪಾಯಿಗಳನ್ನು ಹೆಚ್ಚು ಕಳೆದರೆ ಆದಾಯವು 4.75 ಲಕ್ಷ ರೂಪಾಯಿಗಳಾಗಿರುತ್ತದೆ.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಹಳೆಯ ತೆರಿಗೆ ಪದ್ಧತಿಯಲ್ಲಿ 5 ಲಕ್ಷ ರೂಪಾಯಿವರೆಗಿನ ಆದಾಯದ ಮೇಲೆ ಯಾವುದೇ ತೆರಿಗೆ ಇಲ್ಲದಿರುವುದರಿಂದ ಈ ಸಂದರ್ಭದಲ್ಲಿ 10 ಲಕ್ಷ ರೂ. ಆದಾಯವಿದ್ದವರಿಗೂ ಯಾವುದೇ ತೆರಿಗೆ ವಿಧಿಸಲಾಗುವುದಿಲ್ಲ. ಈ ರೀತಿಯಾಗಿ 10 ಲಕ್ಷ ರೂ. ವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸಬಹುದು.

Continue Reading

ಮನಿ-ಗೈಡ್

Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಮುದ್ರಾ ಸಾಲದ (Mudra loan) ಮಿತಿಗಳನ್ನು ಹೆಚ್ಚಿಸಿರುವುದರಿಂದ ಅನೇಕರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ. ಮುಖ್ಯವಾಗಿ ಸಣ್ಣ ಉದ್ಯಮಿಗಳು ಮತ್ತು ಉದ್ಯಮಿಗಳು ಇದರ ಲಾಭ ಪಡೆಯಲಿದ್ದಾರೆ. ಹೆಚ್ಚಿನ ಸಾಲದ ಮಿತಿಯೊಂದಿಗೆ ಇದಕ್ಕೆ ಕೆಲವು ಷರತ್ತುಗಳನ್ನು ಸಹ ಪರಿಚಯಿಸಲಾಗಿದೆ. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.

VISTARANEWS.COM


on

By

Mudra loan
Koo

ಕೇಂದ್ರ ಬಜೆಟ್‌ನಲ್ಲಿ (Union Budget 2024) ಈ ಬಾರಿ ಹಲವಾರು ವಿಷಯಗಳ ಬಗ್ಗೆ ಕಾಳಜಿ ವಹಿಸಲಾಗಿದೆ. ಮೋದಿ ಸರ್ಕಾರದ (Modi government) ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರು ಸಂಸತ್ತಿನಲ್ಲಿ ಮಂಡಿಸಿ ಹಲವು ಜನಪರ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಈ ವೇಳೆ ಅವರು ಮುದ್ರಾ ಸಾಲದ (Mudra loan) ಕುರಿತು ಮಾತನಾಡಿದ್ದು, ಅದರ ಮಿತಿಗಳನ್ನು ಹೆಚ್ಚಿಸಿರುವುದಾಗಿ ತಿಳಿಸಿದ್ದಾರೆ.

ಮುದ್ರಾ ಸಾಲದ ಮಿತಿಗಳನ್ನು ಹೆಚ್ಚಿಸಿರುವುದರಿಂದ ಅನೇಕರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ. ಮುಖ್ಯವಾಗಿ ಸಣ್ಣ ಉದ್ಯಮಿಗಳು ಮತ್ತು ಉದ್ಯಮಿಗಳು ಇದರ ಲಾಭ ಪಡೆಯಲಿದ್ದಾರೆ. ಹೆಚ್ಚಿನ ಸಾಲದ ಮಿತಿಯೊಂದಿಗೆ ಇದಕ್ಕೆ ಕೆಲವು ಷರತ್ತುಗಳನ್ನು ಸಹ ಪರಿಚಯಿಸಲಾಗಿದೆ. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.
ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇದು ಉದ್ಯಮಿಯಾಗಲು ಬಯಸುವವರಿಗೆ ವರದಾನವಾಗಿದೆ.

ಷರತ್ತುಗಳು ಏನು?

ಹೆಚ್ಚಿದ ಸಾಲದ ಮಿತಿಗೆ ಅರ್ಹತೆ ಪಡೆಯಲು ಸಾಲಗಾರರು ಈ ಹಿಂದೆ ಮುದ್ರಾ ಸಾಲವನ್ನು ತೆಗೆದುಕೊಂಡು ಪೂರ್ಣವಾಗಿ ಮರುಪಾವತಿಸಿರಬೇಕು. ಹಾಗಿದ್ದರೆ ಮಾತ್ರ ಹೊಸ ಪ್ರಯೋಜನಗಳನ್ನು ಪಡೆಯಬಹುದು.

ಮುದ್ರಾ ಸಾಲ ವಿಭಾಗಗಳು

ಮುದ್ರಾ ಸಾಲಗಳನ್ನು ಮೂರು ವಿಭಾಗಗಳಾಗಿ ವರ್ಗೀಕರಿಸಲಾಗಿದೆ. ʼಶಿಶುʼ ವಿಭಾಗದಲ್ಲಿ 50,000 ರೂ.ವರೆಗೆ ಸಾಲ, ʼಕಿಶೋರʼ ವಿಭಾಗದಲ್ಲಿ 50,000 ರೂ.ನಿಂದ 5 ಲಕ್ಷ ರೂ. ವರೆಗೆ ಸಾಲ, ʼತರುಣ್ʼ ವಿಭಾಗದಲ್ಲಿ 5 ಲಕ್ಷದಿಂದ 10 ಲಕ್ಷ ರೂ.ವರೆಗಿನ ಸಾಲಗಳು.

ಪರಿಣಾಮ ಮತ್ತು ವ್ಯಾಪ್ತಿ ಏನು?

ಪ್ರಧಾನಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಅಡಿಯಲ್ಲಿ 47 ಕೋಟಿಗೂ ಹೆಚ್ಚು ಸಣ್ಣ ಮತ್ತು ದೊಡ್ಡ ಉದ್ಯಮಗಳಿಗೆ 27.75 ಲಕ್ಷ ಕೋಟಿ ರೂ.ಗಳ ಸಾಲವನ್ನು ವಿತರಿಸಲಾಗಿದೆ. ಗಮನಾರ್ಹ ಸಂಗತಿ ಎಂದರೆ ಮಂಜೂರಾದ ಒಟ್ಟು 44.46 ಕೋಟಿ ಸಾಲದಲ್ಲಿ ಶೇ.69ರಷ್ಟು ಮಹಿಳಾ ಉದ್ಯಮಿಗಳಿಗೆ ನೀಡಲಾಗಿದೆ.

Mudra loan
Mudra loan


ಹಿಂದುಳಿದ ವರ್ಗದವರಿಗೆ ಬೆಂಬಲ

2015ರ ಏಪ್ರಿಲ್ 8ರಂದು ಪ್ರಾರಂಭವಾದ ಮುದ್ರಾ ಯೋಜನೆಯು 2016ರಲ್ಲಿ ಪ್ರಾರಂಭವಾದ ಎಸ್‌ಯುಪಿಐ ಯೋಜನೆಯೊಂದಿಗೆ ವಿಶೇಷವಾಗಿ ಮಹಿಳೆಯರು ಮತ್ತು ಎಸ್ ಸಿ/ ಎಸ್‌ಟಿ ಸಮುದಾಯಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗಳು ಹೊಸ ಉದ್ಯಮಗಳ ಸ್ಥಾಪನೆಯನ್ನು ಬೆಂಬಲಿಸುತ್ತವೆ ಮತ್ತು ಮಹಿಳೆಯರ ಆರ್ಥಿಕ ಉನ್ನತಿಗೆ ಪ್ರೋತ್ಸಾಹ ನೀಡುತ್ತದೆ.

ಇದನ್ನೂ ಓದಿ: Union Budget 2024: ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ₹7,559 ಕೋಟಿ ಅನುದಾನ; ಕಳೆದ ವರ್ಷಕ್ಕಿಂತ ಕಡಿಮೆ

ಉದ್ಯಮಶೀಲತೆಗೆ ಉತ್ತೇಜನ

ʼಮುದ್ರಾʼ ಯೋಜನೆ ಮತ್ತು ಎಸ್‌ಯುಪಿಐ ಯೋಜನೆಗಳು ಅಗತ್ಯ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಸಣ್ಣ ಮತ್ತು ಅತಿಸಣ್ಣ ಉದ್ಯಮಗಳನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾಗಿದೆ. ವ್ಯಾಪಾರ ಅವಕಾಶಗಳನ್ನು ಮುಂದುವರಿಸಲು ಅನನುಕೂಲಕರ ಪರಿಸ್ಥಿತಿ ಎದುರಿಸುತ್ತಿರುವವರನ್ನು ಸಬಲೀಕರಣಗೊಳಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಬ್ಯಾಂಕ್‌ಗಳ ಸ್ಥಳೀಯ ಶಾಖೆಗೆ ಹೋಗಿ ಮುದ್ರಾ ಸಾಲ ಯೋಜನೆಯ ಮಾಹಿತಿ ಪಡೆಯಬಹುದು.

Continue Reading

ಮನಿ-ಗೈಡ್

NPS Vatsalya Scheme: ಏನಿದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಎನ್‌ಪಿಎಸ್ ವಾತ್ಸಲ್ಯ ಯೋಜನೆ? ನಮ್ಮ ಮಕ್ಕಳಿಗೆ ಇದರಿಂದೇನು ಪ್ರಯೋಜನ?

ಇನ್ನು ಮುಂದೆ ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಗುವಿನ ಹೆಸರಿನಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ (NPS Vatsalya Scheme) ಖಾತೆಯನ್ನು ತೆರೆಯಬಹುದು ಎಂದು ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಎನ್‌ಪಿಎಸ್ ವಾತ್ಸಲ್ಯ ಯೋಜನೆ ಎಂದರೆ ಏನು, ಇದಕ್ಕೆ ಯಾರು ಅರ್ಹರು, ಯಾರು ಅರ್ಜಿ ಸಲ್ಲಿಸಬಹುದು ಮತ್ತು ಮೆಚ್ಯೂರಿಟಿಯನ್ನು ಪಡೆದ ಅನಂತರ ಖಾತೆ ಏನಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

NPS Vatsalya Yojana
Koo

ಮಕ್ಕಳಿಗಾಗಿ ರಾಷ್ಟ್ರೀಯ ಪಿಂಚಣಿ ವಾತ್ಸಲ್ಯ ಯೋಜನೆಯನ್ನು (NPS Vatsalya scheme) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (finance minister Nirmala Sitharaman) ಅವರು 2024ರ ಕೇಂದ್ರ ಬಜೆಟ್‌ನಲ್ಲಿ (Union Budget 2024) ಘೋಷಿಸಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆಯು (National Pension Scheme) ನಿವೃತ್ತಿ ಯೋಜನೆಯಾಗಿದ್ದು, ಇದರಲ್ಲಿ 18ನೇ ವಯಸ್ಸಿನಿಂದಲೇ ಹೂಡಿಕೆಯನ್ನು ಪ್ರಾರಂಭಿಸಿ 70ನೇ ವಯಸ್ಸಿನವರೆಗೆ ಹೂಡಿಕೆಯನ್ನು ಮಾಡಬಹುದು.

ಇದೀಗ ಕೇಂದ್ರ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ರಾಷ್ಟ್ರೀಯ ಪಿಂಚಣಿ ಯೋಜನೆ ವಾತ್ಸಲ್ಯವನ್ನು ಘೋಷಿಸಲಾಗಿದೆ. ಎನ್‌ಪಿಎಸ್-ವಾತ್ಸಲ್ಯ ಯೋಜನೆಯನ್ನು ಅಪ್ರಾಪ್ತ ವಯಸ್ಕ ಮಕ್ಕಳಿಗೆ ಪೋಷಕರು ಮಾಡಬಹುದಾದ ಉಳಿತಾಯ ಯೋಜನೆಯಾಗಿದೆ. ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಮ್ಯಾಕ್ಸ್ ಲೈಫ್ ಪಿಂಚಣಿ ನಿಧಿ ನಿರ್ವಹಣೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಣಭೀರ್ ಸಿಂಗ್ ಧರಿವಾಲ್, ನಿವೃತ್ತಿ ಉಳಿತಾಯ ಮತ್ತು ದೀರ್ಘಾವಧಿಯ ಆರ್ಥಿಕ ಭದ್ರತೆಯನ್ನು ಉತ್ತೇಜಿಸುವಲ್ಲಿ ಕೇಂದ್ರ ಬಜೆಟ್‌ನ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ವಾತ್ಸಲ್ಯವು ಶ್ಲಾಘನೀಯ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಗುವಿನ ಎನ್‌ಪಿಎಸ್ ಖಾತೆಯನ್ನು ಪ್ರಾರಂಭಿಸಲು ಅವಕಾಶ ನೀಡುವ ಮೂಲಕ ಚಿಕ್ಕ ವಯಸ್ಸಿನಿಂದಲೇ ಜವಾಬ್ದಾರಿಯುತ ಹಣಕಾಸು ನಿರ್ವಹಣೆಗೆ ಅಡಿಪಾಯವನ್ನು ಹೊಂದಿಸಿದಂತಾಗುತ್ತದೆ. ಪ್ರೌಢಾವಸ್ಥೆಯಲ್ಲಿ ಈ ಖಾತೆಗಳು ನಿಯಮಿತ ಎನ್ ಪಿ ಎಸ್ ಯೋಜನೆಗಳಾಗಿ ಪರಿವರ್ತನೆಯಾಗುತ್ತದೆ. ಇದರಿಂದ ಮಕ್ಕಳ ಪ್ರೌಢಾವಸ್ಥೆಯಲ್ಲಿ ಉಳಿತಾಯ ಅಭ್ಯಾಸಗಳ ಸುಗಮವಾಗಿ ಮುಂದುವರಿಯುತ್ತದೆ.

ಎನ್‌ಪಿಎಸ್ ವಾತ್ಸಲ್ಯ ಯೋಜನೆಗೆ ಯಾರು ಅರ್ಹರು, ಯಾರು ಅರ್ಜಿ ಸಲ್ಲಿಸಬಹುದು ಮತ್ತು ಮೆಚ್ಯೂರಿಟಿಯನ್ನು ಪಡೆದ ಅನಂತರ ಖಾತೆಗೆ ಏನಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

NPS Vatsalya Yojana
NPS Vatsalya Yojana


ಎನ್ ಪಿ ಎಸ್ ಎಂದರೇನು?

ಎನ್‌ಪಿಎಸ್ ನಿವೃತ್ತಿ ಯೋಜನೆಯಾಗಿದ್ದು, ಆರ್ಥಿಕ ವರ್ಷದಲ್ಲಿ ಒಮ್ಮೆಯಾದರೂ ನಿರ್ದಿಷ್ಟ ಮೊತ್ತದ ಹಣವನ್ನು ಹೂಡಿಕೆ ಮಾಡಬಹುದು.

ಎನ್ ಪಿ ಎಸ್ ಅನ್ನು ಮಾರುಕಟ್ಟೆಗೆ ಲಿಂಕ್ ಮಾಡಲಾಗಿದ್ದು, ಇದರಲ್ಲಿ ನಿಧಿ ಯೋಜನೆ ಮತ್ತು ಈಕ್ವಿಟಿ ಮಾನ್ಯತೆಯ ಶೇಕಡಾವಾರು ಪ್ರಮಾಣವನ್ನು ಆಯ್ಕೆ ಮಾಡಬಹುದು.

ನಿಧಿಯಲ್ಲಿ ಹೂಡಿಕೆಯಾಗಿರುವ ಮೊತ್ತದ ಕಾರ್ಯಕ್ಷಮತೆಯ ಆಧಾರದ ಮೇಲೆ ಎನ್ ಪಿ ಎಸ್ ಖಾತೆದಾರರು ನಿವೃತ್ತಿಯ ಸಮಯದಲ್ಲಿ ಒಂದು ದೊಡ್ಡ ಮೊತ್ತವನ್ನು ಪಡೆಯುತ್ತಾರೆ ಮತ್ತು ಮಾಸಿಕ ಪಿಂಚಣಿಗಾಗಿ ವರ್ಷಾಶನವನ್ನು ಖರೀದಿಸುವ ಆಯ್ಕೆ ಇದರಲ್ಲಿದೆ.

60 ವರ್ಷಗಳ ನಿವೃತ್ತಿ ವಯಸ್ಸಿನಲ್ಲಿ ನಿವೃತ್ತಿ ಮೊತ್ತದ ಗರಿಷ್ಠ ಶೇ. 60ರಷ್ಟನ್ನು ಹಿಂತೆಗೆದುಕೊಳ್ಳುವ ಇನ್ನೊಂದು ಆಯ್ಕೆ ಇದರಲ್ಲಿದೆ. ಇದರಲ್ಲಿ ಉಳಿದ ಶೇ. 40ರಷ್ಟನ್ನು ವರ್ಷಾಶನವಾಗಿ ಖರೀದಿ ಮಾಡಬಹುದು. ಈ ರೀತಿಯ ನಿವೃತ್ತಿ ಮೊತ್ತವು ತೆರಿಗೆ ಮುಕ್ತವಾಗಿರುತ್ತದೆ.

ಎನ್‌ಪಿಎಸ್ ವಾತ್ಸಲ್ಯ ಯೋಜನೆ ಎನ್‌ಪಿಎಸ್‌ಗಿಂತ ಏಕೆ ಭಿನ್ನ?

ಎನ್ ಪಿ ಎಸ್‌ನಲ್ಲಿ 18 ವರ್ಷ ವಯಸ್ಸಿನಲ್ಲೇ ಖಾತೆಯನ್ನು ತೆರೆಯಬಹುದು. ಎನ್ ಪಿ ಎಸ್ ವಾತ್ಸಲ್ಯದಲ್ಲಿ ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಕ್ಕಳ ಖಾತೆಯನ್ನು ತೆರೆಯಬಹುದು. ಇದರಲ್ಲಿ ಅಪ್ರಾಪ್ತರ ಕನಿಷ್ಠ ವಯಸ್ಸನ್ನು ಹಣಕಾಸು ಸಚಿವರು ತಿಳಿಸಿಲ್ಲ.

NPS Vatsalya Yojana
NPS Vatsalya Yojana


ಮುಕ್ತಾಯದ ಅನಂತರ ಖಾತೆ ಏನಾಗುತ್ತದೆ?

ಅಪ್ರಾಪ್ತ ವಯಸ್ಸಿನವರು ಪ್ರಾಪ್ತ ವಯಸ್ಸಿಗೆ ಬಂದಾಗ ಅವರ ಖಾತೆ ಎನ್‌ಪಿಎಸ್ ವಾತ್ಸಲ್ಯ ಯೋಜನೆಯಿಂದ ಸಾಮಾನ್ಯ ಎನ್‌ಪಿಎಸ್ ಖಾತೆಯಾಗಿ ಪರಿವರ್ತಿಸಬಹುದು ಎಂದಿದ್ದಾರೆ ಹಣಕಾಸು ಸಚಿವರು.

ಇದನ್ನೂ ಓದಿ: Ayushamn Card: 5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?

ಎನ್ ಪಿ ಎಸ್ ಪ್ರಯೋಜನವೇನು?

ಎನ್‌ಪಿಎಸ್ ಯೋಜನೆಯಡಿ ಖಾತೆದಾರರು ನಿರ್ದಿಷ್ಟ ಮೊತ್ತದ ಬಡ್ಡಿಯನ್ನು ಪಡೆಯುತ್ತಾರೆ. ಪೂರ್ಣ ಎನ್ ಪಿ ಎಸ್ ಖಾತೆಯಾಗಿ ಪರಿವರ್ತನೆಯಾದ ಬಳಿಕ ಖಾತೆದಾರನು 60ರ ನಿವೃತ್ತಿ ವಯಸ್ಸನ್ನು ತಲುಪಿದ ಮೇಲೆ ಖಾತೆಯಲ್ಲಿರುವ ಸಂಗ್ರಹ ಮೊತ್ತದೊಂದಿಗೆ ಬಡ್ಡಿ ಸೇರಿ ಗಣನೀಯ ಮೊತ್ತವನ್ನು ಪಡೆಯಬಹುದು.

Continue Reading

ಮನಿ-ಗೈಡ್

Ayushamn Card: 5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?

ಅಯುಷ್ಮಾನ್ ಭಾರತ್ ಯೋಜನೆಯ (Ayushamn Card) ಅಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ನೀಡಲಾಗುತ್ತದೆ. ಇದರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಅಂದರೆ ಇದಕ್ಕಾಗಿ ಫಲಾನುಭವಿಗಳು ಹಣವನ್ನು ಖರ್ಚು ಮಾಡಬೇಕಾಗಿಲ್ಲ. ಅಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಬಯಸುವವರು ಇದರ ಬಗ್ಗೆ ಸರಿಯಾಗಿ ತಿಳಿದಿರಬೇಕು. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Card
Koo

ಸಾಮಾನ್ಯ ಜನರಿಗೆ ಆರ್ಥಿಕ ಸುರಕ್ಷತೆ (financial help) ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ನಿಧಿ (kisan sammani nidhi), ಅಯುಷ್ಮಾನ್ ಭಾರತ್‌ನಂತಹ (Ayushamn Card) ಅನೇಕ ಯೋಜನೆಗಳನ್ನು ಪರಿಚಯಿಸಿದೆ. ಇದರ ಅಡಿಯಲ್ಲಿ ವಿವಿಧ ರೀತಿಯಲ್ಲಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಯೋಜನೆಗಳಲ್ಲಿ ಫಲಾನುಭವಿಗಳು ಹಣಕಾಸಿನ ಸಹಾಯವನ್ನು ನೇರವಾಗಿ ಪಡೆಯುತ್ತಾರೆ.

ಕೇಂದ್ರ ಸರಕಾರ ರೈತರಿಗಾಗಿ ನಡೆಸುತ್ತಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಇದಕ್ಕೊಂದು ಉದಾಹರಣೆ. ಇದೇ ರೀತಿ ಆರ್ಥಿಕ ಪ್ರಯೋಜನವನ್ನು ನೀಡದ ಮತ್ತೊಂದು ಯೋಜನೆ ಇದೆ. ಆದರೆ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಇದರ ಅಡಿಯಲ್ಲಿ ನೀಡಲಾಗುತ್ತದೆ ಮತ್ತು ಇದರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಅಂದರೆ ಇದಕ್ಕಾಗಿ ಫಲಾನುಭವಿಗಳು ಹಣವನ್ನು ಖರ್ಚು ಮಾಡಬೇಕಾಗಿಲ್ಲ. ಈ ಯೋಜನೆಯ ಹೆಸರು ಆಯುಷ್ಮಾನ್ ಭಾರತ್ ಯೋಜನೆ.

ಅಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಬಯಸುವವರು ಇದರ ಬಗ್ಗೆ ಸರಿಯಾಗಿ ತಿಳಿದಿರಬೇಕು. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಅಯುಷ್ಮಾನ್ ಭಾರತ್

ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಆಯುಷ್ಮಾನ್ ಕಾರ್ಡ್‌ಗಳನ್ನು ಮೊದಲು ಅರ್ಹರಿಗೆ ನೀಡಲಾಗುತ್ತದೆ. ಇದಾದ ಅನಂತರ ಕಾರ್ಡ್‌ದಾರರು 5 ಲಕ್ಷದವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಇಲ್ಲಿ ಗಮನಿಸಿಸಬೇಕಾದ ವಿಚಾರವೆಂದರೆ ಪ್ರತಿ ವರ್ಷ ಕಾರ್ಡುದಾರರು 5 ಲಕ್ಷ ರೂ.ಗಳ ರಕ್ಷಣೆಯನ್ನು ಪಡೆಯುತ್ತಾರೆ. ಅಂದರೆ, ಪ್ರತಿ ವರ್ಷ ಈ ಮೊತ್ತದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದು.

ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?

ಆಯುಷ್ಮಾನ್ ಕಾರ್ಡ್ ಅನ್ನು ಆಫ್‌ಲೈನ್‌ನಲ್ಲಿ ಪಡೆಯಲು ಬಯಸಿದರೆ ಇದಕ್ಕಾಗಿ ನಿಮ್ಮ ಹತ್ತಿರದ ಸಿಎಸ್‌ಸಿ ಕೇಂದ್ರಕ್ಕೆ ಹೋಗಬೇಕು. ಇಲ್ಲಿ ಸಂಬಂಧಪಟ್ಟ ಅಧಿಕಾರಿಯನ್ನು ಭೇಟಿಯಾಗಿ ಅದನ್ನು ಮಾಡಿಕೊಳ್ಳಬಹುದು.

ಕಾರ್ಡ್ ಅನ್ನು ಆನ್‌ಲೈನ್‌ನಲ್ಲಿ ಮಾಡಿಕೊಳ್ಳಬಹುದು. ಇದಕ್ಕಾಗಿ ಈ ಯೋಜನೆಯ ಅಧಿಕೃತ ವೆಬ್‌ಸೈಟ್ https://beneficiary.nha.gov.in/ ಗೆ ಭೇಟಿ ನೀಡಬೇಕು.

Ayushman Card
Ayushman Card


ಯಾರು ಪಡೆಯಬಹುದು?

ಆಯುಷ್ಮಾನ್ ಕಾರ್ಡ್ ಅನ್ನು ಮಾಡಬಹುದೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಬಯಸಿದರೆ ಕೆಳಗೆ ನೀಡಲಾದ ಅರ್ಹತಾ ಮಾನದಂಡಗಳನ್ನು ತಿಳಿದುಕೊಳ್ಳಿ.

ಇದನ್ನೂ ಓದಿ: Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

ಕುಟುಂಬದಲ್ಲಿ ಅಂಗವಿಕಲ ವ್ಯಕ್ತಿಯನ್ನು ಹೊಂದಿರುವವರು, ಪರಿಶಿಷ್ಟ ಜಾತಿ ಅಥವಾ ಪಂಗಡದಿಂದ ಬಂದವರು, ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರು, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರು, ದಿನಗೂಲಿ ಮಾಡುವವರು, ಬಡತನ ರೇಖೆಗಿಂತ ಕೆಳಗಿರುವವರು, ನಿರ್ಗತಿಕ ಅಥವಾ ಬುಡಕಟ್ಟು ಜನರು ಆಯುಷ್ಮಾನ್ ಕಾರ್ಡ್ ಅನ್ನು ಪಡೆಯಬಹುದು.

ಯಾರಿಗೆ ಸಾಧ್ಯವಿಲ್ಲ?

ತೆರಿಗೆ ಪಾವತಿಸುವವರು, ಸರ್ಕಾರಿ ಕೆಲಸ ಮಾಡುವವರು, ಪಿಎಫ್ ಸದಸ್ಯರಾಗಿರುವವರು, ಇಎಸ್ ಐಸಿಯ ಲಾಭವನ್ನು ಪಡೆಯುವ ಜನರು, ವೈದ್ಯಕೀಯ ವಿಮೆ ಹೊಂದಿರುವವರು ಇದನ್ನು ಪಡೆಯುವುದು ಸಾಧ್ಯವಿಲ್ಲ.

Continue Reading
Advertisement
Family Drama Film Review
ಸಿನಿಮಾ26 seconds ago

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Michel Phelps ರಾಜಮಾರ್ಗ ಅಂಕಣ
ಅಂಕಣ25 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ38 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ53 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ2 hours ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ15 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌