Money Guide: ಎಚ್‌ಡಿಎಫ್‌ಸಿಯಿಂದ ಎಸ್‌ಬಿಐವರೆಗೆ; ಫಿಕ್ಸೆಡ್‌ ಡೆಪಾಸಿಟ್‌ಗೆ ಶೇ. 7ಕ್ಕಿಂತ ಅಧಿಕ ಬಡ್ಡಿ ನೀಡುವ ಬ್ಯಾಂಕ್‌ಗಳಿವು - Vistara News

ಮನಿ-ಗೈಡ್

Money Guide: ಎಚ್‌ಡಿಎಫ್‌ಸಿಯಿಂದ ಎಸ್‌ಬಿಐವರೆಗೆ; ಫಿಕ್ಸೆಡ್‌ ಡೆಪಾಸಿಟ್‌ಗೆ ಶೇ. 7ಕ್ಕಿಂತ ಅಧಿಕ ಬಡ್ಡಿ ನೀಡುವ ಬ್ಯಾಂಕ್‌ಗಳಿವು

Money Guide: ಸ್ಥಿರ ಠೇವಣಿಯನ್ನು ಅಪಾಯ ಇಷ್ಟಪಡದ ಹೂಡಿಕೆದಾರರ ಮೊದಲ ಆಯ್ಕೆ ಎಂದೇ ಪರಿಗಣಿಸಲಾಗುತ್ತದೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಎಫ್‌ಡಿ ಮೇಲಿನ ಬಡ್ಡಿದರ ಸಹ ಉತ್ತಮವಾಗಿವೆ. ಉತ್ತಮ ಆದಾಯ ಮತ್ತು ಕಡಿಮೆ ಅಪಾಯ ಹೊಂದಿರುವುದರಿಂದಲೇ ಇದು ಹಲವರ ನೆಚ್ಚಿನ ಆಯ್ಕೆಯಾಗಿದೆ. ನಿಶ್ಚಿತ ಠೇವಣಿಯಲ್ಲಿ ಹೂಡಿಕೆಯ ಅವಧಿ ಮತ್ತು ಬಡ್ಡಿದರವನ್ನು ಮೊದಲೇ ನಿಗದಿಪಡಿಸಲಾಗಿರುತ್ತದೆ. ಸಾಮಾನ್ಯವಾಗಿ 7 ದಿನಗಳಿಂದ 10 ವರ್ಷಗಳವರೆಗಿನ ಅವಧಿಯಲ್ಲಿ ನೀವು ಒಂದು ಬಾರಿ ಹೂಡಿಕೆ ಮಾಡಬಹುದು. ಇದೀಗ ಎಚ್‌ಡಿಎಫ್‌ಸಿ ಬ್ಯಾಂಕ್‌ ಸೇರಿ ಸುಮಾರು 5 ಬ್ಯಾಂಕ್‌ಗಳು ನಿಶ್ಚಿತ ಠೇವಣಿ ಮೇಲೆ ಶೇ. 7ರಷ್ಟು ಬಡ್ಡಿ ನೀಡುವುದಾಗಿ ಘೋಷಿಸಿವೆ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

VISTARANEWS.COM


on

Money Guide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಥಿರ ಠೇವಣಿ (Fixed Deposits)ಯನ್ನು ಅಪಾಯ ಇಷ್ಟಪಡದ ಹೂಡಿಕೆದಾರರ ಮೊದಲ ಆಯ್ಕೆ ಎಂದೇ ಪರಿಗಣಿಸಲಾಗುತ್ತದೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಎಫ್‌ಡಿ ಮೇಲಿನ ಬಡ್ಡಿದರ ಸಹ ಉತ್ತಮವಾಗಿವೆ. ಉತ್ತಮ ಆದಾಯ ಮತ್ತು ಕಡಿಮೆ ಅಪಾಯ ಹೊಂದಿರುವುದರಿಂದಲೇ ಇದು ಹಲವರ ನೆಚ್ಚಿನ ಆಯ್ಕೆಯಾಗಿದೆ. ನಿಶ್ಚಿತ ಠೇವಣಿಯಲ್ಲಿ ಹೂಡಿಕೆಯ ಅವಧಿ ಮತ್ತು ಬಡ್ಡಿದರವನ್ನು ಮೊದಲೇ ನಿಗದಿಪಡಿಸಲಾಗಿರುತ್ತದೆ. ಸಾಮಾನ್ಯವಾಗಿ 7 ದಿನಗಳಿಂದ 10 ವರ್ಷಗಳವರೆಗಿನ ಅವಧಿಯಲ್ಲಿ ನೀವು ಒಂದು ಬಾರಿ ಹೂಡಿಕೆ ಮಾಡಬಹುದು. ಇದರ ಮೇಲಿನ ಬಡ್ಡಿಯನ್ನು ನಿಯಮಿತ ಮಧ್ಯಂತರಗಳಲ್ಲಿ ಪಡೆಯಬಹುದು ಅಥವಾ ನೀವು ಮುಕ್ತಾಯದ ಸಮಯದಲ್ಲಿ ಅದನ್ನು ಸ್ವೀಕರಿಸುವ ಆಯ್ಕೆಯನ್ನು ಆಯ್ದುಕೊಳ್ಳಬಹುದು. ಇದೀಗ ಎಚ್‌ಡಿಎಫ್‌ಸಿ ಬ್ಯಾಂಕ್‌ ಸೇರಿ ಸುಮಾರು 5 ಬ್ಯಾಂಕ್‌ಗಳು ನಿಶ್ಚಿತ ಠೇವಣಿ ಮೇಲೆ ಶೇ. 7ರಷ್ಟು ಬಡ್ಡಿ ನೀಡುವುದಾಗಿ ಘೋಷಿಸಿವೆ. ಈ ಬಗೆಗಿನ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್‌

ಎಚ್‌ಡಿಎಫ್‌ಸಿ ಬ್ಯಾಂಕ್ 18ರಿಂದ 21 ತಿಂಗಳ ಅವಧಿಯ ಸ್ಥಿರ ಠೇವಣಿಗಳ ಮೇಲೆ ಶೇ. 7.25ರಷ್ಟು ಗರಿಷ್ಠ ಬಡ್ಡಿದರವನ್ನು ನೀಡುತ್ತಿದೆ. ಜತೆಗೆ 2 ವರ್ಷ 11 ತಿಂಗಳಿನಿಂದ 35 ತಿಂಗಳ ಅವಧಿಯ ಸ್ಥಿರ ಠೇವಣಿಗಳ ಮೇಲೆ ಶೇ. 7.15ರಷ್ಟು ಬಡ್ಡಿಯನ್ನು ಒದಗಿಸುತ್ತದೆ. ಅವಧಿ ಒಂದು ವರ್ಷದಿಂದ 15 ತಿಂಗಳವರೆಗೆ ಇದ್ದರೆ ಬಡ್ಡಿ ಶೇ. 6.60. ಅವಧಿ 2 ವರ್ಷದಿಂದ 2 ವರ್ಷದ 11 ತಿಂಗಳ ನಡುವೆ ಇದ್ದಾಗ ಬಡ್ಡಿ ಶೇ. 7ರಷ್ಟಿರುತ್ತದೆ. ಅಲ್ಪಾವಧಿಯ ಸ್ಥಿರ ಠೇವಣಿಗಳಿಗೆ ಬಡ್ಡಿದರಗಳು ಶೇ. 3ರಿಂದ 6ರ ನಡುವೆ ಇರುತ್ತವೆ.

ಐಸಿಐಸಿಐ ಬ್ಯಾಂಕ್‌

ಐಸಿಐಸಿಐ ಬ್ಯಾಂಕ್ ಒಂದು ವರ್ಷದಿಂದ 15 ತಿಂಗಳ ಅವಧಿಯ ಎಫ್‌ಡಿಗಳಿಗೆ ಶೇ. 6.7, 15 ತಿಂಗಳಿನಿಂದ 2 ವರ್ಷಗಳವರೆಗಿನ ಅವಧಿಗೆ ಶೇ. 7.20 ಮತ್ತು 2-5 ವರ್ಷಗಳ ಅವಧಿಗೆ ಶೇ. 7ರಷ್ಟು ಬಡ್ಡಿ ನೀಡುತ್ತದೆ. ಅಲ್ಪಾವಧಿಯ ಸ್ಥಿರ ಠೇವಣಿಗಳಿಗೆ ಬಡ್ಡಿದರವು ಶೇಕ. 3ರಿಂದ 6ರ ನಡುವೆ ಇರುತ್ತದೆ.

ಕೋಟಕ್‌ ಮಹೀಂದ್ರಾ ಬ್ಯಾಂಕ್‌

ಕೋಟಕ್‌ ಮಹೀಂದ್ರಾ ಬ್ಯಾಂಕ್‌ನಲ್ಲಿ ಸ್ಥಿರ ಠೇವಣಿಯ ಅವಧಿ 390 ದಿನಗಳಿಂದ 391 ದಿನಗಳವರೆಗೆ ಇದ್ದರೆ ಶೇ. 7.4ರಷ್ಟು ಬಡ್ಡಿದರ ಲಭಿಸುತ್ತದೆ. 23 ತಿಂಗಳಿನಿಂದ 2 ವರ್ಷಗಳಿಗಿಂತ ಕಡಿಮೆ ಅವಧಿಯ ಬಡ್ಡಿ ಶೇ. 7.3. ಇನ್ನು 2-3 ವರ್ಷಗಳ ಅವಧಿಗೆ ಶೇ. 7.15, 3-5 ವರ್ಷಗಳ ನಡುವಿನ ಅವಧಿಗೆ ಶೇ. 7 ಮತ್ತು ಅಲ್ಪಾವಧಿಯ ಸ್ಥಿರ ಠೇವಣಿಗಳಿಗೆ . 2.75ರಿಂದ 6.50ರವರೆಗೆ ಬಡ್ಡಿ ಲಭ್ಯ.

ಪಂಜಾಬ್ ನ್ಯಾಷನಲ್ ಬ್ಯಾಂಕ್

ಎಫ್‌ಡಿಗೆ ಉತ್ತಮ ಬಡ್ಡಿ ದರ ನೀಡಿವ ಬ್ಯಾಂಕ್‌ಗಳ ಪೈಕಿ ಪಂಜಾಬ್‌ ನ್ಯಾಷನಲ್ ಬ್ಯಾಂಕ್‌ ಕೂಡ ಒಂದು ಎನಿಸಿಕೊಂಡಿದೆ. ತನ್ನ ಠೇವಣಿದಾರರಿಗೆ 400 ದಿನಗಳ ಠೇವಣಿಗಳ ಮೇಲೆ ಶೇ. 7.30, 300 ದಿನಗಳಿಗೆ ಶೇ. 7.10, ಒಂದು ವರ್ಷಕ್ಕೆ ಶೇ. 6.8 ಮತ್ತು ಎರಡು ವರ್ಷದ ಅವಧಿಗೆ ಶೇ. 6.85ರಷ್ಟು ಬಡ್ಡಿ ನೀಡುತ್ತದೆ. ಇನ್ನು 2-3 ವರ್ಷಗಳ ಅವಧಿಗೆ ಶೇ. 7.05, ಅಲ್ಪಾವಧಿಗೆ ಶೇ. 4.55ರಿಂದ 6.80 ಬಡ್ಡಿದರ ಲಭ್ಯ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಥಿರ ಠೇವಣಿ 2ರಿಂದ 3 ವರ್ಷಗಳ ನಡುವೆ ಇದ್ದರೆ ಗರಿಷ್ಠ ಬಡ್ಡಿದರವಾದ ಶೇ. 7 ರಷ್ಟು ನೀಡುತ್ತದೆ. 3-5 ವರ್ಷಗಳ ಅವಧಿಯ ಠೇವಣಿಗಳಿಗೆ ಶೇ. 6.75, 5 ವರ್ಷಗಳಿಗಿಂತ ಹೆಚ್ಚಿದ್ದರೆ ಶೇ. 6.5, ಒಂದು ವರ್ಷಕ್ಕಿಂತ ಕಡಿಮೆಯಿದ್ದಾಗ ಶೇ. 3.5ರಿಂದ 6.80ರ ನಡುವೆ ಇರುತ್ತದೆ.

ಇದನ್ನೂ ಓದಿ: Money Guide: ಸುರಕ್ಷತೆಗೆ ಆದ್ಯತೆ; ಪಾವತಿ ವಿಧಾನ ಸರಳಗೊಳಿಸಿದೆ ಮೊಬಿಕ್ವಿಕ್ ಪಾಕೆಟ್ ಯುಪಿಐ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

Money Guide: ವಿದೇಶ ಪ್ರವಾಸ ಅಂದುಕೊಂಡಷ್ಟು ಸುಲಭ ಅಲ್ಲ. ಪಾಸ್‌ಪೋರ್ಟ್‌, ವೀಸಾ ಹೊಂದಿಸುವುದರಿಂದ ಹಿಡಿದು ಟಿಕೆಟ್‌ ಬುಕ್‌ ಮಾಡುವುದು, ಅಲ್ಲಿನ ಪ್ರವಾಸ ತಾಣಗಳ ಬಗ್ಗೆ ಮಾಹಿತಿ ಕಲೆ ಹಾಕುವುದು, ಉಳಿದುಕೊಳ್ಳುವ ವ್ಯವಸ್ಥೆ, ಶಾಪಿಂಗ್‌ ಮಾಡುವ ರೀತಿ ಹೀಗೆ ಎಲ್ಲ ವಿಚಾರದ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಅಲ್ಲಿ ನಿಮ್ಮ ಹಣವನ್ನು ಹೇಗೆ ಖರ್ಚು ಮಾಡುವುದು ಎನ್ನುವ ವಿಚಾರವೂ ಮುಖ್ಯವಾಗುತ್ತದೆ. ಹಾಗಾದರೆ ವಿದೇಶಿ ಪ್ರಯಾಣದ ವೇಳೆ ನೆರವಾಗುವ ಫೊರೆಕ್ಸ್‌ ಕಾರ್ಡ್‌ ಮತ್ತು ಕ್ರೆಡಿಟ್‌ ಕಾರ್ಡ್‌ ಪೈಕಿ ಯಾವುದು ಸೂಕ್ತ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ವಿದೇಶ ಪ್ರವಾಸ ಅಂದುಕೊಂಡಷ್ಟು ಸುಲಭ ಅಲ್ಲ. ಪಾಸ್‌ಪೋರ್ಟ್‌, ವೀಸಾ ಹೊಂದಿಸುವುದರಿಂದ ಹಿಡಿದು ಟಿಕೆಟ್‌ ಬುಕ್‌ ಮಾಡುವುದು, ಅಲ್ಲಿನ ಪ್ರವಾಸ ತಾಣಗಳ ಬಗ್ಗೆ ಮಾಹಿತಿ ಕಲೆ ಹಾಕುವುದು, ಉಳಿದುಕೊಳ್ಳುವ ವ್ಯವಸ್ಥೆ, ಶಾಪಿಂಗ್‌ ಮಾಡುವ ರೀತಿ ಹೀಗೆ ಎಲ್ಲ ವಿಚಾರದ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಸೂಕ್ತ ಪ್ಲಾನ್‌ ಮಾಡಬೇಕಾಗುತ್ತದೆ. ಜತೆಗೆ ಅಲ್ಲಿ ನಿಮ್ಮ ಹಣವನ್ನು ಹೇಗೆ ಖರ್ಚು ಮಾಡುವುದು ಎನ್ನುವ ವಿಚಾರವೂ ಮುಖ್ಯವಾಗುತ್ತದೆ. ತೆರಿಗೆಯನ್ನು ತಪ್ಪಿಸಲು ವಿದೇಶಿ ವಿನಿಮಯ ಕಾರ್ಡ್‌ (forex cards)ಗಳನ್ನು ಬಳಸಬೇಕೆ ಅಥವಾ ಕ್ರೆಡಿಟ್ ಕಾರ್ಡ್ ಸ್ವೈಪ್ ಮಾಡಬೇಕೆ ಎನ್ನುವ ಗೊಂದಲ ಕಾಡುವುದು ಸಹಜ. ಈ ಪ್ರಶ್ನೆಗೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಕ್ರೆಡಿಟ್‌ ಕಾರ್ಡ್‌

ಗ್ರಾಹಕರು ಮೊದಲು ಸರಕು ಅಥವಾ ಸೇವೆಗಳನ್ನು ಖರೀದಿಸಿ ಬಳಿಕ ಪಾವತಿಸುವ ವ್ಯವಸ್ಥೆ ಕ್ರೆಡಿಟ್‌ ಕಾರ್ಡ್‌ನಲ್ಲಿದೆ. ಈ ಕಾರ್ಡ್ ಮೂಲಕ ನೀವು ನಿಮ್ಮ ಅಗತ್ಯಗಳನ್ನು ಸೀಮಿತ ಪ್ರಮಾಣದಲ್ಲಿ ಪೂರೈಸಿಕೊಳ್ಳಬಹುದು. ತೀರ ಬೇಕೆಂದಾಗ ನೀವು ಕ್ರೆಡಿಟ್ ಕಾರ್ಡ್‌ನಿಂದ ಹಣವನ್ನು ಕೂಡ ಪಡೆಯಬಹುದು. ಈ ರೀತಿಯಾಗಿ ಕ್ರೆಡಿಟ್ ಕಾರ್ಡ್ ಹೊಂದಿರುವವರು ಬ್ಯಾಂಕ್ ಬ್ಯಾಲೆನ್ಸ್ ಇಲ್ಲದಿದ್ದರೂ ಯಾವುದೇ ತೊಂದರೆಯಿಲ್ಲದೆ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಬಹುದು. ಕಡಿಮೆ ಬ್ಯಾಂಕ್ ಬ್ಯಾಲೆನ್ಸ್‌ನ ಸಂದರ್ಭದಲ್ಲಿಯೂ ಸಹ ಖರೀದಿ ಮಾಡಲು ಕ್ರೆಡಿಟ್ ಕಾರ್ಡ್ ನೆರವಾಗುತ್ತದೆ. ಇಲ್ಲಿ ನೀವು ಅನೇಕ ಬಡ್ಡಿ ರಹಿತ ಕ್ರೆಡಿಟ್‌ಗಳ ಪ್ರಯೋಜನವನ್ನು ಸಹ ಪಡೆಯಬಹುದು. ಕ್ರೆಡಿಟ್ ಕಾರ್ಡ್‌ಗಳನ್ನು ಆನ್‌ಲೈನ್ ಶಾಪಿಂಗ್, ಶಾಪಿಂಗ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಪಾವತಿ ಮಾಡಲು ಬಳಸಬಹುದು.

ಫೊರೆಕ್ಸ್‌ ಕಾರ್ಡ್‌

ಫೊರೆಕ್ಸ್‌ ಕಾರ್ಡ್ ಒಂದು ರೀತಿಯ ಪ್ರಿಪೇಯ್ಡ್ ಟ್ರಾವೆಲ್ ಕಾರ್ಡ್ ಆಗಿದ್ದು, ಇದು ವಿದೇಶಿ ಹಣವನ್ನು ಲೋಡ್ ಮಾಡಿ ಅದನ್ನು ಖರ್ಚು ಮಾಡಲು ನಿಮಗೆ ಅನುವು ಮಾಡಿಕೊಡುತ್ತದೆ. ಈ ಕಾರ್ಡ್ ಅನ್ನು ಬ್ಯಾಂಕುಗಳು ನೀಡುತ್ತವೆ. ನೀವು ಇದರಲ್ಲಿ ನಿಮ್ಮ ಆಯ್ಕೆಯ ಕರೆನ್ಸಿಯನ್ನು ಮುಂಚಿತವಾಗಿಯೇ ಲೋಡ್ ಮಾಡಬಹುದು ಮತ್ತು ನೀವು ಭೇಟಿ ನೀಡುವ ವಿದೇಶಿ ರಾಷ್ಟ್ರದಲ್ಲಿ ನಗದು ಹಿಂಪಡೆಯಲು, ಶಾಪಿಂಗ್ ಮಾಡಲು ಬಳಸಬಹುದು. ವಿದೇಶದಲ್ಲಿ ಅಧ್ಯಯನ ಮಾಡುವ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಡ್ ಬಳಸುತ್ತಾರೆ.

ಯಾವುದು ಉತ್ತಮ?

  • ನೀವು ಫೊರೆಕ್ಸ್‌ ಕಾರ್ಡ್‌ಗೆ ಹಣವನ್ನು ಲೋಡ್ ಮಾಡಿದಾಗ ವಿದೇಶಿ ವಿನಿಮಯ ದರವನ್ನು ಲಾಕ್ ಮಾಡಲಾಗುತ್ತದೆ. ಇದು ಭವಿಷ್ಯದ ಕರೆನ್ಸಿ ಬದಲಾವಣೆಯ ದರಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಕ್ರೆಡಿಟ್ ಕಾರ್ಡ್‌ನ ವಹಿವಾಟಿನ ಸಮಯದಲ್ಲಿ ಅದಕ್ಕೆ ದರ ಅನ್ವಯವಾಗುತ್ತದೆ. ಇದು ನಿರೀಕ್ಷಿತ ಏರಿಳಿತಗಳಿಗೆ ನಿಮ್ಮನ್ನು ಒಡ್ಡುತ್ತದೆ.
  • ಫೊರೆಕ್ಸ್‌ ಕಾರ್ಡ್‌ಗೆ ವ್ಯತಿರಿಕ್ತವಾಗಿ ಅಂತಾರಾಷ್ಟ್ರೀಯ ವಹಿವಾಟು ಮತ್ತು ನಗದು ಮುಂಗಡ ಶುಲ್ಕದಿಂದಾಗಿ ವಿದೇಶದಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ನಗದು ಹಿಂಪಡೆಯುವಿಕೆ ದುಬಾರಿಯಾಗಬಹುದು.
  • ಫೊರೆಕ್ಸ್‌ ಕಾರ್ಡ್ ಪ್ರಿಪೇಯ್ಡ್ ಆಗಿರುತ್ತವೆ. ಆದ್ದರಿಂದ ಕ್ರೆಡಿಟ್ ಕಾರ್ಡ್‌ನಲ್ಲಿ ವಿಧಿಸಲಾಗುವ ವಿಳಂಬ ಪಾವತಿಯ ದಂಡ ಮತ್ತು ಅತಿಯಾದ ಬಡ್ಡಿದರಗಳಿಂದ ಪಾರಾಗುತ್ತೀರಿ.
  • ನಿಮ್ಮ ಕ್ರೆಡಿಟ್ ಕಾರ್ಡ್‌ನ ಸಂಪೂರ್ಣ ಕ್ರೆಡಿಟ್ ಮಿತಿಯನ್ನು ಬಳಸಬಹುದು. ಇದು ಖರೀದಿಗಳು ಮತ್ತು ತುರ್ತು ಪರಿಸ್ಥಿತಿಗಳಿಗೆ ಸೂಕ್ತ. ಆದಾಗ್ಯೂ ಫೊರೆಕ್ಸ್‌ ಕಾರ್ಡ್‌ನಲ್ಲಿ ಮೊದಲೇ ಲೋಡ್ ಮಾಡಿದ ಮೊತ್ತವನ್ನಷ್ಟೇ ಬಳಸಬಹುದು. ನಿಮ್ಮ ಮೊತ್ತವು ಮುಗಿದರೆ, ನೀವು ಅದನ್ನು ಮತ್ತೆ ಲೋಡ್ ಮಾಡಬೇಕಾಗುತ್ತದೆ. ಇದು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಜತೆಗೆ ಮರು-ಲೋಡ್ ಶುಲ್ಕ ಪಾವತಿಸಬೇಕಾಗುತ್ತದೆ.

ಒಟ್ಟಿನಲ್ಲಿ ವಿದೇಶ ಪ್ರವಾಸದ ಸಂದರ್ಭದಲ್ಲಿ ಕ್ರೆಡಿಟ್‌ ಕಾರ್ಡ್‌ಗಿಂತ ಫೊರೆಕ್ಸ್‌ ಕಾರ್ಡ್‌ ಉತ್ತಮ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಇದನ್ನೂ ಓದಿ: Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Continue Reading

ಮನಿ-ಗೈಡ್

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Money Guide: ದೇಶದಲ್ಲಿನ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದಿದೆ. ಅದರಂತೆ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ 16 ಕಂತುಗಳನ್ನು ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಮುಂದಿನ ತಿಂಗಳು 17ನೇ ಕಂತು ಬಿಡಿಗಡೆಯಾಗುವ ನಿರೀಕ್ಷೆ ಇದೆ. ಸದ್ಯ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Money Guide
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 17ನೇ ಕಂತು ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು. ದೇಶಾದ್ಯಂತದ 9 ಕೋಟಿಗಿಂತ ಅಧಿಕ ಫಲಾನುಭವಿಗಳ ಖಾತೆಗೆ ಅಂದು ಸುಮಾರು 21,000 ಕೋಟಿ ರೂ. ಜಮೆ ಮಾಡಲಾಗಿತ್ತು. ಸದ್ಯ 17ನೇ ಕಂತು ಬಿಡುಗಡೆಯಾಗಬೇಕಿದೆ.

17ನೇ ಕಂತು ಯಾವಾಗ?

17ನೇ ಕಂತು ಮೇಯಲ್ಲಿ ಬಿಡುಗಡೆಯಾಗಲಿದೆ. ಆದರೆ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ.

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಈ ಯೋಜನೆ ನೆರವಾಗುತ್ತಿದೆ.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ‘New Farmer Registration’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ.
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ.
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ನಿಮ್ಮ ಹೆಸರು ಫಲಾನುಭವಿ ಪಟ್ಟಿಯಿಂದ ರದ್ದಾಗಲು ಕಾರಣ

  • ನಕಲಿ ಫಲಾನುಭವಿ ಸಂಖ್ಯೆ.
  • ಇ-ಕೆವೈಸಿ ಪೂರ್ಣವಾಗದಿರುವುದು.
  • ಅರ್ಜಿಯಲ್ಲಿನ ತಪ್ಪಾದ ಐಎಫ್‌ಎಸ್‌ಸಿ ಕೋಡ್‌.
  • ಅಮಾನ್ಯ, ವರ್ಗಾವಣೆಗೊಂಡ, ನಿರ್ಬಂಧಿಸಿದ ಅಥವಾ ಸ್ಥಗಿತಗೊಳಿಸಿದ ಬ್ಯಾಂಕ್ ಖಾತೆ.
  • ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಕಾರ್ಡ್‌ ನಂಬರ್‌ ಲಿಂಕ್‌ ಆಗದೇ ಇರುವುದು.
  • ಅಪೂರ್ಣ ಅಪ್ಲಿಕೇಷನ್‌ ಫಾರಂ.
  • ಅಮಾನ್ಯ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಹೆಸರು.
  • ಫಲಾನುಭವಿ ಖಾತೆ ಸಂಖ್ಯೆಯು ಫಲಾನುಭವಿ ಕೋಡ್ ಮತ್ತು ಯೋಜನೆಯೊಂದಿಗೆ ಹೋಲಿಕೆ ಆಗದಿರುವುದು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Continue Reading

ಮನಿ-ಗೈಡ್

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

Money Guide: ನಿಮ್ಮ ಪ್ಯಾನ್‌ ನಂಬರ್‌ ಇನ್ನೂ ಆಧಾರ್‌ನೊಂದಿಗೆ ಲಿಂಕ್‌ ಆಗಿಲ್ಲವೆ? ಹಾಗಾದರೆ ಮೇ 31ರೊಳಗೆ ಮಾಡಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ನಿಮ್ಮ ಪ್ಯಾನ್‌ ನಂಬರ್‌ (Permanent Account Number) ಅನ್ನು ಆಧಾರ್‌ (Aadhaar)ನೊಂದಿಗೆ ಇನ್ನೂ ಲಿಂಕ್‌ ಮಾಡಿಲ್ಲವೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ (Income tax) ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ನಿಮ್ಮ ಗೊಂದಲಕ್ಕೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಹೀಗೆ ಲಿಂಕ್‌ ಮಾಡಿ

ಪ್ಯಾನ್‌ ಮತ್ತು ಆಧಾರ್‌ ಅನ್ನು ಹಲವು ವಿಧಗಳ ಮೂಲಕ ಲಿಂಕ್‌ ಮಾಡಬಹುದು. ಮೊದಲೇ ಹೇಳಿದಂತೆ ಇದಕ್ಕಾಗಿ ಆನ್‌ಲೈನ್‌ ಮತ್ತು ಆಫ್‌ಲೈನ್‌ ಮಾರ್ಗಗಳನ್ನು ಬಳಸಬಹುದು.

ಇನ್‌ಕಂ ಟ್ಯಾಕ್ಸ್‌ ಡಿಪಾರ್ಟ್‌ಮೆಂಟ್‌ ಪೋರ್ಟಲ್‌ ಮೂಲಕ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳಲಿದ್ದು, ಅಲ್ಲಿ ಪ್ಯಾನ್‌, ಆಧಾರ್‌ ನಂಬರ್‌ ನಮೂದಿಸಿ. ಜತೆಗೆ ಇತರ ಅಗತ್ಯ ಮಾಹಿತಿಯನ್ನು ನೀಡಿ.

ಎಸ್‌ಎಂಎಸ್‌ ಮೂಲಕ

  • UIDPAN 10-ಅಂಕಿಗಳ ಪ್ಯಾನ್‌ ಕಾರ್ಡ್‌ ನಂಬರ್‌, 12-ಅಂಕಿಗಳ ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಒಂದು ಸ್ಪೇಸ್‌ ಕೊಟ್ಟು 567678 ಅಥವಾ 56161ಗೆ ಎಸ್‌ಎಂಎಸ್‌ ಕಳುಹಿಸಿ.
  • ಬಳಿಕ ಪ್ಯಾನ್-ಆಧಾರ್ ಲಿಂಕ್ ಸ್ಥಿತಿಯನ್ನು ಎಸ್ಎಂಎಸ್ ನಿಮಗೆ ತಿಳಿಸಲಾಗುತ್ತದೆ. ಗಮನಿಸಿ ಜನ್ಮ ದಿನಾಂಕವು ಎರಡೂ ದಾಖಲೆಗಳಲ್ಲಿ ಹೊಂದಿಕೆಯಾದರೆ ಮಾತ್ರ ಆಧಾರ್ ಮತ್ತು ಪ್ಯಾನ್ ಅನ್ನು ಲಿಂಕ್ ಮಾಡಲಾಗುತ್ತದೆ.

ಆಧಾರ್-ಪ್ಯಾನ್‌ ಲಿಂಕ್‌ ಆಗಿದ್ಯಾ ಎನ್ನುವುದನ್ನು ಪರಿಶೀಲಿಸುವ ವಿಧಾನ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar Status’ ಆಪ್ಶನ್‌ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್‌ ಮತ್ತು ಆಧಾರ್‌ ನಂಬರ್‌ ನಮೂದಿಸಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ ‘View Link Aadhaar Status’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಆಗ ಒಂದು ವೇಳೆ ಲಿಂಕ್‌ ಆಗಿದ್ದರೆ ನಿಮ್ಮ ಪ್ಯಾನ್‌ (ಪ್ಯಾನ್‌ ನಂಬರ್‌) ಆಧಾರ್‌ ನಂಬರ್‌ (ಆಧಾರ್‌ ನಂಬರ್‌ನ ಅಂಕಿ)ನೊಂದಿಗೆ ಲಿಂಕ್‌ ಆಗಿದೆ ಎನ್ನುವ ಸಂದೇಶ ಮೂಡುತ್ತದೆ.

ಕಡ್ಡಾಯ ಯಾಕೆ?

ನಕಲಿ ಪ್ಯಾನ್‌ ಕಾರ್ಡ್‌ಗಳನ್ನು ತಡೆಗಟ್ಟಲು, ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಜಾರಿಗೆ ತರುವ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯು ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡುವುದನ್ನು ಕಡ್ಡಾಯಗೊಳಿಸಿದೆ. ಹೀಗಾಗಿ ಇದುವರೆಗೆ ಲಿಂಕ್‌ ಮಾಡದಿದ್ದರೆ ಕೂಡಲೇ ಮಾಡಿಸಿ. ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಲು ಅಂತಿಮ ದಿನಾಂಕದವರೆಗೆ ಕಾಯುವ ಬದಲು ಕೂಡಲೇ ಲಿಂಕ್‌ ಮಾಡಿ ಎಂದು ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Continue Reading

ಮನಿ-ಗೈಡ್

Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Money Guide: ನಗರ, ಹಳ್ಳಿ ಎನ್ನುವ ಬೇಧವಿಲ್ಲದೆ ಇತ್ತೀಚಿನ ದಿನಗಳಲ್ಲಿ ಡಿಜಿಟಲ್‌ ಪೇಮೆಂಟ್‌ ವಿಧಾನ ಜನಪ್ರಿಯಗೊಳ್ಳುತ್ತಿದೆ. ಆನ್‌ಲೈನ್‌ ಪಾವತಿ ಲಭ್ಯವಿಲ್ಲದ ಕಡೆ ಕ್ರೆಡಿಟ್‌ ಕಾರ್ಡ್‌ ಬಳಕೆ ವ್ಯಾಪಕವಾಗಿದೆ. ಇದಕ್ಕೆ ತಕ್ಕಂತೆ ವಂಚನೆಯ ಪ್ರಕರಣವೂ ವೃದ್ಧಿಸುತ್ತಿದೆ. ಕ್ರೆಡಿಟ್ ಕಾರ್ಡ್ ವಂಚನೆ ಇಂದು ಎದುರಾಗುವ ಬಹು ದೊಡ್ಡ ಸವಾಲು ಎನಿಸಿಕೊಂಡಿದೆ. ಹಾಗಂತ ಗಾಬರಿಯಾಗಬೇಕಾಗಿಲ್ಲ. ಒಂದಷ್ಟು ಮುಂಜಾಗ್ರತಾ ಕ್ರಮ ಕೈಗೊಂಡರೆ ಕ್ರೆಡಿಟ್‌ ಕಾರ್ಡ್‌ ಅನ್ನು ಸುರಕ್ಷಿತವಾಗಿಸಿಕೊಳ್ಳಬಹುದು. ಅದು ಹೇಗೆ ಎನ್ನುವುದನ್ನು ತಿಳಿಸುಕೊಳ್ಳಲು ಇಂದಿನ ಮನಿಗೈಡ್‌ ಓದಿ.

VISTARANEWS.COM


on

Money Guide
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಗದು ವಹಿವಾಟು ಗಣನೀಯವಾಗಿ ಕುಸಿಯುತ್ತಿದೆ ಮತ್ತು ಬಹುತೇಕರು ಡಿಜಿಟಲ್ ಪಾವತಿಯತ್ತ (Digital payments) ಮುಖ ಮಾಡುತ್ತಿದ್ದಾರೆ. ನಗರ ಮಾತ್ರವಲ್ಲ ಗ್ರಾಮಾಂತರ ಪ್ರದೇಶಗಳಲ್ಲಿಯೂ ಡಿಜಿಟಲ್‌ ಪೇಮೆಂಟ್‌ ಜನಪ್ರಿಯವಾಗುತ್ತಿದೆ. ಆನ್‌ಲೈನ್‌ ಪಾವತಿ ಲಭ್ಯವಿಲ್ಲದ ಕಡೆ ಕ್ರೆಡಿಟ್‌ ಕಾರ್ಡ್‌ (Credit card) ನೆರವಿಗೆ ಬರುತ್ತದೆ. ಹೀಗಾಗಿ ಹೆಚ್ಚಿನ ವ್ಯಾಪಾರಿಗಳು ಈಗ ಕ್ರೆಡಿಟ್ ಕಾರ್ಡ್ ಪಾವತಿಯನ್ನು ಸ್ವೀಕರಿಸುತ್ತಿದ್ದಾರೆ. ದೊಡ್ಡ ಮೊತ್ತದ ಖರೀದಿಗೆ ಇದು ಹೆಚ್ಚು ಸೂಕ್ತ. ಆದರೆ ಕೆಲವೊಮ್ಮೆ ವಂಚಕರು ಕ್ರೆಡಿಟ್‌ ಕಾರ್ಡ್‌ ಮೂಲಕ ನಿಮ್ಮನ್ನು ಮೋಸಗೊಳಿಸಲು ಮುಂದಾಗಬಹುದು. ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ಅದು ಹೇಗೆ ಎನ್ನುವ ವಿವರ ಇಲ್ಲಿದೆ (Money Guide).

ಅನೇಕ ಕ್ರೆಡಿಟ್ ಕಾರ್ಡ್‌ಗಳು ಆಕರ್ಷಕ ಕೊಡುಗೆಗಳನ್ನೂ ನೀಡುತ್ತವೆ. ರಿವಾರ್ಡ್, ಕ್ಯಾಶ್ ಬ್ಯಾಕ್, ಪ್ರಯಾಣ ವಿಮೆ ಅಥವಾ ಲಾಂಜ್ ಪ್ರವೇಶದಂತಹ ಇತರ ಪ್ರಯೋಜನಗಳನ್ನು ನೀಡುವ ಮೂಲಕ ಗಮನ ಸೆಳೆಯುತ್ತವೆ. ಈ ಎಲ್ಲ ಕಾರಣಗಳಿಂದ ಕ್ರೆಡಿಟ್‌ ಕಾರ್ಡ್‌ ಬಳಕೆ ಇನ್ನಷ್ಟು ಹೆಚ್ಚಿದೆ. ಆದಾಗ್ಯೂ ಕ್ರೆಡಿಟ್ ಕಾರ್ಡ್ ವಂಚನೆ ಇಂದು ಎದುರಾಗುವ ಬಹು ದೊಡ್ಡ ಸವಾಲು ಎನಿಸಿಕೊಂಡಿದೆ. ಹಾಗಂತ ಗಾಬರಿಯಾಗಬೇಕಾಗಿಲ್ಲ. ಒಂದಷ್ಟು ಮುಂಜಾಗ್ರತಾ ಕ್ರಮ ಕೈಗೊಂಡರೆ ಕ್ರೆಡಿಟ್‌ ಕಾರ್ಡ್‌ ಅನ್ನು ಸುರಕ್ಷಿತವಾಗಿಸಿಕೊಳ್ಳಬಹುದು. ವೈಯಕ್ತಿಕ ಜಾಗರೂಕತೆ, ತಾಂತ್ರಿಕ ಕ್ರಮಗಳು ಮತ್ತು ಸುರಕ್ಷತಾ ಕ್ರಮಗಳ ಸಂಯೋಜನೆಯ ಮೂಲಕ ನೀವು ವಂಚಕರ ಕಾಟದಿಂದ ಪಾರಾಗಬಹುದು. ಅದಕ್ಕಾಗಿ ನೀವು ಅನುಸರಿಸಬೇಕಾದ ಕ್ರಮಗಳ ಮಾಹಿತಿ ಇಂತಿದೆ.

ರಹಸ್ಯ ಕಾಪಾಡಿ

ನಿಮ್ಮ ಕಾರ್ಡ್‌ ಪಿನ್, ಸಿವಿವಿ ಕೋಡ್ ಅಥವಾ ಪೂರ್ಣ ಕ್ರೆಡಿಟ್ ಕಾರ್ಡ್ ಸಂಖ್ಯೆಯನ್ನು ನೇರವಾಗಿ, ಇಮೇಲ್ ಅಥವಾ ಫೋನ್ ಮೂಲಕ ಯಾರೊಂದಿಗೂ ಹಂಚಿಕೊಳ್ಳಬೇಡಿ. ಇದು ಸುರಕ್ಷತೆಗಾಗಿ ನೀವು ಅನುಸರಿಸಬಹುದಾದ ಅತಿ ಮುಖ್ಯ ಹೆಜ್ಜೆ. ಅಲ್ಲದೆ ಬ್ಯಾಂಕ್‌ಗಳು ಈ ಮಾಹಿತಿಯನ್ನು ಯಾವ ಕಾರಣಕ್ಕೂ, ಯಾರ ಬಳಿಯೂ ಕೇಳುವುದಿಲ್ಲ. ವಂಚಕರು ಬ್ಯಾಂಕ್‌ ಹೆಸರಲ್ಲಿ ಕರೆ ಮಾಡಿ ಅಥವಾ ಎಸ್‌ಎಂಎಸ್‌ ಮಾಡಿ ಈ ಬಗ್ಗೆ ನಿಮ್ಮ ಬಾಯಿ ಬಿಡಿಸಲು ನೋಡಬಹುದು. ಯಾವ ಕಾರಣಕ್ಕೂ ಇದನ್ನು ಹಂಚಿಕೊಳ್ಳಬೇಡಿ.

ಕ್ರೆಡಿಟ್ ಕಾರ್ಡ್ ವಹಿವಾಟು ಮೇಲೆ ಗಮನ ಹರಿಸಿ

ಆನ್‌ಲೈನ್‌ ಬ್ಯಾಂಕಿಂಗ್ ಆಯ್ಕೆ ಅಥವಾ ಮೊಬೈಲ್ ಅಪ್ಲಿಕೇಶನ್‌ ಮೂಲಕ ನಿಮ್ಮ ಕ್ರೆಡಿಟ್ ಕಾರ್ಡ್ ವಹಿವಾಟುಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಿ. ಯಾವುದೇ ಅನಧಿಕೃತ ವಹಿವಾಟು ಕಂಡು ಬಂದರೆ ತಕ್ಷಣ ನಿಮ್ಮ ಬ್ಯಾಂಕಿಗೆ ವರದಿ ಮಾಡಿ. ಕಾರ್ಡ್ ರೀಡರ್‌ಗಳನ್ನು ಬಳಸುವಾಗ ಜಾಗರೂಕರಾಗಿರಿ. ಅವು ಕಾನೂನುಬದ್ಧವಾಗಿವೆ ಮತ್ತು ತಿರುಚಲಾಗಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಪಾಯಿಂಟ್ ಆಫ್ ಸೇಲ್ ಟರ್ಮಿನಲ್‌ಗಳಲ್ಲಿ ನಮೂದಿಸುವಾಗ ನಿಮ್ಮ ಪಿನ್ ಅನ್ನು ಗೌಪ್ಯವಾಗಿಡಿ.

ಸುರಕ್ಷಿತ ಆನ್‌ಲೈನ್ ವಹಿವಾಟುಗಳು

ಈಗಂತೂ ಆನ್‌ಲೈನ್‌ ಶಾಪಿಂಗ್‌ ಹೆಸರಿನಲ್ಲಿ ಸಾಕಷ್ಟು ವಂಚನೆ ನಡೆಯುತ್ತಿದೆ. ಉತ್ತಮ ಕೊಡುಗೆ ಪ್ರದರ್ಶಿಸಿ ನಿಮ್ಮ ಗಮನ ಸೆಳೆದು ವಂಚನೆ ನಡೆಸುವ ಪ್ರವೃತ್ತಿಯೂ ಹೆಚ್ಚುತ್ತಿದೆ. ಹೀಗಾಗಿ ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡುವಾಗ ವೆಬ್ ಸೈಟ್ ಕಾನೂನುಬದ್ಧವಾಗಿದೆ ಮತ್ತು ಸುರಕ್ಷಿತ ಸಂಪರ್ಕವನ್ನು ಬಳಸುತ್ತದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಕ್ಯಾಶ್‌ ಆನ್‌ ಡೆಲಿವರಿ ಆಯ್ಕೆಯನ್ನೇ ಬಳಸಿ. ಕ್ರೆಡಿಟ್ ಕಾರ್ಡ್ ವಹಿವಾಟುಗಳಿಗೆ ಸಾರ್ವಜನಿಕ ವೈ-ಫೈ ಬಳಸುವುದನ್ನು ತಪ್ಪಿಸಿ. ಸೈಬರ್ ಭದ್ರತೆಗೆ ಸಂಬಂಧಿಸಿದಂತೆ ನಿಮ್ಮ ಬ್ಯಾಂಕ್ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಿ. ಯಾವುದೇ ಕಾರಣಕ್ಕೂ ಅನುಮಾನಾಸ್ಪದ ವೆಬ್‌ಸೈಟ್‌ಗಳಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ವಿವರಗಳನ್ನು ನಮೂದಿಸಬೇಡಿ. ನಿಮ್ಮ ಕಾರ್ಡ್ ಮಾಹಿತಿಯನ್ನು ವಿನಂತಿಸುವ ಇಮೇಲ್ ಅಥವಾ ಕರೆಗಳಿಗೆ ಪ್ರತಿಕ್ರಿಯಿಸಬೇಡಿ.

ಸುರಕ್ಷಿತ ವೈಶಿಷ್ಟ್ಯಗಳನ್ನು ಅಳವಡಿಸಿಕೊಳ್ಳಿ

ನಿಮ್ಮ ಬ್ಯಾಂಕ್ ನೀಡುವ ಭದ್ರತಾ ವೈಶಿಷ್ಟ್ಯಗಳ ಲಾಭ ಪಡೆಯಿರಿ. ವೆಚ್ಚದ ಮಿತಿಗಳನ್ನು ನಿಗದಿಪಡಿಸುವುದು, ಎರಡು-ಅಂಶಗಳ ದೃಢೀಕರಣವನ್ನು ಸಕ್ರಿಯಗೊಳಿಸುವುದು ಅಥವಾ ನಿಮ್ಮ ನಿಜವಾದ ಕಾರ್ಡ್ ವಿವರಗಳನ್ನು ಹಂಚಿಕೊಳ್ಳುವ ಅಗತ್ಯವಿಲ್ಲದ ಮೊಬೈಲ್ ವ್ಯಾಲೆಟ್‌ಗಳನ್ನು ಬಳಸಿಕೊಳ್ಳಿ. ನಿಮ್ಮ ಕ್ರೆಡಿಟ್ ಕಾರ್ಡ್‌ನೊಂದಿಗೆ ಮಾಡಿದ ಪ್ರತಿಯೊಂದು ವಹಿವಾಟಿನ ಅಧಿಸೂಚನೆಗಳನ್ನು ಎಸ್‌ಎಂಎಸ್‌ / ಇಮೇಲ್‌ ಮೂಲಕ ಸ್ವೀಕರಿಸುವ ಎಚ್ಚರಿಕೆಗಳನ್ನು ಸಕ್ರಿಯಗೊಳಿಸಿ. ಸಾಂಪ್ರದಾಯಿಕ ಮ್ಯಾಗ್ನೆಟಿಕ್ ಸ್ಟ್ರೈಪ್ ಕಾರ್ಡ್ (Magnetic stripe cards)ಗಳಿಗೆ ಹೋಲಿಸಿದರೆ ಹೆಚ್ಚುವರಿ ಭದ್ರತೆಯನ್ನು ಒದಗಿಸುವ ಇಎಂವಿ ಚಿಪ್ ತಂತ್ರಜ್ಞಾನ ಅಳವಡಿಸಿರುವ ಕಾರ್ಡ್‌ ಅಥವಾ ನಿಮ್ಮ ಬ್ಯಾಂಕಿನಲ್ಲಿ ಲಭ್ಯವಿರುವ ಇತ್ತೀಚಿನ ಕಾರ್ಡ್‌ ಮಾದರಿಯನ್ನು ಆಯ್ಕೆ ಮಾಡಿ.

ಕಾರ್ಡ್ ಬಗ್ಗೆ ಸ್ಮಾರ್ಟ್ ಆಗಿರಿ

ನಿಮ್ಮ ಕಾರ್ಡ್‌ಗಳನ್ನು ಸುರಕ್ಷಿತವಾಗಿರಿಸಿಕೊಳ್ಳಿ ಮತ್ತು ಅಂಗಡಿಗಳು ಅಥವಾ ರೆಸ್ಟೋರೆಂಟ್‌ಗಳಲ್ಲಿ ನಿಮ್ಮ ಕಣ್ಣೆದುರೇ ಸ್ವೈಪ್‌ ಮಾಡಿ. ನಿಮ್ಮ ಕಾರ್ಡ್ ಮಾಹಿತಿಯನ್ನು ಕದಿಯುವ ಸ್ಕಿಮ್ಮಿಂಗ್ ಸಾಧನಗಳ ಬಗ್ಗೆ ಜಾಗರೂಕರಾಗಿರಿ. ಹಳೆಯ ಕ್ರೆಡಿಟ್ ಕಾರ್ಡ್ ಸ್ಟೇಟ್‌ಮೆಂಟ್‌ ಮತ್ತು ರಸೀದಿಗಳನ್ನು ಹಾಗೆಯೇ ಎಸೆಯುವ ಮೊದಲು ಅವುಗಳನ್ನು ಚೂರು ಚೂರು ಮಾಡಿ. ಒಂದು ವೇಳೆ ವಂಚನೆಯ ಸುಳಿವು ಸಿಕ್ಕರೆ ತಕ್ಷಣ ಕಸ್ಟಮರ್‌ ಕೇರ್‌ ನಂಬರ್‌ಗೆ ಕರೆ ಮಾಡಿ ಬ್ಲಾಕ್‌ ಮಾಡುವುದನ್ನು ಮರೆಯಬೇಡಿ.

ಇದನ್ನೂ ಓದಿ: Money Guide: ಮಕ್ಕಳಿಗೆ ಉಡುಗೊರೆ ಕೊಡಬೇಕೆ? ಅವರ ಹೆಸರಿನಲ್ಲಿ ಪಿಪಿಎಫ್‌ ಖಾತೆ ಆರಂಭಿಸಿ; ಇಲ್ಲಿದೆ ಸಂಪೂರ್ಣ ವಿವರ

Continue Reading
Advertisement
Pakistan Inflation
ವಿದೇಶ3 hours ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ4 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು4 hours ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ4 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ5 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ5 hours ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ5 hours ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ5 hours ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ5 hours ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ5 hours ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202415 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202416 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ23 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌