Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ - Vistara News

ಮನಿ-ಗೈಡ್

Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

ಅತ್ಯಾಕರ್ಷಕ ಬಡ್ಡಿ ದರದೊಂದಿಗೆ ಅಂಚೆ ಇಲಾಖೆ ಒದಗಿಸಿರುವ ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರು ಹೂಡಿಕೆ (Money Guide) ಮಾಡಬಹುದು. ಖಾತ್ರಿ ಮರುಪಾವತಿ ನೀಡುವ ಯೋಜನೆ ಇದಾಗಿದ್ದು, ಇದರಲ್ಲಿ ಹೂಡಿಕೆ ಮಾಡುವುದರಿಂದ ಏನು ಲಾಭ, ಸಿಗುವ ಬಡ್ಡಿ ದರ ಎಷ್ಟಿದೆ ಗೊತ್ತೇ? ಹಿರಿಯ ನಾಗರಿಕರಿಗೆ ಉಪಯುಕ್ತವಾದ ಮಾಹಿತಿ ಇಲ್ಲಿದೆ.

VISTARANEWS.COM


on

Money Guide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಿರಿಯ ನಾಗರಿಕರ (Senior Citizen) ಉಳಿತಾಯ ಯೋಜನೆಯು (SCSS) 60 ವರ್ಷಕ್ಕಿಂತ ಮೇಲ್ಪಟ್ಟವರು ಹೂಡಿಕೆ (Money Guide) ಮಾಡಬಹುದಾದ ಖಾತ್ರಿ ಮರುಪಾವತಿ (guaranteed return) ನೀಡುವ ಯೋಜನೆಯಾಗಿದೆ. ಇದರಲ್ಲಿ ಜಂಟಿ ಖಾತೆಯನ್ನು ಸಂಗಾತಿಯೊಂದಿಗೆ ಮಾತ್ರ ತೆರೆಯಬಹುದು.

ಅಂಚೆ ಇಲಾಖೆಯು (post office) ಈ ಸಣ್ಣ ಉಳಿತಾಯ ಯೋಜನೆಗೆ (small savings scheme) ವಾರ್ಷಿಕ ಶೇ. ಶೇ. 8.2 ಬಡ್ಡಿ ದರವನ್ನು (interest rate) ನೀಡುತ್ತಿದೆ. ನೀವು ಈ ಯೋಜನೆಯನ್ನು 5 ವರ್ಷಗಳವರೆಗೆ ತೆರೆಯಬಹುದು. ಆದರೆ ಮೆಚ್ಯೂರಿಟಿಯ ದಿನಾಂಕದಿಂದ ಮುಂದಿನ 3 ವರ್ಷಗಳವರೆಗೆ ಇದನ್ನು ವಿಸ್ತರಿಸಬಹುದು.

ಎಷ್ಟು ಹೂಡಿಕೆ ಮಾಡಬಹುದು?

ಒಂದು ಬಾರಿಯ ಮೊತ್ತದ ಹೂಡಿಕೆಯನ್ನು ಮಾಡಬೇಕು. ಇದರಲ್ಲಿ ಕನಿಷ್ಠ 1,000 ರೂ. ನಿಂದ ಗರಿಷ್ಠ 30 ಲಕ್ಷ ರೂ. ವರೆಗೆ ಹೂಡಿಕೆ ಮಾಡಲು ಅವಕಾಶವಿದೆ. ಇದರಲ್ಲಿ ಮಾಡಿದ ಠೇವಣಿಗಳ ಮೇಲೆ ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಪ್ರಯೋಜನಗಳನ್ನು ಪಡೆಯಬಹುದು.

ಬಡ್ಡಿ ದರ

ತ್ರೈಮಾಸಿಕ ಆಧಾರದಲ್ಲಿ ಬಡ್ಡಿಯನ್ನು ಪಾವತಿಸಲಾಗುತ್ತದೆ. ಠೇವಣಿ ಮಾಡಿದ ದಿನಾಂಕದಿಂದ ಮಾರ್ಚ್ 31, ಜೂನ್ 30, ಸೆಪ್ಟೆಂಬರ್ 30, ಡಿಸೆಂಬರ್ 31ರಂದು ಬಡ್ಡಿಯನ್ನು ಪಾವತಿಸಲಾಗುತ್ತದೆ. ಯಾವುದೇ ತ್ರೈಮಾಸಿಕದಲ್ಲಿ ಬಡ್ಡಿಯನ್ನು ಕ್ಲೈಮ್ ಮಾಡದಿದ್ದರೆ ಹೆಚ್ಚುವರಿ ಬಡ್ಡಿಯನ್ನು ಗಳಿಸಲು ಸಾಧ್ಯವಾಗುವುದಿಲ್ಲ. ಉಳಿತಾಯ ಖಾತೆಗೆ ಸ್ವಯಂ ಕ್ರೆಡಿಟ್ ಮೂಲಕ ಬಡ್ಡಿಯನ್ನು ಡ್ರಾ ಮಾಡಬಹುದು.


ಬಡ್ಡಿಗೆ ತೆರಿಗೆ

ಎಲ್ಲಾ ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಖಾತೆಗಳಲ್ಲಿನ ಒಟ್ಟು ಬಡ್ಡಿಯು 50,000 ರೂ. ಗಳನ್ನು ಮೀರಿದರೆ ಬಡ್ಡಿಗೆ ತೆರಿಗೆ ವಿಧಿಸಲಾಗುತ್ತದೆ. ಅನಂತರ ಬಡ್ಡಿಯ ಮೇಲೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಫಾರ್ಮ್ 15 ಜಿ /15ಹೆಚ್ ಅನ್ನು ಸಲ್ಲಿಸಿದರೆ ಮತ್ತು ಸಂಚಿತ ಬಡ್ಡಿಯು 50,000 ರೂ. ಗಿಂತ ಹೆಚ್ಚಿಲ್ಲದಿದ್ದರೆ ಯಾವುದೇ ಟಿಡಿಎಸ್ ಅನ್ನು ಕಡಿತಗೊಳಿಸಲಾಗುವುದಿಲ್ಲ.

ಎಷ್ಟು ಲಾಭ?

ಪ್ರಸ್ತುತ ಪೋಸ್ಟ್ ಆಫೀಸ್ ಎಸ್‌ಸಿಎಸ್‌ಎಸ್‌ನಲ್ಲಿ ತಲಾ 1 ಲಕ್ಷ, 2 ಲಕ್ಷ, 5 ಲಕ್ಷ ಮತ್ತು 10 ಲಕ್ಷ ರೂ. ಹೂಡಿಕೆ ಮಾಡಿದರೆ ಎಷ್ಟು ಲಾಭ ಸಿಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಯೋಜನೆಯ ಒಟ್ಟು ಅವಧಿಯು 5 ವರ್ಷಗಳು ಮತ್ತು ಬಡ್ಡಿ ದರವು ವಾರ್ಷಿಕ ಶೇ. 8.2. ಗಳಾದರೆ 1 ಲಕ್ಷ ರೂ. ಹೂಡಿಕೆ ಮಾಡಿದರೆ ಒಟ್ಟು ಬಡ್ಡಿ 41,000, 2,050 ತ್ರೈಮಾಸಿಕ ಬಡ್ಡಿ ಹಾಗೂ ಐದು ವರ್ಷಗಳಲ್ಲಿ ಮುಕ್ತಾಯದ ಮೊತ್ತ 1,41,000 ರೂ. ಅನ್ನು ಪಡೆಯಬಹುದು. ಅದೇ ರೀತಿ 2 ಲಕ್ಷ ರೂ. ಹೂಡಿಕೆ ಮಾಡಿದರೆ 82,000, 4,100, 2,82,000, 3 ಲಕ್ಷ ಹೂಡಿಕೆ ಮಾಡಿದರೆ 1,23,000, 6,150, 4,23,000, 4 ಲಕ್ಷ ಹೂಡಿಕೆ ಮಾಡಿದರೆ 1,64,000, 8,200, 5,64,000, 5 ಲಕ್ಷ ರೂ. ಹೂಡಿಕೆ ಮಾಡಿದರೆ 2,05,000, 10,250, 7,05,000, 10 ಲಕ್ಷ ರೂ. ಹೂಡಿಕೆ ಮಾಡಿದರೆ 4,10,000, 20500, 14,10,000, 20 ಲಕ್ಷ ರೂ. ಹೂಡಿಕೆ ಮಾಡಿದರೆ 8,20,000, 41,000, 28,20,000, 30 ಲಕ್ಷ ಹೂಡಿಕೆ ಮಾಡಿದರೆ 12,30,000, 61,500, 42,30,000 ಪಡೆಯಬಹುದು.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

ಅಕಾಲಿಕ ಮುಚ್ಚುವಿಕೆ

ಹಿರಿಯ ನಾಗರಿಕರ ಉಳಿತಾಯ ಯೋಜನೆಯನ್ನು ಯಾವುದೇ ಸಮಯದಲ್ಲಿ ಅಕಾಲಿಕವಾಗಿ ಮುಚ್ಚಬಹುದು. ಆದರೂ ಖಾತೆಯನ್ನು ತೆರೆಯುವ 1 ವರ್ಷದ ಮೊದಲು ಮುಚ್ಚಿದ್ದರೆ ಯಾವುದೇ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ. ಅಂಚೆ ಕಚೇರಿಯು ಒಟ್ಟು ಮೊತ್ತದಿಂದ ಪಾವತಿಸಿದ ಬಡ್ಡಿಯನ್ನು ಸಹ ಪಡೆಯುತ್ತದೆ. 1 ವರ್ಷದಿಂದ 2 ವರ್ಷಗಳ ಅವಧಿಯಲ್ಲಿ ಖಾತೆಯನ್ನು ಮುಚ್ಚಿದ್ದರೆ, ಮೊತ್ತದ ಶೇ. 1.5ರಷ್ಟನ್ನು ಕಡಿತಗೊಳಿಸಿದ ಅನಂತರ ಮೂಲ ಮೊತ್ತವನ್ನು ಪಾವತಿಸಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ ಗೈಡ್

Money Guide: 30 ಸಾವಿರ ಸಂಬಳ ಪಡೆಯುವವರೂ ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿ ಆಗಲು ಸಾಧ್ಯ!

ತಿಂಗಳಿಗೆ ಇರುವುದು ಕೇವಲ 25 ರಿಂದ 30 ಸಾವಿರ ಸಂಬಳ. ಇನ್ನು ಕೋಟ್ಯಧಿಪತಿ ಆಗುವುದು ಕನಸಿನ ಮಾತು ಎಂದು ನಿರಾಶೆಗೆ ಒಳಗಾಗುವರೇ ಹೆಚ್ಚು. ಆದರೆ ಮನಸ್ಸು ಮಾಡಿದರೆ ಕಡಿಮೆ ಸಂಬಳವಿದ್ದರೂ ಸರಿಯಾದ ಯೋಜನೆ (Money Guide) ಹಾಕಿಕೊಂಡರೆ ಕೆಲವೇ ವರ್ಷಗಳಲ್ಲಿ ಕೋಟ್ಯಾಧಿಪತಿಗಳಾಗಬಹುದು. ಕಡಿಮೆ ಸಂಬಳ ಇರುವವರೂ ಹೆಚ್ಚು ಸಂಪಾದನೆ ಮಾಡಲು ಸಾಧ್ಯವಿದೆ. ಅದಕ್ಕಾಗಿ ಇಲ್ಲಿದೆ ಕೆಲವು ಉಪಯುಕ್ತ ಟಿಪ್ಸ್.

VISTARANEWS.COM


on

By

Money Guide
Koo

ಕೋಟ್ಯಧಿಪತಿ (Crorepati) ಆಗುವ ಕನಸು (dream) ಪ್ರತಿಯೊಬ್ಬರಿಗೂ ಇದೆ. ಆದರೆ ಬರುವ ಸಂಬಳ (salary) ಮನೆ ಖರ್ಚಿಗೂ ಸಾಲುವುದಿಲ್ಲ ಎಂದು ದುಃಖಿಸುವವರೇ ಹೆಚ್ಚು. ಆದರೆ ಸರಿಯಾದ ಯೋಜನೆ (Money Guide ) ರೂಪಿಸಿಕೊಂಡರೆ ಇದು ಕಷ್ಟವೇನಲ್ಲ. ಹಣಕಾಸಿನ ಲೆಕ್ಕಾಚಾರದ ಜೊತೆಜೊತೆಗೆ ಒಂದಷ್ಟು ಯೋಜನೆ ಹಾಕಿಕೊಂಡರೆ ಬಹುತೇಕ ಎಲ್ಲರೂ ಕೋಟ್ಯಧಿಪತಿಗಳಬಹುದು.

ಈಗ ಬಹುತೇಕ ಮಂದಿ ದುಡಿಯುವವರೇ. ಇದರಲ್ಲಿ ಬಹುಪಾಲು ಮಂದಿ ದೊಡ್ಡದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಸಾಕಷ್ಟು ಹಣವನ್ನೂ ಗಳಿಸುತ್ತಿದ್ದಾರೆ. ಕೆಲವು ವರ್ಗದವರ ಆದಾಯ ಬಹುತೇಕ 1 ಕೋಟಿ ರೂ. ಹತ್ತಿರವೂ ಇದೆ. ತಿಂಗಳಿಗೆ 25 ರಿಂದ 30,000 ರೂಪಾಯಿ ಸಂಬಳ ಪಡೆಯುವವರಿಗೆ ಕೋಟ್ಯಾಧಿಪತಿ ಆಗುವ ಕನಸಿದೆ. ಆದರೆ ಇದು ಅಸಾಧ್ಯ ಎಂದು ಬಹುತೇಕ ಮಂದಿ ಕೈಚೆಲ್ಲುತ್ತಾರೆ. ಆದರೆ ಸರಿಯಾದ ಹಣಕಾಸು ಯೋಜನೆಯನ್ನು ರೂಪಿಸಿದರೆ ಇಂದಿನ ಕಾಲದಲ್ಲಿ ಕೋಟ್ಯಾಧಿಪತಿಯಾಗುವುದು ಕಷ್ಟವೇನಲ್ಲ.

ಕೋಟ್ಯಧಿಪತಿಗಳಾಗುವುದು ಇಂದಿನ ಕಾಲದಲ್ಲಿ ಕಷ್ಟವಲ್ಲ. ಇದಕ್ಕಾಗಿ ಅನೇಕ ಹೂಡಿಕೆಯ ವಿಧಾನಗಳಿವೆ. ಅದರ ಮೂಲಕ ಕಡಿಮೆ ಸಂಬಳ ಪಡೆಯುವ ಜನರೂ ಕೋಟ್ಯಾಧಿಪತಿಯಾಗುವ ತಮ್ಮ ಕನಸನ್ನು ನನಸಾಗಿಸಬಹುದು.
ಮ್ಯೂಚುವಲ್ ಫಂಡ್‌ಗಳಲ್ಲಿ ಎಸ್ ಐಪಿ ನಿಮ್ಮ ಕೋಟ್ಯಾಧಿಪತಿಯಾಗುವ ಕನಸನ್ನು ನನಸು ಮಾಡಬಹುದು. ಎಸ್ ಐಪಿ ಮಾಸಿಕ 30,000 ರೂಪಾಯಿಗಳನ್ನು ಗಳಿಸುವ ವ್ಯಕ್ತಿಯನ್ನು ಸಹ ಕೋಟ್ಯಾಧಿಪತಿಯನ್ನಾಗಿ ಮಾಡುತ್ತದೆ.

ಎಸ್ ಐ ಪಿ ಹೇಗೆ ಪ್ರಯೋಜನಕಾರಿ?

ಮ್ಯೂಚುವಲ್ ಫಂಡ್‌ಗಳು ಎಸ್ ಐ ಪಿ ಮಾರುಕಟ್ಟೆ- ಸಂಯೋಜಿತ ಯೋಜನೆಯಾಗಿದೆ. ಆದ್ದರಿಂದ ಅದರಲ್ಲಿ ಲಾಭದ ಗ್ಯಾರಂಟಿ ಇಲ್ಲ. ಆದರೆ ನೇರವಾಗಿ ಷೇರುಗಳಲ್ಲಿ ಹಣವನ್ನು ಹೂಡಿಕೆ ಮಾಡುವುದಕ್ಕೆ ಹೋಲಿಸಿದರೆ ಅಪಾಯವು ಕಡಿಮೆ. ದೀರ್ಘಾವಧಿಯಲ್ಲಿ ಅದರ ಸರಾಸರಿ ಆದಾಯವು ಸುಮಾರು ಶೇ. 12ರಷ್ಟು ಇದೆ ಎಂದು ತಜ್ಞರು ಹೇಳುತ್ತಾರೆ.

Money Guide


ಇದು ಯಾವುದೇ ಇತರ ಯೋಜನೆಗಳಿಗಿಂತ ಹೆಚ್ಚು ಲಾಭಕರ. ಕೆಲವೊಮ್ಮೆ ಅದರಿಂದ ಉತ್ತಮ ಆದಾಯ ಪಡೆಯುವ ಅವಕಾಶವಿರುತ್ತದೆ. ಈ ಸಂಯೋಜನೆಯಿಂದಾಗಿ ದೀರ್ಘಾವಧಿಯಲ್ಲಿ ಮ್ಯೂಚುವಲ್ ಫಂಡ್‌ಗಳಲ್ಲಿ ಹಣವು ವೇಗವಾಗಿ ಬೆಳೆಯುತ್ತದೆ. ಆದ್ದರಿಂದ, ಇಂದಿನ ಸಮಯದಲ್ಲಿ ಜನರು ಇದನ್ನು ಲಾಭದಾಯಕ ವ್ಯವಹಾರವೆಂದು ಪರಿಗಣಿಸುತ್ತಾರೆ ಮತ್ತು ಹೆಚ್ಚಿನ ತಜ್ಞರು ಅದನ್ನು ಪೋರ್ಟ್ ಫೋಲಿಯೋದಲ್ಲಿ ಸೇರಿಸಲು ಹೇಳುತ್ತಾರೆ.

ಮಿಲಿಯನೇರ್ ಆಗುವುದು ಹೇಗೆ?

ತಿಂಗಳಿಗೆ 30,000 ರೂ. ಸಂಬಳ ಪಡೆಯುವವರೂ ಮಿಲಿಯನೇರ್ ಆಗಬಹುದು. ಇದಕ್ಕಾಗಿ 50- 30- 20 ನಿಯಮವನ್ನು ಅನುಸರಿಸಬೇಕು. ಅಂದರೆ ಆದಾಯದ ಶೇ. 20ರಷ್ಟನ್ನು ಎಸ್ ಐ ಪಿಯಲ್ಲಿ ಹೂಡಿಕೆ ಮಾಡಬೇಕು. 30,000 ರೂ. ಶೇ. 20ರಷ್ಟು ಎಂದರೆ 6,000 ರೂ. ಆಗಿರುತ್ತದೆ. ಎಸ್ ಐಪಿಯಲ್ಲಿ ಪ್ರತಿ ತಿಂಗಳು 6,000 ರೂ. ಹೂಡಿಕೆ ಮಾಡಿದರೆ 24 ವರ್ಷಗಳಲ್ಲಿ ಕೋಟ್ಯಧಿಪತಿ ಆಗಬಹುದು.

ಇದನ್ನೂ ಓದಿ: GST Council Meet : ನಕಲಿ ಬಿಲ್​ ತಡೆಗೆ ಬಯೋಮೆಟ್ರಿಕ್​ ವ್ಯವಸ್ಥೆ; ಜಿಎಸ್​ಟಿ ಕೌನ್ಸಿಲ್​ ಸಭೆಯಲ್ಲಿ ಹಲವು ನಿರ್ಧಾರಗಳು ಪ್ರಕಟ

24 ವರ್ಷಗಳಲ್ಲಿ ಒಟ್ಟು 17,28,000 ರೂ. ಅಂದರೆ ಶೇ.12ರಷ್ಟು ಬಡ್ಡಿ ದರದಲ್ಲಿ 83,08,123 ರೂ. ಆಗುತ್ತದೆ. ಸಮಯದೊಂದಿಗೆ ಆದಾಯವೂ ಹೆಚ್ಚಾಗುವುದರಿಂದ ಹೂಡಿಕೆಯನ್ನು ಹೆಚ್ಚಿಸಿ 24 ವರ್ಷಗಳಲ್ಲಿ 1,00,36,123 ರೂ. ಗಳಿಸಿ 24 ವರ್ಷಗಳ ಮುಂಚೆಯೇ ಮಿಲಿಯನೇರ್ ಆಗಬಹುದು!

Continue Reading

ವಾಣಿಜ್ಯ

EPFO Balance Check: ಜುಲೈ ಅಂತ್ಯದಲ್ಲಿ ಪಿಎಫ್ ಖಾತೆಗೆ ಬಡ್ಡಿ ಹಣ ಬರಲಿದೆ; ಪರಿಶೀಲಿಸುವುದು ಹೇಗೆ?

ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಗೆ ಶೀಘ್ರದಲ್ಲೇ ಬಡ್ಡಿ ಮೊತ್ತ (EPFO Balance Check) ಜಮೆಯಾಗಲಿದೆ. ಜುಲೈ ಅಂತ್ಯದ ವೇಳೆಗೆ ಬಡ್ಡಿ ಹಣ ಇಪಿಎಫ್ ಒ ಸದಸ್ಯರ ಖಾತೆಗೆ ತಲುಪೂವ ನಿರೀಕ್ಷೆ ಇದೆ. ಬಡ್ಡಿ ಹಣ ಖಾತೆಗೆ ಬಂದಿದೆಯೇ ಇಲ್ಲವೇ, ಎಷ್ಟು ಬಂದಿದೆ ಎಂಬುದನ್ನು ಪರಿಶೀಲಿಸಲು ಸಾಕಷ್ಟು ದಾರಿಗಳಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

EPFO Balance Check
Koo

ಭವಿಷ್ಯ ನಿಧಿ (Employees’ Provident Fund) ಹೊಂದಿರುವ ಉದ್ಯೋಗಿಗಳು ತಮ್ಮ ಖಾತೆಗೆ ಬಡ್ಡಿ (interest) ಮೊತ್ತ ಜಮೆಯಾಗುವುದನ್ನು (EPFO Balance Check) ಕಾಯುತ್ತಿದ್ದಾರೆ. ಅಂತವರಿಗೆ ಇದೀಗ ಸಿಹಿ ಸುದ್ದಿ. ಜುಲೈ (july) ಅಂತ್ಯದ ವೇಳೆಗೆ ಬಡ್ಡಿ ಹಣ ಇಪಿಎಫ್ ಒ (EPFO) ಸದಸ್ಯರ ಖಾತೆಗೆ ತಲುಪಬಹುದು. ಇದಕ್ಕಾಗಿ ಶೀಘ್ರದಲ್ಲೇ ಹಣಕಾಸು ಸಚಿವಾಲಯ (Finance Ministry) ಅಧಿಕೃತ ಅಧಿಸೂಚನೆಯನ್ನು ಹೊರಡಿಸುವ ನಿರೀಕ್ಷೆ ಇದೆ.

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಗಳು ಫೆಬ್ರವರಿಯಲ್ಲಿ ಆರ್ಥಿಕ ವರ್ಷ 2024 ಕ್ಕೆ ಶೇ. 8.25ರ ಬಡ್ಡಿ ದರವನ್ನು ಅನುಮೋದಿಸಿದೆ. ಆದರೆ ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಲು ಹಣಕಾಸು ಸಚಿವಾಲಯವು ಇನ್ನೂ ಕಾಯುತ್ತಿದೆ. ಸಾರ್ವತ್ರಿಕ ಚುನಾವಣೆಗಳಿಂದಾಗಿ ಇದು ವಿಳಂಬವಾಗಿದೆ. ಇದು ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಹಣ ಬಂದಿದೆಯೇ ತಿಳಿಯುವುದು ಹೇಗೆ?

ಇಪಿಎಫ್ ಖಾತೆಯ ಪಾಸ್‌ಬುಕ್ ಅನ್ನು ಪರಿಶೀಲಿಸುತ್ತಿದ್ದರೆ ನಿಮ್ಮ ಇಪಿಎಫ್ ಬಡ್ಡಿ ಹಣ ಬಂದಿದೆಯೋ ಇಲ್ಲವೋ ಎಂಬುದು ನಿಮಗೆ ತಿಳಿಯುತ್ತದೆ. ಮಿಸ್ಡ್ ಕಾಲ್ ಅಥವಾ ಎಸ್ ಎಂಎಸ್ ನಂತಹ ಸೌಲಭ್ಯಗಳ ಮೂಲಕ ಇಪಿಎಫ್ ಒ ​​ಪೋರ್ಟಲ್ ಮೂಲಕ ನೀವು ಇಪಿಎಫ್ ಪಾಸ್‌ಬುಕ್ ಅನ್ನು ಪರಿಶೀಲಿಸಬಹುದು.

EPFO Balance Check

ಇಪಿಎಫ್‌ಒ ​​ಪೋರ್ಟಲ್‌ನಲ್ಲಿ ಹೇಗೆ ಪರಿಶೀಲಿಸುವುದು?

ಮೊದಲನೆಯದಾಗಿ ಇಪಿಎಫ್ ಒ ​​ಪೋರ್ಟಲ್ https://www.epfindia.gov.in/site_en/index.php ಗೆ ಹೋಗಿ. ಇದಕ್ಕಾಗಿ ನಿಮ್ಮ ಯುಎಎನ್ (ಯುನಿವರ್ಸಲ್ ಖಾತೆ ಸಂಖ್ಯೆ) ಅನ್ನು ಸಕ್ರಿಯಗೊಳಿಸಬೇಕು. ಸೈಟ್ ತೆರೆದಾಗ, ನಮ್ಮ ಸೇವೆಗಳು ಟ್ಯಾಬ್‌ಗೆ ಹೋಗಿ ಮತ್ತು ಅನಂತರ ಡ್ರಾಪ್-ಡೌನ್ ಮೆನು ‘ಉದ್ಯೋಗಿಗಳಿಗಾಗಿ’ ಆಯ್ಕೆ ಮಾಡಿ. ಸೇವಾ ಕಾಲಂ ಅಡಿಯಲ್ಲಿ ಸದಸ್ಯರ ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ. ಮುಂದಿನ ಪುಟದಲ್ಲಿ ಯುಎಎನ್ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಬೇಕು. ಕ್ಯಾಪ್ಚಾವನ್ನು ನಮೂದಿಸುವ ಮೂಲಕ ಲಾಗ್ ಇನ್ ಮಾಡಿ. ಲಾಗಿನ್ ಆದ ಅನಂತರ ಸದಸ್ಯರ ಐಡಿ ಅನ್ನು ನಮೂದಿಸಿ. ಇದರ ಬಳಿಕ ಇಪಿಎಫ್ ಬ್ಯಾಲೆನ್ಸ್ ಗೋಚರಿಸುತ್ತದೆ.

ಇದನ್ನೂ ಓದಿ: PAN Card Safety: ಪಾನ್ ಕಾರ್ಡ್ ದುರ್ಬಳಕೆಯಿಂದ ಪಾರಾಗುವುದು ಹೇಗೆ?

ಮಿಸ್ಡ್ ಕಾಲ್ ಮೂಲಕ ಹೇಗೆ ಪರಿಶೀಲಿಸುವುದು?

011- 22901406ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಇಪಿಎಫ್ ಬ್ಯಾಲೆನ್ಸ್ ಅನ್ನು ನೀವು ಪರಿಶೀಲಿಸಬಹುದು. ಕರೆ ಮಾಡಿದಾಗ, ಎಸ್ ಎಂಎಸ್ ಅನ್ನು ಪಡೆಯುತ್ತೀರಿ. ಅದರಲ್ಲಿ ಬ್ಯಾಲೆನ್ಸ್ ಗೋಚರಿಸುತ್ತದೆ. ಇದಕ್ಕಾಗಿ ಇಪಿಎಫ್ ಖಾತೆಯೊಂದಿಗೆ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಪ್ಯಾನ್ ಮತ್ತು ಆಧಾರ್ ಸಂಖ್ಯೆಯೊಂದಿಗೆ ಬ್ಯಾಂಕ್ ಖಾತೆ ಸಂಖ್ಯೆಯನ್ನು ಸಹ ನಿಮ್ಮ ಯುಎಎನ್ ಗೆ ಲಿಂಕ್ ಮಾಡಬೇಕು.

ಎಸ್‌ಎಂಎಸ್ ಮೂಲಕ ಪರಿಶೀಲಿಸುವುದು ಹೇಗೆ?

ಮಿಸ್ಡ್ ಕಾಲ್ ಸೇವೆಯಂತೆಯೇ ಎಲ್ಲಾ ಪ್ರಮುಖ ದಾಖಲೆಗಳನ್ನು ಯುಎಎನ್‌ಗೆ ಲಿಂಕ್ ಮಾಡಬೇಕು. ಆಗ ಮಾತ್ರ ಈ ಸೇವೆಯನ್ನು ಬಳಸಲು ಸಾಧ್ಯವಾಗುತ್ತದೆ. ಇದಕ್ಕಾಗಿ EPFOHO UAN ENG ಅಥವಾ ENG ಬದಲಿಗೆ ನೀವು ಸಂದೇಶವನ್ನು ಬಯಸುವ ಭಾಷೆಯ ಕೋಡ್ ಅನ್ನು ಬರೆದು 7738299899 ಗೆ SMS ಮಾಡಬೇಕಾಗುತ್ತದೆ.

Continue Reading

ವಾಣಿಜ್ಯ

PAN Card Safety: ಪಾನ್ ಕಾರ್ಡ್ ದುರ್ಬಳಕೆಯಿಂದ ಪಾರಾಗುವುದು ಹೇಗೆ?

ಭಾರತದಲ್ಲಿ ಪಾನ್ ಕಾರ್ಡ್ ದುರ್ಬಳಕೆ ಹೆಚ್ಚಾಗುತ್ತಿದೆ. ಅದರಲ್ಲೂ ಹಿರಿಯ ನಾಗರಿಕರು, ದುರ್ಬಲರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ವಂಚಕರು ಪಾನ್ (PAN Card Safety) ವಿವರಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ, ವಂಚನೆಗಳನ್ನು ಹೇಗೆ ಗುರುತಿಸಬಹುದು ಮತ್ತು ಆರ್ಥಿಕ ಯೋಗಕ್ಷೇಮವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

PAN Card Safety
Koo

ಪಾನ್ ಕಾರ್ಡ್‌ಗಳ (PAN Card Safety) ದುರುಪಯೋಗ ಭಾರತದಲ್ಲಿ (india) ಹೆಚ್ಚಾಗುತ್ತಿದೆ. ವಿಶೇಷವಾಗಿ ಹಿರಿಯ ನಾಗರಿಕರು (senior citizens), ರೈತರು (farmers), ವಿದ್ಯಾರ್ಥಿಗಳು (students) ಇದಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ನಾವು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ಅದರಲ್ಲೂ ಪಾನ್ ಕಾರ್ಡ್ (pan card) ಬಳಕೆ, ಮಾಹಿತಿ ಹಂಚಿಕೆ ವಿಚಾರದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯನ್ನು ವಹಿಸಬೇಕಿದೆ.

ಪಾನ್ ಕಾರ್ಡ್ ಭಾರತದಲ್ಲಿನ ಹಣಕಾಸಿನ ವಹಿವಾಟುಗಳಿಗೆ ಪ್ರಮುಖ ದಾಖಲೆಯಾಗಿದೆ. ಹೀಗಾಗಿ ಇದನ್ನು ವಿವಿಧ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳಬಹುದಾದ ಸಾಧ್ಯತೆಗಳಿವೆ. ಮುಂಬಯಿಯ ಹಿರಿಯ ನಾಗರಿಕರೊಬ್ಬರ ಪಾನ್ ವಿವರಗಳನ್ನು 1.3 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟವನ್ನು ನೋಂದಾಯಿಸಲು ಬಳಸಿದ್ದಾರೆ ಎನ್ನುವುದು ಆದಾಯ ತೆರಿಗೆ ಇಲಾಖೆಯಿಂದ ತನಿಖೆಗೆ ಬಂದ ಬಳಿಕ ಗೊತ್ತಾಗಿದೆ.

ವಂಚಕರು ಸಾಮಾನ್ಯವಾಗಿ ತಂತ್ರಜ್ಞಾನದ ಬಗ್ಗೆ ತಿಳಿದಿರುತ್ತಾರೆ. ಹೀಗಾಗಿ ಅವರು ಹೆಚ್ಚು ಜಾಗರೂಕರಾಗಿರದ ವ್ಯಕ್ತಿಗಳನ್ನು ಗುರಿಯಾಗಿಸುತ್ತಾರೆ. ಅವರು ವಿವಿಧ ವಿಧಾನಗಳ ಮೂಲಕ ಪಾನ್ ವಿವರಗಳನ್ನು ಪಡೆದು ಅನಂತರ ಅವುಗಳನ್ನು ಕಾನೂನುಬಾಹಿರವಾಗಿ ಬಳಸುತ್ತಾರೆ.

ವಂಚನೆ ಹೇಗೆ?

ನಕಲಿ ಆಸ್ತಿ ನೋಂದಣಿ

ಮುಂಬಯಿ ಪ್ರಕರಣದಂತೆ ವಂಚಕರು ನಕಲಿ ಆಸ್ತಿ ಮಾರಾಟವನ್ನು ನೋಂದಾಯಿಸಲು ಪಾನ್ ಕಾರ್ಡ್‌ಗಳನ್ನು ದುರುಪಯೋಗಪಡಿಸಿಕೊಳ್ಳಬಹುದು. ಇದು ಸಂತ್ರಸ್ತರಿಗೆ ತೆರಿಗೆ ನೊಟೀಸ್ ಜಾರಿಯಾಗಲು ಕಾರಣವಾಗಬಹುದು.

ಸಾಲ ಪಡೆಯಲು

ಕ್ರಿಮಿನಲ್‌ಗಳು ಫಿನ್‌ಟೆಕ್ ಅಪ್ಲಿಕೇಶನ್‌ಗಳ ಮೂಲಕ ಸಾಲಗಳನ್ನು ಪಡೆಯಲು ಪಾನ್ ವಿವರಗಳನ್ನು ಬಳಸಿಕೊಳ್ಳಬಹುದು. ಇದರಿಂದ ಸಂತ್ರಸ್ತರು ಅನಿರೀಕ್ಷಿತವಾಗಿ ಸಾಲಗಾರರಾಗಬಹುದು.


ಪಾನ್ ರಕ್ಷಿಸುವುದು ಹೇಗೆ?

ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಪಾನ್ ಮಾಹಿತಿಯನ್ನು ಹಂಚಿಕೊಳ್ಳುವಾಗ ತೀವ್ರ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಪಾನ್ ವಿವರಗಳನ್ನು ಸರ್ಕಾರದಿಂದ ಅಧಿಕೃತವಾಗಿರುವ ಘಟಕಗಳೊಂದಿಗೆ ಮಾತ್ರ ಹಂಚಿಕೊಳ್ಳಿ. ಪಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದರಿಂದ ದುರುಪಯೋಗದ ವಿರುದ್ಧ ಸ್ವಲ್ಪ ರಕ್ಷಣೆ ಪಡೆಯಬಹುದು.

ಪ್ಯಾನ್ ಕಾರ್ಡ್ ದುರುಪಯೋಗವನ್ನು ಪರಿಶೀಲಿಸುವುದು ಹೇಗೆ?

ಪಾನ್ ಕಾರ್ಡ್ ಹಗರಣವನ್ನು ಗುರುತಿಸಲು ತೆಗೆದುಕೊಳ್ಳಬೇಕಾದ ಕೆಲವು ಕ್ರಮಗಳಿವೆ.
ವಾರ್ಷಿಕ ಮಾಹಿತಿ ಪರಿಶೀಲಿಸಿ (AIS)

ಆದಾಯ ತೆರಿಗೆ ಇಲಾಖೆಯಿಂದ ನೀಡಲಾದ ಈ ಡಾಕ್ಯುಮೆಂಟ್, ಬ್ಯಾಂಕ್‌ಗಳು ಮತ್ತು ಇತರ ಸಂಸ್ಥೆಗಳು ವರದಿ ಮಾಡಿರುವ ನಿಮ್ಮ ಹಣಕಾಸಿನ ವಹಿವಾಟಿನ ವಿವರವಾದ ದಾಖಲೆಯನ್ನು ಒದಗಿಸುತ್ತದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಾಗಿ ನಿಮ್ಮ ವಾರ್ಷಿಕ ಮಾಹಿತಿಯನ್ನು ನಿಯಮಿತವಾಗಿ ಪರಿಶೀಲಿಸಿ.

ಕ್ರೆಡಿಟ್ ಸ್ಕೋರ್ ಮೇಲ್ವಿಚಾರಣೆ ಮಾಡಿ

CIBIL, Equifax, Experian ಅಥವಾ CRIF ಹೈ ಮಾರ್ಕ್ ನಂತಹ ಏಜೆನ್ಸಿಗಳ ಮೂಲಕ ಕ್ರೆಡಿಟ್ ಸ್ಕೋರ್ ಅನ್ನು ಪರಿಶೀಲಿಸಿ. ನಿಮಗೆ ತಿಳಿಯದೆ ನಿಮ್ಮ ಹೆಸರಿನಲ್ಲಿ ತೆಗೆದುಕೊಂಡ ಯಾವುದೇ ಸಾಲಗಳನ್ನು ಗುರುತಿಸಿ.

ಇದನ್ನೂ ಓದಿ: Elon Musk: ಟೆಸ್ಲಾದಲ್ಲಿ ಎಲಾನ್ ಮಸ್ಕ್ ಒಬ್ಬರ ಸಂಬಳ ಟಾಟಾ ಮೋಟಾರ್ಸ್‌ ಒಟ್ಟು ಆದಾಯಕ್ಕಿಂತ ಹೆಚ್ಚು!

ಹಣಕಾಸು ವರದಿಗಳನ್ನು ಪರೀಕ್ಷಿಸಿ

ಪೇಟಿಎಂ ಅಥವಾ ಬ್ಯಾಂಕ್ ಬಜಾರ್‌ನಂತಹ ಫಿನ್‌ಟೆಕ್ ಪ್ಲಾಟ್‌ಫಾರ್ಮ್‌ಗಳು ಹಣಕಾಸು ವರದಿಗಳನ್ನು ಪಡೆಯಲು ಅನುಮತಿಸುತ್ತವೆ. ಈ ವರದಿಗಳನ್ನು ನಿಯಮಿತವಾಗಿ ಪರಿಶೀಲಿಸುವುದರಿಂದ ಯಾವುದೇ ಅನಧಿಕೃತ ವಹಿವಾಟುಗಳನ್ನು ಪತ್ತೆಹಚ್ಚಲು ಸಹಾಯವಾಗುವುದು.

ಜಾಗರೂಕರಾಗಿರಿ ಮತ್ತು ಕ್ರಮ ಕೈಗೊಳ್ಳಿ

ಪಾನ್ ಕಾರ್ಡ್ ಹಂಚಿಕೆ ವಿಚಾರದಲ್ಲಿ ಜಾಗರೂಕರಾಗಿರಿ. ಅನುಮಾನಾಸ್ಪದವಾಗಿ ಕಂಡು ಬಂದರೆ ಕೂಡಲೇ ಕ್ರಮ ಕೈಗೊಳ್ಳಿ. ಇದರಿಂದ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಪಾನ್ ಕಾರ್ಡ್ ವಂಚನೆಗೆ ಬಲಿಯಾದರೆ ತಕ್ಷಣ ಪೊಲೀಸ್ ಇಲಾಖೆಗೆ ದೂರು ನೀಡಿ. ಆರ್ಥಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಪಾನ್ ವಿವರಗಳನ್ನು ರಕ್ಷಿಸುವುದು ಬಹಳ ಮುಖ್ಯ.

Continue Reading

ವಾಣಿಜ್ಯ

Income Tax Returns Filing: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಈ ತಪ್ಪುಗಳನ್ನು ಮಾಡಬೇಡಿ!

ಆದಾಯ ತೆರಿಗೆ ರಿಟರ್ನ್ಸ್ (Income Tax Returns Filing) ಸಲ್ಲಿಸುವ ಮೊದಲು ಎಲ್ಲವೂ ಸರಿಯಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು, ದಂಡವನ್ನು ತಪ್ಪಿಸಲು ನಿಖರವಾಗಿ ಮತ್ತು ಸಮಯೋಚಿತವಾಗಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಅತ್ಯಗತ್ಯ. ಸಾಮಾನ್ಯ ತಪ್ಪುಗಳಿಗೆ ಇದರಲ್ಲಿ ಅವಕಾಶ ನೀಡಬೇಡಿ. ಈ ಬಗ್ಗೆ ಯಾವುದೇ ಸಂದೇಹವಿದ್ದರೆ ತೆರಿಗೆ ವೃತ್ತಿಪರರಿಂದ ಸಹಾಯವನ್ನು ಪಡೆಯಿರಿ.

VISTARANEWS.COM


on

By

Income Tax Returns Filing
Koo

ಉದ್ಯೋಗಿಗಳಿಗೆ (employees) ಫಾರ್ಮ್ 16 (form 16) ಈಗಾಗಲೇ ಸಿಕ್ಕಿದ್ದು, 2024-25 ಅಥವಾ ಹಣಕಾಸು ವರ್ಷ (financial year) 2023-24ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ (Income Tax Returns Filing) ಸಲ್ಲಿಸಬಹುದು. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಕೆಲವು ಸಾಮಾನ್ಯ ತಪ್ಪುಗಳನ್ನು (mistake) ಮಾಡುವುದು ಸಹಜ. ಆದರೆ ಈ ರೀತಿ ತಪ್ಪು ಆಗದಂತೆ ಎಚ್ಚರ ವಹಿಸುವುದು ಕೂಡ ಮುಖ್ಯ.

ತಪ್ಪುಗಳನ್ನು ಮಾಡದಂತೆ ಖಚಿತಪಡಿಸಿಕೊಳ್ಳಲು ಮತ್ತು ತೆರಿಗೆ ಅಧಿಕಾರಿಗಳೊಂದಿಗೆ ಅನಗತ್ಯ ತೊಂದರೆಗಳನ್ನು ತಪ್ಪಿಸಲು ಆದಾಯ ತೆರಿಗೆ ರಿಟರ್ನ್ಸ್ ಅನ್ನು ನಿಖರವಾಗಿ ಮತ್ತು ಸಮಯಕ್ಕೆ ಸರಿಯಾಗಿ ಸಲ್ಲಿಸುವುದು ಬಹಳ ಮುಖ್ಯ.
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಮಾಡಲೇಬಾರದ ಹತ್ತು ತಪ್ಪುಗಳು ಯಾವುದು ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ವೈಯಕ್ತಿಕ ಮಾಹಿತಿ

ಹೆಸರು, ವಿಳಾಸ, ಪಾನ್ ಮತ್ತು ಬ್ಯಾಂಕ್ ವಿವರಗಳಂತಹ ತಪ್ಪಾದ ವೈಯಕ್ತಿಕ ಮಾಹಿತಿಯನ್ನು ನಮೂದಿಸುವುದು ಸಾಮಾನ್ಯ ತಪ್ಪುಗಳಲ್ಲಿ ಒಂದಾಗಿದೆ. ಇದು ಪ್ರಕ್ರಿಯೆ ಅಥವಾ ಮರುಪಾವತಿಯನ್ನು ವಿಳಂಬಗೊಳಿಸುವ ಸಾಧ್ಯತೆ ಇದೆ. ಇಂತಹ ಯಾವುದೇ ವ್ಯತ್ಯಾಸಗಳನ್ನು ತಪ್ಪಿಸಲು ಅಧಿಕೃತ ದಾಖಲೆಗಳು ಮತ್ತು ಬ್ಯಾಂಕ್ ದಾಖಲೆಗಳಲ್ಲಿನ ವಿವರಗಳು ಹೊಂದಿಕೆಯಾಗುತ್ತವೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಮೊದಲು ಎಲ್ಲಾ ವೈಯಕ್ತಿಕ ಮಾಹಿತಿಯನ್ನು ಎರಡು ಬಾರಿ ಪರಿಶೀಲಿಸಿ. ಯಾವುದೇ ತಪ್ಪುಗಳಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ.

ತಪ್ಪಾದ ಆದಾಯ ತೆರಿಗೆ ರಿಟರ್ನ್ಸ್

ವಿವಿಧ ರೀತಿಯ ತೆರಿಗೆದಾರರು ಮತ್ತು ಆದಾಯದ ಮೂಲಗಳಿಗಾಗಿ ವಿವಿಧ ಆದಾಯ ತೆರಿಗೆ ರಿಟರ್ನ್ಸ್ ಫಾರ್ಮ್‌ಗಳಿವೆ. ತಪ್ಪು ಫಾರ್ಮ್ ಅನ್ನು ಬಳಸುವುದರಿಂದ ನಿರಾಕರಣೆ ಅಥವಾ ಪ್ರಕ್ರಿಯೆ ವಿಳಂಬಕ್ಕೆ ಕಾರಣವಾಗಬಹುದು.

50 ಲಕ್ಷದವರೆಗಿನ ಆದಾಯ ಹೊಂದಿರುವವರಿಗೆ ITR-1 (ಸಹಜ್), ವ್ಯಾಪಾರ ಅಥವಾ ವೃತ್ತಿಯಿಂದ ಆದಾಯವನ್ನು ಹೊಂದಿರದವರಿಗೆ ಮತ್ತು ಎಚ್‌ಯುಎಫ್‌ಗಳಿಗೆ ITR-2, ವ್ಯಾಪಾರ ಅಥವಾ ವೃತ್ತಿಯಿಂದ ಆದಾಯ ಹೊಂದಿರುವವರಿಗೆ ಮತ್ತು ಎಚ್‌ಯುಎಫ್‌ಗಳಿಗೆ ITR-3, I ವ್ಯಾಪಾರ ಮತ್ತು ವೃತ್ತಿಯಿಂದ ಊಹೆಯ ಆದಾಯ ಪಡೆಯುವವರಿಗೆ TR-4 (ಸುಗಮ) ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ.

ಆದಾಯದ ಮೂಲ ವರದಿ

ಉಳಿತಾಯ ಖಾತೆಗಳು, ಸ್ಥಿರ ಠೇವಣಿಗಳು, ಬಾಡಿಗೆ ಆದಾಯ ಅಥವಾ ಬಂಡವಾಳ ಲಾಭಗಳಂತಹ ಹೆಚ್ಚುವರಿ ಆದಾಯದ ಮೂಲಗಳನ್ನು ವರದಿ ಮಾಡಲು ಅನೇಕ ತೆರಿಗೆದಾರರು ಮರೆಯುತ್ತಾರೆ. ಇವುಗಳನ್ನು ಬಿಟ್ಟುಬಿಡುವುದರಿಂದ ಪೆನಾಲ್ಟಿಗಳು ಮತ್ತು ಪಾವತಿಸದ ತೆರಿಗೆಗಳ ಮೇಲಿನ ಬಡ್ಡಿಗೆ ಕಾರಣವಾಗಬಹುದು.ಎಲ್ಲಾ ಮೂಲಗಳು ವರದಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಬಡ್ಡಿ, ಲಾಭಾಂಶಗಳು ಮತ್ತು ಬಾಡಿಗೆ ಆದಾಯ ಸೇರಿದಂತೆ ಎಲ್ಲಾ ಹಣಕಾಸಿನ ದಾಖಲೆಗಳು ಮತ್ತು ಆದಾಯ ಹೇಳಿಕೆಗಳನ್ನು ಒಟ್ಟುಗೂಡಿಸಿ.

ಅರ್ಹವಾದ ಕಡಿತ

ತೆರಿಗೆದಾರರು ಸಾಮಾನ್ಯವಾಗಿ 80C, 80D, 80E, ಇತ್ಯಾದಿಗಳಂತಹ ವಿವಿಧ ವಿಭಾಗಗಳ ಅಡಿಯಲ್ಲಿ ಕಡಿತಗಳನ್ನು ಕ್ಲೈಮ್ ಮಾಡುವುದನ್ನು ತಪ್ಪಿಸಿಕೊಳ್ಳುತ್ತಾರೆ. ಇದು ಅವರ ತೆರಿಗೆಯ ಆದಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಆದಾಯ ತೆರಿಗೆ ಕಾಯ್ದೆಯಡಿ ಲಭ್ಯವಿರುವ ಎಲ್ಲಾ ಕಡಿತಗಳ ಬಗ್ಗೆ ತಿಳಿದಿರಲಿ ಮತ್ತು ಅವುಗಳನ್ನು ಸೂಕ್ತವಾಗಿ ಕ್ಲೈಮ್ ಮಾಡಿ. ಸಾಮಾನ್ಯ ಕಡಿತಗಳಲ್ಲಿ ಪಿಪಿಎಫ್ , ಎನ್ ಎಸ್ ಸಿ, ವಿಮಾ ಪ್ರೀಮಿಯಂಗಳು, ಗೃಹ ಸಾಲದ ಬಡ್ಡಿ ಮತ್ತು ಬೋಧನಾ ಶುಲ್ಕಗಳಲ್ಲಿ ಹೂಡಿಕೆಗಳು ಸೇರಿವೆ.

ಟಿಡಿಎಸ್ ವಿವರ

ಫಾರ್ಮ್ 26ಎಎಸ್ ನಲ್ಲಿನ ಟಿಡಿಎಸ್ ವಿವರಗಳ ನಡುವೆ ಹೊಂದಿಕೆಯಾಗುವುದಿಲ್ಲ ಮತ್ತು ಆದಾಯ ತೆರಿಗೆ ರಿಟರ್ನ್ಸ್ ನಲ್ಲಿ ಕ್ಲೈಮ್ ಮಾಡಲಾದ ಟಿಡಿಎಸ್ ಪ್ರಕ್ರಿಯೆಯಲ್ಲಿ ವ್ಯತ್ಯಾಸಗಳು ಮತ್ತು ವಿಳಂಬಗಳಿಗೆ ಕಾರಣವಾಗಬಹುದು. ಅಲ್ಲದೆ, ಪಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ, ಟಿಡಿಎಸ್ ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಬೇಕಾಗುತ್ತದೆ. ಫಾರ್ಮ್ 26ಎಎಸ್ ನಲ್ಲಿ ನಿಮ್ಮ ಟಿಡಿಎಸ್ ವಿವರಗಳನ್ನು ಪರಿಶೀಲಿಸಿ ಮತ್ತು ನಿಮ್ಮ ಆದಾಯ ತೆರಿಗೆ ರಿಟರ್ನ್ಸ್ ನಲ್ಲಿ ನೀವು ನಮೂದಿಸಿದ ವಿವರಗಳಿಗೆ ಅವು ಹೊಂದಾಣಿಕೆಯಾಗುತ್ತವೆ ಎಂದು ಖಚಿತಪಡಿಸಿಕೊಳ್ಳಿ.

ಆದಾಯ ತೆರಿಗೆ ರಿಟರ್ನ್ಸ್ ಪರಿಶೀಲಿಸಿ

ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಿದ ಅನಂತರ ಅದನ್ನು ವಿದ್ಯುನ್ಮಾನವಾಗಿ ಅಥವಾ 120 ದಿನಗಳಲ್ಲಿ ಕೇಂದ್ರೀಕೃತ ಸಂಸ್ಕರಣಾ ಕೇಂದ್ರಕ್ಕೆ (ಸಿಪಿಸಿ) ಸಹಿ ಮಾಡಿದ ಭೌತಿಕ ನಕಲನ್ನು ಕಳುಹಿಸುವ ಮೂಲಕ ಪರಿಶೀಲಿಸುವುದು ಬಹಳ ಮುಖ್ಯ. ಪರಿಶೀಲಿಸದ ಆದಾಯ ತೆರಿಗೆ ರಿಟರ್ನ್ಸ್ ಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ತ್ವರಿತ ಪ್ರಕ್ರಿಯೆಗಾಗಿ ಆಧಾರ್ ಒಟಿಪಿ, ನೆಟ್ ಬ್ಯಾಂಕಿಂಗ್ ಅಥವಾ ಲಭ್ಯವಿರುವ ಇತರ ವಿಧಾನಗಳನ್ನು ಬಳಸಿಕೊಂಡು ಇ-ಪರಿಶೀಲನೆಗೆ ಆದ್ಯತೆ ನೀಡಿ.


ಹಿಂದಿನ ಆದಾಯ ನಮೂದಿಸಿ

ಆರ್ಥಿಕ ವರ್ಷದಲ್ಲಿ ಉದ್ಯೋಗಗಳನ್ನು ಬದಲಾಯಿಸಿದ್ದರೆ ಹಿಂದಿನ ಉದ್ಯೋಗದಾತರಿಂದ ಆದಾಯವನ್ನು ಸೇರಿಸುವುದನ್ನು ಖಚಿತಪಡಿಸಿಕೊಳ್ಳಿ. ಇದನ್ನು ನಿರ್ಲಕ್ಷಿಸುವುದರಿಂದ ಆದಾಯವನ್ನು ಕಡಿಮೆ ವರದಿ ಮಾಡಿದ್ದಕ್ಕಾಗಿ ತೆರಿಗೆ ಇಲಾಖೆಯಿಂದ ನೋಟಿಸ್‌ಗೆ ಕಾರಣವಾಗಬಹುದು. ಎಲ್ಲಾ ಉದ್ಯೋಗದಾತರಿಂದ ಫಾರ್ಮ್ 16 ಅನ್ನು ಸಂಗ್ರಹಿಸಿ ಮತ್ತು ನಿಮ್ಮ ಆದಾಯ ತೆರಿಗೆ ರಿಟರ್ನ್ಸ್ ನಲ್ಲಿ ಒಟ್ಟು ಆದಾಯವನ್ನು ವರದಿ ಮಾಡಿ.

ತಪ್ಪಾದ ಬ್ಯಾಂಕ್ ಖಾತೆ ವಿವರಗಳು

ತಪ್ಪಾದ ಬ್ಯಾಂಕ್ ಖಾತೆ ವಿವರಗಳನ್ನು ಒದಗಿಸುವುದರಿಂದ ಮರುಪಾವತಿಯನ್ನು ವಿಳಂಬಗೊಳಿಸಬಹುದು. ಖಾತೆ ಸಂಖ್ಯೆ ಮತ್ತು ಐಎಫ್ ಎಸ್ ಸಿ ಕೋಡ್ ನಿಖರವಾಗಿದೆ ಮತ್ತು ನವೀಕರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಿ. ಐಟಿಆರ್ ಫಾರ್ಮ್‌ನಲ್ಲಿ ಬ್ಯಾಂಕ್ ಖಾತೆ ವಿವರಗಳನ್ನು ನವೀಕರಿಸಿ ಮತ್ತು ಸಲ್ಲಿಸುವ ಮೊದಲು ಅವುಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ.

ಇದನ್ನೂ ಓದಿ: Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

ವಿದೇಶಿ ಆದಾಯ

ವಿದೇಶಿ ಮೂಲಗಳಿಂದ ಆದಾಯವನ್ನು ಹೊಂದಿದ್ದರೆ ಅದನ್ನು ಆದಾಯ ತೆರಿಗೆ ರಿಟರ್ನ್ಸ್ ನಲ್ಲಿ ವರದಿ ಮಾಡಬೇಕು. ಹಾಗೆ ಮಾಡಲು ವಿಫಲವಾದರೆ ಪೆನಾಲ್ಟಿಗಳು ಮತ್ತು ಕಾನೂನು ಸಮಸ್ಯೆಗಳಿಗೆ ಕಾರಣವಾಗಬಹುದು. ವಿಶೇಷವಾಗಿ ಎನ್‌ಆರ್‌ಐಗಳಿಗೆ ಅಥವಾ ಸಾಗರೋತ್ತರ ಹೂಡಿಕೆ ಹೊಂದಿರುವವರಿಗೆ. ಆದಾಯ ತೆರಿಗೆ ರಿಟರ್ನ್ಸ್ ನಲ್ಲಿ ಎಲ್ಲಾ ವಿದೇಶಿ ಆದಾಯ ಮತ್ತು ಆಸ್ತಿಗಳನ್ನು ಸೇರಿಸಿ ಮತ್ತು ಅಗತ್ಯವಿದ್ದರೆ ವೃತ್ತಿಪರ ಸಲಹೆಯನ್ನು ಪಡೆಯಿರಿ.

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಲ್ಲಿ ವಿಳಂಬ

ಗಡುವಿನ ಅನಂತರ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸುವುದು ತಡವಾಗಿ ಫೈಲಿಂಗ್ ಶುಲ್ಕಗಳು, ಬಾಕಿ ಇರುವ ತೆರಿಗೆಯ ಮೇಲಿನ ಬಡ್ಡಿ ಮತ್ತು ಅಗತ್ಯವಿದ್ದರೆ ರಿಟರ್ನ್ ಅನ್ನು ಪರಿಷ್ಕರಿಸಲು ಕಡಿಮೆ ಸಮಯವನ್ನು ಆಕರ್ಷಿಸಬಹುದು. ಕೊನೆಯ ನಿಮಿಷದ ವಿಪರೀತ ಮತ್ತು ಸಂಭಾವ್ಯ ದೋಷಗಳನ್ನು ತಪ್ಪಿಸಲು ಗಡುವಿನ ಮೊದಲು ಆದಾಯ ತೆರಿಗೆ ರಿಟರ್ನ್ಸ್ ಅನ್ನು ಫೈಲ್ ಮಾಡಿ.

Continue Reading
Advertisement
Surrogacy Leaves
ಪ್ರಮುಖ ಸುದ್ದಿ1 hour ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ2 hours ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ2 hours ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ3 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ3 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ4 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ4 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ4 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ4 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು7 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌