ಪ್ರಮುಖ ಸುದ್ದಿ
Money Guide: ಐಟಿಆರ್ ರಿಫಂಡ್ ಸಮಸ್ಯೆಯೇ? ಈ ಟಿಪ್ಸ್ ಫಾಲೋ ಮಾಡಿ, ಪ್ರಾಬ್ಲೆಮ್ ಖತಂ
Money Guide: ಹಲವರಿಗೆ ಐಟಿಆರ್ ರಿಫಂಡ್ ಸಮಸ್ಯೆ ಎದುರಾಗುತ್ತದೆ. ಇದಕ್ಕೆ ಮುಖ್ಯ ಕಾರಣ ಬ್ಯಾಂಕ್ ವಿವರಗಳಲ್ಲಿನ ತಪ್ಪು ಮಾಹಿತಿ. ಸಮಸ್ಯೆಯನ್ನು ಬಗೆಹರಿಸುವುದು ಎಂಬ ಬಗ್ಗೆ ಇಲ್ಲಿದೆ ಟಿಪ್ಸ್.
ಐಟಿಆರ್ ಫೈಲ್ (ITR Filing) ಆದ ಮೇಲೆ, ಕೆಲವರುವ ಕೆಲವರು ರಿಫಂಡ್ಗಾಗಿ (ITR Refund) ಕಾಯುತ್ತಿರುತ್ತಾರೆ. ಈಗೆಲ್ಲ, ನಿರ್ದಿಷ್ಟ ದಿನಾಂಕದೊಳಗೇ ರಿಫಂಡ್ ಖಾತೆದಾರರಿಗೆ ಅಕೌಂಟ್ಗೆ (Bank Account) ಜಮಾ ಆಗುತ್ತದೆ. ಆದರೆ, ಕೆಲವೊಮ್ಮೆ ರಿಫಂಡ್ ನಿಮ್ಮ ಬ್ಯಾಂಕ್ ಅಕೌಂಟ್ಗೆ ಜಮಾ ಆಗದಿದ್ದರೆ, ನಿಮ್ಮ ಬ್ಯಾಂಕ್ ಖಾತೆಯನ್ನು ಮರುಮೌಲ್ಯಮಾಪನ (revalidation) ಮಾಡಬೇಕಾಗುತ್ತದೆ ಎನ್ನುತ್ತದೆ ಆದಾಯ ತೆರಿಗೆ ಇಲಾಖೆ(Income Tax Department). ಬಹಳಷ್ಟು ಸಂದರ್ಭದಲ್ಲಿ ನಾವು ಫೈಲಿಂಗ್ ಮಾಡುವ ಸಂದರ್ಭದಲ್ಲಿ ನಮ್ಮ ಬ್ಯಾಂಕ್ ಖಾತೆಯ ವಿವರವನ್ನು ಸರಿಯಾಗಿ ನಮೂದಿಸಿರುವುದಿಲ್ಲ. ಇಲ್ಲವೇ ನಮ್ಮ ಬ್ಯಾಂಕ್ ವ್ಯವಹಾರವು ಬದಲಾಗಿರುತ್ತದೆ. ಹಾಗಾಗಿ ನಿರ್ದಿಷ್ಟ ಸಮಯದಲ್ಲಿ ರಿಫಂಡ್ ಪಡೆಯಲು ನಮಗೆ ಸಾಧ್ಯವಾಗುವುದಿಲ್ಲ ಎನ್ನುತ್ತಾರೆ ವಿಶ್ಲೇಷಕರು(Money Guide).
ಒಂದು ವೇಳೆ ನಿಮ್ಮ ಬ್ಯಾಂಕ್ ಶಾಖೆ, ಬ್ಯಾಂಕ್ ಅಕೌಂಟ್ ನಂಬರ್, ಐಎಎಫ್ಎಸ್ಸಿ ಕೋಡ್ ಬದಲಾಗಿದ್ದರೆ ಇ-ಫೈಲಿಂಗ್ ಪೋರ್ಟಲ್ನಲ್ಲಿ ಆ ಕುರಿತು ಅಪ್ಡೇಟ್ ಮಾಡಬೇಕಾಗುತ್ತದೆ ಮತ್ತು ಆ ಖಾತೆಯನ್ನು ಮರುಮೌಲ್ಯಮಾಪನ ಮಾಡಬೇಕಾಗುತ್ತದೆ. ಮರುಪಾವತಿಗಾಗಿ ಸರಿಯಾಗಿ ನಾಮನಿರ್ದೇಶನಗೊಂಡ ಮೌಲ್ಯೀಕರಿಸಿದ ಬ್ಯಾಂಕ್ ಖಾತೆಯು ಮರುಪಾವತಿಗಾಗಿ ಅಗತ್ಯವಾಗಿರುತ್ತದೆ.
ಯಾವಾಗ ತೊಂದರೆ ಎದುರಾಗುತ್ತದೆ?
ಒಂದು ಬ್ಯಾಂಕ್ ಇನ್ನೊಂದು ಬ್ಯಾಂಕ್ ಜತೆ ವಿಲೀನವಾದಾಗ, ನಿಮ್ಮ ಬ್ಯಾಂಕ್ ಬ್ರ್ಯಾಂಚ್ ಬದಲಾದಾಗ, ಬ್ಯಾಂಕ್ ಖಾತೆ ಬದಲಾದಾಗ, ಬ್ಯಾಂಕ್ ಖಾತೆಯಲ್ಲಿ ಹೆಸರಿನಲ್ಲಿ ವ್ಯತ್ಯಾಸವಾದಾಗ, ಖಾತೆ ಮುಕ್ತಾಯಗೊಂಡಾಗ ಇಲ್ಲವೇ ನಿಷ್ಕ್ರಿಯವಾದಾಗ ಮತ್ತು ಐಎಫ್ಎಸ್ಸಿ ಕೋಡ್ ಬದಲಾದ ರಿಫಂಡ್ ಸಮಸ್ಯೆ ಎದುರಾಗುತ್ತದೆ.
ಬ್ಯಾಂಕ್ ಖಾತೆ ಮಾಹಿತಿ ಅಪ್ಡೇಟ್/ಮರುಮೌಲ್ಯೀಕರಿಸುವುದು ಹೇಗೆ?
ಮೊದಲಿಗೆ https://eportal.incometax.gov.in ವೆಬ್ಸೈಟ್ಗೆ ಲಾಗಿನ್ ಆಗಿ. ಪ್ರೊಫೈಲ್ನಲ್ಲಿ My bank accounts ಮೇಲೆ ಹಾಗೂ ಅಲ್ಲಿರುವ ಲಂಬವಾಗಿ ಕಾಣುವ ಮೂರು ಡಾಟ್ ಮೇಲೆ ಕ್ಲಿಕ್ ಮಾಡಿ. ಬಳಿಕ Revalidate ಆಯ್ಕೆ ಮಾಡಿ ಮತ್ತು ಡಿಟೇಲ್ಸ್ ಅಪ್ಡೇಟ್ ಮಾಡಲು ಅಗತ್ಯವಿರುವ ಎಲ್ಲ ಮಾಹಿತಿಯನ್ನು ನಮೂದಿಸಿ. ಬಳಿಕ Validate ಬಟನ್ ಮೇಲೆ ಕ್ಲಿಕ್ ಮಾಡಿ.
ಹೊಸ ಬ್ಯಾಂಕ್ ಖಾತೆಯನ್ನು ಸೇರಿಸುವುದು ಹೇಗೆ?
ಒಂದೊಮ್ಮೆ ಹೊಸದಾಗಿ ನೀವು ಬ್ಯಾಂಕ್ ಖಾತೆಯನ್ನು ಸೇರಿಸುವುದಾಗಿದ್ದರೆ ಆನ್ಲೈನ್ ಮೂಲಕವೇ ಈ ಕೆಲಸವನ್ನು ಮಾಡಬಹುದಾಗಿದೆ. ಅದಕ್ಕಾಗಿ ಈ ಸ್ಟೆಪ್ಸ್ ಫಾಲೋ ಮಾಡಿ.
ಮೊದಲಿಗೆ https://eportal.incometax.gov.in ಜಾಲತಾಣಕ್ಕೆ ಲಾಗಿನ್ ಆಗಿ. ಪ್ರೊಫೈಲ್ ವಿಭಾಗದಲ್ಲಿ My bank Accounts ಆಯ್ಕೆ ಮೇಲೆ ಕ್ಲಿಕ್ ಮಾಡಿ. ಬಳಿಕ Add bank account ಆಪ್ಷನ್ ಮೇಲೆ ಕ್ಲಿಕ್ ಮಾಡಿ ಬಳಿಕ ಅಗತ್ಯವಿರುವ ಎಲ್ಲ ಮಾಹಿತಿಯನ್ನು ನಮೂದಿಸಿ. ಈ ಪ್ರಕ್ರಿಯೆ ಪೂರ್ತಿಯಾದ ಬಳಿಕ Validate ಬಟನ್ ಮೇಲೆ ಕ್ಲಿಕ್ ಮಾಡಿ.
ಸ್ಟೇಟಸ್ ಚೆಕ್ ಮಾಡ್ತಾ ಇರಿ…
ಆನ್ಲೈನ್ನಲ್ಲಿ ಈ ಎಲ್ಲ ಪ್ರಕ್ರಿಯೆಗಳನ್ನು ಪೂರೈಸಿದ ಬಳಿಕ ಕೆಲವು ಸಮಯದ ಬಳಿಕ ಸ್ಟೇಟಸ್ ಚೆಕ್ ಮಾಡಿ. ಆಗ ನಿಮ್ಮ ಬ್ಯಾಂಕ್ ಖಾತೆಯ ಮರುಮೌಲ್ಯಮಾಪನ ಪೂರ್ಣಗೊಂಡಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗುತ್ತದೆ. ಬ್ಯಾಂಕ್ ಖಾತೆಯು ಮೌಲ್ಯೀಕರಿಸಿದ ಕ್ರಿಯೆ ಪೂರ್ಣಗೊಂಡಿದ್ದರೆ, ‘ರಿಫಂಡ್ಗೆ ನಾಮನಿರ್ದೇಶನ’ ಆಯ್ಕೆಯನ್ನು ಸಕ್ರಿಯಗೊಳಿಸುವ ಮೂಲಕ ಮರುಪಾವತಿಗಾಗಿ ಅದನ್ನು ನಾಮನಿರ್ದೇಶನ ಮಾಡಲು ಮರೆಯಬೇಡಿ.
ಈ ಸುದ್ದಿಯನ್ನೂ ಓದಿ: ವಿಸ್ತಾರ Money Guide : ಹಿರಿಯ ನಾಗರಿಕರು ಬಡ್ಡಿ ಆದಾಯಕ್ಕೆ ತೆರಿಗೆ ಡಿಡಕ್ಷನ್ ಕ್ಲೇಮ್ ಮಾಡುವುದು ಹೇಗೆ?
ಒಂದೊಮ್ಮೆ ಬ್ಯಾಂಕ್ ಖಾತೆ ಮೌಲ್ಯೀಕರಣಗೊಳಿಸುವ ಪ್ರಕ್ರಿಯೆ ವಿಫಲವಾದರೆ, ವೆಬ್ಸೈಟ್ ಹೋಗಿ ಮತ್ತು ಅಲ್ಲಿ ಸ್ಕ್ರೀನ್ ಮೇಲೆ ಕಾಣುವ ಮೈ ಬ್ಯಾಂಕ್ ಅಕೌಂಟ್ಸ್ನ ಮೂರು ಚುಕ್ಕೆ ಮೇಲೆ ಕ್ಲಿಕ್ ಮಾಡುವ ಮೂಲಕ ಡಿಲಿಟ್ ಮಾಡಬಹುದು. ಆದರೆ, ಒಂದು ಸಂಗತಿಯನ್ನು ನೀವು ಗಮನಿಸಬೇಕು. ಪ್ಯಾನ್ ಜತೆ ಲಿಂಕ್ ಆದ ಬ್ಯಾಂಕ್ ಖಾತೆ ಮಾತ್ರವೇ ಮೌಲ್ಯೀಕರಿಸಲು ಸಾಧ್ಯವಾಗುತ್ತದೆ. ಒಂದೊಮ್ಮ ಪ್ಯಾನ್ ಜತೆ ಲಿಂಕ್ ಆಗದಿದ್ದರೆ ರಿಫಂಡ್ ಮಾಡಲು ಸಾಧ್ಯವಾಗುವದಿಲ್ಲ ಎಂದು ಸಂಗತಿಯನ್ನು ಗಮನಿಸಬೇಕು.
ಕರ್ನಾಟಕ
Bangalore Bandh : ಯಾವ ಬಂದ್ಗೂ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ; ನಾರಾಯಣ ಗೌಡ ಘೋಷಣೆ
Bangalore Bandh : ಬಂದ್ ಯಾವತ್ತೂ ಕೊನೆಯ ಅಸ್ತ್ರವಾಗಬೇಕು ಎಂದಿರುವ ಕರ್ನಾಟಕ ರಕ್ಷಣಾ ವೇದಿಕೆ ಸೆ. 26 ಅಥವಾ 29ರ ಯಾವ ಬಂದ್ಗೂ ಬೆಂಬಲ ಕೊಡುವುದಿಲ್ಲ ಎಂದು ಪ್ರಕಟಿಸಿದೆ.
ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಸೆ. 26ರಂದು ನಡೆಯಲಿರುವ ಬೆಂಗಳೂರು ಬಂದ್ (Bangalore Bandh) ಮತ್ತು ಸೆ. 29ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ಗಳಲ್ಲಿ (Karnataka Bandh) ಯಾವುದಕ್ಕೂ ತಾನು ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಘೋಷಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ (TA Narayana Gowda) ಅವರು ಈ ಬಗ್ಗೆ ಆಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಕಾವೇರಿ ನೀರು ವಿಚಾರದಲ್ಲಿ ನಮ್ಮ ಹೋರಾಟ ಮುಂದುವರೆಯುತ್ತದೆ, ಆದರೆ ಯಾವುದೇ ಬಂದ್ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಆಗ್ರಹಿಸಿ ಸೆಪ್ಟೆಂಬರ್ 26ರಂದು ಕುರುಬೂರು ಶಾಂತಕುಮಾರ್ ನೇತೃತ್ವದ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್ಗೆ ಕರೆ ನೀಡಿದರೆ ಮತ್ತು ಸೆಪ್ಟೆಂಬರ್ 29ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹಲವು ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಪ್ರತ್ಯೇಕವಾಗಿ ನಡೆಯಲಿರುವ ಈ ಯಾವ ಬಂದ್ಗೂ ನಮ್ಮ ಬೆಂಬಲವಿಲ್ಲ ಎಂದು ರಕ್ಷಣಾ ವೇದಿಕೆ ಸ್ಪಷ್ಟಪಡಿಸಿದೆ. ಇದೇ ವೇಳೆ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟ ರಾಜ್ಯಾದ್ಯಂತ ಮುಂದುವರೆಯುತ್ತದೆ ಎಂದು ಹೇಳಿದೆ.
ಸೋಮವಾರ ಬೆಳಗ್ಗೆ ಸಭೆ ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಉನ್ನತಾಧಿಕಾರ ಸಮಿತಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದು, ಅದರ ಪ್ರಮುಖಾಂಶಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.
ಬಂದ್ಗೆ ರಕ್ಷಣಾ ವೇದಿಕೆ ಬೆಂಬಲ ಯಾಕಿಲ್ಲ?
- ಸೆಪ್ಟೆಂಬರ್ 26 ಮತ್ತು 29ರಂದು ಕರೆ ನೀಡಲಾಗಿರುವ ಬೆಂಗಳೂರು ಬಂದ್, ಕರ್ನಾಟಕ ಬಂದ್ಗಳನ್ನು ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲಿಸುವುದಿಲ್ಲ.
- ಆದರೆ ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಹೋರಾಟ ಪ್ರತಿದಿನವೂ ನಡೆಯಲಿದೆ.
- ಸೆಪ್ಟೆಂಬರ್ 26ರಂದು ಮಂಗಳವಾರ ವೇದಿಕೆಯ ಗಾಂಧಿನಗರ ಕಚೇರಿ ಆವರಣದಿಂದ ವೇದಿಕೆ ಕಾರ್ಯಕರ್ತರು ಮೆರವಣಿಗೆ ಹೊರಟು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ.
- ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ಯಾವುದೇ ಚಳವಳಿ ಕೈಗೆತ್ತಿಕೊಂಡರೂ ಜನಜಾಗೃತಿ ಮೂಡಿಸುವುದನ್ನು ಮೊದಲನೇ ಆದ್ಯತೆಯಾಗಿ ತೆಗೆದುಕೊಳ್ಳುತ್ತದೆ.
- ದಿಢೀರನೆ ಬಂದ್ ಕರೆ ನೀಡಿ ಜನಸಾಮಾನ್ಯರಿಗೆ ತೊಂದರೆ ನೀಡುವುದನ್ನು ರಕ್ಷಣಾ ವೇದಿಕೆ ಒಪ್ಪುವುದಿಲ್ಲ. ಬಂದ್ ಹೋರಾಟದ ಕೊನೆಯ ಅಸ್ತ್ರವಾಗಿರಬೇಕು.
ಇದನ್ನೂ ಓದಿ: Bangalore Bandh : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್ ಬಂದ್ ಬಿಸಿ, ಬೇಕಿತ್ತಾ ಎರಡೆರಡು ಬಂದ್?
ನಾವು ಯಾವುದೇ ಅಂಗಡಿ ಮುಂಗಟ್ಟು ಬಂದ್ ಮಾಡಿಸುವುದಿಲ್ಲ
ಎರಡೂ ದಿನಗಳ ಬಂದ್ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯಾವುದೇ ಪದಾಧಿಕಾರಿ, ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವುದಿಲ್ಲ. ಬಂದ್ಗೆ ಸಂಬಂಧಪಟ್ಟಂತೆ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ. ಕಾವೇರಿಗಾಗಿ ನಮ್ಮ ಪ್ರಜಾಸತ್ತಾತ್ಮಕ ಮಾದರಿಯ ಹೋರಾಟಗಳು ಮುಂದುವರೆಯುತ್ತವೆ ಎಂದು ಕರವೇ ಹೇಳಿದೆ.
ಇದೇ ವೇಳೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.
ಕರ್ನಾಟಕ
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
Weather Update: ಜೂನ್ 1ರಿಂದ ಆರಂಭವಾಗುವ ಮುಂಗಾರು, ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕ್ಷೀಣಿಸಲಾರಂಭಿಸುತ್ತದೆ. ಆದರೆ, ಬಾರಿ ಸೆಪ್ಟೆಂಬರ್ 25ರಿಂದ ಮಳೆ ಹಿಂತೆಗೆಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ನವದೆಹಲಿ: ವಾಡಿಕೆಗಿಂತ ಎಂಟು ದಿನಗಳಷ್ಟು ತಡವಾಗಿ ಭಾರತದಲ್ಲಿ (India) ಮುಂಗಾರು ಕ್ಷೀಣಿಸುತ್ತಿದೆ (Monsoon Withdrawing) ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಸೋಮವಾರ ಹೇಳಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ವಾಡಿಕೆಯಂತೆ ಸೆಪ್ಟೆಂಬರ್ 17ರಿಂದಲೇ ಮುಂಗಾರು ದುರ್ಬಲವಾಗಬೇಕಿತ್ತು. ಆದರೆ, ಸೆಪ್ಟೆಂಬರ್ 25ರಿಂದ ಮುಂಗಾರು ಕ್ಷೀಣವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ(Weather Update).
ನೈಋತ್ಯ ರಾಜಸ್ಥಾನದ ಭಾಗಗಳಿಂದ ನೈಋತ್ಯ ಮಾನ್ಸೂನ್ ಸೆಪ್ಟೆಂಬರ್ 25ರಿಂದಲೇ ಕ್ಷೀಣಿಸಲಾರಂಭಿಸಿದೆ. ರಾಜಸ್ಥಾನದಲ್ಲಿ ಸಾಮಾನ್ಯವವಾಗಿ ಸೆಪ್ಟೆಂಬರ್ 17ರಿಂದಲೇ ಮುಂಗಾರು ಹಿಂತೆಗೆಯಲಾರಂಭಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ವಾಯುವ್ಯ ಭಾರತದಲ್ಲಿ ಮುಂಗಾರು ಕ್ಷೀಣವಾಗಲಾರಂಭಿಸಿದರೆ ಭಾರತದಲ್ಲಿ ಒಟ್ಟಾರೆ ಮಳೆಗಾಲ ಅಂತ್ಯವಾಗುವ ಕಾಲ ಸನ್ನಿಹಿತವಾದಂತೆಯೇ ಎನ್ನಲಾಗುತ್ತದೆ. ಪ್ರಸಕ್ತ ಮುಂಗಾರಿನಲ್ಲಿ ಭಾರತದಲ್ಲಿ 780.3 ಮಿಲಿ ಮೀಟರ್ ಮಳೆಯಾಗಿದೆ. ಆದರೆ, ವಾಡಿಕೆಯಂತೆ 832.4 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಅಂದರೆ, ಈ ವರ್ಷ ಮಳೆ ಕೊರತೆಯಾಗಿದೆ.
ವಾಯುವ್ಯ ಭಾರತದಿಂದ ಮಾನ್ಸೂನ್ ಹಿಂದೆ ಸರಿಯುವ ಪ್ರಕ್ರಿಯೆಯು ಭಾರತೀಯ ಉಪಖಂಡದಿಂದ ಮಳೆಗಾಲ ಅಂತ್ಯವಾಗುವುದನ್ನು ಸೂಚಿಸುತ್ತದೆ. ಮಾನ್ಸೂನ್ ಹಿಂದೆ ಸರಿಯುವುದು ಯಾವುದೇ ವಿಳಂಬವು ದೀರ್ಘವಾದ ಮಳೆಗಾಲವನ್ನು ಅರ್ಥೈಸುತ್ತದೆ. ಇದು ಕೃಷಿ ಉತ್ಪಾದನೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಲಿದೆ. ವಿಶೇಷವಾಗಿ ವಾಯುವ್ಯ ಭಾರತದಲ್ಲಿ ಮಾನ್ಸೂನ್ ಮಳೆಯು ರಾಬಿ ಬೆಳೆ ಉತ್ಪಾದನೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.
ಈ ಸುದ್ದಿಯನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಭಾರತದಲ್ಲಿ ಮುಂಗಾರು ಮಳೆಯ ಜೂನ್ 1ರಂದು ಕೇರಳದ ಮೂಲಕ ಪ್ರವೇಶಿಸುತ್ತದೆ. ಜುಲೈ 8ರ ವೇಳೆಗೆ ಇಡೀ ದೇಶವನ್ನು ಮುಂಗಾರು ಆವರಿಸುತ್ತದೆ. ಸೆಪ್ಟೆಂಬರ್ 17ರ ಹೊತ್ತಿಗೆ ಕ್ಷೀಣವಾಗಲಾರಂಭಿಸುತ್ತದೆ. ಅಕ್ಟೋಬರ್ 15ರ ವೇಳೆ ಮಾನ್ಸೂನ್ ಸಂಪೂರ್ಣವಾಗಿ ದೇಶದಿಂದ ಮಾಯವಾಗುತ್ತದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.
ಮುಂಗಾರಿನಲ್ಲಿ ಭಾರತವು ಇಲ್ಲಿಯವರೆಗೆ 796.4 ಮಿಮೀ ಮಳೆಯನ್ನು ಪಡೆದಿದೆ. ಇದು, ವಾಡಿಕೆ ಮಳೆ 843.2 ಮಿಮೀಗೆ ಹೋಲಿಸಿದರೆ, ಶೇ.6ರಷ್ಟು ಕೊರತೆಯಾಗಿದೆ. ಸಾಮಾನ್ಯವಾಗಿ, ಜೂನ್ನಿಂದ ಸೆಪ್ಟೆಂಬರ್ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ದೇಶವು ಸರಾಸರಿ 870 ಮಿಮೀ ಮಳೆಯನ್ನು ಪಡೆಯುತ್ತದೆ. ಆದರೆ, ಪ್ರಸಕ್ತ ಮಳೆಗಾಲದಲ್ಲಿ ಕೊರತೆ ಎದುರಾಗಿದ್ದು, ಬರಗಾಲದ ಛಾಯೆ ಆವರಿಸಿದೆ. ಈಗಾಗಲೇ, ಕರ್ನಾಟಕದಲ್ಲಿ ಬರಗಾಲಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗಿದೆ.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
Cauvery water dispute : ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯ ಪ್ರವೇಶಕ್ಕೆ ಸಲಹೆ ಮಾಡಿದ್ದೆ: ಸರ್ಕಾರ ಕೇಳಲಿಲ್ಲವೆಂದ ಎಚ್ಡಿಕೆ
Cauvery water dispute : ಕಾವೇರಿ ನೀರು ಬಿಟ್ಟ ಮೊದಲ ದಿನವೇ ಪ್ರಧಾನಿಗಳ ಮಧ್ಯ ಪ್ರವೇಶಕ್ಕೆ ಸಲಹೆ ಮಾಡಿದ್ದೆ: ಸರಕಾರ ನನ್ನ ಮಾತು ಕೇಳಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಸಂಸದ ಬಸವರಾಜ್ ಹಾಗೂ ಸಚಿವ ಕೆ.ಎನ್. ರಾಜಣ್ಣ ವಿರುದ್ಧವೂ ಕಿಡಿಕಾರಿದ್ದಾರೆ.
ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಸೂಚನೆ ನೀಡಿದ ದಿನವೇ ನಾನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ನಾನು ಹೇಳಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (Former Chief Minister HD Kumaraswamy) ಅವರು ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈಗಲೂ ಪ್ರಧಾನಮಂತ್ರಿಗಳಿಗೆ ಮಧ್ಯಪ್ರವೇಶ ಮಾಡುವಂತೆ ನಾನು ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: Congress Politics : ಕೆ.ಎನ್. ರಾಜಣ್ಣಗೆ ಖಡಕ್ ವಾರ್ನಿಂಗ್ ಕೊಟ್ಟ ಸುರ್ಜೇವಾಲ!
ನೀರು ಬಿಡಬೇಡಿ ಅಂತ ಮೊದಲ ದಿನವೇ ನಾನು ಹೇಳಿದ್ದೆ. ಸುಪ್ರೀಂ ಕೋರ್ಟಿಗೆ (Supreme Court) ತಮಿಳುನಾಡಿನವರು ಅರ್ಜಿ ಹಾಕಿದ್ದಾರೆ. ನಮ್ಮ ರಾಜ್ಯದಿಂದ ಕೂಡ ಅರ್ಜಿ ಹಾಕಿ. ಅಲ್ಲಿವರೆಗೂ ನೀರು ಬಿಡಬೇಡಿ ಎಂದು ಹೇಳಿದ್ದೆ. ನನ್ನ ಒತ್ತಡಕ್ಕೆ ಸರ್ವಪಕ್ಷ ಸಭೆ (All party meeting) ಕೂಡ ಕರೆದಿದ್ದರು ಎಂದು ರಾಜ್ಯ ಸರ್ಕಾರದ ಮೇಲೆ ಕುಮಾರಸ್ವಾಮಿ ಆರೋಪ ಮಾಡಿದರು.
ಸಚಿವರು ಹೋಗಿ ಏನು ಮಾತನಾಡಿಕೊಂಡು ಬಂದರು?
ಕುಮಾರಸ್ವಾಮಿ ಅವರು ಅಮಿತ್ ಶಾ (Amit Shah) ಅವರ ಜತೆ ಮಾತಾಡಿಕೊಂಡು ಬಂದಿದ್ದಾರೆ. ಅಲ್ಲೇ ಕಾವೇರಿ ವಿಚಾರವಾಗಿ ಮಾತಾಡಬೇಕಿತ್ತು ಎಂದು ಸಚಿವರೊಬ್ಬರ ಹೇಳಿಕೆಯ ಬಗ್ಗೆ ಕಿಡಿಕಾರಿದ ಅವರು, ಅವರು ಮೊದಲೇ ಹೇಳಿದ್ದರೆ ಮಾತಾಡಿಕೊಂಡು ಬರುತ್ತಿದ್ದೆ. ಅವರೂ ಹೋಗಿ ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡಿಕೊಂಡು ಬಂದರಲ್ಲ, ಏನು ಮಾತಾಡಿಕೊಂಡು ಬಂದಿದ್ದಾರೆ ಎಂದು ತಿರುಗೇಟು ನೀಡಿದರು.
ಎಚ್.ಡಿ. ದೇವೇಗೌಡರ ಬದ್ಧತೆ ಇವರಿಗೆ ಇದೆಯಾ?
ಸುಪ್ರೀಂ ಕೋರ್ಟ್ ಮುಂದೆ ಈ ಸರ್ಕಾರ ಏನು ವಾಸ್ತವಾಂಶ ಇಟ್ಟಿದೆ ಎಂದು ಹೇಳಲಿ. ಎಚ್.ಡಿ. ದೇವೇಗೌಡರ (HD DeveGowda) ಬದ್ಧತೆ ಇವರಿಗೆ ಇದೆಯಾ? ಇವರಿಂದ ಕಲೀಬೇಕಾ? ಎಂದು ಖಾರವಾಗಿ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ, ಹಿಂದೆ ಇದೇ ಸಿದ್ದರಾಮಯ್ಯ ಸರಕಾರ ಇದ್ದಾಗ ಕಾವೇರಿ ವಿಚಾರದಲ್ಲಿ ಇದೇ ಸ್ಥಿತಿ ಬಂದಾಗ ದೇವೇಗೌಡರ ಮನೆಗೆ ಓಡಿ ಬಂದಿದ್ದರಲ್ಲ. ಆಗ ದೇವೇಗೌಡರು ಗಾಂಧಿ ಪ್ರತಿಮೆ ಬಳಿ ಧರಣಿ ಕೂತರು. ಆಗ ಕೇಂದ್ರ ಸಚಿವರು ಓಡಿ ಬಂದರು. ಅದೆಲ್ಲಾ ಇವರಿಗೆ ಮರೆತುಹೋಗಿರಬೇಕು. ಇವರಿಂದ ನಾವು ಕಲೀಬೇಕಿಲ್ಲ ಎಂದು ಅವರು ಚಾಟಿ ಬೀಸಿದರು.
ಸುಪ್ರೀಂ ಕೋರ್ಟ್ ಮುಂದೆ ತಮಿಳುನಾಡು ಅರ್ಜಿ ಹಾಕಿಕೊಂಡಿದೆ. ನಾವೂ ಅರ್ಜಿ ಹಾಕಿಕೊಂಡಿದ್ದರೆ ಅಲ್ಲಿಯವರೆಗೂ ನೀರು ಉಳಿಯುತ್ತಿತ್ತು. ಅಷ್ಟು ಸಾಮಾನ್ಯ ತಿಳಿವಳಿಕೆಯೂ ಈ ಸರ್ಕಾರಕ್ಕೆ ಇಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಗೆ ತಮಿಳುನಾಡು ಅಧಿಕಾರಿಗಳು ಖುದ್ದು ಹಾಜರಾಗುತ್ತಾರೆ. ನಮ್ಮ ಅಧಿಕಾರಿಗಳು ವರ್ಚುವಲ್ ಮೂಲಕ ಭಾಗವಹಿಸುತ್ತಾರೆ. ಹೀಗಿದ್ದಾಗ ಪ್ರಾಧಿಕಾರದ ಮುಂದೆ ಇವರು ಏನು ವಾಸ್ತವಾಂಶ ಇಡಲು ಸಾಧ್ಯ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಸಂಸದ ಬಸವರಾಜ್, ರಾಜಣ್ಣ ವಿರುದ್ಧ ಎಚ್ಡಿಕೆ ಕಿಡಿ
ತುಮಕೂರು ಜಿಲ್ಲೆಯ ಜನರು ಎಚ್.ಡಿ. ದೇವೇಗೌಡರಿಗೆ ಮತ ಹಾಕಬಾರದು ಎಂದು ಹೇಳಿಕೆ ನೀಡಿರುವ ಸಂಸದ ಜಿ.ಎಸ್. ಬಸವರಾಜು ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹರಿಹಾಯ್ದರು.
ಅದ್ಯಾರೋ ಎಂಪಿ ಬಸವರಾಜ್ ಎಂಬ ವ್ಯಕ್ತಿಯ ಹೇಳಿಕೆ ಗಮನಿಸಿದೆ. ಆ ಜಿಲ್ಲೆಗೆ ಈ ವ್ಯಕ್ತಿಯ ಕೊಡುಗೆ ಏನು? ಈತನ ದರ್ಪದ ಹೇಳಿಕೆಯನ್ನು ಗಮನಿಸಿದ್ದೇನೆ. ಮತ್ತೆ ತುಮಕೂರಿನಲ್ಲಿ ದೇವೇಗೌಡರು ಸೋಲಿಸಬೇಕು ಅಂದಿದ್ದಾರೆ. ದೇವೇಗೌಡರು ಆ ಜಿಲ್ಲೆಗೆ ಏನೂ ಮಾಡಿಲ್ಲವಾದರೆ, ಈಗ ನೀನೇ ಎಂಪಿ ಆಗಿದೀಯಲ್ಲಪ್ಪಾ? ಏನು ಮಾಡಿದೀಯಪ್ಪಾ ಜಿಲ್ಲೆಗೆ ಎಂದು ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: CM Siddaramaiah : 2ನೇ ಅವಧಿಗೆ ಚಾಮರಾಜನಗರಕ್ಕೆ ಸಿಎಂ ಭೇಟಿ; ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ
ದೇವೇಗೌಡ ಹೆಸರು ಹೇಳಿ ರಾಜಕೀಯಕ್ಕೆ ಬಂದವರು
ಈ ಸರ್ಕಾರದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ದೇವೇಗೌಡರು ಚುನಾವಣೆಗೆ ನಿಲ್ಲಬೇಕು, ನಾವು ಋಣ ತೀರಿಸಬೇಕು ಅಂತ ವ್ಯಂಗ್ಯವಾಗಿ ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ನೀವು ಋಣ ತೀರಿಸಿದ್ದು ನೋಡಿದ್ದೇವೆ. ಇವರೆಲ್ಲ ದೇವೇಗೌಡರ ಹೆಸರು ಹೇಳಿಕೊಂಡು ರಾಜಕೀಯಕ್ಕೆ ಬಂದವರು. ಈ ಹಿಂದೆ ದೇವೇಗೌಡರು ಹುಷಾರಿಲ್ಲದಿದ್ದರೂ ಹೋಗಿ ಇವರ ಪರ ಪ್ರಚಾರ ಮಾಡಿದ್ದಕ್ಕೆ ಇವರು ಗೆದ್ದಿದ್ದು. ಆಗ ಕೇವಲ 700 ಮತಗಳ ಅಂತರದಿಂದ ಗೆದಿದ್ದನ್ನು ಮರೆತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ಕರ್ನಾಟಕ
Janata Darshana: ಏಕಕಾಲದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜನತಾ ದರ್ಶನ: ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ ಚಿಂತನೆ
Janata Darshana: ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಎಸ್ಪಿಗಳು ಜನತಾ ದರ್ಶನದ ಮೂಲಕ ಜನರ ಅಹವಾಲು ಕೇಳಬೇಕು ಎಂಬ ಸಿದ್ದರಾಮಯ್ಯ ಸೂಚನೆಗೆ ಅತ್ಯುತ್ತಮ ಫಲಿತಾಂಶ ದೊರೆತಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaih) ಅವರ ಸೂಚನೆಯಂತೆ ಇದೇ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ (Janata Darshana) ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ.
ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.
ಜನತಾ ದರ್ಶನ ಕಲ್ಪನೆ ಹುಟ್ಟಿದ್ದು ಹೇಗೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್ನಲ್ಲಿ ಈ ಸೂಚನೆ ನೀಡಲಾಗಿತ್ತು.
ಕಂದಾಯ ಇಲಾಖೆಯ ಅಹವಾಲುಗಳದೇ ಸಿಂಹಪಾಲು
ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. ಸಂಜೆ 6:30 ಗಂಟೆವರೆಗೆ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ 2100 ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಸಾವಿರಕ್ಕೂ ಅಧಿಕ ಅಹವಾಲುಗಳು ಈ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ.
ಜಿಪಂ ಸಿಇಒಗಳ ಮುಂದೆ ಹೆಚ್ಚು ದೂರು, ಎಸ್ಪಿಗಳ ಮುಂದೆ ಕಡಿಮೆ ದೂರು
ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಕಾರಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ ಕಡೆ ಅತಿ ಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಆಶ್ಚರ್ಯದ ಜತೆಗೆ ವಿಶ್ಲೇಷಣೆ ಮಾಡಬೇಕಾದ ಸಂಗತಿಯಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲು, ಹಾಸನ ದ್ವಿತೀಯ
ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲುಗಳು ದಾಖಲಾಗಿವೆ. 774 ಅಹವಾಲುಗಳ ಮೂಲಕ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 432 ಅಹವಾಲುಗಳ ಮೂಲಕ ಹಾಸನ ಎರಡನೇ ಸ್ಥಾನದಲ್ಲಿ, 423 ಅಹವಾಲುಗಳ ಮೂಲಕ ಕೋಲಾರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.
ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.
ಮೌಖಿಕ ದೂರುಗಳನ್ನೂ ಬರೆದುಕೊಂಡ ಅಧಿಕಾರಿಗಳು
ಮೌಖಿಕವಾಗಿ ದೂರು ಕೊಡಲು ಬಂದವರನ್ನು ಕುಳ್ಳಿರಿಸಿ ಅಧಿಕಾರಿ ಮತ್ತು ಸಿಬ್ಬಂದಿಯೇ ಅಹವಾಲುಗಳನ್ನು ಬರೆದು, ಬಳಿಕ ಅದನ್ನು ಓದಿ ಹೇಳಿ ಅರ್ಜಿದಾರರಿಂದ ಸಹಿ ಪಡೆದು ದಾಖಲಿಸಿಕೊಳ್ಳುವ ಪ್ರಯತ್ನಗಳೂ ನಡೆದಿವೆ.
ರಾಜ್ಯಾದ್ಯಂತ ಏಕ ಕಾಲಕ್ಕೆ ನಡೆಸಿದ ಜನತಾ ದರ್ಶನ ನಮಗೂ ಮೊದಲ ಅನುಭವ. ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ ಎನ್ನುವ ಅಭಿಪ್ರಾಯಗಳು ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ.
ಹಿಂದಿನ ಸುದ್ದಿ : Janata Darshan: ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ʼಜನತಾ ದರ್ಶನʼ ನಡೆಸಲು ಸಿಎಂ ಸೂಚನೆ
ಎರಡು ಜಿಲ್ಲೆಗಳಲ್ಲಿ ನಾಳೆ ಜನತಾ ದರ್ಶನ
- ಅನಿವಾರ್ಯ ಕಾರಣಗಳಿಂದ ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಜನತಾ ದರ್ಶನ ನಡೆಯಲಿಲ್ಲ. ಬೆಳಗಾವಿಯಲ್ಲಿ ನಾಳೆ (ಸೆ 26 ರ ಮಂಗಳವಾರ) ನಡೆಯಲಿದೆ.
- ಮೈಸೂರು ಜಿಲ್ಲೆಯ ಜನತಾ ದರ್ಶನದಲ್ಲಿನ ಕುಂದುಕೊರತೆ ಮನವಿಗಳನ್ನು IPGRS ನಲ್ಲಿ upload ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಎಲ್ಲಾ ಅರ್ಜಿಗಳನ್ನು Manually ಸ್ವೀಕರಿಸಲಾಗಿದ್ದು ಬಳಿಕ upload ಮಾಡಲಿದ್ದಾರೆ.
- ಹಾವೇರಿ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರದ ಸಂಬಂಧ ಸಾವಿರಾರು ಅರ್ಜಿಗಳು ಬಂದಿವೆ. ಸ್ವೀಕರಿಸುವ ವೇಳೆ ಕೆಲವು ಅನಾನುಕೂಲಗಳು ಸಂಭವಿಸಿದ್ದರಿಂದ ಅವುಗಳನ್ನೂ upload ಮಾಡಲು ಸಾಧ್ಯವಾಗಿಲ್ಲ
- ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದ ಊಟಕ್ಕೂ ತೆರಳದೆ ಜನತಾ ದರ್ಶನದ ಸ್ಥಳದಲ್ಲೇ ಊಟ ಮಾಡುತ್ತಾ ಸ್ಪಂದಿಸಿದ ಅಧಿಕಾರಿ-ಸಿಬ್ಬಂದಿ.
- ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ನಡೆದ ಜನತಾ ದರ್ಶನ. ಎಲ್ಲಾ ಪಕ್ಷದ ಶಾಸಕರು-ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಭಾಗಿ
-
ಕ್ರಿಕೆಟ್23 hours ago
IND vs AUS: ಸರಣಿ ವಶಪಡಿಸಿಕೊಂಡ ಭಾರತ; ದ್ವಿತೀಯ ಪಂದ್ಯದಲ್ಲಿ 99 ರನ್ ಗೆಲುವು
-
ಸುವಚನ16 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ವಿದೇಶ7 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ದೇಶ22 hours ago
Viral News: ಎಲ್ಕೆಜಿ ಬಾಲಕನಿಗೆ ಕಾಲು ಮುರಿಯುವ ಹಾಗೆ ಬಡಿದ ಮೇಷ್ಟ್ರು , ಗಾಯಗಳನ್ನು ನೋಡಿ ಬೆಚ್ಚಿದ ಅಮ್ಮ
-
ದೇಶ21 hours ago
India Canada Row : ಖಲಿಸ್ತಾನಿ ಉಗ್ರರ ಕಡೆಗೆ ಮೃದು ಧೋರಣೆ; ಟ್ರುಡೊ ವಿರುದ್ಧ ಆರ್ಯ ಮತ್ತೆ ವಾಗ್ದಾಳಿ
-
ಅಂಕಣ7 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ಕರ್ನಾಟಕ5 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ಕರ್ನಾಟಕ11 hours ago
BJP-JDS Alliance: ಬಿಜೆಪಿ- ಜೆಡಿಎಸ್ ಮೈತ್ರಿ; ಮುಸ್ಲಿಂ ನಾಯಕರು ಜೆಡಿಎಸ್ಗೆ ಗುಡ್ಬೈ?