Money Guide: ನಿಮ್ಮ ಸಮಸ್ಯೆಗೆ ಬ್ಯಾಂಕ್‌ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲವೆ? ಆರ್‌ಬಿಐಗೆ ಹೀಗೆ ದೂರು ನೀಡಿ - Vistara News

ಮನಿ-ಗೈಡ್

Money Guide: ನಿಮ್ಮ ಸಮಸ್ಯೆಗೆ ಬ್ಯಾಂಕ್‌ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲವೆ? ಆರ್‌ಬಿಐಗೆ ಹೀಗೆ ದೂರು ನೀಡಿ

Money Guide: ಕೆಲವೊಮ್ಮೆ ಬ್ಯಾಂಕ್ ಸಿಬ್ಬಂದಿ ಸರಿಯಾದ ಮಾಹಿತಿಯಾಗಲೀ, ಮಾರ್ದರ್ಶನವಗಲೀ ನೀಡದೇ ನಮ್ಮನ್ನು ಸತಾಯಿಸುತ್ತಾರೆ. ಎಟಿಎಂ ಹಿಂಪಡೆಯುವಿಕೆಯಲ್ಲಿನ ಸಮಸ್ಯೆ, ಬೌನ್ಸ್ ಚೆಕ್, ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆಯಲ್ಲಿನ ತೊಡಕು, ಬ್ಯಾಂಕ್‌ಗಳು ವಿಧಿಸುವ ಅತಿಯಾದ ಶುಲ್ಕ ಇತ್ಯಾದಿ ಆಗಾಗ ಸಾಮಾನ್ಯವಾಗಿ ಗ್ರಾಹಕರು ಎದುರಿಸುವ ಸಮಸ್ಯೆಗಳು. ಇಂತಹ ಸಂದರ್ಭದಲ್ಲಿ ಸಿಬ್ಬಂದಿ ಸರಿಯಾಗಿ ಸ್ಪಂದಿಸದಿದ್ದರೆ ತೊಂದರೆಗೆ ಒಳಗಾಗುತ್ತೇವೆ. ಈ ವೇಳೆ ಸಿಬ್ಬಂದಿ ಅಥವಾ ಬ್ಯಾಂಕ್ ವಿರುದ್ಧ ಎಲ್ಲಿ, ಯಾರಿಗೆ ದೂರು ನೀಡಬೇಕು ಎಂಬ ಗೊಂದಲ ನಿಮಗೂ ಕಾಡಿರಬಹುದು. ಈ ಸಂದೇಹಕ್ಕೆ ಇಂದಿನ ಮನಿಗೈಡ್‌ನಲ್ಲಿದೆ ಉತ್ತರ.

VISTARANEWS.COM


on

money guide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬ್ಯಾಂಕ್‌ ವ್ಯವಹಾರ ಈಗ ವ್ಯಾಪಕವಾಗಿದೆ. ಸರ್ಕಾರದ ಕೆಲವೊಂದು ಆರ್ಥಿಕ ನೆರವು, ಸ್ಕಾಲರ್‌ ಶಿಪ್‌, ನರೇಗಾದ ಸಂಬಳ ಇತ್ಯಾದಿ ನಮ್ಮ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಗಾಯಿಸ್ಪಡುತ್ತದೆ. ಆದರೆ ಕೆಲವೊಮ್ಮೆ ಬ್ಯಾಂಕ್‌ನಲ್ಲಿನ ಸಿಬ್ಬಂದಿ ನಮ್ಮ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುವುದಿಲ್ಲ. ಸರಿಯಾದ ಮಾಹಿತಿಯಾಗಲೀ, ಮಾರ್ದರ್ಶನವಗಲೀ ನೀಡದೇ ಸತಾಯಿಸುತ್ತಾರೆ. ಎಟಿಎಂ ಹಿಂಪಡೆಯುವಿಕೆಯಲ್ಲಿನ ಸಮಸ್ಯೆ, ಬೌನ್ಸ್ ಚೆಕ್‌, ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆಯಲ್ಲಿನ ತೊಡಕು, ಬ್ಯಾಂಕ್‌ಗಳು ವಿಧಿಸುವ ಅತಿಯಾದ ಶುಲ್ಕ ಇತ್ಯಾದಿ ಆಗಾಗ ಸಾಮಾನ್ಯವಾಗಿ ಗ್ರಾಹಕರು ಎದುರಿಸುವ ಸಮಸ್ಯೆಗಳು. ಇಂತಹ ಸಂದರ್ಭದಲ್ಲಿ ಸಿಬ್ಬಂದಿ ಸರಿಯಾಗಿ ಸ್ಪಂದಿಸದಿದ್ದರೆ ತೊಂದರೆಗೆ ಒಳಗಾಗುತ್ತೇವೆ. ಈ ವೇಳೆ ಸಿಬ್ಬಂದಿ ಅಥವಾ ಬ್ಯಾಂಕ್ ವಿರುದ್ಧ ಎಲ್ಲಿ, ಯಾರಿಗೆ ದೂರು ನೀಡಬೇಕು ಎಂಬ ಗೊಂದಲ ನಿಮಗೂ ಕಾಡಿರಬಹುದು. ಈ ಸಂದೇಹಕ್ಕೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಕೆಲವೊಂದು ಬ್ಯಾಂಕ್‌ಗಳು ಶಾಖೆಯಿಂದ ಹಿಡಿದು ಪ್ರಧಾನ ಕಚೇರಿಯವರೆಗೆ ವ್ಯಾಪಿಸಿರುವ ದೂರುಗಳನ್ನು ಪರಿಹರಿಸಲು ಆಂತರಿಕ ಕಾರ್ಯವಿಧಾನಗಳನ್ನು ಹೊಂದಿವೆ. ಶಾಖೆಯ ಮ್ಯಾನೇಜರ್‌ ತಮ್ಮ ಸಮಸ್ಯೆಯನ್ನು ಪರಿಹರಿಸದಿದ್ದರೆ ಗ್ರಾಹಕರು ದೂರುಗಳನ್ನು ಬ್ಯಾಂಕ್‌ಗಳ ಸಹಾಯವಾಣಿ ಸಂಖ್ಯೆ ಮತ್ತು ಆನ್‌ಲೈನ್‌ ಪೋರ್ಟಲ್‌ ಮೂಲಕ ಸಲ್ಲಿಸಬಹುದು. ಅಲ್ಲೂ ಸಮಸ್ಯೆಗೆ ಪರಿಹಾರ ದೊರೆಯದಿದ್ದರೆ ನೇರವಾಗಿ ಆರ್‌ಬಿಐ (Reserve Bank of India)ಗೆ ಸಲ್ಲಿಸಬಹುದು.

ದೂರು ಸಲ್ಲಿಸುವುದು ಹೇಗೆ?

ಬ್ಯಾಂಕ್‌ ಅಷ್ಟೇ ಅಲ್ಲ, ಬದಲಿಗೆ ಆರ್‌ಬಿಐ ನಿಯಂತ್ರಣಕ್ಕೊಳಪಡುವ ಯಾವುದೇ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೂ ಸಂಬಂಧಿಸಿದ ದೂರನ್ನೂ ದಾಖಲಿಸಬಹುದು. ಆದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಈ ಓಂಬುಡಸ್ ಮನ್‌ಗೆ (Reserve Bank of India’s Ombudsman) ದೂರು ನೀಡುವ ಮುನ್ನ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಓಂಬುಡಸ್‌ಮನ್‌ ಸಹಾಯ ಪಡೆಯುವ ಮೊದಲು ಆಯಾ ಬ್ಯಾಂಕ್‌ನಲ್ಲಿ ದೂರು ಸಲ್ಲಿಸುವುದು ಕಡ್ಡಾಯ. ಹೀಗೆ ದೂರು ದಾಖಲಾದ 30 ದಿನಗಳ ಒಳಗೆ ಬ್ಯಾಂಕ್‌ನಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದರೆ ಅಥವಾ ದೂರನ್ನು ಬ್ಯಾಂಕ್ ಸಂಪೂರ್ಣವಾಗಿ ಅಥವಾ ಭಾಗಶಃ ತಿರಸ್ಕರಿಸಿದರೆ ಮಾತ್ರ ಮುಂದಿನ ಕ್ರಮಕ್ಕಾಗಿ ಅದನ್ನು ಓಂಬುಡಸ್‌ಮನ್‌ನ ಮೊರೆ ಹೋಗಬಹುದು.

ಇದಕ್ಕಾಗಿ ನೀವು ಮಾಡಬೇಕಾಗಿರುವುದೇನು?

ಯಾವುದೇ ಬ್ಯಾಂಕ್, ಬ್ಯಾಂಕೇತರ ಹಣಕಾಸು ಸಂಸ್ಥೆ ಅಥವಾ ಪಾವತಿ ವ್ಯವಸ್ಥೆಯ ಬಗ್ಗೆ ನಿಮ್ಮ ಸಮಸ್ಯೆಯನ್ನು ಪರಿಹರಿಸದಿದ್ದರೆ ನೀವು ಆರ್‌ಬಿಐಯ ವೆಬ್‌ಸೈಟ್‌ https://cms.rbi.org.inಗೆ ತೆರಳಿ ಅದರಲ್ಲಿನ ದೂರು ನಿರ್ವಹಣಾ ವ್ಯವಸ್ಥೆ (Complaint Management System)ಯ ಪೋರ್ಟಲ್‌ನಲ್ಲಿ ದೂರು ಸಲ್ಲಿಸಿ. ಇಲ್ಲದಿದ್ದರೆ ಈ ಕೆಳಗಿನ ಮಾರ್ಗ ಅನುಸರಿಸಿ.

  • ದೂರು ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • File a Complaint ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಆಗ ತೆರೆದುಕೊಳ್ಳುವ ಪುಟದಲ್ಲಿ ಕ್ಯಾಪ್ಚಾ ನಮೂದಿಸಿ.
  • ನಿಮ್ಮ ಹೆಸರು, ಮೊಬೈಲ್‌ ನಂಬರ್‌ ನಮೂದಿಸಿ.
  • ಈಗ ನಿಮ್ಮ ಮೊಬೈಲ್‌ ನಂಬರ್‌ಗೆ ಬರುವ ಒಟಿಪಿ ನಮೂದಿಸಿ ದೂರು ಸಲ್ಲಿಸಬಹುದು.

ಈ ವೆಬ್‌ಸೈಟ್‌ ಗ್ರಾಹಕ ಸ್ನೇಹಿಯಾಗಿದ್ದು, ದೂರು ಹೇಗೆ ಸಲ್ಲಿಸುವುದು, ಸಲ್ಲಿಸಲು ಅಗತ್ಯವಾದ ವಿವರಗಳು / ದಾಖಲೆಗಳು, ಟ್ರ್ಯಾಕಿಂಗ್ ಕಾರ್ಯವಿಧಾನಗಳು ಮತ್ತು ಓಂಬುಡಸ್‌ಮನ್‌ಗೆ ಮೇಲ್ಮನವಿ ಸಲ್ಲಿಸಲು ಬೇಕಾದ ಸೂಚನೆಗಳನ್ನು ನೀಡುತ್ತದೆ. ಹೆಚ್ಚುವರಿಯಾಗಿ ಇದು ಅಗತ್ಯ ವಿಳಾಸಗಳು, ಗ್ರಾಹಕರಿಗೆ ಶಿಕ್ಷಣ ಮತ್ತು ಸಂಪರ್ಕ ಮಾಹಿತಿಯನ್ನು ಒದಗಿಸುತ್ತದೆ.

ಇದನ್ನೂ ಓದಿ: Money Guide: ಮೊಬೈಲ್‌ನಲ್ಲಿಯೇ ಪಿಎಫ್‌ ಮೊತ್ತ ಪರಿಶೀಲಿಸಬೇಕೆ?; ಜಸ್ಟ್‌ ಹೀಗೆ ಮಾಡಿ ಸಾಕು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Tax Saving Tips: 10 ಲಕ್ಷ ರೂ. ಆದಾಯ ಇದ್ದರೂ ತೆರಿಗೆಯಿಂದ ಪಾರಾಗಲು ಸಾಧ್ಯ! ಇಲ್ಲಿದೆ ಸರಳ ಲೆಕ್ಕಾಚಾರ!

Tax Saving Tips: ಕೇಂದ್ರ ಬಜೆಟ್‌ನಲ್ಲಿ ಈ ಬಾರಿ 7.75 ಲಕ್ಷ ರೂ.ವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸಿರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಆದರೆ ವಾರ್ಷಿಕ ಆದಾಯ 10 ಲಕ್ಷ ರೂ.ಗಳಿದ್ದರೂ ಆದಾಯ ತೆರಿಗೆಯಿಂದ (Money Guide) ಮುಕ್ತರಾಗಿ ಇರಬಹುದು. ಇದು ಹೇಗೆ ಎನ್ನುವ ಲೆಕ್ಕಾಚಾರ ಇಲ್ಲಿದೆ.

VISTARANEWS.COM


on

By

Tax Saving Tips
Koo

ಕೇಂದ್ರ ಬಜೆಟ್‌ನಲ್ಲಿ (Union Budget 2024) ಈ ಬಾರಿ (Tax Saving Tips) ಹಣಕಾಸು (Money Guide) ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರು ಹೊಸ ತೆರಿಗೆ ಪದ್ಧತಿಯಡಿ (New Tax Regime) ಬಹುದೊಡ್ಡ ತೆರಿಗೆ ವಿನಾಯಿತಿಯನ್ನು ನೀಡಿದ್ದಾರೆ. ಪ್ರಮಾಣಿತ ತೆರಿಗೆ ಕಡಿತವನ್ನು (standard tax deduction) 50,000 ರೂ.ನಿಂದ 75,000 ರೂ.ಗೆ ಹೆಚ್ಚಿಸಿದ್ದಾರೆ. ಹೀಗಾಗಿ ಸಾಮಾನ್ಯ ಭಾರತೀಯ ನಾಗರಿಕರು 7.75 ಲಕ್ಷ ರೂ.ವರೆಗಿನ ಆದಾಯವನ್ನು (Money Guide) ತೆರಿಗೆ (tax free) ಮುಕ್ತಗೊಳಿಸಬಹುದು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರಾವಧಿಯ 3.0ರ ಮೊದಲ ಬಜೆಟ್‌ನಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಜನರಿಗೆ ಬಹುದೊಡ್ಡ ಪ್ರಯೋಜನವನ್ನು ನೀಡಲಾಗಿದೆ. ಇದರಲ್ಲಿ ಹೊಸ ತೆರಿಗೆ ಪದ್ಧತಿಯಡಿ ದೊಡ್ಡ ರಿಯಾಯಿತಿ ನೀಡಿದ್ದು, ಪ್ರಮಾಣಿತ ಆದಾಯ ತೆರಿಗೆ ಕಡಿತವನ್ನು 50,000 ರೂ. ನಿಂದ 75,000 ರೂ.ಗೆ ಹೆಚ್ಚಿಸಲಾಗಿದೆ.

ಇದರೊಂದಿಗೆ ತೆರಿಗೆ ಸ್ಲ್ಯಾಬ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. 7.75 ಲಕ್ಷ ರೂ. ಆದಾಯವು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವವರಿಗೆ ಈಗ ಸಂಪೂರ್ಣ ತೆರಿಗೆ ಮುಕ್ತವಾಗಿದೆ. ಆದರೆ ಯಾರೊಬ್ಬರ ವಾರ್ಷಿಕ ಆದಾಯ 10 ಲಕ್ಷ ರೂ.ಗಳಿದ್ದರೆ ಅವರೂ ಆದಾಯ ತೆರಿಗೆಯಿಂದ ಮುಕ್ತರಾಗಿ ಇರಬಹುದು. ಇದಕ್ಕಾಗಿ ಕೆಲವು ಲೆಕ್ಕಾಚಾರಗಳನ್ನು ಇಲ್ಲಿ ನೀಡಲಾಗಿದೆ.

Money Guide
Money Guide


ತೆರಿಗೆ ಉಳಿಸುವುದು ಹೇಗೆ?

1. 10 ಲಕ್ಷ ರೂ.ವರೆಗಿನ ಆದಾಯದ ಮೇಲೆ ಆದಾಯ ತೆರಿಗೆ ಪ್ರಯೋಜನಗಳನ್ನು ಪಡೆಯಲು ತೆರಿಗೆ ರಿಟರ್ನ್ ಸಲ್ಲಿಕೆ ಮಾದರಿಯನ್ನು ಹಳೆಯ ತೆರಿಗೆ ಪದ್ಧತಿಗೆ ಬದಲಾಯಿಸಬೇಕಾಗುತ್ತದೆ. ಇದರಲ್ಲಿ ಅನೇಕ ರೀತಿಯ ಕಡಿತಗಳನ್ನು ಕ್ಲೈಮ್ ಮಾಡಬಹುದು ಮತ್ತು ಅನೇಕ ರೀತಿಯ ಆದಾಯದ ಮೇಲೆ ತೆರಿಗೆಯನ್ನು ಉಳಿಸಬಹುದು.

2. ಹಳೆಯ ತೆರಿಗೆ ವ್ಯವಸ್ಥೆಯನ್ನು ಆರಿಸಿಕೊಂಡರೆ 50,000 ರೂ. ವರೆಗೆ ಪ್ರಮಾಣಿತ ಕಡಿತವನ್ನು ಪಡೆಯಬಹುದು. ಅಂದರೆ 50,000 ರೂ. ವರೆಗೆ ಯಾವುದೇ ತೆರಿಗೆ ಇರುವುದಿಲ್ಲ. ಇದು ಒಟ್ಟು ಆದಾಯದಿಂದ ಮುಂಚಿತವಾಗಿ ಕಡಿತಗೊಳಿಸಲಾಗುವ ಮೊತ್ತವಾಗಿದೆ. ಅಂದರೆ 10 ಲಕ್ಷ ರೂಪಾಯಿ ಗಳಿಸುವ ವ್ಯಕ್ತಿಯ ತೆರಿಗೆಯ ಆದಾಯವು 9.50 ಲಕ್ಷ ರೂಪಾಯಿ ಆಗುತ್ತದೆ.

3. ಇನ್ನು 80ಸಿಯ ಲಾಭವನ್ನು ನೀಡುವ ಪಿಪಿಎಫ್, ಇಪಿಎಫ್ ಮತ್ತು ಎನ್ ಎಸ್ ಸಿಯಂತಹ ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದರೆ 1.5 ಲಕ್ಷ ರೂ.ವರೆಗೆ ತೆರಿಗೆ ಉಳಿಸಬಹುದು. ಇದರಿಂದ 9.50 ಲಕ್ಷದಿಂದ 1.50 ಲಕ್ಷ ರೂ. ಕಡಿತಗೊಳಿಸಿದರೆ ತೆರಿಗೆಯ ಆದಾಯವು 8 ಲಕ್ಷ ರೂ.ಗಳಾಗುತ್ತದೆ.

4. ಅಲ್ಲದೇ ಎನ್ ಪಿ ಎಸ್ ನಲ್ಲಿ ವಾರ್ಷಿಕವಾಗಿ 50,000 ರೂ.ವರೆಗೆ ಹೂಡಿಕೆ ಮಾಡಿದರೆ ಸೆಕ್ಷನ್ 80ಸಿಸಿಡಿ (1ಬಿ) ಅಡಿಯಲ್ಲಿ 50,000 ರೂ. ಹೆಚ್ಚುವರಿ ತೆರಿಗೆ ವಿನಾಯಿತಿ ನೀಡಲಾಗುತ್ತದೆ. ಈ ಸಂದರ್ಭದಲ್ಲಿ 8 ಲಕ್ಷದಿಂದ 50 ಸಾವಿರವನ್ನು ಕಳೆದರೆ ತೆರಿಗೆಯ ಆದಾಯವು 7.50 ಲಕ್ಷ ರೂಪಾಯಿಗಳಾಗುತ್ತದೆ.

5. ಗೃಹ ಸಾಲ ಪಡೆದವರು ಆದಾಯ ತೆರಿಗೆಯ ಸೆಕ್ಷನ್ 24ಬಿ ಅಡಿಯಲ್ಲಿ 2 ಲಕ್ಷ ರೂಪಾಯಿಗಳವರೆಗೆ ಬಡ್ಡಿಯನ್ನು ಉಳಿಸಬಹುದು. ಈಗ 7.50 ಲಕ್ಷದಿಂದ 2 ಲಕ್ಷ ರೂಪಾಯಿ ಕಳೆದರೆ 5.50 ಲಕ್ಷ ರೂಪಾಯಿ ಉಳಿಯುತ್ತದೆ.

6. ವೈದ್ಯಕೀಯ ವಿಮೆಗಳನ್ನು ತೆಗೆದುಕೊಂಡಿದ್ದರೆ ಆದಾಯ ತೆರಿಗೆಯ ಸೆಕ್ಷನ್ 80ಡಿ ಅಡಿಯಲ್ಲಿ 25 ಸಾವಿರ ರೂಪಾಯಿಗಳವರೆಗೆ ತೆರಿಗೆ ಉಳಿಸಬಹುದು. ಜೊತೆಗೆ ಹೆಂಡತಿ, ಮಕ್ಕಳ ಹೆಸರಿನಲ್ಲಿ ಆರೋಗ್ಯ ವಿಮೆಯಲ್ಲಿದ್ದರೆ 50,000 ರೂಪಾಯಿಗಳವರೆಗೆ ಹೆಚ್ಚುವರಿ ವಿನಾಯಿತಿ ಪಡೆಯಬಹುದು. ಇದರಿಂದ 5.50 ಲಕ್ಷ ರೂಪಾಯಿಗಳಿಂದ 75,000 ರೂಪಾಯಿಗಳನ್ನು ಹೆಚ್ಚು ಕಳೆದರೆ ಆದಾಯವು 4.75 ಲಕ್ಷ ರೂಪಾಯಿಗಳಾಗಿರುತ್ತದೆ.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಹಳೆಯ ತೆರಿಗೆ ಪದ್ಧತಿಯಲ್ಲಿ 5 ಲಕ್ಷ ರೂಪಾಯಿವರೆಗಿನ ಆದಾಯದ ಮೇಲೆ ಯಾವುದೇ ತೆರಿಗೆ ಇಲ್ಲದಿರುವುದರಿಂದ ಈ ಸಂದರ್ಭದಲ್ಲಿ 10 ಲಕ್ಷ ರೂ. ಆದಾಯವಿದ್ದವರಿಗೂ ಯಾವುದೇ ತೆರಿಗೆ ವಿಧಿಸಲಾಗುವುದಿಲ್ಲ. ಈ ರೀತಿಯಾಗಿ 10 ಲಕ್ಷ ರೂ. ವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸಬಹುದು.

Continue Reading

ಮನಿ-ಗೈಡ್

Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಮುದ್ರಾ ಸಾಲದ (Mudra loan) ಮಿತಿಗಳನ್ನು ಹೆಚ್ಚಿಸಿರುವುದರಿಂದ ಅನೇಕರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ. ಮುಖ್ಯವಾಗಿ ಸಣ್ಣ ಉದ್ಯಮಿಗಳು ಮತ್ತು ಉದ್ಯಮಿಗಳು ಇದರ ಲಾಭ ಪಡೆಯಲಿದ್ದಾರೆ. ಹೆಚ್ಚಿನ ಸಾಲದ ಮಿತಿಯೊಂದಿಗೆ ಇದಕ್ಕೆ ಕೆಲವು ಷರತ್ತುಗಳನ್ನು ಸಹ ಪರಿಚಯಿಸಲಾಗಿದೆ. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.

VISTARANEWS.COM


on

By

Mudra loan
Koo

ಕೇಂದ್ರ ಬಜೆಟ್‌ನಲ್ಲಿ (Union Budget 2024) ಈ ಬಾರಿ ಹಲವಾರು ವಿಷಯಗಳ ಬಗ್ಗೆ ಕಾಳಜಿ ವಹಿಸಲಾಗಿದೆ. ಮೋದಿ ಸರ್ಕಾರದ (Modi government) ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರು ಸಂಸತ್ತಿನಲ್ಲಿ ಮಂಡಿಸಿ ಹಲವು ಜನಪರ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಈ ವೇಳೆ ಅವರು ಮುದ್ರಾ ಸಾಲದ (Mudra loan) ಕುರಿತು ಮಾತನಾಡಿದ್ದು, ಅದರ ಮಿತಿಗಳನ್ನು ಹೆಚ್ಚಿಸಿರುವುದಾಗಿ ತಿಳಿಸಿದ್ದಾರೆ.

ಮುದ್ರಾ ಸಾಲದ ಮಿತಿಗಳನ್ನು ಹೆಚ್ಚಿಸಿರುವುದರಿಂದ ಅನೇಕರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ. ಮುಖ್ಯವಾಗಿ ಸಣ್ಣ ಉದ್ಯಮಿಗಳು ಮತ್ತು ಉದ್ಯಮಿಗಳು ಇದರ ಲಾಭ ಪಡೆಯಲಿದ್ದಾರೆ. ಹೆಚ್ಚಿನ ಸಾಲದ ಮಿತಿಯೊಂದಿಗೆ ಇದಕ್ಕೆ ಕೆಲವು ಷರತ್ತುಗಳನ್ನು ಸಹ ಪರಿಚಯಿಸಲಾಗಿದೆ. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.
ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇದು ಉದ್ಯಮಿಯಾಗಲು ಬಯಸುವವರಿಗೆ ವರದಾನವಾಗಿದೆ.

ಷರತ್ತುಗಳು ಏನು?

ಹೆಚ್ಚಿದ ಸಾಲದ ಮಿತಿಗೆ ಅರ್ಹತೆ ಪಡೆಯಲು ಸಾಲಗಾರರು ಈ ಹಿಂದೆ ಮುದ್ರಾ ಸಾಲವನ್ನು ತೆಗೆದುಕೊಂಡು ಪೂರ್ಣವಾಗಿ ಮರುಪಾವತಿಸಿರಬೇಕು. ಹಾಗಿದ್ದರೆ ಮಾತ್ರ ಹೊಸ ಪ್ರಯೋಜನಗಳನ್ನು ಪಡೆಯಬಹುದು.

ಮುದ್ರಾ ಸಾಲ ವಿಭಾಗಗಳು

ಮುದ್ರಾ ಸಾಲಗಳನ್ನು ಮೂರು ವಿಭಾಗಗಳಾಗಿ ವರ್ಗೀಕರಿಸಲಾಗಿದೆ. ʼಶಿಶುʼ ವಿಭಾಗದಲ್ಲಿ 50,000 ರೂ.ವರೆಗೆ ಸಾಲ, ʼಕಿಶೋರʼ ವಿಭಾಗದಲ್ಲಿ 50,000 ರೂ.ನಿಂದ 5 ಲಕ್ಷ ರೂ. ವರೆಗೆ ಸಾಲ, ʼತರುಣ್ʼ ವಿಭಾಗದಲ್ಲಿ 5 ಲಕ್ಷದಿಂದ 10 ಲಕ್ಷ ರೂ.ವರೆಗಿನ ಸಾಲಗಳು.

ಪರಿಣಾಮ ಮತ್ತು ವ್ಯಾಪ್ತಿ ಏನು?

ಪ್ರಧಾನಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಅಡಿಯಲ್ಲಿ 47 ಕೋಟಿಗೂ ಹೆಚ್ಚು ಸಣ್ಣ ಮತ್ತು ದೊಡ್ಡ ಉದ್ಯಮಗಳಿಗೆ 27.75 ಲಕ್ಷ ಕೋಟಿ ರೂ.ಗಳ ಸಾಲವನ್ನು ವಿತರಿಸಲಾಗಿದೆ. ಗಮನಾರ್ಹ ಸಂಗತಿ ಎಂದರೆ ಮಂಜೂರಾದ ಒಟ್ಟು 44.46 ಕೋಟಿ ಸಾಲದಲ್ಲಿ ಶೇ.69ರಷ್ಟು ಮಹಿಳಾ ಉದ್ಯಮಿಗಳಿಗೆ ನೀಡಲಾಗಿದೆ.

Mudra loan
Mudra loan


ಹಿಂದುಳಿದ ವರ್ಗದವರಿಗೆ ಬೆಂಬಲ

2015ರ ಏಪ್ರಿಲ್ 8ರಂದು ಪ್ರಾರಂಭವಾದ ಮುದ್ರಾ ಯೋಜನೆಯು 2016ರಲ್ಲಿ ಪ್ರಾರಂಭವಾದ ಎಸ್‌ಯುಪಿಐ ಯೋಜನೆಯೊಂದಿಗೆ ವಿಶೇಷವಾಗಿ ಮಹಿಳೆಯರು ಮತ್ತು ಎಸ್ ಸಿ/ ಎಸ್‌ಟಿ ಸಮುದಾಯಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗಳು ಹೊಸ ಉದ್ಯಮಗಳ ಸ್ಥಾಪನೆಯನ್ನು ಬೆಂಬಲಿಸುತ್ತವೆ ಮತ್ತು ಮಹಿಳೆಯರ ಆರ್ಥಿಕ ಉನ್ನತಿಗೆ ಪ್ರೋತ್ಸಾಹ ನೀಡುತ್ತದೆ.

ಇದನ್ನೂ ಓದಿ: Union Budget 2024: ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ₹7,559 ಕೋಟಿ ಅನುದಾನ; ಕಳೆದ ವರ್ಷಕ್ಕಿಂತ ಕಡಿಮೆ

ಉದ್ಯಮಶೀಲತೆಗೆ ಉತ್ತೇಜನ

ʼಮುದ್ರಾʼ ಯೋಜನೆ ಮತ್ತು ಎಸ್‌ಯುಪಿಐ ಯೋಜನೆಗಳು ಅಗತ್ಯ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಸಣ್ಣ ಮತ್ತು ಅತಿಸಣ್ಣ ಉದ್ಯಮಗಳನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾಗಿದೆ. ವ್ಯಾಪಾರ ಅವಕಾಶಗಳನ್ನು ಮುಂದುವರಿಸಲು ಅನನುಕೂಲಕರ ಪರಿಸ್ಥಿತಿ ಎದುರಿಸುತ್ತಿರುವವರನ್ನು ಸಬಲೀಕರಣಗೊಳಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಬ್ಯಾಂಕ್‌ಗಳ ಸ್ಥಳೀಯ ಶಾಖೆಗೆ ಹೋಗಿ ಮುದ್ರಾ ಸಾಲ ಯೋಜನೆಯ ಮಾಹಿತಿ ಪಡೆಯಬಹುದು.

Continue Reading

ಮನಿ-ಗೈಡ್

NPS Vatsalya Scheme: ಏನಿದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಎನ್‌ಪಿಎಸ್ ವಾತ್ಸಲ್ಯ ಯೋಜನೆ? ನಮ್ಮ ಮಕ್ಕಳಿಗೆ ಇದರಿಂದೇನು ಪ್ರಯೋಜನ?

ಇನ್ನು ಮುಂದೆ ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಗುವಿನ ಹೆಸರಿನಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ (NPS Vatsalya Scheme) ಖಾತೆಯನ್ನು ತೆರೆಯಬಹುದು ಎಂದು ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಎನ್‌ಪಿಎಸ್ ವಾತ್ಸಲ್ಯ ಯೋಜನೆ ಎಂದರೆ ಏನು, ಇದಕ್ಕೆ ಯಾರು ಅರ್ಹರು, ಯಾರು ಅರ್ಜಿ ಸಲ್ಲಿಸಬಹುದು ಮತ್ತು ಮೆಚ್ಯೂರಿಟಿಯನ್ನು ಪಡೆದ ಅನಂತರ ಖಾತೆ ಏನಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

NPS Vatsalya Yojana
Koo

ಮಕ್ಕಳಿಗಾಗಿ ರಾಷ್ಟ್ರೀಯ ಪಿಂಚಣಿ ವಾತ್ಸಲ್ಯ ಯೋಜನೆಯನ್ನು (NPS Vatsalya scheme) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (finance minister Nirmala Sitharaman) ಅವರು 2024ರ ಕೇಂದ್ರ ಬಜೆಟ್‌ನಲ್ಲಿ (Union Budget 2024) ಘೋಷಿಸಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆಯು (National Pension Scheme) ನಿವೃತ್ತಿ ಯೋಜನೆಯಾಗಿದ್ದು, ಇದರಲ್ಲಿ 18ನೇ ವಯಸ್ಸಿನಿಂದಲೇ ಹೂಡಿಕೆಯನ್ನು ಪ್ರಾರಂಭಿಸಿ 70ನೇ ವಯಸ್ಸಿನವರೆಗೆ ಹೂಡಿಕೆಯನ್ನು ಮಾಡಬಹುದು.

ಇದೀಗ ಕೇಂದ್ರ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ರಾಷ್ಟ್ರೀಯ ಪಿಂಚಣಿ ಯೋಜನೆ ವಾತ್ಸಲ್ಯವನ್ನು ಘೋಷಿಸಲಾಗಿದೆ. ಎನ್‌ಪಿಎಸ್-ವಾತ್ಸಲ್ಯ ಯೋಜನೆಯನ್ನು ಅಪ್ರಾಪ್ತ ವಯಸ್ಕ ಮಕ್ಕಳಿಗೆ ಪೋಷಕರು ಮಾಡಬಹುದಾದ ಉಳಿತಾಯ ಯೋಜನೆಯಾಗಿದೆ. ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಮ್ಯಾಕ್ಸ್ ಲೈಫ್ ಪಿಂಚಣಿ ನಿಧಿ ನಿರ್ವಹಣೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಣಭೀರ್ ಸಿಂಗ್ ಧರಿವಾಲ್, ನಿವೃತ್ತಿ ಉಳಿತಾಯ ಮತ್ತು ದೀರ್ಘಾವಧಿಯ ಆರ್ಥಿಕ ಭದ್ರತೆಯನ್ನು ಉತ್ತೇಜಿಸುವಲ್ಲಿ ಕೇಂದ್ರ ಬಜೆಟ್‌ನ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ವಾತ್ಸಲ್ಯವು ಶ್ಲಾಘನೀಯ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಗುವಿನ ಎನ್‌ಪಿಎಸ್ ಖಾತೆಯನ್ನು ಪ್ರಾರಂಭಿಸಲು ಅವಕಾಶ ನೀಡುವ ಮೂಲಕ ಚಿಕ್ಕ ವಯಸ್ಸಿನಿಂದಲೇ ಜವಾಬ್ದಾರಿಯುತ ಹಣಕಾಸು ನಿರ್ವಹಣೆಗೆ ಅಡಿಪಾಯವನ್ನು ಹೊಂದಿಸಿದಂತಾಗುತ್ತದೆ. ಪ್ರೌಢಾವಸ್ಥೆಯಲ್ಲಿ ಈ ಖಾತೆಗಳು ನಿಯಮಿತ ಎನ್ ಪಿ ಎಸ್ ಯೋಜನೆಗಳಾಗಿ ಪರಿವರ್ತನೆಯಾಗುತ್ತದೆ. ಇದರಿಂದ ಮಕ್ಕಳ ಪ್ರೌಢಾವಸ್ಥೆಯಲ್ಲಿ ಉಳಿತಾಯ ಅಭ್ಯಾಸಗಳ ಸುಗಮವಾಗಿ ಮುಂದುವರಿಯುತ್ತದೆ.

ಎನ್‌ಪಿಎಸ್ ವಾತ್ಸಲ್ಯ ಯೋಜನೆಗೆ ಯಾರು ಅರ್ಹರು, ಯಾರು ಅರ್ಜಿ ಸಲ್ಲಿಸಬಹುದು ಮತ್ತು ಮೆಚ್ಯೂರಿಟಿಯನ್ನು ಪಡೆದ ಅನಂತರ ಖಾತೆಗೆ ಏನಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

NPS Vatsalya Yojana
NPS Vatsalya Yojana


ಎನ್ ಪಿ ಎಸ್ ಎಂದರೇನು?

ಎನ್‌ಪಿಎಸ್ ನಿವೃತ್ತಿ ಯೋಜನೆಯಾಗಿದ್ದು, ಆರ್ಥಿಕ ವರ್ಷದಲ್ಲಿ ಒಮ್ಮೆಯಾದರೂ ನಿರ್ದಿಷ್ಟ ಮೊತ್ತದ ಹಣವನ್ನು ಹೂಡಿಕೆ ಮಾಡಬಹುದು.

ಎನ್ ಪಿ ಎಸ್ ಅನ್ನು ಮಾರುಕಟ್ಟೆಗೆ ಲಿಂಕ್ ಮಾಡಲಾಗಿದ್ದು, ಇದರಲ್ಲಿ ನಿಧಿ ಯೋಜನೆ ಮತ್ತು ಈಕ್ವಿಟಿ ಮಾನ್ಯತೆಯ ಶೇಕಡಾವಾರು ಪ್ರಮಾಣವನ್ನು ಆಯ್ಕೆ ಮಾಡಬಹುದು.

ನಿಧಿಯಲ್ಲಿ ಹೂಡಿಕೆಯಾಗಿರುವ ಮೊತ್ತದ ಕಾರ್ಯಕ್ಷಮತೆಯ ಆಧಾರದ ಮೇಲೆ ಎನ್ ಪಿ ಎಸ್ ಖಾತೆದಾರರು ನಿವೃತ್ತಿಯ ಸಮಯದಲ್ಲಿ ಒಂದು ದೊಡ್ಡ ಮೊತ್ತವನ್ನು ಪಡೆಯುತ್ತಾರೆ ಮತ್ತು ಮಾಸಿಕ ಪಿಂಚಣಿಗಾಗಿ ವರ್ಷಾಶನವನ್ನು ಖರೀದಿಸುವ ಆಯ್ಕೆ ಇದರಲ್ಲಿದೆ.

60 ವರ್ಷಗಳ ನಿವೃತ್ತಿ ವಯಸ್ಸಿನಲ್ಲಿ ನಿವೃತ್ತಿ ಮೊತ್ತದ ಗರಿಷ್ಠ ಶೇ. 60ರಷ್ಟನ್ನು ಹಿಂತೆಗೆದುಕೊಳ್ಳುವ ಇನ್ನೊಂದು ಆಯ್ಕೆ ಇದರಲ್ಲಿದೆ. ಇದರಲ್ಲಿ ಉಳಿದ ಶೇ. 40ರಷ್ಟನ್ನು ವರ್ಷಾಶನವಾಗಿ ಖರೀದಿ ಮಾಡಬಹುದು. ಈ ರೀತಿಯ ನಿವೃತ್ತಿ ಮೊತ್ತವು ತೆರಿಗೆ ಮುಕ್ತವಾಗಿರುತ್ತದೆ.

ಎನ್‌ಪಿಎಸ್ ವಾತ್ಸಲ್ಯ ಯೋಜನೆ ಎನ್‌ಪಿಎಸ್‌ಗಿಂತ ಏಕೆ ಭಿನ್ನ?

ಎನ್ ಪಿ ಎಸ್‌ನಲ್ಲಿ 18 ವರ್ಷ ವಯಸ್ಸಿನಲ್ಲೇ ಖಾತೆಯನ್ನು ತೆರೆಯಬಹುದು. ಎನ್ ಪಿ ಎಸ್ ವಾತ್ಸಲ್ಯದಲ್ಲಿ ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಕ್ಕಳ ಖಾತೆಯನ್ನು ತೆರೆಯಬಹುದು. ಇದರಲ್ಲಿ ಅಪ್ರಾಪ್ತರ ಕನಿಷ್ಠ ವಯಸ್ಸನ್ನು ಹಣಕಾಸು ಸಚಿವರು ತಿಳಿಸಿಲ್ಲ.

NPS Vatsalya Yojana
NPS Vatsalya Yojana


ಮುಕ್ತಾಯದ ಅನಂತರ ಖಾತೆ ಏನಾಗುತ್ತದೆ?

ಅಪ್ರಾಪ್ತ ವಯಸ್ಸಿನವರು ಪ್ರಾಪ್ತ ವಯಸ್ಸಿಗೆ ಬಂದಾಗ ಅವರ ಖಾತೆ ಎನ್‌ಪಿಎಸ್ ವಾತ್ಸಲ್ಯ ಯೋಜನೆಯಿಂದ ಸಾಮಾನ್ಯ ಎನ್‌ಪಿಎಸ್ ಖಾತೆಯಾಗಿ ಪರಿವರ್ತಿಸಬಹುದು ಎಂದಿದ್ದಾರೆ ಹಣಕಾಸು ಸಚಿವರು.

ಇದನ್ನೂ ಓದಿ: Ayushamn Card: 5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?

ಎನ್ ಪಿ ಎಸ್ ಪ್ರಯೋಜನವೇನು?

ಎನ್‌ಪಿಎಸ್ ಯೋಜನೆಯಡಿ ಖಾತೆದಾರರು ನಿರ್ದಿಷ್ಟ ಮೊತ್ತದ ಬಡ್ಡಿಯನ್ನು ಪಡೆಯುತ್ತಾರೆ. ಪೂರ್ಣ ಎನ್ ಪಿ ಎಸ್ ಖಾತೆಯಾಗಿ ಪರಿವರ್ತನೆಯಾದ ಬಳಿಕ ಖಾತೆದಾರನು 60ರ ನಿವೃತ್ತಿ ವಯಸ್ಸನ್ನು ತಲುಪಿದ ಮೇಲೆ ಖಾತೆಯಲ್ಲಿರುವ ಸಂಗ್ರಹ ಮೊತ್ತದೊಂದಿಗೆ ಬಡ್ಡಿ ಸೇರಿ ಗಣನೀಯ ಮೊತ್ತವನ್ನು ಪಡೆಯಬಹುದು.

Continue Reading

ಮನಿ-ಗೈಡ್

Ayushamn Card: 5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?

ಅಯುಷ್ಮಾನ್ ಭಾರತ್ ಯೋಜನೆಯ (Ayushamn Card) ಅಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ನೀಡಲಾಗುತ್ತದೆ. ಇದರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಅಂದರೆ ಇದಕ್ಕಾಗಿ ಫಲಾನುಭವಿಗಳು ಹಣವನ್ನು ಖರ್ಚು ಮಾಡಬೇಕಾಗಿಲ್ಲ. ಅಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಬಯಸುವವರು ಇದರ ಬಗ್ಗೆ ಸರಿಯಾಗಿ ತಿಳಿದಿರಬೇಕು. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Card
Koo

ಸಾಮಾನ್ಯ ಜನರಿಗೆ ಆರ್ಥಿಕ ಸುರಕ್ಷತೆ (financial help) ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ನಿಧಿ (kisan sammani nidhi), ಅಯುಷ್ಮಾನ್ ಭಾರತ್‌ನಂತಹ (Ayushamn Card) ಅನೇಕ ಯೋಜನೆಗಳನ್ನು ಪರಿಚಯಿಸಿದೆ. ಇದರ ಅಡಿಯಲ್ಲಿ ವಿವಿಧ ರೀತಿಯಲ್ಲಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಯೋಜನೆಗಳಲ್ಲಿ ಫಲಾನುಭವಿಗಳು ಹಣಕಾಸಿನ ಸಹಾಯವನ್ನು ನೇರವಾಗಿ ಪಡೆಯುತ್ತಾರೆ.

ಕೇಂದ್ರ ಸರಕಾರ ರೈತರಿಗಾಗಿ ನಡೆಸುತ್ತಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಇದಕ್ಕೊಂದು ಉದಾಹರಣೆ. ಇದೇ ರೀತಿ ಆರ್ಥಿಕ ಪ್ರಯೋಜನವನ್ನು ನೀಡದ ಮತ್ತೊಂದು ಯೋಜನೆ ಇದೆ. ಆದರೆ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಇದರ ಅಡಿಯಲ್ಲಿ ನೀಡಲಾಗುತ್ತದೆ ಮತ್ತು ಇದರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಅಂದರೆ ಇದಕ್ಕಾಗಿ ಫಲಾನುಭವಿಗಳು ಹಣವನ್ನು ಖರ್ಚು ಮಾಡಬೇಕಾಗಿಲ್ಲ. ಈ ಯೋಜನೆಯ ಹೆಸರು ಆಯುಷ್ಮಾನ್ ಭಾರತ್ ಯೋಜನೆ.

ಅಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಬಯಸುವವರು ಇದರ ಬಗ್ಗೆ ಸರಿಯಾಗಿ ತಿಳಿದಿರಬೇಕು. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಅಯುಷ್ಮಾನ್ ಭಾರತ್

ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಆಯುಷ್ಮಾನ್ ಕಾರ್ಡ್‌ಗಳನ್ನು ಮೊದಲು ಅರ್ಹರಿಗೆ ನೀಡಲಾಗುತ್ತದೆ. ಇದಾದ ಅನಂತರ ಕಾರ್ಡ್‌ದಾರರು 5 ಲಕ್ಷದವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಇಲ್ಲಿ ಗಮನಿಸಿಸಬೇಕಾದ ವಿಚಾರವೆಂದರೆ ಪ್ರತಿ ವರ್ಷ ಕಾರ್ಡುದಾರರು 5 ಲಕ್ಷ ರೂ.ಗಳ ರಕ್ಷಣೆಯನ್ನು ಪಡೆಯುತ್ತಾರೆ. ಅಂದರೆ, ಪ್ರತಿ ವರ್ಷ ಈ ಮೊತ್ತದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದು.

ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?

ಆಯುಷ್ಮಾನ್ ಕಾರ್ಡ್ ಅನ್ನು ಆಫ್‌ಲೈನ್‌ನಲ್ಲಿ ಪಡೆಯಲು ಬಯಸಿದರೆ ಇದಕ್ಕಾಗಿ ನಿಮ್ಮ ಹತ್ತಿರದ ಸಿಎಸ್‌ಸಿ ಕೇಂದ್ರಕ್ಕೆ ಹೋಗಬೇಕು. ಇಲ್ಲಿ ಸಂಬಂಧಪಟ್ಟ ಅಧಿಕಾರಿಯನ್ನು ಭೇಟಿಯಾಗಿ ಅದನ್ನು ಮಾಡಿಕೊಳ್ಳಬಹುದು.

ಕಾರ್ಡ್ ಅನ್ನು ಆನ್‌ಲೈನ್‌ನಲ್ಲಿ ಮಾಡಿಕೊಳ್ಳಬಹುದು. ಇದಕ್ಕಾಗಿ ಈ ಯೋಜನೆಯ ಅಧಿಕೃತ ವೆಬ್‌ಸೈಟ್ https://beneficiary.nha.gov.in/ ಗೆ ಭೇಟಿ ನೀಡಬೇಕು.

Ayushman Card
Ayushman Card


ಯಾರು ಪಡೆಯಬಹುದು?

ಆಯುಷ್ಮಾನ್ ಕಾರ್ಡ್ ಅನ್ನು ಮಾಡಬಹುದೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಬಯಸಿದರೆ ಕೆಳಗೆ ನೀಡಲಾದ ಅರ್ಹತಾ ಮಾನದಂಡಗಳನ್ನು ತಿಳಿದುಕೊಳ್ಳಿ.

ಇದನ್ನೂ ಓದಿ: Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

ಕುಟುಂಬದಲ್ಲಿ ಅಂಗವಿಕಲ ವ್ಯಕ್ತಿಯನ್ನು ಹೊಂದಿರುವವರು, ಪರಿಶಿಷ್ಟ ಜಾತಿ ಅಥವಾ ಪಂಗಡದಿಂದ ಬಂದವರು, ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರು, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರು, ದಿನಗೂಲಿ ಮಾಡುವವರು, ಬಡತನ ರೇಖೆಗಿಂತ ಕೆಳಗಿರುವವರು, ನಿರ್ಗತಿಕ ಅಥವಾ ಬುಡಕಟ್ಟು ಜನರು ಆಯುಷ್ಮಾನ್ ಕಾರ್ಡ್ ಅನ್ನು ಪಡೆಯಬಹುದು.

ಯಾರಿಗೆ ಸಾಧ್ಯವಿಲ್ಲ?

ತೆರಿಗೆ ಪಾವತಿಸುವವರು, ಸರ್ಕಾರಿ ಕೆಲಸ ಮಾಡುವವರು, ಪಿಎಫ್ ಸದಸ್ಯರಾಗಿರುವವರು, ಇಎಸ್ ಐಸಿಯ ಲಾಭವನ್ನು ಪಡೆಯುವ ಜನರು, ವೈದ್ಯಕೀಯ ವಿಮೆ ಹೊಂದಿರುವವರು ಇದನ್ನು ಪಡೆಯುವುದು ಸಾಧ್ಯವಿಲ್ಲ.

Continue Reading
Advertisement
shiradi ghat train karnataka rian news
ಪ್ರಮುಖ ಸುದ್ದಿ20 mins ago

Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

UGCET 2024 seat allotment process begins Only a few days left for the option to enter
ಬೆಂಗಳೂರು25 mins ago

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Actor Darshan Lata Jaiprakash says that since Darshan is a devotee of God,
ಸಿನಿಮಾ39 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ43 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ53 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ53 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ1 hour ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ2 hours ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ; ಓರ್ವ ಉಗ್ರ ಹತ

Champions Trophy 2025
ಕ್ರೀಡೆ2 hours ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ2 hours ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ17 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ18 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ19 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ20 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌