PM Kisan Samman Nidhi: ಈ ದಿನಾಂಕದಂದು ಜಮೆ ಆಗಲಿದೆ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತು; ಹೊಸದಾಗಿ ಅಪ್ಲೈ ಮಾಡುವ ವಿಧಾನ ಇಲ್ಲಿದೆ - Vistara News

ಮನಿ-ಗೈಡ್

PM Kisan Samman Nidhi: ಈ ದಿನಾಂಕದಂದು ಜಮೆ ಆಗಲಿದೆ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತು; ಹೊಸದಾಗಿ ಅಪ್ಲೈ ಮಾಡುವ ವಿಧಾನ ಇಲ್ಲಿದೆ

PM Kisan Samman Nidhi: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದ ಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 18ನೇ ಕಂತಿನ ಹಣ ನವೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. 17ನೇ ಕಂತು ಜೂನ್‌ನಲ್ಲಿ ರಿಲೀಸ್‌ ಆಗಿತ್ತು. ಅಂದು ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ 9.26 ಕೋಟಿ ಫಲಾನುಭವಿಗಳ ಖಾತೆಗೆ 21,000 ಕೋಟಿ ರೂ. ಜಮೆ ಮಾಡಿದ್ದರು. ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಹೊಸದಾಗಿ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

PM Kisan Samman Nidhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (PM Kisan Samman Nidhi) ಯೋಜನೆಯ 18ನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್‌ನಲ್ಲಿ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಜಮೆ ಆಗಲಿದೆ. 17ನೇ ಕಂತು ಜೂನ್‌ನಲ್ಲಿ ರಿಲೀಸ್‌ ಆಗಿತ್ತು. 16ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Money Guide).

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇ-ಕೆವೈಸಿ ಕಡ್ಡಾಯ

ಕಿಸಾನ್‌ ಸಮ್ಮಾನ್‌ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಮಾಡಬಹುದು.

ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  •  ‘New Farmer Registration’ ಆಯ್ಕೆ ಮೇಲೆ ಕಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: LIC New Plan For Youths: ಎಲ್‌ಐಸಿಯಿಂದ ಯುವ ಜನರಿಗಾಗಿ ಹೊಸ ವಿಮಾ ಯೋಜನೆ; ಏನಿದರ ವಿಶೇಷತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Rent Agreement: ಬಾಡಿಗೆ ಒಪ್ಪಂದ 11 ತಿಂಗಳ ಅವಧಿಗೆ ಮಾತ್ರ ಯಾಕೆ ಅನ್ನೋದು ಗೊತ್ತಾ?

ಉದ್ಯೋಗ, ಆಶ್ರಯ ಬಯಸಿ ಒಂದೂರಿನಿಂದ ಇನ್ನೊಂದು ಊರಿಗೆ ಹೋಗುವವರು ತಮ್ಮ ಹೊಸ ಬದುಕನ್ನು ಬಾಡಿಗೆ ಮನೆಯಿಂದಲೇ ಆರಂಭಿಸುತ್ತಾರೆ. ಅದು ಚಿಕ್ಕದಾಗಿದ್ದರೂ ಸರಿ ಚೆನ್ನಾಗಿರಬೇಕು, ಅಗತ್ಯ ಸೌಕರ್ಯಗಳಿರಬೇಕು ಎಂದು ಬಯಸುತ್ತಾರೆ. ಬಾಡಿಗೆ ಒಪ್ಪಂದದ ಬಗ್ಗೆ ಹೆಚ್ಚಿನವರು ಯೋಚಿಸುವುದಿಲ್ಲ. ಮನೆ ಮಾಲೀಕ ಹೇಳುವ ಬಜೆಟ್ ಸೂಕ್ತ ಎನಿಸಿದರೆ ಒಪ್ಪಂದ ಪತ್ರಕ್ಕೆ ಸಹಿ ಹಾಕುತ್ತಾರೆ. ಈ ಬಾಡಿಗೆ ಒಪ್ಪಂದವನ್ನು (Rent Agreement) ಕೇವಲ 11 ತಿಂಗಳ ಅವಧಿಗೆ ಮಾತ್ರ ಮಾಡಲಾಗುತ್ತದೆ. ಇದು ಯಾಕೆ ಎಂದು ಎಂದಾದರೂ ಯೋಚಿಸಿದ್ದೀರಾ? ಅದಕ್ಕೆ ಇಲ್ಲಿದೆ ಉತ್ತರ.

VISTARANEWS.COM


on

By

Rent Agreement
Koo

ಮನೆ, ಅಂಗಡಿ, ಕಚೇರಿ ಬಾಡಿಗೆ ಒಪ್ಪಂದ ಪತ್ರಗಳನ್ನು (Tenancy agreement letter) ಎಂದಾದರೂ ಗಮನಿಸಿದ್ದೀರಾ? ಬಾಡಿಗೆ ಒಪ್ಪಂದವನ್ನು (Rent Agreement) ಕೇವಲ 11 ತಿಂಗಳ ಅವಧಿಗೆ ಮಾತ್ರ ಮಾಡಲಾಗುತ್ತದೆ. ಇದು ಯಾಕೆ ಎಂದು ಎಂದಾದರೂ ಯೋಚಿಸಿದ್ದೀರಾ? ಬಾಡಿಗೆ ಒಪ್ಪಂದ ಪತ್ರ ಓದಿರುವವರು ಇದು ಕಾನೂನಿನ ನಿಯಮ (rule of law) ಅಂದುಕೊಂಡು ಸುಮ್ಮನೆ ಸಹಿ ಮಾಡಿರುತ್ತಾರೆ. ಇಲ್ಲದವರು ಇದರ ಬಗ್ಗೆ ಯೋಚಿಸಲು ಹೋಗಿರಲಿಕ್ಕಿಲ್ಲ. ನಾವು ಇರಬೇಕಾದ ಸ್ಥಳ ಚೆನ್ನಾಗಿದೆ, ಎಲ್ಲ ಸವಲತ್ತು ಇದೆ, ಕಾನೂನು ಕಟ್ಟಳೆ ಏನೇ ಇದ್ದರೂ ಅದನ್ನು ಮಾಲೀಕರು ನೋಡಿಕೊಳ್ಳುತ್ತಾರೆ ಎಂದುಕೊಂಡು ಅದರ ಚಿಂತೆಗೆ ಹೋಗುವುದಿಲ್ಲ.

ಬಾಡಿಗೆ ಒಪ್ಪಂದ ಎಂದರೇನು?

ಬಾಡಿಗೆ ಒಪ್ಪಂದವು ನಿರ್ದಿಷ್ಟಪಡಿಸಿದ ನಿಯಮಗಳು ಮತ್ತು ಷರತ್ತುಗಳನ್ನು ಒಳಗೊಂಡಿರುವ ದಾಖಲೆಯಾಗಿದೆ. ಆಸ್ತಿಯನ್ನು ಬಾಡಿಗೆಗೆ ನೀಡುವಾಗ ಆಸ್ತಿ ಮಾಲೀಕರಿಗೆ ಇರುವ ಅಧಿಕಾರವನ್ನು ಇದು ವ್ಯಾಖ್ಯಾನಿಸುತ್ತದೆ ಹಾಗೂ ಆಸ್ತಿ ಮಾಲೀಕ ಮತ್ತು ಬಾಡಿಗೆದಾರರಿಗೆ ಇರುವ ಸಂಬಂಧ, ಎರಡೂ ಕಡೆಯವರಿಗೆ ಇರುವ ಕಟ್ಟುಪಾಡುಗಳನ್ನು ಇದು ಉಲ್ಲೇಖಿಸುತ್ತದೆ.


ಬಾಡಿಗೆ ಒಪ್ಪಂದವು ಕೇವಲ 11 ತಿಂಗಳದ್ದಾಗಿರುತ್ತದೆ. 11 ತಿಂಗಳ ಬಳಿಕ ಅದನ್ನು ಮತ್ತೆ ನವೀಕರಿಸುವುದು ಮುಖ್ಯವಾಗಿರುತ್ತದೆ. ಇದಕ್ಕೆ ಮುಖ್ಯ ಕಾರಣ ಇದು ಕಾನೂನು ಸಂಬಂಧವನ್ನು ಹೊಂದಿದೆ. ಆಸ್ತಿ ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಜವಾಬ್ದಾರಿಗಳನ್ನು ಕಾನೂನು ನಿರ್ಧರಿಸುತ್ತದೆ. ಇದರಲ್ಲಿ ಬಾಡಿಗೆದಾರ ಮತ್ತು ಆಸ್ತಿ ಮಾಲೀಕರಿಗೆ ಇರುವ ಕಾನೂನು ನಿಯಮಗಳನ್ನು ಉಲ್ಲೇಖಿಸಲಾಗುತ್ತದೆ. ಇದರಲ್ಲಿ ಆಸ್ತಿಯ ಬಾಡಿಗೆ, ನಿರ್ವಹಣೆ, ಭದ್ರತೆ ಇತ್ಯಾದಿಗಳ ಷರತ್ತುಗಳ ಮೇಲೆ ಎರಡು ಪಕ್ಷದವರಿಗೂ ಜವಾಬ್ದಾರಿ ಹಂಚಿಕೆ ಮಾಡಲಾಗುತ್ತದೆ.

ಭೂಮಾಲೀಕರು ಮತ್ತು ಹಿಡುವಳಿದಾರರು ಈ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು ಅನುಸರಿಸುವುದನ್ನು ಬಾಡಿಗೆ ಒಪ್ಪಂದವು ಖಚಿತಪಡಿಸುತ್ತದೆ. ಬಾಡಿಗೆ ಒಪ್ಪಂದವು ಕೆಲವೊಂದು ಸಂದರ್ಭದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಎರಡೂ ಪಕ್ಷಗಳ ನಡುವೆ ವಿವಾದ ಉಂಟಾದರೆ ಅದನ್ನು ಸುಲಭವಾಗಿ ಕಾನೂನಿನ ರೂಪದಲ್ಲಿ ಪ್ರಸ್ತುತಪಡಿಸಿ ತ್ವರಿತ ಪರಿಹಾರವನ್ನು ಪಡೆಯಲು ಇದು ಸಹಾಯ ಮಾಡುತ್ತದೆ.

11 ತಿಂಗಳ ಬಾಡಿಗೆ ಒಪ್ಪಂದವು ನ್ಯಾಯಾಲಯದಲ್ಲಿ ಕಾನೂನುಬದ್ಧವಾಗಿ ಮಾನ್ಯವಾಗಿದೆ ಮತ್ತು ಯಾವುದೇ ವಿವಾದಗಳ ಸಂದರ್ಭದಲ್ಲಿ ಅದನ್ನು ಪುರಾವೆಯಾಗಿ ಪರಿಗಣಿಸಬಹುದು.


ನಿಯಮಗಳು ಏನು?

100 ರೂ.ಯ ಸ್ಟ್ಯಾಂಪ್ ಡ್ಯೂಟಿ ಪೇಪರ್‌ನಲ್ಲಿ ಬರೆದಿರುವ ನಿಯಮಗಳನ್ನು ಓದಿ ಬಾಡಿಗೆದಾರರು ಮತ್ತು ಜಮೀನುದಾರರು ಅದರಲ್ಲಿ ಸಹಿ ಮಾಡಬೇಕು. ಜೊತೆಗೆ ಒಪ್ಪಂದಕ್ಕೆ ಇಬ್ಬರು ಸಾಕ್ಷಿಗಳಿರಬೇಕು. ಗುರುತು ಪತ್ರ, ಬಾಡಿಗೆ ಒಪ್ಪಂದವನ್ನು ಮಾನ್ಯ ಮಾಡಲು ಅವರ ಸಹಿಗಳು ಅಗತ್ಯವಿದೆ. 11 ತಿಂಗಳ ಬಾಡಿಗೆ ಒಪ್ಪಂದವನ್ನು ಕಾನೂನು ಪ್ರಕಾರ ಮುಕ್ತಾಯ ದಿನಾಂಕದ ಮೊದಲ 30 ದಿನಗಳಲ್ಲಿ ನವೀಕರಿಸಬೇಕಾಗಿದೆ.

11 ತಿಂಗಳ ಬಾಡಿಗೆ ಒಪ್ಪಂದಕ್ಕೆ ನೋಟರಿ ನೋಂದಣಿ ಮುಖ್ಯವಲ್ಲ. ಆದರೆ ಬಾಡಿಗೆ 11 ತಿಂಗಳುಗಳಿಗಿಂತ ಹೆಚ್ಚಿನ ಅವಧಿಯ ಒಪ್ಪಂದವಾಗಿದ್ದರೆ ಜಮೀನುದಾರ ಮತ್ತು ಹಿಡುವಳಿದಾರರ ಅಥವಾ ಮಾಲೀಕರು ಮತ್ತು ಬಾಡಿಗೆದಾರರ ಸಮ್ಮುಖದಲ್ಲಿ ಹತ್ತಿರದ ಉಪ-ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಲೇಬೇಕು.

ಬಾಡಿಗೆ ಒಪ್ಪಂದ 11 ತಿಂಗಳುಗಳ ಕಾಲ ಏಕೆ?

ಕೇವಲ 11 ತಿಂಗಳ ಬಾಡಿಗೆ ಒಪ್ಪಂದವನ್ನು ರಚಿಸಲು ಪ್ರಮುಖ ಕಾರಣಗಳಿವೆ. ಇದಕ್ಕೆ ಯಾವುದೇ ನೋಂದಣಿ ಅಗತ್ಯವಿಲ್ಲ. ನೋಂದಣಿ ಕಾಯಿದೆ 1908ರ ಪ್ರಕಾರ ಉಪ-ವಿಭಾಗ (1) ನ ಷರತ್ತು (ಡಿ) ಅಡಿಯಲ್ಲಿ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಬಾಡಿಗೆ ಒಪ್ಪಂದದ ನೋಂದಣಿ ಕಡ್ಡಾಯವಾಗಿದೆ. ಬಾಡಿಗೆ ನಿಯಂತ್ರಣ ಕಾಯಿದೆ ಅಡಿಯಲ್ಲಿ, ಒಳಗೊಂಡಿರುವ ಪಕ್ಷಗಳು ಯಾವುದೇ ಹೆಚ್ಚುವರಿ ಶುಲ್ಕಗಳನ್ನು ಪಾವತಿಸಬೇಕಾಗಿಲ್ಲ. 11 ತಿಂಗಳ ಬಾಡಿಗೆ ಒಪ್ಪಂದವನ್ನು ರಚಿಸಲು ಯಾವುದೇ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಪಾವತಿಸಬೇಕಿಲ್ಲ.

100 ರೂಪಾಯಿಯ ಸ್ಟ್ಯಾಂಪ್ ಡ್ಯೂಟಿ ಪೇಪರ್ ಅನ್ನು ಬಳಸಿಕೊಂಡು ಒಪ್ಪಂದಗಳನ್ನು ಸುಲಭವಾಗಿ ನವೀಕರಿಸಬಹುದು. ಬಾಡಿಗೆ ಒಪ್ಪಂದವನ್ನು ವಿಸ್ತರಿಸಲು ಇದರಲ್ಲಿ ಅವಕಾಶವಿದೆ. 11 ತಿಂಗಳ ಬಾಡಿಗೆ ಒಪ್ಪಂದದ ಸ್ವರೂಪವು ಭೂಮಾಲೀಕರಿಗೆ ಆಸ್ತಿಯ ಮೇಲಿನ ಭದ್ರತೆಯನ್ನು ಖಚಿತಪಡಿಸುತ್ತದೆ. ಒಂದು ವರ್ಷದೊಳಗೆ ಅವರಿಗೆ ಮಾರುಕಟ್ಟೆ ಪರಿಸ್ಥಿತಿಗಳು ಮತ್ತು ಅವರ ಹಣಕಾಸಿನ ಆದ್ಯತೆಗಳ ಆಧಾರದ ಮೇಲೆ ಮಾಸಿಕ ಬಾಡಿಗೆಯನ್ನು ಪರಿಶೀಲಿಸಬಹುದು.


11 ತಿಂಗಳಿಗಿಂತ ಹೆಚ್ಚು ಬಾಡಿಗೆ ಒಪ್ಪಂದಕ್ಕೆ ನೋಂದಣಿ ಕಡ್ಡಾಯವಾಗಿದೆ. ನೋಟರಿ ಮೂಲಕ ಮಾಡಬೇಕಾಗುತ್ತದೆ. ಯಾವುದೇ ವಿವಾದದ ಸಂದರ್ಭದಲ್ಲಿ ಎರಡೂ ಪಕ್ಷಗಳು ನಿರ್ದಿಷ್ಟ ಹಣವನ್ನು ಪಾವತಿಸಬೇಕಾಗಬಹುದು. ದಾಖಲಾತಿಯನ್ನು ನೋಂದಾಯಿಸದಿದ್ದಕ್ಕಾಗಿ ದಂಡವನ್ನೂ ವಿಧಿಸಬಹುದು. ಬಾಡಿಗೆಯನ್ನು ನೋಂದಾಯಿಸಲು ಆಸ್ತಿ ಮಾಲೀಕರು ಮುದ್ರಾಂಕ ಶುಲ್ಕವನ್ನು ಪಾವತಿಸಬೇಕು. ಒಪ್ಪಂದವು 11 ತಿಂಗಳಿಗಿಂತ ಹೆಚ್ಚು ಕಾಲ ಜಾರಿಯಲ್ಲಿದ್ದರೆ ಇವುಗಳ ಶುಲ್ಕಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗಿರಬಹುದು.

ಇದನ್ನೂ ಓದಿ: Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

11 ತಿಂಗಳ ಬಾಡಿಗೆ ಒಪ್ಪಂದವು ಮಾನ್ಯವೇ?

ಭಾರತೀಯ ನ್ಯಾಯಾಲಯಗಳಲ್ಲಿ 11 ತಿಂಗಳ ಬಾಡಿಗೆ ಒಪ್ಪಂದ ಮಾನ್ಯವಾಗಿದೆ. ಈ ಒಪ್ಪಂದವನ್ನು 100 ರೂ. ಮೌಲ್ಯದ ಸ್ಟಾಂಪ್ ಪೇಪರ್ ಮೇಲೆ ಮಾಡಿಸಲೇಬೇಕು. ಇದಕ್ಕೆ ಯಾವುದೇ ಮುದ್ರಾಂಕ ಶುಲ್ಕವಿಲ್ಲ. ಬಾಡಿಗೆ ಒಪ್ಪಂದವು 12 ತಿಂಗಳಿಗಿಂತ ಹಳೆಯದಾಗಿದ್ದರೆ ಮಾತ್ರ ಮುದ್ರಾಂಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

11 ತಿಂಗಳು ಪೂರ್ಣಗೊಳ್ಳುವ ಮೊದಲು ಆಸ್ತಿ ಬಿಡಬಹುದೇ?

ಹಿಡುವಳಿದಾರ ಅಥವಾ ಬಾಡಿಗೆದಾರ 11 ತಿಂಗಳುಗಳು ಪೂರ್ಣಗೊಳ್ಳುವ ಮೊದಲು ಆಸ್ತಿ ಖಾಲಿ ಮಾಡಿ ಹೋಗಬಹುದು. ಆದರೆ ಇದಕ್ಕೆ ನಿಯಮಗಳಿವೆ. ಬಾಡಿಗೆ ಒಪ್ಪಂದದಲ್ಲಿ ನಿರ್ದಿಷ್ಟಪಡಿಸಿದ ನಿಯಮಗಳನ್ನು ಅನುಸರಿಸಬೇಕು. ಇದರಲ್ಲಿ ಮುಖ್ಯವಾಗಿ ನೊಟೀಸ್ ನೀಡಬೇಕು. ಇಲ್ಲವಾದರೆ ಮಾಲೀಕರಿಗೆ ದಂಡವನ್ನು ಪಾವತಿಸಬೇಕಾಗಬಹುದು.

Continue Reading

ಮನಿ-ಗೈಡ್

Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

Money Guide: ಭಾರತ ಕೃಷಿ ಪ್ರಧಾನ ದೇಶ. ಅದಾಗ್ಯೂ ಕೃಷಿಕರು ಅನೇಕ ಆರ್ಥಿಕ ಸಮಸ್ಯೆ ಎದುರಿಸುತ್ತಾರೆ. ಅನಿರೀಕ್ಷಿತ ಹವಾಮಾನ, ಗೊಬ್ಬರ, ಕೀಟ ನಾಶಕ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಡಿಮೆ ಬಂಡವಾಳ ಹೀಗೆ ನಾನಾ ರೀತಿಯ ಸವಾಲು ಎದುರಿಸುತ್ತಾರೆ. ಇದೇ ಕಾರಣಕ್ಕೆ ಕೃಷಿಕರಿಗೆ ನೆರವಾಗಲು ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಹಣಕಾಸು ಸಂಸ್ಥೆಗಳು ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಒದಗಿಸುತ್ತವೆ. ಹಾಗಾದರೆ ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಗಮನಿಸಬೇಕಾದ ಅಂಶಗಳು ಯಾವೆಲ್ಲ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶ. ಕೃಷಿಯೇ ಇಲ್ಲಿನ ಜೀವನಾಡಿ. ಇದು ದೇಶದ ಜಿಡಿಪಿಗೆ ಗಣನೀಯ ಪ್ರಮಾಣದಲ್ಲಿ ಕೊಡುಗೆ ನೀಡುವುದಷ್ಟೇ ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಗೂ ಕಾರಣವಾಗುತ್ತದೆ. ಅದಾಗ್ಯೂ ಕೃಷಿಕರು ಅನೇಕ ಆರ್ಥಿಕ ಸಮಸ್ಯೆ ಎದುರಿಸುತ್ತಾರೆ. ಅನಿರೀಕ್ಷಿತ ಹವಾಮಾನ, ಗೊಬ್ಬರ, ಕೀಟ ನಾಶಕ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಡಿಮೆ ಬಂಡವಾಳ ಹೀಗೆ ನಾನಾ ರೀತಿಯ ಸವಾಲು ಅವರ ಮುಂದಿರುತ್ತದೆ. ಇದೇ ಕಾರಣಕ್ಕೆ ಕೃಷಿಕರಿಗೆ ನೆರವಾಗಲು ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಹಣಕಾಸು ಸಂಸ್ಥೆಗಳು (Agriculture Loan) ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಒದಗಿಸುತ್ತವೆ. ಕೃಷಿ ಸಾಲ ಪಡೆದುಕೊಳ್ಳುವುದು ಹೇಗೆ? ಎಷ್ಟು ಬಡ್ಡಿ ವಿಧಿಸಲಾಗುತ್ತದೆ? ಅರ್ಹತೆಗಳೇನು? ಯಾವೆಲ್ಲ ದಾಖಲೆಗಳು ಅಗತ್ಯ? ಮುಂತಾದ ಪ್ರಶ್ನೆಗಳಿಗೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಬಡ್ಡಿದರ

ದೇಶದಲ್ಲಿನ ವಿವಿಧ ಹಣಕಾಸು ಸಂಸ್ಥೆಗಳು, ಬ್ಯಾಂಕ್‌ಗಳಿಗೆ ಹೊಂದಿಕೊಂಡು ಕೃಷಿ ಸಾಲಕ್ಕೆ ವಿಧಿಸುವ ಬಡ್ಡಿ ದರದಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಮಾತ್ರವಲ್ಲ ಸಾಲ ಪಡೆದುಕೊಳ್ಳುವವರ ಪ್ರೊಫೈಲ್‌, ಅರ್ಹತೆ ಮತ್ತು ಉದ್ದೇಶಗಳು ಕೂಡ ಬಡ್ಡದರದ ಮೇಲೆ ಪರಿಣಾಮ ಬೀರುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (Reserve Bank of India) ಕೃಷಿ ಸಾಲಗಳ ಮೇಲೆ ವಿಧಿಸಬಹುದಾದ ಬಡ್ಡಿದರಗಳ ಬಗ್ಗೆ ಬ್ಯಾಂಕುಗಳಿಗೆ ಮಾರ್ಗಸೂಚಿಗಳನ್ನು ಒದಗಿಸುತ್ತದೆ. ವಾಣಿಜ್ಯ ಸಾಲಗಳಿಗೆ ಹೋಲಿಸಿದರೆ ಈ ದರಗಳು ಸಾಮಾನ್ಯವಾಗಿ ಕಡಿಮೆಯಿರುತ್ತವೆ. ರೈತರಿಗೆ ಸುಲಭವಾಗಿ ಆರ್ಥಿಕ ಸಹಾಯ ಒದಗಿಸುವ ಗುರಿಯನ್ನು ಇದು ಹೊಂದಿದೆ. ಸಾಮಾನ್ಯವಾಗಿ ಮರುಪಾವತಿ ಅವಧಿಯನ್ನು ಅವಲಂಬಿಸಿ ವರ್ಷಕ್ಕೆ ಶೇ. 4ರಿಂದ ಶೇ. 14ರವರೆಗೆ ಬಡ್ಡಿ ವಿಧಿಸಲಾಗುತ್ತದೆ. ಕೆಲವೊಮ್ಮೆ ಸರ್ಕಾರ ಶೂನ್ಯ ಬಡ್ಡಿದರದಲ್ಲಿಯೂ ಕೃಷಿ ಸಾಲ ಒದಗಿಸುತ್ತದೆ.

ಅರ್ಹತೆ

ಕೃಷಿ ಸಾಲ ಹೊಂದಲು ಅಗತ್ಯವಾದ ಕೆಲವು ಸಾಮಾನ್ಯ ಅರ್ಹತೆಗಳು:

ಭೂ ಮಾಲೀಕತ್ವ: ಇದು ಮೊದಲ ಅರ್ಹತೆ. ರೈತರು ಕೃಷಿ ಭೂಮಿಯ ಸ್ಪಷ್ಟ ಮಾಲೀಕತ್ವವನ್ನು ಹೊಂದಿರಬೇಕು ಅಥವಾ ಸಾಲ ನೀಡುವ ಸಂಸ್ಥೆ ನಿರ್ದಿಷ್ಟಪಡಿಸಿದ ಕನಿಷ್ಠ ಅವಧಿಗೆ ಗುತ್ತಿಗೆ ಹಕ್ಕುಗಳನ್ನು ಹೊಂದಿರಬೇಕು. ಭೂಮಿಯನ್ನು ಹೆಚ್ಚಾಗಿ ಸಾಲದ ಆಧಾರವಾಗಿ ಬಳಸಲಾಗುತ್ತದೆ. ಭೂ ಮಾಲೀಕತ್ವ ಲಭ್ಯವಿಲ್ಲದ ಸಂದರ್ಭದಲ್ಲಿ, ಜಾಯಿಂಟ್‌ ಲಿಯಾಬಲಿಟಿ ಗ್ರೂಪ್‌ (Joint Liability Group) ಮತ್ತು ಸ್ವಸಹಾಯ ಗುಂಪುಗಳನ್ನು ರಚಿಸುವ ಮೂಲಕ ಗುಂಪು ಸಾಲ ನೀಡಲಾಗುತ್ತದೆ.
ವಯೋಮಿತಿ: ಸಾಮಾನ್ಯವಾಗಿ ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
ಸಾಲದ ಇತಿಹಾಸ: ಹಣಕಾಸು ಸಂಸ್ಥೆಗಳು ಸಾಮಾನ್ಯವಾಗಿ ಅರ್ಜಿದಾರರ ಕ್ರೆಡಿಟ್ ಇತಿಹಾಸ (Credit History)ವನ್ನು ಗಮನಿಸುತ್ತವೆ. ಉತ್ತಮ ಕ್ರೆಡಿಟ್ ಸ್ಕೋರ್ ಸಾಲ ಅನುಮೋದನೆಯ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ.
ಕೃಷಿಯಲ್ಲಿ ಅನುಭವ: ಕೆಲವೊಂದು ಬ್ಯಾಂಕ್‌ಗಳು ಸಾಲ ಅನುಮೋದನೆಗೆ ಕೃಷಿಯಲ್ಲಿ ಕನಿಷ್ಠ ವರ್ಷಗಳ ಅನುಭವವನ್ನು ಹೊಂದಿರಬೇಕು ಎಂಬ ಷರತ್ತು ವಿಧಿಸುತ್ತವೆ. ಸಾಲದ ಪ್ರಕಾರ ಮತ್ತು ಸಂಸ್ಥೆಯನ್ನು ಅವಲಂಬಿಸಿ ಈ ಮಾನದಂಡವು ಬದಲಾಗುತ್ತದೆ.
ಮರುಪಾವತಿ ಸಾಮರ್ಥ್ಯ: ಉದ್ದೇಶಿತ ಕೃಷಿಯಿಂದ ಲಭಿಸಬಹುದಾದ ಆದಾಯ ಮತ್ತು ಸಾಲಗಾರನ ಇತರ ಆದಾಯದ ಮೂಲ ಲೆಕ್ಕ ಹಾಕಿ ಬ್ಯಾಂಕುಗಳು ಮರುಪಾವತಿ ಸಾಮರ್ಥ್ಯವನ್ನು ಪರಿಶೀಲಿಸುತ್ತವೆ.
ಆಧಾರ: ಸಾಮಾನ್ಯವಾಗಿ ಬ್ಯಾಂಕುಗಳು ನಿರ್ದಿಷ್ಟ ಮಿತಿ ಅಂದರೆ 1.6 ಲಕ್ಷ ರೂ.ವರೆಗಿನ ಸಾಲಗಳಿಗೆ ಭೂಮಿಯ ಆಧಾರ ಸಲ್ಲಿಸುವಂತೆ ಒತ್ತಾಯಿಸುವುದಿಲ್ಲ. ಆದಾಗ್ಯೂ, ಈ ಮೊತ್ತಕ್ಕಿಂತ ಹೆಚ್ಚಿನ ಸಾಲಗಳಿಗೆ ಕೃಷಿ ಭೂಮಿಯನ್ನು ಅಡಮಾನ ಇಡಲು ಕೇಳಲಾಗುತ್ತದೆ.
ದಾಖಲೆಗಳು: ಸಾಲದ ಅರ್ಜಿಯ ಜತೆಗೆ ಗುರುತಿನ ಪುರಾವೆ, ವಿಳಾಸ ಪುರಾವೆ, ಭೂ ಮಾಲೀಕತ್ವದ ದಾಖಲೆಗಳು, ಆದಾಯ ಪ್ರಮಾಣಪತ್ರಗಳು, ಬ್ಯಾಂಕ್ ಸ್ಟೇಟ್‌ಮೆಂಟ್‌ ಮತ್ತು ಉದ್ದೇಶಿತ ಕೃಷಿ ಚಟುವಟಿಕೆಗಳಂತಹ ಸಂಬಂಧಿತ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ನಿಮ್ಮ ಹಣಕಾಸಿನ ಆವಶ್ಯಕತೆಗಳನ್ನು ಗುರುತಿಸಿ: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಚಟುವಟಿಕೆಗಳಿಗೆ ಎಷ್ಟು ಹಣ ಬೇಕಾಗುತ್ತದೆ ಎನ್ನುವುದನ್ನು ಲೆಕ್ಕ ಹಾಕಿ. ಉಪಕರಣ, ಬಿತ್ತನೆ ಬೀಜ, ಗೊಬ್ಬರ, ಜಾನುವಾರುಗಳು ಅಥವಾ ಭೂಮಿಯನ್ನು ಖರೀದಿಸಲು ಅಗತ್ಯವಿರುವ ಮೊತ್ತವನ್ನು ಮತ್ತು ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಇತರ ವೆಚ್ಚಗಳನ್ನು ನಿರ್ಣಯಿಸಿ. ನಿಮ್ಮ ಹಣಕಾಸಿನ ಅವಶ್ಯಕತೆಗಳ ಬಗ್ಗೆ ಸ್ಪಷ್ಟ ತಿಳುವಳಿಕೆಯನ್ನು ಹೊಂದಿರುವುದು ಸರಿಯಾದ ಸಾಲದ ಮೊತ್ತ ಆಯ್ಕೆ ಮಾಡಲು ನೆರವಾಗುತ್ತದೆ.

ವಿವಿಧ ಸಾಲ ಮತ್ತು ಸಂಸ್ಥೆಗಳ ಬಗ್ಗೆ ಮಾಹಿತಿ ಕಲೆ ಹಾಕಿ: ರೈತರಿಗೆ ಹಲವು ರೀತಿಯ ಸಾಲ ದೊರೆಯುತ್ತದೆ. ಪ್ರತಿಯೊಂದೂ ತನ್ನದೇ ಆದ ಅರ್ಹತಾ ಮಾನದಂಡಗಳು, ಬಡ್ಡಿದರಗಳು ಮತ್ತು ಪ್ರಯೋಜನಗಳನ್ನು ಹೊಂದಿದೆ. ಇವುಗಳ ಪೈಕಿ ನಿಮ್ಮ ಅಗತ್ಯಗಳಿಗೆ ಸೂಕ್ತವಾದ ಸಾಲದ ಯೋಜನೆಗಳನ್ನು ಆಯ್ಕೆ ಮಾಡಿ. ಭಾರತದ ಜನಪ್ರಿಯ ಸಾಲ ಯೋಜನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ (KC), ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY), ಚಿನ್ನದ ಸಾಲ, ಸೌರ ಪಂಪ್ ಸಾಲಗಳು, ಡೈರಿ ಸಾಲಗಳು, ಎಸ್‌ಎಚ್‌ಜಿ ಸಾಲಗಳು ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೀಡುವ ವಿವಿಧ ಲೋನ್‌ಗಳು ಸೇರಿವೆ. ಹೆಚ್ಚುವರಿಯಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳನ್ನೂ ಸಾಲಕ್ಕಾಗಿ ಪರಿಗಣಿಸಿ.

ಬಡ್ಡದರ ಹೋಲಿಸಿ: ವಿವಿಧ ಬ್ಯಾಂಕು, ಹಣಕಾಸು ಸಂಸ್ಥೆಗಳಲ್ಲಿ ವಿಧಿಸಲಾಗುವ ಬಡ್ಡಿದರಗಳನ್ನು ಹೋಲಿಕೆ ಮಾಡಿ ನೋಡಿ. ಕಡಿಮೆ ಬಡ್ಡಿದರ ಇರುವ, ನಿಮ್ಮ ಅನುಕೂಲಕ್ಕೆ ತಕ್ಕಷ್ಟು ಕಾಲಾವಧಿ ನೀಡುವ ಸಾಲವನ್ನು ಆಯ್ಕೆ ಮಾಡಿ.

ಅಗತ್ಯ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಿ: ಕೃಷಿಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಅಗತ್ಯವಾದ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಿ. ಇದರಿಂದ ಸಮಯ ವ್ಯರ್ಥವಾಗುವುದನ್ನು ತಡೆಯಬಹುದು. ಅಗತ್ಯ ದಾಖಲೆಗಳೆಂದರೆ ಮೊದಲೇ ಹೇಳಿದಂತೆ ಗುರುತಿನ ಚೀಟಿ (ಆಧಾರ್‌, ಪ್ಯಾನ್‌ ಕಾರ್ಡ್‌, ವೋಟರ್‌ ಐಡಿ ಇತ್ಯಾದಿ), ವಿಳಾಸದ ಪುರಾವೆ (ವಿದ್ಯುತ್‌ ಬಿಲ್‌, ರೇಷನ್‌ ಕಾರ್ಡ್‌, ಪಾಸ್‌ಪೋರ್ಟ್‌ ಇತ್ಯಾದಿ), ಭೂ ದಾಖಲೆಗಳು, ಆದಾಯದ ಪುರಾವೆ (ಬ್ಯಾಂಕ್‌ ಸ್ಟೇಟ್‌ಮೆಂಟ್‌, ಆದಾಯ ತೆರಿಗೆ ಸಲ್ಲಿಕ ಇತ್ಯಾದಿ), ಕೃಷಿ ಉತ್ಪನ್ನಗಳು, ಕೃಷಿ ಯೋಜನೆಗಳು ಇತ್ಯಾದಿ.

ಗಮನಿಸಿ; ನಿಮ್ಮ ಆದಾಯಕ್ಕೆ ಹೊಂದಿಕೆಯಾಗುವ ಸಾಲ ಮರುಪಾವತಿಯ ಅವಧಿಯನ್ನು ಆಯ್ಕೆ ಮಾಡಿಕೊಳ್ಳಿ. ನೀವು ಸಲ್ಲಿಸಿರುವ ಅರ್ಜಿ ಮತ್ತು ದಾಖಲೆಗಳನ್ನು ಪರಿಶೀಲಿಸಿ ಬ್ಯಾಂಕುಗಳು ಸಾಲ ಮಂಜೂರು ಮಾಡುತ್ತವೆ.

ಇದನ್ನೂ ಓದಿ: Money Guide: ಕಾರು ಚಲಾಯಿಸಿದಷ್ಟೇ ವಿಮೆ ಪ್ರೀಮಿಯಂ ಪಾವತಿಸಿ; ಏನಿದು ಹೊಸ ಯೋಜನೆ? ಅನುಕೂಲಗಳೇನು?

Continue Reading

ಮನಿ-ಗೈಡ್

LIC New Plan For Youths: ಎಲ್‌ಐಸಿಯಿಂದ ಯುವ ಜನರಿಗಾಗಿ ಹೊಸ ವಿಮಾ ಯೋಜನೆ; ಏನಿದರ ವಿಶೇಷತೆ?

ಭಾರತೀಯ ಜೀವ ವಿಮಾ ನಿಗಮವು ಯುವಕರಿಗಾಗಿ ಎರಡು ಹೊಸ ಅವಧಿಯ ವಿಮಾ (LIC New Plan For Youths) ಉತ್ಪನ್ನಗಳನ್ನು ಪರಿಚಯಿಸಿದೆ. ಇದನ್ನು ಸಾಲ ಮರುಪಾವತಿಯ ಅಪಾಯಗಳ ವಿರುದ್ಧ ರಕ್ಷಣೆ ನೀಡಲು ವಿನ್ಯಾಸಗೊಳಿಸಲಾಗಿದೆ. ಸಾಕಷ್ಟು ಪ್ರಯೋಜನವನ್ನು ನೀಡುವ ಈ ಎರಡು ಯೋಜನೆಗಳ ವಿಶೇಷಗಳು ಏನೇನು? ಇದರ ಪ್ರಯೋಜನಗಳೇನು? ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

By

LIC New Plan For Youths
Koo

ಭಾರತೀಯ ಜೀವ ವಿಮಾ ನಿಗಮವು (Life Insurance Corporation of India) ಯುವಕರಿಗಾಗಿ (LIC New Plan For Youths) ಎರಡು ಹೊಸ ಅವಧಿಯ ವಿಮಾ ಉತ್ಪನ್ನಗಳನ್ನು (Insurance product) ಪರಿಚಯಿಸಿದೆ. ಇದರಲ್ಲಿ ಯುವ ಟರ್ಮ್‌ ಅಥವಾ ಡಿಜಿ ಟರ್ಮ್‌ ( LIC’s Yuva Term/Digi Term) ಮತ್ತು ಯುವ ಕ್ರೆಡಿಟ್ ಲೈಫ್ ಅಥವಾ ಡಿಜಿ ಕ್ರೆಡಿಟ್ ಲೈಫ್ (LIC’s Yuva Credit Life/Digi Credit Life) ಸೇರಿದೆ. ಇದು ಸಾಲ ಮರುಪಾವತಿಯ ಅಪಾಯಗಳ ವಿರುದ್ಧ ರಕ್ಷಣೆ ನೀಡಲು ಪರಿಚಯಿಸಲಾದ ವಿಮಾ ಯೋಜನೆಯಾಗಿದೆ.

ಯುವ ಟರ್ಮ್‌ ಅಥವಾ ಡಿಜಿ ಟರ್ಮ್‌

ಇದರಲ್ಲಿ ಪಾಲಿಸಿ ಅವಧಿಯಲ್ಲಿ ಪಾಲಿಸಿದಾರನ ಮರಣ ಸಂಭವಿಸಿದರೆ ಪಾಲಿಸಿದಾರನ ಕುಟುಂಬಕ್ಕೆ ಆರ್ಥಿಕ ಭದ್ರತೆಯನ್ನು ನೀಡಲಾಗುತ್ತದೆ. ಸಾವಿನ ಬಳಿಕ ನೀಡುವ ಪ್ರಯೋಜನಗಳನ್ನು ಖಾತರಿಪಡಿಸುತ್ತದೆ. ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಇದನ್ನು ಪಡೆಯಬಹುದಾಗಿದೆ.

ಎಲ್‌ಐಸಿಯ ಯುವ ಟರ್ಮ್‌ ಏಜೆಂಟರ ಮೂಲಕ ಲಭ್ಯವಿದ್ದು, ಎಲ್ಐಸಿ ಡಿಜಿ ಟರ್ಮ್‌ ಎಲ್ಐಸಿಯ ವೆಬ್‌ಸೈಟ್‌ನಲ್ಲಿ ಪ್ರತ್ಯೇಕವಾಗಿ ಲಭ್ಯವಿದೆ.


ಇದು ನಿರ್ದಿಷ್ಟವಾಗಿ ಯುವ ವ್ಯಕ್ತಿಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಆಫ್‌ಲೈನ್ ಮತ್ತು ಆನ್‌ಲೈನ್ ಖರೀದಿ ಆಯ್ಕೆ ಮಾಡುವ ವೈಶಿಷ್ಟ್ಯವನ್ನು ಇದು ಒದಗಿಸುತ್ತದೆ.

18ರಿಂದ 45 ವರ್ಷಗಳ ಒಳಗಿನವರು ಇದನ್ನು ಪಡೆಯಬಹುದು. ಯೋಜನೆಯ ಮೆಚುರಿಟಿ ಅವಧಿ 33ರಿಂದ 75 ವರ್ಷಗಳು. ವಿಮಾ ಮೊತ್ತ 50 ಲಕ್ಷ ರೂ.ನಿಂದ 5 ಕೋಟಿ ರೂ.ವರೆಗಿದೆ.

ಆಕರ್ಷಕವಾದ ಹೆಚ್ಚಿನ ಮೊತ್ತದ ವಿಮಾ ರಿಯಾಯಿತಿ, ಮಹಿಳೆಯರಿಗೆ ಕಡಿಮೆ ಪ್ರೀಮಿಯಂ ದರಗಳು ಇದರಲ್ಲಿ ಲಭ್ಯವಿದೆ.

ಪ್ರಯೋಜನ ಏನು?

ವಾರ್ಷಿಕ ಪ್ರೀಮಿಯಂನ ಏಳು ಪಟ್ಟು ಅಥವಾ ಸಾವಿನ ದಿನಾಂಕದವರೆಗೆ ಪಾವತಿಸಿದ ಒಟ್ಟು ಪ್ರೀಮಿಯಂಗಳ ಶೇ. 1೦5ರಷ್ಟು ಸಂಪೂರ್ಣ ಮೊತ್ತದ ಭರವಸೆ ನೀಡುತ್ತದೆ. ಏಕ ಪ್ರೀಮಿಯಂನ ಶೇ. 125ರಷ್ಟು ಖಚಿತವಾದ ಸಂಪೂರ್ಣ ಮೊತ್ತದ ಭರವಸೆಯನ್ನು ನೀಡುತ್ತದೆ.

ಯುವ ಕ್ರೆಡಿಟ್ ಲೈಫ್ ಅಥವಾ ಡಿಜಿ ಕ್ರೆಡಿಟ್

ಯುವ ಕ್ರೆಡಿಟ್ ಲೈಫ್ ಅಥವಾ ಡಿಜಿ ಕ್ರೆಡಿಟ್ ಲೈಫ್ ಯೋಜನೆಗಳು ಸಾಲದ ಹೊಣೆಗಾರಿಕೆಗಳಿಗೆ ಕವರೇಜ್ ನೀಡುತ್ತವೆ. ವಸತಿ, ಶಿಕ್ಷಣ ಅಥವಾ ವಾಹನಗಳಂತಹ ಅಗತ್ಯಗಳಿಗಾಗಿ ಮರುಪಾವತಿಯ ವಿರುದ್ಧ ಸುರಕ್ಷತೆ ಒದಗಿಸುತ್ತವೆ.

ಯುವ ಅವಧಿಯ ಯೋಜನೆಗಳಂತೆಯೇ ಇವುಗಳು ಆಫ್‌ಲೈನ್ ಮತ್ತು ಆನ್‌ಲೈನ್ ಸ್ವರೂಪಗಳಲ್ಲಿ ಲಭ್ಯ ಇವೆ. 18ರಿಂದ 45 ವರ್ಷಗಳ ಒಳಗಿನವರು ಇದರ ಪ್ರಯೋಜನ ಪಡೆಯಬಹುದು. ಇದರ ಮೆಚ್ಯುರಿಟಿ ವಯಸ್ಸು 23ರಿಂದ 75 ವರ್ಷ.


ಪ್ರಯೋಜನ ಏನು?

ವಿಮಾ ಮೊತ್ತವು 50 ಲಕ್ಷ ರೂ.ನಿಂದ 5 ಕೋಟಿ ರೂ.ಗಳವರೆಗೆ ಇರುತ್ತದೆ. ಬಾಕಿ ಇರುವ ಸಾಲದ ಮೊತ್ತಕ್ಕೆ ಅನುಗುಣವಾಗಿ ಪಾಲಿಸಿ ಅವಧಿಯಲ್ಲಿ ಮರಣದ ಪ್ರಯೋಜನವು ಕಡಿಮೆಯಾಗುತ್ತದೆ.

ಎರಡೂ ಯೋಜನೆಯಲ್ಲಿ ಕನಿಷ್ಠ 18 ರಿಂದ ಗರಿಷ್ಠ 45 ವರ್ಷಗಳ ಒಳಗಿನವರು ಇದನ್ನು ಪಡೆಯಬಹುದು. ಮೆಚುರಿಟಿ ಅವಧಿ 33 ರಿಂದ 75 ವರ್ಷ ಮತ್ತು 33 ರಿಂದ 75 ವರ್ಷಗಳು.

ಇದನ್ನೂ ಓದಿ: Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

ಕನಿಷ್ಠ ವಿಮಾ ಮೊತ್ತ 50 ಲಕ್ಷ ರೂ. ಮತ್ತು ಗರಿಷ್ಠ ವಿಮಾ ಮೊತ್ತ 5 ಕೋಟಿ ರೂ. ವರೆಗೆ ಆಯ್ಕೆ ಮಾಡಬಹುದು. ಮಹಿಳೆಯರಿಗೆ ವಿಶೇಷ ಕಡಿಮೆ ಪ್ರೀಮಿಯಂ ದರಗಳು ಲಭ್ಯವಿದೆ.

ಪಾಲಿಸಿಯ ಪ್ರಾರಂಭದಲ್ಲಿ ಪಾಲಿಸಿದಾರರಿಗೆ ಸೂಕ್ತ ಸಾಲದ ಬಡ್ಡಿ ದರದ ಆಯ್ಕೆ, ಪಾಲಿಸಿ ಅವಧಿಯಲ್ಲಿ ಪಾಲಿಸಿದಾರನ ಮರಣದ ಸಂದರ್ಭದಲ್ಲಿ ಪಾಲಿಸಿ ಜಾರಿಯಲ್ಲಿದ್ದರೆ ಮತ್ತು ಕ್ಲೈಮ್ ಸ್ವೀಕಾರಾರ್ಹವಾಗಿದ್ದರೆ ಸಾವಿನ ಮೇಲೆ ವಿಮಾ ಮೊತ್ತವನ್ನು ಪಾವತಿಸಲಾಗುತ್ತದೆ.

Continue Reading

ಮನಿ-ಗೈಡ್

EPF New Rule: ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ.ವರೆಗೆ ಇಪಿಎಫ್‌ನಿಂದ ಹಣ ಪಡೆಯಲು ಅವಕಾಶ

ಕಳೆದ ಏಪ್ರಿಲ್‌ನಿಂದ ಇಪಿಎಫ್ ಹಣ ಭಾಗಶಃ ಹಿಂಪಡೆಯುವಿಕೆ ಮಿತಿಯನ್ನು ಹೆಚ್ಚಿಸಲಾಗಿದೆ. ಈಗ ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ.ವರೆಗೆ ಇಪಿಎಫ್ ನಿಂದ ಕ್ಲೈಮ್ ಮಾಡಲು ಅವಕಾಶವಿದೆ. ಇದಕ್ಕಾಗಿ ಅಪ್ಲಿಕೇಶನ್ ಸಾಫ್ಟ್ ವೇರ್, ಅರ್ಜಿ ನಮೂನೆಗಳಲ್ಲಿ ಹಲವು ಬದಲಾವಣೆಗಳನ್ನು(EPF New Rule) ಮಾಡಲಾಗಿದೆ. ಅದು ಯಾವುದು, ಹೇಗಿದೆ ಎನ್ನುವುದರ ಕುರಿತು ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

By

EPF New Rule
Koo

ವೈದ್ಯಕೀಯ ಚಿಕಿತ್ಸೆಗಾಗಿ (medical treatment) ಇನ್ನು ಮುಂದೆ ಉದ್ಯೋಗಿಗಳು ಪಿಂಚಣಿ ನಿಧಿಯಿಂದ (Pension Fund ) 1 ಲಕ್ಷ ರೂ.ವರೆಗೆ ಭಾಗಶಃ ಹಿಂಪಡೆಯಲು ಅವಕಾಶವಿದೆ. ಈ ಕುರಿತು ಏಪ್ರಿಲ್‌ನಿಂದಲೇ ಉದ್ಯೋಗಿಗಳ ಪಿಂಚಣಿ ನಿಧಿ ಸಂಸ್ಥೆಯ (EPF New Rule) ಅಪ್ಲಿಕೇಶನ್ ಸಾಫ್ಟ್‌ವೇರ್‌ನಲ್ಲಿ ಬದಲಾವಣೆಯನ್ನು ಮಾಡಲಾಗಿದ್ದು, ಇದಕ್ಕೆ ಕೇಂದ್ರ ಭವಿಷ್ಯ ನಿಧಿ ಆಯುಕ್ತರ ಒಪ್ಪಿಗೆಯೂ ದೊರೆತಿದೆ.

ಈಗಾಗಲೇ ಅಸ್ತಿತ್ವದಲ್ಲಿರುವ 68ಜೆ ಕ್ಲೈಮ್‌ಗಳ ಅರ್ಹತೆ ಮಿತಿಯನ್ನು 50,000 ರೂ. ನಿಂದ 1 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ. ಹಲವಾರು ಉದ್ದೇಶಗಳಿಗಾಗಿ ಇಪಿಎಫ್ ಭಾಗಶಃ ಹಿಂಪಡೆಯುವಿಕೆಗೆ ಫಾರ್ಮ್ 31ರ ಮೂಲಕ ಅನುಮತಿಸಲಾಗಿದೆ. ಮದುವೆ, ಸಾಲ ಮರುಪಾವತಿ, ಮನೆ ನಿರ್ಮಾಣ ಮತ್ತು ಫ್ಲಾಟ್ ಖರೀದಿಗಾಗಿ ಇಪಿಎಫ್ ನಿಂದ ಭಾಗಶಃ ಹಣ ಹಿಂಪಡೆಯಲು ಅವಕಾಶವಿದೆ.

ಪ್ಯಾರಾ 68ಜೆ ಅಡಿಯಲ್ಲಿ ಭಾಗಶಃ ಹಿಂಪಡೆಯುವಿಕೆಯ ಮಿತಿಯನ್ನು ಹೆಚ್ಚಿಸಲಾಗಿದೆ. ಪಿಂಚಣಿ ನಿಧಿ ಹೊಂದಿರುವವರು ಅಥವಾ ಅವರ ಕುಟುಂಬದ ಸದಸ್ಯರ ಅನಾರೋಗ್ಯದ ಚಿಕಿತ್ಸೆಗಾಗಿ ಉದ್ಯೋಗಿಗಳ ಭವಿಷ್ಯ ನಿಧಿ (EPF) ಖಾತೆಯಿಂದ ಮುಂಗಡವನ್ನು ಪಡೆಯಬಹುದು.

ಒಂದು ಲಕ್ಷ ರೂ.ವರೆಗೆ ಮುಂಗಡ ಪಡೆಯಲು ಅವಕಾಶವಿದ್ದು, ಪಿಂಚಣಿದಾರರ 6 ತಿಂಗಳ ಮೂಲ ವೇತನ ಮತ್ತು ಡಿಎ ಅಥವಾ ಬಡ್ಡಿಯೊಂದಿಗೆ ಉದ್ಯೋಗಿ ಪಾಲು ಯಾವುದು ಕಡಿಮೆಯೋ ಅದನ್ನು ಹಿಂಪಡೆಯಲು ಅವಕಾಶವಿದೆ.
ಇದಕ್ಕಾಗಿ ಪಿಂಚಣಿದಾರರು ಫಾರ್ಮ್ 31 ಜೊತೆಗೆ ಉದ್ಯೋಗಿ ಮತ್ತು ವೈದ್ಯರಿಂದ ಸಹಿ ಮಾಡಿದ ಪ್ರಮಾಣಪತ್ರವನ್ನು ಸಹ ಸಲ್ಲಿಸಬೇಕಾಗುತ್ತದೆ.


ಫಾರ್ಮ್ 31 ಎಂದರೇನು?

ಇಪಿಎಫ್ ಫಾರ್ಮ್ 31 ನೌಕರರ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಭಾಗಶಃ ಹಿಂಪಡೆಯಲು ಬಳಸುವ ಅರ್ಜಿ ನಮೂನೆಯಾಗಿದೆ.

ನಮೂನೆ 31ರ ಮೂಲಕ ಪ್ಯಾರಾ 68ಬಿ ಅಡಿಯಲ್ಲಿ ನಿವೇಶನವನ್ನು ಸ್ವಾಧೀನಪಡಿಸಿಕೊಳ್ಳುವುದು ಸೇರಿದಂತೆ ಮನೆ, ಫ್ಲಾಟ್ ಖರೀದಿ, ಮನೆ ನಿರ್ಮಾಣಕ್ಕಾಗಿ ಪಿಂಚಣಿ ಹಣವನ್ನು ಹಿಂಪಡೆಯಲು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

ಪ್ಯಾರಾ 68ಬಿಬಿ ಅಡಿಯಲ್ಲಿ ವಿಶೇಷ ಸಂದರ್ಭಗಳಲ್ಲಿ ಸಾಲದ ಮರುಪಾವತಿಗಾಗಿ, ಪ್ಯಾರಾ 68ಹೆಚ್ ಅಡಿಯಲ್ಲಿ ವಿಶೇಷ ಪ್ರಕರಣಗಳಲ್ಲಿ ಮುಂಗಡಗಳ ಅನುದಾನ, ಪ್ಯಾರಾ 68ಜೆ ಅಡಿಯಲ್ಲಿ ಅನಾರೋಗ್ಯಕ್ಕಾಗಿ ಮುಂಗಡ, ಪ್ಯಾರಾ 68ಕೆ ಅಡಿಯಲ್ಲಿ ಮಕ್ಕಳ ಮದುವೆ ಅಥವಾ ಮೆಟ್ರಿಕ್ಯುಲೇಷನ್ ಅನಂತರದ ಶಿಕ್ಷಣಕ್ಕಾಗಿ ಮತ್ತು ಪ್ಯಾರಾ 68ಎನ್ ಅಡಿಯಲ್ಲಿ ದೈಹಿಕವಾಗಿ ಅಶಕ್ತರಾಗಿರುವ ಸದಸ್ಯರಿಗೆ ಮುಂಗಡ ಅನುದಾನ ಮತ್ತು ಪ್ಯಾರಾ 68ಎನ್ ಎನ್ ಅಡಿಯಲ್ಲಿ ನಿವೃತ್ತಿಯ ಮೊದಲು ಒಂದು ವರ್ಷದೊಳಗೆ ಹಿಂಪಡೆಯುವ ಅವಕಾಶ ಕಲ್ಪಿಸಲಾಗಿದೆ.

ಮಿತಿಯನ್ನು ಹೆಚ್ಚಿಸಿದ ಪ್ಯಾರಾ 68ಜೆ

ಪ್ಯಾರಾ 68ಜೆ ಪಿಂಚಣಿದಾರರು ಅಥವಾ ಕುಟುಂಬದ ಸದಸ್ಯರ ಅನಾರೋಗ್ಯದ ಚಿಕಿತ್ಸೆಗಾಗಿ ಇಪಿಎಫ್ ಖಾತೆಯಿಂದ ಭಾಗಶಃ ಹಿಂಪಡೆಯಲು ಅವಕಾಶ ನೀಡಲಾಗಿದೆ.

Continue Reading
Advertisement
kolkata doctor murder case
ದೇಶ30 mins ago

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ಪ್ರಮುಖ ಸುದ್ದಿ31 mins ago

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Janhvi Kapoor
ಸಿನಿಮಾ40 mins ago

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Bengaluru Police
ಬೆಂಗಳೂರು45 mins ago

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Maharaja Trophy 2024
ಕ್ರೀಡೆ46 mins ago

Maharaja Trophy 2024: ಮಹಾರಾಜ ಟಿ20 ಕ್ರಿಕೆಟ್​ ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ; ತಂಡಗಳ ವಿವರ ಹೀಗಿದೆ

ಕರ್ನಾಟಕ1 hour ago

Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’

Independence day 2024
ದೇಶ1 hour ago

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

Bangladesh Unrest
ವಿದೇಶ1 hour ago

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Road Accident
ಬೆಂಗಳೂರು1 hour ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ! ಬೈಕ್‌, ಕಾರುಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ; ನರಳಾಡಿದ ಸವಾರರು

Kannada New Movie
ಬೆಂಗಳೂರು1 hour ago

Kannada New Movie: ‘ಸಿ’ ಸಿನಿಮಾದ ಟ್ರೈಲರ್ ಔಟ್; ಗಮನ ಸೆಳೆಯುತ್ತಿದೆ ಹೊಸಬರ ವಿಭಿನ್ನ ಪ್ರಯತ್ನ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌