ನಿಮಗೆ ನಿಜವಾಗ್ಲೂ ದುಡ್ಡು ಮಾಡಬೇಕೆಂಬ ಆಸೆ ಇದ್ಯಾ? ಹಾಗಿದ್ರೆ ವಾರೆನ್‌ ಬಫೆಟ್‌ ಅವರ ಈ ರೋಚಕ ಕಥೆ ಓದಿ ಸಾಕು! - Vistara News

ಪ್ರಮುಖ ಸುದ್ದಿ

ನಿಮಗೆ ನಿಜವಾಗ್ಲೂ ದುಡ್ಡು ಮಾಡಬೇಕೆಂಬ ಆಸೆ ಇದ್ಯಾ? ಹಾಗಿದ್ರೆ ವಾರೆನ್‌ ಬಫೆಟ್‌ ಅವರ ಈ ರೋಚಕ ಕಥೆ ಓದಿ ಸಾಕು!

ದುಡ್ಡು ಮಾಡಬೇಕು ಎಂಬ ಆಸೆ ಯಾರಿಗಿರಲ್ಲ ಹೇಳಿ. ಆದರೆ, ಹೆಚ್ಚಿನವರು ಮನಸಿನಲ್ಲಿ ಮಂಡಿಗೆ ಮೆಲ್ಲುತ್ತಲೇ ಇರುತ್ತಾರೆ. ಆದರೆ, ಅದು ಸರಿಯಾದ ದಾರಿ ಯಾವುದು? ವಾರೆನ್‌ ಬಫೆಟ್‌ ಹೇಳುತ್ತಾರೆ ಕೇಳಿ..

VISTARANEWS.COM


on

warren buffet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜೇಂದ್ರ ಭಟ್ ಕೆ. ಕಾರ್ಕಳ

ರಾಜೇಂದ್ರ ಭಟ್

‘ನನ್ನ ಜೀವನದ ಯಶಸ್ಸಿನ ಗುಟ್ಟು ಏನೆಂದರೆ Hoping for the BEST and preparing for the WORST!’
ಈ ಮಾತುಗಳನ್ನು ಹೇಳಿದ್ದು ಜಗತ್ತಿನ ನಾಲ್ಕನೇ ಅತ್ಯಂತ ಶ್ರೀಮಂತ ವ್ಯಕ್ತಿ!
ವರ್ತಮಾನದಲ್ಲಿ ಜಗತ್ತಿನ ಮಹೋನ್ನತ ಇನ್ವೆಸ್ಟರ್!‌ ಅಮೆರಿಕದ 75 ಬೃಹತ್ ಹೂಡಿಕೆ ಕಂಪೆನಿಗಳ ಸಿಇಓ!
ಆತ ಸ್ಥಾಪನೆ ಮಾಡಿದ ಕಂಪೆನಿಗಳ ಒಟ್ಟು ಮೌಲ್ಯ 9630 ಕೋಟಿ ಅಮೆರಿಕನ್ ಡಾಲರ್!
ಆತ ಸ್ಥಾಪನೆ ಮಾಡಿದ ‘ಬರ್ಕ್‌ಶೈರ್‌ ಹಾತ್ ವೇ ಕಂಪೆನಿ’ ಇಂದು ಜಗತ್ತಿನ ಅತೀ ದೊಡ್ಡ ಇನ್ವೆಸ್ಟ್ ಕಂಪೆನಿ!ಆತನೇ ಶೂನ್ಯದಿಂದ ತನ್ನ ಸಾಮ್ರಾಜ್ಯವನ್ನು ಕಟ್ಟಿದ ವಾರೆನ್ ಬಫೆಟ್!

ಆತ ಅಷ್ಟೊಂದು ದುಡ್ಡು ಮಾಡಿದ್ದು ಹೇಗೆ?

ವಾರೆನ್‌ ಬಫೆಟ್‌ ಮಗುವಾಗಿದ್ದಾಗ.

ನಾನಿಂದು ಬಹಳ ದೊಡ್ಡ ದೊಡ್ಡ ಫಿಗರ್ಸ್ ಹೇಳಿ ನಿಮ್ಮನ್ನು ಬೆಚ್ಚಿ ಬೀಳಿಸುವ ಕೆಲಸ ಮಾಡಲಾರೆ. ಯಾಕೆಂದರೆ ಆತನ ಯಶೋಗಾಥೆ ಆರಂಭ ಆಗುವುದು ಸೊನ್ನೆಯಿಂದ! ಆತ ಹೇಗೆ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿ ಆದರು? ಆತ ಇಟ್ಟಿಗೆಯ ಮೇಲೆ ಇಟ್ಟಿಗೆ ಜೋಡಿಸುತ್ತ ಉದ್ಯಮ ಸಾಮ್ರಾಜ್ಯ ಕಟ್ಟಿದ್ದು ಹೇಗೆ? ಇಷ್ಟು ಮಾತ್ರ ನಿಮಗೆ ಹೇಳುವುದು ನನ್ನ ಉದ್ದೇಶ.

೧)ಅವನು ಗಣಿತದಲ್ಲಿ ಬಹಳ ಬುದ್ಧಿವಂತ ಆಗಿದ್ದ. ಅವನ ಪ್ರೋಗ್ರೆಸ್ ಕಾರ್ಡ್‌ನಲ್ಲಿ ಶಿಕ್ಷಕರು ಬರೆಯುತ್ತಿದ್ದ ಕಾಮೆಂಟ್ Good in Maths, Fit for INVESTOR!

೨) ತನ್ನ ತಂದೆಯ ಸಣ್ಣ ಬ್ರೋಕರೇಜ್ ಅಂಗಡಿಯಲ್ಲಿ ಕೂತು ಗ್ರಾಹಕರ ಮಾತುಗಳನ್ನು ತಾಳ್ಮೆಯಿಂದ ಆಲಿಸುತ್ತಿದ್ದರು. ಬಿಡುವಿನ ವೇಳೆಯಲ್ಲಿ ಪೇಪರ್ ಮಾರುವುದು, ಬಾಟಲ್ ಸಂಗ್ರಹಿಸಿ ಮಾರುವುದು, ಕಾರ್ ವಾಶ್ ಮಾಡುವುದು…. ಮೊದಲಾದ ಸಣ್ಣ ಸಣ್ಣ ಕೆಲಸಗಳನ್ನು ಮಾಡಿ ಸ್ವಲ್ಪ ದುಡ್ಡು ಗಳಿಸುತ್ತಿದ್ದರು.

೩) ಏಳನೆಯ ತರಗತಿಯಲ್ಲಿ ಇದ್ದಾಗಲೇ ಆತ ಓದಿ ಮುಗಿಸಿದ ಪುಸ್ತಕ – One thousand ways to make one thousand dollars!

೪) ತನ್ನ ಹತ್ತನೆಯ ವಯಸ್ಸಿಗೆ ನ್ಯೂಯಾರ್ಕ್ ನಗರದ ಸ್ಟಾಕ್ ಎಕ್ಸ್‌ಚೇಂಜ್ ಪ್ರಧಾನ ಕಚೇರಿಗೆ ಹೋಗಿ ಬಂದಿದ್ದರು!

೫) ತನ್ನ ಹನ್ನೊಂದನೇ ವಯಸ್ಸಿಗೆ ಒಂದು ಕಂಪೆನಿಯ ಮೂರು ಶೇರ್‌ಗಳನ್ನು ಖರೀದಿ ಮಾಡಿದ್ದರು!

೬) ಹದಿನಾರನೆಯ ವಯಸ್ಸಿಗೆ ಆದಾಯ ತೆರಿಗೆ ಕಟ್ಟಿದ್ದರು!

೭)ಹೈಸ್ಕೂಲ್ ಓದುವಾಗ 25 ಡಾಲರ್ ವೆಚ್ಚದ ‘ಪಿನ್ ಬಾಲ್ ಮೆಷಿನ್ ‘ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು!

೮) ತನ್ನ ಮೂವತ್ತನೆ ವಯಸ್ಸಿನ ಒಳಗೆ ಕೋಟಿ ಡಾಲರ್ ಸಂಪಾದನೆಯನ್ನು ಮಾಡುತ್ತೇನೆ. ಇಲ್ಲದಿದ್ದರೆ ಎತ್ತರವಾದ ಕಟ್ಟಡದ ಮೇಲಿಂದ ಜಿಗಿದು ಖಂಡಿತವಾಗಿ ಆತ್ಮಹತ್ಯೆ ಮಾಡುತ್ತೇನೆ ಎಂದು ತನಗೆ ತಾನೇ ಸವಾಲು ಹಾಕಿದ್ದರು ಮತ್ತು ಆ ಸವಾಲನ್ನು ಗೆದ್ದು ತೋರಿಸಿದ್ದರು!

೯) ಪದವಿ ಮುಗಿಸಿ ಕಾಲೇಜಿನಿಂದ ಹೊರಬರುವಾಗ ಅವನ ಖಾತೆಯಲ್ಲಿ 9,800 ಡಾಲರ್ ಉಳಿತಾಯ ಇತ್ತು. ಅದರ ಜೊತೆ 40 ಎಕರೆ ಜಮೀನು ಕೂಡ ಖರೀದಿ ಮಾಡಿದ್ದರು!

೧೦)1955ರ ಹೊತ್ತಿಗೆ ಅವರು ತನ್ನ ‘ಬರ್ಕ್‌ಶೈರ್ ಹಾತ್ ವೇ’ ಎಂಬ ಹೆಸರಿನ ಕಂಪೆನಿಯನ್ನು ತೆರೆದರು. ಅದರ ಮೂಲಕ ತನ್ನ ಗ್ರಾಹಕರ ವಿಶ್ವಾಸವನ್ನು ಗೆದ್ದುಕೊಂಡರು. ಹೆಚ್ಚು ದುಡ್ಡು ಹೂಡಿಕೆ ಮಾಡುವಂತೆ ನಾಗರಿಕರನ್ನು ಮೋಟಿವೇಟ್ ಮಾಡಿದರು. ಕಂಪೆನಿಯ ಅರ್ಧವಾರ್ಷಿಕ ಮತ್ತು ವಾರ್ಷಿಕ ಬ್ಯಾಲೆನ್ಸ್ ಶೀಟ್‌ಗಳನ್ನು ಪಾರದರ್ಶಕವಾಗಿ ಪ್ರಕಟಿಸಿದರು. ಎಲ್ಲ ವ್ಯವಹಾರವನ್ನು ಬ್ಯಾಂಕ್ ಖಾತೆಯ ಮೂಲಕವೇ ನಡೆಸಿದರು.

೧೧) ಕಂಪೆನಿ ಸಿಇಒ ಆಗಿ ತಾನು ಅತ್ಯಂತ ಕಡಿಮೆ ಸಂಬಳ ತೆಗೆದುಕೊಳ್ಳುತ್ತಿದ್ದರು. ಇಂದಿಗೂ ಅವರ ವಾರ್ಷಿಕ ಸಂಬಳ ಒಂದು ಲಕ್ಷ ಡಾಲರ್ ಮಾತ್ರ!

೧೨) ಉದ್ಯೋಗಿಗಳಿಗೆ ಉತ್ತಮ ಸಂಬಳ ಕೊಡುತ್ತಿದ್ದರು. ಆತನ ಕಂಪನಿಯಲ್ಲಿ ಇರುವ ಒಟ್ಟು ಉದ್ಯೋಗಿಗಳ ಸಂಖ್ಯೆ ನಾಲ್ಕು ಲಕ್ಷ ! ಅವರ ಪ್ರಕಾರ ಒಳ್ಳೆಯ ಸಂಬಳ ಕೊಡುವ ಕಂಪೆನಿಗೆ PRO ಅಗತ್ಯ ಇಲ್ಲ!

೧೩) ಆತನ ಕಂಪೆನಿಯು ಆರಂಭದಿಂದಲೂ ಪ್ರತೀ ವರ್ಷ 19% ವ್ಯವಹಾರ ಬೆಳವಣಿಗೆ ಹೊಂದಿದೆ. ಯಾವ ಬಿಕ್ಕಟ್ಟು ಬಂದರೂ ಲಾಭಾಂಶ ಕಡಿಮೆ ಆಗಿಲ್ಲ!

೧೪) ಬಹಳ ಸರಳವಾಗಿ ಬದುಕುವುದನ್ನು ಅವರು ಅಭ್ಯಾಸ ಮಾಡ್ಕೊಂಡಿದ್ದಾರೆ. 1967ರಲ್ಲಿ ಖರೀದಿಸಿದ ಪುಟ್ಟದಾದ ಮನೆಯಲ್ಲಿಯೇ ಇಂದಿಗೂ ಇದ್ದಾರೆ. ಇವತ್ತಿಗೂ ಅವರ ಹತ್ತಿರ ಆಂಡ್ರಾಯ್ಡ್ ಮೊಬೈಲ್ ಇಲ್ಲ. ಲ್ಯಾಂಡ್‌ ಫೋನ್ ಮೂಲಕ ಅವರ ಹೆಚ್ಚಿನ ವ್ಯವಹಾರಗಳು ನಡೆಯುತ್ತವೆ!

೧೫) ಶೇರ್ ಮಾರ್ಕೆಟಿನ ನಾಡಿಮಿಡಿತವನ್ನು ಬಹಳ ಚೆನ್ನಾಗಿ ಅಧ್ಯಯನ ಮಾಡಿದ್ದಾರೆ. ತನ್ನ ಪ್ರತೀ ಒಬ್ಬ ಗ್ರಾಹಕರಿಗೂ ಸರಿಯಾದ ಸಲಹೆ ಕೊಡುತ್ತಾರೆ ಮತ್ತು ಅವರಿಗೆ ಒಂದಿಷ್ಟೂ ನಷ್ಟ ಆಗದ ಹಾಗೆ ನೋಡಿಕೊಳ್ಳುತ್ತಾರೆ.

೧೬) ಅವರು ಈಗ ೭೫ ಹೂಡಿಕೆ ಕಂಪೆನಿಗಳ ಸರಣಿಯನ್ನು ಹೊಂದಿದ್ದಾರೆ. ಅವುಗಳಿಗೆ ವರ್ಷಕ್ಕೊಮ್ಮೆ ಮಾತ್ರ ಭೇಟಿ ಕೊಡುತ್ತಾರೆ. ಹೋದಾಗ ಹಿಂದಿನ ವರ್ಷದ ಬ್ಯಾಲೆನ್ಸ್ ಶೀಟ್ ಓದುತ್ತಾರೆ ಮತ್ತು ಮುಂದಿನ ವರ್ಷದ ಟಾರ್ಗೆಟ್ ನೀಡಿ ಹಿಂದೆ ಬರುತ್ತಾರೆ. ಮತ್ತೆ ಆ ಕಂಪೆನಿಗೆ ಭೇಟಿಯನ್ನು ಕೊಡುವುದು ಮುಂದಿನ ವರ್ಷವೇ!

೧೭) 60 ವರ್ಷಗಳಿಂದ ಅವರ ಬಿಸಿನೆಸ್ ಪಾರ್ಟನರ್ ಚಾರ್ಲಿ ಮುಂಗರ್ ಎಂಬವರು. ವಾರೆನ್ ಬಫೆಟ್ ಹಲವು ಬಾರಿ ತನ್ನ ಹೆಂಡತಿಯರನ್ನು ಬದಲಾವಣೆ ಮಾಡಿದ್ಧಾರೆ. ಆದರೆ ಅವರ ಬಿಸಿನೆಸ್ ಪಾರ್ಟ್ನರ್ ಬದಲಾಗಿಲ್ಲ! ವಾರೆನ್ ಬಫೆಟ್ ಪ್ರಕಾರ ಪಾರ್ಟನರ್ ಬದಲಾವಣೆ ಅಂದರೆ ತಮಗೆ ಒಬ್ಬ ಸ್ಪರ್ಧಿಯನ್ನು ಹುಟ್ಟಿಸಿದ ಹಾಗೆ. ಅಂದ ಹಾಗೆ ಚಾರ್ಲಿ ಮುಂಗರ್ ವಯಸ್ಸು ಈಗ 96 ವರ್ಷ! ಬಫೆಟ್ ವಯಸ್ಸು 92 ವರ್ಷ! ಅವರ ಮಧ್ಯೆ ಇದುವರೆಗೂ ಯಾವ ಭಿನ್ನಮತ ಬಂದಿಲ್ಲ. ಏಕೆಂದರೆ ಅವರು ವರ್ಷಕ್ಕೆ ಒಂದೆರಡು ಬಾರಿ ಮಾತ್ರ ಭೇಟಿ ಆಗುತ್ತಾರೆ!

ವಾರೆನ್‌ ಬಫೆಟ್‌ ಮತ್ತು ಚಾರ್ಲಿ ಮುಂಗರ್

೧೯) ಎಂಟು ವರ್ಷಗಳ ಹಿಂದೆ ಅವರಿಗೆ ಕ್ಯಾನ್ಸರ್ ಬಂದಿತ್ತು. ಆಗ “ನನ್ನ ಬಗ್ಗೆ ಯೋಚನೆ ಮಾಡಬೇಡಿ. ನಾನು ಖಂಡಿತ ಬದುಕಿ ಬರುವೆ “ಎಂದರು. ಹಾಗೆಯೇ ಕ್ಯಾನ್ಸರನ್ನು ಗೆದ್ದು ಬಂದರು. ಕ್ಯಾನ್ಸರ್ ಕೂಡ ಅವರ ಪ್ರಬಲ ಇಚ್ಛಾಶಕ್ತಿಗೆ ಶರಣಾಯಿತು!

೨೦) ಅವರ ಪ್ರಮುಖವಾದ ಸಲಹೆ ಏನೆಂದರೆ “ಯಾರು ಹಣವನ್ನು ಪ್ರೀತಿ ಮಾಡುವರೋ ಅವರು ಮಾತ್ರ ದುಡ್ಡನ್ನು ಗಳಿಸುತ್ತಾರೆ. ಜೀವನದ ಯಾವುದೇ ಹಂತದಲ್ಲಿ ಕೂಡ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಕೆ ಮಾಡಬೇಡಿ. ನಾನು ಸಾಯುವ ದಿನ ಕೂಡ ಒಂದು ಹೊಸ ಕಂಪನಿಯನ್ನು ಆರಂಭಿಸಲು ಬಯಸುತ್ತೇನೆ!”

೨೧) ತಾನು ದಿನಕ್ಕೆ ಆರು ಗಂಟೆ ಓದುತ್ತೇನೆ ಎಂದು ಅವರು ಒಂದು ಸಂದರ್ಶನದಲ್ಲಿ ಹೇಳಿದ್ದಾರೆ. ಅವರ ದಿನಚರಿಯಲ್ಲಿ ಆರು ಗಂಟೆ ಅಧ್ಯಯನ ಇದ್ದೇ ಇರುತ್ತದೆ!

ದುಡ್ಡನ್ನು ಪ್ರೀತಿಸುವವರು ಮಾತ್ರ ದುಡ್ಡು ಮಾಡುತ್ತಾರೆ!

ಅವರ ಜೀವನದಲ್ಲಿ ಬಹಳ ಹಿಂದೆ ನಡೆದ ಒಂದು ಘಟನೆ ನಾನು ನಿಮಗೆ ಹೇಳಲೇ ಬೇಕು. ಅವರಿಗೆ ಒಬ್ಬಾಕೆ ಪ್ರೀತಿಯ ಮಗಳು. ಒಂದು ದಿನ ಅವಳು ತನ್ನ ಅಪ್ಪನ ಬಳಿ ಬಂದು “ಡ್ಯಾಡ್, ನನ್ನ ಕ್ಲಾಸ್ಮೆಟ್ಸ್‌ ಎಲ್ಲಾ ಯುರೋಪ್ ಪ್ರವಾಸಕ್ಕೆ ಹೋಗುತ್ತಿದ್ದಾರೆ. ನಾನೂ ಹೋಗಬೇಕು. ನನಗೆ 2000 ಡಾಲರ್ ಬೇಕು” ಎಂದಳು. ಬಫೆಟ್ ಅನುಮತಿ ಕೊಟ್ಟರು ಮತ್ತು ತನ್ನ ಚೆಕ್ ಪುಸ್ತಕ ಹೊರತೆಗೆದು ಅದರಲ್ಲಿ 2000 ಡಾಲರ್ ಚೆಕ್ ಬರೆದು ಅವಳಿಗೆ ಕೊಡುತ್ತಾರೆ.

ಆಗ ಅವರ ಆಪ್ತ ಸಹಾಯಕ ಹೇಳಿದರು. ” ಸರ್, ನಿಮ್ಮ ಕಪಾಟಿನಲ್ಲಿ ನಗದು ಹಣ ಇತ್ತು ಆಲ್ವಾ? ಮಗಳಿಗೆ ಕ್ಯಾಷ್ ಕೊಡಬಹುದಿತ್ತು. ಅಲ್ವಾ ಸರ್?”

ಅದಕ್ಕೆ ವಾರೆನ್ ಬಫೆಟ್ ಕೊಟ್ಟ ಉತ್ತರ ಕೇಳಿ: “ಅವಳು ನನ್ನ ಮಗಳಾಗಿ ಇರಬಹುದು. ಆದರೆ ಅವಳು ಎಲ್ಲರ ಹಾಗೆ ಬ್ಯಾಂಕಿಗೆ ಹೋಗಿ ಕ್ಯೂ ನಿಂತು ಕಷ್ಟ ಪಡಬೇಕು. ಆಗ ಅವಳಿಗೆ ದುಡ್ಡಿನ ಮಹತ್ವ ಅರ್ಥ ಆಗ್ತದೆ. ಆಗ ಅವಳು ಜಾಗ್ರತೆಯಿಂದ ಖರ್ಚು ಮಾಡುತ್ತಾಳೆ!”

ಇಂತಹ ಪಾಲಿಸಿಗಳಿಂದಲೆ ಈಗ ಅವರು ಭಾರೀ ಶ್ರೀಮಂತ ಆಗಿದ್ದಾರೆ. ಈಗ ಅಮೆರಿಕಾದಲ್ಲಿ ವಾರೆನ್ ಬಫೆಟ್ ಅತ್ಯಂತ ಜನಪ್ರಿಯ ವ್ಯಕ್ತಿ ಕೂಡ ಹೌದು. 42 ಲೇಖಕರು ಅವರ ಬಗ್ಗೆ ಪುಸ್ತಕಗಳನ್ನು ಬರೆದಿದ್ದಾರೆ!

ತನ್ನ ಸಾವಿನ ನಂತರ ತನ್ನ ಒಟ್ಟು ಆಸ್ತಿಯ 99% ಭಾಗವನ್ನು ಚಾರಿಟಿಯ ಉದ್ದೇಶಕ್ಕೆ ಬಳಸಬೇಕು ಎಂದು ಬಫೆಟ್ ತನ್ನ ವೀಲ್ ಬರೆದಿದ್ದಾರೆ ಮತ್ತು ಈಗಾಗಲೇ 24.6 ಬಿಲಿಯನ್ ಡಾಲರನಷ್ಟು ಹಣವನ್ನು ಬಿಲ್ ಗೇಟ್ಸ್ ಫೌಂಡೇಶನ್ ಸಂಸ್ಥೆಗೆ ಅವರು ದಾನ ಮಾಡಿದ್ದಾರೆ.

ಈಗ ಹೇಳಿ, ವಾರೆನ್ ಬಫೆಟ್ ಗ್ರೇಟ್ ಹೌದಾ?

(ಲೇಖಕರು ಗಣಿತ ಶಿಕ್ಷಕರು ಮತ್ತು ಜೇಸಿ ಅಂತಾರಾಷ್ಟ್ರೀಯ ತರಬೇತುದಾರರು)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Karnataka Weather: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಾರುತಗಳು (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು

Continue Reading

ಭವಿಷ್ಯ

Dina Bhavishya: ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ!

VISTARANEWS.COM


on

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಬುಧವಾರ ರಾತ್ರಿ 08:32ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರು ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಬೇಕು. ಇನ್ನು ಕುಂಭ ರಾಶಿಯವರು ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 11:43 ವಾರ: ಗುರುವಾರ
ನಕ್ಷತ್ರ: ಧನಿಷ್ಠಾ 07:30 ಯೋಗ: ವೈಧೃತಿ 20:51
ಕರಣ: ಭವ 20:51 ಅಮೃತ ಕಾಲ: ರಾತ್ರಿ 11:25 ರಿಂದ 12:56 ರವರಗೆ
ದಿನದ ವಿಶೇಷ: ಶ್ರೀರಾಮ ಪಟ್ಟಾಭಿಷೇಕ, ತುಂಬುರರ ಜಯಂತಿ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 1:30 ರಿಂದ 3:00
ಗುಳಿಕಕಾಲ: ಬೆಳಗ್ಗೆ 9:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಇಂದು ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ, ಹೀಗಾಗಿ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಸಾಧ್ಯತೆಗಳು ಇದ್ದು, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ.
ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ನಂತರ ದುಃಖಿಸುಸುವುದು ಬೇಡ. ನಿಮಗೆ ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಒತ್ತಡ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸತೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದ್ದು, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣ, ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸದೃಢ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಇರಲಿದ್ದು, ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದ್ದು, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಕೋರ್ಟ್, ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ, ಆರ್ಥಿಕವಾಗಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಮಾತಿಗೆ ವಿರಾಮ ನೀಡುವುದು ಉತ್ತಮ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ, ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಇನ್ನು ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

Girlfriend: ಭಾರತದಲ್ಲಿ ಈಗ ಗರ್ಲ್‌ಫ್ರೆಂಡ್‌ ಕೂಡ ಬಾಡಿಗೆಗೆ ಸಿಗಲಿದ್ದಾಳೆ. ಈ ಕುರಿತು ಯುವತಿಯೊಬ್ಬಳು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾಳೆ. ಯಾರು ಬೇಕಾದರೂ ಕರೆದುಕೊಂಡು ಹೋಗಿ ಎಂದಿದ್ದಾಳೆ. ಆದರೆ, ಒಂದು ದಿನದ ಮಟ್ಟಿಗೆ ಡೇಟ್‌ಗೆ ಕರೆದುಕೊಂಡು ಹೋಗುವುದು ಸೇರಿ ಹಲವು ಚಟುವಟಿಕೆಗಳಿಗೆ ಯುವತಿಯು ರೇಟ್‌ ಫಿಕ್ಸ್‌ ಮಾಡಿದ್ದಾಳೆ. ಆ ದರ ಪಟ್ಟಿ ನೋಡಿದ ಜನ ಬೆಚ್ಚಿಬಿದ್ದಿದ್ದಾರೆ.

VISTARANEWS.COM


on

Girlfriend
Koo

ನವದೆಹಲಿ: ಈಗಿನದ್ದು ಬಾಡಿಗೆ ಜಮಾನ. ಮನೆ, ಕಾರು, ಬೈಕ್‌, ಬಟ್ಟೆ, ಆಭರಣ ಸೇರಿ ಸಾವಿರಾರು ವಸ್ತುಗಳು ಬಾಡಿಗೆಗೆ ಸಿಗುತ್ತವೆ. ಯಾರಾದರೂ ಸತ್ತಾಗ ಅಳಲು ಕೂಡ ‘ಬಾಡಿಗೆ ಜನ’ರಿದ್ದಾರೆ. ಅಷ್ಟರ ಮಟ್ಟಿಗೆ ನಮ್ಮ ‘ಬಾಡಿ’ಗೆ ಅನುಕೂಲವಾಗಲು ‘ಬಾಡಿಗೆಗೆ’ ಸಿಗುತ್ತವೆ. ಆದರೆ, ದೇಶದಲ್ಲಿ ಇದುವರೆಗೆ ಬಾಡಿಗೆಗೆ ಗರ್ಲ್‌ಫ್ರೆಂಡ್‌ ಸಿಗುತ್ತಿರಲಿಲ್ಲ. ಯಾರನ್ನೂ ಪಟಾಯಿಸಲು ಆಗದೆ, ಒಬ್ಬಂಟಿಯಾಗಿ ಇರಲೂ ಆಗದೆ ಯುವಕರು ಪರದಾಡುವಂತಾಗಿದೆ. ಆದರೆ, ಇನ್ನು ಮುಂದೆ ಬಾಡಿಗೆಗೆ ಗರ್ಲ್‌ಫ್ರೆಂಡ್‌ (Girlfriend) ಕೂಡ ಸಿಗಲಿದ್ದಾಳೆ. ಹೌದು, “ನನ್ನನ್ನು ಒಂದು ದಿನದ ಮಟ್ಟಿಗೆ ನಿಮ್ಮ ಗರ್ಲ್‌ಫ್ರೆಂಡ್‌ ಆಗಿ ಬಾಡಿಗೆಗೆ ಪಡೆಯಿರಿ” ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾಳೆ. ಆಕೆಯ ವಿಡಿಯೊ ಈಗ ಭಾರಿ ವೈರಲ್‌ (Viral Video) ಆಗಿದೆ.

ಯುವತಿಯೊಬ್ಬಳು ತನ್ನ ಹಾಗೂ ದರಪಟ್ಟಿಯ ವಿಡಿಯೊ ಹಂಚಿಕೊಂಡಿದ್ದಾಳೆ. “ನಾನು ಒಂದು ದಿನದ ಮಟ್ಟಿಗೆ ನಿಮ್ಮ ಗರ್ಲ್‌ಫ್ರೆಂಡ್‌ ಆಗಿ ಬಾಡಿಗೆಗೆ ಇರಬಲ್ಲೆ. ಯಾರು ಬೇಕಾದರೂ ನನ್ನನ್ನು ಗರ್ಲ್‌ಫ್ರೆಂಡ್‌ ಆಗಿ ಬಾಡಿಗೆಗೆ ಪಡೆಯಬಹುದು. ಆ ಮೂಲಕ ಸ್ಮರಣೀಯ ದಿನವನ್ನು, ಅತ್ಯುತ್ತಮ ನೆನಪುಗಳನ್ನು ಸೃಷ್ಟಿಸಿಕೊಳ್ಳಬಹುದು” ಎಂಬುದಾಗಿ ದಿವ್ಯಾ ಗಿರಿ ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಪೋಸ್ಟ್‌ ಮಾಡಲಾಗಿದೆ. ನೂರಾರು ಜನ ಪೋಸ್ಟ್‌ಗೆ ಪ್ರತಿಕ್ರಿಯೆ ಕೂಡ ನೀಡಿದ್ದಾರೆ.

ಯುವತಿಯ ‘ದರ’ಪಟ್ಟಿ ಹೀಗಿದೆ…

ಒಂದು ದಿನದ ಮಟ್ಟಿಗೆ ಡೇಟ್‌ಗೆ ಕರೆದುಕೊಂಡು ಹೋಗುವುದು ಸೇರಿ ಹಲವು ಚಟುವಟಿಕೆಗಳಿಗೆ ಯುವತಿಯು ರೇಟ್‌ ಫಿಕ್ಸ್‌ ಮಾಡಿದ್ದಾಳೆ. ಸುಮ್ಮನೆ ಹೋಗಿ ಕಾಫಿ ಕುಡಿದುಕೊಂಡು ಬರಲು 1,500 ರೂ., ಸಿನಿಮಾ ನೋಡಿ, ಊಟ ಮಾಡಿಕೊಂಡು ಬರುವುದಾದರೆ 2 ಸಾವಿರ ರೂ. ಕುಟುಂಬಸ್ಥರನ್ನು ಭೇಟಿ ಮಾಡಿಸಲು 3 ಸಾವಿರ ರೂ., ಬೈಕ್‌ನಲ್ಲಿ ಸುತ್ತಾಡುವುದಾದರೆ 4 ಸಾವಿರ ರೂ., ಡೇಟಿಂಗ್‌ ಬಗ್ಗೆ ಸಾರ್ವಜನಿಕವಾಗಿ ಪೋಸ್ಟ್‌ ಮಾಡುವುದಾದರೆ 6 ಸಾವಿರ ರೂ., ಎರಡು ದಿನ ವೀಕೆಂಡ್‌ನಲ್ಲಿ ಸುತ್ತಾಡಲು 10 ಸಾವಿರ ರೂ. ಸೇರಿ ಹಲವು ಚಟುವಟಿಕೆಗಳಿಗೆ ವಿವಿಧ ಮೊತ್ತ ನಿಗದಿಪಡಿಸಿದ್ದಾಳೆ.

ಪೋಸ್ಟ್‌ ನೋಡಿದ ಜನ ಏನೆಂದರು?

ಯುವತಿಯ ಪೋಸ್ಟ್‌ ನೋಡಿದ ಒಂದಷ್ಟು ಜನ ಕಂಗಾಲಾಗಿದ್ದರೆ, ಇನ್ನೊಂದಿಷ್ಟು ಜನ ತಮಾಷೆಯಾಗಿ ಕಮೆಂಟ್‌ ಮಾಡಿದ್ದಾರೆ. “ನನ್ನ ಕಾಲೇಜಿನ ಅಸೈನ್‌ಮೆಂಟ್‌ ಮುಗಿಸಿಕೊಡಲು ಎಷ್ಟು ಚಾರ್ಜ್‌ ಮಾಡುತ್ತೀರಿ” ಎಂದು ಕಿಡಿಗೇಡಿಯೊಬ್ಬ ಕಮೆಂಟ್‌ ಮಾಡಿದ್ದಾನೆ. “ನನ್ನ ಮನೆಯ ಕಸ ಗುಡಿಸಿ, ಟಾಯ್ಲೆಟ್‌ ಕ್ಲೀನ್‌ ಮಾಡಿ, ಬಟ್ಟೆ ತೊಳೆದುಕೊಡಲು ಎಷ್ಟು ಬೇಕು” ಎಂದು ಇನ್ನೊಬ್ಬ ಟಾಂಗ್‌ ಕೊಟ್ಟಿದ್ದಾನೆ. “ಯುವತಿಯು ಭಾರತದಲ್ಲಿ ಅಲ್ಲ, ಜಪಾನ್‌ನಲ್ಲಿದ್ದೇನೆ” ಎಂದು ಭಾವಿಸಿದ್ದಾಳೆ ಎಂಬುದಾಗಿ ಮಗದೊಬ್ಬ ತಮಾಷೆ ಮಾಡಿದ್ದಾನೆ. “ಇಂಥ ಕೆಲಸ ಮಾಡುವ ಬದಲು ದುಡಿದು ತಿನ್ನು” ಎಂದು ಮತ್ತೊಬ್ಬ ಅಸಮಾಧಾನ ವ್ಯಕ್ತಪಡಿಸಿದ್ದಾನೆ. ಹೀಗೆ, ನೂರಾರು ಜನ ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

Continue Reading

ದೇಶ

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

CAA Certificate: ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಈಗ ಸಿಎಎ ನಿಯಮಗಳ ಪಶ್ಚಿಮ ಬಂಗಾಳ ಸೇರಿ ಹಲವು ರಾಜ್ಯಗಳಲ್ಲಿ ನೆಲೆಸಿರುವ ನಿರಾಶ್ರಿತರಿಗೆ ಕೇಂದ್ರ ಸರ್ಕಾರ ಪೌರತ್ವ ನೀಡಿದೆ.

VISTARANEWS.COM


on

CAA Certificate
Koo

ಕೋಲ್ಕೊತಾ: “ಪಶ್ಚಿಮ ಬಂಗಾಳದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಬಿಡುವುದಿಲ್ಲ” ಎಂಬುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳುತ್ತಲೇ ಇದ್ದರು. “ಸಿಎಎ ಜಾರಿಯನ್ನು ತಡೆಯಲು ಯಾವುದೇ ರಾಜ್ಯಗಳಿಗೆ ಸಾಧ್ಯವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಿರುಗೇಟು ನೀಡುತ್ತಲೇ ಇದ್ದರು. ಸಿಎಎ ಜಾರಿ ಕುರಿತು ದೀದಿ ಹಾಗೂ ಮೋದಿ ನಡುವೆ ಜಟಾಪಟಿ ನಡೆಯುತ್ತಿರುವ ಮಧ್ಯೆಯೇ ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಗೊಳಿಸಿದೆ. ಹೌದು, ಪಶ್ಚಿಮ ಬಂಗಾಳದಲ್ಲಿ ನೆಲೆಸಿರುವ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಸಿಎಎ ಅಡಿಯಲ್ಲಿ ಕೇಂದ್ರ ಸರ್ಕಾರವು ಭಾರತದ ಪೌರತ್ವ (CAA Certificate) ಪ್ರದಾನ ಮಾಡಿದೆ.

ಸಿಎಎ ಪ್ರಮಾಣಪತ್ರ ನೀಡಿರುವ ಕುರಿತು ಕೇಂದ್ರ ಗೃಹ ಸಚಿವಾಲಯವು ಮಾಹಿತಿ ನೀಡಿದೆ. “ಪಶ್ಚಿಮ ಬಂಗಾಳ, ಹರಿಯಾಣ ಹಾಗೂ ಉತ್ತರಾಖಂಡದಲ್ಲಿ ನೆಲೆಸಿರುವ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ಪ್ರಮಾಣಪತ್ರ ನೀಡಲಾಗಿದೆ. ಅರ್ಜಿದಾರರು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಪೌರತ್ವ ನೀಡಲಾಗಿದೆ” ಎಂಬುದಾಗಿ ತಿಳಿಸಿದೆ. ಇದರೊಂದಿಗೆ ಪಶ್ಚಿಮ ಬಂಗಾಳದಲ್ಲಿ ಅಧಿಕೃತವಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಂತಾಗಿದೆ.

ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು 14 ನಿರಾಶ್ರಿತರಿಗೆ ಭಾರತದ ಪೌರತ್ವ ನೀಡಲಾಗಿತ್ತು. ಪಾಕಿಸ್ತಾನದಿಂದ ಬಂದು, ದೆಹಲಿಯ ಆದರ್ಶ ನಗರದಲ್ಲಿ ವಾಸಿಸುತ್ತಿರುವ ಹಲವರಿಗೆ ಭಾರತದ ಪೌರತ್ವ ನೀಡಲಾಗಿತ್ತು. ಮಹಿಳೆಯರು ಹಾಗೂ ಮಕ್ಕಳು ಸೇರಿ ಹಲವರು ಭಾರತದ ಪೌರತ್ವ ಪ್ರಮಾಣಪತ್ರ ಹಿಡಿದಿರುವ ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿದ್ದವು. ಪೌರತ್ವ ಪಡೆದವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದರು.

ಮಮತಾ ಬ್ಯಾನರ್ಜಿ ಏನು ಹೇಳಿದ್ದರು?

ಸಿಎಎ, ಏಕರೂಪ ನಾಗರಿಕ ಸಂಹಿತೆ ಹಾಗೂ ಎನ್‌ಆರ್‌ಸಿಯನ್ನು ವಿರೋಧಿಸುತ್ತಲೇ ಬಂದಿರುವ ಮಮತಾ ಬ್ಯಾನರ್ಜಿ ಅವರು ಹಲವು ಸಂದರ್ಭಗಳಲ್ಲಿ ಸಿಎಎ ಜಾರಿಯಾಗಲು ಬಿಡುವುದಿಲ್ಲ ಎಂದಿದ್ದರು. “ಪಶ್ಚಿಮ ಬಂಗಾಳದಲ್ಲಿ ಸಿಎಎ, ಎನ್‌ಆರ್‌ಸಿ ಜಾರಿಗೊಳಿಸಲು ಬಿಡುವುದಿಲ್ಲ. ಇದಕ್ಕಾಗಿ ನಾವು ರಕ್ತಪಾತಕ್ಕೂ ಸಿದ್ಧರಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಗಲಾಟೆ ಎಬ್ಬಿಸಲು ಸಿಎಎ ಸೇರಿ ಹಲವು ವಿಷಯಗಳನ್ನು ಮುನ್ನೆಲೆಗೆ ತರುತ್ತಾರೆ. ಆದರೆ, ಪಶ್ಚಿಮ ಬಂಗಾಳದವರಾದ ನಾವು ಒಗ್ಗಟ್ಟಿನಿಂದ ಇದ್ದರೆ ಸಿಎಎ ಜಾರಿಗೊಳಿಸಲು ಆಗುವುದಿಲ್ಲ” ಎಂದು ಹೇಳಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

Continue Reading
Advertisement
Karnataka Weather
ಕರ್ನಾಟಕ37 seconds ago

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Hair Growth Tips
ಆರೋಗ್ಯ16 mins ago

Hair Growth Tips: ಕೂದಲು ಉದುರುವುದಕ್ಕೆ ಬೀಟಾ ಕ್ಯಾರೊಟಿನ್‌ ಮದ್ದು!

Dina Bhavishya
ಭವಿಷ್ಯ1 hour ago

Dina Bhavishya: ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ!

Girlfriend
ದೇಶ6 hours ago

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

CAA Certificate
ದೇಶ7 hours ago

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

Modi Meditation
ದೇಶ8 hours ago

Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

T20 World Cup 2024
ಕ್ರೀಡೆ8 hours ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

Self Harming
ಕರ್ನಾಟಕ9 hours ago

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Rudram II
ದೇಶ9 hours ago

Rudram II: ಆಗಸದಿಂದಲೇ ವೈರಿಗಳನ್ನು ನಾಶಪಡಿಸುವ ರುದ್ರಂ II ಕ್ಷಿಪಣಿ ಪ್ರಯೋಗ ಯಶಸ್ವಿ; ಶತ್ರುಗಳಿಗೆ ನಡುಕ!

Chahal-Dhanashree
ಕ್ರೀಡೆ9 hours ago

Chahal-Dhanashree: ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದ್ದಾರಾ ಚಹಲ್?; ಕುತೂಹಲ ಮೂಡಿಸಿದ ಪತ್ನಿಯ ಪೋಸ್ಟ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌