Motivational story | ಮಾಸಿ ಹೋದ ಬಟ್ಟೆ ಧರಿಸಿ ಬಂದಿದ್ದ ಅವರು ಮುಂದೆ ಮಹಾಶಿಕ್ಷಣ ಸಂಸ್ಥೆ ಕಟ್ಟಿದರು! - Vistara News

ಪ್ರಮುಖ ಸುದ್ದಿ

Motivational story | ಮಾಸಿ ಹೋದ ಬಟ್ಟೆ ಧರಿಸಿ ಬಂದಿದ್ದ ಅವರು ಮುಂದೆ ಮಹಾಶಿಕ್ಷಣ ಸಂಸ್ಥೆ ಕಟ್ಟಿದರು!

Motivational story | ಬದುಕಿನಲ್ಲಿ ಯಾರು ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ನಿದರ್ಶನವಾದ ಕಥೆ ಇದು. ಯಾರನ್ನೂ ನಿರ್ಲಕ್ಷ್ಯ ಮಾಡಬೇಡಿ ಯಾವತ್ತೂ!

VISTARANEWS.COM


on

old couple motivational story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ-motivational story
ಮಾಸಿದ ಬೂದು ಬಣ್ಣದ ದಿರಸು ತೊಟ್ಟ ಒಬ್ಬ ಮಹಿಳೆ ಮತ್ತು ಅಷ್ಟೇ ಕಳೆರಹಿತ ಬಣ್ಣದ ಬಟ್ಟೆ ತೊಟ್ಟ ಅವರ ಗಂಡ ಇಬ್ಬರೂ ಹಾರ್ವರ್ಡ್ ವಿವಿಯ ಅಧ್ಯಕ್ಷರ ಕೊಠಡಿಯ ಕಡೆಗೆ ನಡೆದುಹೋಗುತ್ತಿದ್ದರು. ಅವರಿಬ್ಬರನ್ನು ದೂರದಿಂದಲೇ ಗಮನಿಸುತ್ತಿದ್ದ ಕಾರ್ಯದರ್ಶಿ ಅವರನ್ನು ಒಳಗೆ ಬಿಟ್ಟ ಭದ್ರತಾ ಸಿಬ್ಬಂದಿಗೆ ಮನಸ್ಸಲ್ಲೇ‌ ಬಯ್ಯುತ್ತಿದ್ದ.
ನಾವು ಒಮ್ಮೆ ಪ್ರೆಸಿಡೆಂಡ್ ಅವರನ್ನು ಭೇಟಿ ಮಾಡಬಹುದಾ?- ಮಹಿಳೆ ಕೇಳಿದರು.
ಕಷ್ಟ. ಅವರು ಇಡೀ ದಿನ ತುಂಬ ಬ್ಯುಸಿ ಇರ್ತಾರೆ.. ನೀವು ಅಪಾಯಿಂಟ್ ಮೆಂಟ್ ಕೂಡಾ ಪಡೆದುಕೊಂಡಿಲ್ಲ- ಸೆಕ್ರೆಟರಿ ಹೇಳಿದ.
ಪರವಾಗಿಲ್ಲ. ನಮಗೇನೂ ಬ್ಯುಸಿ ಇಲ್ಲ.. ಕಾಯುತ್ತೇವೆ- ಎಂದರು ಮಹಿಳೆ.

ಸೆಕ್ರೆಟರಿ ಕೆಲವು ಗಂಟೆಗಳಷ್ಟು ಹೊತ್ತು ಕಾಯಿಸಿದ. ಕಾದು ಕಾದು ಸುಸ್ತಾಗಿ ಹೋಗಬಹುದು ಎಂಬುದು ಆತನ ನಿರೀಕ್ಷೆಯಾಗಿತ್ತು. ಆದರೆ ಈ ದಂಪತಿ ಯಾವ ಕಿರಿಕಿರಿಯೂ ಇಲ್ಲದೆ ಕಾಯುತ್ತಲೇ ಇದ್ದರು.

ಕೊನೆಗೆ ಕಿರಿಕಿರಿಗೆ ಒಳಗಾದ ಕಾರ್ಯದರ್ಶಿ ಅಧ್ಯಕ್ಷರ ಬಳಿಗೆ ಹೋಗಿ, ಅವರು ಒಂಥರಾ ಅಂಟಿನ ಹಾಗೆ ಮಾಡ್ತಾರೆ. ಒಂದು ನಿಮಿಷ ಮಾತಾಡಿ ಕಳಿಸಬಹುದೇ ಅಂತ ಅಧ್ಯಕ್ಷರನ್ನು ಕೇಳಿದ.

ಸಿಟ್ಟಿನಿಂದಲೇ ಒಪ್ಪಿಕೊಂಡರು ಅಧ್ಯಕ್ಷರು. ದಂಪತಿ ಒಳಬರುತ್ತಿದ್ದಂತೆಯೇ ಯಾಕೆ ಈ ತರ ಕಾಟ ಕೊಡ್ತೀರಿ. ನಂಗೆ ತುಂಬ ಕೆಲಸವಿದೆ.. ಏನು ಹೇಳಿ ನಿಮ್ಮ ಪ್ರಾಬ್ಲಮ್ ಅಂತ ಕೇಳಿದರು.

ಮಹಿಳೆ ಹೇಳಿದರು: ನಮಗೊಬ್ಬ ಮಗನಿದ್ದ. ಹಾರ್ವರ್ಡ್ ವಿವಿಯಲ್ಲಿ ಓದುತ್ತಿದ್ದ ಎನ್ನುವುದು ನಮಗೆ ಹೆಮ್ಮೆಯಾಗಿತ್ತು. ಕಳೆದ ವರ್ಷ ಅವನು ತೀರಿಕೊಂಡ. ಅವನ ನೆನಪಿನಲ್ಲಿ ಇಲ್ಲೊಂದು ಸ್ಮಾರಕ ನಿರ್ಮಿಸಲು ಅವಕಾಶ ಕೊಡಬಹುದೇ?

ಅಧ್ಯಕ್ಷರಿಗೆ ಸಿಟ್ಟು ಬಂತು. ಇಲ್ಲಿ ಕಲಿತು ಸತ್ತು ಹೋದವರಿಗೆಲ್ಲ ಸಮಾಧಿ ಕಟ್ಟಲು ಶುರು ಮಾಡಿದರೆ ಇಲ್ಲಿ ಯುನಿವರ್ಸಿಟಿ ಇರುದಿಲ್ಲ. ಗೋರಿಗಳಷ್ಟೇ ಇರ್ತವೆ ಅಂದರು.

ಆಗ ಮಹಿಳೆ: ಅಲ್ಲಲ್ಲ, ನಾವು ಸಮಾಧಿ ಕಟ್ಟಿ ಅನ್ತಿಲ್ಲ. ಮಗನ ಹೆಸರಲ್ಲಿ ಒಂದು ಕಟ್ಟಡ ಕಟ್ಟಿಸಬಹುದಲ್ವಾ?

ಆಗ ಅಧ್ಯಕ್ಷರು ಇಬ್ಬರೂ ವ್ಯಕ್ತಿಗಳನ್ನು ಮೇಲಿಂದ ಕೆಳಗೆ ನೋಡಿ ನಕ್ಕರು. ಕಟ್ಟಡ ಕಟ್ಟೋದು ಅಂದ್ರೆ ಮಕ್ಕಳಾಟ ಅಂದ್ಕೊಂಡಿದೀರಾ? ಮಗನನ್ನು ಕಳೆದುಕೊಂಡು ಏನೋ‌ ಭಾವುಕರಾಗಿ ಮಾತಾಡ್ತಾ ಇದೀರಿ.. ಇಲ್ಲಿರುವ ಕಟ್ಟಡಗಳು, ವಿವಿಯ ಒಟ್ಟು ಮೌಲ್ಯ ಎಷ್ಟು ಗೊತ್ತಾ… 1000 ಕೋಟಿ ರೂ. ಸಂಸ್ಥೆಗೆ ನೀವು‌ ಕಟ್ಟಡ ಕಟ್ಟಿ ಕೊಡುವ ಅವಶ್ಯಕತೆಯೂ ಇಲ್ಲ. ನಿಮ್ಮಿಂದ ಅದು ಸಾಧ್ಯವೂ ಇಲ್ಲ ಅಂದರು.

ಆ ಮಾತು ಕೇಳಿದ ಮಹಿಳೆ ಸ್ತಬ್ಧರಾದರು.. ಗಂಡನ ಕಡೆ ನೋಡಿದರು. ಗಂಡ ಹೇಳಿದರು: ಏಳು ಕಣೆ ಹೋಗೋಣ.

ಅಧ್ಯಕ್ಷರಿಗೆ ಪೀಡೆ ತೊಲಗಿತು ಅಂತ ಅನಿಸಿತು. ದಂಪತಿ ಎದ್ದು ಹೊರಟರು.. ಹೆಂಡತಿ ಹೇಳಿದರು: ಯುನಿವರ್ಸಿಟಿ ಸ್ಥಾಪನೆಗೆ ಬೇಕಾಗೋದು ಬರೀ ಸಾವಿರ ಕೋಟಿಯಂತೇರಿ. ಹಾಗಿದ್ದರೆ ನಾವೇ ಒಂದು ಹೊಸ ವಿವಿ ಕಟ್ಟಬಹುದಲ್ವಾ?

ಈ ಮಾತು ಕೇಳಿ ಅಧ್ಯಕ್ಷರು ಇವರು ಯಾರೋ ಹುಚ್ಚರು ಅಂದುಕೊಂಡರು.

ಮುಂದಿನ ಕೆಲವೇ ವರ್ಷದಲ್ಲಿ ಕ್ಯಾಲಿಫೋರ್ನಿಯಾದಲ್ಲಿ ಭವ್ಯ ಯುನಿವರ್ಸಿಟಿಯೊಂದು ತಲೆ ಎತ್ತಿತು. ಅದರ ಹೆಸರು: ಸ್ಟ್ಯಾನ್ ಫೋರ್ಡ್ ಯುನಿವರ್ಸಿಟಿ.
ಸ್ಟ್ಯಾನ್ ಫೋರ್ಡ್ ಎಂಬ ಮಗನ ನೆನಪಿನಲ್ಲಿ ವಿವಿ ನಿರ್ಮಿಸಿದ ಆ ಹೆತ್ತವರ ಹೆಸರು: ಮಿಸ್ಟರ್ ಎಂಡ್ ಮಿಸೆಸ್ ಸ್ಟ್ಯಾನ್ ಫೋರ್ಡ್.

(ಗಮನಿಸಿ: ಇದು ಸ್ಟ್ಯಾನ್ ಫೋರ್ಡ್ ವಿವಿ ಸ್ಥಾಪನೆಯ ಹಿಂದಿನ ನಿಜ‌ ಕಥೆಯಲ್ಲ. ಯಾರನ್ನೂ ಕಡೆಗಣಿಸಬೇಡಿ
ಎಂದು ಹೇಳಲು ಹುಟ್ಟಿಕೊಂಡಿರುವ ಕಾಲ್ಪನಿಕ‌ ಕಥೆಯಷ್ಟೆ. ಗವರ್ನರ್ ಆಗಿದ್ದ ಸ್ಟ್ಯಾನ್ ಫೋರ್ಡ್ ಅವರು 15ನೇ ವರ್ಷದಲ್ಲಿ ಟೈಫಾಯ್ಡ್ ನಿಂದ ಮರಣಿಸಿದ ಮಗನ ನೆನಪಿನಲ್ಲಿ ತಾವಾಗಿಯೇ ಈ ವಿವಿ ಸ್ಥಾಪಿಸಿದರು ಎನ್ನುವುದು ವಾಸ್ತವ.)

ಇದನ್ನೂ ಓದಿ | Motivational story | ಅಪ್ಪ-ಅಮ್ಮ ಏನೂ ಮಾಡ್ಲಿಲ್ಲ ಅಂತಿದ್ದ ಅವನಿಗೆ ಪೆನ್ನು ಮಾರುವ ಹುಡುಗ ಕಲಿಸಿದ ಚಂದದ ಪಾಠ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

Puja Khedkar: ನಕಲಿ ದಾಖಲೆ ಸೃಷ್ಟಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಕೇಡರ್‌ನ ಟ್ರೈನಿ ಐಎಎಸ್‌ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ. ಹಾಗೆಯೇ, ಭವಿಷ್ಯದಲ್ಲಿ ಯಾವುದೇ ಪರೀಕ್ಷೆಯನ್ನು ಬರೆಯುವುದರಿಂದ ಅವರನ್ನು ನಿಷೇಧಿಸಿ ಕೇಂದ್ರ ಲೋಕಸೇವಾ ಆಯೋಗವು ಆದೇಶ ಹೊರಡಿಸಿದೆ.

VISTARANEWS.COM


on

Pooja Khedkar
Koo

ನವದೆಹಲಿ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಅವರ ಒಂದೊಂದೇ ಕಳ್ಳಾಟಗಳು ಬಯಲಾದ ಬೆನ್ನಲ್ಲೇ ಪೂಜಾ ಖೇಡ್ಕರ್‌ ವಿರುದ್ಧ ಕೇಂದ್ರ ಲೋಕಸೇವಾ ಆಯೋಗವು (UPSC) ಕಠಿಣ ಕ್ರಮ ತೆಗೆದುಕೊಂಡಿದೆ. ನಕಲಿ ದಾಖಲೆ ಸೃಷ್ಟಿಸಿದ ಹಿನ್ನೆಲೆಯಲ್ಲಿ ಪೂಜಾ ಖೇಡ್ಕರ್‌ ಅವರನ್ನು ಟ್ರೈನಿ ಐಎಎಸ್‌ ಅಧಿಕಾರಿ ಹುದ್ದೆಯಿಂದ ಯುಪಿಎಸ್‌ಸಿ ವಜಾಗೊಳಿಸಿದ್ದು, ಭವಿಷ್ಯದಲ್ಲಿ ಯುಪಿಎಸ್‌ಸಿ ಕೈಗೊಳ್ಳುವ ಯಾವುದೇ ಪರೀಕ್ಷೆಯಿಂದ ಶಾಶ್ವತವಾಗಿ ನಿಷೇಧಿಸಿದೆ.

ಪೂಜಾ ಖೇಡ್ಕರ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆಗಾಗಿ ಯುಪಿಎಸ್‌ಸಿಯು ಆಯೋಗ ಒಂದನ್ನು ರಚಿಸಿತ್ತು. ಆಯೋಗದ ವರದಿಯಲ್ಲಿ ಪೂಜಾ ಖೇಡ್ಕರ್‌ ತಪ್ಪೆಸಗಿದ್ದು, ನಕಲಿ ದಾಖಲೆ ಸೃಷ್ಟಿಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಯುಪಿಎಸ್‌ಸಿ ಕಠಿಣ ಕ್ರಮ ತೆಗೆದುಕೊಂಡಿದೆ. ಆ ಮೂಲಕ ಪರೀಕ್ಷೆಯಲ್ಲಿ ಅಕ್ರಮ ಎಸಗುವವರಿಗೆ ಕಠಿಣ ಸಂದೇಶ ರವಾನಿಸಿದೆ.

ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸಿದ್ದರು. ಈಗ ಅವರ ವಿರುದ್ಧದ ಆರೋಪಗಲು ಸಾಬೀತಾದ ಹಿನ್ನೆಲೆಯಲ್ಲಿ ಯುಪಿಎಸ್‌ಸಿಯು ಮಹತ್ವದ ಕ್ರಮ ತೆಗೆದುಕೊಂಡಿದೆ.

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿದ್ದ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದರು. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿತ್ತು. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿತ್ತು.

ಇದನ್ನೂ ಓದಿ: Pooja Khedkar: IAS ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲಿಸಿದ UPSC

Continue Reading

ಪ್ರಮುಖ ಸುದ್ದಿ

Krishna Byre Gowda: ರಾಜ್ಯಪಾಲರ ಅಧಿಕಾರ ದುರುಪಯೋಗಪಡಿಸಿಕೊಂಡರೆ ಕೋರ್ಟ್‌ಗೆ ಹೋಗುತ್ತೇವೆ: ಕೃಷ್ಣಭೈರೇಗೌಡ

Krishna Byre Gowda: ಬಿಜೆಪಿಯವರು ಇವತ್ತು ಹತಾಶರಾಗಿದ್ದಾರೆ. ಜೆಡಿಎಸ್‌ನವರು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಜೆಡಿಎಸ್‌‌ನ ಒಬ್ಬರು, ಬಿಜೆಪಿಯ ಒಬ್ಬರು ದೆಹಲಿಯಲ್ಲಿ ಕುಳಿತುಕೊಂಡು ಕರ್ನಾಟಕಕ್ಕೆ ನ್ಯಾಯ ಕೊಡಿಸುವುದನ್ನು ಬಿಟ್ಟು ನಮ್ಮ ಸರ್ಕಾರ ಬೀಳಿಸಲು ಹೊಂಚು ಹಾಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

VISTARANEWS.COM


on

krishna byre gowda
Koo

ಹಾಸನ: ಕನ್ನಡಿಗರಿಂದ ಆಯ್ಕೆ ಆಗಿರುವ ಸರ್ಕಾರವನ್ನ ಬುಡಮೇಲು ಮಾಡಲು ಬಿಜೆಪಿ- ಜೆಡಿಎಸ್ (BJP- JDS) ಇಬ್ಬರೂ ಸೇರಿ ಏನಾದರೂ ಮಾಡಿ ಯತ್ನಿಸುತ್ತಿದ್ದಾರೆ. ಅದಕ್ಕಾಗಿ ರಾಜಭವನವನ್ನು (Rajbhavan) ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯಪಾಲರ (Governor) ಕಚೇರಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಸರ್ಕಾರವನ್ನು ಬುಡಮೇಲು ಮಾಡಲು ಹೋದರೆ ನಾವು ಸುಪ್ರೀಂ ಕೋರ್ಟ್‌ಗೆ (Supreme Court) ಹೋಗಿ ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Revenue Minister Krishna Byre Gowda) ಎಚ್ಚರಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲುವಿನಲ್ಲಿ ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಬಗ್ಗೆ ಮಾತನಾಡಿದರು. ಕೇಂದ್ರ ಸರಕಾರ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವರು ಕಿಡಿ ಕಾರಿದರು.

ಬಿಜೆಪಿ-ಜೆಡಿಎಸ್ ಇಬ್ಬರು ಸೇರಿ ಏನಾದರೂ ಮಾಡಿ ಕನ್ನಡಿಗರಿಂದ ಆಯ್ಕೆ ಆಗಿರುವ ಸರ್ಕಾರವನ್ನ ಬುಡಮೇಲು ಮಾಡಲು ಯತ್ನಿಸುತ್ತಿದ್ದಾರೆ. ಚುನಾಯಿತ ಸರ್ಕಾರವನ್ನು ಸಂವಿಧಾನ ವಿರುದ್ಧವಾಗಿ ಬುಡಮೇಲು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಡಿ ಬಿಜೆಪಿಯ ಪೊಲಿಟಿಕಲ್ ವಿಂಗ್ ಆಗಿದೆ. ಇಡಿಯವರು ಬಂದು ತಪ್ಪು ಮಾಡಿರುವವರಿಗೆ ರಕ್ಷಣೆ ಕೊಡುತ್ತೇವೆ. ನೀವು ಸಿಎಂ ಮೇಲೆ ಹೇಳಿಕೆ ಕೊಡಿ ಅಂತಾರೆ. ತಪ್ಪು ಮಾಡಿರುವವರನ್ನು ರಕ್ಷಣೆ ಮಾಡಿ ಹಗರಣ ಮುಚ್ಚಿ ಹಾಕಿ ಸಿಎಂ ತಲೆಗೆ ಕಟ್ಟಬೇಕು ಎನ್ನುವುದು ಅವರ ಉದ್ದೇಶ ಎಂದು ಕೃಷ್ಣಭೈರೇಗೌಡ ಹೇಳಿದ್ದಾರೆ.

ಹಗರಣದ ಹಿಂದೆ ಇರುವವರನ್ನು ಪತ್ತೆ ಮಾಡಿ ಶಿಕ್ಷೆ ಕೊಡಲು ಅವರು ಬಂದಿಲ್ಲ. ಈ ಹಗರಣವನ್ನು ಉಪಯೋಗಿಸಿಕೊಂಡು ನಮ್ಮ ರಾಜ್ಯದಲ್ಲಿರುವ ಸರ್ಕಾರವನ್ನು ಬುಡಮೇಲು ಮಾಡಬೇಕು ಎನ್ನುವುದು ಅವರ ಉದ್ದೇಶ. ಬೇರೆ ರಾಜ್ಯಗಳಲ್ಲೂ ಇದೇ ರೀತಿ ಇಡಿ ಉಪಯೋಗಿಸಿಕೊಂಡು ಸರ್ಕಾರ ಅಸ್ಥಿರಗೊಳಿಸಿದ್ದಾರೆ. ಕರ್ನಾಟಕದಲ್ಲೂ ತನಿಖಾ ಸಂಸ್ಥೆಯನ್ನು ಉಪಯೋಗಿಸಿಕೊಂಡು ನಮ್ಮ ಸರ್ಕಾರವನ್ನು ಬುಡಮೇಲು ಮಾಡಲು ಕುತಂತ್ರದಿಂದ ಹೊರಟಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಚುನಾವಣೆ ಮುಗಿದ ಮೇಲೆ ಏನಾದರೂ ಮಾಡಿ ಸರ್ಕಾರ ಬೀಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ಕಲ್ಲೇಶ್ ಎನ್ನುವ ಅಧಿಕಾರಿಗೆ ಸಿಎಂ ವಿರುದ್ಧ ಹೇಳಿಕೆ ಕೊಡು, ಕೊಡಲಿಲ್ಲ ಎಂದರೆ ಏಳು ವರ್ಷ ಜೈಲಿಗೆ ಹಾಕ್ತಿವಿ ಎಂದು ಹೆದರಿಸುತ್ತಿದ್ದಾರೆ. ನೀನು ಹೇಳಿಕೆ ಕೊಟ್ಟರೆ ನಾವೇ ರಕ್ಷಣೆ ಕೊಡುತ್ತೇವೆ ಎಂದು ಬಲವಂತದ ಮೇಲೆ ಹೇಳಿಕೆಗಳನ್ನು ಕೊಡಿಸುವ ಮೂಲಕ ಸರ್ಕಾರವನ್ನು ತಪ್ಪು ದಾರಿಗೆ ಎಳೆದು ಸರ್ಕಾರವನ್ನ ಬುಡಮೇಲು ಮಾಡಲು ಹೊರಟಿದ್ದಾರೆ. ಇಡಿ ಅಧಿಕಾರಿ ಮೇಲೆ ಎಫ್‌ಐಆರ್ ಕೂಡ ಆಗಿದೆ. ಅದನ್ನು ಅಲ್ಲಿಗೆ ಬಿಟ್ಟು ಈಗ ರಾಜಭವನವನ್ನು ದುರುಪಯೋಗ ಪಡಿಸಿಕೊಳ್ಳಲು ಹೊರಟಿದ್ದಾರೆ ಎಂದು ಅವರು ಟೀಕಿಸಿದರು.

ರಾಜ್ಯಪಾಲರಿಗೆ ಅರ್ಜಿಗಳನ್ನು ಕೊಟ್ಟು ರಾಜ್ಯಪಾಲರಿಂದ ಸರ್ಕಾರಕ್ಕೆ ಪತ್ರಗಳನ್ನು ಬರೆಸಿ ಏನಾದರೂ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ. ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಬುಡಮೇಲು ಮಾಡಲು ಹೊರಟಿದ್ದಾರೆ. ನಮಗೂ ಸಂವಿಧಾನ ಇದೆ. ಈ ದೇಶದಲ್ಲಿ ಜನ ಸಂವಿಧಾನದ‌ ಪರವಾಗಿ ಮತ ಕೊಟ್ಟಿದ್ದಾರೆ. ಸಂವಿಧಾನದ ರಕ್ಷಣೆ ನಮಗೆ ಇದೆ ಎಂದವರು ಹೇಳಿದ್ದಾರೆ.

ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಸರ್ಕಾರವನ್ನು ಬುಡಮೇಲು ಮಾಡಲು ಹೋದರೆ ನಾವು ಕೋರ್ಟ್‌ಗೆ ಹೋಗಿ ಹೋರಾಟ ಮಾಡುತ್ತೇವೆ. ಹಲವು ರಾಜ್ಯಗಳಲ್ಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲ ಪ್ರಜಾಪ್ರಭುತ್ವ ಉಳಿಸಲು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಬಿಜೆಪಿಯವರು ಇವತ್ತು ಹತಾಶರಾಗಿದ್ದಾರೆ. ಜೆಡಿಎಸ್‌ನವರು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಜೆಡಿಎಸ್‌‌ನ ಒಬ್ಬರು, ಬಿಜೆಪಿಯ ಒಬ್ಬರು ದೆಹಲಿಯಲ್ಲಿ ಕುಳಿತುಕೊಂಡು ಕರ್ನಾಟಕಕ್ಕೆ ನ್ಯಾಯ ಕೊಡಿಸುವುದನ್ನು ಬಿಟ್ಟು ನಮ್ಮ ಸರ್ಕಾರ ಬೀಳಿಸಲು ಹೊಂಚು ಹಾಕುತ್ತಿದ್ದಾರೆ. ಕೇಂದ್ರದಲ್ಲಿ ಮಂತ್ರಿಯಾಗಿರುವವರು ಮೇಕೆದಾಟು, ಕಳಸಾಬಂಡೂರಿ ಯೋಜನೆಗೆ ದುಡ್ಡು ಕೊಡಿಸುವುದು ಬಿಟ್ಟು ಅಲ್ಲಿ ಕುಳಿತುಕೊಂಡು ನಮ್ಮ ಸರ್ಕಾರ ಬೀಳಿಸುವುದು ಹೇಗೆಂದು ಸ್ಕೆಚ್ ಹಾಕುತ್ತಿದ್ದಾರೆ ಎಂದು ಅವರು ಟೀಕಿಸಿದರು.

ನಾವು ಕೈಕಟ್ಟಿ ಕುಳಿತು ಕೊಳ್ಳುವುದಿಲ್ಲ, ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಎಲ್ಲಾ ಸವಾಲುಗಳನ್ನು ಎದುರಿಸಲು ತಯಾರಿದ್ದೇವೆ. ಅವರು ಏನು ಮಾಡ್ತಾರೆ ಮಾಡಲಿ. ಈಗ ಅವರವರಲ್ಲೇ ಜಗಳ ಶುರುವಾಗಿದೆ. ಪ್ರಜಾಪ್ರಭುತ್ವ ಉಳಿಯಬೇಕು ಅದಕ್ಕಾಗಿ ಬೀದಿ ಹೋರಾಟ ಹಾಗೂ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಈ ಸರ್ಕಾರ ಅಲ್ಲಾಡಿಸಬೇಕು ಎಂದು ಹಗಲುಗನಸು ಕಾಣುತ್ತಿದ್ದಾರೆ. ಇಡಿ ಆಯ್ತು, ಈಗ ರಾಜ್ಯಪಾಲರ ಕಚೇರಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಜನಗಳ ದೃಷ್ಟಿಯಲ್ಲಿ ಒಂದು ಕಲ್ಪನೆ ಕ್ರಿಯೇಟ್ ಮಾಡಲು ಎಲ್ಲಾ ಪಿತೂರಿ ಮಾಡುತ್ತಿದ್ದಾರೆ ಎಂದರು.

ನಾವು ಆಯೋಗ ರಚನೆ ಮಾಡಿದ್ದೇವೆ. ಅವರು ತನಿಖೆ ಮಾಡಲಿ. ಮೈಸೂರು ಮುಡಾದಲ್ಲಿ ಹೆಚ್ಚು ಸೈಟ್‌ಗಳನ್ನು ತೆಗೆದುಕೊಂಡಿರುವುದು ಬಿಜೆಪಿ, ಜೆಡಿಎಸ್‌ನವರು. ಸಾವಿರಾರು ಸೈಟ್‌ಗಳು, ಸಾವಿರಾರು ಬದಲಿ ಜಮೀನುಗಳನ್ನು ತೆಗೆದುಕೊಂಡಿದ್ದಾರೆ. ಅವರೇ ಮಾಡಬಾರದ್ದು ಮಾಡಿ ನಮ್ಮ ಕಡೆಗೆ ಬೆರಳು ತೋರಿಸುತ್ತಿದ್ದಾರೆ. ಅವರ ಉದ್ದೇಶ ಯಾವ ಹಗರಣವೂ ಅಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಡುವುದೂ ಅಲ್ಲ. ಅವರಿಗೆ ಅಧಿಕಾರದ ದಾಹ. ಬಡವರ ಪರವಾಗಿ ಇರುವ ಕಾಂಗ್ರೆಸ್ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಏನಾದರೂ ಮಾಡಿ ಬಡವರ ಪರ ಇರುವ ಸರ್ಕಾರವನ್ನು ಬುಡಮೇಲು ಮಾಡಲು ಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ವಾಲ್ಮೀಕಿ ಹಗರಣ ಮುಚ್ಚಿ ಹಾಕಿದರು ಎಂದು ಯತ್ನಾಳ್ ಅವರು ಹೇಳಿದ್ದಾರೆ. ಇನ್ನೊಂದು ಕಡೆ ಪಾದಯಾತ್ರೆ ಬೇಕಾಗಿಲ್ಲ ಎಂದು ಜೆಡಿಎಸ್‌ನವರು ಹೇಳುತ್ತಿದ್ದಾರೆ. ಏಕೆಂದರೆ ಅವರೇ ಹೆಚ್ಚು ಫಲಾನುಭವಿಗಳು. ತನಿಖೆ ಮಾಡಿದರೆ ಹೆಚ್ಚು ಹೊರಗೆ ಬರುವುದು ಅವರದ್ದೇ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಲು ನಮ್ಮ ಸರ್ಕಾರ ದೃಢವಾಗಿದೆ. ಆ ದಿಕ್ಕಿನಲ್ಲಿ ನಾವು ಕೆಲಸವನ್ನು ಮಾಡ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: Wayanad Landslide: ಭೂಕುಸಿತದ ಬಗ್ಗೆ ಒಂದು ವಾರ ಮೊದಲೇ ನೀಡಲಾಗಿತ್ತಾ ಎಚ್ಚರಿಕೆ? ಕೇಂದ್ರದ ಸೂಚನೆ ನಿರ್ಲಕ್ಷಿಸಿತ್ತಾ ಕೇರಳ ಸರ್ಕಾರ?

Continue Reading

ದೇಶ

Anurag Thakur: ಅನುರಾಗ್‌ ಠಾಕೂರ್‌ ‘ಜಾತಿ’ ಅಸ್ತ್ರಕ್ಕೆ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಪ್ರತ್ಯಸ್ತ್ರ!

Anurag Thakur: ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಅವರು ರಾಹುಲ್‌ ಗಾಂಧಿ ವಿರುದ್ಧ ಜಾತಿ ಅಸ್ತ್ರ ಪ್ರಯೋಗಿಸಿದ್ದಾರೆ. ಅವರ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ಹಕ್ಕುಚ್ಯುತಿ ಮಂಡಿಸಿದೆ.

VISTARANEWS.COM


on

Anurag Thakur
Koo

ನವದೆಹಲಿ: ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ (Anurag Thakur) ಅವರು ರಾಹುಲ್‌ ಗಾಂಧಿ (Rahul Gandhi) ಅವರಿಗೆ ತಮ್ಮ ಜಾತಿ ಎಂಬುದೇ ಗೊತ್ತಿಲ್ಲ ಎಂಬುದಾಗಿ ಲೋಕಸಭೆಯಲ್ಲಿ ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಅನುರಾಗ್‌ ಠಾಕೂರ್‌ ವಿರುದ್ಧ ಪ್ರತಿಪಕ್ಷಗಳ ನಾಯಕರು ಮುಗಿಬಿದ್ದಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ಸಂಸದ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ಹಕ್ಕುಚ್ಯುತಿ (Privilege Motion) ಮಂಡಿಸಿದ್ದಾರೆ. ಸದನದಲ್ಲಿ ಕಾಂಗ್ರೆಸ್‌ ಸಂಸದರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಹಕ್ಕುಚ್ಯುತಿ ಮಂಡಿಸಿದ್ದಾರೆ.

ನರೇಂದ್ರ ಮೋದಿ ಅವರು ಅನುರಾಗ್‌ ಠಾಕೂರ್‌ ಅವರು ಸಂಸತ್‌ನಲ್ಲಿ ಮಾಡಿದ ಭಾಷಣಕ್ಕೆ ಮೆಚ್ಚುಗೆ ಸೂಚಿಸಿದ್ದರು. ಇಂಡಿಯಾ ಒಕ್ಕೂಟದ ಮುಖವಾಡವನ್ನು ಅನುರಾಗ್‌ ಠಾಕೂರ್‌ ಅವರು ಹೇಗೆ ಬಯಲಿಗೆಳೆದಿದ್ದಾರೆ ನೋಡಿ ಎಂದು ಕರೆ ನೀಡಿದ್ದ ಮೋದಿ, ಅನುರಾಗ್‌ ಠಾಕೂರ್‌ ಅವರ ಭಾಷಣದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹಾಗಾಗಿ, ಪ್ರಧಾನಿ ವಿರುದ್ಧ ಕಾಂಗ್ರೆಸ್‌ ಹಕ್ಕುಚ್ಯುತಿ ಮಂಡಿಸಿದೆ.

ಹಕ್ಕುಚ್ಯುತಿ ಎಂದರೇನು?

ದೇಶದ ಸಂಸದರು, ರಾಜ್ಯಸಭೆ ಸದಸ್ಯರು, ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರ ಹಕ್ಕುಗಳಿಗೆ ಧಕ್ಕೆಯುಂಟಾದಾಗ ಮಂಡಿಸುವ ವಿಶೇಷ ಅಧಿಕಾರವೇ ಹಕ್ಕುಚ್ಯುತಿಯಾಗಿದೆ. ಇದನ್ನು ವೈಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ಬಳಸಬಹುದಾಗಿದೆ. ಹಕ್ಕುಚ್ಯುತಿ ಮಂಡಿಸಿದ ಬಳಿಕ ಅದು ಸಾಬೀತಾದರೆ ಸಂಸತ್ತು ಹಾಗೂ ಶಾಸನಸಭೆಯ ಕಾನೂನಿನ ಅನ್ವಯ ಕ್ರಮ ತೆಗೆದುಕೊಳ್ಳುವ ಅವಕಾಶವಿದೆ.

ಅನುರಾಗ್‌ ಠಾಕೂರ್‌ ಹೇಳಿದ್ದೇನು?

ಸಂಸತ್‌ನಲ್ಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದ್ದರು. ಇದಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದ್ದರು. “ಬೇರೆಯವರ ಜಾತಿಯನ್ನು ಕೇಳುವುದು ಎಷ್ಟು ಸರಿ” ಎಂದು ಹೇಳಿದ್ದರು.

ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿದರು. “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ, ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದರು. “ಅನುರಾಗ್‌ ಠಾಕೂರ್‌ ಅವರು ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಆದರೆ, ನಾನು ಅವರು ಕ್ಷಮೆ ಕೇಳಿ ಎಂಬುದಾಗಿ ಆಗ್ರಹಿಸುವುದಿಲ್ಲ. ಎಷ್ಟು ಬೇಕಾದರೂ ಅವಮಾನ ಮಾಡಲಿ” ಎಂದ್ದಿದ್ದರು.

ಸಂಸತ್‌ನಲ್ಲಿ ಸೋಮವಾರ (ಜುಲೈ 29) ರಾಹುಲ್‌ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು. ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದನ್ನೂ ಓದಿ: Anurag Thakur: ಇಂಡಿಯಾ ಕೂಟದ ಕೊಳಕು ರಾಜಕಾರಣ ತೆರೆದಿಟ್ಟ ಅನುರಾಗ್ ಠಾಕೂರ್; ಈ ವಿಡಿಯೊ ತಪ್ಪದೇ ನೋಡಿ ಎಂದ ಮೋದಿ!

Continue Reading

ಕ್ರೀಡೆ

Paris Olympic: ಪ್ರೀ ಕ್ವಾರ್ಟರ್​ಗೆ ಲಗ್ಗೆಯಿಟ್ಟ ಲಕ್ಷ್ಯ ಸೇನ್; ಜೊನಾಥನ್​ ಕ್ರಿಸ್ಟಿಗೆ ಆಘಾತಕಾರಿ ಸೋಲು

Paris Olympic: ಲಕ್ಷ್ಯ ಸೇನ್ ಅವರು ನಾಕೌಟ್​ ಹಂತಕ್ಕೇರುವ ಮೂಲಕ 2016ರ ರಿಯೊ ಗೇಮ್ಸ್‌ನ ಕಿಡಂಬಿ ಶ್ರೀಕಾಂತ್ ಬಳಿಕ ಒಲಿಂಪಿಕ್ಸ್‌ನಲ್ಲಿ ನಾಕೌಟ್ ಹಂತಕ್ಕೆ ಪ್ರವೇಶಿಸಿದ ಮೊದಲ ಭಾರತೀಯ ಪುರುಷ ಸಿಂಗಲ್ಸ್ ಶಟ್ಲರ್​ ಎನಿಸಿಕೊಂಡರು.

VISTARANEWS.COM


on

Paris Olympic
Koo

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympic) ಲಕ್ಷ್ಯ ಸೇನ್(Lakshya Sen) ಅವರ ಗೆಲುವಿನ ಓಟ ಮುಂದುವರಿದಿದೆ. ಬುಧವಾರ ನಡೆದ ‘ಎಲ್’​ ಗುಂಪಿನ ಪುರುಷರ ಸಿಂಗಲ್ಸ್​ ವಿಭಾಗದ ಅಂತಿಮ ಪಂದ್ಯದಲ್ಲಿ ವಿಶ್ವ ನಂ.3 ಇಂಡೋನೇಷ್ಯಾದ ಜೊನಾಥನ್​ ಕ್ರಿಸ್ಟಿ(Jonatan Christie) ವಿರುದ್ಧ ​21-18, 21-12 ನೇರ ಗೇಮ್​ಗಳಿಂದ ಗೆದ್ದು ಪ್ರೀ ಕ್ವಾರ್ಟರ್​ ಫೈನಲ್​ ಹಂತಕ್ಕೆ ಪ್ರವೇಶಿಸಿದ್ದಾರೆ. ಇದೇ ವೇಳೆ ಲಕ್ಷ್ಯ ಸೇನ್​ 8 ವರ್ಷಗಳ ನಂತರ ಒಲಿಂಪಿಕ್ಸ್ ನಾಕೌಟ್‌ಗೆ ಅರ್ಹತೆ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

22 ವರ್ಷದ ಲಕ್ಷ್ಯ ಸೇನ್ ಮೊದಲ ಗೇಮ್​ನಲ್ಲಿ 2-8 ಅಂಕಗಳ ಹಿನ್ನಡೆ ಸಾಧಿಸಿದರೂ ಕೂಡ ತಕ್ಷಣ ಎಚ್ಚೆತ್ತುಕೊಂಡು ತೀವ್ರ ಹೋರಾಟ ನಡೆಸಿ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ 21-18 ಅಂಕಗಳ ಅಂತರದಿಂದ ಗೆಲುವು ತನ್ನದಾಗಿಸಿಕೊಂಡರು. ದ್ವಿತೀಯ ಗೇಮ್​ನಲ್ಲಿ ಆರಂಭದಿಂದಲೇ ಆಕ್ರಮಣಕಾರಿ ಆಟವಾಡಿದ ಸೇನ್​ ಎದುರಾಳಿಗೆ ಚೇರಿಸಿಕೊಳ್ಳಲು ಕೂಡ ಸಮಯ ನೀಡಲಿಲ್ಲ. ಸತತವಾಗಿ ಅಂಕ ಗಳಿಸುತ್ತಲೇ ಸಾಗಿ ಮೇಲುಗೈ ಸಾಧಿಸಿ ನೇರ ಗೇಮ್​ಗಳ ಅಂತರದಿಂದ ಪಂದ್ಯವನ್ನು ಗೆದ್ದು ಬೀಗಿದರು. ಹಾಲಿ ಆಲ್-ಇಂಗ್ಲೆಂಡ್ ಚಾಂಪಿಯನ್ ಕ್ರಿಸ್ಟಿ ಆಘಾತಕಾರಿ ಸೋಲುಂಡರು.

ಇದನ್ನೂ ಓದಿ Paris Olympics: ಫೈನಲ್​ ಪ್ರವೇಶಿಸಿದ ಸ್ವಪ್ನಿಲ್‌ ಕುಸಾಲೆ; 16ರ ಸುತ್ತಿಗೇರಿದ ಸಿಂಧು

8 ವರ್ಷದ ಬಳಿಕ ನಾಕೌಟ್ ಪ್ರವೇಶ


ಲಕ್ಷ್ಯ ಸೇನ್ ಅವರು ನಾಕೌಟ್​ ಹಂತಕ್ಕೇರುವ ಮೂಲಕ 2016ರ ರಿಯೊ ಗೇಮ್ಸ್‌ನ ಕಿಡಂಬಿ ಶ್ರೀಕಾಂತ್ ಬಳಿಕ ಒಲಿಂಪಿಕ್ಸ್‌ನಲ್ಲಿ ನಾಕೌಟ್ ಹಂತಕ್ಕೆ ಪ್ರವೇಶಿಸಿದ ಮೊದಲ ಭಾರತೀಯ ಪುರುಷ ಸಿಂಗಲ್ಸ್ ಶಟ್ಲರ್​ ಎನಿಸಿಕೊಂಡರು. ಟೋಕಿಯೊದಲ್ಲಿ ಪುರುಷರ ಸಿಂಗಲ್ಸ್‌ನಲ್ಲಿ ಏಕೈಕ ಸ್ಪರ್ಧಿಯಾಗಿದ್ದ ಸಾಯಿ ಪ್ರಣೀತ್ ಗುಂಪು ಹಂತದಲ್ಲೇ ಸೋಲು ಕಂಡು ನಿರ್ಗಮಿಸಿದ್ದರು.

ಕ್ರಿಸ್ಟಿ ವಿರುದ್ಧ ಸೇನ್​ ಇದುವರೆಗೆ ಆಡಿದ್ದ 5 ಪಂದ್ಯಗಳಲ್ಲಿ 4ರಲ್ಲಿ ಸೋಲು ಕಂಡಿದ್ದರು. ಒಂದು ಪಂದ್ಯ ಮಾತ್ರ ಗೆದ್ದಿದ್ದರು. ಈ ವರ್ಷದ ಆರಂಭದಲ್ಲಿ ನಡೆದಿದ್ದ ಆಲ್ ಇಂಗ್ಲೆಂಡ್ ಓಪನ್‌ನ ಸೆಮಿಫೈನಲ್ ಸೇರಿದಂತೆ ಇಂಡೋನೇಷ್ಯಾದ ಎರಡು ಕೂಟಗಳಲ್ಲಿಯೂ ಲಕ್ಷ್ಯ ಕ್ರಿಸ್ಟಿ ವಿರುದ್ಧ ಸೋಲು ಕಂಡಿದ್ದರು. ಈ ಎಲ್ಲ ಸೋಲಿನ ಸೇಡನ್ನು ಇದೀಗ ಪ್ರತಿಷ್ಠಿತ ಒಲಿಂಪಿಕ್ಸ್​ ಟೂರ್ನಿಯಲ್ಲಿ ಸೇನ್​ ತೀರಿಸಿಕೊಂಡಿದ್ದಾರೆ. ಜತೆಗೆ ಭಾರತಕ್ಕೆ ಪದಕ ಭರವಸೆಯನ್ನು ಮೂಡಿಸಿದ್ದಾರೆ.

ಸಿಂಧುಗೆ ಭರ್ಜರಿ ಗೆಲುವು


ಇದಕ್ಕೂ ಮುನ್ನ ನಡೆದಿದ್ದ ಮಹಿಳಾ ಬ್ಯಾಡ್ಮಿಂಟನ್​ ಸಿಂಗಲ್ಸ್​ ವಿಭಾಗದ ‘ಎಂ’ ಗುಂಪಿನ ಪಂದ್ಯದಲ್ಲಿ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ, ಬ್ಯಾಡ್ಮಿಂಟನ್​ ಆಟಗಾರ್ತಿ ಪಿ.ವಿ ಸಿಂಧು(PV Sindhu) ಕೂಡ ಗೆಲುವು ಸಾಧಿಸಿ 16ನೇ ಸುತ್ತಿಗೆ ಪ್ರವೇಶ ಪಡೆದಿದ್ದರು.

73ನೇ ಶ್ರೇಯಾಂಕದ ಎಸ್ಟೋನಿಯಾದ ಕ್ರಿಸ್ಟಿನ್ ಕುಬಾ ವಿರುದ್ಧ 21-5, 21-10 ಸುಲಭ ಜಯ ಸಾಧಿಸಿ 16ರ(ಪ್ರೀ ಕ್ವಾರ್ಟರ್​) ಸುತ್ತಿಗೇರಿದ್ದಾರೆ. ಸಿಂಧು ಅವರ ಬಲಿಷ್ಠ ಹೊಡೆತಗಳ ಮುಂದೆ ಕ್ರಿಸ್ಟಿನ್ ಕುಬಾ ಸಂಪೂರ್ಣ ಮಂಕಾದರು. ಮೊದಲ ಗೇಮ್​ನಲ್ಲಿ ಕೇವಲ 5 ಅಂಕಕ್ಕೆ ಸೀಮಿತರಾದರು. ಈ ಪಂದ್ಯ ಕೇವಲ 34 ನಿಮಿಷಗಳಲ್ಲಿ ಅಂತ್ಯ ಕಂಡಿತ್ತು.

Continue Reading
Advertisement
Indian Navy Recruitment
ಅವಿಭಾಗೀಕೃತ17 seconds ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಆ. 2 ಕೊನೆಯ ದಿನ

Pooja Khedkar
ದೇಶ6 mins ago

Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

krishna byre gowda
ಪ್ರಮುಖ ಸುದ್ದಿ18 mins ago

Krishna Byre Gowda: ರಾಜ್ಯಪಾಲರ ಅಧಿಕಾರ ದುರುಪಯೋಗಪಡಿಸಿಕೊಂಡರೆ ಕೋರ್ಟ್‌ಗೆ ಹೋಗುತ್ತೇವೆ: ಕೃಷ್ಣಭೈರೇಗೌಡ

Money Guide
ಮನಿ-ಗೈಡ್22 mins ago

Money Guide: PPF v/s NPS Vatsalya ನಿಮ್ಮ ಮಕ್ಕಳಿಗೆ ಯಾವುದು ಉತ್ತಮ ಯೋಜನೆ? ಇಲ್ಲಿದೆ ವಿವರ

Vinay Guruji met by master anand brother
ಸ್ಯಾಂಡಲ್ ವುಡ್25 mins ago

Vinay Guruji: ಬೈಕೊಂಡು ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದೆ ಆದರೆ ನನ್ನ ಅಷ್ಟೂ ಜಾತಕ ಬಿಚ್ಚಿಟ್ರು ಎಂದ ಮಾಸ್ಟರ್ ಆನಂದ್ ಸಹೋದರ!

Anurag Thakur
ದೇಶ29 mins ago

Anurag Thakur: ಅನುರಾಗ್‌ ಠಾಕೂರ್‌ ‘ಜಾತಿ’ ಅಸ್ತ್ರಕ್ಕೆ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಪ್ರತ್ಯಸ್ತ್ರ!

Viral Video
Latest30 mins ago

Viral Video: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

Paris Olympic
ಕ್ರೀಡೆ32 mins ago

Paris Olympic: ಪ್ರೀ ಕ್ವಾರ್ಟರ್​ಗೆ ಲಗ್ಗೆಯಿಟ್ಟ ಲಕ್ಷ್ಯ ಸೇನ್; ಜೊನಾಥನ್​ ಕ್ರಿಸ್ಟಿಗೆ ಆಘಾತಕಾರಿ ಸೋಲು

Wayanad Landslide
ದೇಶ34 mins ago

Wayanad Landslide: ಭೂಕುಸಿತದ ಬಗ್ಗೆ ಒಂದು ವಾರ ಮೊದಲೇ ನೀಡಲಾಗಿತ್ತಾ ಎಚ್ಚರಿಕೆ? ಕೇಂದ್ರದ ಸೂಚನೆ ನಿರ್ಲಕ್ಷಿಸಿತ್ತಾ ಕೇರಳ ಸರ್ಕಾರ?

DK Shivakumar
ಕರ್ನಾಟಕ40 mins ago

DK Shivakumar: ಪ್ರಧಾನಿ ಮೋದಿ ಭೇಟಿಯಾದ ಡಿಕೆಶಿ; ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಬೇಡಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ22 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌