Motivational story | ಅರ್ಹತೆ ಎಂದರೆ ಶಿಕ್ಷಣ, ಮ್ಯಾನೇಜ್ಮೆಂಟ್ ಅಷ್ಟೆ ಅಲ್ಲ.. ಬೇರೇನೋ ಇದೆ! - Vistara News

ಸ್ಫೂರ್ತಿ ಕತೆ

Motivational story | ಅರ್ಹತೆ ಎಂದರೆ ಶಿಕ್ಷಣ, ಮ್ಯಾನೇಜ್ಮೆಂಟ್ ಅಷ್ಟೆ ಅಲ್ಲ.. ಬೇರೇನೋ ಇದೆ!

Motivational stroy | ಮನುಷ್ಯನಿಗೆ ಅರ್ಹತೆ ಬರುವುದು ಕೇವಲ ಶಿಕ್ಷಣ, ಮ್ಯಾನೇಜ್ಮೆಂಟ್‌ ಸ್ಕಿಲ್‌ಗಳಿಂದ ಅಲ್ಲ. ಮನುಷ್ಯನ ಶ್ರದ್ಧೆ ಮತ್ತು ಬದ್ಧತೆಗಳಿಂದ ಎನ್ನುವುದನ್ನು ಸಾರಿ ಹೇಳುವ ಕಥೆ ಇಲ್ಲಿದೆ.

VISTARANEWS.COM


on

temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ | Motivational story

ಅದೊಂದು ಊರು. ಅಲ್ಲೊಬ್ಬ ಶ್ರೀಮಂತ. ಅವನು ಗ್ರಾಮದ ಮಧ್ಯ ಭಾಗದಲ್ಲಿ ಒಂದು ದೊಡ್ಡ ದೇವಾಲಯವನ್ನು ಕಟ್ಟಿದ. ದೇವಾಲಯ ತುಂಬ ಭವ್ಯವಾಗಿತ್ತು. ಜನ ಭಕ್ತಿಯಿಂದಲೂ, ಸೌಂದರ್ಯ ಸವಿಯುವ ಆಸೆಯಿಂದಲೂ ಅಲ್ಲಿಗೆ ಬರುತ್ತಿದ್ದರು. ಬಲುಬೇಗನೆ ದೇಗುಲದ ವಿಷಯ ಪಕ್ಕದ ಊರುಗಳಿಗೆಲ್ಲ ಹರಡಿತು. ಜನ ಬರುವುದು ಹೆಚ್ಚಿತು.

ಶ್ರೀಮಂತ ವ್ಯಕ್ತಿ ಭಕ್ತಿಯಿಂದ ದೇವಸ್ಥಾನವೇನೋ ಕಟ್ಟಿಸಿದ್ದರು. ಆದರೆ, ಅದು ಬೆಳೆಯುತ್ತಿದ್ದಂತೆಯೇ ನಿರ್ವಹಣೆ ಮಾಡುವುದು ಕಷ್ಟವಾಗಲಾರಂಭಿಸಿತು. ಅದಕ್ಕೆ ಒಬ್ಬ ಆಡಳಿತಾಧಿಕಾರಿಯನ್ನು ನೇಮಿಸೋಣ ಎಂದು ತೀರ್ಮಾನಿಸಿದರು. “ʻದೇವಸ್ಥಾನಕ್ಕೆ ಆಡಳಿತಾಧಿಕಾರಿ ಬೇಕಾಗಿದ್ದಾರೆ’ ಎಂಬ ಜಾಹೀರಾತನ್ನೂ ನೀಡಿದರು.

ಇದನ್ನು ನೋಡಿದ ಕೂಡಲೇ ಅವರ ಸಂಬಂಧಿಕರು, ಆತ್ಮೀಯರೆಲ್ಲ ಮುಗಿಬಿದ್ದರು. ನಾವು ನೋಡ್ಕೊಳ್ತೇವೆ ಎಂದರು. ಅದೆಷ್ಟೋ ಮಂದಿ ಉನ್ನತ ಶಿಕ್ಷಣ ಪಡೆದವರು ತಾವು ಸಿದ್ಧ ಎಂದರು. ಹಲವರು ಅರ್ಜಿ ಹಾಕಿದರು, ಕೆಲವರು ಪ್ರಭಾವ ಬೀರಿದರು. ದೇವಸ್ಥಾನಕ್ಕೆ ಸಾಕಷ್ಟು ಆದಾಯವಿದ್ದುದರಿಂದ ಆಡಳಿತಾಧಿಕಾರಿ ಹುದ್ದೆಗೆ ಭಾರಿ ಡಿಮ್ಯಾಂಡ್ ಇತ್ತು.

ಆದರೆ, ಶ್ರೀಮಂತ ವ್ಯಕ್ತಿಗೆ `ʻಒಬ್ಬ ಅರ್ಹ ವ್ಯಕ್ತಿಯ ಕೈಗೆ ಅಧಿಕಾರ ನೀಡಬೇಕು’ ಎಂಬ ಆಸೆ ಇತ್ತು. ಪ್ರಭಾವ ಬೀರಿದವರು, ಅರ್ಜಿ ಸಲ್ಲಿಸಿದವರಿಗೆ ಅವರು ಹೇಳಿದ್ದು ಅದೇ ಮಾತು: ಅರ್ಹರನ್ನು ಹುಡುಕುತ್ತಿದ್ದೇನೆ ಅಂತ.

ಎಷ್ಟೇ ಹುಡುಕಾಟ ನಡೆಸಿದರೂ ಶ್ರೀಮಂತ ವ್ಯಕ್ತಿಯ ಆಸೆಯಂತೆ ಅರ್ಹರು ಸಿಗಲಿಲ್ಲ. ಹೆಚ್ಚಿನವರಿಗೆ ದೇವಾಲಯದ ದೊಡ್ಡ ಮೊತ್ತದ ಕಾಣಿಕೆ ಮೇಲೆ ಕಣ್ಣಿದ್ದರೆ ಕೆಲವರಿಗೆ ಅಧಿಕಾರದ ಆಸೆ ಇರುವುದು ಕಂಡಿತು. ಕೆಲವರಿಗಂತೂ ಒಳ್ಳೆಯ ವೇತನ ಸಿಗಬಹುದು ಎನ್ನುವ ನಿರೀಕ್ಷೆ.

ಅದೊಂದು ದಿನ ಅವರು ದೇವಸ್ಥಾನದ ಹೊರಭಾಗದ ಕಟ್ಟೆಯಲ್ಲಿ ಕೂತಿದ್ದರು. ಆಗ ಒಬ್ಬ ವ್ಯಕ್ತಿ ದೇವರ ದರ್ಶನ ಮಾಡಿ ಹೊರಗೆ ಹೋಗುತ್ತಿದ್ದ. ಅವನನ್ನು ಕರೆದರು. `ʻನೀನು ಆಡಳಿತಾಧಿಕಾರಿ ಆಗ್ತೀಯಾ?’ ಎಂದು ಕೇಳಿದರು.

ಅವನು ತಬ್ಬಿಬ್ಬಾಗಿ ಹೋದ. ಅವನ ಶರ್ಟು ಹಳತಾಗಿತ್ತು, ಧೋತ್ರ ಕಳೆ ಕಳೆದುಕೊಂಡಿತ್ತು. ಅವನು ಹೇಳಿದ: ಏನು ಹೇಳುತ್ತೀರಿ ಸ್ವಾಮಿ… ನಾನು ಹೆಚ್ಚು ತಿಳುವಳಿಕೆ ಇಲ್ಲದ, ಹೆಚ್ಚು ಅಕ್ಷರ ಜ್ಞಾನ ಇಲ್ಲದ ವ್ಯಕ್ತಿ ನನ್ನ ಹತ್ರ ಈ ರೀತಿ ಕೇಳ್ತೀರಲ್ಲಾ?

ಆಗ ಶ್ರೀಮಂತ ವ್ಯಕ್ತಿ ನಗುತ್ತಾ ಹೇಳಿದರು: ನನಗೆ ಈ ದೇವಸ್ಥಾನ ಮ್ಯಾನೇಜ್ ಮಾಡ್ಲಿಕೆ ಭಾರಿ ವಿದ್ಯಾವಂತ ಬೇಕು ಅಂತೇನಿಲ್ಲ. ʻಒಬ್ಬ `ಅರ್ಹ ವ್ಯಕ್ತಿ’ಗೆ ಅದನ್ನು ವಹಿಸಬೇಕು ಎನ್ನುವುದಷ್ಟೇ ನನ್ನ ಆಸೆ.

ಬಡ ವ್ಯಕ್ತಿಗೆ ಇನ್ನಷ್ಟು ಆಶ್ಚರ್ಯ. `ʻಅಲ್ಲಾ ಸ್ವಾಮಿ.. ನನ್ನಂಥ ಬಡವನಲ್ಲಿ ನಿಮಗೆ ಏನು ಅರ್ಹತೆ ಕಂಡಿತು?’ ಎಂದು ಕೇಳಿದ.

ಅದಕ್ಕೆ ಶ್ರೀಮಂತ ಹೇಳಿದ: `ʻನಾನು ಆಡಳಿತಾಧಿಕಾರಿಯನ್ನು ಹುಡುಕ್ತಾ ಇರುವುದು ಇವತ್ತು ಹೊಸತೇನೂ ಅಲ್ಲ. ತುಂಬ ದಿನದಿಂದ ನೋಡ್ತಾ ಇದ್ದೇನೆ. ನಿನ್ನನ್ನು ಕೂಡಾ ಗಮನಿಸಿದ್ದೇನೆ. ಪ್ರತಿ ದಿನ ದೇವಸ್ಥಾನಕ್ಕೆ ಬರುವ ನಿನ್ನೆ ಶ್ರದ್ಧೆ, ಸಮಯದ ಪರಿಪಾಲನೆ, ದೇವರ ಮೇಲಿನ ಭಕ್ತಿಯನ್ನು ನೋಡಿದ್ದೇನೆ. ದೇವಸ್ಥಾನದ ಅಂಗಣದಲ್ಲಿ ಬಿದ್ದಿರುವ ಕಸ, ಕಡ್ಡಿಗಳನ್ನು ಎತ್ತಿಕೊಂಡು ಹೋಗಿ ದೂರ ಎಸೆಯುವ ನಿನ್ನ ತಾಳ್ಮೆ, ಭಕ್ತರಿಗೆ ಮಾರ್ಗದರ್ಶನ ಮಾಡುವುದು, ಹಿರಿಯರು ಬಂದಾಗ ಕೈಹಿಡಿದುಕೊಂಡು ಮೆಟ್ಟಿಲು ದಾಟಿಸುವುದು ಎಲ್ಲವನ್ನೂ ನೋಡಿರುವೆ. ಇವತ್ತು ನೀನೇನು ಮಾಡಿದೆ ಅಂತಾನೂ ನೆನಪು ಮಾಡಿಕೋ.. ಆ ಬದಿಯಲ್ಲಿ ಒಂದು ಕಲ್ಲು ಎದ್ದುಬಂದಿತ್ತು.. ಅದನ್ನು ನೀನೇ ಪಿಕಾಶಿ ತಂದು ಎಬ್ಬಿಸಿ ಮತ್ತೆ ಸರಿಯಾಗಿ ಜೋಡಿಸಿದೆ ಅಲ್ವಾ?’

ಬಡ ವ್ಯಕ್ತಿ ನೆನಪಿಸಿಕೊಂಡು `ʻಓ ಹೌದು’ ಎಂದ.

ಶ್ರೀಮಂತ ಮುಂದುವರಿಸಿದ: ನಿಜ ಹೇಳಬೇಕು ಎಂದರೆ ಆ ಕಲ್ಲನ್ನು ಅಲ್ಲಿ ಕಿತ್ತಿಟ್ಟಿದ್ದು ನಾನೇ. ಅದೆಷ್ಟೋ ಮಂದಿ ಆ ಕಲ್ಲನ್ನು ಎಡವಿ ಬಿದ್ದರು. ಆದರೆ, ಸುಮ್ಮನೆ ಎದ್ದು ಹೋದರು. ಕೆಲವರು ಎಡವಿ ಬೀಳುವುದನ್ನು ನೋಡಿಯೂ ಸುಮ್ಮನಿದ್ದರು. ನೀನು ಎಡವಿ ಬೀಳಲೂ ಇಲ್ಲ, ಬಿದ್ದಿದ್ದನ್ನು ನೋಡಲೂ ಇಲ್ಲ. ಆದರೂ ಗಮನಿಸಿ ಸರಿ ಮಾಡಿದೆ.

ಅದಕ್ಕೆ ಬಡ ವ್ಯಕ್ತಿ: ಇದರಲ್ಲಿ ಏನಿದೆ ಸ್ವಾಮಿ. ನಾನೊಬ್ಬ ಕೂಲಿ ಕಾರ್ಮಿಕ. ಈ ತರದ ಕೆಲಸ ಮಾಡುತ್ತೇನೆ ಅಲ್ವಾ? ಕಂಡಿತು ಮಾಡಿದೆ. ಅದು ನನ್ನ ಕರ್ತವ್ಯ ಅನಿಸಿತು.

ಶ್ರೀಮಂತ ವ್ಯಕ್ತಿ ಚಪ್ಪಾಳೆ ತಟ್ಟುತ್ತಾ ಹೇಳಿದ: ಈ ದೇವಸ್ಥಾನದ ಆಡಳಿತಾಧಿಕಾರಿಯಾಗಲು ನೀನೇ ಅರ್ಹ ಅಂತ ನನಗೆ ಅನಿಸಿದ್ದು ಇದೇ ಕಾರಣಕ್ಕೆ. ನೀನು ಯಾರ ಮೇಲೂ ಕಂಪ್ಲೇಂಟ್ ಮಾಡಲಿಲ್ಲ. ಯಾರದ್ದೋ ಗಮನ ಸೆಳೆದು ದೊಡ್ಡ ಜನ ಆಗಲು ಪ್ರಯತ್ನಿಸಲಿಲ್ಲ. ಇದು ನಿನ್ನ ಕರ್ತವ್ಯ ಎನ್ನುವ ಹಾಗೆ ಮಾಡಿದೆ. ಇದೇ ಶ್ರದ್ಧೆಯನ್ನೇ ನಾನು `ʻಅರ್ಹತೆ’ ಎಂದು ಭಾವಿಸಿದ್ದು. ನನಗೆ ವಿದ್ಯಾವಂತರೇ ಆಗಬೇಕು ಅಂತ ಇರಲಿಲ್ಲ, ತಿಳಿದವರೇ ಆಗಬೇಕಿರಲಿಲ್ಲ. ದೇವಸ್ಥಾನಕ್ಕೆ, ಭಕ್ತರಿಗೆ ಒಳಿತನ್ನು ಯೋಚಿಸುವವರು ಬೇಕಿತ್ತು. ಉಳಿದ ಕೆಲಸಕ್ಕೆ ಜನ ಮಾಡಿಕೊಳ್ಳಬಹುದು.

ಇದನ್ನೂ ಓದಿ| Motivational story| ಹಬ್ಬದೂಟ ಬಡಿಸಲು ಬೇಕಿರುವುದು ದುಡ್ಡಲ್ಲ! ಮತ್ತೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಮೊಂಡು ಕೈಗಳಿಂದ ಜಗತ್ತನ್ನು ಗೆಲ್ಲಲು ಹೊರಟ ಹೋರಾಟಗಾರನ ಕಥೆ

ರಾಜಮಾರ್ಗ ಅಂಕಣ: ‘ಈಸಬೇಕು ಇದ್ದು ಜೈಸಬೇಕು’ ಎಂಬ ದಾಸವಾಣಿಯಂತೆ ನೀರಿಗೆ ಧುಮುಕಿದಾಗ ತನಗೆ ಕೈಗಳು ಇಲ್ಲ ಎಂಬುದನ್ನು ಮರೆಯುವ ಅವರು ಈಗಾಗಲೇ ಅಂತಾರಾಷ್ಟ್ರೀಯ ಪಾರಾ ಈಜು ಸ್ಪರ್ಧೆಯಲ್ಲಿ ಎಂಟು ಪದಕಗಳನ್ನು ಗೆದ್ದಿದ್ದಾರೆ. ಏಳು ಸಾಗರಗಳನ್ನು ಈಜಿ ಬಂದಿದ್ದಾರೆ ವಿಶ್ವಾಸ್.

VISTARANEWS.COM


on

vishwas ks rajamarga
Koo

ಪಾರಾ ಸ್ವಿಮ್ಮರ್ ವಿಶ್ವಾಸ್ ಕೆ.ಎಸ್ ಅವರ ಹೃದಯ ಗೆಲ್ಲುವ ಕಥನ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಯು ಟ್ಯೂಬ್ (Youtube) ವೇದಿಕೆಗಳಲ್ಲಿ ಈ ವಿಶ್ವಾಸ್ ಕೆ.ಎಸ್ (Vishwas KS) ಅವರ ಟೆಡ್ ಟಾಕ್ (Ted Talk) ಕೇಳುತ್ತಾ ಹೋದಂತೆ ಕಣ್ಣು ತುಂಬಿ ಬಂದು ಗಲ್ಲ ಒದ್ದೆಯಾದ ಅನುಭವ ನನಗಾಗಿದೆ. ಅವರ ಬದುಕೇ ಒಂದು ರೋಚಕವಾದ ಯಶೋಗಾಥೆ.

ಈ ವಿಶ್ವಾಸ್ ಬಿಕಾಂ ಪದವೀಧರ. ಎರಡೂ ಕೈಗಳು ಇಲ್ಲದ ಅನೇಕ ವ್ಯಕ್ತಿಗಳು ಭಿಕ್ಷೆಯನ್ನು ಬೇಡಿ ಬದುಕುತ್ತಿರುವ ಇಂದಿನ ದಿನಗಳಲ್ಲಿ ಕೋಲಾರದ ಕಾಳಹಸ್ತಿಪುರದ ಯುವಕ ವಿಶ್ವಾಸ್ ತನ್ನ ಬದುಕನ್ನು ತಾನೇ ರೂಪಿಸಿಕೊಂಡಿದ್ದಾರೆ. ಅದಕ್ಕೆ ಅವರು ಆರಿಸಿಕೊಂಡ ಕ್ಷೇತ್ರ ಅಂದರೆ ಈಜು. ‘ಈಸಬೇಕು ಇದ್ದು ಜೈಸಬೇಕು’ ಎಂಬ ದಾಸವಾಣಿಯಂತೆ ನೀರಿಗೆ ಧುಮುಕಿದಾಗ ತನಗೆ ಕೈಗಳು ಇಲ್ಲ ಎಂಬುದನ್ನು ಮರೆಯುವ ಅವರು ಈಗಾಗಲೇ ಅಂತಾರಾಷ್ಟ್ರೀಯ ಪಾರಾ ಈಜು ಸ್ಪರ್ಧೆಯಲ್ಲಿ ಎಂಟು ಪದಕಗಳನ್ನು ಗೆದ್ದಿದ್ದಾರೆ. ಏಳು ಸಾಗರಗಳನ್ನು ಈಜಿ ಬಂದಿದ್ದಾರೆ.

ಅದೇ ರೀತಿ ಮಾರ್ಷಿಯಲ್ ಆರ್ಟಿನಲ್ಲಿ ರೆಡ್ ಬೆಲ್ಟ್ ಪಡೆದಿದ್ದಾರೆ. ‘ಡಾನ್ಸ್ ಕರ್ನಾಟಕ ಡಾನ್ಸ್’ ರಿಯಾಲಿಟಿ ಶೋʼದಲ್ಲಿ ನೃತ್ಯ ಮಾಡಿದ್ದಾರೆ. ಕಾಲಿನಲ್ಲಿಯೇ ಅಡುಗೆ ಮಾಡುತ್ತಾರೆ. ಕಾಲಿನ ಬೆರಳುಗಳ ನಡುವೆ ಪೆನ್ನು ಹಿಡಿದು ಬರೆಯುತ್ತಾರೆ. ಮೊಬೈಲ್ ಆಪರೇಟ್ ಮಾಡುತ್ತಾರೆ. ಬಟ್ಟೆ ಒಗೆಯುತ್ತಾರೆ. ತನ್ನ ಕೆಲಸವನ್ನು ತಾನೇ ಮಾಡುತ್ತಾರೆ. ವೇದಿಕೆಯಲ್ಲಿ ನಿಂತು ಮೋಟಿವೇಶನ್ ಮಾತು ಆಡುತ್ತಾರೆ. ಅವರಿಗೆ ತನಗೆ ಕೈಗಳು ಇಲ್ಲ ಅನ್ನುವುದು ಮರೆತೇ ಹೋಗಿದೆ ಎಂದು ನನ್ನ ಭಾವನೆ.

ಸಣ್ಣ ಪ್ರಾಯದಲ್ಲಿ ದುರಂತ

ನಾಲ್ಕನೇ ತರಗತಿಯಲ್ಲಿ ಆದ ದುರಂತ ಅದು. ವಿಶ್ವಾಸ್ ನಾಲ್ಕನೇ ತರಗತಿಯಲ್ಲಿ ಇರುವಾಗ ಕಾಂಕ್ರೀಟ್ ಆಗ್ತಾ ಇದ್ದ ಒಂದು ಕಟ್ಟಡವನ್ನು ಹತ್ತುತ್ತಿದ್ದಾಗ ಕಾಲು ಜಾರಿ ಬೀಳುತ್ತಾರೆ. ಆಗ ಹೈ ಟೆನ್ಶನ್ ಕೇಬಲ್ ಹಿಡಿದು ನೇತಾಡುವ ಪ್ರಸಂಗ ಬರುತ್ತದೆ. ಆಗ ಅವರನ್ನು ಬಿಡಿಸುವ ಪ್ರಯತ್ನ ಮಾಡಿದ ಅವರ ಅಪ್ಪ ವಿದ್ಯುತ್ ಆಘಾತಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಾರೆ. ಈ ಹುಡುಗನು ಎರಡೂ ಕೈ ಸುಟ್ಟು ಹೋಗಿ ಈ ಸ್ಥಿತಿಗೆ ಬರುತ್ತಾರೆ.

ಆಸ್ಪತ್ರೆಯಲ್ಲಿ ಹಲವಾರು ತಿಂಗಳು ನೋವು ಪಟ್ಟು ಮಲಗಿ ಹೊರಬರುವಾಗ ಆತನ ಕೈಗೆ ಪ್ಲಾಸ್ಟಿಕ್ ಕೈ ಜೋಡಿಸಿರುತ್ತಾರೆ. ಅದು ಕೈಗಳ ಫೀಲ್ ಕೊಡದೆ ಹೋದಾಗ ಮತ್ತು ಯಾವ ಕೆಲಸಕ್ಕೂ ಬೇರೆಯವರನ್ನು ಅವಲಂಬನೆ ಮಾಡುವ ಪ್ರಸಂಗ ಬಂದಾಗ ಅದನ್ನು ಕಿತ್ತು ಬಿಸಾಡಿ ಮೊಂಡು ಕೈ ಹಿಡಿದೇ ಇಲ್ಲಿಯವರೆಗೆ ಬಂದಿದ್ದಾರೆ.

ಹಲವು ಕಡೆಯಲ್ಲಿ ಉದ್ಯೋಗ ಪ್ರಯತ್ನ ಪಟ್ಟು ಸೋತಾಗ ಡಿಪ್ರೆಸ್ ಆದದ್ದೂ ಇದೆ. ಹೊಟ್ಟೆಪಾಡಿಗಾಗಿ ಹಲವು ವೃತ್ತಿಗಳನ್ನು ಮಾಡಲು ಪ್ರಯತ್ನ ಪಟ್ಟು ಸೋತದ್ದು ಇದೆ. ಆದರೆ ಅವರ ಅದ್ಭುತವಾದ ಇಚ್ಛಾಶಕ್ತಿ ಅವರನ್ನು ಇಲ್ಲಿಯವರೆಗೆ ಕರೆದುಕೊಂಡು ಬಂದಿದೆ. ಈ ಹೋರಾಟದ ಪ್ರತೀ ಹಂತದಲ್ಲೂ ಅವರ ಅಮ್ಮ ಅವರ ಜೊತೆಗೆ ನಿಂತಿದ್ದಾರೆ. ಇತ್ತೀಚೆಗೆ ಒಬ್ಬರು ಶಿಕ್ಷಕಿ, ಲಕ್ಷ್ಮಿ ಎಂದು ಅವರ ಹೆಸರು, ಅವರನ್ನು ಪ್ರೀತಿಸಿ ಮದುವೆ ಆಗಿದ್ದಾರೆ. ಆ ದಂಪತಿಗೆ ಒಬ್ಬ ಮಗನೂ ಇದ್ದಾನೆ. ಪತ್ನಿ ಲಕ್ಷ್ಮಿ ಈಗ ವಿಶ್ವಾಸ್ ಅವರ ಸಾಧನೆಗಳಿಗೆ ಸ್ಫೂರ್ತಿಯಾಗಿ ನಿಂತಿದ್ದಾರೆ.

ಬದುಕಿನ ಕಥೆ ಸಿನೆಮಾ ಆಯಿತು.

ವಿಶ್ವಾಸ್ ಅವರ ಬದುಕಿನ ಕಥೆಯು ʻಅರಬ್ಬೀ’ ಎಂಬ ಸಿನೆಮಾ ಆಗಿ ಜನಪ್ರಿಯ ಆಗಿದೆ. ಮುಂದಿನ ಪಾರಾ ಒಲಿಂಪಿಕ್ಸನಲ್ಲಿ ಭಾಗವಹಿಸಬೇಕು ಎನ್ನುವ ಹಠದಲ್ಲಿ ವಿಶ್ವಾಸ್ ಬೆಂಗಳೂರಿನ ಬಸವನಗುಡಿಯ ಈಜುಕೊಳದಲ್ಲಿ ದಿನಕ್ಕೆ ಹಲವಾರು ಗಂಟೆ ಕಠಿಣ ಅಭ್ಯಾಸ ಮಾಡುತ್ತಿದ್ದಾರೆ. ಒಬ್ಬ ಒಳ್ಳೆಯ ಕೋಚ್ ಅವರ ನೆರವಿಗೆ ನಿಂತಿದ್ದಾರೆ.

ವಿಶ್ವಾಸದ ಕಡಲಲ್ಲಿ ಈಜುತ್ತಿರುವ ಈ ವಿಶ್ವಾಸ್ ಅವರಿಗೆ ನಿಮ್ಮ ಒಂದು ಶಾಭಾಷ್ ಹೇಳಿ ಮುಂದೆ ಹೋಗೋಣ ಅಲ್ಲವೇ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತೀಯ ಸೇನೆಯ ಬಗ್ಗೆ ಎದೆ ಉಬ್ಬಿಸಿ ನಡೆಯಲು ಇನ್ನೊಂದು ಕಾರಣ

Continue Reading

ಸ್ಫೂರ್ತಿ ಕತೆ

Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

Raja marga Column : ಆ ಹೆಣ್ಮಗಳಿಗೆ ಕಣ್ಣೇ ಕಾಣಿಸುವುದಿಲ್ಲ. ಆದರೆ, ಛಲದಿಂದ ಆಕೆ ಒಳಗಿನ ಕಣ್ಣಿಂದ ಓದಿಗಳು. ಒಂದಲ್ಲ ಎರಡು ಬಾರಿ ಯುಪಿಎಸ್ಸಿ ಪಾಸ್‌ ಮಾಡಿದಳು. ಈಗ ಆಕೆ ಜಿಲ್ಲಾಧಿಕಾರಿ.

VISTARANEWS.COM


on

Raja Marga Column Pranjal pateel
Koo
RAJAMARGA

Raja Marga Column : ಭಾರತದ ಅತ್ಯಂತ ಕ್ಲಿಷ್ಟವಾದ ಪರೀಕ್ಷೆ ಅಂದರೆ ಐಎಎಸ್. ಕೇಂದ್ರ ಸರಕಾರದ ಅಧೀನ ಸಂಸ್ಥೆಯಾದ UPSC ನಡೆಸುವ ಈ ಪರೀಕ್ಷೆಯಲ್ಲಿ‌ (UPSC Exam) ಪ್ರತೀ ವರ್ಷ 7ರಿಂದ 8 ಲಕ್ಷ ಯುವಕ – ಯುವತಿಯರು ತಮ್ಮ ಪ್ರತಿಭೆಯನ್ನು ನಿಕಷಕ್ಕೆ ಒಡ್ಡುತ್ತಿದ್ದು ತೇರ್ಗಡೆ ಆಗುವವರ ಪ್ರಮಾಣ 2-3% ಮಾತ್ರ! ಅಂತಹ ಪರೀಕ್ಷೆಯಲ್ಲಿ ಪೂರ್ಣ ಕುರುಡುತನ ಇರುವ ಪ್ರಾಂಜಲ್‌ ಪಾಟೀಲ್‌ (Pranjal Patil) ಎಂಬ ಹುಡುಗಿಯೊಬ್ಬಳು ಎರಡು ಬಾರಿ ತೇರ್ಗಡೆಯಾದರು (IAS officer) ಅಂದರೆ ನಂಬೋದು ಹೇಗೆ? ಇಲ್ಲಿದೆ ಅವರ ಕತೆ,

Raja Marga Column: ಆಕೆ ಮಹಾರಾಷ್ಟ್ರದವರು

ಪ್ರಾಂಜಲ್‌ ಪಾಟೀಲ್ ಮಹಾರಾಷ್ಟ್ರದ ಉಲ್ಲಾಸ ನಗರದವರು. ಹುಟ್ಟುವಾಗ ಆಕೆಗೆ ಮಸುಕು ಮಸುಕಾಗಿ ಕಾಣುತ್ತಿತ್ತು. ಆರು ವರ್ಷ ಪ್ರಾಯ ಆದಾಗ ಪೂರ್ತಿಯಾಗಿ ಕುರುಡುತನ ಆವರಿಸಿತ್ತು. ಸಣ್ಣ ಪ್ರಾಯದಲ್ಲಿಯೇ ಆಕೆಯ ದೊಡ್ಡ ಕನಸುಗಳಿಗೆ ಕೊಳ್ಳಿ ಇಟ್ಟ ಅನುಭವ ಆಗಿತ್ತು. ಆದರೆ ಮನೆಯವರು ಮತ್ತು ಹೆತ್ತವರು ಆಕೆಯ ಮನೋಸ್ಥೈರ್ಯವನ್ನು ಕುಸಿಯಲು ಬಿಡಲಿಲ್ಲ.

ಆಕೆ ಮಹಾ ಪ್ರತಿಭಾವಂತೆ. ದಾದರ್ ನಗರದ ಕಮಲ ಮೆಹ್ತಾ ಕುರುಡು ಮಕ್ಕಳ ಶಾಲೆಗೆ ಸೇರಿ ಪ್ರಾಥಮಿಕ ಶಿಕ್ಷಣ ಪಡೆಯುತ್ತಾರೆ. ಬ್ರೈಲ್ ಲಿಪಿಯಲ್ಲಿ ಓದಲು ಮತ್ತು ಬರೆಯಲು ಕಲಿಯುತ್ತಾರೆ. ಮುಂದೆ ಸೈಂಟ್ ಕ್ಸೇವಿಯರ್ ಕಾಲೇಜಿನಲ್ಲಿ ರಾಜನೀತಿ ಶಾಸ್ತ್ರದಲ್ಲಿ ಪದವಿ ಪಡೆಯುತ್ತಾರೆ.

Raja Marga Column Pranjal Pateel
ತಂದೆ ಮತ್ತು ತಾಯಿ ಜತೆ ಪ್ರಾಂಜಲ್‌ ಪಾಟೀಲ್‌

ಆಗ ಏನೂ ಕಾಣದಿದ್ದರೂ ಉಲ್ಲಾಸ ನಗರದ ಮನೆಯಿಂದ ಹೊರಟು ಒಬ್ಬಳೇ ಛತ್ರಪತಿ ಶಿವಾಜಿ ಟರ್ಮಿನಲ್ ನವರೆಗೆ ಹೋಗಿ ಹಿಂದೆ ಬರುತ್ತಿದ್ದರು. ಮುಂಬೈ ನಗರದ ಜನರು ತನ್ನ ಬಗ್ಗೆ ತುಂಬಾನೇ ಅನುಕಂಪವನ್ನು ಹೊಂದಿದ್ದರು ಅನ್ನುತ್ತಾರೆ ಆಕೆ.

Raja Marga Column: ಆಕೆಯ ಕನಸುಗಳಿಗೆ ಆಕಾಶವೂ ಮಿತಿ ಅಲ್ಲ!

ಮುಂದೆ ಪ್ರಾಂಜಲ್ ಹೊರಟದ್ದು ದೆಹಲಿಗೆ. ಜವಾಹರಲಾಲ್ ನೆಹರು ವಿವಿಯ ಮೂಲಕ ಆಕೆ ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಡಾಕ್ಟರೇಟ್ ಪದವಿ ಪಡೆಯುತ್ತಾರೆ. ಅದೇ ಹೊತ್ತಿಗೆ ವಿದುಷಿ ಎಂಬ ಗೆಳತಿಯ ಮಾತಿನಿಂದ ಆಕೆ ಪ್ರಭಾವಿತರಾಗುತ್ತಾರೆ. ಐಎಎಸ್ ಪರೀಕ್ಷೆಗೆ ಗಂಭೀರವಾದ ಸಿದ್ಧತೆ ನಡೆಸುವಂತೆ ವಿದುಷಿ ಆಕೆಗೆ ಸಲಹೆ ಕೊಡುತ್ತಾರೆ.

Raja Marga Column Pranjal Pateel

ಆಗ ಆಕೆಗೆ JAWS (Job Access With Speech) ಎಂಬ ಸಾಫ್ಟವೇರ್ ನೆರವಿಗೆ ಬರುತ್ತದೆ. ಅದು ಯಾವುದೇ ಪುಸ್ತಕವನ್ನು ಗಟ್ಟಿಯಾಗಿ ಓದಿ ಹೇಳುವ ಸಾಫ್ಟ್‌ವೇರ್. ತನ್ನ ಆಲಿಸುವ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಆಕೆ ದಿನಕ್ಕೆ 10-12 ಗಂಟೆ ಪುಸ್ತಕಗಳನ್ನು ಓದುತ್ತಾರೆ. ವಿಡಿಯೋ ಪಾಠಗಳನ್ನು ಕೇಳುತ್ತಾರೆ. ತನ್ನ ಗೆಳತಿಯ ನೆರವನ್ನು ಪಡೆಯುತ್ತಾರೆ.

ರೈಲ್ವೇಸ್ ಅವರಿಗೆ ಉದ್ಯೋಗವನ್ನು ನಿರಾಕರಿಸುತ್ತದೆ

2016ರಲ್ಲೀ ಅವರು ಭಾರತೀಯ ರೈಲ್ವೇ ಸೇವೆಗೆ ಅರ್ಜಿ ಹಾಕುತ್ತಾರೆ. ಆದರೆ ಆಕೆ ಕುರುಡಿ ಎಂಬ ಕಾರಣಕ್ಕೆ ರೈಲ್ವೇಸ್ ಅವರಿಗೆ ಉದ್ಯೋಗವನ್ನು ನಿರಾಕರಣೆ ಮಾಡುತ್ತದೆ. ಆಗ ಸಿಟ್ಟಿಗೆದ್ದ ಆಕೆ ಪ್ರಧಾನಿ ನರೇಂದ್ರ ಮೋದಿಗೆ ಮತ್ತು ರೈಲ್ವೇ ಮಂತ್ರಿ ಸುರೇಶ್ ಪ್ರಭು ಅವರಿಗೆ ನೇರವಾಗಿ ಪತ್ರ ಬರೆಯುತ್ತಾರೆ. ಆಗ ಸುರೇಶ್ ಪ್ರಭು ಅವರು ಆಕೆಯನ್ನು ಸಂಪರ್ಕ ಮಾಡಿ ನಿಮ್ಮ ವಿದ್ಯೆಗೆ ತಕ್ಕದಾದ ಉದ್ಯೋಗ ಕೊಡುವ ಭರವಸೆ ನೀಡಿದ್ದರು. ಆದರೆ ಆಗಲೇ ಐಎಎಸ್ ಪರೀಕ್ಷೆಯ ತಯಾರಿಯಲ್ಲಿ ಮುಳುಗಿದ್ದ ಪ್ರಾಂಜಲ್ ಆ ಪ್ರಸ್ತಾಪವನ್ನು ಸ್ವೀಕಾರ ಮಾಡುವುದಿಲ್ಲ.

Raja Marga Column Pranjal Pateel
ಸೀರೆ ಉಟ್ಟಾಗ ಹೀಗಿದ್ದಾರೆ ನೋಡಿ ಪ್ರಾಂಜಲ್‌ ಪಾಟೀಲ್

ಆಕೆ ಎರಡು ಬಾರಿ ಐಎಎಸ್ ಪರೀಕ್ಷೆ ತೇರ್ಗಡೆ ಆದರು!

ಅತ್ಯಂತ ಪ್ರಬಲ ಇಚ್ಛಾಶಕ್ತಿ, ನಿರಂತರ ಪ್ರಯತ್ನ, ಎಂದಿಗೂ ಬತ್ತಿ ಹೋಗದ ಸ್ಫೂರ್ತಿ, ಬೆಟ್ಟದಷ್ಟು ಆತ್ಮವಿಶ್ವಾಸ ಇವುಗಳ ಜೊತೆಗೆ 2016ರಲ್ಲಿ ಅವರು ಮೊದಲ ಬಾರಿಗೆ ಐಎಎಸ್ ಪರೀಕ್ಷೆ ಬರೆದು ಮೊದಲ ಪ್ರಯತ್ನದಲ್ಲಿಯೇ ತೇರ್ಗಡೆಯಾದರು! ಅದೂ ಯಾವ ಕೋಚಿಂಗ್ ಇಲ್ಲದೆ! ಆದರೆ ಆಲ್ ಇಂಡಿಯಾ ರ‍್ಯಾಂಕಿಂಗ್ 744 ಬಂದಿತ್ತು. ಅದು ಅವರಿಗೆ ತೃಪ್ತಿ ತರಲಿಲ್ಲ. ಯಾವುದೋ ಒಂದು ಅಜ್ಞಾತ ಇಲಾಖೆಯಲ್ಲಿ ಸಾಮಾನ್ಯ ಅಧಿಕಾರಿಯಾಗಿ ಕೆಲಸ ಮಾಡಲು ಆಕೆ ರೆಡಿ ಇರಲಿಲ್ಲ. ಅದಕ್ಕೋಸ್ಕರ ಎರಡನೇ ಬಾರಿಗೆ ಅಷ್ಟೇ ಪ್ರಯತ್ನ ಮಾಡಿ 2017ರಲ್ಲಿ ಮತ್ತೆ ಐಎಎಸ್ ಪರೀಕ್ಷೆ ಬರೆದರು. ಈ ಬಾರಿ ಕೂಡ ತೇರ್ಗಡೆ ಆದರು. ಈ ಬಾರಿ ರ‍್ಯಾಂಕಿಂಗ್ 124 ಬಂದಿತ್ತು!

Visually impaired IAS officer Pranjal pateel

ಅವರ ಕನಸಿನ ರೆಕ್ಕೆಗೆ ಸಾವಿರ ಗರಿಗಳು!

ಭಾರತದ ಮೊಟ್ಟ ಮೊದಲ ದೃಷ್ಟಿ ವಿಕಲತೆಯ ಸಾಧಕಿಯಾಗಿ ಆಕೆ ಐಎಎಸ್ ಪರೀಕ್ಷೆ ತೇರ್ಗಡೆ ಆಗಿದ್ದರು! ಲಿಖಿತ ಪರೀಕ್ಷೆಯಲ್ಲಿ ಆಕೆ ಪಡೆದ ಅಂಕಗಳು 854! ಹಾಗೂ ಸಂದರ್ಶನದಲ್ಲಿ ಆಕೆ ಪಡೆದ ಅಂಕಗಳು 179! ಒಟ್ಟು 1033 ಅನ್ನುವುದು ಕೂಡ ನಿಜವಾದ ಕ್ರೆಡಿಟ್. ತರಬೇತಿಯನ್ನು ಮುಗಿಸಿ ಮೇ 28, 2018ರಂದು ಅವರು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಸಿಸ್ಟಂಟ್ ಕಲೆಕ್ಟರ್ ಆಗಿ ನೇಮಕ ಪಡೆಯುತ್ತಾರೆ. ಮುಂದೆ ಅಕ್ಟೋಬರ್ 14, 2019ರಂದು ಸಬ್ ಕಲೆಕ್ಟರ್ ಆಗಿ ತಿರುವನಂತಪುರಂ ಜಿಲ್ಲೆಗೆ ನೇಮಕ ಪಡೆಯುತ್ತಾರೆ!

Pranjal pateel with Komal sing pateel
ಕೋಮಲ್‌ ಸಿಂಗ್‌ ಪಾಟೀಲ್‌ ಜತೆ ಮದುವೆಯಾದ ಕ್ಷಣ

ಯಾರ ಸಹಾಯ ಇಲ್ಲದೆ ತನ್ನ ಕೆಲಸಗಳನ್ನು ತಾನೇ ಮಾಡುವ, ಅದ್ಭುತವಾದ ಮೆಮೊರಿ ಪವರ್ ಹೊಂದಿರುವ, ಸಮಾಜ ಸೇವೆಯ ತೀವ್ರವಾದ ತುಡಿತ ಹೊಂದಿರುವ, ಬೆಟ್ಟವನ್ನು ಕರಗಿಸುವ ಧೈರ್ಯ ಮತ್ತು ಆತ್ಮವಿಶ್ವಾಸಗಳನ್ನು ಹೊಂದಿರುವ ಪ್ರಾಂಜಲ್ ಪಾಟೀಲ್ ಮತ್ತು ಆಕೆಯ ಗಂಡ ಕೋಮಲ್ ಸಿಂಗ್ ಪಾಟೀಲ್ ಅವರು ಇತ್ತೀಚೆಗೆ ತಮ್ಮ ಅಂಗದಾನಕ್ಕೆ ಜೊತೆಯಾಗಿ ಸಹಿ ಹಾಕಿ ಸುದ್ದಿ ಆಗಿದ್ದಾರೆ.

ಆಕೆಯ ಒಂದು ಮಾತು ನನಗೆ ಭಾರೀ ಕನೆಕ್ಟ್ ಆಗಿದ್ದು ಅದನ್ನು ಇಲ್ಲಿ ಉಲ್ಲೇಖ ಮಾಡುತ್ತೇನೆ.

SUCCESS doesn’t give us INSPIRATION. But the STRUGGLE behind the SUCCESS gives us the INSPIRATION. ಹೌದು ತಾನೇ?

ಇದನ್ನೂ ಓದಿ : Raja Marga Column : ಈ ಶಾರ್ಪ್‌ ಶೂಟರ್‌ ಅಜ್ಜಿ ಮೊದಲ ಬಾರಿ ಗನ್‌ ಹಿಡಿದದ್ದು 67ನೇ ವಯಸ್ಸಲ್ಲಿ!

Continue Reading

ಅಂಕಣ

Raja Marga Column : ಈ ಶಾರ್ಪ್‌ ಶೂಟರ್‌ ಅಜ್ಜಿ ಮೊದಲ ಬಾರಿ ಗನ್‌ ಹಿಡಿದದ್ದು 67ನೇ ವಯಸ್ಸಲ್ಲಿ!

Raja Marga Column : ಅವರೊಬ್ಬರು ಶೂಟರ್‌ ಅಜ್ಜಿ. ವಿಶ್ವದ ಮಟ್ಟದ ಸ್ಪರ್ಧೆಯಲ್ಲಿ ಮಿಂಚಿದವರು. ಅವರು ಶಾರ್ಪ್‌ ಶೂಟಿಂಗ್‌ಗಾಗಿ ಗನ್‌ ಕೈಯಲ್ಲಿ ಹಿಡಿದಾಗ ವಯಸ್ಸು 67.

VISTARANEWS.COM


on

Raja Marga Column Chandro Tomar Sharp Shooter
Koo
RAJAMARGA

Raja Marga Column : ಉತ್ತರ ಪ್ರದೇಶದ ಭಾಗಪಥ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯು ಜೋಹ್ಹರಿ. ಅಲ್ಲಿಯ ಒಬ್ಬರು ಅಜ್ಜಿ ಶೂಟಿಂಗ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಹೆಸರು ಮಾಡಿದ್ದರು. ಆಕೆ ಬದುಕಿದ್ದಾಗ ಜಗತ್ತಿನ ಅತ್ಯಂತ ಹಿರಿಯ ಶಾರ್ಪ್‌ ಶೂಟರ್ (Worlds oldest Sharp Shooter) ತಪ್ಪಿದ್ದೆ ಇಲ್ಲ ಅನ್ನೋದು ಅವರ ಹಿರಿಮೆ! ವಯಸ್ಸು ಆಕೆಯ ಮಟ್ಟಿಗೆ ಬರೇ ಒಂದು ನಂಬರ್ ಆಗಿ ಬಿಟ್ಟಿದೆ! ಅವರ ಹೆಸರು ಚಂದ್ರಾ ತೋಮರ್‌ (Chandro tomar) ಜನ ಅವರನ್ನು ಪ್ರೀತಿಯಿಂದ ‘ಶೂಟರ್ ಅಜ್ಜಿ’ (Shooter Ajji) ಎಂದು ಕರೆಯುತ್ತಾರೆ! ಏಕೆಂದರೆ ಎಂಬತ್ತರ ಹರೆಯದಲ್ಲಿ ಕೂಡ ಅವರು ಚಾಂಪಿಯನ್‌ಷಿಪ್ ಸೋತವರಲ್ಲ!

ಆಕೆ ತುಂಬಿದ ಮನೆಯ ಅಜ್ಜಿ!

ಆಕೆ ಹಳ್ಳಿಯ ಹೆಂಗಸು. ಶಾಲೆಗೆ ಹೋದವರಲ್ಲ. ತುಂಬಿದ ಮನೆಗೆ ಸೊಸೆಯಾಗಿ ಬಂದವರು. ಪ್ರೀತಿಸುವ ಗಂಡ, 5 ಮಕ್ಕಳು, 12 ಮೊಮ್ಮಕ್ಕಳು ಇರುವ ಸಂಸಾರದಲ್ಲಿ ಅವರು ಮುಳುಗಿ ಬಿಟ್ಟಿದ್ದರು. ಮನೆ ವಾರ್ತೆ, ಮನೆಯವರ ಕ್ಷೇಮ, ಅಡುಗೆ ಮಾಡುವುದು, ದನಗಳ ಚಾಕರಿ ಇಷ್ಟೆ ಗೊತ್ತು ಅವರಿಗೆ. ಶೂಟಿಂಗ್ ಬಗ್ಗೆ ಯೋಚನೆಯನ್ನು ಕೂಡ ಮಾಡಿದವರಲ್ಲ.

Raja Marga Column Chandro Tomar Sharp Shooter1

ಅವರ ಬದುಕಿನಲ್ಲಿ ತಿರುವು ಬಂದಾಗ ವಯಸ್ಸು 67!

ಅವರ ಹಳ್ಳಿಯಲ್ಲಿ ಒಂದು ಶಾರ್ಪ್ ಶೂಟರ್ ಕ್ಲಬ್ ಇತ್ತು. ಅದಕ್ಕೆ ಅವರ ಮೊಮ್ಮಗಳು ಶಿಫಾಲಿ ಆಸಕ್ತಿಯಿಂದ ಹೋಗಿ ಸೇರಿದ್ದರು. ಅಲ್ಲಿ ಹುಡುಗರೇ ಹೆಚ್ಚು ಬರುತ್ತಿದ್ದ ಕಾರಣ ಮೊಮ್ಮಗಳಿಗೆ ಜೊತೆಯಾಗಿ ಅಜ್ಜಿ ಹೋಗುತ್ತಿದ್ದರು. ದೂರದಲ್ಲಿ ನಿಂತು ಶೂಟಿಂಗ್ ನೋಡುವುದು ಮಾತ್ರ ಅಜ್ಜಿಯ ಕೆಲಸ. ಒಂದು ದಿನ ಮೊಮ್ಮಗಳು ಗನ್ ಲೋಡ್ ಆಗದೆ ಕಷ್ಟ ಪಡುತ್ತಿದ್ದಳು. ಹತ್ತಿರ ಬಂದ ಅಜ್ಜಿ ಯಾವುದೋ ಒಂದು ಮಾಯೆಯಿಂದ ಗನ್ ಲೋಡ್ ಮಾಡಿದ್ದು ಮಾತ್ರವಲ್ಲ ಬುಲ್ ಐಗೆ ಗುರಿಯಿಟ್ಟು ಶೂಟ್ ಮಾಡಿಬಿಟ್ಟರು. ಅದು ಪರ್ಫೆಕ್ಟ್ ಶೂಟ್ ಆಗಿತ್ತು! ಆ ಕ್ಲಬ್ಬಿನ ಕೋಚ್ ಫಾರೂಕ್ ಪಠಾಣ್ ಮತ್ತು ಎಲ್ಲಾ ಹುಡುಗರು ಬಿಟ್ಟ ಕಣ್ಣು ಬಿಟ್ಟು ಬೆರಗಾಗಿ ನಿಂತರು! ಅದು ಅಜ್ಜಿಯ ಜೀವನದ ಮೊದಲ ಶೂಟ್ ಆಗಿತ್ತು ಮತ್ತು ಆಗ ಅವರ ವಯಸ್ಸು ಕೇವಲ 67 ಆಗಿತ್ತು!

ಶೂಟ್ ಮಾಡಲು ಸ್ಪಷ್ಟವಾದ ದೃಷ್ಟಿ ಮತ್ತು ಕೈಗಳ ನಿಯಂತ್ರಣಗಳು ಇರಬೇಕು. ಅದು ಆ ವಯಸ್ಸಲ್ಲಿ ಅಜ್ಜಿಗೆ ಹೇಗೆ ಸಾಧ್ಯವಾಯಿತು? ನನಗಂತೂ ಅರ್ಥವಾಗದ ಪ್ರಶ್ನೆ!

Raja Marga Column : ಅಜ್ಜಿ ಮತ್ತು ಮೊಮ್ಮಗಳ ಶೂಟಿಂಗ್ ತರಬೇತಿ!

ಮುಂದೆ ಅಜ್ಜಿ ಮೊಮ್ಮಗಳ ಜೊತೆಗೆ ಶೂಟರ್ ಕ್ಲಬ್ಬಿಗೆ ಸೇರಿದರು. 1200 ಡಾಲರ್ ಬೆಲೆಯ ಪಿಸ್ತೂಲನ್ನು ಹಠ ಹಿಡಿದು ತರಿಸಿಕೊಂಡರು. ಮನೆಯ ಅಂಗಳದಲ್ಲಿ ಪ್ರೈವೇಟ್ ಶೂಟರ್ ರೇಂಜ್ ಸಿದ್ಧವಾಯಿತು. ಅಜ್ಜಿಯ ಉತ್ಸಾಹ ದಿನದಿಂದ ದಿನಕ್ಕೆ ಅಧಿಕವಾಯಿತು. ಮನೆಕೆಲಸ ಮುಗಿಸಿಕೊಂಡು ಮಧ್ಯಾಹ್ನ ಅಜ್ಜಿ ಗನ್ ಹಿಡಿದು ತರಬೇತಿಗೆ ಇಳಿದರೆ ಜಗತ್ತನ್ನೇ ಮರೆತು ಬಿಡುತ್ತಿದ್ದರು. ಮನೆಯ ಎಲ್ಲರ ಪೂರ್ಣ ಬೆಂಬಲವು ಅವರಿಗೆ ದೊರೆಯಿತು ಮತ್ತು ಸಾಧನೆಗಳ ಮೆರವಣಿಗೆಯು ಆಗಲೇ ಶುರುವಾಗಿ ಬಿಟ್ಟಿತು!
1999ರಿಂದ ನಿರಂತರ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಶೂಟಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಬಂದಿರುವ ಅಜ್ಜಿಗೆ ಈವರೆಗೆ 30 ರಾಷ್ಟ್ರಮಟ್ಟದ ಸ್ವರ್ಣ ಪದಕಗಳು ದೊರೆತಿವೆ!

Raja Marga Column Chandro Tomar Sharp Shooter1Raja Marga Column Chandro Tomar Sharp Shooter1

ಅಜ್ಜಿ ಜಗತ್ತಿನ ಅತ್ಯಂತ ಹಿರಿಯ ಶೂಟರ್ ಆದರು!

2010ರಲ್ಲಿ ವಿಶ್ವ ಹಿರಿಯರ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ರೈಫಲ್ ಮತ್ತು ಪಿಸ್ತೂಲ್ ಎರಡೂ ವಿಭಾಗಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಪದಕಗಳನ್ನು ಗೆದ್ದಿರುವ ಅಜ್ಜಿ ಮುಂದೆ ಜಗತ್ತಿನ ಅತ್ಯಂತ ಹಿರಿಯ ಶೂಟರ್ ಆದರು. ಅವರು ಗೆದ್ದಿರುವ ಒಟ್ಟು 146 ಶೂಟಿಂಗ್ ಪದಕಗಳು ಅವರ ಶೋಕೇಸಲ್ಲಿ ಇವೆ! ಅದರಲ್ಲಿ ರಾಷ್ಟ್ರಮಟ್ಟದ ಪದಕಗಳು ಮೂವತ್ತಕ್ಕೂ ಹೆಚ್ಚು! 88ರ ಹರೆಯದಲ್ಲಿ ಕೂಡ ರಾಷ್ಟ್ರ ಮತ್ತು ವಿಶ್ವ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಬಂದಿರುವ ಆಕೆ ಪದಕದ ಮೇಲೆ ಪದಕಗಳನ್ನು ಗೆದ್ದಿದ್ದಾರೆ. ಮುಂದೆ ಅದೇ ಜೋಹರಿ ಶೂಟಿಂಗ್ ಕ್ಲಬ್ಬಿನ ಮುಖ್ಯ ಕೋಚ್ ಆಗಿ ಅಜ್ಜಿ ದೀರ್ಘಕಾಲ ದುಡಿದರು.

Raja Marga Column Chanra tomar with Tapsi Pannu
ತಾಪ್ಸಿ ಪನ್ನು ಜತೆ ಚಂದ್ರಾ ತೋಮರ್‌

ಇಡೀ ಕುಟುಂಬವೇ ಶೂಟರ್ ಕುಟುಂಬ ಆಯಿತು!

ಅವರಿಂದ ಸ್ಫೂರ್ತಿ ಪಡೆದು ಅವರ ಸೊಸೆ ಸೀಮಾ ತೋಮರ್, ಮೊಮ್ಮಗಳು ಶಿಫಾಲಿ ಇಬ್ಬರು ಕೂಡ ವಿಶ್ವ ಮಟ್ಟದ ಶೂಟರ್ ಆಗಿ ಬೆಳೆದಿದ್ದಾರೆ. ಅವರ ತಂಗಿ ಪ್ರಕಾಶಿ ತೋಮರ್ ಕೂಡ ಇಂದು ಶೂಟಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ ಗೆಲ್ಲುತ್ತಿದ್ದಾರೆ. ಅಜ್ಜಿಯ ಸ್ಫೂರ್ತಿಯಿಂದ ಮುಂದೆ ಇಡೀ ತೋಮರ್ ಕುಟುಂಬ ಶೂಟರ್ ಕುಟುಂಬವೇ ಆಗಿಬಿಟ್ಟಿದೆ! ನಾನು ಸಾಯುವ ತನಕ ಶೂಟಿಂಗ್ ಬಿಡುವುದಿಲ್ಲ ಎಂದು ಅಜ್ಜಿ ಗನ್ನು ಹಿಡಿದು ನುಡಿದರೆ ಅವರ ಕಂಗಳಲ್ಲಿ ಗೆದ್ದ ನಗು ಕಾಣುತ್ತಿತ್ತು!

ಇದನ್ನೂ ಓದಿ : Raja Marga Column : ಲಸಿಕೆ ಪ್ರಯೋಗಕ್ಕಾಗಿ ಮಗನ ಪ್ರಾಣವನ್ನೇ ಒತ್ತೆ ಇಟ್ಟ ಎಡ್ವರ್ಡ್‌ ಜೆನ್ನರ್‌!

ಅಜ್ಜಿಯ ಸಾಧನೆ ಜನಪ್ರಿಯ ಸಿನೆಮಾ ಆಯಿತು!

ಅಂದ ಹಾಗೆ ಅಜ್ಜಿಯ ಬದುಕು ಮತ್ತು ಸಾಧನೆಯಿಂದ ಸ್ಫೂರ್ತಿ ಪಡೆದು ಹಿಂದಿಯಲ್ಲಿ ‘ಸಾಂಡ ಕಿ ಆಂಖ್ ‘ಎಂಬ ಸಿನಿಮಾ(2019) ಕೂಡ ಬಂದಿದ್ದು ಅದರಲ್ಲಿ ಪ್ರಖ್ಯಾತ ನಟಿಯರಾದ ತಾಪ್ಸಿ ಪನ್ನು ಮತ್ತು ಭೂಮಿ ಪೆಡ್ನೇಕರ್ ಅವರು ಪ್ರಮುಖವಾದ ಪಾತ್ರಗಳನ್ನು ಮಾಡಿದ್ದರು.

ಅಂತಹ ಅಜ್ಜಿ ಚಂದ್ರೋ ತೋಮರ್ 2021ನೆಯ ಇಸವಿಯಲ್ಲಿ ತನ್ನ 89ನೇ ವಯಸ್ಸಿಗೆ ನಿಧನರಾದರು. ಅತ್ಯಂತ ಬಡ ಕುಟುಂಬದಿಂದ ಬಂದ, ಶಾಲೆಗೆ ಹೋಗದೆ ಈ ಸಾಧನೆ ಮಾಡಿದ ಶೂಟರ್ ದಾದಿ ನಿಜಕ್ಕೂ ಗ್ರೇಟ್ ಅಲ್ವಾ?

Raja Marga Column Chandra tomar
#image_title
Continue Reading

ಸ್ಫೂರ್ತಿ ಕತೆ

Raja Marga Column : ಲಸಿಕೆ ಪ್ರಯೋಗಕ್ಕಾಗಿ ಮಗನ ಪ್ರಾಣವನ್ನೇ ಒತ್ತೆ ಇಟ್ಟ ಎಡ್ವರ್ಡ್‌ ಜೆನ್ನರ್‌!

Raja Marga Column : 1980ರ ನಂತರ ಜಗತ್ತಿನಲ್ಲಿ ಒಂದೇ ಒಂದು ಸಿಡುಬು ರೋಗಿ ಪತ್ತೆ ಆಗಲಿಲ್ಲ ಎಂದರೆ ಅದಕ್ಕೆ ಅವರು ಕಾರಣ. ಅವರು ಎಂದರೆ ಲಸಿಕೆ ವಿಜ್ಞಾನದ ಪಿತಾಮಹ ಡಾ. ಎಡ್ವರ್ಡ್‌ ಜೆನ್ನರ್‌. ಅವರು ತಮ್ಮ ಮೊದಲ ಲಸಿಕೆ ಪ್ರಯೋಗವನ್ನು ತನ್ನದೇ ಮಗನ ಮೇಲೆ ನಡೆಸಿದರು!

VISTARANEWS.COM


on

Raja Marga Column
Koo
RAJA MARGA COLUMN Rajendra Bhat

Raja Marga Column : ಇಡೀ ಜಗತ್ತು ಎರಡು ವರ್ಷಗಳ ಕಾಲ ಕೊರೋನಾ ಪೀಡಿತವಾಗಿ ತತ್ತರಿಸುವ ಸಂದರ್ಭದಲ್ಲಿ ಯಾರಾದರೂ ಅದಕ್ಕೆ ಲಸಿಕೆ ಕಂಡುಹಿಡಿಯಲಿ ದೇವರೇ ಎಂದು ಎಲ್ಲರೂ ಪ್ರಾರ್ಥನೆ ಮಾಡುತ್ತಿದ್ದದ್ದು ನಮಗೆ ಮರೆಯಲು ಸಾಧ್ಯವೇ ಇಲ್ಲ. ಇಡೀ ಜಗತ್ತಿನಲ್ಲಿ ಆ ಮಹಾಮಾರಿ ಉಂಟುಮಾಡಿದ ತಲ್ಲಣವನ್ನು ನಾವು ಮರೆಯೋದಾದರೂ ಹೇಗೆ?

ಅದೇ ರೀತಿ ಲಂಡನ್‌ನಲ್ಲಿ 1750ರ ಹೊತ್ತಿಗೆ ಸಿಡುಬು ರೋಗವು (smallpox disease) ಸ್ಫೋಟ ಆಗಿತ್ತು. ಆಗ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದರು. ಆಗ ತನ್ನ ಮತ್ತು ತನ್ನ ಮಗನ ಪ್ರಾಣ ಒತ್ತೆಯಿಟ್ಟು ಸಿಡುಬು ಎಂಬ ಮಹಾವೈರಸ್ ರೋಗಕ್ಕೆ ಲಸಿಕೆ (smallpox vaccine) ಕಂಡು ಹಿಡಿದ ಎಡ್ವರ್ಡ್ ಜೆನ್ನರ್- Edward Jenner (1749-1823) ಎಂಬ ಮಹಾ ವಿಜ್ಞಾನಿಯನ್ನು (English physician and scientist) ಜಗತ್ತು ಮರೆಯಲು ಸಾಧ್ಯವೇ?

Raja Marga Column Edward

Raja Marga Column : ಕಲಿಕೆಯಲ್ಲಿ ಸಾಮಾನ್ಯ ಬುದ್ಧಿಮತ್ತೆಯ ಹುಡುಗ

ಇಂಗ್ಲೆಂಡ್ ದೇಶದ ಗ್ಲಾಸೆಷ್ಟರ್‌ಶೈರ್‌ ಎಂಬ ಪುಟ್ಟ ಗ್ರಾಮದಲ್ಲಿ ಎಡ್ವರ್ಡ್ ಜನಿಸಿದರು. 5ನೆಯ ವಯಸ್ಸಿಗೆ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡರು. ಶಾಲೆಯಲ್ಲಿ ಕಲಿಯುವುದರಲ್ಲಿ ಸಾಧಾರಣ ಬುದ್ಧಿಮತ್ತೆ. ಆದರೆ ವೀಕ್ಷಣಾ ಸಾಮರ್ಥ್ಯವು ಅದ್ಭುತ.

ಬಾಲ್ಯದಲ್ಲಿ ಒಮ್ಮೆ ಅವರಿಗೂ ಸಿಡುಬು ರೋಗ ಬಂದಿತ್ತು. ಅದಕ್ಕೆ ಲಸಿಕೆಯನ್ನು ಹುಡುಕಬೇಕು ಎನ್ನುವ ತೀವ್ರವಾದ ಪ್ರಯತ್ನ ಅವರು ಆರಂಭ ಮಾಡಿದ್ದರು. ಆ ಕಾಯಿಲೆಯಲ್ಲಿ ಇಡೀ ಇಂಗ್ಲೆಂಡ್ ನರಳುತ್ತಿತ್ತು. ಸಿಡುಬು ರೋಗ ಬಂದವರು ಯಾರೂ ಬದುಕುವ ಸಾಧ್ಯತೆ ಇರಲಿಲ್ಲ.

Raja Marga Column Edward Jennar Smallpox Vaccine2

Raja Marga Column : ಎಡ್ವರ್ಡ್ ಜೆನ್ನರನ ಅದ್ಭುತ ವೀಕ್ಷಣೆ

ಆಗ ಮನುಷ್ಯರಿಗೆ ಸಿಡುಬು ಬಂದ ಹಾಗೆ ದನ, ಹಂದಿ, ಕುದುರೆಗಳಿಗೆ ಕೂಡ ಸಿಡುಬು ಬರುತ್ತಿತ್ತು. ಸಿಡುಬು ಬಂದ ದನಗಳ ಹಾಲು ಕರೆಯುವ ಹೆಂಗಸರಿಗೆ ದನದ ಸಿಡುಬಿನ ಗುಳ್ಳೆಗಳು ಕಾಣಿಸಿಕೊಂಡು ಮುಂದೆ ನಿಧಾನವಾಗಿ ಗುಣವಾಗಿ ಬಿಡುತ್ತಿದ್ದವು. ಆದರೆ ಅವರಿಗೆ ಮಾನವರ ಸಿಡುಬು ಬರುತ್ತಲೇ ಇರಲಿಲ್ಲ!

ಈ ಸೂಕ್ಷ್ಮ ವೀಕ್ಷಣೆಯು ಮುಂದೆ ಸಿಡುಬಿನ ಲಸಿಕೆ ಸಂಶೋಧನೆಗೆ ದಾರಿ ಆಯಿತು. ದನದ ಸಿಡುಬಿನ ಗುಳ್ಳೆಯ ಕೀವು ತೆಗೆದು ಮನುಷ್ಯರಿಗೆ ಚುಚ್ಚಿದಾಗ ದೇಹದಲ್ಲಿ ಮಾನವ ಸಿಡುಬಿನ ವಿರುದ್ಧ ರಕ್ಷಣೆ ದೊರೆಯುವುದು ಖಾತ್ರಿಯಾಯಿತು. ನಿರಂತರ ಪ್ರಯೋಗ ನಡೆದು ಫಲಿತಾಂಶ ದೊರೆಯಿತು. ಲಸಿಕೆ ಸಂಶೋಧನೆ ಆಯಿತು.

Raja Marga Column Edward Jennar Smallpox Vaccine2

ಆದರೆ ಲಸಿಕೆಯ ಪ್ರಯೋಗ ಮಾಡುವುದು ಯಾರ ಮೇಲೆ? ಇಬ್ಬರು ಹೆಂಗಸರು ಮುಂದೆ ಬಂದರಾದರೂ ಅಪನಂಬಿಕೆಯ ಮಾತಾಡಿದರು. ಆಗ ಮೊದಲು ಎಡ್ವರ್ಡ್ ಜೆನ್ನರ್ ತನ್ನ ಮುದ್ದಿನ ಮಗನ ಮೇಲೆ ಆ ಲಸಿಕೆ ಪ್ರಯೋಗ ಮಾಡಿದನು. ಲಸಿಕೆ ವರ್ಕ್ ಆಗದೆ ಇದ್ದರೆ ತನ್ನ ಮಗನ ಪ್ರಾಣಕ್ಕೆ ಅಪಾಯ ಇದೆ ಎಂದು ಜೆನ್ನರ್‌ಗೆ ಗೊತ್ತಿತ್ತು. ಆದರೆ ಲೋಕಕಲ್ಯಾಣದ ಸಂಕಲ್ಪದ ಮುಂದೆ ಸ್ವಾರ್ಥದ ಲವಲೇಶವೂ ಆತನಿಗೆ ಇರಲಿಲ್ಲ. ಯಶಸ್ಸು ದೊರೆತ ನಂತರ ಆ ಮಹಿಳೆಯರ ಮೇಲೆ ಲಸಿಕೆಯ ಪ್ರಯೋಗ ಮಾಡಿದನು. ಯಶಸ್ಸು ದೊರೆತಾಗ ಸ್ವರ್ಗಕ್ಕೆ ಮೂರೇ ಗೇಣು!

ಇದನ್ನೂ ಓದಿ : Raja Marga Column : ಅವರು ಕೇವಲ ಟಿ.ಎನ್‌ ಸೇಷನ್‌ ಅಲ್ಲ, ಪ್ರಜಾಪ್ರಭುತ್ವದ ಆಲ್ಸೇಷನ್‌!

ಮುಂದೆ ಜೇಮ್ಸ್ ಫೀಫ್ ಎಂಬ ಹುಡುಗನ ಮೇಲೆ ಈ ಲಸಿಕೆಯು 100% ಕೆಲಸ ಮಾಡಿದಾಗ( ಮೇ 14, 1796) ಇಡೀ ವೈದ್ಯ ಜಗತ್ತು ಆತನಿಗೆ ಜಯಕಾರ ಹಾಕಿತು. ಆತನ ದೂರದೃಷ್ಟಿ ಹಾಗೂ ಮುಂದೆ ವಿಶ್ವ ಆರೋಗ್ಯ ಸಂಸ್ಥೆಯ ಅವಿರತ ಪ್ರಯತ್ನಗಳ ಫಲವಾಗಿ ಜಗತ್ತಿನಾದ್ಯಂತ ಹುಟ್ಟಿದ ಪ್ರತೀ ಮಗುವಿಗೆ ಸಿಡುಬು ಲಸಿಕೆ ಕಡ್ಡಾಯವಾಗಿ ಹಾಕಲಾಯಿತು. ಜಗತ್ತಿನಲ್ಲಿ 1980ರ ನಂತರ ಸಿಡುಬಿನ ಯಾವ ಪ್ರಕರಣವೂ ದಾಖಲಾಗಿಲ್ಲ ಎನ್ನುವುದು ಎಡ್ವರ್ಡ್ ಜೆನ್ನರ್‌ಗೆ ದೊರೆತ ಮಹಾ ಪ್ರಶಸ್ತಿ ಅಲ್ವಾ?

ಸಿಡುಬು ರೋಗಕ್ಕೆ ಲಸಿಕೆ ಕಂಡುಹಿಡಿದು ಜಗತ್ತಿಗೆ ಮಹದುಪಕಾರ ಮಾಡಿದ ಎಡ್ವರ್ಡ್ ಜೆನ್ನರ್ ಒಬ್ಬ ಲೆಜೆಂಡ್ ಅಲ್ವಾ?

ವ್ಯಾಕ್ಸಿನ್‌ಗಳ ಒಂದು ಪುಟ್ಟ ಇತಿಹಾಸ ಇಲ್ಲಿದೆ

Continue Reading
Advertisement
Vampire Facial
ಆರೋಗ್ಯ11 mins ago

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Yogi Adithyanatha
ಪ್ರಮುಖ ಸುದ್ದಿ13 mins ago

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Road Accident in Bengaluru
ಬೆಂಗಳೂರು29 mins ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Dhanush Gowda Wedding With Sanjana Photos
ಕಿರುತೆರೆ35 mins ago

Dhanush Gowda:  ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಗೀತಾʼ ಧಾರಾವಾಹಿ ನಟ

ಕರ್ನಾಟಕ47 mins ago

Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

Drought Relief
ಕರ್ನಾಟಕ51 mins ago

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

IRCTC Jyotirlinga Yatra
ಪ್ರವಾಸ52 mins ago

IRCTC Jyotirlinga Yatra: ರೈಲ್ವೆ ಇಲಾಖೆಯಿಂದ ಏಳು ಜ್ಯೋತಿರ್ಲಿಂಗ ವೀಕ್ಷಣೆ ಪ್ರವಾಸ; ದರ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್53 mins ago

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Road Accident in kalaburagi
ಕಲಬುರಗಿ55 mins ago

Road Accident : ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

food poisoning raichur news
ಕ್ರೈಂ56 mins ago

Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ24 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌