Motivational story | ಅವನು ಗೆಳೆಯನ ಮುಂದೆ ಸದಾ ಸೋಲುತ್ತಿದ್ದ, ಸೋಲುತ್ತಲೇ ಗೆಲ್ಲುವ ಆಟ ಕಲಿತುಕೊಂಡ! - Vistara News

ಪ್ರಮುಖ ಸುದ್ದಿ

Motivational story | ಅವನು ಗೆಳೆಯನ ಮುಂದೆ ಸದಾ ಸೋಲುತ್ತಿದ್ದ, ಸೋಲುತ್ತಲೇ ಗೆಲ್ಲುವ ಆಟ ಕಲಿತುಕೊಂಡ!

Motivational story | ಆ ಹುಡುಗ ತನ್ನ ಗೆಳೆಯನ ಮುಂದೆ ಸದಾ ಸೋಲುತ್ತಲೇ ಇದ್ದ. ಆದರೆ, ಸೋಲಿನಿಂದ ಪಾಠ ಕಲಿಯುತ್ತಿದ್ದ, ಕುತಂತ್ರಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದ. ಕೊನೆಗೆ ಏನಾಯಿತು?

VISTARANEWS.COM


on

video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ- motivational story
ಬೆಂಗಳೂರಿನ ಬಸವನಗುಡಿಯ ಹತ್ತಿರದ ಮನೆ ಅದು. ಅಲ್ಲೊಬ್ಬ 10 ವರ್ಷದ ಹುಡುಗ. ಹೆಸರು ಸುರೇಶ್.‌ ಅವನಿಗೆ ವಿಡಿಯೋ ಗೇಮ್ಸ್‌ ಅಂದರೆ ತುಂಬಾ ಇಷ್ಟ. ಸಣ್ಣ ವಯಸ್ಸಿನಿಂದಲೇ ವಿಡಿಯೊ ಗೇಮ್ಸ್‌ ಆಡುತ್ತಿದ್ದುದರಿಂದ ಅದರಲ್ಲಿ ಎಕ್ಸ್‌ಪರ್ಟ್‌ ಆಗಿಬಿಟ್ಟಿದ್ದ. ಅವನಿಗೆ ವಿಡಿಯೊ ಗೇಮ್‌ನ ಎಲ್ಲ ತಂತ್ರಗಳು ಗೊತ್ತಿತ್ತು ಮತ್ತು ಕೆಲವು ಕುತಂತ್ರಗಳೂ ಗೊತ್ತಿತ್ತು. ಹಾಗಾಗಿ, ಅವನು ಎದುರಾಳಿ ಯಾರೇ ಇದ್ದರೂ ಸೋಲಿಸಿ ಬಿಡುತ್ತಿದ್ದ. ಅವನ ಆಟದ ರೀತಿ ಯಾರಿಗೇ ಅದರೂ ʻಅಬ್ಬಾʼ ಅನಿಸುವಂತೆ ಇರುತ್ತಿತ್ತು.

ಅವನು ಎಷ್ಟು ಬುದ್ಧಿವಂತನೆಂದರೆ ಅವನು ಮೋಸ ಮಾಡಿದರೂ ಎದುರಾಳಿಗಳಿಗೆ ಗೊತ್ತೇ ಆಗುತ್ತಿರಲಿಲ್ಲ. ಹಾಗಾಗಿ ಅಕ್ಕ ಪಕ್ಕದ ಹುಡುಗರನ್ನೆಲ್ಲ ತುಂಬ ಸುಲಭವಾಗಿ ಸೋಲಿಸಿ ಖುಷಿಪಡುತ್ತಿದ್ದ. ಅವನು ಚಾಂಪಿಯನ್‌ ಎಂದು ಎಲ್ಲರೂ ಒಪ್ಪಿಕೊಂಡಿದ್ದರು. ಅವನೇ ಪ್ರತಿ ಸಾರಿಯೂ ಗೆಲ್ಲುತ್ತಿದ್ದುದರಿಂದ ಹೆಚ್ಚಿನವರು ಅವನ ಜತೆ ಆಡಲು ಇಷ್ಟಪಡುತ್ತಿರಲಿಲ್ಲ. ʻಹೋಗು ಮಾರಾಯ, ನೀನೇ ಪ್ರತಿ ಸಾರಿ ಗೆಲ್ಲುವುದಾದರೆ ನಾವು ಯಾಕೆ ಆಡುವುದುʼ ಎನ್ನುತ್ತಿದ್ದರು.

ಆದರೆ, ಪಕ್ಕದ ಮನೆಯ ಪಾಪದ ಹುಡುಗ ಗಿರೀಶ್‌ ಮಾತ್ರ ಇವನು ಯಾವಾಗ ಕರೆದರೂ ಬರುತ್ತಿದ್ದ. ಸುರೇಶನ ಜತೆ ಆಡಿ ಸೋತು ಹೋಗುತ್ತಿದ್ದ. ಆಗೆಲ್ಲ ಸುರೇಶ್‌ ಹೆಮ್ಮೆಯಿಂದ ಬೀಗುತ್ತಿದ್ದ. ಗಿರೀಶನಿಗೆ ತಮಾಷೆ ಮಾಡುತ್ತಿದ್ದ.

ಹೀಗಿರುತ್ತಾ ಸುರೇಶ್‌ಗೆ ಲೈಫೇ ಒಂಥರಾ ಬೋರಾಯಿತು. ಯಾರನ್ನಾದರೂ ದೊಡ್ಡ ಮಟ್ಟದಲ್ಲಿ ಸೋಲಿಸಬೇಕು ಅನಿಸಿತು. ಅದಕ್ಕೆ ವಿಡಿಯೊ ಗೇಮ್‌ ಚಾಂಪಿಯನ್‌ಷಿಪ್‌ಗೆ ಹೆಸರು ನೋಂದಾಯಿಸಿದ. ಅಲ್ಲಿಯಾದರೂ ತನಗೊಬ್ಬ ಸರಿಯಾದ ಪ್ರತಿಸ್ಪರ್ಧಿ ಸಿಗಬಹುದು ಅಂತ ಅವನಿಗೆ ಆಸೆ. ಒಬ್ಬನೇ ಹೋಗಲು ಬೋರಾಗುತ್ತದೆ ಅಂತ ಗಿರೀಶನಿಗೂ ಬಾ ಎಂದು ಕರೆದ.

ಅದೊಂದು ಭಾನುವಾರ ಇಬ್ಬರೂ ಹೋದರು. ಗಿರೀಶ ʻನಾನು ಆಡುವುದಿಲ್ಲ. ನೀನು ಆಡುʼ ಎಂದು ಸುರೇಶನಿಗೆ ಹೇಳಿದ. ʻಹೇಗೂ ಇರ್ತೀಯಲ್ಲಾ.. ಇಲ್ಲೇ ಆಡ್ತಾ ಇರುʼ ಎಂದು ಸುರೇಶ್‌ ಸಲಹೆ ಕೊಟ್ಟ.

ಪಂದ್ಯಗಳು ಶುರುವಾದವು. ಆದರೆ, ಸುರೇಶನಿಗೆ ಈಗ ತನ್ನ ತಪ್ಪುಗಳು ಅರಿವಾಗತೊಡಗಿತು. ಅವನಿಗೆ ಚೀಟಿಂಗ್‌ ಮಾಡದೆ ಆಟ ಆಡಲು ಬರುತ್ತಲೇ ಇರಲಿಲ್ಲ. ಆದರೆ, ಇಲ್ಲಿ ದೊಡ್ಡ ಮಟ್ಟದ ಚಾಂಪಿಯನ್‌ಷಿಪ್‌ ಆಗಿದ್ದರಿಂದ ಅದಕ್ಕೆಲ್ಲ ಅವಕಾಶವಿರಲಿಲ್ಲ. ಸಣ್ಣ ಮೋಸ ಮಾಡಿದರೂ ಸಿಕ್ಕಿಬೀಳುತ್ತಿದ್ದ. ಸುರೇಶನ ಟ್ರಿಕ್‌ಗಳು ಇಲ್ಲಿ ನಡೆಯಲಿಲ್ಲ. ಹಾಗಾಗಿ ಬೇಗನೆ ಎಲಿಮಿನೇಟ್‌ ಆದ. ಹಾಗಾಗಿ ಬೇಜಾರಾಗಿ ದೂರದಲ್ಲಿ ಹೋಗಿ ಕುಳಿತಿದ್ದ.

ಸ್ವಲ್ಪ ಹೊತ್ತಿನಲ್ಲಿ ಚಾಂಪಿಯನ್‌ಷಿಪ್‌ ಕೊನೆಯ ಹಂತಕ್ಕೆ ತಲುಪಿತು. ವಿನ್ನರ್‌ ಘೋಷಿಸುವ ಸಮಯ. ಸುರೇಶನಿಗೆ ತಾನು ಗಿರೀಶನ ಜತೆ ಬಂದಿರುವುದು ನೆನಪಾಯಿತು. ಅವನನ್ನು ಹುಡುಕಿಕೊಂಡು ಹೊರಟ. ಆಗ ಮೈಕ್‌ನಲ್ಲಿ ವಿನ್ನರ್‌ ಯಾರೆಂದು ಘೋಷಿಸಿದರು. ಸುರೇಶ ವಿನ್ನರ್‌ ಹೆಸರು ಕೇಳಿ, ದಂಗಾಗಿ ಹೋದ. ಅವರು ಘೋಷಣೆ ಮಾಡಿದರು: ಇವತ್ತಿನ ಚಾಂಪಿಯನ್‌ಷಿಪ್‌ನ ವಿನ್ನರ್‌ ಗಿರೀಶ್‌!

ಆ ಕ್ಷಣವೇ ಸುರೇಶ ಓಡಿ ಹೋಗಿ ಗಿರೀಶನನ್ನು ಅಪ್ಪಿಕೊಂಡ. ನಿನಗೆ ಗೆಲ್ಲೋದಕ್ಕೆ ಹೇಗೆ ಸಾಧ್ಯ ಆಯ್ತು ಕಣೋ, ನನ್ನ ಮುಂದೆ ದಿನಾ ಸೋಲ್ತಾ ಇದ್ದೆ- ಎಂದು ಪ್ರಶ್ನಿಸಿದ.

ಆಗ ಗಿರೀಶ ಹೇಳಿದ: ನಿಜವಾಗಿ ನಾನು ಗೆಲ್ಲೋದಕ್ಕೆ ನೀನೇ ಕಾರಣ ಕಣೋ. ನೀನು ಪ್ರತಿ ಸಾರಿ ನನ್ನನ್ನು ಸೋಲಿಸಿದಾಗಲೂ ನಾನು ಅದರಿಂದ ಪಾಠ ಕಲಿಯುತ್ತಿದ್ದೆ. ಎಲ್ಲೆಲ್ಲ ತಂತ್ರಗಳನ್ನು ಬಳಸಬಹುದು? ಎದುರಾಳಿ ಎಲ್ಲೆಲ್ಲ ಕುತಂತ್ರಗಳನ್ನು ಬಳಸೋ ಸಾಧ್ಯತೆ ಇರುತ್ತದೆ ಎಂದು ನಾನು ಅರ್ಥ ಮಾಡಿಕೊಂಡೆ. ಹೀಗಾಗಿ ನನಗೆ ಎದುರಾಳಿಯ ಪ್ರತಿ ಹೆಜ್ಜೆಗಳೂ ಅರ್ಥವಾಗುತ್ತಿದ್ದವು.. ಅಂದ.

ಸುರೇಶ ಕೇಳಿದ: ಅಲ್ಲ ಕಣೋ, ಹಾಗಿದ್ದರೆ ನನ್ನ ಎದುರು ಪ್ರತಿ ಸಾರಿಯೂ ಯಾಕೆ ಸೋಲ್ತಿದ್ದೆ?

ಗಿರೀಶ್‌ ಕೇಳಿದ: ಹೆಚ್ಚಿನ ಸಾರಿ ನೀನೇ ಗೆಲ್ತಿದ್ದೆ. ಆದರೆ, ಕೆಲವೊಮ್ಮೆ ನಿನ್ನ ಖುಷಿಗಾಗಿ ನಾನೂ ಸೋಲ್ತಿದ್ದೆ ಕಣೋ. ಯಾಕೆಂದರೆ ಸೋತರೆ ನೀನು ತುಂಬ ಬೇಜಾರಾಗ್ತಿದ್ದೆಯಲ್ವಾ ಅದಕ್ಕೆ ಅಂದ. ಸುರೇಶ್‌ ಗೆಳೆಯನನ್ನು ತಬ್ಬಿಕೊಂಡ.

ಇದನ್ನೂ ಓದಿ | Motivational story: ಸ್ಕೂಟರ್‌ನಡಿಗೆ ಸಿಲುಕಿದ ಪುಟಾಣಿ ನಾಯಿ ಮತ್ತು ಅವನು ಹೋದದ್ದು ಎಲ್ಲಿಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kunwar Sarvesh: ಮತದಾನ ನಡೆದ ಮರುದಿನವೇ ಬಿಜೆಪಿ ಅಭ್ಯರ್ಥಿ ಹೃದಯಾಘಾತಕ್ಕೆ ಬಲಿ!

ಉತ್ತರ ಪ್ರದೇಶದ ಮೊರಾದಾಬಾದ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುನ್ವರ್‌ ಸರ್ವೇಶ್‌ ಸಿಂಗ್‌ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ರಿತೇಶ್‌ ಗುಪ್ತಾ ಅವರು ಮಾಹಿತಿ ನೀಡಿದ್ದಾರೆ. ಶುಕ್ರವಾರವಷ್ಟೇ ಮೊರಾದಾಬಾದ್‌ನಲ್ಲಿ ಮತದಾನ ನಡೆದಿತ್ತು.

VISTARANEWS.COM


on

Kunwar Sarvesh Singh
Koo

ನವದೆಹಲಿ: ಉತ್ತರ ಪ್ರದೇಶ, ತಮಿಳುನಾಡು ಸೇರಿ ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಶುಕ್ರವಾರ (ಏಪ್ರಿಲ್‌ 19) ಮತದಾನ ನಡೆದಿದೆ. ಮತದಾನ ನಡೆದ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ (Moradabad) ಕೂಡ ಸೇರಿದೆ. ಆದರೆ, ಮತದಾನ ನಡೆದ ಮರುದಿನವೇ ಅಂದರೆ, ಶನಿವಾರ (ಏಪ್ರಿಲ್‌ 20) ಮೊರಾದಾಬಾದ್‌ ಬಿಜೆಪಿ ಅಭ್ಯರ್ಥಿ (BJP Candidate) ಕುನ್ವರ್‌ ಸರ್ವೇಶ್‌ ಸಿಂಗ್‌ (71) (Kunwar Sarvesh Singh) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

“ಕುನ್ವರ್‌ ಸರ್ವೇಶ್‌ ಸಿಂಗ್‌ ಅವರಿಗೆ ಹೃದಯಾಘಾತ ಉಂಟಾಯಿತು. ಕೂಡಲೇ ಅವರನ್ನು ದೆಹಲಿಯಲ್ಲಿರುವ ಏಮ್ಸ್‌ಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಕುನ್ವರ್‌ ಸರ್ವೇಶ್‌ ಸಿಂಗ್‌ ಅವರು ಮೃತಪಟ್ಟಿದ್ದಾರೆ” ಎಂಬುದಾಗಿ ಮೊರಾದಾಬಾದ್‌ ನಗರ ಶಾಸಕ ರಿತೇಶ್‌ ಗುಪ್ತಾ ಅವರು ತಿಳಿಸಿದ್ದಾರೆ. ಕುನ್ವರ್‌ ಸರ್ವೇಶ್‌ ಸಿಂಗ್‌ ಅವರು ಕೆಲ ದಿನಗಳಿಂದ ಪ್ರಚಾರದಲ್ಲಿ ತೊಡಗಿರಲಿಲ್ಲ. ಆದರೂ ಅವರು ಈ ಬಾರಿ ಗೆಲುವಿನ ವಿಶ್ವಾಸದಲ್ಲಿದ್ದರು. ಆದರೆ, ಚುನಾವಣೆ ಫಲಿತಾಂಶ ಬರುವ ಮೊದಲೇ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕುನ್ವರ್‌ ಸರ್ವೇಶ್‌ ಸಿಂಗ್‌ ಅವರ ನಿಧನಕ್ಕೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.

ಕೆಲವೆಡೆ ಇವಿಎಂ ದೋಷ

ಮೊದಲ ಹಂತದ ಮತದಾನದ ವೇಳೆ ತಮಿಳುನಾಡು, ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಸ್ಸಾಂನ ಕೆಲವು ಬೂತ್ ಗಳಲ್ಲಿ ಸಣ್ಣ ಪ್ರಮಾಣದ ಇವಿಎಂ ದೋಷಗಳು ವರದಿಯಾಗಿವೆ. ಪಶ್ಚಿಮ ಬಂಗಾಳದಲ್ಲಿ ಸಂಜೆ 5 ಗಂಟೆಯವರೆಗೆ ಶೇಕಡಾ 77.57, ಅಸ್ಸಾಂನಲ್ಲಿ ಶೇಕಡಾ 70.77 ಮತ್ತು ಮೇಘಾಲಯದಲ್ಲಿ ಶೇಕಡಾ 69.91 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಕ್ಷೇತ್ರದಲ್ಲಿ ಹಿಂಸಾಚಾರ ನಡೆದಿದೆ. ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘರ್ಷಣೆ ನಡೆಸಿದ್ದು, ಮತದಾನ ಹಿಂಸಾಚಾರ, ಮತದಾರರ ಬೆದರಿಕೆ ಮತ್ತು ಚುನಾವಣಾ ಏಜೆಂಟರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಕ್ರಮವಾಗಿ 80 ಮತ್ತು 39 ದೂರುಗಳನ್ನು ದಾಖಲಾಗಿವೆ. ಸಂಘರ್ಷ ಪೀಡಿತ ಮಣಿಪುರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.67.46ರಷ್ಟು ಮತದಾನವಾಗಿದೆ.

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಥೊಂಗ್ಜು ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರು ಮತ್ತು ಅಪರಿಚಿತ ವ್ಯಕ್ತಿಗಳ ನಡುವೆ ವಾಗ್ವಾದ ನಡೆದಿದೆ. ಛತ್ತೀಸ್​ಗಢದ ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 63.41 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ. ಅಲ್ಲಿ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಿಆರ್​ಪಿಎಫ್​ ಜವಾನ ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಐಇಡಿ ಸ್ಫೋಟ ಸಂಭವಿಸಿದೆ.

ಇದನ್ನೂ ಓದಿ: ಚಾಯ್‌ವಾಲಾ ಮೋದಿ ಐಐಟಿ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದ ಕಾಂಗ್ರೆಸ್ ನಾಯಕ; ಭುಗಿಲೆದ್ದ ವಿವಾದ

Continue Reading

ಕ್ರೀಡೆ

IPL 2024: ಟಿ20 ಕ್ರಿಕೆಟ್​ನಲ್ಲೇ ನೂತನ ದಾಖಲೆ ಬರೆದ ಸನ್​ರೈರ್ಸ್​ ಹೈದರಾಬಾದ್

IPL 2024: ಹೈದರಾಬಾದ್​ ತಂಡ ಪವರ್​ ಪ್ಲೇಯಲ್ಲಿ ವಿಕೆಟ್​ ನಷ್ಟವಿಲ್ಲದೆ 125 ರನ್​ ಬಾರಿಸಿತು. ಇದು ಟಿ20 ಕ್ರಿಕೆಟ್​ನಲ್ಲಿ ಪವರ್​ ಪ್ಲೇಯಲ್ಲಿ ದಾಖಲಾದ ಮೊದಲ ಅತ್ಯಧಿಕ ರನ್​ ಗಳಿಕೆಯಾಗಿದೆ.

VISTARANEWS.COM


on

IPL 2024
Koo

ನವದೆಹಲಿ: ಎಡಗೈ ಬ್ಯಾಟರ್​ಗಳಾದ ಟ್ರಾವಿಸ್​ ಹೆಡ್​(Travis Head) ಮತ್ತು ಅಭಿಷೇಕ್​ ಶರ್ಮ(Abhishek Sharma) ಅವರ ವಿಸ್ಫೋಟಕ ಬ್ಯಾಟಿಂಗ್​ನಿಂದ ಸನ್​ರೈರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಜತೆಗೆ ಟಿ20 ಕ್ರಿಕೆಟ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದೆ. ಪವರ್​ ಪ್ಲೇಯಲ್ಲಿ ಅತ್ಯಧಿಕ ರನ್​ ಬಾರಿಸಿದ ತಂಡವೆಂಬ ಹೆಗ್ಗಳಿಗೆ ಪಾತ್ರವಾಗಿದೆ.

ಇಲ್ಲಿನ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಏರ್ಪಟ್ಟ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಹೈದರಾಬಾದ್​ ತಂಡಕ್ಕೆ ಆರಂಭಿಕರಾದ ಟ್ರಾವಿಸ್​ ಹೆಡ್​ ಮತ್ತು ಅಭಿಷೇಕ್​ ಶರ್ಮ ಜಿದ್ದಿಗೆ ಬಿದ್ದವರಂತೆ ಬ್ಯಾಟ್ ಬೀಸಿ ಅಮೋಘ ಆರಂಭ ಒದಗಿಸಿದರು. ಇವರ ಈ ಬ್ಯಾಟಿಂಗ್​ ಪರಾಕ್ರಮದಿಂದ ಹೈದರಾಬಾದ್​ ತಂಡ ಪವರ್​ ಪ್ಲೇಯಲ್ಲಿ ವಿಕೆಟ್​ ನಷ್ಟವಿಲ್ಲದೆ 125 ರನ್​ ಬಾರಿಸಿತು. ಇದು ಟಿ20 ಕ್ರಿಕೆಟ್​ನಲ್ಲಿ ಪವರ್​ ಪ್ಲೇಯಲ್ಲಿ ದಾಖಲಾದ ಮೊದಲ ಅತ್ಯಧಿಕ ರನ್​ ಗಳಿಕೆಯಾಗಿದೆ.

ಇದಕ್ಕೂ ಮುನ್ನ ದಾಖಲೆ ಕೆಕೆಆರ್​ ತಂಡದ ಪರ ಇತ್ತು. ಕೆಕೆಆರ್​ ತಂಡ ಆರ್​ಸಿಬಿ ವಿರುದ್ಧ 2017ರಲ್ಲಿ ನೋಲಾಸ್​ಗೆ 105 ರನ್​ ಬಾರಿಸಿತ್ತು. ಈ ದಾಖಲೆ ಇದೀಗ ಪತನಗೊಂಡಿದೆ. ಪವರ್​ ಪ್ಲೇಯಲ್ಲಿ ಮೊದಲ ಬಾರಿಗೆ 100ರನ್​ ಗಡಿ ದಾಡಿದ ದಾಖಲೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಹೆಸರಿನಲ್ಲಿದೆ. 2014ರಲ್ಲಿ ಪಂಜಾಬ್​ ವಿರುದ್ಧ 2 ವಿಕೆಟ್​ಗೆ ಭರ್ತಿ 100ರನ್​ ಬಾರಿಸಿತ್ತು.

ಪವರ್​ ಪ್ಲೇಯಲ್ಲಿ ಅತ್ಯಧಿಕ ರನ್​ ಗಳಿಸಿದ ತಂಡ


ಹೈದರಾಬಾದ್​- 125/0. ಡೆಲ್ಲಿ ವಿರುದ್ಧ(2024)

ಕೆಕೆಆರ್​-105/0. ಆರ್​ಸಿಬಿ ವಿರುದ್ಧ(2017)

ಚೆನ್ನೈ-100/2. ಪಂಜಾಬ್​ ವಿರುದ್ಧ(2014)

ಚೆನ್ನೈ-90/0. ಮುಂಬೈ ವಿರುದ್ಧ(2015)

ಕೆಕೆಆರ್​-88/1. ಡೆಲ್ಲಿ ವಿರುದ್ಧ(2024)

ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿದ ಅಭಿಷೇಕ್​ ಶರ್ಮ ಅವರು ಕೇವಲ 12 ಎಸೆತಗಳಲ್ಲಿ 6 ಸಿಕ್ಸರ್​ ಮತ್ತು 2 ಬೌಂಡರಿ ನೆರವಿನಿಂದ 46 ರನ್​ ಗಳಿಸಿ ಕುಲ್​ದೀಪ್​ ಯಾದವ್​ಗ ವಿಕೆಟ್​ ಒಪ್ಪಿಸಿದರು. ಅಭಿಷೇಕ್​ ಮತ್ತು ಹೆಡ್​ ಸೇರಿಕೊಂಡು ಮೊದಲ ವಿಕೆಟ್​ಗೆ 131 ರನ್​ ಜತೆಯಾಟ ನಡೆಸಿದರು. 16 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಟ್ರಾವಿಸ್​ ಹೆಡ್​ 11 ಬೌಂಡರಿ ಮತ್ತು 6 ಸಿಕ್ಸರ್​ ನೆರವಿನಿಂದ 89 ರನ್​ ಬಾರಿಸಿದರು. ಎದುರಿಸಿದ್ದು ಕೇವಲ 32 ಎಸೆತ. ಉಭಯ ಆಟಗಾರರ ವಿಕೆಟ್​ ಪತನದ ಬಳಿಕ ಹೈದರಾಬಾದ್​ ನಾಟಕೀಯ ಕುಸಿತ ಕಂಡಿತು. ಐಡೆನ್​ ಮಾರ್ಕ್ರಮ್​(1) ಮತ್ತು ಹೆನ್ರಿಚ್​ ಕ್ಲಾಸೆನ್​(15) ರನ್​ ಗಳಿಸಿ ನಿರಾಸೆ ಮೂಡಿಸಿದರು.

Continue Reading

ಪ್ರಮುಖ ಸುದ್ದಿ

ಚಾಯ್‌ವಾಲಾ ಮೋದಿ ಐಐಟಿ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದ ಕಾಂಗ್ರೆಸ್ ನಾಯಕ; ಭುಗಿಲೆದ್ದ ವಿವಾದ

ರಾಜಸ್ಥಾನದ ಜೋಧ್‌ಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕರಣ್‌ ಸಿಂಗ್‌ ಉಚಿಯಾರ್ದ ಅವರು ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಹಾ ಮಾರುತ್ತಿದ್ದ ಮೋದಿ ಐಐಟಿ, ಐಐಎಂ ಸಂಸ್ಥೆಗಳ ಬಗ್ಗೆ ಮಾತನಾಡಲು ಹೇಗೆ ಸಾಧ್ಯ ಎಂಬುದಾಗಿ ಪ್ರಶ್ನಿಸಿದ್ದಾರೆ.

VISTARANEWS.COM


on

Narendra Modi
Koo

ಜೈಪುರ: ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಯಾಗುತ್ತಿದೆ. ರಾಜಕೀಯ ನಾಯಕರ ಹೇಳಿಕೆಗಳು ಕೂಡ ತೀವ್ರ ಮೊನಚಾಗುತ್ತಿವೆ. ಇನ್ನೂ ಕೆಲ ನಾಯಕರು ಪ್ರತಿಸ್ಪರ್ಧಿಗಳು, ಎದುರಾಳಿ ಪಕ್ಷದ ನಾಯಕರ ವಿರುದ್ಧ ವೈಯಕ್ತಿಕ ನಿಂದನೆ, ಆರೋಪ, ಏಕವಚನ ಪ್ರಯೋಗ ಸೇರಿ ಹಲವು ರೀತಿಯಲ್ಲಿ ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಜೋಧ್‌ಪುರ ಕಾಂಗ್ರೆಸ್‌ ಅಭ್ಯರ್ಥಿ ಕರಣ್‌ ಸಿಂಗ್‌ ಉಚಿಯಾರ್ದ ಅವರು ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಚಹಾ ಮಾಡುತ್ತಿದ್ದ ಮೋದಿ ಐಐಟಿ, ಐಐಎಂ ಸಂಸ್ಥೆಗಳ ಬಗ್ಗೆ ಮಾತನಾಡಲು ಹೇಗೆ ಸಾಧ್ಯ” ಎಂದಿದ್ದಾರೆ.

ಮಾಧ್ಯಮವೊಂದರ ಜತೆ ಮಾತನಾಡಿದ ಕರಣ್‌ ಸಿಂಗ್‌ ಉಚಿಯಾರ್ದ, “ನಮ್ಮ ದೇಶದಲ್ಲಿ ಐಐಟಿ, ಐಐಎಂ ಸಂಸ್ಥೆಗಳನ್ನು ಸ್ಥಾಪಿಸಿದ್ದು ಯಾರು? ನರೇಂದ್ರ ಮೋದಿ ಅವರು ಇವುಗಳನ್ನು ದೇಶದಲ್ಲಿ ಸ್ಥಾಪಿಸಿದ್ದಾ? ನೀವು ನಿಮ್ಮ ಮನೆಯಲ್ಲಿ ಚಹಾ ಮಾರುತ್ತಿದ್ದಿರಿ. ಅಷ್ಟಕ್ಕೂ, ಚಹಾ ಮಾರುವವನ ಮಗನೊಬ್ಬ ಐಐಟಿ, ಐಐಎಂ ಸಂಸ್ಥೆಗಳ ಬಗ್ಗೆ, ಅವುಗಳ ವಿಚಾರಗಳ ಬಗ್ಗೆ ಹೇಗೆ ಮಾತನಾಡಲು ಸಾಧ್ಯ? ಹುರುಳಿಲ್ಲದೆ ಹೇಗೆ ಇವುಗಳ ಬಗ್ಗೆ ಮಾತನಾಡಲು ಸಾಧ್ಯವಾಗುತ್ತದೆ” ಎಂದು ಹೇಳಿರುವುದು ವಿವಾದಕ್ಕೆ ಗುರಿಯಾಗಿದೆ.

ಕರಣ್‌ ಸಿಂಗ್‌ ಉಚಿಯಾರ್ದ ನೀಡಿದ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. “ದೇಶದಲ್ಲಿ ಸಾಮಾನ್ಯ ಜನರು, ಅದರಲ್ಲೂ ಚಹಾ ಮಾರುವವರ ವಿರುದ್ಧ ಕಾಂಗ್ರೆಸ್‌ ದ್ವೇಷ ಕಾರುತ್ತಿದೆ. ಯಾರು ಬಾಯಿಯಲ್ಲಿ ಚಿನ್ನದ ಚಮಚವನ್ನು ಇಟ್ಟುಕೊಂಡು ಹುಟ್ಟಿರುತ್ತಾರೋ, ಕುಟುಂಬ ರಾಜಕಾರಣವನ್ನು ಮುಂದುವರಿಸುತ್ತಾರೋ, ಅವರ ಬೂಟು ನೆಕ್ಕವುದು ಮಾತ್ರ ಇವರಿಗೆ ಗೊತ್ತಿದೆ. ಇದಕ್ಕೆ ಕರಣ್‌ ಸಿಂಗ್‌ ಉಚಿಯಾರ್ದ ಅವರೇ ದೊಡ್ಡ ಉದಾಹರಣೆಯಾಗಿದ್ದಾರೆ” ಎಂದು ಕಾಂಗ್ರೆಸ್‌ ನಾಯಕಿ ಪ್ರೀತಿ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರಣ್‌ ಸಿಂಗ್‌ ಉಚಿಯಾರ್ದ ಅವರು ಜೋಧ್‌ಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದು, ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಎದುರಿಸುತ್ತಿದ್ದಾರೆ. ಇವರು ಸಚಿನ್‌ ಪೈಲಟ್‌ ಅವರ ಆಪ್ತರಾಗಿದ್ದಾರೆ. ಕಾಂಗ್ರೆಸ್‌ ನಾಯಕರು ಮೊದಲು ನರೇಂದ್ರ ಮೋದಿ ಅವರನ್ನು ಚಾಯ್‌ವಾಲಾ ಎಂಬುದಾಗಿ ಟೀಕಿಸಿದ್ದರು. ಇದನ್ನೇ ಮೋದಿ ಅವರು ಪ್ರಚಾರದ ಭಾಗವನ್ನಾಗಿಸಿಕೊಂಡರು. ನಾನು ಚಾಯ್‌ವಾಲಾ ಆಗಿದ್ದೆ, ಚಾಯ್‌ವಾಲಾನೊಬ್ಬ ಪ್ರಧಾನಿಯಾಗಿರುವುದು ಕಾಂಗ್ರೆಸ್‌ ನಾಯಕರಿಗೆ ಇಷ್ಟವಿಲ್ಲ ಎಂದು ಮೋದಿ ಟೀಕಿಸಿದ್ದರು.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ನಾಯಕ ಸುರ್ಜೇವಾಲಾ ಅವರ ವಿವಾದಾತ್ಮಕ ಹೇಳಿಕೆ ಬಳಿಕ ಟಿಎಂಸಿಗೂ ಸಂಕಷ್ಟ

Continue Reading

Lok Sabha Election 2024

Modi in Karnataka: ಬಾಂಬ್ ಸ್ಫೋಟ, ನೇಹಾ ಹತ್ಯೆ ಪ್ರಕರಣ; ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ವಾಗ್ದಾಳಿ

Modi in Karnataka: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ ಬೆಂಗಳೂರಿನ ಪರಿಸ್ಥಿತಿಯನ್ನು ಹಾಳು ಮಾಡಿದೆ. ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶವನ್ನು ಹೊರಹಾಕಿದ್ದಾರೆ.

VISTARANEWS.COM


on

Modi in Karnataka Bomb blasts and Neha murder case Modi attacks Congress government
Koo

ಬೆಂಗಳೂರು: ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಆಗುತ್ತಿದೆ. ಭಜನೆ ಮಾಡಿದರೂ ಹಲ್ಲೆ ಮಾಡಲಾಗುತ್ತಿದೆ. ಬೀದಿ ಬೀದಿಗಳಲ್ಲಿ ಬಾಂಬ್‌ ಸ್ಫೋಟಗೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು, ಬೆಂಗಳೂರಿನಲ್ಲಿ ನಡೆದ ಬಾಂಬ್‌ ಸ್ಫೋಟ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು (Neha Murder Case) ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮೋದಿ (Modi in Karnataka) ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Government) ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ ಬೆಂಗಳೂರಿನ ಪರಿಸ್ಥಿತಿಯನ್ನು ಹಾಳು ಮಾಡಿದೆ. ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶವನ್ನು ಹೊರಹಾಕಿದರು.

ನಾವು ಅಧಿಕಾರಕ್ಕೆ ಬರುವಾಗ ಭಾರತವು ಆರ್ಥಿಕವಾಗಿ ಭಾರಿ ಹಿಂದಿತ್ತು. ಈಗ ಜಾಗತಿಕವಾಗಿ ಆರ್ಥಿಕ ಪ್ರಗತಿಯಲ್ಲಿ 5ನೇ ಸ್ಥಾನದಲ್ಲಿದ್ದೇವೆ. ಇದಕ್ಕೆ ಕಾರಣವಾಗಿದ್ದು, ನಿಮ್ಮ ಮತ. ಕಳೆದ 10 ವರ್ಷದಲ್ಲಿ ಭಾರತವು ಸಾಕಷ್ಟು ಸುಧಾರಣೆಯನ್ನು ಕಂಡಿದ್ದಲ್ಲದೆ, ಆರ್ಥಿಕ ಕ್ರಾಂತಿಯಾಗಿದೆ. ಈಗ ಭಾರತವು ಹಿಂಬಾಲಿಸುವ ದೇಶವಾಗಿ ಉಳಿದಿಲ್ಲ. 2014 ಹಾಗೂ 2019ರಲ್ಲಿ ಪೂರ್ಣ ಬಹುಮತಗಳೊಂದಿಗೆ ಭರ್ಜರಿ ಗೆಲುವನ್ನು ನಮಗೆ ಕೊಟ್ಟಿದ್ದೀರಿ. ಈ ಬಾರಿಯೂ ಅಂಥದ್ದೇ ಗೆಲುವನ್ನು ನೀವು ಕೊಡುತ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೀವೀಗ ಎನ್‌ಡಿಎ ಹಾಗೂ ಇಂಡಿಯಾ ಅಲೆಯನ್ಸ್‌ ಪ್ರಚಾರಗಳನ್ನು ನೋಡಿದ್ದೀರಿ. ಆದರೆ, ಇಂಡಿ ಅಲೆಯನ್ಸ್‌ನವರು ಸುಳ್ಳು ಆರೋಪವನ್ನು ಮಾಡುತ್ತಲೇ ಬರುತ್ತಿದ್ದಾರೆ. ಆದರೆ, ನಿಮ್ಮ ಮೋದಿ ಉದ್ದೇಶ ಏನು? ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದೇ ನನ್ನ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ 1 GB ಡೇಟಾ

ನಾವು ನಮ್ಮ ಕೆಲಸ ಹಾಗೂ ಟ್ರ್ಯಾಕ್‌ ರೆಕಾರ್ಡ್‌ ಇಟ್ಟುಕೊಂಡು ಮತ ಕೇಳುತ್ತಿದ್ದೇವೆ. ನಮ್ಮ ಸರ್ಕಾರ ರೇರಾ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ. ಇದರಿಂದ ಸಾಮಾನ್ಯರಿಗೆ ಆಗುತ್ತಿದ್ದ ಅನ್ಯಾಯವನ್ನು ತಡೆದಿದ್ದೇವೆ. 2014ಕ್ಕಿಂತ ಮೊದಲು ನಿಮಗೆ 2.5 ಲಕ್ಷ ರೂಪಾಯಿ ಇದ್ದರೂ ನೀವು ತೆರಿಗೆ ಕಟ್ಟಬೇಕಿತ್ತು. ಆದರೆ, ಇಂದು ನೀವು 7 ಲಕ್ಷದ ವರೆಗೆ ಆದಾಯ ಹೊಂದಿದರೂ ಒಂದು ರೂಪಾಯಿ ಟ್ಯಾಕ್ಸ್‌ ಕಟ್ಟುತ್ತಿಲ್ಲ. ಇನ್ನು ಜಿಎಸ್‌ಟಿ ಜಾರಿಯಿಂದ ಪರೋಕ್ಷ ತೆರಿಗೆ ಕಟ್ಟುವುದು ತಪ್ಪಿದೆ. ಇದೆಲ್ಲವೂ ಸಾಧ್ಯವಾಗಿದ್ದು ನಮ್ಮ ಸರ್ಕಾರದಿಂದ ಮಾತ್ರ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಎಲ್‌ಇಡಿ ಬಲ್ಬ್‌ ಅಂದು 400 ರೂಪಾಯಿ ಇತ್ತು. ಆದರೆ, ಇಂದು ನಾವದನ್ನು 40 ರೂಪಾಯಿವರೆಗೆ ಇಳಿಸಿದ್ದೇವೆ. ಇಂದು ಈ ಬಲ್ಬ್‌ಗಳು ಅದೆಷ್ಟೋ ಮಧ್ಯಮ ವರ್ಗದ ಮನೆಯಲ್ಲಿ ಉರಿಯುತ್ತಿದೆ. ಅವರಿಗೆ ಪ್ರಕಾಶಮಾನವಾದ ಬೆಳಕಿನ ಜತೆಗೆ ವಿದ್ಯುತ್‌ ಬಿಲ್‌ನಲ್ಲಿಯೂ ಉಳಿತಾಯ ಆಗುತ್ತಿದೆ. 20 ಸಾವಿರ ಕೋಟಿ ರೂಪಾಯಿ ಪ್ರತಿ ವರ್ಷ ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ ಡೇಟಾ

ಎನ್‌ಡಿಎ ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಡಿಜಿಟಲ್‌ಗೆ ದಾಖಲೆ ರೂಪದಲ್ಲಿ ಹಣವನ್ನು ಹೂಡಿಕೆ ಮಾಡಿದೆ. ಎಲೆಕ್ಟ್ರಿಕ್ ವೆಹಿಕಲ್ ಬರುವುದಕ್ಕೆ ನಾವು ಕಾರಣ. ಭಾರತದಲ್ಲಿ ಆಗಿರುವ ಡಿಜಿಟಲ್‌ ಕ್ರಾಂತಿಯಲ್ಲಿ ಬೆಂಗಳೂರಿಗರ ಕೊಡುಗೆ ಇದೆ. ಬೆಂಗಳೂರು ಡಿಜಿಟಲ್‌ ಹಬ್‌ ಆಗಿದೆ. ಈ ಮೊದಲು 1 GB ಡೇಟಾ 250 ರೂಪಾಯಿ ಆಸುಪಾಸಿನಲ್ಲಿತ್ತು. ಇಂದು ಅದೇ 1 GB ಡೇಟಾಗೆ 10 ರೂಪಾಯಿ ಆಸುಪಾಸು ಆಗಿದೆ. ನಾವು ನಿಮಗೆ ಕಡಿಮೆ ವೆಚ್ಚದಲ್ಲಿ ಡೇಟಾ ಕೊಡುತ್ತಿದೆ. ಮೊಬೈಲ್ ಬಿಲ್ ಈಗ 500 ರೂಪಾಯಿಗಿಂತ ಕಡಿಮೆ ಬರುತ್ತಿದೆ. ಇದರಿಂದ ಮಾಸಿಕವಾಗಿ ಐದಾರು ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ನಮ್ಮ ಸರ್ಕಾರವು ಡೇಟಾ ಸುರಕ್ಷತೆಗೆ ಬಲವಾದ ಕಾನೂನು ತಂದಿದೆ. ಎಂದು ನರೇಂದ್ರ ಮೋದಿ ಹೇಳಿದರು.

70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್‌ ಭಾರತ್‌

ಮಧ್ಯಮ ಮತ್ತು ಬಡತನ ರೇಖೆ ಕೆಳಗೆ ಇರುವವರಿಗೆ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ನೀಡಿದ್ದೇವೆ. ಇದನ್ನು 70 ವರ್ಷ ಮೇಲ್ಪಟ್ಟವರಿಗೂ ವಿಸ್ತರಣೆ ಮಾಡಲು ಮುಂದಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಬುಲೆಟ್ ಟೈನ್ ತಂದು ಸಮಯ ಉಳಿಸಿದ್ದೇವೆ

ಈ ಮೊದಲು ಕಾಂಗ್ರೆಸ್ ಮಾಫಿಯಾ ಮಾಡೋದರಲ್ಲಿ ಲೀನವಾಗಿತ್ತು. ಭ್ರಷ್ಟಾಚಾರ ಮಾಡುವುದರಲ್ಲಿ ತಲ್ಲೀನವಾಗಿದೆ. ಆದರೆ, ನಾವು 70 ಕಿ.ಮೀ. ವರೆಗೆ ನಮ್ಮ ಮೇಟ್ರೋ ಯೋಜನೆಗೆ ಚಾಲನೆ ನೀಡಿದ್ದೇವೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ವಿದೇಶಗಳಲ್ಲೂ ಚರ್ಚೆ ಆಗುತ್ತಿದೆ. ಬುಲೆಟ್ ಟೈನ್ ಅನ್ನು ತಂದು ನಿಮ್ಮ ಸಮಯವನ್ನು ಉಳಿಸಿದ್ದೇವೆ. ಇದರಿಂದ ಬೆಂಗಳೂರಿಗೆ ಬಂದು ಕೆಲಸ ಮಾಡುವವರಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಸರ್ಕಾರದ ಸಾಧನೆಗಳ ಮಾಹಿತಿ ನೀಡಿದರು.

ದೊಡ್ಡ ದೊಡ್ಡ ಪ್ರಾಜೆಕ್ಟ್‌ ಪಡೆಯುತ್ತಿರುವ ಎಚ್‌ಎಎಲ್‌

ಕಾಂಗ್ರೆಸ್ ಎಚ್‌ಎಎಲ್ ವಿಚಾರದಲ್ಲಿ ಏನೆಲ್ಲ ಆರೋಪ ಮಾಡಿತ್ತು? ಮೋದಿ ಹೆಸರು ಕೆಡಿಸಲು ಕಾಂಗ್ರೆಸ್ ಮುಂದಾಗಿತ್ತು. ಅದೇ ಎಚ್‌ಎ‌ಎಲ್ ಈಗ ಅನೇಕ ಸಾಧನೆ ಮಾಡಿದೆ. ರಾಜ್ಯದಲ್ಲಿ ದೊಡ್ಡ ಹೆಲಿಕಾಪ್ಟರ್ ನಿರ್ಮಾಣ ಕೈಗಾರಿಕೆಯನ್ನು ಎಚ್ಎಎಲ್ ಸ್ಥಾಪಿಸಿದೆ. ಎಚ್‌ಎಎಲ್‌ ಇಂದು ಹೆಚ್ಚು ಹೆಚ್ಚು ಪ್ರಾಜೆಕ್ಟ್‌ಗಳನ್ನು ಪಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಿ

ಮೆಟ್ರೋ, ಕೋಚ್‌, ರೈಲು ಬೋಗಿಗಳನ್ನು ರಫ್ತು ಮಾಡುತ್ತಿದ್ದೇವೆ. ಮೊದಲ ಹಂತದ ಮಿಸೈಲ್‌ ಅನ್ನು ಫಿಲಿಪ್ಪೀನ್ಸ್‌ಗೆ ಕಳಿಸಿದ್ದೇವೆ. ಅಮೆರಿಕದ ಬಳಿಕ ಬೋಯಿಂಗ್‌ ಕರ್ನಾಟಕದಲ್ಲಿ ನಿರ್ಮಾಣ ಆಗುತ್ತಿದೆ. ಕಾಂಗ್ರೆಸ್‌ ಡಿಜಿಟಲ್‌ ಇಂಡಿಯಾವನ್ನು ವಿರೋಧ ಮಾಡಿತ್ತು. ಕೊರೊನಾ ವ್ಯಾಕ್ಸಿನ್‌ ಬಗ್ಗೆ ವ್ಯಂಗ್ಯ ಮಾಡಿತ್ತು. ಇಂದು ನಿಮ್ಮ ನರೇಂದ್ರ ಮೋದಿ ದೇಶದಲ್ಲಿ 6 G ತರಲು ಪ್ರಯತ್ನ ಮಾಡುತ್ತಿದ್ದರೆ, ಕಾಂಗ್ರೆಸ್‌ ಮೋದಿಯನ್ನು ಇಳಿಸುತ್ತೇನೆ ಎಂದು ಹೊರಟಿದೆ. ಇದಕ್ಕೆ ನೀವು ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಇದನ್ನೂ ಓದಿ: Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

ನಾನು ನನ್ನ ಭಾಷಣವನ್ನು ಕನ್ನಡದಲ್ಲಿ ಅನುವಾದಿಸಿ ಟ್ವಿಟರ್‌ನಲ್ಲಿ ಅಪ್ಲೋಡ್‌ ಮಾಡುತ್ತಿದ್ದೇನೆ. ಇದಕ್ಕೆ ಕಾರಣವಾಗಿದ್ದು, AI ತಂತ್ರಜ್ಞಾನವಾಗಿದೆ ಎಂದು ಮೋದಿ ತಿಳಿಸಿದರು. ನನ್ನ ಒಂದು ವೈಯಕ್ತಿಕ ಕೆಲಸವನ್ನು ಮಾಡಿಕೊಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಎಲ್ಲರ ಮನೆಗೆ ಹೋಗಿ ಮೋದಿ ನಿಮಗೆ ಪ್ರಣಾಮವನ್ನು ಸಲ್ಲಿಸಲು ಹೇಳಿದ್ದಾರೆ ಎಂಬುದನ್ನು ಹೇಳಿ ಎಂದು ಕೇಳಿಕೊಂಡರು.

Continue Reading
Advertisement
Kunwar Sarvesh Singh
ದೇಶ10 mins ago

Kunwar Sarvesh: ಮತದಾನ ನಡೆದ ಮರುದಿನವೇ ಬಿಜೆಪಿ ಅಭ್ಯರ್ಥಿ ಹೃದಯಾಘಾತಕ್ಕೆ ಬಲಿ!

IPL 2024
ಕ್ರೀಡೆ23 mins ago

IPL 2024: ಟಿ20 ಕ್ರಿಕೆಟ್​ನಲ್ಲೇ ನೂತನ ದಾಖಲೆ ಬರೆದ ಸನ್​ರೈರ್ಸ್​ ಹೈದರಾಬಾದ್

Prajadhwani 2 Lok Sabha election campaign meeting at KR Nagar
ಮಂಡ್ಯ29 mins ago

Lok Sabha Election 2024: ನನ್ನನ್ನು ಗೆಲ್ಲಿಸಿ, ಕಾಂಗ್ರೆಸ್‌ಗೆ ಶಕ್ತಿ ತುಂಬಿ: ವೆಂಕಟರಮಣೇಗೌಡ ಮನವಿ

Uttara Kannada Lok Sabha Constituency BJP Candidate Vishweshwara Hegde Kageri latest Statement
ಉತ್ತರ ಕನ್ನಡ31 mins ago

Sirsi News: ಕಾಂಗ್ರೆಸ್ ಸರ್ಕಾರದ ಮತಾಂಧರ ಓಲೈಕೆಯೇ ನೇಹಾ ಹತ್ಯೆಗೆ ಕಾರಣ: ಕಾಗೇರಿ ಖಂಡನೆ

Narendra Modi
ಪ್ರಮುಖ ಸುದ್ದಿ32 mins ago

ಚಾಯ್‌ವಾಲಾ ಮೋದಿ ಐಐಟಿ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದ ಕಾಂಗ್ರೆಸ್ ನಾಯಕ; ಭುಗಿಲೆದ್ದ ವಿವಾದ

House roof collapsed due to heavy rain at ripponpet
ಶಿವಮೊಗ್ಗ32 mins ago

Karnataka Weather: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಚಾವಣಿ; ಅಪಾರ ಹಾನಿ

Protest against Neha murder case in Yadgiri
ಯಾದಗಿರಿ34 mins ago

Yadgiri News: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಯಾದಗಿರಿಯಲ್ಲಿ ಪ್ರತಿಭಟನೆ

Ballari Lok Sabha Congress candidate e Tukaram election campaign in Hagaribommanahalli
ರಾಜಕೀಯ34 mins ago

Lok Sabha Election 2024: ದೇಶದಲ್ಲಿ ಅಭಿವೃದ್ಧಿ ಕ್ರಾಂತಿ ಮಾಡಿದ್ದು ಕಾಂಗ್ರೆಸ್‌ ಪಕ್ಷ: ಈ. ತುಕಾರಾಂ

Loka sabha election-2024
Lok Sabha Election 202436 mins ago

Loka sabha election-2024: ಮೋದಿ ಗೆದ್ದಿದ್ದ ವಡೋದರ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ!

Job News
ಉದ್ಯೋಗ38 mins ago

Job News: ಕೆಪಿಎಸ್‌ಸಿಯ 1 ಹುದ್ದೆಗೆ ಸರಾಸರಿ 508 ಅರ್ಜಿ ಸಲ್ಲಿಕೆ; ಒಟ್ಟು 1.95 ಲಕ್ಷ ಅಭ್ಯರ್ಥಿಗಳಿಂದ ಅಪ್ಲಿಕೇಷನ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20247 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ8 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ9 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌