Motivational story : ವಯಸ್ಸಾದ ಮೇಲೆ ಮನಸಿಗೆ ನೆಮ್ಮದಿ ಇರಬೇಕಾದರೆ ಹೀಗೆ ಮಾಡಿ ಎಂದರು ಆ ವ್ಯಕ್ತಿ! - Vistara News

ಪ್ರಮುಖ ಸುದ್ದಿ

Motivational story : ವಯಸ್ಸಾದ ಮೇಲೆ ಮನಸಿಗೆ ನೆಮ್ಮದಿ ಇರಬೇಕಾದರೆ ಹೀಗೆ ಮಾಡಿ ಎಂದರು ಆ ವ್ಯಕ್ತಿ!

Motivational story | ವಯಸ್ಸಾದ ನಂತರ ಮಕ್ಕಳು ಮಾತು ಕೇಳುತ್ತಿಲ್ಲ, ಎಲ್ಲರೂ ಕಡೆಗಣಿಸುತ್ತಿದ್ದಾರೆ ಎಂಬ ಬೇಸರ ಕಾಡುವುದು ಸಹಜ. ಹಾಗಿದ್ದರೆ ನೆಮ್ಮದಿಗಾಗಿ ಏನು ಮಾಡಬೇಕು?

VISTARANEWS.COM


on

friends
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ – Motivational story
ಒಂದು ಸಾರಿ ವಿಶ್ವನಾಥ ರಾಯರು ಏನೋ ಕೆಲಸದ ನಿಮಿತ್ತ ನಗರಕ್ಕೆ ಹೋಗಿದ್ದರು. ವಿಶ್ವನಾಥ ರಾಯರಿಗೆ ತಮ್ಮ ಮಕ್ಕಳು ಸರಿಯಾಗಿ ಕೆಲಸ ಮಾಡುತ್ತಿಲ್ಲ, ಹೇಳಿದ ಮಾತು ಕೇಳುತ್ತಿಲ್ಲ. ಇನ್ನೂ ಬದುಕಿನಲ್ಲಿ ಸೆಟ್ಲ್‌ ಆಗಿಲ್ಲ, ಸೊಸೆಯಂದಿರು ಕೂಡಾ ಅವರಿಗೆ ಸರಿಯಾದ ಸಾಥ್‌ ನೀಡುತ್ತಿಲ್ಲ ಎನ್ನುವ ನೋವು.
ನಗರಕ್ಕೆ ಹೋಗಿದ್ದಾಗ ಅಲ್ಲೊಬ್ಬರು ವ್ಯಕ್ತಿಯೊಬ್ಬರು ಸಿಕ್ಕರು. ಸುಮಾರು ಒಂದೇ ಪ್ರಾಯ ಆಗಿದ್ದರಿಂದ ಮಾತು ಬೆಳೆದು ಗೆಳೆತನವಾಯಿತು. ನೀವೊಮ್ಮೆ ನಮ್ಮ ಮನೆಗೆ ಬನ್ನಿ ಎಂದು ಕರೆದರು ಆ ವ್ಯಕ್ತಿ. ʻನೀವು ನಮ್ಮ ಮನೆಗೆ ಬನ್ನಿʼ ಎಂಬ ಮಾತು ನಾಲಿಗೆ ತುದಿವರೆಗೆ ಬಂತಾದರೂ ವಿಶ್ವನಾಥ ರಾಯರು ತಡೆದುಕೊಂಡರು. ಮನೆಗೆ ಬಂದರೆ ಈ ಮಕ್ಕಳು ಏನು ಹೇಳುತ್ತಾರೋ ಎಂಬ ಭಯ ಅವರಿಗೆ. ಹೀಗಾಗಿ ತಾನೇ ಅವರ ಮನೆಗೆ ಹೋಗಲು ನಿರ್ಧರಿಸಿದರು ವಿಶ್ವನಾಥ ರಾಯರು.

ಅದೊಂದು ದಿನ ವಿಶ್ವನಾಥ ರಾಯರು ಆ ವ್ಯಕ್ತಿಯ ಮನೆಗೆ ಹೋದರು. ಅದೊಂದು ತುಂಬು ಕುಟುಂಬ. ತುಂಬ ಜನ ಗಂಡುಮಕ್ಕಳು, ಮೊಮ್ಮಕ್ಕಳಿಂದ ತುಂಬಿ ಹೋಗಿತ್ತು. ವಿಶ್ವನಾಥ ರಾಯರಿಗೆ ಖುಷಿಯಾಯಿತು. ʻʻನಿಮ್ಮ ಮನೆ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿ ತುಳುಕುತ್ತಿದೆ. ಈ ರೀತಿ ಇರಲು ನೀವೇನು ಮಾಡಿದ್ದೀರಿʼʼ ಎಂದು ಕೇಳಿದರು ವಿಶ್ವನಾಥ ರಾಯರು. ಅವರಿಗೆ ಮನಸ್ಸಿನಲ್ಲಿ ತಮ್ಮ ಮನೆಯ ಒಂದು ಚಿತ್ರ ಮೂಡಿಬಂದು ಬೇಸರವಾಯಿತು. ಮೊಮ್ಮಕ್ಕಳೆಲ್ಲ ಬಂದು ಅಜ್ಜನನ್ನು ಮುತ್ತಿಕೊಂಡಾಗ ತಮ್ಮ ಮೊಮ್ಮಕ್ಕಳ ನೆನಪಾಯಿತು. ಒಮ್ಮೆಯೂ ಪ್ರೀತಿಯಿಂದ ತಬ್ಬಿಕೊಳ್ಳದ ಅವರ ಬಗ್ಗೆ ಬೇಸರವಾಯಿತು.

ʻʻನಾನು ಈಗ ಏನೂ ಮಾಡುತ್ತಿಲ್ಲ. ದೇವರ ದಯೆಯಿಂದ ನಮಗೆ ಒಳ್ಳೆಯ ಬ್ಯುಸಿನೆಸ್‌ ಇದೆ. ನಾನು ನನ್ನೆಲ್ಲ ಜವಾಬ್ದಾರಿಗಳನ್ನು ಮಕ್ಕಳಿಗೆ ಹಂಚಿ ಬಿಟ್ಟಿದ್ದೇನೆ. ಸೊಸೆಯಂದಿರು ಮನೆಯ ಜವಾಬ್ದಾರಿ ನೋಡಿಕೊಳ್ಳುತ್ತಾರೆ. ನಾನು ಮೊಮ್ಮಕ್ಕಳೊಂದಿಗೆ ಖುಷಿಯಾಗಿರುತ್ತೇನೆʼʼ ಎಂದರು ಆ ವ್ಯಕ್ತಿ.

ವಿಶ್ವನಾಥ ರಾಯರು ಕೇಳಿದರು: ನಿಮ್ಮ ಮಕ್ಕಳು ಏನಾದರೂ ತಪ್ಪು ಮಾಡಿದರೆ ನಿಮಗೆ ಅವರಿಗೆ ಬುದ್ಧಿ ಹೇಳಬೇಕು ಅನಿಸುವುದಿಲ್ಲವೇ?

ಆ ವ್ಯಕ್ತಿ ಹೇಳಿದರು: ನೋಡಿ ವಿಶ್ವನಾಥ ರಾಯರೇ, ನಾನು ಒಂದು ಪಾಲಿಸಿ ಮಾಡಿಕೊಂಡಿದ್ದೇನೆ. ನಾನು ಎಲ್ಲ ಜವಾಬ್ದಾರಿ ಹಂಚಿಬಿಟ್ಟಿದ್ದೇನೆ. ಪದೇಪದೆ ಅವರ ಕೆಲಸದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ನಾನು ಯಾರಿಂದಲೂ ಏನನ್ನೂ ನಿರೀಕ್ಷಿಸುವುದೂ ಇಲ್ಲ. ಏನು ಸಿಗುತ್ತದೋ ಅದರಲ್ಲಿ ಖುಷಿಪಡುವುದನ್ನು ರೂಢಿಸಿಕೊಂಡಿದ್ದೇನೆ.

ನನ್ನ ಮಕ್ಕಳು ಏನಾದರೂ ತಪ್ಪು ಮಾಡಿದ್ದು ಗೊತ್ತಾದರೂ ನಾನು ಸುಮ್ಮನಿರುತ್ತೇನೆ. ಆದರೆ, ಯಾವಾಗ ಮಕ್ಕಳು ಬಂದು ನನ್ನ ಸಲಹೆ ಕೇಳುತ್ತಾರೋ ಆಗ ನನ್ನ ಅನುಭವಗಳನ್ನು ಹೇಳುತ್ತೇನೆ. ಏನು ತಪ್ಪು ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ. ಹಾಗಂತ ನಂತರ ಅವರು ನನ್ನ ಸಲಹೆಗಳನ್ನು ಪಾಲಿಸುತ್ತಾರಾ ಇಲ್ವಾ ಎಂದು ನಾನೇನೂ ನೋಡಲು ಹೋಗುವುದಿಲ್ಲ. ಮಾಡದಿದ್ದರೆ ನನಗೆ ಬೇಜಾರಾಗುವುದೂ ಇಲ್ಲ. ನನ್ನ ಬಳಿ ಮಾತನಾಡಿದ ಬಳಿಕವೂ ತಪ್ಪು ಮಾಡಿದರೆ ನಾನೇನೂ ಯೋಚಿಸುವುದಿಲ್ಲ. ಮತ್ತೊಮ್ಮೆ ನನ್ನ ಬಳಿಗೆ ಬಂದಾಗ ಹಿಂದಿನ ವಿಚಾರಗಳನ್ನು ಪ್ರಸ್ತಾಪ ಮಾಡದೆ ಸಲಹೆ ಕೊಡುತ್ತೇನೆ.

ವಿಶ್ವನಾಥ ರಾಯರು ಹೇಳಿದರು: ಓ.. ನೀವು ಈ ವಯಸ್ಸಿನಲ್ಲಿ ಹೇಗೆ ಬದುಕಬೇಕು ಎಂದು ಅರ್ಥ ಮಾಡಿಕೊಂಡಿದ್ದೀರಿ..

ಆಗ ಆ ವ್ಯಕ್ತಿ ಹೇಳಿದರು: ಹೌದು ರಾಯರೇ, ಬದುಕಿನ ನಾಲ್ಕನೇ ಹಂತವನ್ನು ತಲುಪುತ್ತೇವಲ್ಲ.. ಆಗ ನಾವು ನಮ್ಮ ಮಾತುಗಳ ಮೇಲೆ ನಿಯಂತ್ರಣ ತಂದುಕೊಳ್ಳಬೇಕು. ಅದುವೇ ನಮ್ಮ ಸಂತೋಷದ ಮೂಲ. ಅದಕ್ಕಿಂತಲೂ ಮುಖ್ಯವಾಗಿ ಇನ್ನೊಬ್ಬರ ಕೆಲಸದಲ್ಲಿ ಮೂಗು ತೂರಿಸಬಾರದು. ಯಾರಾದರೂ ಏನಾದರೂ ಸಲಹೆ ಕೇಳಿದರೆ ಮಾತ್ರ ನಾವು ನಮ್ಮ ಅನುಭವ ಹೇಳಬೇಕು. ಸುಮ್ಮನೆ ಪ್ರತಿಯೊಂದರ ಬಗ್ಗೆ ಯೋಚಿಸಿ ಸಲಹೆ ಕೊಡಲು ಹೋಗಬಾರದು. ಹೀಗಾಗಿದ್ದಾಗ ನಮಗೆ ನೆಮ್ಮದಿ ಇರುತ್ತದೆ.. ಮತ್ತು ಅವರಿಗೂ ನೆಮ್ಮದಿ ಇರುತ್ತದೆ.

ವಿಶ್ವನಾಥ ರಾಯರಿಗೆ ಏನೋ ಥಟ್ಟನೆ ಹೊಳೆದಂತಾಯಿತು.. ʻಓ ನಾಳೆ ದೀಪಾವಳಿ ಅಲ್ವಾ.. ನನ್ನ ಮೊಮ್ಮಕ್ಕಳಿಗೆ ಎಣ್ಣೆ ಹಚ್ಚಬೇಕು.. ಅವರ ಜತೆ ಪಟಾಕಿ ಬಿಡಬೇಕು… ಅದು ಬಿಟ್ಟರೆ ನನಗೇನಿದೆ ಕೆಲಸʼ ಎಂದು ಹೊರಟೇಬಿಟ್ಟರು ವಿಶ್ವನಾಥ ರಾಯರು. ಆ ವ್ಯಕ್ತಿ ಕೈ ಬೀಸುತ್ತಾ ಇದ್ದರು.

ಇದನ್ನೂ ಓದಿ | Motivational story | ಹಠಕ್ಕೆ ಬಿದ್ದು ಒಮ್ಮೆಲೇ ಸೊಂಪಾಗಿ ಬೆಳೆಸಿದ ರಮೇಶನ ಗಿಡ ಉರುಳಿದ್ದೇಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Board Exam: ಮಕ್ಕಳೇ ನೀವು ಪಾಸ್!‌ 5, 8 ಮತ್ತು 9ನೇ ತರಗತಿಯ ಎಲ್ಲ ಮಕ್ಕಳು ಉತ್ತೀರ್ಣ

Board Exam: ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA-1, FA-2, FA-3, FA-4, SA-1 ಗಳ ಮೌಲ್ಯಾಂಕನ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ.

VISTARANEWS.COM


on

board exam public exam
Koo

ಬೆಂಗಳೂರು: 5, 8 ಮತ್ತು 9ನೇ ತರಗತಿಯ (5, 8, 9 class exam) ಎಲ್ಲ ಮಕ್ಕಳನ್ನು ಉತ್ತೀರ್ಣಗೊಳಿಸಿ ಶಿಕ್ಷಣ ಇಲಾಖೆ (Education department) ಆದೇಶ ನೀಡಿದೆ. ಈ ತರಗತಿಗಳ ಪಬ್ಲಿಕ್‌ ಪರೀಕ್ಷೆ ಫಲಿತಾಂಶ (board exam result) ಪ್ರಕಟಕ್ಕೆ ಸುಪ್ರೀಂ ಕೋರ್ಟ್ (supreme court) ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ತರಗತಿಯ ಮಕ್ಕಳ ಮುಂದಿನ ಶೈಕ್ಷಣಿಕ ವರ್ಷದ (academic year) ಭವಿಷ್ಯ ಅತಂತ್ರಕ್ಕೆ ಸಿಲುಕಿತ್ತು. ಇಲಾಖೆಯ ನೂತನ ಆದೇಶದಂತೆ ಈ ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಪಡೆದುಕೊಂಡಿದ್ದಾರೆ.

5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಈ ಸಂತಸದ ಸುದ್ದಿಯನ್ನು ನೀಡಿದೆ. ತರಗತಿವಾರು ಮೌಲ್ಯಾಂಕನದ ವಿಶ್ಲೇಷಣೆ ಮಾಡಿ, ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಅವಕಾಶ ಕಲ್ಪಿಸಿ ಇಲಾಖೆ ಆದೇಶಿಸಿದೆ.

2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ 8.4.2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿತ್ತು. ಈ ಬಗ್ಗೆ ಅಂತಿಮ ತೀರ್ಪು ಬಾಕಿ ಇದೆ. ಇದರಿಂದಾಗಿ ಅತಂತ್ರಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ರಿಲೀಫ್ ನೀಡಿದ್ದು, ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿದೆ.

ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಂಡಿದ್ದು, 29-05-2024ರಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇದ್ದರೆ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದು. ಈ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಪೋಷಕರು ಮನವಿ ಮಾಡಿದ್ದರು. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಕ್ರಮವಹಿಸಿ ಇಲಾಖೆ ಆದೇಶ ಹೊರಡಿಸಿದೆ.

ಸರ್ವೋಚ್ಛ ನ್ಯಾಯಾಲಯದ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆ ಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA-1, FA-2, FA-3, FA-4, SA-1 ಗಳ ಮೌಲ್ಯಾಂಕನ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: Public Exam: 5, 8, 9ನೇ ತರಗತಿ ಪಬ್ಲಿಕ್‌ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪ; ವಿವರ ಸಲ್ಲಿಕೆಗೆ ಸರ್ಕಾರ ಸೂಚನೆ

Continue Reading

ಉದ್ಯೋಗ

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 24 ಕೊನೆಯ ದಿನ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ(KPSC Group B (RPC) Recruitment 2024). ಸುಮಾರು 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 24 ಕೊನೆಯ ದಿನ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Continue Reading

ಶಿಕ್ಷಣ

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

2nd PUC Exam 2 Result: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು.

VISTARANEWS.COM


on

2nd PUC Exam 2 Result tomorrow
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ಅನ್ನು ನಡೆಸಿತ್ತು. ಇಂದು (ಮಂಗಳವಾರ – ಮೇ 21) ರಂದು ಫಲಿತಾಂಶವನ್ನು ಪ್ರಕಟ (2nd PUC Exam 2 Result) ಮಾಡುವುದಾಗಿ ಹೇಳಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
    ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
    ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೂಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ. ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಸಹ ಸ್ಪಷ್ಟನೆ ನೀಡಿದ್ದು, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದೆ.

ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ರಿಸಲ್ಟ್‌ಗಾಗಿ (CET Result) ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸ್ಪಷ್ಟನೆ ನೀಡಿದೆ. ಈಗ ಮಂಗಳವಾರ ಪಿಯು ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶದ ದಿನಾಂಕವನ್ನು ಕೆಇಎ ಪ್ರಕಟಿಸಬೇಕಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

ಅಧಿಕಾರಿಗಳ ಎಡವಟ್ಟು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿದೆ.

ಇದನ್ನೂ ಓದಿ: Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ. ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು.

Continue Reading

ದೇಶ

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Sambit Patra: “ಪುರಿ ಜಗನ್ನಾಥನು ಕೂಡ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

VISTARANEWS.COM


on

Sambita Patra
Koo

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕೋಟ್ಯಂತರ ಭಾರತೀಯರು ಇಷ್ಟಪಡುತ್ತಾರೆ. ಸೆಲೆಬ್ರಿಟಿಗಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರನ್ನು ಇಷ್ಟಪಡುತ್ತಾರೆ. ವಿದೇಶಗಳಲ್ಲೂ ಮೋದಿ ಅವರಿಗೆ ಅಭಿಮಾನಿಗಳಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ಮೋದಿ ಅವರ ಹೆಸರು ಹೇಳಿಕೊಂಡು ಮತ ಕೇಳುತ್ತಾರೆ. ಆದರೆ, ಬಿಜೆಪಿ ನಾಯಕ, ಒಡಿಶಾದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ಅವರು ಮೋದಿ ಅವರನ್ನು ಹೊಗಳುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಪುರಿ ಜಗನ್ನಾಥನು (Lord Jagannath) ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದಾರೆ. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕುಟುಕಿದ ನವೀನ್‌ ಪಟ್ನಾಯಕ್‌

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದಾರೆ. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

“ಜಗನ್ನಾಥನು ಸರ್ವಶ್ರೇಷ್ಠನಾಗಿದ್ದು, ಒಡಿಶಾದ ಅಸ್ಮಿತೆಯಾಗಿದ್ದಾನೆ. ಇಂತಹ ಜಗನ್ನಾಥನ ಬಗ್ಗೆ ಹೇಳಿಕೆ ಕೊಡುವುದು, ಮನುಷ್ಯರೊಬ್ಬರ ಭಕ್ತ ಎಂದು ಹೇಳುವುದು ಖಂಡನೀಯವಾಗಿದೆ. ಬಿಜೆಪಿ ನಾಯಕರೂ ಆದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯು ಹೀಗೆ ಹೇಳಿರುವುದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುವುದು, ಹೀನವಾದ ಹೇಳಿಕೆ ನೀಡುವುದನ್ನು ಬಿಜೆಪಿ ನಾಯಕರು ಬಿಡಬೇಕು. ಒಡಿಶಾದ ಜನರು ದೀರ್ಘ ಅವಧಿಗೆ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಹಾಗೂ ಎಂದಿಗೂ ಕ್ಷಮಿಸಲ್ಲ” ಎಂದು ನವೀನ್‌ ಪಟ್ನಾಯಕ್‌ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading
Advertisement
ISIS Terrorists
ದೇಶ2 seconds ago

ISIS Terrorists: ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದ ಐಸಿಸ್ ಉಗ್ರರು; ಸೆರೆ ಸಿಕ್ಕಿದ್ದು ಹೇಗೆ?

Shocking News
ವಿದೇಶ7 mins ago

Shocking News: ಎಚ್‌ಐವಿ ಪಾಸಿಟಿವ್‌ ವಿಚಾರ ಮುಚ್ಚಿಟ್ಟ ಲೈಂಗಿಕ ಕಾರ್ಯಕರ್ತೆ; 211 ಮಂದಿಗೆ ಎದುರಾಯ್ತು ಸಂಕಷ್ಟ

Darshan And Vijayalakshmi Celebrate Wedding Anniversary In Dubai pavitra gowda posted karma status
ಸ್ಯಾಂಡಲ್ ವುಡ್8 mins ago

Actor Darshan: ದುಬೈನಲ್ಲಿ ʻಡಿ ಬಾಸ್‌ʼ ವೆಡ್ದಿಂಗ್‌ ಆ್ಯನಿವರ್ಸರಿ ಸೆಲೆಬ್ರೇಷನ್‌: ಇತ್ತ ಪವಿತ್ರಾ ಗೌಡ ಕರ್ಮದ ಬಗ್ಗೆ ಪಾಠ!

KKR vs SRH:
ಕ್ರೀಡೆ23 mins ago

KKR vs SRH: ಕೆಕೆಆರ್​-ಹೈದರಾಬಾದ್​ ಕ್ವಾಲಿಫೈಯರ್​ ಪಂದ್ಯದ ಹವಾಮಾನ ವರದಿ ಹೇಗಿದೆ?

board exam public exam
ಪ್ರಮುಖ ಸುದ್ದಿ41 mins ago

Board Exam: ಮಕ್ಕಳೇ ನೀವು ಪಾಸ್!‌ 5, 8 ಮತ್ತು 9ನೇ ತರಗತಿಯ ಎಲ್ಲ ಮಕ್ಕಳು ಉತ್ತೀರ್ಣ

Kangana Ranaut
ದೇಶ58 mins ago

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Job Alert
ಉದ್ಯೋಗ1 hour ago

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

belagavi farmer self harming
ಕ್ರೈಂ1 hour ago

Farmer Self Harming: ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

Health Benefits Of Tofu
ಆರೋಗ್ಯ1 hour ago

Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

2nd PUC Exam 2 Result tomorrow
ಶಿಕ್ಷಣ2 hours ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌