Motivational story | ರೆಸ್ಟೋರೆಂಟಿನಲ್ಲಿ ಬಿದ್ದ ಜಿರಳೆ ಮತ್ತು ಮೂವರು ಮಹಿಳೆಯರ ಪ್ರತಿಕ್ರಿಯೆ - Vistara News

ಪ್ರಮುಖ ಸುದ್ದಿ

Motivational story | ರೆಸ್ಟೋರೆಂಟಿನಲ್ಲಿ ಬಿದ್ದ ಜಿರಳೆ ಮತ್ತು ಮೂವರು ಮಹಿಳೆಯರ ಪ್ರತಿಕ್ರಿಯೆ

Motivational story ಒಂದೇ ಘಟನೆಗೆ ಬೇರೆ ಬೇರೆ ಪ್ರತಿಕ್ರಿಯೆಗಳನ್ನು ನಾವು ಅಲ್ಲಲ್ಲಿ ನೋಡುತ್ತೇವೆ. ಅದು ಯಾಕೆ ಎನ್ನುವುದಕ್ಕೆ ಉತ್ತರ ಈ ಕಥೆಯಲ್ಲಿದೆ.

VISTARANEWS.COM


on

jirale
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ- motivational story
ಅದೊಂದು ರೆಸ್ಟೋರೆಂಟ್. ಹಲವಾರು ಮಂದಿ ಅಲ್ಲಿ ತಿಂಡಿ ತಿನ್ನಲು ಸೇರಿದ್ದರು. ಆಗ ಇದ್ದಕ್ಕಿದ್ದಂತೆಯೇ ಒಂದು‌ ಜಿರಳೆ ಒಬ್ಬ ಮಹಿಳೆಯ ಮೇಲೆ ಬಿತ್ತು. ಆಕೆ ಜೋರಾಗಿ ಕಿರುಚಿಕೊಳ್ಳುತ್ತಾ ಕುಣಿದಾಡಿದರು. ಕುರ್ಚಿ ಬಿಟ್ಟೆದ್ದರು, ಟೇಬಲ್ ಹತ್ತಿದರು, ಬಟ್ಟೆ ಎಳೆದಾಡಿದರು. ಉಳಿದವರಿಗೆ ಅಲ್ಲಿ ಏನಾಗ್ತಿದೆ ಅನ್ನೋದೇ ಗೊತ್ತಿರಲಿಲ್ಲ.. ಆಕೆ ಒಂದೇ ಸಮನೆ ಬೊಬ್ಬೆ ಹೊಡೆಯುತ್ತಿದ್ದರು. ಹೀಗಾಗಿ ಉಳಿದವರಿಗೂ ಆತಂಕ.

ಕೊನೆಗೆ ಹೇಗೋ ಆಕೆಯ ಮೈಮೇಲೆ ಬಿದ್ದ ಜಿರಳೆ ಕೆಳಗೆ ಬಿತ್ತು. ಆಗ ಜನ ಮತ್ತೆ ಹೋ ಎಂದು ಕಿರುಚಿದರು. ಆಗ ಅದು ಟಕ್ಕನೆ ಇನ್ನೊಬ್ಬ ಮಹಿಳೆಯ ಮೈಮೇಲೆ ಹತ್ತಿಕೊಂಡಿತು. ಮೊದಲೇ ಆತಂಕದಲ್ಲಿದ್ದ ಆಕೆ ಇನ್ನಷ್ಟು ಭಯಭೀತರಾದರು.

ಇಡೀ ಹೋಟೆಲಿನಲ್ಲಿ ಅಸಹನೀಯ ವಾತಾವರಣ. ಕೆಲವರು ಇಷ್ಟು ದೊಡ್ಡ ಹೋಟೆಲ್ ನಲ್ಲಿ ಜಿರಳೆ ಹೇಗೆ ಬಂತು, ಹೈಜೆನಿಕ್ ಮೆಂಟೇನ್ ಮಾಡ್ತಿಲ್ಲ. ಜಿರಳೆಗಳಿರುವ ಹೋಟೆಲ್ ನ ಆಹಾರ ಹೇಗಿರಬಹುದು ಎಂದೆಲ್ಲ ಮಾತನಾಡಿಕೊಂಡರು.

ತುಂಬ ಹೊತ್ತಾದ ಬಳಿಕ ಜಿರಳೆ ಆ ಮಹಿಳೆಯ ಮೈಯಿಂದ ಹೊರಬಿತ್ತು. ಕೂಡಲೇ ಅದು ಓಡಿ ಹೋಗಿ ಪಕ್ಕದಲ್ಲಿದ್ದ ಇನ್ನೊಬ್ಬ ಮಹಿಳೆಯ ಮೈಮೇಲೆ ಹತ್ತಿತು. ಆ ಮಹಿಳೆ ಬೊಬ್ಬೆ ಹೊಡೆಯಲಿಲ್ಲ, ಚೀರಾಡಲಿಲ್ಲ. ಬದಲಾಗಿ ಜಿರಳೆ ಎಲ್ಲಿ ಹೋಗ್ತಾ ಇದೆ, ಏನು ಮಾಡ್ತಾ ಇದೆ ಎಂದು ಕೆಲವು ಸೆಕೆಂಡ್ ಗಮನಿಸಿದರು. ಮತ್ತು ಸರಿಯಾದ ಸಮಯ ನೋಡಿ ಅದರ ಮೀಸೆಯನ್ನು ಹಿಡಿದು ಬಿಟ್ಟರು. ಮತ್ತು ಅದನ್ನು ಹಾಗೇ ಹಿಡಿದುಕೊಂಡು ಹೋಗಿ ಹೊರಗೆ ಎಸೆದುಬಂದರು.

ಇದನ್ನೆಲ್ಲ ವಿಶ್ವನಾಥ ಮತ್ತು ಅವರ ಮಗ ದೂರದಿಂದಲೇ ನೋಡುತ್ತಿದ್ದರು. ಮಗ ಕೇಳಿದ: ಅಲ್ಲಪ್ಪ ಒಂದು ಜಿರಳೆ ಕಂಡು ಅವರಿಬ್ಬರೂ ಅಷ್ಟೆಲ್ಲ ಗಲಾಟೆ ಮಾಡಿದ್ರು.. ಮೂರನೇ ಮಹಿಳೆ ಅಷ್ಟು ಧೈರ್ಯದಿಂದ ಜಿರಳೇನ ಎತ್ತಿ ಎಸೆದರಲ್ಲ… ಹೇಗಿದು?

ಅದಕ್ಕೆ ವಿಶ್ವನಾಥ ಹೇಳಿದ: ಇಲ್ಲಿ ಜಿರಳೆ ಎನ್ನುವುದು ಏನೂ ಅಲ್ಲ. ಅದಕ್ಕೆ ಅವರು ತೋರಿದ ಪ್ರತಿಕ್ರಿಯೆ ವಿಭಿನ್ನವಾಗಿತ್ತು ಅಷ್ಟೆ. ಮೊದಲ ಇಬ್ಬರು ಮಹಿಳೆಯರು ವಿವೇಚನೆ ತೋರದೆ, ಭಯದಿಂದ ಪ್ರತಿಕ್ರಿಯಿಸಿದರು. ಮೂರನೇ ಮಹಿಳೆ ವಿವೇಚನೆಯಿಂದ ಪ್ರತಿಕ್ರಿಯಿಸಿದರು.. ಹಾಗಾಗಿ ಪರಿಸ್ಥಿತಿಯನ್ನು ಸುಲಭದಲ್ಲಿ ನಿಭಾಯಿಸಲು ಸಾಧ್ಯವಾಯಿತು. ಮೂರನೆ ಮಹಿಳೆಗೆ ಮೊದಲ ಇಬ್ಬರು ನೀಡಿದ ಪ್ರತಿಕ್ರಿಯೆಯ ಅರಿವಿತ್ತು. ಅದನ್ನು ಅನುಭವವಾಗಿಸಿಕೊಂಡು ಆಕೆ ಪ್ರತಿಕ್ರಿಯಿಸಿದರು.

ವಿಶ್ವನಾಥ ಮುಂದುವರಿಸಿದ-

ಬದುಕಿನಲ್ಲೂ ಅಷ್ಟೆ, ನಾವು ಪರಿಸ್ಥಿತಿಗೆ ಕೊಡುವ ಪ್ರತಿಕ್ರಿಯೆಯೇ ಮುಖ್ಯವಾಗುತ್ತದೆ. ಕಚೇರಿಯಲ್ಲಿ ಬಾಸ್ ಬೈದರು ಅನ್ನೋದನ್ನು, ಮನೆಯಲ್ಲಿ ಗಂಡನೋ/ಹೆಂಡತಿಯೋ ಏನೋ ಅಂದರು ಎಂದರೆ ಅದನ್ನು ಯಾವ ರೀತಿ ಸ್ವೀಕರಿಸುತ್ತೇವೆ ಎನ್ನುವುದರ ಆಧಾರದ ಮೇಲೆ ನಮ್ಮ ಶಕ್ತಿ ಪ್ರಕಟಗೊಳ್ಳುತ್ತದೆ. ನಾವು ವಿವೇಚನಾರಹಿತವಾಗಿ, ಆತಂಕದಿಂದ ಪ್ರತಿಕ್ರಿಯಿಸುವುದರ ಬದಲು ಬುದ್ಧಿವಂತಿಕೆಯಿಂದ ನಿಭಾಯಿಸಬೇಕು. ಇಲ್ಲಿ ಅನುಭವವೂ ಒಂದು ಪಾತ್ರವನ್ನು ವಹಿಸುತ್ತದೆ. ಮಗ ಏನೋ ಅರ್ಥವಾದಂತೆ ತಲೆದೂಗಿದ.

ಇದನ್ನೂ ಓದಿ | Motivational story | ಅವನು ಕೊನೇ ಗೂಳಿಯ ಬಾಲ ಹಿಡಿಯೋಕೆಂದು ಕಾದು ಕುಳಿತಿದ್ದ, ಆದರೆ ಅದಕ್ಕೆ ಬಾಲವೇ ಇರಲಿಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 : ಗೆಲುವಿನ ನಡುವೆಯೂ ಬೇಸರ; ಶುಭ್​ಮನ್ ಗಿಲ್​ಗೆ 24 ಲಕ್ಷ ರೂಪಾಯಿ ದಂಡ

IPL 2024: 2008 ರಲ್ಲಿ, ಐಪಿಎಲ್ ದಂತಕಥೆ ಬ್ರೆಂಡನ್ ಮೆಕಲಮ್ ಕೆಕೆಆರ್ ಪರ ಆರ್​ಸಿಬಿ ವಿರುದ್ಧ ಲೀಗ್​ನ ಮೊದಲ ಶತಕವನ್ನು ಗಳಿಸಿದ್ದರು. ಮೆಕಲಮ್ 158 ರನ್ ಗಳಿಸಿ ಶ್ರೀಮಂತ ಕ್ರಿಕೆಟ್ ಲೀಗ್​ನ ಯುಗವನ್ನು ಪ್ರಾರಂಭಿಸಿದ್ದರು. ಅಂದಿನಿಂದ ಇನ್ನೂ ಅನೇಕ ಆಟಗಾರರು ಶತಕಗಳನ್ನು ಗಳಿಸಿದ್ದಾರೆ. ಆದರೆ ಶುಬ್ಮನ್ ಗಿಲ್ ಐಪಿಎಲ್​ಗೆ ವಿಶೇಷ 100 ನೇ ಶತಕವಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ 2024ರ (IPL 2024) ನಿಯಮ ಉಲ್ಲಂಘಿಸಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಬ್ಮನ್ ಗಿಲ್​​ಗೆ (Shubhman Gill) ಸಿಎಸ್​ಕೆ (Chennai Super Kings) ವಿರುದ್ಧದ ಪಂದ್ಯದ ಶುಲ್ಕದಿಂದ 24 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ. ಇದು ಗುಜರಾತ್ ಟೈಟಾನ್ಸ್ ಮತ್ತು ಶುಭ್ಮನ್ ಗಿಲ್ ಅವರ ನಿಧಾನಗತಿಯ ಓವರ್ ರೇಟ್​​ಗೆ ಸಂಬಂಧಿಸಿದ ಎರಡನೇ ಅಪರಾಧ. ಹೀಗಾಗಿ ಫ್ರಾಂಚೈಸಿ ನಾಯಕನಿಗೆ 24 ಲಕ್ಷ ದಂಡ ವಿಧಿಸಲಾಗಿದೆ. ಇದು ತಂಡದ ಎರಡನೇ ಅಪರಾಧವಾಗಿದೆ. ಹೀಗಾಗಿ ಅಹಮದಾಬಾದ್​ನಲ್ಲಿ ಆಡಿದ ಎಲ್ಲ ಆಟಗಾರರಿಗೂ ದಂಡ ಬಿದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2023 ಪಂದ್ಯ ಶುಬ್ಮನ್ ಗಿಲ್​ಗೆ ಡಬಲ್ ಸಂತೋಷವನ್ನು ನೀಡಿತು. ವೃದ್ಧಿಮಾನ್ ಸಹಾ ಅವರ ಕಳಪೆ ಫಾರ್ಮ್ ನಿಂದಾಗಿ ಅವರನ್ನು ಕೈಬಿಡಲಾಯಿತು. ಹೀಗಾಗಿ ಗಿಲ್​ ಸಾಯಿ ಸುದರ್ಶನ್ ಜತೆಗೆ ಇನಿಂಗ್ಸ್ ಆರಂಭಿಸಿದ್ದರು. ಇಬ್ಬರೂ ಸಿಎಸ್​ಕೆ ಬೌಲರ್​ಗಳಿಗೆ ಯಾವುದೇ ಅವಕಾಶವನ್ನು ನೀಡಲಿಲ್ಲ. ಇಬ್ಬರೂ ಶತಕ ಬಾರಿಸಿದರು. ಗಿಲ್​ಗೆ ಇದು ಒಟ್ಟು ನಾಲ್ಕನೇ ಐಪಿಎಲ್ ಶತಕ ಹಾಗೂ ಒಟ್ಟಾರೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 100 ನೇ ಶತಕವಾಗಿದೆ.

2008 ರಲ್ಲಿ, ಐಪಿಎಲ್ ದಂತಕಥೆ ಬ್ರೆಂಡನ್ ಮೆಕಲಮ್ ಕೆಕೆಆರ್ ಪರ ಆರ್​ಸಿಬಿ ವಿರುದ್ಧ ಲೀಗ್​ನ ಮೊದಲ ಶತಕವನ್ನು ಗಳಿಸಿದ್ದರು. ಮೆಕಲಮ್ 158 ರನ್ ಗಳಿಸಿ ಶ್ರೀಮಂತ ಕ್ರಿಕೆಟ್ ಲೀಗ್​ನ ಯುಗವನ್ನು ಪ್ರಾರಂಭಿಸಿದ್ದರು. ಅಂದಿನಿಂದ ಇನ್ನೂ ಅನೇಕ ಆಟಗಾರರು ಶತಕಗಳನ್ನು ಗಳಿಸಿದ್ದಾರೆ. ಆದರೆ ಶುಬ್ಮನ್ ಗಿಲ್ ಐಪಿಎಲ್​ಗೆ ವಿಶೇಷ 100 ನೇ ಶತಕವಾಗಿದೆ.

ಇದನ್ನೂ ಓದಿ: Rishabh Pant : 2024ರ ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

ಗಿಲ್​ ಇನ್ನಿಂಗ್ಸ್ 9 ಬೌಂಡರಿಗಳು ಮತ್ತು 6 ಸಿಕ್ಸರ್​ಗಳನ್ನು ಒಳಗೊಂಡಿತ್ತು. ಅವರ ಶತಕ ಪೂರ್ಣಗೊಂಡ ಸ್ವಲ್ಪ ಸಮಯದ ನಂತರ ಸಾಯಿ ಸುದರ್ಶನ್ ತಮ್ಮ ಮೊದಲ ಐಪಿಎಲ್ ಶತಕ ಪೂರ್ಣಗೊಳಿಸಿದರು. ಮೂಲತಃ ತಮಿಳುನಾಡಿನವರಾದ ಎಡಗೈ ಬ್ಯಾಟ್ಸ್ಮನ್, ಲೀಗ್​​ನ 101 ನೇ ಶತಕ ಬಾರಿಸಿದರು. ವಎಲ್ಲಕ್ಕಿಂತ ಮುಖ್ಯವಾಗಿ ಅವರು ಮೊದಲ ವಿಕೆಟ್​ಗೆ ಶುಭ್ಮನ್ ಗಿಲ್ ಅವರೊಂದಿಗೆ 210 ರನ್​ಗಳ ರೋಚಕ ಜೊತೆಯಾಟ ನೀಡಿದರು.

ಗಿಲ್ 55 ಎಸೆತಗಳಲ್ಲಿ 104 ರನ್ ಗಳಿಸಿ ಕ್ರೀಸ್ ತೊರೆದರೆ, ಸುದರ್ಶನ್ ಅದೇ ಓವರ್ನಲ್ಲಿ 51 ಎಸೆತಗಳಲ್ಲಿ 103 ರನ್ ಗಳಿಸಿದರು. ಅವರ ಪ್ರಯತ್ನಗಳ ಪರಿಣಾಮವಾಗಿ, ಜಿಟಿ 232 ರನ್​ಗಳ ರನ್​ ಶಿಖರ ದಾಖಲಿಸಿತು. ಹೀಗಾಗಿ ಪಂದ್ಯವನ್ನು ಸಿಎಸ್​ಕೆ 35 ರನ್​ಗಳಿಂದ ಕಳೆದುಕೊಂಡಿತು.

231 ರನ್ ಗಳಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಗಿಲ್
ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಮಾತನಾಡಿದ ಶುಬ್ಮನ್ ಗಿಲ್, ತಮ್ಮ ತಂಡವು ಇನ್ನೂ 10-15 ರನ್​ಗಳ ಕೊರತೆ ಎದುರಿಸಿತು ಎಂದು ಹೇಳಿದ್ದಾರೆ. 231 ರನ್ ಗಳಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಿಲ್ ಅವರು ಒಟ್ಟು 250 ರನ್​ಗಳನ್ನು ಎದುರು ನೋಡುತ್ತಿದ್ದರು. ಆದರೆ ಡೆತ್ ಓವರ್​ಗಳಲ್ಲಿ ಸಿಎಸ್​ಕೆ ಪುನರಾಗಮನವು ಅವರನ್ನು 230 ರನ್​​ಗಳಿಗೆ ಸೀಮಿತಗೊಳಿಸಿತು ಎಂದು ಹೇಳಿದರು.

Continue Reading

ದೇಶ

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್‌ ಕೇಜ್ರಿವಾಲ್‌ ಅವರು ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೆ ಅವರು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ ಎಂದು ಆರೋಪಿಸಿದರು.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ (Delhi Excise Policy Case) ಜೈಲು ಪಾಲಾಗಿ, ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದರು. “ಒಂದು ದೇಶ, ಒಬ್ಬ ನಾಯಕ ಎಂಬುದು ನರೇಂದ್ರ ಮೋದಿ ಅವರ ಮಿಷನ್‌ ಆಗಿದೆ. ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಬದಲಿಸಲಿದ್ದಾರೆ” ಎಂದು ಜೈಲಿನಿಂದ ಬಿಡುಗಡೆಯಾದ ಬಳಿಕ ನಡೆಸಿದ ಮೊದಲ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

“ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

“ನಾನು ಮಾತ್ರವಲ್ಲ ಪ್ರತಿಪಕ್ಷಗಳ ಇನ್ನೂ ಹಲವು ನಾಯಕರನ್ನು ಅವರು ಜೈಲಿಗೆ ಕಳುಹಿಸಲಿದ್ದಾರೆ. ಆ ಮೂಲಕ ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಲಿದ್ದಾರೆ. ಈಗಾಗಲೇ ನಮ್ಮ ಪಕ್ಷದ ಸಚಿವರು, ಜಾರ್ಖಂಡ್‌ ಮುಖ್ಯಮಂತ್ರಿಯಾಗಿದ್ದ ಹೇಮಂತ್‌ ಸೊರೇನ್‌, ಟಿಎಂಸಿ ಸಚಿವರನ್ನು ಜೈಲಿಗೆ ಕಳುಹಿಸಲಾಗಿದೆ. ಹಾಗೇನಾದರೂ ಬಿಜೆಪಿಯೇ ಮತ್ತೆ ಗೆದ್ದರೆ, ಮಮತಾ ಬ್ಯಾನರ್ಜಿ, ಎಂ.ಕೆ.ಸ್ಟಾಲಿನ್‌, ಆರ್‌ಜೆಡಿಯ ತೇಜಸ್ವಿ ಯಾದವ್‌, ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೇರಿ ಇನ್ನೂ ಹಲವರು ಜೈಲು ಸೇರಲಿದ್ದಾರೆ. ಕೆಲವರ ರಾಜಕೀಯ ಜೀವನ ಅಂತ್ಯಗೊಳಿಸಲು ತಮ್ಮದೇ ಪಕ್ಷದ ನಾಯಕರನ್ನು ಕೂಡ ಜೈಲಿಗೆ ಕಳುಹಿಸಲಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Continue Reading

ಕ್ರೀಡೆ

Rishabh Pant : 2024ರ ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

Rishabh Pant : ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ನಿಧಾನಗತಿಯ ಓವರ್ ರೇಟ್​ಗಾಗಿ ರಿಷಭ್ ಪಂತ್​ಗೆ ದಂಡ ವಿಧಿಸುತ್ತಿರುವುದು ಇದು ಮೂರನೇ ಬಾರಿ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ನಂತರ ಕೀಪರ್-ಬ್ಯಾಟರ್​​ಗ ​ಮೊದಲು 12 ಲಕ್ಷ ರೂ.ಗಳ ದಂಡ ವಿಧಿಸಲಾಯಿತು ಮತ್ತು ನಂತರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಸಮಯದಲ್ಲಿ 24 ಲಕ್ಷ ರೂ.ಗಳ ದಂಡ ವಿಧಿಸಲಾಯಿತು.

VISTARANEWS.COM


on

Rishabh Pant
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ (IPL 2024) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಗೆ ದೊಡ್ಡ ಹೊಡೆತ ಬಿದ್ದಿದೆ. ಟೀಂ ಇಂಡಿಯಾ ನಾಯಕ ರಿಷಭ್ ಪಂತ್ (Rishabh Pant) ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಪಂದ್ಯ ನಿಷೇಧ ಹೇರಿದೆ. ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್​​ಗಾಗಿ ರಿಷಭ್ ಪಂತ್​ಗೆ ದಂಡ ವಿಧಿಸಲಾಗಿದೆ. ಕೀಪರ್-ಬ್ಯಾಟರ್​​ ಒಂದು ಪಂದ್ಯದಿಂದ ಅಮಾನತು ಶಿಕ್ಷೆ ವಿಧಿಸಲಾಗಿದೆ. ಇದಲ್ಲದೆ, ಈ ಅಪರಾಧಕ್ಕಾಗಿ ಅವರಿಗೆ 30 ಲಕ್ಷ ರೂ.ಗಳ ದಂಡವನ್ನೂ ವಿಧಿಸಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ನಿಧಾನಗತಿಯ ಓವರ್ ರೇಟ್​ಗಾಗಿ ರಿಷಭ್ ಪಂತ್​ಗೆ ದಂಡ ವಿಧಿಸುತ್ತಿರುವುದು ಇದು ಮೂರನೇ ಬಾರಿ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ನಂತರ ಕೀಪರ್-ಬ್ಯಾಟರ್​​ಗ ​ಮೊದಲು 12 ಲಕ್ಷ ರೂ.ಗಳ ದಂಡ ವಿಧಿಸಲಾಯಿತು ಮತ್ತು ನಂತರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಸಮಯದಲ್ಲಿ 24 ಲಕ್ಷ ರೂ.ಗಳ ದಂಡ ವಿಧಿಸಲಾಯಿತು.

ಎಲ್ಲ ಆಟಗಾರರಿಗೆ ದಂಡ

ರಿಷಭ್ ಪಂತ್ ಮಾತ್ರವಲ್ಲ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ಭಾಗವಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್​​ನ ಎಲ್ಲಾ ಆಟಗಾರರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದಂಡ ವಿಧಿಸಿದೆ. ನಿಧಾನಗತಿಯ ಓವರ್ ರೇಟ್​​ಗೆ ಆಟಗಾರರಿಗೆ 12 ಲಕ್ಷ ರೂಪಾಯಿ ಅಥವಾ ಆಯಾ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

ಮ್ಯಾಚ್ ರೆಫರಿ ನಿರ್ಧಾರವನ್ನು ಪ್ರಶ್ನಿಸಿದ ರಿಷಭ್ ಪಂತ್ ಗೆ ಪ್ರಯೋಜನ ಸಿಗಲಿಲ್ಲ. ಕ್ಯಾಪಿಟಲ್ಸ್ ನಾಯಕ ಅಧಿಕೃತ ಮೇಲ್ಮನವಿ ಸಲ್ಲಿಸಿದ್ದರು. ನಂತರ ಅದನ್ನು ಪರಿಶೀಲನೆಗಾಗಿ ಬಿಸಿಸಿಐ ಒಂಬುಡ್ಸ್​​ಮನ್​ಗೆ ಕಳುಹಿಸಲಾಗಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿದಿರುವುದು ಡೆಲ್ಲಿ ಕ್ಯಾಪಿಟಲ್ಸ್​ಗೆ ದೊಡ್ಡ ಹೊಡೆತವಾಗಿದೆ. ಫ್ರಾಂಚೈಸಿ ಪಾಯಿಂಟ್ಸ್ ಟೇಬಲ್​​ನಲ್ಲಿ 5 ನೇ ಸ್ಥಾನದಲ್ಲಿದೆ ಮತ್ತು ಪ್ಲೇಆಫ್​ಗೆ ತಮ್ಮ ಸ್ಥಾನ ಬಲಪಡಿಸಲು ಎರಡು ಗೆಲುವುಗಳ ಅಗತ್ಯವಿದೆ.

ಐಪಿಎಲ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ ಅತ್ಯುತ್ತಮ ಬ್ಯಾಟರ್​​ ಆಗಿದ್ದಾರೆ. ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಅವರು ಆಡಿದ 12 ಪಂದ್ಯಗಳಲ್ಲಿ 413 ರನ್ ಗಳಿಸಿದ್ದಾರೆ. ಹೆಚ್ಚಿನ ಡಿಸಿ ಬ್ಯಾಟರ್​ಗಳು ಬ್ಯಾಟ್​ನೊಂದಿಗೆ ಮುಂದುವರಿಯಲು ಹೆಣಗಾಡುತ್ತಿರುವುದರಿಂದ ಪಂತ್ ಅಲಭ್ಯತೆ ಸಮಸ್ಯೆ ಮಾಡಲಿದೆ.

ರಿಷಭ್ ಪಂತ್ ಬಗ್ಗೆ ಐಪಿಎಲ್ ಅಧಿಕೃತ ಹೇಳಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ ರಿಷಭ್ ಪಂತ್ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ/ ನಿಧಾನಗತಿಯ ಓವರ್ ರೇಟ್ನ ಮಿತಿಯನ್ನು ಮೀರಿದ್ದಕ್ಕಾಗಿ ಕೀಪರ್-ಬ್ಯಾಟರ್​ಗೆ ನಿಷೇಧಿಸಲಾಗಿದೆ ಎಂದು ಬಹಿರಂಗಪಡಿಸಿದೆ.

“ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೇ 07, 2024 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ 56 ನೇ ಪಂದ್ಯದ ಸಮಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ನಂತರ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಅವರಿಗೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸಲಾಗಿದೆ ಮತ್ತು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದ ಐಪಿಎಲ್​​ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ 3ನೇ ಅಪರಾಧವಾಗಿದೆ. ರಿಷಭ್ ಪಂತ್​ಗೆ 30 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ. ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ ಇಲೆವೆನ್ ನ ಉಳಿದ ಸದಸ್ಯರಿಗೆ ತಲಾ 12 ಲಕ್ಷ ರೂಪಾಯಿ ಅಥವಾ ಆಯಾ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಲಾಗಿದೆ.

Continue Reading

ಕರ್ನಾಟಕ

ಮಗ ಜೈಲಿಗೆ, ಮೊಮ್ಮಗ ನಾಪತ್ತೆ; ದೇವೇಗೌಡರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಠಾಧೀಶರು

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆಳಿದ ಮಠಾಧೀಶರು, ಅವರಿಗೆ ಸಾಂತ್ವನ ಹೇಳುವ ಜತೆಗೆ ಆಶೀರ್ವಾದ ಮಾಡಿದರು. ಛಲವಾದಿ ಗುರುಪೀಠದ ಬಸವನಾಗಿದೇವ ಶ್ರೀ, ಬಂಜಾರ ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರು ಭೇಟಿಯಾಗಿ ದೇವೇಗೌಡರಿಗೆ ಸಾಂತ್ವನ ಹೇಳಿದರು.

VISTARANEWS.COM


on

HD Deve Gowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು (HD Deve Gowda) ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮಗ ಎಚ್‌.ಡಿ.ರೇವಣ್ಣ (HD Revanna) ಜೈಲು ಸೇರಿದ್ದಾನೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮೊಮ್ಮಗ ಪ್ರಜ್ವಲ್‌ ರೇವಣ್ಣ (Prajwal Revanna) ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. 90ನೇ ವಯಸ್ಸಿನಲ್ಲಿ ಇದನ್ನೆಲ್ಲ ನೋಡಬೇಕಾಯಿತಲ್ಲ ಎಂದು ದೇವೇಗೌಡರು ಕುಗ್ಗಿಹೋಗಿದ್ದಾರೆ. ಹಾಗಾಗಿ, ಹಲವು ಮಠಾಧೀಶರು ದೇವೇಗೌಡರ ನಿವಾಸಕ್ಕೆ ತೆರಳಿ ಅವರಿಗೆ ಸಾಂತ್ವನ ಹೇಳಿದ್ದಾರೆ.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆಳಿದ ಮಠಾಧೀಶರು, ಅವರಿಗೆ ಸಾಂತ್ವನ ಹೇಳುವ ಜತೆಗೆ ಆಶೀರ್ವಾದ ಮಾಡಿದರು. ಛಲವಾದಿ ಗುರುಪೀಠದ ಬಸವನಾಗಿದೇವ ಶ್ರೀ, ಬಂಜಾರ ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರು ಭೇಟಿಯಾಗಿ ದೇವೇಗೌಡರಿಗೆ ಸಾಂತ್ವನ ಹೇಳಿದರು. ಇನ್ನು ಕಲಬುರಗಿಯ ಪುಣ್ಯಕೋಟಿ ಆಶ್ರಮದ ವರಲಿಂಗ ಸ್ವಾಮೀಜಿ ಅವರು ದೇವೇಗೌಡರ ನಿವಾಸಕ್ಕೆ ತೆರಳಿದ್ದರು. ಆದರೆ, ಭೇಟಿಗೆ ಸಿಗದೆ ಅವರು ವಾಪಸಾದರು.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡು ಇರುವ ಕಾರಣ ಈಗಾಗಲೇ ಬ್ಲ್ಯೂ ಕಾರ್ನರ್‌ ನೋಟಿಸ್ ನೀಡಲಾಗಿತ್ತು. ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿರುವ ಎಸ್‌ಐಟಿ ಈಗ ವಿದೇಶದಿಂದ ಪ್ರಜ್ವಲ್ ಅವರನ್ನು ಕರೆತರಲು ವಿಶೇಷ ತಂಡವನ್ನು ರಚಿಸಿದೆ.

ಓರ್ವ ಎಸ್‌ಪಿ, ಮೂವರು ಇನ್ಸ್‌ಪೆಕ್ಟರ್ ಹಾಗೂ ಮೂವರು ಜನ ಸಬ್ ಇನ್ಸ್‌ಪೆಕ್ಟರ್ ಒಳಗೊಂಡ ತಂಡವನ್ನು ರಚಿಸಲಾಗಿದೆ. ಯೂರೋಪ್ ಬಳಿ ಇರುವ ಹಂಗೇರಿ ತಲುಪಲಿರುವ ಕರ್ನಾಟಕ ಪೊಲೀಸರು ಅಲ್ಲಿ ಹುಡುಕಾಟ ನಡೆಸಲಿದ್ದಾರೆ. ಈಗಾಗಲೇ ಭಾರತ ಹಾಗೂ ಜರ್ಮನಿ ಬಳಿ ಮ್ಯೂಚುಯಲ್ ಲೀಗಲ್ ಅಸಿಸ್ಟೆಂಟ್ ಟ್ರೀಟಿ (MLAT) ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಸಿಬಿಐ ಸಹಾಯದಿಂದ ಇಂಟರ್ ಪೋಲ್ ಅಧಿಕಾರಿಗಳ ಜತೆ ಸಹ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Continue Reading
Advertisement
Money Guide
ಮನಿ-ಗೈಡ್56 seconds ago

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌: ಈ ಅಮ್ಮಂದಿರ ದಿನ ನೀವು ನೀಡಬಹುದಾದ ಅತ್ಯುತ್ತಮ ಉಡುಗೊರೆ

Karnataka rain
ಮಳೆ13 mins ago

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

IPL 2024
ಕ್ರೀಡೆ32 mins ago

IPL 2024 : ಗೆಲುವಿನ ನಡುವೆಯೂ ಬೇಸರ; ಶುಭ್​ಮನ್ ಗಿಲ್​ಗೆ 24 ಲಕ್ಷ ರೂಪಾಯಿ ದಂಡ

Arvind Kejriwal
ದೇಶ42 mins ago

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Hair Color Fashion
ಫೋಟೊ42 mins ago

Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

Akshaya Tritiya
ಬೆಂಗಳೂರು59 mins ago

Akshaya Tritiya: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಬಾಲ ರಾಮನ ಬೆಳ್ಳಿ ವಿಗ್ರಹದ ಪೂಜೆ ಸಂಪನ್ನ

Rishabh Pant
ಕ್ರೀಡೆ59 mins ago

Rishabh Pant : 2024ರ ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

Pooja Hegde
ಸಿನಿಮಾ1 hour ago

Pooja Hegde: ಕಾರ್ಕಳದ ಕಣಜಾರು ದೇಗುಲಕ್ಕೆ ಭೇಟಿ ನೀಡಿದ ನಟಿ ಪೂಜಾ ಹೆಗ್ಡೆ

Road Accident in chikodi maharashtra
ಬೆಳಗಾವಿ1 hour ago

Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

HD Deve Gowda
ಕರ್ನಾಟಕ2 hours ago

ಮಗ ಜೈಲಿಗೆ, ಮೊಮ್ಮಗ ನಾಪತ್ತೆ; ದೇವೇಗೌಡರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಠಾಧೀಶರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು2 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ13 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌