Motivational story | ಹಠಕ್ಕೆ ಬಿದ್ದು ಒಮ್ಮೆಲೇ ಸೊಂಪಾಗಿ ಬೆಳೆಸಿದ ರಮೇಶನ ಗಿಡ ಉರುಳಿದ್ದೇಕೆ? - Vistara News

ಪ್ರಮುಖ ಸುದ್ದಿ

Motivational story | ಹಠಕ್ಕೆ ಬಿದ್ದು ಒಮ್ಮೆಲೇ ಸೊಂಪಾಗಿ ಬೆಳೆಸಿದ ರಮೇಶನ ಗಿಡ ಉರುಳಿದ್ದೇಕೆ?

Motivational story | ಎತ್ತರಕ್ಕೆ ಬೆಳೆಯಬೇಕು ಎನ್ನುವ ಆಸೆ ಸಹಜ. ಆದರೆ, ಒಮ್ಮೆಗೇ ಬೆಳೆಯದೋದರಿಂದ ಅಪಾಯವಿದೆ. ಬೇರುಗಳನ್ನು ಗಟ್ಟಿ ಮಾಡಿಕೊಂಡು ಬೆಳೆದರೆ ಬಾಳ್ವಿಕೆ ಹೆಚ್ಚು ಅಂತದೆ ಈ ಕಥೆ.

VISTARANEWS.COM


on

saplings
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ- Motivational story
ವಿಶ್ವನಾಥ ರಾಯರಿಗೆ ಗಾರ್ಡನಿಂಗ್ ಅಂದರೆ ಇಷ್ಟ. ಅವರು ತಮ್ಮ ಸಣ್ಣ ಜಾಗದಲ್ಲೇ ಬೇರೆ ಬೇರೆ ರೀತಿಯ ಗಿಡಗಳನ್ನು ಬೆಳೆಸಿದ್ದರು. ಅವರ ಪಕ್ಕದ ಮನೆಯ ರಮೇಶ್ ಎನ್ನುವ ಯುವಕ ವಿಶ್ವನಾಥ ರಾಯರ ಈ ಹವ್ಯಾಸಕ್ಕೆ ಆಕರ್ಷಿತನಾಗಿ ತಾನೂ ಗಾರ್ಡನ್ ಮಾಡಬೇಕು ಎಂದು ನಿರ್ಧರಿಸಿದ. ವಿಶ್ವನಾಥ ರಾಯರಿಗೆ ಸ್ಪರ್ಧೆ ಒಡ್ಡುವಂತೆ ತಾನು ಎಲ್ಲೆಲ್ಲಿಂದಲೋ ಗಿಡಗಳನ್ನು ತಂದು ನೆಡತೊಡಗಿದ. ಬಣ್ಣ ಬಣ್ಣದ ಹೂವಿನ ಗಿಡಗಳನ್ನು ತಂದು ಕುಂಡಗಳಲ್ಲಿ ಇಟ್ಟ. ದಿನದಿಂದ ದಿನಕ್ಕೆ ರಮೇಶನ ಕೈತೋಟ ಎಲ್ಲರ ಕಣ್ಣಿಗೆ ಹಬ್ಬವಾಗುತ್ತಾ ಸಾಗಿತು.

ಅದೊಂದು ಸಾರಿ ವಿಶ್ವನಾಥ ರಾಯರು ಮತ್ತು ರಮೇಶ್ ಒಂದೇ ರೀತಿಯ ಗಿಡವನ್ನು ತೆಗೆದುಕೊಂಡರು. ಇಬ್ಬರೂ ಒಂದೇ ದಿನ ಗಿಡಗಳನ್ನು ನೆಟ್ಟರು. ತಾನು ನೆಟ್ಟ ಗಿಡ ವಿಶ್ವನಾಥ ರಾಯರ ಗಿಡಕ್ಕಿಂತ ಚೆನ್ನಾಗಿ ಬೆಳೆಯಬೇಕು ಎಂದು ರಮೇಶ್ ಪ್ಲ್ಯಾನ್ ಮಾಡಿದ. ಅದಕ್ಕೆ ಎಲ್ಲೆಲ್ಲಿಂದಲೋ ಸಲಹೆ ಪಡೆದು ಗೊಬ್ಬರ ತಂದು ಹಾಕಿದ. ಬೇಗ ಬೆಳೆಯಲೆಂದು ಸ್ವಲ್ಪ ಜಾಸ್ತಿನೇ ಹಾಕಿದ. ದಿನವೂ ಒಂದರ ಬದಲು ಎರಡು ಹೊತ್ತು ನೀರು ಹಾಕಿದ.

ಇತ್ತ ವಿಶ್ವನಾಥ ರಾಯರು ತಮಗೆ ಎಷ್ಟು ಕೂಡುತ್ತದೋ ಅಷ್ಟರ ಮಟ್ಟಿಗೆ ಆರೈಕೆ ಮಾಡಿದರು. ಅವರಿಗೆ ಹುಡುಗ ತನಗೆ ಸ್ಪರ್ಧೆಗೆ ಬಿದ್ದಿದ್ದಾನೆ ಎಂದು ಗೊತ್ತಿರಲಿಲ್ಲ.

ನೋಡ ನೋಡುತ್ತಿದ್ದಂತೆಯೇ ರಮೇಶನ ತೋಟದ ಗಿಡ ಎತ್ತರೆತ್ತರ ಬೆಳೆಯಿತು. ಅವನಿಗೋ ಒಳಗೊಳಗೆ ಸಂತೋಷ. ವಿಶ್ವನಾಥ ರಾಯರನ್ನು ಮೀರಿಸಿದೆ ಅಂತ. ಅಕ್ಕಪಕ್ಕದ ಮನೆಯವರು ಕೂಡಾ ವಿಶ್ವನಾಥ ರಾಯರ ಗಿಡಕ್ಕಿಂತ ರಮೇಶನ ಗಿಡವೇ ಚೆನ್ನಾಗಿ ಬೆಳೆದಿದೆ ಎಂದೆಲ್ಲಾ ಮಾತನಾಡಿಕೊಂಡರು. ರಮೇಶ ಹೆಮ್ಮೆಯಿಂದ ಬೀಗುತ್ತಿದ್ದ.

ಅದೊಂದು ದಿನ ರಾತ್ರಿ ಭಾರಿ ಗಾಳಿ ಮಳೆ ಸುರಿಯಿತು. ವಿಪರೀತ ಗಾಳಿಗೆ ಮನೆಯ ಮಾಡಿನ ಹಂಚೆಲ್ಲ ಹಾರಿ ಹೋಗುತ್ತದೋ ಎಂಬಂತೆ ದಡಬಡ ಆಯಿತು. ಮರುದಿನ ಬೆಳಗ್ಗೆ ಎದ್ದು ನೋಡಿದರೆ ರಮೇಶ ಹೊಸದಾಗಿ ನೆಟ್ಟಿದ್ದ ಗಿಡ ಬೇರು ¸ಸಮೇತ ನೆಲಕ್ಕೆ ಉರುಳಿತ್ತು. ಅವನು ಕೂಡಲೇ ವಿಶ್ವನಾಥ ರಾಯರ ಗಿಡವನ್ನು ನೋಡಿದ. ಅದು ಏನೂ ಆಗದೆ ಹಾಗೇ ಇತ್ತು. ರಮೇಶನಿಗೆ ತನ್ನ ಗಿಡ ಉರುಳಿದ್ದಕ್ಕಿಂತಲೂ ವಿಶ್ವನಾಥ ರಾಯರ ಗಿಡಕ್ಕೆ ಏನೂ ಆಗದೆ ಇರುವುದೇ ಚಿಂತೆಯಾಗಿತ್ತು.

ಇದೇ ಹೊತ್ತಿಗೆ ವಿಶ್ವನಾಥ ರಾಯರು ತಮ್ಮ ಕೈ ತೋಟಕ್ಕೆ ಬಂದರು. ಅವರು ರಮೇಶನ ಗಿಡ ಮುರಿದ ಬಗ್ಗೆ ಬೇಸರ ಮಾಡಿಕೊಂಡರು. ಅಲ್ಲೇ ಇದ್ದ ರಮೇಶ ಕೇಳಿದ: ನಾನು ಇಷ್ಟೊಂದು ಗೊಬ್ಬರ ಕೊಟ್ಟು ಬೆಳೆಸಿದೆ. ಬೇಗನೆ ಗಟ್ಟಿಮುಟ್ಟಾಗಿ ಬೆಳೆದಿದೆ. ಆದರೂ ಅದು ಉರುಳಿ ಬಿದ್ದಿದ್ದು ಹೇಗೆ?

ಅದಕ್ಕೆ ವಿಶ್ವನಾಥ ರಾಯರು ಹೇಳಿದರು: ನನಗೆ ಇದರ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ನನ್ನ ಪ್ರಕಾರ ಯಾವುದೇ ಗಿಡ ಒಮ್ಮೆಗೇ ವಿಪರೀತವಾಗಿ ಎತ್ತರಕ್ಕೆ ಬೆಳೆಯಬಾರದು. ನಾವು ಈ ಗಿಡವನ್ನು ಎಲ್ಲಿಂದಲೋ ತಂದು ನೆಟ್ಟಿರುತ್ತೇವೆ. ಅದು ಮೊದಲು ಭೂಮಿಗೆ ಹೊಂದಾಣಿಕೆಯಾಗಿ ಬೇರು ಬಿಟ್ಟು ನಿಲ್ಲಬೇಕು. ನಂತರ ಅದರ ಬೆಳವಣಿಗೆಯನ್ನು ಅದೇ ನೋಡಿಕೊಳ್ಳುತ್ತದೆ. ನಾವು ನೆಟ್ಟಕೂಡಲೇ ವಿಪರೀತ ಗೊಬ್ಬರ ಹಾಕಿ ಬೆಳೆಸಿದರೆ ಅದು ಎತ್ತರಕ್ಕೇನೋ ಬೆಳೆಯುತ್ತದೆ, ದಷ್ಟಪುಷ್ಟವಾಗಿಯೂ ಬೆಳೆದೀತು. ಆದರೆ, ಅದನ್ನು ಆಧರಿಸುವ ಬೇರುಗಳೇ ಇನ್ನೂ ಗಟ್ಟಿಯಾಗಿರುವುದಿಲ್ಲ. ಹಾಗಾಗಿ ಅದು ಸಣ್ಣ ಬಿರುಗಾಳಿಗೂ ತಲೆ ಬಾಗಿ ಉರುಳುವ ಅಪಾಯವಿರುತ್ತದೆ. ಬೇರು ಗಟ್ಟಿಯಾಗಿರುವ ಗಿಡ ಯಾವತ್ತೂ ಸಂಪೂರ್ಣವಾಗಿ ಉರುಳಿ ಬೀಳುವ ಅಪಾಯ ಕಡಿಮೆ. ಕೆಲವೊಮ್ಮೆ ಕೊಂಬೆಗಳು ಬಿದ್ದಾವು ಅಷ್ಟೆಎಂದರು.

ರಮೇಶನಿಗೆ ತಾನು ಎಡವಿದ್ದೆಲ್ಲಿ ಎಂದು ಅರ್ಥವಾಯಿತು. ಅಷ್ಟು ಹೊತ್ತಿಗೆ ಅವನ ಪುಟ್ಟ ಮಗಳೂ ಅಲ್ಲಿಗೆ ಬಂದಳು. ಅವನು ಅವಳನ್ನು ತಬ್ಬಿಕೊಂಡ. `ʻʻಹೌದು ಸರ್ ಮೊದಲು ಬೇರುಗಳು ಗಟ್ಟಿಯಾಗಬೇಕು, ನಂತರ ಗಿಡ ಅದರ ಪಾಡಿಗೆ ಬೆಳೆಯುತ್ತದೆ,” ಎಂದು ಜೋರಾಗಿ ಹೇಳಿದ.

ಇದನ್ನೂ ಓದಿ | Motivational story: ಮೂರ್ಖನಾಗಿದ್ದು ಯಾರು? ಅವನಾ? ಇವನಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

Anurag Thakur: ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂಬುದಾಗಿ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರು ಸಂಸತ್‌ನಲ್ಲಿ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ರಾಹುಲ್‌ ಗಾಂಧಿ ಹಾಗೂ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದ್ದಾರೆ.

VISTARANEWS.COM


on

Anurag Thakur
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ದೇಶಾದ್ಯಂತ ಜಾತಿಗಣತಿ ಮಾಡಬೇಕು ಎಂದು ಆಗ್ರಹಿಸುತ್ತಲೇ ಇದ್ದಾರೆ. ಹಾಗೆಯೇ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡುತ್ತದೆ ಎಂದು ಕೂಡ ಹೇಳುತ್ತಾರೆ. ಇನ್ನು, ಸೋಮವಾರ (ಜುಲೈ 29) ಸಂಸತ್‌ನಲ್ಲಿ ಜಾತಿಗಣತಿ (Caste Census) ಕುರಿತು ರಾಹುಲ್‌ ಗಾಂಧಿ ಪ್ರಸ್ತಾಪಿಸಿದ್ದು, ಲೋಕಸಭೆಯಲ್ಲಿ ನಾವು ಜಾತಿಗಣತಿ ಮಂಡಿಸುತ್ತೇವೆ ಎಂದಿದ್ದರು. ಇದಕ್ಕೆ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ (Anurag Thakur) ತಿರುಗೇಟು ನೀಡಿದ್ದು, “ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ” ಎಂಬುದಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಸತ್‌ನಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದರು. ಇದಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದರು. “ಬೇರೆಯವರ ಜಾತಿಯನ್ನು ಕೇಳುವುದು ಎಷ್ಟು ಸರಿ” ಎಂದು ತಿರುಗೇಟು ನೀಡಿದರು.

ರಾಹುಲ್‌ ಗಾಂಧಿ ಪ್ರತ್ಯುತ್ತರ

ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿದರು. “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ, ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದರು. “ಅನುರಾಗ್‌ ಠಾಕೂರ್‌ ಅವರು ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಆದರೆ, ನಾನು ಅವರು ಕ್ಷಮೆ ಕೇಳಿ ಎಂಬುದಾಗಿ ಆಗ್ರಹಿಸುವುದಿಲ್ಲ. ಎಷ್ಟು ಬೇಕಾದರೂ ಅವಮಾನ ಮಾಡಲಿ” ಎಂದರು.

ಸಂಸತ್‌ನಲ್ಲಿ ಸೋಮವಾರ (ಜುಲೈ 29) ರಾಹುಲ್‌ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು. ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದನ್ನೂ ಓದಿ: Rahul Gandhi: ಮೋದಿ ಸೇರಿ 6 ಜನರಿಂದ ಭಾರತೀಯರಿಗೆ ಚಕ್ರವ್ಯೂಹ ರಚನೆ ಎಂದ ರಾಹುಲ್‌ ಗಾಂಧಿ; 6 ಜನ ಯಾರ‍್ಯಾರು?

Continue Reading

ಪ್ರಮುಖ ಸುದ್ದಿ

ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

ICC T20 ranking : ಇಂಗ್ಲೆಂಡ್​​ನ ಸೋಫಿ ಎಕ್ಲೆಸ್ಟೋನ್ (772) ಮತ್ತು ಸಾರಾ ಗ್ಲೆನ್ (760) ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದಾರೆ. ದೀಪ್ತಿ ಶರ್ಮಾ (755) ಮೂರನೇ ಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಸಾದಿಯಾ ಇಕ್ಬಾಲ್ (743) ನಾಲ್ಕನೇ ಸ್ಥಾನದಲ್ಲಿದ್ದಾರೆ. ಏಷ್ಯಾಕಪ್ನಲ್ಲಿ 6 ವಿಕೆಟ್ ಪಡೆದ ರಾಧಾ ಯಾದವ್ 5ನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಏಳು ಸ್ಥಾನಗಳನ್ನು ಏರಿದ ನಂತರ ಅವರು 13 ನೇ ಸ್ಥಾನ ಪಡೆದುಕೊಂಡಿದ್ದಾರೆ.

VISTARANEWS.COM


on

ICC T20 ranking
Koo

ಬೆಂಗಳೂರು: ಮಂಗಳವಾರ ಬಿಡುಗಡೆಯಾದ ಐಸಿಸಿ ಟಿ 20 ಐ ಶ್ರೇಯಾಂಕದ (ICC T20 ranking) ಪ್ರಕಾರ ವೇಗಿ ರೇಣುಕಾ ಸಿಂಗ್ ಠಾಕೂರ್ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ವೇಳೆ ಭಾರತದ ಬ್ಯಾಟರ್ಸ್ಮೃ ತಿ ಮಂದಾನ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಮಹಿಳಾ ಟಿ 20 ಏಷ್ಯಾ ಕಪ್ ಫೈನಲ್​​ನಲ್ಲಿ ಶ್ರೀಲಂಕಾ ವಿರುದ್ಧ ನಿರ್ಣಾಯಕ 60 ರನ್ ಗಳಿಸಿದ ನಂತರ ಭಾರತದ ಉಪನಾಯಕಿ ಮತ್ತು ಆರಂಭಿಕ ಆಟಗಾರ್ತಿ ಮಂದಾನ 743 ರೇಟಿಂಗ್ ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಈ ಟೂರ್ನಿಯಲ್ಲಿ ಏಳು ವಿಕೆಟ್ ಪಡೆದ ಬೌಲರ್ ರೇಣುಕಾ ಈಗ 722 ರೇಟಿಂಗ್ ಅಂಕಗಳೊಂದಿಗೆ ಬೌಲರ್​ಗಳ ಪೈಕಿ ಐದನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್​​ನ ಸೋಫಿ ಎಕ್ಲೆಸ್ಟೋನ್ (772) ಮತ್ತು ಸಾರಾ ಗ್ಲೆನ್ (760) ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದಾರೆ. ದೀಪ್ತಿ ಶರ್ಮಾ (755) ಮೂರನೇ ಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಸಾದಿಯಾ ಇಕ್ಬಾಲ್ (743) ನಾಲ್ಕನೇ ಸ್ಥಾನದಲ್ಲಿದ್ದಾರೆ. ಏಷ್ಯಾಕಪ್ನಲ್ಲಿ 6 ವಿಕೆಟ್ ಪಡೆದ ರಾಧಾ ಯಾದವ್ 5ನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಏಳು ಸ್ಥಾನಗಳನ್ನು ಏರಿದ ನಂತರ ಅವರು 13 ನೇ ಸ್ಥಾನ ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯಾದ ಬೆತ್ ಮೂನಿ (769) ಮತ್ತು ತಹ್ಲಿಯಾ ಮೆಕ್​ಗ್ರಾತ್​ (762) ಅಗ್ರ ಎರಡು ವೆಸ್ಟ್ ಇಂಡೀಸ್​​ನ ಹೇಲಿ ಮ್ಯಾಥ್ಯೂಸ್ (746) ಮೂರನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ಟ್ ಆರನೇ ಸ್ಥಾನದಲ್ಲಿದ್ದಾರೆ.

ಏಷ್ಯಾಕಪ್ ಫೈನಲ್​​ನಲ್ಲಿ ಭಾರತ ವಿರುದ್ಧ 61 ರನ್ ಗಳಿಸಿದ ಶ್ರೀಲಂಕಾದ ನಾಯಕಿ ಚಾಮರಿ ಅಟ್ಟಪಟ್ಟು ಮೂರು ಸ್ಥಾನ ಮೇಲಕ್ಕೇರಿ 705 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ನಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

“ಸ್ಪೂರ್ತಿದಾಯಕ ಆಟಗಾರ್ತಿ ಚಾಮರಿ ಅವರು ಏಷ್ಯಾ ಕಪ್​ನಲ್ಲಿ 100 ರ ಸರಾಸರಿಯಲ್ಲಿ 304 ರನ್​ಗಳನ್ನು ಒಳಗೊಂಡ ಪಂದ್ಯಾವಳಿಯ ವೀರೋಚಿತ ಪ್ರದರ್ಶನ ನೀಡಿದ್ದರು. ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ಅನ್ನು ಹೊಂದುವ ಮೂಲಕ ಅದೇ ಪಟ್ಟಿಯಲ್ಲಿ ಮೂರು ಸ್ಥಾನ ಮೇಲಕ್ಕೇರಿ ಆರನೇ ಸ್ಥಾನಕ್ಕೆ ತಲುಪಿದ್ದಾರೆ.

ಏಷ್ಯಾಕಪ್ ಮುಕ್ತಾಯದ ನಂತರ, ಪಾಕಿಸ್ತಾನದ ಮುನೀಬಾ ಅಲಿ ಟಿ 20 ಐ ಬ್ಯಾಟರ್​ಗಳ ಪಟ್ಟಿಯಲ್ಲಿ ಆರು ಸ್ಥಾನ ಮೇಲಕ್ಕೇರಿ 35 ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶದ ನಾಯಕ ನಿಗರ್ ಸುಲ್ತಾನಾ ಮೂರು ಸ್ಥಾನ ಮೇಲಕ್ಕೇರಿ 14 ನೇ ಸ್ಥಾನದಲ್ಲಿದ್ದಾರೆ. ಫೈನಲ್​​ನಲ್ಲಿ ಅಜೇಯ 69 ರನ್ ಗಳಿಸಿದ ಶ್ರೀಲಂಕಾದ ಹರ್ಷಿತಾ ಸಮರವಿಕ್ರಮ ಗರಿಷ್ಠ ಸ್ಕೋರ್ ಗಳಿಸಿದ ನಂತರ 20 ನೇ ಸ್ಥಾನ ತಲುಪಿದ್ದಾರೆ.

Continue Reading

ಪ್ರಮುಖ ಸುದ್ದಿ

Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

Asian Cricket Council : 2021 ರಲ್ಲಿ ಎಹ್ಸಾನ್ ಮಣಿ ನಿರ್ಗಮಿಸಿದ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾದವರು ತಮ್ಮ ಪೂರ್ಣ ಅವಧಿಯನ್ನು ಪೂರ್ಣಗೊಳಿಸಲು ಹೆಣಗಾಡುತ್ತಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಕೇವಲ 15 ತಿಂಗಳು ಸೇವೆ ಸಲ್ಲಿಸಿದರೆ, ನಜಾಮ್ ಸೇಥಿ ಮತ್ತು ಝಕಾ ಅಶ್ರಫ್ ತಲಾ ಒಂದು ವರ್ಷಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿದರು. ಮೊಹ್ಸಿನ್ ನಖ್ವಿ ಕೂಡ ಈ ಸ್ಥಾನವನ್ನು ಹೊಂದಿದ್ದಾರೆ

VISTARANEWS.COM


on

Asian Cricket Council
Koo

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್​​ನ (Asian Cricket Council) ಹೊಸ ಪಾತ್ರವನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಪಾಕಿಸ್ತಾನದ ಮಾಧ್ಯಮಗಳ ಇತ್ತೀಚಿನ ಸುದ್ದಿ ವರದಿಗಳ ಪ್ರಕಾರ, ಪ್ರಸ್ತುತ ಅಧ್ಯಕ್ಷ ಜಯ್ ಶಾ ಹೊಂದಿರುವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಮೊಹ್ಸಿನ್ ನಖ್ವಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್​​ನ ಮುಂದಿನ ಅಧ್ಯಕ್ಷರಾಗುವ ಸಾಧ್ಯತೆಯಿದೆ.

ಈ ವರ್ಷದ ಆರಂಭದಲ್ಲಿ ಮೊಹ್ಸಿನ್ ನಖ್ವಿ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನಖ್ವಿ ಅವರನ್ನು ಪಿಸಿಬಿ ಮುಖ್ಯಸ್ಥರಾಗಿ ಮೂರು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಅವರ ಅಧಿಕಾರಾವಧಿಯಲ್ಲಿ, ಪಾಕಿಸ್ತಾನ ಕ್ರಿಕೆಟ್ ತಂಡವು ಜೂನ್​​ನಲ್ಲಿ ನಡೆದ ಐಸಿಸಿ ಟಿ 20 ವಿಶ್ವಕಪ್ 2024ರಿಂದ ಗುಂಪು ಹಂತದ ನಿರ್ಗಮನದೊಂದಿಗೆ ಮುಖಭಂಗ ಅನುಭವಿಸಿತು.

2021 ರಲ್ಲಿ ಎಹ್ಸಾನ್ ಮಣಿ ನಿರ್ಗಮಿಸಿದ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾದವರು ತಮ್ಮ ಪೂರ್ಣ ಅವಧಿಯನ್ನು ಪೂರ್ಣಗೊಳಿಸಲು ಹೆಣಗಾಡುತ್ತಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಕೇವಲ 15 ತಿಂಗಳು ಸೇವೆ ಸಲ್ಲಿಸಿದರೆ, ನಜಾಮ್ ಸೇಥಿ ಮತ್ತು ಝಕಾ ಅಶ್ರಫ್ ತಲಾ ಒಂದು ವರ್ಷಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿದರು. ಮೊಹ್ಸಿನ್ ನಖ್ವಿ ಕೂಡ ಈ ಸ್ಥಾನವನ್ನು ಹೊಂದಿದ್ದಾರೆ

ಜಯ್ ಶಾ ಉತ್ತರಾಧಿಕಾರಿ ಮೊಹ್ಸಿನ್ ನಖ್ವಿ

ಪಾಕಿಸ್ತಾನದ ಇತ್ತೀಚಿನ ವರದಿಗಳ ಪ್ರಕಾರ, ಮೊಹ್ಸಿನ್ ನಖ್ವಿ 2025 ರ ಜನವರಿಯಲ್ಲಿ ಎಸಿಸಿ ಅಧ್ಯಕ್ಷರಾಗಿ ತಮ್ಮ ಎರಡು ವರ್ಷಗಳ ಅವಧಿ ಪ್ರಾರಂಭಿಸಲಿದ್ದಾರೆ. ಪ್ರಾದೇಶಿಕ ಕ್ರಿಕೆಟ್ ಆಡಳಿತದಲ್ಲಿ ಪಾಕಿಸ್ತಾನದ ಪ್ರಭಾವ ಹೆಚ್ಚಿಸುವ ಗುರಿಯನ್ನು ಪಾಕಿಸ್ತಾನ ಕ್ರಿಕೆಟ್ ತಂಡ ಹೊಂದಿದೆ.

ಇದನ್ನೂ ಓದಿ: Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಸಭೆಯಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತನ್ನ ಹೊಸ ಅಧ್ಯಕ್ಷರಾಗಿ ಮೊಹ್ಸಿನ್ ನಖ್ವಿ ಅವರನ್ನು ಅಧಿಕೃತವಾಗಿ ಘೋಷಿಸುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ. ಎಸಿಸಿ ಅಧ್ಯಕ್ಷರನ್ನು ಅದರ ಸದಸ್ಯ ರಾಷ್ಟ್ರಗಳ ನಡುವೆ ರೊಟೇಶನ್ ವ್ಯವಸ್ಥೆಯ ಮೂಲಕ ನೇಮಕ ಮಾಡಲಾಗುತ್ತದೆ. ಪ್ರಸ್ತುತ ಭಾರತೀಯ ಮಂಡಳಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಜಯ್ ಶಾ ಅವರ ಅಧಿಕಾರಾವಧಿ ಜನವರಿಯಲ್ಲಿ ಒಂದು ವರ್ಷ ವಿಸ್ತರಿಸಲಾಗಿತ್ತು. ಅಮಿತ್ ಶಾ ಅವರ ಅಧಿಕಾರಾವಧಿ 2025 ರ ಜನವರಿಯಲ್ಲಿ ಕೊನೆಗೊಂಡ ನಂತರ ಮೊಹ್ಸಿನ್ ನಖ್ವಿ ಎಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ.

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ನಜ್ಮುಲ್ ಹಸನ್ ಅವರು 2021ರ ಜನವರಿವರೆಗೆ ಎಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ 2022 ರ ಟಿ 20 ಏಷ್ಯಾ ಕಪ್ ಮತ್ತು 2023 ರ ಏಕದಿನ ಏಷ್ಯಾ ಕಪ್ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಯಶಸ್ವಿಯಾಗಿ ಆಯೋಜಿಸಿದೆ

Continue Reading

ಪ್ರಮುಖ ಸುದ್ದಿ

Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

Paris Olympics 2024 : ಇದೇ ವೇಳೆ ರ್ಯಾಂಕಿಂಗ್ ಸುತ್ತಿನಲ್ಲಿ 11 ನೇ ಸ್ಥಾನ ಪಡೆದ ಅಂಕಿತಾ ಭಕತ್ ಮಹಿಳಾ ವೈಯಕ್ತಿಕ ಆರಂಭಿಕ ಸುತ್ತಿನಲ್ಲಿ ವಿಯೋಲೆಟಾ ಮಿಸ್ಜೋರ್ ವಿರುದ್ಧ ಸೋತ ನಂತರ ಬೇಸರದಿಂದ ನಿರ್ಗಮಿಸಿದರು. ವಾರದ ಆರಂಭದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಮಹಿಳಾ ತಂಡ ಕ್ವಾರ್ಟರ್ ಫೈನಲ್​​ನಲ್ಲಿ ಸೋತಿತ್ತು. ಆದಾಗ್ಯೂ ಭಜನ್ ಕೌರ್ ಉತ್ತಮ ಪ್ರದರ್ಶನ ನೀಡಿದ್ದರು. ಯುವ ಕ್ರೀಡಾಪಟು ಅದೇ ವೇಗವನ್ನು ಮುಂದುವರಿಸಿದ್ದಾರೆ.

VISTARANEWS.COM


on

Paris Olympics 2024
Koo

ಪ್ಯಾರಿಸ್: ಭಾರತದ 18 ವರ್ಷದ ಆರ್ಚರಿ ಪಟು ಭಜನ್ ಕೌರ್ (Bhajan Kaur) ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ಮಹಿಳೆಯರ ಆರ್ಚರಿ ಬಿಲ್ಲುಗಾರಿಕೆಯಲ್ಲಿ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಇದೇ ವೇಳೆ ಅಂಕಿತಾ ಭಕತ್ ನಿರಾಶಾದಾಯಕ ಪ್ರದರ್ಶನ ನೀಡಿ ಮೊದಲ ಸುತ್ತಿನಲ್ಲಿ ನಿರ್ಗಮಿಸಿದ್ದಾರೆ. ಮಹಿಳಾ ತಂಡ ಸ್ಪರ್ಧೆಯಲ್ಲಿ ಭಾರತದ ಅತ್ಯುತ್ತಮ ಬಿಲ್ಲುಗಾರ್ತಿಯಾಗಿದ್ದ ಭಜನ್, ಇಂಡೋನೇಷಿಯಾದ ಸೈಫಾ ಕಮಲ್ ನುರಾಫಿಫಾ ವಿರುದ್ಧ 7-3 ಅಂತರದಲ್ಲಿ ಜಯ ಸಾಧಿಸುವ ಮೂಲಕ ಪ್ರಭಾವ ಬೀರಿದ್ದಾರೆ.

ಇದೇ ವೇಳೆ ರ್ಯಾಂಕಿಂಗ್ ಸುತ್ತಿನಲ್ಲಿ 11 ನೇ ಸ್ಥಾನ ಪಡೆದ ಅಂಕಿತಾ ಭಕತ್ ಮಹಿಳಾ ವೈಯಕ್ತಿಕ ಆರಂಭಿಕ ಸುತ್ತಿನಲ್ಲಿ ವಿಯೋಲೆಟಾ ಮಿಸ್ಜೋರ್ ವಿರುದ್ಧ ಸೋತ ನಂತರ ಬೇಸರದಿಂದ ನಿರ್ಗಮಿಸಿದರು. ವಾರದ ಆರಂಭದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಮಹಿಳಾ ತಂಡ ಕ್ವಾರ್ಟರ್ ಫೈನಲ್​​ನಲ್ಲಿ ಸೋತಿತ್ತು. ಆದಾಗ್ಯೂ ಭಜನ್ ಕೌರ್ ಉತ್ತಮ ಪ್ರದರ್ಶನ ನೀಡಿದ್ದರು. ಯುವ ಕ್ರೀಡಾಪಟು ಅದೇ ವೇಗವನ್ನು ಮುಂದುವರಿಸಿದ್ದಾರೆ.

ಮಂಗಳವಾರ ಆರಂಭದಲ್ಲೇ ಅವರು ಹೆಚ್ಚು ಆತ್ಮ ವಿಶ್ವಾಸದಿಂದ ಗುರಿಯಿಟ್ಟಿದ್ದರು. ಅದ್ಭುತವಾಗಿ ಶೂಟ್ ಮಾಡುತ್ತಿದ್ದ ಸೈಫಾ ಕಮಲ್ ವಿರುದ್ಧ ಮೊದಲ ಸುತ್ತಿನಲ್ಲಿ ಭಜನ್ 1-3 ಅಂತರದಲ್ಲಿ ಹಿನ್ನಡೆ ಅನುಭವಿಸಿದರು. ಆದಾಗ್ಯೂ, ಭಜನ್ ಮತ್ತೆ ಪುಟಿದೇಳಿದರು ಮತ್ತು ಮೂರು ಸೆಟ್ ಗಳನ್ನು ಗೆದ್ದರು.

ಭಜನ್ ಮೊದಲ ಸುತ್ತಿನಲ್ಲಿ ಐದು 10 ಸೆಕೆಂಡುಗಳನ್ನು ಗಳಿಸಿದರು. ದಿನದ ಆರಂಭದಲ್ಲಿ ಅಂಕಿತಾ ಅವರನ್ನು ಸೋಲಿಸಿದ ವಿಯೋಲೆಟಾ ಅವರನ್ನು ಎದುರಿಸಿದಾಗ ಉತ್ತಮ ಪ್ರದರ್ಶನ ನೀಡಿದರು. ಭಜನ್ 28-23, 29-26, 28-22 (6-0) ಸೆಟ್ ಗಳಿಂದ ಗೆದ್ದರು.

ಇದನ್ನೂ ಓದಿ: Paris Olympics 2024 : ಜುಲೈ 31ರಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಇಂತಿದೆ

ಅನುಭವಿ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಈ ವಾರದ ಕೊನೆಯಲ್ಲಿ ಕಣಕ್ಕಿಳಿಯಲಿದ್ದು, ಅನುಭವಿ ಬಿಲ್ಲುಗಾರ್ತಿ ಕ್ರೀಡಾಕೂಟದಲ್ಲಿ ತಂಡ ಸ್ಪರ್ಧೆಯ ಕ್ವಾರ್ಟರ್ ಫೈನಲ್ ನಿರಾಸೆಯನ್ನು ಸರಿಪಡಿಸಿಕೊಳ್ಳುವುದಕ್ಕೆ ಅವರು ಪ್ರಯತ್ನಿಸಲಿದ್ದಾರೆ.

ಭಜನ್ ಕೌರ್ ಯಾರು?

ಭಜನ್ ಕೌರ್ 2005 ರ ಆಗಸ್ಟ್ 26 ರಂದು ಹರಿಯಾಣದ ಸಿರ್ಸಾ ನಗರದಲ್ಲಿ ಜನಿಸಿದರು. ರಿಕರ್ವ್ ಬಿಲ್ಲುಗಾರ್ತಿಯಾಗಿ ಅವರು ಬಹಳ ಚಿಕ್ಕ ವಯಸ್ಸಿನಲ್ಲಿಯೇ ಆಳವಾದ ಪ್ರತಿಭೆಯನ್ನು ತೋರಿಸಿದ್ದಾರೆ. ಅವರು 2021 ರಲ್ಲಿ ಟಾಟಾ ಆರ್ಚರಿ ಅಕಾಡೆಮಿಗೆ ಸೇರಿದರು. ಸದರಿ ಅಕಾಡೆಮಿಗೆ ಸೇರ್ಪಡೆಗೊಂಡ ಕೂಡಲೇ ಅವರು ಅಂತಾರಾಷ್ಟ್ರೀಯ ಸ್ಪರ್ಧೆಗೆ ಪಾದಾರ್ಪಣೆ ಮಾಡಿದರು. 2022 ರ ಏಷ್ಯಾ ಕಪ್​ನ ಎರಡನೇ ಹಂತದಲ್ಲಿ ಅಂತಾರರಾಷ್ಟ್ರೀಯ ಮಟ್ಟದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತು ಅಲ್ಲಿಂದ ಅವರು ಅನೇಕ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ, ಅವರು 2 ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕಗಳನ್ನು ಗೆದ್ದಿದ್ದಾರೆ.

Continue Reading
Advertisement
Anurag Thakur
ದೇಶ34 mins ago

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

ICC T20 ranking
ಪ್ರಮುಖ ಸುದ್ದಿ46 mins ago

ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

Asian Cricket Council
ಪ್ರಮುಖ ಸುದ್ದಿ1 hour ago

Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

Viral video
ವೈರಲ್ ನ್ಯೂಸ್1 hour ago

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

Ranbir Kapoor
ಸಿನಿಮಾ1 hour ago

Ranbir Kapoor: ಮುದ್ದಿನ ಮಡದಿ ಅಲಿಯಾ ಕುರಿತ ಸೀಕ್ರೆಟ್ ಮಾಹಿತಿ ಹಂಚಿಕೊಂಡ ರಣಬೀರ್!

Minister Ramalinga Reddy drives for state level inter school Olympics sports in Bengaluru
ಬೆಂಗಳೂರು2 hours ago

Bengaluru News: ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

Decision to release water from Malaprabha Reservoir says minister Lakshmi Hebbalkar
ಕರ್ನಾಟಕ2 hours ago

Lakshmi Hebbalkar: ಸುರಕ್ಷತೆ ದೃಷ್ಟಿಯಿಂದ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ನಿರ್ಧಾರ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

Wayanad Landslide
EXPLAINER2 hours ago

Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Union Minister Pralhad Joshi reaction about rahul gandhi statement
ದೇಶ2 hours ago

Pralhad Joshi: ಕಾಂಗ್ರೆಸ್‌ ಹಗರಣ, ಭ್ರಷ್ಟಾಚಾರದ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ; ಪ್ರಲ್ಹಾದ್ ಜೋಶಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ11 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌