Motivational story | ಸಾಧುವಿನ ಬಳಿಗೆ ಹೋದ ಯುವ ರಾಜಕಾರಣಿ ಬಾಯಿಗೆ ಬಂದಂತೆ ಬೈದ: ಪ್ರತಿಯಾಗಿ ಸಾಧು ಮಾಡಿದ್ದೇನು? - Vistara News

ಪ್ರಮುಖ ಸುದ್ದಿ

Motivational story | ಸಾಧುವಿನ ಬಳಿಗೆ ಹೋದ ಯುವ ರಾಜಕಾರಣಿ ಬಾಯಿಗೆ ಬಂದಂತೆ ಬೈದ: ಪ್ರತಿಯಾಗಿ ಸಾಧು ಮಾಡಿದ್ದೇನು?

Motivational story : ಸಾಧುವಿನ ಬಳಿಗೆ ಹೋದ ರಾಜಕಾರಣಿ ತನ್ನ ಧಿಮಾಕು ತೋರಿಸಿದ. ಆದರೆ, ಸಾಧು ಮಾತ್ರ ಅವನನ್ನು ಹೊಗಳಿ ಕಳುಹಿಸಿದ. ಇದನ್ನು ಕೇಳಿದ ರಾಜಕಾರಣಿಯ ಅಪ್ಪ ಹೇಳಿದ್ದೇನು?

VISTARANEWS.COM


on

buddha motivational story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ- Motivational story
ಒಂದು ಬಾರಿ ಒಬ್ಬ ದೊಡ್ಡ ರಾಜಕೀಯ ನಾಯಕ ಒಬ್ಬ ಸಾಧುವಿನ ಸಣ್ಣ ಆಶ್ರಮಕ್ಕೆ ಹೋದ. ಆ ಸಾಧುವಿನ ಬಗ್ಗೆ ಅವನಿಗೆ ತುಂಬಾ ಜನ ಹೇಳಿದ್ದರು. ಹಾಗಿರುವಾಗ ತಾನೂ ಒಂದು ಸಾರಿ ಹೋಗಿ ಬಂದರೆ ಹೇಗೆ ಎಂದು ಅನಿಸಿ ಅವನು ಅಲ್ಲಿಗೆ ಹೋಗಿದ್ದ. ತನಗೂ ಅವರಿಂದ ಏನಾದರೂ ಒಳ್ಳೆಯದು ಆದೀತು ಎನ್ನುವ ಆಲೋಚನೆ ಅವನಿಗಿತ್ತು.

ಅವನು ಆಶ್ರಮಕ್ಕೆ ಹೋದ. ಆಶ್ರಮವೆಂದರೆ ದೊಡ್ಡದೇನಲ್ಲ. ಸಣ್ಣದೊಂದು ಕುಟೀರದಂಥ ಮನೆ. ಅಲ್ಲಿನ ಒಂದು ಸಣ್ಣ ಕೋಣೆಯಲ್ಲಿ ಸಾಧು ಕುಳಿತಿದ್ದರು. ಅವರ ಮುಂದೆ ಒಂದಷ್ಟು ಜನರು. ಅಲ್ಲಿ ಸ್ವಾಮೀಜಿ ಭಕ್ತರ ಪ್ರಶ್ನೆಗಳಿಗೆ ಉತ್ತರ ಕೊಡುತ್ತಿದ್ದರು. ಅಂದ ಹಾಗೆ ರಾಜಕೀಯ ನಾಯಕ ಒಬ್ಬನೇ ಹೋಗಿರಲಿಲ್ಲ. ನಾಲ್ಕು ಮಂದಿ ಬಾಡಿ ಗಾರ್ಡ್‌ಗಳು ಕೂಡಾ ಇದ್ದರು.

ಇವರನ್ನೆಲ್ಲ ಕಟ್ಟಿಕೊಂಡು ರಾಜಕೀಯ ನಾಯಕ ಸಾಧುವಿನ ಕೋಣೆಯನ್ನು ಪ್ರವೇಶ ಮಾಡಿದ. ಸಾಧು ಇವರನ್ನು ಗಮನಿಸಿದರೂ ಗಮನಿಸದಂತೆ ಪ್ರಶ್ನೋತ್ತರ ಕಲಾಪ ಮುಂದುವರಿಸಿದರು. ಸಾಮಾನ್ಯವಾಗಿ ರಾಜಕೀಯ ನಾಯಕ ಎಲ್ಲೇ ಹೋದರೂ ಜನರು ಎದ್ದು ನಿಂತು ಗೌರವಿಸುವುದು, ತಲೆ ತಗ್ಗಿಸಿ ನಮಸ್ಕಾರ ಮಾಡುವುದು ವಾಡಿಕೆಯಾಗಿ ಹೋಗಿತ್ತು. ಆದರೆ, ಇಲ್ಲಿ ಸಾಧುವಾಗಲೀ, ಇತರರಾಗಲೀ ಎದ್ದು ನಿಲ್ಲದೆ ಇದ್ದುದು ಅವನಿಗೆ ಸಿಟ್ಟುಬಂತು.

ಸಾಧುಗಳು ಅಲ್ಲಿ ನೆರೆದಿದ್ದವರ ಜತೆ ಮಾತನಾಡುತ್ತಿದ್ದಂತೆಯೇ ಮಧ್ಯ ಪ್ರವೇಶಿಸಿದ ರಾಜಕೀಯ ನಾಯಕ, ನನಗೆ ನಿಮ್ಮ ಬಳಿ ಸ್ವಲ್ಪ ಮಾತನಾಡಲಿಕ್ಕಿದೆ ಎಂದ. ಆಗ ಸಾಧು ಅವನತ್ತ ತಿರುಗಿ ಹೇಳಿದರು: ದಯವಿಟ್ಟು ಸ್ವಲ್ಪ ಹೊತ್ತು ಕಾಯಿರಿ. ನಾನು ಇವರ ಪ್ರಶ್ನೆಗಳಿಗೆ ಉತ್ತರಿಸಿ ನಂತರ ನಿಮ್ಮ ಬಳಿ ಮಾತನಾಡುತ್ತೇನೆ. ನೀವು ಅಷ್ಟು ಹೊತ್ತು ಕಾಯಲು ಸಿದ್ಧರಿದ್ದೀರಿ ಎಂದರೆ ಕಾಯಬಹುದು.

ಈ ಮಾತನ್ನು ಕೇಳುತ್ತಲೇ ರಾಜಕೀಯ ಮುಖಂಡನ ಸಿಟ್ಟು ನೆತ್ತಿಗೇರಿತು. ಅಲ್ಲಿವರೆಗೆ ಸಾಧುವನ್ನು ಬಹುವಚನದಿಂದ ಮಾತನಾಡಿಸುತ್ತಿದ್ದ ರಾಜಕೀಯ ನಾಯಕ, ವಿನಯದಿಂದ ನಡೆದುಕೊಳ್ಳುತ್ತಿದ್ದ ರಾಜಕೀಯ ಮುಖಂಡ ಒಮ್ಮಿಂದೊಮ್ಮೆಗೆ ಭಾಷೆ ಬದಲಿಸಿದ. ʻನಾನು ಯಾರೂಂತ ನಿನಗೆ ಗೊತ್ತಾ? ನೀನು ಯಾರ ಜತೆ ಮಾತನಾಡುತ್ತಿದ್ದಿ ಎಂದು ಗೊತ್ತಿದೆಯಾʼ ಎಂದು ಕೇಳಿದ.

ಆಗ ಸಾಧು ಅತ್ಯಂತ ಸಂಯಮದಿಂದ ಮುಗುಳ್ನಗೆಯೊಂದಿಗೆ ಹೇಳಿದರು: ನೀವು ಯಾರು ಎನ್ನುವುದು ನನ್ನ ವಿಚಾರದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ನೀವು ಯಾರೇ ಆಗಿರಬಹುದು. ನಾನು ನಿಮ್ಮ ಪ್ರಶ್ನೆಗಳಿಗೆ ಉತ್ತರ ಕೊಡಬೇಕು ಅಂತಿದ್ದರೆ, ನಿಮ್ಮ ಜತೆ ಮಾತನಾಡಲೇಬೇಕು ಅಂತಿದ್ದರೆ ನೀವು ಇನ್ನು ಸ್ವಲ್ಪ ಹೊತ್ತು ಕಾಯಲೇಬೇಕು.

ಆಗ ರಾಜಕೀಯ ಮುಖಂಡನ ಸಿಟ್ಟು ಇನ್ನೂ ಹೆಚ್ಚಾಯಿತು: ನಾನು ಯಾರು ಅಂತ ನಿನಗೆ ತೋರಿಸುತ್ತೇನೆ. ಜತೆಗೆ ನಿನ್ನ ಮುಖವಾಡವನ್ನೂ ಕಳಚುತ್ತೇನೆ. ನೀನು ನನ್ನನ್ನು ಎದುರು ಹಾಕಿಕೊಂಡು ತಪ್ಪು ಮಾಡಿದ್ದೀಯಾ ಸಾಧು.. ನೀನು ಒಬ್ಬ ಕಳ್ಳ ಸನ್ಯಾಸಿ. ಜನರಿಗೆ ಮೋಸ ಮಾಡ್ತಾ ಇದ್ದೀಯಾ.. ನೀನು ಢೋಂಗಿ.. ಇಲ್ಲಿ ಕುಳಿತವರಿಗೆಲ್ಲ ವಂಚನೆ ಮಾಡ್ತಾ ಇದೀಯಾ.. ನಿನ್ನ ಲಾಭಕ್ಕಾಗಿ ಇವರನ್ನೆಲ್ಲ ಬಳಸಿಕೊಳ್ತಾ ಇದ್ದೀಯಾ.. ನಾನು ನಿನ್ನನ್ನು ಬಿಡಲ್ಲ.. ನಿನ್ನ ಎಲ್ಲ ಮೋಸದ ಮುಖವಾಡಗಳನ್ನು ಬಿಚ್ಚುತ್ತೇನೆ- ಎಂದು ಹೇಳಿದ.

ರಾಜಕೀಯ ಮುಖಂಡ ಅಷ್ಟು ಹೇಳಿದ ನಂತರವೂ ಸಾಧುವಿನ ಮುಖದಲ್ಲಿನ ಮುಗುಳ್ನಗೆ ಹಾಗೆಯೇ ಇತ್ತು. ಇದನ್ನು ನೋಡಿ ರಾಜಕೀಯ ಮುಖಂಡನಿಗೆ ಇನ್ನಷ್ಟು ಉರಿ ಹತ್ತಿತ್ತು. ʻʻನೋಡು ಸಾಧು.. ಇನ್ನು ಒಂದು ಕ್ಷಣವೂ ನಾನು ಇಲ್ಲಿ ಇರುವುದಿಲ್ಲ. ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ನಿನಗೆ ಇನ್ನೂ ಟೈಮಿದೆ… ನನಗೆ ಗೌರವ ಕೊಟ್ಟು ಕ್ಷಮೆ ಕೇಳಬಹುದು. ನನ್ನ ಜತೆ ಏನಾದರೂ ಹೇಳಲು ಇದ್ದರೆ ಕಡೆಯ ಅವಕಾಶ ಕೊಡುತ್ತೇನೆ.. ತಿದ್ದಿಕೊಳ್ಳಲುʼʼ ಎಂದು ಹೇಳಿದ.

ಈಗಲೂ ಸಾಧುವಿನ ಮುಖದ ಮುಗುಳ್ನಗೆ ಬದಲಾಗಲಿಲ್ಲ. ಅವರು ಅದೇ ಮುಗ್ಧ ನಗುವಿನೊಂದಿಗೆ ಆ ರಾಜಕಾರಣಿಯ ಕಡೆಗೆ ತಿರುಗಿ ಕೈಮುಗಿದು ಹೇಳಿದರು: ನನಗೆ ನಿಮ್ಮ ಬಗ್ಗೆ ಯಾವುದೇ ತಪ್ಪು ಭಾವನೆಯೂ ಇಲ್ಲ. ನೀವೀಗ ನನ್ನ ಬಗ್ಗೆ ಹೇಳಿದಿರಲ್ಲ.. ಅದರ ಬಗ್ಗೆಯೂ ನನಗೆ ಯಾವುದೇ ತಕರಾರಿಲ್ಲ. ಯಾಕೆಂದರೆ ಅದು ನಿಮ್ಮ ಯೋಚನೆ. ನನ್ನ ಮಟ್ಟಿಗೆ ನೀವೊಬ್ಬ ದೊಡ್ಡ ವ್ಯಕ್ತಿ ಅಂತ ಅನಿಸುತ್ತೀರಿ. ಇನ್ನಷ್ಟು ದೊಡ್ಡ ಮನುಷ್ಯ ಆಗಬಲ್ಲಿರಿ.

ಇಷ್ಟು ಮಾತು ಕೇಳಿದ ರಾಜಕೀಯ ನಾಯಕನಿಗೆ ಸ್ವರ್ಗವೇ ಕೈ ಎಟುಕಿಗೆ ಬಂದ ಹಾಗಾಯಿತು. ಸಾಧು ಕ್ಷಮೆ ಕೇಳಿದ ಅನ್ನೋದು ಒಂದು ಕಡೆಯಾದರೆ, ಇನ್ನೊಂದು ಕಡೆ ಅವನೇ ನನ್ನನ್ನು ಹೊಗಳಿದನಲ್ಲಾ ಎನ್ನುವ ಖುಷಿ ಇನ್ನೊಂದು ಕಡೆ.

ರಾಜಕೀಯ ಮುಖಂಡ ಸಾಧುವನ್ನು ಮಣಿಸಿದ ಖುಷಿಯಲ್ಲಿ ಮನೆಗೆ ಬಂದ. ಮನೆಯಲ್ಲಿ ಅವನ ತಂದೆ ಇದ್ದರು. ಅವರೂ ಒಬ್ಬ ಹಿರಿಯ ರಾಜಕೀಯ ಮುಖಂಡರಾಗಿ ಈಗ ಸಕ್ರಿಯ ರಾಜಕೀಯದಿಂದ ದೂರವಿದ್ದವರು, ಒಳ್ಳೆಯ ಮನುಷ್ಯ. ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೆ ಕೆಲಸ ಮಾಡಿದವರು.

ಧ್ಯಾನದಲ್ಲಿದ್ದ ಅವರು ಪಕ್ಕದಲ್ಲಿ ಮಗ ಬಂದು ಕುಳಿತದ್ದು ನೋಡಿ ಖುಷಿಯಾದರು. ಯಾಕೋ ಮಗ ಇವತ್ತು ತುಂಬಾ ಖುಷಿಯಾಗಿದ್ದ ಹಾಗೆ ಕಂಡಿತು. ಏನು ವಿಷಯ ಎಂದು ಕೇಳಿದರು. ಮಗ ಬೆಳಗ್ಗೆ ನಡೆದ ಅಷ್ಟೂ ಘಟನೆಗಳನ್ನು ವಿವರಿಸಿದ. ಸಾಧುವನ್ನು ತಾನು ಹೇಗೆ ಮಟ್ಟ ಹಾಕಿದೆ, ಕೊನೆಗೆ ಆತನೇ ತನ್ನನ್ನು ಹೊಗಳುವ ಪರಿಸ್ಥಿತಿ ಬಂದಿದ್ದನ್ನೆಲ್ಲ ವಿವರಿಸಿದ.

ಆಗ ಅವನ ಅಪ್ಪ ನಗುತ್ತಾ ಹೇಳಿದರು: ಮಗಾ.. ಅವರು ನಿನ್ನನ್ನು ಹೊಗಳಿದ್ದೇನೂ ಅಲ್ಲ. ಅವರು ನೀನೇನೂ ಅಂತ ಹೇಳಲೂ ಇಲ್ಲ. ಅವರು ಹೇಳಿದ್ದು ಅವರಿಗೆ ನೀನು ಹೇಗೆ ಕಾಣಿಸುತ್ತಿದ್ದಿ ಎನ್ನುವುದನ್ನಷ್ಟೇ. ಅದು ಅವರ ದೃಷ್ಟಿ. ನೀನು ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗಲೂ ಅವರು ಏನೂ ಮಾತನಾಡಿಲ್ಲ. ಯಾಕೆಂದರೆ, ಅವರಿಗೆ ಚೆನ್ನಾಗಿ ಗೊತ್ತಿತ್ತು… ಅದು ಅವರಲ್ಲ.. ನಿನ್ನ ಯೋಚನೆ ಅಷ್ಟೇ ಅಂತ. ನೀನು ಅಷ್ಟು ಹೇಳಿದ ಮೇಲೂ ಅವರು ನಿನ್ನನ್ನು ಹೊಗಳಿದ್ದಾರೆ ಎಂದರೆ ಅವರು ಹೊಗಳಿದ್ದು ನಿನ್ನ ವ್ಯಕ್ತಿತ್ವವನ್ನಲ್ಲ.. ನಿನ್ನ ಶ್ರೇಷ್ಠತೆಯನ್ನಲ್ಲ.. ಬದಲಾಗಿ ಅವರ ದೃಷ್ಟಿಯನ್ನು. ಹೌದು, ಅವರ ದೃಷ್ಟಿ ಚೆನ್ನಾಗಿತ್ತು.. ನೀನು ಅವರಿಗೆ ಹಾಗೆ ಕಂಡಿದ್ದೀಯಾ.. ನಿನ್ನ ದೃಷ್ಟಿ ಹೇಗಿದೆ ಎನ್ನುವುದನ್ನು ನೀನೇ ನೋಡಿಕೋ..

ಯುವ ರಾಜಕಾರಣಿ ತಲೆ ತಗ್ಗಿಸಿ ಎಲ್ಲವೂ ಅರ್ಥವಾಯಿತು ಎನ್ನುವ ಹಾಗೆ ತಲೆಯಾಡಿಸಿದ.

ಇದನ್ನೂ ಓದಿ | Motivational Story: ಸೋಲಿನ ಭಯದಲ್ಲೇ ಇದ್ದ ಅವನಿಗೆ ಕೇಶವ ಮೂರ್ತಿ ಹೇಳಿದ ಗೆಲುವಿನ ಮಂತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Narendra Modi: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಾರಾಣಸಿಯಿಂದ ಮೂರನೇ ಬಾರಿಗೆ ಗೆದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದಾರೆ.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದ್ದಾರೆ. ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (PM Kisan Nidhi Samman) ಯೋಜನೆಯ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದ ಬಳಿಕ ಅವರು ಮಾತನಾಡಿದರು. “ಲೋಕಸಭೆ ಚುನಾವಣೆಯಲ್ಲಿ ನೀವು ನನ್ನನ್ನು ಮೂರನೇ ಬಾರಿಗೆ ಸಂಸದನಾಗಿ ಮಾತ್ರವಲ್ಲ, ಮೂರನೇ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದೀರಿ. ನಿಮಗೆ ನನ್ನ ಧನ್ಯವಾದಗಳು” ಎಂದು ಹೇಳಿದರು.

“ಕಳೆದ 60 ವರ್ಷದಲ್ಲಿಯೇ ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರವನ್ನು ಸತತ ಮೂರನೇ ಬಾರಿಗೆ ಆಯ್ಕೆ ಮಾಡಿರಲಿಲ್ಲ. ಆದರೆ, ದೇಶದ ಜನರು ನನ್ನನ್ನು ಸತತ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ನೇಮಕ ಮಾಡಿದ್ದಾರೆ. ವಾರಾಣಸಿಯ ಜನರೂ ನನ್ನ ಜತೆ ನಿಂತಿದ್ದಾರೆ. ಇದು ಐತಿಹಾಸಿಕವಾಗಿದ್ದು, ಮುಂದಿನ 5 ವರ್ಷಗಳವರೆಗೆ ನಿಮ್ಮ ಸೇವೆ ಮಾಡುತ್ತೇನೆ. ವಿಕಸಿತ ಭಾರತದ ನಿರ್ಮಾಣಕ್ಕಾಗಿ ಶ್ರಮ ವಹಿಸುತ್ತೇನೆ. ರೈತರು, ಯುವಕರು ಹಾಗೂ ಮಹಿಳೆಯರು ದೇಶದ ಮೂರು ಸ್ತಂಭಗಳಾಗಿದ್ದು, ಇವರೆಲ್ಲರ ಏಳಿಗೆಗೆ ಆಡಳಿತ ನಡೆಸುತ್ತೇವೆ” ಎಂದು ತಿಳಿಸಿದರು.

“ಕೇಂದ್ರದಲ್ಲಿ ನಮ್ಮ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ದೇಶದ 9.26 ಕೋಟಿ ರೈತರಿಗೆ ಹಣಕಾಸು ನೆರವು ನೀಡುವ ಕಡತಕ್ಕೆ ನಾನು ಮೊದಲು ಸಹಿ ಹಾಕಿದೆ. ಆ ಮೂಲಕ ರೈತರಿಗೆ ಅನುಕೂಲ ಮಾಡುವುದು ನಮ್ಮ ಉದ್ದೇಶವಾಗಿತ್ತು. ಇನ್ನು ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಬಡವರಿಗೆ 3 ಕೋಟಿ ಬಡವರಿಗೆ ಮನೆ ನಿರ್ಮಿಸುವ ಕುರಿತು ಕೂಡ ತೀರ್ಮಾನಿಸಲಾಗಿದೆ. ಲಕ್‌ಪತಿ ದೀದಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದರಿಂದ ರೈತರು ಸಕಲ ರೀತಿಯಲ್ಲಿ ಏಳಿಗೆ ಹೊಂದಲಿದ್ದಾರೆ” ಎಂದರು.

“ಮೂರನೇ ಅವಧಿಯಲ್ಲಿ ದೇಶದ ಏಳಿಗೆಗೆ ಜತೆಗೆ ವಾರಾಣಸಿಯನ್ನೂ ಇನ್ನಷ್ಟು ಅಭಿವೃದ್ಧಿ ಮಾಡಲಾಗುವುದು. ಈಗಾಗಲೇ ಕಾಶಿಯ ಯುವಕ, ಯುವತಿಯರು, ರೈತರ ಏಳಿಗೆಗೆ ಹತ್ತಾರು ಕ್ರಮಗಳು, ರೈಲು ನಿಲ್ದಾಣ ಅಭಿವೃದ್ಧಿ, ಸಾಂಸ್ಕೃತಿಕ ಹಿರಿಮೆ, ಪರಂಪರೆಯನ್ನು ಮರುಕಳಿಸಲಾಗಿದೆ. ಧಾರ್ಮಿಕ ನಗರಿಯು ಅಭಿವೃದ್ಧಿಯ ನಗರವಾಗಿಯೂ ರೂಪುಗೊಂಡಿದ್ದನ್ನು ಎಲ್ಲರೂ ಕಾಣಬಹುದು. ಕಾಶಿ ವಿಶ್ವನಾಥನ ಕೃಪಾಶೀರ್ವಾದದಿಂದ ಮುಂದಿನ ವರ್ಷಗಳಲ್ಲಿಯೂ ಏಳಿಗೆಗೆ ಶ್ರಮ ವಹಿಸುತ್ತೇವೆ. ನನಗೆ ಆಶೀರ್ವಾದ ಮಾಡಿದ ಎಲ್ಲರಿಗೂ ಮತ್ತೊಮ್ಮೆ ಹೃದಯಾಂತರಾಳದ ಧನ್ಯವಾದ” ಎಂದು ಹೇಳಿದರು.

ಇದನ್ನೂ ಓದಿ: ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Continue Reading

ವಿದೇಶ

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

ಅಮೆರಿಕದ ನ್ಯೂಜೆರ್ಸಿಯಲ್ಲಿ ಪಂಜಾಬ್‌ ಮೂಲದ, 19 ವರ್ಷದ ಗೌರವ್‌ ಗಿಲ್ಲ ಎಂಬಾತನು 29 ವರ್ಷದ ಜಸ್ವೀರ್‌ ಕೌರ್‌ ಎಂಬ ಮಹಿಳೆಯನ್ನು ಕೊಂದಿದ್ದಾನೆ. ಗುಂಡಿನ ದಾಳಿಯಲ್ಲಿ 20 ವರ್ಷದ ಗಗನ್‌ದೀಪ್‌ ಕೌರ್‌ ಎಂಬ ಯುವತಿಯು ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ಮಾಡಲೆಂದೇ ಆತನು ಅಮೆರಿಕಕ್ಕೆ ತೆರಳಿದ್ದ ಎಂದು ತಿಳಿದುಬಂದಿದೆ.

VISTARANEWS.COM


on

Indian Women
ಜಸ್ವೀನ್‌ ಕೌರ್‌ ಹಾಗೂ ಗಗನ್‌ದೀಪ್‌ ಕೌರ್.‌
Koo

ವಾಷಿಂಗ್ಟನ್‌: ಇತ್ತೀಚಿನ ಯುವಕ-ಯುವತಿಯರಲ್ಲಿ ಸೇಡಿನ ಕೃತ್ಯಗಳು, ಲವ್‌ ಬ್ರೇಕಪ್‌ (Love Breakup) ಆದ ಕೂಡಲೇ ಪ್ರೇಯಸಿಯನ್ನು ಕೊಲ್ಲುವುದು, ಆಸಿಡ್‌ ದಾಳಿ ಮಾಡುವುದು ಸೇರಿ ಹಲವು ಕೃತ್ಯಗಳು ನಡೆಯುತ್ತಲೇ ಇರುತ್ತವೆ. ಇನ್ನು ಪಂಜಾಬ್‌ ಯುವಕನೊಬ್ಬ ಭಾರತದಿಂದ ಅಮೆರಿಕಕ್ಕೆ (America) ತೆರಳಿ, ಅಲ್ಲಿ 29 ವರ್ಷದ ಮಹಿಳೆಯ ಮೇಲೆ 7 ಬಾರಿ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಈ ಭೀಕರ ಹತ್ಯೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಅಮೆರಿಕದ ನ್ಯೂಜೆರ್ಸಿಯಲ್ಲಿ ಪಂಜಾಬ್‌ ಮೂಲದ, 19 ವರ್ಷದ ಗೌರವ್‌ ಗಿಲ್ಲ ಎಂಬಾತನು 29 ವರ್ಷದ ಜಸ್ವೀರ್‌ ಕೌರ್‌ ಎಂಬ ಮಹಿಳೆಯನ್ನು ಕೊಂದಿದ್ದಾನೆ. ಗುಂಡಿನ ದಾಳಿಯಲ್ಲಿ 20 ವರ್ಷದ ಗಗನ್‌ದೀಪ್‌ ಕೌರ್‌ ಎಂಬ ಯುವತಿಯು ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತದಿಂದ ಅಮೆರಿಕಕ್ಕೆ ತೆರಳಿ, ಅಲ್ಲಿ ಯುವತಿಯನ್ನು ಹುಡುಕಿ, ಅವರ ಮನೆಗೇ ತೆರಳಿ ಗುಂಡಿನ ದಾಳಿ ಮಾಡಲು ನಿಖರ ಕಾರಣ ತಿಳಿದುಬಂದಿಲ್ಲ. ಕೃತ್ಯದ ಬಳಿಕ ಪೊಲೀಸರು ಗೌರವ್‌ ಗಿಲ್‌ನನ್ನು ಬಂಧಿಸಿದ್ದಾರೆ.

ಪಂಜಾಬ್‌ನ ಗೌರವ್‌ ಗಿಲ್‌ ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದು, ವಾಷಿಂಗ್ಟನ್‌ ಜಿಲ್ಲೆಯ ಕೆಂಟ್‌ ಪಟ್ಟಣದಲ್ಲಿ ವಾಸಿಸುತ್ತಿದ್ದ. ನ್ಯೂಜೆರ್ಸಿಯ ಕಾರ್ಟರೆಟ್‌ನಲ್ಲಿ ಘಟನೆ ನಡೆದಿದೆ. ಗೌರವ್‌ ಗಿಲ್‌ ಹಾಗೂ ಗಗನ್‌ದೀಪ್‌ ಕೌರ್‌ ಅವರು ಪಂಜಾಬ್‌ನ ನಾಕೋದರ್‌ನಲ್ಲಿ ಕೋಚಿಂಗ್‌ ಸೆಂಟರ್‌ನಲ್ಲಿ ಅಧ್ಯಯನ ಮಾಡುವಾಗ ಪರಸ್ಪರ ಪರಿಚಯವಾಗಿದ್ದರು ಎಂದು ತಿಳಿದುಬಂದಿದೆ. ಜಸ್ವೀರ್‌ ಅವರು ಗಗನ್‌ದೀಪ್‌ ಕಸಿನ್‌ ಆಗಿದ್ದು, ಗಗನ್‌ದೀಪ್‌ ಅವರು ಜಸ್ವೀರ್‌ ಮನೆಗೆ ಹೋಗಿದ್ದರು. ಆಗ ಗೌರವ್‌ ಗಿಲ್‌ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಜಸ್ವೀರ್‌ ಕೌರ್‌ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಅಮೆಜಾನ್‌ ಫೆಸಿಲಿಟಿಯಲ್ಲಿ ಇದಕ್ಕೂ ಮೊದಲು ಕೆಲಸ ಮಾಡುತ್ತಿದ್ದರು. ಜಸ್ವೀರ್‌ ಕೌರ್‌ ಅವರ ಪತಿಯು ವಾಹನ ಚಾಲಕರಾಗಿದ್ದು, ಘಟನೆ ನಡೆದಾಗ ಅವರು ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಜಸ್ವೀರ್‌ ಅವರು ಐದು ವರ್ಷದ ಹಿಂದೆಯೇ ಅಮೆರಿಕಕ್ಕೆ ತೆರಳಿದ್ದಾರೆ. ಇನ್ನು ಗಗನ್‌ದೀಪ್‌ ಅವರು ಅಧ್ಯಯನ ವೀಸಾ ಪಡೆದು ಇತ್ತೀಚೆಗೆ ಅಮೆರಿಕಕ್ಕೆ ಹೋಗಿದ್ದರು ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ಗೌರವ್‌ ಗಿಲ್‌ ಹಾಗೂ ಗಗನ್‌ದೀಪ್‌ ಕೌರ್‌ ಪ್ರೀತಿಸುತ್ತಿದ್ದರು. ಇಬ್ಬರ ಮಧ್ಯೆ ಬ್ರೇಕಪ್‌ ಆಗಿತ್ತು. ಇದರಿಂದ ಕುಪಿತಗೊಂಡ ಗೌರವ್‌ ಗಿಲ್‌, ಗಗನ್‌ದೀಪ್‌ ಕೌರ್‌ ಅವರನ್ನು ಕೊಲೆ ಮಾಡಲು ಗುಂಡು ಹಾರಿಸಿದ್ದಾನೆ. ಆಗ ಜಸ್ವೀರ್‌ ಕೌರ್‌ಗೆ ಗುಂಡು ತಗುಲಿ, ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಜಸ್ವೀರ್‌ ತಂದೆ ಹೇಳುವುದೇನು?

“ನನ್ನ ಪುತ್ರಿ ಜಸ್ವೀರ್‌ ಕೌರ್‌ ಮನೆಯಲ್ಲಿ ಗಗನ್‌ದೀಪ್‌ ಕೌರ್‌ ಇದ್ದಳು. ಘಟನೆ ನಡೆಯುವಾಗ ಜಸ್ವೀರ್‌ ಕೌರ್‌ ಮಲಗಿದ್ದಳು. ಮನೆಯ ಹೊರಗೆ ಗಗನ್‌ದೀಪ್‌ ಕೌರ್‌ ಹಾಗೂ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಮಧ್ಯೆ ವಾಗ್ವಾದ ನಡೆದಿದೆ. ಆಗ ಸಹಾಯಕ್ಕಾಗಿ ಗಗನ್‌ದೀಪ್‌ ಕೌರ್‌ ನನ್ನ ಮಗಳನ್ನು ಕರೆದಿದ್ದಾಳೆ. ಆಗ ಜಸ್ವೀರ್‌ ಕೌರ್‌ ಜಗಳ ಬಿಡಿಸಲು ಹೋಗಿದ್ದು, ಆರೋಪಿಯು ನನ್ನ ಮಗಳ ಮುಖಕ್ಕೆ ಏಳು ಗುಂಡು ಹಾರಿಸಿ ಕೊಂದಿದ್ದಾನೆ” ಎಂದು ಜಸ್ವೀರ್‌ ಕೌರ್‌ ತಂದೆ ಕೇವಾಲ್‌ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: Actor Darshan: ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌, ರೇಣುಕಾಸ್ವಾಮಿ ಕೊಲೆ ವಿಷಯ ಬಂತಾ ಪಾರ್ಟಿಯಲ್ಲಿ?

Continue Reading

ಪ್ರಮುಖ ಸುದ್ದಿ

Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

Pavithra Gowda: ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರು ತೆರಳಿ ತಪಾಸಣೆ ನಡೆಸಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

VISTARANEWS.COM


on

Pavithra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಪವಿತ್ರಾಗೌಡ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ (Pavithra Gowda), ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

ಕೆಲವೇ ಕ್ಷಣಗಳ ಹಿಂದೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರು ಬಂದಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡಳನ್ನು ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ರಾಜಕಾಲುವೆ ಮೇಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಮನೆ ಒತ್ತುವರಿ ತೆರವು ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ನಟ ದರ್ಶನ್ (Actor Darshan) ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೌಕಿಕ ಸೂಚನೆ ಸಿಕ್ಕಿದೆ ಎನ್ನಲಾಗಿದ್ದು, ಯಾರೇ ಒತ್ತುವರಿ ಮಾಡಿ ಸ್ಟೇ ತಂದಿದ್ದರೂ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಒತ್ತುವರಿಗೆ ತೆರವಿಗೆ ಸೂಚನೆ ಹಿನ್ನೆಲೆಯಲ್ಲಿ ಕ್ರಮಕ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಮಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕೂಡ ಒತ್ತುವರಿ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ರಾಜಧಾನಿಯಲ್ಲಿ 2016ರಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದಾಗ ರಾಜ ಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಂದಿನ ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ ಸೂಚನೆ ನೀಡಿತ್ತು. ಆಗ ಆರ್‌.ಆರ್‌. ನಗರದ ದರ್ಶನ್‌ ಅವರ ನಿವಾಸ ಕೂಡ ರಾಜ ಕಾಲುವೆಯ ಬಫರ್‌ ಜೋನ್‌ ಮೇಲೆ ನಿರ್ಮಿಸಿರುವುದು ತಿಳಿದುಬಂದಿತ್ತು.

ಇದನ್ನೂ ಓದಿ | Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

ಐಡಿಯಲ್‌ ಹೋಮ್ಸ್‌, ದರ್ಶನ್‌, ಶಾಮನೂರು ಅವರ ಆಸ್ಪತ್ರೆ ಸೇರಿ ಹಲವು ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್‌ ನೀಡಲಾಗಿತ್ತು. ನೋಟಿಸ್‌ ನೀಡಿದ್ದರಿಂದ ದರ್ಶನ್‌ ಮತ್ತಿತರರು ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದು, ಬಳಿಕ 2016 ಅಕ್ಟೋಬರ್‌ನಲ್ಲಿ ತೆರವು ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಅಂದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ದರ್ಶನ್‌ ಇದೀಗ ಬಂಧನವಾಗಿರುವ ಹಿನ್ನೆಲೆಯಲ್ಲಿ ಮನೆ ಒತ್ತುವರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

Continue Reading

ದೇಶ

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

ಆರತಿ ಯಾದವ್‌ ಹಾಗೂ ರೋಹಿತ್‌ ಯಾದವ್‌ ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಆತನ ನೋವಿಗೆ ಈಕೆ ಮುಲಾಮು ಆಗುತ್ತಿದ್ದಳು. ಈಕೆಯ ಮುನಿಸನ್ನು ಆತ ಪಿಸುಮಾತಿನಿಂದಲೇ ಸಮಾಧಾನ ಮಾಡುತ್ತಿದ್ದ. ಆದರೆ, ಕೆಲ ದಿನಗಳ ಹಿಂದಷ್ಟೇ ಆರತಿ ಯಾದವ್‌, ಬ್ರೇಕಪ್‌ ಮಾಡಿಕೊಳ್ಳೋಣ ಎಂದಿದ್ದಳು. ಈಕೆಯು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದಾಳೆ ಎಂಬ ಶಂಕೆಯೂ ರೋಹಿತ್‌ ಯಾದವ್‌ ಮನಸ್ಸಲ್ಲಿ ಮೂಡಿತ್ತು. ಹಾಗಾಗಿಯೇ, ನಡು ರಸ್ತೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Mumbai News
Koo

ಮುಂಬೈ: ಬದಲಾದ ಕಾಲಘಟ್ಟದಲ್ಲಿ ಲವ್‌ ಬ್ರೇಕಪ್‌ (Love Breakup) ಎನ್ನುವುದು ತುಂಬ ಸಾಮಾನ್ಯ ಎನಿಸಿದೆ. ಆಕರ್ಷಣೆಗೆ ಒಳಗಾಗಿ ಪ್ರೀತಿಸುವುದು, ಒಂದು ವರ್ಷ ಜತೆಗೆ ತಿರುಗಾಡಿ, ಸಣ್ಣ ಭಿನ್ನಾಭಿಪ್ರಾಯ ಬಂದರೂ ಪ್ರೀತಿಗೆ ತಿಲಾಂಜಲಿ ಇಡುವುದು ಯುವಕ-ಯುವತಿಯರಿಗೆ ರೂಢಿಯಾಗಿದೆ. ಆದರೆ, ಕೆಲವೊಂದು ಪ್ರಕರಣಗಳಲ್ಲಿ ಬ್ರೇಕಪ್‌ಗಳು ಹಿಂಸೆ, ಕೊಲೆಗೂ ಕಾರಣವಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ (Maharashtra) ಮುಂಬೈನಲ್ಲಿ (Mumbai) ವ್ಯಕ್ತಿಯೊಬ್ಬ ಲವ್‌ ಬ್ರೇಕಪ್‌ ಎಂದಿದ್ದಕ್ಕೆ ಪ್ರೇಯಸಿಯನ್ನು ನಡು ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಕೃತ್ಯದ ಭೀಕರ ವಿಡಿಯೊ ಈಗ ವೈರಲ್‌ ಆಗಿದೆ.

ಮುಂಬೈ ಬಳಿಯ ವಸಾಯ್‌ ಪ್ರದೇಶದ ರಸ್ತೆಯೊಂದರಲ್ಲಿ 20 ವರ್ಷದ ಆರತಿ ಯಾದವ್ ನಡೆದುಕೊಂಡು ಹೋಗುತ್ತಿರುತ್ತಾರೆ. ಆಗ 29 ವರ್ಷದ ರೋಹಿತ್‌ ಯಾದವ್‌ ಎಂಬಾತ ಸ್ಪ್ಯಾನರ್‌ ಹಿಡಿದುಕೊಂಡೇ ಓಡಿ ಬಂದು ಯುವತಿ ಮೇಲೆ ದಾಳಿ ಮಾಡಿದ್ದಾನೆ. ಯುವತಿ ತಲೆಗೆ, ಎದೆಗೆ ಸ್ಪ್ಯಾನರ್‌ನಿಂದ ಹೊಡೆದು, ಆಕೆ ನೆಲಕ್ಕೆ ಬಿದ್ದ ಮೇಲೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಇದೇ ವೇಳೆ ಒಂದಿಬ್ಬರು ವ್ಯಕ್ತಿಯನ್ನು ತಡೆಯಲು ಪ್ರಯತ್ನಿಸಿದರೂ ಅಷ್ಟೊತ್ತಿಗಾಗಲೇ ಗಂಭೀರವಾಗಿ ಗಾಯಗೊಂಡಿದ್ದ ಆರತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಲವ್‌ ಬ್ರೇಕಪ್‌ ಆಗಿದ್ದೇ ಕಾರಣ?

ಆರತಿ ಯಾದವ್‌ ಹಾಗೂ ರೋಹಿತ್‌ ಯಾದವ್‌ ಅವರು ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ನಡುವೆ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕೆಲ ದಿನಗಳ ಹಿಂದೆ ಆರತಿ ಯಾದವ್‌ ಈತನಿಗೆ ಬ್ರೇಕಪ್‌ ಎಂದಿದ್ದಳು. ಇನ್ಯಾವತ್ತೂ ನನ್ನನ್ನು ನೋಡಲು ಬರಬೇಡ, ಮಾತನಾಡಿಸಬೇಡ, ಕಾಲ್‌ ಮಾಡಿ ತೊಂದರೆ ಕೊಡಬೇಡ ಎಂದಿದ್ದಳು. ಇದರಿಂದ ರೋಹಿತ್‌ ಯಾದವ್‌ ನೊಂದಿದ್ದ. ಅಲ್ಲದೆ, ಆರತಿ ಯಾದವ್‌ ಬೇರೊಬ್ಬನ ಜತೆ ಪ್ರೀತಿಯ ಬಲೆಗೆ ಸಿಲುಕಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿತ್ತು.

ಬೇರೆಯವನನ್ನು ಪ್ರೀತಿಸುತ್ತಿದ್ದಾಳೆ ಎಂದು ಭಾವಿಸಿದ ರೋಹಿತ್‌ ಯಾದವ್‌, ನನಗೆ ಸಿಗದವಳು ಯಾರಿಗೂ ಸಿಗಬಾರದು ಎಂದು ಭಾವಿಸಿದ್ದಾನೆ. ಇದೇ ಕಾರಣಕ್ಕಾಗಿ ತುಂಬಿದ ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ಬಳಿಕ, “ನನಗೇಕೆ ಹೀಗೆ ಮಾಡಿದೆ” ಎಂದು ಹತಾಶಯ ಧ್ವನಿಯಲ್ಲಿ ಕಿರುಚಿದ್ದಾನೆ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Continue Reading
Advertisement
Karnataka Weather Forecast
ಮಳೆ4 mins ago

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Narendra Modi
ದೇಶ18 mins ago

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Electric Shock
ವಿಜಯಪುರ32 mins ago

Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Woman having headache. stressed, Migraine, World Brain Tumor day
ಆರೋಗ್ಯ38 mins ago

Migraine Problem: ಮೈಗ್ರೇನ್‌ ಉಪಶಮನಕ್ಕೆ ರೋಸ್‌ಮೆರಿ ಸುಗಂಧ ತೈಲ ಮದ್ದು!

Indian Women
ವಿದೇಶ52 mins ago

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

Pavithra Gowda
ಪ್ರಮುಖ ಸುದ್ದಿ54 mins ago

Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

International Yoga Day 2024
ಫ್ಯಾಷನ್1 hour ago

International Yoga Day 2024: ಯುವತಿಯರ ಯೋಗಾಭ್ಯಾಸಕ್ಕೆ ಸಾಥ್‌ ನೀಡುವ 3 ಶೈಲಿಯ ಫ್ಯಾಷನ್‌ವೇರ್ಸ್

wild animals Attack
ಕೊಡಗು1 hour ago

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Viral Video
ಕ್ರಿಕೆಟ್1 hour ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ2 hours ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌