Raja Marga Column : ನಿಮ್ಮ ಮಕ್ಕಳನ್ನು ಸೂಪರ್‌ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್! - Vistara News

ಅಂಕಣ

Raja Marga Column : ನಿಮ್ಮ ಮಕ್ಕಳನ್ನು ಸೂಪರ್‌ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!

Raja Marga Column‌ : ಟಿವಿ ವಾಹಿನಿಗಳ ಮಕ್ಕಳ ರಿಯಾಲಿಟಿ ಶೋಗಳಿಗೆ ಸ್ವಲ್ಪ ಬ್ರೇಕ್ ಬೇಕಿದೆ! ಯಾಕೆಂದರೆ ಅವು ಮಕ್ಕಳ ಬಾಲ್ಯವನ್ನು ಕಸಿಯುತ್ತಿವೆ. ದುಡ್ಡಿನ ದಂಧೆಯಾಗುತ್ತಿವೆ. ಈ ಬಗ್ಗೆ ಎಚ್ಚರವಿರಲಿ.

VISTARANEWS.COM


on

Reality Shows neads a break
ಇಲ್ಲಿ ಬಳಸಿದ ಎಲ್ಲ ಮಕ್ಕಳ ಚಿತ್ರಗಳು ಕೇವಲ ಪ್ರಾತಿನಿಧಿಕ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
RAJAMARGA

ಪ್ರಣವ್ ಧನವಾಡೇ : ಈ ಹೆಸರನ್ನು ಎಲ್ಲೋ ಕೇಳಿದ ನೆನಪು ನಿಮಗಿದೆಯಾ?
ಹೌದು! 2016ರಲ್ಲಿ ಮುಂಬೈಯ ಈ 16 ವರ್ಷದ ಹುಡುಗ (Pranav Dhanawade) ಒಂದು ಕ್ಲಾಸ್ ಒನ್ ಕ್ರಿಕೆಟ್ ಪಂದ್ಯದಲ್ಲಿ ಬರೋಬ್ಬರಿ 1000+ ರನ್ ಬಾರಿಸಿ ಮಿಂಚಿದ್ದ! ಅವನಿಗೆ ಆ ದಿನಗಳಲ್ಲಿ ಜಾಗತಿಕ ಮಟ್ಟದ ಪ್ರಚಾರ ಸಿಕ್ಕಿತ್ತು. ಸಚಿನ್ ತೆಂಡುಲ್ಕರ್ (Sachin Tendulkar) ಜೊತೆಗೆ ಆತನ ಭರ್ಜರಿ ಹೋಲಿಕೆಯು ಕೂಡ ನಡೆಯಿತು.ನೂರಾರು ಸನ್ಮಾನಗಳು ಮತ್ತು ನಗದು ಬಹುಮಾನಗಳು ಆತನಿಗೆ ದೊರೆತವು!

ಆದರೆ ಅವನು ಅದೇ ವೇಗದಲ್ಲಿ ಮುಂದೆ ಹೋಗಿರುತ್ತಿದ್ದರೆ ಅವನಿಗೆ ಈಗ 23 ವರ್ಷ ಆಗಿರಬೇಕಿತ್ತು! ಅವನು ಕನಿಷ್ಠ ಪಕ್ಷ ರಣಜಿ ಪಂದ್ಯ ಆದರೂ ಆಡಬೇಕಿತ್ತು! ಆದರೆ ಅವನು ಈಗ ಎಲ್ಲಿದ್ದಾನೆ, ಏನು ಮಾಡುತ್ತಿದ್ದಾನೆ ಎನ್ನುವುದು ನಮಗೆ ಯಾರಿಗೂ ಗೊತ್ತಿಲ್ಲ! (Raja Marga Column)

ನಮ್ಮ ಹೆಚ್ಚಿನ ಟಿವಿ ರಿಯಾಲಿಟಿ ಶೋ (Reality Show) ಹೀರೋಗಳ ಕಥೆ ಕೂಡ ಹೀಗೆಯೇ ಇದೆ!

ಖಾಸಗಿ ಟಿವಿಯ ವಾಹಿನಿಗಳಲ್ಲಿ (Private TV Channels) ಇಂದು ಪ್ರಸಾರ ಆಗುತ್ತಿರುವ ನೂರಾರು ರಿಯಾಲಿಟಿ ಶೋಗಳು ಮತ್ತು ಸ್ಪರ್ಧೆಗಳು ಹೆಚ್ಚು ಪ್ರಚಾರದಲ್ಲಿವೆ. ಅಂತ ಹಲವು ಟಿವಿ ಶೋಗಳು ಹಿಂದೆ ಕೂಡ ನಡೆದಿವೆ. ಅದರ ಎಲ್ಲ ವಿಜೇತರ ಪ್ರತಿಭೆಯ ಮೇಲೆ ಗೌರವ ಇರಿಸಿಕೊಂಡು ನಾನು ಕೇಳುವ ಒಂದೇ ಪ್ರಶ್ನೆ — ಅದರ ಸಾವಿರಾರು ವಿಜೇತರು ಮುಂದೆ ಎಲ್ಲಿಗೆ ಹೋಗುತ್ತಾರೆ? ಅವರ ಅನನ್ಯ ಪ್ರತಿಭೆಗಳನ್ನು ಅವರು ಎಷ್ಟು ಬೆಳೆಸಿದ್ದಾರೆ? ಅದರಿಂದ ನಾಡಿನ ಸಂಸ್ಕೃತಿಗೆ ಎಷ್ಟು ಲಾಭ ಆಗಿದೆ?

Pranav Dantwade
ಪ್ರಣವ್‌ ದಂತವಾಡೆ..

ಶಾಲಾ ಮಟ್ಟದಲ್ಲಿ ನೂರಾರು ಸಾಂಸ್ಕೃತಿಕ ಸ್ಪರ್ಧೆಗಳು, ಪ್ರತಿಭಾ ಸ್ಪರ್ಧೆಗಳು ನಿರಂತರವಾಗಿ ನಡೆಯುತ್ತಿವೆ. ಅಲ್ಲಿ ವಿಜೇತರ ಘೋಷಣೆ ಆಗುತ್ತದೆ. ಅದರಲ್ಲಿ ಎಷ್ಟು ಜನರು ಮುಂದೆ ಅವರ ಪ್ರತಿಭೆಯನ್ನು ತಮ್ಮ ಹೊಟ್ಟೆಪಾಡಾಗಿ ಮಾಡಿಕೊಳ್ಳುತ್ತಾರೆ? ಎಷ್ಟು ಮಂದಿ ತಮ್ಮ ಕಲೆಯನ್ನು ಪ್ರೀತಿಸುತ್ತಾರೆ? ತಮ್ಮ ಕಲೆಯಿಂದ ಸಮಾಜವನ್ನು ಬೆಳಗುತ್ತಾರೆ? ಕನಿಷ್ಠ ಪಕ್ಷ ಆತ್ಮ ಸಂತೋಷಕ್ಕಾಗಿ ಆದರೂ ಆ ಕಲೆಯನ್ನು ಮುಂದೆ ಕಲಿಯುತ್ತಾರಾ?

ಈ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತ ಹೋದಾಗ ನಮಗೆ ಹಲವು ಕಡೆ ನಿರಾಸೆಯೇ ಆಗುತ್ತದೆ ಮತ್ತು ಕಹಿ ಸತ್ಯಗಳು ಗೋಚರ ಆಗುತ್ತವೆ.

ಹಾಗಾದರೆ ಟಿವಿ ವಾಹಿನಿಗಳಿಂದ, ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಿಂದ ಪ್ರತಿಭಾ ಶೋಧ ಆಗ್ತಾ ಇಲ್ಲವೇ ಎನ್ನುವ ಪ್ರಶ್ನೆ ನೀವು ಕೇಳಬಹುದು. ಖಂಡಿತ ಆಗುತ್ತಿದೆ! ಆದರೆ ಅದರ ಅಡ್ಡ ಪರಿಣಾಮಗಳ ಬಗ್ಗೆ ಇದುವರೆಗೆ ಯಾರೂ ಯೋಚನೆ ಮಾಡಿದ ಹಾಗಿಲ್ಲ.

Childrens reality Shows

ಉದಾಹರಣೆಗೆ ಇಂದು ಬಾಲಿವುಡನ ಹಿನ್ನೆಲೆ ಗಾಯನ ಲೋಕದ ಸೂಪರ್ ಸ್ಟಾರ್‌ಗಳಾದ ಸುನಿಧಿ ಚೌಹಾಣ್, ಶ್ರೇಯಾ ಘೋಷಾಲ್, ಸೋನು ನಿಗಮ್ ಇವರೆಲ್ಲರೂ ಬೇರೆ ಬೇರೆ ರಿಯಾಲಿಟಿ ಶೋಗಳ ಮೂಲಕ ಬೆಳಕಿಗೆ ಬಂದವರು. ಕನ್ನಡದಲ್ಲಿಯೂ ಅಂತವರು ತುಂಬಾ ಮಂದಿ ಇದ್ದಾರೆ. ಆದರೆ ಅವರಲ್ಲಿ ಹೆಚ್ಚಿನ ಸ್ಟಾರ್‌ಗಳು ಒಳ್ಳೆಯ ನಿರ್ಣಾಯಕರ ಮೂಲಕ ಆಯ್ಕೆ ಆದವರು. ಇನ್ನೂ ವಿವರವಾಗಿ ಹೇಳಬೇಕೆಂದರೆ ಸುನಿಧಿ ಚೌಹಾಣ್, ಶ್ರೇಯಾ ಘೋಷಾಲ್, ಸೋನು ನಿಗಮ್ ಆಯ್ಕೆ ಆಗುವಾಗ ಲತಾ ಮಂಗೇಶ್ಕರ್ ಅಂತವರು ನಿರ್ಣಾಯಕರಾಗಿದ್ದರು!

ಪ್ರತಿಭೆಗಳಿಗೆ ಆಗ ಒಂದಿಷ್ಟೂ ಅನ್ಯಾಯ ಆಗುತ್ತಾ ಇರಲಿಲ್ಲ.

Shreya Ghoshal

ಅಪಾಯಕಾರಿ ಆದ ಇಂಟರ್ನೆಟ್ ವೋಟಿಂಗ್!

ಆದರೆ ಮುಂದೆ ಯಾವಾಗ ಇಂಟರ್ನೆಟ್ ಮೆಸೇಜ್‌ಗಳ ಮೂಲಕ ವೋಟಿಂಗ್ ಆರಂಭ ಆಯಿತೋ ಅಲ್ಲಿಗೆ ದುಡ್ಡು, ಪ್ರಭಾವ ಇದ್ದವರು ವೋಟುಗಳನ್ನು ಖರೀದಿ ಮಾಡುವುದು ಆರಂಭ ಆಯಿತು. ನಮಗೆ ವೋಟ್ ಮಾಡಿ ಎಂದು ಕೈ ಮುಗಿದು ಭಿಕ್ಷೆ ಬೇಡುವ ದೈನ್ಯತೆಯು ಆ ಪ್ರತಿಭೆಗಳಿಗೆ ಬರಬಾರದಿತ್ತು.

ಕನ್ನಡದಲ್ಲಿ ಕೂಡ ಆರಂಭದ ಎದೆ ತುಂಬಿ ಹಾಡುವೆನು, ಕಾಮಿಡಿ ಕಿಲಾಡಿ, ಮಜಾ ಟಾಕೀಸ್, ಡ್ರಾಮಾ ಜೂನಿಯರ್ ರಿಯಾಲಿಟಿ ಶೋನಲ್ಲಿ ಗೆದ್ದವರು ಮುಂದೆ ನೂರಾರು ಅವಕಾಶಗಳನ್ನು ಪಡೆದರು. ಅವರ ಪ್ರತಿಭೆಯನ್ನು ನಾಡು ಗುರುತಿಸಿ ಬೆಳೆಸಿತು.

Childrens reality Shows

ಆದರೆ ಇಲ್ಲಿ ಕೂಡ ಇತ್ತೀಚಿನ ವರ್ಷಗಳಲ್ಲಿ ಯಾವಾಗ ಇಂಟರ್ನೆಟ್ ವೋಟಿಂಗ್ ಆರಂಭ ಆಯಿತೋ ಅಲ್ಲಿಂದ ವೋಟ್ ಖರೀದಿಗಳು, ಪ್ರಭಾವಗಳು ಆರಂಭ ಆದವು. ಆ ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳಿಗೆ ತರಬೇತು ಕೊಡುವ ಹಲವು ಶಾಲೆಗಳು ಮಹಾನಗರಗಳಲ್ಲಿ ನಾಯಿಕೊಡೆಗಳ ಹಾಗೆ ಆರಂಭ ಆದವು. ಹೆತ್ತವರು ತಮ್ಮ ಮಕ್ಕಳನ್ನು ಸೂಪರ್ ಹೀರೋ ಮಾಡುವ ಜಿದ್ದಿಗೆ ಬಿದ್ದು ಅಂತಹ ಶಾಲೆಗಳಿಗೆ ದುಡ್ಡು ಸುರಿಯಲು ತೊಡಗಿದರು.

ಆದರೆ ಇಲ್ಲಿ ಕೂಡ ಬಡವರ ಮಕ್ಕಳು, ಗ್ರಾಮಾಂತರ ಭಾಗದ ಪ್ರತಿಭೆಗಳು ನಿಜವಾಗಿಯೂ ಅವಕಾಶಗಳಿಂದ ವಂಚಿತರಾದರು!

ಒಂದು ಸಮೀಕ್ಷೆ ಮಾಡಿ ನೋಡಿ. ಇತ್ತೀಚಿನ ರಿಯಾಲಿಟಿ ಶೋಗಳಲ್ಲಿ ಗೆದ್ದವರಲ್ಲಿ ಎಷ್ಟು ಮಂದಿ ಹಳ್ಳಿಯ ಮಕ್ಕಳು ಇದ್ದಾರೆ? ಎಷ್ಟು ಮಂದಿ ಬಡವರ ಮಕ್ಕಳಿದ್ದಾರೆ? ಎಷ್ಟು ಮಂದಿ ಕನ್ನಡ ಮಾಧ್ಯಮದ ಮಕ್ಕಳಿದ್ದಾರೆ?
ಖಂಡಿತ ಇದ್ದಾರೆ. ಆದರೆ ಅವರ ಪ್ರಮಾಣ ತುಂಬಾ ಕಡಿಮೆ ಇದೆ!

ಜಗತ್ತಿನ ಪ್ರತೀ ಮಗುವೂ ಪ್ರತಿಭಾವಂತ ಮಗುವೇ!

ಈ ಜಗತ್ತಿನ ಪ್ರತೀ ಮಕ್ಕಳೂ ಪ್ರತಿಭಾವಂತರೇ ಆಗಿದ್ದಾರೆ. ಅವರಲ್ಲಿ ಒಂದಲ್ಲ ಒಂದು ಪ್ರತಿಭೆಯನ್ನು ಲೋಡ್ ಮಾಡಿ ಭಗವಂತ ಈ ಜಗತ್ತಿಗೆ ಅವರನ್ನು ಕಳುಹಿಸಿರುತ್ತಾನೆ. ನೀವು ಯಾವ ಮಕ್ಕಳನ್ನು ವಿಶೇಷ ಚೇತನ ಮಕ್ಕಳು ಎಂದು ಕರೆಯುತ್ತೀರೋ ಅವರಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯ ಪೋಷಣೆಗೆ ವೇದಿಕೆ ಬೇಕು. ತರಬೇತು ಬೇಕು. ಹೆತ್ತವರ, ಶಿಕ್ಷಕರ, ಸಮಾಜದ ಪ್ರೋತ್ಸಾಹ ಬೇಕು.

Childrens reality Shows

ಅವರ ಶಾಪ ಆದರೆ ನಮ್ಮ ಮಕ್ಕಳು ಎಷ್ಟು ಪ್ರತಿಭೆ ಹೊಂದಿದ್ದಾರೆ ಎಂದರೆ ಅವರು ಸ್ಪರ್ಧೆಯ ಸೋಂಕಿಲ್ಲದೆ ಕೂಡ ತಮ್ಮ ಅಗಾಧವಾದ ಪ್ರತಿಭೆಯನ್ನು ಬೆಳೆಸುವ ಸಾಮರ್ಥ್ಯವನ್ನು ಖಂಡಿತವಾಗಿ ಹೊಂದಿರುತ್ತಾರೆ! ಅವರನ್ನು ರೇಸಿನ ಕುದುರೆ ಮಾಡಿ ರೇಸಿಗೆ ನಿಲ್ಲಿಸುವ ಅಗತ್ಯ ಖಂಡಿತ ಇಲ್ಲ!

ಸ್ಪರ್ಧೆಗಳ ಬಗ್ಗೆ ಸಾಹಿತಿ ಶಿವರಾಮ ಕಾರಂತರು ಹೇಳಿದ್ದೇನು?

ಖ್ಯಾತ ಸಾಹಿತಿ ಮತ್ತು ಶಿಕ್ಷಣ ತಜ್ಞರಾದ ಕೋಟ ಶಿವರಾಮ ಕಾರಂತರು ಚಿಕ್ಕ ಮಕ್ಕಳನ್ನು ಸ್ಪರ್ಧೆಗೆ ನಿಲ್ಲಿಸಬೇಡಿ ಎಂದು ಹೇಳುತ್ತಿದ್ದರು. 12 ವರ್ಷಗಳವರೆಗೆ ಮಕ್ಕಳಿಗೆ ಯಾವ ಸ್ಪರ್ಧೆಯನ್ನು ಕೂಡ ಮಾಡಬಾರದು ಎನ್ನುವುದು ಅವರ ಖಚಿತ ಅಭಿಪ್ರಾಯ. ಸ್ಪರ್ಧೆ ಮಾಡಿದರೂ ಎಲ್ಲ ಮಕ್ಕಳಿಗೂ ಸಮಾನ ಬಹುಮಾನ ಕೊಡಿ ಎನ್ನುತ್ತಿದ್ದರು ಕಾರಂತರು.

Kota Shivarama Karant

ಆದರೆ ಇಂದು ಆಗುತ್ತಿರುವುದೆನು?

ಆದರೆ ಸ್ಪರ್ಧೆಯ ಗೆಲುವನ್ನು ತಮ್ಮ ಪ್ರತಿಷ್ಠೆಯನ್ನಾಗಿ ಮಾಡಿಕೊಂಡ ಶಿಕ್ಷಕರು ಮತ್ತು ಹೆತ್ತವರು ಮಕ್ಕಳನ್ನು ರೇಸಿನ ಕುದುರೆ ಮಾಡಿ ಈಗಾಗಲೇ ನಿಲ್ಲಿಸಿ ಆಗಿದೆ! ಈ ಸ್ಪರ್ಧೆಯಲ್ಲಿ ಸೋತವರ ಕಣ್ಣೀರನ್ನು ಮತ್ತು ಗೆದ್ದು ಬೀಗಿದವರ ಆನಂದ ಬಾಷ್ಪವನ್ನು ತಮ್ಮ ಟಿ ಆರ್ ಪಿ ಸರಕನ್ನಾಗಿ ಮಾಡಿಕೊಂಡ ಟಿವಿ ವಾಹಿನಿಗಳಿಗೆ ಈ ಸ್ಪರ್ಧೆಗಳು ಬೇಕೇ ಬೇಕು! ಮಕ್ಕಳ ಗೆಲುವನ್ನು ತಮ್ಮ ಪ್ರತಿಷ್ಠೆ ಎಂದು ಭಾವಿಸುವ ಹೆತ್ತವರು ಇರುವವರೆಗೆ ಈ ಮಕ್ಕಳ ರಿಯಾಲಿಟಿ ಶೋಗಳು ಖಂಡಿತ ನಿಲ್ಲುವುದಿಲ್ಲ. ಈ ಸ್ಪರ್ಧೆಗಳು ಮೆಗಾ ಮನರಂಜನೆಯ ಭಾಗ ಎಂದು ಪರಿಗಣಿಸುವ ವೀಕ್ಷಕರು ಕೂಡ ರಿಯಾಲಿಟಿ ಶೋ ಬೇಕು ಅಂತಾರೆ!

ತಮ್ಮ ಮಕ್ಕಳನ್ನು ಸೂಪರ್ ಹೀರೋ ಅಥವ ಸೂಪರ್ ಹೀರೋಯಿನ್ ಮಾಡಲು ಹೊರಟ ಹೆತ್ತವರು ಮಕ್ಕಳ ಬಾಲ್ಯವನ್ನು ಬರಿದು ಮಾಡುತ್ತಿದ್ದಾರೆ. ತಮ್ಮ ಮಕ್ಕಳು ಒಮ್ಮೆ ಟಿವಿಯಲ್ಲಿ ಕಂಡರೆ ಸಾಕು ಎಂದು ತೆವಲಿಗೆ ಪೋಷಕರು ಬಿದ್ದಿರುವ ಈ ದಿನಗಳಲ್ಲಿ ಅವರು ಬುದ್ಧಿ ಕಲಿಯುವುದು ಯಾವಾಗ?

Reality Shows in TV

ಇಲ್ಲೊಬ್ಬರು ತಾಯಿ ತನ್ನ ಎರಡನೇ ಕ್ಲಾಸಿನ ಮುಗ್ಧವಾದ ಮಗಳನ್ನು ದಿನವೂ ಭರತನಾಟ್ಯ, ಶಾಸ್ತ್ರೀಯ ಸಂಗೀತ, ಲಘು ಸಂಗೀತ, ಕರಾಟೆ, ಚೆಸ್, ಕ್ರಿಕೆಟ್, ಯಕ್ಷಗಾನ, ಬ್ಯಾಡ್ಮಿಂಟನ್, ಸ್ವಿಮ್ಮಿಂಗ್ ಕೋಚಿಂಗ್ ಎಂದೆಲ್ಲ ಉಸಿರು ಬಿಗಿ ಹಿಡಿದು ಓಡುತ್ತಿರುವಾಗ ಆ ಮುಗ್ಧ ಮಗುವಿನ ಮೇಲಾಗುತ್ತಿರುವ ಒತ್ತಡವನ್ನು ನನಗೆ ಊಹೆ ಮಾಡಲು ಕಷ್ಟ ಆಗುತ್ತಾ ಇದೆ! ಯಾವುದೇ ಕಲಿಕೆಯು ಮಕ್ಕಳಿಗೆ ಹೊರೆ ಆಗಬಾರದು ಎಂಬ ಸಾಮಾನ್ಯ ಪ್ರಜ್ಞೆಯು ಅಂತಹ ಹೆತ್ತವರಿಗೆ ಬೇಡವಾ?

ಇದನ್ನೂ ಓದಿ: Raja Marga Column : ನೀವು ಜ್ಯೂಲಿ ನೋಡಿದ್ದೀರಾ? ಇದು KGFಗೂ ಮೊದಲು ಬಾಲಿವುಡ್‌ನ ಅಹಂ ಮುರಿದ ಸಿನಿಮಾ

ಡ್ಯಾಡಿ ನಂಬರ್ ಒನ್, ಮಮ್ಮಿ ನಂಬರ್ ಒನ್ ಮೊದಲಾದ ನಾನಸೆನ್ಸ್ ಸ್ಪರ್ಧೆಯ ಮೂಲಕ ಅಪ್ಪ, ಅಮ್ಮನ ಪ್ರೀತಿಯು ಅಳೆಯಲ್ಪಡಬೇಕಾ?

ನನ್ನ ಸಲಹೆ ಏನೆಂದರೆ ಮುಂದಿನ ಕೆಲವು ವರ್ಷಗಳ ಕಾಲ ಎಲ್ಲ ಟಿವಿ ವಾಹಿನಿಗಳ ಸ್ಪರ್ಧಾತ್ಮಕವಾದ ರಿಯಾಲಿಟಿ ಶೋಗಳನ್ನು ನಿಲ್ಲಿಸುವುದು ಒಳ್ಳೆಯದು! ಅಥವಾ ಅವುಗಳಿಗೆ ಒಂದು ಸಣ್ಣ ಬ್ರೇಕ್ ಆದರೂ ಬೇಕು. ವರ್ಷಾನುಗಟ್ಟಲೆ ಈ ಸ್ಪರ್ಧೆಗಳು ಮುಂದುವರಿದರೆ ಆ ಮಕ್ಕಳ ಶಿಕ್ಷಣದ ಮೇಲೆ ಆಗುವ ಕರಾಳತೆಯ ಬಗ್ಗೆ ಕೂಡ ನಾವು ಯೋಚನೆ ಮಾಡಬೇಕು ಅಲ್ಲವೇ?

ರಿಯಾಲಿಟಿ ಶೋಗಳ ಹಂಗಿಲ್ಲದೆ ಇಂದು ಸ್ಟಾರ್ ಆಗಿ ಮಿಂಚುತ್ತಿರುವ ನೂರಾರು ಪ್ರತಿಭೆಗಳು ನನ್ನ ಪಟ್ಟಿಯಲ್ಲಿ ಇವೆ. ಅವರೆಲ್ಲರಿಗೂ ನನ್ನ ಅಭಿನಂದನೆಗಳು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

ಸೈಬರ್‌ ಸೇಫ್ಟಿ ಅಂಕಣ: ನಿಮ್ಮ ಟೆಕ್ನಾಲಜಿ ಯಾತ್ರೆಯನ್ನು ಸುರಕ್ಷಿತಗೊಳಿಸಲು ಬಹುರಾಷ್ಟ್ರೀಯ ಸೈಬರ್‌ ಭದ್ರತಾ ಸಂಸ್ಥೆಯೊಂದು ಡಿಸೆಂಬರ್‌ 2023ಲ್ಲಿ ಪ್ರಕಟಿಸಿದ ಟ್ರೆಂಡ್‌ಗಳನ್ನು ನಿಮ್ಮ ಮುಂದಿಡುವ ಪ್ರಯತ್ನ ಇಲ್ಲಿದೆ. ಇದು ತಂತ್ರಜ್ಞಾನವನ್ನು ಹೆಚ್ಚು ಪ್ರಜ್ಞಾಪೂರ್ವಕವಾಗಿ ಮತ್ತು ಸುರಕ್ಷಿತವಾಗಿ ಬಳಸುವ ಉತ್ತಮ ಅಭ್ಯಾಸಗಳನ್ನು ತಿಳಿಸುತ್ತದೆ.

VISTARANEWS.COM


on

cyber attack ನನ್ನ ದೇಶ ನನ್ನ ದನಿ
Koo
cyber-safty-logo

ಸೈಬರ್‌ ಸೇಫ್ಟಿ ಅಂಕಣ: ತಂತ್ರಜ್ಞಾನದ ಪ್ರಗತಿ ನಮ್ಮ ದೈನಂದಿನ ಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತಿದೆ. ನಮ್ಮ ಜೀವನದಲ್ಲಿ ಅದರ ಬಳಕೆ ಹೆಚ್ಚುತ್ತಿದೆ. ಹಾಗಾಗಿ ತಂತ್ರಜ್ಞಾನವನ್ನು ಪ್ರಜ್ಞಾಪೂರ್ವಕವಾಗಿ ಮತ್ತು ಸುರಕ್ಷಿತವಾಗಿ ಬಳಸುವ ಅಭ್ಯಾಸಗಳನ್ನು ಸಂಸ್ಥೆಗಳು, ಮತ್ತು ನಾವು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಅಭಿವೃದ್ಧಿಯ ಜೊತೆಗೆ ಆತಂಕಕಾರಿಯಾಗಿ ಸೈಬರ್ ದಾಳಿಗಳು (cyber attack) ಮತ್ತು ವಂಚನೆಯ (cyber fraud) ಪ್ರಕರಣಗಳೂ ಹೆಚ್ಚುತ್ತಿವೆ. ಆದ್ದರಿಂದ, ಪ್ರತಿ ವರ್ಷವೂ ಸೈಬರ್ ಭದ್ರತೆಯ (cyber security) ಟ್ರೆಂಡ್‌ಗಳ ಬಗ್ಗೆ ತಿಳಿದು ಮುನ್ನೆಚ್ಚರಿಕೆ ವಹಿಸುವುದು ಕಾರ್ಪೊರೇಟ್‌ (corporate) ವಲಯದಲ್ಲಿ ಮುಖ್ಯವಾದ ಕಾರ್ಯಕ್ರಮ.

2021ರವರೆಗೆ ಜಾಗತಿಕವಾಗಿ ಸೈಬರ್‌ ಅಟ್ಯಾಕ್‌ಗಳು ಶೇಕಡಾ 125ರಷ್ಟು ಹೆಚ್ಚಾಗಿದೆ. ಸೈಬರ್ ಕ್ರಿಮಿನಲ್‌ಗಳು (cyber criminals) ಕಂಪನಿಗಳಿಗೆ ಮತ್ತು ವ್ಯಕ್ತಿಗಳಿಗೆ ಬೆದರಿಕೆ ಹಾಕುತ್ತಲೇ ಇದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷವು ಸೈಬರ್ ದಾಳಿಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಆನ್‌ಲೈನ್‌ನಲ್ಲಿ ಫಿಶಿಂಗ್ (fishing) ಮುಖಾಂತರ ಹಣ ದೋಚುವ ಕಾರ್ಯತಂತ್ರ ಹೆಚ್ಚಾಗಿದೆ. ಯುರೋಪಿನಲ್ಲಿ ransomware ದಾಳಿಯು ಶೇಕಡ 26ರಷ್ಟಿದ್ದು ಪ್ರಮುಖವಾದ ಪ್ರಕಾರವಾಗಿದೆ. ಸರ್ವರ್‌ ಮೇಲಿನ ದಾಳಿಗಳು (12%) ಮತ್ತು ಡೇಟಾ ಕಳ್ಳತನ (10%) ಇತರ ರೀತಿಯ ಸೈಬರ್ ದಾಳಿಗಳಾಗಿವೆ.

ಸೈಬರ್ ಕ್ರೈಮ್ ಹೆಚ್ಚು ಕಾಲ ನಿಶ್ಚಲವಾಗಿ ಉಳಿಯುವುದಿಲ್ಲ. ಕ್ರಿಮಿನಲ್‌ಗಳು ನಿರಂತರವಾಗಿ ಅವಕಾಶಗಳನ್ನು ಹುಡುಕುತ್ತಿರುತ್ತಾರೆ. ತಾಂತ್ರಿಕ ಮತ್ತು ಸಾಮಾಜಿಕ ಆವಿಷ್ಕಾರಗಳು, ಬ್ರೌಸರ್‌ಗಳ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಏಮಾರಿಸಲು ಹ್ಯಾಕರ್‌ಗಳು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಾರೆ. ಇಕಾಮರ್ಸ್ (E commerce) ಸೈಟ್‌ಗಳು ಅಥವಾ ಮೊಬೈಲ್ ಕಂಪ್ಯೂಟಿಂಗ್ ಸಾಧನಗಳ ಸುರಕ್ಷತೆಯಲ್ಲಿ ಲೋಪಗಳನ್ನು ಹುಡುಕುತ್ತಲೇ ಇರುತ್ತಾರೆ. ಸೈಬರ್‌ ಸೆಕ್ಯೂರಿಟಿ ಚಾಪೆ ಕೆಳಗೆ ತೂರಿದರೆ, ಸೈಬರ್‌ ಕ್ರಿಮಿನಲ್‌ಗಳು ರಂಗೋಲಿ ಕೆಳಗೇ ತೂರುವ ಜಾಣತನ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ನಿಮ್ಮ ಟೆಕ್ನಾಲಜಿ ಯಾತ್ರೆಯನ್ನು ಸುರಕ್ಷಿತಗೊಳಿಸಲು ಬಹುರಾಷ್ಟ್ರೀಯ ಸೈಬರ್‌ ಭದ್ರತಾ ಸಂಸ್ಥೆಯೊಂದು ಡಿಸೆಂಬರ್‌ 2023ಲ್ಲಿ ಪ್ರಕಟಿಸಿದ ಟ್ರೆಂಡ್‌ಗಳನ್ನು ನಿಮ್ಮ ಮುಂದಿಡುವ ಪ್ರಯತ್ನ ಮಾಡಿದ್ದೇನೆ. ಇದು ಕಂಪೆನಿಗಳ ಮುಖ್ಯಸ್ಥರಿಗಷ್ಟೇ ಅಲ್ಲ, ಜನಸಾಮಾನ್ಯರೂ ತಿಳಿದು ಜಾಗರೂಕರಾಗುವಂತಿದೆ. ತಂತ್ರಜ್ಞಾನವನ್ನು ಹೆಚ್ಚು ಪ್ರಜ್ಞಾಪೂರ್ವಕವಾಗಿ ಮತ್ತು ಸುರಕ್ಷಿತವಾಗಿ ಬಳಸುವ ಉತ್ತಮ ಅಭ್ಯಾಸಗಳನ್ನು ತಿಳಿಸುತ್ತದೆ.

1) ರಕ್ಷಣೆ ಮತ್ತು ದಾಳಿಗಾಗಿ ಕೃತಕ ಬುದ್ಧಿಮತ್ತೆಯ ಅಳವಡಿಕೆ: ಕೃತಕ ಬುದ್ಧಿಮತ್ತೆ ಹೆಚ್ಚು ಸಂಕೀರ್ಣವಾಗುತ್ತಿದೆ. ಸೈಬರ್ ದಾಳಿಕೋರರು ದಾಳಿಗಳನ್ನು ರೂಪಿಸಲು ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಅದೇ ರೀತಿ ಸೈಬರ್ ಸುರಕ್ಷತಾ ಪರಿಣಿತರು ಕೃತಕ ಬುದ್ಧಿಮತ್ತೆಯ ಸಹಾಯದಿಂದ ಹೊಸ ಬಗೆಯ ರಕ್ಷಣಾ ವ್ಯವಸ್ಥೆಗಳನ್ನು ರೂಪಿಸುತ್ತಿದ್ದಾರೆ.

2) ಫಿಶಿಂಗ್ ಅಟ್ಯಾಕ್‌ಗಳ ವಿಕಸನ: ಫಿಶಿಂಗ್, ಆಕ್ರಮಣಕಾರರಿಗೆ ಪ್ರವೇಶವನ್ನು ನೀಡಲು ಬಳಕೆದಾರರನ್ನು ಮೋಸಗೊಳಿಸುವುದನ್ನು ಒಳಗೊಂಡಿರುವ ಒಂದು ರೀತಿಯ ಸಾಮಾಜಿಕ ಎಂಜಿನಿಯರಿಂಗ್ ದಾಳಿ. ಇದು 2024 ರಲ್ಲಿ ಆತಂಕಕಾರಿಯಾಗಿ ಮುಂದುವರಿಯುತ್ತದೆ. ವರ್ಷದ ಮೊದಲಾರ್ಧ ಮುಗಿಯುವಷ್ಟರಲ್ಲಿ ಇದು ಕಳೆದ ವರ್ಷಕ್ಕಿಂದ ಜಾಸ್ತಿಯಾಗಿರುವುದು ಗಮನಿಸಿದ್ದಾರೆ.

3) ಸಂಸ್ಥೆಗಳಲ್ಲಿ ಸೈಬರ್‌ ಸುರಕ್ಷತೆಗೆ ಆದ್ಯತೆ: ಸೈಬರ್‌ ದಾಳಿಗಳ ಹೆಚ್ಚುತ್ತಿರುವ ಆವರ್ತನದೊಂದಿಗೆ, 2024 ರಲ್ಲಿ ಐಟಿ ವಿಭಾಗದ ಅವಿಭಾಜ್ಯ ಅಂಗವಾಗಿರುವುದಕ್ಕಿಂತ ಹೆಚ್ಚಾಗಿ ಸೈಬರ್‌ ಸುರಕ್ಷತೆಯು ಸಂಸ್ಥೆಗಳಲ್ಲಿ ಕಾರ್ಯತಂತ್ರದ ಆದ್ಯತೆಯಾಗಿರಬೇಕು.

cyber attacks

4) IoT-ಚಾಲಿತ ಸೈಬರ್ ದಾಳಿಗಳು: ಇಂಟರ್ನೆಟ್ ಆಫ್‌ ತಿಂಗ್ಸ್ (IoT: ಮನೆಗಳಲ್ಲಿ ಧ್ವನಿ ಮೂಲಕ ಬಳಸುವ ಸಾಧನಗಳು ಉದಾಹರಣೆ: ಅಲೆಕ್ಸಾ) ಮೂಲಕ ಪರಸ್ಪರ ಸಂವಹನ ನಡೆಸುವ ಸಾಧನಗಳು ಹೆಚ್ಚಾಗುತ್ತಿದೆ. ಇದು ಸೈಬರ್ ದಾಳಿಕೋರರಿಗೆ ದಾಳಿ ಮಾಡಲು ಹೆಚ್ಚು ಸಂಭಾವ್ಯ ವ್ಯವಸ್ಥೆಗಳನ್ನು ಕೊಡುತ್ತದೆ.

5) ಸೈಬರ್ ಸ್ಥಿತಿಸ್ಥಾಪಕತ್ವ ಮತ್ತು ಸೈಬರ್ ಭದ್ರತೆ: 2024ರಲ್ಲಿ, ಸೈಬರ್ ಸ್ಥಿತಿಸ್ಥಾಪಕತ್ವ ಮತ್ತು ಸೈಬರ್ ಭದ್ರತೆಯ ನಡುವಿನ ಸ್ಪಷ್ಟವಾದ ವ್ಯತ್ಯಾಸವು ಹೊರಹೊಮ್ಮುತ್ತದೆ.

6) ಝೀರೋ-ಟ್ರಸ್ಟ್ ಮಾದರಿ: ಶೂನ್ಯ-ಟ್ರಸ್ಟ್ ಮಾದರಿಯು ಎಲ್ಲವೂ ಬೆದರಿಕೆ ಎಂದು ಪರಿಗಣಿಸುತ್ತದೆ. ಅಂದರೆ ಕಾರ್ಪೊರೇಟ್ ನೆಟ್‌ವರ್ಕ್‌ನಲ್ಲಿ ಒಳಗೊಂಡಿರುವ ಎಲ್ಲಾ ಸಂವಹನವನ್ನೂ ರೆಕಾರ್ಡ್ ಮಾಡಬೇಕು ಮತ್ತು ವಿಶ್ಲೇಷಿಸಬೇಕು. ಉದ್ಯೋಗಿಯ ಪ್ರವೇಶ ಮತ್ತು ಅವರಿಗೆ ಕೊಟ್ಟಿರುವ ವ್ಯಾಪ್ತಿಯ ಪರಿಧಿಯನ್ನು ವನ್ನು ಪರಿಶೀಲಿಸುವುದು.

7) ಸೈಬರ್ ವಾರ್‌ಫೇರ್ ಮತ್ತು ಪ್ರಭುತ್ವ-ಪ್ರಾಯೋಜಿತ ಸೈಬರ್ ದಾಳಿಗಳು: ಉಕ್ರೇನ್‌ನಲ್ಲಿನ ಯುದ್ಧದೊಂದಿಗೆ, ಸೈಬರ್ ವಾರ್‌ಫೇರ್ ಹೆಚ್ಚು ಜನಪ್ರಿಯವಾಗಿದೆ ಮತ್ತು ಸೈಬರ್ ದಾಳಿಯ ವಿಕಾಸವು ಸ್ಪಷ್ಟವಾಗಿದೆ.

8) Ransomware ಎವಲ್ಯೂಷನ್: Ransomware ಒಂದು ಸೇವೆಯಾಗಿ (RaaS – Ransomware as a service), ಬಳಕೆದಾರರು ಸುಲಿಗೆ ಪಾವತಿಸುವವರೆಗೆ ಕಂಪ್ಯೂಟರ್ ಸಿಸ್ಟಮ್‌ಗೆ ಪ್ರವೇಶವನ್ನು ನಿರ್ಬಂಧಿಸುವುದನ್ನು ಒಳಗೊಂಡಿರುವ ಈ ಸೈಬರ್‌ ದಾಳಿ, ವಿಶೇಷವಾಗಿ ಆರೋಗ್ಯ ಪೂರೈಕೆದಾರರಿಗೆ ಆತಂಕಕಾರಿಯಾಗಿದೆ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

9) ಗೌಪ್ಯತೆ ಮತ್ತು ನಿಯಂತ್ರಕ ಅನುಸರಣೆ: NIS2, ಯುರೋಪಿಯನ್ ಒಕ್ಕೂಟದ ನೆಟ್‌ವರ್ಕ್ ಮತ್ತು ಮಾಹಿತಿ ಭದ್ರತಾ ನಿರ್ದೇಶನ, ಸೈಬರ್ ಸುರಕ್ಷತೆಯನ್ನು ಸುಧಾರಿಸಲು ಮತ್ತು ಸೈಬರ್ ಬೆದರಿಕೆಗಳ ವಿರುದ್ಧ ಮೂಲಸೌಕರ್ಯಗಳನ್ನು ರಕ್ಷಿಸಲು ಸಮಗ್ರ ಪ್ರಯತ್ನ ಮಾಡುತ್ತಿದೆ.

10) ವಿಸ್ತೃತ ಪತ್ತೆ ಮತ್ತು ಪ್ರತಿಕ್ರಿಯೆ: (XDR – Extended Detection and Response) ನಿರಂತರ ತಾಂತ್ರಿಕ ಪ್ರಗತಿಯೊಂದಿಗೆ, ಸಾಂಪ್ರದಾಯಿಕ ಸೈಬರ್‌ ಸೆಕ್ಯುರಿಟಿ ಉಪಕರಣಗಳು ಸಮಗ್ರ ಪರಿಹಾರಗಳನ್ನು ಕೊಡುವಂತಹ ಉಪಕರಣಗಳಿಗೆ ಮತ್ತು ಕಾರ್ಯತಂತ್ರಗಳಿಗೆ ದಾರಿ ಮಾಡಿಕೊಡುತ್ತದೆ.

11) ಥರ್ಡ್-ಪಾರ್ಟಿ ರಿಸ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ ಹೆಚ್ಚಿದ ಹೂಡಿಕೆಗಳು: ಇದು ಮೂರನೇ ವ್ಯಕ್ತಿಗಳಿಗೆ ಉಪಗುತ್ತಿಗೆ ನೀಡುವ ಪೂರೈಕೆದಾರರು ಅಥವಾ ಸೇವಾ ಪೂರೈಕೆದಾರರಿಗೆ ಸಂಬಂಧಿಸಿದ ಅಪಾಯಗಳನ್ನು ವಿಶ್ಲೇಷಿಸುವ ಮತ್ತು ಕಡಿಮೆ ಮಾಡುವ ಪ್ರಕ್ರಿಯೆಯಾಗಿದೆ.

12) ಗೌಪ್ಯತೆ-ಸಂರಕ್ಷಿಸುವ ತಂತ್ರಜ್ಞಾನಗಳು: ಡೇಟಾ ಗೌಪ್ಯತೆ (Data privacy) ಮತ್ತು ಅದರ ನಿಯಂತ್ರಣವು ಹೋಮೋಮಾರ್ಫಿಕ್ ಎನ್‌ಕ್ರಿಪ್ಶನ್‌ನಂತಹ ಗೌಪ್ಯತೆ-ಸಂರಕ್ಷಿಸುವ ತಂತ್ರಜ್ಞಾನಗಳ ಅಭಿವೃದ್ಧಿಗೆ ಚಾಲನೆ ನೀಡುತ್ತದೆ

13) DevSecOps ನ ಏಕೀಕರಣ: DevSecOps ಇನ್ನು ಮುಂದೆ ಒಂದು ಪರಿಕಲ್ಪನೆಯಾಗಿರುವುದಿಲ್ಲ ಆದರೆ ಸಾಫ್ಟ್‌ವೇರ್ ಅಭಿವೃದ್ಧಿಯ ಮೂಲಭೂತ ಭಾಗವಾಗುತ್ತದೆ

14) ಕ್ಲೌಡ್ ಮತ್ತು ಮಲ್ಟಿ-ಕ್ಲೌಡ್ ಪರಿಸರದಲ್ಲಿ ಭದ್ರತೆ: ಕ್ಲೌಡ್ (cloud) ಅಥವಾ ಬಹು-ಕ್ಲೌಡ್ ಪರಿಸರದಲ್ಲಿ ಭದ್ರತೆ ಐಟಿ ಪರಿಸರ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳ ಬೇಕಾದ ಪ್ರವೃತ್ತಿ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Continue Reading

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

ನನ್ನ ದೇಶ ನನ್ನ ದನಿ ಅಂಕಣ: ಶತಮಾನದ ಹಿಂದೆಯೇ, ಬ್ರಿಟಿಷರು ಆಳುತ್ತಿದ್ದಾಗಲೇ, ಬ್ರಿಟಿಷರ ಬಗೆಗೆ ಬಾಮನದಾಸರಂತಹವರು ಬರೆದಿಟ್ಟುಹೋಗಿದ್ದರೂ ನಮ್ಮ ಕನ್ನಡದ ನವ್ಯರಿಗೆ ರೋಮಿಲ್ಲಾ ಥಾಪರ್, ಇರ್ಫಾನ್ ಹಬೀಬ್, ಡಿ.ಎನ್.ಝಾ ರಂತಹ ಸುಳ್ಳು-ಇತಿಹಾಸಕಾರರ ಪುಸ್ತಕಗಳು ಮಾತ್ರವೇ ಪಥ್ಯವಾದವು. ಈಗಲೂ ವಿವಿಧ ಕ್ಷೇತ್ರಗಳಲ್ಲಿರುವ ಅವರ ಶಿಷ್ಯಕೋಟಿ ಇನ್ನೂ ಕಣ್ಣಿಗೆ ಬಟ್ಟೆ ಕಟ್ಟಿಕೊಂಡೇ ಬರೆಯುತ್ತಾರೆ, ಮಾತನಾಡುತ್ತಾರೆ, ವಾದಿಸುತ್ತಾರೆ.

VISTARANEWS.COM


on

ನನ್ನ ದೇಶ ನನ್ನ ದನಿ baman das basu
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath ನನ್ನ ದೇಶ ನನ್ನ ದನಿ

ನನ್ನ ದೇಶ ನನ್ನ ದನಿ ಅಂಕಣ: “ವಸಾಹತುಶಾಹಿ (colonialism) ನಿರ್ಗಮನದ ಅನಂತರವೂ ಒಬ್ಬ ಅದರ ಪರವಾಗಿಯೇ ಮಾತನಾಡುತ್ತಾನೆ, ಎಂದರೆ ವಸಾಹತುಶಾಹಿಯು ತುಂಬ ಪರಿಣಾಮಕಾರಿಯಾಗಿಯೇ ಬೇರೂರಿದೆ ಎಂದರ್ಥ”.

ಅನೇಕ ವರ್ಷಗಳಿಂದ ಈ ಚಿಂತನೆ, ಈ ಮಾತು, ಈ ಸಂಗತಿ ನನ್ನನ್ನು ಕಾಡುತ್ತಲೇ ಇದೆ. ನಿಜ. ನಮ್ಮ ಮೇಲಾದ ಆಕ್ರಮಣಗಳು ಬಹು-ಮುಖೀ. ನಾವು ಶತಾಯಗತಾಯ ಯುದ್ಧಗಳನ್ನು (wars) ಸೋಲಬಾರದು. ಸೋತರೆ ಪ್ರಣಶ್ಯತಿ. ಅಬ್ರಹಾಮಿಕ್ (abrahamic) ಮತಗಳ ವಿನಾಶಕಾರೀ ಆಕ್ರಮಣಗಳನ್ನು, ಧ್ವಂಸ-ವಿಧ್ವಂಸಗಳನ್ನು ಅಧ್ಯಯನ ಮಾಡಿದಾಗ ಮತ್ತು ಇವುಗಳಿಗಿಂತಲೂ ನಮ್ಮಂತಹ ಗುಲಾಮದೇಶಗಳ ಜನರ ಮಾನಸಿಕತೆ – ಅಭಿಪ್ರಾಯಗಳ ಮೇಲಾದ ಭಯಾನಕ ದುಷ್ಪರಿಣಾಮಗಳನ್ನು ನೋಡುವಾಗ, ಹೌದು, ನಾವು ಶತ್ರುಗಳನ್ನು (enemies) ಯಾವ ಕಾರಣಕ್ಕೂ ಔದಾರ್ಯದಿಂದ ಕಾಣಬಾರದಿತ್ತು. ಅವರ “ಭಾಷೆಯಲ್ಲಿಯೇ” ನಾವೂ ಉತ್ತರ ನೀಡಬೇಕಿತ್ತು, ಎನಿಸುತ್ತದೆ. ಶ್ರೀಕೃಷ್ಣನಂತೆ, (SriKrishna) ಆಚಾರ್ಯ ಚಾಣಕ್ಯರಂತೆ (Chanakya) ಸಂಪೂರ್ಣ ಶತ್ರುನಾಶವೇ ನಮ್ಮ ಕಾರ್ಯತಂತ್ರವೂ ಆಗಬೇಕಿತ್ತು, ಅನಿಸುತ್ತದೆ. ಬ್ರಿಟಿಷರು (British) ಮತ್ತು ಅವರ “ಪ್ರೀತಿಪಾತ್ರರು” ಬರೆಸಿರುವ – ಬರೆದಿಟ್ಟಿರುವ ಇತಿಹಾಸ ಪುಸ್ತಕಗಳನ್ನು ನೋಡಿದರೆ, ಇಡೀ ದಕ್ಷಿಣ ಭಾರತವನ್ನು ಈಗಲೂ ನಾಶ ಮಾಡುತ್ತಲೇ ಇರುವ ಅವೈಜ್ಞಾನಿಕವಾದ ಆರ್ಯ – ದ್ರಾವಿಡ (Arya Dravida) ಪೊಳ್ಳು ಸಿದ್ಧಾಂತದ ಪರಿಣಾಮವನ್ನು ನೋಡಿದರೆ ಗಾಬರಿಯಾಗುತ್ತದೆ. ನೋಡಿ, ನಮ್ಮ ದೇಶದ ಶಿಕ್ಷಣ, ಕೃಷಿ, ಉದ್ಯಮಗಳನ್ನು ನಾಶ ಮಾಡಿದ ಬ್ರಿಟಿಷರು, ಬಹಳಷ್ಟು ಭಾರತೀಯರ ದೃಷ್ಟಿಯಲ್ಲಿ ಇಂದಿಗೂ ಆರಾಧ್ಯದೈವಗಳಾಗಿದ್ದಾರೆ, ಉದ್ಧಾರಕರಾಗಿದ್ದಾರೆ! ವಸಾಹತುಶಾಹಿಯ ಅಧ್ಯಾಯ ಮುಗಿದಿದೆ, ನಾವೊಂದು ಸ್ವತಂತ್ರ ರಾಷ್ಟ್ರ, ಎಂದು ನಾವು ಎಷ್ಟೆಷ್ಟು ಬಾರಿ ಹೇಳಿಕೊಂಡರೂ, ವಸಾಹತುಶಾಹಿಯ ಮಾನಸಿಕತೆ – ಅವರ ಬಗೆಗಿನ ಆರಾಧನೆಗಳು ನಮ್ಮೊಳಗೆ ಇದ್ದರೆ, ನಾವಿನ್ನೂ ಗುಲಾಮರಾಗಿಯೇ ಮುಂದುವರಿದಿದ್ದೇವೆ, ಎನಿಸುವುದಿಲ್ಲವೇ?

ಇತಿಹಾಸಕಾರ ಬಾಮನ (ವಾಮನ) ದಾಸ ಬಸು (Baman Das Basu) ಅವರ “ಹಿಸ್ಟರಿ ಆಫ್ ಎಜುಕೇಷನ್ ಇನ್ ಇಂಡಿಯಾ ಅಂಡರ್ ದಿ ರೂಲ್ ಆಫ್ ಈಸ್ಟ್ ಇಂಡಿಯಾ ಕಂಪನಿ” (ಪ್ರಕಟಣೆ 1922) ಕೃತಿಯ ಕೆಲವು ಸಾಲುಗಳನ್ನು ಗಮನಿಸುವಾಗ, ಸಹಜವಾಗಿಯೇ ಕನ್ನಡದ ನಮ್ಮ ನವ್ಯ ಸಾಹಿತಿಗಳ ಮಾತು – ಭಾಷಣಗಳೇ ನೆನಪಾಗುತ್ತವೆ. ನಾಲ್ಕೈದು ದಶಕಗಳ ಹಿಂದೆ ನಮ್ಮಂತಹವರ ಮೇಲೆ ತುಂಬಾ ಪ್ರಭಾವ ಬೀರಿದವರು ಈ ನವ್ಯರು. Of Course, ಅವರೆಲ್ಲಾ ತುಂಬ ಚೆನ್ನಾಗಿ ಮಾತನಾಡುತ್ತಿದ್ದರು, ಆಕರ್ಷಕವಾದ ಹೊಸದೊಂದು ಭಾಷೆಯಲ್ಲಿ ಬರೆಯುತ್ತಿದ್ದರು. ಭಾರತೀಯ ಸಾಹಿತ್ಯದ ಮೇಲೆ, ಶಿಕ್ಷಣ – ಜನಜೀವನ – ಸಾಮಾಜಿಕ ವ್ಯವಸ್ಥೆಗಳ ಮೇಲೆ, ವಸಾಹತುಶಾಹಿಯ ಪ್ರಭಾವದ ಬಗೆಗೆ ಈ ನವ್ಯರ ಮಾತುಗಳನ್ನು ಕೇಳಿ ನಾನು ಬೆರಗಾದುದುಂಟು. ತಮ್ಮ ಮಾತಿನ ಪ್ರತಿ ಎರಡು ವಾಕ್ಯಗಳಿಗೊಮ್ಮೆ ಭಾರತದ, ಮುಖ್ಯವಾಗಿ ಹಿಂದೂಗಳ ಮೂಢನಂಬಿಕೆಗಳ ಬಗೆಗೆ, ಅಸ್ಪೃಶ್ಯತೆ – ಜಾತಿವ್ಯವಸ್ಥೆ – ಮುಂತಾದವುಗಳ ಬಗೆಗೆ ತಪ್ಪದೇ ಪ್ರಹಾರ ಮಾಡುತ್ತಿದ್ದರು. ವಸಾಹತುಶಾಹಿ ಬಂದುದೇ ನಮ್ಮ ವಿಮೋಚನೆಗೆ ಎಂದು ಪರೋಕ್ಷವಾಗಿ ಹೇಳುತ್ತಿದ್ದರು. ಈ ದೇಶದಲ್ಲಿ ಹೆಣ್ಣುಮಕ್ಕಳಿಗೆ, ಶೂದ್ರರಿಗೆ, ಅಸ್ಪೃಶ್ಯರಿಗೆ ಕಳೆದ ಐದು ಸಾವಿರ ವರ್ಷಗಳಿಂದ ವಿದ್ಯಾಭ್ಯಾಸಕ್ಕೆ ಅವಕಾಶವಿರಲಿಲ್ಲ, ಎಂದು ರೋದಿಸುತ್ತಿದ್ದರು. ಬ್ರಿಟಿಷರ ಪ್ರೀತಿಪಾತ್ರರೇ ಬರೆಸಿದ ಇತಿಹಾಸದ ಪಠ್ಯಪುಸ್ತಕಗಳಲ್ಲಿ ಯೂರೋಪಿಯನ್ನರು ಇಲ್ಲಿಗೆ ಬಂದುದೇ ವ್ಯಾಪಾರದ ಹೆಸರಿನಲ್ಲಿ ಲೂಟಿ ಮಾಡಲು – ವಸಾಹತುಗಳನ್ನು ಸ್ಥಾಪಿಸಲು ಎಂದೆಲ್ಲಾ ಓದಿದವರಿಗೆ, ಈ ನವ್ಯರ ಮಾತುಗಳು ಗೊಂದಲವನ್ನುಂಟುಮಾಡುತ್ತಿದ್ದವು, ನಮಗೆಲ್ಲಾ ಅಯೋಮಯವಾಗುತ್ತಿತ್ತು. “ಈ ನವ್ಯ ಸಾಹಿತಿಗಳೆಲ್ಲಾ ವಸಾಹತುಶಾಹಿಯ ಪರವಾಗಿಯೇ ಮಾತನಾಡುತ್ತಿದ್ದಾರಲ್ಲಾ” ಎನಿಸಿ ವಿಷಾದವೂ ಉಂಟಾಗುತ್ತಿತ್ತು. ಭಾರತದಲ್ಲಿ ಆಸ್ಪತ್ರೆಗಳನ್ನು, ಶಾಲೆಗಳನ್ನು ಪ್ರಾರಂಭ ಮಾಡಿದವರೇ ಬ್ರಿಟಿಷರು. ಅವರಿಂದಾಗಿಯೇ ರೈಲು ವ್ಯವಸ್ಥೆ ಬಂದಿತು. ಆಧುನಿಕತೆ – ವಿಜ್ಞಾನ ಅವರಿಂದಲೇ ಬಂದಿತು…..ಇತ್ಯಾದಿ ಇತ್ಯಾದಿ……

ಭಾರತದಲ್ಲಿ ರಸ್ತೆಗಳನ್ನು ಮಾಡಿಸಿದವರೂ ಬ್ರಿಟಿಷರೇ, ಎಂದು ಈಗಲೂ ಕೆಲವರು ಉಗ್ಘಡಿಸುವುದುಂಟು. “ಹಾಗಿದ್ದಲ್ಲಿ, ಸ್ವಾಮೀ, ಬ್ರಿಟಿಷರಿಗಿಂತ ಮೊದಲು ಇದ್ದ ಕೃಷ್ಣದೇವರಾಯನ ಐದು ಲಕ್ಷ ಸೈನಿಕರು, 1200 ಆನೆಗಳು, 60,000 ಕುದುರೆಗಳು ಏನು ಆಕಾಶದಲ್ಲಿ ಓಡಾಡುತ್ತಿದ್ದವೇ” ಎಂದು ಕೇಳಿದರೆ ಉತ್ತರಿಸುವುದಿಲ್ಲ.

ಈಗ ಹದಿನಾಲ್ಕು ವರ್ಷಗಳ ಹಿಂದೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರೊಬ್ಬರು, ತಮ್ಮ ಮಾತುಗಳ ಆರಂಭದಲ್ಲಿಯೇ “ಬ್ರಿಟಿಷರು ನಮ್ಮ ದೇಶಕ್ಕೆ ಬರದೇಹೋಗಿದ್ದರೆ, ನಾವೆಲ್ಲಾ ಇನ್ನೂ ಅಂಧಕಾರದಲ್ಲಿ ಇರುತ್ತಿದ್ದೆವು” ಎಂದು ಹೇಳಿ ಆಘಾತವನ್ನೇ ಉಂಟುಮಾಡಿದ್ದರು.

ಬಾಮನದಾಸರು ದಾಖಲಿಸಿರುವ ಕೆಲವು ಅಂಶಗಳು ಗಮನಿಸುವಂತಹವು. ಇದು ನೂರು ವರ್ಷಗಳ ಹಿಂದಿನ ಗ್ರಂಥ ಮತ್ತು ಬ್ರಿಟಿಷರು ಆಳುತ್ತಿದ್ದಾಗಲೇ ಪ್ರಕಟವಾದ ಗ್ರಂಥ ಎನ್ನುವುದನ್ನು ನಾವು ಮರೆಯುವಂತಿಲ್ಲ.

ಭಾರತಕ್ಕೆ ಸಮುದ್ರ ಮಾರ್ಗದಲ್ಲಿ ಬರಲು ಧಾವಿಸಲು, ಯೂರೋಪಿಯನ್ನರ ಮಧ್ಯೆ 15ನೆಯ ಶತಮಾನದಿಂದಲೇ ಸ್ಪರ್ಧೆ – ಯುದ್ಧ ನಡೆಯುತ್ತಿತ್ತು. ಪೋರ್ತುಗೀಸರನ್ನು, ಡಚ್ಚರನ್ನು, ಫ್ರೆಂಚರನ್ನು ಬಗ್ಗುಬಡಿದು ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಪಾರಮ್ಯವನ್ನು ಸಾಧಿಸಿತು. ಭಾರತೀಯರ ಶಿಕ್ಷಣಕ್ಕೆ ಸಂಬಂಧಿಸಿದಂತೆ, ಬ್ರಿಟಿಷರೇನೂ ತಲೆ ಕೆಡಿಸಿಕೊಂಡಿರಲಿಲ್ಲ. ಇಲ್ಲಿನ ರಾಜರ – ಸುಲ್ತಾನರ ನಡುವೆ ರಾಜಕೀಯ ಮಾಡುತ್ತಾ ತಮ್ಮ ಲೂಟಿಯಲ್ಲಿ, ವ್ಯಾಪಾರದಲ್ಲಿ ಗರಿಷ್ಠ ಲಾಭ ಗಳಿಸುವಲ್ಲಿ ನಿರತರಾಗಿದ್ದರು. ಕೆಲಕಾಲಾನಂತರ ಭಾರತದ ಸ್ಥಳೀಯರಿಗೆ ಇಂಗ್ಲಿಷ್ ಶಿಕ್ಷಣ ನೀಡದಿದ್ದರೆ ತಾವು ಬಹಳ ಕಾಲ ವಸಾಹತುವನ್ನು ನಿಭಾಯಿಸಲು ಸಾಧ್ಯವಿಲ್ಲ, ಎಂಬುದು ಅವರಿಗೆ ಅರಿವಾಯಿತು. 18ನೆಯ ಶತಮಾನದ ಕೊನೆಯ ಹೊತ್ತಿಗೆ ಹಿಂದುಗಳಿಗೆ ಮತ್ತು ಮುಸ್ಲಿಮರಿಗೆ, ಕಾಶಿ ಮತ್ತು ಕೊಲ್ಕತ್ತಾಗಳಲ್ಲಿ ಸಂಸ್ಕೃತದ ಮತ್ತು ಇಸ್ಲಾಮೀ ಶಿಕ್ಷಣದ ಕಾಲೇಜುಗಳನ್ನು ಸ್ಥಾಪಿಸಿದರು. ತಮ್ಮ ಆಡಳಿತಾತ್ಮಕ ಉದ್ದೇಶಕ್ಕಾಗಿ ಈ ಕಾಲೇಜುಗಳನ್ನು ಸ್ಥಾಪಿಸಿದರೇ ವಿನಃ, ಸ್ಥಳೀಯರಿಗೆ ವಿದ್ಯೆ ಕಲಿಸುವ ಸದುದ್ದೇಶವಿರಲಿಲ್ಲ.

ಭಾರತದ ನೂರೆಂಟು ಭಾಷೆಗಳನ್ನು ತಾವು ಕಲಿತು ಆಡಳಿತ ಮಾಡುವುದರ ಬದಲಿಗೆ, ಇಲ್ಲಿನವರಿಗೇ ಇಂಗ್ಲಿಷ್ ಕಲಿಸಿಬಿಡುವುದು ಅವರಿಗೆ ಲಾಭದಾಯಕವಾಗಿತ್ತು.

ಇದೇ ಬ್ರಿಟಿಷರೇ, ತಮ್ಮ ಆಳ್ವಿಕೆಯಲ್ಲಿ, ಅಮೆರಿಕೆಯಲ್ಲಿ “ಶಿಕ್ಷಣದ ಉದ್ದೇಶಕ್ಕಾಗಿ ಕಪ್ಪು ಗುಲಾಮರನ್ನು ಒಂದೆಡೆ ಸೇರಿಸುವುದು ಕಾನೂನಿಗೆ ವಿರುದ್ಧವಾಗುತ್ತದೆ. ಉಲ್ಲಂಘಿಸಿದವರಿಗೆ ಉಗ್ರ ಶಿಕ್ಷೆ ನೀಡಲಾಗುತ್ತದೆ” ಎಂದು ಕಾನೂನು ಮಾಡಿದ್ದರು. ಇದು ಬ್ರಿಟಿಷ್ ಧೂರ್ತರ ನಿಜಸ್ವರೂಪ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನಮ್ಮ ದೇಶಕ್ಕೆ ಸಂಬಂಧಿಸಿದಂತೆ, ಮೆಕಾಲೆಯ ಶಿಫಾರಸ್ಸುಗಳೇನಿದ್ದವು, ಅವನ ಉದ್ದೇಶವೇನಿತ್ತು, ಇತ್ಯಾದಿ ನಮಗೆಲ್ಲ ಗೊತ್ತೇ ಇದೆ. ಬಾಮನದಾಸರು ತಮ್ಮ ಕೃತಿಯಲ್ಲಿ, ಮೆಕಾಲೆಯ ಬಂಧು ಚಾರ್ಲ್ಸ್ ಟ್ರೆವೆಲ್ಯಾನ್ ಎಂಬವನು, ಬ್ರಿಟಿಷ್ ಸಂಸತ್ತಿನ ಸಮಿತಿಯ ಮುಂದೆ ನೀಡಿದ ಹೇಳಿಕೆಯನ್ನೂ ಉಲ್ಲೇಖಿಸುತ್ತಾರೆ. “ಭಾರತದಲ್ಲಿರುವ ಹಿಂದೂಗಳು ಮತ್ತು ಮುಸ್ಲಿಮರು, ಬ್ರಿಟಿಷರನ್ನು ತಮ್ಮ ದೇಶವನ್ನು ವಶಪಡಿಸಿಕೊಂಡ ವಿದೇಶೀ ಶತ್ರುಗಳು ಎಂದೇ ಭಾವಿಸುತ್ತಾರೆ. ಐರೋಪ್ಯ ಶಿಕ್ಷಣವನ್ನು ನೀಡಿದ ಮೇಲೆ, ಅವರು ತಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡುವುದನ್ನೇ ಬಿಟ್ಟುಬಿಡುತ್ತಾರೆ. ಬ್ರಿಟಿಷರನ್ನು ತಮ್ಮ ಶತ್ರುಗಳು ಮತ್ತು ತಮ್ಮ ದೇಶವನ್ನು ಆಕ್ರಮಿಸಿಕೊಂಡವರು ಎಂದು ಭಾವಿಸುವುದನ್ನು ಮರೆತು, ತಮ್ಮ ಸ್ನೇಹಿತರಂತೆ – ಪೋಷಕರಂತೆ ಕಾಣುತ್ತಾರೆ ” ಎಂದಿದ್ದ ಈ ಚಾರ್ಲ್ಸ್ ಟ್ರೆವೆಲ್ಯಾನ್.

ಶತಮಾನದ ಹಿಂದೆಯೇ, ಬ್ರಿಟಿಷರು ಆಳುತ್ತಿದ್ದಾಗಲೇ, ಬ್ರಿಟಿಷರ ಬಗೆಗೆ ಬಾಮನದಾಸರಂತಹವರು ಬರೆದಿಟ್ಟುಹೋಗಿದ್ದರೂ ನಮ್ಮ ಕನ್ನಡದ ನವ್ಯರಿಗೆ ರೋಮಿಲ್ಲಾ ಥಾಪರ್, ಇರ್ಫಾನ್ ಹಬೀಬ್, ಡಿ.ಎನ್.ಝಾ ರಂತಹ ಸುಳ್ಳು-ಇತಿಹಾಸಕಾರರ ಪುಸ್ತಕಗಳು ಮಾತ್ರವೇ ಪಥ್ಯವಾದವು. ಬಹಳ ಜನ ಕೊನೆಯವರೆಗೆ ಭಾರತ-ವಿರೋಧಿಗಳಾಗಿಯೇ ಇದ್ದುಬಿಟ್ಟರು. ಧರ್ಮಪಾಲ್, ಅರುಣ್ ಶೌರಿ, ಸೀತಾರಾಮ ಗೋಯಲ್, ರಾಮಸ್ವರೂಪ್ ಮೊದಲಾದವರ ಸಂಶೋಧನೆ – ವಿಶ್ಲೇಷಣೆಗಳನ್ನು ಓದುವ, ಪರಾಮರ್ಶಿಸುವ ಗೊಡವೆಗೆ ಒಬ್ಬರೂ ಹೋಗಲಿಲ್ಲ. ದುರಂತವೆಂದರೆ, ಈಗಲೂ ವಿವಿಧ ಕ್ಷೇತ್ರಗಳಲ್ಲಿರುವ ಅವರ ಶಿಷ್ಯಕೋಟಿ ಇನ್ನೂ ಕಣ್ಣಿಗೆ ಬಟ್ಟೆ ಕಟ್ಟಿಕೊಂಡೇ ಬರೆಯುತ್ತಾರೆ, ಮಾತನಾಡುತ್ತಾರೆ, ವಾದಿಸುತ್ತಾರೆ.

ಹೌದು, “ವಸಾಹತುಶಾಹಿಯ ನಿರ್ಗಮನದ ಅನಂತರವೂ ಒಬ್ಬ ಅದರ ಪರವಾಗಿಯೇ ಮಾತನಾಡುತ್ತಾನೆ, ಎಂದರೆ ವಸಾಹತುಶಾಹಿಯು ತುಂಬ ಪರಿಣಾಮಕಾರಿಯಾಗಿಯೇ ಬೇರೂರಿದೆ ಎಂದರ್ಥ”.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Continue Reading

ಅಂಕಣ

Mother Sentiment: ವ್ಯಾಸಂಗಕ್ಕಾಗಿ ಊರು ತೊರೆದು ಪಟ್ಟಣದ ಹಾಸ್ಟೆಲ್‌ ಸೇರುತ್ತಿರುವ ಮಗಳಿಗೆ ತಾಯಿ ಕರುಳಿನ ಭಾವುಕ ಪತ್ರ ಇದು…

ತಾಯಿ ಹೃದಯದ ಅಳಲು (Mother Sentiment) ನಿನಗಿನ್ನೂ ಗೊತ್ತಿಲ್ಲ. ನನ್ನ ಮನದಲ್ಲಿ ಹುದುಗಿಸಿರುವ ಪ್ರೀತಿ, ಮಮತೆ, ಅಕ್ಕರೆ, ಭಯ, ಆತಂಕಗಳ ಕುರಿತು ಇಲ್ಲಿ ಬರೆದಿರುವೆ. ಹಾಗೆಂದು ಇದು ನನ್ನೊಬ್ಬಳ ಅಳಲು ಅಲ್ಲ. ನನ್ನಂತೆ ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಬೇರೆ ಊರುಗಳಲ್ಲಿ ಓದಲು, ನೌಕರಿ ಮಾಡಲು ಕಳುಹಿಸಿರುವ ಲಕ್ಷಾಂತರ ತಾಯಂದಿರ ಮನದ ಮಾತು…..ಇತ್ತೀಚೆಗೆ ಬಾಲಕಿಯರ ಮೇಲೆ ನಡೆಯುತ್ತಿರುವ ಅಮಾನುಷ ಕೃತ್ಯಗಳ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಮಗಳಿಗೆ ಬರೆದ ಸುದೀರ್ಘ ಪತ್ರದ ಸಾರ ಇಲ್ಲಿದೆ.

VISTARANEWS.COM


on

Mother Sentiment
Koo

| ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ, ಗದಗ

ಪ್ರೀತಿಯ ಮಗಳೇ,
ಅರೆ! ನಿನ್ನೆ ತಾನೆ ನನ್ನನ್ನು ಕಳಿಸಲು ಬಂದ ಅಮ್ಮ (Mother Sentiment) ಇಷ್ಟು ಬೇಗ ಪತ್ರ ಬರೆಯಲು ಕಾರಣವೇನು ಎಂದು ಗಾಬರಿಯಾಗಬೇಡ. ತಾಯಿ ಹೃದಯದ ಅಳಲು ನಿನಗಿನ್ನೂ ಗೊತ್ತಿಲ್ಲ. ನನ್ನ ಮನದಲ್ಲಿ ಹುದುಗಿಸಿರುವ ಪ್ರೀತಿ, ಮಮತೆ, ಅಕ್ಕರೆ, ಭಯ, ಆತಂಕಗಳ ಕುರಿತು ಇಲ್ಲಿ ಬರೆದಿರುವೆ. ಹಾಗೆಂದು ಇದು ನನ್ನೊಬ್ಬಳ ಅಳಲು ಅಲ್ಲ. ನನ್ನಂತೆ ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಬೇರೆ ಊರುಗಳಲ್ಲಿ ಓದಲು, ನೌಕರಿ ಮಾಡಲು ಕಳುಹಿಸಿರುವ ಲಕ್ಷಾಂತರ ತಾಯಂದಿರ ಮನದ ಮಾತು.
ನಮ್ಮ ಮನೆಯಂಗಳದಲ್ಲಿ ಚಂದದ ಪ್ರಾಕು ಧರಿಸಿ, ಎರಡು ಪುಟ್ಟ ಜುಟ್ಟು ಹಾಕಿಕೊಂಡು, ಮುಖಕ್ಕೆ ಪೌಡರ್ ಸವರಿ, ಹಣೆಗೆ ಕಾಡಿಗೆಯ ಬೊಟ್ಟುಇಟ್ಟು ಕಾಲಿನ ಗೆಜ್ಜೆಯ ಸದ್ದು ಮಾಡುತ್ತಾ ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಮನೆಯೆಲ್ಲ ನಡೆಯುತ್ತಿದ್ದ, ಅರಳು ಹುರಿದಂತೆ ಮುದ್ದಾಗಿ ಬಾಯಿ ತುಂಬಾ ಮಾತನಾಡುತ್ತಿದ್ದ ಪುಟ್ಟ ಕಂದ ನೀನು, ಇಂದು ಕಾಲೇಜಿಗೆ ಹೋಗುವಷ್ಟು ದೊಡ್ಡವಳಾಗಿರುವೆ. ಅತ್ಯುತ್ತಮ ಅಂಕ ಗಳಿಸಿ ಒಳ್ಳೆಯ ಕಾಲೇಜಿನಲ್ಲಿ ಸೀಟು ಗಿಟ್ಟಿಸಿ ಉನ್ನತ ಶಿಕ್ಷಣ (Higher Education) ಪಡೆಯುವ ಆಸೆಯಲ್ಲಿ ನಾವು ಮನೆಯವರನ್ನೆಲ್ಲಾ ತೊರೆದು ಹಾಸ್ಟೆಲಿನಲ್ಲಿ ವಾಸವಾಗಲು ಹೋಗುತ್ತಿರುವೆ.

ತುಸುವೇ ಸಂಭ್ರಮ ನಮ್ಮೆಲ್ಲರಲ್ಲಿ ಮನೆ ಮಾಡಿದ್ದರೂ ಹೆಚ್ಚು ಆತಂಕ ಮನದಲ್ಲಿ ಇದೆ. ಕಾಣದ ಊರು, ಅರಿಯದ ಜನ, ಬದಲಾದ ವಾತಾವರಣ ಇದೆಲ್ಲಕ್ಕೂ ನೀನು ಅದು ಹೇಗೋ ಹೊಂದಿಕೊಂಡು ಬಿಡುವೆ ಎಂಬ ಭರವಸೆ ನನಗಿದೆ… ಆದರೆ ನನ್ನ ಭಯ ಅದಲ್ಲ, ಅದರ ಅರಿವಾಗಲು ನೀನು ನಾನಲ್ಲ.
‘ಅಯ್ಯೋ ಅಮ್ಮ! ಮತ್ತದೇ ರಾಗ ಆಡಬೇಡ ನೀನು’ ಎಂಬ ನಿನ್ನ ಗದರಿಕೆಯ ನಡುವೆಯೂ ಮನ ಆತಂಕದ ಗೂಡಾಗಿದೆ. ನಿನ್ನನ್ನು ಕಳಿಸಲು ಬಂದಾಗ ಹೇಳದ ಮಾತುಗಳನು ಬರೆಯಲೇಬೇಕಾದ, ಬರೆದು ತಿಳಿಸಲೇಬೇಕಾದ ಅನಿವಾರ್ಯತೆ ನನ್ನದು.

ಪ್ರೀತಿಯ ಕೂಸು ನೀನು

ನಮ್ಮ ಮನೆಯ ಪ್ರೀತಿಯ ಕೂಸು ನೀನು. ಅಜ್ಜ ಅಜ್ಜಿಯ ಚಿನ್ನುವಾಗಿ, ಅಪ್ಪನ ಮುದ್ದಿನ ಮಗಳಾಗಿ, ಅಕ್ಕ-ಅಣ್ಣಂದಿರ ನೆಚ್ಚಿನ ತಂಗಿಯಾಗಿ ನನ್ನ ಕಣ್ಮಣಿಯಾಗಿ ಸುರಕ್ಷಿತವಾದ ಗುಬ್ಬಚ್ಚಿ ಗೂಡಿನಂತಹ ಸಂಸಾರದಲ್ಲಿ ಬೆಳೆದಿರುವ ನಿನಗೆ ಹೊರಗಿನ ನಿಷ್ಕುರ ಪ್ರಪಂಚದ ಅರಿವಿಲ್ಲ. ಹಾಗೆಂದು ಇಡೀ ಜಗತ್ತೇ ಕೆಟ್ಟದು ಎಂದಲ್ಲ. ನನಗೆ ಎಲ್ಲವೂ ಗೊತ್ತಿದೆ ಎಂಬ ಹದಿಹರೆಯದ ಹುಮ್ಮಸ್ಸು, ಸುಣ್ಣದ ತಿಳಿ ನೀರನ್ನು ಕೂಡ ಹಾಲೆಂದು ನಂಬುವ ನಿನ್ನ ಬೋಳೆ ಸ್ವಭಾವ, ಸ್ನೇಹಕ್ಕಿಂತ ಮಿಗಿಲಾದದ್ದು ಬೇರೆ ಯಾವುದೂ ಇಲ್ಲ ಎಂಬ ಸ್ಲೋಗನ್‌ಗಳು, ಪ್ರೀತಿ ಮಾಡಬಾರದು, ಮಾಡಿದರೆ ಜಗಕ್ಕೆ ಹೆದರಬಾರದು ಎಂಬ ಧ್ಯೇಯ ವಾಕ್ಯಗಳು, ಜೀವನ ಇರೋದೇ ಎಂಜಾಯ್ ಮಾಡೋಕೆ, ಈ ಹದಿಹರೆಯದ ವಯಸ್ಸು ಮತ್ತೆ ಬರುತ್ತಾ ಎಂಬ ಮಾತುಗಳು ಹೆಚ್ಚು ರುಚಿಸುವ ಸಮಯ ಇದು.

ಯಾವುದೂ ತಪ್ಪಲ್ಲ ನಿಜ

ಯಾವುದೂ ತಪ್ಪಲ್ಲ ನಿಜ. ಆದರೆ ಅದೆಲ್ಲವೂ ಒಂದು ಮಿತಿಯಲ್ಲಿದ್ದಾಗ ಮಾತ್ರ. ಜೀವನದಲ್ಲಿ ಎಂಜಾಯ್ಮೆಂಟ್ ಇರಬೇಕೆ ಹೊರತು ಎಂಜಾಯ್ಮೆಂಟ್ ಒಂದೇ ಜೀವನದ ಮುಖ್ಯ ಉದ್ದೇಶ ಅಲ್ಲ. ನಮ್ಮ ಬದುಕನ್ನು ವ್ಯವಸ್ಥಿತವಾಗಿ ನಡೆಸಲು ಬೇಕಾಗುವ ವಿದ್ಯೆ, ಆರ್ಥಿಕ ಸ್ವಾವಲಂಬನೆಯನ್ನು ಕೊಡುವ ನೌಕರಿ, ಸಾಮಾಜಿಕ ವಲಯದಲ್ಲಿ ನಿನ್ನದೇ ಆದ ಒಂದು ಒಳ್ಳೆಯ ಗುರುತಿಸುವಿಕೆ ಇವು ಉನ್ನತ ಶಿಕ್ಷಣದ ಮುಖ್ಯ ಧ್ಯೇಯಗಳು.

ಈಗಾಗಲೇ ಬದುಕಿನಲ್ಲಿ ಒಂದು ಮಹತ್ತರ ಘಟ್ಟವನ್ನು ತಲುಪಿರುವ ಸೋದರ ಸಂಬಂಧಿಗಳು ನಾವಂತೂ ಎಂಜಾಯ್ ಮಾಡಲಿಲ್ಲ ನೀವಾದರೂ ಮಾಡಿ ಎಂದು ಲಘುವಾಗಿ ನಿಮಗೆ ಹೇಳಿರುವುದನ್ನು ನೀನು ಗಂಭೀರವಾಗಿ ತೆಗೆದುಕೊಳ್ಳಬೇಡ…. ಓಟದ ನಡುವೆ ಅಲ್ಲೊಂದು ಇಲ್ಲೊಂದು ಅಡೆತಡೆಗಳು ಇದ್ದರೆ ತೊಂದರೆ ಇಲ್ಲ, ಆದರೆ ಆಡೆ ತಡೆಗಳನ್ನೇ ದಾಟುತ್ತ ಮುಂದೆ ಸಾಗುವ ಹೊತ್ತಿಗೆ ನಿನ್ನ ಸಮಯ ವ್ಯರ್ಥವಾಗಬಹುದು, ನಿನ್ನ ಗುರಿ ನಿನ್ನ ಕೈತಪ್ಪಿ ಹೋಗಬಹುದು ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೋ.

ನಿನ್ನ ಕಾಲೇಜಿನಲ್ಲಿ, ಹಾಸ್ಟೆಲ್‌ನಲ್ಲಿ ಎಲ್ಲರೊಂದಿಗೆ ಒಳ್ಳೆಯ ಸ್ನೇಹವನ್ನು ಹೊಂದು ಆದರೆ ಅತಿಯಾದ ನಿರೀಕ್ಷೆ ಇಟ್ಟುಕೊಳ್ಳುವುದು ಬೇಡ. ಸದಾ ಒಂದು ಅಂತರವನ್ನು ಕಾಯ್ದುಕೋ. ಕಹಿ ಎನಿಸಿದರೂ ಜೀವನದ ಸತ್ಯ ಇದುವೇ. ಕೆಲ ಸ್ನೇಹ ಸಂಬಂಧಗಳು ಜೊತೆಗಿರುವವರೆಗೆ ಮಾತ್ರ.. ಒಂದೇ ಊರಿನವರಾದರೆ ಆಗಾಗ ಪರಸ್ಪರ ಭೇಟಿಯಾಗಿ ಕಷ್ಟ ಸುಖವನ್ನಾದರೂ ಹಂಚಿಕೊಳ್ಳುತ್ತಾರೆ, ಆದರೆ ದೂರದಲ್ಲಿರುವ ಸ್ನೇಹಿತರು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಭೇಟಿಯಾಗುತ್ತಾರೆ ಎಂಬುದನ್ನು ನೀನೇ ನೋಡುತ್ತಿರುವೆಯಲ್ಲ. ಹಾಗೆಂದು ಆ ಸ್ನೇಹದ ಕುರಿತು ತಿರಸ್ಕಾರ ಬೇಡ, ಒಳ್ಳೆಯ ಸ್ನೇಹಗಳು ಒಂದು ಮಧುರ ಅನುಭೂತಿಯಂತೆ ನಿನ್ನೊಂದಿಗೆ ಉಳಿದು ಹೋಗಬೇಕು ನಿಜ. ದುಸ್ವಪ್ನಗಳಂತಲ್ಲ.

ನಮ್ಮ ಜೊತೆಗೆ ಬರುವುದು ನಮ್ಮವರು ಮಾತ್ರ

ಜೀವಿತದ ಕೊನೆಯವರೆಗೂ ನಮ್ಮ ಜೊತೆಗೆ ಬರುವುದು ನಮ್ಮ ಅಪ್ಪ, ಅಮ್ಮ, ಅಣ್ಣ-ತಮ್ಮ, ಅಕ್ಕ- ತಂಗಿ ಮುಂತಾದ ರಕ್ತ ಸಂಬಂಧಗಳು ಮಾತ್ರ. ನಮ್ಮ ಕಷ್ಟ ಸುಖಕ್ಕೆ ನೋವು ನಲಿವಿಗೆ ಜೊತೆಯಾಗುವವರು ನಮ್ಮವರೇ. ಕೆಲ ಸ್ನೇಹಗಳು ಇದಕ್ಕೆ ಅಪವಾದ ಇರಬಹುದು. ನೀನು ಮನೆಯವರನ್ನೆಲ್ಲಾ ಬಿಟ್ಟು ಓದಲು ಹೋಗಿರುವ ಮುಖ್ಯ ಉದ್ದೇಶವನ್ನು ಸದಾ ನೆನಪಿನಲ್ಲಿಡು. ಓದು ಮತ್ತು ಅದಕ್ಕೆ ಸಂಬಂಧಪಟ್ಟ ಕೆಲಸಗಳಲ್ಲಿ ನಿನ್ನನ್ನು ನೀನು ತೊಡಗಿಸಿಕೋ. ಊಟದಲ್ಲಿ ಉಪ್ಪಿನಕಾಯಿ ಇರುವಂತೆ ತಮಾಷೆ, ಜೋಕುಗಳು, ಕಾಲೆಳೆಯುವುದು ಹಿತಮಿತವಾಗಿರಲಿ…. ಆದರೆ ಅದುವೇ ಮುಖ್ಯವಾಗದಿರಲಿ.

ಹಾಸ್ಟೆಲ್ ನಲ್ಲಿ ಕೊಡುವ ಆಹಾರಕ್ಕೆ ನಿನ್ನನ್ನು ನೀನು ಒಗ್ಗಿಸಿಕೊಳ್ಳುವುದನ್ನು ರೂಢಿ ಮಾಡಿಕೋ. ಬೇಕು ಬೇಕೆಂದಾಗ ಊಟ ಮಾಡಲು ಆಗುವುದಿಲ್ಲ. ಆದ್ದರಿಂದ ನಿಗದಿತ ಸಮಯದಲ್ಲಿ ಆಹಾರ ಸೇವಿಸು. ಅಲ್ಲಿ ಕೊಡುವ ಹಸಿ ತರಕಾರಿ ಸೊಪ್ಪುಗಳನ್ನು, ಹಣ್ಣುಗಳನ್ನು ಸೇವಿಸು. ಸಾಧ್ಯವಾದಷ್ಟು ಹೊರಗಿನ ಆಹಾರವನ್ನು ಅವಾಯ್ಡ್ ಮಾಡು. ಹಾಸ್ಟೆಲ್ನ ನಿಯಮಾವಳಿಗಳನ್ನು ಎಂದೂ ಮೀರದಿರು. ಅತಿಯಾಗಿ ರುಚಿಯ ಕಡೆ ಗಮನ ಕೊಡದೆ ಹಿತಮಿತವಾದ ಆಹಾರವನ್ನು ಸೇವಿಸು.

ಆರ್ಥಿಕ ಶಿಸ್ತು ಇರಲಿ

ಖರ್ಚಿನ ವಿಷಯದಲ್ಲಿ ಸ್ವಲ್ಪ ಹುಷಾರಾಗಿರು. ಯಾವುದೇ ಕಾರಣಕ್ಕೂ ಹಣದ ದುರ್ಬಳಕೆ ಬೇಡ. ಅದೆಷ್ಟೇ ಒಳ್ಳೆಯ ಸ್ನೇಹಿತರಾಗಿದ್ದರೂ ಕೂಡ ಯಾರೊಂದಿಗೂ ನಿನ್ನ ಖಾತೆಗೆ ಸಂಬಂಧಪಟ್ಟ ಮಾಹಿತಿಗಳನ್ನು ಮತ್ತು ಎಟಿಎಂನ ಪಾಸ್ವರ್ಡ್ ಅನ್ನು ಹಂಚಿಕೊಳ್ಳಬೇಡ. ನೀನು ಓದುತ್ತಿರುವೆಡೆಯಲ್ಲಾಗಲಿ, ವಾಸಿಸುತ್ತಿರುವ ಸ್ಥಳದಲ್ಲಾಗಲಿ ಪ್ರತಿ ಬಾರಿಯೂ ನಿನ್ನ ಮಾತೇ ನಡೆಯಬೇಕು ಎಂಬ ಹಟ ಬೇಡ. ಬೇರೆಯವರ ಮಾತಿಗೂ ಬೆಲೆ ಕೊಡು. ಬಹಳಷ್ಟು ಸಲ ನಿಮ್ಮ ಹಾಸ್ಟೆಲ್ ವಾರ್ಡನ್ ಗಳು ನಿಮಗೆ ಹೇಳುವ ಮಾತುಗಳು ಒರಟೆನಿಸಬಹುದು, ಬೇಧ ತೋರುತ್ತಾರೆ ಎಂದು ಕೂಡ ಅನಿಸಬಹುದು. ಆದರೆ ಅವರು ಕೂಡ ನಿಮ್ಮ ಒಳಿತಿಗಾಗಿ ಮತ್ತು ಸಂಸ್ಥೆಯ ಏಳಿಗೆಗಾಗಿ ದುಡಿಯುತ್ತಿರುವವರು. ನಿಮ್ಮ ಎಲ್ಲ ಆಗುಹೋಗುಗಳಿಗೆ ಜವಾಬ್ದಾರರು ಎಂಬುದು ಸದಾ ನೆನಪಿರಲಿ.

ಇನ್ನು ಮುಖ್ಯವಾಗಿ ನಮ್ಮ ಬದುಕಿನಲ್ಲಿ ಬಾಲ್ಯ, ಯೌವನ, ವೃದ್ಧಾಪ್ಯ ಹೇಗೆ ಒಂದರ ನಂತರ ಒಂದು ಕ್ರಮವಾಗಿ ಬರುತ್ತವೆಯೋ ಹಾಗೆಯೇ ವಿದ್ಯಾರ್ಥಿ ಜೀವನ, ಉದ್ಯೋಗ, ಸಂಗಾತಿ ಮತ್ತು ವಿವಾಹಗಳು ಕೂಡ ಅದೇ ಕ್ರಮದಲ್ಲಿ ಬರಬೇಕು. ಇದರಲ್ಲಿ ಮಧ್ಯದ ಎರಡು ವಿಷಯಗಳು ಹಿಂದು ಮುಂದಾದರೆ ಉಳಿದ ಎರಡು ವಿಷಯಗಳನ್ನು ನಿರೀಕ್ಷಿತ ಮಟ್ಟದಲ್ಲಿ ಸಾಧಿಸಲು ಆಗುವುದಿಲ್ಲ. ಆದ್ದರಿಂದ ಈಗ ಓದುವ ವಯಸ್ಸಿನಲ್ಲಿ ಕೇವಲ ನಿನ್ನ ಓದಿನೆಡೆ ಮಾತ್ರ ನಿನ್ನ ಗಮನವಿರಲಿ. ಹರೆಯದ ಆಕರ್ಷಣೆಗೆ ಒಳಗಾಗಿ ವಿರುದ್ಧ ಲಿಂಗಿಯ ಜೊತೆಗಿನ ಸ್ನೇಹಕ್ಕೆ ಪ್ರೀತಿ ಪ್ರೇಮದ ಬಣ್ಣ ಹಚ್ಚುವುದು ಬೇಡ. ನಿನ್ನ ತಂದೆ ತಾಯಿಯರಿಗೂ ನಿನ್ನ ಸ್ನೇಹಿತರನ್ನು ಪರಿಚಯಿಸಿ ಧೈರ್ಯವಾಗಿ ಮಾತನಾಡಬಲ್ಲಷ್ಟು ನಿಷ್ಕಲ್ಮಶ ಸ್ನೇಹವನ್ನು ಹೊಂದಿದ್ದರೆ ಸಾಕು. ನಮ್ಮ ಹಿರಿಯರು ಇದ್ದಂತೆ ನಾವಿಲ್ಲ ನಿಜ, ಆದರೆ ನಮ್ಮ ಹಿರಿಯರು ಹಾಕಿಕೊಟ್ಟ ದಾರಿ ನಮಗಿದ್ದೆ ಇದೆ.

ಕ್ಷಣಿಕ ಆಸೆಗೆ ಬಲಿಯಾಗಬೇಡ

ಮತ್ತೊಂದು ವಿಷಯ ಹೇಳಿದರೆ ನಿನಗೆ ಬೇಸರವಾಗಬಹುದು. ಇತ್ತೀಚೆಗೆ ಕೇಳಿ ಬರುತ್ತಿರುವ ಹೆಣ್ಣು ಮಕ್ಕಳ ಮೇಲಿನ ಬರ್ಬರ ಕೃತ್ಯಗಳು ಹೆತ್ತವರನ್ನು ಆತಂಕಕ್ಕೆ ಈಡು ಮಾಡಿವೆ. ಕ್ಷಣಿಕ ಆಕರ್ಷಣೆ ಬದುಕನ್ನು ನಾಶ ಮಾಡಬಹುದು. ಒಂದು ತಪ್ಪು ಹೆಜ್ಜೆ ಜೀವನವಿಡೀ ಪಶ್ಚಾತಾಪಕ್ಕೆ ದಾರಿ ಮಾಡಿಕೊಡುವುದು ಬೇಡ ಎಂಬ ಎಚ್ಚರ ನಿನಗಿದ್ದರೆ ಸಾಕು.
ಬದುಕಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಕಳೆದ ಒಂದುವರೆ ತಿಂಗಳಿನಲ್ಲಿ ನಡೆದ ಹೆಣ್ಣು ಮಕ್ಕಳ ಸಾಲು ಸಾಲು ಹತ್ಯೆಗಳನ್ನು ನೋಡಿ ಮನಸ್ಸಿಗೆ ಅನ್ನಿಸಿದ್ದು ಹೀಗೆ. ಅರಿಯದ ವಯಸ್ಸಿನಲ್ಲಿ ಪ್ರೀತಿ ಪ್ರೇಮದ ಗುಂಗಿಗೆ ಬಿದ್ದು, ತಂದೆ ತಾಯಿ ಬುದ್ಧಿ ಹೇಳಿದಾಗ ವಿದ್ಯಾರ್ಥಿ ದೆಸೆಯಲ್ಲಿ ತಾನು ತಪ್ಪು ಮಾಡುತ್ತಿರುವೆ ಎಂಬ ಅರಿವು ಉಂಟಾಗಿ ಪ್ರೀತಿಯಿಂದ ಹಿಂದೆ ಸರಿದ ತಪ್ಪಿಗೆ ಒಂದೊಮ್ಮೆ ತನ್ನನ್ನು ಪ್ರೀತಿಸಿದ ಹುಡುಗನೇ ತನ್ನನ್ನು ಕೊಚ್ಚಿ ಕೊಂದರೆ ಆಕೆಯನ್ನು ಇಷ್ಟು ವರ್ಷಗಳ ಕಾಲ ಲಾಲಿಸಿ ಪಾಲಿಸಿದ ತಂದೆ ತಾಯಿಗಳ ಪಾಡೇನು ಎಂದು ನೆನೆದಾಗ ಮೈಯಲ್ಲಿ ನಡುಕ ಉಂಟಾಗುತ್ತದೆ. ನಿಮ್ಮ ಬದುಕು ಕೇವಲ ನಿಮ್ಮದಲ್ಲ. ನಿಮ್ಮ ಬದುಕಿನ ಆಗುಹೋಗುಗಳ ಸುತ್ತ ನಿಮ್ಮ ಕುಟುಂಬ ಮತ್ತು ಸಮಾಜ ನಿಮ್ಮೊಂದಿಗೆ ಜೋಡಿಸಲ್ಪಟ್ಟಿ ರುತ್ತದೆ. ಆದ್ದರಿಂದ ನಿನ್ನ ಹುಷಾರಿನಲ್ಲಿ ನೀನಿರು ಎಂದು ಮಾತ್ರ ಹೇಳುತ್ತೇನೆ. ಸಮಾಜಕ್ಕೆ ಒಳ್ಳೆಯ ಉದಾಹರಣೆಯಾಗದಿದ್ದರೂ ಪರವಾಗಿಲ್ಲ ಆದರೆ ಕೆಟ್ಟ ಉದಾಹರಣೆಯಾಗಬಾರದು ಎಂಬ ಅರಿವಿನ ಪ್ರಜ್ಞೆ ನಿನ್ನಲ್ಲಿ ಸದಾ ಜಾಗೃತವಾಗಿರಲಿ.

ಅಷ್ಟಾಗಿಯೂ ನಿನಗೆ ಏನೇ ತೊಂದರೆಯಾದರೂ ಮುಕ್ತವಾಗಿ ಹೇಳಿಕೋ…. ಒಂದು ಸುಳ್ಳನ್ನು ಮುಚ್ಚಲು ನೂರಾರು ಸುಳ್ಳುಗಳನ್ನು ಹೇಳುವುದರ ಬದಲು ಒಂದು ಸತ್ಯವನ್ನು ಹೇಳಿ ಬೈಸಿಕೊಂಡರೂ ಪರವಾಗಿಲ್ಲ ಮನಸ್ಸು ನಿರಾಳವಾಗಿರುತ್ತದೆ ಎಂಬುದನ್ನು ಅರಿತುಕೋ.

ಬದುಕಿನ ಯಾವುದೇ ಹಂತದಲ್ಲಿಯಾದರೂ ನಮ್ಮ ತೋಳುಗಳ ಆಸರೆ ನಿನಗೆ ಇದ್ದೇ ಇರುತ್ತದೆ… ಆದರೆ ಆ ತೋಳುಗಳಲ್ಲಿ ಕಸುವು ತುಂಬುವ ಕೆಲಸ ಮಾತ್ರ ನಿನ್ನದು. ಅದು ನಿನ್ನ ನಡತೆಯಲ್ಲಿ, ವಿದ್ಯಾಭ್ಯಾಸದಲ್ಲಿ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಸದಾ ಇರಲೇಬೇಕು. ನಿನ್ನ ಕುರಿತಾಗಿ ನನ್ನ ಆಸೆ ಆಕಾಂಕ್ಷೆಗಳಿಗೆ ಮಿತಿ ಇಲ್ಲ,ಭಯ ಆತಂಕಗಳು ನಿರಾಧಾರವಾದುದು ಎಂದು ನಿನಗೆ ಅನಿಸಿದರೆ ಅದು ನಿನ್ನ ತಪ್ಪಲ್ಲ. ನನ್ನಂತೆ ನೀನೂ ಕೂಡ ತಾಯಾಗಿ ನಿನ್ನ ಮಕ್ಕಳನ್ನು ಬೆಳೆಸುವಾಗ ನಿನಗೆ ಇದರ ಅನುಭವ ಖಂಡಿತವಾಗಿಯೂ ಆಗುತ್ತದೆ. ಪತ್ರ ತುಸು ದೊಡ್ಡದಾಯಿತು ಆದರೆ ಓದದೆ ಇರಬೇಡ. ನಿನ್ನ ಹಿತದಲ್ಲಿಯೇ ನಮ್ಮ ಕುಟುಂಬದ ಒಳಿತಿದೆ.

ಇದನ್ನೂ ಓದಿ: AR Rahman: ಪ್ರಶಸ್ತಿಗಳೆಲ್ಲ ಚಿನ್ನವೆಂದು ಭಾವಿಸಿ ಎಆರ್ ರೆಹಮಾನ್ ತಾಯಿ ಮಾಡಿದ್ದೇನು?

Continue Reading

ಅಂಕಣ

ರಾಜಮಾರ್ಗ ಅಂಕಣ: ಸಾವನ್ನೇ ಆಹ್ವಾನಿಸಿದ ಸುಂದರಿ ಝೋರಯಾ ಟರ್ ಬ್ರೀಕ್

ರಾಜಮಾರ್ಗ ಅಂಕಣ: ಝೋರಯಾ ಮಾನಸಿಕವಾಗಿ ಧೃಡವಾಗಿ ನಿಂತು ತಾನು ತನ್ನ ಮನೆಯ ಲಿವಿಂಗ್ ರೂಮಿನಲ್ಲಿ ಸೋಫಾದ ಮೇಲೆ ಕುಳಿತು ತನ್ನ ಮುದ್ದಿನ ಬೆಕ್ಕುಗಳನ್ನು ನೇವರಿಸುತ್ತಾ ಸಾವನ್ನು ಸ್ವಾಗತ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ತನ್ನ ದೇಹವನ್ನು ಪಂಚಭೂತಗಳಲ್ಲಿ ಲೀನ ಮಾಡಿ. ಅಂತ್ಯಸಂಸ್ಕಾರಕ್ಕೆ ಜನ ಸೇರಿಸುವ ಅಗತ್ಯ ಇಲ್ಲ. ನನ್ನ ಚಿತಾ ಭಸ್ಮವನ್ನು ಕಾಡಿನೊಳಗೆ ಹರಡಿ ಸಾಕು ಅಂದಿದ್ದಾರೆ.

VISTARANEWS.COM


on

ರಾಜಮಾರ್ಗ ಅಂಕಣ euthanasia zoraya ter beek
Koo

ನೆದರ್‌ಲ್ಯಾಂಡ್ ದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಕೆ ಲೋಕೋತ್ತರ ಸುಂದರಿ. ವಯಸ್ಸು ಇನ್ನೂ 28. ಆಕೆ ಉತ್ಸಾಹದ ಖಣಿ. ಮೇಲ್ನೋಟಕ್ಕೆ 100% ಫಿಟ್ ಮತ್ತು ಆರೋಗ್ಯಪೂರ್ಣ ಆಗಿದ್ದಾರೆ. ಆದರೆ ಆಕೆ ತನ್ನ ದೇಶದ ಕಾನೂನಿನ ನೆರವು ಪಡೆದುಕೊಡು ತನ್ನ ಜೀವನಕ್ಕೊಂದು ಪೂರ್ಣವಿರಾಮ ಇಡಲು ನಿರ್ಧಾರ ಮಾಡಿದ್ದಾರೆ. ಅದಕ್ಕೆ ಅವರು ಆರಿಸಿಕೊಂಡ ವಿಧಾನ ಅಂದರೆ ದಯಾಮರಣ (euthanasia)! ಅಂದರೆ ತನ್ನ ಇಷ್ಟದ ಪ್ರಕಾರ, ಇಷ್ಟದ ಜಾಗದಲ್ಲಿ, ಇಷ್ಟದ ಜನರ ಮುಂದೆ, ಇಷ್ಟದ ರೀತಿಯಲ್ಲಿ ಸಾಯುವುದು..!

ದಯಾಮರಣ – ನೆದರ್‌ಲ್ಯಾಂಡ್‌ನಲ್ಲಿ ಕಾನೂನು ಸಮ್ಮತ

ನೆದರ್‌ಲ್ಯಾಂಡ್ (Netherlands) ದೇಶವು ದಯಾಮರಣಕ್ಕೆ ಕಾನಾನು ಸಮ್ಮತಿ ನೀಡಿ 22 ವರ್ಷಗಳೇ ಸಂದಿವೆ! ಅಸಹನೀಯ ನೋವು, ಗುಣಪಡಿಸಲು ಆಗದ ಕಾಯಿಲೆ, ಮಾನಸಿಕ ಅಸ್ವಾಸ್ಥ್ಯ ಸೇರಿದಂತೆ ಆರು ಕಾರಣಕ್ಕೆ ಸರಕಾರ ದಯಾಮರಣಕ್ಕೆ ಅನುಮತಿಯನ್ನು ನೀಡುತ್ತದೆ. 2022ರಲ್ಲಿ ಆ ದೇಶದಲ್ಲಿ ಕಾನೂನಿನ ನೆರವು ಪಡೆದು 8730 ಮಂದಿ ದಯಾಮರಣದ ಮೂಲಕ ತಮ್ಮ ಬದುಕನ್ನು ಕೊನೆಗೊಳಿಸಿದ್ದಾರೆ! ಇದು ಕಳೆದ ವರ್ಷಕ್ಕಿಂತ 14% ಅಧಿಕ ಎಂದು ಅಲ್ಲಿನ ಸರಕಾರ ಹೇಳಿದೆ.

ಝೋರಯಾಗೆ ಮಾನಸಿಕ ಕಾಯಿಲೆ

ಈ ಚಂದದ ಹುಡುಗಿ ಝೊರೆಯಾ (Zoraya Ter Beek) ಬಳಲುತ್ತಿರುವುದು ಖಿನ್ನತೆ, ಉದ್ವೇಗ ಆಕೆಯ ಬಾಲ್ಯದ ಒಡನಾಡಿಗಳು. ಇತ್ತೀಚೆಗೆ ಆಟಿಸಂ ಕೂಡ ಸೇರಿಕೊಂಡು ಆಕೆಗೆ ಬದುಕೇ ಅಸಹನೀಯವಾಗುತ್ತು. ಯಾವುದೆಲ್ಲ ಔಷಧಿ, ಚಿಕಿತ್ಸಾ ವಿಜ್ಞಾನ ಮತ್ತು ಕೌನ್ಸೆಲಿಂಗ್ ನಡೆದರೂ ಅವಳಿಗೆ ಅದ್ಯಾವುದೂ ರಿಲೀಫ್ ಕೊಡಲಿಲ್ಲ. ವೈದ್ಯರೂ ʼಇನ್ನು ಸಾಧ್ಯವಿಲ್ಲ’ ಎಂದು ಹೇಳಿದ ನಂತರ ಆಕೆ ಆರಿಸಿಕೊಂಡದ್ದು ಸಾವನ್ನು! ಆತ್ಮಹತ್ಯೆ ಮಾಡಿ ಸಾಯಲು ಮನಸಿಲ್ಲ ಎಂದಾಕೆ ಗಟ್ಟಿಯಾದ ನಿರ್ಧಾರ ತೆಗೆದುಕೊಂಡ ನಂತರ ಆಕೆಗೆ ಉಳಿದದ್ದು ಒಂದೇ ಪರಿಹಾರ – ಅದು ದಯಾಮರಣ! ಆಕೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದು 2020ರಲ್ಲಿ. ಅದೀಗ ಪರ ವಿರೋಧ ಚರ್ಚೆಯಾಗಿ ಈಗ ತೀರ್ಪು ಆಕೆಯ ಪರವಾಗಿ ಬಂದಿದೆ. ಅಂದರೆ ದಯಾಮರಣಕ್ಕೆ ಅನುಮತಿ ದೊರೆತಿದೆ.

ರಾಜಮಾರ್ಗ ಅಂಕಣ euthanasia zoraya ter beek

ದಯಾಮರಣ ಹೇಗೆ?

ಅರ್ಜಿದಾರರು ಇಷ್ಟಪಡುವ ಸ್ಥಳದಲ್ಲಿ, ಇಷ್ಟಪಡುವ ಸನ್ನಿವೇಶವನ್ನು ಕ್ರಿಯೇಟ್ ಮಾಡಿ ನಿಗದಿ ಪಡಿಸಿದ ದಿನದಂದು ವೈದ್ಯರು ಆಕೆಗೆ ಒಂದು ಅರಿವಳಿಕೆಯ ಇಂಜೆಕ್ಷನ್ ನೀಡುತ್ತಾರೆ. ಆಕೆ ಕೋಮಾ ತಲುಪುವುದನ್ನು ಕಾಯುವ ವೈದ್ಯರು ನಂತರ ಹೃದಯವು ನಿಧಾನವಾಗಿ ನಿಲ್ಲುವ ಔಷಧಿ ಕೊಡುತ್ತಾರೆ. ಒಂದಿಷ್ಟೂ ನೋವು ಪಡದೆ ಅರ್ಜಿದಾರರು ನಿಧಾನವಾಗಿ ಶಾಶ್ವತ ನಿದ್ದೆಗೆ ಜಾರುತ್ತಾರೆ. ಆಗ ದಯಾಮರಣ ಸಮಿತಿಯು ಅವರನ್ನು ಪರಿಶೀಲನೆ ಮಾಡಿ ಸಾವು ಸಂಭವಿಸಿದೆ ಎಂದು ಘೋಷಣೆ ಮಾಡಿದಲ್ಲಿಗೆ ಪ್ರಕ್ರಿಯೆ ಪೂರ್ತಿ ಆಗುತ್ತದೆ.

ಸಾವನ್ನು ಸ್ವಾಗತಿಸಲು ಮಾನಸಿಕ ಸಿದ್ಧತೆ

ಝೋರಯಾ ಮಾನಸಿಕವಾಗಿ ಧೃಡವಾಗಿ ನಿಂತು ತಾನು ತನ್ನ ಮನೆಯ ಲಿವಿಂಗ್ ರೂಮಿನಲ್ಲಿ ಸೋಫಾದ ಮೇಲೆ ಕುಳಿತು ತನ್ನ ಮುದ್ದಿನ ಬೆಕ್ಕುಗಳನ್ನು ನೇವರಿಸುತ್ತಾ ಸಾವನ್ನು ಸ್ವಾಗತ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ತನ್ನ ದೇಹವನ್ನು ಪಂಚಭೂತಗಳಲ್ಲಿ ಲೀನ ಮಾಡಿ. ಅಂತ್ಯಸಂಸ್ಕಾರಕ್ಕೆ ಜನ ಸೇರಿಸುವ ಅಗತ್ಯ ಇಲ್ಲ. ನನ್ನ ಚಿತಾ ಭಸ್ಮವನ್ನು ಕಾಡಿನೊಳಗೆ ಹರಡಿ ಸಾಕು ಅಂದಿದ್ದಾರೆ.

`ನನಗೆ ಪಾಪಪ್ರಜ್ಞೆ ಕಾಡುತ್ತಿಲ್ಲ. ನನಗಾಗಿ ಯಾರೂ ಕಣ್ಣೀರು ಸುರಿಸುವ ಅಗತ್ಯ ಇಲ್ಲ. ಇದು ನಾನೇ ಆರಿಸಿಕೊಂಡ ಸಾವು. ಹಾಗಾಗಿ ನನಗೆ ಯಾವ ವಿಷಾದವೂ ಇಲ್ಲ’ ಎಂದಾಕೆ ನಗುನಗುತ್ತಾ ಹೇಳುವಾಗ ಯಾರ ಮನಸ್ಸಾದರೂ ಕರಗದೆ ಇರದು!

ಹೋಗಿ ಬಾ ಝೊರೆಯಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

Continue Reading
Advertisement
kolar lok sabha constituency
ಪ್ರಮುಖ ಸುದ್ದಿ27 mins ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Money Guide
ಮನಿ-ಗೈಡ್27 mins ago

Money Guide: ಗೃಹಸಾಲದ ಕಂತು ಪೂರ್ತಿಯಾಯ್ತೆ? ನಿಲ್ಲಿ, ನಿಮ್ಮ ಜವಾಬ್ದಾರಿ ಇನ್ನೂ ಇದೆ!

mandya lok sabha constituency
ಪ್ರಮುಖ ಸುದ್ದಿ31 mins ago

Mandya Lok Sabha Constituency : ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕುಮಾರಸ್ವಾಮಿಗೆ ಗೆಲುವು ಸಿಗುವುದೇ?

Bellary Lok Sabha Constituency
ಬಳ್ಳಾರಿ53 mins ago

Bellary Lok Sabha Constituency: ಶ್ರೀರಾಮುಲು vs ತುಕಾರಾಮ್;‌ ಗಣಿ ನಾಡಲ್ಲಿ ಯಾರು ಧಣಿ?

YouTube channels
ವೈರಲ್ ನ್ಯೂಸ್1 hour ago

YouTube channels: ಅತಿ ಹೆಚ್ಚು ಸಬ್‌ಸ್ಕ್ರೈಬರ್‌ಗಳನ್ನು ಹೊಂದಿರುವ ಟಾಪ್‌ 10 ಯುಟ್ಯೂಬ್‌ ಚಾನೆಲ್‌ಗಳಿವು!

Highest Paying Companies
ವಾಣಿಜ್ಯ1 hour ago

Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ

Pro-Palestinian Protest
ಕರ್ನಾಟಕ1 hour ago

Pro-Palestinian Protest: ಬೆಂಗಳೂರಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ; ಮಹಿಳೆಯರು ಸೇರಿ ಹಲವರು ವಶಕ್ಕೆ

Bangalore Rural Lok Sabha Constituency
ಪ್ರಮುಖ ಸುದ್ದಿ2 hours ago

Bangalore Rural Lok Sabha Constituency : ಡಿ.ಕೆ ಸುರೇಶ್​​ ನಾಗಾಲೋಟಕ್ಕೆ ಡಾ. ಮಂಜುನಾಥ್​ ಅಡ್ಡಿಯಾಗುವ ಆತಂಕ

Arvind Kejriwal
ದೇಶ2 hours ago

Arvind Kejriwal: ಮಧ್ಯಂತರ ಜಾಮೀನು ಅವಧಿ ಮುಗಿದು ಜೈಲಿಗೆ ಮರಳಿದ ಅರವಿಂದ್‌ ಕೇಜ್ರಿವಾಲ್‌; ಜೂ. 5ರ ತನಕ ನ್ಯಾಯಾಂಗ ಬಂಧನ

Bangalore North Lok Sabha Constituency
ದೇಶ2 hours ago

Bangalore North Lok Sabha Constituency : ಕ್ಷೇತ್ರ ಬದಲಾಯಿಸಿದ ಶೋಭಾ ಕರಂದ್ಲಾಜೆಗೆ ಒಲಿಯವುದೇ ಬೆಂಗಳೂರು ಉತ್ತರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌