Raja Marga Column : ಎಲಿಸ್‌ ಪೆರ‍್ರಿ RCBಗೆ ಅದೃಷ್ಟ ತಂದ ಸುಂದರಿ; ಕ್ರಿಕೆಟ್‌, ಫುಟ್ಬಾಲ್‌ ವಿಶ್ವಕಪ್‌ ಆಡಿದ ಏಕೈಕ ಮಹಿಳೆ! - Vistara News

ಸ್ಫೂರ್ತಿ ಕತೆ

Raja Marga Column : ಎಲಿಸ್‌ ಪೆರ‍್ರಿ RCBಗೆ ಅದೃಷ್ಟ ತಂದ ಸುಂದರಿ; ಕ್ರಿಕೆಟ್‌, ಫುಟ್ಬಾಲ್‌ ವಿಶ್ವಕಪ್‌ ಆಡಿದ ಏಕೈಕ ಮಹಿಳೆ!

Raja Marga Column : ಎಲಿಸ್‌ ಪೆರ‍್ರಿ ಇವರು ಆರ್‌ಸಿಬಿಯನ್ನು ಗೆಲ್ಲಿಸಿದ ಹೀರೊಯಿನ್.‌ ಈಕೆ ಅದೆಂಥಾ ಗಟ್ಟಿಗಿತ್ತಿ ಎಂದರೆ ಕ್ರಿಕೆಟ್‌ ಮತ್ತು ಫುಟ್ಬಾಲ್‌ನ ಎರಡೂ ವಿಶ್ವಕಪ್‌ಗಳಲ್ಲಿ ಆಡಿದ ಜಗತ್ತಿನ ಏಕೈಕ ಹೆಣ್ಮಗಳು. ಇಲ್ಲಿದೆ ಆಕೆಯ ರೋಚಕ ಕಹಾನಿ!

VISTARANEWS.COM


on

Raja Marga Column Elysse Perry
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
RAJA MARGA COLUMN Rajendra Bhat

Raja Marga Column : ಮೊನ್ನೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡವು ಮಹಿಳಾ ಪ್ರೀಮಿಯರ್ ಲೀಗ್ (WPL 2024) ಗೆದ್ದಾಗ ತಂಡದ ವಿಜಯಶಿಲ್ಪಿ ಯಾರು ಎಂದು ಪ್ರಶ್ನೆ ಬಂದಾಗ ಎಲ್ಲರೂ ಬೆರಳು ತೋರಿದ್ದು ಒಬ್ಬಳೇ ಕ್ರಿಕೆಟರ್ ಕಡೆಗೆ.

ಆಕೆ ಇಡೀ ಟೂರ್ನಿಯಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ತನ್ನ ತಂಡವನ್ನು ಗೆಲ್ಲಿಸುತ್ತಾ ಹೋದ ರೀತಿಗೆ ಸಮಗ್ರ RCB ಅಭಿಮಾನಿಗಳು (RCB Fans) ಫಿದಾ ಆಗಿದ್ದಾರೆ. ಸೆಮಿಫೈನಲ್ ಪಂದ್ಯದಲ್ಲಿ ಆಕೆ ಆರು ವಿಕೆಟ್ ಪಡೆದು ಮಿಂಚಿದ್ದು ಅಭಿಮಾನಿಗಳಿಗೆ ಭಾರಿ ರೋಮಾಂಚನ ಉಂಟುಮಾಡಿತ್ತು. ಆಕೆ ಎಲಿಸ್‌ ಪೆರ‍್ರಿ (Ellyse Perry).

Raja Marga Column Elysse Perry
Raja Marga Column Elysse Perry achievementRaja Marga Column Elysse Perry achievement

Raja Marga Column : ಆಕೆ ಆಸ್ಟ್ರೇಲಿಯಾದ ಮಹೋನ್ನತ ಕ್ರಿಕೆಟರ್

ಸಿಡ್ನಿ ಮಹಾನಗರದಲ್ಲಿ ಜನಿಸಿದ ಆಕೆ ಬಾಲ್ಯದಿಂದಲೂ ಕ್ರೀಡೆಯಲ್ಲಿ ಮುಳುಗಿ ಹೋಗಿದ್ದರು. ಒಂಬತ್ತು ವರ್ಷದವರೆಗೆ ಆಕೆ ಅಥ್ಲೆಟಿಕ್ಸ್, ಫುಟ್ಬಾಲ್, ಕ್ರಿಕೆಟ್, ಗಾಲ್ಫ್, ಟೆನ್ನಿಸ್ ಎಲ್ಲವನ್ನೂ ಆಡುತ್ತಾ ಬೆಳೆದವರು. ಮುಂದೆ ಆಕೆಯ ಸಹಪಾಠಿ (ಆಕೆ ಆಸ್ಟ್ರೇಲಿಯಾದ ಇನ್ನೊಬ್ಬ ಸ್ಟಾರ್ ಕ್ರಿಕೆಟರ್) ಎಲಿಸಾ ಹೀಲಿ ಆಕೆಗೆ ಒಂದೆರಡು ಕ್ರೀಡೆಗಳಲ್ಲಿ ಮಾತ್ರ ಫೋಕಸ್ ಮಾಡಲು ಹೇಳುತ್ತಾರೆ. ಅದರಂತೆ ಆಕೆ ಫುಟ್ಬಾಲ್ ಮತ್ತು ಕ್ರಿಕೆಟ್ ಎರಡು ಆಟಗಳಲ್ಲಿ ಮಾತ್ರ ಗಮನ ಕೊಡುತ್ತಾರೆ.

16ನೆಯ ವರ್ಷಕ್ಕೆ ಆಸ್ಟ್ರೇಲಿಯದ ರಾಷ್ಟ್ರೀಯ ಫುಟ್ಬಾಲ್ ತಂಡಕ್ಕೆ ಆಯ್ಕೆ ಆದವರು ಆಕೆ. ಐಸಿಸಿ
ವಿಶ್ವಕಪ್ ಮತ್ತು ಫಿಫಾ ಟೂರ್ನಿ ಎರಡನ್ನೂ ಆಡುತ್ತಾರೆ. ವಿಶ್ವಕಪ್ ಪಂದ್ಯದಲ್ಲಿ ಕೂಡ ಆಕ್ರಮಣಕಾರಿ ಆಟವನ್ನು ಆಡಿ ಗೋಲ್ ಹೊಡೆಯುತ್ತಾರೆ. ಆದರೆ ಮುಂದೆ ಆಕೆಗೆ ಆದ ದೈಹಿಕ ಗಾಯಗಳು ಫುಟ್ಬಾಲಿಗೆ ವಿದಾಯ ಹೇಳುವಂತೆ ಮಾಡಿ 2014ರಿಂದ ಆಕೆಯನ್ನು ಕ್ರಿಕೆಟ್ ಕಡೆಗೆ ಎಳೆದುಕೊಂಡು ಬರುತ್ತವೆ. ಇದು ವಿಶ್ವ ಕ್ರಿಕೆಟಿನ ಭಾಗ್ಯ ಎಂದೇ ಹೇಳಬಹುದು.

Raja Marga Column Elysse Perry bowler
Raja Marga Column Elysse Perry achievementRaja Marga Column Elysse Perry achievement

ಕ್ರಿಕೆಟ್ ಜಗತ್ತಿನಲ್ಲಿ ಆಕೆ ಮಾಡಿದ್ದೆಲ್ಲವೂ ದಾಖಲೆಗಳು!

ಟೀಮ್ ಆಸ್ಟ್ರೇಲಿಯದ ಮೂರೂ ಫಾರ್ಮಾಟ್‌ಗಳ ನಿರ್ಣಾಯಕ ಆಲ್ರೌಂಡರ್ ಆಗಿ ಆಕೆ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ನೀಡಿದ ಕೊಡುಗೆ ಅದು ಅದ್ಭುತ. ಈಗ ಅವರಿಗೆ 33 ವರ್ಷ ಪ್ರಾಯ. ಈಗಲೂ ಗಂಟೆಗೆ 120-125 ಕಿಲೋಮೀಟರ್ ವೇಗದಲ್ಲಿ ಆಕೆಯು ಬೌಲಿಂಗ್ ಮಾಡುತ್ತಾರೆ. ಆಕೆಯ ಬ್ಯಾಟಿಂಗಿನಲ್ಲಿ ಒಂದು ಅದ್ಭುತ ನಿಖರತೆ ಮತ್ತು ಪಂಚಿಂಗ್ ಇವೆ. ಆಕೆಯ ಅಕ್ರೊಬ್ಯಾಟಿಕ್ ಫೀಲ್ಡಿಂಗ್ ನೋಡಿದರೆ ನೀವು ಖಂಡಿತ ಆಕೆಯ ಪ್ರಾಯ ಮರೆಯುತ್ತೀರಿ.

ಆಕೆಯ ದಾಖಲೆಗಳು ಮೂರೂ ಫಾರ್ಮಾಟ್‌ಗಳಲ್ಲಿ ಅದ್ಭುತವಾಗಿವೆ. ಟೆಸ್ಟ್ ಕ್ರಿಕೆಟಿನಲ್ಲಿ 13 ಪಂದ್ಯಗಳಲ್ಲಿ ಆಕೆ 928 ಸ್ಕೋರ್ ಮಾಡಿದ್ದಾರೆ. ಅದರಲ್ಲಿ ಒಂದು ಡಬಲ್ ಟನ್ (213) ಕೂಡ ಇದೆ. ಸರಾಸರಿ 61.86! ಅದರ ಜೊತೆಗೆ 39 ವಿಕೆಟ್ ಆಕೆ ಈಗಾಗಲೇ ಪಡೆದಾಗಿದೆ.

144 ಏಕದಿನ ಪಂದ್ಯಗಳಲ್ಲಿ ಆಕೆ ಪೇರಿಸಿದ್ದು 3894 ರನ್ನುಗಳ ಪರ್ವತವನ್ನು. 163 ವಿಕೆಟ್ ಅವರ ಬತ್ತಳಿಕೆಯಲ್ಲಿ ಇವೆ. ಬ್ಯಾಟಿಂಗ್ ಸರಾಸರಿ 50.57! ಆಕೆ ದಿಟ್ಟವಾಗಿ ಹೋರಾಡಿ ಆಸ್ಟ್ರೇಲಿಯಾ ತಂಡಕ್ಕೆ 2 ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದಾರೆ !

Raja Marga Column Elysse Perry achievementRaja Marga Column Elysse Perry achievement

ಆಕೆ ಗೆದ್ದದ್ದು ಬರೊಬ್ಬರಿ ಆರು T20 ವಿಶ್ವಕಪ್ಪುಗಳನ್ನು!

ಆಕೆಯ T20 ದಾಖಲೆಗಳು ಇನ್ನೂ ಅದ್ಭುತವಾಗಿಯೇ ಇವೆ. 144 ಪಂದ್ಯಗಳಲ್ಲಿ 1841 ಸ್ಕೋರ್ ಮತ್ತು ಸರಾಸರಿ 31.74 ಹೊಂದಿರುವ ಆಕೆ 125 ವಿಕೆಟ್ ಕೂಡ ಪಡೆದಿದ್ದಾರೆ.

ಅದರ ಜೊತೆಗೆ ಆರು ಹೊಳೆಯುವ T20 ವಿಶ್ವಕಪ್‌ಗಳನ್ನು ಟೀಮ್ ಆಸ್ಟ್ರೇಲಿಯಾಕ್ಕೆ ಗೆಲ್ಲಿಸಿಕೊಟ್ಟ ಅಪೂರ್ವ ದಾಖಲೆ ಕೂಡ ಆಕೆಯ ಹೆಸರಿನಲ್ಲಿ ಇದೆ! ಅದರ ಜೊತೆಗೆ 2022ರ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕವೂ ಆಕೆಯ
ಶೋಕೇಸನಲ್ಲಿ ಇದೆ.

ವರ್ತಮಾನದ ಕ್ರಿಕೆಟ್ ಜಗತ್ತಿನಲ್ಲಿ ಬೇರೆ ಯಾವ ಮಹಿಳಾ ಕ್ರಿಕೆಟ್ ಆಟಗಾರರು ಈ ದಾಖಲೆಯ ಹತ್ತಿರದಲ್ಲಿಯೂ ಇಲ್ಲ ಅನ್ನುವುದು ಎಲಿಸ್‌ ಪೆರ‍್ರಿ ಸಾಧನೆ! ಅದಕ್ಕಾಗಿ ಆಕೆಯನ್ನು ‘ಜಗತ್ತಿನ ಮಹೋನ್ನತ ಮಹಿಳಾ ಕ್ರಿಕೆಟರ್’ ಎಂದು ಕ್ರಿಕೆಟ್ ಪಂಡಿತರು ಕರೆಯುತ್ತಿದ್ದಾರೆ. T20 ಕ್ರಿಕೆಟಿನಲ್ಲಿ 1000 ರನ್ ಮತ್ತು 100 ವಿಕೆಟ್ ಪಡೆದ ಮೊದಲ ಮಹಿಳಾ ಕ್ರಿಕೆಟರ್ ಅಂದರೆ ಅದು ಎಲಿಸ್‌ ಅನ್ನುವುದು ಇನ್ನೂ ಗ್ರೇಟ್.

ಇದನ್ನೂ ಓದಿ: Raja Marga Column : ಸೌಂದರ್ಯ, ಪ್ರತಿಭೆಗಳ ಸಂಗಮ ಸ್ಮೃತಿ ಮಂಧಾನಾ; ಆರ್‌ಸಿಬಿಗೆ ಕಪ್‌ ಕೊಡಿಸಿದ ಹುಡುಗಿ!

ಆಕೆಯು ಹುಟ್ಟು ಹೋರಾಟಗಾರ್ತಿ

2013ರ ಏಕದಿನದ ವಿಶ್ವಕಪ್ ಫೈನಲ್ ಪಂದ್ಯ ನೀವು ನೆನಪಿಸಿಕೊಂಡರೆ ನಿಮಗೆ ಆಕೆಯ ಗಟ್ಟಿತನವು ಅರ್ಥ ಆಗುತ್ತದೆ. ಟೀಮ್ ಆಸ್ಟ್ರೇಲಿಯಾ ಅಂದು ಫೈನಲಿಗೆ ಬಂದಿತ್ತು. ಎಲಿಸ್‌ಗೆ ಅಂದು ಮೊಣಕಾಲು ಎಲುಬು ಫ್ರ್ಯಾಕ್ಚರ್ ಆಗಿತ್ತು. ವೈದ್ಯರು ಆಕೆಗೆ ಆಡಲೇಬಾರದು ಎಂದು ಹೇಳಿದ್ದರು. ಆದರೆ ಕುಂಟುತ್ತಾ ಮೈದಾನಕ್ಕೆ ಬಂದು ಎಲಿಸ್‌ ಅಂದು ವೆಸ್ಟ್ಇಂಡೀಸ್ ವಿರುದ್ಧ ಹತ್ತು ಓವರ್ ಪೂರ್ತಿ ಬೌಲಿಂಗ್ ಮಾಡಿದ್ದರು, ಮಾತ್ರವಲ್ಲ 19 ರನ್ನಿಗೆ ಮೂರು ವಿಕೆಟ್‌ಗಳನ್ನು ಪಡೆದು ತನ್ನ ತಂಡವನ್ನು ಗೆಲ್ಲಿಸಿದ್ದರು.

Raja Marga Column Elysse Perry achievementRaja Marga Column Elysse Perry achievement
Raja Marga Column Elysse Perry achievementRaja Marga Column Elysse Perry achievement

ಮೊನ್ನೆ ಕೂಡ ಹಾಗೆಯೇ ಆಯಿತು. ಮಹಿಳಾ ಪ್ರೀಮಿಯರ್ ಲೀಗಿನ ಸೆಮಿ ಮತ್ತು ಫೈನಲ್ ಪಂದ್ಯಗಳಲ್ಲಿ ಆಕೆ ಮಾಡಿದ ಹೋರಾಟದ ಇನಿಂಗ್ಸ್‌ಗಳನ್ನು RCB ಹುಚ್ಚು ಅಭಿಮಾನಿಗಳು ಬೆರಗು ಕಣ್ಣುಗಳಿಂದ ನೋಡಿದ್ದಾರೆ.

‘ಇನ್ನೂ ನನ್ನಲ್ಲಿ ಹಲವು ವರ್ಷಗಳ ಕ್ರಿಕೆಟ್ ಜೀವಂತ ಇದೆ’ ಎಂದಿದ್ದಾರೆ ಎಲಿಸ್‌ ಪೆರ‍್ರಿ. ಏನಿದ್ದರೂ ಆಕೆ ತೋರಿದ ಧೀರೋದಾತ್ತ ಕ್ರಿಕೆಟನ್ನು ಕನ್ನಡಿಗರಂತೂ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಮೊಂಡು ಕೈಗಳಿಂದ ಜಗತ್ತನ್ನು ಗೆಲ್ಲಲು ಹೊರಟ ಹೋರಾಟಗಾರನ ಕಥೆ

ರಾಜಮಾರ್ಗ ಅಂಕಣ: ‘ಈಸಬೇಕು ಇದ್ದು ಜೈಸಬೇಕು’ ಎಂಬ ದಾಸವಾಣಿಯಂತೆ ನೀರಿಗೆ ಧುಮುಕಿದಾಗ ತನಗೆ ಕೈಗಳು ಇಲ್ಲ ಎಂಬುದನ್ನು ಮರೆಯುವ ಅವರು ಈಗಾಗಲೇ ಅಂತಾರಾಷ್ಟ್ರೀಯ ಪಾರಾ ಈಜು ಸ್ಪರ್ಧೆಯಲ್ಲಿ ಎಂಟು ಪದಕಗಳನ್ನು ಗೆದ್ದಿದ್ದಾರೆ. ಏಳು ಸಾಗರಗಳನ್ನು ಈಜಿ ಬಂದಿದ್ದಾರೆ ವಿಶ್ವಾಸ್.

VISTARANEWS.COM


on

vishwas ks rajamarga
Koo

ಪಾರಾ ಸ್ವಿಮ್ಮರ್ ವಿಶ್ವಾಸ್ ಕೆ.ಎಸ್ ಅವರ ಹೃದಯ ಗೆಲ್ಲುವ ಕಥನ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಯು ಟ್ಯೂಬ್ (Youtube) ವೇದಿಕೆಗಳಲ್ಲಿ ಈ ವಿಶ್ವಾಸ್ ಕೆ.ಎಸ್ (Vishwas KS) ಅವರ ಟೆಡ್ ಟಾಕ್ (Ted Talk) ಕೇಳುತ್ತಾ ಹೋದಂತೆ ಕಣ್ಣು ತುಂಬಿ ಬಂದು ಗಲ್ಲ ಒದ್ದೆಯಾದ ಅನುಭವ ನನಗಾಗಿದೆ. ಅವರ ಬದುಕೇ ಒಂದು ರೋಚಕವಾದ ಯಶೋಗಾಥೆ.

ಈ ವಿಶ್ವಾಸ್ ಬಿಕಾಂ ಪದವೀಧರ. ಎರಡೂ ಕೈಗಳು ಇಲ್ಲದ ಅನೇಕ ವ್ಯಕ್ತಿಗಳು ಭಿಕ್ಷೆಯನ್ನು ಬೇಡಿ ಬದುಕುತ್ತಿರುವ ಇಂದಿನ ದಿನಗಳಲ್ಲಿ ಕೋಲಾರದ ಕಾಳಹಸ್ತಿಪುರದ ಯುವಕ ವಿಶ್ವಾಸ್ ತನ್ನ ಬದುಕನ್ನು ತಾನೇ ರೂಪಿಸಿಕೊಂಡಿದ್ದಾರೆ. ಅದಕ್ಕೆ ಅವರು ಆರಿಸಿಕೊಂಡ ಕ್ಷೇತ್ರ ಅಂದರೆ ಈಜು. ‘ಈಸಬೇಕು ಇದ್ದು ಜೈಸಬೇಕು’ ಎಂಬ ದಾಸವಾಣಿಯಂತೆ ನೀರಿಗೆ ಧುಮುಕಿದಾಗ ತನಗೆ ಕೈಗಳು ಇಲ್ಲ ಎಂಬುದನ್ನು ಮರೆಯುವ ಅವರು ಈಗಾಗಲೇ ಅಂತಾರಾಷ್ಟ್ರೀಯ ಪಾರಾ ಈಜು ಸ್ಪರ್ಧೆಯಲ್ಲಿ ಎಂಟು ಪದಕಗಳನ್ನು ಗೆದ್ದಿದ್ದಾರೆ. ಏಳು ಸಾಗರಗಳನ್ನು ಈಜಿ ಬಂದಿದ್ದಾರೆ.

ಅದೇ ರೀತಿ ಮಾರ್ಷಿಯಲ್ ಆರ್ಟಿನಲ್ಲಿ ರೆಡ್ ಬೆಲ್ಟ್ ಪಡೆದಿದ್ದಾರೆ. ‘ಡಾನ್ಸ್ ಕರ್ನಾಟಕ ಡಾನ್ಸ್’ ರಿಯಾಲಿಟಿ ಶೋʼದಲ್ಲಿ ನೃತ್ಯ ಮಾಡಿದ್ದಾರೆ. ಕಾಲಿನಲ್ಲಿಯೇ ಅಡುಗೆ ಮಾಡುತ್ತಾರೆ. ಕಾಲಿನ ಬೆರಳುಗಳ ನಡುವೆ ಪೆನ್ನು ಹಿಡಿದು ಬರೆಯುತ್ತಾರೆ. ಮೊಬೈಲ್ ಆಪರೇಟ್ ಮಾಡುತ್ತಾರೆ. ಬಟ್ಟೆ ಒಗೆಯುತ್ತಾರೆ. ತನ್ನ ಕೆಲಸವನ್ನು ತಾನೇ ಮಾಡುತ್ತಾರೆ. ವೇದಿಕೆಯಲ್ಲಿ ನಿಂತು ಮೋಟಿವೇಶನ್ ಮಾತು ಆಡುತ್ತಾರೆ. ಅವರಿಗೆ ತನಗೆ ಕೈಗಳು ಇಲ್ಲ ಅನ್ನುವುದು ಮರೆತೇ ಹೋಗಿದೆ ಎಂದು ನನ್ನ ಭಾವನೆ.

ಸಣ್ಣ ಪ್ರಾಯದಲ್ಲಿ ದುರಂತ

ನಾಲ್ಕನೇ ತರಗತಿಯಲ್ಲಿ ಆದ ದುರಂತ ಅದು. ವಿಶ್ವಾಸ್ ನಾಲ್ಕನೇ ತರಗತಿಯಲ್ಲಿ ಇರುವಾಗ ಕಾಂಕ್ರೀಟ್ ಆಗ್ತಾ ಇದ್ದ ಒಂದು ಕಟ್ಟಡವನ್ನು ಹತ್ತುತ್ತಿದ್ದಾಗ ಕಾಲು ಜಾರಿ ಬೀಳುತ್ತಾರೆ. ಆಗ ಹೈ ಟೆನ್ಶನ್ ಕೇಬಲ್ ಹಿಡಿದು ನೇತಾಡುವ ಪ್ರಸಂಗ ಬರುತ್ತದೆ. ಆಗ ಅವರನ್ನು ಬಿಡಿಸುವ ಪ್ರಯತ್ನ ಮಾಡಿದ ಅವರ ಅಪ್ಪ ವಿದ್ಯುತ್ ಆಘಾತಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಾರೆ. ಈ ಹುಡುಗನು ಎರಡೂ ಕೈ ಸುಟ್ಟು ಹೋಗಿ ಈ ಸ್ಥಿತಿಗೆ ಬರುತ್ತಾರೆ.

ಆಸ್ಪತ್ರೆಯಲ್ಲಿ ಹಲವಾರು ತಿಂಗಳು ನೋವು ಪಟ್ಟು ಮಲಗಿ ಹೊರಬರುವಾಗ ಆತನ ಕೈಗೆ ಪ್ಲಾಸ್ಟಿಕ್ ಕೈ ಜೋಡಿಸಿರುತ್ತಾರೆ. ಅದು ಕೈಗಳ ಫೀಲ್ ಕೊಡದೆ ಹೋದಾಗ ಮತ್ತು ಯಾವ ಕೆಲಸಕ್ಕೂ ಬೇರೆಯವರನ್ನು ಅವಲಂಬನೆ ಮಾಡುವ ಪ್ರಸಂಗ ಬಂದಾಗ ಅದನ್ನು ಕಿತ್ತು ಬಿಸಾಡಿ ಮೊಂಡು ಕೈ ಹಿಡಿದೇ ಇಲ್ಲಿಯವರೆಗೆ ಬಂದಿದ್ದಾರೆ.

ಹಲವು ಕಡೆಯಲ್ಲಿ ಉದ್ಯೋಗ ಪ್ರಯತ್ನ ಪಟ್ಟು ಸೋತಾಗ ಡಿಪ್ರೆಸ್ ಆದದ್ದೂ ಇದೆ. ಹೊಟ್ಟೆಪಾಡಿಗಾಗಿ ಹಲವು ವೃತ್ತಿಗಳನ್ನು ಮಾಡಲು ಪ್ರಯತ್ನ ಪಟ್ಟು ಸೋತದ್ದು ಇದೆ. ಆದರೆ ಅವರ ಅದ್ಭುತವಾದ ಇಚ್ಛಾಶಕ್ತಿ ಅವರನ್ನು ಇಲ್ಲಿಯವರೆಗೆ ಕರೆದುಕೊಂಡು ಬಂದಿದೆ. ಈ ಹೋರಾಟದ ಪ್ರತೀ ಹಂತದಲ್ಲೂ ಅವರ ಅಮ್ಮ ಅವರ ಜೊತೆಗೆ ನಿಂತಿದ್ದಾರೆ. ಇತ್ತೀಚೆಗೆ ಒಬ್ಬರು ಶಿಕ್ಷಕಿ, ಲಕ್ಷ್ಮಿ ಎಂದು ಅವರ ಹೆಸರು, ಅವರನ್ನು ಪ್ರೀತಿಸಿ ಮದುವೆ ಆಗಿದ್ದಾರೆ. ಆ ದಂಪತಿಗೆ ಒಬ್ಬ ಮಗನೂ ಇದ್ದಾನೆ. ಪತ್ನಿ ಲಕ್ಷ್ಮಿ ಈಗ ವಿಶ್ವಾಸ್ ಅವರ ಸಾಧನೆಗಳಿಗೆ ಸ್ಫೂರ್ತಿಯಾಗಿ ನಿಂತಿದ್ದಾರೆ.

ಬದುಕಿನ ಕಥೆ ಸಿನೆಮಾ ಆಯಿತು.

ವಿಶ್ವಾಸ್ ಅವರ ಬದುಕಿನ ಕಥೆಯು ʻಅರಬ್ಬೀ’ ಎಂಬ ಸಿನೆಮಾ ಆಗಿ ಜನಪ್ರಿಯ ಆಗಿದೆ. ಮುಂದಿನ ಪಾರಾ ಒಲಿಂಪಿಕ್ಸನಲ್ಲಿ ಭಾಗವಹಿಸಬೇಕು ಎನ್ನುವ ಹಠದಲ್ಲಿ ವಿಶ್ವಾಸ್ ಬೆಂಗಳೂರಿನ ಬಸವನಗುಡಿಯ ಈಜುಕೊಳದಲ್ಲಿ ದಿನಕ್ಕೆ ಹಲವಾರು ಗಂಟೆ ಕಠಿಣ ಅಭ್ಯಾಸ ಮಾಡುತ್ತಿದ್ದಾರೆ. ಒಬ್ಬ ಒಳ್ಳೆಯ ಕೋಚ್ ಅವರ ನೆರವಿಗೆ ನಿಂತಿದ್ದಾರೆ.

ವಿಶ್ವಾಸದ ಕಡಲಲ್ಲಿ ಈಜುತ್ತಿರುವ ಈ ವಿಶ್ವಾಸ್ ಅವರಿಗೆ ನಿಮ್ಮ ಒಂದು ಶಾಭಾಷ್ ಹೇಳಿ ಮುಂದೆ ಹೋಗೋಣ ಅಲ್ಲವೇ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತೀಯ ಸೇನೆಯ ಬಗ್ಗೆ ಎದೆ ಉಬ್ಬಿಸಿ ನಡೆಯಲು ಇನ್ನೊಂದು ಕಾರಣ

Continue Reading

ಸ್ಫೂರ್ತಿ ಕತೆ

Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

Raja marga Column : ಆ ಹೆಣ್ಮಗಳಿಗೆ ಕಣ್ಣೇ ಕಾಣಿಸುವುದಿಲ್ಲ. ಆದರೆ, ಛಲದಿಂದ ಆಕೆ ಒಳಗಿನ ಕಣ್ಣಿಂದ ಓದಿಗಳು. ಒಂದಲ್ಲ ಎರಡು ಬಾರಿ ಯುಪಿಎಸ್ಸಿ ಪಾಸ್‌ ಮಾಡಿದಳು. ಈಗ ಆಕೆ ಜಿಲ್ಲಾಧಿಕಾರಿ.

VISTARANEWS.COM


on

Raja Marga Column Pranjal pateel
Koo
RAJAMARGA

Raja Marga Column : ಭಾರತದ ಅತ್ಯಂತ ಕ್ಲಿಷ್ಟವಾದ ಪರೀಕ್ಷೆ ಅಂದರೆ ಐಎಎಸ್. ಕೇಂದ್ರ ಸರಕಾರದ ಅಧೀನ ಸಂಸ್ಥೆಯಾದ UPSC ನಡೆಸುವ ಈ ಪರೀಕ್ಷೆಯಲ್ಲಿ‌ (UPSC Exam) ಪ್ರತೀ ವರ್ಷ 7ರಿಂದ 8 ಲಕ್ಷ ಯುವಕ – ಯುವತಿಯರು ತಮ್ಮ ಪ್ರತಿಭೆಯನ್ನು ನಿಕಷಕ್ಕೆ ಒಡ್ಡುತ್ತಿದ್ದು ತೇರ್ಗಡೆ ಆಗುವವರ ಪ್ರಮಾಣ 2-3% ಮಾತ್ರ! ಅಂತಹ ಪರೀಕ್ಷೆಯಲ್ಲಿ ಪೂರ್ಣ ಕುರುಡುತನ ಇರುವ ಪ್ರಾಂಜಲ್‌ ಪಾಟೀಲ್‌ (Pranjal Patil) ಎಂಬ ಹುಡುಗಿಯೊಬ್ಬಳು ಎರಡು ಬಾರಿ ತೇರ್ಗಡೆಯಾದರು (IAS officer) ಅಂದರೆ ನಂಬೋದು ಹೇಗೆ? ಇಲ್ಲಿದೆ ಅವರ ಕತೆ,

Raja Marga Column: ಆಕೆ ಮಹಾರಾಷ್ಟ್ರದವರು

ಪ್ರಾಂಜಲ್‌ ಪಾಟೀಲ್ ಮಹಾರಾಷ್ಟ್ರದ ಉಲ್ಲಾಸ ನಗರದವರು. ಹುಟ್ಟುವಾಗ ಆಕೆಗೆ ಮಸುಕು ಮಸುಕಾಗಿ ಕಾಣುತ್ತಿತ್ತು. ಆರು ವರ್ಷ ಪ್ರಾಯ ಆದಾಗ ಪೂರ್ತಿಯಾಗಿ ಕುರುಡುತನ ಆವರಿಸಿತ್ತು. ಸಣ್ಣ ಪ್ರಾಯದಲ್ಲಿಯೇ ಆಕೆಯ ದೊಡ್ಡ ಕನಸುಗಳಿಗೆ ಕೊಳ್ಳಿ ಇಟ್ಟ ಅನುಭವ ಆಗಿತ್ತು. ಆದರೆ ಮನೆಯವರು ಮತ್ತು ಹೆತ್ತವರು ಆಕೆಯ ಮನೋಸ್ಥೈರ್ಯವನ್ನು ಕುಸಿಯಲು ಬಿಡಲಿಲ್ಲ.

ಆಕೆ ಮಹಾ ಪ್ರತಿಭಾವಂತೆ. ದಾದರ್ ನಗರದ ಕಮಲ ಮೆಹ್ತಾ ಕುರುಡು ಮಕ್ಕಳ ಶಾಲೆಗೆ ಸೇರಿ ಪ್ರಾಥಮಿಕ ಶಿಕ್ಷಣ ಪಡೆಯುತ್ತಾರೆ. ಬ್ರೈಲ್ ಲಿಪಿಯಲ್ಲಿ ಓದಲು ಮತ್ತು ಬರೆಯಲು ಕಲಿಯುತ್ತಾರೆ. ಮುಂದೆ ಸೈಂಟ್ ಕ್ಸೇವಿಯರ್ ಕಾಲೇಜಿನಲ್ಲಿ ರಾಜನೀತಿ ಶಾಸ್ತ್ರದಲ್ಲಿ ಪದವಿ ಪಡೆಯುತ್ತಾರೆ.

Raja Marga Column Pranjal Pateel
ತಂದೆ ಮತ್ತು ತಾಯಿ ಜತೆ ಪ್ರಾಂಜಲ್‌ ಪಾಟೀಲ್‌

ಆಗ ಏನೂ ಕಾಣದಿದ್ದರೂ ಉಲ್ಲಾಸ ನಗರದ ಮನೆಯಿಂದ ಹೊರಟು ಒಬ್ಬಳೇ ಛತ್ರಪತಿ ಶಿವಾಜಿ ಟರ್ಮಿನಲ್ ನವರೆಗೆ ಹೋಗಿ ಹಿಂದೆ ಬರುತ್ತಿದ್ದರು. ಮುಂಬೈ ನಗರದ ಜನರು ತನ್ನ ಬಗ್ಗೆ ತುಂಬಾನೇ ಅನುಕಂಪವನ್ನು ಹೊಂದಿದ್ದರು ಅನ್ನುತ್ತಾರೆ ಆಕೆ.

Raja Marga Column: ಆಕೆಯ ಕನಸುಗಳಿಗೆ ಆಕಾಶವೂ ಮಿತಿ ಅಲ್ಲ!

ಮುಂದೆ ಪ್ರಾಂಜಲ್ ಹೊರಟದ್ದು ದೆಹಲಿಗೆ. ಜವಾಹರಲಾಲ್ ನೆಹರು ವಿವಿಯ ಮೂಲಕ ಆಕೆ ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಡಾಕ್ಟರೇಟ್ ಪದವಿ ಪಡೆಯುತ್ತಾರೆ. ಅದೇ ಹೊತ್ತಿಗೆ ವಿದುಷಿ ಎಂಬ ಗೆಳತಿಯ ಮಾತಿನಿಂದ ಆಕೆ ಪ್ರಭಾವಿತರಾಗುತ್ತಾರೆ. ಐಎಎಸ್ ಪರೀಕ್ಷೆಗೆ ಗಂಭೀರವಾದ ಸಿದ್ಧತೆ ನಡೆಸುವಂತೆ ವಿದುಷಿ ಆಕೆಗೆ ಸಲಹೆ ಕೊಡುತ್ತಾರೆ.

Raja Marga Column Pranjal Pateel
Pranjal pateel with Komal sing pateel

ಆಗ ಆಕೆಗೆ JAWS (Job Access With Speech) ಎಂಬ ಸಾಫ್ಟವೇರ್ ನೆರವಿಗೆ ಬರುತ್ತದೆ. ಅದು ಯಾವುದೇ ಪುಸ್ತಕವನ್ನು ಗಟ್ಟಿಯಾಗಿ ಓದಿ ಹೇಳುವ ಸಾಫ್ಟ್‌ವೇರ್. ತನ್ನ ಆಲಿಸುವ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಆಕೆ ದಿನಕ್ಕೆ 10-12 ಗಂಟೆ ಪುಸ್ತಕಗಳನ್ನು ಓದುತ್ತಾರೆ. ವಿಡಿಯೋ ಪಾಠಗಳನ್ನು ಕೇಳುತ್ತಾರೆ. ತನ್ನ ಗೆಳತಿಯ ನೆರವನ್ನು ಪಡೆಯುತ್ತಾರೆ.

ರೈಲ್ವೇಸ್ ಅವರಿಗೆ ಉದ್ಯೋಗವನ್ನು ನಿರಾಕರಿಸುತ್ತದೆ

2016ರಲ್ಲೀ ಅವರು ಭಾರತೀಯ ರೈಲ್ವೇ ಸೇವೆಗೆ ಅರ್ಜಿ ಹಾಕುತ್ತಾರೆ. ಆದರೆ ಆಕೆ ಕುರುಡಿ ಎಂಬ ಕಾರಣಕ್ಕೆ ರೈಲ್ವೇಸ್ ಅವರಿಗೆ ಉದ್ಯೋಗವನ್ನು ನಿರಾಕರಣೆ ಮಾಡುತ್ತದೆ. ಆಗ ಸಿಟ್ಟಿಗೆದ್ದ ಆಕೆ ಪ್ರಧಾನಿ ನರೇಂದ್ರ ಮೋದಿಗೆ ಮತ್ತು ರೈಲ್ವೇ ಮಂತ್ರಿ ಸುರೇಶ್ ಪ್ರಭು ಅವರಿಗೆ ನೇರವಾಗಿ ಪತ್ರ ಬರೆಯುತ್ತಾರೆ. ಆಗ ಸುರೇಶ್ ಪ್ರಭು ಅವರು ಆಕೆಯನ್ನು ಸಂಪರ್ಕ ಮಾಡಿ ನಿಮ್ಮ ವಿದ್ಯೆಗೆ ತಕ್ಕದಾದ ಉದ್ಯೋಗ ಕೊಡುವ ಭರವಸೆ ನೀಡಿದ್ದರು. ಆದರೆ ಆಗಲೇ ಐಎಎಸ್ ಪರೀಕ್ಷೆಯ ತಯಾರಿಯಲ್ಲಿ ಮುಳುಗಿದ್ದ ಪ್ರಾಂಜಲ್ ಆ ಪ್ರಸ್ತಾಪವನ್ನು ಸ್ವೀಕಾರ ಮಾಡುವುದಿಲ್ಲ.

Raja Marga Column Pranjal Pateel
ಸೀರೆ ಉಟ್ಟಾಗ ಹೀಗಿದ್ದಾರೆ ನೋಡಿ ಪ್ರಾಂಜಲ್‌ ಪಾಟೀಲ್

ಆಕೆ ಎರಡು ಬಾರಿ ಐಎಎಸ್ ಪರೀಕ್ಷೆ ತೇರ್ಗಡೆ ಆದರು!

ಅತ್ಯಂತ ಪ್ರಬಲ ಇಚ್ಛಾಶಕ್ತಿ, ನಿರಂತರ ಪ್ರಯತ್ನ, ಎಂದಿಗೂ ಬತ್ತಿ ಹೋಗದ ಸ್ಫೂರ್ತಿ, ಬೆಟ್ಟದಷ್ಟು ಆತ್ಮವಿಶ್ವಾಸ ಇವುಗಳ ಜೊತೆಗೆ 2016ರಲ್ಲಿ ಅವರು ಮೊದಲ ಬಾರಿಗೆ ಐಎಎಸ್ ಪರೀಕ್ಷೆ ಬರೆದು ಮೊದಲ ಪ್ರಯತ್ನದಲ್ಲಿಯೇ ತೇರ್ಗಡೆಯಾದರು! ಅದೂ ಯಾವ ಕೋಚಿಂಗ್ ಇಲ್ಲದೆ! ಆದರೆ ಆಲ್ ಇಂಡಿಯಾ ರ‍್ಯಾಂಕಿಂಗ್ 744 ಬಂದಿತ್ತು. ಅದು ಅವರಿಗೆ ತೃಪ್ತಿ ತರಲಿಲ್ಲ. ಯಾವುದೋ ಒಂದು ಅಜ್ಞಾತ ಇಲಾಖೆಯಲ್ಲಿ ಸಾಮಾನ್ಯ ಅಧಿಕಾರಿಯಾಗಿ ಕೆಲಸ ಮಾಡಲು ಆಕೆ ರೆಡಿ ಇರಲಿಲ್ಲ. ಅದಕ್ಕೋಸ್ಕರ ಎರಡನೇ ಬಾರಿಗೆ ಅಷ್ಟೇ ಪ್ರಯತ್ನ ಮಾಡಿ 2017ರಲ್ಲಿ ಮತ್ತೆ ಐಎಎಸ್ ಪರೀಕ್ಷೆ ಬರೆದರು. ಈ ಬಾರಿ ಕೂಡ ತೇರ್ಗಡೆ ಆದರು. ಈ ಬಾರಿ ರ‍್ಯಾಂಕಿಂಗ್ 124 ಬಂದಿತ್ತು!

Visually impaired IAS officer Pranjal pateel

ಅವರ ಕನಸಿನ ರೆಕ್ಕೆಗೆ ಸಾವಿರ ಗರಿಗಳು!

ಭಾರತದ ಮೊಟ್ಟ ಮೊದಲ ದೃಷ್ಟಿ ವಿಕಲತೆಯ ಸಾಧಕಿಯಾಗಿ ಆಕೆ ಐಎಎಸ್ ಪರೀಕ್ಷೆ ತೇರ್ಗಡೆ ಆಗಿದ್ದರು! ಲಿಖಿತ ಪರೀಕ್ಷೆಯಲ್ಲಿ ಆಕೆ ಪಡೆದ ಅಂಕಗಳು 854! ಹಾಗೂ ಸಂದರ್ಶನದಲ್ಲಿ ಆಕೆ ಪಡೆದ ಅಂಕಗಳು 179! ಒಟ್ಟು 1033 ಅನ್ನುವುದು ಕೂಡ ನಿಜವಾದ ಕ್ರೆಡಿಟ್. ತರಬೇತಿಯನ್ನು ಮುಗಿಸಿ ಮೇ 28, 2018ರಂದು ಅವರು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಸಿಸ್ಟಂಟ್ ಕಲೆಕ್ಟರ್ ಆಗಿ ನೇಮಕ ಪಡೆಯುತ್ತಾರೆ. ಮುಂದೆ ಅಕ್ಟೋಬರ್ 14, 2019ರಂದು ಸಬ್ ಕಲೆಕ್ಟರ್ ಆಗಿ ತಿರುವನಂತಪುರಂ ಜಿಲ್ಲೆಗೆ ನೇಮಕ ಪಡೆಯುತ್ತಾರೆ!

Pranjal pateel with Komal sing pateel
ಕೋಮಲ್‌ ಸಿಂಗ್‌ ಪಾಟೀಲ್‌ ಜತೆ ಮದುವೆಯಾದ ಕ್ಷಣ

ಯಾರ ಸಹಾಯ ಇಲ್ಲದೆ ತನ್ನ ಕೆಲಸಗಳನ್ನು ತಾನೇ ಮಾಡುವ, ಅದ್ಭುತವಾದ ಮೆಮೊರಿ ಪವರ್ ಹೊಂದಿರುವ, ಸಮಾಜ ಸೇವೆಯ ತೀವ್ರವಾದ ತುಡಿತ ಹೊಂದಿರುವ, ಬೆಟ್ಟವನ್ನು ಕರಗಿಸುವ ಧೈರ್ಯ ಮತ್ತು ಆತ್ಮವಿಶ್ವಾಸಗಳನ್ನು ಹೊಂದಿರುವ ಪ್ರಾಂಜಲ್ ಪಾಟೀಲ್ ಮತ್ತು ಆಕೆಯ ಗಂಡ ಕೋಮಲ್ ಸಿಂಗ್ ಪಾಟೀಲ್ ಅವರು ಇತ್ತೀಚೆಗೆ ತಮ್ಮ ಅಂಗದಾನಕ್ಕೆ ಜೊತೆಯಾಗಿ ಸಹಿ ಹಾಕಿ ಸುದ್ದಿ ಆಗಿದ್ದಾರೆ.

ಆಕೆಯ ಒಂದು ಮಾತು ನನಗೆ ಭಾರೀ ಕನೆಕ್ಟ್ ಆಗಿದ್ದು ಅದನ್ನು ಇಲ್ಲಿ ಉಲ್ಲೇಖ ಮಾಡುತ್ತೇನೆ.

SUCCESS doesn’t give us INSPIRATION. But the STRUGGLE behind the SUCCESS gives us the INSPIRATION. ಹೌದು ತಾನೇ?

ಇದನ್ನೂ ಓದಿ : Raja Marga Column : ಈ ಶಾರ್ಪ್‌ ಶೂಟರ್‌ ಅಜ್ಜಿ ಮೊದಲ ಬಾರಿ ಗನ್‌ ಹಿಡಿದದ್ದು 67ನೇ ವಯಸ್ಸಲ್ಲಿ!

Continue Reading

ಅಂಕಣ

Raja Marga Column : ಈ ಶಾರ್ಪ್‌ ಶೂಟರ್‌ ಅಜ್ಜಿ ಮೊದಲ ಬಾರಿ ಗನ್‌ ಹಿಡಿದದ್ದು 67ನೇ ವಯಸ್ಸಲ್ಲಿ!

Raja Marga Column : ಅವರೊಬ್ಬರು ಶೂಟರ್‌ ಅಜ್ಜಿ. ವಿಶ್ವದ ಮಟ್ಟದ ಸ್ಪರ್ಧೆಯಲ್ಲಿ ಮಿಂಚಿದವರು. ಅವರು ಶಾರ್ಪ್‌ ಶೂಟಿಂಗ್‌ಗಾಗಿ ಗನ್‌ ಕೈಯಲ್ಲಿ ಹಿಡಿದಾಗ ವಯಸ್ಸು 67.

VISTARANEWS.COM


on

Raja Marga Column Chandro Tomar Sharp Shooter
Koo
RAJAMARGA

Raja Marga Column : ಉತ್ತರ ಪ್ರದೇಶದ ಭಾಗಪಥ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯು ಜೋಹ್ಹರಿ. ಅಲ್ಲಿಯ ಒಬ್ಬರು ಅಜ್ಜಿ ಶೂಟಿಂಗ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಹೆಸರು ಮಾಡಿದ್ದರು. ಆಕೆ ಬದುಕಿದ್ದಾಗ ಜಗತ್ತಿನ ಅತ್ಯಂತ ಹಿರಿಯ ಶಾರ್ಪ್‌ ಶೂಟರ್ (Worlds oldest Sharp Shooter) ತಪ್ಪಿದ್ದೆ ಇಲ್ಲ ಅನ್ನೋದು ಅವರ ಹಿರಿಮೆ! ವಯಸ್ಸು ಆಕೆಯ ಮಟ್ಟಿಗೆ ಬರೇ ಒಂದು ನಂಬರ್ ಆಗಿ ಬಿಟ್ಟಿದೆ! ಅವರ ಹೆಸರು ಚಂದ್ರಾ ತೋಮರ್‌ (Chandro tomar) ಜನ ಅವರನ್ನು ಪ್ರೀತಿಯಿಂದ ‘ಶೂಟರ್ ಅಜ್ಜಿ’ (Shooter Ajji) ಎಂದು ಕರೆಯುತ್ತಾರೆ! ಏಕೆಂದರೆ ಎಂಬತ್ತರ ಹರೆಯದಲ್ಲಿ ಕೂಡ ಅವರು ಚಾಂಪಿಯನ್‌ಷಿಪ್ ಸೋತವರಲ್ಲ!

ಆಕೆ ತುಂಬಿದ ಮನೆಯ ಅಜ್ಜಿ!

ಆಕೆ ಹಳ್ಳಿಯ ಹೆಂಗಸು. ಶಾಲೆಗೆ ಹೋದವರಲ್ಲ. ತುಂಬಿದ ಮನೆಗೆ ಸೊಸೆಯಾಗಿ ಬಂದವರು. ಪ್ರೀತಿಸುವ ಗಂಡ, 5 ಮಕ್ಕಳು, 12 ಮೊಮ್ಮಕ್ಕಳು ಇರುವ ಸಂಸಾರದಲ್ಲಿ ಅವರು ಮುಳುಗಿ ಬಿಟ್ಟಿದ್ದರು. ಮನೆ ವಾರ್ತೆ, ಮನೆಯವರ ಕ್ಷೇಮ, ಅಡುಗೆ ಮಾಡುವುದು, ದನಗಳ ಚಾಕರಿ ಇಷ್ಟೆ ಗೊತ್ತು ಅವರಿಗೆ. ಶೂಟಿಂಗ್ ಬಗ್ಗೆ ಯೋಚನೆಯನ್ನು ಕೂಡ ಮಾಡಿದವರಲ್ಲ.

Raja Marga Column Chandro Tomar Sharp Shooter1
Raja Marga Column Chandra tomar

ಅವರ ಬದುಕಿನಲ್ಲಿ ತಿರುವು ಬಂದಾಗ ವಯಸ್ಸು 67!

ಅವರ ಹಳ್ಳಿಯಲ್ಲಿ ಒಂದು ಶಾರ್ಪ್ ಶೂಟರ್ ಕ್ಲಬ್ ಇತ್ತು. ಅದಕ್ಕೆ ಅವರ ಮೊಮ್ಮಗಳು ಶಿಫಾಲಿ ಆಸಕ್ತಿಯಿಂದ ಹೋಗಿ ಸೇರಿದ್ದರು. ಅಲ್ಲಿ ಹುಡುಗರೇ ಹೆಚ್ಚು ಬರುತ್ತಿದ್ದ ಕಾರಣ ಮೊಮ್ಮಗಳಿಗೆ ಜೊತೆಯಾಗಿ ಅಜ್ಜಿ ಹೋಗುತ್ತಿದ್ದರು. ದೂರದಲ್ಲಿ ನಿಂತು ಶೂಟಿಂಗ್ ನೋಡುವುದು ಮಾತ್ರ ಅಜ್ಜಿಯ ಕೆಲಸ. ಒಂದು ದಿನ ಮೊಮ್ಮಗಳು ಗನ್ ಲೋಡ್ ಆಗದೆ ಕಷ್ಟ ಪಡುತ್ತಿದ್ದಳು. ಹತ್ತಿರ ಬಂದ ಅಜ್ಜಿ ಯಾವುದೋ ಒಂದು ಮಾಯೆಯಿಂದ ಗನ್ ಲೋಡ್ ಮಾಡಿದ್ದು ಮಾತ್ರವಲ್ಲ ಬುಲ್ ಐಗೆ ಗುರಿಯಿಟ್ಟು ಶೂಟ್ ಮಾಡಿಬಿಟ್ಟರು. ಅದು ಪರ್ಫೆಕ್ಟ್ ಶೂಟ್ ಆಗಿತ್ತು! ಆ ಕ್ಲಬ್ಬಿನ ಕೋಚ್ ಫಾರೂಕ್ ಪಠಾಣ್ ಮತ್ತು ಎಲ್ಲಾ ಹುಡುಗರು ಬಿಟ್ಟ ಕಣ್ಣು ಬಿಟ್ಟು ಬೆರಗಾಗಿ ನಿಂತರು! ಅದು ಅಜ್ಜಿಯ ಜೀವನದ ಮೊದಲ ಶೂಟ್ ಆಗಿತ್ತು ಮತ್ತು ಆಗ ಅವರ ವಯಸ್ಸು ಕೇವಲ 67 ಆಗಿತ್ತು!

ಶೂಟ್ ಮಾಡಲು ಸ್ಪಷ್ಟವಾದ ದೃಷ್ಟಿ ಮತ್ತು ಕೈಗಳ ನಿಯಂತ್ರಣಗಳು ಇರಬೇಕು. ಅದು ಆ ವಯಸ್ಸಲ್ಲಿ ಅಜ್ಜಿಗೆ ಹೇಗೆ ಸಾಧ್ಯವಾಯಿತು? ನನಗಂತೂ ಅರ್ಥವಾಗದ ಪ್ರಶ್ನೆ!

Raja Marga Column : ಅಜ್ಜಿ ಮತ್ತು ಮೊಮ್ಮಗಳ ಶೂಟಿಂಗ್ ತರಬೇತಿ!

ಮುಂದೆ ಅಜ್ಜಿ ಮೊಮ್ಮಗಳ ಜೊತೆಗೆ ಶೂಟರ್ ಕ್ಲಬ್ಬಿಗೆ ಸೇರಿದರು. 1200 ಡಾಲರ್ ಬೆಲೆಯ ಪಿಸ್ತೂಲನ್ನು ಹಠ ಹಿಡಿದು ತರಿಸಿಕೊಂಡರು. ಮನೆಯ ಅಂಗಳದಲ್ಲಿ ಪ್ರೈವೇಟ್ ಶೂಟರ್ ರೇಂಜ್ ಸಿದ್ಧವಾಯಿತು. ಅಜ್ಜಿಯ ಉತ್ಸಾಹ ದಿನದಿಂದ ದಿನಕ್ಕೆ ಅಧಿಕವಾಯಿತು. ಮನೆಕೆಲಸ ಮುಗಿಸಿಕೊಂಡು ಮಧ್ಯಾಹ್ನ ಅಜ್ಜಿ ಗನ್ ಹಿಡಿದು ತರಬೇತಿಗೆ ಇಳಿದರೆ ಜಗತ್ತನ್ನೇ ಮರೆತು ಬಿಡುತ್ತಿದ್ದರು. ಮನೆಯ ಎಲ್ಲರ ಪೂರ್ಣ ಬೆಂಬಲವು ಅವರಿಗೆ ದೊರೆಯಿತು ಮತ್ತು ಸಾಧನೆಗಳ ಮೆರವಣಿಗೆಯು ಆಗಲೇ ಶುರುವಾಗಿ ಬಿಟ್ಟಿತು!
1999ರಿಂದ ನಿರಂತರ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಶೂಟಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಬಂದಿರುವ ಅಜ್ಜಿಗೆ ಈವರೆಗೆ 30 ರಾಷ್ಟ್ರಮಟ್ಟದ ಸ್ವರ್ಣ ಪದಕಗಳು ದೊರೆತಿವೆ!

Raja Marga Column Chandro Tomar Sharp Shooter1Raja Marga Column Chandro Tomar Sharp Shooter1
Raja Marga Column Chandra tomar

ಅಜ್ಜಿ ಜಗತ್ತಿನ ಅತ್ಯಂತ ಹಿರಿಯ ಶೂಟರ್ ಆದರು!

2010ರಲ್ಲಿ ವಿಶ್ವ ಹಿರಿಯರ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ರೈಫಲ್ ಮತ್ತು ಪಿಸ್ತೂಲ್ ಎರಡೂ ವಿಭಾಗಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಪದಕಗಳನ್ನು ಗೆದ್ದಿರುವ ಅಜ್ಜಿ ಮುಂದೆ ಜಗತ್ತಿನ ಅತ್ಯಂತ ಹಿರಿಯ ಶೂಟರ್ ಆದರು. ಅವರು ಗೆದ್ದಿರುವ ಒಟ್ಟು 146 ಶೂಟಿಂಗ್ ಪದಕಗಳು ಅವರ ಶೋಕೇಸಲ್ಲಿ ಇವೆ! ಅದರಲ್ಲಿ ರಾಷ್ಟ್ರಮಟ್ಟದ ಪದಕಗಳು ಮೂವತ್ತಕ್ಕೂ ಹೆಚ್ಚು! 88ರ ಹರೆಯದಲ್ಲಿ ಕೂಡ ರಾಷ್ಟ್ರ ಮತ್ತು ವಿಶ್ವ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಬಂದಿರುವ ಆಕೆ ಪದಕದ ಮೇಲೆ ಪದಕಗಳನ್ನು ಗೆದ್ದಿದ್ದಾರೆ. ಮುಂದೆ ಅದೇ ಜೋಹರಿ ಶೂಟಿಂಗ್ ಕ್ಲಬ್ಬಿನ ಮುಖ್ಯ ಕೋಚ್ ಆಗಿ ಅಜ್ಜಿ ದೀರ್ಘಕಾಲ ದುಡಿದರು.

Raja Marga Column Chanra tomar with Tapsi Pannu
ತಾಪ್ಸಿ ಪನ್ನು ಜತೆ ಚಂದ್ರಾ ತೋಮರ್‌

ಇಡೀ ಕುಟುಂಬವೇ ಶೂಟರ್ ಕುಟುಂಬ ಆಯಿತು!

ಅವರಿಂದ ಸ್ಫೂರ್ತಿ ಪಡೆದು ಅವರ ಸೊಸೆ ಸೀಮಾ ತೋಮರ್, ಮೊಮ್ಮಗಳು ಶಿಫಾಲಿ ಇಬ್ಬರು ಕೂಡ ವಿಶ್ವ ಮಟ್ಟದ ಶೂಟರ್ ಆಗಿ ಬೆಳೆದಿದ್ದಾರೆ. ಅವರ ತಂಗಿ ಪ್ರಕಾಶಿ ತೋಮರ್ ಕೂಡ ಇಂದು ಶೂಟಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ ಗೆಲ್ಲುತ್ತಿದ್ದಾರೆ. ಅಜ್ಜಿಯ ಸ್ಫೂರ್ತಿಯಿಂದ ಮುಂದೆ ಇಡೀ ತೋಮರ್ ಕುಟುಂಬ ಶೂಟರ್ ಕುಟುಂಬವೇ ಆಗಿಬಿಟ್ಟಿದೆ! ನಾನು ಸಾಯುವ ತನಕ ಶೂಟಿಂಗ್ ಬಿಡುವುದಿಲ್ಲ ಎಂದು ಅಜ್ಜಿ ಗನ್ನು ಹಿಡಿದು ನುಡಿದರೆ ಅವರ ಕಂಗಳಲ್ಲಿ ಗೆದ್ದ ನಗು ಕಾಣುತ್ತಿತ್ತು!

ಇದನ್ನೂ ಓದಿ : Raja Marga Column : ಲಸಿಕೆ ಪ್ರಯೋಗಕ್ಕಾಗಿ ಮಗನ ಪ್ರಾಣವನ್ನೇ ಒತ್ತೆ ಇಟ್ಟ ಎಡ್ವರ್ಡ್‌ ಜೆನ್ನರ್‌!

ಅಜ್ಜಿಯ ಸಾಧನೆ ಜನಪ್ರಿಯ ಸಿನೆಮಾ ಆಯಿತು!

ಅಂದ ಹಾಗೆ ಅಜ್ಜಿಯ ಬದುಕು ಮತ್ತು ಸಾಧನೆಯಿಂದ ಸ್ಫೂರ್ತಿ ಪಡೆದು ಹಿಂದಿಯಲ್ಲಿ ‘ಸಾಂಡ ಕಿ ಆಂಖ್ ‘ಎಂಬ ಸಿನಿಮಾ(2019) ಕೂಡ ಬಂದಿದ್ದು ಅದರಲ್ಲಿ ಪ್ರಖ್ಯಾತ ನಟಿಯರಾದ ತಾಪ್ಸಿ ಪನ್ನು ಮತ್ತು ಭೂಮಿ ಪೆಡ್ನೇಕರ್ ಅವರು ಪ್ರಮುಖವಾದ ಪಾತ್ರಗಳನ್ನು ಮಾಡಿದ್ದರು.

ಅಂತಹ ಅಜ್ಜಿ ಚಂದ್ರೋ ತೋಮರ್ 2021ನೆಯ ಇಸವಿಯಲ್ಲಿ ತನ್ನ 89ನೇ ವಯಸ್ಸಿಗೆ ನಿಧನರಾದರು. ಅತ್ಯಂತ ಬಡ ಕುಟುಂಬದಿಂದ ಬಂದ, ಶಾಲೆಗೆ ಹೋಗದೆ ಈ ಸಾಧನೆ ಮಾಡಿದ ಶೂಟರ್ ದಾದಿ ನಿಜಕ್ಕೂ ಗ್ರೇಟ್ ಅಲ್ವಾ?

Raja Marga Column Chandra tomar
#image_title
Continue Reading
Advertisement
puneeth kerehalli dog meat
ಕ್ರೈಂ17 mins ago

Dog Meat: ನಾಯಿ ಮಾಂಸದ ಗಲಾಟೆ, ಪುನೀತ್‌ ಕೆರೆಹಳ್ಳಿ ಪೊಲೀಸ್‌ ಠಾಣೆಯಲ್ಲೇ ತೀವ್ರ ಅಸ್ವಸ್ಥ

Family Drama Film Review
ಸಿನಿಮಾ30 mins ago

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Michel Phelps ರಾಜಮಾರ್ಗ ಅಂಕಣ
ಅಂಕಣ54 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ1 hour ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ1 hour ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ2 hours ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ15 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌