ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ಒಂದೇ ವಾರದಲ್ಲಿ ಕಮಲ ಹಿಡಿದ ಸುನಿಲ್‌ ಜಾಖರ್‌

ದೇಶ

ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ಒಂದೇ ವಾರದಲ್ಲಿ ಕಮಲ ಹಿಡಿದ ಸುನಿಲ್‌ ಜಾಖರ್‌

ಪಂಜಾಬ್ ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿದ್ದ ಸುನೀಲ್‌ ಜಾಖರ್‌ ಇತ್ತೀಚೆಗೆ ಕಾಂಗ್ರೆಸ್‌ನಿಂದ ನೋಟಿಸ್‌ ಕೂಡ ಪಡೆದಿದ್ದರು. ಅಂತಿಮವಾಗಿ ಪಕ್ಷವೊಂದು ಗ್ಯಾಂಗ್‌ ಆಗಿ ಬದಲಾಗಿದೆ ಎಂದು ಹೇಳಿ ರಾಜೀನಾಮೆ ನೀಡಿದ್ದರು.

VISTARANEWS.COM


on

Sunil Jakhar
ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ಒಂದೇ ವಾರದಲ್ಲಿ ಕಮಲ ಹಿಡಿದ ಸುನಿಲ್‌ ಜಾಖರ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಂಜಾಬ್‌ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುನಿಲ್‌ ಜಾಖರ್‌ ಇಂದು ಬಿಜೆಪಿ ಸೇರ್ಪಡೆ ಆಗಿದ್ದಾರೆ. ಕಳೆದ ವಾರ ಪಕ್ಷಕ್ಕೆ ರಾಜೀನಾಮೆ ಘೋಷಿಸುವ ಮೂಲಕ ಶಾಕ್‌ ನೀಡಿದ್ದರು. ಇಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಕಮಲ ಹಿಡಿದ ಜಾಖರ್‌ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಕುಟುಂಬದ ಮೂರು ತಲೆಮಾರುಗಳನ್ನು ನಾವು ಕಾಂಗ್ರೆಸ್‌ನಲ್ಲಿಯೇ ಕಳೆದಿದ್ದೇವೆ. ಸುಮಾರು 50 ವರ್ಷಗಳಿಂದ ಕಾಂಗ್ರೆಸ್‌ನೊಂದಿಗೆ ನನಗೆ ನಂಟಿದೆ. ಆ ಪಕ್ಷವನ್ನು ಬಿಡುವುದು ಅಷ್ಟು ಸುಲಭ ಆಗಿರಲಿಲ್ಲ ಎಂದು ಹೇಳಿದರು. ಹಾಗೇ, ನಾನು ಕಾಂಗ್ರೆಸ್‌ ತೊರೆದಿದ್ದು ಯಾವುದೇ ವೈಯಕ್ತಿಕ ಕಾರಣಕ್ಕಲ್ಲ. ಅಲ್ಲಿ ರಾಷ್ಟ್ರೀಯತೆ, ಭ್ರಾತೃತ್ವ ಮತ್ತು ಏಕತೆಗೆ ಸಂಬಂಧಪಟ್ಟ ಸಮಸ್ಯೆಗಳು ಇವೆ. ಈಗ ಕಾಂಗ್ರೆಸ್‌ ಪಕ್ಷ ಎಂಬುದು ಒಂದು ಗ್ಯಾಂಗ್‌ ಆಗಿ ಬದಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುನಿಲ್‌ ಜಾಖರ್‌ ಅವರು 2021ರ ಜುಲೈನಲ್ಲಿ ಪಂಜಾಬ್‌ ಕಾಂಗ್ರೆಸ್‌ ಸಮಿತಿ(ಪಿಪಿಸಿಸಿ) ಅಧ್ಯಕ್ಷನ ಹುದ್ದೆ ತೊರೆದಿದ್ದರು. ನವಜೋತ್‌ ಸಿಂಗ್‌ ಸಿಧುಗಾಗಿಯೇ ಇದನ್ನು ಬಿಟ್ಟುಕೊಟ್ಟಿದ್ದರು ಎಂದರೂ ತಪ್ಪಿಲ್ಲ. ಇತ್ತೀಚೆಗೆ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಚರಣ್‌ ಜಿತ್‌ ಸಿಂಗ್‌ ಛನ್ನಿಯನ್ನು ಟೀಕಿಸಿದ್ದ ಕಾರಣಕ್ಕೆ ಪಕ್ಷದಿಂದ ಶೋಕಾಸ್‌ ನೋಟಿಸ್‌ ಪಡೆದಿದ್ದರು. ಪ್ರಧಾನಿ ನರೇಂದ್ರ ಮೋದಿಯವರನ್ನು ಆಗಾಗ ಹೊಗಳುವ ಮೂಲಕವೂ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ: ಬಿಜೆಪಿ ನಾಯಕನ ಹೆಸರು ಹೇಳುತ್ತಿದ್ದಂತೆ ಸಚಿವರು ಫೋನ್‌ ಕಟ್‌ ಮಾಡಿದರು: ವಕೀಲೆ ಸಂಗೀತಾ ಶಿಕ್ಕೇರಿ ಆರೋಪ

ಸುನಿಲ್‌ ಜಾಖರ್‌ ಅವರಿಗೆ ಬಿಜೆಪಿ ರಾಜ್ಯ ಸಭಾ ಟಿಕೆಟ್‌ ನೀಡಲಿದೆ. ಅದರೊಂದಿಗೆ ಪಂಜಾಬ್‌ನ ಕೆಲವು ಜವಾಬ್ದಾರಿಯನ್ನೂ ನೀಡಲಿದೆ ಮತ್ತು ಪಂಜಾಬ್‌ ಕಾಂಗ್ರೆಸ್‌ನಲ್ಲಿ ಅನೇಕರು ಅತೃಪ್ತರಿದ್ದಾರೆ. ಇವರೆಲ್ಲ ಒಂದಲ್ಲ ಒಂದು ಕಾರಣಕ್ಕೆ ಪಕ್ಷದ ಬಗ್ಗೆ ಅಸಮಾಧಾನಹೊಂದಿದ್ದಾರೆ. ಅವರನ್ನೆಲ್ಲ ಬಿಜೆಪಿಗೆ ಕರೆದುಕೊಂಡು ಬರುವಲ್ಲಿ ಸುನೀಲ್‌ ಜಾಖರ್‌ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಮೂಲಗಳು ತಿಳಿಸಿದ್ದಾಗಿ ಕೆಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಸುನಿಲ್‌ ಜಾಖರ್‌ ಪಂಜಾಬ್‌ನ ಪ್ರಮುಖ ರಾಜಕೀಯ ನಾಯಕರು. ಕಳೆದ ವಿಧಾನಸಭೆ ಚುನಾವಣೆಗೂ ಮೊದಲು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಬೇರೆ ಪಕ್ಷ ರಚನೆ ಮಾಡಿದ್ದರು. ನಂತರ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರಾದ ಬಳಿಕ ಕಾಂಗ್ರೆಸ್‌ನ ಎರಡನೇ ಪ್ರಮುಖ ನಾಯಕ ಬಿಜೆಪಿ ಪಾಳೆಯ ಸೇರಿದಂತಾಗಿದೆ.

ಸುನಿಲ್‌ ಜಾಖರ್‌ ತಂದೆ ಬಲರಾಮ್‌ ಜಾಖರ್‌ ಅವರು 1980 ರಿಂದ 1989ರವರೆಗೆ ಲೋಕಸಭಾ ಸ್ಪೀಕರ್‌ ಆಗಿದ್ದವರು. ಮಧ್ಯಪ್ರದೇಶದ ರಾಜ್ಯಪಾಲರೂ ಆಗಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಬಲರಾಮ್‌ ಜಾಖರ್‌ ಇಂದಿರಾ ಗಾಂಧಿಗೆ ನಿಷ್ಠರಾಗಿದ್ದವರು. ಸುನಿಲ್‌ ಜಾಖರ್‌ 48 ವರ್ಷದಲ್ಲಿದ್ದಾಗ ಮೊದಲಿಗೆ ಫಾಜಿಲ್ಕಾ ಜಿಲ್ಲೆಯ ಅಬೋಹರ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಬಳಿಕ 2007 ಮತ್ತು 2012ರ ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲೂ ಗೆದ್ದಿದ್ದಾರೆ. 2012ರಿಂದ 2017ರವರೆಗೆ ಪಂಜಾಬ್‌ ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿದ್ದರು. 2017ರ ಚುನಾವಣೆಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋತರು, ಆಗ ವಿನೋದ್‌ ಖನ್ನಾ ನಿಧನದ ನಂತರ ಖಾಲಿಯಿದ್ದ ಗುರುದಾಸ್‌ಪುರ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಗೆದ್ದಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ ಕೈ ಬಿಟ್ಟ ಹಾರ್ದಿಕ್ ಪಟೇಲ್‌ ಗೆ ಬಿಜೆಪಿ, ಆಪ್‌ ಗಾಳ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Share Market Scam: ಮುಖೇಶ್ ಅಂಬಾನಿ ಡೀಪ್ ಫೇಕ್‌! 7 ಲಕ್ಷ ರೂ. ಕಳೆದುಕೊಂಡ ವೈದ್ಯೆ

ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಡೀಪ್‌ಫೇಕ್ ರೀಲ್ ಅನ್ನು ಇನ್ ಸ್ಟಾಗ್ರಾಮ್ ನಲ್ಲಿ ನೋಡಿ ಪ್ರಭಾವಿತರಾದ ಡಾ. ಪಾಟೀಲ್ ಅವರು ಹೂಡಿಕೆ (Share Market Scam) ಮಾಡಲು ನಿರ್ಧರಿಸಿ ಅವರು ನೀಡಿರುವ ಲಿಂಕ್ ಮೂಲಕ ಸಂಪರ್ಕಿಸಿದ್ದಾರೆ. ಅವರು ಕಳುಹಿಸಿರುವ ಲಿಂಕ್ ಮೂಲಕ ಆಪ್ ಡೌನ್‌ಲೋಡ್ ಮಾಡಿ ವಿವಿಧ ಖಾತೆಗಳಿಗೆ 7.1 ಲಕ್ಷ ರೂ. ಜಮೆ ಮಾಡಿದ್ದಾರೆ.

VISTARANEWS.COM


on

By

Share Market Scam
Koo

ಮುಂಬಯಿ: ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ (Mukesh Ambani) ಅವರ ಡೀಪ್‌ಫೇಕ್ (Deepfake) ರೀಲ್ ನಿಂದ ಪ್ರಭಾವಿತಳಾದ ವೈದ್ಯಯೊಬ್ಬರು “ಷೇರ್ ಮಾರ್ಕೆಟ್ ಹಗರಣ”ದಲ್ಲಿ (Share Market Scam) 7 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮುಂಬಯಿನಲ್ಲಿ (Mumbai) ನಡೆದಿದೆ. ಈ ಕುರಿತು ವೈದ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಂಧೇರಿಯಲ್ಲಿ ನೆಲೆಸಿರುವ 54 ವರ್ಷದ ಆಯುರ್ವೇದ ವೈದ್ಯರಾದ ಡಾ.ಕೆ.ಎಚ್. ಪಾಟೀಲ್ ಅವರು ಏಪ್ರಿಲ್‌ನಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ನೋಡಿ ವಂಚನೆಗೆ ಒಳಗಾಗಿದ್ದಾರೆ.

ಏಪ್ರಿಲ್ 15- 17ರ ನಡುವೆ ಷೇರು ಮಾರುಕಟ್ಟೆ ಹಗರಣದಲ್ಲಿ 7 ಲಕ್ಷ ರೂ.ಗೂ ಹೆಚ್ಚು ನಷ್ಟವನ್ನು ಕಳೆದುಕೊಂಡಿರುವುದಾಗಿ ವೈದ್ಯೆ ಡಾ. ಪಾಟೀಲ್ ದೂರಿನಲ್ಲಿ ತಿಳಿಸಿದ್ದಾರೆ. ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಡೀಪ್‌ಫೇಕ್ ರೀಲ್ ಅನ್ನು ಇನ್ ಸ್ಟಾಗ್ರಾಮ್ ನಲ್ಲಿ ನೋಡಿದ ಡಾ. ಪಾಟೀಲ್ ಅದರಿಂದ ಪ್ರಭಾವಿತರಾಗಿ ಹೂಡಿಕೆ ಮಾಡಲು ನಿರ್ಧರಿಸಿದ್ದರು. ಬಳಿಕ ಅವರನ್ನು ಲಿಂಕ್ ಮೂಲಕ ವಾಟ್ಸಾಪ್ ಗ್ರೂಪ್‌ಗೆ ಸೇರಿಸಿ ಲಾಭದ ಭರವಸೆ ನೀಡಲಾಯಿತು. ಆಪ್ ಡೌನ್‌ಲೋಡ್ ಮಾಡಿ ವಿವಿಧ ಖಾತೆಗಳಲ್ಲಿ ಹಣ ಜಮಾ ಮಾಡುವಂತೆ ಮಾಡಲಾಗಿತ್ತು ಎಂದು ಡಾ. ಪಾಟೀಲ್ ದೂರಿನಲ್ಲಿ ತಿಳಿಸಿದ್ದಾರೆ.

ಡಾ. ಪಾಟೀಲ್ ಏಪ್ರಿಲ್ 15 ರಂದು ತಮ್ಮ ಇನ್ ಸ್ಟಾ ಗ್ರಾಮ್ ಫೀಡ್‌ನಲ್ಲಿ ಡೀಪ್‌ಫೇಕ್ ವಿಡಿಯೋವನ್ನು ನೋಡಿದರು. ರಾಜೀವ್ ಶರ್ಮಾ ಟ್ರೇಡ್ ಗ್ರೂಪ್ ಹೆಸರಿನ ಟ್ರೇಡಿಂಗ್ ಅಕಾಡೆಮಿಯ ಯಶಸ್ಸನ್ನು ಪ್ರಚಾರ ಮಾಡುವ ಅಂಬಾನಿಯನ್ನು ಒಳಗೊಂಡಿರುವ ವಿಡಿಯೋ ಮತ್ತು ಹೂಡಿಕೆಯ ಮೇಲಿನ ಹೆಚ್ಚಿನ ಲಾಭಕ್ಕಾಗಿ ಬಿಸಿಎಫ್ ಅಕಾಡೆಮಿಗೆ ಸೇರಲು ಜನರನ್ನು ಒತ್ತಾಯಿಸಿತು.


ಆ ಗುಂಪನ್ನು ಆನ್‌ಲೈನ್‌ನಲ್ಲಿ ಹುಡುಕಿದಾಗ ಅವರು ಲಂಡನ್‌ ಮತ್ತು ಮುಂಬಯಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಕಚೇರಿಗಳನ್ನು ಹೊಂದಿದ್ದಾರೆಂದು ಎಂದು ತಿಳಿಯಿತು. ಡಾ. ಪಾಟೀಲ್ ಅವರು ಆನ್‌ಲೈನ್‌ನಲ್ಲಿ ಅಕಾಡೆಮಿಯನ್ನು ಸಂಪರ್ಕಿಸಿದರು. ಮೇ ಮತ್ತು ಜೂನ್ ನಡುವೆ ಒಟ್ಟು 7.1 ಲಕ್ಷ ರೂ. ಅನ್ನು ಹೂಡಿಕೆಯನ್ನು ಮೇಲ್ವಿಚಾರಣೆ ಮಾಡುವ ಖಾತೆಯನ್ನು ಒದಗಿಸಲಾಯಿತು. ಅದರಲ್ಲಿ 30 ಲಕ್ಷ ರೂ. ಲಾಭವಾಗಿರುವುದು ತೋರಿಸಿತ್ತು. ಈ ತಿಂಗಳು ಮೊತ್ತವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಅದು ಸಾಧ್ಯವಾಗಲಿಲ್ಲ. ತಾನು ಮೋಸ ಹೋಗಿರುವುದನ್ನು ಅರಿತ ಅವರು ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 419 ಮತ್ತು 420 ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 (ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಡಾ. ಪಾಟೀಲ್‌ 16 ಬ್ಯಾಂಕ್ ಖಾತೆಗಳಿಗೆ ಡಾ. ಪಾಟೀಲ್ ಹಣವನ್ನು ವರ್ಗಾಯಿಸಿದ್ದಾರೆ ಎನ್ನಲಾಗಿದೆ.

Continue Reading

ದೇಶ

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

ವಿಶಾಖಪಟ್ಟಣದ ಋಷಿಕೊಂಡ ಬೆಟ್ಟದ ಬಳಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ 500 ಕೋಟಿ ರೂ. ವೆಚ್ಚದಲ್ಲಿ ಅರಮನೆಯನ್ನು (Rushikonda Palace Issue) ನಿರ್ಮಿಸಿರುವುದು ಭಾರೀ ಟೀಕೆಗೆ ಗುರಿಯಾಗಿದೆ. ವೈಎಸ್‌ಆರ್‌ಸಿ ಆಡಳಿತದಲ್ಲಿ ನಿರ್ಮಿಸಿರುವ ಈ ಯೋಜನೆಯ ಬಗ್ಗೆ ತನಿಖೆ ನಡೆಸುವುದಾಗಿ ಈಗಿನ ಸರ್ಕಾರ ಹೇಳಿದೆ. ಏನಿದು ವಿವಾದ? ಇಲ್ಲಿದೆ ವಿಸ್ತೃತ ಮಾಹಿತಿ.

VISTARANEWS.COM


on

By

Rushikonda Palace Issue
Koo

ಆಂಧ್ರಪ್ರದೇಶದ ಋಷಿಕೊಂಡ ಬೆಟ್ಟದ ಬಳಿ (andrapradesh) ಈ ಹಿಂದೆ ಮುಖ್ಯಮಂತ್ರಿಯಾಗಿದ್ದ (former CM) ಜಗನ್ ಮೋಹನ್ ರೆಡ್ಡಿ (Y.S. Jagan Mohan Reddy) 500 ಕೋಟಿ ರೂ. ವೆಚ್ಚದಲ್ಲಿ ʼರಾಜಾ ಮಹಲ್‌ʼ ಹೆಸರಿನಲ್ಲಿ ಅರಮನೆಯನ್ನು (Rushikonda Palace) ನಿರ್ಮಿಸಿದ್ದರು. ಈಗ ಜಗನ್‌ ಸರ್ಕಾರ ಅಧಿಕಾರ ಕಳೆದುಕೊಂಡು ಟಿಡಿಪಿಯ ಎನ್‌ ಚಂದ್ರಬಾಬು ನಾಯ್ಡು ಅವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೀಗ ಈ ಅರಮನೆ ಭಾರೀ ಟೀಕೆ ಮತ್ತು ವಿವಾದಕ್ಕೆ ಗುರಿಯಾಗಿದೆ.

ಭಾರಿ ಭ್ರಷ್ಟಾಚಾರದ ಮೂಲಕ ರಾಜ್ಯ ಸರ್ಕಾರದ ಹಣವನ್ನು ಈ ಹಿಂದಿನ ಮುಖ್ಯಮಂತ್ರಿ ಜಗನ್‌ ರೆಡ್ಡಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ತೆಲುಗು ದೇಶಂ ಪಕ್ಷ (TDP), ವಿಶಾಖಪಟ್ಟಣಂನ (Vishakhapatnam) ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳ ಡ್ರೋನ್ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ಮೂಲಕ ಇದನ್ನು ಸಾರ್ವಜನಿಕರ ಗಮನಕ್ಕೆ ತಂದಿದೆ.

ಹಿಂದಿನ ವೈಎಸ್‌ಆರ್‌ಸಿ ಆಡಳಿತದಲ್ಲಿ ಋಷಿಕೊಂಡ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಭೇಟಿ ನೀಡಿದಾಗ ಋಷಿಕೊಂಡ ಅರಮನೆ ವಿವಾದ ಭುಗಿಲೆದ್ದಿತು. ಟಿಡಿಪಿ ನಾಯಕರು ಈ ಯೋಜನೆಯ ಸ್ವರೂಪ ಮತ್ತು ಪ್ರಕೃತಿಯ ಮೇಲೆ ಇದರ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿರುವ ಟಿಡಿಪಿ ನಾಯಕರು, ‘ಋಷಿಕೊಂಡ ಅರಮನೆ’ ಎಂದು ಕರೆಯಲ್ಪಡುವ ಈ ಅರಮನೆಯನ್ನು ಅಕ್ರಮವಾಗಿ ಮತ್ತು ರಹಸ್ಯವಾಗಿ ನಿರ್ಮಿಸಲಾಗಿದೆ ಎಂದು ದೂರಿದ್ದಾರೆ. ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಅವರು ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (ವೈಎಸ್‌ಆರ್‌ಸಿ) ಆಡಳಿತದಿಂದ ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೇಟಿ ನೀಡಿದ ಈ ವಿಷಯ ಹೆಚ್ಚು ಚರ್ಚೆಗೆ ಕಾರಣವಾಯಿತು. ಈ ಕಟ್ಟಡಗಳನ್ನು ‘ರಾಜ ಮಹಲ್’ ಎಂದು ಬಣ್ಣಿಸಿರುವ ಟಿಡಿಪಿ ನಾಯಕ ನಾರಾ ಲೋಕೇಶ್, ಸಾರ್ವಜನಿಕ ನಿಧಿಯ ದುರುಪಯೋಗದ ಬಗ್ಗೆ ದನಿ ಎತ್ತಿದ್ದಾರೆ.

ಋಷಿಕೊಂಡ ನಿರ್ಮಾಣ

ಸಚಿವ ನಾರಾ ಲೋಕೇಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ತಮ್ಮ ಕಳವಳವನ್ನು ವ್ಯಕ್ತಪಡಿಸಿ, “ಬಡವರು ತಮ್ಮ ಮಕ್ಕಳ ತಲೆಯ ಮೇಲೆ ಸೂರು ನಿರ್ಮಿಸಲು ಹೆಣಗಾಡುತ್ತಿದ್ದರೆ, ಅವರ ಹಣದಲ್ಲಿ ಜಗನ್‌ ಅರಮನೆಯನ್ನು ನಿರ್ಮಿಸಿದ್ದಾರೆ. ಈ ಬಗ್ಗೆ ತನಿಖೆ ಮಾಡಲಾಗುವುದುʼʼ ಎಂದಿದ್ದಾರೆ. 9.88 ಎಕರೆ ಜಮೀನಿನಲ್ಲಿ ಕಟ್ಟಡವು 5 ಎಕರೆಯಲ್ಲಿ ಇರಬೇಕು, ಉಳಿದ ಪ್ರದೇಶವು ಭೂದೃಶ್ಯ ಮತ್ತು ಪಾರ್ಕಿಂಗ್ ಪ್ರದೇಶವಾಗಿರಬೇಕು ಎಂದು ಹೇಳಲಾಗಿತ್ತು. ಆದರೆ ಬೆಟ್ಟವನ್ನು 15 ಎಕರೆ ಹೆಚ್ಚುವರಿಯಾಗಿ ಅಗೆದಿರುವುದು ದೊಡ್ಡ ಉಲ್ಲಂಘನೆಯಾಗಿದೆ ಎಂದವರು ತಿಳಿಸಿದ್ದಾರೆ.


ಇದನ್ನೂ ಓದಿ: UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

ಜಗನ್‌ ಪಕ್ಷದ ಪ್ರತಿಪಾದನೆ ಏನು?

ವಿಶಾಖಪಟ್ಟಣಂನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶವನ್ನು ಈ ಪುನರಾಭಿವೃದ್ಧಿ ಯೋಜನೆ ಹೊಂದಿದೆ ಎಂದು ಜಗನ್ ನೇತೃತ್ವದ ಪಕ್ಷವು ಪ್ರತಿಪಾದಿಸಿದೆ. ಈ ಆಸ್ತಿ ಸರ್ಕಾರಿ ಸ್ವಾಮ್ಯದಲ್ಲಿದೆ, ಖಾಸಗಿಯಲ್ಲ ಎಂದು ಹೇಳಿರುವ ಪಕ್ಷದ ಪ್ರಮುಖರು, ರಾಷ್ಟ್ರಪತಿ ಅಥವಾ ಪ್ರಧಾನಮಂತ್ರಿ ವಿಶಾಖಪಟ್ಟಣಕ್ಕೆ ಭೇಟಿ ನೀಡಿದಾಗ ಇದನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಈ ನಡುವೆಯೇ ಯೋಜನೆಯು ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳನ್ನು ಉಲ್ಲಂಘಿಸಿದ ಕಾರಣದಿಂದ ಪರಿಸರವಾದಿಗಳಿಂದಲೂ ವ್ಯಾಪಕ ವಿರೋಧವನ್ನು ಎದುರಿಸುತ್ತಿದೆ.

ಹೇಗಿದೆ ಈ ಅರಮನೆ?

9.88 ಎಕರೆ ಸಮುದ್ರಾಭಿಮುಖ ಸೈಟ್‌ನಲ್ಲಿ ಹರಡಿರುವ ಋಷಿಕೊಂಡ ಅರಮನೆಯು ಒಟ್ಟು 1,41,433 ಚದರ ಮೀಟರ್‌ಗಳ ನಿರ್ಮಾಣ ಪ್ರದೇಶದೊಂದಿಗೆ 12 ಬೆಡ್‌ ರೂಮ್‌ಗಳನ್ನು ಹೊಂದಿದೆ. ಮೂರು ಮಹಲುಗಳನ್ನು ರಚಿಸಲು ರಮಣೀಯವಾದ ಋಶಿಕೊಂಡ ಬೆಟ್ಟಗಳನ್ನು ಧ್ವಂಸಪಡಿಸಲಾಗಿದೆ. ಕೆಲವು ವಾಶ್‌ರೂಮ್‌ಗಳಂತೂ 480 ಚದರ ಅಡಿ ದೊಡ್ಡದಾಗಿದೆ. ಮೀಟಿಂಗ್ ಹಾಲ್‌ಗಳು 7,266 ಚದರ ಮೀಟರ್‌ ವ್ಯಾಪಿಸಿದೆ!

ಆಮದು ಮಾಡಿದ ದುಬಾರಿ ಮಾರ್ಬಲ್‌ಗಳನ್ನು ಬಳಸಿದ್ದು, ವಿಶಾಲವಾದ ಕಾರಿಡಾರ್‌ಗಳನ್ನು ಒಳಗೊಂಡಿದೆ. ವಾಲ್-ಟು-ವಾಲ್ ಸ್ಕ್ರೀನ್ ಹೊಂದಿರುವ ಹೋಮ್ ಥಿಯೇಟರ್ ಬ್ಲಾಕ್‌ ಇದರ ಮತ್ತೊಂದು ಪ್ರಮುಖ ಅಂಶವಾಗಿದೆ. ಸರ್ಕಾರವು ಲ್ಯಾಂಡ್‌ಸ್ಕೇಪಿಂಗ್‌ನಲ್ಲಿ 50 ಕೋಟಿ ರೂ. ಮತ್ತು ಒಳಾಂಗಣ ಅಲಂಕಾರಕ್ಕಾಗಿ 33 ಕೋಟಿ ರೂ. ವೆಚ್ಚ ಮಾಡಿದೆ ಎನ್ನಲಾಗಿದೆ. ರೆಸ್ಟ್ ರೂಮ್ಗ‌ಳನ್ನು ಒಳಗೊಂಡಂತೆ ಸಂಪೂರ್ಣ ಸಂಕೀರ್ಣದ ಉದ್ದಕ್ಕೂ ಸೆಂಟ್ರಲ್‌ ಹವಾನಿಯಂತ್ರಣವಿದೆ. ಸಮುದ್ರದ ನೋಟವನ್ನು ಹೊಂದಿರುವ ಡೈನಿಂಗ್ ಹಾಲ್, ಪ್ರತಿ ಮಲಗುವ ಕೋಣೆಯಲ್ಲಿ 12 ಹಾಸಿಗೆಗಳಿವೆ. ಸ್ಪಾ ಸೇವೆಗಳೊಂದಿಗೆ ಸ್ನಾನಗೃಹಗಳು ವಿಶೇಷ ವೈಶಿಷ್ಟ್ಯಗಳಿಂದ ಕೂಡಿದೆ.

Continue Reading

ಆಟೋಮೊಬೈಲ್

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

ದೇಶದಲ್ಲಿ ಮುಂಚೂಣಿಯಲ್ಲಿರುವ ಎಲೆಕ್ಟ್ರಿಕ್ ಸೈಕಲ್ ತಯಾರಕರಾದ ಮೋಟೋರಾಡ್ ಬಹುನಿರೀಕ್ಷಿತ ಪ್ರಭಾಸ್ ಅಭಿನಯದ “ಕಲ್ಕಿ: 2898 ಎಡಿ” ಯೊಂದಿಗೆ ವಿಶಿಷ್ಟ ಪಾಲುದಾರಿಕೆಯಲ್ಲಿ ಇ ಸೈಕಲ್ ಅನ್ನು ಪರಿಚಯಿಸುತ್ತಿದೆ.
“ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್” (Doodle V3 E-Cycle) ಎಂಬ ಹೆಸರಿನ ಈ ಸೈಕಲ್ ಚಲನಚಿತ್ರದ ಸಾಹಸಮಯ ಮನೋಭಾವ ಮತ್ತು ಭವಿಷ್ಯದ ಸೆಟ್ಟಿಂಗ್ ಅನ್ನು ಒಳಗೊಂಡಂತೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

VISTARANEWS.COM


on

By

Doodle V3 E-Cycle
Koo

ಪುಣೆ (Pune) ಮೂಲದ ಎಲೆಕ್ಟ್ರಿಕ್ ಬೈಸಿಕಲ್ ಕಂಪನಿಯಾದ ಇಮೊಟೊರಾಡ್ (EMotorad) ಇತ್ತೀಚೆಗೆ ಕಲ್ಕಿ ಸಹಭಾಗಿತ್ವದಲ್ಲಿ ಸೀಮಿತ ಆವೃತ್ತಿಯ ಇ-ಸೈಕಲ್ (Doodle V3 E-Cycle) ಅನ್ನು ಬಿಡುಗಡೆ ಮಾಡಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್ (Prabhas) ಅವರ ಅಭಿನಯದ ಮುಂಬರುವ ಆಕ್ಷನ್ ಚಿತ್ರ 2898 ಎಡಿ ಯಿಂದ (Kalki 2898 AD) ಪ್ರೇರಿತವಾದ ಇ ಸೈಕಲ್ ಇದಾಗಿದೆ.

ದೇಶದಲ್ಲಿ ಮುಂಚೂಣಿಯಲ್ಲಿರುವ ಎಲೆಕ್ಟ್ರಿಕ್ ಸೈಕಲ್ ತಯಾರಕರಾದ ಮೋಟೋರಾಡ್ ಬಹುನಿರೀಕ್ಷಿತ ಪ್ರಭಾಸ್ ಅಭಿನಯದ “ಕಲ್ಕಿ: 2898 ಎಡಿ” ಯೊಂದಿಗೆ ವಿಶಿಷ್ಟ ಪಾಲುದಾರಿಕೆಯಲ್ಲಿ ಇ ಸೈಕಲ್ ಅನ್ನು ಪರಿಚಯಿಸುತ್ತಿದೆ.
ಕಲ್ಕಿ: 2898 ಎಡಿ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದುಲ್ಕರ್ ಸಲ್ಮಾನ್, ದಿಶಾ ಪಟಾನಿ, ರಾಣಾ ದಗ್ಗುಬಾಟಿ ಮೊದಲಾದವರು ನಟಿಸಿದ್ದಾರೆ. “ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್” ಎಂಬ ಹೆಸರಿನ ಈ ಸೈಕಲ್ ಚಲನಚಿತ್ರದ ಸಾಹಸಮಯ ಮನೋಭಾವ ಮತ್ತು ಭವಿಷ್ಯದ ಸೆಟ್ಟಿಂಗ್ ಅನ್ನು ಒಳಗೊಂಡಂತೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

ಕಲ್ಕಿ: 2898 ಎಡಿ ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಆಕ್ಷನ್- ಸಾಹಸ ಚಲನಚಿತ್ರ. ಅದರ ದೃಶ್ಯ ವೈಭವ ಮತ್ತು ತಾರಾ ಬಳಗದ ಶಕ್ತಿಯನ್ನು ಸಂಯೋಜಿಸಿ ಇದನ್ನು ತಯಾರಿಸಲಾಗಿದೆ. ಮೊಟೊರಾಡ್ ನ ಸೀಮಿತ ಆವೃತ್ತಿಯ ಇ-ಸೈಕಲ್ ಜನಪ್ರಿಯ ಡೂಡಲ್ ವಿ3 ಮಾದರಿಯನ್ನು ಆಧರಿಸಿದೆ.

“ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್” ನ ಈ ವಿಶೇಷ ಆವೃತ್ತಿಯು ಚಲನಚಿತ್ರದಿಂದ ಪ್ರೇರಿತವಾದ ವಿಶೇಷ ಗ್ರಾಫಿಕ್ಸ್ ಮತ್ತು ಬಣ್ಣದ ಯೋಜನೆಗಳನ್ನು ಹೊಂದಿದೆ. ಇದು ಅಭಿಮಾನಿಗಳಿಗೆ ಸಂಗ್ರಹಿಸಬಹುದಾದಂತೆ ಮಾಡುತ್ತದೆ.
ಈ ವಿಶಿಷ್ಟವಾದ ಸೀಮಿತ ಆವೃತ್ತಿಯ ಡೂಡಲ್ ವಿ3 ಇ-ಸೈಕಲ್ ಅನ್ನು ಪರಿಚಯಿಸಲು ಪ್ರಭಾಸ್ ಅವರ ಇತ್ತೀಚಿನ ಚಲನಚಿತ್ರ ಕಲ್ಕಿಯೊಂದಿಗೆ ಸಹಕರಿಸಲು ನಾವು ರೋಮಾಂಚನಗೊಂಡಿದ್ದೇವೆ ಎಂದು ಇಮೊಟೊರಾಡ್‌ನ ಸಿಇಒ ಕುನಾಲ್ ಗುಪ್ತಾ ಹೇಳಿದರು.

ನಮ್ಮ ಪಾಲುದಾರಿಕೆಯು ನಾವೀನ್ಯತೆಗೆ ನಮ್ಮ ಬದ್ಧತೆ ಮತ್ತು ಉತ್ಪನ್ನಗಳನ್ನು ರಚಿಸುವ ನಮ್ಮ ಉತ್ಸಾಹವನ್ನು ಪ್ರತಿನಿಧಿಸುತ್ತದೆ. ಅದು ನಮ್ಮ ಗ್ರಾಹಕರ ಜೀವನಶೈಲಿ ಮತ್ತು ಆಸಕ್ತಿಗಳೊಂದಿಗೆ ಅನುರಣಿಸುತ್ತದೆ. ಅಭಿಮಾನಿಗಳಿಗೆ ಫ್ಯೂಚರಿಸ್ಟಿಕ್ ಇ-ಸೈಕಲ್ ಅನ್ನು ನೀಡಲು ನಾವು ಸಂತೋಷಪಡುತ್ತೇವೆ. ಅದು ಅವರಿಗೆ ನಿಕಟವಾಗಿ ಸಂಯೋಜಿಸಲು ಮತ್ತು ಅಂತಹ ಐಕಾನಿಕ್ ಚಲನಚಿತ್ರದ ಭಾಗವನ್ನು ಮನೆಗೆ ತೆಗೆದುಕೊಂಡು ಹೋಗಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

Doodle V3 E-Cycle


ಮುಂಗಡ ಬುಕ್ಕಿಂಗ್ ಲಭ್ಯ

ಇದರ ಬೆಲೆ 55,999 ರೂಪಾಯಿ. ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್ ಅನ್ನು ಮುಂಗಡವಾಗಿ ಬುಕ್ಕಿಂಗ್ ಮಾಡಲು 2,898 ರೂ. ಗಳ ಮುಂಗಡ ಪಾವತಿಯ ವಿಶೇಷ ಸೌಲಭ್ಯವೂ ಇದೆ.

ಇದನ್ನೂ ಓದಿ: Top 10 Motar Bike: ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಟಾಪ್ 10 ಬೈಕ್‌ಗಳಿವು

ವಿಶೇಷತೆ ಏನು?

ಕಲ್ಕಿ ಲಿಮಿಟೆಡ್ ಆವೃತ್ತಿಯು ವಿಶೇಷವಾದ “ಕಲ್ಕಿ: 2898ಎಡಿ” ನಿಂದ ಪ್ರೇರಿತವಾಗಿ ವಿನ್ಯಾಸಗೊಳಿಸಲಾಗಿದೆ. ಸುಲಭವಾಗಿ ಸಾಗಿಸಲು ಮಡಿಚಬಹುದಾದ ಫ್ರೇಮ್ ಇದರಲ್ಲಿದೆ. ವರ್ಧಿತ ಸ್ಥಿರತೆಗಾಗಿ ಫ್ಯಾಟ್ ಟೈರ್‌ಗಳು ಇದರ ವೈಶಿಷ್ಟ್ಯವಾಗಿದೆ. ವಿಶೇಷ ವಿನ್ಯಾಸದ ಜೊತೆಗೆ ಇ-ಸೈಕಲ್ ಅನ್ನು ಮಡಚಬಹುದು. ಇದು ನಗರ ಪ್ರಯಾಣಿಕರಿಗೆ ಸೂಕ್ತವಾಗಿದೆ. ಎಲ್ಲಾ ರೀತಿಯ ಭೂಪ್ರದೇಶಗಳಲ್ಲಿ ಉತ್ತಮ ಸ್ಥಿರತೆ ಮತ್ತು ಸೌಕರ್ಯಕ್ಕಾಗಿ ಇದರ ಟೈರ್‌ ಗಳು ಸೂಕ್ತವಾಗಿದೆ.

60ಕ್ಕಿಂತ ಹೆಚ್ಚು ಕಿ.ಮೀ. ವ್ಯಾಪ್ತಿ ಮತ್ತು 25ಕೆಎಂಪಿಹೆಚ್ ಗರಿಷ್ಠ ವೇಗವನ್ನು ಹೊಂದಿರುವ ಇದು ಬಹುಮುಖ ಕಾರ್ಯಕ್ಷಮತೆಗಾಗಿ ಐದು ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ವಿಶಿಷ್ಟ ವಿನ್ಯಾಸ ಮತ್ತು ಸೀಮಿತ ಲಭ್ಯತೆಯೊಂದಿಗೆ ಕಲ್ಕಿ ಲಿಮಿಟೆಡ್ ಆವೃತ್ತಿಯ ಡೂಡಲ್ ಇ-ಸೈಕಲ್ ಉತ್ಸಾಹಿಗಳು ಮತ್ತು ಚಲನಚಿತ್ರದ ಅಭಿಮಾನಿಗಳಿಗೆ ಬೇಡಿಕೆಯ ಉತ್ಪನ್ನವಾಗಿದೆ.

Continue Reading

ಧಾರ್ಮಿಕ

Vastu Tips: ತಿಳಿದಿರಲಿ, ಕನ್ನಡಿಯೂ ನುಡಿಯುತ್ತದೆ ನಮ್ಮ ಭವಿಷ್ಯ!

ಕನ್ನಡಿಯನ್ನು ಪ್ರತಿಯೊಂದು ಮನೆಯಲ್ಲೂ ವಿವಿಧ ಉದ್ದೇಶದಿಂದ ಇಡಲಾಗುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಅದು ಬಳಕೆಯಾಗುವುದು ಪ್ರತಿಬಿಂಬ ನೋಡಲು. ಹೀಗೆ ಮನೆಯಲ್ಲಿ ಇಡುವ ಕನ್ನಡಿಗಳನ್ನು ವಾಸ್ತು ಪ್ರಕಾರ (Vastu Tips) ಇರಿಸುವುದರಿಂದ ನಾವು ನಮ್ಮ ಅದೃಷ್ಟವನ್ನು ಬದಲಾಯಿಕೊಳ್ಳಬಹುದು.

VISTARANEWS.COM


on

By

Vastu Tips
Koo

ಮನೆಯಲ್ಲಿ (home) ಇಡುವ ಪ್ರತಿಯೊಂದು ವಸ್ತುವಿಗೂ ವಾಸ್ತು (Vastu Tips) ಅನ್ವಯವಾಗುತ್ತದೆ. ಅದರಲ್ಲೂ ನಾವು ಅಲಂಕಾರದ ವಿಚಾರದಲ್ಲಿ ಇಡುವ ಕನ್ನಡಿ (mirror) ನಮ್ಮ ಸೌಂದರ್ಯವನ್ನು ಬದಲಾಯಿಸುವ ಸಾಮರ್ಥ್ಯವನ್ನು ಮಾತ್ರ ಹೊಂದಿಲ್ಲ ಬದಲಾಗಿ ನಮ್ಮ ಅದೃಷ್ಟವನ್ನೂ ಬದಲಾಯಿಸುತ್ತದೆ.

ಕನ್ನಡಿಯನ್ನು ಪ್ರತಿಯೊಂದು ಮನೆಯಲ್ಲೂ ವಿವಿಧ ಉದ್ದೇಶದಿಂದ ಇಡಲಾಗುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಅದು ಬಳಕೆಯಾಗುವುದು ಪ್ರತಿಬಿಂಬ ನೋಡಲು. ಹೀಗೆ ಮನೆಯಲ್ಲಿ ಇಡುವ ಕನ್ನಡಿಗಳನ್ನು ವಾಸ್ತು ಪ್ರಕಾರ ಇರಿಸುವುದರಿಂದ ನಾವು ನಮ್ಮ ಅದೃಷ್ಟವನ್ನು ಬದಲಾಯಿಕೊಳ್ಳಬಹುದು.

ವಾಸ್ತು ಶಾಸ್ತ್ರವು ಅನೇಕ ನಂಬಿಕೆಗಳನ್ನು ಹೊಂದಿದ್ದು, ಅದರಲ್ಲಿ ಮುಖ್ಯವಾದದ್ದು ಕನ್ನಡಿಯನ್ನು ಸರಿಯಾಗಿ ಇರಿಸಿದಾಗ ಅದು ಮನೆಗೆ ಸಮೃದ್ಧಿ ಮತ್ತು ಸಂತೋಷ, ಮನೆಮಂದಿಗೆ ಅರೋಗ್ಯ ವನ್ನು ತರುತ್ತದೆ ಮತ್ತು ಅದು ಸದಾಕಾಲ ಇರುವಂತೆ ಮಾಡುತ್ತದೆ. ಹಾಗಾದರೆ ವಾಸ್ತುವಿನ ಪ್ರಕಾರ ಮನೆಯಲ್ಲಿ ಕನ್ನಡಿ ಎಲ್ಲಿ, ಹೇಗೆ ಇಡಬೇಕು ಎನ್ನುವ ಮಾಹಿತಿ ಇಲ್ಲಿದೆ.

Vastu Tips


ದಿಕ್ಕು ಮುಖ್ಯ

ಕನ್ನಡಿಯನ್ನು ಇಡಲು ದಿಕ್ಕು ಮುಖ್ಯವಾಗಿದೆ. ಸಕಾರಾತ್ಮಕ ಶಕ್ತಿಯು ಉತ್ತರದಿಂದ ದಕ್ಷಿಣಕ್ಕೆ ಮತ್ತು ಪೂರ್ವದಿಂದ ಪಶ್ಚಿಮಕ್ಕೆ ಹರಿಯುತ್ತದೆ. ಈ ಕಾರಣದಿಂದಾಗಿ ಕನ್ನಡಿಯನ್ನು ಯಾವಾಗಲೂ ವೀಕ್ಷಕರ ಮುಖವು ಪೂರ್ವ ಅಥವಾ ಉತ್ತರದ ಗೋಡೆಗೆ ಎದುರಿಸುವಂತೆ ಇರಿಸಬೇಕು. ಕನ್ನಡಿಯನ್ನು ಎಚ್ಚರಿಕೆಯಿಂದ ಇರಿಸುವುದನ್ನು ಖಚಿತಪಡಿಸಿಕೊಳ್ಳಿ. ಎರಡು ಕನ್ನಡಿಗಳು ಎಂದಿಗೂ ಪರಸ್ಪರ ನೇರವಾಗಿ ಇಡಬಾರದು. ಹೀಗೆ ಮಾಡುವುದರಿಂದ ಮನೆಯಲ್ಲಿನ ನಕಾರಾತ್ಮಕ ಶಕ್ತಿ ದೂರವಾಗುತ್ತದೆ.

ಎಷ್ಟು ಎತ್ತರ?

ಕನ್ನಡಿಯು ನೆಲದಿಂದ ನಾಲ್ಕರಿಂದ ಐದು ಅಡಿ ಎತ್ತರದಲ್ಲಿ ಇರಿಸಬೇಕು. ಹಾಸಿಗೆಯ ಪಕ್ಕದಲ್ಲಿ ದೊಡ್ಡ ಡ್ರೆಸ್ಸಿಂಗ್ ಟೇಬಲ್ ಅಥವಾ ಸೈಡ್ ಟೇಬಲ್ ಅನ್ನು ಹೊಂದುವುದು ಅದೃಷ್ಟ. ಯಾವುದೇ ಕೋಣೆಯಲ್ಲಿ ಕನ್ನಡಿಯನ್ನು ಅಳವಡಿಸುವಾಗ ನೀವು ಮಲಗಿದಾಗ ನಿಮ್ಮ ದೇಹದ ಯಾವುದೇ ಭಾಗವು ಕನ್ನಡಿಯಲ್ಲಿ ಗೋಚರಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಿ. ಪೂರ್ವ ಮತ್ತು ಉತ್ತರದಿಂದ ಧನಾತ್ಮಕ ಶಕ್ತಿಗಳು ಪಶ್ಚಿಮ ಅಥವಾ ದಕ್ಷಿಣಕ್ಕೆ ಎದುರಾಗಿರುವ ಗೋಡೆಗಳ ಮೇಲೆ ಇರುವ ಕನ್ನಡಿಗಳಿಂದ ಪ್ರತಿಫಲಿಸುತ್ತದೆ.

ಸೂಕ್ತ ಗಾತ್ರ?

ಕನ್ನಡಿಯ ಗಾತ್ರವು ಬಹಳ ಮುಖ್ಯವಾಗಿರುತ್ತದೆ. ಚದರ ಅಥವಾ ಆಯತದಂತಹ ನಾಲ್ಕು ಮೂಲೆಗಳ ಫಾರ್ಮ್ ಅನ್ನು ಆಯ್ಕೆ ಮಾಡಬಹುದು. ಚೌಕ ಮತ್ತು ಆಯತಾಕಾರದ ರೂಪಗಳು ಅದೃಷ್ಟ ಎಂದು ವಾಸ್ತು ಹೇಳುತ್ತದೆ. ಸುಂದರವಾದ ಮಾದರಿಗಳನ್ನು ರಚಿಸಲು ಚೌಕ ಮತ್ತು ಆಯತಾಕಾರದ ಕನ್ನಡಿಗಳು ತುಂಬಾ ಉಪಯುಕ್ತವಾಗಿವೆ.

ಇದನ್ನೂ ಓದಿ: Vastu Tips: ಮನೆ ಆವರಣದ ತಪ್ಪಾದ ದಿಕ್ಕಿನಲ್ಲಿ ಗಿಡ ಬೆಳೆಸಿದರೆ ಕೆಟ್ಟ ಪರಿಣಾಮ!

ತಿಳಿದಿರಲಿ

ಕನ್ನಡಿಗಳಲ್ಲಿ ಯಾವಾಗಲೂ ಸ್ಪಷ್ಟವಾದ ಚಿತ್ರವು ಗೋಚರಿಸುತ್ತದೆ ಎಂದು ಖಚಿತಪಡಿಸಿಕೊಳ್ಳಲು ಅವುಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ.

ಮನೆಯ ಈಶಾನ್ಯ ಅಥವಾ ವಾಯುವ್ಯ ದಿಕ್ಕಿನಲ್ಲಿ ಕನ್ನಡಿ ಅಥವಾ ಯಾವುದೇ ಗಾಜಿನ ವಸ್ತುವನ್ನು ಇರಿಸಿ.

ಮನೆಯಲ್ಲಿ ಯಾವುದೇ ಕನ್ನಡಿ ನಾಲ್ಕು ಅಥವಾ ಐದು ಅಡಿಗಳಿಗಿಂತ ಹೆಚ್ಚಿಲ್ಲ ಎಂದು ಖಚಿತಪಡಿಸಿಕೊಳ್ಳಿ.

ಅಪಾರದರ್ಶಕ ಬಾಗಿಲುಗಳು ಮತ್ತು ಕಿಟಕಿ ಫಲಕಗಳಿಂದ ದೂರವಿರಿ. ಅರೆಪಾರದರ್ಶಕವಾದವುಗಳನ್ನು ಆರಿಸುವುದು ಸಾಮಾನ್ಯವಾಗಿ ಯೋಗ್ಯವಾಗಿದೆ.

ಕನ್ನಡಿಗಳು ಯುವಕರು ವಿಚಲಿತರಾಗಲು ಮತ್ತು ಗಮನಹರಿಸುವಲ್ಲಿ ತೊಂದರೆಗೆ ಕಾರಣವಾಗಬಹುದು. ಆದ್ದರಿಂದ ಅವುಗಳನ್ನು ಸ್ಟಡಿ ಟೇಬಲ್‌ನಿಂದ ದೂರವಿರಿಸಿ.

Continue Reading
Advertisement
Gully cricket vibes
ಕ್ರೀಡೆ5 mins ago

Gully Cricket Vibes: ಗಲ್ಲಿ ಕ್ರಿಕೆಟ್​ನಂತೆ ಚೆಂಡು ಹುಡುಕಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Share Market Scam
ಕ್ರೈಂ15 mins ago

Share Market Scam: ಮುಖೇಶ್ ಅಂಬಾನಿ ಡೀಪ್ ಫೇಕ್‌! 7 ಲಕ್ಷ ರೂ. ಕಳೆದುಕೊಂಡ ವೈದ್ಯೆ

Tharun Sudhir sonal monteiro will get marriage
ಸಿನಿಮಾ16 mins ago

Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

Rushikonda Palace Issue
ದೇಶ30 mins ago

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

Sumit Nagal
ಕ್ರೀಡೆ36 mins ago

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Suraj Revanna Case
ಕರ್ನಾಟಕ52 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್60 mins ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ1 hour ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ2 hours ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌