ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಆಂಬುಲೆನ್ಸ್‌; ಏಳು ಮಂದಿ ದುರ್ಮರಣ

ದೇಶ

ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಆಂಬುಲೆನ್ಸ್‌; ಏಳು ಮಂದಿ ದುರ್ಮರಣ

ಬರೇಲಿಯಲ್ಲಿ ನಡೆದ ಭೀಕರ ಅಪಘಾತ (Bareilly Accident)ದಲ್ಲಿ ಚಾಲಕ ಸೇರಿ ಎಲ್ಲರೂ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ದೆಹಲಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಗಾಗಿ ವಾಪಸ್‌ ಬರುತ್ತಿದ್ದರು.

VISTARANEWS.COM


on

Accident
ಸಾಂಕೇತಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಆಂಬುಲೆನ್ಸ್‌ಗೆ ಕ್ಯಾಂಟರ್‌ ಡಿಕ್ಕಿಯಾಗಿ (Bareilly Accident) 7 ಮಂದಿ ಮೃತಪಟ್ಟಿದ್ದಾರೆ. ಈ ಆಂಬುಲೆನ್ಸ್‌ ಬರೇಲಿಯ ರಾಮಮೂರ್ತಿ ಆಸ್ಪತ್ರೆಗೆ ಸೇರಿದ್ದಾಗಿತ್ತು. ದೆಹಲಿಯಿಂದ ಬರೇಲಿಗೆ ವಾಪಸ್‌ ಬರುತ್ತಿತ್ತು. ಫತೇಹ್‌ಗಂಜ್‌ ವೆಸ್ಟ್‌ ಝೋನ್‌ ಬಳಿಯ ರಾಷ್ಟ್ರೀಯ ಹೆದ್ದಾರಿಯ ಸಂಖಾ ಸೇತುವೆ ಬಳಿ ಭೀಕರ ಅಪಘಾತ ನಡೆದಿದೆ. ಆಂಬುಲೆನ್ಸ್‌ನಲ್ಲಿ ಇದ್ದ ಆರು ಮಂದಿ ಪಿಲಿಭಿತ್‌ ನಿವಾಸಿಗಳಾಗಿದ್ದು, ಆರೋಗ್ಯ ತಪಾಸಣೆಗಾಗಿ ದೆಹಲಿ ಆಸ್ಪತ್ರೆಗೆ ಹೋಗಿದ್ದರು. ಅವರೆಲ್ಲ ಅಲ್ಲಿಂದ ಆಂಬುಲೆನ್ಸ್‌ನಲ್ಲಿ ವಾಪಸ್‌ ಬರುತ್ತಿದ್ದರು. ಆಂಬುಲೆನ್ಸ್‌ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅದಾದ ಬಳಿಕ ಕ್ಯಾಂಟರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಆಂಬುಲೆನ್ಸ್‌ ಚಾಲಕ ಸೇರಿ ಎಲ್ಲ ಏಳೂ ಜನರು ಸಾವನ್ನಪ್ಪಿದ್ದಾರೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಈ ಬಗ್ಗೆ ದುಃಖ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಕಾರ್ಯಾಲಯದ ಟ್ವಿಟರ್‌ ಅಕೌಂಟ್‌ನಿಂದ ಟ್ವೀಟ್‌ ಮಾಡಲಾಗಿದ್ದು, ಆಂಬುಲೆನ್ಸ್‌ ಮತ್ತು ಕ್ಯಾಂಟರ್‌ ಡಿಕ್ಕಿಯಲ್ಲಿ ಏಳು ಮಂದಿ ಮೃತಪಟ್ಟಿದ್ದಕ್ಕೆ ಸಿಎಂ ಯೋಗಿ ಆದಿತ್ಯನಾಥ್‌ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ರಾಯ್‌ಬರೇಲಿಯಲ್ಲಿ ದಲಿತ ಹುಡುಗನ ಮೇಲೆ ದೌರ್ಜನ್ಯ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Viral Video:ಇಂದು ನಾಮಪತ್ರ ಸಲ್ಲಿಸಿದ್ದ ಮೀಸಾ ತಮ್ಮ ಸಹೋದರ ತೇಜ್‌ ಪ್ರತಾಪ್‌ ಜೊತೆಗೆ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಹಸಿರು ಕ್ಯಾಪ್‌ ಧರಿಸಿದ ಅನೇಕ ಕಾರ್ಯಕರ್ತರು ಅವರನ್ನು ಸುತ್ತುವರಿದರು. ಆಗ ಕೋಪಗೊಂಡ ತೇಜ್‌ ಪ್ರತಾಪ್‌ ಯಾದವ್‌, ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯನ್ನು ತಳ್ಳಿ ಬೀಳಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಆತನನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೀಸಾ , ತೇಜ್‌ ಪ್ರತಾಪ್‌ನನ್ನು ಸಮಾಧಾನಪಡಿಸಿದರು.

VISTARANEWS.COM


on

Viral Video
Koo

ನವದೆಹಲಿ: ರಾಷ್ಟ್ರೀಯ ಜನತಾ ದಳ(RJD) ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌(Lalu Prasad Yadav) ಪುತ್ರ ತೇಜ್‌ ಪ್ರತಾಪ್‌ ಯಾದವ್‌(Tej Pratap Yadav) ಮತ್ತೆ ವಿವಾದಕ್ಕೀಡಾಗುವ ಮೂಲಕ ಸುದ್ದಿಯಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ(Lok Sabha Election 2024)ಪಾಟಲೀಪುರದಿಂದ ಕಣಕ್ಕಿಳಿಸಿರುವ ಸಹೋದರಿ ಮೀಸಾ ಭಾರತಿ ಪರ ಪ್ರಚಾರಕ್ಕೆಂದು ಆಗಮಿಸಿದ್ದ ತೇಜ್‌ ಪ್ರತಾಪ್‌ ಯಾದವ್‌ ಜೊತೆಗಿದ್ದ ಬೆಂಬಲಿಗನನ್ನು ವೇದಿಕೆಯಿಂದ ತಳ್ಳುವ ಮೂಲಕ ದರ್ಪ ಮೆರೆದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ವಿಡಿಯೋದಲ್ಲಿ ಏನಿದೆ?

ಇಂದು ನಾಮಪತ್ರ ಸಲ್ಲಿಸಿದ್ದ ಮೀಸಾ ತಮ್ಮ ಸಹೋದರ ತೇಜ್‌ ಪ್ರತಾಪ್‌ ಜೊತೆಗೆ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಹಸಿರು ಕ್ಯಾಪ್‌ ಧರಿಸಿದ ಅನೇಕ ಕಾರ್ಯಕರ್ತರು ಅವರನ್ನು ಸುತ್ತುವರಿದರು. ಆಗ ಕೋಪಗೊಂಡ ತೇಜ್‌ ಪ್ರತಾಪ್‌ ಯಾದವ್‌, ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯನ್ನು ತಳ್ಳಿ ಬೀಳಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಆತನನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೀಸಾ , ತೇಜ್‌ ಪ್ರತಾಪ್‌ನನ್ನು ಸಮಾಧಾನಪಡಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ತೇಜ್‌ ಪ್ರತಾಪ್‌ ವರ್ತನೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಪ್ರೀತಿ ಗಾಂಧಿ, ತೇಜ್‌ ಪ್ರತಾಪ್‌ ಯಾವುದಕ್ಕೂ ಅರ್ಹನಲ್ಲ. ಸ್ವಪಕ್ಷ ಕಾರ್ಯಕರ್ತನ ಮೇಲೆಯೇ ಬಹಳ ಕ್ರೂರವಾಗಿ ಹಲ್ಲೆ ಮಾಡುತ್ತಾರೆ. ಇದು ಮಾತು ಮತ್ತು ಕೃತಿಗಿರುವ ವ್ಯತ್ಯಾಸ ಎಂದು ಕಿಡಿ ಕಾರಿದ್ದಾರೆ.

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲೂ ಇಂತಹದ್ದೇ ಒಂದು ಘಟನೆ ನಡೆದಿದ್ದು, ತೆನಾಲಿ ಮತಗಟ್ಟೆಯಲ್ಲಿ ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾರೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಇದನ್ನೂ ಓದಿ:Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

ಏಟು ಬೀಳುತ್ತಿದ್ದಂತೆ ಮತದಾರನೂ ತಿರುಗಿ ಶಾಸಕನ ಕಪಾಳಕ್ಕೆ ಹೊಡೆದಿದ್ದಾನೆ. ಇದರ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

Continue Reading

ದೇಶ

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

Naxals: ಗಡ್ಚಿರೋಲಿ ಜಿಲ್ಲೆಯ ಕಟ್ರಂಗಟ್ಟ ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿರುವ ಕುರಿತು ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡರು. ಭಾರಿ ಪ್ರಮಾಣದ ದಾಳಿ, ಅಕ್ರಮ ಚಟುವಟಿಕೆಗೆ ಯೋಜನೆ ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಲೇ ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿದ್ದಾರೆ.

VISTARANEWS.COM


on

Naxals
Koo

ಮುಂಬೈ: ದೇಶದಲ್ಲಿ ಮಾವೋವಾದಿಗಳನ್ನು ನಿಗ್ರಹಿಸಲು ಪಣ ತೊಟ್ಟಿರುವ ಭದ್ರತಾ ಸಿಬ್ಬಂದಿಯು (Security Forces) ಪ್ರಸಕ್ತ ವರ್ಷದಲ್ಲಿ ಸಾಲು ಸಾಲಾಗಿ ಎನ್‌ಕೌಂಟರ್‌ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮತ್ತೆ ಮೂವರು ನಕ್ಸಲರನ್ನು (Naxals) ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. ಇದರೊಂದಿಗೆ ಭದ್ರತಾ ಸಿಬ್ಬಂದಿಯು ಪ್ರಸಕ್ತ ವರ್ಷದಲ್ಲಿಯೇ 100ಕ್ಕೂ ಅಧಿಕ ನಕ್ಸಲರನ್ನು ಹತ್ಯೆ ಮಾಡಿದಂತಾಗಿದೆ. ಕೆಲ ದಿನಗಳ ಹಿಂದಷ್ಟೇ ಛತ್ತೀಸ್‌ಗಢದಲ್ಲಿ 12 ಮಾವೋವಾದಿಗಳನ್ನು ಹತ್ಯೆಗೈಯಲಾಗಿತ್ತು.

“ಗಡ್ಚಿರೋಲಿ ಜಿಲ್ಲೆಯ ಕಟ್ರಂಗಟ್ಟ ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿರುವ ಕುರಿತು ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡರು. ಭಾರಿ ಪ್ರಮಾಣದ ದಾಳಿ, ಅಕ್ರಮ ಚಟುವಟಿಕೆಗೆ ಯೋಜನೆ ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಲೇ ದಾಳಿ ನಡೆಸಿದ್ದಾರೆ. ಇದೇ ವೇಳೆ ಇಬ್ಬರು ಮಹಿಳಾ ನಕ್ಸಲರು ಸೇರಿ ಒಟ್ಟು ಮೂವರನ್ನು ಹತ್ಯೆ ಮಾಡಲಾಗಿದೆ” ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Two naxals killed in encounter In Sukma

23 ನಕ್ಸಲರ ಹತ್ಯೆ

ಏಪ್ರಿಲ್‌ 2ರಂದು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ 13 ಮಂದಿ ನಕ್ಸಲರು ಹತರಾಗಿದ್ದರು. ಬಿಜಾಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಮತ್ತು ಛತ್ತೀಸ್‌ಗಢ ಪೊಲೀಸರ ಭದ್ರತಾ ಪಡೆಗಳೊಂದಿಗಿನ ಭೀಕರ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತರಾಗಿದ್ದರು. ಇದು 2024ರಲ್ಲಿ ನಡೆದ ಬೃಹತ್‌ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಎನಿಸಿತ್ತು. ಇದಾದ ಕೆಲ ದಿನಗಳ ಬಳಿಕವೂ ಮೂವರು ನಕ್ಸಲರನ್ನು ಹತ್ಯೆಗೈಯಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ 10 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

5 ತಿಂಗಳಲ್ಲಿ 100 ನಕ್ಸಲರ ಖತಂ

ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿಯು ನಕ್ಸಲರ ವಿರುದ್ಧ ಭಾರಿ ಸಮರ ಸಾರಿದ್ದಾರೆ. ಶುಕ್ರವಾರ ಹತ್ಯೆಗೈದ 12 ನಕ್ಸಲರು ಸೇರಿ ಪ್ರಸಕ್ತ ವರ್ಷದ ಐದು ತಿಂಗಳಲ್ಲಿ 100ಕ್ಕೂ ಅಧಿಕ ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. 2023ರಲ್ಲಿ ಭದ್ರತಾ ಸಿಬ್ಬಂದಿಯು 22 ಮಾವೋವಾದಿಗಳನ್ನು ಎನ್‌ಕೌಂಟರ್‌ ಮಾಡಿದ್ದರು. ಲೋಕಸಭೆ ಚುನಾವಣೆಗೆ ವೇಳೆಯೇ ತೆಲಂಗಾಣ ಗಡಿ ಹಾಗೂ ಛತ್ತೀಸ್‌ಗಢದ ಸುಕ್ಮಾ, ಬಿಜಾಪುರ ಸೇರಿ ಹಲವೆಡೆ ಮಾವೋವಾದಿಗಳ ಉಪಟಳ ಜಾಸ್ತಿ ಇರುತ್ತದೆ. ಹಾಗಾಗಿ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Encounter: ದೇಶದ್ರೋಹಿ ಮಾವೋವಾದಿಗಳಿಗೆ ಹೊಡೆತ; ಎನ್‌ಕೌಂಟರ್‌ನಲ್ಲಿ 13 ನಕ್ಸಲರ ಹತ್ಯೆ

Continue Reading

ದೇಶ

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Maldives: ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

VISTARANEWS.COM


on

Maldives
Koo

ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೆಲ ತಿಂಗಳ ಹಿಂದೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಇಷ್ಟಾದರೂ, ಚೀನಾ ಯೋಜನೆ, ದುಡ್ಡಿನ ಮುಲಾಜಿನಿಂದಾಗಿ ಮಾಲ್ಡೀವ್ಸ್‌ನಲ್ಲಿರುವ ಭಾರತದ ಸೈನಿಕರನ್ನು ವಾಪಸ್‌ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, “ಭಾರತವು ಮಾಲ್ಡೀವ್ಸ್‌ಗೆ ನೀಡಿರುವ ಮೂರು ಯುದ್ಧವಿಮಾನಗಳನ್ನು ನಿರ್ವಹಿಸುವ ಪೈಲಟ್‌ಗಳೇ ನಮ್ಮಲ್ಲಿಲ್ಲ” ಎಂಬುದಾಗಿ ಮಾಲ್ಡೀವ್ಸ್‌ ತಿಳಿಸಿದೆ. ಇದು ಮಾಲ್ಡೀವ್ಸ್‌ (Maldives) ಸೇನೆಯ ಅದಕ್ಷತೆಗೆ ನಿದರ್ಶನ ಎಂದು ಹೇಳಲಾಗುತ್ತಿದೆ.

ಮಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಸ್ಸನ್‌ ಮೌಮೂನ್‌, “ಭಾರತ ನೀಡಿದ ಮೂರು ವಿಮಾನಗಳನ್ನು ಹಾರಿಸುವ ಕೌಶಲವು ನಮ್ಮ ಪೈಲಟ್‌ಗಳಿಗೆ ಇಲ್ಲ. ಅಂತಹ ಪರವಾನಗಿ ಹೊಂದಿರುವ ಪೈಲಟ್‌ಗಳು ಮಾಲ್ಡೀವ್ಸ್‌ ಸೇನೆಯಲ್ಲಿ ಇಲ್ಲ” ಎಂದು ಹೇಳಿದ್ದಾರೆ. ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಇದನ್ನೂ ಓದಿ: Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Continue Reading

ದೇಶ

Rahul Gandhi: ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್‌: ವಿಡಿಯೋ ವೈರಲ್‌

Rahul Gandhi:ರಾಯ್‌ ಬರೇಲಿಯಲ್ಲಿ ಇಂದು ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಆಪ್ತ ಕೆ.ಎಲ್‌ ಶರ್ಮಾ ಜೊತೆ ಭಾಗಿಯಾದ ರಾಹುಲ್‌ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಭಾಷಣದ ಕೊನೆಯಲ್ಲಿ ಕಾರ್ಯಕರ್ತರು ರಾಹುಲ್‌ ಗಾಂಧಿಯವರನ್ನು ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಆಗ ವೇದಿಕೆಯಲ್ಲಿದ್ದ ಪ್ರಿಯಾಂಕಾ, ರಾಹುಲ್‌ ಬಳಿಗೆ ಬಂದು ಸಭಿಕರು ಏನೋ ಕೇಳುತ್ತಿದ್ದಾರೆ ನೋಡಿ ಅಂದಿದ್ದಾರೆ. ತಕ್ಷಣ ರಾಹುಲ್‌ ಏನು ಎಂದು ಪ್ರಶ್ನಿಸಿದ್ದಾರೆ. ಆಗ ಕಾರ್ಯಕರ್ತರು ನಿಮ್ಮ‌ ಮದುವೆ ಯಾವಾಗ ಎಂದು ಮತ್ತೊಮ್ಮೆ ಕೇಳಿದ್ದಾರೆ. ಆಗ ನಗುತ್ತಾ ಉತ್ತರಿಸಿದ ಅಬ್‌ ಜಲ್ದೀ ಹೀ ಕರ್ನೀ ಪಡೇಗಿ(ಬೇಗ ಮದುವೆ ಆಗ್ಲೇ ಬೇಕಿದೆ) ಎಂದು ಹೇಳಿದ್ದಾರೆ.

VISTARANEWS.COM


on

Rahul Gandhi
Koo

ರಾಯ್‌ಬರೇಲಿ: ಸದಾ ರಾಜಕೀಯದಲ್ಲಿ ಸಕ್ರಿಯರಾಗಿರುವ ಕಾಂಗ್ರೆಸ್‌ ಮುಖಂಡ(Congress Leader) ರಾಹುಲ್‌ ಗಾಂಧಿ(Rahul Gandhi) ಇನ್ನೂ ಎಲಿಜಿಬಲ್‌ ಬ್ಯಾಚುರಲ್‌ ಆಗಿಯೇ ಉಳಿದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರು ಯಾವಾಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ ಎಂಬ ಪ್ರಶ್ನೆ ಅವರ ಬೆಂಬಲಿಗರಲ್ಲಿ ಇದ್ದೇ ಇದೆ. ಆದರೂ ಅದ್ಯಾವುದಕ್ಕೂ ತಲೆಗೆಡಿಸಿಕೊಳ್ಳದ ರಾಹುಲ್‌ ಆ ಬಗ್ಗೆ ಮೌನ ತಳೆದಿದ್ದರು. ಈ ಬಾರಿ ಲೋಕಸಭಾ ಚುನಾವಣೆ(Lok Sabha Election 2024)ಯಲ್ಲಿ ರಾಯ್‌ ಬರೇಲಿಯಿಂದಲೂ ಕಣಕ್ಕಿಳಿದಿರುವ ರಾಹುಲ್‌ ಗಾಂಧಿ ಇಂದು ಭಾಗಿಯಾದ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ತಮ್ಮ ಮದುವೆ ಬಗ್ಗೆ ಮೌನ ಮುರಿದಿದ್ದಾರೆ.

ರಾಯ್‌ ಬರೇಲಿಯಲ್ಲಿ ಇಂದು ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಆಪ್ತ ಕೆ.ಎಲ್‌ ಶರ್ಮಾ ಜೊತೆ ಭಾಗಿಯಾದ ರಾಹುಲ್‌ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಭಾಷಣದ ಕೊನೆಯಲ್ಲಿ ಕಾರ್ಯಕರ್ತರು ರಾಹುಲ್‌ ಗಾಂಧಿಯವರನ್ನು ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಆಗ ವೇದಿಕೆಯಲ್ಲಿದ್ದ ಪ್ರಿಯಾಂಕಾ, ರಾಹುಲ್‌ ಬಳಿಗೆ ಬಂದು ಸಭಿಕರು ಏನೋ ಕೇಳುತ್ತಿದ್ದಾರೆ ನೋಡಿ ಅಂದಿದ್ದಾರೆ. ತಕ್ಷಣ ರಾಹುಲ್‌ ಏನು ಎಂದು ಪ್ರಶ್ನಿಸಿದ್ದಾರೆ. ಆಗ ಕಾರ್ಯಕರ್ತರು ನಿಮ್ಮ‌ ಮದುವೆ ಯಾವಾಗ ಎಂದು ಮತ್ತೊಮ್ಮೆ ಕೇಳಿದ್ದಾರೆ. ಆಗ ನಗುತ್ತಾ ಉತ್ತರಿಸಿದ ಅಬ್‌ ಜಲ್ದೀ ಹೀ ಕರ್ನೀ ಪಡೇಗಿ(ಬೇಗ ಮದುವೆ ಆಗ್ಲೇ ಬೇಕಿದೆ) ಎಂದು ಹೇಳಿದ್ದಾರೆ.

ರಾಯ್ ಬರೇಲಿಯಲ್ಲಿ ರಾಹುಲ್‌ ಭಾವುಕ ಮಾತು

ರಾಯ್‌ಬರೇಲಿಯ ಮಹಾರಾಜ್‌ಗಂಜ್‌ನಲ್ಲಿ ಭಾವನಾತ್ಮಕವಾಗಿ ಮಾತನಾಡಿದ ರಾಹುಲ್‌ ಗಾಂಧಿ, ರಾಯ್‌ ಬರೇಲಿಯ ಜೊತೆ ನಮಗೆ 100 ವರ್ಷಗಳ ನಂಟಿದೆ. ಕೆಲವು ದಿನಗಳ ಹಿಂದೆ ನಾನು ನನ್ನ ಅಮ್ಮನ ಜೊತೆ ಕುಳಿತು ಮಾತನಾಡುವಾಗ ನನಗೆ ಇಬ್ಬರು ತಾಯಂದಿರು ಒಬ್ಬರು ಸೋನಿಯಾ ಮತ್ತೊಬ್ಬರು ಇಂದಿರಾ ಗಾಂಧಿ ಎಂದು ಹೇಳಿದ್ದೆ. ಆ ಮಾತು ನನ್ನ ತಾಯಿಗೆ ಇಷ್ಟ ಆಗಿರಲಿಲ್ಲ. ನಾನು ಆಮೇಲೆ ನಿಧಾನವಾಗಿ ಅವರಿಗೆ ವಿವರಿಸಿದೆ.. ತನ್ನ ಮಕ್ಕಳಿಗೆ ಸರಿಯಾದ ದಾರಿ ತೋರಿಸಿ ಅವರನ್ನು ರಕ್ಷಿಸುವವಳೇ ನಿಜವಾದ ತಾಯಿ. ನನ್ನ ಇಬ್ಬರು ತಾಯಂದಿರೂ ನನಗೆ ಅದನ್ನು ಮಾಡಿದ್ದಾರೆ. ಈ ಕ್ಷೇತ್ರ ನನ್ನ ಇಬ್ಬರೂ ತಾಯಂದಿರಿಗೂ ಕರ್ಮಭೂಮಿ. ಹೀಗಾಗಿಯೇ ನಾನು ರಾಯ್‌ ಬರೇಲಿಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದರು

ಇದನ್ನೂ ಓದಿ:Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

ಬಿಜೆಪಿ ಮತ್ತು ಆರ್‌ ಎಸ್‌ಎಸ್‌ ಸಂವಿಧಾನವನ್ನು ಕೊನೆಗೊಳಿಸುವುದಾಗಿ ಘೋಷಿಸಿದೆ. ಅವರು ಅಧಿಕಾರಕ್ಕೆ ಬಂದ ಕೂಡಲೇ ಸಂವಿಧಾನವನ್ನೇ ಬದಲಿಸುತ್ತೇವೆ ಎಂದಿದ್ದರು. ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ನಾನು ಘೋಷಿಸುತ್ತೇನೆ ಎಂದರು

Continue Reading
Advertisement
Viral Video
ದೇಶ1 min ago

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Naxals
ದೇಶ20 mins ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

sslc result
ಶಿಕ್ಷಣ23 mins ago

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Pavithra Jayaram died in the accident may alive if the ambulance arrived
ಸಿನಿಮಾ28 mins ago

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Sequins partywear fashion
ಫ್ಯಾಷನ್28 mins ago

Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Prajwal Revanna Case
ಕರ್ನಾಟಕ41 mins ago

Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

Pushpa 2 Allu Arjun fan recreates hook step on graduation day
ಟಾಲಿವುಡ್41 mins ago

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

IPL 2024
ಪ್ರಮುಖ ಸುದ್ದಿ46 mins ago

IPL 2024 : ಮೈದಾನದಿಂದಲೇ ಅನುಷ್ಕಾಗೆ ಕೈ ಸನ್ನೆ ಮಾಡಿದ ಕೊಹ್ಲಿ; ಇಲ್ಲಿದೆ ವಿಡಿಯೊ

Maldives
ದೇಶ57 mins ago

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Rahul Gandhi
ದೇಶ1 hour ago

Rahul Gandhi: ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್‌: ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ11 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ12 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ23 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ24 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ2 days ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌