ಮುಂಬಯಿಯಲ್ಲಿ ದೆಹಲಿ ಪೊಲೀಸರ ಬೃಹತ್​​ ಕಾರ್ಯಾಚರಣೆ; 1725 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ - Vistara News

ದೇಶ

ಮುಂಬಯಿಯಲ್ಲಿ ದೆಹಲಿ ಪೊಲೀಸರ ಬೃಹತ್​​ ಕಾರ್ಯಾಚರಣೆ; 1725 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ

ಇತ್ತೀಚೆಗೆ ದೆಹಲಿ ಪೊಲೀಸ್​ ವಿಶೇಷ ಘಟಕದ ಸಿಬ್ಬಂದಿ ಇಬ್ಬರು ಅಫ್ಘಾನಿಸ್ತಾನದ ಪ್ರಜೆಗಳನ್ನು ಬಂಧಿಸಿ ಅವರಿಂದ 1200 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದರು. ಈಗ ಅದಕ್ಕಿಂತಲೂ ದೊಡ್ಡ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Drugs In Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಇಲ್ಲಿನ ನ್ಹವ ಶೇವಾ ಬಂದರಿನಲ್ಲಿ ಬೃಹತ್ ಪ್ರಮಾಣದ ಮಾದಕ ದ್ರವ್ಯ ಇದ್ದ ಕಂಟೇನರ್​​ನ್ನು ದೆಹಲಿ ಪೊಲೀಸ್​​ ಇಲಾಖೆಯ ವಿಶೇಷ ಘಟಕ ಜಪ್ತಿ ಮಾಡಿದೆ. ಅಂದಾಜು 22 ಟನ್​​ಗಳಷ್ಟು ಲೈಕೋರೈಸ್​ ಲೇಪಿತ ಹೆರಾಯಿನ್​​ಗಳನ್ನು (heroin seized) ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಒಟ್ಟು ಮೊತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 1725 ಕೋಟಿ ರೂಪಾಯಿ ಎನ್ನಲಾಗಿದೆ.

ಲೈಕೋರೈಸ್​ ಎಂದರೆ ಒಂದು ಗಿಡಮೂಲಿಕೆಯಾಗಿದ್ದು ಯುರೋಪ್​ ಮತ್ತು ಏಷ್ಯಾದ ಹಲವು ಭಾಗಗಳಲ್ಲಿ ಬೆಳೆಯುತ್ತದೆ. ಇದರ ಬೇರುಗಳನ್ನು ಗ್ಲೈಸಿರೈಜಿನ್ (ಜ್ಯೇಷ್ಠಮಧು) ಎನ್ನಲಾಗುತ್ತದೆ. ಇದೊಂದು ಔಷಧೀಯ ಬೇರು. ಆದರೆ ಜಾಸ್ತಿ ತಿಂದರೆ ಅಡ್ಡಪರಿಣಾಮಗಳು ಗ್ಯಾರಂಟಿ. ಹೆರಾಯಿನ್​​ಗಳೆಂದು ಅನುಮಾನ ಬರಬಾರದು ಎಂಬ ಕಾರಣಕ್ಕೆ ಲೈಕೋರೈಸ್​​ನ್ನು ಲೇಪಿಸಲಾಗಿತ್ತು. ಕಂಟೇನರ್​ ಮುಂಬೈ ಬಂದರಿನಿಂದ ದೆಹಲಿಗೆ ಹೋಗುವುದಿತ್ತು.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು ‘ 1725 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ಕಂಟೇನರ್​ನಲ್ಲಿದ್ದವು. ನಮ್ಮ ದೇಶವನ್ನು ನಾರ್ಕೊ ಭಯೋತ್ಪಾದನೆ ಹೇಗೆ ಬಾಧಿಸುತ್ತಿದೆ ಮತ್ತು ಅಂತಾರಾಷ್ಟ್ರೀಯ ಕಳ್ಳಸಾಗಣೆದಾರರು ಯಾವೆಲ್ಲ ಮಾರ್ಗದಲ್ಲಿ ಭಾರತಕ್ಕೆ ಡ್ರಗ್ಸ್​ ತರುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ’ ಎಂದು ಹೇಳಿದ್ದಾರೆ.

ಇತ್ತೀಚೆಗೆ ದೆಹಲಿ ಪೊಲೀಸ್​ ವಿಶೇಷ ಘಟಕದ ಸಿಬ್ಬಂದಿ ಇಬ್ಬರು ಅಫ್ಘಾನಿಸ್ತಾನದ ಪ್ರಜೆಗಳನ್ನು ಬಂಧಿಸಿ ಅವರಿಂದ 1200 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದರು. ಅವರ ಬಳಿ 312.5 ಕೆಜಿಗಳಷ್ಟು ಮೆಥಾಂಫೆಟಮೈನ್ ಡ್ರಗ್ಸ್ ಮತ್ತು 10 ಕೆಜಿ ಹೆರೋಯಿನ್​ ಇತ್ತು. ಆದರೆ ಈಗ ವಶಪಡಿಸಿಕೊಂಡ ಮಾದಕ ವಸ್ತುಗಳ ಪ್ರಮಾಣ ಅದಕ್ಕೂ ಹೆಚ್ಚು.

ಇದನ್ನೂ ಓದಿ: Video: ಗೃಹ ಸಚಿವ ಅಮಿತ್‌ ಶಾ ಎದುರೇ 30 ಸಾವಿರ ಕೆಜಿ ಮಾದಕ ದ್ರವ್ಯ ಸುಟ್ಟುಹಾಕಿದ ಎನ್‌ಸಿಬಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಗ್ಯಾಜೆಟ್ಸ್

SIM Cards: ಮಿತಿ ಮೀರಿ ಮೊಬೈಲ್‌ ಸಿಮ್ ಹೊಂದಿದ್ದೀರಾ? ಕಾದಿದೆ ಭಾರಿ ದಂಡ, ಶಿಕ್ಷೆ!

ಒಬ್ಬರ ಹೆಸರಿನಲ್ಲಿ ಹಲವಾರು ಸಿಮ್ ಕಾರ್ಡ್‌ಗಳನ್ನು (SIM Cards) ಹೊಂದಿರುವುದು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ನಿಟ್ಟಿನಲ್ಲಿ ಟೆಲಿಕಾಂ ಕಾನೂನುಗಳು ನಿಗದಿಪಡಿಸಿದ ಮಿತಿಯನ್ನು ಮೀರಿದರೆ ಭಾರೀ ದಂಡವನ್ನು ಎದುರಿಸಬೇಕಾಗಬಹುದು. ನಮ್ಮ ಹೆಸರಿನಲ್ಲಿ ಇರುವ ಸಿಮ್‌ ಕಾರ್ಡ್‌ಗಳನ್ನು ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

SIM Cards
Koo

ನವದೆಹಲಿ: ಹಲವಾರು ಸಿಮ್ ಕಾರ್ಡ್‌ಗಳು ನಿಮ್ಮ (SIM Cards) ಹೆಸರಲ್ಲಿದೆಯೆ? ಹಾಗಿದ್ದರೆ ಎಚ್ಚರಿಕೆ (alert) ಸೂಚನೆ ಒಂದಿದೆ ಗಮನಿಸಿ. ಕಾನೂನು ಪ್ರಕಾರ ನಿಗದಿಪಡಿಸಿದ ಸಿಮ್‌ಗಿಂತ ಹೆಚ್ಚಿನ ಸಂಖ್ಯೆಯ ಸಿಮ್ ನಿಮ್ಮ ಬಳಿ ಇದ್ದರೆ ಭಾರಿ ದಂಡ (fine) ಜೊತೆಗೆ ಜೈಲು ಶಿಕ್ಷೆಗೂ ಗುರಿಯಾಗಬೇಕಾಬಹುದು. ನಿಮ್ಮ ಹೆಸರಲ್ಲಿ ಬೇರೆ ಯಾರೋ ಸಿಮ್‌ ಕಾರ್ಡ್‌ಗಳನ್ನು ಬಳಸುತ್ತಿದ್ದರೆ ಕೂಡಲೇ ಪತ್ತೆ ಹಚ್ಚಿ ಆದಷ್ಟು ಬೇಗ ನಿಷ್ಕ್ರಿಯಗೊಳಿಸಿ.

ಈಗಿನ ಡಿಜಿಟಲ್ ಯುಗದಲ್ಲಿ, ಗೌಪ್ಯತೆ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಅದಕ್ಕಾಗಿ ವಿಶೇಷವಾಗಿ ಅನಧಿಕೃತ ಸಿಮ್ ಕಾರ್ಡ್ ವಿತರಣೆಯ ಬಗ್ಗೆ ಕಾಳಜಿಯೊಂದಿಗೆ ಮೊಬೈಲ್ ಸಂಪರ್ಕಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವುದು ಕೂಡ ಮುಖ್ಯವಾಗಿದೆ. ಒಬ್ಬರ ಹೆಸರಿನಲ್ಲಿ ಹಲವಾರು ಸಿಮ್ ಕಾರ್ಡ್‌ಗಳನ್ನು ಹೊಂದಿರುವುದು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ನಿಟ್ಟಿನಲ್ಲಿ ಟೆಲಿಕಾಂ ಕಾನೂನುಗಳು ನಿಗದಿಪಡಿಸಿದ ಮಿತಿಯನ್ನು ಮೀರಿದರೆ ಭಾರೀ ದಂಡವನ್ನು ಎದುರಿಸಬೇಕಾಗಬಹುದು.

ಏನು ಶಿಕ್ಷೆ?

2023ರ ದೂರಸಂಪರ್ಕ ಕಾಯ್ದೆಯ ಪ್ರಕಾರ, ಒಬ್ಬ ವ್ಯಕ್ತಿಯು ಎಷ್ಟು ಸಿಮ್ ಕಾರ್ಡ್‌ಗಳನ್ನು ಹೊಂದಬಹುದು ಎಂಬುದರ ಕುರಿತು ಕಟ್ಟುನಿಟ್ಟಾದ ನಿಯಮಗಳಿವೆ. ಈ ನಿಯಮಗಳನ್ನು ಉಲ್ಲಂಘಿಸುವುದು ಜೈಲು ಶಿಕ್ಷೆಗೆ ಕಾರಣವಾಗಬಹುದು. ಮೊದಲ ಅಪರಾಧಕ್ಕಾಗಿ 50,000 ರೂ. ವರೆಗೆ ದಂಡ ವಿಧಿಸಬಹುದು ಮತ್ತು ಅ ನಂತರದ ಅಪರಾಧಗಳಿಗೆ 2 ಲಕ್ಷ ರೂ. ದಂಡ ತೆರಬೇಕಾಗುತ್ತದೆ.

SIM Cards


ಗರಿಷ್ಠ ಎಷ್ಟು ಸಿಮ್ ಹೊಂದಿರಬಹುದು?

ಅನುಮತಿಸಲಾದ ಗರಿಷ್ಠ ಸಂಖ್ಯೆಯ ಸಿಮ್ ಕಾರ್ಡ್‌ಗಳು ಪ್ರದೇಶವಾರು ಬದಲಾಗುತ್ತವೆ. ರಾಷ್ಟ್ರೀಯವಾಗಿ ಪ್ರತಿ ವ್ಯಕ್ತಿಗೆ ಒಂಬತ್ತು ಸಿಮ್ ಕಾರ್ಡ್‌ಗಳ ಮಿತಿ ಇದೆ. ಆದರೆ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಕೆಲವು ಈಶಾನ್ಯ ಪ್ರದೇಶಗಳಲ್ಲಿ ಇದು ಆರಕ್ಕೆ ಸೀಮಿತವಾಗಿದೆ.

ಸಿಮ್ ಕಾರ್ಡ್ ಮಾಲೀಕತ್ವದ ಪ್ರಸ್ತುತ ನಿಯಮಗಳ ಬಗ್ಗೆ ಮಾಹಿತಿ ನೀಡುವುದು ಮುಖ್ಯವಾಗಿದೆ ಮತ್ತು ಆನ್‌ಲೈನ್‌ನಲ್ಲಿ ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳನ್ನು ನೋಂದಾಯಿಸಲಾಗಿದೆ ಎಂಬುದನ್ನು ನಿಯಮಿತವಾಗಿ ಪರಿಶೀಲಿಸುವುದು ಅಷ್ಟೇ ಅಗತ್ಯವಾಗಿದೆ.

ಹೇಗೆ ಪರಿಶೀಲಿಸುವುದು?

ಆಧಾರ್ ಕಾರ್ಡ್‌ಗೆ ನೀಡಲಾದ ಸಿಮ್ ಕಾರ್ಡ್‌ಗಳ ಸಂಖ್ಯೆಯನ್ನು ಆನ್‌ಲೈನ್ ಮೂಲಕ ನಾವೇ ಪರೀಕ್ಷಿಸಿಕೊಳ್ಳಬಹುದು. ಇದಕ್ಕಾಗಿ TAFCOP ವೆಬ್‌ಸೈಟ್‌ಗೆ ಭೇಟಿ ನೀಡಿ. ಬಳಿಕ ಅಲ್ಲಿ ಇರುವ ಬಾಕ್ಸ್ ನಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

ಬಳಿಕ ಒದಗಿಸಲಾಗುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ. ಅನಂತರ ಒಟಿಪಿ ಬಟನ್ ಕ್ಲಿಕ್ ಮಾಡಿ.
ಒಟಿಪಿ ನೀವು ನಮೂದಿಸಿರುವ ಮೊಬೈಲ್ ಸಂಖ್ಯೆಗೆ ಬರುತ್ತದೆ. ಅದನ್ನು ಬಳಿಕ ಅಲ್ಲಿ ನಮೂದಿಸಿ ಮತ್ತು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: BSNL New Plan: 395 ದಿನಗಳ ವ್ಯಾಲಿಡಿಟಿಯ ಬಿಎಸ್‌ಎನ್‌ಎಲ್ ಹೊಸ ಪ್ಲ್ಯಾನ್‌; ಜಿಯೊ, ಏರ್‌ಟೆಲ್‌ಗೆ ಸೆಡ್ಡು

ನಿಮ್ಮ ಹೆಸರಿನಲ್ಲಿ ನೋಂದಾಯಿಸಲಾಗಿರುವ ಮೊಬೈಲ್ ಸಂಖ್ಯೆಗಳ ಪಟ್ಟಿಯನ್ನು ಕಾಣಬಹುದು. ಎಲ್ಲಾ ಸಕ್ರಿಯ ಮೊಬೈಲ್ ಸಂಖ್ಯೆಗಳು ನಿಮಗೆ ಅಥವಾ ನಿಮ್ಮ ಸಂಬಂಧಿಕರಿಗೆ ಸೇರಿವೆ ಎಂಬುದನ್ನು ಪರಿಶೀಲಿಸಿ ಮತ್ತು ಖಚಿತಪಡಿಸಿಕೊಳ್ಳಿ.

ಯಾವುದೇ ಗುರುತಿಸದ ಸಂಖ್ಯೆಗಳನ್ನು ಕಂಡುಕೊಂಡರೆ, ವೆಬ್‌ಸೈಟ್ ಮೂರು ಆಯ್ಕೆಗಳನ್ನು ನೀಡುತ್ತದೆ. ನನ್ನ ಸಂಖ್ಯೆ ಅಲ್ಲ, ಅಗತ್ಯವಿಲ್ಲ ಮತ್ತು ಬೇಕಾಗಿದೆ. ಇದರಲ್ಲಿ ನಿಮ್ಮ ಅಗತ್ಯ ಯಾವುದು ಎಂಬುದನ್ನು ತಿಳಿಸಿ. ನನ್ನ ಸಂಖ್ಯೆ ಅಲ್ಲ ಅಥವಾ ಅಗತ್ಯವಿಲ್ಲ ಎಂಬುದನ್ನು ಕ್ಲಿಕ್ ಮಾಡಿದರೆ ನಿಮ್ಮ ಹೆಸರಿನಲ್ಲಿರುವ ಅನಗತ್ಯ ಸಿಮ್‌ಗಳು ನಿಷ್ಕ್ರಿಯಗೊಳ್ಳುತ್ತವೆ.

Continue Reading

ದೇಶ

Pooja Khedkar: ಪೂಜಾ ಖೇಡ್ಕರ್‌ಗೆ ಮತ್ತೊಂದು ಬಿಗ್‌ ಶಾಕ್‌; ತರಬೇತಿಗೆ ತಡೆ, ಅಕಾಡೆಮಿಗೆ ವಾಪಸ್‌

Pooja Khedkar: ಮಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಸೇವಾ ಅಕಾಡೆಮಿ ಖೇಡ್ಕರ್‌ ಅವರನ್ನು ತರಬೇತಿ ಶಿಬಿರಕ್ಕೆ ಕರೆದು ಅವರ ತರಬೇತಿಯನ್ನು ತಡೆ ಹಿಡಿದಿರುವ ಬಗ್ಗೆ ಆದೇಶ ಹೊರಡಿಸಲಾಗಿದೆ. ಮಹಾರಾಷ್ಟ್ರದ ರಾಜ್ಯ ಸರ್ಕಾರದ ಜಿಲ್ಲಾ ತರಬೇತಿ ಕಾರ್ಯಕ್ರಮದಿಂದ “ನಿಮ್ಮನ್ನು ತರಬೇತಿಯಿಂದ ರಿಲೀವ್‌ ಮಾಡಲಾಗಿದೆ. ಆದಷ್ಟು ಬೇಗ ಅಕಾಡೆಮಿಗೆ ಬಂದು ಸೇರಿಕೊಳ್ಳಿ” ಎಂದು ಅಕಾಡೆಮಿ ಖೇಡ್ಕರ್‌ ಅವರಿಗೆ ಹೇಳಿದೆ.

VISTARANEWS.COM


on

Pooja Khedkar
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಅವರ ಒಂದೊಂದೇ ಕಳ್ಳಾಟಗಳು ಬಯಲಾಗುತ್ತಿವೆ. ಇದರ ಬೆನ್ನಲ್ಲೇ ಪೂಜಾಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಅವರ ತರಬೇತಿಯನ್ನ ತಡೆ ಹಿಡಿಯಲಾಗಿದೆ. ನಕಲಿ ದಾಖಲ್ ಸೃಷ್ಟಿ ಆರೋಪ ಎದುರಿಸುತ್ತಿರುವ ಪೂಜಾ ಖೇಡ್ಕರ್‌ ವಿರುದ್ಧ ಇದು ಮೊದಲ ಕ್ರಮವಾಗಿದೆ.

ಮಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಸೇವಾ ಅಕಾಡೆಮಿ ಖೇಡ್ಕರ್‌ ಅವರನ್ನು ತರಬೇತಿ ಶಿಬಿರಕ್ಕೆ ಕರೆದು ಅವರ ತರಬೇತಿಯನ್ನು ತಡೆ ಹಿಡಿದಿರುವ ಬಗ್ಗೆ ಆದೇಶ ಹೊರಡಿಸಲಾಗಿದೆ. ಮಹಾರಾಷ್ಟ್ರದ ರಾಜ್ಯ ಸರ್ಕಾರದ ಜಿಲ್ಲಾ ತರಬೇತಿ ಕಾರ್ಯಕ್ರಮದಿಂದ “ನಿಮ್ಮನ್ನು ತರಬೇತಿಯಿಂದ ರಿಲೀವ್‌ ಮಾಡಲಾಗಿದೆ. ಆದಷ್ಟು ಬೇಗ ಅಕಾಡೆಮಿಗೆ ಬಂದು ಸೇರಿಕೊಳ್ಳಿ” ಎಂದು ಅಕಾಡೆಮಿ ಖೇಡ್ಕರ್‌ ಅವರಿಗೆ ಹೇಳಿದೆ.

ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸುತ್ತಿದ್ದಾರೆ.

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿರುವ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ.

27 ಸಾವಿರ ರೂ. ದಂಡ ಬಿದ್ದಿದ್ದೇಕೆ?

ಅಧಿಕಾರದ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಜತೆಗೆ ಸಂಚಾರ ದಟ್ಟಣೆ ನಿಯಮಗಳ ಉಲ್ಲಂಘನೆಯಲ್ಲೂ ಮುಂದಿದ್ದಾರೆ. ವಾಶಿಂ ಮಹಿಳಾ ಪೊಲೀಸರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಪೂಜಾ ಖೇಡ್ಕರ್‌ ಅವರು ಎರಡು ತಾಸು ಚರ್ಚಿಸಿದ್ದಾರೆ. ಯಾವ ವಿಷಯದ ಕುರಿತು ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗದಿದ್ದರೂ, ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 27 ಸಾವಿರ ರೂ. ದಂಡ ವಿಧಿಸಲಾಗಿದ್ದು, ಅದರ ನೋಟಿಸ್‌ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ಪೂಜಾ ಖೇಡ್ಕರ್‌ ಪ್ರತಿಕ್ರಿಯೆ ಏನು?

ನಕಲಿ ದಾಖಲೆ, ಅಧಿಕಾರ ದುರುಪಯೋಗ ಸೇರಿ ಹಲವು ಆರೋಪಗಳ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಮೊದಲ ಬಾರಿಗೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. “ಯಾರೇ ಆಗಲಿ, ಆರೋಪ ಸಾಬೀತಾಗುವವರೆಗೆ ಅವರು ಆರೋಪಿಯೇ. ಮಾಧ್ಯಮಗಳ ವರದಿಗಳು, ತೀರ್ಪುಗಳು ನಾನು ಏನೆಂಬುದನ್ನು ತೀರ್ಮಾನಿಸುವುದಿಲ್ಲ. ತನಿಖೆಗೆ ರಚನೆಯಾಗಿರುವ ಸಮಿತಿಯ ತೀರ್ಮಾನದ ಬಳಿಕವೇ ಸತ್ಯ ಏನೆಂಬುದು ಗೊತ್ತಾಗುತ್ತದೆ. ಮಾಧ್ಯಮಗಳು ಅಥವಾ ಜನರು ನನ್ನನ್ನು ತೀರ್ಮಾನಿಸುವುದಿಲ್ಲ” ಎಂದು ಮಾಧ್ಯಮಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Sadananda Suvarna : ʼಗುಡ್ಡದ ಭೂತʼ ಖ್ಯಾತಿಯ ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

Continue Reading

ದೇಶ

NEET UG 2024: ನೀಟ್‌ ಅಕ್ರಮ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಮತ್ತಿಬ್ಬರು ಆರೋಪಿಗಳು ಅರೆಸ್ಟ್‌

NEET UG 2024: ಇನ್ನು ಬಂಧಿತರನ್ನು ಪಂಕಜ್‌ ಕುಮಾರ್‌ ಮತ್ತು ರಾಜು ಸಿಂಗ್‌ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಪ್ರಕರಣದ ಪ್ರಮುಖ ಆರೋಪಿ ಸಂಜೀವ್‌ ಮುಖಿಯಾ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪಂಕಜ್‌ ಕುಮಾರ್‌ 2017 ಬ್ಯಾಚ್‌ನ ಸಿವಿಲ್‌ ಎಂಜಿನಿಯರ್‌ ಆಗಿದ್ದು, ಈತ ಜಮ್ಶೆಡ್‌ಪುರದ ಎನ್‌ಐಟಿಯಲ್ಲಿ ಎಂಜಿಯರಿಂಗ್‌ ಪದವಿ ಪಡೆದಿದ್ದಾನೆ. ಈತ ಹಜಾರಿಭಾಗ್‌ನಲ್ಲಿ ಪ್ರಶ್ನೆ ಪತ್ರಿಕೆ ಕದ್ದಿದ್ದ ಎನ್ನಲಾಗಿದೆ.

VISTARANEWS.COM


on

NEET-UG 2024
Koo

ಪಾಟ್ನಾ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಕಿಂಗ್‌ಪಿನ್‌ ಬಂಧನ ಆಗಿರುವ ಬೆನ್ನಲ್ಲೇ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಸಿಬಿಐ ಅರೆಸ್ಟ್‌ ಮಾಡಿದೆ. ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ.

ಇನ್ನು ಬಂಧಿತರನ್ನು ಪಂಕಜ್‌ ಕುಮಾರ್‌ ಮತ್ತು ರಾಜು ಸಿಂಗ್‌ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಪ್ರಕರಣದ ಪ್ರಮುಖ ಆರೋಪಿ ಸಂಜೀವ್‌ ಮುಖಿಯಾ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪಂಕಜ್‌ ಕುಮಾರ್‌ 2017 ಬ್ಯಾಚ್‌ನ ಸಿವಿಲ್‌ ಎಂಜಿನಿಯರ್‌ ಆಗಿದ್ದು, ಈತ ಜಮ್ಶೆಡ್‌ಪುರದ ಎನ್‌ಐಟಿಯಲ್ಲಿ ಎಂಜಿಯರಿಂಗ್‌ ಪದವಿ ಪಡೆದಿದ್ದಾನೆ. ಈತ ಹಜಾರಿಭಾಗ್‌ನಲ್ಲಿ ಪ್ರಶ್ನೆ ಪತ್ರಿಕೆ ಕದ್ದಿದ್ದ ಎನ್ನಲಾಗಿದೆ. ಸದ್ಯ ಆತನನ್ನು ಪಾಟ್ನಾದಿಂದ ಅರೆಸ್ಟ್‌ ಮಾಡಲಾಗಿದೆ. ಕಾಗದವನ್ನು ಕದ್ದು ಇತರ ಗ್ಯಾಂಗ್ ಸದಸ್ಯರಿಗೆ ರವಾನಿಸಲು ಕುಮಾರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ರಾಜು ಸಿಂಗ್‌ನನ್ನು ಸಿಬಿಐ ಬಂಧಿಸಿದೆ, ಸಿಂಗ್ ಅವರನ್ನು ಹಜಾರಿಬಾಗ್‌ನಿಂದ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ,

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ನೀಟ್‌ ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂದು ಆಗ್ರಹಿಸಲಾಗುತ್ತಿದೆ. ಇದರ ಮಧ್ಯೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಹತ್ವದ ಮುನ್ನಡೆ ಸಾಧಿಸಿದ್ದು, ನೀಟ್‌ ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಕಿಂಗ್‌ಪಿನ್‌ ಆಗಿರುವ ರಾಕೇಶ್‌ ರಂಜನ್‌ (Rakesh Ranjan) ಎಂಬಾತನನ್ನು ಬಂಧಿಸಿದ್ದರು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಮಧ್ಯೆಯೇ, ಬಿಹಾರದ ಪಟನಾದಲ್ಲಿ ಎರಡು ಕಡೆ ಹಾಗೂ ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಎರಡು ಕಡೆ ಸಿಬಿಐ ಅಧಿಕಾರಿಗಳು ಗುರುವಾರ (ಜುಲೈ 11) ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಬಿಹಾರದ ಪಟನಾದಲ್ಲಿ ರಾಕೇಶ್‌ ರಂಜನ್‌ ಅಲಿಯಾಸ್‌ ರಾಕಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಈತನನ್ನು ಕೋರ್ಟ್‌ಗೂ ಹಾಜರುಪಡಿಸಲಾಗಿದ್ದು, 10 ದಿನ ಸಿಬಿಐ ಕಸ್ಟಡಿಗೆ ನೀಡಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಜುಲೈ 18ರಂದು ಸುಪ್ರೀಂ ಕೋರ್ಟ್‌ ವಿಚಾರಣೆ

ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌, ಜುಲೈ 18ಕ್ಕೆ ವಿಚಾರಣೆಯನ್ನು ಮುಂದೂಡಿದೆ. ನೀಟ್‌ ಅಕ್ರಮದ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ವರದಿಗಳನ್ನು ಪಡೆದಿರುವ ಸುಪ್ರೀಂ ಕೋರ್ಟ್‌, ಜುಲೈ 18ರಂದು ವಿಚಾರಣೆ ನಡೆಸಲು ತೀರ್ಮಾನಿಸಿತು.

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Continue Reading

ದೇಶ

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Hit And Run Case: ಮಿಹಿರ್‌ನ ಪೊಲೀಸ್‌ ಕಸ್ಟಡಿ ಮುಗಿದಿರುವ ಹಿನ್ನೆಲೆ ಮಂಗಳವಾರ ಶಿವಧಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಮತ್ತೊರ್ವ ಆರೋಪಿ ಮಿಹಿರ್‌ನ ತಂದೆ ರಾಜೇಶ್‌ ಶಾ ಸದ್ಯ ಜಾಮೀನಿನ ಮೂಲಕ ಹೊರಬಂದಿದ್ದಾರೆ.

VISTARANEWS.COM


on

hit and run case
Koo

ಮುಂಬೈ: ಜು. 7ರಂದು ಮಹಾರಾಷ್ಟ್ರದ ವರ್ಲಿಯಲ್ಲಿ ಬಿಎಂಡಬ್ಲ್ಯು ಕಾರು ಚಲಾಯಿಸಿ(Hit And Run Case), ಸ್ಕೂಟರ್‌ಗೆ ಗುದ್ದಿ ಓರ್ವ ಮಹಿಳೆಯ ಸಾವಿಗೆ ಕಾರಣನಾದ ಶಿವಸೇನೆ ಮುಖಂಡ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah)ಗೆ ಜು.30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಿಹಿರ್‌ನ ಪೊಲೀಸ್‌ ಕಸ್ಟಡಿ ಮುಗಿದಿರುವ ಹಿನ್ನೆಲೆ ಮಂಗಳವಾರ ಶಿವಧಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಮತ್ತೊರ್ವ ಆರೋಪಿ ಮಿಹಿರ್‌ನ ತಂದೆ ರಾಜೇಶ್‌ ಶಾ ಸದ್ಯ ಜಾಮೀನಿನ ಮೂಲಕ ಹೊರಬಂದಿದ್ದಾರೆ.

ಶಿವಸೇನೆ (ಏಕನಾಥ್ ಶಿಂಧೆ ಬಣ) ನಾಯಕರಾಗಿರುವ ರಾಜೇಶ್‌ ಶಾ ಅವರ 24 ವರ್ಷದ ಪುತ್ರ ಮಿಹಿರ್‌ ಶಾ ಕುಡಿದು ಕಾರು ಚಲಾಯಿಸಿ ವರ್ಲಿಯಲ್ಲಿ ಮೀನು ಮಾರಾಟಗಾರ ದಂಪತಿ ಪ್ರದೀಪ್ ನಖ್ವಾ ಮತ್ತು ಕಾವೇರಿ ನಖ್ವಾ ಅವರು ಸಂಚರಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದ. ಭಾನುವಾರ ಬೆಳಿಗ್ಗೆ 5.30ರ ಸುಮಾರಿಗೆ ಈ ಘಟನೆ ನಡೆದಿತ್ತು. ಕಾರು ಡಿಕ್ಕಿ ಹೊಡೆದ ಪರಿಣಾಮ ಪ್ರದೀಪ್ ಎಸೆಯಲ್ಪಟ್ಟರೆ, ಕಾವೇರಿ ಅವರ ದೇಹ ಚಕ್ರಗಳ ಅಡಿಯಲ್ಲಿ ಸಿಕ್ಕಿ ಬಿದ್ದಿದ್ದು, ಕಾರು 1.5 ಕಿ.ಮೀ. ದೂರ ಎಳೆದೊಯ್ದಿತ್ತು.

ಅಪಘಾತ ನಡೆದ ನಂತರ ಮಿಹಿರ್‌ ಚಾಲಕ ರಾಜರ್ಷಿ ಬಿದಾವತ್‌ನನ್ನು ಡ್ರೈವರ್‌ ಸೀಟ್‌ನಲ್ಲಿ ಕೂರಿಸಿದ್ದನು. ಬಳಿಕ ಅವರು ಬಾಂದ್ರಾದ ಕಲಾ ನಗರಕ್ಕೆ ತೆರಳಿ ಅಲ್ಲಿ ನಂಬರ್ ಪ್ಲೇಟ್ ಅನ್ನು ತೆಗೆದು ತಲೆ ಮರೆಸಿಕೊಂಡಿದ್ದರು. ಈ ವೇಳೆ ಮಿಹಿರ್‌ ಶಾ ತನ್ನ ಪ್ರೇಯಸಿಯೊಂದಿಗೆ ಸುಮಾರು 40 ಬಾರಿ ಮಾತನಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕಲಾ ನಗರದಲ್ಲಿ ಕಾರು ನಿಲ್ಲಿಸಿ ಮಿಹಿರ್‌ ಶಾ ಆಟೋ ಹತ್ತಿ ಗೋರೆಗಾಂವ್‌ನಲ್ಲಿರುವ ಪ್ರೇಯಸಿ ಮನೆಗೆ ತೆರಳಿದ್ದ. ಅಪಘಾತದ ವಿಚಾರವನ್ನು ಪ್ರೇಯಸಿ ತನ್ನ ಸಹೋದರಿ ಜತೆಗೆ ಹಂಚಿಕೊಂಡಿದ್ದಳು. ಬಳಿಕ ಸಹೋದರಿ ಆಗಮಿಸಿ ಮಿಹಿರ್‌ನನ್ನು ಬೋರಿವಲಿಯಲ್ಲಿರುವ ತಮ್ಮ ಮನೆಗೆ ಕರೆದೊಯ್ದಿದ್ದರು. ಈ ವೇಳೆ ಮಿಹಿರ್‌ನ ಕುಟುಂಬ ಆತ ಎಲ್ಲಿ ತಲೆ ಮರೆಸಿಕೊಂಡಿದ್ದಾನೆ ಎನ್ನುವ ವಿಚಾರವನ್ನು ಪೊಲೀಸರಿಗೆ ತಿಳಿಸಿರಲಿಲ್ಲ. ಪೊಲೀಸರ 14 ತಂಡ ಆತನಿಗಾಗಿ ತೀವ್ರ ಶೋಧ ನಡೆಸುತ್ತಿತ್ತು.

ಸೋಮವಾರ ರಾತ್ರಿ ಮಿಹಿರ್‌ ವಿರಾರ್‌ನಲ್ಲಿರುವ ತನ್ನ ಮನೆಗೆ ತೆರಳಿದ್ದ. ಮಂಗಳವಾರ ಬೆಳಿಗ್ಗೆ ಆತನ ಸ್ನೇಹಿತ ಅವದೀಪ್ ತನ್ನ ಫೋನ್ ಅನ್ನು 15 ನಿಮಿಷಗಳ ಕಾಲ ಆನ್ ಮಾಡಿದಾಗ ಪೊಲೀಸರು ಅವರಿರುವ ಜಾಗ ಪತ್ತೆ ಮಾಡಿ ಮಿಹಿರ್‌ನನ್ನು ವಶಕ್ಕೆ ಪಡೆದುಕೊಂಡಿದ್ದರು. ಮಿಹಿರ್‌ನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜುಲೈ 16ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

10 ಲಕ್ಷ ರೂ. ಪರಿಹಾರ ಘೋಷಣೆ

ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಮೃತ ಕಾವೇರಿ ನಖ್ವಾ ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. “ನಾವು ಸಂತ್ರಸ್ತೆಯ ಕುಟುಂಬದೊಂದಿಗೆ ನಿಲ್ಲುತ್ತೇವೆ. ಅವರೂ ನಮ್ಮ ಕುಟುಂಬ. ಅವರಿಗೆ ಯಾವುದೇ ಸಹಾಯದ ಅಗತ್ಯವಿದ್ದರೂ ಅದು ಕಾನೂನು ಅಥವಾ ಆರ್ಥಿಕವಾಗಿರಲಿ ಒದಗಿಸಲಾಗುವುದು. ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: BSP President: ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಕೊಲೆ; ಹಂತಕನ ಎನ್‌ಕೌಂಟರ್‌- ಮತ್ತೊಂದೆಡೆ ಹತ್ಯೆಯ ಭೀಕರ ದೃಶ್ಯ ವೈರಲ್‌

Continue Reading
Advertisement
R Ashwin
ಪ್ರಮುಖ ಸುದ್ದಿ10 mins ago

R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

Children Mobile Addiction
ಆರೋಗ್ಯ14 mins ago

Children Mobile Addiction: ನಮ್ಮ ಮಕ್ಕಳು ಎಷ್ಟು ಹೊತ್ತು ಮೊಬೈಲ್‌ ನೋಡಬಹುದು?

Road Accident
ಕರ್ನಾಟಕ18 mins ago

Road Accident: ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Assembly Session Job reservation for Kannadigas in private sectors Cabinet meeting approves bill
ಕರ್ನಾಟಕ25 mins ago

Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Dog Ethnicwear
ಫ್ಯಾಷನ್1 hour ago

Dog Ethnicwear: ನಾಯಿಗಳಿಗೂ ಬಂತು ಎಥ್ನಿಕ್‌ ವೇರ್ಸ್! ಎಷ್ಟು ಮುದ್ದಾಗಿ ಕಾಣಿಸುತ್ತಿವೆ!

SIM Cards
ಗ್ಯಾಜೆಟ್ಸ್1 hour ago

SIM Cards: ಮಿತಿ ಮೀರಿ ಮೊಬೈಲ್‌ ಸಿಮ್ ಹೊಂದಿದ್ದೀರಾ? ಕಾದಿದೆ ಭಾರಿ ದಂಡ, ಶಿಕ್ಷೆ!

Assembly Session
ಕರ್ನಾಟಕ1 hour ago

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Ananth Ambani Fashion
ಫ್ಯಾಷನ್1 hour ago

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Entrepreneurship Development Training Concluding Ceremony at Kanakagiri
ಕೊಪ್ಪಳ2 hours ago

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌