Maldives Fire | ಮಾಲ್ಡೀವ್ಸ್​​ನಲ್ಲಿ ವಸತಿ ಕಟ್ಟಡಕ್ಕೆ ಬೆಂಕಿ; 9 ಭಾರತೀಯರು ಸೇರಿ 10 ಮಂದಿ ದುರ್ಮರಣ - Vistara News

ದೇಶ

Maldives Fire | ಮಾಲ್ಡೀವ್ಸ್​​ನಲ್ಲಿ ವಸತಿ ಕಟ್ಟಡಕ್ಕೆ ಬೆಂಕಿ; 9 ಭಾರತೀಯರು ಸೇರಿ 10 ಮಂದಿ ದುರ್ಮರಣ

ಮಾಲ್ಡೀವ್ಸ್​ ರಾಜಧಾನಿ ಮಾಲೇಯಲ್ಲಿರುವ ಇಕ್ಕಟ್ಟಾದ ಪ್ರದೇಶದಲ್ಲಿ ಇರುವ ಒಂದು ವಸತಿ ಕಟ್ಟಡಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಹೊತ್ತುಕೊಂಡು ನಾಲ್ಕು ತಾಸುಗಳ ಬಳಿಕ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ.

VISTARANEWS.COM


on

10 Killed In Maldives Fire
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾಲ್ಡೀವ್ಸ್​​ನಲ್ಲಿ ಭೀಕರ ಬೆಂಕಿ ದುರಂತಕ್ಕೆ 10 ಮಂದಿ ಮೃತಪಟ್ಟಿದ್ದಾರೆ. ಅದರಲ್ಲಿ 9 ಮಂದಿ ಭಾರತೀಯರೇ ಇದ್ದಾರೆ ಎಂದು ಹೇಳಲಾಗಿದೆ. ಈ ಘಟನೆ ನಡೆದಿದ್ದು ಮಾಲ್ಡೀವ್ಸ್​ ರಾಜಧಾನಿ ಮಾಲೇಯಲ್ಲಿರುವ ಒಂದು ವಸತಿ ಕಟ್ಟಡದಲ್ಲಿ. ಇಕ್ಕಟ್ಟಾದ ಪ್ರದೇಶದಲ್ಲಿ ಈ ಕಟ್ಟಡವಿದ್ದು, ಅದರಲ್ಲಿರುವ ಮನೆಗಳಲ್ಲಿ ಹೆಚ್ಚಾಗಿ ವಿದೇಶಿ ಉದ್ಯೋಗಿಳೇ ಇದ್ದರು. ಕಟ್ಟಡದ ಮೇಲಂತಸ್ತು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಅಲ್ಲಿಂದ 10 ಮೃತದೇಹಗಳನ್ನು ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹೊರತೆಗೆದಿದ್ದಾರೆ. ಅದರಲ್ಲಿ 9 ಮಂದಿ ಭಾರತೀಯರು ಮತ್ತು ಇನ್ನೊಬ್ಬ ಬಾಂಗ್ಲಾದೇಶವನು ಎಂಬುದು ಸ್ಪಷ್ಟವಾಗಿದೆ.

ಅಲ್ಲಿಯೇ ಇದ್ದ ಕಟ್ಟಡವೊಂದರ ಗ್ರೌಂಡ್​ಫ್ಲೋರ್​​ನಲ್ಲಿ ವಾಹನ ದುರಸ್ತಿ ಗ್ಯಾರೇಜ್​ ಇದ್ದು, ಅಲ್ಲಿಯೇ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬಹುದೊಡ್ಡ ಮಟ್ಟದಲ್ಲಿ, ತೀವ್ರವಾಗಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲೂ ತುಂಬ ಸಮಯ ತೆಗೆದುಕೊಂಡಿದ್ದಾರೆ. ಸುಮಾರು 4 ತಾಸುಗಳ ಬಳಿಕ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಬೆಂಕಿ ಅವಘಡದ ಬಗ್ಗೆ ತನಿಖೆ ನಡೆಯುತ್ತಿದೆ. ಅಂದಹಾಗೇ, ಮಾಲೇಯಲ್ಲಿ ಸುಮಾರು 2,50, 000 ಜನರು ವಿದೇಶಿ ಉದ್ಯೋಗಿಗಳೇ ಇದ್ದು, ಅದರಲ್ಲೂ ಅರ್ಧದಷ್ಟು ಮಂದಿ ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ನೇಪಾಳ, ಶ್ರೀಲಂಕಾದವರೇ ಆಗಿದ್ದಾರೆ.

ಇದನ್ನೂ ಓದಿ: Ev Scooter: ಬೆಂಕಿ ಅವಘಡಗಳಿಗೆ ಬ್ಯಾಟರಿ ಬಿಸಿಯಾಗುವುದೇ ಕಾರಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

ವಿಸ್ತಾರ ಸಂಪಾದಕೀಯ: ಯುಪಿಎಸ್‌ಸಿ ಸಾಧಕರ ಕತೆಗಳು ಇತರರಿಗೆ ಸ್ಫೂರ್ತಿಯಾಗಲಿ

ಈ ಬಾರಿಯ ಯುಪಿಎಸ್‌ಸಿ ಸಾಧಕರ ಕತೆಗಳು, ಮುಂದಿನ ದಿನಗಳಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆಯಲು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿವೆ.

VISTARANEWS.COM


on

UPSC Results 2023
Koo

ಕೇಂದ್ರ ಲೋಕ ಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯ (UPSC Results 2023) ಫಲಿತಾಂಶ ಪ್ರಕಟವಾಗಿದೆ. ಅನೇಕ ಸಾಧಕರು ತಮ್ಮ ಸಾಧನೆಯ ವಿಜಯಧ್ವಜಗಳನ್ನು ಹಾರಿಸಿದ್ದಾರೆ. ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ ಅವರು ದೇಶದಲ್ಲೇ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಅನಿಮೇಶ್ ಪ್ರಧಾನ್, ಡೊನೂರು ಅನನ್ಯಾ ರೆಡ್ಡಿ ಮುಂತಾದವರು ಎರಡು ಮತ್ತು ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ಕರ್ನಾಟಕದಲ್ಲೂ ಈ ಪರೀಕ್ಷೆಯನ್ನು ಗೆದ್ದ ಅನೇಕ ಮಂದಿಯ ಸಾಧನೆಯ ಕತೆಗಳು ಸ್ಫೂರ್ತಿದಾಯಕವಾಗಿವೆ.

ಐಐಟಿ ಕಾನ್ಪುರದಲ್ಲಿ ಎಂ.ಟೆಕ್‌ ಸ್ನಾತಕೋತ್ತರ ಪದವಿ ಪಡೆದ ಆದಿತ್ಯ ಶ್ರೀವಾಸ್ತವ ಹಣಕಾಸು ಕೊರತೆ ಪರಿಸ್ಥಿತಿಯ ಹಿನ್ನೆಲೆಯಲ್ಲಿ 15 ತಿಂಗಳು ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡಿದ್ದರು. ಆದರೆ, ಐಎಎಸ್‌ ಅಧಿಕಾರಿಯಾಗಬೇಕು ಎಂಬ ಕನಸು ಹೊತ್ತ ಇವರು ಎಲೆಕ್ಟ್ರಿಕಲ್‌ ಎಂಜಿನಿಯರ್ ಉದ್ಯೋಗ ಬಿಟ್ಟು ಐಎಎಸ್‌ಗೆ ಅಧ್ಯಯನ ಮಾಡಲು ಆರಂಭಿಸಿದರು. 2017ರಿಂದಲೂ ಸತತ ಪ್ರಯತ್ನ ನಡೆಸಿ, ಈಗ ಯುಪಿಎಸ್‌ಸಿಯಲ್ಲಿ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ.

ಇದನ್ನೂ ಓದಿ | UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

ದೇಶದಲ್ಲಿ 100ನೇ ರ‍್ಯಾಂಕ್‌ ಪಡೆದ ವಿಜಯಪುರ ಮೂಲದ ವಿಜೇತಾ ಬಿ. ಹೊಸಮನಿ, ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಲ್‌ಕೆಜಿಯಿಂದ 5ನೇ ಕ್ಲಾಸ್‌ವರೆಗೆ ವಿಜಯಪುರದ ಸೈನಿಕ ಶಾಲೆಯಲ್ಲಿ ಓದಿದ ವಿಜೇತಾ ಗುಜರಾತಿನ ನ್ಯಾಷನಲ್ ಲಾ ಯುನಿವರ್ಸಿಟಿಯಲ್ಲಿ ಬಿಎ, ಎಲ್‌ಎಲ್‌ಬಿ ಪದವಿ ಪಡೆದಿದ್ದು, ಕ್ರಿಮಿನಲ್ ಲಾದಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದಾರೆ. 2020ರಿಂದ ಮೂರು ಬಾರಿ ಯುಪಿಎಸ್ಸಿ ಪರೀಕ್ಷೆ ಎದುರಿಸಿದ್ದು, ಆನ್‌ಲೈನ್ ತರಬೇತಿ ಹಾಗೂ ಮನೆಯಲ್ಲೇ ಹೆಚ್ಚಿನ ಅಭ್ಯಾಸ ಮಾಡಿ ಇವರು ಸಾಧನೆ ಮಾಡಿದ್ದಾರೆ. ಇಂಡಿಯನ್ ರೆವೆನ್ಯೂ ಸರ್ವೀಸ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ 2ನೇ ಸ್ಥಾನ ಪಡೆದ ದಾವಣಗೆರೆಯ ಸೌಭಾಗ್ಯ ಎಸ್. ಬೀಳಗಿಮಠ್ (101ನೇ ರ‍್ಯಾಂಕ್‌) ಬಿಎಸ್ಸಿ ಅಗ್ರಿಕಲ್ಚರ್ ಪದವಿ ಪಡೆದಿದ್ದಾರೆ. ಇವರ ತಂದೆ ರೈತರು. 939ನೇ ರ‍್ಯಾಂಕ್‌ ಪಡೆದ ಕೋಲಾರದ ಯುವಕ, ಶಿಕ್ಷಕ ದಂಪತಿ ಪುತ್ರ ಗೌತಮ್ ಮತ್ತೊಂದು ಬಾರಿ ಪರೀಕ್ಷೆ ಬರೆಯುವುದಾಗಿ ಹೇಳಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡು ಯುಪಿಎಸ್ಸಿಗೆ ಇವರು ತಯಾರಿ ನಡೆಸಿದ್ದರು.

644ನೇ ರ‍್ಯಾಂಕ್‌ ಪಡೆದ ಬಳ್ಳಾರಿಯ ಶಾಂತಪ್ಪ ಕುರುಬರ್ ಕತೆ ಕುತೂಹಲಕಾರಿಯಾಗಿದೆ. ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದ ಶಾಂತಪ್ಪ, ನಿರಂತರ ಕಷ್ಟದಲ್ಲಿ ಬೆಳೆದಿದ್ದು, ಪಿಯುಸಿಯಲ್ಲಿ ಎರಡು ಬಾರಿ ಫೇಲ್ ಆಗಿದ್ದವರು. ತಾಯಿ ಕೂಲಿ ಕೆಲಸ ಮಾಡಿ ಇವರನ್ನು ಸಾಕಿದ್ದಾರೆ. ಇವರು PSI ಹುದ್ದೆಯಲ್ಲಿದ್ದು, ಕೆಲಸದ ಜೊತೆಜೊತೆಗೇ ಕನ್ನಡದಲ್ಲೇ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದರು. ಜೊತೆಗೆ ಕನ್ನಡದಲ್ಲೇ ಪರೀಕ್ಷೆ ಬರೆದು ಪಾಸಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಸಮಾಜಮುಖಿ ಕಾರ್ಯಗಳಲ್ಲಿಯೂ ತೊಡಗಿರುವ ಶಾಂತಪ್ಪ ಕುರುಬರ್ ಬೆಂಗಳೂರಿನ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕರಿಗಾಗಿ 10 ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಿದ್ದಾರೆ. ಹಿಂದೊಮ್ಮೆ ಅವರ ತಾಯಿಗೆ ಆದ ಪ್ರಯಾಸದ ಅನುಭವದಿಂದ, ಇನ್ಯಾರಿಗೂ ಇಂಥ ತೊಂದರೆ ಆಗದಿರಲಿ ಎಂದು, ಸಾರ್ವಜನಿಕರಿಗಾಗಿ ಮೊಬೈಲ್‌ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಿದವರು ಇವರು.

ಇದನ್ನೂ ಓದಿ | UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

ಸಾಧಕರ ಇಂಥ ಕತೆಗಳು ಇತರ ವಿದ್ಯಾರ್ಥಿಗಳಿಗೆ, ಮುಂದಿನ ವರ್ಷಗಳಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆಯಲು ಮುಂದಾಗುವವರಿಗೆ ಸ್ಫೂರ್ತಿದಾಯಕವಾಗಿವೆ. ಕಷ್ಟಗಳನ್ನು ಹೊಂದಿರುವವರು, ಕಷ್ಟಗಳಲ್ಲಿ ಬೆಳೆದವರು, ಶ್ರೀಮಂತ ಹಿನ್ನೆಲೆಯಿಲ್ಲದವರು ಓದಿ ಪರೀಕ್ಷೆ ಬರೆದು ರ‍್ಯಾಂಕ್‌ಗಳನ್ನು ಪಡೆದಿದ್ದಾರೆ. ಶ್ರೀಮಂತ ಹಿನ್ನೆಲೆಯ, ಇಂಗ್ಲಿಷ್‌ನಲ್ಲಿಯೇ ಆರಂಭಿಕ ವಿದ್ಯಾಭ್ಯಾಸ ಪಡೆದ ವಿದ್ಯಾರ್ಥಿಗಳು ಮಾತ್ರ ಇಂಥ ಪರೀಕ್ಷೆಗಳನ್ನು ಬರೆಯಬಹುದು ಎಂಬ ಮಿಥ್ಯೆಯೊಂದು ಬೇರೂರಿದೆ. ಇದನ್ನು ಹೋಗಲಾಡಿಸಲು ಇಂಥ ಫಲಿತಾಂಶಗಳು ನೆರವಾಗುತ್ತವೆ. ದಿನವಿಡೀ ಡ್ಯೂಟಿ ಮಾಡಬೇಕಾದ ಪೊಲೀಸ್‌ ಒಬ್ಬರು ಯುಪಿಎಸ್‌ಸಿ ಪರೀಕ್ಷೆ ಬರೆದು ರ‍್ಯಾಂಕ್‌ ಗಳಿಸಬಹುದಾದರೆ, ಇತರರು ಯಾಕೆ ಮಾಡಲು ಸಾಧ್ಯವಿಲ್ಲ? ಹತ್ತು ಸಲ ಪರೀಕ್ಷೆ ಬರೆದು ಹಿನ್ನಡೆ ಕಂಡವರೂ, ಹನ್ನೊಂದನೇ ಸಲ ಪರೀಕ್ಷೆಯಲ್ಲಿ ಸಾಧನೆ ಮಾಡಬಹುದು ಎಂಬುದು ಕೂಡ ಧನಾತ್ಮಕ ಸಂದೇಶ ನೀಡುವಂಥದು. ಇವರ ಸಾಧನೆಗಳು ಭವಿಷ್ಯದ ಸಾಧಕರಿಗೆ ದಾರಿದೀಪವಾಗಲಿ.

Continue Reading

ಪ್ರಮುಖ ಸುದ್ದಿ

Ram Navami : ಇಂದು ದೇಶಾದ್ಯಂತ ರಾಮ ನವಮಿ ಸಂಭ್ರಮ; ಏನು ಈ ದಿನದ ಮಹತ್ವ?

Ram Navami : ರಾಮ ನವಮಿಯಂದು ಸಾಮಾನ್ಯವಾಗಿ ರಾಮ ಭಕ್ತರು (Ram Bhaktas) ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಹಲವಾರು ಮಂದಿ ಉಪವಾಸ (fasting) ವ್ರತವನ್ನು ಆಚರಿಸುತ್ತಾರೆ. ದೇವಾಲಯಗಳಲ್ಲಿ (temple) ಆಧ್ಯಾತ್ಮಕ ಪ್ರವಚನ, ಭಜನೆ, ಸಂಕೀರ್ತನೆಗಳನ್ನು ಆಯೋಜಿಸಲಾಗುತ್ತದೆ. ತೊಟ್ಟಿಲಲ್ಲಿ ಪುಟ್ಟ ರಾಮನನ್ನು ಇಟ್ಟು ತೂಗಿ ಪೂಜೆ ಸಲ್ಲಿಸಲಾಗುತ್ತದೆ. ಒಟ್ಟಿನಲ್ಲಿ ಈ ದಿನ ಎಲ್ಲರೂ ರಾಮನ ಭಕ್ತಿಯಲ್ಲಿ ಮಿಂದೇಳುತ್ತಾರೆ.

VISTARANEWS.COM


on

Ram Navami
Koo

ಪ್ರತಿ ವರ್ಷದಂತೆ ಈ ಬಾರಿಯು ಭಗವಾನ್ ಶ್ರೀ ರಾಮನ (sriram) ಜನ್ಮ ದಿನವಾದ ರಾಮ ನವಮಿ (Ram Navami) ಮತ್ತೆ ಬಂದಿದೆ. ದೇಶಾದ್ಯಂತ ರಾಮ ನವಮಿ ಉತ್ಸವಕ್ಕೆ ರಾಮ ಭಕ್ತರು ಸಜ್ಜಾಗಿದ್ದಾರೆ. ರಾಮ ಮಂದಿರಗಳನ್ನೂ (ram mandir) ಸುಂದರವಾಗಿ ಅಲಂಕರಿಸಿ ಅತ್ಯಂತ ವೈಭವದಿಂದ ಉತ್ಸವವನ್ನು ಆಚರಿಸಲು ಸಿದ್ದತೆಗಳು ಭರದಿಂದ ಸಾಗುತ್ತಿದೆ.

ರಾಮ ನವಮಿಯಂದು ಸಾಮಾನ್ಯವಾಗಿ ರಾಮ ಭಕ್ತರು (Ram Bhaktas) ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಹಲವಾರು ಮಂದಿ ಉಪವಾಸ (fasting) ವ್ರತವನ್ನು ಆಚರಿಸುತ್ತಾರೆ. ದೇವಾಲಯಗಳಲ್ಲಿ (temple) ಆಧ್ಯಾತ್ಮಕ ಪ್ರವಚನ, ಭಜನೆ, ಸಂಕೀರ್ತನೆಗಳನ್ನು ಆಯೋಜಿಸಲಾಗುತ್ತದೆ. ತೊಟ್ಟಿಲಲ್ಲಿ ಪುಟ್ಟ ರಾಮನನ್ನು ಇಟ್ಟು ತೂಗಿ ಪೂಜೆ ಸಲ್ಲಿಸಲಾಗುತ್ತದೆ. ಒಟ್ಟಿನಲ್ಲಿ ಈ ದಿನ ಎಲ್ಲರೂ ರಾಮನ ಭಕ್ತಿಯಲ್ಲಿ ಮಿಂದೇಳುತ್ತಾರೆ.

ರಾಮ ನವಮಿ ಆಚರಣೆ ಯಾವಾಗ?

ಶ್ರೀ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಜನಿಸಿದ್ದಾನೆ. ಹೀಗಾಗಿ ಹಿಂದೂ ಚಾಂದ್ರಮಾನ ಪಂಚಾಂಗದಲ್ಲಿ ಬರುವ ಏಪ್ರಿಲ್ 17 ಬುಧವಾರದಂದು ರಾಮನವಮಿಯನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ:

ರಾಮ ನವಮಿ ದಿನ ಮಧ್ಯಾಹ್ನ ಗಂಟೆ 11.03 ರಿಂದ 1.38 ವಿಶೇಷವೆಂದು ಪರಿಗಣಿಸಲಾಗಿದೆ. ರಾಮ ನವಮಿ ತಿಥಿಯು ಏಪ್ರಿಲ್ 16ರಂದು ಬೆಳಗ್ಗೆ 1.23ಕ್ಕೆ ಪ್ರಾರಂಭವಾಗಿ ಏಪ್ರಿಲ್ 17ರಂದು ರಾತ್ರಿ 3.14 ಕ್ಕೆ ಮುಕ್ತಾಯವಾಗುತ್ತದೆ.

ರಾಮ ನವಮಿಯ ಇತಿಹಾಸವೇನು?

ಹಿಂದೂ ಪುರಾಣಗಳಲ್ಲಿ ಅತ್ಯಂತ ಶ್ರೇಷ್ಠ ವ್ಯಕ್ತಿಯೆಂದೇ ಪರಿಗಣಿಸಲ್ಪಟ್ಟಿರುವ ಭಗವಾನ್ ರಾಮನ ರಾಮ ನವಮಿಯಂದು ಜನ್ಮ ತಾಳಿದ್ದನು. ಹಿಂದೂ ಕ್ಯಾಲೆಂಡರ್‌ನಲ್ಲಿ ಸಾಂಪ್ರದಾಯಿಕವಾಗಿ ಚೈತ್ರ ಮಾಸದ ಒಂಬತ್ತನೇ ದಿನದಂದು ರಾಮ ನವಮಿಯನ್ನು ಆಚರಿಸಲಾಗುತ್ತದೆ. ಶ್ರೀರಾಮನು ವಿಷ್ಣುವಿನ ಏಳನೇ ಅವತಾರವೆಂದು ನಂಬಲಾಗುತ್ತದೆ. ಸದಾಚಾರ ಮತ್ತು ಸದ್ಗುಣಗಳ ಪ್ರತಿಪಾದಕನೆಂದು ರಾಮನನ್ನು ಕರೆಯಲಾಗುತ್ತದೆ. ಅನೇಕ ಶತಮಾನಗಳಿಂದ ರಾಮ ನವಮಿಯನ್ನು ಅತ್ಯಂತ ವೈಭವಾಗಿ ಆಚರಿಸಲಾಗುತ್ತದೆ.

ರಾಮ ನವಮಿ ಆಚರಣೆ ಏಕೆ ?

ಪ್ರಪಂಚದಾದ್ಯಂತದ ಹಿಂದೂಗಳು ಅಪಾರ ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದ್ದಾರೆ. ರಾಮ ನವಮಿಯು ಧರ್ಮ ಅಥವಾ ಸದಾಚಾರದ ನಿರಂತರ ಮೌಲ್ಯಗಳನ್ನು ಗೌರವಿಸುವ ಆಚರಣೆಯಾಗಿದೆ. ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಇದು ಸೂಚಿಸುತ್ತದೆ. ಭಗವಾನ್ ರಾಮನ ಕರ್ತವ್ಯ, ಗೌರವ ಮತ್ತು ತ್ಯಾಗದ ಉದಾಹರಣೆಯು ಜನರಲ್ಲಿ ನೈತಿಕ ತತ್ತ್ವ ಗಳನ್ನು ಸಂರಕ್ಷಿಸಲು ಮತ್ತು ಸದ್ಗುಣಶೀಲ ಜೀವನವನ್ನು ನಡೆಸಲು ಪ್ರೇರೇಪಿಸುತ್ತದೆ.

ಹೇಗೆ ಆಚರಣೆ ?

ರಾಮ ನವಮಿಯನ್ನು ಭಾರತದಲ್ಲಿ ಜನರು ಬಹಳ ಉತ್ಸಾಹ ಮತ್ತು ಆಸಕ್ತಿಯಿಂದ ಆಚರಿಸುತ್ತಾರೆ. ಭಗವಾನ್ ರಾಮನ ಸಣ್ಣ ವಿಗ್ರಹವನ್ನು ಪೀಠದ ಮೇಲೆ ಇರಿಸಲಾಗುತ್ತದೆ. ಮನೆಗಳನ್ನು ಸ್ವಚ್ಛಗೊಳಿಸುತ್ತಾರೆ ಮತ್ತು ಅಲಂಕರಿಸಲಾಗುತ್ತದೆ. ಮನೆ ಬಾಗಿಲಲ್ಲಿ ರಂಗೋಲಿಗಳನ್ನು ಬರೆಯಲಾಗುತ್ತದೆ. ಭಗವಾನ್ ರಾಮನಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಉಪವಾಸ, ಮೆರವಣಿಗೆ, ಮಹಾಕಾವ್ಯ ರಾಮಾಯಣ ಪಠಿಸುವುದು ಮತ್ತು ಕೇಳುವುದು, ಹವನಗಳಂತ ವಿವಿಧ ಆಚರಣೆಗಳಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ. ರಾಮ ನವಮಿಯು ಒಂಬತ್ತು ದಿನಗಳ ಚೈತ್ರ ನವರಾತ್ರಿ ಉತ್ಸವದ ಅಂತ್ಯವನ್ನು ಸೂಚಿಸುತ್ತದೆ. ಈ ಸಂದರ್ಭದಲ್ಲಿ ಜಾತಿ, ಧರ್ಮ ಮತ್ತು ರಾಷ್ಟ್ರೀಯತೆಯನ್ನು ಮೀರಿ ಎಲ್ಲ ಸಮುದಾಯಗಳು ಏಕತೆ ಮತ್ತು ಸಾಮರಸ್ಯದಿಂದ ಹಬ್ಬದಲ್ಲಿ ಪಾಲ್ಗೊಳ್ಳುತ್ತದೆ.

ಅಯೋಧ್ಯೆಯತ್ತ ಎಲ್ಲರ ಚಿತ್ತ

ಉತ್ತರಪ್ರದೇಶದ ಅಯೋಧ್ಯೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಯಾಕೆಂದರೆ ರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ಬಳಿಕ ಮೊದಲ ಬಾರಿಗೆ ಹೊಸ ಮಂದಿರದಲ್ಲಿ ರಾಮನ ಜನ್ಮ ದಿನವನ್ನು ಆಚರಿಸಲಾಗುತ್ತದೆ. ಈಗಾಗಲೇ ಇಲ್ಲಿ ಸಾಕಷ್ಟು ತಯಾರಿಗಳು ನಡೆದಿದ್ದು, ವಿಶ್ವದ ಗಮನ ಸೆಳೆದಿದೆ. ಹೊರದೇಶಗಳಲ್ಲೂ ಆಚರಣೆ ರಾಮ ಜನ್ಮದಿನವನ್ನು ಭಾರತದಲ್ಲಿ ಮಾತ್ರವಲ್ಲ ನೇಪಾಳ, ಬಾಂಗ್ಲಾದೇಶದ ಹಿಂದೂಗಳೂ ಅತ್ಯಂತ ವೈಭವದಿಂದ ಆಚರಿಸುತ್ತಾರೆ. ಉತ್ತರ ಅಮೆರಿಕ ಮತ್ತು ಯುರೋಪ್ ನ ಕೆಲವು ರಾಷ್ಟ್ರಗಳಲ್ಲೂ ರಾಮನವಮಿಯನ್ನು ಆಚರಿಸಲಾಗುತ್ತದೆ.

Continue Reading

ದೇಶ

Amit Shah: ಶೀಘ್ರದಲ್ಲೇ ಭಾರತ ನಕ್ಸಲ್‌ ಮುಕ್ತವಾಗಲಿದೆ; ಅಮಿತ್ ಶಾ

Amit Shah: ಮಹತ್ವದ ಬೆಳವಣಿಗೆಯೊಂದರಲ್ಲಿ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳು ಭದ್ರತಾ ಪಡೆಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನಕ್ಸಲರನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ. ಸದ್ಯದಲ್ಲೇ ಛತ್ತೀಗಢ ಮತ್ತು ಭಾರತ ನಕ್ಸಲ್‌ ಮುಕ್ತವಾಗಲಿದೆ ಎಂದು ಹೇಳಿದ್ದಾರೆ.

VISTARANEWS.COM


on

amith shah
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳು ಭದ್ರತಾ ಪಡೆಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನಕ್ಸಲರನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ. ಸದ್ಯದಲ್ಲೇ ಛತ್ತೀಗಢ ಮತ್ತು ಭಾರತ ನಕ್ಸಲ್‌ ಮುಕ್ತವಾಗಲಿದೆ ಎಂದು ಹೇಳಿದ್ದಾರೆ.

“ಇಂದು ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯ ನಕ್ಸಲರು ಸಾವನ್ನಪ್ಪಿದ್ದಾರೆ. ತಮ್ಮ ಶೌರ್ಯದಿಂದ ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ ಎಲ್ಲ ಭದ್ರತಾ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಮತ್ತು ಗಾಯಗೊಂಡ ಧೈರ್ಯಶಾಲಿ ಪೊಲೀಸರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಅಮಿತ್‌ ಶಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ʼʼಸರ್ಕಾರದ ಸೂಕ್ತ ಕ್ರಮ ಮತ್ತು ಭದ್ರತಾ ಪಡೆಗಳ ಪ್ರಯತ್ನಗಳಿಂದಾಗಿ ಈಗ ನಕ್ಸಲಿಸಂ ಒಂದು ಸಣ್ಣ ಪ್ರದೇಶಕ್ಕೆ ಸೀಮಿತವಾಗಿದೆʼʼ ಎಂದು ಶಾ ಹೇಳಿದ್ದಾರೆ. ಶೀಘ್ರದಲ್ಲೇ ಛತ್ತೀಸ್‌ಗಢ ಮತ್ತು ಇಡೀ ಭಾರತ ನಕ್ಸಲ್ ಮುಕ್ತವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವನ್ನು ನಕ್ಸಲಿಸಂನ ಪಿಡುಗಿನಿಂದ ಮುಕ್ತಗೊಳಿಸಲು ನಾವು ನಿರ್ಧರಿಸಿದ್ದೇವೆ” ಎಂದು ಶಾ ತಿಳಿಸಿದ್ದಾರೆ.

ಬಿನಗುಂದ ಮತ್ತು ಕೊರೊನಾರ್ ಗ್ರಾಮಗಳ ನಡುವಿನ ಹಪಟೋಲಾ ಅರಣ್ಯದಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ. ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ರಾಜ್ಯದ ಜಿಲ್ಲಾ ಮೀಸಲು ಪಡೆ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಗುಂಡಿನ ಚಕಮಕಿ ನಡೆದಿದೆ.

ಶಸ್ತ್ರಾಸ್ತ್ರ ವಶ

ಎನ್‌ಕೌಂಟರ್‌ ನಡೆದ ಸ್ಥಳದಿಂದ 18 ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್ಎಫ್ ತಿಳಿಸಿದೆ. ಕಾರ್ಯಾಚರಣೆಯ ಸ್ಥಳದಿಂದ ಏಳು ಎಕೆ ಸರಣಿ ರೈಫಲ್‌ಗಳು ಮತ್ತು ಮೂರು ಲೈಟ್ ಮೆಷಿನ್ ಗನ್‌ಗಳನ್ನೂ (LMGs) ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ಚಕಮಕಿ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಕಂಕರ್ ಪೊಲೀಸ್ ವರಿಷ್ಠಾಧಿಕಾರಿ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾರೆ. ಗಾಯಗೊಂಡ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಹತರಾದ ಮಾವೋವಾದಿಗಳ ಪೈಕಿ ಉನ್ನತ ನಕ್ಸಲ್ ನಾಯಕ ಶಂಕರ್ ರಾವ್ ಕೂಡ ಸೇರಿದ್ದಾನೆ. ಪೊಲೀಸ್ ಅಧಿಕಾರಿಗಳ ಪ್ರಕಾರ ಶಂಕರ್‌ ತಲೆಗೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಕಂಕೇರ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಪ್ರತ್ಯೇಕ ಎನ್ಕೌಂಟರ್‌ಗಳಲ್ಲಿ 2023ರ ಡಿಸೆಂಬರ್‌ನಿಂದ ಇಲ್ಲಿಯವರೆಗೆ 68 ನಕ್ಸಲರು ಸಾವನ್ನಪ್ಪಿದ್ದಾರೆ. ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 19ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಬಸ್ತಾರ್ ಪ್ರದೇಶದ ಭಾಗವಾಗಿರುವ ಕಂಕೇರ್ ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಎರಡನೇ ಸುತ್ತಿನಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Kanker Encounter: ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳ ಹತ್ಯೆಗೈದ ಭದ್ರತಾ ಪಡೆ

Continue Reading

ದೇಶ

Nitin Gadkari : ನಾಗ್ಪುರ ಕ್ಷೇತ್ರಕ್ಕೆ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ

Nitin Gadkari: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಾಯದಿಂದ ಅನಧಿಕೃತ ಕೊಳೆಗೇರಿಗಳ ನಿವಾಸಿಗಳಿಗೆ ಮಾಲೀಕತ್ವದ ಹಕ್ಕುಗಳನ್ನು ನೀಡಲು ಮತ್ತು ಹೊಸ ಮನೆಗಳನ್ನು ನಿರ್ಮಿಸಲು ಸಹಾಯ ಮಾಡಲು ಸಹಾಯ ಮಾಡುತ್ತೇನೆ ಎಂದು ಮಾಜಿ ಬಿಜೆಪಿ ಅಧ್ಯಕ್ಷರು ಹೇಳಿದರು. ಕೇಂದ್ರ ಸಚಿವರು ಈಗಾಗಲೇ ನಗರದ ಕೊಳೆಗೇರಿ ಪ್ರದೇಶಗಳಲ್ಲಿ ಒಂದರಲ್ಲಿ ಕೆಲಸವನ್ನು ಪ್ರಾರಂಭಿಸಿದ್ದಾರೆ ಮತ್ತು 500 ರಿಂದ 600 ಮನೆಗಳ ಮಾಲೀಕತ್ವದ ಹಕ್ಕುಗಳನ್ನು ನೀಡಿದ್ದಾರೆ ಎಂದು ಹೇಳಿದರು.

VISTARANEWS.COM


on

Nitin Gadkari
Koo

ನಾಗ್ಪುರ: ಕೇಂದ್ರ ಸಚಿವ ಮತ್ತು ನಾಗ್ಪುರ ಕ್ಷೇತ್ರದ ಬಿಜೆಪಿ ಲೋಕಸಭಾ (Lok Sabah Election) ಅಭ್ಯರ್ಥಿ ನಿತಿನ್ ಗಡ್ಕರಿ (Nitin Gadkari) ಮಂಗಳವಾರ ತಮ್ಮದೇ ಆದ ಪ್ರಣಾಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ತಾವು ಮರು ಆಯ್ಕೆಯಾದರೆ ಮುಂದಿನ ಐದು ವರ್ಷಗಳಲ್ಲಿ ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದ್ದಾರೆ. ಗಡ್ಕರಿ ಅವರ ‘ವಚನನಾಮಾ’ ಅಥವಾ ಚುನಾವಣಾ ಪ್ರಣಾಳಿಕೆಯಲ್ಲಿ ಸ್ಥಳೀಯವಾಗಿ ಹಲವು ಭರವಸೆಗಳನ್ನು ನೀಡಲಾಗಿದೆ. ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ವಿದರ್ಭ ನಗರದಿಂದ ಮೂರನೇ ಅವಧಿಗೆ ಆಯ್ಕೆಯಾದರೆ ಬಿಜೆಪಿ ನೀಡಿರುವ ಭರವಸೆ ಜತೆಗೆ ಮುಂದಿನ ಐದು ವರ್ಷಗಳ ನಾಗ್ಪುರದ ಅಭಿವೃದ್ಧಿಯ ದೃಷ್ಟಿಕೋನವನ್ನು ವಿವರಿಸಿದರು.

ಮತದಾನಕ್ಕೆ ಮೂರು ದಿನಗಳ ಮೊದಲು ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ 66 ವರ್ಷದ ಹಿರಿಯ ಬಿಜೆಪಿ ನಾಯಕ, ಕಳೆದ ಹತ್ತು ವರ್ಷಗಳಲ್ಲಿ ಸಂಸದರಾಗಿ ಅವರು ಮಾಡಿದ ಕೆಲಸಗಳ ಬಗ್ಗೆಯೂ ವಿವರ ನೀಡಿದರು.

ಗಡ್ಕರಿ ಅವರು ತಮ್ಮ ಮೂರನೇ ಅವಧಿಯಲ್ಲಿ ನಾಗ್ಪುರವನ್ನು ‘ಸುಂದರ ಮತ್ತು ಸ್ವಚ್ಛ’ (ಸುಂದರ ಮತ್ತು ಸ್ವಚ್ಛ) ಮಾಡುವುದಾಗಿ ಭರವಸೆ ಕೊಟ್ಟಿದ್ದಾರೆ. ಅಭಿವೃದ್ಧಿ, ನೈರ್ಮಲ್ಯ ಮತ್ತು ನೈರ್ಮಲ್ಯದ ವಿಷಯದಲ್ಲಿ ದೇಶದ ಅಗ್ರ ಐದು ನಗರಗಳಲ್ಲಿ ಸೇರಿಸಲು ಕೆಲಸ ಮಾಡುವುದಾಗಿ ಒತ್ತಿ ಹೇಳಿದರು.

ಇದನ್ನೂ ಓದಿ: Dalip Singh Majithia : 2ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಐಎಎಫ್ ಯೋಧ 103 ನೇ ವಯಸ್ಸಿನಲ್ಲಿ ನಿಧನ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಾಯದಿಂದ ಅನಧಿಕೃತ ಕೊಳೆಗೇರಿಗಳ ನಿವಾಸಿಗಳಿಗೆ ಮಾಲೀಕತ್ವದ ಹಕ್ಕುಗಳನ್ನು ನೀಡಲು ಮತ್ತು ಹೊಸ ಮನೆಗಳನ್ನು ನಿರ್ಮಿಸಲು ಸಹಾಯ ಮಾಡಲು ಸಹಾಯ ಮಾಡುತ್ತೇನೆ ಎಂದು ಮಾಜಿ ಬಿಜೆಪಿ ಅಧ್ಯಕ್ಷರು ಹೇಳಿದರು. ಕೇಂದ್ರ ಸಚಿವರು ಈಗಾಗಲೇ ನಗರದ ಕೊಳೆಗೇರಿ ಪ್ರದೇಶಗಳಲ್ಲಿ ಒಂದರಲ್ಲಿ ಕೆಲಸವನ್ನು ಪ್ರಾರಂಭಿಸಿದ್ದಾರೆ ಮತ್ತು 500 ರಿಂದ 600 ಮನೆಗಳ ಮಾಲೀಕತ್ವದ ಹಕ್ಕುಗಳನ್ನು ನೀಡಿದ್ದಾರೆ ಎಂದು ಹೇಳಿದರು.

100 ಉದ್ಯಾನಗಳು

ನಗರದ ವಿವಿಧ ಭಾಗಗಳಲ್ಲಿ 100 ಉದ್ಯಾನಗಳು ಬರಲಿವೆ ಮತ್ತು ಇವುಗಳಲ್ಲಿ ಅಸ್ತಿತ್ವದಲ್ಲಿರುವವುಗಳನ್ನು ನವೀಕರಿಸಲಾಗುವುದು ಎಂದು ಗಡ್ಕರಿ ಹೇಳಿದರು. ಬೀದಿ ಬದಿ ವ್ಯಾಪಾರಿಗಳು, ರೈತರು, ಧಾನ್ಯ ಸಗಟು ವ್ಯಾಪಾರಿಗಳು ಮತ್ತು ತೈಲ ವ್ಯಾಪಾರಿಗಳಿಗೆ ನಗರದ ಮೀಸಲಾದ ಸ್ಥಳಗಳಲ್ಲಿ ಆಧುನಿಕ ಮಾರುಕಟ್ಟೆಗಳು ಬರಲಿವೆ/ ಇದು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಟ್ರಕ್ ಟರ್ಮಿನಲ್​ಗಳು. ಮೆಟ್ರೋ ಗೇಜ್ ಲೇನ್​ಗಳು, ಹೊಸ ನಾಲ್ಕು ಪಥದ ರೈಲ್ವೆ ಹಳಿಗಳು ಮತ್ತು ನಾಗ್ಪುರದಲ್ಲಿ ಲಾಜಿಸ್ಟಿಕ್ಸ್ ಪಾರ್ಕ್​ಗಳ ನಿರ್ಮಾಣ ತಮ್ಮ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.

2029 ರ ವೇಳೆಗೆ ನಾಗ್ಪುರದಲ್ಲಿ ಒಂದು ಲಕ್ಷ ಹೊಸ ಉದ್ಯೋಗಗಳು ಮತ್ತು ವಿದರ್ಭ ಪ್ರದೇಶದಲ್ಲಿ ಐದು ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಮಹಾರಾಷ್ಟ್ರದ ಎರಡನೇ ರಾಜಧಾನಿಯಾಗಿರುವ ನಾಗ್ಪುರ 2070 ರವರೆಗೆ ಯಾವುದೇ ನೀರಿನ ಕೊರತೆಯನ್ನು ಎದುರಿಸುವುದಿಲ್ಲ ಎಂದು ಅವರು ಭರವಸೆ ನೀಡಿದರು.

Continue Reading
Advertisement
UPSC Results 2023
ದೇಶ6 mins ago

ವಿಸ್ತಾರ ಸಂಪಾದಕೀಯ: ಯುಪಿಎಸ್‌ಸಿ ಸಾಧಕರ ಕತೆಗಳು ಇತರರಿಗೆ ಸ್ಫೂರ್ತಿಯಾಗಲಿ

Ram Navami
ಪ್ರಮುಖ ಸುದ್ದಿ15 mins ago

Ram Navami : ಇಂದು ದೇಶಾದ್ಯಂತ ರಾಮ ನವಮಿ ಸಂಭ್ರಮ; ಏನು ಈ ದಿನದ ಮಹತ್ವ?

State Administrative Reforms Commission Chairman R V Deshpande statement
ಉತ್ತರ ಕನ್ನಡ30 mins ago

Lok Sabha Election 2024: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ: ಆರ್.ವಿ.ದೇಶಪಾಂಡೆ

IPL 2024
ಪ್ರಮುಖ ಸುದ್ದಿ34 mins ago

IPL 2024 : ಬಟ್ಲರ್ ಮುಂದೆ ಮಂಕಾದ ನರೈನ್​; ಕೆಕೆಆರ್ ವಿರುದ್ಧ ಆರ್​​ಆರ್​ಗೆ 2 ವಿಕೆಟ್ ಜಯ

Murder Case
ಕರ್ನಾಟಕ47 mins ago

Chitradurga News: ಚಿತ್ರದುರ್ಗದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ

amith shah
ದೇಶ1 hour ago

Amit Shah: ಶೀಘ್ರದಲ್ಲೇ ಭಾರತ ನಕ್ಸಲ್‌ ಮುಕ್ತವಾಗಲಿದೆ; ಅಮಿತ್ ಶಾ

Nitin Gadkari
ದೇಶ1 hour ago

Nitin Gadkari : ನಾಗ್ಪುರ ಕ್ಷೇತ್ರಕ್ಕೆ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ

UPSC Results 2023
ಕರ್ನಾಟಕ2 hours ago

UPSC Results 2023: ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದ ಶಾಂತಪ್ಪ ಕುರುಬರ; ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡ ಸಾಧಕ!

Dalip Singh Majithia
ಪ್ರಮುಖ ಸುದ್ದಿ2 hours ago

Dalip Singh Majithia : 2ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಐಎಎಫ್ ಯೋಧ 103 ನೇ ವಯಸ್ಸಿನಲ್ಲಿ ನಿಧನ

Ayodhya Ram Mandir
ದೇಶ2 hours ago

Ayodhya Ram Mandir: ನಾಳೆ ಅಯೋಧ್ಯೆ ಶ್ರೀರಾಮನಿಗೆ ಸೂರ್ಯ ತಿಲಕ; ಮನೆಯಲ್ಲೇ ಕೂತು ಹೀಗೆ ಕಣ್ತುಂಬಿಕೊಳ್ಳಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ19 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20242 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ5 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌