ಕರ್ನಾಟಕದಲ್ಲಿ 75 ಕೆರೆ ಅಭಿವೃದ್ಧಿಪಡಿಸುವ ಟಾಸ್ಕ್‌ ನೀಡಿದ ಮೋದಿ: CM ಬೊಮ್ಮಾಯಿಗೆ ಸೂಚನೆ - Vistara News

ದೇಶ

ಕರ್ನಾಟಕದಲ್ಲಿ 75 ಕೆರೆ ಅಭಿವೃದ್ಧಿಪಡಿಸುವ ಟಾಸ್ಕ್‌ ನೀಡಿದ ಮೋದಿ: CM ಬೊಮ್ಮಾಯಿಗೆ ಸೂಚನೆ

ಸ್ವಾತಂತ್ರ್ಯದ ಅಮೃತಮಹೋತ್ಸವ ಸಂದರ್ಭದಲ್ಲಿ ರಾಜ್ಯದ ಅವಶ್ಯಕತೆಗೆ ಅನುಗುಣವಾಗಿ ಕೆರೆ ಅಭಿವೃದ್ಧಿ ಕಾರ್ಯ ವಹಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿಕೆ.

VISTARANEWS.COM


on

narendra modi
ನವದೆಹಲಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಸೇರಿ ಅನೇಕರ ಜತೆಗೆ ಭಾಗಿಯಾದ ಸಿಎಂ ಬಸವರಾಜ ಬೊಮ್ಮಾಯಿ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾದ ಹಿನ್ನೆಲೆಯಲ್ಲಿ ಕರ್ನಾಟಕದ 75 ಕೆರೆ ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ಈ ವರ್ಷವನ್ನು ಅರ್ಥಪೂರ್ಣವಾಗಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೊಸ ಟಾಸ್ಕ್‌ ನೀಡಿದ್ದಾರೆ.

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸೇರಿ ದೇಶದ ಎಲ್ಲ ರಾಜ್ಯಗಳ ಬಿಜೆಪಿ ಪ್ರಮುಖರ ಜತೆಗೆ ಮೋದಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಎಲ್ಲ ರಾಜ್ಯಗಳಿಗೂ ಒಂದೊಂದು ವಿಶೇಷ ಟಾಸ್ಕ್‌ಗಳನ್ನು ನೀಡಿದ್ದಾರೆ. ಸ್ವಾತಂತ್ರ್ಯದ ಅಮೃತಮಹೋತ್ಸವ ಸಂದರ್ಭದಲ್ಲಿ ರಾಜ್ಯದ ಅವಶ್ಯಕತೆಗೆ ಅನುಗುಣವಾಗಿ ಕೆರೆ ಅಭಿವೃದ್ಧಿ ಕಾರ್ಯ ವಹಿಸಿದ್ದಾರೆ.

ಈ ಕುರಿತು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲ ರಾಜ್ಯಗಳವರಿಗೂ ಒಂದೊಂದು ಟಾಸ್ಕ್ ನೀಡಿದ್ದಾರೆ. ಕರ್ನಾಟಕದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ. ನೀರಿನ ಸಮಸ್ಯೆ ಹೆಚ್ಚಾಗಿರುವ ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಹೇಳಿದರು.

ಹೆಚ್ಚಿನ ಓದು: ಮಂಗಳವಾರ ದೆಹಲಿಗೆ ಸಿಎಂ: 2-3 ದಿನದಲ್ಲಿ ಸಂಪುಟ ವಿಸ್ತರಣೆಗೆ ‌ʼಹೈʼ ಗ್ರೀನ್‌ಸಿಗ್ನಲ್..?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Satyendar Jain : ಆಪ್​ಗೆ ಇನ್ನಷ್ಟು ಸಂಕಷ್ಟ; ಸತ್ಯೇಂದರ್​ ಜೈನ್ ವಿರುದ್ಧ ಸಿಬಿಐ ತನಿಖೆಗೆ ಆದೇಶ

Satyendar Jain: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸತ್ಯೇಂದರ್ ಜೈನ್ ಅವರನ್ನು 2022 ರ ಮೇ ತಿಂಗಳಲ್ಲಿ ಬಂಧಿಸಲಾಯಿತು. ಅವರ ಕೊನೆಯ ಜಾಮೀನು ಅರ್ಜಿಯನ್ನು ಈ ವರ್ಷದ ಮಾರ್ಚ್​ನಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣಾಗುವಂತೆ ಉನ್ನತ ನ್ಯಾಯಾಲಯವು ಅವರಿಗೆ ಸೂಚಿಸಿತು.

VISTARANEWS.COM


on

Satyendar Jain
Koo

ನವದೆಹಲಿ: ವಂಚಕ ಸುಕೇಶ್ ಚಂದ್ರಶೇಖರ್ ನಿಂದ 10 ಕೋಟಿ ರೂ.ಗಳನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿರುವ ಎಎಪಿ ನಾಯಕ ಸತ್ಯೇಂದರ್ ಜೈನ್ (Satyendar Jain) ವಿರುದ್ಧ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಜೈನ್ ಮತ್ತು ತಿಹಾರ್ ಜೈಲಿನ ಮಾಜಿ ಡಿಜಿ ಸಂದೀಪ್ ಗೋಯೆಲ್ ಅವರು ತಿಹಾರ್ ನಿಂದ ಸುಲಿಗೆ ದಂಧೆ ನಡೆಸುತ್ತಿದ್ದರು ಮತ್ತು ಉನ್ನತ ಮಟ್ಟದ ಕೈದಿಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. ಹೀಗಾಗಿ ಆಡಳಿತಾರೂಢ ಅಪ್​ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಈ ವರ್ಷದ ಆರಂಭದಲ್ಲಿ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಸತ್ಯೇಂದರ್ ಜೈನ್ ವಿರುದ್ಧದ ಸುಲಿಗೆ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಅನುಮತಿ ನೀಡಿದ್ದರು. ಸುಲಿಗೆ ಆರೋಪಗಳ ಬಗ್ಗೆ ತನಿಖೆ ನಡೆಸಲು ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿ ಕೋರಿ ಬರೆದ ಪತ್ರದಲ್ಲಿ, ಜೈನ್ ಅವರು ತಿಹಾರ್ ಜೈಲಿನಿಂದ ಉನ್ನತ ಮಟ್ಟದ ಸುಲಿಗೆ ದಂಧೆಯನ್ನು ನಡೆಸುತ್ತಿದ್ದಾರೆ. ಜೈಲಿನಲ್ಲಿ ಐಷಾರಾಮಿಯಾಗಿ ಬದುಕು ನಡೆಸಲು ಸುಕೇಶ್​ ಚಂದ್ರಶೇಖರ್ ನಿಂದ 10 ಕೋಟಿ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಸಿಬಿಐ ಕಳೆದ ವರ್ಷ ನವೆಂಬರ್​ನಲ್ಲಿ ಬರೆದಿತ್ತು.

ದೆಹಲಿಯ ವಿವಿಧ ಜೈಲುಗಳಾದ ತಿಹಾರ್, ರೋಹಿಣಿ ಮತ್ತು ಮಂಡೋಲಿಯಲ್ಲಿ ಆರಾಮವಾಗಿ ವಾಸಿಸಲು ಅನುಕೂಲವಾಗುವಂತೆ ಜೈನ್ ಗೆ ವೈಯಕ್ತಿಕವಾಗಿ ಅಥವಾ ತನ್ನ ಸಹಚರರ ಮೂಲಕ 2018-21ರ ಅವಧಿಯಲ್ಲಿ ವಿವಿಧ ಕಂತುಗಳಲ್ಲಿ ಹಣವನ್ನು ನೀಡಿದ್ದೇನೆ ಎಂದು ಸುಕೇಶ್ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: Blast in Bangalore : ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರ ಸುಳಿವು ಕೊಟ್ಟರೆ 10 ಲಕ್ಷ ರೂ. ಇನಾಮು; ಇಲ್ಲಿದೆ ಉಗ್ರರ ಪೋಟೊ ಸಮೇತ ವಿವರ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸತ್ಯೇಂದರ್ ಜೈನ್ ಅವರನ್ನು 2022 ರ ಮೇ ತಿಂಗಳಲ್ಲಿ ಬಂಧಿಸಲಾಯಿತು. ಅವರ ಕೊನೆಯ ಜಾಮೀನು ಅರ್ಜಿಯನ್ನು ಈ ವರ್ಷದ ಮಾರ್ಚ್​ನಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣಾಗುವಂತೆ ಉನ್ನತ ನ್ಯಾಯಾಲಯವು ಅವರಿಗೆ ಸೂಚಿಸಿತು. ಜೈಲಿನ ಸ್ನಾನಗೃಹದಲ್ಲಿ ಬಿದ್ದ ನಂತರ ಅವರಿಗೆ ಮೇ 26, 2023 ರಂದು ಮಧ್ಯಂತರ ವೈದ್ಯಕೀಯ ಜಾಮೀನು ನೀಡಲಾಯಿತು. ಜಾಮೀನು ಅವಧಿಯಲ್ಲಿ, ಅವರು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

Continue Reading

ಪ್ರಮುಖ ಸುದ್ದಿ

Blast in Bangalore : ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರ ಸುಳಿವು ಕೊಟ್ಟರೆ 10 ಲಕ್ಷ ರೂ. ಇನಾಮು; ಇಲ್ಲಿದೆ ಉಗ್ರರ ಪೋಟೊ ಸಮೇತ ವಿವರ

Blast in Bangalore: ಸ್ಫೋಟ ನಡೆಸಿದ ಪ್ರಮುಖ ಆರೋಪಿಯನ್ನು ಮುಸ್ಸಾವಿರ್ ಶಾಜಿಬ್ ಹುಸೇನ್ ಎಂದು ತನಿಖಾ ಸಂಸ್ಥೆ ಗುರುತಿಸಿದ್ದು, ರಾಮೇಶ್ವರಂ ಕೆಫೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಎನ್ಐಎ ಪ್ರಕಾರ, ಆತ ಸುಮಾರು 6 ಅಡಿ 2 ಇಂಚು ಎತ್ತರವಿರುವ 30 ವರ್ಷದ ವ್ಯಕ್ತಿ. ಬಾಲಕರ ಹಾಸ್ಟೆಲ್, ಪಿಜಿ ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್​ಗಳಲ್ಲಿ ವಾಸಿಸುತ್ತಿದ್ದು, ಮೊಹಮ್ಮದ್ ಜುನೇದ್ ಸಯೀದ್ ಹೆಸರಿನಲ್ಲಿ ನಕಲಿ ಚಾಲನಾ ಪರವಾನಗಿ ಬಳಸುತ್ತಿದ್ದಾನೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಆರೋಪಿ ತನ್ನ ಮೂಲ ಗುರುತನ್ನು ಮರೆಮಾಚಲು ಮುಖಗವಸು, ನಕಲಿ ಗಡ್ಡ ಅಥವಾ ವಿಗ್ ಧರಿಸುತ್ತಾನೆ ಎಂದು ಹೇಳಿದೆ.

VISTARANEWS.COM


on

Mussavir Hussain
Koo

ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಸ್ಫೋಟ (Blast in Bangalore) ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ ಬಳಿಕ, ತಲೆಮರೆಸಿಕೊಂಡಿರುವ ಇತರ ಇಬ್ಬರು ಆರೋಪಿಗಳ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡುವವರಿಗೆ 10 ಲಕ್ಷ ರೂ.ಗಳ ನಗದು ಬಹುಮಾನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ ಘೋಷಿಸಿದೆ. ಪತ್ತೆ ಮಾಡುವ ಉದ್ದೇಶಕ್ಕಾಗಿ ಎನ್​ಐಎ ಇಬ್ಬರೂ ಶಂಕಿತರ ಮೂಲ ವಿವರಗಳನ್ನು ನೀಡಿದೆ ಮತ್ತು ಆರೋಪಿಗಳನ್ನು ಬಂಧಿಸಲು ಸಾರ್ವಜನಿಕರ ನೆರವು ಕೋರಿದೆ.

ಸ್ಫೋಟ ನಡೆಸಿದ ಪ್ರಮುಖ ಆರೋಪಿಯನ್ನು ಮುಸ್ಸಾವಿರ್ ಶಾಜಿಬ್ ಹುಸೇನ್ ಎಂದು ತನಿಖಾ ಸಂಸ್ಥೆ ಗುರುತಿಸಿದ್ದು, ಆತನ ಚಲನವಲನಗಳು ರಾಮೇಶ್ವರಂ ಕೆಫೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಎನ್ಐಎ ಪ್ರಕಾರ, ಆತ ಸುಮಾರು 6 ಅಡಿ 2 ಇಂಚು ಎತ್ತರವಿರುವ 30 ವರ್ಷದ ವ್ಯಕ್ತಿ. ಬಾಲಕರ ಹಾಸ್ಟೆಲ್, ಪಿಜಿ ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್​ಗಳಲ್ಲಿ ವಾಸಿಸುತ್ತಿದ್ದಾನೆ. ಮೊಹಮ್ಮದ್ ಜುನೇದ್ ಸಯೀದ್ ಹೆಸರಿನಲ್ಲಿ ನಕಲಿ ಚಾಲನಾ ಪರವಾನಗಿ ಬಳಸುತ್ತಿದ್ದಾನೆ ಎಂದೂ ತನಿಖಾಧಿಕಾರಿಗಳು ಹೇಳಿದ್ದಾರೆ. ಆರೋಪಿ ತನ್ನ ಮೂಲ ಗುರುತನ್ನು ಮರೆಮಾಚಲು ಮುಖಗವಸು, ನಕಲಿ ಗಡ್ಡ ಅಥವಾ ವಿಗ್ ಧರಿಸುತ್ತಾನೆ ಎಂದು ಹೇಳಿದೆ.

ಇದನ್ನೂ ಓದಿ: Juice Jacking: ಸಾರ್ವಜನಿಕ ಸ್ಥಳಗಳ ಮೊಬೈಲ್​ ಚಾರ್ಜರ್​ ಬಳಸುವಾಗ ಎಚ್ಚರಿಕೆ; ಸೈಬರ್ ಕಳ್ಳರಿದ್ದಾರೆ!

ಸ್ಫೋಟದ ಇನ್ನೋರ್ವ ಆರೋಪಿ ಅಬ್ದುಲ್ ಮತೀನ್ ಅಹ್ಮದ್ ತಾಹಾ, ಸ್ಫೋಟ ನಡೆಸಲು ಮುಸ್ಸಾವಿರ್​ಗೆ ಸಹಾಯ ಮಾಡಿದ್ದನೆಂದು ಹೇಳಲಾಗಿದ್ದು, ಆತನಿಗೂ ಹುಡುಕಾಟ ನಡೆಯುತ್ತಿದೆ. ಈತ ತನ್ನ ಮೂಲ ಗುರುತನ್ನು ಮರೆಮಾಚಲು ವಿಘ್ನೇಶ್ ಡಿ ಮತ್ತು ಸುಮಿತ್ ಎಂಬ ಹಿಂದೂ ಹೆಸರನ್ನೂ ಬಳಸುತ್ತಿದ್ದಾನೆ ಎಂದು ಎನ್​​ಐಎ ಹೇಳಿದೆ. ಆತ ಬಹುಶಃ ಹುಡುಗರ ಹಾಸ್ಟೆಲ್ ಗಳು, ಪಿಜಿಗಳು ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್ ಗಳಲ್ಲಿ ವಾಸಿಸುತ್ತಿದ್ದಾನೆ ಎಂದು ಹೇಳಿದ್ದಾರೆ. ಇಬ್ಬರೂ ಆರೋಪಿಗಳು ತೀರ್ಥಹಳ್ಳಿ ಮೂಲದವರು.

ಪ್ರಕರಣದ ಆರೋಪಿಗಳ ಬಗ್ಗೆ ವಿವರಗಳನ್ನು ನೀಡುವವರಿಗೆ ಎನ್ಐಎ ಈ ಹಿಂದೆಯೂ 10 ಲಕ್ಷ ರೂ.ಗಳ ಬಹುಮಾನ ಘೋಷಿಸಿತ್ತು. ಶಂಕಿತರ ರೇಖಾಚಿತ್ರಗಳನ್ನು ಈ ಹಿಂದೆ ಬಿಡುಗಡೆ ಮಾಡಿತ್ತು. ಮಾರ್ಚ್ 1 ರಂದು ರೆಸ್ಟೋರೆಂಟ್​ನಲ್ಲಿ ಸಂಭವಿಸಿದ ಐಇಡಿ ಸ್ಫೋಟದ ಸಹ ಸಂಚುಕೋರ ಮುಜಮ್ಮಿಲ್ ಶರೀಪ್​ನನ್ನು ಎನ್ಐಎ ಗುರುವಾರ ಬಂಧಿಸಿದೆ. ಸ್ಫೋಟ ಸಂಭವಿಸಿದ ನಂತರ ಕಳೆದ ತಿಂಗಳಲ್ಲಿ ಎನ್ಐಎ ನಡೆಸಿದ ಮೊದಲ ಬಂಧನ ಇದಾಗಿದೆ.

Continue Reading

ಪ್ರಮುಖ ಸುದ್ದಿ

Juice Jacking: ಸಾರ್ವಜನಿಕ ಸ್ಥಳಗಳ ಮೊಬೈಲ್​ ಚಾರ್ಜರ್​ ಬಳಸುವಾಗ ಎಚ್ಚರಿಕೆ; ಸೈಬರ್ ಕಳ್ಳರಿದ್ದಾರೆ!

Juice Jacking: ‘ಜ್ಯೂಸ್ ಜಾಕಿಂಗ್​’ ಎಂದು ಕರೆಯುವ ಹ್ಯಾಕಿಂಗ್ ಮಾದರಿ ಮೂಲಕ ಡೇಟಾ ಸುರಕ್ಷತಾ ಬೆದರಿಕೆಗಳು ಹೆಚ್ಚಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಯುಎಸ್​ಸಿಬಿ ಚಾರ್ಚರ್​ಗಳ ಮೂಲಕ ಮೊಬೈಲ್ ಮತ್ತು ಲ್ಯಾಪ್​ಟಾಪ್ ಚಾರ್ಜ್ ಮಾಡದಂತೆ ಭಾರತೀಯ ಕಂಪ್ಯೂಟರ್​ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್​ (CRET-in) ಸೂಚನೆ ನೀಡಿದೆ. ಹ್ಯಾಕರ್​ಗಳು ಸಾರ್ವಜನಿಕ ಯುಎಸ್​ಬಿ ಚಾರ್ಜಿಂಗ್ ಕೇಂದ್ರಗಳಲ್ಲಿ ಮಾಲ್ವೇರ್ ಅನ್ನು ಸ್ಥಾಪಿಸುವ ಮೂಲಕ ಅಥವಾ ಅವರ ಹಾರ್ಡ್​ವೇರ್​ ಬದಲಾಯಿಸುವ ಮೂಲಕ ಮಾಹಿತಿ ಕದಿಯುತ್ತಾರೆ. ಬ್ಯಾಂಕ್​ ಸೇರಿದಂತೆ ಎಲ್ಲ ಡೇಟಾವನ್ನು ಕದಿಯಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ.

VISTARANEWS.COM


on

Juce Jacking
Koo

ಬೆಂಗಳೂರು: ವ್ಯಕ್ತಿಗಳು ತಮ್ಮ ಫೋನ್​​ನ ಬ್ಯಾಟರಿ ಕಡಿಮೆಯಾದಾಗ ಚಾರ್ಜಿಂಗ್ ಪೋರ್ಟ್​ಗಳೊಂದಿಗೆ ಸಮೀಪದ ಕಾಫಿ ಶಾಪ್​ಗಳು, ಮಾಲ್​ಗಳು ಸೇರಿದಂತೆ ನಾನಾ ಕಡೆ ಹೋಗಿ ಕುಳಿತು ಚಾರ್ಚ್ ಮಾಡಲು ಯತ್ನಿಸುತ್ತಾರೆ. ಆದರೆ, ಇದು ಅತ್ಯಂತ ಅಪಾಯಕಾರಿ ನಡೆ ಎಂಬುದನ್ನು ವರ್ಷಗಳ ಹಿಂದಿನಿಂದಲೇ ಹೇಳುತ್ತಾ ಬರಲಾಗುತ್ತಿದೆ. ಆದಾಗ್ಯೂ ಜನರ ಹವ್ಯಾಸ ಕಡಿಮೆಯಾಗದಿರುವ ಕಾರಣ ಸರ್ಕಾರ ಪದೇ ಪದೆ ಎಚ್ಚರಿಕೆ ನೀಡುತ್ತಿದೆ. ಇದು ನಿಮ್ಮ ಮಾಹಿತಿಯನ್ನು ಕದಿಯಲು ಸೈಬರ್ ಕಳ್ಳರಿಗೆ ಅವಕಾಶ ಕೊಟ್ಟ (Juice Jacking) ಹಾಗೆ ಎಂದು ಹೇಳಲಾಗುತ್ತದೆ. ಅಂತೆಯೇ ಇದೀಗ ಭಾರತೀಯ ಕಂಪ್ಯೂಟರ್​ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್​ (CRET-in) ಹೊಸ ಸೂಚನೆ (Juice Jacking) ನೀಡಿದ್ದು ಈ ರೀತಿಯ ಸಾಮಾನ್ಯ ಅಭ್ಯಾಸಗಳು ಸೈಬರ್ ವಂಚನೆಗೆ ಬಲಿಯಾಗುವಂತೆ ಮಾಡಬಹುದು ಎಂದು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದೆ.

ಈ ಹಿಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) kUw ಮೊಬೈಲ್ ಫೋನ್ ಬಳಕೆದಾರರಿಗೆ ಎಚ್ಚರಿಕೆಯ ಸಂದೇಶ ನೀಡಿತ್ತು. ಸಾರ್ವಜನಿಕ ಚಾರ್ಜರ್​ಗಳ ಮೂಲಕ ತಮ್ಮ ಎಲೆಕ್ಟ್ರಾನಿಕ್​ ಸಾಧನಗಳನ್ನು ಚಾರ್ಜ್ ಮಾಡದಂತೆ ಸಲಹೆ ನೀಡಿತ್ತು. “ಜ್ಯೂಸ್ ಜಾಕಿಂಗ್” (Juice Jacking) ಸೈಬರ್ ದಾಳಿಯಿಂದ ಉಂಟಾಗುವ ಭದ್ರತಾ ಸುರಕ್ಷತೆಯ ಆತಂಕದ ಕಾರಣಕ್ಕೆ ಈ ಎಲ್ಲ ಸಂಸ್ಥೆಗಳು ಎಚ್ಚರಿಕೆಗಳನ್ನು ನೀಡುತ್ತಿವೆ.

ಜ್ಯೂಸ್ ಜಾಕಿಂಗ್ ಎಂದರೇನು?

“ಜ್ಯೂಸ್ ಜಾಕಿಂಗ್” ಎಂಬ ಪದವನ್ನು ಮೊದಲು 2011 ರಲ್ಲಿ ಸೈಬರ್ ಭದ್ರತಾ ತಜ್ಞ ಬ್ರಿಯಾನ್ ಕ್ರೆಬ್ ರಚಿಸಿದ್ದಾರೆ. ಇದು ಒಂದು ರೀತಿಯ ಸೈಬರ್ ದಾಳಿಯಾಗಿದ್ದು. ಹ್ಯಾಕರ್​ಗಳು ಸಾರ್ವಜನಿಕ ಯುಎಸ್​ಬಿ ಚಾರ್ಜಿಂಗ್ ಕೇಂದ್ರಗಳಲ್ಲಿ ಮಾಲ್ವೇರ್ ಅನ್ನು ಸ್ಥಾಪಿಸಿ ಮಾಹಿತಿ ಕದಿಯುವ ಮಾದರಿ ಇದು. ಯಾರಿಗೂ ಗೊತ್ತಿಲ್ಲದೇ ಇಲ್ಲಿ ಲಿಂಕ್ ಮಾಡಿದ ಸಾಧನಗಳಿಂದ ಡೇಟಾವನ್ನು ಕದಿಯಲಾಗುತ್ತದೆ.

ಪ್ರಮುಖವಾಗಿ ವಿಳಾಸಗಳು, ಬ್ಯಾಂಕ್ ಮತ್ತು ಕ್ರೆಡಿಟ್ ಕಾರ್ಡ್ ವಿವರಗಳು ಮತ್ತು ಪಾಸ್ವರ್ಡ್​ಗಳು ಸೇರಿದಂತೆ ಸೂಕ್ಷ್ಮ ಮಾಹಿತಿಯನ್ನು ಹ್ಯಾಕರ್​ಗಳು ಪಡೆಯುತ್ತಾರೆ. ಮಾಲ್ ಗಳು, ಹೋಟೆಲ್ ಗಳು, ಕೆಫೆಗಳು ಮತ್ತು ವಿಮಾನ ನಿಲ್ದಾಣಗಳು ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ದಾಳಿಗಳು ಸುಲಭವಾಗಿ ನಡೆಯುತ್ತವೆ.

ಇದನ್ನೂ ಓದಿ: Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

ಕಿಯೋಸ್ಕ್​ನ ಪರದೆಯ ಮೇಲೆ ಉಚಿತ ಸೆಲ್ ಫೋನ್ ಚಾರ್ಜಿಂಗ್ ಸ್ಟೇಷನ್ ಎಂದು ಬರೆದಿರುತ್ತದೆ. ಆದರೆ ಗ್ರಾಹಕರು ತಮ್ಮ ಫೋನ್​ಗಳನ್ನು ಪ್ಲಗ್ ಇನ್ ಮಾಡಿದ ತಕ್ಷಣ ಮಾಲ್ವೇರ್​ಗಳನ್ನು ಅಪ್​ಲೋಡ್ ಮಾಡಿ ಮಾಹಿತಿ ಕದಿಯುತ್ತಾರೆ.

ಇದು ಹೇಗೆ ಕೆಲಸ ಮಾಡುತ್ತದೆ?

ಮಾಹಿತಿಯೇ ಇರುವುದಿಲ್ಲ: ಇಂಥ ಚಾರ್ಜಿಂಗ್ ಪಾಯಿಂಟ್​ಗಳ ಮೂಲಕ ಜನರನ್ನು ಸುಲಭವಾಗಿ ವಂಚಿಸಬಹುದು. ಯಾಕೆಂದರೆ ಇಲ್ಲಿಗೆ ಚಾರ್ಜ್ ಮಾಡಲು ಬರುವವರಿಗೆ ಸಣ್ಣ ಅರಿವು ಕೂಡ ಇರುವುದಿಲ್ಲ. ಅವರೆಲ್ಲರಿಗೆ ಮಾಹಿತಿ ಕದ್ದರೂ ಗೊತ್ತಾಗುವುದಿಲ್ಲ.

ಡೇಟಾ ಕಳ್ಳತನ: ಹ್ಯಾಕರ್​ಗಳ ಮೋಸಕ್ಕೆ ಬಲಿಯಾಗುವ ಬಳಕೆದಾರರು ತಮ್ಮ ಸಾಧನವನ್ನು ಹ್ಯಾಕ್ ಮಾಡಿದ ಚಾರ್ಜಿಂಗ್ ಸಂಪರ್ಕಕ್ಕೆ ಸಂಪರ್ಕಿಸಿದ ತಕ್ಷಣ ದುರುದ್ದೇಶಪೂರಿತ ಸಾಫ್ಟ್ ವೇರ್ ಅಥವಾ ಹಾರ್ಡ್ ವೇರ್ ಸಂಪರ್ಕಿತ ಸಾಧನಕ್ಕೆ ಲೋಡ್ ಆಗುತ್ತದೆ. ಅದರ ಮೂಲಕ ಕಾಲಕಾಲಕ್ಕೆ ಮಾಹಿತಿ ಕದಿಯಬಹುದು.

ಮಾಲ್ವೇರ್ ಇಂಜೆಕ್ಷನ್: ಕೆಲವು ಹಗರಣಗಳಲ್ಲಿ, ವ್ಯಕ್ತಿಯ ಫೋನ್ ಅಥವಾ ಟ್ಯಾಬ್ಲೆಟ್ ಮಾಲ್ವೇರ್​ಗಳಿಂದ ತುಂಬಿಕೊಳ್ಳುತ್ತದೆ. ಅಂಥ ಸಾಧನಗಳ ಮಾಹಿತಿ ಸೋರಿಕೆಯಾಗುವ ಜತೆಗೆ ಬಳಕೆ ಮಾಡಲಾಗದ ಸ್ಥಿತಿಗೆ ಬರುತ್ತದೆ.

ನೀವು ಏನು ಮಾಡಬಹುದು?

ಜ್ಯೂಸ್-ಜಾಕಿಂಗ್ ಹಗರಣಕ್ಕೆ ಬಲಿಯಾಗದಂತೆ ರಕ್ಷಿಸಲು ನೀವು ಇನ್ನೂ ಕೆಲವು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬಹುದು. “ಯುಎಸ್​ಬಿ ಕಾಂಡೋಮ್​ಗಳು ” ಎಂದೂ ಕರೆಯಲ್ಪಡುವ ಯುಎಸ್​ಬಿ ಡೇಟಾ ಬ್ಲಾಕರ್​ಗಳನ್ನು ಬಳಸಬೇಕು. ಅವು ಸಣ್ಣ ಅಡಾಪ್ಟರ್​ಗಳು. ಅವು ಡೇಟಾದ ಹರಿವನ್ನು ತಡೆಗಟ್ಟುವ ಜತೆಗೆ ಚಾರ್ಜಿಂಗ್​ಗೆ ಮಾತ್ರ ಅವಕಾಶ ಕೊಡತ್ತದೆ. ಚಾರ್ಜಿಂಗ್ ಮಾಡುವಾಗ ಯಾವುದೇ ಡೇಟಾ ವಿನಿಮಯವನ್ನು ಸಾಧ್ಯವಿಲ್ಲ.

ಸಿಇಆರ್​ಟಿ ಎಚ್ಚರಿಕೆಯೇನು?

  • ಸೈಬರ್ ಅಪರಾಧಿಗಳು ವಿಮಾನ ನಿಲ್ದಾಣಗಳು, ಕೆಫೆಗಳು, ಹೋಟೆಲ್ ಗಳು ಮತ್ತು ಬಸ್ ನಿಲ್ದಾಣ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾದ ಯುಎಸ್ ಬಿ ಚಾರ್ಜಿಂಗ್ ಪೋರ್ಟ್ ಗಳನ್ನು ದುರುದ್ದೇಶಪೂರಿತ ಚಟುವಟಿಕೆಗಳಿಗೆ ಬಳಸಬಹುದು.
  • ಅಂತಹ ಸೋಂಕಿತ ಯುಎಸ್ ಬಿ ಚಾರ್ಜಿಂಗ್ ಕೇಂದ್ರಗಳಲ್ಲಿ ನಿಮ್ಮ ಎಲೆಕ್ಟ್ರಾನಿಕ್ ಸಾಧನವನ್ನು ಚಾರ್ಜ್ ಮಾಡಿದರೆ, ನೀವು ಜ್ಯೂಸ್-ಜಾಕಿಂಗ್ ಸೈಬರ್ ದಾಳಿಗೆ ಬಲಿಯಾಗಬಹುದು.

ಉತ್ತಮ ಅಭ್ಯಾಸಗಳು

  • ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳು ಅಥವಾ ಪೋರ್ಟಬಲ್ ವಾಲ್ ಚಾರ್ಜರ್ ಗಳಿಗೆ ಪ್ಲಗ್ ಮಾಡುವ ಮೊದಲು ಎರಡು ಬಾರಿ ಯೋಚಿಸಿ.
  • ನಿಮ್ಮ ಮೊಬೈಲ್ ಸಾಧನವನ್ನು ಚಾರ್ಜ್ ಮಾಡಲು ಎಲೆಕ್ಟ್ರಿಕಲ್ ವಾಲ್ ಔಟ್ ಲೆಟ್ ಬಳಸಿ.
  • ನಿಮ್ಮ ಸ್ವಂತ ವೈಯಕ್ತಿಕ ಕೇಬಲ್ ಅಥವಾ ಪವರ್ ಬ್ಯಾಂಕ್ ಅನ್ನು ಒಯ್ಯಲು ಪ್ರಯತ್ನಿಸಿ.
  • ನಿಮ್ಮ ಮೊಬೈಲ್ ಸಾಧನವನ್ನು ಲಾಕ್ ಮಾಡಿ ಮತ್ತು ಸಂಪರ್ಕಿತ ಸಾಧನದೊಂದಿಗೆ ಜೋಡಿಸುವುದನ್ನು ನಿಷ್ಕ್ರಿಯಗೊಳಿಸಿ.
  • ನಿಮ್ಮ ಫೋನ್ ಸ್ವಿಚ್ ಆಫ್ ಸ್ಥಿತಿಯಲ್ಲಿದ್ದಾಗ ಅದನ್ನು ಚಾರ್ಜ್ ಮಾಡಲು ಪ್ರಯತ್ನಿಸಿ.
    ಸೈಬರ್ ವಂಚನೆ ಘಟನೆಯನ್ನು https://www.cybercrime.gov.in ಗಂಟೆಗೆ ವರದಿ ಮಾಡಿ ಅಥವಾ 1930 ಗೆ ಕರೆ ಮಾಡಿ
    ಭದ್ರತೆ ನಮ್ಮ ಮೊದಲ ಆದ್ಯತೆ
    ಹೆಚ್ಚಿನ ಸುರಕ್ಷತಾ ಸಲಹೆಗಳಿಗಾಗಿ ಭೇಟಿ ನೀಡಿ: https://www.cert-in.org.in ಮತ್ತು https://www.csk.gov.in
Continue Reading

ಪ್ರಮುಖ ಸುದ್ದಿ

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

ಹೂಡಿಕೆ ಮಾಡುವಾಗ ಪ್ರತಿಯೊಬ್ಬರು ಸಮಗ್ರ ಮತ್ತು Income Tax: ದೀರ್ಘಕಾಲೀನ ಯೋಜನೆಯನ್ನು ಅಳವಡಿಸಿಕೊಳ್ಳಬೇಕು. ಹೂಡಿಕೆ ಮೇಲಿನ ಆದಾಯ, ಲಾಕ್-ಇನ್ ಅವಧಿ ಸೇರಿದಂತೆ ಹಲವಾರು ಮಾನದಂಡಗಳನ್ನು ಹೊಂದಿರುವ ಹೂಡಿಕೆಯನ್ನು ಆಯ್ಕೆ ಮಾಡಿಕೊಂಡರೆ ಮಾತ್ರ ತೆರಿಗೆ ಲಾಭ ದೊರೆಯುವುದು. ಉದಾಹರಣೆಗೆ ಪಿಪಿಎಫ್ ತೆರಿಗೆ ಮುಕ್ತ ಉತ್ತಮ ಆದಾಯ ನೀಡುತ್ತದೆ. ಆದರೆ ತೆರಿಗೆದಾರರು ವಾರ್ಷಿಕವಾಗಿ ಕನಿಷ್ಠ 500 ರೂ.ಗಳನ್ನು ಪಾವತಿ ಮಾಡಲೇಬೇಕು. ಆದರೆ ಇದಕ್ಕೆ 15 ವರ್ಷಗಳ ಲಾಕ್-ಇನ್ ಅವಧಿಯೂ ಇದೆ. ಒಂದು ಬಾರಿ ಹೂಡಿಕೆ ಮಾಡಿ ಮತ್ತೆ ನಿಲ್ಲಿಸಿದರೆ ಅಥವಾ ಮಧ್ಯದಲ್ಲಿಯೇ ವಾಪಸ್ ಪಡೆಯಲು ಪ್ರಯತ್ನಿಸಿದರೆ ನಷ್ಟವೇ ಹೆಚ್ಚು.

VISTARANEWS.COM


on

income Tax - how to save tax
Koo

ಬೆಂಗಳೂರು: 2023-24ರ ಹಣಕಾಸು ವರ್ಷವು ಮಾರ್ಚ್ 31 ಕ್ಕೆ ಕೊನೆಗೊಳ್ಳಲಿದೆ. ಇದೇ ವೇಳೆ ಆದಾಯ ತೆರಿಗೆ (Income Tax) ಕಟ್ಟುವವರಿಗೆ ಹಣಕಾಸು ವರ್ಷದಲ್ಲಿ ತಮ್ಮ ಟ್ಯಾಕ್ಸ್​ಗಳನ್ನು (Tax Savings) ಉಳಿಸಲು ಕೊನೆಯ ಅವಕಾಶ ಇದು. ಆದರೆ ಸಾಕಷ್ಟು ಮಂದಿ ಕೊನೆಯ ಕ್ಷಣದ ಅವಸರದಲ್ಲಿ ತಪ್ಪುಗಳನ್ನು ಮಾಡುತ್ತಾರೆ. ಈ ಬಾರಿ ಆ ರೀತಿ ಮಾಡಬೇಡಿ. ಮಾರ್ಚ್ 31ರ ಗಡುವು ಹತ್ತಿರದಲ್ಲಿರುವುದರಿಂದ ಏನು ಮಾಡಬೇಕು ಎಂಬುದನ್ನು ಪರಿಣತರ ಅಭಿಪ್ರಾಯಗಳನ್ನು ಇಲ್ಲಿ ನೀಡಲಾಗಿದೆ.

ಮಾರ್ಚ್ 31ರಿಂದ ಕೇವಲ ಒಂದೆರಡು ದಿನಗಳು ಮಾತ್ರ ಇರುವುದರಿಂದ ಹೂಡಿಕೆ ಸಲಹೆಗಾರರು, ತೆರಿಗೆ ಸಲಹೆಗಾರರು ಮತ್ತು ತೆರಿಗೆದಾರರು ಬ್ಯುಸಿಯಾಗಿರುತ್ತಾರೆ. ಹೀಗಾಗಿ ತೆರಿಗೆ ಲಾಭವನ್ನು ಪಡೆಯಲು ತೆರಿಗೆ ಉಳಿತಾಯ ಹೂಡಿಕೆಗಳಲ್ಲಿ ಹಣವನ್ನು ಹೂಡಿಕೆ ಮಾಡಲೇಬೇಕು ಎಂದು ಹೇಳುತ್ತಾರೆ.

ಆದಾಯ ತೆರಿಗೆ ಕಾಯ್ದೆ, 1961, ಪಿಪಿಎಫ್, ಎಲ್ಐಸಿ ಪ್ರೀಮಿಯಂಗಳು, ಫಿಕ್ಸೆಡ್​ ಡೆಪಾಸಿಟ್​ಗಳು, ಇಎಲ್ಎಸ್ಎಸ್, ಯುಲಿಪ್, ಎನ್ಎಸ್ಸಿ ಮುಂತಾದ ನಿರ್ದಿಷ್ಟ ಸೆಕ್ಯುರಿಟಿಗಳಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ ತೆರಿಗೆ ಉಳಿಸಬಹುದು ಎಂದು ರೌಟೆ ಹೇಳುತ್ತಾರೆ.

ಹೂಡಿಕೆ ಮಾಡುವಾಗ ಪ್ರತಿಯೊಬ್ಬರು ಸಮಗ್ರ ಮತ್ತು ದೀರ್ಘಕಾಲೀನ ಯೋಜನೆಯನ್ನು ಅಳವಡಿಸಿಕೊಳ್ಳಬೇಕು. ಹೂಡಿಕೆ ಮೇಲಿನ ಆದಾಯ, ಲಾಕ್-ಇನ್ ಅವಧಿ ಸೇರಿದಂತೆ ಹಲವಾರು ಮಾನದಂಡಗಳನ್ನು ಹೊಂದಿರುವ ಹೂಡಿಕೆಯನ್ನು ಆಯ್ಕೆ ಮಾಡಿಕೊಂಡರೆ ಮಾತ್ರ ತೆರಿಗೆ ಲಾಭ ದೊರೆಯುವುದು. ಉದಾಹರಣೆಗೆ ಪಿಪಿಎಫ್ ತೆರಿಗೆ ಮುಕ್ತ ಉತ್ತಮ ಆದಾಯ ನೀಡುತ್ತದೆ. ಆದರೆ ತೆರಿಗೆದಾರರು ವಾರ್ಷಿಕವಾಗಿ ಕನಿಷ್ಠ 500 ರೂ.ಗಳನ್ನು ಪಾವತಿ ಮಾಡಲೇಬೇಕು. ಆದರೆ ಇದಕ್ಕೆ 15 ವರ್ಷಗಳ ಲಾಕ್-ಇನ್ ಅವಧಿಯೂ ಇದೆ. ಒಂದು ಬಾರಿ ಹೂಡಿಕೆ ಮಾಡಿ ಮತ್ತೆ ನಿಲ್ಲಿಸಿದರೆ ಅಥವಾ ಮಧ್ಯದಲ್ಲಿಯೇ ವಾಪಸ್ ಪಡೆಯಲು ಪ್ರಯತ್ನಿಸಿದರೆ ನಷ್ಟವೇ ಹೆಚ್ಚು.

ತೆರಿಗೆ ಉಳಿತಾಯ ಅನುಕೂಲ ನೀಡುವ ಸ್ಥಿರ ಠೇವಣಿಗಳು ಕಡಿಮೆ ಬಡ್ಡಿದರವನ್ನು ನೀಡುತ್ತವೆ. ಆದರೆ ಇದು ಸುಮಾರು 5 ವರ್ಷಗಳವರೆಗೆ ಲಾಕ್-ಇನ್ ಹೊಂದಿರುತ್ತವೆ. ಹೀಗಾಗಿ, ಸರಿಯಾದ ಆಯ್ಕೆಯನ್ನು ಮಾಡಲು ಮತ್ತು ನಿಮ್ಮ ಪ್ರಯೋಜನಗಳನ್ನು ಉತ್ತಮಗೊಳಿಸಲು ನಿರ್ದಿಷ್ಟ ಹೂಡಿಕೆ ಮಾಡಬೇಕು ಎಂದು ಅವರು ಹೇಳಿದ್ದಾರೆ. ತೆರಿಗೆ ಉಳಿತಾಯವನ್ನು ಹೆಚ್ಚಿಸಲು ಕೆಲವೊಂದು ಸಾಮಾನ್ಯ ತಪ್ಪುಗಳನ್ನು ಮಾಡಬಾರದು ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಮಾಡುವ ತಪ್ಪುಗಳು

ಸೆಕ್ಷನ್ 80 ಸಿ ನಿರ್ಲಕ್ಷಿಸುವುದು: ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಸಿ ತೆರಿಗೆ ಉಳಿತಾಯ ಹೂಡಿಕೆಗಳಿಗೆ ಇಎಲ್ಎಸ್ಎಸ್ (ಈಕ್ವಿಟಿ ಲಿಂಕ್ಡ್ ಸೇವಿಂಗ್ಸ್ ಸ್ಕೀಮ್), ಪಿಪಿಎಫ್ (ಪಬ್ಲಿಕ್ ಪ್ರಾವಿಡೆಂಟ್ ಫಂಡ್), ಎನ್ಎಸ್ಸಿ (ನ್ಯಾಷನಲ್ ಸೇವಿಂಗ್ಸ್​ ಸರ್ಟಿಫೀಕೇಟ್​) ಮುಂತಾದ ವಿವಿಧ ಮಾರ್ಗಗಳಿವೆ. ಅನೇಕ ತೆರಿಗೆದಾರರು ಸೆಕ್ಷನ್ 80 ಸಿ ಅಡಿಯಲ್ಲಿ ಲಭ್ಯವಿರುವ 1.5 ಲಕ್ಷ ರೂ.ಗಳ ಸಂಪೂರ್ಣ ಮಿತಿಯನ್ನು ಬಳಸಿಕೊಳ್ಳಲು ವಿಫಲರಾಗುತ್ತಾರೆ. ಎಲ್ಲಾ ಆಯ್ಕೆಗಳನ್ನು ಮೌಲ್ಯಮಾಪನ ಮಾಡಿ ಮತ್ತು ಈ ವಿಭಾಗದ ಅಡಿಯಲ್ಲಿ ತೆರಿಗೆ ಉಳಿತಾಯ ಮಾಡುವಂಥ ಹೂಡಿಕೆ ಮಾಡಿ.

ಇದನ್ನೂ ಓದಿ : LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

ಅಪೂರ್ಣ ದಾಖಲೆಗಳು: ತೆರಿಗೆ ಉಳಿತಾಯ ಹೂಡಿಕೆಗಳಿಗೆ ಅಗತ್ಯವಿರುವ ಎಲ್ಲಾ ದಾಖಲೆಗಳು ಚಾಲ್ತಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಿ. ಇದರಲ್ಲಿ ಹೂಡಿಕೆ ರಸೀದಿಗಳು, ಪ್ರೀಮಿಯಂ ಪಾವತಿ ಪ್ರಮಾಣಪತ್ರಗಳು, ಸಾಲ ಪ್ರಮಾಣಪತ್ರಗಳು ಇತ್ಯಾದಿಗಳು ಸೇರಿಕೊಂಡಿವೆ. ಅಪೂರ್ಣ ದಾಖಲೆಗಳು ತೆರಿಗೆ ಕಡಿತದ ಅವಕಾಶ ಸಿಗದಂತೆ ಮಾಡಬಹುದು. ಹೀಗಾಗಿ ನಿಮ್ಮ ಹೂಡಿಕೆಗಳು ಮತ್ತು ಕಡಿತಗಳ ದಾಖಲೆಗಳನ್ನು ಇರಿಸಿಕೊಳ್ಳಿ. ಯಾಕೆಂದರೆ ನಿಮ್ಮ ತೆರಿಗೆ ಫೈಲಿಂಗ್ ಗಳನ್ನು ಪರಿಶೀಲಿಸಲು ಐಟಿ ಇಲಾಖೆ ದಾಖಲೆಗಳ ಮರುಪರಿಶೀಲನೆ ಮಾಡುವ ಸಾಧ್ಯತೆಗಳಿವೆ.

ತೆರಿಗೆ ಯೋಜನೆಗಳನ್ನು ನಿರ್ಲಕ್ಷಿಸುವುದು: ಸೆಕ್ಷನ್ 80 ಸಿ ಹೊರತುಪಡಿಸಿ, ತೆರಿಗೆ ಪ್ರಯೋಜನಗಳನ್ನು ಪಡೆಯಬಹುದಾದ 80 ಡಿ (ಆರೋಗ್ಯ ವಿಮಾ ಪ್ರೀಮಿಯಂ), 80 ಇ (ಶಿಕ್ಷಣ ಸಾಲದ ಬಡ್ಡಿ) ಮತ್ತು 80 ಜಿ (ನಿರ್ದಿಷ್ಟ ನಿಧಿಗಳಿಗೆ ದೇಣಿಗೆ) ನಂತಹ ಇತರ ವಿಭಾಗಗಳಿವೆ. ಈ ಲಾಭವನ್ನು ನಿರ್ಲಕ್ಷಿಸುವುದರಿಂದ ತೆರಿಗೆ ಉಳಿಸುವ ಅವಕಾಶಗಳನ್ನು ಕಳೆದುಕೊಳ್ಳಬಹುದು.

ದೀರ್ಘಾವಧಿಯ ಹಣಕಾಸು ಗುರಿಯ ನಿರ್ಲಕ್ಷ್ಯ: ತೆರಿಗೆ ಉಳಿತಾಯ ಹೂಡಿಕೆಗಳು ನಿಮ್ಮ ದೀರ್ಘಾವಧಿಯ ಹಣಕಾಸು ಉದ್ದೇಶಗಳಿಗೆ ಹೊಂದಿಕೆಯಾಗಬೇಕು. ತೆರಿಗೆ ಲಾಭ ಪಡೆಯುವ ಉದ್ದೇಶದಿಂದ ಮಾತ್ರ ಹೂಡಿಕೆ ಮಾಡಿದರೆ ಅದು ನಿಮ್ಮ ಹಣಕಾಸಿನ ಅಗತ್ಯಕ್ಕೆ ಅದು ಹೊಂದಿಕೆಯಾಗದೇ ಹೋದರೆ ಅದರಿಂದ ಹೆಚ್ಚಿನ ಲಾಭವು ಸಿಗುವುದಿಲ್ಲ.

Continue Reading
Advertisement
Satyendar Jain
ಪ್ರಮುಖ ಸುದ್ದಿ3 mins ago

Satyendar Jain : ಆಪ್​ಗೆ ಇನ್ನಷ್ಟು ಸಂಕಷ್ಟ; ಸತ್ಯೇಂದರ್​ ಜೈನ್ ವಿರುದ್ಧ ಸಿಬಿಐ ತನಿಖೆಗೆ ಆದೇಶ

Karnataka Weather
ಮಳೆ16 mins ago

Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

Mussavir Hussain
ಪ್ರಮುಖ ಸುದ್ದಿ19 mins ago

Blast in Bangalore : ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರ ಸುಳಿವು ಕೊಟ್ಟರೆ 10 ಲಕ್ಷ ರೂ. ಇನಾಮು; ಇಲ್ಲಿದೆ ಉಗ್ರರ ಪೋಟೊ ಸಮೇತ ವಿವರ

Provide infrastructure in polling booths says ZP Deputy Secretary Mallikarjuna thodalabagi
ಕೊಪ್ಪಳ20 mins ago

Koppala News: ಮತಗಟ್ಟೆಗಳಲ್ಲಿ ಮೂಲಸೌಕರ್ಯ ಕಲ್ಪಿಸಿ; ಜಿ.ಪಂ‌ ಉಪಕಾರ್ಯದರ್ಶಿ

18th CII ITC Sustainable Award Ceremony
ಬೆಂಗಳೂರು22 mins ago

Bengaluru News: ಸಿಎಸ್‌ಆರ್‌ ಮಹತ್ವದ ಸಾಧನೆಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ಗೆ ಪ್ರಶಂಸೆ

Car collided with electric pole The photographer died on the spot
ಕ್ರೈಂ25 mins ago

Road Accident: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ಫೋಟೋಗ್ರಾಫರ್‌ ಸ್ಥಳದಲ್ಲೇ ಸಾವು

Ash Gourd Juice Benefits
ಆರೋಗ್ಯ26 mins ago

Ash Gourd Juice Benefits: ಬೂದುಕುಂಬಳಕಾಯಿ ಜ್ಯೂಸ್‌ ಕುಡಿಯುವುದರಿಂದ ಆಗುವ 10 ಪ್ರಯೋಜನಗಳಿವು

Lok Sabha Election 2024
ಕರ್ನಾಟಕ26 mins ago

Lok Sabha Election 2024: ಜೆಡಿಎಸ್ ಪಟ್ಟಿ ಬಿಡುಗಡೆ; ಮಂಡ್ಯದಿಂದ ಎಚ್‌ಡಿಕೆ, ಕೋಲಾರ, ಹಾಸನಕ್ಕೆ ಯಾರು?

Lok Sabha Election 2024 Women are only for cook says Shamanur Shivashankarappa and Gayatri says women knows how to fly in the sky
Lok Sabha Election 202428 mins ago

Lok Sabha Election 2024: ಮಹಿಳೆಯರು ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು; ಆಕಾಶದಲ್ಲಿ ಹಾರಾಡೋಕೂ ಗೊತ್ತೆಂದ ಗಾಯತ್ರಿ

Juce Jacking
ಪ್ರಮುಖ ಸುದ್ದಿ42 mins ago

Juice Jacking: ಸಾರ್ವಜನಿಕ ಸ್ಥಳಗಳ ಮೊಬೈಲ್​ ಚಾರ್ಜರ್​ ಬಳಸುವಾಗ ಎಚ್ಚರಿಕೆ; ಸೈಬರ್ ಕಳ್ಳರಿದ್ದಾರೆ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌