Site icon Vistara News

ಕರ್ನಾಟಕದಲ್ಲಿ 75 ಕೆರೆ ಅಭಿವೃದ್ಧಿಪಡಿಸುವ ಟಾಸ್ಕ್‌ ನೀಡಿದ ಮೋದಿ: CM ಬೊಮ್ಮಾಯಿಗೆ ಸೂಚನೆ

narendra modi

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾದ ಹಿನ್ನೆಲೆಯಲ್ಲಿ ಕರ್ನಾಟಕದ 75 ಕೆರೆ ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ಈ ವರ್ಷವನ್ನು ಅರ್ಥಪೂರ್ಣವಾಗಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೊಸ ಟಾಸ್ಕ್‌ ನೀಡಿದ್ದಾರೆ.

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸೇರಿ ದೇಶದ ಎಲ್ಲ ರಾಜ್ಯಗಳ ಬಿಜೆಪಿ ಪ್ರಮುಖರ ಜತೆಗೆ ಮೋದಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಎಲ್ಲ ರಾಜ್ಯಗಳಿಗೂ ಒಂದೊಂದು ವಿಶೇಷ ಟಾಸ್ಕ್‌ಗಳನ್ನು ನೀಡಿದ್ದಾರೆ. ಸ್ವಾತಂತ್ರ್ಯದ ಅಮೃತಮಹೋತ್ಸವ ಸಂದರ್ಭದಲ್ಲಿ ರಾಜ್ಯದ ಅವಶ್ಯಕತೆಗೆ ಅನುಗುಣವಾಗಿ ಕೆರೆ ಅಭಿವೃದ್ಧಿ ಕಾರ್ಯ ವಹಿಸಿದ್ದಾರೆ.

ಈ ಕುರಿತು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲ ರಾಜ್ಯಗಳವರಿಗೂ ಒಂದೊಂದು ಟಾಸ್ಕ್ ನೀಡಿದ್ದಾರೆ. ಕರ್ನಾಟಕದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ. ನೀರಿನ ಸಮಸ್ಯೆ ಹೆಚ್ಚಾಗಿರುವ ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಹೇಳಿದರು.

ಹೆಚ್ಚಿನ ಓದು: ಮಂಗಳವಾರ ದೆಹಲಿಗೆ ಸಿಎಂ: 2-3 ದಿನದಲ್ಲಿ ಸಂಪುಟ ವಿಸ್ತರಣೆಗೆ ‌ʼಹೈʼ ಗ್ರೀನ್‌ಸಿಗ್ನಲ್..?

Exit mobile version