Maha politics| ಶಿವಸೇನಾದ 16 ರೆಬೆಲ್‌ ಶಾಸಕರ ಅನರ್ಹತೆ ನೋಟಿಸ್‌, ಸುಪ್ರೀಂಕೋರ್ಟ್‌ನಲ್ಲಿ ಇಂದು ವಿಚಾರಣೆ - Vistara News

ದೇಶ

Maha politics| ಶಿವಸೇನಾದ 16 ರೆಬೆಲ್‌ ಶಾಸಕರ ಅನರ್ಹತೆ ನೋಟಿಸ್‌, ಸುಪ್ರೀಂಕೋರ್ಟ್‌ನಲ್ಲಿ ಇಂದು ವಿಚಾರಣೆ

ಮಹಾರಾಷ್ಟ್ರ ರಾಜಕಾರಣದ ಜಟಿಲ ಕಾನೂನು ಸಂಘರ್ಷ ಸುಪ್ರೀಂಕೋರ್ಟ್‌ ಮುಟ್ಟಿದ್ದು, ಶಿವಸೇನಾದ 16 ರೆಬೆಲ್‌ ಶಾಸಕರ ಅನರ್ಹತೆ ನೋಟಿಸ್‌ ಪ್ರಶ್ನಿಸಿ ಶಿಂಧೆ ಬಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಶಿವಸೇನಾದ ರೆಬೆಲ್‌ ನಾಯಕ ಏಕನಾಥ್‌ ಶಿಂಧೆ ಅವರು ತಮ್ಮ ಹಾಗೂ ಇತರ ೧೫ ಶಾಸಕರನ್ನು ಅನರ್ಹಗೊಳಿಸುವ ನೋಟಿಸ್‌ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದು, ಇಂದು ಪ್ರಕರಣದ ವಿಚಾರಣೆ ನಡೆಯಲಿದೆ.

ಶಿಂಧೆ ಬಣದ ಪರ ಖ್ಯಾತ ನ್ಯಾಯವಾದಿ ಹರೀಶ್‌ ಸಾಳ್ವೆ ವಾದಿಸಲಿದ್ದಾರೆ. ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ಅವರು ಉದ್ಧವ್‌ ಠಾಕ್ರೆ ಬಣದ ಪರ ವಕಾಲತ್‌ ವಹಿಸಲಿದ್ದಾರೆ.

ಕಳೆದ ಜೂನ್‌ ೨೨ರಿಂದ ಶಿಂದೆ ಬಣ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದು, ಇದಕ್ಕೆ ಸೇರುತ್ತಿರುವ ಶಾಸಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಮತ್ತೊಂದು ಕಡೆ ಶಿಂಧೆ ಹಾಗೂ ಉದ್ಧವ್‌ ಠಾಕ್ರೆ ಪಾಳೆಯದ ನಡುವೆ ಜಟಿಲ ಕಾನೂನು ಸಮರ ಏರ್ಪಟ್ಟಿದೆ.

ಇದನ್ನೂ ಓದಿ: Maha Politics | ಉದ್ಧವ್‌ ಸಂಪುಟದಲ್ಲಿ ಉಳಿದಿರುವುದು 3 ಶಿವಸೇನಾ ಸಚಿವರು ಮಾತ್ರ!

ಶಿವಸೇನಾದ ಮೂರನೇ ಎರಡರಷ್ಟು ಶಾಸಕರ ಬೆಂಬಲವನ್ನು ಈಗಾಗಲೇ ಶಿಂಧೆ ಬಣ ಗಳಿಸಿದ್ದರೂ, ಪಕ್ಷಾಂತರ ತಡೆ ಕಾಯಿದೆ ಬಿಗಿಯಾಗಿರುವುದರಿಂದ ಅಷ್ಟೇ ಸಾಕಾಗುವುದಿಲ್ಲ. ಒಂದೋ ಬಿಜೆಪಿ ಜತೆ ವಿಲೀನವಾಗಬೇಕು, ಇಲ್ಲದಿದ್ದರೆ ತಮ್ಮದೇ ಅಸಲಿ ಶಿವಸೇನೆ ಎಂದು ಶಿಂಧೆ ಬಣ ಸಾಬೀತುಪಡಿಸಬೇಕು. ಆದರೆ ಅದು ಅಷ್ಟು ಸುಲಭವಲ್ಲ. ಏಕೆಂದರೆ ಉದ್ಧವ್‌ ಠಾಕ್ರೆ ಶಿವಸೇನಾ ಅಧ್ಯಕ್ಷರು ಎಂಬ ಚರ್ಚೆ ನಡೆಯುತ್ತಿದೆ. ಹೀಗಾಗಿ ಸುಪ್ರೀಂಕೋರ್ಟ್‌ನಲ್ಲಿ ಇಂದು ನಡೆಯಲಿರುವ ವಿಚಾರಣೆ ದೇಶದ ಗಮನ ಸೆಳೆದಿದೆ.

ಇದನ್ನೂ ಓದಿ: Maha politics: ಅನರ್ಹತೆ ತಪ್ಪಿಸಬೇಕಿದ್ರೆ ಶಿಂಧೆ ಟೀಮ್‌ ಬಿಜೆಪಿ ಸೇರಲೇಬೇಕು! ಇದು ಕಾನೂನು! 2/3 ಮೆಜಾರಿಟಿ ಲೆಕ್ಕಕ್ಕಿಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Job Alert: ನವೋದಯ ವಿದ್ಯಾಲಯ ಸಮಿತಿಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು

VISTARANEWS.COM


on

Job Alert
Koo

ಬೆಂಗಳೂರು: ನವೋದಯ ವಿದ್ಯಾಲಯ ಸಮಿತಿ (Navodaya Vidyalaya Samiti)ಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Navodaya Vidyalaya Samiti Recruitment 2024). ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟಾಫ್‌ ನರ್ಸ್‌ 121 ಹುದ್ದೆ, ವಿದ್ಯಾರ್ಹತೆ: ಬಿಎಸ್ಸಿ ನರ್ಸಿಂಗ್ ಅಸಿಸ್ಟಂಟ್ ಸೆಕ್ಷನ್‌ ಆಫೀಸರ್ (ಎಎಸ್‌ಒ) 5 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಆಡಿಟ್ ಅಸಿಸ್ಟಂಟ್ 12 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ
ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್ 4 ಹುದ್ದೆ, ವಿದ್ಯಾರ್ಹತೆ: ಸ್ನಾತಕೊತ್ತರ ಪದವಿ
ಲೀಗಲ್ ಅಸಿಸ್ಟಂಟ್ 1 ಹುದ್ದೆ, ವಿದ್ಯಾರ್ಹತೆ: ಕಾನೂನು ಪದವಿ
ಸ್ಟೆನೋಗ್ರಾಫರ್ 23 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಕಂಪ್ಯೂಟರ್ ಆಪರೇಟರ್ 2 ಹುದ್ದೆ, ವಿದ್ಯಾರ್ಹತೆ: ಸಿಎಸ್‌, ಐಟಿ ವಿಷಯಗಳಲ್ಲಿ ಬಿಇ / ಬಿ.ಟೆಕ್ / ಬಿಸಿಎ/ ಬಿಎಸ್ಸಿ
ಕ್ಯಾಟರಿಂಗ್ ಸೂಪರ್‌ವೈಸರ್ 78 ಹುದ್ದೆ, ಹೋಟೆಲ್‌ ಮ್ಯಾನೇಜ್‌ಮೆಂಟ್‌ ಪದವಿ
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ 21 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (ಜೆಎಸ್‌ಎ) 360
ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್ 128 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಇಲೆಕ್ಟ್ರೀಷಿಯನ್ ಅಂಡ್ ವೈರಿಂಗ್
ಲ್ಯಾಬ್‌ ಅಟೆಂಡಂಟ್ 161 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ / ಪಿಯುಸಿ ಜತೆಗೆ ಲ್ಯಾಬೋರೇಟರಿ ಟೆಕ್ನಿಕಲ್ ಸ್ಕಿಲ್‌
ಮೆಸ್‌ ಹೆಲ್ಪರ್ 442 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (ಎಂಟಿಎಸ್) 19 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 37 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸ್ಟಾಫ್‌ ನರ್ಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,500 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಒಬಿಸಿ ವಿಭಾಗದವರು 1,000 ರೂ. ಮತ್ತು ಇತರ ವರ್ಗದವರು 500 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು.

Navodaya Vidyalaya Samiti Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಿಸಿದ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

Continue Reading

ದೇಶ

Narendra Modi: ಅಯೋಧ್ಯೆಯಲ್ಲಿಂದು ಪ್ರಧಾನಿ ಮೋದಿ ರೋಡ್‌ಶೋ; ರಾಮಲಲ್ಲಾನಿಗೆ ವಿಶೇಷ ಪೂಜೆ

Narendra Modi:ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ:ಲೋಕಸಭಾ ಚುನಾವಣೆ(Lok Sabha Election 2024) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮ ಜನ್ಮಭೂಮಿ(Ram Janmbhoomi)ಯಲ್ಲಿ ಶ್ರೀರಾಮ ಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ವಿಶೇಷ ಪೂಜೆ ಬಳಿಕ ಸುಮಾರು ಎರಡು ಕಿಲೋಮೀಟರ್‌ ರೋಡ್‌ ಶೋ(Roadshow) ನಡೆಸಲಿದ್ದಾರೆ. ಶನಿವಾರವೇ ಉತ್ತರಪ್ರದೇಶಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ, ಸಮಾಜವಾದಿ ಪಕ್ಷ(SP)ದ ಭದ್ರಕೋಟೆ ಇಟವಾದಲ್ಲಿ ಮಧ್ಯಾಹ್ನ ಸಾರ್ವಜನಿಕ ಸಭೆ ಹಾಗೂ ಧೌರಹರದಲ್ಲಿ ಸಂಜೆ ರ್ಯಾಲಿ ಕೈಗೊಳ್ಳಲಿದ್ದಾರೆ.

ಇದಾದ ಬಳಿಕ ನೇರವಾಗಿ ಅಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ, ಸಂಜೆ 7ಗಂಟೆಗೆ ರಾಮಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಸುಮಾರು 2 ಕಿಲೋ ಮೀಟರ್‌ ರೋಡ್‌ಶೋ ನಡೆಸಲಿದ್ದಾರೆ. ಇನ್ನು ಈ ರೋಡ್‌ ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಸಾಗಲಿದೆ. ಈ ಬೃಹತ್‌ ರೋಡ್‌ಶೋದಲ್ಲಿ ಸಿಂಧಿ, ಪಂಜಾಬಿಗಳು ಮತ್ತು ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಿಯಾಗಲಿದ್ದಾರೆ. ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂ ಸಿಂಗರಿಸಲಾಗಿದೆ. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೋಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸಕಲ ಸಿದ್ದತೆ ನಡೆಸಲಾಗಿದೆ. ರಾಮಲಲ್ಲಾ ದರ್ಶನ ಮಾರ್ಗದ ಗೇಟ್‌ ನಂಬರ್‌ 11ರಲ್ಲಿ ಹೂಗಳಿಂದ ಸಿಂಗರಿಸಲಾಗಿದೆ. ರಸ್ತೆಯುದ್ಧಕ್ಕೂ ಪ್ರಧಾನಿ ಮೋದಿಯ ಕಟೌಟ್‌ ನಿರ್ಮಿಸಲಾಗಿದೆ. ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

ಮೇ 14ರಂದು ನಾಮಪತ್ರ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಮೇ 14 ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಭಾನುವಾರ ಈ ವಿಷಯ ತಿಳಿಸಿದ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13 ರಂದು ಮೋದಿ ಅವರು ಕ್ಷೇತ್ರದಲ್ಲಿ ರೋಡ್‌ಶೋ ನಡೆಸಲಿದ್ದು, ಅದಕ್ಕೆ ಸಿದ್ಧತೆಗಳು ನಡೆಯುತ್ತಿರುವುದಾಗಿ ತಿಳಿಸಿದರು. “ರೋಡ್‌ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ, ಮೇ 14 ರಂದು ಪ್ರಧಾನಿ ಮೋದಿ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ವಾರಣಾಸಿಯಲ್ಲಿ ಕಾಂಗ್ರೆಸ್ ತನ್ನ ಉತ್ತರ ಪ್ರದೇಶದ ಮುಖ್ಯಸ್ಥ ಅಜಯ್ ರೈ ಮತ್ತು ಬಿಎಸ್ ಪಿ ಅಥರ್ ಜಮಾಲ್ ಲಾರಿ ಅವರನ್ನು ಕಣಕ್ಕಿಳಿಸಿದೆ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಮತ್ತು ಕೊನೆಯ ಸುತ್ತಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಚುನಾವಣೆ ನಡೆಯಲಿದೆ

Continue Reading

ದೇಶ

Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

Police Officer: ಮಧ್ಯಪ್ರದೇಶದ ಶಾಹ್‌ದೋಲ್‌ ಜಿಲ್ಲೆಯ ನೌಧಿಯಾ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿತ್ತು. ಶನಿವಾರ ರಾತ್ರಿ (ಮೇ 5) ಒಬ್ಬ ಮಹೇಂದ್ರ ಬಾಗ್ರಿ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ದಂಧೆಕೋರರನ್ನು ಹಿಡಿಯಲು ಮಾಫಿಯಾ ನಡೆಯುವ ಜಾಗಕ್ಕೆ ತೆರಳಿದ್ದರು. ಇದೇ ವೇಳೆ ಎಎಸ್‌ಐ ಅವರು ಮೊದಲು ದಂಧೆಕೋರರ ಬಳಿ ಹೋಗಿದ್ದಾರೆ. ಆಗ ದಂಧೆಕೋರರು ಅವರ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಿದ್ದಾರೆ.

VISTARANEWS.COM


on

Police Officer
Koo

ಭೋಪಾಲ್:‌ ಮರಳು ಮಾಫಿಯಾ, ಗಣಿ ಮಾಫಿಯಾಗೆ ಆಗಾಗ ಪೊಲೀಸರು, ಅಧಿಕಾರಿಗಳು ದೇಶದಲ್ಲಿ ಬಲಿಯಾಗುತ್ತಲೇ ಇರುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ ಮರಳು ಮಾಫಿಯಾ ತಡೆಯಲು ಹೋದ ಅಸಿಸ್ಟಂಟ್‌ ಸಬ್‌-ಇನ್ಸ್‌ಪೆಕ್ಟರ್‌ (ASI) ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಮೃತ ಪೊಲೀಸ್‌ ಅಧಿಕಾರಿಯನ್ನು (Police Officer) ಮಹೇಂದ್ರ ಬಾಗ್ರಿ (Mahendra Bagri) ಎಂಬುದಾಗಿ ಗುರುತಿಸಲಾಗಿದೆ.

ಮಧ್ಯಪ್ರದೇಶದ ಶಾಹ್‌ದೋಲ್‌ ಜಿಲ್ಲೆಯ ನೌಧಿಯಾ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿತ್ತು. ಶನಿವಾರ ರಾತ್ರಿ (ಮೇ 5) ಒಬ್ಬ ಮಹೇಂದ್ರ ಬಾಗ್ರಿ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ದಂಧೆಕೋರರನ್ನು ಹಿಡಿಯಲು ಮಾಫಿಯಾ ನಡೆಯುವ ಜಾಗಕ್ಕೆ ತೆರಳಿದ್ದರು. ಇದೇ ವೇಳೆ ಎಎಸ್‌ಐ ಅವರು ಮೊದಲು ದಂಧೆಕೋರರ ಬಳಿ ಹೋಗಿದ್ದಾರೆ. ಆಗ ದಂಧೆಕೋರರು ಅವರ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಿದ್ದಾರೆ. ಇದಾದ ಕೂಡಲೇ ಅವರನ್ನು ರಕ್ಷಿಸಲು ಇಬ್ಬರು ಪೇದೆಗಳು ತೆರಳಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಎಎಸ್‌ಐ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಪೊಲೀಸ್‌ ಅಧಿಕಾರಿಯ ಮೇಲೆ ಟ್ರ್ಯಾಕ್ಟರ್‌ ಹರಿಸಿದ ಚಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟಾದರೂ, ಮರಳು ದಂಧೆ ನಡೆಸುತ್ತಿರುವ ಪ್ರಮುಖ ಆರೋಪಿಯು ತಪ್ಪಿಸಿಕೊಂಡು ಹೋಗಿದ್ದಾನೆ. “ನೌಧಿಯಾ ಗ್ರಾಮದ ಸುತ್ತಮುತ್ತ ಮರಳು ಮಾಫಿಯಾ ನಡೆಯುತ್ತಿರುವ ಕುರಿತು ನಿಖರ ಮಾಹಿತಿ ಪಡೆದ ಎಎಸ್‌ಐ ನೇತೃತ್ವದ ತಂಡವು ದಾಳಿ ನಡೆಸಿತ್ತು. ಅರೆಸ್ಟ್‌ ವಾರಂಟ್‌ ಜತೆಗೆ ಪೊಲೀಸರು ತೆರಳಿದ್ದರು. ಇದೇ ವೇಳೆ, ದುಷ್ಕರ್ಮಿಗಳು ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಹತ್ಯೆಗೈದಿದ್ದಾರೆ” ಎಂದು ಶಾಹ್‌ದೋಲ್‌ ಎಡಿಜಿಪಿ ಡಿ.ಸಿ.ಸಾಗರ್‌ ಮಾಹಿತಿ ನೀಡಿದ್ದಾರೆ.

ಎಎಸ್‌ಐ ಹತ್ಯೆಯ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. “ಮಧ್ಯಪ್ರದೇಶದಲ್ಲಿ ಭ್ರಷ್ಟಾಚಾರ, ಮಾಫಿಯಾ, ಅಕ್ರಮ ದಂಧೆಗಳು ಮಿತಿಮೀರಿವೆ. ಸರಾಸರಿ 1.7 ದಿನಕ್ಕೆ ಒಂದರಂತೆ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಮರಳು ಮಾಫಿಯಾ ಮಿತಿಮೀರಿ ಹೋಗಿದೆ. ಇಷ್ಟಾದರೂ ಆಳುವ ಸರ್ಕಾರವು ಕಣ್ಣುಮುಚ್ಚಿಕೊಂಡು ಕೂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

Continue Reading

ದೇಶ

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

Covishield Vaccine: ಕೊರೊನಾ ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮವನ್ನು ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಎಂದು ಹೇಳಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

VISTARANEWS.COM


on

Covishield Vaccine
Koo

ನವದೆಹಲಿ: ಕೊರೊನಾ (Covid 19) ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟು ಮಾಡಬಹುದು ಎಂದು ಲಸಿಕೆ ತಯಾರಕರು ಇಂಗ್ಲೆಂಡ್‌ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ನಂತರ ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಇರಬಹುದು ಎಂಬ ಅನುಮಾನ ಕಾಡಿದ್ದು, ಅದಕ್ಕಾಗಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

ವೇಣುಗೋಪಾಲನ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 2021ರಲ್ಲಿ ಇವರ ಪುತ್ರಿ 20 ವರ್ಷದ ಕಾರುಣ್ಯ ಕೋವಿಶೀಲ್ಡ್ ಪಡೆದ ಬಳಿಕ ಸಾವನ್ನಪ್ಪಿದ್ದರು. ಆಸ್ಟ್ರಾಜೆನಿಕಾ ಸಂಸ್ಥೆ ಬಹಳ ತಡವಾಗಿ ಅಂದರೆ ಹಲವರು ಜೀವ ಕಳೆದುಕೊಂಡ ನಂತರ ತನ್ನ ಲಸಿಕೆಯ ಲೋಪದೋಷಗಳನ್ನು ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿ ದೇಶದಲ್ಲಿ ವ್ಯಾಪಕವಾಗಿ ಹಂಚಿತ್ತು.

ರಕ್ತ ಹೆಪ್ಪುಗಟ್ಟುವಿಕೆಯ ಕಾರಣ ನೀಡಿ 15 ಯುರೋಪಿಯನ್ ದೇಶಗಳು ಕೋವಿಶೀಲ್ಡ್‌ ಬಳಕೆಗೆ ನಿಷೇಧ ಹೇರಿದ ಬಳಿಕವಾದರೂ ಸೆರಂ ಇನ್‌ಸ್ಟಿಟ್ಯೂಟ್‌ ಈ ಲಸಿಕೆಯ ಪೂರೈಕೆಯನ್ನು ಸ್ಥಗಿತಗೊಳಿಸಬೇಕಿತ್ತು. ಆದರೆ ಇದರಿಂದ ತೊಂದರೆಗೊಳಗಾಗಿ ತಮ್ಮವರನ್ನು ಕಳೆದುಕೊಂಡ ಅನೇಕ ಪೋಷಕರು ನ್ಯಾಯಾಲಯಗಳಲ್ಲಿ ಹೋರಾಟ ಮಾಡಿದ್ದರೂ ನ್ಯಾಯ ಸಿಕ್ಕಿಲ್ಲ ಎಂದು ವೇಣುಗೋಪಾಲನ್ ಹೇಳಿದ್ದಾರೆ. ಈಗಾಗಲೇ ಈ ಲಸಿಕೆಯಿಂದ ಜೀವ ಕಳೆದುಕೊಂಡ ಸಂತ್ರಸ್ತರ 8 ಕುಟುಂಬಗಳು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.

ಸೆರಮ್ ಇಸ್ಟಿಟ್ಯೂಟ್‌ನ ಪೂನಾವಾಲಾ ಅವರು ತಾವು ಮಾಡಿದ ಪಾಪಗಳಿಗೆ ಉತ್ತರ ನೀಡಬೇಕು. ಅವರ ತಪ್ಪಿನಿಂದ ಬಲಿಯಾದ ಜೀವಗಳಿಗೆ ಉತ್ತರ ನೀಡಬೇಕು ಎಂದು ಗೋವಿಂದನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಜತೆಗೆ ಈ ಲಸಿಕೆಗೆ ಅನುಮೋದನೆ ನೀಡಿದ ಸರ್ಕಾರಿ ಅಧಿಕಾರಿಗಳ ಬಗ್ಗೆಯೂ ಅವರು ಕಿಡಿ ಕಾರಿದ್ದಾರೆ. ಹಾಗೆಯೇ 2021ರಲ್ಲಿ ರಚನಾ ಗಂಗು ಎಂಬವರು ಕೂಡ ತಮ್ಮ 18 ವರ್ಷದ ಮಗಳು ರಿತೈಕಾಳನ್ನು ಕಳೆದು ಕೊಂಡಿದ್ದು, ಇದಕ್ಕೂ ಕೋವಿಶೀಲ್ಡ್‌ ಕಾರಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಈ ಹಿಂದೆಯೂ ಅನುಮಾನ ಮೂಡಿಸಿದ್ದವು. ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಂಸ್ಥೆಯು ಈ ವಿವಾದದ ಕುರಿತು ಇನ್ನೂ ಹೇಳಿಕೆ ನೀಡಿಲ್ಲ.

Continue Reading
Advertisement
Job Alert
ಉದ್ಯೋಗ3 mins ago

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Ithichanda Ramesh Uthappaʼs Four books to be released in Mysore on May 9
ಮೈಸೂರು9 mins ago

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Karnataka Weather Forecast
ಮಳೆ13 mins ago

Karnataka Weather :ಮಳೆಯ ಕಣ್ಣಾ ಮುಚ್ಚಾಲೆ ಆಟ; ವರುಣ ದೇವನ ತಲೆ ಮೇಲೆ ಹೊತ್ತು ತಿರುಗಿದ ಗ್ರಾ.ಪಂ ಪಿಡಿಒ

Prajwal Revanna Case HD Revanna may be shifted to Parappana Agrahara SIT custody is doubtful
ಕ್ರೈಂ18 mins ago

Prajwal Revanna Case: ಪರಪ್ಪನ ಅಗ್ರಹಾರಕ್ಕೆ ಎಚ್‌.ಡಿ. ರೇವಣ್ಣ ಶಿಫ್ಟ್‌? SIT ಕಸ್ಟಡಿಗೆ ಕೊಡುವುದು ಡೌಟ್!

Narendra Modi
ದೇಶ18 mins ago

Narendra Modi: ಅಯೋಧ್ಯೆಯಲ್ಲಿಂದು ಪ್ರಧಾನಿ ಮೋದಿ ರೋಡ್‌ಶೋ; ರಾಮಲಲ್ಲಾನಿಗೆ ವಿಶೇಷ ಪೂಜೆ

Police Officer
ದೇಶ26 mins ago

Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

Covishield Vaccine
ದೇಶ47 mins ago

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

ICC Women's T20 World Cup
ಕ್ರೀಡೆ1 hour ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

Pakistan
ವಿದೇಶ1 hour ago

Pakistan: ಪಾಕಿಸ್ತಾನಕ್ಕೂ ಕಾಲಿಟ್ಟ ಯೋಗ; ಅಧಿಕೃತವಾಗಿ ತರಗತಿ ಆರಂಭ

Prajwal Revanna Case HD Revanna arrest is correct says R Ashok
ರಾಜಕೀಯ2 hours ago

Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌