Haryana Violence: ಹರ್ಯಾಣದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ; ಇಬ್ಬರು ಹೋಮ್‌ಗಾರ್ಡ್ಸ್ ಸಾವು, 7 ಪೊಲೀಸರಿಗೆ ಗಾಯ - Vistara News

ದೇಶ

Haryana Violence: ಹರ್ಯಾಣದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ; ಇಬ್ಬರು ಹೋಮ್‌ಗಾರ್ಡ್ಸ್ ಸಾವು, 7 ಪೊಲೀಸರಿಗೆ ಗಾಯ

Haryana Violence: ಹರ್ಯಾಣ ನುಹ್ ಮತ್ತು ಗುರುಗ್ರಾಮ್ ‌ಬಳಿ ಸಂಭವಿಸಿದ ಹಿಂಸಾಚಾರದಲ್ಲಿ 2 ಜನ ಮೃತಪಟ್ಟು, ಏಳು ಪೊಲೀಸರು ಗಾಯಗೊಂಡಿದ್ದಾರೆ. ಧಾರ್ಮಿಕ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ ಹಿಂಸಾಚಾರ ಭುಗಿಲೆದ್ದಿದೆ.

VISTARANEWS.COM


on

Haryana Violence
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹರ್ಯಾಣದಲ್ಲಿ (Haryana Violence) ಧಾರ್ಮಿಕ ಮೆರವಣಿಗೆ ಮೇಲೆ ಕಲ್ಲು ತೂರಾಟ (Stone Pelting) ಮತ್ತು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಗೃಹರಕ್ಷಕರು ಮೃತಪಟ್ಟಿದ್ದು(Home Guards Killed), ಏಳು ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ಹಿಂಸಾಚಾರ ನಡೆಸುತ್ತಿದ್ದ ಗುಂಪು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗಾಳಿಯಲ್ಲಿ ಗುಂಡು ಹಾರಿಸಿದರು. ಇಂಟರ್ನೆಟ್ (internet Shutdown) ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಕರ್ಫ್ಯೂ ಹೇರಲಾಗಿದೆ. ಏತನ್ಮಧ್ಯೆ, ಹಿಂಸಾಚಾರದಿಂದಾಗಿ ಗುರುಗ್ರಾಮ್ (Gurugram) ಬಳಿಯ ನೂಲ್ಹರ್ ಮಹಾದೇವ್ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳನ್ನು ಪೊಲೀಸರು ರಕ್ಷಿಸಿ, ಸುರಕ್ಷಿತ ಪ್ರದೇಶಕ್ಕೆ ಕಳುಹಿಸಿದ್ದಾರೆ. ಇವರೆಲ್ಲರೂ ಧಾರ್ಮಿಕ ಮೆರವಣಿಗೆಯಲ್ಲಿ ಭಾಗವಹಿಸಲು ಆಗಮಿಸಿದ್ದರು.

ಗುರುಗ್ರಾಮ್‌ಗೆ ಹೊಂದಿಕೊಂಡಿರುವ ನುಹ್‌ನಲ್ಲಿ ಧಾರ್ಮಿಕ ಮೆರವಣಿಗೆ ನಡೆಯುತ್ತಿತ್ತು. ವಿಶ್ವ ಹಿಂದೂ ಪರಿಷತ್‌ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯನ್ನು ಆಯೋಜಿಸಿತ್ತು. ಯುವಕರಿದ್ದ ಗುಂಪೊಂದು ಗುರಗ್ರಾಮ್-ಅಲ್ವಾರ್ ರಾಷ್ಟ್ರೀಯ ಹೆದ್ದಾರಿ ಧಾರ್ಮಿಕ ಮೆರವಣಿಗೆಯನ್ನು ತಡೆದು, ಕಲ್ಲು ತೂರಾಟ ನಡೆಸಿತು. ಹಿಂಸಾಚಾರ ಭುಗಿಲೇಳುತ್ತಿದ್ದಂತೆ ಹೆದ್ದಾರಿಯಲ್ಲಿದ್ದ ಖಾಸಗಿ ಹಾಗೂ ಸರ್ಕಾರಿ ವಾಹನಗಳಿಗೆ ಗುಂಪು ಬೆಂಕಿ ಹಚ್ಚಿತು.

ಸಂಜೆಯ ಹೊತ್ತಿಗೆ ಹಿಂಸಾಚಾರವು ಗುರುಗ್ರಾಮ್-ಸೋಹ್ನಾ ಹೆದ್ದಾರಿಗೆ ಹರಡಿತು. ಅಲ್ಲಿ ಹಲವಾರು ಕಾರುಗಳಿಗೆ ಬೆಂಕಿ ಹಚ್ಚಲಾಯಿತು ಮತ್ತು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆಯಲಾಯಿತು ಎಂದು ಮೂಲಗಳು ತಿಳಿಸಿವೆ. ಬಜರಂಗ ದಳ ಕಾರ್ಯಕರ್ತರೊಬ್ಬ ಸೋಷಿಯಲ್ ಮೀಡಿಯಾದಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್‌ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Manipur violence: ಮಣಿಪುರದಲ್ಲಿ ಅಮಾನುಷ ಘಟನೆ; ಇಬ್ಬರು ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಮುನ್ನೆಲೆಗೆ, ಭುಗಿಲೆದ್ದ ಆಕ್ರೋಶ

ಬಜರಂಗದಳದ ಕಾರ್ಯಕರ್ತ ಮೋನು ಮಾನೇಸರ್ ಮತ್ತು ಆತನ ಸಹಚರರು – ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದ ಇತಿಹಾಸವನ್ನು ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ವೀಡಿಯೊವನ್ನು ಇವರು ಷೇರ್ ಮಾಡಿದ್ದರು. ಯಾತ್ರೆಯ ಸಮಯದಲ್ಲಿ ಮೇವಾತ್‌ನಲ್ಲಿ ಉಳಿಯುವುದಾಗಿ ಬಹಿರಂಗವಾಗಿ ಸವಾಲು ಹಾಕಿದ್ದರು ಎಂದು ಮೂಲಗಳು ತಿಳಿಸಿವೆ. ಸ್ಥಳೀಯರಿಗೆ ಮೋನು ಸವಾಲು ಹಾಕಿದ್ದೇ ಈ ಹಿಂಸಾಚಾರಕ್ಕೆ ಕಾರಣ ಎನ್ನಲಾಗುತ್ತಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

V Somanna profile: ಅತಿ ಸಣ್ಣ ಕುಗ್ರಾಮವೊಂದರಿಂದ ಒಂದು ಜತೆ ಬಟ್ಟೆ ಮತ್ತು ಪುಟ್ಟ ಬ್ಯಾಗ್ ಹಿಡಿದುಕೊಂಡು ಹೊಟ್ಟೆಪಾಡಿಗಾಗಿ ಬೆಂಗಳೂರೆಂಬ ಮಹಾ ನಗರಕ್ಕೆ ಕಾಲಿಟ್ಟ ಸೋಮಣ್ಣ ಅವರು, ಮುಂದಿನ ಕೆಲವೇ ವರ್ಷದಲ್ಲಿ ಬೆಂಗಳೂರಿನ ಪ್ರಮುಖ ನಾಯಕರಾಗಿ ಬೆಳೆದರು. ಮೊದಲು ಕಾರ್ಪೊರೇಟರ್‌, ಬಳಿಕ ಶಾಸಕ, ಈಗ ಸಂಸದ-ಸಚಿವ…ಹೀಗೆ ವಿ ಸೋಮಣ್ಣ ಅವರ ರಾಜಕೀಯ ಹಾದಿ ರೋಚಕವಾಗಿದೆ.

VISTARANEWS.COM


on

V Somanna profile
Koo

ವಿ ಸೋಮಣ್ಣ ಅವರು (V Somanna profile) ಬೆಂಗಳೂರಿನ ಬಿನ್ನಿಪೇಟೆಯಲ್ಲಿ ಕಾರ್ಪೋರೇಟರ್‌ ಆಗಿ ರಾಜಕೀಯ ಹಾದಿ ತುಳಿದವರು. ಈಗ ಕೇಂದ್ರ ಸಚಿವರಾಗುವ ತನಕ ಅವರು ಸಾಗಿ ಬಂದ ರಾಜಕೀಯ ಹಾದಿ ರೋಚಕವಾಗಿದೆ. ವಿ ಸೋಮಣ್ಣ ಅವರು ಜನ ಸಮೂಹದ ನಡುವಿನಿಂದ ನಾಯಕರಾಗಿ ಬೆಳೆದು ಬಂದವರು. ಹಾಗಾಗಿ 40 ವರ್ಷಗಳ ಬಳಿಕವೂ ಅವರ ಪ್ರಭಾವ ಮತ್ತು ವರ್ಚಸ್ಸು ರಾಜ್ಯ ರಾಜಕಾರಣದಲ್ಲಿ ಪ್ರಖರವಾಗಿ ಉಳಿದಿದೆ.
ನಾಡಿನ ಅತಿ ಸಣ್ಣ ಕುಗ್ರಾಮವೊಂದರಿಂದ ಒಂದು ಜತೆ ಬಟ್ಟೆ ಮತ್ತು ಪುಟ್ಟ ಬ್ಯಾಗ್ ಹಿಡಿದುಕೊಂಡು ಹೊಟ್ಟೆಪಾಡಿಗಾಗಿ ಬೆಂಗಳೂರೆಂಬ ಮಹಾ ನಗರಕ್ಕೆ ಕಾಲಿಟ್ಟ ಸೋಮಣ್ಣ ಅವರು, ಮುಂದಿನ ಕೆಲವೇ ವರ್ಷದಲ್ಲಿ ಬೆಂಗಳೂರಿನ ಪ್ರಮುಖ ನಾಯಕರಾಗಿ ಬೆಳೆದರು.

ಅವರು ರಾಮನಗರ ಜಿಲ್ಲೆಯ ಮರಳವಾಡಿ ಎಂಬ ಸಣ್ಣ ಊರಿನ ತೇರಬೀದಿಯಿಂದ ಬೆಂಗಳೂರೆಂಬ ರಾಜಬೀದಿಯಲ್ಲಿ ಅಂಬೆಗಾಲಿಟ್ಟು, ಜನತಾ ಬಜಾರ್‌ನಿಂದ ಜನತಾಪಕ್ಷಕ್ಕೆ ಪ್ರವೇಶ ಪಡೆದು, ಕಾರ್ಪೊರೇಟರ್ ಆಗಿ ಲೋಕಲ್ ಲೀಡರ್ ಎಂದು ಗುರುತಿಸಿಕೊಂಡು, ಶಾಸಕರಾಗಿ ವಿಧಾನಸಭೆಗೆ ಪ್ರವೇಶ ಪಡೆದು, ಸಚಿವರಾಗಿ ಇಡೀ ರಾಜ್ಯ ಗುರುತಿಸುವಂಥ ಕೆಲಸ ಮಾಡುವ ಮೂಲಕ ನಾಡಿನ ಮುಂಚೂಣಿ ರಾಜಕೀಯ ಧುರೀಣರಾಗಿ ಬೆಳೆದವರು.
ಶಿಸ್ತು, ಶ್ರದ್ಧೆ, ನೇರ ನಡೆ-ನುಡಿ, ಸರಳ ಸಜ್ಜನಿಕೆ, ಎನಗಿಂತ ಕಿರಿಯರಿಲ್ಲ ಎಂಬ ನಿನಮ್ರತೆ, ಹಿಡಿದ ಕೆಲಸವನ್ನು ಬಿಡದೆ ಮಾಡಿ ಮುಗಿಸುವ ಛಲ, ಜನ ಸಾಮಾನ್ಯರ ತೀರಾ ಸಾಮಾನ್ಯ ಸಮಸ್ಯೆಗಳಿಗೂ ಸ್ಪಂದಿಸುವ ಗುಣ, ಅಭಿವೃದ್ಧಿ ಕುರಿತ ದೂರದೃಷ್ಟಿ, ಅಧ್ಯಯನ ಪ್ರವೃತ್ತಿ, ಜಾತಿ ಧರ್ಮ ಜನಾಂಗದ ಸೀಮಾ ರೇಖೆಯನ್ನು ದಾಟಿ ಜನರೊಂದಿಗೆ ಬೆರೆಯುವಿಕೆ, ಬಸವಣ್ಣನವರ ಕಾಯಕವೇ ಕೈಲಾಸ ಎಂಬ ತತ್ವಕ್ಕೆ ನಿಷ್ಠೆ, ಆದರೆ ನಾಲ್ಕು ಜನರಿಗೆ ಒಳಿತಾಗುತ್ತದೆ ಎಂದೆನಿಸಿದರೆ ಸಾಮ ದಾನ ಭೇದ ದಂಡ ಅಸ್ತ್ರ ಪ್ರಯೋಗಿಸಲೂ ಹಿಂಜರಿದ ದಿಟ್ಟತನ, ಧರ್ಮೋ ರಕ್ಷತಿ ರಕ್ಷಿತಃ ಎಂಬ ಗೀತೋಪದೇಶದ ಪಾಲನೆ, ಸರ್ವ ಜಾತಿ-ಧರ್ಮಗಳ ಸ್ವಾಮೀಜಿಗಳ ಪ್ರೀತಿ ವಿಶ್ವಾಸಕ್ಕೆ ಪಾತ್ರ…ಹೀಗೆ ಹತ್ತು ಹಲವಾರು ಹೆಚ್ಚುಗಾರಿಕೆಗಳು ಸೋಮಣ್ಣ ಅವರನ್ನು ಇಂದು ರಾಜಕೀಯವಾಗಿ ಇಷ್ಟು ಎತ್ತರಕ್ಕೆ ತಂದು ನಿಲ್ಲಿಸಿವೆ.

ಊರು ಬಿಡುವಾಗ ಅಮ್ಮ ಕೊಟ್ಟ 15 ರೂ. ಇತ್ತು…

ಮರಳವಾಡಿ ಎಂಬ ಕುಗ್ರಾಮದಿಂದ ಬದುಕಿನ ದಾರಿ ಹುಡುಕುತ್ತ ತಾವು ಬೆಂಗಳೂರಿಗೆ ಬಂದ ಕತೆಯನ್ನು ಸೋಮಣ್ಣ ಹೇಳುವುದು ಹೀಗೆ:
ಊರಲ್ಲಿ ಪಿಯುಸಿ ಮುಗಿಯುತ್ತಿದ್ದಂತೆ, ಅದ್ಯಾವುದೋ ಹೊಸ ದಿಕ್ಕಿನತ್ತ ನನ್ನ ಮನಸ್ಸು ತುಡಿಯುತ್ತಿತ್ತು. ಊರು ಬಿಟ್ಟು ಬೆಂಗಳೂರಿಗೆ ಹೋಗಲು ಮನಸ್ಸು ತವಕಿಸುತ್ತಿತ್ತು. ಆದರೆ ಮನೆಯಲ್ಲಿ ವ್ಯವಸಾಯ ಮಾಡುವಂತೆ ಒತ್ತಾಯಿಸುತ್ತಿದ್ದರು. ಅದೊಂದು ದಿನ ಗಟ್ಟಿ ಮನಸ್ಸು ಮಾಡಿ ಊರು ಬಿಟ್ಟೆ. ಜೇಬಿನಲ್ಲಿ ಅಮ್ಮ ಕೊಟ್ಟ 15 ರೂ. ಇತ್ತು. ಜತೆಗೆ ಇನ್ನೊಂದು ಜತೆ ಬಟ್ಟೆಯ ಸಣ್ಣ ಬ್ಯಾಗು.

ಬೆಂಗಳೂರಿನಲ್ಲಿ ಬಸಪ್ಪ ಸರ್ಕಲ್ ನಲ್ಲಿ ಬಂದು ಇಳಿದೆ. ನನಗಾಗ 18 ವರ್ಷ. ಅಲ್ಲೇ ಪಕ್ಕದಲ್ಲಿ ಸಣ್ಣ ಧೋಬಿ ಅಂಗಡಿ ಇಟ್ಟುಕೊಂಡಿದ್ದ ನಾಗಣ್ಣ ಎಂಬುವರು ನನ್ನನ್ನು ಗುರುತಿಸಿ, ಏನ್ ಸೋಮಣ್ಣ ಇಲ್ಲಿ ಎಂದರು. ಅಣ್ಣಾ ಏನಾದರು ಒಂದು ದಾರಿ ತೋರಿಸು ಅಣ್ಣಾ ಎಂದು ಅವರಿಗೆ ದುಂಬಾಲು ಬಿದ್ದೆ. ಅವರು ಸೀದಾ ನನ್ನನ್ನು ಚಂಗಲ್ ರಾಯ ಶೆಟ್ಟಿ ಎಂಬುವರ ಬಳಿ ಕರೆದೊಯ್ದರು. ಅವರದು ಮೋಟಾರ್ ರಿಪೇರಿ ಅಂಗಡಿ. ಹುಡುಗಾ ನನ್ನ ಜತೆಗೇ ಇದ್ದುಬಿಡು ಎಂದರವರು. ತಮ್ಮ ಅಂಗಡಿಯಲ್ಲೇ ಉಳಿದುಕೊಳ್ಳಲು ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಿಕೊಟ್ಟರು. ಮೋಟಾರು ಬಿಡಿ ಭಾಗಗಳನ್ನು ಎತ್ತಿ ಕೊಡುವುದು, ಅವರು ಕರೆದಲ್ಲಿಗೆ ಹೋಗುವುದು…ಇಷ್ಟೇ ನನ್ನ ಕೆಲಸ.
ಕೆಲ ದಿನಗಳ ಬಳಿಕ ಸಿಂಗಲ್ ರೂಮಿನ ಮನೆಯೊಂದಕ್ಕೆ ಶಿಫ್ಟ್ ಆದೆ. ಕೇವಲ ಆರಡಿ ಎಂಟಡಿ ಅಳತೆಯ ಶೀಟಿನ ಮನೆ ಅದು. ಬಾಡಿಗೆ ತಿಂಗಳಿಗೆ ಕೇವಲ 7 ರೂಪಾಯಿ!

ಪಿಯುಸಿಯಲ್ಲಿ ಫೇಲ್‌ ಆಗಿದ್ದೆ

ನಾನು ಪಿಯುಸಿಯ ಒಂದು ವಿಷಯದಲ್ಲಿ ಫೇಲ್ ಆಗಿದ್ದೆ. ಅದನ್ನು ಪಾಸ್ ಮಾಡಿಕೊಂಡೆ. ಆಗೆಲ್ಲ ಪಿಯುಸಿ ಅಂದರೆ ಒಂದೇ ವರ್ಷ. ಹಗಲು ಮೋಟಾರು ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಲೇ ವಿವಿ ಪುರಂ ಸಂಜೆ ಕಾಲೇಜು ಸೇರಿದೆ. ರಾತ್ರಿಯಿಡೀ ಕಷ್ಟಪಟ್ಟು ಓದಿ ಪದವಿಯಲ್ಲಿ ಒಳ್ಳೆಯ ಅಂಕ ಗಳಿಸಿದೆ.

ಮುಂದೆ ಧೋಬಿ ಅಂಗಡಿಯ ನಾಗಣ್ಣ ನನ್ನನ್ನು ಜಯಸಿಂಹ ಎಂಬುವವರನ್ನು ಪರಿಚಯಿಸಿ ಅವರ ಕಂಪನಿಯಲ್ಲಿ ಕೆಲಸ ಕೊಡಿಸಿದರು. ನಾಗಣ್ಣ ಬಲು ಬುದ್ಧಿವಂತ ಮತ್ತು ಶ್ರಮಜೀವಿ. ನನ್ನ ಬದುಕಿನ ಆರಂಭದ ದಿನಗಳಲ್ಲಿ ನನಗೆ ಆಸರೆಯಾಗಿ ನಿಂತರು. ನಂತರ 1971ರಲ್ಲಿ ನಾನು ಕನ್ಷುಮರ್ ಫೆಡರೇಷನ್ ಗೆ ಅರ್ಜಿ ಸಲ್ಲಿಸಿದೆ. ಗುಮಾಸ್ತನ ಕೆಲಸ ಗಿಟ್ಟಿಸುವುದು ಆ ದಿನಗಳಲ್ಲಿ ನನ್ನ ಮಹತ್ವಾಕಾಂಕ್ಷೆಯಾಗಿತ್ತು! ಎ ಶಾಂತಮಲ್ಲಪ್ಪ ಅವರು ಫೆಡರೇಷನ್ ನ ಅಧ್ಯಕ್ಷರಾಗಿದ್ದರು. ಅವರು ಸಂದರ್ಶನ ತಗೊಂಡು, ”ಗುಮಾಸ್ತನ ಕೆಲಸ ಬೇಡ ನಿನಗೆ. ಸೇಲ್ಸ್ ಅಸಿಸ್ಟೆಂಟ್ ಕೆಲಸಕ್ಕೆ ಬಾ” ಎಂದರು.

ಸೇಲ್ಸ್‌ ಅಸಿಸ್ಟಂಟ್‌ ಕೆಲಸ

ಕೆಲಸಕ್ಕೆ ಸೇರಲು 500 ರೂ. ಡಿಪಾಸಿಟ್ ಕಟ್ಟಬೇಕಿತ್ತು. ಅಷ್ಟು ದುಡ್ಡು ಹೊಂದಿಸಲು ನಾನು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಊರಲ್ಲಿ ಹೋಗಿ ಕೇಳಿದರೆ, ಏಯ್ ಇಲ್ಲಿ ಬೇಸಾಯ ಮಾಡಿಕೊಂಡಿರು. ಬೆಂಗಳೂರಿಗೆ ಯಾಕೆ ಹೋಗಬೇಕು ನೀನು ಎಂದರು. ಕೊನೆಗೆ ಅಮ್ಮ 200 ರೂ. ಕೊಟ್ಟು ಕಳಿಸಿದರು. ಬೆಂಗಳೂರಿನ ಶಿವಾಜಿ ಟಾಕೀಸ್ ಬಳಿ ಆಗ ಉರುವಲು ಕಟ್ಟಿಗೆ ಮಾರುವ ವೇ ಬ್ರಿಡ್ಜ್ ಇತ್ತು. ಅಲ್ಲಿ ತಿಮ್ಮಯ್ಯ ಎಂಬೊಬ್ಬರ ಪರಿಚಯವಾಗಿತ್ತು. ಅವರ ಬಳಿ ಹೋಗಿ ಸಮಸ್ಯೆ ಹೇಳಿಕೊಂಡಾಗ 500 ರೂ. ಕೊಟ್ಟರು. ಅಂತೂ ಬೆಂಗಳೂರಿನ ಕೆ ಜಿ ರೋಡ್ ನ ಜನತಾ ಬಜಾರ್ ನಲ್ಲಿ ಕೆಲಸ ಶುರು ಮಾಡಿದೆ. ಅಲ್ಲಿಂದ ನನ್ನ ಬದುಕಿಗೆ ಹೊಸ ತಿರುವು ಸಿಕ್ಕಿತು.

ಜನತಾ ಬಜಾರ್ ನಲ್ಲಿ ಕೆಲಸ ಮಾಡುತ್ತಿರುವಾಗಲೇ, ಇನ್ನಷ್ಟು ದುಡಿಯಬೇಕು ಎಂದೆನಿಸುತ್ತಿತ್ತು. ಅದೇ ಹೊತ್ತಿಗೆ ವಿಜಯಾ ಬ್ಯಾಂಕ್ ಮ್ಯಾನೇಜರ್ ಪ್ರಭಾಕರ್ ಎಂಬುವರ ಪರಿಚಯವಾಯಿತು. ಇನ್ನು ಏನಾದರು ಮಾಡಬೇಕಲ್ಲ ಸರ್ ನಾನು ಅಂದೆ. ಪಿಗ್ಮಿ ಕಲೆಕ್ಟ್ ಮಾಡು ನೀನು ಎಂದು ಸಲಹೆ ನೀಡಿದರು. ಮಧ್ಯಾಹ್ನ 1.30ರಿಂದ 4 ಗಂಟೆಯವರೆಗಿನ ಬಿಡುವಿನ ಅವಧಿಯಲ್ಲಿ ಅಂಗಡಿ ಅಂಗಡಿ ತಿರುಗಿ ಪಿಗ್ಮಿ ಕಲೆಕ್ಟ್ ಮಾಡತೊಡಗಿದೆ. ಸಂಜೆ ಡ್ಯೂಟಿ ಮುಗಿದ ಮೇಲೆ ರಾತ್ರಿ 9 ಗಂಟೆವರೆಗೆ ಮತ್ತೆ ಇದೇ ಕೆಲಸ. ಇದರಿಂದ ತಿಂಗಳಿಗೆ ಸುಮಾರು 2 ಸಾವಿರ ರೂ. ಎಕ್ಟ್ರಾ ಇನ್ ಕಮ್ ಬರತೊಡಗಿತು. ಜನತಾ ಬಜಾರ್ ಸಂಬಳ ಹೆಚ್ಚು ಕಡಿಮೆ ಇಷ್ಟೇ ಬರುತ್ತಿತ್ತು.

ಜನತಾ ಬಜಾರ್‌ನಿಂದ ಜನತಾ ಪಕ್ಷಕ್ಕೆ…

ಜನತಾ ಬಜಾರ್ ಯೂನಿಯನ್‌ನಲ್ಲಿ ನಾನು ಮುಂಚೂಣಿ ನಾಯಕನಾಗಿ ಬೆಳೆದೆ. ಸಹಜವಾಗಿಯೇ ದೇವೇಗೌಡರು, ಬಿ ಎಲ್ ಶಂಕರ್, ಪಿ ಜಿ ಆರ್ ಸಿಂಧಿಯಾ ಮತ್ತಿರರ ಸಂಪರ್ಕಕ್ಕೆ ಬಂದೆ. ಅವರ ಮೂಲಕ ನಾನು ಅನಧಿಕೃತವಾಗಿ ಜನತಾ ಪಕ್ಷಕ್ಕೆ ಎಂಟ್ರಿ ಪಡೆದೆ. ಈ ನಡುವೆ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲೋಕ ನಾಯಕ ಜಯಪ್ರಕಾಶ್ ನಾರಾಯಣ್ ಅವರು ಕೈಗೊಂಡಿದ್ದ ಆಂದೋಲನದಲ್ಲೂ ಕೈ ಜೋಡಿಸಿದೆ. ಚಂದ್ರಶೇಖರ ಅವರು ನಡೆಸಿದ ರಾಷ್ಟ್ರವ್ಯಾಪಿ ಪಾದಯಾತ್ರೆಯಲ್ಲೂ ಹೆಜ್ಜೆ ಹಾಕಿದೆ.

1986ರ ವಿಧಾನಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಲ್ಲಿ ಪಿ ಜಿ ಆರ್ ಸಿಂಧಿಯಾ ಪರ ಸಕ್ರಿಯವಾಗಿ ಕೆಲಸ ಮಾಡಿದೆ. ಅದೇ ವರ್ಷ ಬೆಂಗಳೂರು ಕಾರ್ಪೊರೇಷನ್ ಎಲೆಕ್ಷನ್ ಘೋಷಣೆ ಆಯಿತು. ಮುನಿಯಪ್ಪ ಅಂತ ಒಬ್ಬರು ರೆವಿನ್ಯು ಇನ್ಸ್ ಪೆಕ್ಟರ್ ನನಗೆ ಆತ್ಮೀಯರಾಗಿದ್ದರು. ಅವರು, ಸೋಮಣ್ಣ ನೀನೂ ಎಲೆಕ್ಷನ್ ಗೆ ನಿಂತು ಬಿಡು ಎಂದು ಹವಾ ಹಾಕಿದರು. ನನಗೂ ಉಮೇದು ಬಂತು. ವಿಜಯ ನಗರ ಕ್ಷೇತ್ರದಲ್ಲಿ ಜನತಾ ಪಕ್ಷದಿಂದ ಟಿಕೆಟ್‌ ಕೊಡುವ ಭರವಸೆಯೂ ಸಿಕ್ಕಿತು. ಆದರೆ ನಾಮಪತ್ರ ಸಲ್ಲಿಸಬೇಕು ಎನ್ನುವಷ್ಟರಲ್ಲಿ ಜೀವರಾಜ್ ಆಳ್ವ, ರಘುಪತಿ ಇನ್ನೂ ಕೆಲವರು ಬೇರೆಯವರಿಗೆ ಟಿಕೆಟ್ ಕೊಡಲು ಶತಪ್ರಯತ್ನ ನಡೆಸಿದರು.

ಡಿ ಮಂಜುನಾಥ್ ಆಗ ಜನತಾ ಪಕ್ಷದ ರಾಜ್ಯಾಧ್ಯಕ್ಷರು. ಮಂಜುನಾಥ್, ವಿ ಆರ್ ಕೃಷ್ಣಯ್ಯರ್, ಟಿ ಆರ್ ಶಾಮಣ್ಣ, ಎಚ್ ಡಿ ದೇವೇಗೌಡ, ಬಿ ಎಲ್ ಶಂಕರ್ ಮತ್ತಿತರರನ್ನು ಸಂಪರ್ಕಿಸಿ ನಾನು ಟಿಕೆಟ್ ಗೆ ಪಟ್ಟು ಹಿಡಿದೆ. ಇದಕ್ಕಾಗಿ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಚಂದ್ರಶೇಖರ ಅವರನ್ನೂ ಸಂಪರ್ಕಿಸಿ ವಿನಂತಿಸಿದೆ. ಆದರೆ ಕೊನೆಗೆ ಬಿ ಎಲ್ ಶಂಕರ್ ಒಬ್ಬರು ಮಾತ್ರ ನನ್ನ ಪರವಾಗಿ ನಿಂತರು. ಅಂತಿಮವಾಗಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊರೆ ಹೋದೆ. ಕನಕಪುರ ಬೈ ಎಲೆಕ್ಷನ್ ನಲ್ಲಿ ಹೆಗಡೆ ಅವರಿಗಾಗಿ ಸಿಂಧಿಯಾ ರಾಜೀನಾಮೆ ನೀಡಿದ್ದರು. ಹೆಗಡೆ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರೆಲ್ಲ ಶಕ್ತಿ ಪ್ರಯೋಗದಲ್ಲಿ ತೊಡಗಿದ್ದರು. ನಾನು ಯುವಕರ ತಂಡ ಕಟ್ಟಿಕೊಂಡು ಕಾಂಗ್ರೆಸ್ ಮುಖಂಡರನ್ನು ದಿಗ್ಬಂಧನ ಹಾಕಿ ನೀರಿಳಿಸಿದ್ದು ಹೆಗಡೆ ಅವರಿಗೆ ತಿಳಿದಿತ್ತು. ಹಾಗಾಗಿ ಹೆಗಡೆ ಅವರು ಕೃಪೆಯಿಂದಾಗಿ ಕೊನೆಗೂ ಬಿ ಫಾರಂ ಸಿಕ್ಕಿತು. ನಾನು ನಾಮಪತ್ರ ಸಲ್ಲಿಸಿದೆ. ಆದಿ ಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಬೆಂಬಲವೂ ನನಗೆ ಸಿಕ್ಕಿತು.

ಈ ನಡುವೆ, ನಮ್ಮ ಕಾರ್ಯಕರ್ತರನ್ನು ಸ್ಟೇಷನ್ ಗೆ ಒಯ್ದು ಹಲ್ಲೆ ನಡೆಸಿದ ದುರಹಂಕಾರಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನಾನು ಸಖತ್ತಾಗಿ ಬೆಂಡೆತ್ತಿದ ಘಟನೆಯಿಂದಾಗಿ ಇಡೀ ವಾರ್ಡ್ ನಲ್ಲಿ ನನ್ನ ಹವಾ ಜೋರಾಯಿತು. ನಾನು ಭಾರಿ ಬಹುಮತದಿಂದ ಗೆಲುವು ಸಾಧಿಸಿದೆ. ಆಗ ಆ ವಾರ್ಡ್ ನಲ್ಲಿ ಏನೇನೂ ಮೂಲಸೌಕರ್ಯ ಇರಲಿಲ್ಲ. ಶಾಂತಿ ಸುವ್ಯವಸ್ಥೆ ಕೂಡ ಕಳವಳಕಾರಿಯಾಗಿತ್ತು. ನಾನು ಹಂತಹಂತವಾಗಿ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುತ್ತ, ಮೂಲ ಸೌಕರ್ಯ ಕಲ್ಪಿಸುತ್ತ ಬಂದೆ. ಹಾಗಾಗಿ ಮುಂದಿನ 1987ರ ಕಾರ್ಪೊರೇಷನ್ ಚುನಾವಣೆಯಲ್ಲೂ ಭರ್ಜರಿ ಗೆಲುವು ನನ್ನದಾಯಿತು.

ಬಿನ್ನಿಪೇಟೆಯಿಂದ ವಿಧಾನಸಭೆ ಪ್ರವೇಶ

ಎರಡು ಅವಧಿಗೆ ಕಾರ್ಪೋರೇಟರ್ ಆಗಿ ಜನಪ್ರಿಯತೆ ಗಳಿಸಿದ್ದ ನನಗೆ 1994ರಲ್ಲಿ ಬಿನ್ನಿಪೇಟೆ ಕ್ಷೇತ್ರದಲ್ಲಿ ನಿರಾಯಾಸವಾಗಿ ಜನತಾ ಪಕ್ಷದ ಟಿಕೆಟ್ ಸಿಕ್ಕಿತು. ದಾಖಲೆ ಮತಗಳ ಅಂತರದಿಂದ ಗೆದ್ದೆ.
ಆದರೆ ಮುಖ್ಯಮಂತ್ರಿಯಾಗಲು ರಾಮಕೃಷ್ಣ ಹೆಗಡೆ ಮತ್ತು ದೇವೇಗೌಡರ ನಡುವೆ ಪೈಪೋಟಿ ನಡೆದು ರಣರಂಪವಾಯಿತು. ನಾನು ದೇವೇಗೌಡರ ಪರ ನಿಂತೆ. ನ್ಯಾಯಯುತವಾಗಿ ದೇವೇಗೌಡರೇ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮ ಆಶಯವಾಗಿತ್ತು. ವಿಂಡ್ಸರ್ ಮ್ಯಾನರ್ ನನ್ನನ್ನು ಕರೆಸಿದರು. ಅಲ್ಲಿ ಹೆಗಡೆ, ಜೆ ಎಚ್ ಪಟೇಲ್ ಮತ್ತು ಬೊಮ್ಮಾಯಿ ಚಿಂತಾಕ್ರಾಂತರಾಗಿ ಕೂತಿದ್ದರು. ಹೆಗಡೆ ಮನೆ ಬಳಿ ಮತ್ತು ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಭಾರಿ ಗದ್ದಲದ ಕುರಿತಾಗಿ ನನ್ನಿಂದ ಮಾಹಿತಿ ಪಡೆದರು. ನಾನು ಇದ್ದ ವಿಷಯ ವಿವರಿಸಿದೆ. ಹೆಗಡೆಯವರು ಗರಂ ಆಗಿದ್ದರು. ಬೊಮ್ಮಾಯಿಯವರು ಸೂಕ್ಷ್ಮವಾಗಿ ನನಗೊಂದು ಬುದ್ಧಿಮಾತು ಹೇಳಿ ಕಳುಹಿಸಿದರು!

ದೇವೇಗೌಡರು ಮುಖ್ಯಮಂತ್ರಿಯಾದರು. ಆದರೆ ನನ್ನನ್ನು ಮಂತ್ರಿ ಮಾಡಲೇ ಇಲ್ಲ! ನಿನ್ನನ್ನು ಮಂತ್ರಿ ಮಾಡಿದರೆ ಹೆಗಡೆಯವರು ತಕರಾರು ಮಾಡ್ತಾರೆ, ಸದ್ಯ ಸುಮ್ಮನಿರು ಎಂದರು!

ಮುಂದೆ ಅನಿರೀಕ್ಷಿತವಾಗಿ ದೇವೇಗೌಡರು ಪ್ರಧಾನಿಯಾದರು. ಮುಖ್ಯಮಂತ್ರಿ ಹುದ್ದೆಗೆ ಮತ್ತೆ ಪೈಪೋಟಿ ಶುರುವಾಯಿತು. ನಾವು 86 ಮಂದಿ ಸಿದ್ದರಾಮಯ್ಯ ಪರ ಸಹಿ ಮಾಡಿ ಪತ್ರ ರೆಡಿ ಮಾಡಿದೆವು. ಆದರೆ ಆ ಪತ್ರ ವರಿಷ್ಠರಿಗೆ ತಲುಪಿಸುವ ಧೈರ್ಯ ಯಾರೂ ಮಾಡಲಿಲ್ಲ. ನಾನೊಬ್ಬನೆ ಆ ಪತ್ರ ಹಿಡಿದು, ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದ ಜನತಾದಳ ರಾಷ್ಟ್ರ ಮಟ್ಟದ ನಾಯಕರಾದ ಬಿಜು ಪಟ್ನಾಯಕ್, ಮಧು ದಂಡವತೆ ಬಳಿ ಹೋಗಿದ್ದೆ. ಅಲ್ಲೇ ಇದ್ದ ಪಟೇಲರು, ನಾನ್ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ನನ್ನನ್ನು ಪ್ರಶ್ನಿಸಿದರು! ನಾನು ಏನೋ ಹೇಳಿ ಅಲ್ಲಿಂದ ಜಾಗ ಖಾಲಿ ಮಾಡಿದೆ.

ಜೆ ಎಚ್‌ ಪಟೇಲರು ಮಂತ್ರಿ ಮಾಡಿದರು

ನಾಟಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಅವರನ್ನು ಮಾಡದೆ ಜೆ ಎಚ್ ಪಟೇಲರನ್ನು ಸಿಎಂ ಮಾಡಲಾಯಿತು. ವಿಶೇಷ ಅಂದರೆ ಪಟೇಲರು ನನ್ನನ್ನು ಮಂತ್ರಿಯನ್ನಾಗಿ ಮಾಡಿದರು! ನಿನಗೆ ಕೆಲಸ ಬಾರದ ಖಾತೆ ಕೊಡ್ತೇನೆ ನೋಡು ಎಂದು ಗದರಿಸುತ್ತ ಬಂದೀಖಾನೆ ಇತ್ಯಾದಿ ಪ್ರಮುಖವಲ್ಲದ ಖಾತೆ ಕೊಟ್ಟರು. ಯಾವ ಖಾತೆ ಆದರೇನು ಎಂದು ನಾನು ನಿಷ್ಠೆಯಿಂದ ಕೆಲಸ ಮಾಡಿದೆ.

ಸನ್ನಡತೆಯ ಕೈದಿಗಳ ಬಿಡುಗಡೆ ಸಮಾರಂಭಕ್ಕೆ ಅಂದಿನ ರಾಜ್ಯಪಾಲ ಖರ್ಷಿದ್ ಅಲಂ ಖಾನ್ ಅವರನ್ನು ಕರೆದಿದ್ದೆ. ಪಟೇಲರೂ ಜತೆಗಿದ್ದರು. ಆಗ ರಾಜ್ಯಪಾಲರು ನನ್ನ ಕಾರ್ಯಶೈಲಿ ಬಗ್ಗೆ ಪಟೇಲರಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದರ ಪರಿಣಾಮವೋ ಏನೋ‌. ಪಟೇಲರು ನನಗೆ ಬೆಂಗಳೂರು ನಗರಾಭಿವೃದ್ಧಿಯಂಥ ಮಹತ್ವದ ಖಾತೆಯ ಹೊಣೆಗಾರಿಕೆ ನೀಡಿದರು. ಬೆಂಗಳೂರಿನ ಹಲವಾರು ಫ್ಲೈ ಓವರ್, ಅಂಡರ್ ಪಾಸ್, ಕಾವೇರಿ ನಾಲ್ಕನೇ ಹಂತದ ಯೋಜನೆ ಸೇರಿದಂತೆ ದೂರದೃಷ್ಟಿಯ ಹಲವಾರು ಯೋಜನೆಗಳು ಆಗ ಜಾರಿಗೆ ಬಂದವು.

1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು

ಆದರೆ 1999ರಲ್ಲಿ ಪರಿಸ್ಥಿತಿ ಭಿನ್ನವಾಗಿತ್ತು. ಜನತಾದಳ ಒಡೆದು ಚೂರಾಗಿತ್ತು. ಯಾವ ಬಣದಲ್ಲಿ ಯಾರಿದ್ದಾರೆ ಎಂದು ತಿಳಿಯಲಾರದಷ್ಟು ಪರಿಸ್ಥಿತಿ ಡೋಲಾಯಮಾನವಾಗಿತ್ತು. ”ನೀನು ಕಾಂಗ್ರೆಸ್ ಸೇರು. ಎಸ್ ಎಂ ಕೃಷ್ಣ ಮುಖ್ಯಮಂತ್ರಿ ಆಗೋದು ಖಚಿತ. ನಿನ್ನನ್ನು ಅವರು ಮಂತ್ರಿ ಮಾಡ್ತಾರೆ,” ಎಂದು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಸಲಹೆ ನೀಡಿದರು. ನಾನು ಕಾಂಗ್ರೆಸ್ ಸೇರಲು ನಿರ್ಧರಿಸಿ ಕೃಷ್ಣ ಅವರ ಮೇಲೆ ನಂಬಿಕೆ ಇಟ್ಟೆ. ದಿಲ್ಲಿವರೆಗೂ ಹೋಗಿ ಬಂದೆ. ಕಾಂಗ್ರೆಸ್ ಟಿಕೆಟ್ ಕೊಡಿಸುತ್ತೇವೆ ಎಂದು ಹೇಳಿದವರು ಕೊನೇ ಕ್ಷಣದಲ್ಲಿ ಕೈ ಎತ್ತಿದರು.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ನನಗೆ ಕರೆ ಮಾಡಿ, ನಾಳೆ ಬೆಳಗ್ಗೆಯೇ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸೂಚಿಸಿದರು. ನಿನಗೆ ಟಿಕೆಟ್ ಕೊಡದೇ ಇದ್ದುದು ಗೊತ್ತಾಗಿ ಬೇಸರವಾಯಿತು. ನಿನ್ನಂಥ ಕೆಲಸಗಾರ ಈ ಕ್ಷೇತ್ರಕ್ಕೆ ಬೇಕು. ನಿನ್ನ ಬೆಂಬಲಕ್ಕೆ ನಾವಿದ್ದೇವೆ. ಈಗಷ್ಟೇ ಕಾಲಭೈರವನ ಪೂಜೆ ಮುಗಿಸಿ ಬಂದಿದ್ದೇನೆ. ನಿನಗೆ ಒಳ್ಳೆಯದಾಗುತ್ತದೆ ಎಂದು ಹರಸಿದರು.

ಮರುದಿನ ನಾಮಪತ್ರ ಸಲ್ಲಿಸುವಾಗ ಸಾವಿರಾರು ಜನ ಸೇರಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ನಿಂತು ನಾನು ಭಾರೀ ಮತಗಳ ಅಂತರದಿಂದ ಜಯಶಾಲಿಯಾದೆ. ನನ್ನ ಗೆಲುವಿನ ಆರ್ಭಟ ಕಂಡು ಎಲ್ಲ ಪಕ್ಷಗಳ ಹಿರಿಯ ಮುಖಂಡರೂ ಅಚ್ಚರಿಪಟ್ಟರು.

ಬದಲಾದ ಸನ್ನಿವೇಶದಲ್ಲಿ 2004ರಲ್ಲಿ ಬಿನ್ನಿಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಂತು ಮೂರನೇ ಬಾರಿ ಆಯ್ಕೆ ಆದೆ. 2008ರಲ್ಲಿ ಮತ್ತೆ ಕಾಂಗ್ರೆಸ್ ನಿಂದ ಗೋವಿಂದರಾಜ ನಗರ ಕ್ಷೇತ್ರದಿಂದ ಗೆಲುವು ಸಾಧಿಸಿದೆ.
2010ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಆಗಿ ಆಹಾರ-ನಾಗರಿಕ ಪೂರೈಕೆ, ಮುಜರಾಯಿ ಮತ್ತು ವಸತಿ ಸಚಿವನಾಗಿ ಕಾರ್ಯ ನಿರ್ವಹಿಸಿದೆ. 2016ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಎರಡನೇ ಬಾರಿ ಆಯ್ಕೆಯಾದೆ. 2019ರಲ್ಲಿ ಗೋವಿಂದರಾಜ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಭಾರಿ ಮತಗಳ ಅಂತರದಿಂದ ಜಯ ಸಾಧಿಸಿದೆ. ಮೊದಲು ತೋಟಗಾರಿಕೆ ಮತ್ತು ರೇಷ್ಮೆ ಖಾತೆ ನೀಡಿದ್ದರು. ಬಳಿಕ 2021ರಲ್ಲಿ ಮಹತ್ವದ ವಸತಿ ಮತ್ತು ಮೂಲ ಸೌಕರ್ಯ ಖಾತೆಗಳ ಹೊಣೆಗಾರಿಕೆ ನೀಡಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಸೋಮಣ್ಣಗೆ ಡಬಲ್‌ ಸೋಲು

ಗೋವಿಂದರಾಜ ನಗರ ಕ್ಷೇತ್ರದಿಂದಲೇ ವಿಧಾನಸಭೆ ಚುನಾವಣೆಗೆ ನಿಲ್ಲಲು ವಿ ಸೋಮಣ್ಣ ತಯಾರಿ ನಡೆಸಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಇವರಿಗೆ ಗೋವಿಂದರಾಜ ನಗರದಲ್ಲಿ ಟಿಕೆಟ್‌ ನೀಡದೆ ಚಾಮರಾಜ ನಗರ ಮತ್ತು ಸಿದ್ದರಾಮಯ್ಯ ಅವರು ಸ್ಪರ್ಧಿಸಿದ್ದ ವರುಣ ಕ್ಷೇತ್ರಗಳಲ್ಲಿ ಟಿಕೆಟ್‌ ನೀಡಿತು. ಸೋಮಣ್ಣ ಅವರು ಚುನಾವಣೆ ಎದುರಿಸಿದರು. ಆದರೆ ಎರಡೂ ಕ್ಷೇತ್ರಗಳಲ್ಲಿ ಸೋತು ಹೋದರು. ಆದರೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಹೈಕಮಾಂಡ್‌ ತುಮಕೂರು ಕ್ಷೇತ್ರದ ಟಿಕೆಟ್‌ ನೀಡಿತು. ಸೋಮಣ್ಣ ಅವರು ಇಲ್ಲಿ ನಿರಾಯಾಸವಾಗಿ ಗೆದ್ದರು. ಜತೆಗೆ ಕೇಂದ್ರದಲ್ಲಿ ಮಂತ್ರಿಯೂ ಆದರು!

Continue Reading

ಕ್ರೈಂ

Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

ಉಗ್ರಗಾಮಿಗಳ ದಾಳಿಯಿಂದಾಗಿ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ನಡೆದಿದೆ. ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಭಾನುವಾರ ದಾಳಿ (Terror Attack) ನಡೆದಿದೆ. ದಾಳಿ ವೇಳೆ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ.

VISTARANEWS.COM


on

By

Terror Attack
Koo

ರಿಯಾಸಿ(ಕಾಶ್ಮೀರ): ಯಾತ್ರಾರ್ಥಿಗಳಿದ್ದ (pilgrims) ಬಸ್ (bus) ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು (Terror Attack) ಗುಂಡಿನ ದಾಳಿ ನಡೆಸಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ (jammu and kashmir) ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಭಾನುವಾರ ಉಗ್ರರ ದಾಳಿ ನಡೆದಿದೆ ಎನ್ನಲಾಗಿದೆ. ಗುಂಡಿನ ದಾಳಿಯ ಕಾರಣ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.


ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮೊದಲು ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ದಾಳಿ ನಡೆಯುತ್ತಿದ್ದಂತೆ ಬಸ್ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಇದರಿಂದಾಗಿ ಏಳು ಮಂದಿ ಮೃತ ಪಟ್ಟಿದ್ದು, ಒಟ್ಟು ಹತ್ತು ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿತು ಎಂದು ಪೋನಿ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಬಸ್ಸಿನ ಮೇಲೆ ಹಲವು ಬಾರಿ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿ ಹಲವಾರು ಖಾಲಿ ಗುಂಡುಗಳು ಕೂಡ ಪತ್ತೆಯಾಗಿವೆ.


ಇದನ್ನೂ ಓದಿ: Road Accident : ಟೆಂಪೋ ಪಲ್ಟಿ; ಓವರ್‌ಟೇಕ್‌ ಧಾವಂತಕ್ಕೆ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ

ಈ ಹಿಂದೆ 22 ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು

ಉತ್ತರಪ್ರದೇಶದ ಹತ್ರಾಸ್‌ನಿಂದ ಬಂದ ಬಸ್ ಅಖ್ನೂರ್‌ನ ಆಳವಾದ ಕಮರಿಗೆ ಬಿದ್ದ ಪರಿಣಾಮ ಒಂಬತ್ತು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 22 ಯಾತ್ರಾರ್ಥಿಗಳು ಪ್ರಾಣ ಕಳೆದುಕೊಂಡು 57 ಮಂದಿ ಗಾಯಗೊಂಡ ಕೆಲವು ದಿನಗಳ ಅನಂತರ ಈ ಘಟನೆ ನಡೆದಿದೆ.

ಅಖ್ನೂರ್‌ನಲ್ಲಿ ಬಸ್ ಅಪಘಾತದಿಂದ ಪ್ರಾಣಹಾನಿಯಿಂದ ದುಃಖವಾಗಿದೆ. ನನ್ನ ಬೆಂಬಲ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆಯಲ್ಲಿವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಬಸ್ ಅಪಘಾತದಿಂದಾಗಿ ಗಾಯಗೊಂಡವರಿಗೆ 50,000 ರೂ. ನೆರವನ್ನು ಘೋಷಿಸಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Continue Reading

ದೇಶ

Narendra Modi: ರಾಜಕೀಯದಾಚೆ ಕವಿ, ಗಾಳಿಪಟ ಪ್ರೇಮಿ; ಮೋದಿ ಬಗ್ಗೆ ನಿಮಗೆ ಗೊತ್ತಿರದ 20 ಸಂಗತಿ ಇಲ್ಲಿವೆ

Narendra Modi: ರಾಜಕೀಯ, ಭಾಷಣ, ಯೋಜನೆ, ವಿದೇಶ ಪ್ರವಾಸ ಎಂದು ಬ್ಯುಸಿಯಾಗಿರುವ ನರೇಂದ್ರ ಮೋದಿ ಅವರು ಕವಿ ಎಂಬುದು ತುಂಬ ಜನರಿಗೆ ಗೊತ್ತಿರಲಿಕ್ಕಿಲ್ಲ. ಅವರ ಆಹಾರ ಪದ್ಧತಿ ನಿಯಮಿತವಾಗಿದೆ, ವಿಶಿಷ್ಟವಾಗಿದೆ. ವೈಯಕ್ತಿಕ ಸಂಬಂಧಗಳಿಗೆ ಮೋದಿ ಆದ್ಯತೆ ನೀಡುತ್ತಾರೆ. ಇಷ್ಟೆಲ್ಲ ವಿಭಿನ್ನ ವ್ಯಕ್ತಿತ್ವ ಹೊಂದಿರುವ ನರೇಂದ್ರ ಮೋದಿ ಅವರ ಬಗ್ಗೆ ನಿಮಗೆ ಗೊತ್ತಿರದ 20 ಸಂಗತಿಗಳು ಇಲ್ಲಿವೆ.

VISTARANEWS.COM


on

Narendra Modi
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುಜರಾತ್‌ನಲ್ಲಿ (Gujarat) ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಆರ್‌ಎಸ್‌ಎಸ್‌ ಸೇರ್ಪಡೆಯಾಗಿ, ಒಂದೊಂದೇ ಹೆಜ್ಜೆಗಳನ್ನು ಮೇಲೇರುತ್ತ ಬಂದ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಗಾದಿಗೆ ಏರಿದ್ದಾರೆ. ರಾಜಕೀಯದಲ್ಲಿ ಏಳಿಗೆ ಹೊಂದುವ ಜತೆಗೆ ವೈಯಕ್ತಿಯವಾಗಿ, ಆಸಕ್ತಿಗಳ ವಿಚಾರವಾಗಿಯೂ ನರೇಂದ್ರ ಮೋದಿ ಅವರು ವಿಭಿನ್ನ ವ್ಯಕ್ತಿತ್ವ ಹೊಂದಿದ್ದಾರೆ. ನರೇಂದ್ರ ಮೋದಿ ಅವರ ಕುರಿತು ನಿಮಗೆ ಗೊತ್ತಿರದ 20 ಆಸಕ್ತಿದಾಯಕ ವಿಚಾರಗಳು ಇಲ್ಲಿವೆ.

1. ಆರೋಗ್ಯ ಕಾಳಜಿ ಹೆಚ್ಚಿನ ಮುತುವರ್ಜಿ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅವರು ಒಂದು ದಿನವೂ ಅನಾರೋಗ್ಯಕ್ಕೀಡಾಗಿದ್ದು, ಸುಸ್ತಾಗಿದ್ದು, ಕನಿಷ್ಠ ನೆಗಡಿ-ಜ್ವರ ಬಂದ ಸುದ್ದಿಯನ್ನು ಯಾರೂ ಕೇಳಿಲ್ಲ. ಇದಕ್ಕೆ ನರೇಂದ್ರ ಮೋದಿ ಅವರು ಆರೋಗ್ಯಕ್ಕೆ ನೀಡುವ ಮಹತ್ವವೇ ಕಾರಣ. ನಿತ್ಯ ನಾಲ್ಕೈದು ಗಂಟೆ ಮಲಗಿದರೂ, 18ಕ್ಕೂ ಹೆಚ್ಚು ತಾಸು ಕೆಲಸ ಮಾಡಿದರೂ, ವಿದೇಶ ಸುತ್ತಿ ಬಂದರೂ ಯೋಗ, ವ್ಯಾಯಾಮ, ಆಹಾರ ಪದ್ಧತಿಯಿಂದಾಗಿ ಮೋದಿ ಈಗಲೂ ಫಿಟ್‌ ಇದ್ದಾರೆ. ಬೆಳಗ್ಗೆ ಎದ್ದು, ಯೋಗ, ವ್ಯಾಯಾಮ, ವಾಕಿಂಗ್‌ ಹಾಗೂ ಧ್ಯಾನ ಮಾಡುತ್ತಾರೆ. ಗುಜರಾತಿ ಆಹಾರ, ಸ್ವಲ್ಪ ಕಿಚಡಿ ಸೇವಿಸುವ ಮೂಲಕ ಅವರು ಡಯಟ್‌ ಮೇಂಟೇನ್‌ ಮಾಡುತ್ತಾರೆ. ಅಷ್ಟರಮಟ್ಟಿಗೆ ಮೋದಿ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ.

2. 42 ವರ್ಷದಿಂದ ನವರಾತ್ರಿ ವೇಳೆ ಉಪವಾಸ

ದೇಶಭಕ್ತಿಯ ಜತೆಗೆ ದೈವಭಕ್ತರೂ ಆಗಿರುವ ಮೋದಿ ಅವರು ನವರಾತ್ರಿ ವೇಳೆ ಪ್ರತಿ ವರ್ಷ ಉಪವಾಸ ಮಾಡುತ್ತಾರೆ. ಕಳೆದ 44 ವರ್ಷಗಳಿಂದ ನವರಾತ್ರಿ ವೇಳೆ ಮೋದಿ ಅವರು ಒಂಬತ್ತು ದಿನ ಉಪವಾಸ ಆಚರಿಸುತ್ತಾರೆ. ಮೋದಿ ವಿದೇಶದಲ್ಲಿಯೇ ಇರಲಿ, ಬಿಡುವಿಲ್ಲದ ಕಾರ್ಯಕ್ರಮಗಳು, ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಲೇ ಉಪವಾಸ ಆಚರಿಸುತ್ತಾರೆ.

3. ಮೋದಿ ಸಂವಹನದ ಹಿಂದಿದೆ ಕೋರ್ಸ್‌ ರಹಸ್ಯ

ನರೇಂದ್ರ ಮೋದಿ ಅವರು ಅರಳು ಹುರಿದಂತೆ ಮಾತನಾಡುತ್ತಾರೆ. ಅವರು ಜಾಗತಿಕ ಉದ್ಯಮಿಗಳೇ ಇರಲಿ, ರಾಜಕಾರಣಿಯೇ ಇರಲಿ, ಎಂತಹವರ ಜತೆಗೂ ಉತ್ತಮ ಸಂವಹನ ಸಾಧಿಸುತ್ತಾರೆ. ಅವರ ಜತೆ ಆತ್ಮೀಯವಾಗಿ ಬೆರೆಯುತ್ತಾರೆ. ಅಷ್ಟೇ ಏಕೆ, ವೇದಿಕೆ ಮೇಲೆ ನಿಂತು ವಾಗ್ಝರಿ ಹರಿಸಿದರೆ, ಗ್ರಾಮೀಣ ಭಾಗದ ಜನರೂ ತಲೆದೂಗುವಂತೆ ಮಾಡುತ್ತಾರೆ. ಇದರ ಹಿಂದೆ ಅವರು ಬಾಲ್ಯದಿಂದಲೂ ಜನರ ಜತೆ ಒಡನಾಡಿದ್ದು, ಆರೆಸ್ಸೆಸ್‌ನ ಬೈಠಕ್‌ಗಳಲ್ಲಿ ಭಾಗಿಯಾಗಿದ್ದರ ಜತೆಗೆ ಅವರು ಅಮೆರಿಕದಲ್ಲಿ ಇದಕ್ಕಾಗಿಯೇ ಕೋರ್ಸ್‌ ಸಹ ಮಾಡಿದ್ದಾರೆ. ಅಮೆರಿಕದಲ್ಲಿ “ಇಮೇಜ್‌ ಮ್ಯಾನೇಜ್‌ಮೆಂಟ್‌” ಹಾಗೂ ಸಾರ್ವಜನಿಕ ಸಂಪರ್ಕದಲ್ಲಿ ಮೋದಿ ಮೂರು ತಿಂಗಳ ಕೋರ್ಸ್‌ ಮುಗಿಸಿದ್ದಾರೆ.

4. ಅವಿರತ ಪರಿಶ್ರಮಿ, ಅಪ್ರತಿಮ ದೇಶಪ್ರೇಮಿ

ನರೇಂದ್ರ ಮೋದಿ ಕುರಿತ ಟೀಕೆ ಟಿಪ್ಪಣಿಗಳು ಏನೇ ಇರಲಿ. ಆದರೆ, ಅವರೊಬ್ಬ ಅವಿರತ ಪರಿಶ್ರಮಿ ಹಾಗೂ ಅಪ್ರತಿಮ ದೇಶಪ್ರೇಮಿ ಎಂಬುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಇಳಿಕೆಯಾದ ಉಗ್ರರ ದಾಳಿಗಳೇ ಸಾಕ್ಷಿಯಾಗಿದೆ. ಇಂದಿಗೂ ಉಗ್ರರ ಉಪಟಳ ಗಡಿಗೆ ಸೀಮಿತವಾಗಿದ್ದರೆ ಅದಕ್ಕೆ ಮೋದಿ ಅವರು ದೇಶದ ಭದ್ರತೆಗೆ ನೀಡಿದ ಆದ್ಯತೆಯೇ ಕಾರಣ. ಉರಿ ಮೇಲಿನ ದಾಳಿಗೆ ಪ್ರತೀಕಾರವಾಗಿ ಸರ್ಜಿಕಲ್‌ ಸ್ಟ್ರೈಕ್‌ ಮಾಡಿಸಿದ್ದು, ಸರ್ಜಿಕಲ್‌ ಸ್ಟ್ರೈಕ್‌ ಯಶಸ್ವಿಯಾಗಿದೆ ಎಂದು ಕರೆ ಬರುವತನಕ ರಾತ್ರಿ ಎದ್ದು ಕುಳಿತಿದ್ದು, ಅಮೆರಿಕದ ಬೆದರಿಕೆಗೆ ಬಗ್ಗದೆ ರಷ್ಯಾ ಜತೆ ಎಸ್‌-400 ಕ್ಷಿಪಣಿ ವ್ಯವಸ್ಥೆ ಖರೀದಿ ಒಪ್ಪಂದ ಮಾಡಿಕೊಂಡಿದ್ದು, ಚೀನಾದ ಒಆರ್‌ಒಪಿ, ಸಿಪಿಐಸಿ ಬಲೆಗೆ ಬೀಳದ್ದು, ಪುಲ್ವಾಮ ದಾಳಿಗೆ ತಿರುಗೇಟಾಗಿ ಬಾಲಾಕೋಟ್‌ ವಾಯುದಾಳಿ ನಡೆಸಿದ್ದು, ಉಕ್ರೇನ್‌ ಮೇಲೆ ಆಕ್ರಮಣ ಮಾಡಿದ ಬಳಿಕ ವಿಶ್ವವೇ ರಷ್ಯಾ ವಿರುದ್ಧ ನಿಂತರೂ ಭಾರತವು ರಷ್ಯಾದಿಂದ ಕಚ್ಚಾತೈಲ ಖರೀದಿಸಿದ್ದು ಇದಕ್ಕೆ ಸಾಕ್ಷಿಯಾಗಿದೆ. ಮೋದಿ ಅವರು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆಯಾದ ಬಳಿಕ 2014ರಲ್ಲಿ ಎಂಟು ತಿಂಗಳಲ್ಲಿ ದೇಶಾದ್ಯಂತ 3 ಲಕ್ಷ ಕಿ.ಮೀ ಸಂಚರಿಸಿ, 25 ರಾಜ್ಯಗಳಲ್ಲಿ ಪ್ರಚಾರ ಮಾಡಿ ಜನರ ಮನಸ್ಸು ಗೆದ್ದಿದ್ದರು. ಈಗಲೂ ಮೋದಿ ನಾಲ್ಕಾರು ದೇಶಗಳನ್ನು ಸುತ್ತಿ, ಬೆಳಗ್ಗೆ ಎದ್ದೇಳುತ್ತಲೇ ಯಾವುದೋ ಯೋಜನೆಗೆ ಚಾಲನೆ ನೀಡುತ್ತಿರುತ್ತಾರೆ. ರಾಜಕೀಯ ವೈರಿಗಳೂ ಮೋದಿ ಅವರನ್ನು ಕಾಯಕಯೋಗಿ ಎಂಬುದನ್ನು ಒಪ್ಪುತ್ತಾರೆ.

5. ರಾಜಕೀಯದ ಹೊರತಾಗಿ ಸಂಬಂಧಕ್ಕೆ ಆದ್ಯತೆ

ಕೆಲವೊಮ್ಮೆ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ, ಆರೋಪ, ಟೀಕೆ, ಖಂಡನೆ, ವಿಡಂಬನೆ, ವ್ಯಂಗ್ಯವು ಗಂಭೀರ ಸ್ವರೂಪದ್ದಾಗಿರುತ್ತದೆ. ಆಡಳಿತ ಪಕ್ಷದವರೇ ಹೀಗೆ ಪ್ರತಿಪಕ್ಷಗಳನ್ನು ಹೀಗಳಿಯಬಹುದೇ ಎನ್ನುವಷ್ಟರಮಟ್ಟಿಗೆ ದಾಳಿ ನಡೆಸುತ್ತಾರೆ. ಹೀಗಿದ್ದರೂ ಮೋದಿ ಅವರು ರಾಜಕೀಯದ ಹೊರತಾಗಿ ಉತ್ತಮ ಸಂಬಂಧ ಹೊಂದಿದ್ದಾರೆ. ರಾಜಕೀಯದಲ್ಲಿ ಬದ್ಧವೈರಿಯಾಗಿರುವ ಮಮತಾ ಬ್ಯಾನರ್ಜಿಯವರು ಪ್ರತಿ ವರ್ಷ ಮೋದಿ ಅವರಿಗೆ ಕುರ್ತಾ, ಸಿಹಿ ತಿಂಡಿಗಳನ್ನು ಕಳುಹಿಸುತ್ತಾರೆ. ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಅವರೂ ಮೋದಿಗೆ ಸಿಹಿ ಕಳುಹಿಸುತ್ತಾರೆ. ದೆಹಲಿಗೆ ಹೋದಾಗ ಮಾಜಿ ಪ್ರಧಾನಿ ದೇವೇಗೌಡರನ್ನು ಮೋದಿ ಆದರಿಸಿದ ರೀತಿಗೆ ಗೌಡರೇ ವಿಸ್ಮಿತರಾಗಿದ್ದರು. ಇನ್ನು ರಾಜ್ಯಸಭೆಯಲ್ಲಿ ಗುಲಾಂ ನಬಿ ಆಜಾದ್‌ ಅವರಿಗೆ ಮೋದಿ ಗೌರವ ಸೂಚಿಸಿದ್ದು, ಅವರನ್ನು ಹೊಗಳಿದ್ದು, ಪಕ್ಷದ ಹಂಗಿಲ್ಲದೆ ಪ್ರಣಬ್‌ ಮುಖರ್ಜಿ ಅವರಿಗೆ ಭಾರತ ರತ್ನ ನೀಡಿದ್ದು ಮೋದಿ ಅವರು ರಾಜಕೀಯದ ಹೊರತಾಗಿ ಹೊಂದಿರುವ ವಿಶಾಲ ಮನೋಭಾವ, ಸಂಬಂಧಕ್ಕೆ ನೀಡುವ ಆದ್ಯತೆಗೆ ನಿದರ್ಶನವಾಗಿದೆ.

ಮೋದಿ ಜತೆ ದೀದಿ.

6. ಯೋಜನೆಗಳಿಗೆ ವಿಶಿಷ್ಟ ಹೆಸರು ನೀಡುವ ಕಲೆ

ಮೋದಿ ಅವರ ಆಡಳಿತದಲ್ಲಿ ಯಾವುದೇ ಯೋಜನೆ ಜಾರಿಗೊಳಿಸಲಿ, ಅದಕ್ಕೊಂದು ವಿಶಿಷ್ಟ ಹೆಸರು ನೀಡಲಾಗುತ್ತದೆ. ಯೋಜನೆಗಳಿಗೆ ಕುಟುಂಬಸ್ಥರ ಹೆಸರಿಡುವುದಕ್ಕೆ ವಿದಾಯ ಹಾಕಿದ ಮೋದಿ ವಿಶಿಷ್ಟ ಹೆಸರುಗಳ ಮೂಲಕ ಗಮನ ಸೆಳೆಯುತ್ತಾರೆ. ಸಿಎಂ ಎಂದರೆ ಕಾಮನ್‌ ಮ್ಯಾನ್‌, ಐಟಿ ಎಂದರೆ ಇಂಡಿಯನ್‌ ಟೆಕ್ನಾಲಜಿ, ಬಿಟಿ ಎಂದರೆ ಭಾರತ್‌ ಟುಮಾರೊ ಎಂಬ ಪದಗಳನ್ನು ಪರಿಚಯಿಸಿದ್ದೇ ಮೋದಿ. ಅದೂ ಗುಜರಾತ್‌ ಸಿಎಂ ಆಗಿದ್ದಾಗಲೇ ಮೋದಿ ಯೋಜನೆಗಳಿಗೆ ಹೆಸರಿಡುವ ಕಲೆ ಹೊಂದಿದ್ದರು. ಗುಜರಾತ್‌ ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ನರ್ಮದಾ ನೀರಾವರಿ ಯೋಜನೆಗೆ “ಸುಜಲಾಂ ಸುಫಲಾಂ”, ಹೆಣ್ಣುಮಕ್ಕಳನ್ನು ಶಾಲೆಗೆ ಕರೆತರುವ ಯೋಜನೆಗೆ “ವಿದ್ಯಾಲಕ್ಷ್ಮೀ”, ಗುಜರಾತ್‌ ಅಭಿವೃದ್ಧಿಗೆ ರಚಿಸಿದ ಪರಿಣತರ ಸಮಿತಿಗೆ “ಬುದ್ಧಿಸಾಗರ್‌ ಪರಿಷದ್‌” ಎಂದು ಹೆಸರಿಟ್ಟಿದ್ದರು. ಇನ್ನು ಕಳೆದ ಎಂಟು ವರ್ಷಗಳಲ್ಲಿ ಮೋದಿ ಅವರು ಪ್ರಧಾನಿಯಾಗಿ, ಆತ್ಮನಿರ್ಭರ ಭಾರತ್‌, ಮೇಕ್‌ ಇನ್‌ ಇಂಡಿಯಾ, ಆಯುಷ್ಮಾನ್‌ ಭಾರತ್‌, ಜನಧನ್‌, ಕಿಸಾನ್‌ ಸಮ್ಮಾನ್‌, ಅಗ್ನಿಪಥ, ಉಜ್ವಲ ಸೇರಿ ಹಲವು ವಿಶಿಷ್ಟ ಹೆಸರುಗಳಲ್ಲಿ ಯೋಜನೆಗಳು ಜಾರಿಯಾಗಿವೆ.

7. ಸುರಂಗ ಮಾರ್ಗ ಬಳಸಿದ ಮೊದಲ ಪ್ರಧಾನಿ

ನರೇಂದ್ರ ಮೋದಿ ಅವರ ನಿವಾಸವಿರುವ ಲೋಕಕಲ್ಯಾಣ ಮಾರ್ಗದಿಂದ ಸಫ್ದರ್‌ಜಂಗ್‌ ಏರ್‌ಪೋರ್ಟ್‌ಗೆ ಎರಡು ಕಿ.ಮೀ. ದೂರದ ಸುರಂಗ ಕೊರೆಯಲಾಗಿದೆ. ಗಾಲ್ಫ್‌ ಕೋ ಮಾರ್ಗವಾಗಿ ಸುರಂಗ ಕೊರೆಯಲಾಗಿದ್ದು, ಸಂಚಾರ ದಟ್ಟಣೆ ತಡೆಯಲು 2010ರಲ್ಲಿ ಆರಂಭಿಸಿ, 2014ರಲ್ಲಿ ಸುರಂಗ ಕಾಮಗಾರಿ ಮುಗಿದಿದೆ. ಈ ಸುರಂಗವನ್ನು ಬಳಸಿದ ಮೊದಲ ಪ್ರಧಾನಿ ನರೇಂದ್ರ ಮೋದಿ ಎನಿಸಿದ್ದಾರೆ. ಸುರಂಗದಲ್ಲಿ ಹೋದರೆ ವಿಮಾನ ನಿಲ್ದಾಣ, ವಿಐಪಿ ಹೆಲಿಕಾಪ್ಟರ್‌ಗಳು ಲ್ಯಾಂಡ್‌ ಆಗುವ ಹೆಲಿಪ್ಯಾಡ್‌ ತಲುಪಬಹುದಾಗಿದೆ.

8. ಮೋದಿಗೆ ಸ್ಕೂಟರ್‌ ಓಡಿಸಲು ಬರುತ್ತಿರಲಿಲ್ಲ

ನರೇಂದ್ರ ಮೋದಿ ಅವರು ಚಿಕ್ಕ ವಯಸ್ಸಿನಲ್ಲಿಯೇ ಆರ್‌ಎಸ್‌ಎಸ್‌ ಸೇರಿ, ಸಂಘದ ಪ್ರಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಭೆ-ಸಮಾರಂಭಗಳನ್ನು ಆಚರಿಸುವುದು, ಕಚೇರಿಯ ಸ್ವಚ್ಛತೆ ಸೇರಿ ಎಲ್ಲ ಉಸ್ತುವಾರಿಯನ್ನು ಅವರೇ ನೋಡಿಕೊಳ್ಳುತ್ತಿದ್ದರು. ಸಂಘದಲ್ಲಿ ಅವರು ಪ್ರಚಾರಕರಾಗಿ ಆಯ್ಕೆಯಾಗುವರೆಗೂ ಸ್ಕೂಟರ್‌ ಓಡಿಸಲು ಬರುತ್ತಿರಲಿಲ್ಲ. ಶಂಕರಸಿಂಗ್‌ ವಘೇಲಾ (ಗುಜರಾತ್‌ ಮಾಜಿ ಮುಖ್ಯಮಂತ್ರಿ) ಅವರೇ ಮೋದಿ ಅವರನ್ನು ಸ್ಕೂಟರ್‌ನಲ್ಲಿ ಕರೆದುಕೊಂಡು ತಿರುಗಾಡುತ್ತಿದ್ದರು.

9. ಕಟ್ಟಾ ವಿರೋಧಿಯೊಬ್ಬ ಖಾಸಾ ಸ್ನೇಹಿತನಾದ ಕತೆ

ಗುಜರಾತ್‌ನಲ್ಲಿ ಗೋಧ್ರಾ ಹತ್ಯಾಕಾಂಡ ನಡೆದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ನರೇಂದ್ರ ಮೋದಿ ಅವರ ಕಟ್ಟಾ ವಿರೋಧಿಗಳಾದರು. ಇದೇ ರೀತಿ ಹತ್ಯಾಕಾಂಡದ ವೇಳೆ ಕೋಟ್ಯಂತರ ರೂ. ನಷ್ಟ ಅನುಭವಿಸಿದ ಜಾಫರ್‌ ಸರೇಶ್‌ವಾಲಾ ಎಂಬ ಉದ್ಯಮಿಯೂ ಮೋದಿ ವಿರೋಧಿಯಾಗಿದ್ದರು. ಮೋದಿ ವಿರುದ್ಧ ಲಂಡನ್‌ನಲ್ಲಿಯೂ ಸರೇಶ್‌ವಾಲಾ ಅಪಪ್ರಚಾರ ಮಾಡಿದ್ದರು. ಆದರೆ, ಸರೇಶ್‌ವಾಲಾ 2015ರಲ್ಲಿ ಲಂಡನ್‌ನಲ್ಲಿ ವಾಸಿಸಲು ತೀರ್ಮಾನಿಸಿದಾಗ ಕರೆ ಮಾಡಿದ ಮೋದಿ, “ಎಷ್ಟು ದಿನ ಬ್ರಿಟಿಷರ ಸೇವೆ ಮಾಡುತ್ತೀರಿ? ನಿಮ್ಮ ಅಗತ್ಯ ದೇಶಕ್ಕಿದೆ” ಎಂದರು. ಇದಾದ ಬಳಿಕ ಸರೇಶ್‌ವಾಲಾ ಮೋದಿ ಅವರಿಗೆ ಆಪ್ತರಾದರು. ಯಾರು ಮೋದಿ ವಿರುದ್ಧ ಮಾತನಾಡಿದರೋ, ಅದೇ ಸರೇಶ್‌ವಾಲಾ ಮೋದಿ ಪರ ಮಾತನಾಡಿದರು.

10. ಮೋದಿ ಕುರಿತು 2 ತಿಂಗಳಲ್ಲಿ 40 ಪುಸ್ತಕ

ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿ ದೇಶಾದ್ಯಂತ ಖ್ಯಾತಿ ಗಳಿಸಿದರೂ ಅವರ ಜೀವನ ಚಿತ್ರಣ ಹರವುವ ಪುಸ್ತಕಗಳು ಬೆರಳೆಣಿಕೆಯಷ್ಟು ಮಾತ್ರ ಇದ್ದವು. ಆದರೆ, 2014ರಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ, ಪ್ರಧಾನಿಯಾದರೋ, ಆಗ ಸಾಲು ಸಾಲು ಪುಸ್ತಕಗಳು ಬಿಡುಗಡೆಯಾದವು. ಒಂದು ವರದಿ ಪ್ರಕಾರ, ಮೋದಿ ಪ್ರಧಾನಿಯಾಗಿ ಎರಡು ತಿಂಗಳು ಆಗುವಷ್ಟರಲ್ಲಿಯೇ ಅವರ ಜೀವನ ಚರಿತ್ರೆ ಕುರಿತು ೪೦ ಪುಸ್ತಕಗಳು ಪ್ರಕಟವಾದವು ಎಂದು ತಿಳಿದುಬಂದಿದೆ. ಎಂಟು ವರ್ಷದಲ್ಲಂತೂ ಮೋದಿ ಕುರಿತು ನೂರಾರು ಪುಸ್ತಕಗಳು ಪ್ರಕಟವಾಗಿವೆ.

11. ಕುಗ್ಗದ ಚುಂಬಕಶಕ್ತಿ, ಹಿಗ್ಗಿದ ಜನಪ್ರಿಯತೆ

ಜನಾಕ್ರೋಶವನ್ನು ಎದುರಿಸದೆ ಯಾವ ಸರ್ಕಾರವೂ ಆಡಳಿತ ನಡೆಸುವುದಿಲ್ಲ. ಅದರಂತೆ, ಮೋದಿ ಅವಧಿಯಲ್ಲಿ ಬೆಲೆಯೇರಿಕೆ, ಕೊರೊನಾ ಬಿಕ್ಕಟ್ಟು, ಆರ್ಥಿಕ ಹಿಂಜರಿತ, ಆಪರೇಷನ್‌ ಕಮಲ, ಕೃಷಿ ಕಾಯಿದೆಗೆ ವಿರೋಧ, ಸಿಎಎ ವಿರುದ್ಧ ಪ್ರತಿಭಟನೆ ಸೇರಿ ಹಲವು ರೀತಿಯಲ್ಲಿ ಜನರಿಂದ ಆಕ್ರೋಶ ವ್ಯಕ್ತವಾಗಿದೆ. ಈಗಲೂ ಬೆಲೆಯೇರಿಕೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ. ಹೀಗಿದ್ದರೂ, ಮೋದಿ ಅವರ ಜನಪ್ರಿಯತೆ, ಚುಂಬಕ ಶಕ್ತಿ ಕುಗ್ಗಿಲ್ಲ. ಇತ್ತೀಚೆಗೆ ಮಾರ್ನಿಂಗ್‌ ಕನ್ಸಲ್ಟ್‌ ಎಂಬ ಜಾಗತಿಕ ಸಂಸ್ಥೆ ನಡೆಸಿದ ಸಮೀಕ್ಷೆಯು ಮೋದಿಯೇ ಜಗತ್ತಿನ ಜನಪ್ರಿಯ ನಾಯಕ ಎಂದು ತಿಳಿಸಿದೆ.

12. ಬಾಲ್ಯದಲ್ಲಿ ಮೋದಿಗಿದ್ದ ಪೆಟ್‌ನೇಮ್‌ ಏನು?

ತುಂಬು ಕುಟುಂಬ, ಬಡತನದಲ್ಲಿ ಜನಿಸಿದ ಮೋದಿಗೆ ಬಾಲ್ಯದಲ್ಲಿ ಗೆಳೆಯರ ದೊಡ್ಡ ಬಳಗವೇ ಇತ್ತು. ಶಾಲೆಯಲ್ಲಂತೂ ಮೋದಿ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು. ಹಾಗಾಗಿ, ಸಹಪಾಠಿಗಳು ಅವರನ್ನು “ಎನ್‌ಡಿ” (ನರೇಂದ್ರ ದಾಮೋದರ ದಾಸ್) ಎಂದು ಕರೆಯುತ್ತಿದ್ದರು. ಇನ್ನೂ ಕೆಲವರು ಪ್ರೀತಿಯಿಂದ “ನರಿಯಾ” ಎಂದೂ ಕರೆಯುತ್ತಿದ್ದರು.

13. ಸನ್ಯಾಸಿ ನುಡಿದ ಭವಿಷ್ಯ ನಿಜವಾಯಿತು

ನರೇಂದ್ರ ಮೋದಿ ಅವರು ಚಿಕ್ಕವರಾಗಿದ್ದಾಗ ಅವರ ಮನೆಗೆ ಸನ್ಯಾಸಿಯೊಬ್ಬರು ಬಂದಿದ್ದರು. ಆಗ, ಮೋದಿ ಸಹೋದರ ಸೋಮ್‌ಭಾಯ್‌ ಅವರ ಜಾತಕ ನೋಡಿದ ಸಾಧು, “ಈತ ಎಲ್ಲರಂತೆ ಸಾಮಾನ್ಯ ಜೀವನ ಸಾಗಿಸುತ್ತಾನೆ” ಎಂದು ಹೇಳುತ್ತಾರೆ. ನಂತರ ಮೋದಿ ಜಾತಕ ನೋಡಿದ ಸನ್ಯಾಸಿ, “ಒಂದೋ ಈತ ಸನ್ಯಾಸಿಯಾಗುತ್ತಾನೆ, ಇಲ್ಲವೇ ದೊಡ್ಡ ರಾಜಕಾರಣಿಯಾಗುತ್ತಾನೆ” ಎಂದಿದ್ದರು. ಸನ್ಯಾಸಿಯಾಗುವ ದಿಸೆಯಲ್ಲಿ ಮೋದಿ ಬಂಗಾಳದ ಒಂದು ಆಶ್ರಮಕ್ಕೆ ಹೋಗಿದ್ದರು. ಹಿಮಾಲಯದಲ್ಲೂ ಒಂದಷ್ಟು ದಿನ ಕಳೆದರು. ಆದರೆ, ಕೊನೆಗೆ ಅವರು ರಾಜಕಾರಣಿಯಾದರು. ಜಗತ್ತೇ ಮೆಚ್ಚುವ ನಾಯಕನಾಗಿಯೂ ಹೊರಹೊಮ್ಮಿದರು.

14. ಕವಿ, ಛಾಯಾಗ್ರಾಹಕ, ಗಾಳಿಪಟ ಪ್ರೇಮಿ

ರಾಜಕೀಯ, ಭಾಷಣ, ಯೋಜನೆ, ವಿದೇಶ ಪ್ರವಾಸ ಎಂದು ಬ್ಯುಸಿಯಾಗಿರುವ ನರೇಂದ್ರ ಮೋದಿ ಅವರು ಕವಿ ಎಂಬುದು ತುಂಬ ಜನರಿಗೆ ಗೊತ್ತಿರಲಿಕ್ಕಿಲ್ಲ. ಗುಜರಾತಿ ಭಾಷೆಯಲ್ಲಿ ಮೋದಿ ಅವರು ಬರೆದ ಕವನ ಸಂಕಲನಗಳು, ಲೇಖನಗಳು ಪ್ರಕಟವಾಗಿವೆ. ಬಿಡುವಿದ್ದಾಗ ಅವರು ಫೋಟೊಗ್ರಫಿಯನ್ನೂ ಮಾಡುತ್ತಾರೆ. ಹಾಗೆಯೇ, ಬಾಲ್ಯದಲ್ಲಿ ಗಾಳಿಪಟ ಹಾರಿಸುವುದು ನರೇಂದ್ರ ಮೋದಿ ಅವರಿಗೆ ಅಚ್ಚುಮೆಚ್ಚಿನ ಹವ್ಯಾಸವಾಗಿತ್ತು. ಶಾಲಾ ಮಟ್ಟದ ನಾಟಕಗಳಲ್ಲೂ ಮೋದಿ ಅಭಿನಯಿಸಿದ್ದಾರೆ.

15. ಮೋದಿ ಜಾಕೆಟ್‌ಗೂ ಜಾಗತಿಕ ಮನ್ನಣೆ

ನರೇಂದ್ರ ಮೋದಿ ಅವರು ಸೂಟು-ಬೂಟು ಹಾಕಿಕೊಂಡು ವಿದೇಶಕ್ಕೆ ತೆರಳಿದ್ದು ಟೀಕೆಗೊಳಗಾಯಿತು. ಪ್ರತಿಪಕ್ಷಗಳು ಇದು ಸೂಟು ಬೂಟಿನ ಸರ್ಕಾರ ಎಂದು ಟೀಕಿಸಿದವು. ಆದರೆ, ಮೋದಿ ಅವರು ಜಾಕೆಟ್‌ ಧರಿಸುವ ಮೂಲಕ, ಆ ಜಾಕೆಟ್‌ಗಳು “ಮೋದಿ ಜಾಕೆಟ್”‌ ಎಂದೇ ಖ್ಯಾತಿಯಾಗುವಂತೆ ಮಾಡಿದರು. 1960ರ ದಶಕದಲ್ಲಿ “ನೆಹರು ಜಾಕೆಟ್”‌ ಎಷ್ಟು ಖ್ಯಾತಿ ಗಳಿಸಿದ್ದವೋ, ಮೋದಿ ಅವಧಿಯಲ್ಲಿ ದೇಶಾದ್ಯಂತ “ಮೋದಿ ಜಾಕೆಟ್‌”ಗಳು ಖ್ಯಾತಿ ಗಳಿಸಿದವು. ಈ ಕ್ರೇಜ್‌ ಎಷ್ಟರಮಟ್ಟಿಗೆ ಹೆಚ್ಚಾಯಿತೆಂದರೆ, ದಕ್ಷಿಣ ಕೊರಿಯಾದ ಆಗಿನ ಅಧ್ಯಕ್ಷ ಮೂನ್‌ ಜೇ ಇನ್‌ ಅವರು ಭಾರತಕ್ಕೆ ಆಗಮಿಸಿದ್ದಾಗ ಮೋದಿ ಜಾಕೆಟ್‌ ಧರಿಸಿದ್ದರು.

ಮೋದಿ ಜಾಕೆಟ್‌ನಲ್ಲಿ ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷ ಮೂನ್‌ ಜೇ ಇನ್.

16. ಯುದ್ಧದ ವೇಳೆ ಸೈನಿಕರಿಗೆ “ಚಹಾ” ನೆರವು

ನರೇಂದ್ರ ಮೋದಿ ಅವರ ತಂದೆ ದಾಮೋದಾರ ದಾಸ್‌ ಅವರು ರೈಲು ನಿಲ್ದಾಣದಲ್ಲಿ ಚಹಾ ಮಾರುತ್ತಿದ್ದರು. 1965ರಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧ ನಡೆದಾಗ ಮೋದಿ ಅವರೂ ರೈಲು ನಿಲ್ದಾಣದಲ್ಲಿ ಯೋಧರಿಗೆ ಚಹಾ ನೀಡುತ್ತಿದ್ದರು. ರಣರಂಗದಿಂದ ಬರುವ ಹಾಗೂ ರಣರಂಗಕ್ಕೆ ಹೊರಡುವ ಯೋಧರಿಗೆ ಮಸಾಲ ಚಹಾ ನೀಡುವ ಮೂಲಕ ಮೋದಿ ದೇಶಪ್ರೇಮೆ ಮೆರೆದಿದ್ದರು.

17. ವೀಸಾ ನಿರಾಕರಿಸಿದವರೇ ಆಮಂತ್ರಿಸಿದರು

ಹೀಗಳೆದವರು, ತುಚ್ಚವಾಗಿ ನೋಡಿದವರು, ಟೀಕಿಸಿದವರೇ ತಿರುಗಿ ನೋಡುವಂತೆ, ಬಂದು ಕೈಕುಲುಕುವಂತೆ ಮಾಡುವುದು ನರೇಂದ್ರ ಮೋದಿ ಅವರ ವ್ಯಕ್ತಿತ್ವದ ಭಾಗವೇ ಆಗಿದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಮೋದಿ ಗುಜರಾತ್‌ ಪ್ರಧಾನಿಯಾಗಿದ್ದಾಗ ಗೋಧ್ರಾ ಹತ್ಯಾಕಾಂಡದ ಹೆಸರಿನಲ್ಲಿ ಅವರಿಗೆ ವೀಸಾ ನೀಡದಿರುವುದು ಹಾಗೂ ಪ್ರಧಾನಿಯಾಗುತ್ತಲೇ ಅವರನ್ನು ಅಪ್ಪಿ ಸ್ವಾಗತಿಸಿರುವುದು. ಅಷ್ಟೇ ಅಲ್ಲ, 2015ರಲ್ಲಿ ಆಗ ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್‌ ಒಬಾಮ ಅವರು ಮೋದಿ ಕರೆಗೆ ಓಗೊಟ್ಟು ಭಾರತಕ್ಕೂ ಬರುತ್ತಾರೆ. ಆ ಮೂಲಕ ಅಧಿಕಾರದಲ್ಲಿದ್ದಾಗಲೇ ಭಾರತಕ್ಕೆ ಭೇಟಿ ನೀಡಿದ ಅಮೆರಿಕದ ಮೊದಲ ಅಧ್ಯಕ್ಷ ಎಂಬ ಖ್ಯಾತಿಗೆ ಭಾಜನರಾಗುತ್ತಾರೆ.

18. ಸಣ್ಣ ವಿಷಯಗಳಿಗೂ ಆದ್ಯತೆ

ನರೇಂದ್ರ ಮೋದಿ ಧೀಮಂತ ನಾಯಕರಾದರೂ ಸಣ್ಣ ಸಣ್ಣ ವಿಷಯಗಳಿಗೂ ಆದ್ಯತೆ ನೀಡುವುದು, ಚಿಕ್ಕ ಚಿಕ್ಕ ಸಂಗತಿಗಳನ್ನು ಗಮನಿಸುವುದು, ಪ್ರತಿಯೊಬ್ಬರ ಹೆಸರನ್ನೂ ನೆನಪಿಟ್ಟುಕೊಳ್ಳುವುದು ಮೋದಿ ಅವರಿಗೆ ಕರಗತವಾಗಿದೆ. ಅವರು ಮಕ್ಕಳ ಜತೆ ಮಾತನಾಡುವಾಗ ಪಬ್ಜಿ ಉದಾಹರಣೆ ನೀಡುತ್ತಾರೆ, ವೇದಿಕೆಗಳ ಭಾಷಣದ ವೇಳೆ ಗಣ್ಯರ ಹೇಳಿಕೆ ಕೋಟ್‌ ಮಾಡುತ್ತಾರೆ, ವಿಶೇಷ ಸಂದರ್ಭಗಳನ್ನು ನೆನಪಿಸುತ್ತಾರೆ, ದೇವೇಗೌಡರ ಮಂಡಿನೋವು ಅವರಿಗೆ ನೆನಪಿರುತ್ತದೆ. ಇನ್ನು ಅವರು ಹೋಗುವ ಯಾವುದೇ ಕಾರ್ಯಕ್ರಮದ ಫೋಟೊ, ವಿಡಿಯೊ ಮಿಸ್‌ ಆಗುವುದಿಲ್ಲ. ವಿರೋಧಿಗಳು ಟೀಕಿಸಿದರೂ ಅವರು ಫೋಟೊಗೆ ಪೋಸ್‌ ನೀಡುವುದು ಬಿಡುವುದಿಲ್ಲ.

19. ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ಪ್ರಧಾನಿ

ಭಾರತ ಸ್ವಾತಂತ್ರ್ಯ ಗಳಿಸಿದ ಬಳಿಕ ಜನಿಸಿದವರಲ್ಲಿ ಪ್ರಧಾನಿಯಾದ ಮೊದಲ ವ್ಯಕ್ತಿ ಎಂಬ ಖ್ಯಾತಿಗೆ ಮೋದಿ ಭಾಜನರಾಗಿದ್ದಾರೆ. ಇದುವರೆಗೆ ದೇಶದ ಪ್ರಧಾನಿಯಾದವರೆಲ್ಲ ಸ್ವಾತಂತ್ರ್ಯ ಸಿಗುವುದಕ್ಕಿಂತ ಮೊದಲು ಜನಿಸಿದ್ದರು. ಆದರೆ, ಮೋದಿ ಅವರು 1950ರ ಸೆಪ್ಟೆಂಬರ್‌ 17ರಂದು ಜನಿಸಿದರು. ಹೀಗೆ ಸ್ವಾತಂತ್ರ್ಯೋತ್ತರದಲ್ಲಿ ಜನಿಸಿ, ಪ್ರಧಾನಿ ಹುದ್ದೆಗೇರಿದ ಮೊದಲ ವ್ಯಕ್ತಿ ಎಂಬ ಖ್ಯಾತಿ ಮೋದಿ ಅವರದ್ದಾಗಿದೆ.

20. ಊಟದ ವೆಚ್ಚ ಅವರೇ ಭರಿಸುತ್ತಾರೆ

ನರೇಂದ್ರ ಮೋದಿ ಅವರು ಅಣಬೆ (ಮಶ್ರೂಮ್)‌ ತಿನ್ನುತ್ತಾರೆ, ಅದಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತದೆ ಎಂಬ ಆರೋಪವಿದೆ. ಆದರೆ, ನರೇಂದ್ರ ಮೋದಿ ಅವರು ತಮ್ಮ ಊಟದ ವೆಚ್ಚವನ್ನು ತಾವೇ ಭರಿಸುತ್ತಾರೆ. ಇದಕ್ಕಾಗಿ ಸರ್ಕಾರದ ಒಂದು ರೂಪಾಯಿಯನ್ನೂ ಪಡೆಯುವುದಿಲ್ಲ ಎಂದು ಆರ್‌ಟಿಇ ಅಡಿಯಲ್ಲಿ ಇತ್ತೀಚೆಗೆ ಕೇಳಿದ ಪ್ರಶ್ನೆಗೆ ಪಿಎಂಒ ಉತ್ತರಿಸಿದೆ. “ನರೇಂದ್ರ ಮೋದಿ ಅವರು ತಮ್ಮ ಆಹಾರದ ವೆಚ್ಚವನ್ನು ತಾವೇ ಭರಿಸುತ್ತಾರೆ. ಇದಕ್ಕೆ ಸರ್ಕಾರದ ಬಜೆಟ್‌ನಿಂದ ಒಂದು ರೂಪಾಯಿಯೂ ಖರ್ಚಾಗುವುದಿಲ್ಲ” ಎಂದು ಪಿಎಂಒ ಪ್ರತಿಕ್ರಿಯಿಸಿದೆ.

ಇದನ್ನೂ ಓದಿ: Modi 3.0 Cabinet: ಪ್ರಧಾನಿಯಾಗಿ ಮೋದಿ ಐದು ವರ್ಷ ಪೂರೈಸುತ್ತಾರಾ? ಜ್ಯೋತಿಷಿಗಳು ಹೇಳುವುದು ಹೀಗೆ

Continue Reading

ಕ್ರೈಂ

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಪಂಕಜ್ ಮುಂಡೆ ಸೋತರೆ ಇನ್ನಿಲ್ಲ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹಾಕಿದ್ದ ವ್ಯಕ್ತಿಯೊಬ್ಬ ಬಸ್ ಅಪಘಾತದಲ್ಲಿ (Bus Accident) ಮೃತಪಟ್ಟಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂದು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

By

Bus Accident
Koo

ಲಾತೂರ್: ಲೋಕಸಭಾ ಚುನಾವಣೆಯಲ್ಲಿ (lok sabha election) ಮಹಾರಾಷ್ಟ್ರದ (maharastra) ಬೀಡ್ ನಿಂದ ಕಣಕ್ಕೆ ಇಳಿದಿದ್ದ ಬಿಜೆಪಿ (bjp) ನಾಯಕಿ ಪಂಕಜಾ ಮುಂಡೆ (Pankaja Munde) ಅವರು ಸೋತರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಸಾಮಾಜಿಕ ಜಾಲತಾಣದಲ್ಲಿ (social media) ವಿಡಿಯೋ (video) ಅಪ್‌ಲೋಡ್ ಮಾಡಿದ್ದ ವ್ಯಕ್ತಿಯೊಬ್ಬರು ಬಸ್‌ನಡಿ (Bus Accident) ಸಿಲುಕಿ ಮೃತಪಟ್ಟಿದ್ದಾರೆ.

ವಿಡಿಯೋ ಮಾಡಿದ 38 ವರ್ಷದ ಟ್ರಕ್ ಚಾಲಕ ಶುಕ್ರವಾರ ರಾತ್ರಿ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಇದು ಆತ್ಮಹತ್ಯೆ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬೋರ್ಗಾಂವ್ ಪಾಟಿ ಬಳಿಯ ಅಹ್ಮದ್‌ಪುರ- ಅಂಧೋರಿ ರಸ್ತೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಲಿಯಾದವರನ್ನು ಟ್ರಕ್ ಚಾಲಕ ಲಾತೂರ್‌ನ ಅಹ್ಮದ್‌ಪುರದ ಯೆಸ್ಟರ್‌ನ ನಿವಾಸಿ ಸಚಿನ್ ಕೊಂಡಿಬಾ ಮುಂಡೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

ಘಟನೆಗೆ ಸಂಬಂಧಿಸಿ ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ತನಿಖೆ ನಡೆಸಲಾಗುತ್ತಿದೆ. ಯಲ್ದರವಾಡಿ ರಾತ್ರಿ ಬಸ್ ನಿಲುಗಡೆ ಮಾಡುತ್ತಿದ್ದಾಗ ಬಸ್ ನ ಹಿಂದೆ ನಿಂತಿದ್ದ ಸಚಿನ್ ಅವರು ಬಸ್ ನ ಚಕ್ರದಡಿ ಬಿದ್ದು ನಜ್ಜುಗುಜ್ಜಾಗಿದ್ದಾರೆ ಎಂದು ಆತನ ಪತ್ನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಕಿಂಗಾವ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪತ್ನಿಯನ್ನು ಕೊಂದಿದ್ದ ವ್ಯಕ್ತಿಯ ಬಂಧನ

ಆನೇಕಲ್: ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದಿದ್ದ ಪತಿಯೊಬ್ಬನನ್ನು ಬಂಧಿಸಲಾಗಿದೆ. ಗಂಗಿರೆಡ್ಡಿ ಬಂಧಿತ ಆರೋಪಿ.
ಮನೆ ಬಾಡಿಗೆ ಹಣ ಪಡೆಯುವ ವಿಚಾರಕ್ಕೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿತ್ತು. ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದಲ್ಲಿ ಕಳೆದ 3ರಂದು ಹತ್ಯೆ ನಡೆದಿತ್ತು.

ಇತ್ತೀಚೆಗೆ ಗಂಗಿರೆಡ್ಡಿ ಬಾಡಿಗೆ ಹಣ ಪಡೆದು ಆ ಹಣದಿಂದ ಕುಡಿದು ಮಜಾ ಮಾಡುತ್ತಿದ್ದ. ಹೀಗಾಗಿ ಸುಜಾತ ಮನೆ ಬಾಡಿಗೆ ಹಣವನ್ನು ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದಳು. ಇತ್ತ ತರಕಾರಿ ಅಂಗಡಿ ಇಟ್ಟುಕೊಂಡಿದ್ದ ಸುಜಾತ ಮೇಲೆ ಗಂಗಿರೆಡ್ಡಿ ಶೀಲ ಶಂಕಿಸಿದ್ದ. ಇಬ್ಬರ ನಡುವೆ ದಿನನಿತ್ಯ ಗಲಾಟೆ ನಡೆಯುತ್ತಿತ್ತು.

ಕಳೆದ 3ರಂದು ಇಬ್ಬರ ನಡುವೆ ಜಗಳ ನಡೆದು ಮನೆಯಲ್ಲಿದ್ದ ಚಾಕುವಿನಿಂದ ಇರಿದು ಸುಜಾತಳನ್ನು ಕೊಂದು ಗಂಗಿರೆಡ್ಡಿ ಪರಾರಿ ಆಗಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಸರ್ಜಾಪುರ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

Continue Reading
Advertisement
V Somanna profile
ಪ್ರಮುಖ ಸುದ್ದಿ20 mins ago

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

Terror Attack
ಕ್ರೈಂ26 mins ago

Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

Ind vs pak
ಪ್ರಮುಖ ಸುದ್ದಿ60 mins ago

IND VS PAK : ಭಾರತ- ಪಾಕಿಸ್ತಾನ ಪಂದ್ಯ ಅರ್ಧ ಗಂಟೆ ತಡ; ಟಾಸ್ ಗೆದ್ದ ಪಾಕ್​ನಿಂದ ಫೀಲ್ಡಿಂಗ್ ಆಯ್ಕೆ

Narendra Modi
ದೇಶ1 hour ago

Narendra Modi: ರಾಜಕೀಯದಾಚೆ ಕವಿ, ಗಾಳಿಪಟ ಪ್ರೇಮಿ; ಮೋದಿ ಬಗ್ಗೆ ನಿಮಗೆ ಗೊತ್ತಿರದ 20 ಸಂಗತಿ ಇಲ್ಲಿವೆ

Bus Accident
ಕ್ರೈಂ1 hour ago

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

HD Kumaraswamy
ಕರ್ನಾಟಕ1 hour ago

HD Kumaraswamy Profile: ಹರದನಹಳ್ಳಿಯಿಂದ ದೆಹಲಿವರೆಗೆ; ಕುಮಾರಸ್ವಾಮಿ ಸಾಗಿಬಂದ ದಾರಿ ಹೀಗಿದೆ

Narendra Modi
ದೇಶ2 hours ago

Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Narendra Modi 3.0
ಪ್ರಮುಖ ಸುದ್ದಿ2 hours ago

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Farmer Death
ದಾವಣಗೆರೆ2 hours ago

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Modi 3.0 Cabinet BS Yediyurappa congratulates Pralhad Joshi
Lok Sabha Election 20243 hours ago

Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌