ಪೂಂಚ್​​ ಗಡಿ ನಿಯಂತ್ರಣಾ ರೇಖೆ ಬಳಿ ಒಳನುಸುಳುವ ಯತ್ನ; ಇಬ್ಬರು ಉಗ್ರರನ್ನು ಹತ್ಯೆಗೈದ ಯೋಧರು - Vistara News

ದೇಶ

ಪೂಂಚ್​​ ಗಡಿ ನಿಯಂತ್ರಣಾ ರೇಖೆ ಬಳಿ ಒಳನುಸುಳುವ ಯತ್ನ; ಇಬ್ಬರು ಉಗ್ರರನ್ನು ಹತ್ಯೆಗೈದ ಯೋಧರು

ಕಳೆದ ವಾರ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾರತಕ್ಕೆ ನುಸುಳುತ್ತಿದ್ದ ಉಗ್ರನೊಬ್ಬನ ಹತ್ಯೆ ಮಾಡಲಾಗಿತ್ತು. ಅವನಿಂದ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.

VISTARANEWS.COM


on

Indian Army In Jammu Kashmir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಮ್ಮು-ಕಾಶ್ಮೀರದ ಪೂಂಚ್​ ಜಿಲ್ಲೆಯ ಎಲ್​ಒಸಿ (ಗಡಿ ನಿಯಂತ್ರಣ ರೇಖೆ)ಬಳಿ ಒಳ ನುಸುಳುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿದೆ (Terrorists Killed). ಇಬ್ಬರು ಉಗ್ರರು ಗಡಿ ಬಳಿ ಒಳನುಸುಳುತ್ತಿರುವಾಗ ಯೋಧರು ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಭಯೋತ್ಪಾದಕರೂ ಫೈರಿಂಗ್ ಮಾಡಿದ್ದರು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಪ್ರಾಣ ಹೋಗಿದೆ. ಆ ಜಾಗದಲ್ಲಿ ಇನ್ನಷ್ಟು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಭದ್ರತಾ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಈ ಬಗ್ಗೆ ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ‘ಪೂಂಚ್​ ಸೆಕ್ಟರ್​​ ಬಹಾದ್ದೂರ್​​ ಎಂಬಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಲಾಗಿದೆ. ಜುಲೈ 16ರ ತಡರಾತ್ರಿ ಒಳನುಸುಳುತ್ತಿದ್ದ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ’ ಎಂದು ತಿಳಿಸಿದ್ದಾರೆ. ಮೃತ ಉಗ್ರರದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ರಾಜೌರಿ, ಬಾರಾಮುಲ್ಲಾದಲ್ಲಿ ಎನ್​ಕೌಂಟರ್​, ಇಬ್ಬರು ಉಗ್ರರ ಹತ್ಯೆ; ಜಮ್ಮುವಿಗೆ ಇಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಭೇಟಿ

ಕಳೆದ ವಾರ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾರತಕ್ಕೆ ನುಸುಳುತ್ತಿದ್ದ ಉಗ್ರನೊಬ್ಬನ ಹತ್ಯೆ ಮಾಡಲಾಗಿತ್ತು. ಅಲ್ಲಿನ ನೌಶೇರಾ ವಲಯದ ಎಲ್​ಒಸಿ ಬಳಿ ಮೂರ್ನಾಲ್ಕು ಉಗ್ರರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅವರ ಮೇಲೆ ಭಾರತೀಯ ಯೋಧರು ಕಣ್ಣಿಟ್ಟಿದ್ದರು. ಕೆಲ ಹೊತ್ತಿನ ಬಳಿ ಒಬ್ಬ ಉಗ್ರ ಗಡಿ ಬೇಲಿಯ ಬಳಿ ಬಂದು, ಇನ್ನೇನು ಅದನ್ನು ದಾಟಬೇಕು ಎನ್ನುವಷ್ಟರಲ್ಲಿ ಗುಂಡು ಹಾರಿಸಲಾಗಿತ್ತು. ಅವನ ಬಳಿಯಿದ್ದ ಎಕೆ47 ರೈಫಲ್​, ಮೂರು ಎಕೆ ಮ್ಯಾಗಾಝಿನ್ಸ್​, 9 ಎಂಎಂ ಪಿಸ್ತೂಲ್​, ನಾಲ್ಕು ಹ್ಯಾಂಡ್ ಗ್ರೆನೇಡ್​, ಸಂಪರ್ಕಕ್ಕೆ ಬಳಸುವ ಸಾಧನಗಳು, ಬಟ್ಟೆಗಳು, ತಿನ್ನುವ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Shatru Bhairavi Yaga: ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ (Kerala police) ಈ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಓಡಾಡಿ ಕೇರಳ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

VISTARANEWS.COM


on

shatru bhairavi yaga
ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯ
Koo

ಮಂಗಳೂರು: ʼತಮ್ಮನ್ನು ಮುಗಿಸಲು ಕೇರಳದಲ್ಲಿ ಶತ್ರು ಭೈರವಿ ಯಾಗ (Shatru Bhairavi Yaga) ನಡೆದಿದೆʼ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ನೀಡಿದ್ದ ಹೇಳಿಕೆ ಕೇರಳದಲ್ಲಿ (Kerala) ಸಂಚಲನ ಸೃಷ್ಟಿಸಿದ್ದು, ಈ ಬಗ್ಗೆ ಅಲ್ಲಿನ ಸರ್ಕಾರ ತನಿಖೆ ನಡೆಸಿದೆ. ಅಂಥ ಯಾವುದೇ ಯಾಗ ನಡೆದಿಲ್ಲ, ಪ್ರಾಣಿ ಬಲಿ (animal sacrifice) ನೀಡಲಾಗಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ (Kerala police) ಈ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಓಡಾಡಿ ಕೇರಳ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಾಣಿ ಬಲಿ ಕೊಟ್ಟು ಶತ್ರು ಭೈರವಿ ಯಾಗ ನಡೆದಿದೆಯಾ ಎಂದು ತನಿಖೆ ನಡೆಸಿ ಸಮಗ್ರ ಮಾಹಿತಿ ಸಂಗ್ರಹಿಸಿ ಕೇರಳ ಡಿಜಿಪಿಗೆ ವಿಶೇಷ ತನಿಖಾ ತಂಡ ವರದಿ ಸಲ್ಲಿಸಿದೆ.

ತಳಿಪರಂಬ ಶ್ರೀ ರಾಜರಾಜೇಶ್ವರಿ ದೇವರು

ತಳಿಪರಂಬ, ರಾಜರಾಜೇಶ್ವರಂ ಹಾಗೂ ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ತನಿಖೆ ನಡೆಸಿದ ಕೇರಳ ಟೀಂ, ಅಂಥ ಯಾವುದೇ ಪ್ರಾಣಿ ಬಲಿ ಯಾಗ ನಡೆದಿಲ್ಲ ಎಂದು ಕೇರಳ ಡಿಜಿಪಿಗೆ ವರದಿ ಸಲ್ಲಿಸಿದೆ. ಈ ನಡುವೆ ಕರ್ನಾಟಕ ಪೊಲೀಸ್ ವಿಶೇಷ ತಂಡದಿಂದಲೂ ಗುಪ್ತವಾಗಿ ಮಾಹಿತಿ ಸಂಗ್ರಹ ನಡೆದಿದೆ. ಆದರೆ ಯಾರ ತನಿಖೆಯಲ್ಲೂ ಯಾಗದ ಕುರಿತು ಸುಳಿವು ದೊರೆತಿಲ್ಲ.

ಕೇರಳ ಸಚಿವರಿಂದಲೂ ಸ್ಪಷ್ಟನೆ

ಕೇರಳದ ದೇವಸ್ವಂ ಬೋರ್ಡ್ ಸಚಿವ ರಾಧಾಕೃಷ್ಣನ್ ಅವರೂ ಡಿಕೆ ಶಿವಕುಮಾರ್ ಆರೋಪವನ್ನು ನಿರಾಕರಿಸಿದ್ದಾರೆ. ನಮ್ಮ ರಾಜ್ಯದ ಯಾವುದೇ ದೇವಸ್ಥಾನಗಳಲ್ಲೂ ಪ್ರಾಣಿ ಬಲಿ ನಡೆಯಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ದೇವಳ ಆಡಳಿತ ಮಂಡಳಿ ನಿರಾಕರಣೆ

“ದೇವಸ್ವಂ ಬೋರ್ಡ್ ಅಧೀನದಲ್ಲಿರುವ ಯಾವುದೇ ದೇವಾಲಯಗಳಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳು ನಡೆಯುವುದಿಲ್ಲ. ಕೇರಳದ ಮಲಬಾರ್ ದೇವಸ್ವಂ ಬೋರ್ಡ್ ಅಧೀನದಲ್ಲಿರುವ ರಾಜರಾಜೇಶ್ವರಂ ದೇವಸ್ಥಾನದ ಹೆಸರಿನ ಬಗ್ಗೆ ದೃಶ್ಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಅಸತ್ಯ ಮತ್ತು ದುರದೃಷ್ಟಕರ” ಎಂದು ಅಧಿಕೃತ ಪತ್ರಿಕಾ ಹೇಳಿಕೆ‌ ಮೂಲಕ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ದೇವಾಲಯ ಆಡಳಿತ ಮಂಡಳಿ ಸ್ಪಷ್ಟನೆ

“ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಕೇರಳದ ಅತ್ಯಂತ ಹಳೆಯ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಕಣ್ಣೂರು ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಅಂತಹ ಯಾವುದೇ ಪೂಜೆ ಅಥವಾ ಶತ್ರು ಭೈರವಿ ಯಾಗವನ್ನು ನಡೆಸಲಾಗುವುದಿಲ್ಲ. ಮಲಬಾರ್ ದೇವಸ್ವಂ ಬೋರ್ಡ್ ಅಧೀನದಲ್ಲಿರುವ ಯಾವುದೇ ದೇವಾಲಯಗಳಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳಿಲ್ಲ. ದೇವಾಲಯದ ಹಿತಾಸಕ್ತಿಗಳ ವಿರುದ್ಧದ ಪ್ರಚಾರಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ” ಎಂದು ಪತ್ರಿಕಾ ಹೇಳಿಕೆ ಮೂಲಕ ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹೇಳಿಕೆ ನೀಡಿದ್ದಾರೆ.

ಡಿಕೆಶಿ ಆರೋಪ ಏನಿತ್ತು?

ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನದಲ್ಲಿ ಸಿಎಂ ಹಾಗೂ ನನ್ನ ವಿರುದ್ಧ ಶತ್ರು ಭೈರವಿ ಯಾಗ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆಶಿ ಮೊನ್ನೆ ಹೇಳಿದ್ದರು. “ಇದು ಶತ್ರು ಸಂಹಾರಕ್ಕಾಗಿ ಮಾಡುತ್ತಿರುವ ಶತ್ರು ಭೈರವಿ ಯಾಗವಾಗಿದ್ದು, ಇದನ್ನು ಮಾಡಿಸುತ್ತಿರುವವರು ಯಾರೆಂದು ಗೊತ್ತಿದೆ. ರಾಜಕೀಯ ವೈರಿಗಳು ಮಾಡಿಸುತ್ತಿದ್ದಾರೆ. ಯಾಗದಲ್ಲಿ ಮೇಕೆ, ಹಂದಿ, ಕುರಿ, ಹೀಗೆ ಪಂಚಬಲಿ ಕೊಟ್ಟಿದ್ದಾರೆ. ಅಘೋರಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಆಸುಪಾಸು ಚೆಕ್ ಮಾಡಿ, ನಿಮಗೇ ಗೊತ್ತಾಗುತ್ತೆ. ಇದರಲ್ಲಿ ಭಾಗವಹಿಸಿದವರೇ ನನಗೆ ಮಾಹಿತಿ ನೀಡಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದರು.

ಇದನ್ನೂ ಓದಿ: ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

Continue Reading

Lok Sabha Election 2024

Lok Sabha Election: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ 6 ಅಭ್ಯರ್ಥಿಗಳ ಸಾಮರ್ಥ್ಯ ಎಷ್ಟಿದೆ?

Lok Sabha Election: ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಮುಖಂಡರು ಏಳನೇ ಹಂತದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ವಾರಾಣಸಿ ಕ್ಷೇತ್ರದಿಂದ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್‌ನ ಅಜಯ್‌ ರೈ ಸೇರಿ 6 ಮಂದಿ ಸ್ಪರ್ಧಿಸುತ್ತಿದ್ದಾರೆ. ಅವರ ವಿವರ ಇಲ್ಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: 2024ರ ಲೋಕಸಭೆ ಚುನಾವಣೆಯ (Lok Sabha Election) 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸೇರಿ ಹಲವು ಮುಖಂಡರು ಏಳನೇ ಹಂತದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ವಾರಾಣಸಿ ಕ್ಷೇತ್ರದಿಂದ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. 2014ರಿಂದ ಅವರು ಇಲ್ಲಿಂದ ಸ್ಪರ್ಧಿಸುತ್ತಿದ್ದು, ಸದ್ಯ ಈ ಕಣ ದೇಶದ ಗಮನ ಸೆಳೆದಿದೆ.

ಮೋದಿ ವಿರುದ್ಧ ಈ ಬಾರಿ ಆರು ಮಂದಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್‌ ಅಜಯ್ ರೈ ಅವರನ್ನು ಮೂರನೇ ಬಾರಿಗೆ ಕಣಕ್ಕಿಳಿಸಿದೆ. ಇನ್ನು ಯುಗ ತುಳಸಿ ಪಾರ್ಟಿಯಿಂದ ಕೋಳಿಶೆಟ್ಟಿ ಶಿವಕುಮಾರ್, ಬಹುಜನ ಸಮಾಜ ಪಕ್ಷದಿಂದ ಅಥೆರ್‌ ಜಮಾಲ್‌ ಲಾರಿ, ಗಗನ್‌ ಪ್ರಕಾಶ್‌ ಯಾದವ್‌ (ಅಪ್ನಾ ದಳ, ಕಮರೇವಾಡಿ), ಸ್ವತಂತ್ರವಾಗಿ ದಿನೇಶ್‌ ಕುಮಾರ್‌ ಯಾದವ್‌ ಮತ್ತು ಸಂಜಯ್‌ ಕುಮಾರ್‌ ತಿವಾರಿ ಪ್ರಧಾನಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಅವರ ಕುರಿತಾದ ವಿವರ ಇಲ್ಲಿದೆ.

ಅಜಯ್‌ ರೈ

53 ವರ್ಷದ ಕಾಂಗ್ರೆಸ್‌ ನಾಯಕ ಅಜಯ್‌ ರೈ ಸತತ ಮೂರನೇ ಬಾರಿ ಮೋದಿ ವಿರುದ್ಧ ತೊಡೆ ತಟ್ಟಿದ್ದಾರೆ. ಇವರು 2014 ಮತ್ತು 2019ರಲ್ಲಿ ಪ್ರಧಾನಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅಜಯ್‌ ರೈ ವಿರುದ್ಧ ಸುಮಾರು 18 ಪ್ರಕರಣಗಳು ದಾಖಲಾಗಿವೆ. ಇವರು ಆರಂಭದಲ್ಲಿ ಆರ್‌ಎಸ್‌ಎಸ್‌, ಎಬಿವಿಪಿ ಮತ್ತು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. 1996, 2002 ಮತ್ತು 2007ರಲ್ಲಿ ಇವರು ಬಿಜೆಪಿಯಿಂದ ಉತ್ತರ ಪ್ರದೇಶದ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. 2009ರಲ್ಲಿ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಅಜಯ್‌ ರೈ 6.66 ಲಕ್ಷ ರೂ.ಗಳ ಚರಾಸ್ತಿ ಮತ್ತು 1.25 ಕೋಟಿ ರೂ.ಗಳ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಇವರನ್ನು ಕಳೆದ ಆಗಸ್ಟ್‌ನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಅಥೆರ್‌ ಜಮಾಲ್‌ ಲಾರಿ

ಬಿಎಸ್‌ಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ 70 ವರ್ಷದ ಅಥೆರ್‌ ಜಮಾಲ್‌ ಲಾರಿ ವಿರುದ್ಧವೂ ಪ್ರಕರಣವಿದೆ. ಅವರ ಹೆಸರಿನಲ್ಲಿ 1 ಪ್ರಕರಣ ದಾಖಲಾಗಿದೆ.

ಕೋಳಿಶೆಟ್ಟಿ ಶಿವಕುಮಾರ್‌

46 ವರ್ಷದ ಕೋಳಿಶೆಟ್ಟಿ ಶಿವಕುಮಾರ್‌ ಹೈದರಾಬಾದ್‌ ಮೂಲದವರು. ಈ ಹಿಂದೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂದು ಪ್ರತಿಭಟನೆ ನಡೆಸಿದ್ದರು. ಇವರು ಈ ಮೊದಲು ತಿರುಮಲ ತಿರುಪತಿ ದೇವಸ್ಥಾನಂ ಮೋರ್ಡ್‌ ಸದಸ್ಯರಾಗಿದ್ದರು.

ಗಗನ್‌ ಪ್ರಕಾಶ್‌ ಯಾದವ್‌

ಅಪ್ನಾ ದಳದಿಂದ ಕಣಕ್ಕಿಳಿದಿರುವ 39 ವರ್ಷದ ಗಗನ್‌ ಪ್ರಕಾಶ್‌ ಯಾದವ್‌ ಅವರ ಹೆಸರಿನಲ್ಲಿ 5 ಪ್ರಕರಣ ದಾಖಲಾಗಿದೆ. ಈ ಹಿಂದೆ ಇವರು ಸಮಾಜವಾದಿ ಪಾರ್ಟಿಯಲ್ಲಿದ್ದರು.

ದಿನೇಶ್‌ ಕುಮಾರ್‌ ಯಾದವ್‌

ಸತಂತ್ರ ಅಭ್ಯರ್ಥಿ ದಿನೇಶ್‌ ಕುಮಾರ್‌ ಯಾದವ್‌ ಈ ಹಿಂದೆ ಬಿಜೆಪಿಯಲ್ಲಿದ್ದರು. ಇವರ ವಿರುದ್ಧ ಯಾವುದೇ ಕೇಸ್‌ಗಳಿಲ್ಲ.

ಸಂಜಯ್‌ ಕುಮಾರ್‌ ತಿವಾರಿ

ಇನ್ನೊಬ್ಬ ಸ್ವತಂತ್ರ ಅಭ್ಯರ್ಥಿ ಇವರು. ಇವರು ದೆಹಲಿ ಮೂಲದ ಸಾಮಾಜಿಕ ಕಾರ್ಯಕರ್ತರು. ಇವರು ಗಾಂಧಿ ತತ್ವದ ಪ್ರತಿಪಾದಕರು.

ದಾಖಲೆಯ ಗೆಲುವು ಕಂಡಿದ್ದ ಮೋದಿ

ಮೋದಿ ಈ ಹಿಂದೆ ಎರಡು ಬಾರಿಯೂ ವಾರಾಣಸಿ ಕ್ಷೇತ್ರದಲ್ಲಿ ದಾಖಲೆಯ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. 2014ರ ಚುನಾವಣೆಯಲ್ಲಿ ಮೋದಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸ್ಪರ್ಧಿಸಿದ್ದರು. ಆಗ ಮೋದಿ 3.37 ಲಕ್ಷ ಮತಗಳ ಅಂತರಿಂದ ಗೆದ್ದಿದ್ದರು. ಇನ್ನು 2019ರಲ್ಲಿ ಮೋದಿ ಅವರು ಎಸ್‌ಪಿ-ಬಿಎಸ್‌ಪಿ ಅಭ್ಯರ್ಥಿ ಶಾಲಿನಿ ಯಾದವ್‌ ಅವರನ್ನು 4.80 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

Continue Reading

ಬಾಲಿವುಡ್

Lok Sabha Election 2024: ಕೊನೇ ಹಂತದ ಮತದಾನ; ವೋಟ್‌ ಮಾಡಿದ ನಟ ಮಿಥುನ್ ಚಕ್ರವರ್ತಿ

Lok Sabha Election 2024: ಭಾರತೀಯ ಜನತಾ ಪಕ್ಷ ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ ಲೋಕಸಭೆ ಚುನಾವಣೆಯ ಅಂತಿಮ ಹಂತದಲ್ಲಿ ಮತದಾನ ಮಾಡಿದರು ಪಶ್ಚಿಮ ಬಂಗಾಳದ ಬೆಲ್ಗಾಚಿಯಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಸುಮಾರು 350 ಚಿತ್ರಗಳಲ್ಲಿ ಮಿಥುನ್ ಚಕ್ರವರ್ತಿ ನಟಿಸಿದ್ದಾರೆ.

VISTARANEWS.COM


on

Lok Sabha Election 2024 Mithun Chakraborty casting his vote
Koo

ನವದೆಹಲಿ: ದೇಶದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಇಂದು (ಜೂನ್‌ 1) ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರ ಗಮನವೀಗ ಫಲಿತಾಂಶದ ಕಡೆ ವಾಲಿದೆ.  ಭಾರತೀಯ ಜನತಾ ಪಕ್ಷ ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ ಲೋಕಸಭೆ ಚುನಾವಣೆಯ ಅಂತಿಮ ಹಂತದಲ್ಲಿ ಮತದಾನ ಮಾಡಿದರು ಪಶ್ಚಿಮ ಬಂಗಾಳದ ಬೆಲ್ಗಾಚಿಯಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬಳಿಕ ಮಾಧ್ಯಮದ ಮುಂದೆ ಮಾತನಾಡಿ , “ನಾನು ಬಿಜೆಪಿ ಕಾರ್ಯಕರ್ತ, ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಾನು ನಾಳೆಯಿಂದ ಸಿನಿಮಾಗಳ ಬಗ್ಗೆ ಮಾತನಾಡುತ್ತೇನೆ. ಏಕೆಂದರೆ ನಾನು ನನ್ನ ಕುಟುಂಬದ ಹೊಟ್ಟೆ ಕೂಡ ತುಂಬಿಸಬೇಕುʼʼಎಂದರು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಸುಮಾರು 350 ಚಿತ್ರಗಳಲ್ಲಿ ಮಿಥುನ್ ಚಕ್ರವರ್ತಿ ನಟಿಸಿದ್ದಾರೆ.

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇಂದು ಸಂಜೆ ಎಕ್ಸಿಟ್‌ ಪೋಲ್‌

ಶನಿವಾರ ಸಂಜೆ 6 ಗಂಟೆಗೆ ಮತದಾನ ಮುಗಿಯಲಿದ್ದು, 6.30ರ ಸುಮಾರಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ. ಹಾಗಾಗಿ, ರಾಜಕೀಯ ನಾಯಕರು, ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

Continue Reading

Lok Sabha Election 2024

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Exit Poll: ಇಂದು (ಜೂ. 1) ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಲೋಕಸಭೆ ಚುನಾವಣೆಯ ಮತದಾನ ಕೊನೆಗೊಳ್ಳಲಿದೆ. ಹೀಗಾಗಿ ಇಂದೇ ಎಕ್ಸಿಟ್‌ ಪೋಲ್‌ ಫಲಿತಾಂಶವೂ ಹೊರಬೀಳಲಿದೆ. ಮತದಾರರು ಯಾವ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬುದನ್ನು ಕೇಳಿ ಅದರ ಆಧಾರದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಲಭಿಸಲಿದೆ ಎಂದು ಅಂದಾಜಿಸಲಾಗುತ್ತದೆ. ಇದನ್ನು ಎಕ್ಸಿಟ್‌ ಪೋಲ್‌ ಎನ್ನಲಾಗುತ್ತದೆ.

VISTARANEWS.COM


on

Exit Poll
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024) ಕೊನೆಯ ಹಂತಕ್ಕೆ ಬಂದು ತಲುಪಿದೆ. ಇನ್ನೇನು ಬಾಕಿ ಉಳಿದಿರುವ ಒಂದು ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡರೆ ದೇಶದ ಜನರ ಚಿತ್ತ ಫಲಿತಾಂಶ(Election Result)ದತ್ತ ಹೊರಳುತ್ತದೆ ಫಲಿತಾಂಶಕ್ಕೂ ಮುನ್ನ ಇತ್ತೀಚಿನ ಹಲವು ವರ್ಷಗಳಿಂದ ಜನ ಚುನಾವಣೋತ್ತರ ಸಮೀಕ್ಷೆ(Exit Poll)ಗಳ ಬಗ್ಗೆ ಅತಿ ಹೆಚ್ಚಿನ ಆಸಕ್ತಿ ತೋರುತ್ತಾರೆ. ಇಂದು (ಜೂ. 1) ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಲೋಕಸಭೆ ಚುನಾವಣೆಯ ಮತದಾನ ಕೊನೆಗೊಳ್ಳಲಿದೆ. ಹೀಗಾಗಿ ಇಂದೇ ಎಕ್ಸಿಟ್‌ ಪೋಲ್‌ ಫಲಿತಾಂಶವೂ ಹೊರಬೀಳಲಿದೆ.

ಎಕ್ಸಿಟ್‌ ಪೋಲ್‌ ಎಂದರೇನು?

ಮತದಾರರು ಯಾವ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬುದನ್ನು ಕೇಳಿ ಅದರ ಆಧಾರದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಲಭಿಸಲಿದೆ ಎಂದು ಅಂದಾಜಿಸಲಾಗುತ್ತದೆ. ಈ ಬಗ್ಗೆ ಎಕ್ಸಿಟ್ ಪೋಲ್ ನಡೆಸುವವರು ಮತದಾರರನ್ನು ಪ್ರಶ್ನಿಸುತ್ತಾರೆ. ಇದನ್ನು ಎಕ್ಸಿಟ್‌ ಪೋಲ್‌ ಎನ್ನಲಾಗುತ್ತದೆ. ಚುನಾವಣೆಯ ಮೊದಲು ನಡೆಸಲಾದ ಅಭಿಪ್ರಾಯ ಸಂಗ್ರಹಕ್ಕಿಂತ ಇದು ಭಿನ್ನ. ಮತದಾರರ ಮೇಲೆ ಪ್ರಭಾವ ಬೀರಿದ ವಿಷಯಗಳು, ವ್ಯಕ್ತಿತ್ವಗಳು ಮತ್ತು ನಿಷ್ಠೆಗಳಂತಹ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣೋತ್ತರ ಸಮೀಕ್ಷೆ ನಡೆಸಲಾಗುತ್ತಿದೆ.

ಜನಪ್ರಿಯ ಎಕ್ಸಿಟ್ ಪೋಲ್‌ಗಳ ವಿವರಗಳು

ಚುನಾವಣೋತ್ತರ ಸಮೀಕ್ಷೆಗಳನ್ನು ನಡೆಸಲು ವಿವಿಧ ಏಜೆನ್ಸಿಗಳು ವಿವಿಧ ವಿಧಾನಗಳು ಮತ್ತು ಮಾದರಿಗಳನ್ನು ಬಳಸಿಕೊಳ್ಳುತ್ತವೆ. ವೈಯಕ್ತಿಕವಾಗಿ ಅಥವಾ ಆನ್‌ಲೈನ್‌ ಸರ್ವೆ ಮೂಲಕ ಮತದಾರರ ಅಭಿಪ್ರಾಯ ಪಡೆಯಲಾಗುತ್ತದೆ. ಇಂಡಿಯಾ ಟುಡೆ-ಆಕ್ಸಿಸ್, ಸಿಎನ್‌ಎನ್ ನ್ಯೂಸ್ 18-ಐಪಿಎಸ್‌ಒಎಸ್, ಟೈಮ್ಸ್ ನೌ-ವಿಎಂಆರ್, ರಿಪಬ್ಲಿಕ್-ಜನ್ ಕಿ ಬಾತ್, ರಿಪಬ್ಲಿಕ್-ಸಿವೋಟರ್, ನ್ಯೂಸ್‌ಎಕ್ಸ್-ಎನ್‌ಇಟಿಎ ಮತ್ತು ಟುಡೇಸ್ ಚಾಣಕ್ಯ ಮುಂತಾದವು ಎಕ್ಸಿಟ್ ಪೋಲ್‌ಗಳನ್ನು ನಡೆಸುವ ಕೆಲವು ಪ್ರಸಿದ್ಧ ಸಂಸ್ಥೆಗಳು.

ಎಕ್ಸಿಟ್ ಪೋಲ್‌ಗಳ ನಿಯಮಗಳು

ಭಾರತದಲ್ಲಿ ಎಕ್ಸಿಟ್ ಪೋಲ್‌ಗಳನ್ನು ನಿಷೇಧಿಸದಿದ್ದರೂ, ಭಾರತೀಯ ಚುನಾವಣಾ ಆಯೋಗವು (ಇಸಿಐ) ಅವುಗಳ ನಡವಳಿಕೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಿದೆ. ಎಕ್ಸಿಟ್ ಪೋಲ್‌ಗಳನ್ನು ಯಾವಾಗ ನಡೆಸಬಹುದು ಮತ್ತು ಪ್ರಕಟಿಸಬಹುದು ಎಂಬುದಕ್ಕೆ ಇಸಿಐ ಕೆಲವು ಮಾರ್ಗಸೂಚಿಗಳನ್ನು ನೀಡಿದೆ. ಎಕ್ಸಿಟ್ ಪೋಲ್‌ಗಳಿಗೆ ನಿರ್ದಿಷ್ಟ ಸಮಯದೊಳಗೆ ಮಾತ್ರ ಅನುಮತಿ ನೀಡಲಾಗುತ್ತದೆ. ಮತದಾನ ಮುಗಿದ ನಂತರವೇ ಇದನ್ನು ಪ್ರಕಟಿಸಬೇಕು.

ಮತದಾನದ ಅವಧಿ ಮುಗಿಯುವ ಮೊದಲು ಭಾರತದ ಯಾವುದೇ ಭಾಗದಲ್ಲಿ ಎಕ್ಸಿಟ್‌ ಪೋಲ್‌ ಫಲಿತಾಂಶ ಪ್ರಕಟಿಸಬಾರದು ಅಥವಾ ಪ್ರಸಾರ ಮಾಡಬಾರದು ಎಂದು ECI ಷರತ್ತು ವಿಧಿಸಿದೆ. ಇನ್ನೂ ಮತ ಚಲಾಯಿಸದ ಮತದಾರರ ಮೇಲೆ ಪ್ರಭಾವ ಬೀರುವುದನ್ನು ತಡೆಯಲು ಈ ಈ ನಿಯಮ ಜಾರಿಗೊಳಿಸಲಾಗಿದೆ. ಇದಲ್ಲದೆ ಅಂತಿಮ ಸುತ್ತಿನ ಮತದಾನ ಮುಗಿದ ನಂತರವೇ ಎಕ್ಸಿಟ್‌ ಪೋಲ್‌ ಫಲಿತಾಂಶವನ್ನು ಪ್ರಕಟಿಸಬಹುದು. ಹೆಚ್ಚುವರಿಯಾಗಿ, ನ್ಯಾಯಯುತ ಮತ್ತು ನಿಷ್ಪಕ್ಷಪಾತ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣೋತ್ತರ ಸಮೀಕ್ಷೆಗಳನ್ನು ನಡೆಸುವ ಎಲ್ಲ ಮಾಧ್ಯಮಗಳು ಚುನಾ ಆಯೋಗದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.

ಎಕ್ಸಿಟ್‌ ಪೋಲ್‌ ಆರಂಭವಾಗಿದ್ದು ಯಾವಾಗ?

ಎಕ್ಟಿಟ್‌ ಪೋಲ್‌ಗೆ ಸುಮಾರು 7 ದಶಕಗಳ ಇತಿಹಾಸವಿದೆ. ಎಕ್ಸಿಟ್‌ ಪೋಲ್‌ ಅನ್ನು 1957ರಲ್ಲೇ ಆರಂಭಿಸಲಾಗಿತ್ತು. ಅಂದಿನಿಂದ ಎಕ್ಸಿಟ್‌ ಪೋಲ್‌ನ ವಿಧಾನದಲ್ಲಿ ಅನೇಕ ಬದಲಾವಣೆ ಸಂಭವಿಸಿದೆ. ಅದರಲ್ಲಿಯೂ ಮಾದರಿ ಸಂಗ್ರಹದಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ಆರಂಭದ ದಿನಗಳಲ್ಲಿ ದೇಶಾದ್ಯಂತ ಸುಮಾರು 20-30 ಸಾವಿರ ಮಂದಿಯಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿತ್ತು. ಇದೀಗ ಎಕ್ಸಿಟ್‌ ಪೋಲ್‌ ನಡೆಸುವ ಸಂಸ್ಥೆಗಳು ಸುಮಾರು 10 ಲಕ್ಷ ಮಂದಿಯನ್ನು ಸಂಪರ್ಕಿಸುತ್ತವೆ. ಲಕ್ಷಾಂತರ ಮಂದಿಯಿಂದ ಅಭಿಪ್ರಾಯ ಸಂಗ್ರಹಣೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ.

ಯಾವಾಗ ಎಕ್ಸಿಟ್‌ ಫೋಲ್‌ ಫಲಿತಾಂಶ ಹೊರ ಬೀಳುತ್ತದೆ?

ಕೊನೆಯ ಹಂತದ ಮತದಾನ ನಡೆಯಲಿರುವ ಜೂ. 1ರಂದು ಎಕ್ಸಿಟ್‌ ಪೋಲ್‌ ನಡೆಯಲಿದೆ. ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿಯಲಿದ್ದು, 6:30ರ ನಂತರ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರ ಬೀಳಲಿದೆ.

ಇದನ್ನೂ ಓದಿ: Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Continue Reading
Advertisement
shatru bhairavi yaga
ಪ್ರಮುಖ ಸುದ್ದಿ4 mins ago

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Bigg Boss OTT 3 Anil Kapoor Replaces Salman Khan As Host
ಒಟಿಟಿ9 mins ago

Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

Lok Sabha Election
Lok Sabha Election 202415 mins ago

Lok Sabha Election: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ 6 ಅಭ್ಯರ್ಥಿಗಳ ಸಾಮರ್ಥ್ಯ ಎಷ್ಟಿದೆ?

IND vs PAK
ಕ್ರೀಡೆ21 mins ago

IND vs PAK T20 World Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ ಗೆಲುವು ಖಚಿತ ಎಂದ ಪಾಕ್​ ಆಟಗಾರ

Lok Sabha Election 2024 Mithun Chakraborty casting his vote
ಬಾಲಿವುಡ್31 mins ago

Lok Sabha Election 2024: ಕೊನೇ ಹಂತದ ಮತದಾನ; ವೋಟ್‌ ಮಾಡಿದ ನಟ ಮಿಥುನ್ ಚಕ್ರವರ್ತಿ

IND vs BAN
ಕ್ರೀಡೆ1 hour ago

IND vs BAN: ಇಂದು ಬಾಂಗ್ಲಾ ವಿರುದ್ಧ ಅಭ್ಯಾಸ ಪಂದ್ಯ; ಕೊಹ್ಲಿ ಆಡುವುದು ಅನುಮಾನ

Exit Poll
Lok Sabha Election 20241 hour ago

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್1 hour ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ1 hour ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ2 hours ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌