Viral Video: ರಾಮನವಮಿ ಆಚರಣೆ ವೇಳೆ ಅವಘಡ; ದೇವಸ್ಥಾನದಲ್ಲಿ ನೆಲ ಕುಸಿದು ಬಾವಿಗೆ ಬಿದ್ದ 25 ಭಕ್ತರು - Vistara News

ದೇಶ

Viral Video: ರಾಮನವಮಿ ಆಚರಣೆ ವೇಳೆ ಅವಘಡ; ದೇವಸ್ಥಾನದಲ್ಲಿ ನೆಲ ಕುಸಿದು ಬಾವಿಗೆ ಬಿದ್ದ 25 ಭಕ್ತರು

ಮಾಹಿತಿ ಪಡೆಯುತ್ತಿದ್ದಂತೆ ಪೊಲೀಸರು ಅಲ್ಲಿಗೆ ಹೋಗಿ ಭಕ್ತರನ್ನು ರಕ್ಷಿಸಿದ್ದಾರೆ. ಅಗ್ನಿಶಾಮಕ ದಳದ ತಂಡವೂ ಕೂಡ ಅಲ್ಲಿ ಇದೆ. ಬಾವಿಯಿಂದ ಎತ್ತಿ, ಅವರನ್ನೆಲ್ಲ ಆಂಬ್ಯುಲೆನ್ಸ್​ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆ ನೂಕುನುಗ್ಗಲು ಉಂಟಾಗಿ, ಅದನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

VISTARANEWS.COM


on

25 people fall in stepwell In Indore Temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಧೋರ್​: ಶ್ರೀರಾಮನವಮಿ (Ram Navami) ಹಬ್ಬದ ಆಚರಣೆಯ ಸಮಯದಲ್ಲಿ ಮಧ್ಯಪ್ರದೇಶದ ಇಂಧೋರ್​​ನ ಸ್ನೇಹ ನಗರದಲ್ಲಿರುವ ಶ್ರೀ ಬಾಳೇಶ್ವರ ದೇವಸ್ಥಾನದಲ್ಲಿ ಅವಘಡ ಉಂಟಾಗಿದೆ. ಈ ದೇಗುಲದ ಬಾವಿಯನ್ನು ಮುಚ್ಚಲ್ಪಟ್ಟಿದ್ದ ಸಿಮೆಂಟ್ ಸ್ಲ್ಯಾಬ್​ ​ ಒಡೆದು ಬಿದ್ದ ಪರಿಣಾಮ ಸುಮಾರು 25 ಭಕ್ತರು ಆ ಬಾವಿ ಅಥವಾ ಕಲ್ಯಾಣಿಯಲ್ಲಿ ಬಿದ್ದಿದ್ದಾರೆ. ಅದರಲ್ಲೀಗ 10 ಜನರನ್ನು ರಕ್ಷಿಸಿದ್ದಾಗಿ ವರದಿಯಾಗಿದೆ.

ಸಾಮಾನ್ಯವಾಗಿ ಬಹುತೇಕ ದೇವಸ್ಥಾನಗಳಲ್ಲಿ ಕಲ್ಯಾಣಿ ಅಥವಾ ಮೆಟ್ಟಿಲುಗಳನ್ನು ಒಳಗೊಂಡ ಬಾವಿ ಇರುತ್ತದೆ. ಅದರಂತೆ ಶ್ರೀ ಬಾಳೇಶ್ವರ ಮಹಾದೇವ ಜುಲೇಲಾಲ್​​ ದೇಗುಲದಲ್ಲಿರುವ ಕಲ್ಯಾಣಿಯನ್ನು ಮೇಲಿನಿಂದ ಸಿಮೆಂಟ್​ ಹಾಕಿ, ನೆಲದಂತೆ ಮಾಡಿ ಮುಚ್ಚಿಡಲಾಗಿತ್ತು. ಇಂದು ರಾಮನವಮಿ ಹಬ್ಬದ ಪ್ರಯುಕ್ತ ಅಪಾರ ಭಕ್ತರು ಸೇರಿ, ಅಲ್ಲೆಲ್ಲ ನಿಂತಿದ್ದರು. ಅದೇ ಸಮಯದಲ್ಲಿ ನೆಲ ಕುಸಿತವಾಗಿದೆ. ನಿಂತಿದ್ದವರೆಲ್ಲ ಬಾವಿಗೆ ಬಿದ್ದಿದ್ದಾರೆ.

ಮಾಹಿತಿ ಪಡೆಯುತ್ತಿದ್ದಂತೆ ಪೊಲೀಸರು ಅಲ್ಲಿಗೆ ಹೋಗಿ ಭಕ್ತರನ್ನು ರಕ್ಷಿಸಿದ್ದಾರೆ. ಅಗ್ನಿಶಾಮಕ ದಳದ ತಂಡವೂ ಕೂಡ ಅಲ್ಲಿ ಇದೆ. ಬಾವಿಯಿಂದ ಎತ್ತಿ, ಅವರನ್ನೆಲ್ಲ ಆಂಬ್ಯುಲೆನ್ಸ್​ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಘಟನೆ ನಡೆಯುತ್ತಿದ್ದಂತೆ ಅಲ್ಲಿ ನೆರೆದಿದ್ದವರೆಲ್ಲ ಆತಂಕದಿಂದ ಆ ಕಡೆ-ಈ ಕಡೆ ಓಡಾಡಲು ಶುರು ಮಾಡಿದರು. ಅನೇಕರು ಭಯದಿಂದ ಅಳಲು ಪ್ರಾರಂಭಿಸಿದ್ದಾರೆ. ಹೀಗೆ ಭಕ್ತರ ಓಡಾಟ ಜಾಸ್ತಿ ಆಗಿದ್ದರಿಂದ ನೂಕುನುಗ್ಗಲು ಉಂಟಾಯಿತು. ಭಕ್ತರಿಗೆ ಧೈರ್ಯ ತುಂಬಿ, ಅವರನ್ನು ನಿಯಂತ್ರಿಸಲೂ ಪೊಲೀಸರು ಪರದಾಡಬೇಕಾಯಿತು.

ಇದನ್ನೂ ಓದಿ: Dharma Dangal:‌ ಬೇಲೂರು ದೇವಸ್ಥಾನದಲ್ಲಿ ಕುರಾನ್‌ ಪಠಣ: ಆಗಮ ಪಂಡಿತರ ಮೊರೆ ಹೋದ ಜಿಲ್ಲಾಡಳಿತ

ಇನ್ನು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್​ ಹೇಳಿದ್ದಾರೆ. ದೇವಸ್ಥಾನದಲ್ಲಿ ಬಾವಿಗೆ ಬಿದ್ದವರ ರಕ್ಷಣೆಗೆ ಎಲ್ಲ ರೀತಿಯ ಕ್ರಮವನ್ನೂ ವಹಿಸಲು ಸೂಚಿಸಿದ್ದಾರೆ. ಇಂಧೋರ್ ಜಿಲ್ಲಾಡಳಿತದ ಜತೆ ನಿರಂತರ ಸಂಪರ್ಕದಲ್ಲಿದ್ದು, ಕ್ಷಣಕ್ಷಣಕ್ಕೂ ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾರೂ ಮೃತಪಟ್ಟಿದ್ದಾಗಿ ವರದಿಯಾಗಿಲ್ಲ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಇದ್ದು, ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ಹೊತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ICICI Bank: ಐಸಿಐಸಿಐ ಬ್ಯಾಂಕ್‌ ಗ್ರಾಹಕರೇ ಎಚ್ಚರ; 17 ಸಾವಿರ ಜನರ ಕಾರ್ಡ್‌ ಮಾಹಿತಿ ಸೋರಿಕೆ!

ICICI Bank: ಐಸಿಐಸಿಐ ಬ್ಯಾಂಕ್‌ನ ಸುಮಾರು 17 ಸಾವಿರ ಕ್ರೆಡಿಟ್‌ ಕಾರ್ಡ್‌ಗಳ ಮಾಹಿತಿಯು ಬ್ಯಾಂಕ್‌ನ ಐ ಮೊಬೈಲ್‌ ಪೇ ಎಂಬ ಅಪ್ಲಿಕೇಷನ್‌ನಲ್ಲಿ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿದೆ. ಇದರಿಂದಾಗಿ ಕ್ರೆಡಿಟ್‌ ಕಾರ್ಡ್‌ ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದ್ದು, ಸಾವಿರಾರು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ.

VISTARANEWS.COM


on

ICICI Bank
Koo

ಮುಂಬೈ: ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್‌ನ (ICICI Bank) ಮೊಬೈಲ್‌ ಬ್ಯಾಂಕಿಂಗ್‌ ಅಪ್ಲಿಕೇಷನ್‌ನಲ್ಲಿ (Mobile Banking Application) ತಾಂತ್ರಿಕ ತೊಂದರೆ ಎದುರಾಗಿದೆ. ಅಷ್ಟೇ ಅಲ್ಲ, ಸುಮಾರು 17 ಸಾವಿರ ಗ್ರಾಹಕರ ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಮಾಹಿತಿ ಬಹಿರಂಗವಾಗಿದೆ ಎಂಬ ಕುರಿತು ದೂರುಗಳು ವ್ಯಕ್ತವಾಗಿವೆ. ಇದರಿಂದಾಗಿ ಐಸಿಐಸಿಐ ಬ್ಯಾಂಕ್‌ನ ಲಕ್ಷಾಂತರ ಗ್ರಾಹಕರು (ICICI Bank Custormers) ಆತಂಕಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಐಸಿಐಸಿಐ ಬ್ಯಾಂಕ್‌ನ ಐ ಮೊಬೈಲ್‌ ಪೇ ಎಂಬ ಅಪ್ಲಿಕೇಶನ್‌ನಲ್ಲಿ (App) ಭಾರಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಸಾವಿರಾರು ಗ್ರಾಹಕರ ಕ್ರೆಡಿಟ್‌ ಕಾರ್ಡ್‌ಗಳ ಮಾಹಿತಿ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ. ಟೆಕ್ನೊಫಿನೋ ಸಂಸ್ಥೆಯ ಸಂಸ್ಥಾಪಕ ಸುಮಂತಾ ಮಂಡಲ್‌ ಅವರು ತಾಂತ್ರಿಕ ದೋಷ ಹಾಗೂ ಮಾಹಿತಿ ಸೋರಿಕೆ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದು, ಆರ್‌ಬಿಐ ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

“ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್‌ ಕಾರ್ಡ್‌ ಹೊಂದಿರುವ ಸಾವಿರಾರು ಗ್ರಾಹಕರಿಗೆ ತೊಂದರೆಯಾಗಿದೆ. ಅದರಲ್ಲೂ, ಐ ಮೊಬೈಲ್‌ ಪೇ ಅಪ್ಲಿಕೇಷನ್‌ನಲ್ಲಿ ಭಾರಿ ದೋಷ ಕಾಣಿಸಿಕೊಂಡಿದೆ. ಕ್ರೆಡಿಟ್‌ ಕಾರ್ಡ್‌ ನಂಬರ್‌, ಎಕ್ಸ್‌ಪೈರಿ ಡೇಟ್‌, ಸಿವಿವಿ ಸೇರಿ ಎಲ್ಲ ಮಾಹಿತಿಯು ಅಪ್ಲಿಕೇಷನ್‌ನಲ್ಲಿ ಬಹಿರಂಗವಾಗಿ ಕಾಣಿಸುತ್ತಿದೆ. ಅಂತಾರಾಷ್ಟ್ರೀಯ ಟ್ರಾನ್ಸ್ಯಾಕ್ಷನ್‌ ಸೆಟಿಂಗ್ಸ್‌ ಕೂಡ ಬದಲಾಯಿಸಬಹುದಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಟ್ರಾನ್ಸ್ಯಾಕ್ಷನ್‌ ಮಾಡಲು ಬೇರೆಯವರ ಕ್ರೆಡಿಟ್‌ ಕಾರ್ಡ್‌ ಮಾಹಿತಿಯನ್ನು ದುರುಪಯೋಗ ಮಾಡಿಕೊಳ್ಳಬಹುದಾಗಿದೆ” ಎಂದು ಅವರು ದೂರಿದ್ದಾರೆ.

ಐಸಿಐಸಿಐ ಬ್ಯಾಂಕ್‌ ಹೇಳುವುದೇನು?

ತಾಂತ್ರಿಕ ದೋಷವಾಗಿದೆಯೋ, ಯಾರಾದರೂ ಹ್ಯಾಕ್‌ ಮಾಡಿದ್ದಾರೋ ಎಂಬ ಕುರಿತು ಅನುಮಾನ ವ್ಯಕ್ತವಾಗುತ್ತಲೇ ಈ ಕುರಿತು ಐಸಿಐಸಿಐ ಬ್ಯಾಂಕ್‌ ಸ್ಪಷ್ಟನೆ ನೀಡಿದೆ. “ಹೊಸದಾಗಿ ನೀಡಲಾದ 17 ಸಾವಿರ ಕ್ರೆಡಿಟ್‌ ಕಾರ್ಡ್‌ಗಳ ಮಾಹಿತಿಯು ಬಹಿರಂಗವಾಗಿದೆ. ಇದು ತಾಂತ್ರಿಕ ದೋಷದಿಂದ ಉಂಟಾಗಿರುವ ಸಾಧ್ಯತೆ ಇದೆ. ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರ ಪೈಕಿ ಶೇ.0.1ರಷ್ಟು ಗ್ರಾಹಕರಿಗೆ ತೊಂದರೆಯಾಗಿದೆ. ಆದರೆ, ಗ್ರಾಹಕರ ಹಿತದೃಷ್ಟಿಯಿಂದಾಗಿ ಕೂಡಲೇ ಎಲ್ಲ ಕಾರ್ಡ್‌ಗಳನ್ನು ಬ್ಲಾಕ್‌ ಮಾಡಿದ್ದೇವೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದ್ದು, ಶೀಘ್ರವೇ ಬಗೆಹರಿಸಲಾಗತ್ತದೆ. ಯಾರದರೂ ಹಣ ಕಳೆದುಕೊಂಡಿದ್ದರೆ ಕಸ್ಟಮರ್‌ ಕೇರ್‌ಗೆ ಕರೆ ಮಾಡಿ” ಎಂಬುದಾಗಿ ಬ್ಯಾಂಕ್‌ ಮನವಿ ಮಾಡಿದೆ.

ಇದನ್ನೂ ಓದಿ: Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Continue Reading

ವಾಣಿಜ್ಯ

Reliance Smart Bazar: ರಿಲಯನ್ಸ್ ಸ್ಮಾರ್ಟ್ ಬಜಾರ್ ಗ್ರಾಹಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಯಾವೆಲ್ಲ ವಸ್ತುಗಳಿಗೆ ಹೆಚ್ಚಿನ ಬೇಡಿಕೆ?

Reliance Smart Bazar: ರಿಲಯನ್ಸ್ ರೀಟೇಲ್‌ನ ಸ್ಮಾರ್ಟ್ ಬಜಾರ್ (Reliance Smart Bazar)ನ ಗ್ರಾಹಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ರಿಲಯನ್ಸ್ ರೀಟೇಲ್ ದಿನಸಿ ಮೂಲಕ ಬರುವ ಆದಾಯ ಪ್ರಮಾಣ ಶೇ. 31ರಷ್ಟು ಹೆಚ್ಚಾಗಿದೆ. ಸ್ಮಾರ್ಟ್- ಸ್ಮಾರ್ಟ್ ಬಜಾರ್‌ನಿಂದ ನಡೆದ ಫುಲ್ ಪೈಸಾ ವಸೂಲ್ ಸೇಲ್‌ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ. 21ರಷ್ಟು ಮಾರಾಟ ಹೆಚ್ಚಾಗಿದೆ. ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಮಾರಾಟ ಬಹಳ ಹೆಚ್ಚಿರುತ್ತದೆ. ಆದರೆ ಹೋಳಿ ಹಬ್ಬದ ಮುಂಚಿನ ಮಾರಾಟವು ದೀಪಾವಳಿ ಸಂದರ್ಭವನ್ನು ಸಹ ಮೀರಿಸಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Reliance Smart Bazar
Koo

ಮುಂಬೈ: ರಿಲಯನ್ಸ್ ರೀಟೇಲ್‌ನ ಸ್ಮಾರ್ಟ್ ಬಜಾರ್ (Reliance Smart Bazar)ನ ಗ್ರಾಹಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ ಎಂಬ ಅಂಶ ಇತ್ತೀಚಿನ ರಿಲಯನ್ಸ್ ಇಂಡಸ್ಟ್ರೀಸ್ ತ್ರೈಮಾಸಿಕ ಫಲಿತಾಂಶದಲ್ಲಿ ಗೋಚರವಾಗಿದೆ. ರಿಲಯನ್ಸ್ ರೀಟೇಲ್ ದಿನಸಿ ಮೂಲಕ ಬರುವ ಆದಾಯ ಪ್ರಮಾಣ ಶೇ. 31ರಷ್ಟು ಹೆಚ್ಚಾಗಿದೆ. ಸ್ಮಾರ್ಟ್- ಸ್ಮಾರ್ಟ್ ಬಜಾರ್‌ನಿಂದ ನಡೆದ ಫುಲ್ ಪೈಸಾ ವಸೂಲ್ ಸೇಲ್‌ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ. 21ರಷ್ಟು ಮಾರಾಟ ಹೆಚ್ಚಾಗಿದೆ. ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಮಾರಾಟ ಬಹಳ ಹೆಚ್ಚಿರುತ್ತದೆ. ಆದರೆ ಹೋಳಿ ಹಬ್ಬದ ಮುಂಚಿನ ಮಾರಾಟವು ದೀಪಾವಳಿ ಸಂದರ್ಭವನ್ನು ಸಹ ಮೀರಿಸಿದೆ.

ಅಂದ ಹಾಗೆ ರಿಲಯನ್ಸ್ ಇಂಡಸ್ಟ್ರೀಸ್‌ನಿಂದ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಈಚೆಗಷ್ಟೇ ಹೊರಬಂದಿದ್ದು, ಕಂಪನಿಯ ರೀಟೇಲ್ ವ್ಯವಹಾರದ ಅಂಗವಾದ ರಿಲಯನ್ಸ್ ರೀಟೇಲ್ ಬೆಳವಣಿಗೆ ಬಗ್ಗೆ ಹೂಡಿಕೆದಾರರಲ್ಲಿ ಹಾಗೂ ಗ್ರಾಹಕರಲ್ಲಿ ಕುತೂಹಲ ಮೂಡಿಸುವಂಥ ಬೆಳವಣಿಗೆಗಳು ಕಂಡುಬಂದಿವೆ. ರಿಲಯನ್ಸ್ ರೀಟೇಲ್ ಇ-ಕಾಮರ್ಸ್ ಪ್ಲಾಟ್ ಫಾರ್ಮ್ ಆದ ಜಿಯೋಮಾರ್ಟ್ ತನ್ನ ಮಾರ್ಕೆಟ್ ಪ್ಲೇಸ್ ಕೊಡುಗೆಗಳನ್ನು ವಿಸ್ತರಿಸಿದ್ದು, ಒಂದು ವರ್ಷದಲ್ಲಿ ಮಾರಾಟಗಾರರ ನೆಲೆ ಶೇ. 94ರಷ್ಟು ಹೆಚ್ಚಾಗಿದೆ.

ದಿನಸಿ ವಿಭಾಗದಲ್ಲಿ ಆರ್ಡರ್ ಮೌಲ್ಯವು ವೃದ್ಧಿಸಿದೆ. ಕ್ಯಾಟಲಾಗ್ (ಲಭ್ಯ ಇರುವ ವಸ್ತುಗಳ ಪಟ್ಟಿ) ವಿಸ್ತರಣೆಯು ಮುಂದುವರಿದಿದ್ದು, ಇ-ಕಾಮರ್ಸ್ ಪ್ಲಾಟ್ ಫಾರ್ಮ್ ತಿಳಿಸಿರುವಂತೆ, ವರ್ಷದಿಂದ ವರ್ಷಕ್ಕೆ ಆಯ್ಕೆಗಳ ಸಂಖ್ಯೆಯಲ್ಲಿ ಶೇ. 32ರಷ್ಟು ಹೆಚ್ಚಾಗಿದೆ. ಸರಾಸರಿ ಆರ್ಡರ್ ಮೌಲ್ಯವು ವರ್ಷದಿಂದ ವರ್ಷಕ್ಕೆ ಶೇ. 30ರಷ್ಟು ಹೆಚ್ಚಾಗಿದ್ದು, ಪ್ರತಿ ಆರ್ಡರ್‌ಗೆ ಸರಾಸರಿ ಯೂನಿಟ್ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇ. 37ರಷ್ಟು ಹೆಚ್ಚಾಗಿದೆ. ಎಲೆಕ್ಟ್ರಾನಿಕ್ಸ್, ದಿನಸಿ, ಫ್ಯಾಷನ್ ಈ ವಿಭಾಗದಲ್ಲಿ ಗ್ರಾಹಕರ ಬೇಡಿಕೆ ಹೆಚ್ಚಾಗಿದೆ. ಇನ್ನು ಖರೀದಿ ಆಯ್ಕೆ ಕೂಡ ದೊಡ್ಡ ಪ್ರಮಾಣದಲ್ಲಿ ವೃದ್ಧಿಸಿದೆ ಎನ್ನುವುದು ವಿಶೇಷ.

‘ಹೋಲಿ ರೆಡಿ’ ಹಾಗೂ ‘ರಿಪಬ್ಲಿಕ್ ಡೇ’ ಇಂಥ ಸಂದರ್ಭದಲ್ಲಿ ಗ್ರಾಹಕರು ಹೆಚ್ಚು ಖರೀದಿಸಿದ್ದು, ಸೆಷನ್‌ಗಳು ಕೂಡ ಜಾಸ್ತಿಯಿದೆ ಮತ್ತು ಗ್ರಾಸ್ ಮರ್ಕಂಡೈಸ್ ವ್ಯಾಲ್ಯೂ ಹೆಚ್ಚಿದೆ. ಖರೀದಿ ಅನುಭವವನ್ನು ಉತ್ತಮಗೊಳಿಸುವುದಕ್ಕಾಗಿ ʼಬೈ ಎಗೇಯ್ನ್‌ʼ ಎಂಬ ಆಯ್ಕೆ ನೀಡಲಾಗಿದ್ದು, ಉತ್ಪನ್ನಗಳಿಗೆ ಗ್ರಾಹಕರು ರೇಟಿಂಗ್ ಸಹ ನೀಡಬಹುದು.

ರಿಲಯನ್ಸ್ ರೀಟೇಲ್ ದಿನಸಿಯ ಹೊಸ ವಾಣಿಜ್ಯ ಸೆಗ್‌ಮೆಂಟ್‌ ಗಮನಾರ್ಹವಾದ ಬೆಳವಣಿಗೆಯನ್ನು ದಾಖಲಿಸಿದೆ. ಮೆಟ್ರೋ ಕಿರಾಣಾ ಉತ್ಸವದಂಥ ಉಪಕ್ರಮಗಳು ಇದಕ್ಕೆ ಕೊಡುಗೆ ನೀಡಿವೆ. ಹೋಟೆಲ್-ರೆಸ್ಟೋರೆಂಟ್-ಕೆಫೆ ಈ ಸೆಗ್‌ಮೆಂಟ್‌ನಲ್ಲಿ ಮಾಡಿಕೊಂಡ ಸಾಂಸ್ಥಿಕ ಸಹಭಾಗಿತ್ವವು ವೈವಿಧ್ಯಮಯ ಆದಾಯ ಮೂಲದ ಹರಿವಿಗೆ ಕಾರಣವಾಗಿವೆ.

ರಿಲಯನ್ಸ್ ರೀಟೇಲ್ ಫಲಿತಾಂಶ ಘೋಷಣೆ ವೇಳೆ ಕಂಪನಿಯ ಸಿಎಫ್ಒ ದಿನೇಶ್ ತಲುಜಾ ಮಾತನಾಡಿ, ʼʼದೇಶದಲ್ಲಿ ನಾವು ತುಂಬ ಆಳವಾಗಿ ಪ್ರಾದೇಶಿಕವಾದ ಮಳಿಗೆಗಳ ಜಾಲವನ್ನು ಕಟ್ಟುತ್ತಿದ್ದೇವೆʼʼ ಎಂದು ಹೇಳಿದರು. ರೀಟೇಲ್ ವಿಭಾಗದಲ್ಲಿ ರಿಲಯನ್ಸ್ ಗಟ್ಟಿ ಹೆಜ್ಜೆಗಳನ್ನು ಈ ಮಾತುಗಳು ಪ್ರತಿಬಿಂಬಿಸುತ್ತವೆ.

ಇದನ್ನೂ ಓದಿ: Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

ರಿಲಯನ್ಸ್ ರೀಟೇಲ್ ನಾಲ್ಕನೇ ತ್ರೈಮಾಸಿಕದಲ್ಲಿ 2,698 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಒಂದು ವರ್ಷದ ಹಿಂದಿನ ಅವಧಿಗೆ ಹೋಲಿಸಿದರೆ ಇದು ಶೇ 11.7ರಷ್ಟು ಹೆಚ್ಚಾಗಿದೆ. 2020ರಲ್ಲಿ ರಿಲಯನ್ಸ್ ರೀಟೇಲ್‌ನ ಇ-ಟೇಲ್ ಅಂಗವಾಗಿ ಜಿಯೋಮಾರ್ಟ್ ಅಸ್ತಿತ್ವಕ್ಕೆ ಬಂತು. ಇದೀಗ ಭಾರತದ ದೇಶೀಯ ಅತಿದೊಡ್ಡ ಇ-ಮಾರ್ಕೆಟ್ ಪ್ಲೇಸ್‌ಗಳಲ್ಲಿ ಒಂದು ಎನಿಸಿಕೊಂಡಿದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

wealth redistribution: ಮೂರು ದಶಕಗಳಷ್ಟು ಹಳೆಯ ಪ್ರಕರಣವನ್ನು ಸುಪ್ರೀಂ ಕೋರ್ಟ್‌ (Supreme Court) ಪೀಠ ಮರಳಿ ಕೈಗೆತ್ತಿಕೊಂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು (nine judges bench) ಇಂದಿನಿಂದ ಈ ಪ್ರಕರಣದ ವಿಚಾರಣೆ ನಡೆಸಲಿದೆ.

VISTARANEWS.COM


on

supreme court wealth redistribution
Koo

ಹೊಸದಿಲ್ಲಿ: “ಸಂಪತ್ತು ಮರುಹಂಚಿಕೆ” (Wealth redistribution) ಕುರಿತ ವಿವಾದ (controversy) ರಾಷ್ಟ್ರ ರಾಜಕೀಯದಲ್ಲಿ ಜೋರಾಗುತ್ತಿರುವಂತೆ, ವ್ಯಕ್ತಿಯ ಖಾಸಗಿ ಒಡೆತನದ (Private property) ಆಸ್ತಿಯನ್ನು “ಸಮುದಾಯದ ವಸ್ತು ಸಂಪನ್ಮೂಲ” (community property) ಎಂದು ಪರಿಗಣಿಸಬಹುದೇ ಎಂದು ನಿರ್ಧರಿಸಲು ಮೂರು ದಶಕಗಳಷ್ಟು ಹಳೆಯ ಪ್ರಕರಣವನ್ನು ಸುಪ್ರೀಂ ಕೋರ್ಟ್‌ (Supreme Court) ಪೀಠ ಮರಳಿ ಕೈಗೆತ್ತಿಕೊಂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು (nine judges bench) ಇಂದಿನಿಂದ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ವಿವಾದವೇನು?

ಬಿರುಸಿನ ಲೋಕಸಭೆ ಚುನಾವಣೆ (lok Sabha Election 2024) ಪ್ರಚಾರ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇದ್ದ ಒಂದು ಉಲ್ಲೇಖವನ್ನು ಎತ್ತಿ ಆಡಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi), “ಸಂಪತ್ತು ಪುನರ್ ವಿತರಣಾ ಯೋಜನೆಯ ಭಾಗವಾಗಿ ಮನೆ, ಚಿನ್ನ, ವಾಹನ ಸೇರಿದಂತೆ ಖಾಸಗಿ ಆಸ್ತಿಯನ್ನು ಕಿತ್ತುಕೊಳ್ಳುವುದಾಗಿ ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದೆ” ಎಂದಿದ್ದರು. ಇದು ರಾಜಕೀಯ ಬಿರುಗಾಳಿ ಎಬ್ಬಿಸಿತ್ತು.

ಅಂತಹ ಯಾವುದೇ ಯೋಜನೆಯನ್ನು ಕಾಂಗ್ರೆಸ್ ನಿರಾಕರಿಸಿದೆ. ಪ್ರಧಾನಿ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದೆ. ಕಾಂಗ್ರೆಸ್ ಆಯ್ಕೆಯಾದರೆ ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿ ನಡೆಸಲಿದೆ ಎಂದು ಅದರ ಪ್ರಣಾಳಿಕೆ ಹೇಳುತ್ತದೆ. “ಜಾತಿಗಳು ಮತ್ತು ಉಪ-ಜಾತಿಗಳು ಮತ್ತು ಅವರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಎಣಿಸಲು ಕಾಂಗ್ರೆಸ್ ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸುತ್ತದೆ. ದತ್ತಾಂಶದ ಆಧಾರದ ಮೇಲೆ, ನಾವು ಸಕಾರಾತ್ಮಕ ಕ್ರಮಕ್ಕಾಗಿ ಕಾರ್ಯಸೂಚಿಯನ್ನು ಬಲಪಡಿಸುತ್ತೇವೆ.” ಖಾಸಗಿ ಆಸ್ತಿ ಮರುಹಂಚಿಕೆ ಯೋಜನೆ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳಿಲ್ಲ.

Narendra Modi

ಕೋರ್ಟ್‌ ಮುಂದಿರುವ ಪ್ರಕರಣ ಮತ್ತು ಅದರ ಇತಿಹಾಸ

ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠದ ಮುಂದಿರುವ ಪ್ರಕರಣವು 1986ರ ಹಿಂದಿನದು. ಮಹಾರಾಷ್ಟ್ರ ಸರ್ಕಾರವು ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಕಾಯಿದೆ- 1976 (MHADA) ಇದನ್ನು ತಿದ್ದುಪಡಿ ಮಾಡಿತ್ತು. 70 ಪ್ರತಿಶತ ನಿವಾಸಿಗಳ ಒಪ್ಪಿಗೆಯಿದ್ದರೆ ಮರುಸ್ಥಾಪನೆ ಉದ್ದೇಶಗಳಿಗಾಗಿ ಕೆಲವು “ಸೆಸ್ಡ್ ಆಸ್ತಿಗಳನ್ನು” ಸ್ವಾಧೀನಪಡಿಸಿಕೊಳ್ಳಬಹುದು ಎಂಬ ಅಧಿಕಾರವನ್ನು ಇದು ಮುಂಬೈ ಕಟ್ಟಡ ದುರಸ್ತಿ ಮತ್ತು ಪುನರ್ನಿರ್ಮಾಣ ಮಂಡಳಿಗೆ ಹೊಂದಲು ಅವಕಾಶ ಮಾಡಿಕೊಟ್ಟಿತು. ತಿದ್ದುಪಡಿಯು ಸಂವಿಧಾನದ 39(ಬಿ) ವಿಧಿಯನ್ನು ಉಲ್ಲೇಖಿಸಿದೆ. ಅದು “ಸಮುದಾಯದ ವಸ್ತು ಸಂಪನ್ಮೂಲಗಳ ಮಾಲೀಕತ್ವ ಮತ್ತು ನಿಯಂತ್ರಣವನ್ನು ಸಾಮಾನ್ಯ ಒಳಿತಿಗಾಗಿ ಉತ್ತಮ ರೀತಿಯಲ್ಲಿ ವಿತರಿಸಲಾಗುವುದು” ಎಂದು ಹೇಳುತ್ತದೆ.

ಮುಂಬೈನಲ್ಲಿರುವ 20,000ಕ್ಕೂ ಹೆಚ್ಚು ಭೂಮಾಲೀಕರನ್ನು ಪ್ರತಿನಿಧಿಸುವ ಆಸ್ತಿ ಮಾಲೀಕರ ಸಂಘ (POA) ಈ ತಿದ್ದುಪಡಿಯನ್ನು ಪ್ರಶ್ನಿಸಿದೆ ಮತ್ತು ವಸತಿ ಸಂಕೀರ್ಣಗಳನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಮಂಡಳಿಗೆ ಇದು ಅನಿಯಂತ್ರಿತ ಅಧಿಕಾರವನ್ನು ನೀಡಿದೆ ಎಂದು ವಾದಿಸಿದೆ. ಡಿಸೆಂಬರ್ 1991ರಲ್ಲಿ, ಬಾಂಬೆ ಉಚ್ಚ ನ್ಯಾಯಾಲಯವು, “ಸಾಮಾನ್ಯ ಜನರಿಗೆ ಆಶ್ರಯ ನೀಡುವುದು ಸರ್ಕಾರವು ಕರ್ತವ್ಯವಾಗಿದೆ” ಎಂಬ ಕಾರಣಕ್ಕಾಗಿ ಅರ್ಜಿಗಳನ್ನು ರದ್ದುಗೊಳಿಸಿತು.

ಪಿಒಎ ಮತ್ತು ಇತರ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಅವರ ಅರ್ಜಿಯನ್ನು ಇನ್ನೆರಡು ಪ್ರಕರಣಗಳಿಗೆ ಜೋಡಿಸಲಾಗಿದೆ. ಅವು ಶಿವರಾಮ ರಾಮಯ್ಯ ಯೆರಾಳ ವರ್ಸಸ್‌ ಮಹಾರಾಷ್ಟ್ರ ಸರ್ಕಾರ ಪ್ರಕರಣ ಹಾಗೂ ಬಾಂಬೆಯ ಪ್ರಮೀಳಾ ಚಿಂತಾಮಣಿ ಮೋಹನ್‌ದಾಸ್ ವರ್ಸಸ್‌ ಮಹಾರಾಷ್ಟ್ರ ರಾಜ್ಯ ಸರ್ಕಾರ. ಇವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅತ್ಯಂತ ಹಳೆಯ ಪ್ರಕರಣಗಳಾಗಿವೆ. ಸುಪ್ರೀಂ ಕೋರ್ಟ್ ಪೀಠವು ಇವನ್ನು ಐದು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಿತ್ತು. ಅದು ಇವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತು. 2002ರಲ್ಲಿ, ಆಗಿನ ಮುಖ್ಯ ನ್ಯಾಯಮೂರ್ತಿ ಎಸ್‌ಪಿ ಭರೂಚಾ ನೇತೃತ್ವದ ಏಳು ನ್ಯಾಯಾಧೀಶರ ಪೀಠವು ಈ ವಿಷಯವನ್ನು ಒಂಬತ್ತು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತು.

2019ರಲ್ಲಿ, ಮತ್ತೊಂದು ಪ್ರಮುಖ ಬೆಳವಣಿಗೆ ನಡೆಯಿತು. ಮಹಾರಾಷ್ಟ್ರ ಸರ್ಕಾರ ಮತ್ತೆ ಕಾನೂನನ್ನು ತಿದ್ದುಪಡಿ ಮಾಡಿತು. ಹೊಸ ತಿದ್ದುಪಡಿಯ ಪ್ರಕಾರ, ಗಡುವಿನೊಳಗೆ ಆಸ್ತಿ ಮರುಸ್ಥಾಪಿಸಲು ಭೂಮಾಲೀಕರು ವಿಫಲವಾದರೆ, ರಾಜ್ಯ ಸರ್ಕಾರವು ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಬಹುದಿತ್ತು. ಇದು ಕಲ್ಯಾಣ ಶಾಸನ ಎಂದು ರಾಜ್ಯ ಸರ್ಕಾರ ಒತ್ತಿಹೇಳಿತು. ಆದರೆ ಆಸ್ತಿಯನ್ನು ಕಡಿಮೆ ಬೆಲೆಗೆ ಕಿತ್ತುಕೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸುವ ಯೋಜನೆ ಇದು ಎಂದು ಭೂಮಾಲೀಕರು ಆರೋಪಿಸಿದರು.

ಕಳೆದ ವರ್ಷ, ವಿಚಾರಣೆಗೆ ಬಾಕಿ ಇರುವ ಒಂಬತ್ತು ನ್ಯಾಯಾಧೀಶರ ಪೀಠದ ಪ್ರಕರಣಗಳನ್ನು ಪಟ್ಟಿ ಮಾಡುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಈ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ನಿನ್ನೆ ನಡೆಸಿತು. ನ್ಯಾಯಮೂರ್ತಿ ಹೃಷಿಕೇಶ್ ರಾಯ್, ನ್ಯಾಯಮೂರ್ತಿ ಬಿವಿ ನಾಗರತ್ನ, ನ್ಯಾಯಮೂರ್ತಿ ಸುಧಾಂಶು ಧುಲಿಯಾ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ನ್ಯಾಯಮೂರ್ತಿ ಮನೋಜ್ ಮಿಶ್ರಾ, ನ್ಯಾಯಮೂರ್ತಿ ರಾಜೇಶ್ ಬಿಂದಾಲ್, ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರು ಪೀಠದಲ್ಲಿರುವ ಇತರ ಎಂಟು ನ್ಯಾಯಾಧೀಶರು. ಒಟ್ಟು 16 ಅರ್ಜಿಗಳು ನ್ಯಾಯಾಲಯದ ಮುಂದಿವೆ.

ನಿರ್ಣಾಯಕ ಪ್ರಶ್ನೆ

ನ್ಯಾಯಾಲಯದ ಮುಂದಿರುವ ಪ್ರಮುಖ ಸಮಸ್ಯೆಯು ಸಂವಿಧಾನದಲ್ಲಿನ ಎರಡು ನಿಬಂಧನೆಗಳಿಗೆ ಸಂಬಂಧಿಸಿದೆ- ಆರ್ಟಿಕಲ್ 31 ಸಿ ಮತ್ತು ಆರ್ಟಿಕಲ್ 39 (ಬಿ). ಇವುಗಳು ರಾಜ್ಯ ನೀತಿಯ ಡೈರೆಕ್ಟಿವ್ ಪ್ರಿನ್ಸಿಪಲ್ಸ್‌ಗೆ ಸಂಬಂಧಿಸಿವೆ. ಈ ತತ್ವಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡುವುದಿಲ್ಲ. ಆದರೆ ದೇಶದ ಆಡಳಿತಕ್ಕೆ ಇವು ಮೂಲಭೂತವಾಗಿವೆ. ಕಾನೂನುಗಳನ್ನು ರಚಿಸುವಾಗ ಈ ತತ್ವಗಳನ್ನು ಅನ್ವಯಿಸುವುದು ರಾಜ್ಯದ ಕರ್ತವ್ಯ ಎಂದು ಸಂವಿಧಾನ ಹೇಳುತ್ತದೆ.

ಆರ್ಟಿಕಲ್ 39(ಬಿ) ಹೇಳುವಂತೆ, ಸಮುದಾಯದ ವಸ್ತು ಸಂಪನ್ಮೂಲಗಳ ಮಾಲೀಕತ್ವ ಮತ್ತು ನಿಯಂತ್ರಣವನ್ನು ಸಾಮಾನ್ಯ ಒಳಿತಿಗಾಗಿ ಉತ್ತಮ ರೀತಿಯಲ್ಲಿ ವಿತರಿಸಬಹುದು. ಆರ್ಟಿಕಲ್ 31(ಸಿ) ಕೆಲವು ನಿರ್ದೇಶನ ತತ್ವಗಳನ್ನು ಜಾರಿಗೆ ತರುವ ಕಾನೂನುಗಳನ್ನು ರಕ್ಷಿಸುತ್ತದೆ. ಇದರ ಅರ್ಥವೇನೆಂದರೆ, ನಿರ್ದೇಶನದ ತತ್ವಗಳ ಅಡಿಯಲ್ಲಿ ರಾಜ್ಯವು ಜಾರಿಗೊಳಿಸಿದ ಯಾವುದೇ ಕಾನೂನನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹಕ್ಕು ಸೇರಿದಂತೆ ಮೂಲಭೂತ ಹಕ್ಕುಗಳೊಂದಿಗೆ ವ್ಯವಹರಿಸುವ ಸಂವಿಧಾನದ ಆರ್ಟಿಕಲ್ 14 ಮತ್ತು ಆರ್ಟಿಕಲ್ 19ನ್ನು ಮುಂದಿಟ್ಟುಕೊಂಡು ಕೂಡ ಪ್ರತಿಭಟಿಸಲು ಸಾಧ್ಯವಿಲ್ಲ.

supreme court CJI DY chandrachud

ನಿರ್ದೇಶನದ ತತ್ವಗಳಲ್ಲಿ ರಾಜ್ಯವು “ಆದಾಯದಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡಲು ಶ್ರಮಿಸಬೇಕು ಮತ್ತು ವ್ಯಕ್ತಿಗಳ ನಡುವೆ ಮಾತ್ರವಲ್ಲದೆ ವಿವಿಧ ಪ್ರದೇಶಗಳಲ್ಲಿ ವಾಸಿಸುವ ಅಥವಾ ವಿವಿಧ ಕೆಲಸಗಳಲ್ಲಿ ತೊಡಗಿರುವ ಜನರ ಗುಂಪುಗಳ ನಡುವೆಯೂ ಸಹ ಸ್ಥಾನಮಾನ, ಸೌಲಭ್ಯಗಳು ಮತ್ತು ಅವಕಾಶಗಳಲ್ಲಿನ ಅಸಮಾನತೆಗಳನ್ನು ತೊಡೆದುಹಾಕಲು ಪ್ರಯತ್ನಿಸಬೇಕು” ಎಂದು ಹೇಳುತ್ತದೆ.

ಹಾಗಾಗಿ ಖಾಸಗಿ ಆಸ್ತಿಯನ್ನು ʼಸಮುದಾಯದ ವಸ್ತು ಸಂಪನ್ಮೂಲಗಳು’ ಎಂದು ಪರಿಗಣಿಸಬಹುದೇ ಮತ್ತು ಸಾಮಾನ್ಯ ಒಳಿತಿಗಾಗಿ ರಾಜ್ಯವು ಸ್ವಾಧೀನಪಡಿಸಿಕೊಳ್ಳಬಹುದೇ ಎಂಬುದು ನ್ಯಾಯಾಲಯದ ಮುಂದಿರುವ ಪ್ರಮುಖ ಪ್ರಶ್ನೆಯಾಗಿದೆ.

ಪ್ರಮುಖ ಅವಲೋಕನಗಳು

ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು ಕೆಲವು ಪ್ರಮುಖ ಅವಲೋಕನಗಳನ್ನು ಮಾಡಿದರು. “ನೀವು ಆಸ್ತಿಯ ಬಂಡವಾಳಶಾಹಿ ಪರಿಕಲ್ಪನೆಯನ್ನು ನೋಡಿದರೆ, ಅದು ಆಸ್ತಿಗೆ ಪ್ರತ್ಯೇಕತೆಯ ಭಾವನೆಯನ್ನು, ಇದು ಪ್ರತ್ಯೇಕವಾಗಿ ನನ್ನದು ಎಂಬ ಭಾವನೆಯನ್ನು ಆರೋಪಿಸುತ್ತದೆ. ಆಸ್ತಿಯ ಸಮಾಜವಾದಿ ಪರಿಕಲ್ಪನೆಯು ಕನ್ನಡಿ ಪ್ರತಿಬಿಂಬವಾಗಿದೆ. ಇದು ಆಸ್ತಿಗೆ ಸಾಮಾನ್ಯತೆಯ ಕಲ್ಪನೆಯನ್ನು ಸೂಚಿಸುತ್ತದೆ. ಯಾವುದೂ ವ್ಯಕ್ತಿಗೆ ಪ್ರತ್ಯೇಕವಾಗಿಲ್ಲ. ಎಲ್ಲಾ ಆಸ್ತಿಯೂ ಸಮುದಾಯಕ್ಕೆ ಸಾಮಾನ್ಯವಾಗಿದೆ. ಇದು ತೀವ್ರ ಸಮಾಜವಾದಿ ದೃಷ್ಟಿಕೋನ” ಎಂದು ಹೇಳಿದರು.

“ಭಾರತದ ರಾಜ್ಯ ನೀತಿಯ ನಿರ್ದೇಶನ ತತ್ವಗಳು ಗಾಂಧಿ ತತ್ವ ಮತ್ತು ಸಿದ್ಧಾಂತಕ್ಕೆ ಅನುಗುಣವಾಗಿವೆ. ಆ ತತ್ವಗಳೇನು? ನಮ್ಮ ನೀತಿಯು ನಂಬಿಕೆಯ ಆಸ್ತಿಯನ್ನು ಪರಿಗಣಿಸುತ್ತದೆ. ಖಾಸಗಿ ಆಸ್ತಿ ಇಲ್ಲ ಎಂಬುದಕ್ಕಾಗಿ ನಾವು ಸಮಾಜವಾದಿ ಮಾದರಿಯನ್ನು ಅಳವಡಿಸಿಕೊಳ್ಳಲು ಹೋಗಿಲ್ಲ. ಆದರೆ ಖಾಸಗಿ ಆಸ್ತಿ ಇದೆ” ಎಂದವರು ಗಮನಿಸಿದರು.

“ನಮ್ಮ ಆಸ್ತಿಯ ಪರಿಕಲ್ಪನೆಯು ತೀವ್ರ ಬಂಡವಾಳಶಾಹಿ ದೃಷ್ಟಿಕೋನದಿಂದ ಅಥವಾ ತೀವ್ರ ಸಮಾಜವಾದಿ ದೃಷ್ಟಿಕೋನದಿಂದ ಅತ್ಯಂತ ವಿಭಿನ್ನವಾದ, ಅತ್ಯಂತ ಸೂಕ್ಷ್ಮವಾದ ಬದಲಾವಣೆ ಹೊಂದಿದೆ. ನಾವು ಆಸ್ತಿಯನ್ನು ನಂಬುವ ವಿಷಯವೆಂದು ಪರಿಗಣಿಸುತ್ತೇವೆ. ನಾವು ಕುಟುಂಬದಲ್ಲಿ ಮುಂದಿನ ಪೀಳಿಗೆಗೆ ಆಸ್ತಿಯನ್ನು ನೀಡುವ ನಂಬಿಕೆಯನ್ನು ಇರಿಸಿದ್ದೇವೆ. ಆದರೆ ವಿಶಾಲವಾಗಿ ನಾವು ಆಸ್ತಿಯನ್ನು ವಿಶಾಲ ಸಮುದಾಯದ ವಿಶ್ವಾಸದಲ್ಲಿರಿಸುತ್ತೇವೆ. ಅದು ಸುಸ್ಥಿರ ಅಭಿವೃದ್ಧಿಯ ಸಂಪೂರ್ಣ ಪರಿಕಲ್ಪನೆಯಾಗಿದೆ. ಅದನ್ನೇ ನಾವು ಇಂಟರ್‌ಜೆನೆರೇಶನಲ್ ಇಕ್ವಿಟಿ ಎಂದು ಕರೆಯುತ್ತೇವೆ,” ಎಂದು ಅವರು ಹೇಳಿದರು.

“ಸಮುದಾಯದ ವಸ್ತು ಸಂಪನ್ಮೂಲಗಳು ಎಂದರೆ ಸಾರ್ವಜನಿಕ ಸಂಪನ್ಮೂಲಗಳು ಮತ್ತು ನಾವು ವ್ಯಕ್ತಿಯ ಖಾಸಗಿ ಆಸ್ತಿಯಲ್ಲಿ ಅದಿಲ್ಲ ಎಂದು ಸೂಚಿಸುವುದು ಸ್ವಲ್ಪ ವಿಪರೀತ. ಆ ದೃಷ್ಟಿಕೋನವನ್ನು ತೆಗೆದುಕೊಳ್ಳುವುದು ಏಕೆ ಅಪಾಯಕಾರಿ ಎಂದು ನಾನು ಹೇಳುತ್ತೇನೆ. ಗಣಿಗಳು ಮತ್ತು ಖಾಸಗಿ ಅರಣ್ಯಗಳಂತಹ ಸರಳ ವಿಷಯಗಳನ್ನು ತೆಗೆದುಕೊಳ್ಳಿ. ಉದಾಹರಣೆಗೆ, 39 (ಬಿ) ಅಡಿಯಲ್ಲಿ ಖಾಸಗಿ ಅರಣ್ಯಗಳಿಗೆ ಸರ್ಕಾರಿ ನೀತಿ ಅನ್ವಯಿಸುವುದಿಲ್ಲ ಎಂದು ನಾವು ಹೇಳುತ್ತೇವೆ. ಆದ್ದರಿಂದ ಪ್ರತಿಪಾದನೆಯಾಗಿ ಅತ್ಯಂತ ಅಪಾಯಕಾರಿ,” ಅವರು ಹೇಳಿದರು.

ಸಂವಿಧಾನ ರಚನೆಯಾದ 1950ರ ಪರಿಸ್ಥಿತಿಯನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿಗಳು, “ಸಂವಿಧಾನವು ಸಾಮಾಜಿಕ ಪರಿವರ್ತನೆಯನ್ನು ತರಲು ಉದ್ದೇಶಿಸಲಾಗಿತ್ತು. ಆಸ್ತಿಯನ್ನು ಖಾಸಗಿಯಾಗಿ ಹೊಂದಿರುವ ನಂತರ 39 (ಬಿ) ವಿಧಿಗೆ ಯಾವುದೇ ಅನ್ವಯವಿಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ.” ಎಂದರು.

ಆದಾಗ್ಯೂ, ಮಹಾರಾಷ್ಟ್ರದ ಕಾನೂನು ಶಿಥಿಲಗೊಂಡ ಕಟ್ಟಡಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಕಾರಿಗಳಿಗೆ ಅಧಿಕಾರ ನೀಡಿದೆಯೇ ಎಂಬುದು ವಿಭಿನ್ನ ವಿಷಯವಾಗಿದೆ ಮತ್ತು ಅದನ್ನು ಸ್ವತಂತ್ರವಾಗಿ ನಿರ್ಧರಿಸಲಾಗುತ್ತದೆ ಎಂದು ಅದು ಒತ್ತಿಹೇಳಿತು. ‘ಜಮೀಂದಾರಿ’ ಪದ್ಧತಿಯ ರದ್ದತಿಯನ್ನೂ ಮುಖ್ಯ ನ್ಯಾಯಮೂರ್ತಿ ಉಲ್ಲೇಖಿಸಿದರು. “ಸಂವಿಧಾನವು ಸಾಮಾಜಿಕ ಪರಿವರ್ತನೆಯನ್ನು ತರಲು ಉದ್ದೇಶಿಸಿರುವುದರಿಂದ ಸಂವಿಧಾನದಲ್ಲಿ 39 (ಬಿ) ವಿಧವನ್ನು ನಿರ್ದಿಷ್ಟ ರೀತಿಯಲ್ಲಿ ರಚಿಸಲಾಗಿದೆ ಎಂದು ನೀವು ಅರ್ಥಮಾಡಿಕೊಳ್ಳಬೇಕು. ಆದ್ದರಿಂದ ನಾವು ಖಾಸಗಿ ಆಸ್ತಿಯನ್ನು ಖಾಸಗಿ ಆಸ್ತಿ ಎಂದು ಹೇಳಿದಾಗ ಆರ್ಟಿಕಲ್ 39 (ಬಿ) ಯಾವುದೇ ಅನ್ವಯವನ್ನು ಹೊಂದಿರುವುದಿಲ್ಲ” ಎಂದು ಅವರು ಹೇಳಿದರು. ಇಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

Continue Reading

ವಾಣಿಜ್ಯ

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Anant- Radhika  wedding: ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಇತ್ತೀಚೆಗೆ ಅದ್ದೂರಿಯಾಗಿ ನಡೆದಿದೆ. ಇದಕ್ಕೆ ಕೋಟ್ಯಂತರ ರೂ. ಖರ್ಚು ಮಾಡಿರುವ ಅಂಬಾನಿ ಮಗನ ಮದುವೆ ಕಾರ್ಯಕ್ರಮವನ್ನು ಎಲ್ಲಿ , ಹೇಗೆ, ಎಷ್ಟು ಬಜೆಟ್ ನಲ್ಲಿ ನಡೆಸಲಿದ್ದಾರೆ ಗೊತ್ತೇ? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

Anant-Radhika wedding
Koo

ಮುಂಬಯಿ: ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ (Anant- Radhika  wedding) ಪೂರ್ವ ಕಾರ್ಯಕ್ರಮಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ (social media) ಹೆಚ್ಚು ಸದ್ದು ಮಾಡಿತ್ತು. ಈ ವರ್ಷ ಜುಲೈನಲ್ಲಿ ಇವರ ವಿವಾಹ ಲಂಡನ್‌ನಲ್ಲಿರುವ (London) ಅಂಬಾನಿ ಕುಟುಂಬದ ಸ್ಟೋಕ್ ಪಾರ್ಕ್ ಎಸ್ಟೇಟ್‌ನಲ್ಲಿ ನಡೆಯಲಿದೆ.

ಮಾರ್ಚ್ ತಿಂಗಳ 1ರಿಂದ 3ರವರೆಗೆ ಗುಜರಾತ್‌ನ (gujart) ಜಾಮ್‌ನಗರದಲ್ಲಿ (jamnagar) ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ತಮ್ಮ ವಿವಾಹಪೂರ್ವ ಸಮಾರಂಭವನ್ನು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಿದ್ದರು. ಇದರಲ್ಲಿ ಜಾಗತಿಕ ಟೆಕ್ ಸಿಇಒಗಳು, ಬಾಲಿವುಡ್ ತಾರೆಗಳು, ಪಾಪ್ ಐಕಾನ್‌ಗಳು ಮತ್ತು ರಾಜಕಾರಣಿಗಳು ಭಾಗವಹಿಸಿದ್ದರು.

ಇಶಾ ಅಂಬಾನಿ, ಆಕಾಶ್ ಅಂಬಾನಿ, ಶ್ಲೋಕಾ ಮೆಹ್ತಾ, ಆನಂದ್ ಪಿರಾಮಲ್ ಮತ್ತು ಕೋಕಿಲಾಬೆನ್ ಅಂಬಾನಿ ಸೇರಿದಂತೆ ಇಡೀ ಅಂಬಾನಿ ವಂಶಸ್ಥರು ಮದುವೆಯ ಪೂರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!


ಒಟ್ಟು ಖರ್ಚು

ವಿವಾಹ ಪೂರ್ವ ಕಾರ್ಯಕ್ರಮಗಳಲ್ಲಿ ಅತಿಥಿಗಳನ್ನು ಪಾಪ್ ಐಕಾನ್ ರಿಹಾನ್ನಾ ಅವರು ಸತ್ಕರಿಸಿದರು. ಎರಡು ಗಂಟೆಗಳ ಕಾರ್ಯಕ್ರಮಕ್ಕಾಗಿ ಅವರು 6 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 52 ಕೋಟಿ ರೂ. ಗೂ ಹೆಚ್ಚು ಸಂಭಾವನೆ ಪಡೆದದ್ದು ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು.

ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ 3 ದಿನಗಳ ಸಮಾರಂಭಕ್ಕೆ ಸುಮಾರು 1,260 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಡುಗೆ ಗುತ್ತಿಗೆಯವರಿಗೆ 200 ಕೋಟಿ ರೂ. ನೀಡಲಾಗಿದೆ ಎನ್ನಲಾಗಿದೆ.

ಫೋರ್ಬ್ಸ್ ಪ್ರಕಾರ 116 ಶತಕೋಟಿ ಡಾಲರ್ ಅಂದರೆ ಸುಮಾರು 9 ಲಕ್ಷ ಕೋಟಿ ರೂ. ಗೂ ಹೆಚ್ಚು ನಿವ್ವಳ ಮೌಲ್ಯದೊಂದಿಗೆ ಮುಖೇಶ್ ಅಂಬಾನಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು. ಅಂಬಾನಿ ಕುಟುಂಬವು ತಮ್ಮ ಕಿರಿಯ ಮಗನ ಮದುವೆಯ ಪೂರ್ವ ಸಂಭ್ರಮಕ್ಕಾಗಿ 1,200 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ. ಮಗನ ಮದುವೆಯನ್ನು ಅದ್ದೂರಿಯಾಗಿ ನೆರವೇರಿಸಲು ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಧಾರಾಳವಾಗಿ ಹಣ ಖರ್ಚು ಮಾಡಿದ್ದಾರೆ.


ಮದುವೆ ಖರ್ಚು ಎಷ್ಟಿರಬಹುದು?

ವರದಿಗಳ ಪ್ರಕಾರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ 1200- 1500 ಕೋಟಿ ರೂಪಾಯಿ ವೆಚ್ಚವಾಗಲಿದೆ. ದಂಪತಿಗಳು ಲಂಡನ್‌ನಲ್ಲಿ ವಿವಾಹವಾಗಲು ಸಿದ್ಧರಾಗಿದ್ದಾರೆ ಮತ್ತು ಅಬುಧಾಬಿಯಲ್ಲಿ ಸಂಗೀತ/ ಕಾಕ್‌ಟೈಲ್ ಕಾರ್ಯಕ್ರಮವನ್ನು ಸಹ ನಡೆಸಲು ಸಿದ್ಧರಾಗಿದ್ದಾರೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ಪೂರ್ವದಲ್ಲಿ ಹೂವಿನ ಅಲಂಕಾರವನ್ನು ಕಿಮ್ ಕಾರ್ಡಶಿಯಾನ್ ಮತ್ತು ಅವರ ಕುಟುಂಬ ನಡೆಸಿತ್ತು. ಕಾರ್ಯಕ್ರಮದ ಕೆಲಸಗಳನ್ನು ಹೆಸರುವಾಸಿಯಾದ ಜೆಫ್ ಲೀಥಮ್ ಅವರು ಮಾಡಿದ್ದಾರೆ. ಅವರು ಅಂಬಾನಿ ಮದುವೆಯಲ್ಲೂ ಅಲಂಕಾರವನ್ನು ಇವರಿಗೆ ನೀಡುವ ಸಾಧ್ಯತೆ ಇದೆ.


ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ 2023ರ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಈ ವರ್ಷ ಜುಲೈನಲ್ಲಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಇದು ಈ ವರ್ಷದ ಅತಿ ದೊಡ್ಡ, ಅತ್ಯಂತ ಐಷಾರಾಮಿ ಮತ್ತು ಅತಿರಂಜಿತ ವಿವಾಹಗಳಲ್ಲಿ ಒಂದಾಗಿದೆ ಎನ್ನಲಾಗುತ್ತಿದೆ.

Continue Reading
Advertisement
Neha Murder Case in hubblli
ಹುಬ್ಬಳ್ಳಿ8 mins ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ14 mins ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ICICI Bank
ದೇಶ15 mins ago

ICICI Bank: ಐಸಿಐಸಿಐ ಬ್ಯಾಂಕ್‌ ಗ್ರಾಹಕರೇ ಎಚ್ಚರ; 17 ಸಾವಿರ ಜನರ ಕಾರ್ಡ್‌ ಮಾಹಿತಿ ಸೋರಿಕೆ!

Kannada Serials TRP Lakshmi Nivasa In Top Amruthadhaare in Top 5
ಕಿರುತೆರೆ22 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

Lok Sabha Election 2024 No names of election officials in voter list Protest in front of the polling booth
Lok Sabha Election 202426 mins ago

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Reliance Smart Bazar
ವಾಣಿಜ್ಯ35 mins ago

Reliance Smart Bazar: ರಿಲಯನ್ಸ್ ಸ್ಮಾರ್ಟ್ ಬಜಾರ್ ಗ್ರಾಹಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಯಾವೆಲ್ಲ ವಸ್ತುಗಳಿಗೆ ಹೆಚ್ಚಿನ ಬೇಡಿಕೆ?

Ethnic Collection
ಫ್ಯಾಷನ್59 mins ago

Ethnic Collection: ‘ಹೀರಾಮಂಡಿ’ ವೆಬ್ ಸೀರಿಸ್‌ ಪ್ರೇರಿತ ಸಾಂಪ್ರದಾಯಿಕ ಫ್ಯಾಷನ್ ಕಲೆಕ್ಷನ್‌ ಬಿಡುಗಡೆ ಮಾಡಿದ ಅಜಿಯೋ

Self Harming in Bengaluru
ಬೆಂಗಳೂರು1 hour ago

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

Voting awareness by the newly married couple at the reception
ಕರ್ನಾಟಕ1 hour ago

Lok Sabha Election 2024: ಆರತಕ್ಷತೆಯಲ್ಲಿ ವಧು-ವರರಿಂದ ಮತದಾನ ಜಾಗೃತಿ

Tamannaah Bhatia and Sanjay Dutt
ಕ್ರೀಡೆ1 hour ago

IPL Streaming Case: ಏನಿದು ಐಪಿಎಲ್​ ಲೈವ್ ಸ್ಟ್ರೀಮಿಂಗ್ ಕೇಸ್​; ತಮನ್ನಾ,ಜಾಕ್ವೆಲಿನ್, ಸಂಜಯ್​ ದತ್​ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದೇಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ8 mins ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ14 mins ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ3 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20245 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌