Migrants Workers: ಬೆಂಗಳೂರಿಂದ ಒಡಿಶಾಗೆ ನಡೆದುಕೊಂಡೇ ಹೋದ ಮೂವರು ಕಾರ್ಮಿಕರು! ಕಾರಣವೇನು? - Vistara News

ದೇಶ

Migrants Workers: ಬೆಂಗಳೂರಿಂದ ಒಡಿಶಾಗೆ ನಡೆದುಕೊಂಡೇ ಹೋದ ಮೂವರು ಕಾರ್ಮಿಕರು! ಕಾರಣವೇನು?

Migrants Workers: ಬೆಂಗಳೂರಿನಲ್ಲಿ ಉದ್ಯೋಗದಾತರು ವೇತನವನ್ನು ಕೊಡದೇ ನೀಡುತ್ತಿದ್ದ ಚಿತ್ರಹಿಂಸೆ ತಾಳಲಾರದೇ ಮೂವರು ವಲಸಿಗ ಕಾರ್ಮಿಕರು ಒಡಿಶಾವರೆಗೂ ನಡೆದುಕೊಂಡೇ ಹೋಗಿದ್ದಾರೆ. ಸುಮಾರು ಒಂದು ಸಾವಿರ ಕಿ.ಮೀ ಅವರು ನಡೆದಿದ್ದಾರೆ.

VISTARANEWS.COM


on

3 migrant workers walks from Bangalore to Odisha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹೊಟ್ಟೆ ಪಾಡಿಗಾಗಿ ಬೆಂಗಳೂರಿಗೆ ಆಗಮಿಸಿದ್ದ ಮೂವರು ಕಾರ್ಮಿಕರ ಕಣ್ಣೀರಿನ ಕಥೆ ಇದು. ದೂರದ ಒಡಿಶಾದಿಂದ ತುತ್ತು ಅನ್ನಕ್ಕಾಗಿ ಬಂದಿದ್ದ ಅವರಿಗೆ, ಬೆಂಗಳೂರಿನಲ್ಲಿ ಕೆಲಸ ಮಾಡಿಸಿಕೊಂಡವರು ಸರಿಯಾಗಿ ವೇತನವನ್ನು ಕೊಡಲಿಲ್ಲ. ದುಡ್ಡು ಕೇಳಿದರೆ ಚಿತ್ರಹಿಂಸೆಯೇ ಉತ್ತರವಾಗಿತ್ತು. ಇದರಿಂದ ಬೇಸತ್ತು ಕೊನೆಗೂ ಆ ಮೂವರು ನಡೆದುಕೊಂಡೇ 1000 ಕಿ.ಮೀ. ದೂರದಲ್ಲಿರುವ ತಮ್ಮೂರಿಗೆ ಹೋಗಿದ್ದಾರೆ!(Migrants Workers). ಇದು ನಂಬಲು ಕಷ್ಟ ಆದರೂ ಇದು ನಿಜ.

ಯಾವುದು ಆಹಾರ, ಹಣವಿಲ್ಲದೇ ಮೂವರು ಕಾರ್ಮಿಕರು ಸತತವಾಗಿ ನಡೆದುಕೊಂಡೇ ಒಡಿಶಾದ ಕಾಳಹಂಡಿ ಜಿಲ್ಲೆಯ ಕೋರಾಪತ್ ತಲುಪಿದ್ದಾರೆ. ಆಲ್ಮೋಸ್ಟ್ ಅವರು ಸಾವಿರ ಕಿ.ಮೀ. ನಡೆದಿದ್ದಾರೆ. ಕಾಳಹಂಡಿಯ ಜಯಪಟ್ಟಣದ ತಿಂಗಳಕನ್ ಗ್ರಾಮದ ಕಟಾರ್ ಮಾಝಿ, ಬುಡು ಮಾಝಿ ಮತ್ತು ಭಿಕಾರಿ ಮಾಝಿ ಅವರು ಮನೆಗೆ ತೆರಳುತ್ತಿದ್ದಾಗ ಕೊರಾಪುಟ್‌ನ ಪೊಟ್ಟಂಗಿ ಬ್ಲಾಕ್‌ನ ಪಡಲಗುಡದಲ್ಲಿ ಸ್ಥಳೀಯರು ಅವರನ್ನು ಗುರುತಿಸಿ, ಕೇಳಿದಾಗ ಇಡೀ ವಿಷಯ ಬಹಿರಂಗವಾಗಿದೆ.

ಈ ಮೂವರು ವಲಸೆ ಕಾರ್ಮಿಕರ 12 ಸದಸ್ಯರ ಗುಂಪಿನ ಭಾಗವಾಗಿದ್ದು, ಎರಡು ತಿಂಗಳ ಹಿಂದೆ ಬಾಳುಗಾಂವ್‌ನ ಮಧ್ಯವರ್ತಿಯೊಬ್ಬನ ಸಹಾಯದಿಂದ ಬೆಂಗಳೂರಿಗೆ ಬಂದಿದ್ದರು. ಕಂಪನಿಯೊಂದರಲ್ಲಿ ಅವರಿಗೆ ಕೆಲಸ ದೊರೆಯಿತು. ಕಂಪನಿಯವರು ಸರಿಯಾಗಿ ಇವರಿಗೆ ವೇತನ ನೀಡುತ್ತಿರಲಿಲ್ಲ. ಕಾರ್ಮಿಕರು ತಮ್ಮ ಬಾಕಿಯನ್ನು ಕೇಳಿದಾಗ, ಅವರಿಗೆ ಥಳಿಸಲಾಯಿತು. ಚಿತ್ರಹಿಂಸೆ ನೀಡಲಾಯಿತು. ಇದರಿಂದ ರೋಸಿ ಹೋದ ಅವರು ತಮ್ಮ ಊರಿಗೆ ಹೋಗಲು ನಿರ್ಧರಿಸಿದರು.

ಇದನ್ನೂ ಓದಿ: ಮಂಗಳೂರಿಗೆ ಅಕ್ರಮ ವಲಸೆ; 518ಕ್ಕೂ ಹೆಚ್ಚು ಕಾರ್ಮಿಕರ ವಿಚಾರಣೆ ನಡೆಸಿದ ಪೊಲೀಸರು

ಹಣ ಇಲ್ಲದಿದ್ದರೂ ಮೂವರು ವಲಸಿಗ ಕಾರ್ಮಿಕರು ಮಾರ್ಚ್ 26ರಂದು ತಮ್ಮೂರಿಗೆ ನಡೆದುಕೊಂಡೇ ಹೋಗಲು ಆರಂಭಿಸಿದರು. ದಿನದ ಬಹುತೇಕ ಸಮಯ ಅವರು ನಡೆಯುತ್ತಲೇ ಇರುತ್ತಿದ್ದರು. ಶನಿವಾರ ವಿಝಿಯನಗರಮ್ ತಲುಪಿದ್ದಾರೆ. ಅಲ್ಲಿಂದ ಅವರು ಕೋರಾಪತ್‌ಗೆ ಹೋಗುತ್ತಿದ್ದರು. ಆಗ ಸ್ಥಳೀಯರು ಅವರನ್ನು ಕರೆದ ಮಾತನಾಡಿಸಿದ್ದಾರೆ. ಆಗ, ಇಡೀ ಕತೆ ಬಯಲಾಗಿದೆ. ಆಗ, ಕೆಲವು ಅಂಗಡಿಕಾರರು ಅವರಿಗೆ ಆಹಾರ ನೀಡಿದ್ದಾರೆ. ಒಡಿಶಾ ಮೋಟರಿಸ್ಟ್ ಅಸೋಶಿಯೇಷನ್ ಭಗವಾನ್ ಪದಲ್ ಅವರು 1,500 ಹಣವನ್ನು ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

Mahender Pratap Singh:ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌ 2019ರಲ್ಲಿ ನಡೆದ ಪುಲ್ವಾಮಾ ದಾಳಿ ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

VISTARANEWS.COM


on

Mahender Pratap Singh
Koo

ಹರಿಯಾಣ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆಯುತ್ತಿರುವ ಘಟನೆಗಳು ಆಗಾಗ ನಡೆಯುತ್ತಲೇ ಇವೆ. ಅದರಲ್ಲೂ ಕಾಂಗ್ರೆಸ್‌ ದಿನಕ್ಕೊಬ್ಬ ನಾಯಕರಂತೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿರುವ ಬೆನ್ನಲ್ಲೇ ಮತ್ತೊರ್ವ ಕಾಂಗ್ರೆಸ್‌ ನಾಯಕ ಪುಲ್ವಮಾ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಕ್ಕೆ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ. ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌(Mahender Pratap Singh) 2019ರಲ್ಲಿ ನಡೆದ ಪುಲ್ವಾಮಾ ದಾಳಿ(Pulwama attack) ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

ಮಹೇಂದರ್‌ ಪ್ರತಾಪ್‌ ಸಿಂಗ್‌ ಹೇಳಿದ್ದೇನು?

ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮಹೇಂದರ್‌ ಪ್ರತಾಪ್‌ ಸಿಂಗ್‌, ಪುಲ್ವಾಮಾ ದಾಳಿಯ ರಹಸ್ಯ ಈ ಬಯಲಾಗಿದೆ. ಬಹುದೊಡ್ಡ ದಾಳಿಯ ಸೂಚನೆ ಇರುವುದರಿಂದ ನಮ್ಮ ಯೋಧರು ರಸ್ತೆ ಮೂಲಕ ಬರುವುದು ಅಷ್ಟೊಂದು ಸುರಕ್ಷಿತ ಅಲ್ಲ. ಅವರನ್ನು ಏರ್‌ಲಿಫ್ಟ್‌ ಮಾಡುವ ಎಂದುಪ್ರಧಾನಿಗೆ ಮೊದಲೇ ಮನವಿ ಮಾಡಿದ್ದೆ ಎಂದು ಅವರದ್ದೇ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಈ ಹಿಂದೆಯೇ ಹೇಳಿದ್ದರು. ಹೀಗಾಗಿ ಅದು ಒಂದು ಬಿಜೆಪಿಯ ರಾಜಕೀಯ ಪಿತೂರಿ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಅದು ಎರಡನೇ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಡೆಸಿದ ಚುನಾವಣಾ ಸ್ಟಂಟ್‌. ಇದೀಗ ಅವರು ಮೂರನೇ ಬಾರಿ ಗೆಲುವಿಗೆ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ಮುಖಂಡ ವಿಷ್ಣುವರ್ಧನ್‌ ರೆಡ್ಡಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ಪುಲ್ವಾಮಾ ದಾಳಿಯಲ್ಲಿ ಭಾರತ 40ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ. ಇಡೀ ದೇಶವೇ ಪಾಕಿಸ್ತಾನದ ಕುತಂತ್ರದ ಬಗ್ಗೆ ಕೆಂಡ ಕಾರುತ್ತಿದೆ. ಆದರೆ ಲಜ್ಜೆಗೆಟ್ಟ ಕಾಂಗ್ರೆಸ್‌ ಮಾತ್ರ ಪಾಕಿಸ್ತಾನಕ್ಕೆ ಕ್ಲೀನ್‌ ಚಿನ್‌ ನೀಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

ಕೆಲ ದಿನಗಳ ಹಿಂದೆ ಪೂಂಚ್‌ನಲ್ಲಿ ನಡೆದಿದ್ದ ಉಗ್ರರ ದಾಳಿಯನ್ನು ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಚನ್ನಿ ಬಿಜೆಪಿಯ ಚುನಾವಣಾ ಸ್ಟಂಟ್‌ ಎಂದು ಕರೆಯುವ ಮೂಲಕ ವಿವಾದಕ್ಕೀಡಾಗಿದ್ದರು. ಇದಾದ ಬಳಿಕ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದರು. 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂಬುದಾಗಿ ಹೇಳಿದ್ದರು

Continue Reading

ದೇಶ

Kerala Governor: ರಾಮಲಲ್ಲಾನಿಗೆ ಶಿರಬಾಗಿ ನಮಸ್ಕರಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌; ವಿಡಿಯೋ ನೋಡಿ

Kerala Governor:ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರು ಅಯೋಧ್ಯೆಗೆ ತೆರಳಿ ರಾಮಲಲ್ಲಾ ದರ್ಶನ ಪಡೆಯುವ ಮೂಲಕ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಬುಧವಾರ ರಾಮಮಂದಿರಕ್ಕೆ ಭೇಟಿ ಕೊಟ್ಟ ಆರಿಫ್‌ ರಾಮಲಲ್ಲಾನ ಮೂರ್ತಿ ಎದುರು ತಲೆಬಾಗಿ ನಮಸ್ಕರಿಸಿದ್ದಾರೆ. ಅಲ್ಲದೇ ಹಿನ್ನೆಲೆಯಲ್ಲಿ ಜೈ ಶ್ರೀರಾಮ್‌ ಎಂಬ ನಾಮಸ್ಮರಣೆ ಕೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Kerala Governor
Koo

ಉತ್ತರಪ್ರದೇಶ: ಒಂದು ವರ್ಷದ ಹಿಂದೆ ತಮ್ಮನ್ನು ಹಿಂದೂ ಎಂದು ಕರೆಯರಿ ಎಂಬ ಹೇಳಿಕೆ ನೀಡಿ ಬಹಳ ಸುದಿಯಾಗಿದ್ದ ಕೇರಳ ರಾಜ್ಯಪಾಲ(Kerala Governor) ಆರಿಫ್‌ ಮೊಹಮ್ಮದ್‌ ಖಾನ್‌(Arif Mohammad Khan) ಅವರು ಅಯೋಧ್ಯೆ(Ayodhya)ಗೆ ತೆರಳಿ ರಾಮಲಲ್ಲಾ(Ramalalla)ನ ದರ್ಶನ ಪಡೆಯುವ ಮೂಲಕ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಬುಧವಾರ ರಾಮಮಂದಿರಕ್ಕೆ ಭೇಟಿ ಕೊಟ್ಟ ಆರಿಫ್‌ ರಾಮಲಲ್ಲಾನ ಮೂರ್ತಿ ಎದುರು ತಲೆಬಾಗಿ ನಮಸ್ಕರಿಸಿದ್ದಾರೆ. ಅಲ್ಲದೇ ಹಿನ್ನೆಲೆಯಲ್ಲಿ ಜೈ ಶ್ರೀರಾಮ್‌ ಎಂಬ ನಾಮಸ್ಮರಣೆ ಕೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಈ ವಿಡಿಯೋವನ್ನು ಸ್ವತಃ ಆರಿಫ್‌ ಮೊಹಮ್ಮದ್‌ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಜೈಶ್ರೀರಾಮ್‌ ನಾಮಸ್ಮರಣೆ ನಡೆವೆಯೇ ಅವರು ರಾಮಲಲ್ಲಾನ ಎದುದು ಮಂಡಿಯೂರಿ ನಮಸ್ಕರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇನ್ನು ಅಯೋಧ್ಯೆ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜನವರಿಯಲ್ಲಿನಾನು ಎರಡು ಬಾರಿ ಅಯೋಧ್ಯೆಗೆ ಭೇಟಿಕೊಟ್ಟಿದ್ದೇನೆ. ಅನೇಕ ಬಾರಿ ನಾನು ಇಲ್ಲಿಗೆ ಭೇಟಿಕೊಟ್ಟಿದ್ದೇನೆ. ಅಯೋಶ್ಯೆಗೆ ಬಂದು ಶ್ರೀರಾಮನನ್ನು ಪೂಜಿಸುವುದು ಇದು ಸಂತೋಷದ ವಿಚಾರ ಮಾತ್ರವಲ್ಲದೇ ಹೆಮ್ಮೆಯ ಸಂಗತಿ ಎಂದು ಬರೆದುಕೊಂಡಿದ್ದಾರೆ.

ಮೂಲತಃ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರೂ ಆರಿಫ್‌ ಹಿಂದೂ ಸಂಸ್ಕೃತಿ, ಪರಂಪರೆ ಬಗ್ಗೆ ಅತೀವ ನಂಬಿಕೆ ಮತ್ತು ಪ್ರೀತಿ ಇಟ್ಟುಕೊಂಡವರು. ಈ ಹಿಂದೆ ಆರ್ಯ ಸಮಾಜವು ತಮ್ಮನ್ನು ಹಿಂದೂ ಎಂದು ಕರೆಯಲೇಬೇಕು ಎಂದು ಆಗ್ರಹಿಸಿದ್ದರು. ಕೇರಳದ ತಿರುವನಂಥಪುರದ ಕೇರಳ ಹಿಂದೂಸ್ ಆಫ್ ನಾರ್ಥ್ ಅಮೆರಿಕ(ಕೆಎಚ್ಎನ್ಎ) ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿಮ್ಮ(ಆರ್ಯ ಸಮಾಜ) ನನ್ನದೊಂದು ಗಂಭೀರ ಆರೋಪವಿದೆ. ನೀವೇಕೆ ನನ್ನನ್ನು ಹಿಂದೂ ಎಂದು ಕರೆಯುವುದಿಲ್ಲ. ಹಿಂದೂ ಎಂಬುದನ್ನು ನಾನು ಧಾರ್ಮಿಕವಾಗಿ ಪರಿಗಣಿಸುವುದಿಲ್ಲ. ಅದೊಂದು ಭೌಗೋಳಿಕ ಸೂಚಕಪದವಾಗಿದೆ ಎಂದು ಹೇಳಿದರು.

ಭಾರತದಲ್ಲಿ ಹುಟ್ಟಿದವರು, ಇಲ್ಲೇ ವಾಸಿಸುವವರು, ಇಲ್ಲಿ ಹರಿಯುವ ನದಿಗಳು ನೀರು ಕುಡಿಯುವವರು ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳಬೇಕು. ಹಾಗಾಗಿ, ನೀವು ನನ್ನನ್ನೂ ಹಿಂದೂ ಎಂದೇ ಕರೆಯಬೇಕು ಎಂದು ಸೈಯರ್ ಸೈಯದ್ ಅಹ್ಮದ್ ಖಾನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಅಭಿಪ್ರಾಯಪಟ್ಟಿದ್ದರು. ವಸಾಹತುಶಾಹಿ ಯುಗದಲ್ಲಿ ಹಿಂದೂ, ಮುಸ್ಲಿಂ ಮತ್ತು ಸಿಖ್‌ನಂತಹ ಪರಿಭಾಷೆಗಳನ್ನು ಬಳಸುವುದು ಓಕೆ. ಏಕೆಂದರೆ ಬ್ರಿಟಿಷರು ನಾಗರಿಕರ ಸಾಮಾನ್ಯ ಹಕ್ಕುಗಳನ್ನು ನಿರ್ಧರಿಸಲು ಸಮುದಾಯಗಳನ್ನು ಆಧಾರವಾಗಿಸಿಕೊಂಡಿದ್ದರು. ಕೇರಳ ಸರ್ಕಾರದ ಜತೆಗಿನ ಸಂಘರ್ಷಕ್ಕೆ ಆಗಾಗ ಸುದ್ದಿಯಾಗುವ ಖಾನ್, ನಾನು ಹಿಂದೂ ಎಂದು ಹೇಳುವುದು ತಪ್ಪು ಎಂಬ ಭಾವನೆ ಮೂಡಿಸುವ ಷಡ್ಯಂತ್ರ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ:Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

ಕೇರಳ ಸರ್ಕಾರದ ಮತ್ತು ಆರಿಫ್‌ ನಡುವೆ ತೀವ್ರ ವೈಮನಸ್ಸು ಇದ್ದು, ವಿಶೇಷ ಬೆಳವಣಿಗೆಯೊಂದರಲ್ಲಿ ಅವರು ಸರ್ಕಾರದ ವಿರುದ್ಧ ನಡುರಸ್ತೆಯಲ್ಲಿ ಧರಣಿ ಕುಳಿತು ದೇಶದ ಗಮನ ಸೆಳೆದಿದ್ದರು.

Continue Reading

ದೇಶ

Air India Express: 30 ಸಿಬ್ಬಂದಿಯನ್ನು ವಜಾಗೊಳಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌; ಇಂದು 74 ವಿಮಾನಗಳ ಹಾರಾಟ ರದ್ದು

Air India Express: ಸಾಮೂಹಿಕ ಅನಾರೋಗ್ಯದ ರಜೆ ಹಾಕಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ನ 30 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಹಾರಾಟ ರದ್ದಾಗಿವೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಅನೇಕ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ಸಿಬ್ಬಂದಿ ಕೊರತೆಯಿಂದ ಗುರುವಾರ ಸುಮಾರು 74 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬುಧವಾರ ಸುಮಾರು 86 ವಿಮಾನಗಳ ಹಾರಾಟ ರದ್ದಾಗಿತ್ತು.

VISTARANEWS.COM


on

Air India Express
Koo

ನವದೆಹಲಿ: ಸಾಮೂಹಿಕ ಅನಾರೋಗ್ಯದ ರಜೆ (Sick Leave) ಹಾಕಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ (Air India Express) ವಿಮಾನದ 30 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಹಾರಾಟ ರದ್ದಾಗಿವೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಅನೇಕ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ಇಂದು ಸಂಜೆ 4 ಗಂಟೆಯೊಳಗೆ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಆಗಮಿಸದಿದ್ದರೆ ಶಿಸ್ತು ಕ್ರಮ ನಡೆಸಲಾಗುವುದು ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಕೊರತೆಯಿಂದ ಗುರುವಾರ ಸುಮಾರು 74 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬುಧವಾರ ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾದ ಅಂಗಸಂಸ್ಥೆಯಾದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ಸುಮಾರು 86 ವಿಮಾನಗಳ ಹಾರಾಟ ರದ್ದಾಗಿತ್ತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದರು.

30ಕ್ಕೂ ಹೆಚ್ಚು ಸಿಬ್ಬಂದಿಗೆ ನೀಡಲಾದ ವಜಾ ಪತ್ರದಲ್ಲಿ, ಸಾಮೂಹಿಕ ರಜೆಯು ʼಯಾವುದೇ ಸಮರ್ಥನೀಯ ಕಾರಣವಿಲ್ಲದೆ ಪೂರ್ವ ನಿಯೋಜಿತ ಮತ್ತು ಸಂಘಟಿತ ಕೆಲಸದಿಂದ ದೂರವಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತದೆʼ ಎಂದು ಉಲ್ಲೇಖಿಸಲಾಗಿದೆ. “ನಿಮ್ಮ ಪ್ರತಿಭಟನೆ ಕಾರಣದಿಂದ ಹೆಚ್ಚಿನ ಸಂಖ್ಯೆಯ ವಿಮಾನಗಳನ್ನು ರದ್ದುಗೊಳಿಸಬೇಕಾಯಿತು. ಇದು ಕಂಪನಿಯ ಪ್ರಯಾಣಿಕರಿಗೆ ಭಾರಿ ಅನಾನುಕೂಲತೆಯನ್ನು ಉಂಟು ಮಾಡಿದೆ. ನಿಮ್ಮ ಕೃತ್ಯವು ಸಾರ್ವಜನಿಕ ಹಿತಾಸಕ್ತಿಯನ್ನು ವಿರುದ್ಧವಾಗಿದೆ. ಜತೆಗೆ ಕಂಪನಿಗೆ ಗಂಭೀರ ವಿತ್ತೀಯ ನಷ್ಟವನ್ನು ಉಂಟು ಮಾಡಿದೆʼʼ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಚೆನ್ನೈಯಿಂದ ಕೋಲ್ಕತ್ತಾ, ಚೆನ್ನೈಯಿಂದ ಸಿಂಗಾಪುರ, ತಿರುಚ್ಚಿಯಿಂದ ಸಿಂಗಾಪುರ ಮತ್ತು ಜೈಪುರದಿಂದ ಮುಂಬೈಗೆ ತೆರಳು ವಿಮಾನಗಳು ರದ್ದಾಗಿವೆ ಎಂದು ಮೂಲಗಳು ತಿಳಿಸಿವೆ.

ಪ್ರತಿಭಟನೆಗೆ ಕಾರಣವೇನು?

ಟಾಟಾ ಗ್ರೂಪ್‌ ಜತೆಗೆ ಏರ್‌ ಇಂಡಿಯಾ ವಿಲೀನಗೊಂಡ ಬಳಿಕ ಸಿಬ್ಬಂದಿ ನಡುವೆ ತಾರತಮ್ಯ ಸಮಸ್ಯೆ ಉಂಟಾಗಿತ್ತು. ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ಕೆಲವೊಂದು ಸಿಬ್ಬಂದಿಗೆ ಕೆಲದರ್ಜೆಯ ನೌಕರಿಯನ್ನು ನೀಡಲಾಗುತ್ತಿದೆ. ಪರಿಹಾರ ಪ್ಯಾಕೇಜ್‌ನ ಪ್ರಮುಖ ಭಾಗಗಳನ್ನು ಮಾರ್ಪಡಿಸಲಾಗಿದೆ ಅಥವಾ ತೆಗೆದು ಹಾಕಲಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಬಲವಂತವಾಗಿ ಬಾಯಿಮುಚ್ಚಿಸಲಾಗುತ್ತಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ವಿಮಾನಯಾನ ಸಂಸ್ಥೆಯು ಪ್ರಸ್ತುತ ಎಐಎಕ್ಸ್ ಕನೆಕ್ಟ್ (ಹಿಂದಿನ ಏರ್ ಏಷ್ಯಾ ಇಂಡಿಯಾ) ಅನ್ನು ತನ್ನೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಯಲ್ಲಿದೆ. ಪೈಲಟ್ ಸಮಸ್ಯೆಗಳಿಂದಾಗಿ ಟಾಟಾ ಗ್ರೂಪ್ ಪೂರ್ಣ-ಸೇವಾ ವಾಹಕ ವಿಸ್ತಾರಾ ರದ್ದಾಗಿರುವ ಬೆನ್ನಲ್ಲೇ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಈ ಬಿಕ್ಕಟ್ಟು ಆರಂಭವಾಗಿದೆ. ಏರ್ ಇಂಡಿಯಾದೊಂದಿಗೆ ವಿಲೀನಗೊಳ್ಳುವ ಪ್ರಕ್ರಿಯೆ ಬಗ್ಗೆ ವಿಸ್ತಾರಾದಲ್ಲಿದ್ದ ಪೈಲಟ್‌ಗಳಲ್ಲೂ ಅಸಮಾಧಾನವು ಭುಗಿಲೆದ್ದಿತ್ತು. ಹೊಸ ಒಪ್ಪಂದಗಳನ್ನು ಅನುಸರಿಸಿ, ಪೈಲಟ್‌ಗಳು ವಿಮಾನಗಳನ್ನು ನಿರ್ವಹಿಸುವ ರೋಸ್ಟರ್‌ಗಳು ಮತ್ತು ಅವರ ವೇತನ ಪ್ಯಾಕೇಜ್‌ಗಳ ಅಂಶಗಳ ಬಗ್ಗೆ ಕಳವಳಗಳಿವೆ. ಈ ಎಲ್ಲ ಕಾರಣಗಳಿಂದ ಏರ್‌ ಇಂಡಿಯಾ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Air India | ಏರ್‌ ಇಂಡಿಯಾದಲ್ಲಿ ವಿಸ್ತಾರ, ಏರ್‌ ಏಷ್ಯಾ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಲೀನ ಶೀಘ್ರ

Continue Reading

ಕ್ರೀಡೆ

Viral News: ಐಪಿಎಲ್ ಪಂದ್ಯದ ವೇಳೆ ಕೇಜ್ರಿವಾಲ್ ಪರ ಘೋಷಣೆ; 6 ಮಂದಿ ಬಂಧನ

Viral News: ಆಮ್ ಆದ್ಮಿ ಪಕ್ಷದ ವಿದ್ಯಾರ್ಥಿ ಘಟಕ ಛಾತ್ರ ಯುವ ಸಂಘರ್ಷ(AAP workers) ಸಮಿತಿಯ ಸದಸ್ಯರು ಕೇಜ್ರಿವಾಲ್ ಬಂಧನವನ್ನು ಪ್ರತಿಭಟಿಸಿ ‘ಜೈಲ್ ಕಾ ಜವಾಬ್ ವೋಟ್ ಸೆ’ (ಬಂಧನಕ್ಕೆ ಉತ್ತರವನ್ನು ಮತದಿಂದ ನೀಡಿ) ಎಂಬ ಘೋಷಣೆಯ ಟೀ ಶರ್ಟ್‌ಗಳನ್ನು ಧರಿಸಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಇದು ಮಾತ್ರವಲ್ಲದೆ ಪಂದ್ಯದ ಸಂದರ್ಭ ಕೇಜ್ರಿವಾಲ್ ಬಂಧನ ಖಂಡಿಸಿ ಘೋಷಣೆಗಳನ್ನು ಕೂಗಿದ್ದರು.

VISTARANEWS.COM


on

Viral News
Koo

ನವದೆಹಲಿ: ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಮಂಗಳವಾರ ನಡೆದಿದ್ದ(IPL 2024) ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್​ ನಡುವಣ ಪಂದ್ಯದಲ್ಲಿ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಪರ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆಪ್ ಕಾರ್ಯಕರ್ತರನ್ನು ದಿಲ್ಲಿ ಪೊಲೀಸರು ಬಂಧಿಸಿರುವ ಘಟನೆ ತಡವಾಗಿ(Viral News) ಬೆಳಕಿಗೆ ಬಂದಿದೆ.

ಆಮ್ ಆದ್ಮಿ ಪಕ್ಷದ ವಿದ್ಯಾರ್ಥಿ ಘಟಕ ಛಾತ್ರ ಯುವ ಸಂಘರ್ಷ(AAP workers) ಸಮಿತಿಯ ಸದಸ್ಯರು ಕೇಜ್ರಿವಾಲ್ ಬಂಧನವನ್ನು ಪ್ರತಿಭಟಿಸಿ ‘ಜೈಲ್ ಕಾ ಜವಾಬ್ ವೋಟ್ ಸೆ’ (ಬಂಧನಕ್ಕೆ ಉತ್ತರವನ್ನು ಮತದಿಂದ ನೀಡಿ) ಎಂಬ ಘೋಷಣೆಯ ಟೀ ಶರ್ಟ್‌ಗಳನ್ನು ಧರಿಸಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಇದು ಮಾತ್ರವಲ್ಲದೆ ಪಂದ್ಯದ ಸಂದರ್ಭ ಕೇಜ್ರಿವಾಲ್ ಬಂಧನ ಖಂಡಿಸಿ ಘೋಷಣೆಗಳನ್ನು ಕೂಗಿದ್ದರು. ಇದೀಗ ಇವರ ವಿರುದ್ಧ ಸಾರ್ವಜನಿಕವಾಗಿ ಗದ್ದಲವನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ಸೂಕ್ತ ಕಾನೂನಾತ್ಮಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕವಷ್ಟೇ ಬಂಧಿತರನ್ನು ಬಿಡುಗಡೆಗೊಳಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಜಾರಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದ್ದು, ತಿಹಾರ ಜೈಲಿನಲ್ಲಿದ್ದಾರೆ. ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

ಅಷ್ಟೇ ಅಲ್ಲ, ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್‌ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ನ್ಯಾಯಾಂಗ ಬಂಧನವನ್ನು (Judicial custody) ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದ್ದು, ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನೂ ಕಾಯ್ದಿರಿಸಿದೆ.

Continue Reading
Advertisement
SSLC Result 2024 SSLC 2nd and 3rd exam aspirants to have special classes
ಕರ್ನಾಟಕ6 mins ago

SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLc Exam 2 time table
ಶಿಕ್ಷಣ11 mins ago

SSLC 2 Exam Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಡೇಟ್‌ ಫಿಕ್ಸ್‌; ವೇಳಾಪಟ್ಟಿ ಹೀಗಿದೆ

Mahender Pratap Singh
ದೇಶ22 mins ago

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

No one has failed in SSLC says Education Department
ಕರ್ನಾಟಕ25 mins ago

SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

SSLC Result 2024 what is the reason for most of the students fail in SSLC
ಕರ್ನಾಟಕ47 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Aavesham Releases On OTT Fahadh Faasil Hit Malayalam Film
ಮಾಲಿವುಡ್56 mins ago

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Sslc exam Result 2024
ಶಿಕ್ಷಣ58 mins ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

Sunita Williams
ವಿದೇಶ1 hour ago

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Ananya Panday Aditya Roy Kapur parties with Sara Ali Khan
ಬಾಲಿವುಡ್1 hour ago

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ47 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ58 mins ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 hour ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌