30 vs 24: ಈಗ ಅಸಲಿ ಆಟ ಶುರು! ಕಾಂಗ್ರೆಸ್ ಕೂಟದಲ್ಲಿ 24 ಪಕ್ಷಗಳಿದ್ದರೆ, ಬಿಜೆಪಿಯ ಎನ್‌ಡಿಎದಲ್ಲಿ 30 ಪಾರ್ಟಿ! - Vistara News

ಕರ್ನಾಟಕ

30 vs 24: ಈಗ ಅಸಲಿ ಆಟ ಶುರು! ಕಾಂಗ್ರೆಸ್ ಕೂಟದಲ್ಲಿ 24 ಪಕ್ಷಗಳಿದ್ದರೆ, ಬಿಜೆಪಿಯ ಎನ್‌ಡಿಎದಲ್ಲಿ 30 ಪಾರ್ಟಿ!

30 vs 24: ಜುಲೈ 17, ಸೋಮವಾರ ಬೆಂಗಳೂರಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ ನಡೆದರೆ, ಜುಲೈ 18 ಮಂಗಳವಾರ ದಿಲ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷಗಳ ಸಭೆಯನ್ನು ಆಯೋಜಿಸಲಾಗಿದೆ. ಇದರೊಂದಿಗೆ ಎಲ್ಲ ಪಕ್ಷಗಳು 2024ರ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಿದಂತಾಗಿದೆ(Opposition Meet).

VISTARANEWS.COM


on

Modi and Rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ (2024 Lok Sabha Election) ರಾಜಕೀಯ ಪಕ್ಷಗಳು (Political Party) ತಾಲೀಮು ಶುರು ಮಾಡಿವೆ. ವಿಶೇಷವಾಗಿ ಕಾಂಗ್ರೆಸ್ (Congress) ಮತ್ತು ಬಿಜೆಪಿಗಳೆರಡೂ (BJP) ತಮ್ಮ ಒಕ್ಕೂಟಗಳನ್ನು ಬಲಪಡಿಸುವ ಪ್ರಯತ್ನಕ್ಕೆ ಹಾಕಿವೆ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಎರಡನೇ ಸಭೆ ಸೋಮವಾರ(ಜುಲೈ 17) ಬೆಂಗಳೂರಲ್ಲಿ (Bengaluru) ನಡೆಯಲಿದೆ(Opposition Meet). ಇದೇ ವೇಳೆ, ಮಂಗಳವಾರ (ಜುಲೈ 18) ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಸಭೆಯನ್ನು (NDA Meet) ಆಯೋಜಿಸಲಾಗಿದೆ. ಈಗಿರುವ ಮಾಹಿತಿಗಳ ಪ್ರಕಾರ, ಬಿಜೆಪಿ ನೇತೃತ್ವದ ಎನ್‌ಡಿಎದಲ್ಲಿ 30 ಹಾಗೂ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಕೂಟದಲ್ಲಿ 24 ಪಕ್ಷಗಳಿವೆ. ಈ ಎಲ್ಲ ಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು, ಒಗ್ಗಟ್ಟಿನ ಮೂಲಕ ಚುನಾವಣೆಯನ್ನು ಎದುರಿಸಲು ಕಾರ್ಯತಂತ್ರವನ್ನು ಹೆಣೆಯುತ್ತಿವೆ. ಈ ಮಧ್ಯೆ, ಜುಲೈ 20ರಿಂದ ಮಳೆಗಾಲದ ಸಂಸತ್ ಅಧಿವೇಶನ ಆರಂಭವಾಗುವುದರಿಂದ ಯಾವ ಪಕ್ಷ ಯಾವ ಕೂಟದಲ್ಲಿದೆ ಎಂಬುದು ಲೆಕ್ಕ ಸಿಗಲಿದೆ(30 vs 24).

ಮಂಗಳವಾರ ನಡೆಯಲಿರುವ ಎನ್‌ಡಿಎ ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ವಹಿಸಲಿದ್ದಾರೆ. ಈ ವೇಳೆ, ಪ್ರಧಾನಿ ನರೇಂದ್ರ ಮೋದಿ ಕೂಡ ಹಾಜರು ಇರಲಿದ್ದಾರೆ. ತಮ್ಮ ಹಳೆಯ ಮೈತ್ರಿ ಪಕ್ಷಗಳು ಮಾತ್ರವಲ್ಲದೇ ಬಿಜೆಪಿ ಹೊಸ ಪಕ್ಷಗಳನ್ನೂ ಕೂಟಕ್ಕೆ ಆಹ್ವಾನಿಸಿದೆ. ಈ ಸಭೆಯ ದಿಲ್ಲಿಯ ಅಶೋಕ ಹೊಟೇಲ್‌ನಲ್ಲಿ ನಡೆಯಲಿದೆ. ಈಗ ಎನ್‌ಡಿಯ ತೆಕ್ಕೆಗೆ ಸರಿಯುತ್ತಿರುವ ಎಲ್ಲ ಪಕ್ಷಗಳು ಸಂಸತ್ತಿನಲ್ಲಿ ತಮ್ಮ ಪ್ರತಿನಿಧಿಗಳನ್ನು ಹೊಂದಿಲ್ಲ.

ಬಿಹಾರದಿಂದ ಚಿರಾಗ್ ಪಾಸ್ವಾನ್ ಲೋಕಜನಶಕ್ತಿ ಪಾರ್ಟಿ(ರಾಮ್ ವಿಲಾಸ್ ಪಾಸ್ವಾನ್), ಜಿತನ್ ರಾಮ್ ಮಾಂಜ್ಝಿ ಹಿಂದೂಸ್ತಾನಿ ಅವಾಮಿ ಮೋರ್ಚಾ, ಉಪೇಂದ್ರ ಸಿಂಗ್ ಖುಷವಾ ರಾಷ್ಟ್ರೀಯ ಲೋಕ ಸಮತಾ ಪಾರ್ಟಿ ಮತ್ತು ವಿಕಾಸಶೀಲ ಇನ್ಸಾನ್ ಪಾರ್ಟಿಯ ಮುಕೇಶ್ ಸಹಾನಿ ಅವರಿಗೆ ಆಹ್ವಾನ ನೀಡಲಾಗಿದೆ. ಈ ನಾಯಕರ ಎಲ್ಲ ಪಕ್ಷಗಳು ಎನ್‌ಡಿಎ ಸೇರ್ಪಡೆಯಾಗಲಿವೆ.

ಅಖಿಲೇಶ್ ಯಾದವ್ ಅವರ ಮಾಜಿ ಮೈತ್ರಿ ಪಕ್ಷ ಸುಹೇಲ್ದೇವ್ ಭಾರತೀಯ ಸಮಾಜ ಪಾರ್ಟಿಯ ಓಂ ಪ್ರಕಾಶ್ ರಾಜಭರ್ ಎನ್‌ಡಿಎ ಸೇರಿದ್ದಾರೆ. ಸಮಾಜಿವಾದಿ ಪಾರ್ಟಿಯ ಎಂಎಲ್ಎ ದಾರಾ ಸಿಂಗ್ ಚೌಹಾನ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯನ್ನು ಅಮಿತ್ ಶಾ ನೇತೃತ್ವದಲ್ಲಿ ಸೇರ್ಪಡೆಯಾಗಿದ್ದಾರೆ.

ಎನ್ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿ ಮತ್ತು ಬಾದಲ್ ಕುಟುಂಬ ಹಿಡಿತದಲ್ಲಿರುವ ಶಿರೋಮಣಿ ಅಕಾಲಿ ದಳ ಎನ್‌ಡಿಎ ಸೇರ್ಪಡೆಯಾಗಲಿವೆ ಎಂಬ ಊಹೆಗಳಿವೆ. ಆದರೂ, ಬಿಜೆಪಿ ಈ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ ಎನ್ನಲಾಗುತ್ತಿದೆ. ಪಂಜಾಬ್‌ನಲ್ಲಿ ಬಿಜೆಪಿ ಏಕಾಂಗಿಯಾಗಿ ಮತ್ತು ಆಂಧ್ರ ಪ್ರದೇಶದಲ್ಲಿ ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷದೊಂದಿಗೆ ಕಣಕ್ಕಿಳಿಯಲ ನಿರ್ಧರಿಸಿದೆ.

ಎನ್‌ಡಿಯ ಪಾಳಯದಲ್ಲಿರುವ 30 ಪಕ್ಷಗಳು ಯಾವುವು?

ಬಿಜೆಪಿ, ಎಐಎಡಿಎಂಕೆ, ಶಿವಸೇನೆ(ಶಿಂಧೆ ಬಣ), ನ್ಯಾಷನಲ್ ಪೀಪಲ್ಸ್ ಪಾರ್ಟಿ, ನ್ಯಾಷನಲ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿ, ಸಿಕ್ಕಿಮ್ ಕ್ರಾಂತಿಕಾರಿ ಮೋರ್ಚಾ, ಜನ ನಾಯಕ ಜನತಾ ಪಾರ್ಟಿ, ಇಂಡಿಯಾ ಮಕ್ಕಳ್ ಕಲ್ವಿ ಮುನ್ನೇತ್ರ ಕಳಗಂ, ಆಲ್ ಜಾರ್ಖಂಡ್ ಸ್ಟೂಡೆಂಟ್ ಯೂನಿಯನ್, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ, ಮಿಜೋ ನ್ಯಾಷನಲ್ ಫ್ರಂಟ್, ತಮಿಲ್ ಮಕ್ಕಳ್ ಕಚ್ಚಿ, ಐಪಿಎಫ್‌ಟಿ, ಬೋಡೋ ಪೀಪಲ್ಸ್ ಪಾರ್ಟಿ, ಪತಳಿ ಮಕ್ಕಳ್ ಕಚ್ಚಿ, ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿ, ಅಪ್ನಾದಳ್, ಅಸ್ಸಾಮ್ ಗಣ ಪರಿಷತ್, ರಾಷ್ಟ್ರೀಯ ಲೋಕ ಜನಶಕ್ತಿ ಪಾರ್ಟಿ, ನಿಷಾದ್ ಪಾರ್ಟಿ, ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬ್ರಲ್, ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಪುದುಚೆರಿ, ಶಿರೋಮಣಿ ಅಕಾಲಿ ದಳ ಸಂಯುಕ್ತ, ಜನಸೇನಾ.

ಈ ಪಕ್ಷಗಳ ಜತೆಗೆ ಹೊಸದಾಗಿ ಎನ್‌ಸಿಪಿ(ಅಜಿತ್ ಪವಾರ್ ಬಣ), ಲೋಕ ಜನಶಕ್ತಿ ಪಾರ್ಟಿ(ರಾಮ್ ವಿಲಾಸ್ ಪಾಸ್ವಾನ್), ಹಿಂದೂಸ್ತಾನಿ ಅವಾಮಿ ಲೀಗ್, ರಾಷ್ಟ್ರೀಯ ಲೋಕ ಸಮತಾ ಪಾರ್ಟಿ, ವಿಕಾಸಶೀಲ ಇನ್ಸಾನ್ ಪಾರ್ಟಿ, ಸುಹೇಲ್ದೇವ್ ಭಾರತೀಯ ಸಮಾಜ ಪಾರ್ಟಿ ಕೂಡ ಎನ್‌ಡಿಎ ಸೇರ್ಪಡೆಯಾಗಲಿವೆ.

ಈ ಸುದ್ದಿಯನ್ನೂ ಓದಿ: Opposition Meet: ಕೇಂದ್ರದ ‘ದಿಲ್ಲಿ ಸುಗ್ರೀವಾಜ್ಞೆ’ಗೆ ಕಾಂಗ್ರೆಸ್ ವಿರೋಧ; ಖುಷಿಯಾದ ಆಪ್!

ಕಾಂಗ್ರೆಸ್ ನೇತೃತ್ವದ ಕೂಟದಲ್ಲಿ ಯಾವೆಲ್ಲ ಪಕ್ಷಗಳಿವೆ?

ಕಾಂಗ್ರೆಸ್, ಟಿಎಂಸಿ, ಸಿಪಿಐ, ಸಿಪಿಐ(ಎಂ), ಎನ್‌ಸಿಪಿ(ಶರದ್ ಪವಾರ್ ಬಣ), ಸಂಯುಕ್ತ ಜನತಾ ದಳ, ಡಿಎಂಕೆ, ಆಪ್, ಜೆಎಂಎಂ, ಶಿವಸೇನಾ( ಉದ್ಧವ್ ಠಾಕ್ರೆ ಬಣ), ರಾಷ್ಟ್ರೀಯ ಜನತಾ ದಳ, ಸಮಾಜವಾದಿ ಪಾರ್ಟಿ, ನಾಷನಲ್ ಕಾನ್ಫರೆನ್ಸ್, ಪಿಡಿಪಿ, ಸಿಪಿಐ(ಎಂಎಲ್), ಆರ್‌ಎಲ್‌ಡಿ, ಐಯುಎಂಎಲ್, ಕೇರಳ ಕಾಂಗ್ರೆಸ್ (ಎಂ), ಎಂಡಿಎಂಕೆ, ವಿಸಿಕೆ, ಆರ್‌ಎಸ್‌ಪಿ, ಕೇರಳ ಕಾಂಗ್ರೆಸ್, ಕೆಎಂಡಿಕೆ, ಎಐಎಫ್‌ಬಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಮೇ 25ರಂದು ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ (Rain News) ಇದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Driving Bus With Umbrella: ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವ ವಿಷಯ ಬೆಳಕಿಗೆ ಬಂದಿದೆ. ಹೀಗಾಗಿ ಚಾಲಕ, ನಿರ್ವಾಹಕಿಯನ್ನು ಅಮಾನತು ಮಾಡಲಾಗಿದೆ.

VISTARANEWS.COM


on

Koo

ಧಾರವಾಡ: ಸಾರಿಗೆ ಬಸ್‌ನಲ್ಲಿ ಚಾಲಕ ಛತ್ರಿ ಹಿಡಿದು ಚಾಲನೆ ಮಾಡಿದ್ದ ವಿಡಿಯೊ ವೈರಲ್ (Driving Bus With Umbrella) ಆದ ಹಿನ್ನೆಲೆಯಲ್ಲಿ ಕಳಪೆ ನಿರ್ವಹಣೆ ಬಗ್ಗೆ ಸಾರಿಗೆ ನಿಗಮದ ವಿರುದ್ಧ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದರು. ಆದರೆ, ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆ ಮಾಡಿದಾಗ, ವಿಡಿಯೋ ಅಸಲಿಯತ್ತು ಹೊರಬಿದ್ದಿದೆ. ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವ ವಿಷಯ ಬೆಳಕಿಗೆ ಬಂದಿದೆ. ಹೀಗಾಗಿ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ ಅಮಾನತು ಮಾಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸೋರುತಿಹುದು ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್ ಎಂದು ವಿಡಿಯೊ ವೈರಲ್ ಆಗಿತ್ತು. ಇದರಿಂದ ಸಾರಿಗೆ ನಿಗಮದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆ ಮಾಡಿದಾಗ ಅಸಲೀ ವಿಷಯ ಬೆಳಕಿಗೆ ಬಂದಿದೆ. ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವುದು ತಿಳಿದುಬಂದಿದೆ.

ಕೊಡೆ ಹಿಡಿದು ಡ್ರೈವರ್ ಚಾಲನೆ ಮಾಡುತ್ತಿದ್ದರೆ ನಿರ್ವಾಹಕಿ ವಿಡಿಯೊ ಸೆರೆಹಿಡಿದಿದ್ದಾಳೆ. ಪ್ರಕರಣ ಸಂಬಂಧ ಚಾಲಕ ಹಣಮಂತ್ ಕಿಲ್ಲೇದಾರ್ ಹಾಗೂ ನಿರ್ವಾಹಕಿ ಎಚ್. ಅನಿತಾ ಅವರನ್ನು ಅಮಾನತು ಮಾಡಿ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ ಎಂಬ ವಿಡಿತೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ನಲ್ಲಿ ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ, ಕರ್ತವ್ಯದ ವೇಳೆ ರೀಲ್ಸ್‌ ಮಾಡಲು ಬಸ್‌ ಬಳಕೆ ಮಾಡಿಕೊಂಡಿದ್ದರಿಂದ ಚಾಲಕ, ನಿರ್ವಾಹಕಿ ವಿರುದ್ಧ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಂಡಿದ್ದಾರೆ.

Continue Reading

ಬೆಂಗಳೂರು

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

ಭಾರತದಲ್ಲಿ ಇಂದೋರ್ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಗಳಿಸಿದೆ. ನಮ್ಮ ಹಲವು ಹಿಂದಿನ ಸಚಿವರು ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿಯೂ ಇದ್ದಾರೆ. ಏನೇನು ಕಲಿತುಕೊಂಡು ಬಂದಿದ್ದಾರೆ, ಕಲಿತದ್ದನ್ನು ಅನ್ವಯಿಸಲಾಗಿದೆಯೇ ಇಲ್ಲವೇ ಎಂಬುದು ತಿಳಿಯದು. ಹಾಗೆ ನೋಡಿದರೆ ಉತ್ತರ ಭಾರತದ ಹೆಚ್ಚಿನ ನಗರಗಳಿಗಿಂತ ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಉತ್ತಮವಾಗಿದೆ. ಇನ್ನಷ್ಟು ಉತ್ತಮ ಆಗಬೇಕಿದೆ.

VISTARANEWS.COM


on

Vistara editorial
Koo

ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಸ ವಿಲೇವಾರಿ (waste disposal) ಸಮಸ್ಯೆ ಬೃಹತ್‌ ಆಗಿ ಬೆಳೆದು ನಿಂತಿದೆ. ಬಿಬಿಎಂಪಿಯಲ್ಲಿ (BBMP) ಸಾಕಷ್ಟು ಎಂಜಿನಿಯರ್‌ಗಳು (Engineers) ಇದಕ್ಕಾಗಿಯೇ ಇದ್ದರೂ ಇದನ್ನು ನಿರ್ವಹಿಸುವುದು ಸವಾಲೇ ಆಗಿದೆ. ಹೀಗಾಗಿ, ರಾಜ್ಯ ಸರ್ಕಾರದಿಂದ ಕಸ ವಿಲೇವಾರಿಗೆ ಇದೇ ಜೂನ್‌ 1ರಿಂದ ಹೊಸ ಯೋಜನೆ ಜಾರಿಯಾಗುತ್ತಿದೆ. ಘನ ತ್ಯಾಜ್ಯ ವಿಲೇವಾರಿಗಾಗಿಯೇ (garbage disposal) ಒಂದು ಕಂಪನಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಿದೆ. “ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ” ಹೆಸರಿನ ಈ ಕಂಪನಿ ಘನತ್ಯಾಜ್ಯ ನಿರ್ವಹಣೆಯನ್ನು ಕೈಗೆತ್ತಿಕೊಳ್ಳಲಿದ್ದು, ಇನ್ನು ಮುಂದೆ ನಗರದಲ್ಲಿ ಕಸದ ಸಮಸ್ಯೆ ಕಂಡುಬಂದರೆ ಅದನ್ನು ಈ ಕಂಪನಿಯ ಮುಂದೆ ಪ್ರಶ್ನಿಸಬೇಕಾಗಲಿದೆ. ಒಂದು ರೀತಿಯಿಂದ ಇದಕ್ಕೊಂದು ಪ್ರತ್ಯೇಕ ವ್ಯವಸ್ಥೆ ಇರುವುದು ಒಳ್ಳೆಯದು.

ರಾಜ್ಯ ಸರ್ಕಾರ ಹಾಗೂ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ಜಂಟಿಯಾಗಿ ಈ ಸಂಸ್ಥೆಯನ್ನು ನಿರ್ಮಾಣ ಮಾಡಿವೆ. ಇನ್ನು ಮುಂದೆ ಈ ಕಂಪನಿಯಿಂದಲೇ ಕಸ ಸಂಗ್ರಹಣೆ, ಸಾಗಾಣಿಕೆ ಹಾಗೂ ಹಾಗೂ ವಿಲೇವಾರಿ ಕಾರ್ಯ ನಡೆಯಲಿದೆ. ಜೂನ್ 1ರಿಂದ ಮನೆಮನೆಯಿಂದ ಅಟೋದಲ್ಲಿ ಕಸ ಸಂಗ್ರಹಣೆ, ಸಂಗ್ರಹಿಸಿದ ಕಸವನ್ನು ಟಿಪ್ಪರ್ ಲಾರಿಗಳ ಮೂಲಕ ಕಸದ ಸಂಸ್ಕರಣಾ ಘಟಕ ಅಥವಾ ಕ್ಯಾರಿಗಳಿಗೆ ಸಾಗಿಸುವುದು ಈ ಸಂಸ್ಥೆಯ ಹೊಣೆ. ಬಿಬಿಎಂಪಿ ಅಡಿಯಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ನಿರ್ವಹಿಸುತ್ತಿರುವ ಅಟೋ, ಟಿಪ್ಪರ್, ಕಾಂಪ್ಯಾಕ್ಟರ್ ಚಾಲಕರು, ಸಹಾಯಕರು ಕಂಪನಿ ವ್ಯಾಪ್ತಿಗೆ ಬರಲಿದ್ದಾರೆ. ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ವಾರ್ಡ್‌ ಮಟ್ಟದ ಎಂಜಿನಿಯರ್‌ಗಳು, ಸಿಬ್ಬಂದಿಗಳು ಹಾಗೂ ಮಾರ್ಷಲ್‌ಗಳು ಕಂಪನಿ ಅಧೀನಕ್ಕೆ ಬರಲಿದ್ದಾರೆ. ಈ ಅಧಿಕಾರಿಗಳ, ಸಿಬ್ಬಂದಿಗಳ ವೇತನವನ್ನು ಕಂಪನಿಯೇ ಪಾವತಿ ಮಾಡಲಿದೆ. ನಗರದಲ್ಲಿ ಇರುವ 7 ಕಸ ಸಂಸ್ಕರಣಾ ಘಟಕಗಳು ಕಂಪನಿ ವ್ಯಾಪ್ತಿಗೆ ಬರಲಿವೆ. ಪೌರ ಕಾರ್ಮಿಕರು, ಗುತ್ತಿಗೆ ಪೌರಕಾರ್ಮಿಕರು ಬಿಬಿಎಂಪಿ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇವರಿಗೆ ಬಿಬಿಎಂಪಿಯಿಂದ ವೇತನ ದೊರೆಯಲಿದೆ. ಪೌರಕಾರ್ಮಿಕರು ಕೇವಲ ಕಸ ಗುಡಿಸುವುದು, ಸಾರ್ವಜನಿಕ ಸ್ಥಳಗಳನ್ನು ಕ್ಲೀನ್ ಮಾಡುವುದು ಮಾಡಲಿದ್ದಾರೆ. ಘನತ್ಯಾಜ್ಯ ಇಲಾಖೆಯನ್ನು ಆರೋಗ್ಯ ಇಲಾಖೆ ಜೊತೆ ವಿಲೀನ ಮಾಡಿ ಅದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಆರೋಗ್ಯ ಮತ್ತು ನೈರ್ಮಲ್ಯ ಇಲಾಖೆ ಎಂದು ಕರೆಯಲಾಗುತ್ತದೆ.

2012ರಿಂದಲೇ ಘನತ್ಯಾಜ್ಯ ನಿರ್ವಹಣೆ ಬಗ್ಗೆ ಹೈಕೋರ್ಟ್, ಬಿಬಿಎಂಪಿಯ ಕಿವಿ ಹಿಂಡುತ್ತ ಬಂದಿದೆ. ಬೆಂಗಳೂರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಯ ಸಾಮರ್ಥ್ಯ ವೃದ್ಧಿಸಲು ಮತ್ತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳುವಂತೆ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ಇತ್ತೀಚೆಗೆ ಸೂಚನೆ ನೀಡಿತ್ತು. ಅದರನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ.

ಭಾರತದಲ್ಲಿ ಇಂದೋರ್ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಗಳಿಸಿದೆ. ನಮ್ಮ ಹಲವು ಹಿಂದಿನ ಸಚಿವರು ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿಯೂ ಇದ್ದಾರೆ. ಏನೇನು ಕಲಿತುಕೊಂಡು ಬಂದಿದ್ದಾರೆ, ಕಲಿತದ್ದನ್ನು ಅನ್ವಯಿಸಲಾಗಿದೆಯೇ ಇಲ್ಲವೇ ಎಂಬುದು ತಿಳಿಯದು. ಹಾಗೆ ನೋಡಿದರೆ ಉತ್ತರ ಭಾರತದ ಹೆಚ್ಚಿನ ನಗರಗಳಿಗಿಂತ ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಉತ್ತಮವಾಗಿದೆ. ಇನ್ನಷ್ಟು ಉತ್ತಮ ಆಗಬೇಕಿದೆ. ಆದರೆ ಸಂಸ್ಥೆ ಬದಲಾಯಿಸಿದ ಮಾತ್ರಕ್ಕೆ ನಿರ್ವಹಣೆ ಉತ್ತಮಗೊಳ್ಳುತ್ತದೆ ಎಂದೇನಿಲ್ಲ. ಕಂಪನಿಗೂ ಬಿಬಿಎಂಪಿಗೂ ಹಂಚಿಕೊಳ್ಳಲಾದ ಕಾರ್ಯಗಳಲ್ಲಿ ಭಿನ್ನಮತ ತಲೆದೋರಬಾರದು. ಕಸದ ಸಮಸ್ಯೆಯಿಂದ ಬಿಬಿಎಂಪಿ ಜಾರಿಕೊಳ್ಳಲು ಇದು ನೆಪ ಆಗಬಾರದು. ಈ ಬದಲಾವಣೆಗಳಿಂದ ಮುಂದಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಕಸದ ಸಮಸ್ಯೆ ಇರವುದಿಲ್ಲವೇ, ಗಾರ್ಬೆಜ್ ಸಿಟಿ ಗಾರ್ಡನ್ ಸಿಟಿ ಆಗಲಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರ ಕಾದು ನೋಡಬೇಕಿದೆ.

ಇದನ್ನೂ ಓದಿ: Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Continue Reading

ಕ್ರೈಂ

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Electric Shock: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ಅವಘಡ ನಡೆದಿದೆ. ಅರೆ ಬರೆ ವಿದ್ಯುತ್ ಕಾಮಗಾರಿ ನಡೆಸಿದ್ದರಿಂದ ವಿದ್ಯುತ್‌ ಸ್ಪರ್ಶಿಸಿ ಬಾಲಕ ಕೊನೆಯುಸಿರೆಳೆದಿದ್ದಾನೆ.

VISTARANEWS.COM


on

Electric Shock
Koo

ರಾಯಚೂರು: ಬೋರ್‌ ವೆಲ್ ಬಳಿ ಕುಡಿಯುವ ನೀರು ತರಲು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿರುವ ಘಟನೆ (Electric Shock) ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ನಡೆದಿದೆ. ಬೋರ್ ವೆಲ್ ಬಳಿ ಅರೆ ಬರೆ ವಿದ್ಯುತ್ ಕಾಮಗಾರಿ ನಡೆಸಿದ್ದರಿಂದ ವಿದ್ಯುತ್‌ ಸ್ಪರ್ಶಿಸಿ ಬಾಲಕ ಕೊನೆಯುಸಿರೆಳೆದಿದ್ದಾನೆ.

ಬಸವರಾಜ್ (2) ಮೃತ ಬಾಲಕ. ಬೋರ್ ವೆಲ್ ಬಳಿ ಅರೆ ಬರೆ ವಿದ್ಯುತ್ ಕಾಮಗಾರಿ ಮಾಡಿದ್ದರಿಂದ ವಿದ್ಯುತ್‌ ತಂತಿಗಳು ಕೆಳಗೆ ನೇತಾಡುತ್ತಿದ್ದವು. ಈ ವೇಳೆ ಬಾಲಕ ಬೋರ್‌ ವೆಲ್‌ ಬಳಿ ಹೋದಾಗ ವಿದ್ಯುತ್‌ ತಗುಲಿತ್ತು. ನಂತರ ಆತನನ್ನು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಾಲಕ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಪಂಚಾಯಿತಿ ಸಿಬ್ಬಂದಿ ಹಾಗೂ ಪಿಡಿಒ ಎಡವಟ್ಟಿನಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಬಾಲಕನ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕೃಷ್ಣಾ ನದಿಯಲ್ಲಿ ಬಾಲಕನನ್ನು ಎಳೆದೊಯ್ದ ಮೊಸಳೆ

ರಾಯಚೂರು: ಕೃಷ್ಣಾ ನದಿಯಲ್ಲಿ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದಿದ್ದ ಬಾಲಕನನ್ನು ಮೊಸಳೆ ಬಲಿ (Crocodile Attack) ಪಡೆದಿದೆ. ಗಂಜಳ್ಳಿ ಗ್ರಾಮದ ವಿಶ್ವ (12) ಮೃತ ಬಾಲಕ. ಸ್ಥಳಕ್ಕೆ ರಾಯಚೂರು ಗ್ರಾಮಾಂತರ ಪೋಲಿಸರು ದೌಡಾಯಿಸಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ | Murder Attempt: ಮಗು ಹೆಣ್ಣೋ ಗಂಡೋ ನೋಡಲು ಹೆಂಡತಿಯ ಹೊಟ್ಟೆ ಸೀಳಿದವನಿಗೆ ಜೀವಾವಧಿ ಶಿಕ್ಷೆ!

ಮಹಿಳೆ ಕಾಲಿನ ಮೇಲೆ ಹರಿದ ಬಸ್ ಚಕ್ರ

ವಿಜಯಪುರ: ಬಸ್ ಹತ್ತುವ ವೇಳೆ ಆಯುತಪ್ಪಿ ಬಿದ್ದ ಮಹಿಳೆ ಕಾಲಿನ ಮೇಲೆ ಬಸ್ ಚಕ್ರ ಹರಿದ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಕಾಲಿಗೆ ತೀವ್ರ ಗಾಯಗಳಾಗಿವೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸಾಲುಟಗಿ ಗ್ರಾಮದ ಸಾವಿತ್ರಿಬಾಯಿ ಬಿರಾದಾರ ಗಾಯಗೊಂಡವರು. ವಿಜಯಪುರದಿಂದ ಇಂಡಿಗೆ ತೆರಳುವ KA 28 F 2492 ಸಂಖ್ಯೆಯ ಬಸ್ ಹರಿದಿದ್ದರಿಂದ ಮಹಿಳೆ ಗಾಯಗೊಂಡಿದ್ದು, ಅವರನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

Continue Reading
Advertisement
Egg Benefits
ಆರೋಗ್ಯ15 mins ago

Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

karnataka Weather Forecast
ಮಳೆ15 mins ago

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

World Thyroid Day
ಆರೋಗ್ಯ1 hour ago

World Thyroid Day: ಇಂದು ವಿಶ್ವ ಥೈರಾಯ್ಡ್‌ ದಿನ; ‘ಗಂಟಲ ಚಿಟ್ಟೆ’ಯ ಬಗ್ಗೆ ಈ ಸಂಗತಿ ನಿಮಗೆ ಗೊತ್ತೆ?

Dina bhavishya
ಭವಿಷ್ಯ2 hours ago

Dina Bhavishya : ಕುಟುಂಬದ ಆಪ್ತರಿಂದ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Narendra Modi
ದೇಶ7 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ7 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು7 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ7 hours ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ8 hours ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ8 hours ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌