Site icon Vistara News

Terrorists Killed: ಭದ್ರತಾ ಪಡೆಗಳ ಭರ್ಜರಿ ಬೇಟೆ; 4 ಭಯೋತ್ಪಾದಕರ ಹತ್ಯೆ

Security Forces

ಶ್ರೀನಗರ: ಪೂಂಚ್​​ನಲ್ಲಿ ಇಂದು ನಾಲ್ವರು ಭಯೋತ್ಪಾದಕರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ (Terrorists Killed). ಸೋಮವಾರ ಮಧ್ಯರಾತ್ರಿಯಿಂದಲೂ ಪೂಂಚ್​ನ ಸುರಾ್​ಕೋಟೆ ಬೆಲ್ಟ್​​ನಲ್ಲಿರುವ ಸಿಂಧಾರಾ ಗುಡ್ಡ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು (Terrorists Killed In Poonch). ಮಂಗಳವಾರ ಮುಂಜಾನೆ 5ಗಂಟೆ ಹೊತ್ತಿಗೆ ನಾಲ್ವರು ಉಗ್ರರ ಹತ್ಯೆಯಾಗಿದೆ.

ಸೋಮವಾರ ರಾತ್ರಿ 11.30ರಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ಶುರುವಾಯಿತು. ಆ ಪ್ರದೇಶದಲ್ಲಿ ಅಳವಡಿಸಿದ್ದ ಕಣ್ಗಾವಲು ಡ್ರೋನ್​ ಮತ್ತು ಇತರ ಉಪಕರಣಗಳಿಂದ ಉಗ್ರರ ಚಲನವಲನ ಗೊತ್ತಾಯಿತು. ಕೂಡಲೇ ರಕ್ಷಣಾ ಸಿಬ್ಬಂದಿ ಕಾರ್ಯಪ್ರವೃತ್ತರಾದರು ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ. ‘ಕತ್ತಲಲ್ಲಿ ಉಗ್ರರು ವಿಪರೀತ ಗುಂಡು ಹಾರಿಸುತ್ತಿದ್ದರು. ಭಾರತೀಯ ಸೇನೆಯ ಸ್ಪೆಶಲ್ ಫೋರ್ಸ್​, ರಾಷ್ಟ್ರೀಯ ರೈಫಲ್ಸ್​ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದೂ ಸೇನೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Terrorists Killed: ಬಾರಾಮುಲ್ಲಾದಲ್ಲಿ ಇಬ್ಬರು ಲಷ್ಕರೆ ತೊಯ್ಬಾ ಉಗ್ರರ ಹತ್ಯೆ; ಶಸ್ತ್ರಾಸ್ತ್ರ ವಶ

ಪೂಂಚ್​​ನಲ್ಲಿ ನಿನ್ನೆಯಷ್ಟೇ ಇಬ್ಬರು ಉಗ್ರರ ಹತ್ಯೆಯಾಗಿತ್ತು. ಇಲ್ಲಿನ ಎಲ್​ಒಸಿ (ಗಡಿ ನಿಯಂತ್ರಣ ರೇಖೆ)ಬಳಿ ಒಳ ನುಸುಳುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಕೊಂದು ಹಾಕಿತ್ತು. ಉಗ್ರರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇನ್ನಷ್ಟು ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪುಂಚ್​​ನ ವಿವಿಧ ಕಡೆಗಳಲ್ಲಿ ಕಾರ್ಯಾಚರಣೆ ಮುಂದುವರಿದಿತ್ತು. ಕಳೆದ ವಾರ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾರತಕ್ಕೆ ನುಸುಳುತ್ತಿದ್ದ ಉಗ್ರನೊಬ್ಬನ ಹತ್ಯೆ ಮಾಡಲಾಗಿತ್ತು.

Exit mobile version