ಸುರಂಗದಿಂದ 41 ಜನರ ರಕ್ಷಣೆಗೆ 5 ಪ್ಲಾನ್‌ ರೆಡಿ, ವಿದೇಶಿ ತಜ್ಞರ ಎಂಟ್ರಿ; ಕಂಪ್ಲೀಟ್‌ ಯೋಜನೆ ಹೀಗಿದೆ Vistara News

EXPLAINER

ಸುರಂಗದಿಂದ 41 ಜನರ ರಕ್ಷಣೆಗೆ 5 ಪ್ಲಾನ್‌ ರೆಡಿ, ವಿದೇಶಿ ತಜ್ಞರ ಎಂಟ್ರಿ; ಕಂಪ್ಲೀಟ್‌ ಯೋಜನೆ ಹೀಗಿದೆ

ಉತ್ತರಾಖಂಡದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ನಡೆಯುತ್ತಿರುವ ಕಾರ್ಯಾಚರಣೆಯು 9ನೇ ದಿನಕ್ಕೆ ಕಾಲಿಟ್ಟಿದೆ. ಮತ್ತೊಂದೆಡೆ, ಕಾರ್ಮಿಕರ ಕುಟುಂಬಸ್ಥರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Uttarakhand Tunnel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ (Uttarkashi District) ಸುರಂಗ ಕುಸಿದು (Uttarakhand Tunnel Collapse) 8 ದಿನ ಕಳೆದಿವೆ. ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರನ್ನು ರಕ್ಷಣೆ ಮಾಡಲು ಕೈಗೊಳ್ಳುತ್ತಿರುವ ಕಾರ್ಯಾಚರಣೆಯು ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟಾದರೂ ಕಾರ್ಮಿಕರನ್ನು ರಕ್ಷಣೆ ಮಾಡಲು ಸಾಧ್ಯವಾಗದ ಕಾರಣ ಅಂತಾರಾಷ್ಟ್ರೀಯ ಖ್ಯಾತಿಯ ತಜ್ಞರನ್ನು ಕರೆಸಲಾಗಿದೆ. ಅತ್ಯಾಧುನಿಕ ಉಪಕರಣಗಳನ್ನೂ ಬಳಸಲಾಗುತ್ತಿದೆ. ಇದರ ಜತೆಗೆ ಕಾರ್ಮಿಕರ ರಕ್ಷಣೆಗೆ ಐದು ಆಯ್ಕೆಗಳ ಪ್ಲಾನ್‌ ರೂಪಿಸಲಾಗಿದೆ. ಆಯ್ಕೆಗಳು ಯಾವವು ಎಂಬುದು ಸೇರಿ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಏಜೆನ್ಸಿಗಳು

ಸುಮಾರು 200 ಮೀಟರ್‌ ಸುರಂಗ ಕುಸಿದ ಕಾರಣ ರಕ್ಷಣಾ ಕಾರ್ಯಾಚರಣೆಯು ವಿಳಂಬವಾಗುತ್ತಿದೆ. ಅವಶೇಷವನ್ನು ಹೊರತೆಗೆಯಲು ಕಷ್ಟವಾಗುತ್ತಿದೆ. ಆದರೂ, ಆಯಿಲ್‌ ಆ್ಯಂಡ್‌ ನ್ಯಾಚುರಲ್‌ ಗ್ಯಾಸ್‌ ಕಾರ್ಪೊರೇಷನ್‌ (ONGC), ಸತ್ಲುಜ್‌ ಜಲ ವಿದ್ಯುತ್‌ ನಿಗಮ (SJVNL), ರೈಲ್‌ ವಿಕಾಸ ನಿಗಮ ಲಿಮಿಟೆಡ್‌ (RVNL), ನ್ಯಾಷನಲ್‌ ಹೈವೇಸ್‌ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಚರ್‌ ಡೆವಲಪ್‌ಮೆಂಟ್‌ ಕಾರ್ಪೊರೇಷನ್‌ ಲಿಮಿಟೆಡ್‌ (NHIDCL) ಹಾಗೂ ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೊರೇಷನ್‌ ಲಿಮಿಟೆಡ್‌ (THDCL) ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ವಿದೇಶಿ ತಜ್ಞರ ಎಂಟ್ರಿ

ಸುರಂಗದಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸಲು ವಿದೇಶಿ ತಜ್ಞರ ತಂಡವೂ ಸ್ಥಳಕ್ಕೆ ಆಗಮಿಸಿದೆ. ಇಂಟರ್‌ನ್ಯಾಷನಲ್‌ ಟನೆಲಿಂಗ್‌ ಅಂಡರ್‌ಗ್ರೌಂಡ್‌ ಸ್ಪೇಸ್‌ ಪ್ರೊಫೆಸರ್‌ ಸಂಸ್ಥೆಯ ಅಧ್ಯಕ್ಷ ಅರ್ನಾಲ್ಡ್‌ ಡಿಕ್ಸ್‌ ಅವರ ತಂಡವು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಇನ್ನು ಅಮೆರಿಕದಲ್ಲಿ ತಯಾರಾದ ಯಂತ್ರಗಳು, ಡ್ರಿಲ್ಲಿಂಗ್‌ ಮಷೀನ್‌ಗಳು, ಪುಶ್‌ ಇನ್‌ ಪೈಪ್‌ಗಳು ಸೇರಿ ಹಲವು ಅತ್ಯಾಧುನಿಕ ಉಪಕರಣಗಳನ್ನು ಬಳಸಲಾಗುತ್ತಿದೆ.

ಏಜೆನ್ಸಿಗಳು, ತಜ್ಞರ ಪ್ಲಾನ್‌ಗಳು ಯಾವವು?

1. ಲಂಬವಾಗಿ ಕೊರೆಯುವುದು (Vertical Drilling)

ಸತ್ಲುಜ್‌ ಜಲ ವಿದ್ಯುತ್‌ ನಿಗಮದ ಸಿಬ್ಬಂದಿಯು ಸುರಂಗವನ್ನು ಲಂಬವಾಗಿ ಕೊರೆಯುವ (Vertical Drilling) ಕಾರ್ಯದಲ್ಲಿ ನಿರತರಾಗಿದ್ದಾರೆ. ಒಡಿಶಾ ಹಾಗೂ ಗುಜರಾತ್‌ನಿಂದ 75 ಟನ್‌ ತೂಕದ ಸಲಕರಣೆಗಳನ್ನು ರೈಲುಗಳ ಮೂಲಕ ಸಾಗಣೆ ಮಾಡಲಾಗಿದ್ದು, ಇವುಗಳ ಮೂಲಕ ವರ್ಟಿಕಲ್‌ ಆಗಿ ಡ್ರಿಲ್ಲಿಂಗ್‌ ಮಾಡಲಾಗುತ್ತಿದೆ.

2. ಬೆಟ್ಟದ ತುದಿಗೆ ರಸ್ತೆ ನಿರ್ಮಾಣ

ಲಂಬವಾಗಿ ಕೊರೆಯುವ ಯೋಜನೆ ರೂಪಿಸಿದ ಕಾರಣ ಸುರಂಗದ ಬಳಿಕ ಬೆಟ್ಟದ ತುದಿಗೆ ಒಂದೇ ದಿನದಲ್ಲಿ ಗಡಿ ರಸ್ತೆಗಳ ಸಂಸ್ಥೆಯು (BRO) ರಸ್ತೆ ನಿರ್ಮಾಣ ಮಾಡಲು ಮುಂದಾಗಿದೆ. ಇದರಿಂದ ಸುರಂಗ ಕೊರೆಯಲು, ಬೆಟ್ಟದ ತುದಿಗೆ ಸಲಕರಣೆಗಳನ್ನು ಸಾಗಿಸಲು ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ. ರಸ್ತೆ ನಿರ್ಮಾಣವಾದ ಬಳಿಕ ರೈಲ್‌ ವಿಕಾಸ ನಿಗಮ ಲಿಮಿಟೆಡ್‌ ಏಜೆನ್ಸಿಯು ಪೈಪ್‌ಲೈನ್‌ ಮೂಲಕ ಸುರಂಗ ಕೊರೆಯಲು ಬೇಕಾದ ಅಗತ್ಯ ಉಪಕರಣಗಳನ್ನು ಒದಗಿಸಲಿದೆ.

‌3. ಬಾರ್‌ಕೋಟ್‌ ತುದಿಯಿಂದ ಡ್ರಿಲ್ಲಿಂಗ್

ಸಿಲ್‌ಕ್ಯಾರ ಸುರಂಗದ ಬಾರ್‌ಕೋಟ್‌ ತುದಿಯಿಂದಲೂ ವರ್ಟಿಕಲ್‌ ಆಗಿ ಕೊರೆಯಲು ಆಯಿಲ್‌ ಆ್ಯಂಡ್‌ ನ್ಯಾಚುರಲ್‌ ಗ್ಯಾಸ್‌ ಕಾರ್ಪೊರೇಷನ್‌ ಮುಂದಾಗಿದೆ. ಸೋಮವಾರ ಸ್ಥಳಕ್ಕೆ ಭೇಟಿ ನೀಡಲಿರುವ ಸಿಬ್ಬಂದಿಯು, ಮಂಗಳವಾರದಿಂದ ಡ್ರಿಲ್ಲಿಂಗ್‌ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.

4. ಹಾರಿಜಾಂಟಲ್‌ ಬೋರಿಂಗ್‌

ಲಂಬವಾಗಿ ಡ್ರಿಲ್ಲಿಂಗ್‌ ಮಾಡುವ ಜತೆಗೆ ಹಾರಿಜಾಂಟಲ್‌ (ಅಡ್ಡ) ಬೋರಿಂಗ್‌ ಕೂಡ ನಡೆಯಲಿದೆ. ಇದಕ್ಕಾಗಿ ಅಮೆರಿಕದ ಯಂತ್ರವನ್ನು ತರಿಸಲಾಗಿದೆ. ಕಲ್ಲು ಸೇರಿ ಜಟಿಲ ವಸ್ತುಗಳನ್ನು ಪುಡಿ ಮಾಡಲು ಈ ಯಂತ್ರವನ್ನು ತರಿಸಲಾಗಿದೆ. ಸೋಮವಾರದಿಂದ ಹಾರಿಜಾಂಟಲ್‌ ಬೋರಿಂಗ್‌ ಶುರುವಾಗಿದೆ.

ಇದನ್ನೂ ಓದಿ: ಉತ್ತರಾಖಂಡ ಸುರಂಗದಲ್ಲಿ ‌’ಎಸ್ಕೇಪ್‌ ರೂಟ್’ ಇಲ್ಲ; 41 ಜನಕ್ಕೆ ಅಪಾಯದ ಬೆನ್ನಲ್ಲೇ ಹಗರಣದ ವಾಸನೆ!

5. ರೋಬೊಗಳ ಬಳಕೆ

ಸುರಂಗದಲ್ಲಿ ಸಿಲುಕಿದವರ ರಕ್ಷಣೆಗೆ ಇನ್ನೂ ನಾಲ್ಕೈದು ದಿನ ಬೇಕಾಗುವ ಕಾರಣ ಒಳಗಿರುವ ಕಾರ್ಮಿಕರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ನಿರ್ಣಾಯಕವಾಗಿದೆ. ಸುರಂಗದ ಅವಶೇಷಗಳು ಹಾಗೂ ಸುರಂಗದ ಚಾವಣಿ ಮಧ್ಯೆ ಜಾಗ ಇರಬಹುದು ಎಂದು ಅಂದಾಜಿಸಲಾಗಿದೆ. ಜಾಗ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ರೋಬೊಗಳನ್ನು ಬಳಸಲಾಗುತ್ತದೆ. ಆ ಜಾಗದಲ್ಲಿ ಮತ್ತೊಂದು ಪೈಪ್‌ಲೈನ್‌ ಅಳವಡಿಸಿ, ಕಾರ್ಮಿಕರಿಗೆ ಅಗತ್ಯ ವಸ್ತುಗಳನ್ನು ನೀಡುವುದು ಯೋಜನೆಯ ಭಾಗವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

EXPLAINER

ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಚುನಾವಣೆಗೂ ಮುನ್ನ ಘೋಷಿಸಿದ ಮಹಿಳಾ ಕೇಂದ್ರಿತ ಯೋಜನೆಗಳ ಪಾಲು ಕೂಡ ಜಾಸ್ತಿ ಇದೆ. ಇದರಿಂದ ಹೆಣ್ಣುಮಕ್ಕಳು ಬಿಜೆಪಿ ಪರ ವಾಲಲು ಸಾಧ್ಯವಾಯಿತು ಎಂದು ವಿಶ್ಲೇಷಿಸಲಾಗಿದೆ.

VISTARANEWS.COM


on

Narendra Modi With Women
ಸಾಂದರ್ಭಿಕ ಚಿತ್ರ.
Koo

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Election Results 2023) ಪ್ರಕಟವಾಗಿದ್ದು, ತೆಲಂಗಾಣ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಭರಪೂರ ಉಚಿತ ಕೊಡುಗೆಗಳ ‘ಗ್ಯಾರಂಟಿ’ ನೀಡಿದ್ದರೂ ಜನ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಬಿಜೆಪಿ ಮೂರೂ ರಾಜ್ಯಗಳಲ್ಲಿ ಗೆಲುವು ಸಾಧಿಸಲು ನಾನಾ ಕಾರಣಗಳಿದ್ದರೂ, ಹೆಣ್ಣುಮಕ್ಕಳ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿರುವುದು ಪ್ರಮುಖ ಕಾರಣವಾಗಿದೆ. ವಿಶೇಷವಾಗಿ ಗೃಹಿಣಿಯರು ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿಗೆ ಮತ ನೀಡಿದ್ದು ಚುನಾವಣೆಯಲ್ಲಿ ಟರ್ನಿಂಗ್‌ ಪಾಯಿಂಟ್‌ ಆಗಿದೆ ಎಂದು ವಿಶ್ಲೇಷಿಸಲಾಗಿದೆ. ಹಾಗಾದರೆ, ಮೂರೂ ರಾಜ್ಯಗಳಲ್ಲಿ ಬಿಜೆಪಿಯು ಹೆಣ್ಣುಮಕ್ಕಳನ್ನು ಸೆಳೆದಿದ್ದು ಹೇಗೆ? ಯಾವ ಯೋಜನೆಗಳು ಸ್ತ್ರೀಯರ ಮತಗಳನ್ನು ವಾಲಿಸಿದವು ಎಂಬುದರ ಕಿರು ಮಾಹಿತಿ ಇಲ್ಲಿದೆ.

ಲಾಡ್ಲಿ ಬೆಹ್ನಾ ಯೋಜನೆ

ಮಧ್ಯಪ್ರದೇಶದಲ್ಲಿ ಬಡ ಹೆಣ್ಣುಮಕ್ಕಳಿಗೆ ಮಾಸಿಕ 1 ಸಾವಿರ ರೂ. ಸಹಾಯ ಧನ ನೀಡುವುದೇ ಲಾಡ್ಲಿ ಬೆಹನಾ ಯೋಜನೆಯಾಗಿದೆ. ಕಾಂಗ್ರೆಸ್‌ ಉಚಿತ ಕೊಡುಗೆಗಳ ಘೋಷಣೆಯನ್ನು ಮೊದಲೇ ಅರಿತಿದ್ದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು 2023ರ ಮಾರ್ಚ್‌ನಲ್ಲಿಯೇ ಲಾಡ್ಲಿ ಬೆಹನಾ ಯೋಜನೆಯನ್ನು ಜಾರಿಗೆ ತಂದರು. ಯೋಜನೆ ಜಾರಿಗೆ ತಂದು, ಬಡ ಹೆಣ್ಣುಮಕ್ಕಳ ಖಾತೆಗಳಿಗೆ ಮಾಸಿಕ 1 ಸಾವಿರ ರೂ. ಜಮೆ ಮಾಡಿಸಿದರು. ಆ ಮೂಲಕ ಸರ್ಕಾರವು ಮಹಿಳೆಯರ ಪರ ಇದೆ ಎಂಬ ಸಂದೇಶ ರವಾನಿಸಿದರು. ಅಲ್ಲದೆ, ಹೆಣ್ಣುಮಕ್ಕಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.35ರಷ್ಟು ಮೀಸಲಾತಿ ಘೋಷಿಸಿದರು. 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ನೀಡಿದರು. ಇದು ಮಧ್ಯಪ್ರದೇಶದಲ್ಲಿ ಹೆಣ್ಣುಮಕ್ಕಳು ಬಜೆಪಿ ಪರ ವಾಲಲು ಸಾಧ್ಯವಾಯಿತು ಎಂದು ವಿಶ್ಲೇಷಿಸಲಾಗಿದೆ.

Shivraj Singh Chouhan

ರಾಜಸ್ಥಾನದಲ್ಲಿ ಕೈ ಹಿಡಿದ ಭರವಸೆ

ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಸಮಸ್ಯೆಗಳನ್ನು, ಆ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದನ್ನು ಪ್ರಚಾರದ ಅಸ್ತ್ರವಾಗಿಸಿಕೊಂಡ ಬಿಜೆಪಿಯು, ಚುನಾವಣೆ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನೂ ನೀಡಿತು. ಇದು ಚುನಾವಣೆಯಲ್ಲಿ ಹೆಣ್ಣುಮಕ್ಕಳು ಬಿಜೆಪಿಗೆ ಮತ ಹಾಕಲು ಸಾಧ್ಯವಾಯಿತು. ಪ್ರಣಾಳಿಕೆಯಲ್ಲಿ ಬಿಜೆಪಿಯು, ಹೆಣ್ಣು ಮಕ್ಕಳಿಗಾಗಿ ಲಾಡೋ ಪ್ರೋತ್ಸಾಹ್ ಯೋಜನೆಯನ್ನು ಪರಿಚಯಿಸುವುದಾಗಿ ತಿಳಿಸಿತು. ಇದರ ಅಡಿಯಲ್ಲಿ ಮಧ್ಯಪ್ರದೇಶದ ಲಾಡ್ಲಿ ಲಕ್ಷ್ಮಿ ಯೋಜನೆಯಂತೆಯೇ ಪ್ರತಿ ಹೆಣ್ಣು ಮಗುವಿನ ಹೆಸರಿನಲ್ಲಿ 2 ಲಕ್ಷ ರೂ. ಉಳಿತಾಯ ಬಾಂಡ್ ನೀಡಲಾಗುವುದು ಎಂದು ಹೇಳಿತು.

ಇನ್ನು ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಸ್ವಾವಲಂಬಿ ಮಾಡುವುದಕ್ಕಾಗಿ ಬಿಜೆಪಿಯು ಸುಮಾರು 6 ಲಕ್ಷ ಮಹಿಳೆಯರಿಗೆ ಲಕಪತಿ ದೀದಿ ಸ್ಕೀಮ್‌ನಲ್ಲಿ ತರಬೇತಿ ಮತ್ತು ಆರ್ಥಿಕ ಬೆಂಬಲ ನೀಡುವುದಾಗಿ ಘೋಷಿಸಿತು. ಅಲ್ಲದೆ, ಉಜ್ವಲಾ ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಮೇಲೆ 450 ರೂ. ಸಬ್ಸಿಡಿ ನೀಡಲಾಗುವುದು. ಮಾತೃ ವಂದನಾ ಯೋಜನೆಯ ಮೊತ್ತವನ್ನು 5000 ರೂ.ನಿಂದ 8000 ರೂ.ವರೆಗೆ ಹೆಚ್ಚಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಬಿಜೆಪಿಗೆ ವರದಾನವಾಯಿತು. ಕಾಂಗ್ರೆಸ್‌ ಕೂಡ ಇಂತಹ ಉಚಿತ ಕೊಡುಗೆಗಳ ಭರವಸೆ ನೀಡಿದರೂ ಆಡಳಿತ ವಿರೋಧಿ ಅಲೆಯು ಆ ಪಕ್ಷಕ್ಕೆ ಮುಳುವಾಯಿತು.

ಛತ್ತೀಸ್‌ಗಢದಲ್ಲೂ ನಾರಿ ಶಕ್ತಿ ಬಲ

ಕರ್ನಾಟಕದಲ್ಲಿ ಹೆಣ್ಣುಮಕ್ಕಳಿಗೆ ಭರವಸೆ ನೀಡಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದ್ದನ್ನು ಮನಗಂಡಿದ್ದ ಬಿಜೆಪಿಯು ಛತ್ತೀಸ್‌ಗಢದಲ್ಲೂ ಮಹಿಳಾ ಕೇಂದ್ರಿತವಾಗಿಯೇ ಭರವಸೆಗಳನ್ನು ನೀಡಿತು. ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12 ಸಾವಿರ ರೂ. ಆರ್ಥಿಕ ನೆರವು, ಗ್ಯಾಸ್‌ ಸಬ್ಸಿಡಿ ಸೇರಿ ಹಲವು ಘೋಷಣೆ ಮಾಡಲಾಯಿತು. ಚುನಾವಣೆಯಲ್ಲಿ ಇವುಗಳ ಕುರಿತು ಭಾರಿ ಪ್ರಚಾರ ನಡೆಸಲಾಯಿತು. ಸಾಮಾಜಿಕ ಜಾಲತಾಣಗಳನ್ನೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಯಿತು. ಇದು ಬಿಜೆಪಿಯು ಹೆಣ್ಣುಮಕ್ಕಳ ಮತಗಳನ್ನು ಪಡೆಯುವಲ್ಲಿ, ಆ ಮೂಲಕ ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬರುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿತು.

ಇದನ್ನೂ ಓದಿ: ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

ಛತ್ತೀಸ್‌ಗಢದಲ್ಲಿ ಮೋದಿ ಸರ್ಕಾರ ಬುಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ತೆಗೆದುಕೊಂಡ ಕ್ರಮಗಳು ಕೂಡ ಅವರ ಒಲವು ಗಳಿಸಲು ನೆರವಾಗಿವೆ. ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿಯೇ (ನ.15ರಂದು) ಪ್ರಧಾನಿ ಮೋದಿ, ʼವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳʼ (particularly vulnerable tribal groups – PVTG) ಅಭಿವೃದ್ಧಿಗಾಗಿ ನೂತನ ಕಾರ್ಯಕ್ರಮವೊಂದನ್ನು ಘೋಷಿಸಿದ್ದರು. ಈ ಯೋಜನೆಯು 24,000 ಕೋಟಿ ರೂ. ವೆಚ್ಚದಲ್ಲಿ ಅಂಚಿನಲ್ಲಿರುವ ಬುಡಕಟ್ಟು ಸಮುದಾಯಗಳವರಿಗೆ ತಲುಪುವಂಥ ರಸ್ತೆ, ಟೆಲಿಕಾಂ ಸಂಪರ್ಕ, ಶಿಕ್ಷಣ, ಆರೋಗಹ್ಯ ಸೇವೆ, ಪೌಷ್ಟಿಕತೆಯ ಮತ್ತಿತ ಸೌಲಭ್ಯಗಳನ್ನು ತಲುಪಿಸುವ ಕಾರ್ಯಕ್ರಮವಾಗಿದೆ. ಇದು ಕೂಡ ಚುನಾವಣೆಯಲ್ಲಿ ಮತಗಳನ್ನು ಸೆಳೆಯಲು ಸಾಧ್ಯವಾಯಿತು ಎಂದು ಹೇಳಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

EXPLAINER

Vistara Explainer: ಹುಸಿ ಬೆದರಿಕೆಯ ಇಮೇಲ್‌; ಶಾಲೆಗಳಿಗೆ ಬೇಕು ಉತ್ತಮ ಸುರಕ್ಷಾ ಕ್ರಮಗಳು

Vistara Explainer: ಇತ್ತೀಚಿನ ದಿನಗಳಲ್ಲಿ, ಬೆಂಗಳೂರು ನಗರದಲ್ಲಿ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಇಮೇಲ್‌ಗಳ ಪ್ರಮಾಣ ದಿನೇ ದಿನೇ ಹೆಚ್ಚತೊಡಗಿದೆ. ಈ ಹಿನ್ನಲೆಯಲ್ಲಿ ಯಾವೆಲ್ಲ ಸುರಕ್ಷಿತಾ ಕ್ರಮಗಳನ್ನು ಕೈಗೊಳ್ಳಬಹುದು ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

bomb threat
Koo

| ಗಿರೀಶ್ ಲಿಂಗಣ್ಣ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕರು

ಗುರುವಾರ, ಡಿಸೆಂಬರ್ 1ರಂದು ಬೆಂಗಳೂರಿನ ವಿವಿಧ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ (Bomb Threat) ಎಂಬ ಹುಸಿ ಇಮೇಲ್ ಬೆದರಿಕೆ ನಗರದಾದ್ಯಂತ ಭಯ, ಆತಂಕಗಳನ್ನು ಉಂಟು ಮಾಡಿತು. ಈ ಇಮೇಲ್ ಅನ್ನು ಐಪಿ ಅಡ್ರೆಸ್ ಬಚ್ಚಿಟ್ಟಿದ್ದ, ಇನ್ನೂ ಗುರುತಿಸಲಾಗಿರದ ವ್ಯಕ್ತಿ ಕಳುಹಿಸಿದ್ದ. ಪೊಲೀಸರು ಈ ಪ್ರಕರಣದ ಹಿಂದೆ ಬಿದ್ದಿದ್ದು, ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ (Vistara Explainer).

ಇತ್ತೀಚಿನ ದಿನಗಳಲ್ಲಿ, ಬೆಂಗಳೂರು ನಗರದಲ್ಲಿ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಇಮೇಲ್‌ಗಳ ಪ್ರಮಾಣ ದಿನೇ ದಿನೇ ಹೆಚ್ಚತೊಡಗಿದೆ. ಈ ದುರುದ್ದೇಶಪೂರಿತ ಸಂದೇಶಗಳು ಹೆತ್ತವರಲ್ಲಿ ಗಂಭೀರ ಚಿಂತೆ ಉಂಟುಮಾಡಿದ್ದು, ಮಕ್ಕಳಲ್ಲಿ ಮತ್ತು ಹಿರಿಯರಲ್ಲಿ ಸಮಾನವಾಗಿ ಭಯ ಮತ್ತು ಆತಂಕಕ್ಕೆ ದಾರಿ ಮಾಡಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಈ ಸಂದೇಶಗಳ ಹಿಂದಿರುವ ಮೂಲ ಮತ್ತು ಅವರ ಉದ್ದೇಶಗಳನ್ನು ಪತ್ತೆಹಚ್ಚಿ, ಶಾಲೆಗಳು ಮತ್ತು ಸಾರ್ವಜನಿಕರ ಸುರಕ್ಷತೆಗೆ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ಅಂಕಣದಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಇರುವ ಸವಾಲುಗಳು ಮತ್ತು ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಬಗೆಯನ್ನು ಗಮನಿಸೋಣ.

ಸಂದೇಶದ ಮೂಲ ಪತ್ತೆಹಚ್ಚುವುದು, ಸೈಬರ್ ಭದ್ರತೆ ಹೆಚ್ಚಿಸುವುದು

ಇಂತಹ ಹುಸಿ ಬೆದರಿಕೆ ಒಡ್ಡುವ ಇಮೇಲ್‌ಗಳ ವಿರುದ್ಧ ಹೋರಾಡಲು ಇಡಬೇಕಾದ ಪ್ರಮುಖ ಹೆಜ್ಜೆಯೆಂದರೆ ಸೈಬರ್ ಸೆಕ್ಯುರಿಟಿ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಿ, ಇಮೇಲ್ ಮತ್ತು ಅಂತರ್ಜಾಲ ಸೇವಾ ಪೂರೈಕೆದಾರರ ಮೇಲೆ ಹೆಚ್ಚಿನ ನಿಗಾ ಇಡುವುದು. ಐಪಿ ವಿಳಾಸವನ್ನು ಪತ್ತೆ ಹಚ್ಚುವುದರಿಂದ ಮತ್ತು ದುರುದ್ದೇಶ ಪೂರ್ವಕ ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚುವ ಮೂಲಕ ಪೊಲೀಸರು ಈ ಅಪರಾಧಿಗಳನ್ನು ಗುರುತಿಸಿ, ಅವರಿಗೆ ಶಿಕ್ಷೆ ವಿಧಿಸಬಹುದು. ತಂತ್ರಜ್ಞಾನ ತಜ್ಞರು ಮತ್ತು ಗುಪ್ತಚರ ಸಂಸ್ಥೆಗಳೊಡನೆ ಸಹಯೋಗ ಹೊಂದುವ ಮೂಲಕ, ಇಂತಹ ಕುಕೃತ್ಯಗಳನ್ನು ನಡೆಸುವವರನ್ನು ಪತ್ತೆಹಚ್ಚಿ, ಸೆರೆಹಿಡಿಯಲು, ಇದರ ಹಿಂದಿರುವ ಸಂಕೀರ್ಣ ಜಾಲವನ್ನು ಅಸ್ಥಿರಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.

ಶಾಲೆಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಡನೆ ಸಮನ್ವಯ ಸಾಧಿಸುವುದು

ಪೊಲೀಸ್ ಇಲಾಖೆ ಶಾಲೆಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಡನೆ ಉತ್ತಮ ಸಮನ್ವಯ ಸಾಧಿಸಿ, ಇಂತಹ ಸನ್ನಿವೇಶಗಳನ್ನು ಎದುರಿಸಲು ಸೂಕ್ತ ಮಾರ್ಗಸೂಚಿಗಳು ಮತ್ತು ನಿಯಮಾವಳಿಗಳನ್ನು ಸಿದ್ಧಪಡಿಸಬೇಕು. ಶಾಲೆಗಳಲ್ಲೂ ತುರ್ತು ಪ್ರತಿಕ್ರಿಯಾ ತಂಡವನ್ನು ನಿರ್ಮಿಸಿ, ಅವರಿಗೆ ಸಂಭಾವ್ಯ ಹುಸಿ ಬೆದರಿಕೆಯನ್ನು ಗುರುತಿಸುವುದು ಹೇಗೆ ಎಂಬ ತರಬೇತಿ ನೀಡುವುದರಿಂದ, ಸರಿಯಾದ ಸಮಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ಬರುವ ಇಮೇಲ್‌ಗಳ ಅಧಿಕೃತತೆಯನ್ನು ಗುರುತಿಸುವುದು, ಕಾನೂನು ಜಾರಿ ಸಂಸ್ಥೆಗಳಿಗೆ ವಿವರವನ್ನು ತಲುಪಿಸುವುದು, ಹಾಗೂ ಅಗತ್ಯ ಬಿದ್ದರೆ ಬೆದರಿಕೆ ಇರುವ ಸ್ಥಳವನ್ನು ಜನರಹಿತವನ್ನಾಗಿಸುವ ಕ್ರಮಗಳನ್ನು ಕೈಗೊಳ್ಳುವುದರಿಂದ, ಅಪಾಯದ ಸಾಧ್ಯತೆಗಳನ್ನು ಕಡಿಮೆಗೊಳಿಸಿ, ಮಕ್ಕಳು ಮತ್ತು ಪೋಷಕರಿಗೆ ಧೈರ್ಯ ತುಂಬಲು ಸಾಧ್ಯವಾಗುತ್ತದೆ. ನಿರಂತರವಾಗಿ ಅಣಕು ಕಾರ್ಯಾಚರಣೆಗಳನ್ನು ನಡೆಸುವುದರಿಂದ, ಶಾಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಗೆ ತುರ್ತು ಪರಿಸ್ಥಿತಿಯಲ್ಲಿ ಹೇಗೆ ವರ್ತಿಸಬೇಕೆಂಬುದು ಅರಿವಿಗೆ ಬರುತ್ತದೆ.

ಸಾರ್ವಜನಿಕರಲ್ಲಿ ಎಚ್ಚರಿಕೆ, ಅರಿವು ಮೂಡಿಸುವುದು

ಹುಸಿ ಇಮೇಲ್ ಬೆದರಿಕೆಗಳು ಮತ್ತೆ ಮತ್ತೆ ಮರುಕಳಿಸದಂತೆ ಮಾಡಲು ಸಾರ್ವಜನಿಕರಲ್ಲಿ ಈ ಕುರಿತು ಹೆಚ್ಚಿನ ಜಾಗೃತಿ ಮತ್ತು ಅರಿವು ರೂಪಿಸುವ ಅವಶ್ಯಕತೆಯಿದೆ. ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಗಳು ಕೈಜೋಡಿಸಿ, ವಿದ್ಯಾರ್ಥಿಗಳಲ್ಲಿ ಇಂತಹ ಕೆಟ್ಟ ಹುಸಿ ಬೆದರಿಕೆಗಳ ಗಂಭೀರತೆಯ ಕುರಿತು ಅರಿವು ಮೂಡಿಸಬೇಕಿದೆ. ಇಂತಹ ಕುಕೃತ್ಯಗಳನ್ನು ನಡೆಸುವುದರಿಂದ, ಅದು ಸಾರ್ವಜನಿಕರ ಮೇಲೆ, ಸಮಾಜದ ಮೇಲೆ ಬೀರುವ ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ಅರ್ಥ ಮಾಡಿಸುವುದರಿಂದ, ಅವರು ಇಂತಹ ಕೃತ್ಯಗಳಲ್ಲಿ ತೊಡಗದಂತೆ ತಡೆಯಬಹುದು. ಜಾಗೃತಿ ಅಭಿಯಾನಗಳನ್ನು ಆಯೋಜಿಸುವುದು, ಕಾರ್ಯಾಗಾರಗಳನ್ನು ನಡೆಸುವುದು, ವಿಚಾರ ಸಂಕಿರಣಗಳನ್ನು ನಡೆಸುವುದರಿಂದ ಈ ಕುರಿತು ಹೆಚ್ಚಿನ ಅರಿವು, ಮಾಹಿತಿ ಮೂಡಿಸಲು ಸಾಧ್ಯವಾಗುತ್ತದೆ.

ಕಾನೂನು ಕ್ರಮಗಳು ಮತ್ತು ಶಿಕ್ಷೆ

ಸಂಭಾವ್ಯ ಅಪರಾಧಿಗಳು ಇಂತಹ ಕೃತ್ಯಗಳನ್ನು ನಡೆಸದಂತೆ ತಡೆಗಟ್ಟುವ ಸಲುವಾಗಿ ಇಂತಹ ಹುಸಿ ಇಮೇಲ್ ಬೆದರಿಕೆಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು. ಇಂತಹ ಕೆಲಸಗಳಿಂದ ಸಾರ್ವಜನಿಕರ ಜೀವನಕ್ಕೆ ತೊಂದರೆ ನೀಡಿ, ಜೀವಕ್ಕೆ ಅಪಾಯ ಉಂಟಾಗುವಂತೆ ಮಾಡುವವರಿಗೆ ಕಠಿಣ ದಂಡನೆ ವಿಧಿಸಬೇಕು. ಇಂತಹ ದಂಡನೆಗಳ ಮೂಲಕ, ಕಾನೂನು ಇಲಾಖೆ ಇಂತಹ ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗುವವರನ್ನು ಭಯಪಡಿಸಿ, ಶಿಕ್ಷಣ ಸಂಸ್ಥೆಗಳ ಪಾವಿತ್ರ್ಯತೆ ರಕ್ಷಿಸಬಹುದು. ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಮತ್ತು ಈ ಕುರಿತು ಜ್ಞಾನ ಹೊಂದಿರುವವರ ನಡುವೆ ಸಹಯೋಗ ಸಾಧಿಸುವುದರಿಂದ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬಹುದು.

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಸದ್ಬಳಕೆ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯನ್ನು (ಆರ್ಟಿಫಿಶಿಯಲ್ ಇಂಟಲಿಜೆನ್ಸ್ – ಎಐ) ಬಳಸಿಕೊಳ್ಳುವುದು ಇಂತಹ ಹುಸಿ ಬೆದರಿಕೆಗಳ ಸವಾಲು ಎದುರಿಸಲು ನೆರವು ನೀಡಬಲ್ಲದು. ಆಧುನಿಕ ಫಿಲ್ಟರಿಂಗ್ ವ್ಯವಸ್ಥೆಗಳನ್ನು ಅಳವಡಿಸಿ, ಅನುಮಾನಸ್ಪದ ಮಾದರಿಗಳು ಮತ್ತು ಕೀವರ್ಡ್‌ಗಳನ್ನು ಗುರುತಿಸಲು ಸಾಧ್ಯವಾಗುವುದರಿಂದ ಇಂತಹ ಹುಸಿ ಬೆದರಿಕೆಗಳ ಸಂದೇಶ ಹರಡದಂತೆ ತಡೆಯಲು ಸಾಧ್ಯವಾಗುತ್ತದೆ. ಅದರೊಡನೆ, ಮೆಷಿನ್ ಲರ್ನಿಂಗ್ ಆಲ್ಗಾರಿತಂಗಳನ್ನು ಬಳಸುವ ಮೂಲಕ ಹುಸಿ ಬೆದರಿಕೆ ಇಮೇಲ್‌‌ಗಳ ಅಪಾಯವನ್ನು ತಡೆಗಟ್ಟಲು, ಅದು ಮರುಕಳಿಸದಂತೆ ತಡೆಯಲು ಸಾಧ್ಯವಾಗುತ್ತದೆ.

ಸಮುದಾಯದ ಪಾಲ್ಗೊಳ್ಳುವಿಕೆ

ಒಂದು ಉತ್ತಮ, ಸದೃಢ, ಸುರಕ್ಷಿತ ಸಮಾಜವನ್ನು ನಿರ್ಮಿಸಲು ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯವಾಗಿರುತ್ತದೆ. ಇಂತಹ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಅಥವಾ ಇಮೇಲ್‌ಗಳನ್ನು ಗುರುತಿಸಿ, ಪೊಲೀಸರಿಗೆ ವರದಿ ಮಾಡುವಂತೆ ಉತ್ತೇಜಿಸುವುದರಿಂದ ಇಂತಹ ಸನ್ನಿವೇಶಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ನಮ್ಮ ನೆರೆಹೊರೆಯನ್ನು ಗಮನಿಸುವಂತಹ ಸಾರ್ವಜನಿಕ ಕಾರ್ಯಕ್ರಮಗಳನ್ನು ರೂಪಿಸುವುದರಿಂದ, ಒಟ್ಟಾರೆ ಸಮಾಜದ ಎಲ್ಲ ಸಾರ್ವಜನಿಕರಲ್ಲೂ ಜವಾಬ್ದಾರಿಯ ಭಾವನೆ ಹೆಚ್ಚಿಸಿ, ಸಂಭಾವ್ಯ ಅಪಾಯಗಳನ್ನು ಗುರುತಿಸುವಂತೆ ಮಾಡಬಹುದು. ಸಾರ್ವಜನಿಕರು ಮತ್ತು ಪೊಲೀಸರು ಪರಸ್ಪರ ಸಹಕಾರ ನೀಡಿದರೆ, ಇಂತಹ ಹುಸಿ ಬೆದರಿಕೆ ಇಮೇಲ್‌ಗಳು ಹರಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬಹುದು.

ದುರದೃಷ್ಟವಶಾತ್, ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆಯ ಹುಸಿ ಇಮೇಲ್‌ಗಳು ದಿನೇ ದಿನೇ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಇದನ್ನು ತಡೆಗಟ್ಟಲು ಪೊಲೀಸರು ಮತ್ತು ಸಂಬಂಧಪಟ್ಟ ಇಲಾಖೆ ಕ್ಷಿಪ್ರ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಸೈಬರ್ ಸುರಕ್ಷತಾ ಕ್ರಮಗಳಿಗೆ ಆದ್ಯತೆ ನೀಡಿ, ಶಾಲೆಗಳೊಡನೆ ಸಮನ್ವಯ ಸಾಧಿಸಿ, ಜನರಲ್ಲಿ ಜಾಗೃತಿ ಮೂಡಿಸಿ, ಕಠಿಣ ದಂಡಗಳನ್ನು ವಿಧಿಸಿ, ಮತ್ತು ನೂತನ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಕೆಗೆ ತರುವುದರಿಂದ ಅಧಿಕಾರಿಗಳು ಈ ಸಮಸ್ಯೆಯನ್ನು ಕೊನೆಗೊಳಿಸಬಹುದು. ಪೋಷಕರು ಮತ್ತು ಮಕ್ಕಳು ಎದುರಿಸುವ ಒತ್ತಡ, ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಸುರಕ್ಷಿತ ಮತ್ತು ಭದ್ರತೆಯ ವಾತಾವರಣ ಮೂಡಿಸುವುದು ಅತ್ಯಂತ ಮುಖ್ಯವಾಗಿದೆ. ಜನರೆಲ್ಲ ಜವಾಬ್ದಾರಿಯುತವಾಗಿ, ಒಗ್ಗಟ್ಟಿನಿಂದ ಕಾರ್ಯಾಚರಿಸಿದರಷ್ಟೇ ನಾವು ನಮ್ಮ ಶಿಕ್ಷಣ ಸಂಸ್ಥೆಗಳನ್ನು, ಸಮಾಜವನ್ನು ಇಂತಹ ಹುಸಿ ಬೆದರಿಕೆಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಸಾಧ್ಯ.

ಇದನ್ನೂ ಓದಿ: Bomb Threat : 48 ಶಾಲೆಗಳಿಗೆ ಬಂದ ಬೆದರಿಕೆ EMail ಮೂಲ ಪತ್ತೆ, ಏನಿದು ಜರ್ಮನಿ ಕನೆಕ್ಷನ್?‌

Continue Reading

EXPLAINER

ಮತಗಟ್ಟೆ ಸಮೀಕ್ಷೆ; ಇದಕ್ಕೂ ಮೊದಲಿನ ಸಮೀಕ್ಷೆಗಳು ಏನು ಹೇಳಿದ್ದವು? ಫಲಿತಾಂಶ ಏನಾಗಿತ್ತು?

Exit Poll Results 2023: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದ್ದು, ಮತಗಟ್ಟೆ ಸಮೀಕ್ಷೆಗಳ ಕುರಿತ ಚರ್ಚೆ ಜೋರಾಗಿದೆ. ಇದಕ್ಕೂ ಮೊದಲಿನ ಚುನಾವಣೆಯಲ್ಲಿ ಮತಗಟ್ಟೆ ಸಮೀಕ್ಷೆ ಏನು ಹೇಳಿದ್ದವು, ಫಲಿತಾಂಶ ಏನಾಗಿತ್ತು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Exit Poll Results 2023
Koo

ನವದೆಹಲಿ: 2024ರಲ್ಲಿ ನಡೆಯುವ ಲೋಕಸಭೆ ಚುನಾವಣೆಯ (Lok Sabha Election 2023) ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದೆ. ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ಮಿಜೋರಾಂನಲ್ಲಿ ಚುನಾವಣೆ ಮುಗಿಯುತ್ತಲೇ ಮತಗಟ್ಟೆ ಸಮೀಕ್ಷಾ ವರದಿಗಳು (Exit Polls Result 2023) ಲಭ್ಯವಾಗಿವೆ. ಮತಗಟ್ಟೆ ಸಮೀಕ್ಷೆಗಳ ಕುರಿತು ಚರ್ಚೆಯೂ ಜೋರಾಗಿ ನಡೆಯುತ್ತಿದೆ. ಹಾಗಾದರೆ, ಇದಕ್ಕೂ ಮೊದಲು ನಡೆದ ಪ್ರಮುಖ ಚುನಾವಣೆಗಳಲ್ಲಿ ಮತಗಟ್ಟೆ ಸಮೀಕ್ಷೆ ಏನು ಹೇಳಿದ್ದವು? ಮತಗಟ್ಟೆ ಸಮೀಕ್ಷೆಗೂ, ಚುನಾವಣೆ ಫಲಿತಾಂಶಕ್ಕೂ ಏನು ವ್ಯತ್ಯಾಸವಾಗಿತ್ತು ಎಂಬುದರ ಕಿರು ಮಾಹಿತಿ ಇಲ್ಲಿದೆ.

2019ರ ಲೋಕಸಭೆ ಚುನಾವಣೆ

ದೇಶವೇ ಕುತೂಹಲದಿಂದ ಎದುರು ನೋಡುತ್ತಿದ್ದ 2019ರ ಲೋಕಸಭೆ ಚುನಾವಣೆ ಬಳಿಕ ಬಹಿರಂಗವಾಗಿದ್ದ ಮತಗಟ್ಟೆ ಸಮೀಕ್ಷೆಗಳು ಬಹುತೇಕ ನಿಜವಾಗಿದ್ದವು. ಟೈಮ್ಸ್‌ ನೌ, ಚಾಣಕ್ಯ, ಇಂಡಿಯಾ ಟುಡೇ, ನ್ಯೂಸ್‌ 18 ಹಾಗೂ ಜನ್‌ ಕೀ ಬಾತ್‌ ಸಮೀಕ್ಷೆಗಳ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ ಎಂದು ತಿಳಿಸಿದ್ದವು. ಯಾವೊಂದು ಸಮೀಕ್ಷೆಯೂ ಕಾಂಗ್ರೆಸ್‌ ಗೆಲುವು ಸಾಧಿಸುತ್ತದೆ ಎಂದು ತಿಳಿಸಿರಲಿಲ್ಲ.

ಚುನಾವಣೆ ಫಲಿತಾಂಶ ಪ್ರಕಟವಾದಾಗ ಎನ್‌ಡಿಎ 353 (ಬಿಜೆಪಿ 303) ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಇನ್ನು ಕಾಂಗ್ರೆಸ್‌ 52 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತು. ಕಾಂಗ್ರೆಸ್‌ ಸರಾಸರಿ 100-120 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದು ಬಹುತೇಕ ಸಮೀಕ್ಷೆಗಳು ತಿಳಿಸಿದ್ದವು. ಆದರೆ, ಸಮೀಕ್ಷಾ ವರದಿ ತಿಳಿಸಿದ ಅರ್ಧದಷ್ಟು ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್‌ ಜಯಿಸಿತ್ತು.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022

2022ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆ ಬಳಿಕ ಸಮೀಕ್ಷಾ ವರದಿಗಳ ಅಂದಾಜೇ ನಿಜವಾಗಿತ್ತು. ಬಹುತೇಕ ಸಮೀಕ್ಷೆಗಳು ಬಿಜೆಪಿಯೇ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ತಿಳಿಸಿದ್ದವು. ಬಿಜೆಪಿ 288-326 ಕ್ಷೇತ್ರ, ಎಸ್‌ಪಿ 71-101, ಕಾಂಗ್ರೆಸ್‌ 1-3 ಕ್ಷೇತ್ರಗಳಲ್ಲಿ ಎಂದು ಇಂಡಿಯಾ ಟುಡೇ, ಬಿಜೆಪಿ 225, ಎಸ್‌ಪಿ 151, ಕಾಂಗ್ರೆಸ್‌ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಟೈಮ್ಸ್‌ ನೌ ಮತಗಟ್ಟೆ ಸಮೀಕ್ಷೆ ತಿಳಿಸಿತ್ತು. ಬಹುತೇಕ ಸಮೀಕ್ಷೆಗಳು ಇದನ್ನೇ ನುಡಿದಿದ್ದವು.

ಉತ್ತರ ಪ್ರದೇಶದಲ್ಲಿ ಚುನಾವಣೆ ಫಲಿತಾಂಶ ಪ್ರಕಟವಾದಾಗ ಬಿಜೆಪಿ 255 ಕ್ಷೇತ್ರಗಳಲ್ಲಿ, ಸಮಾಜವಾದಿ ಪಕ್ಷ 111, ಕಾಂಗ್ರೆಸ್‌ 2, ಬಿಎಸ್‌ಪಿ 1 ಹಾಗೂ ಸ್ವತಂತ್ರ ಅಭ್ಯರ್ಥಿಗಳು 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಇದರೊಂದಿಗೆ ಯೋಗಿ ಆದಿತ್ಯನಾಥ್‌ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಪಂಜಾಬ್‌ ವಿಧಾನಸಭೆ ಚುನಾವಣೆ 2022

2022ರಲ್ಲಿ ವಿಧಾನಸಭೆ ಚುನಾವಣೆ ಬಳಿಕ ಮತಗಟ್ಟೆ ಸಮೀಕ್ಷೆಗಳ ವರದಿಯು ಭಾಗಶಃ ನಿಜವಾಗಿತ್ತು. ಇಂಡಿಯಾ ಟುಡೇ-ಆ್ಯಕ್ಸಿಸ್‌ ಮೈ ಇಂಡಿಯಾ ಮತಗಟ್ಟೆ ಸಮೀಕ್ಷೆಯು ಆಮ್‌ ಆದ್ಮಿ ಪಕ್ಷ 76-90 ಸೀಟು ಗೆಲ್ಲಲಿದೆ ಎಂದು ತಿಳಿಸಿತ್ತು. ಆಪ್‌ 62-70, ಕಾಂಗ್ರೆಸ್‌ 21-31, ಅಕಾಲಿ ದಳ 16-24 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ರಿಪಬ್ಲಿಕ್-‌ಪಿ ಮಾರ್ಕ್‌ ಮತಗಟ್ಟೆ ಸಮೀಕ್ಷೆ ತಿಳಿಸಿತ್ತು.

ಪಂಜಾಬ್‌ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದಾಗ ಆಮ್‌ ಆದ್ಮಿ ಪಕ್ಷವು ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿತ್ತು. ಒಟ್ಟು 117 ಕ್ಷೇತ್ರಗಳ ಪೈಕಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್‌ 18 ಕ್ಷೇತ್ರಗಳಲ್ಲಿ ಹಾಗೂ ಭಾರಿ ಪ್ರಯೋಗಕ್ಕೆ ಮುಂದಾಗಿದ್ದ ಬಿಜೆಪಿ ಕೇವಲ 2 ಕ್ಷೇತ್ರಗಳಲ್ಲಿ ಜಯಿಸಿತ್ತು.

ಗುಜರಾತ್‌ ವಿಧಾನಸಭೆ ಚುನಾವಣೆ 2022

ದೇಶದ ಗಮನ ಸೆಳೆದಿದ್ದ 2022ರ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲೂ ಮತಗಟ್ಟೆ ಸಮೀಕ್ಷೆಗಳ ವರದಿಗಳೇ ನಿಜವಾಗಿದ್ದವು. ಟೈಮ್ಸ್‌ ನೌ-ಇಟಿಜಿಯು ಬಿಜೆಪಿ 131, ಕಾಂಗ್ರೆಸ್‌ 41 ಹಾಗೂ ಆಪ್‌ 6 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದು ಹೇಳಿತ್ತು. ಸಿ ವೋಟರ್‌ ಕೂಡ ಬಿಜೆಪಿ 134, ಕಾಂಗ್ರೆಸ್‌ 37 ಹಾಗೂ ಆಪ್‌ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿತ್ತು. ಇನ್ನು ಗುಜರಾತ್‌ನಲ್ಲಿ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಂತೆ ಬಿಜೆಪಿ 156 ಕ್ಷೇತ್ರ, ಆಪ್‌ 5 ಹಾಗೂ ಕಾಂಗ್ರೆಸ್‌ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದಿತ್ತು.

ಕರ್ನಾಟಕ ವಿಧಾನಸಭೆ ಚುನಾವಣೆ 2023

ದೇಶದ ಗಮನ ಸೆಳೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಪ್ರಕಟವಾದ ಮತಗಟ್ಟೆ ಸಮೀಕ್ಷೆ ವರದಿಗಳನ್ನು ಮೀರಿ ಫಲಿತಾಂಶ ಪ್ರಕಟವಾಗಿತ್ತು. ಕಾಂಗ್ರೆಸ್‌ ಮುನ್ನಡೆ ಸಾಧಿಸಿದರೂ ಸುಲಭವಾಗಿ ಬಹುಮತ ಸಿಗುವುದಿಲ್ಲ ಎಂದೇ ಬಹುತೇಕ ಸಮೀಕ್ಷೆಗಳು ತಿಳಿಸಿದ್ದವು. ಬಿಜೆಪಿಯು 83-95, ಕಾಂಗ್ರೆಸ್‌ 100-112, ಜೆಡಿಎಸ್‌ 21-29 ಹಾಗೂ ಪಕ್ಷೇತರರು 02-06 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಟಿವಿ 9 ಸಿ ವೋಟರ್‌ ಸಮೀಕ್ಷೆ ತಿಳಿಸಿತ್ತು. ಬಿಜೆಪಿಯು 94-117, ಕಾಂಗ್ರೆಸ್‌ 91-106, ಜೆಡಿಎಸ್‌ 14-24 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಜನ್‌ ಕೀ ಬಾತ್‌ ಸಮೀಕ್ಷೆ ತಿಳಿಸಿತ್ತು.

ಇದನ್ನೂ ಓದಿ: Assembly Elections: ‘ಉಚಿತ ಗ್ಯಾರಂಟಿ’ಗಿಂತ 4 ರಾಜ್ಯಗಳ ಚುನಾವಣೆಯಲ್ಲಿ ಜಾತಿ ಮತಗಳೇ ನಿರ್ಣಾಯಕ!

ಚುನಾವಣೆ ಫಲಿತಾಂಶವು ಬಿಜೆಪಿ, ಜೆಡಿಎಸ್‌ ಬಿಡಿ, ಖುದ್ದು ಕಾಂಗ್ರೆಸ್‌ಗೇ ಅಚ್ಚರಿ ಮೂಡಿಸಿತ್ತು. ಕಾಂಗ್ರೆಸ್‌ ನಿರೀಕ್ಷೆಗೂ ಮೀರಿ ಕಾಂಗ್ರೆಸ್‌ 135 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಕೇವಲ 66 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು. ಜೆಡಿಎಸ್‌ ಕೇವಲ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಮತಗಟ್ಟೆ ಸಮೀಕ್ಷೆಯ ಅಂದಾಜನ್ನೂ ಮೀರಿ ಫಲಿತಾಂಶ ಪ್ರಕಟವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

EXPLAINER

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

12 ದಿನಗಳವರೆಗೆ ಸತತವಾಗಿ ಕಾರ್ಯಾಚರಣೆ ನಡೆಸಿ ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರನ್ನು ರಕ್ಷಿಸಲಾಗಿದೆ. ಹಾಗಾದರೆ, ಇದುವರೆಗೆ ನಡೆದ ಕಾರ್ಯಾಚರಣೆ ಹೇಗಿತ್ತು? ಯಾವ ಸವಾಲುಗಳು ಎದುರಾದವು? ಆದರೂ ಮುನ್ನಡೆ ಸಾಧಿಸಿದ್ದು ಹೇಗೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

VISTARANEWS.COM


on

Uttarakhand Tunnel Collapse
Koo

ಡೆಹ್ರಾಡೂನ್:‌ ‌ಉತ್ತರಾಖಂಡದ ಉತ್ತರಕಾಶಿ (Uttarkashi Tunnel Collapse)ಜಿಲ್ಲೆಯಲ್ಲಿ ಸುರಂಗ ಕುಸಿದು ಅಪಾಯಕ್ಕೆ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ(Uttarkashi Tunnel Rescue). ನವೆಂಬರ್‌ 12ರಂದೇ ಸುರಂಗ ಕುಸಿದಿದ್ದು, ಸತತವಾಗಿ 17 ದಿನ ಕಾರ್ಯಾಚರಣೆ (Rescue Operation) ಕೈಗೊಂಡು ಜನರನ್ನು ರಕ್ಷಣೆ ಮಾಡಲಾಗಿದೆ. ಹಾಗಂತ ಈ 17 ದಿನಗಳ ರಕ್ಷಣಾ ಕಾರ್ಯಾಚರಣೆಯು ಸುಲಭವಾಗಿರಲಿಲ್ಲ. ಭೂಕುಸಿತ, ರಕ್ಷಣೆಗೆ ಬಳಸಿದ ಪೈಪ್‌ಗಳು ಕತ್ತರಿಸುವುದು ಸೇರಿ ಹಲವು ಸವಾಲುಗಳು ಎದುರಾದವು. ಹಾಗಾದರೆ, 17 ದಿನಗಳ ಕಾರ್ಯಾಚರಣೆ ಹೇಗಿತ್ತು? ಇಲ್ಲಿದೆ ಮಾಹಿತಿ.

ಇಲಿ ಬಿಲ ಗಣಿಗಾರಿಕೆ ತಂತ್ರದಿಂದಲೇ ಸಕ್ಸೆಸ್

56 ಮೀಟರ್ ಉದ್ದ ಅವಶೇಷಗಳ ನಡುವೆ ಡ್ರಿಲಿಂಗ್ ಮಾಡಲು ಆಗರ್ ಯಂತ್ರ ಪ್ರಯತ್ನಿಸಿದು. ಆದರೆ, ಇನ್ನು 20 ಮೀಟರ್ ಬಾಕಿ ಇದೆ ಎನ್ನುವಾಗಲೇ ಆ ಡ್ರಿಲಿಂಗ್ ಯಂತ್ರ ಕೈಕೊಟ್ಟಿತು. ಆಗ ರಕ್ಷಣಾ ಸಂಸ್ಥೆಗಳು ರೂಪಿಸಿದ್ದೇ ‘ರ‍್ಯಾಟ್‌ ಹೋಲ್’‌ ಮೈನಿಂಗ್‌. ಅಂತಿಮವಾಗಿ ಇಲಿ ಬಿಲ ಮೈನಿಂಗ್ ತಂತ್ರದ ಮೂಲಕವೇ ಸಿಲುಕಿದ್ದ ಕಾರ್ಮಿಕರನ್ನು ತಲುಪಲು ಸಾಧ್ಯವಾಯಿತು ಮತ್ತು ಮಂಗಳವಾರ 8 ಗಂಟೆ ಹೊತ್ತಿಗೆ ಎಲ್ಲ 41 ಕಾರ್ಮಿಕರನ್ನು ರಕ್ಷಣೆ ಮಾಡಲು ಸಾಧ್ಯವಾಯಿತು.

ರ‍್ಯಾಟ್‌ ಹೋಲ್‌ ಮೈನಿಂಗ್‌ ಎಂದರೆ, ಇಲಿಯಂತೆಯೇ ಚಿಕ್ಕದಾದ ರಂಧ್ರಗಳನ್ನು ಕೊರೆಯುವುದು. ಮನುಷ್ಯರು ಸುಲಭವಾಗಿ ಆ ರಂಧ್ರದಿಂದ ಹೊರಬರಲು ಈ ರೀತಿಯ ರಂಧ್ರಗಳನ್ನು ಕೊರೆಯುತ್ತಾರೆ. ಉತ್ತರಕಾಶಿ ಸುರಂಗದಲ್ಲಿ ಯಂತ್ರಗಳಿಂದಲೂ ಕೊರೆಯಲು ಸಾಧ್ಯವಾಗದ ಕಾರಣ ಈ ಪ್ಲಾನ್‌ ರೂಪಿಸಿ ಯಶಸ್ಸು ಕಾಣಲಾಗಿದೆ. ಇದಕ್ಕೂ ಮೊದಲು ಲಂಬವಾಗಿ 86 ಮೀಟರ್‌ ಕೊರೆಯುವ ಪ್ಲ್ಯಾನ್ ಕೂಡ ಜಾರಿ ಮಾಡಲಾಗಿತ್ತು. ಅಲ್ಲದೇ ಲಂಬವಾಗಿ 36 ಮೀಟರ್‌ ಕೂಡ ಕೊರೆಯಲಾಗಿತ್ತು. ಬಳಿಕ ರ‍್ಯಾಟ್‌ ಹೋಲ್‌ ಮೈನಿಂಗ್‌ ತಂತ್ರದ ಮೂಲಕ ಕೊರೆಯುವ ಕೆಲಸ ಆರಂಭಿಸಲಾಯಿತು. ಅಂತಿಮವಾಗಿ ಮಂಗಳವಾರ ಸಕ್ಸೆಸ್ ದೊರೆಯಿತು.

57 ಮೀಟರ್‌ ಸುರಂಗ ಕೊರೆತ

41 ಕಾರ್ಮಿಕರನ್ನು ಸುರಂಗದಿಂದ ರಕ್ಷಿಸಲು 17 ದಿನಗಳಲ್ಲಿ 57 ಮೀಟರ್‌ ಸುರಂಗವನ್ನು ಕೊರೆಯಲಾಗಿದೆ. ಜೆಸಿಬಿ, ಅತ್ಯಾಧುನಿಕ ಡ್ರಿಲ್ಲಿಂಗ್‌ ಯಂತ್ರಗಳು, ನುರಿತ ಸಿಬ್ಬಂದಿಯು ಇಷ್ಟು ಮೀಟರ್‌ ಸುರಂಗ ಕೊರೆದು, ಅದರ ಅವಶೇಷಗಳನ್ನು ಹೊರಗೆ ಹಾಕಿ, ಕೊನೆಗೂ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಸುಮಾರು 150 ಮೀಟರ್‌ ಸುರಂಗ ಕುಸಿದಿತ್ತು. ಇಷ್ಟೂ ಮೀಟರ್‌ ಸುರಂಗ ಕೊರೆಯಲು ಸಾಧ್ಯವಾಗದ ಕಾರಣ ಉಪಾಯ ಮಾಡಿ, ಕೇವಲ 57 ಮೀಟರ್‌ ಸುರಂಗವನ್ನಷ್ಟೇ ಕೊರೆದು ಜನರನ್ನು ರಕ್ಷಣೆ ಮಾಡಲಾಗಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಏಜೆನ್ಸಿಗಳು

ಸುರಂಗದಲ್ಲಿ ಡ್ರಿಲ್ಲಿಂಗ್‌, ವರ್ಟಿಕಲ್‌ ಡ್ರಿಲ್ಲಿಂಗ್‌ ಸೇರಿ ಹಲವು ರೀತಿಯಲ್ಲಿ ಕಾರ್ಯಾಚರಣೆ ನಡೆಸಲು ದೇಶದ ಐದು ಏಜೆನ್ಸಿಗಳು ಭಾಗಿಯಾದವು. ಆಯಿಲ್‌ ಆ್ಯಂಡ್‌ ನ್ಯಾಚುರಲ್‌ ಗ್ಯಾಸ್‌ ಕಾರ್ಪೊರೇಷನ್‌ (ONGC), ಸತ್ಲುಜ್‌ ಜಲ ವಿದ್ಯುತ್‌ ನಿಗಮ (SJVNL), ರೈಲ್‌ ವಿಕಾಸ ನಿಗಮ ಲಿಮಿಟೆಡ್‌ (RVNL), ನ್ಯಾಷನಲ್‌ ಹೈವೇಸ್‌ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಚರ್‌ ಡೆವಲಪ್‌ಮೆಂಟ್‌ ಕಾರ್ಪೊರೇಷನ್‌ ಲಿಮಿಟೆಡ್‌ (NHIDCL) ಹಾಗೂ ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೊರೇಷನ್‌ ಲಿಮಿಟೆಡ್‌ (THDCL) ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿದವು.

ವಿದೇಶಿ ತಜ್ಞರ ಎಂಟ್ರಿ

ಭೂಕುಸಿತ, ಅವಶೇಷಗಳ ಪ್ರಮಾಣ ಜಾಸ್ತಿ ಇರುವುದು ಸೇರಿ ಹಲವು ಸವಾಲುಗಳು ಎದುರಾದ ಕಾರಣ ವಿದೇಶಿ ತಜ್ಞರನ್ನು ಕರೆಸಲಾಯಿತು. ಇಂಟರ್‌ನ್ಯಾಷನಲ್‌ ಟನೆಲಿಂಗ್‌ ಅಂಡರ್‌ಗ್ರೌಂಡ್‌ ಸ್ಪೇಸ್‌ ಪ್ರೊಫೆಸರ್‌ ಸಂಸ್ಥೆಯ ಅಧ್ಯಕ್ಷ ಅರ್ನಾಲ್ಡ್‌ ಡಿಕ್ಸ್‌ ಅವರ ತಂಡವು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿತು. ಇನ್ನು ಅಮೆರಿಕದಲ್ಲಿ ತಯಾರಾದ ಯಂತ್ರಗಳು, ಡ್ರಿಲ್ಲಿಂಗ್‌ ಮಷೀನ್‌ಗಳು, ಪುಶ್‌ ಇನ್‌ ಪೈಪ್‌ಗಳು ಸೇರಿ ಹಲವು ಅತ್ಯಾಧುನಿಕ ಉಪಕರಣಗಳನ್ನು ಬಳಸಲಾಯಿತು.

ಕಾರ್ಯಾಚರಣೆಗೆ ಮುನ್ನಡೆ ಸಿಕ್ಕಿದ್ದು ಎಲ್ಲಿ?

ಸುರಂಗ ಕುಸಿಯುತ್ತಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ಕಾರ್ಮಿಕರು ಯಾವ ಜಾಗದಲ್ಲಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ, ಪೈಪ್‌ ಮೂಲಕ ಅವರನ್ನು ಸಂಪರ್ಕಿಸಿದ್ದೇ ಕಾರ್ಯಾಚರಣೆಗೆ ಸಿಕ್ಕ ಬಹುದೊಡ್ಡ ಮುನ್ನಡೆ ಎಂದು ತಿಳಿದುಬಂದಿದೆ. ಕ್ಷಿಪ್ರವಾಗಿ ಕಾರ್ಮಿಕರಿದ್ದ ಸ್ಥಳವನ್ನು ಗುರುತಿಸಿದ್ದು, ಅವರ ಜತೆ ಸಂಪರ್ಕ ಸಾಧಿಸಿದ ಕಾರಣ ಅವರಿಗೆ ಆಹಾರ ಸೇರಿ ಅಗತ್ಯ ಮೂಲ ಸೌಕರ್ಯಗಳನ್ನು ನೀಡಲು ಸಾಧ್ಯವಾಯಿತು. ಅವರಿಗೆ ಧೈರ್ಯ ತುಂಬಿ, ಯೋಗ ಮಾಡಲು ಸಲಹೆ ಕೊಟ್ಟು, ಒತ್ತಡ ನಿರೋಧಕ ಮಾತ್ರೆಗಳನ್ನು ಪೂರೈಸಿ 12 ದಿನವೂ ಅವರು ಯಾವುದೇ ಒತ್ತಡಕ್ಕೆ ಸಿಲುಕದಂತೆ ನೋಡಿಕೊಳ್ಳಲಾಯಿತು. ಇದು ಕಾರ್ಯಾಚರಣೆಗೆ ಸಿಕ್ಕ ಬಹುದೊಡ್ಡ ಮುನ್ನಡೆ ಎನ್ನಲಾಗಿದೆ.

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. ಸುಮಾರು 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿತ್ತು. ನವೆಂಬರ್‌ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಷ್ಟಾದರೂ ಕ್ಷಿಪ್ರವಾಗಿ ಕಾರ್ಮಿಕರನ್ನು ರಕ್ಷಣೆ ಮಾಡಲು ಆಗಿರಲಿಲ್ಲ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಬೃಹತ್ ಕಾಮಗಾರಿ ವೇಳೆ ಕಾರ್ಮಿಕರ ಸುರಕ್ಷತೆ ಖಾತರಿಪಡಿಸಿ

ಉತ್ತರಕಾಶಿಯಿಂದ ಯಮುನೋತ್ರಿಗೆ 26 ಕಿಲೋಮೀಟರ್‌ ಸಂಚರಿಸುವುದನ್ನು ಕಡಿಮೆಗೊಳಿಸಲು ಸುರಂಗ ನಿರ್ಮಿಸಲಾಗುತ್ತಿದೆ. ಸುರಂಗ ಕುಸಿಯುತ್ತಲೇ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಒಳಗೆ ಸಿಲುಕಿದ್ದರು. ಏಕಾಏಕಿ ಸುರಂಗ ಕುಸಿದ ಕಾರಣ ಒಬ್ಬ ಕಾರ್ಮಿಕರೂ ಹೊರಗೆ ಬರಲು ಸಾಧ್ಯವಾಗಿರಲಿಲ್ಲ. ಉತ್ತರಾಖಂಡ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಭೂಕುಸಿತ, ಡ್ರಿಲ್ಲಿಂಗ್‌ ಯಂತ್ರಗಳು ಕೈಕೊಟ್ಟಿರುವುದು ಸೇರಿ ಹಲವು ಕಾರಣಗಳಿಂದಾಗಿ ಕಾರ್ಮಿಕರ ರಕ್ಷಣೆಯು ಕಷ್ಟವಾಗಿತ್ತು. ವಿದೇಶಿ ತಜ್ಞರನ್ನೂ ಜನರ ರಕ್ಷಣೆಗೆ ಕರೆಸಲಾಗಿತ್ತು. ಈಗ ಕೊನೆಗೆ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dina Bhavishya
ಪ್ರಮುಖ ಸುದ್ದಿ54 mins ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Vistara News impact, Governmet to scrap 7 d rule of SCSP and TSP act
ಕರ್ನಾಟಕ6 hours ago

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

WPL Auction 2024
ಕ್ರಿಕೆಟ್6 hours ago

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

Supreme Court will deliver judgment on Dece 11 about J and K Special Status scrap
ಕೋರ್ಟ್7 hours ago

ಆರ್ಟಿಕಲ್ 370 ರದ್ದು ಸಿಂಧುವೇ?; ಡಿ.11ಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು

Pro Kabaddi
ಕ್ರೀಡೆ7 hours ago

Pro Kabaddi: ಗುಜರಾತ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ಪಾಟ್ನಾ

Is 500 note with star symbol is fake, What Fact Check says?
Fact Check8 hours ago

Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

kavya maran
ಐಪಿಎಲ್ 20238 hours ago

ಸ್ಟಾರ್​​ ಆಟಗಾರನ ಖರೀದಿಗೆ ಸ್ಕೆಚ್​ ಹಾಕಿದ ಸಖತ್ ಕ್ಯೂಟ್ ಓನರ್ ಕಾವ್ಯ ಮಾರನ್

Inauguration of Hulleshwar Jnana vikas Center at Yakshi Village
ಶಿವಮೊಗ್ಗ8 hours ago

Shivamogga News: ಯಕ್ಷಿ ಗ್ರಾಮದಲ್ಲಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

14 Medium and Large Irrigation Projects Completed in Kalyana Karnataka says Minister Ramalinga reddy
ಕರ್ನಾಟಕ8 hours ago

ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಮಧ್ಯಮ, ಬೃಹತ್ ನೀರಾವರಿ ಯೋಜನೆಗಳು ಪೂರ್ಣ: ರಾಮಲಿಂಗಾರೆಡ್ಡಿ

More than a hundred people from Kiravatti have joined the Congress party
ಉತ್ತರ ಕನ್ನಡ8 hours ago

Uttara Kannada News: ಕಿರವತ್ತಿ ಭಾಗದ 100ಕ್ಕೂ ಹೆಚ್ಚು ಜನ ಕಾಂಗ್ರೆಸ್‌ಗೆ ಸೇರ್ಪಡೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ54 mins ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ11 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ12 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ18 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌