5G Services Launch | ದೇಶದಲ್ಲಿ ಅಂತರ್ಜಾಲದ ಹೊಸ ಯುಗ: 5 ಜಿ ಉದ್ಘಾಟಿಸಿ ಮೋದಿ ಭರವಸೆ - Vistara News

5 G

5G Services Launch | ದೇಶದಲ್ಲಿ ಅಂತರ್ಜಾಲದ ಹೊಸ ಯುಗ: 5 ಜಿ ಉದ್ಘಾಟಿಸಿ ಮೋದಿ ಭರವಸೆ

5G ಸೇವೆಗಳ ಮೂಲಕ ದೇಶದಲ್ಲಿ ಇಂಟರ್‌ನೆಟ್ ಸೇವೆಗಳ ಹೊಸ ಯುಗವೊಂದು ತೆರೆದುಕೊಳ್ಳಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

VISTARANEWS.COM


on

‌ಪ್ರಧಾನಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: 5 ಜಿ ಸಂಪರ್ಕದೊಂದಿಗೆ, ದೇಶದಲ್ಲಿ ಆಧುನಿಕತೆಯ ಹೊಸ ಯುಗವೊಂದು ಆರಂಭವಾಗಲಿದೆ. ಯುವಜನತೆಗೆ ನೂತನ ಅವಕಾಶಗಳು ತೆರೆದುಕೊಳ್ಳಲಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದರು.

ನವ ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಇಂಡಿಯನ್‌ ಮೊಬೈಲ್‌ ಕಾಂಗ್ರೆಸ್‌ನಲ್ಲಿ ಅವರು ದೇಶದಲ್ಲಿ 5G ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದರು. ಶಕ್ತಿದೇವತೆಯನ್ನು ಪೂಜಿಸುವ ನವರಾತ್ರಿಯ ಶುಭಪರ್ವದ ಸಂದರ್ಭದಲ್ಲಿ ಶಕ್ತಿಯ ಇನ್ನೊಂದು ಮಾಧ್ಯಮವೆನಿಸಿದ 5G ದೇಶದ ೧೨೫ ಕೋಟಿ ಜನತೆಗೆ ಅರ್ಪಿಸುವುದಕ್ಕೆ ನನಗೆ ಆನಂದವೆನಿಸುತ್ತದೆ. ಇದೊಂದು ಐತಿಹಾಸಿಕ ದಿನ, ಕ್ಷಣ. ಭಾರತದ ಇದರ ಮೂಲಕ ಟೆಲಿಕಾಂ ಜಗತ್ತಿನಲ್ಲಿ ಜಗತ್ತಿಗೇ ಮಾದರಿಯನ್ನು ಕಲ್ಪಿಸಲಿದೆ ಎಂದು ಅವರು ನುಡಿದರು.

ಗುಜರಾತ್‌ನಲ್ಲಿ 24 ಗಂಟೆ ವಿದ್ಯುತ್‌ ಒದಗಿಸಿದಂತೆ ವಿದ್ಯುತ್‌ ಅವಲಂಬಿಸಿ ಮಾಡಬಹುದಾದ ಕೆಲಸಗಳು ಹಾಗೂ ಉಪಕರಣಗಳ ಮಾರುಕಟ್ಟೆಯೂ ವರ್ಧಿಸಿತು. ಹಾಗೆಯೇ 5G ಅವಂಬಿಸಿಯೂ ಜೀವನಶೈಲಿಯಲ್ಲಿ ದೊಡ್ಡ ಮಾರ್ಪಾಡು ಆಗಲಿದೆ. 5G ಎಂದರೆ ಕೇವಲ ಮನರಂಜನೆಯ ಹೆಚ್ಚಳ ಮಾತ್ರ ಆಗುವುದಿಲ್ಲ. ಅದು ಬಡವರೂ ಸೇರಿದಂತೆ ಎಲ್ಲ ವಲಯದ ಜೀವನವನ್ನು ಸುಧಾರಿಸಲಿದೆ. ನಾವು ನೇರ ಪಾವತಿ ಕಾರ್ಯಕ್ರಮವನ್ನು ಆರಂಭಿಸಿದಾಗ ತುಂಬಾ ಮಂದಿ ಅದರ ಪರಿಣಾಮಕಾರತ್ವದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಜಗತ್ತಿನ ಬೇರೆ ಬೇರೆ ಮುಂದುವರಿದ ದೇಶಗಳು ಕೂಡ ಇದನ್ನು ಒದಗಿಸುವಲ್ಲಿ ಸೋತಿದ್ದವು. ಆದರೆ ಭಾರತ ಅದನ್ನು ಒಂದೇ ಕ್ಲಿಕ್‌ನಲ್ಲಿ ಸಾಧಿಸಬಹುದು ಎಂಬುದನ್ನು ತೋರಿಸಿತು. 5G ವಿಷಯದಲ್ಲೂ ಹೀಗೇ ಆಗಲಿದೆ ಎಂದರು.

ಇದೇ ೨ ಜಿಗೂ ೫ ಜಿಗೂ ಇರುವ ವ್ಯತ್ಯಾಸ!

ಇಂದು ನಾವು ಆತ್ಮನಿರ್ಭರ ಭಾರತ, ಡಿಜಿಟಲ್‌ ಭಾರತ ಆಗಿದ್ದೇವೆ. ಸರ್ಕಾರ ಸರಿಯಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಇದನ್ನು ಸಾಧಿಸಬಹುದು ಎಂದು ತೋರಿಸಿದ್ದೇವೆ. ಇದೇ 2G ನಿಯತ್ತಿಗೂ 5G ನಿಯತ್ತಿಗೂ ಇರುವ ವ್ಯತ್ಯಾಸ ಎಂದು ಪ್ರಧಾನಿ ಯುಪಿಎ ಸರ್ಕಾರದ ʻ2G ಹಗರಣʼಕ್ಕೆ ಪರೋಕ್ಷವಾಗಿ ಟಾಂಗ್‌ ನೀಡಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ, ನವರಾತ್ರಿಯ ಹಬ್ಬದಲ್ಲಿ ಈ ಐತಿಹಾಸಿಕ ದಿವಸ ದಾಖಲಾಗಲಿದೆ. ಇದೊಂದು ರೋಮಾಂಚಿತಗೊಳಿಸುವ ಅನುಭವ. ಇದರಲ್ಲಿ ನಮ್ಮೊಂದಿಗೆ ದೊಡ್ಡ ದೊಡ್ಡ ತಂತ್ರಜ್ಞಾನದ ಉದ್ಯಮಿಗಳೊಂದಿಗೆ ಗ್ರಾಮಿಣ ಶಾಲೆಗಳ ವಿದ್ಯಾರ್ಥಿಗಳು, ಗ್ರಾಮಸ್ಥರು, ಕೆಲಸಗಾರರು ಸಹ ಸಹಭಾಗಿಗಳಾಗಿದ್ದಾರೆ. ಇದು ನವ ಭಾರತದ ಸಂಕಲ್ಪದ ದಿನ. ನಾವು ಇಂದು ಟೆಕ್ನಾಲಜಿಯ ಗ್ರಾಹಕರಾಗಿರುವುದು ಮಾತ್ರವಲ್ಲ, ಭವಿಷ್ಯದ ವೈರ್‌ಲೆಸ್‌ ತಂತ್ರಜ್ಞಾನ ರೂಪಿಸುವಲ್ಲಿಯೂ ಭಾರತದ ಭೂಮಿಕೆಯಿದೆ. 5G ಅಳವಡಿಕೆಯಲ್ಲಿ ನಾವು ಜಾಗತಿಕ ಮಾನದಂಡವನ್ನು ಸರಿಗಟ್ಟಿದ್ದೇವೆ ಎಂದರು.

ಆತ್ಮ ನಿರ್ಭರ ಭಾರತ

2G, 3G, 4Gಯ ಸಮಯದಲ್ಲಿ ನಮಗೆ ಅನ್ಯ ದೇಶಗಳ ಅವಲಂಬನೆ ಇತ್ತು. ಆದರೆ 5Gಯ ವೇಳೆಗೆ ಸಮಯದಲ್ಲಿ ನಾವು ಸ್ವಾವಲಂಬಿಗಳಾಗಿದ್ದೇವೆ. ನಾನು ಆತ್ಮನಿರ್ಭರ ಭಾರತದ ಕುರಿತು ಮಾತಾಡಿದ್ದಾಗ ಕೆಲವರು ತಮಾಷೆ ಮಾಡಿದರು. ಆದರೆ 2014ರಲ್ಲಿ ನಮ್ಮ ದೇಶದಲ್ಲಿ ಎರಡೇ ಮೊಬೈಲ್‌ ತಯಾರಿ ಯುನಿಟ್‌ಗಳಿದ್ದವು. ಈಗ ಅವುಗಳ ಸಂಖ್ಯೆ 200ಕ್ಕೂ ಹೆಚ್ಚಿದೆ. ನಾವು ಉದ್ಯಮಕ್ಕೆ ಭತ್ಯೆ ಕೊಟ್ಟೆವು, ಖಾಸಗಿ ವಲಯವನ್ನು ಪ್ರೋತ್ಸಾಹಿಸಿದೆವು. ಈಗ ಕೋಟ್ಯಂತರ ಮೊಬೈಲ್‌ಗಳನ್ನು ರಫ್ತು ಮಾಡುವಷ್ಟು ಬೆಳೆದು ನಿಂತಿದ್ದೇವೆ. 2014ರಲ್ಲಿ, 6 ಕೋಟಿ ಬ್ರಾಂಡ್‌ಬ್ಯಾಂಡ್‌ ಬಳಕೆದಾರರನ್ನು ಹೊಂದಿದ್ದೆವು, ಈಗ ನಾವು ಸುಮಾರು 80 ಕೋಟಿ ಬಳಕೆದಾರರನ್ನು ಹೊಂದಿದ್ದೇವೆ. 2014ರಲ್ಲಿ ನಾವು 25 ಕೋಟಿ ಇಂಟರ್ನೆಟ್ ಸಂಪರ್ಕಗಳನ್ನು ಹೊಂದಿದ್ದೆವು, ಈಗ ನಾವು ಸುಮಾರು 85 ಕೋಟಿ ಸಂಪರ್ಕಗಳನ್ನು ಹೊಂದಿದ್ದೇವೆ. 5G ಮೂಲಕ ಭಾರತದ ಯುವಜನತೆಗೆ ಇನ್ನಷ್ಟು ದೊಡ್ಡ ಅವಕಾಶಗಳು ದೊರೆಯಲಿವೆ ಎಂದರು.

ಇದನ್ನೂ ಓದಿ | 5G Services Launch | ಭಾರತದಲ್ಲಿ 5ಜಿ ಜಮಾನಾ ಶುರು; ಏನಿದು ಇಂಟರ್‌ನೆಟ್‌ ಕ್ರಾಂತಿ? ಏನಿದರ ಅನುಕೂಲ?

ನಮ್ಮ ಡಿಜಿಟಲ್‌ ಇಂಡಿಯಾ ಯೋಜನೆ ಸಫಲತೆ ಕಂಡಿದೆ. ಮೊದಲಿಗೆ ಬಹಳ ಮಂದಿ ಇದೊಂದು ಕೇವಲ ಸರ್ಕಾರಿ ಯೋಜನೆ ಎಂದು ಭಾವಿಸಿದ್ದರು. ಆದರೆ ಅದು ದೇಶದ ವಿಕಾಸದ ದೂರದೃಷ್ಟಿಯಾಗಿತ್ತು. ಇಂದು ಸಣ್ಣಪುಟ್ಟ ವ್ಯಾಪಾರಿಯ ಬಳಿಯೂ ಯುಪಿಐ ಪಾವತಿ ಮಾಡುತ್ತಾನೆ. ಇಂದು ಭಿಕ್ಷುಕನೂ ಡಿಜಿಟಲ್‌ ಪಾವತಿ ಅಪೇಕ್ಷಿಸುತ್ತಾನೆ. ಪಾರದರ್ಶಕತೆ ಗಮನಿಸಿ. ನಾವು ಜನರಿಗಾಗಿ, ಜನರ ಜತೆ ಕೈಜೋಡಿಸಿ ಕೆಲಸ ಮಾಡಬೇಕು.

ಅಂದು ೧ ಜಿಬಿಗೆ ೩೦೦ ರೂ, ಇಂದು ೧೦ ರೂ.

ಡಿಜಿಟಲ್‌ ಭಾರತದ ಆಧಾರಸ್ತಂಭಗಳು ನಾಲ್ಕು. ಒಂದು ಮೊಬೈಲ್‌ ಸಾಧನದ ಬೆಲೆ. ಇಂದು ಕಡಿಮೆ ದರದಲ್ಲಿ ಹೆಚ್ಚಿನ ಪೀಚರ್‌ಗಳಿರುವ ಸಾಧನಗಳು ಲಭ್ಯವಿವೆ. ಎರಡನೆಯದು ಕನೆಕ್ಟಿವಿಟಿ. ದೇಶದ ಮೂಲೆ ಮೂಲೆಗೂ ಇಂದು ಅಂತರ್ಜಾಲ ಹಾಗೂ ಆಪ್ಟಿಕಲ್‌ ಫೈಬರ್‌ ತಲುಪಿದ್ದು, 5G ಮೂಲಕ ಅದು ಇನ್ನೊಂದು ಹಂತಕ್ಕೆ ತಲುಪಲಿದೆ. ಮೂರನೆಯದು ಡೇಟಾ ಬೆಲೆ. 5Gಯೊಂದಿಗೆ ಡೇಟಾ ಬೆಲೆಯೂ ಇಳಿಯುತ್ತದೆ. 2014ರಲ್ಲಿ ಡೇಟಾದ ಬೆಲೆ 1 ಜಿಬಿಗೆ 300 ರೂ.ಗಳಷ್ಟಿತ್ತು. ಇಂದು ಅದು 10 ರೂ.ಗೆ ಇಳಿದಿದೆ. ಮುಂದೆ 5G ಸಂಪರ್ಕ ಹೆಚ್ಚಳದೊಂದಿಗೆ ಅದು ಇನ್ನೂ ಇಳಿಯಲಿದೆ. ನಾಲ್ಕನೆಯದು ಡಿಜಿಟಲ್‌ ಫಸ್ಟ್‌ ಎಂಬ ಚಿಂತನೆ ಎಲ್ಲರಲ್ಲಿ ಮೂಡಬೇಕು. ಅದು ಈಗಾಗಲೇ ದೇಶದಲ್ಲಿ ಬೇರೂರಿದೆ. ʼಎಲ್ಲರಿಗೂ ಇಂಟರ್‌ನೆಟ್‌ʼ ಎಂಬುದು ನಮ್ಮ ದೂರದೃಷ್ಟಿ. ಡೇಟಾ ಕ್ರಾಂತಿಗೆ ಇಂದು ಜನ್ಮ ನೀಡಲಾಗಿದೆ. ಕಡು ಬಡವರೂ ಡಿಜಿಟಲ್‌ ಬಳಕೆ ಮಾಡುವ ದಿನಗಳು ದೂರವಿಲ್ಲ ಎಂದರು.

ಇದನ್ನೂ ಓದಿ | 5G Services Launch | ಇಂಟರ್‌ನೆಟ್‌ ಮಹಾ ಕ್ರಾಂತಿ: ಭಾರತದಲ್ಲಿ 5G ಸೇವೆಗೆ ಪಿಎಂ ಮೋದಿ ಚಾಲನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

SmartPhone: ಆನ್‌ಲೈನ್‌ನಲ್ಲಿ ಮೊಬೈಲ್ ಖರೀದಿಸುವ ಯೋಚನೆ ಇತ್ತಾ? ನಿಮಗೊಂದು ಶಾಕಿಂಗ್ ನ್ಯೂಸ್!

ಶಿಯೋಮಿ ಮತ್ತು ರಿಯಲ್ ಮಿ ಸ್ಮಾರ್ಟ್ ಫೋನ್  ಬ್ರ್ಯಾಂಡ್ ಗಳು ಚಿಲ್ಲರೆ ವ್ಯಾಪಾರಿಗಳು ನೀಡುತ್ತಿರುವ ರಿಯಾಯಿತಿಗಳಿಗೆ ತಡೆ ಹಾಕಲು ಮುಂದಾಗಿದೆ. ಅಧಿಕೃತ ಚಾನೆಲ್‌ಗಳ ಹೊರಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ತಡೆಯುವ ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡು ಎಚ್ಚರಿಕೆ ನೀಡಿವೆ.

VISTARANEWS.COM


on

SmartPhone
Koo

ಬೆಂಗಳೂರು: ಶಿಯೋಮಿ ಮತ್ತು ರಿಯಲ್ ಮಿ ಸ್ಮಾರ್ಟ್ ಫೋನ್  ಬ್ರ್ಯಾಂಡ್‌ಗಳು ಆನ್‌ ಲೈನ್ ಪ್ಲಾಟ್‌ ಫಾರ್ಮ್‌ ಗಳಲ್ಲಿ ತಮ್ಮ ಮೊಬೈಲ್ ಫೋನ್‌ಗಳಿಗೆ (Mobile phone) ಚಿಲ್ಲರೆ ವ್ಯಾಪಾರಿಗಳು ನೀಡುತ್ತಿರುವ ರಿಯಾಯಿತಿಗಳಿಗೆ ಬ್ರೇಕ್ ಹಾಕಲು ಹೊರಟಿವೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಅಂದರೆ, ಇನ್ನು ಮುಂದೆ ಪ್ರಮುಖ ಬ್ರ್ಯಾಂಡ್‌ಗಳ ಮೊಬೈಲ್‌ಗಳು ಆನ್‌ಲೈನ್‌ ಮೂಲಕ ಹೆಚ್ಚಿನ ರಿಯಾಯಿತಿ ದರದಲ್ಲಿ ಸಿಗುವುದಿಲ್ಲ.

ಭಾರತದಲ್ಲಿ ತಮ್ಮ ಉತ್ಪನ್ನಗಳ ಮಾರಾಟದ ವ್ಯಾಪ್ತಿ ಹೆಚ್ಚಿಸಲು ಕಂಪನಿಗಳು ಆಫ್‌ ಲೈನ್ ಚಾನಲ್ ಗಳಿಗೆ ಒತ್ತು ನೀಡುವ ಗುರಿಯನ್ನು ಹೊಂದಿವೆ. ಹಾಗಾಗಿ ಆನ್‌ಲೈನ್‌ ರಿಯಾಯಿತಿಗಳಿಗೆ ತಡೆ ಹಾಕಲು ಮುಂದಾಗಿವೆ. ಆನ್‌ಲೈನ್‌ ರಿಯಾಯಿತಿ ಮಾರಾಟದಿಂದಾಗಿ ತಮಗೆ ಭಾರಿ ನಷ್ಟವಾಗುತ್ತಿದೆ ಎಂದು ಚಿಲ್ಲರೆ ವ್ಯಾಪಾರಿಗಳ ಸಂಘಗಳು ದೂರಿದ್ದವು. ಈ ಹಿನ್ನೆಲೆಯಲ್ಲಿ ಶಿಯೋ ಮಿ ಮತ್ತು ರಿಯಲ್ ಮಿ ಕಂಪನಿಗಳು ರಿಯಾಯಿತಿ ದರದಲ್ಲಿನ ಆನ್‌ಲೈನ್‌ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿವೆ. ಮಿತಿ ಮೀರಿದ ವಿನಾಯಿತಿ ನೀಡುವವರನ್ನು ಪತ್ತೆ ಹಚ್ಚಿ ದಂಡ ವಿಧಿಸುವ ಉದ್ದೇಶದಿಂದ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಸ್ಟಾಕ್ ಗಳನ್ನು ಈ ಕಂಪನಿಗಳು ಮರುಖರೀದಿ ಮಾಡುತ್ತಿವೆ ಎಂದು ವರದಿಗಳು ತಿಳಿಸಿವೆ.

ವ್ಯಾಪಾರಿಗಳ ಮೇಲೆ ಏನು ಕ್ರಮ?

ಬ್ರ್ಯಾಂಡ್‌ ಗಳು ಸದ್ಯಕ್ಕೆ ಚಿಲ್ಲರೆ ವ್ಯಾಪಾರಿಗಳ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ. ಅಧಿಕೃತ ಚಾನೆಲ್‌ಗಳ ಹೊರಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ತಡೆಯುವ ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡು ಎಚ್ಚರಿಕೆ ನೀಡುತ್ತಿವೆ. ಜಮ್ಮು, ಪಶ್ಚಿಮ ಬಂಗಾಳ, ಹರಿಯಾಣ ಮತ್ತು ತಮಿಳುನಾಡಿನ ಹಲವು ಚಿಲ್ಲರೆ ವ್ಯಾಪಾರಿಗಳಿಂದ ಈ ರೀತಿ ಸಹಿ ಹಾಕಿಸಿಕೊಳ್ಳಲಾಗಿದೆ.

ಆನ್‌ ಲೈನ್ ಮೊಬೈಲ್ ಮಾರಾಟದ ಹೆಚ್ಚಿನ ರಿಯಾಯಿತಿಗಳ ಮೇಲೆ ದೂರು

ಆಲ್ ಇಂಡಿಯಾ ಮೊಬೈಲ್  ರೀಟೇಲರ್ಸ್ ಅಸೋಸಿಯೇಷನ್ (AIMRA)ನ ರಾಜ್ಯ ಘಟಕಗಳಿಂದ ಹಲವಾರು ದೂರುಗಳು ಬಂದಿವೆ. ಅದರ ಪ್ರಕಾರ ಶಿಯೋಮಿ, ರಿಯಲ್ ಮಿ ಮತ್ತು ಸ್ಯಾಮ್ ಸಂಗ್ ನಂತಹ ಬ್ರ್ಯಾಂಡ್‌ ಗಳ ಹನ್ನೆರಡು ಉತ್ಪನ್ನಗಳನ್ನು ಆನ್‌ಲೈನ್ ಚಾನೆಲ್‌ ಗಳಲ್ಲಿ ಸುಮಾರು 1,000-2,000 ರೂ. ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ:Phone Addiction: ಸ್ಮಾರ್ಟ್‌ಫೋನ್‌ ಚಟದಿಂದ ಹೊರಬರಲು ಹೀಗೆ ಮಾಡಿ!

“ಇಕಾಮರ್ಸ್ ಪ್ಲಾಟ್‌ ಫಾರ್ಮ್‌ಗಳು ಆನ್‌ ಲೈನ್‌ನಲ್ಲಿ ಚಿಲ್ಲರೆ ವ್ಯಾಪಾರಿಗಳನ್ನು ನೋಂದಾಯಿಸಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಬ್ರ್ಯಾಂಡ್ ಅನುಮತಿಸಿದೆ. ಇದು ನಿಜವಾಗಿಯೂ ಆತಂಕಕಾರಿ ಪರಿಸ್ಥಿತಿಯಾಗಿದೆ. ಗ್ರಾಹಕರಿಗೆ ತಮ್ಮ ಅತ್ಯುತ್ತಮ ಸಾಮರ್ಥ್ಯಗಳೊಂದಿಗೆ ಉತ್ಪನ್ನವನ್ನು ಮಾರಾಟ ಮಾಡಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿರುವ ಮುಖ್ಯ ಚಿಲ್ಲರೆ ವ್ಯಾಪಾರಿಗಳ ನಂಬಿಕೆಯನ್ನು ಬ್ರ್ಯಾಂಡ್ ಕಳೆದುಕೊಳ್ಳುತ್ತಿದೆ.”  ಎಂದು ಚಿಲ್ಲರೆ ವ್ಯಾಪಾರಿಗಳ ಸಂಘವು ಮಾರ್ಚ್ 26ರಂದು ರಿಯಲ್ ಮಿಗೆ ಬರೆದ ಪತ್ರದಲ್ಲಿ ತಿಳಿಸಿತ್ತು.

ಇದೇ ರೀತಿಯ ಪತ್ರಗಳನ್ನು ಶಿಯೋಮಿಗೂ ಕಳುಹಿಸಲಾಗಿದೆ. ಅದರ ಪ್ರತಿನಿಧಿಯೊಬ್ಬರು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ನಾವು ಈ ಸಮಸ್ಯೆಯ ಮೂಲ ಹುಡುಕಲು ಮತ್ತು ಭಾರೀ ದಂಡದೊಂದಿಗೆ ಅದನ್ನು ಸರಿಪಡಿಸಲು ಸ್ಟಾಕ್‌ ಗಳನ್ನು ಖರೀದಿಸುತ್ತಿದ್ದೇವೆ ಎಂದವರು ತಿಳಿಸಿದ್ದಾರೆ.

Continue Reading

5 G

Team India : ಭಾರತ ತಂಡ 2024ರ ಮಾರ್ಚ್​ ತನಕವೂ ಬ್ಯುಸಿ; ಇಲ್ಲಿದೆ ಟೂರ್ನಿಗಳ ವಿವರ

ಮುಂದಿನ ನಾಲ್ಕು ತಿಂಗಳಲ್ಲಿ ಭಾರತವು (Team India) ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ವಿರುದ್ಧ ಸರಣಿಗಳನ್ನು ಆಡಲಿದೆ.

VISTARANEWS.COM


on

Cricket news
Koo

ಬೆಂಗಳೂರು: ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್​ಗಳಿಂದ ಸೋತ ನಂತರ ಬೇಸರದಲ್ಲಿದೆ. ಆದರೆ, ಹೆಚ್ಚು ದಿನ ಅದೇ ಮೂಡ್​ನಲ್ಲಿ ಇರಲು ಅವಕಾಶವಿಲ್ಲ. ಟೀಮ್ ಇಂಡಿಯಾ ಮುಂದಿನ ಮೂರು ತಿಂಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿರಲಿದೆ. ನಿರಂತರ ವೇಳಾಪಟ್ಟಿಯನ್ನು ಹೊಂದಿರುವುದರಿಂದ ತ್ವರಿತವಾಗಿ ಮರು ಸಂಘಟನೆಗೊಳ್ಳಬೇಕಾಗಿಎ. ವಿಶ್ವಕಪ್ ಬಳಿಕ ಟೀಂ ಇಂಡಿಯಾ ನವೆಂಬರ್ 23ರಿಂದ ಆರಂಭವಾಗಲಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಅದಕ್ಕೀಗ ತಂಡ ಪ್ರಕಟಗೊಂಡಿದೆ.

ರೋಹಿತ್ ಶರ್ಮಾ ನೇತೃತ್ವದ ತಂಡವು ಡಿಸೆಂಬರ್​ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ಮೂರು ಟಿ 20 ಮತ್ತು ಅನೇಕ ಏಕದಿನ ಪಂದ್ಯಗಳನ್ನು ಆಡಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು ಎದುರಿಸಲಿದ್ದಾರೆ. ಇದಲ್ಲದೆ, ಭಾರತವು ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ 20 ಐ ಸರಣಿಯೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸಲಿದೆ. ನಂತರ ಜನವರಿ ಕೊನೆಯ ವಾರದಲ್ಲಿ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿ ಪ್ರಾರಂಭವಾಗಲಿದೆ.

ಟಿ20ಗೆ ಆದ್ಯತೆ

ಮುಂಬರುವ ಪ್ರವಾಸಗಳು ಟಿ 20 ಪಂದ್ಯಗಳಿಂದಲೇ ತುಂಬಿರುತ್ತವೆ. ಏಕೆಂದರೆ ತಂಡದ ಪ್ರಮುಖ ಗಮನವು ಯುಎಸ್ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2024 ರ ಮೇಲೆ ಇರುತ್ತದೆ. ಇದಲ್ಲದೆ, ನಿರ್ಣಾಯಕ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ವಿರುದ್ಧ ಸೆಣಸಲಿರುವ ಭಾರತ ಟೆಸ್ಟ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶೀಪ್​ (ಡಬ್ಲ್ಯುಟಿಸಿ) ಪಾಯಿಂಟ್ಸ್ ಟೇಬಲ್​​ನಲ್ಲಿ ನಿರ್ಣಾಯಕ ಅಂಕಗಳನ್ನು ಸಂಗ್ರಹಿಸಲು ಸಜ್ಜಾಗಿದೆ.

ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ ಟೀಮ್ ಇಂಡಿಯಾ ಪ್ರಸ್ತುತ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಒಂದು ಡ್ರಾದೊಂದಿಗೆ ಎರಡನೇ ಸ್ಥಾನದಲ್ಲಿದೆ. ಪಂದ್ಯಾವಳಿಯ ಹಿಂದಿನ ಎರಡು ಆವೃತ್ತಿಗಳಲ್ಲಿ ರನ್ನರ್ ಅಪ್ ಸ್ಥಾನ ಪಡೆದ ಭಾರತ ತಂಡ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ಅಪೇಕ್ಷಿತ ಗದೆ ರೂಪದ ಟ್ರೋಫಿಗೆ ಗೆಲ್ಲಲು ಸಿದ್ಧವಾಗಬೇಕಿದೆ.

ಇದನ್ನೂ ಓದಿ: Team India : ಜನವರಿಯಲ್ಲಿ ನಡೆಯಲಿದೆ ಅಫಘಾನಿಸ್ತಾನ ವಿರುದ್ಧ ಕ್ರಿಕೆಟ್​ ಸರಣಿ

ಪಂತ್​ಗಾಗಿ ಕಾಯುವಿಕೆ

ಪ್ಯಾಕ್ ಆಗಿರುವ ವೇಳಾಪಟ್ಟಿಯ ಹೊರತಾಗಿ, 2022 ರ ಡಿಸೆಂಬರ್​ನಲ್ಲಿ ಭೀಕರ ಕಾರು ಅಪಘಾತದ ಬಳಿಕ ಸುಧಾರಿಸಿಕೊಳ್ಳುತ್ತಿರುವ ಮತ್ತು ಸುಮಾರು ಒಂದು ವರ್ಷದಿಂದ ಆಟದಿಂದ ಹೊರಗುಳಿದಿದ್ದ ರಿಷಭ್ ಪಂತ್ ಮತ್ತೆ ಭಾರತೀಯ ತಂಡಕ್ಕೆ ಮರಳಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕ ಸೌರವ್ ಗಂಗೂಲಿ ಅವರು ಪಂತ್ ಐಪಿಎಲ್ 2024 ರಲ್ಲಿ ಭಾಗವಹಿಸುತ್ತಾರೆ ಎಂದು ಖಚಿತಪಡಿಸಿದ್ದಾರೆ ಮತ್ತು ಅವರ ಅಂತಾರಾಷ್ಟ್ರೀಯ ಪುನರಾಗಮನವು ಫೆಬ್ರವರಿ 2023 ರಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯ ಸಮಯದಲ್ಲಿ ನಡೆಯುವ ಸಾಧ್ಯತೆಯಿದೆ.

Continue Reading

5 G

BSNL 5G : ಗ್ರಾಹಕರಿಗೆ ಸಿಹಿ ಸುದ್ದಿ, ವರ್ಷಾಂತ್ಯಕ್ಕೆ ದೇಶಾದ್ಯಂತ ಸಿಗಲಿದೆ ಬಿಎಸ್ಸೆನ್ನೆಲ್‌ 5ಜಿ

VISTARANEWS.COM


on

BSNL users data hack and sold on dark web
Koo

ನವ ದೆಹಲಿ: ಬಿಎಸ್ಸೆನ್ನೆಲ್‌ನ (BSNL 5G) 4ಜಿ ನೆಟ್‌ ವರ್ಕ್‌ 2023ರ ವರ್ಷಾಂತ್ಯದ ವೇಳೆಗೆ 5ಜಿಗೆ ಮೇಲ್ದರ್ಜೆಗೇರಲಿದೆ ಎಂದು ಕೇಂದ್ರ ದೂರಸಂಪರ್ಕ ಖಾತೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. (BSNL 5G) ಕಂಪನಿಯು ಪಂಜಾಬ್-ಫಿರೋಜ್‌ಪುರ್‌, ಪಠಾಣ್‌ ಕೋಟ್‌ ಮತ್ತು ಅಮೃತ್‌ಸರದಲ್ಲಿ 200 ಟವರ್‌ಗಳ ಸ್ಥಳಗಳಲ್ಲಿ 4ಜಿಯನ್ನು ಪ್ರಾಯೋಗಿಕವಾಗಿ ಆರಂಭಿಸಿದ್ದು, ಮೂರು ತಿಂಗಳ ಕಾಲ ನಡೆಯಲಿದೆ. ಬಳಿಕ ದಿನಕ್ಕೆ 200 ಸೈಟ್ಸ್‌ಗಳ ಲೆಕ್ಕದಲ್ಲಿ 4ಜಿ ನೆಟ್‌ ವರ್ಕ್‌ ವಿಸ್ತರಣೆಯಾಗಲಿದೆ. ಹಾಗೂ ನವೆಂಬರ್-ಡಿಸೆಂಬರ್‌ ವೇಳೆಗೆ 5ಜಿಗೆ ಅಪ್‌ಗ್ರೇಡ್‌ ಆಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಬಿಎಸ್ಸೆನ್ನೆಲ್‌ ಈಗಾಗಲೇ ಟಿಸಿಎಸ್‌ ಮತ್ತು ಐಟಿಐ ಲಿಮಿಟೆಡ್‌ ಜತೆಗೆ 4ಜಿ ನೆಟ್‌ ವರ್ಕ್‌ ಅಳವಡಿಕೆಗೆ ಸಂಬಂಧಿಸಿ 19,000 ಕೋಟಿ ರೂ.ಗಳ ಖರೀದಿ ಆರ್ಡರ್‌ಗೆ ಮುಂಗಡವನ್ನು ನೀಡಿದೆ (advance purchase order) ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಬಿಎಸ್ಸೆನ್ನೆಲ್‌ ನೆಟ್‌ ವರ್ಕ್‌ ಆರಂಭದಲ್ಲಿ 4ಜಿಯಲ್ಲಿ ಇರಲಿದೆ. ಬಳಿಕ ನವೆಂಬರ್-ಡಿಸೆಂಬರ್‌ ವೇಳೆಗೆ ಸಾಫ್ಟ್‌ವೇರ್‌ನಲ್ಲಿ ಸಣ್ಣ ಬದಲಾವಣೆಯೊಂದಿಗೆ 5ಜಿಗೆ ಅಪ್‌ಡೇಟ್‌ ಆಗಲಿದೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ವಿವರಿಸಿದ್ದಾರೆ.

ಅಮೆರಿಕಕ್ಕೆ ಭಾರತದ ಟೆಲಿಕಾಂ ತಂತ್ರಜ್ಞಾನ ರಫ್ತು:

ಭಾರತದ ಟೆಲಿಕಾಂ ತಂತ್ರಜ್ಞಾನವನ್ನು ಅಮೆರಿಕಕ್ಕೂ ಈಗ ರಫ್ತು ಮಾಡಲಾಗುತ್ತಿದೆ. 18 ದೇಶಗಳು ಭಾರತದ 4ಜಿ ಮತ್ತು 5ಜಿ ತಂತ್ರಜ್ಞಾನವನ್ನು ಅಳವಡಿಸಲು ಉತ್ಸುಕವಾಗಿವೆ. ದೇಶ ದೂರಸಂಪರ್ಕ ತಂತ್ರಜ್ಞಾನದಲ್ಲಿ ಬೆಳೆಯುತ್ತಿರುವುದಕ್ಕೆ ಇದು ಸಾಕ್ಷಿ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಇದನ್ನೂ ಓದಿ: BSNL OTT : ಬಿಎಸ್ಸೆನ್ನೆಲ್‌ನಿಂದ OTT ಸೇವೆ ಸಿನಿಮಾಪ್ಲಸ್‌ ಆರಂಭ

Continue Reading

5 G

Jio True 5G | ಜಿಯೋದಿಂದ ಹೊಸ ವರ್ಷದ ಕೊಡುಗೆ; ಮೈಸೂರಿನಲ್ಲಿ ಟ್ರೂ 5ಜಿ ಸೇವೆ ಪ್ರಾರಂಭ

ದೇಶದ ವಿವಿಧ ನಗರಗಳಲ್ಲಿ 5ಜಿ ಸೇವಯನ್ನು ಒದಗಿಸುತ್ತಿರುವ ರಿಲಯನ್ಸ್ ಜಿಯೋ ಇದೀಗ ಕರ್ನಾಟಕದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಿಯೋ ಟ್ರೂ 5ಜಿ (Jio True 5G) ಸೇವೆಯನ್ನು ಆರಂಭಿಸಿದೆ.

VISTARANEWS.COM


on

Jio True 5G @ Mysuru
Koo

ಮೈಸೂರು: ರಿಲಯನ್ಸ್ ಜಿಯೋ ಮೈಸೂರಿನಲ್ಲಿ ಟ್ರೂ 5ಜಿ ಸೇವೆಗಳಿಗೆ (Jio True 5G) ಚಾಲನೆ ನೀಡಿತು. ಅಷ್ಟೇ ಅಲ್ಲ, ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳ ಪ್ರಾರಂಭದ ಬಗ್ಗೆ ಘೋಷಣೆ ಮಾಡಿತು. ಅಂದಹಾಗೆ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸುವ ಮೊದಲ ಮತ್ತು ಏಕೈಕ ಆಪರೇಟರ್ ರಿಲಯನ್ಸ್ ಜಿಯೋ ಆಗಿದೆ.

ಬುಧವಾರದಿಂದಲೇ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್‌+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗುತ್ತದೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಜಿಯೋ ವಕ್ತಾರರು, ಮೈಸೂರು ನಗರದಲ್ಲಿ 5ಜಿ ಆರಂಭಿಸುವುದಕ್ಕೆ ನಾವು ಹೆಮ್ಮೆಪಡುತ್ತೇವೆ ಮತ್ತು ನಾವು ಟ್ರೂ 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದಾಗಿನಿಂದ ನಮ್ಮ ಅತಿದೊಡ್ಡ ಆರಂಭದಲ್ಲಿ ಇದು ಒಂದಾಗಿದೆ. ಜಿಯೋ ಟ್ರೂ 5ಜಿ ತಂತ್ರಜ್ಞಾನದ ವೇರಿಯಂಟ್‌ ಪ್ರಯೋಜನಗಳನ್ನು ಆನಂದಿಸುವ ಮೂಲಕ ಈಗ 2023ರಿಂದ ಪ್ರಾರಂಭ ಆಗುವುದರೊಂದಿಗೆ ಲಕ್ಷಾಂತರ ಜಿಯೋ ಬಳಕೆದಾರರಿಗೆ ಇದು ಗೌರವವಾಗಿದೆ.

“ಮೈಸೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಮಾತ್ರವಲ್ಲ, ಜತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಸಣ್ಣ ಮತ್ತು ಮಧ್ಯಮ ಸಂಸ್ಥೆಗಳು ಅಮೋಘ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ. “ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ | Jio True 5G | ಮಹಾಕಾಲ ಮಹಾಲೋಕ, ಮಹಾಕಾಲೇಶ್ವರ ದೇವಸ್ಥಾನದಲ್ಲಿ ಜಿಯೋ ಟ್ರೂ 5ಜಿ ಸೇವೆ

Continue Reading
Advertisement
summer trip
ಪ್ರವಾಸ9 mins ago

Summer Tour: ಹಚ್ಚ ಹಸುರಿನ ಪ್ರಶಾಂತ ನಗರ ಶಿಲ್ಲಾಂಗ್; ಬೇಸಿಗೆ ಪ್ರವಾಸಕ್ಕೆ ಸೂಕ್ತ

Viral Video
ವೈರಲ್ ನ್ಯೂಸ್11 mins ago

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Harshika Poonacha Bhuvan! for speak Kannada
ಸ್ಯಾಂಡಲ್ ವುಡ್30 mins ago

Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

murali sreeshankar
ಕ್ರೀಡೆ35 mins ago

Murali Sreeshankar: ಒಲಿಂಪಿಕ್ಸ್‌ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಟೂರ್ನಿಯಿಂದ ಹೊರಬಿದ್ದ ಪದಕ ಭರವಸೆಯ ಕ್ರೀಡಾಪಟು

virat kohli
ಕ್ರೀಡೆ1 hour ago

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Pruthvi Ambaar new movie direction by Rathaavara Director
ಸಿನಿಮಾ1 hour ago

Pruthvi Ambaar: ʻದಿಯಾʼ ಹೀರೊಗೆ `ರಥಾವರʼ ಡೈರೆಕ್ಟರ್ ಆ್ಯಕ್ಷನ್ ಕಟ್!

Kantara Movie Rishab Shetty And Pragathi Shetty Met Mohanlal
ಸಿನಿಮಾ2 hours ago

Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

Solution For Pimple
ಆರೋಗ್ಯ2 hours ago

Solution For Pimples: ಈ ಆಹಾರಗಳ ಸಹವಾಸ ಬಿಡಿ; ಮೊಡವೆಯನ್ನು ದೂರವಿಡಿ!

indian navy chief of naval staff dinesh tripathi
ಪ್ರಮುಖ ಸುದ್ದಿ2 hours ago

Indian Navy: ನೌಕಾಪಡೆ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ

IPL 2024
ಕ್ರೀಡೆ2 hours ago

IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌