ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ Vistara News
Connect with us

ದೇಶ

ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ

ಮುಂಜಾನೆ ಹೊತ್ತಿಗೆ ಆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನೆರೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಅಲ್ಲಿಗೆ ಧಾವಿಸಿದ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ.

VISTARANEWS.COM


on

6 die of suffocation in Delhi After Due to mosquito coil
Koo

ನವ ದೆಹಲಿ: ಸೊಳ್ಳೆಬತ್ತಿ ಹಾಸಿಗೆ (mosquito coil) ಮೇಲೆ ಬಿದ್ದು, ಅದರಿಂದ ಹೊಮ್ಮಿದ ವಿಷಪೂರಿತ ಹೊಗೆಯಿಂದ ಉಸಿರುಕಟ್ಟಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ವರದಿಯಾಗಿದ್ದು ದೆಹಲಿಯ ಈಶಾನ್ಯ ಭಾಗದಲ್ಲಿರುವ (New Delhi) ಶಾಸ್ತ್ರಿಪಾರ್ಕ್ ಏರಿಯಾದಿಂದ. ಸೊಳ್ಳೆಯಿಂದ ಪಾರಾಗಲು ಈ ಮನೆಯಲ್ಲಿ ಸೊಳ್ಳೆ ಬತ್ತಿ ಹಾಕಿಕೊಂಡು ಎಲ್ಲರೂ ಮಲಗಿದ್ದರು. ರಾತ್ರಿ ಯಾವಾಗಲೋ ಆ ಬತ್ತಿ ಹಾಸಿಗೆ ಮೇಲೆ ಬಿದ್ದಿದೆ. ಸಾಮಾನ್ಯವಾಗಿ ಸೊಳ್ಳೆ ಬತ್ತಿಯ ಹೊಗೆಯೇ ಘಾಟಾಗಿ ಇರುತ್ತದೆ. ಅದು ಹಾಸಿಗೆ ಮೇಲೆ ಬಿದ್ದು, ಹಾಸಿಗೆಯ ಬಟ್ಟೆಯ ಹೊಗೆಯೂ ಜತೆಗೆ ಸೇರಿ, ಆರೂ ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಮುಂಜಾನೆ ಹೊತ್ತಿಗೆ ಆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನೆರೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಅಲ್ಲಿಗೆ ಧಾವಿಸಿದ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಈಶಾನ್ಯ ದೆಹಲಿ ಜಿಲ್ಲೆಯ ಡಿಸಿಪಿ ಜಾಯ್​ ಟಿರ್ಕಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ ‘ಮಚ್ಚಿ ಮಾರ್ಕೆಟ್​ ಬಳಿಯಿರುವ ಮಾಜಾರ್ ವಾಲಾ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದಾಗಿ ಬೆಳಗ್ಗೆ ಹೊತ್ತಿಗೆ ಶಾಸ್ತ್ರಿಪಾರ್ಕ್ ಪೊಲೀಸ್ ಸ್ಟೇಶನ್​ಗೆ ಕರೆಬಂತು. ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣವೇ ಅಲ್ಲಿಗೆ ತೆರಳಿದರು. ಮೃತದೇಹಗಳನ್ನೆಲ್ಲ ಜಗ್​ ಪ್ರವೇಶ್​ ಚಂದ್ರ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Family suicide : ಮಂಗಳೂರಿನ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಮೃತರು ಮೈಸೂರಿನವರು

ಈ ಮನೆಯಲ್ಲಿ ಒಟ್ಟು ಒಂಭತ್ತು ಮಂದಿ ಇದ್ದರು. ಅದರಲ್ಲಿ ಮೂವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರೂ ಕೂಡ ಎಚ್ಚರ ತಪ್ಪಿದ್ದರು. ಆ ಮೂವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬರು ಪ್ರಾಥಮಿಕ ಚಿಕಿತ್ಸೆಗೇ ಚೇತರಿಸಿಕೊಂಡು, ಡಿಸ್​ಚಾರ್ಜ್ ಆಗಿದ್ದಾರೆ. ಇನ್ನಿಬ್ಬರಿಗೆ ಸುಟ್ಟಗಾಯಗಳೂ ಆಗಿದ್ದು ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಜಾಯ್​ ಟಿರ್ಕಿ ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಒಂದು ಮಗು, ನಾಲ್ವರು ಪುರುಷರು, ಒಬ್ಬಳು ಮಹಿಳೆ ಸೇರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ದೇಶ

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಹೊಸ ಸಂಸತ್ ಭವನದ ಉದ್ಘಾಟನೆ ನಿಮಿತ್ತ ಕಾರ್ಯಕ್ರಮಗಳು ಇಂದು ಮುಂಜಾನೆ 7.30ರಿಂದಲೇ ಪ್ರಾರಂಭಗೊಂಡಿವೆ. ಎರಡನೇ ಹಂತದ ಕಾರ್ಯಕ್ರಮಗಳು ಕೆಲವೇ ಹೊತ್ತಲ್ಲಿ ಶುರುವಾಗಲಿದ್ದು, ನಾವಿಲ್ಲಿ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ನೇರಪ್ರಸಾರ ವೀಕ್ಷಿಸಬಹುದು.

VISTARANEWS.COM


on

Edited by

New Parliament building inauguration Live Video Here
Koo

ಇಂದು ದೆಹಲಿಯಲ್ಲಿ ನೂತನ ಸಂಸತ್ ಭವನ (New Parliament Building)ದ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ (New Parliament Building Inauguration). ಬೆಳಗ್ಗೆ 7.30ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಪ್ರಧಾನಿ ನರೇಂದ್ರ ಮೋದಿಯವರು ಸೆಂಗೋಲ್ ಪ್ರತಿಷ್ಠಾಪನೆ ಮಾಡಿದ್ದಾರೆ. ಇಂದು ಮಧ್ಯಾಹ್ನ 2.30ರವರೆಗೂ ಸಂಸತ್​ ಭವನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ನೀವು ಈ ಕೆಳಗಿನ ಲಿಂಕ್​​ ಮೂಲಕ ನೇರಪ್ರಸಾರ ವೀಕ್ಷಿಸಬಹುದಾಗಿದೆ.

Continue Reading

ದೇಶ

New Parliament Building: ಕಾರ್ಮಿಕರಿಗೆ ಸನ್ಮಾನಿಸಿದ ಪ್ರಧಾನಿ ಮೋದಿ; ಸರ್ವ ಧರ್ಮ ಪ್ರಾರ್ಥನೆ

ಸರ್ವ ಧರ್ಮ ಪ್ರಾರ್ಥನೆ ವೇಳೆ ಗೃಹ ಸಚಿವ ಅಮಿತ್​ ಶಾ, ಇನ್ನಿತರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಅನುರಾಗ್ ಠಾಕೂರ್​, ರಾಜನಾಥ್ ಸಿಂಗ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ಮತ್ತಿತರ ಹಲವು ಗಣ್ಯರು ಇದ್ದರು.

VISTARANEWS.COM


on

Edited by

Sarv dharma prayer ceremony
Koo

ನವ ದೆಹಲಿ: ನೂತನ ಸಂಸತ್ ಭವನ ಉದ್ಘಾಟನೆ (New Parliament Building Inauguration) ನಿಮಿತ್ತ ಮುಂಜಾನೆ 7.30ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಧಾನಿ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಎಲ್ಲ ಪೂಜೆಗಳಲ್ಲೂ ಪಾಲ್ಗೊಂಡರು. ಗಣಪತಿ ಹೋಮ ಮುಕ್ತಾಯವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರು ಸೆಂಗೋಲ್​​ನ್ನು ಹಿಡಿದು, ನೂತನ ಸಂಸತ್ ಭವನ ಪ್ರವೇಶಿಸಿ, ಅಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಪ್ರತಿಷ್ಠಾಪಿಸಿದರು. ಈ ವೇಳೆ ತಮಿಳುನಾಡಿನ ಅಧೀನಂ ಮಠದ ಪುರೋಹಿತರು, ಸಂತರು, ಮಠಾಧೀಶರು ಇದ್ದರು. ಮಂತ್ರಘೋಷ ಮೊಳಗುತ್ತಿತ್ತು.

ಇಷ್ಟಾದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಮಿಕರನ್ನು ಸನ್ಮಾನಿಸಿದರು. ನೂತನ ಸಂಸತ್ ಭವನ ನಿರ್ಮಾಣ ಮಾಡಿದ ಈ ಕೆಲಸಗಾರರಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಅದಕ್ಕೂ ಮೊದಲು ನರೇಂದ್ರ ಮೋದಿಯವರು ಸಂಸತ್ ಭವನದ ಫಲಕ ಅನಾವರಣಗೊಳಿಸಿದರು. ನಂತರ ಅಲ್ಲಿ ಸರ್ವಧರ್ಮಗಳ ಪ್ರಾರ್ಥನೆ ನಡೆಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್​ ಶಾ, ಇನ್ನಿತರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಅನುರಾಗ್ ಠಾಕೂರ್​, ರಾಜನಾಥ್ ಸಿಂಗ್​ ಮತ್ತಿತರ ಹಲವು ಗಣ್ಯರು ಇದ್ದರು. ಇವರಲ್ಲಿ ಸ್ಪೀಕರ್ ಓಂ ಬಿರ್ಲಾ ಪ್ರತಿ ಕಾರ್ಯದಲ್ಲೂ ಪ್ರಧಾನಿ ಮೋದಿಗೆ ಜತೆಯಾದರು.

ವಿಡಿಯೋಗಳು ಇಲ್ಲಿವೆ:

Continue Reading

EXPLAINER

ವಿಸ್ತಾರ Explainer: ಹೊಸ ಸಂಸತ್​ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?

ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಡಳಿತ ನಡೆಸಿದ್ದ ಚೋಳ ರಾಜನ ಅವಧಿಯಲ್ಲಿ (ತಮಿಳು ರಾಜ) ಮಹತ್ವ ಪಡೆದ ರಾಜದಂಡ ಇದಾಗಿತ್ತು ಎಂದು ಅಮಿತ್ ಶಾ ತಿಳಿಸಿದ್ದಾರೆ.

VISTARANEWS.COM


on

Edited by

Sengol presented to PM Modi
Koo

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ ಇಂದು ನೂತನ ಸಂಸತ್ ಭವನವನ್ನು (New Parliament Building) ಪ್ರಧಾನಿ ಮೋದಿ (PM Modi)ಯವರು ಉದ್ಘಾಟನೆ ಮಾಡಿದ್ದಾರೆ. ಹಾಗೇ, ಹೊಸದಾಗಿ ನಿರ್ಮಾಣವಾದ ಸಂಸತ್​ ಭವನದಲ್ಲಿ ತಮಿಳುನಾಡಿನ ’ರಾಜದಂಡ’ (ಸೆಂಗೋಲ್​)ವನ್ನು ಪ್ರತಿಷ್ಠಾಪಿಸಿದ್ದಾರೆ. ಸ್ಪೀಕರ್​ ಕುರ್ಚಿಯ ಪಕ್ಕವೇ ರಾಜದಂಡವೂ ನಿಂತಿದೆ.

ʼ‘ಸೆಂಗೋಲ್ ಅಂದರೆ ರಾಜದಂಡ ಎಂಬುದು ಭಾರತದ ಸ್ವಾತಂತ್ರ್ಯದ ಪ್ರತೀಕವಾಗಿದೆ. ಬ್ರಿಟಿಷರು ಭಾರತಕ್ಕೆ ಆಡಳಿತ/ಅಧಿಕಾರವನ್ನು ಹಸ್ತಾಂತರ ಮಾಡಿ ಹೋದ ನಂತರ ತಮಿಳುನಾಡಿನ ಜನರು, ಅಂದಿನ ಪ್ರಧಾನಿ ಜವಾಹರ್​ಲಾಲ್​ ನೆಹರೂ ಅವರಿಗೆ ಈ ರಾಜದಂಡ ನೀಡಿದ್ದರು. ಭಾರತದಲ್ಲಿ ಆಡಳಿತ ನಡೆಸುವ ಅಧಿಕಾರ ಭಾರತಕ್ಕೇ ಸಿಕ್ಕಿದ್ದರಿಂದ 1947ರ ಆಗಸ್ಟ್​ 14ರಂದು ಬೆಳಗ್ಗೆ 10.45ಕ್ಕೆ ಈ ಸೆಂಗೋಲ್​​ನ್ನು ನೆಹರೂ ಅವರಿಗೆ ನೀಡಲಾಗಿತ್ತು. ಇದು ಸಂಪೂರ್ಣವಾಗಿ ಚಿನ್ನದ್ದು ʼ’ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಇದು ಎಲ್ಲಿತ್ತು?

ʼ‘ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಡಳಿತ ನಡೆಸಿದ್ದ ಚೋಳ ರಾಜನ ಅವಧಿಯಲ್ಲಿ (ತಮಿಳು ರಾಜ) ಮಹತ್ವ ಪಡೆದ ರಾಜದಂಡ ಇದಾಗಿತ್ತು. ಈ ರಾಜದಂಡದ ಬಗ್ಗೆ ಪ್ರಧಾನಿ ಮೋದಿಯವರಿಗೆ ಗೊತ್ತಾಗುತ್ತಿದ್ದಂತೆ, ಅದನ್ನು ಹೊಸ ಸಂಸತ್​ ಭವನದಲ್ಲಿ ಇಡಲು ತೀರ್ಮಾನಿಸಿದ್ದಾರೆ. ಸೆಂಗೋಲ್​ ಎಂದರೆ ತಮಿಳಿನ ಭಾಷೆಯಲ್ಲಿ ಸಮೃದ್ಧ ಸಂಪತ್ತು ಎಂದರ್ಥ’ʼ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದರು.

ಇದನ್ನೂ ಓದಿ: Photo Gallery | ಆಕರ್ಷಕ ಹೊಸ ಸಂಸತ್‌ ಭವನ! ಗಮನ ಸೆಳೆಯುತ್ತಿವೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಚಿತ್ರಗಳು

ಏನೀ ಸೆಂಗೋಲ್‌ನ ಇತಿಹಾಸ?

ತಮಿಳುನಾಡು ಮೂಲದ ಚೋಳ ರಾಜವಂಶ ವಾಸ್ತುಶಿಲ್ಪ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗೆ ಅಸಾಧಾರಣ ಕೊಡುಗೆ ನೀಡಿತ್ತು. ಚೋಳರ ಕಾಲದಲ್ಲಿ ಸೆಂಗೋಲ್ ಎಂಬುದು ರಾಜರ ಪಟ್ಟಾಭಿಷೇಕದಲ್ಲಿ ಅಪಾರ ಪ್ರಾಮುಖ್ಯತೆ ಹೊಂದಿತ್ತು. ಇದೊಂದು ಧಾರ್ಮಿಕ ಮಹತ್ವ ಹೊಂದಿರುವ ರಾಜದಂಡ. ಚಂದದ ಕೆತ್ತನೆಗಳು, ಸಂಕೀರ್ಣವಾದ ಅಲಂಕಾರಿಕ ಅಂಶಗಳು ಇದರ ವೈಶಿಷ್ಟ್ಯ. ರಾಜಪರಂಪರೆಯ ಪಾಲಿಗೆ ಇದು ಪವಿತ್ರ ಲಾಂಛನ. ಒಬ್ಬ ಆಡಳಿತಗಾರನಿಂದ ಮುಂದಿನವರಿಗೆ ಅಧಿಕಾರದ ವರ್ಗಾವಣೆಯನ್ನು ಇದು ಪ್ರತಿನಿಧಿಸುತ್ತಿತ್ತು.

ಬ್ರಿಟಿಷರು ಭಾರತೀಯರ ಕೈಗೆ ಅಧಿಕಾರ ಹಸ್ತಾಂತರಿಸಲಿದ್ದ ಸಂದರ್ಭದಲ್ಲಿ, ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಅವರು ಪಂಡಿತ್ ಜವಾಹರಲಾಲ್ ಮುಂದೆ ಒಂದು ಪ್ರಶ್ನೆಯನ್ನು ಇಟ್ಟರು. ಈ ಮಹತ್ವದ ಘಟನೆಯನ್ನು ಸೂಚಿಸಲು ಸೂಕ್ತವಾದ ಸಮಾರಂಭ ಹೇಗೆ ಮಾಡಬಹುದು ಎಂದು ವಿಚಾರಿಸಿದರು. ನೆಹರೂ ಅವರು ಈ ಪ್ರಶ್ನೆಯನ್ನು ಆ ಕಾಲದ ದೊಡ್ಡ ಮುತ್ಸದ್ಧಿ ಸಿ.ರಾಜಗೋಪಾಲಾಚಾರಿ (ರಾಜಾಜಿ) ಯವರ ಮುಂದಿಟ್ಟರು.

ರಾಜಾಜಿಯವರು ಚೋಳ ರಾಜವಂಶದ ʼರಾಜದಂಡʼದ ಕ್ರಮದಿಂದ ಸ್ಫೂರ್ತಿ ಪಡೆಯುವಂತೆ ನೆಹರೂಗೆ ಸಲಹೆ ನೀಡಿದರು. ರಾಜಾಜಿಯವರ ಪ್ರಕಾರ ಚೋಳ ಮಾದರಿಯ ಅಧಿಕಾರ ಹಸ್ತಾಂತರ ʼಸೆಂಗೋಲ್ʼನ ಸಾಂಕೇತಿಕ ಹಸ್ತಾಂತರವನ್ನು ಒಳಗೊಂಡಿತ್ತು. ಒಬ್ಬ ರಾಜ ತನ್ನ ಉತ್ತರಾಧಿಕಾರಿಗೆ ಅಧಿಕಾರ ಮತ್ತು ಶಕ್ತಿಯ ಸಂಕೇತವಾದ ಸೆಂಗೋಲ್‌ ಹಸ್ತಾಂತರಿಸುತ್ತಿದ್ದ. ಇದು ʼಧರ್ಮʼವನ್ನು ಪ್ರತಿನಿಧಿಸುತ್ತಿತ್ತು. ಧರ್ಮ ಹಾಗೂ ನ್ಯಾಯಯುತವಾಗಿ ಅಧಿಕಾರವನ್ನು ನಡೆಸುವ ವಚನವನ್ನು ಈ ಮೂಲಕ ತೆಗೆದುಕೊಳ್ಳಲಾಗುತ್ತಿತ್ತು.

ಸೆಂಗೋಲ್‌ ಅನ್ನು ಪಡೆಯಲು ರಾಜಾಜಿಯವರು ತಮಿಳುನಾಡಿನ ತಂಜಾವೂರು ಜಿಲ್ಲೆಯ ʼತಿರುವವಾಡುತುರೈ ಅಧೀನಂʼ ಎಂಬ ಧಾರ್ವಿುಕ ಮಠವನ್ನು ಸಂಪರ್ಕಿಸಿದರು. ಇದು ಶಿವನ ಬೋಧನೆ ಮತ್ತು ಸಂಪ್ರದಾಯ ಅನುಸರಿಸುವ ಬ್ರಾಹ್ಮಣೇತರ ಸನ್ಯಾಸಿಗಳ ಸಂಸ್ಥೆ. 500ಕ್ಕೂ ಹೆಚ್ಚು ವರ್ಷಗಳಿಂದ ಅಸ್ತಿತ್ವದಲ್ಲಿದೆ. ಸೆಂಗೋಲ್‌ ತಯಾರಿಕೆಯಲ್ಲಿ ಇವರ ನೆರವನ್ನು ರಾಜಾಜಿ ಬಯಸಿದರು.

ರಾಜಾಜಿ ಜವಾಹರಲಾಲ್ ನೆಹರೂ

ತಿರುವವಾಡುತುರೈ ಅಧೀನಂ ಮುಖ್ಯಸ್ಥರು ಸೆಂಗೋಲ್ ಅನ್ನು ರಚಿಸುವ ಹೊಣೆ ಹೊತ್ತರು. ಆಗಿನ ಕಾಲದ ಹೆಸರಾಂತ ಆಭರಣ ತಯಾರಕ ಹಾಗೂ ವ್ಯಾಪಾರಿಗಳಾದ ಚೆನ್ನೈನ ವುಮ್ಮಿಡಿ ಬಂಗಾರು ಚೆಟ್ಟಿ ಎಂಬವರಿಗೆ ಇದನ್ನು ತಯಾರಿಸುವ ಕೆಲಸವನ್ನು ವಹಿಸಲಾಯಿತು. ವುಮ್ಮಿಡಿ ಕುಟುಂಬವು ಸೆಂಗೋಲ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿತ್ತು. ಅಂದು ಸೆಂಗೋಲ್‌ ತಯಾರಿಯಲ್ಲಿ ಭಾಗವಹಿಸಿದ್ದ ಇಬ್ಬರು ಕುಶಲಕರ್ಮಿಗಳು ಇಂದಿಗೂ ಜೀವಂತವಿದ್ದಾರೆ. ಅವರೇ ವುಮ್ಮಿಡಿ ಎತ್ತಿರಾಜುಲು (96) ಮತ್ತು ವುಮ್ಮಿಡಿ ಸುಧಾಕರ್ (88).

ನೋಡಲು ಸುಂದರವಾಗಿರುವ ಈ ಸೆಂಗೋಲ್‌ ಸುಮಾರು ಐದು ಅಡಿ ಉದ್ದವಿದೆ. ನ್ಯಾಯ ಹಾಗೂ ಪರಿಶ್ರಮದ ಸಂಕೇತವಾದ ನಂದಿಯ ಪ್ರತಿಕೃತಿ ಸೆಂಗೋಲ್‌ನ ತುದಿಯಲ್ಲಿದೆ.

ಇದರ ತಯಾರಿಯ ಬಳಿಕ ಇದನ್ನು ತೆಗೆದುಕೊಂಡು, ಐತಿಹಾಸಿಕ ದಿನವಾದ 1947ರ ಆಗಸ್ಟ್ 14ರಂದು ಅಧಿಕಾರ ಹಸ್ತಾಂತರದಲ್ಲಿ ಭಾಗವಹಿಸಲು ತಮಿಳುನಾಡಿನಿಂದ ಮೂವರು ದಿಲ್ಲಿಗೆ ತೆರಳಿದರು. ತಿರುವವಾಡುತುರೈ ಅಧೀನಂನ ಪ್ರಧಾನ ಅರ್ಚಕರು, ನಾದಸ್ವರಂ ವಾದಕ ರಾಜರತ್ನಂ ಪಿಳ್ಳೈ ಮತ್ತು ಓದುವರ್ (ಗಾಯಕ) ತಂಡದಲ್ಲಿದ್ದರು. ಪ್ರಧಾನ ಅರ್ಚಕರು ಸೆಂಗೋಲ್ ಅನ್ನು ಲಾರ್ಡ್ ಮೌಂಟ್ ಬ್ಯಾಟನ್‌ಗೆ ಅರ್ಪಿಸಿದರು. ನಂತರ ವೈಸರಾಯ್‌ ಕಡೆಯಿಂದ ಅದನ್ನು ಪಡೆದು, ಅದನ್ನು ಪವಿತ್ರ ನೀರಿನಿಂದ ಶುದ್ಧೀಕರಿಸಿ, ಪಂಡಿತ್ ಜವಾಹರಲಾಲ್ ನೆಹರು ಅವರ ನಿವಾಸಕ್ಕೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ಅಲ್ಲಿ ಅದನ್ನು ನೆಹರೂ ಅವರಿಗೆ ಹಸ್ತಾಂತರಿಸಲಾಯಿತು.

ಹೀಗೆ ದೇಶದ ಇತಿಹಾಸದ ಮಹತ್ವದ ಮೈಲಿಗಲ್ಲೊಂದನ್ನು ಪ್ರತಿನಿಧಿಸಿದ, ಸ್ವತಂತ್ರ ರಾಷ್ಟ್ರವಾಗಿ ತನ್ನ ಪ್ರಯಾಣವನ್ನು ದೇಶ ಆರಂಭಿಸಿದ ಇತಿಹಾಸಕ್ಕ ಸಾಕ್ಷಿಯಾದ ಸೆಂಗೋಲ್‌ ಇನ್ನು ಮುಂದೆ ಸಂಸತ್ತಿನಲ್ಲಿಯೇ ಇರಲಿದೆ.

ಇದನ್ನೂ ಓದಿ: New Parliament Building: ನೂತನ ಸಂಸತ್‌ ಭವನದ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಿದ ಟಿಎಂಸಿ, ಆಪ್‌; ಕೊಟ್ಟ ಕಾರಣ ಹೀಗಿದೆ

Continue Reading

ದೇಶ

ಹೊಸ ಸಂಸತ್ ಭವನದಲ್ಲಿ ಸೆಂಗೋಲ್​ ಪ್ರತಿಷ್ಠಾಪನೆ; ಕೈಮುಗಿದುಕೊಂಡು ರಾಜದಂಡ ಹಿಡಿದು ಬಂದ ಪ್ರಧಾನಿ ಮೋದಿ

Sengol Installed: ರಾಜದಂಡವನ್ನು ಸ್ಪೀಕರ್​ ಕುರ್ಚಿ ಪಕ್ಕವೇ ಇಟ್ಟ ಪ್ರಧಾನಿ ಮೋದಿ, ಬಳಿಕ ಅಲ್ಲೊಂದು ದೀಪ ಹೊತ್ತಿಸಿದರು. ನಂತರ ಸೆಂಗೋಲ್​ಗೆ ಹೂವು ಹಾಕಿ, ಮತ್ತೆ ನಮಿಸಿದರು.

VISTARANEWS.COM


on

Edited by

PM Modi places sacred Sengol
Koo

ನವ ದೆಹಲಿ: ನೂತನ ಸಂಸತ್ ಭವನದ (New Parliament Building) ಸ್ಪೀಕರ್ ಕುರ್ಚಿ ಬಳಿ ಪ್ರಧಾನಿ ನರೇಂದ್ರ ಮೋದಿ (PM Modi)ಯವರು ಸೆಂಗೋಲ್​ ಪ್ರತಿಷ್ಠಾಪನೆ ಮಾಡಿದರು. ಹವನ ನಡೆದ ಸ್ಥಳದಲ್ಲಿ ರಾಜದಂಡಕ್ಕೆ ಶಿರಸಾಷ್ಟಾಂಗ ನಮಸ್ಕಾರ ಮಾಡಿದ ಅವರು, ಅಲ್ಲಿಂದ ಸಂಸತ್​ ಭವನದ ಒಳಗಿನ ಸ್ಪೀಕರ್ ಕುರ್ಚಿಯವರೆಗೂ ರಾಜದಂಡವನ್ನು ಹಿಡಿದುಬಂದರು. ಅವರು ಕೈಮುಗಿದುಕೊಂಡೇ ಬಂದಿದ್ದಾರೆ. ಅವರ ಮುಗಿದ ಕೈಗಳ ಮಧ್ಯೆ ರಾಜದಂಡ ಇತ್ತು.

ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ತಮಿಳುನಾಡಿನ ಅಧೀನಂ ಮಠಗಳ ಸಂತರು, ಪುರೋಹಿತರು, ಲೋಕಸಭಾ ಸ್ಪೀಕರ್ ಓಂಬಿರ್ಲಾ ಹೆಜ್ಜೆ ಹಾಕಿದರು. ರಾಜದಂಡವನ್ನು ಸ್ಪೀಕರ್​ ಕುರ್ಚಿ ಪಕ್ಕವೇ ಇಟ್ಟ ಪ್ರಧಾನಿ ಮೋದಿ, ಬಳಿಕ ಅಲ್ಲೊಂದು ದೀಪ ಹೊತ್ತಿಸಿದರು. ನಂತರ ಸೆಂಗೋಲ್​ಗೆ ಹೂವು ಹಾಕಿ, ಮತ್ತೆ ನಮಿಸಿದರು. ಸ್ಪೀಕರ್ ಕುರ್ಚಿಯ ಬಳಿಯಿಂದ ಮೆಟ್ಟಿಲಿಳಿದು ಬಂದವರು, ಎಲ್ಲ ಸಾಧು-ಸಂತರು, ಮಠಾಧೀಶರುಗಳಿಗೆ ನಮಿಸುತ್ತ ನಡೆದರು. ಈ ಎಲ್ಲ ಸಮಯದಲ್ಲಿ ತಮಿಳಿನ ಮಂತ್ರ-ಭಜನೆ ಮೊಳಗುತ್ತಿತ್ತು.

Continue Reading
Advertisement
ipl records gill
ಕ್ರಿಕೆಟ್8 mins ago

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

aditya ranjan ias
ಅಂಕಣ18 mins ago

ರಾಜ ಮಾರ್ಗ ಅಂಕಣ: ಆಧುನಿಕ ಅಂಗನವಾಡಿಗಳ ನಿರ್ಮಾಪಕ ಆದಿತ್ಯರಂಜನ್ IAS

New Parliament building inauguration Live Video Here
ದೇಶ29 mins ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

Tokyo Olympics Champion Risako Kawai
ಕ್ರೀಡೆ1 hour ago

Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಶ್ವ ಚಾಂಪಿಯನ್‌ ಕವಾಯ್

RTI Activist Harish Halli Died
ಕರ್ನಾಟಕ1 hour ago

ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್​ಟಿಐ ಕಾರ್ಯಕರ್ತ

Narendra Modi Stadium, Ahmedabad
ಕ್ರಿಕೆಟ್2 hours ago

IPL 2023: ಫೈನಲ್​ ಪಂದ್ಯಕ್ಕೆ ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ ಇಲೆವೆನ್​

Sarv dharma prayer ceremony
ದೇಶ2 hours ago

New Parliament Building: ಕಾರ್ಮಿಕರಿಗೆ ಸನ್ಮಾನಿಸಿದ ಪ್ರಧಾನಿ ಮೋದಿ; ಸರ್ವ ಧರ್ಮ ಪ್ರಾರ್ಥನೆ

Malaysia Masters Badminton
ಕ್ರೀಡೆ2 hours ago

Malaysia Masters: ಪ್ರಣಯ್​ ಫೈನಲ್​ಗೆ; ಭಾರತಕ್ಕೆ ಒಂದು ಪದಕ ಖಾತ್ರಿ

Sengol presented to PM Modi
EXPLAINER2 hours ago

ವಿಸ್ತಾರ Explainer: ಹೊಸ ಸಂಸತ್​ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?

PM Modi places sacred Sengol
ದೇಶ3 hours ago

ಹೊಸ ಸಂಸತ್ ಭವನದಲ್ಲಿ ಸೆಂಗೋಲ್​ ಪ್ರತಿಷ್ಠಾಪನೆ; ಕೈಮುಗಿದುಕೊಂಡು ರಾಜದಂಡ ಹಿಡಿದು ಬಂದ ಪ್ರಧಾನಿ ಮೋದಿ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ29 mins ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ6 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ17 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!