ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ & ಅಡುಗೆ ಅನಿಲ ದರ ಹೆಚ್ಚಳ - Vistara News

ದೇಶ

ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ & ಅಡುಗೆ ಅನಿಲ ದರ ಹೆಚ್ಚಳ

VISTARANEWS.COM


on

petrol
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನಾಲ್ಕೂವರೆ ತಿಂಗಳ ಬಳಿಕ ದೇಶದಲ್ಲಿ ಮತ್ತೆ ಇಂಧನ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್‌ ಗೆ 80 ಪೈಸೆಯಷ್ಟು ಏರಿಕೆಯಾಗಿದ್ದು, ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಳವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 96 ರೂಪಾಯಿ 21 ಪೈಸೆಯಾಗಿದೆ. ಈ ಹಿಂದೆ ದೆಹಲಿಯಲ್ಲಿ ಪೆಟ್ರೋಲ್ ದರ 95 ರೂಪಾಯಿ 41 ಪೈಸೆಯಾಗಿತ್ತು. ಡೀಸೆಲ್ ಬೆಲೆ 86 ರೂಪಾಯಿ 67 ಪೈಸೆಯಿಂದ 87 ರೂಪಾಯಿ 47 ಪೈಸೆಗೆ ಹೆಚ್ಚಳವಾಗಿದೆ.

14.2 ಕೆಜಿ ತೂಕದ ಸಬ್ಸಿಡಿ ಸಿಲಿಂಡರ್ ಬೆಲೆ 949 ರೂಪಾಯಿ 50 ಪೈಸೆಯಾಗಿದೆ. ೨೦೨೧ರ ಅಕ್ಟೋಬರ್ 6ರಂದು ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳವಾಗಿತ್ತು. ಹಾಗೆಯೇ 2021ರ ನವೆಂಬರ್ 4ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ನಾಲ್ಕೂವರೆ ತಿಂಗಳಿನಿಂದ ದೇಶದಲ್ಲಿ ಇಂಧನ ದರ ಏರಿಕೆಯಾಗಿರಲಿಲ್ಲ.

ಬೆಂಗಳೂರಿನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ದರ 101 ರೂಪಾಯಿ 42 ಪೈಸೆಯಾಗಿದೆ. ಇನ್ನು ಡೀಸೆಲ್ ದರ ಲೀಟರ್‌ಗೆ 85 ರೂಪಾಯಿ 80 ಪೈಸೆಯಾಗಿದೆ. ಇನ್ನು ಎಲ್‌ಪಿಜಿ ಸಿಲಿಂಡರ್ ಬೆಲೆ 902 ರೂಪಾಯಿ 50 ಪೈಸೆಯಾಗಿದೆ. 

ಇಂದಿನ ತೈಲ ಬೆಲೆ (ಪ್ರತಿ ಲೀ.)

ನಗರಪೆಟ್ರೋಲ್‌ಡೀಸೆಲ್
ಬೆಂಗಳೂರು₹101.41₹85.80
ದೆಹಲಿ ₹96.21₹87.47
ಮುಂಬೈ₹110.82₹95.00
ಚೆನ್ನೈ₹102.16₹92.19
ಕೋಲ್ಕತ್ತಾ₹105.51₹90.62

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election: ಕಳೆದ ಬಾರಿಗೆ ಹೋಲಿಸಿದರೆ ಮೊದಲೆರಡು ಹಂತಗಳ ಮತದಾನದ ಪ್ರಮಾಣದಲ್ಲಿ ಕುಸಿತ; ಇಲ್ಲಿದೆ ಅಂಕಿ-ಅಂಶ

Lok Sabha Election: ಲೋಕಸಭಾ ಚುನಾವಣೆಯ ಎರಡು ಹಂತಗಳ ಮತದಾನ ಯಶಸ್ವಿಯಾಗಿ ಮುಗಿದಿದೆ. ಈ ಎರಡು ಹಂತಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮತದಾನ ನಡೆದಿದೆ ಎನ್ನುವ ಅಂತಿಮ ಅಂಕಿ-ಅಂಶವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ಶೇ. 66.14ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದರೆ, ಎರಡನೇ ಹಂತದಲ್ಲಿ ಶೇ. 66.71ರಷ್ಟು ಮತದಾನವಾಗಿದೆ. 2019ಕ್ಕೆ ಹೋಲಿಸಿದರೆ ಮತದಾನದ ಪ್ರಮಾಣ ಕುಸಿದಿದೆ. ಕಳೆದ ಬಾರಿ ಮೊದಲ ಮತ್ತು ಎರಡನೇ ಹಂತಗಳಲ್ಲಿ ಕ್ರಮವಾಗಿ ಶೇ. 69.43 ಮತ್ತು ಶೇ. 69.17ರಷ್ಟು ಮತದಾನವಾಗಿತ್ತು.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಎರಡು ಹಂತಗಳ ಮತದಾನ ಯಶಸ್ವಿಯಾಗಿ ಮುಗಿದಿದೆ. ಇನ್ನು 5 ಹಂತಗಳ ಮತದಾನ ಬಾಕಿ ಇದೆ. ಈ ಮಧ್ಯೆ ಚುನಾವಣಾ ಆಯೋಗ (Election Commission) ಎರಡೂ ಹಂತಗಳಲ್ಲಿ ನಡೆದ ಒಟ್ಟು ಮತದಾನದ ನಿಖಿರ ಅಂಕಿ ಅಂಶವನ್ನು ಮಂಗಳವಾರ ಬಿಡುಗಡೆ ಮಾಡಿದೆ. ಈ 18ನೇ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇ. 66.14ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದರೆ, ಎರಡನೇ ಹಂತದಲ್ಲಿ ಶೇ. 66.71ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮೊದಲ ಹಂತದಲ್ಲಿ ಏಪ್ರಿಲ್ 19ರಂದು 102 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಎರಡನೇ ಹಂತದಲ್ಲಿ ಏಪ್ರಿಲ್ 26ರಂದು ಕರ್ನಾಟಕದ 14 ಕ್ಷೇತ್ರ ಸೇರಿ ಒಟ್ಟು 88 ಕ್ಷೇತ್ರಗಳಲ್ಲಿ ಮತದಾನ ಮುಗಿದಿದೆ. 2019ರ ಚುನಾವಣೆಗೆ ಹೋಲಿಸಿದರೆ ಈ ಚುನಾವಣೆಯ ಎರಡು ಹಂತಗಳಲ್ಲಿ ಮತದಾನದ ಪ್ರಮಾಣವು ಕುಸಿತ ಕಂಡಿದೆ. 2019ರಲ್ಲಿ ಮೊದಲ ಮತ್ತು ಎರಡನೇ ಹಂತಗಳಲ್ಲಿ ಕ್ರಮವಾಗಿ ಶೇ. 69.43 ಮತ್ತು ಶೇ. 69.17ರಷ್ಟು ಮತದಾನವಾಗಿತ್ತು.

ಅತ್ಯಧಿಕ ಎಲ್ಲಿ?

ಮೊದಲ ಹಂತದಲ್ಲಿ ಲಕ್ಷದ್ವೀಪದಲ್ಲಿ ಅತೀ ಹೆಚ್ಚು ಮತದಾನ ನಡೆದಿತ್ತು. ಇಲ್ಲಿ ಶೇ. 84.1 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು. ಅದೇ ರೀತಿ ಅತೀ ಕಡಿಮೆ ಬಿಹಾರದಲ್ಲಿ ದಾಖಲಾಗಿತ್ತು. ಇಲ್ಲಿ ಕೇವಲ ಶೇ. 49.26ರಷ್ಟು ಮತದಾನವಾಗಿತ್ತು. ಏಪ್ರಿಲ್‌ 19ರಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಆಯೋಜಿಸಲಾಗಿತ್ತು.

ಇನ್ನು ಎರಡನೇ ಹಂತದಲ್ಲಿ ಮಣಿಪುರದಲ್ಲಿ ಅಧಿಕ ಪ್ರಮಾಣದಲ್ಲಿ ಅಂದರೆ ಶೇ. 84.85 ಮತ ಚಲಾವಣೆಯಾದರೆ ಅತೀ ಕಡಿಮೆ ಉತ್ತರ ಪ್ರದೇಶದಲ್ಲಿ ದಾಖಲಾಗಿದೆ. ಇಲ್ಲಿ ಶೇ. 55.19 ಮಂದಿ ಮಾತ್ರ ವೋಟು ಹಾಕಿದ್ದಾರೆ. ಎರಡನೇ ಹಂತದಲ್ಲಿ ಒಟ್ಟು 88 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಈ ವೇಳೆ 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದ ಮೋದಿ; ಕಾಂಗ್ರೆಸ್‌ನ ತುಷ್ಟೀಕರಣ ನೀತಿಯ ಬಗ್ಗೆ ಅರಿವು ಮೂಡಿಸಲು ಕರೆ

ಕರ್ನಾಟಕದಲ್ಲಿ ದಾಖಲೆಯ ಮತದಾನ

ಕರ್ನಾಟಕದ 14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆವರೆಗೆ ಒಟ್ಟು ಶೇ. 69.23 ಮತದಾನ ದಾಖಲಾಗಿತ್ತು. ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿತ್ತು. ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.81.48 ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 52.81 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಇನ್ನು ಮೊದಲ ಹಂತದಲ್ಲಿ ಒಟ್ಟು 2,88,08,182 ಮತದಾರರು ಮತ ಚಲಾಯಿಸಿದ್ದು, 14 ಕ್ಷೇತ್ರಗಳಲ್ಲಿ 118 ಪಕ್ಷೇತರ ಅಭ್ಯರ್ಥಿಗಳು ಸೇರಿ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇದರಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಮೂರನೇ ಹಂತದಲ್ಲಿ ಅಂದರೆ ಮೇ 7ರಂದು ಕರ್ನಾಟಕದ ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

Continue Reading

Lok Sabha Election 2024

Election Commission: ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ; ಹೊಸ ವೇಳಾಪಟ್ಟಿ ಇಂತಿದೆ

Election Commission: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಈ ಮಧ್ಯೆ ಮಂಗಳವಾರ ಚುನಾವಣಾ ಆಯೋಗ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಲೋಕಸಭಾ ಕ್ಷೇತ್ರದ ಮತದಾನವನ್ನು ಮೇ 7ರಿಂದ ಮೇ 25ಕ್ಕೆ ಮುಂದೂಡಿದೆ. “ವಿವಿಧ ಲಾಜಿಸ್ಟಿಕ್ಸ್, ಸಂವಹನ ಮತ್ತು ಸಂಪರ್ಕದ ನೈಸರ್ಗಿಕ ಅಡೆತಡೆಯಿಂದಾಗಿ ಚುನಾವಣಾ ದಿನಾಂಕಗಳನ್ನು ಬದಲಾಯಿಸಿದ್ದೇವೆʼʼ ಎಂದು ಆಯೋಗ ತಿಳಿಸಿದೆ.

VISTARANEWS.COM


on

Election Commission
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ ಮಧ್ಯೆ ಮಂಗಳವಾರ ಚುನಾವಣಾ ಆಯೋಗ (Election Commission) ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಲೋಕಸಭಾ ಕ್ಷೇತ್ರದ ಮತದಾನವನ್ನು ಮೇ 7ರಿಂದ ಮೇ 25ಕ್ಕೆ ಮುಂದೂಡಿದೆ.

ಚುನಾವಣಾ ಆಯೋಗವು ತನ್ನ ಅಧಿಸೂಚನೆಯಲ್ಲಿ, “ವಿವಿಧ ಲಾಜಿಸ್ಟಿಕ್ಸ್, ಸಂವಹನ ಮತ್ತು ಸಂಪರ್ಕದ ನೈಸರ್ಗಿಕ ಅಡೆತಡೆಯಿಂದಾಗಿ ಚುನಾವಣಾ ದಿನಾಂಕಗಳನ್ನು ಬದಲಾಯಿಸಲು ವಿವಿಧ ರಾಜಕೀಯ ಪಕ್ಷಗಳು ಮನವಿ ಸಲ್ಲಿಸಿದ್ದವು. ಈ ಎಲ್ಲ ಸಮಸ್ಯೆಗಳು ಪ್ರಚಾರಕ್ಕೆ ಅಡ್ಡಿಯಾಗುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತದೆ ಎನ್ನುವುದನ್ನು ಮನಗಂಡಿದ್ದೇವೆ. ಇದು ಮತದಾನ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ದಿನಾಂಕ ಮುಂದೂಡಲಾಗಿದೆ” ಎಂದು ಹೇಳಿದೆ.

ಮೂರರ ಬದಲು ಆರನೇ ಹಂತದಲ್ಲಿ ಮತದಾನ

ʼʼಈ ಹಿಂದೆ ಅನಂತ್‌ನಾಗ್‌-ರಾಜೌರಿ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಅಂದರೆ ಮೇ 7ರಂದು ಮತದಾನ ನಡೆಸಲು ತೀರ್ಮಾನಿಸಲಾಗಿತ್ತು. ಅದರ ಬದಲು ಇದೀಗ ಆರನೇ ಹಂತದಲ್ಲಿ ಅಂದರೆ ಮೇ 25ಕ್ಕೆ ಮುಂದೂಡಲಾಗಿದೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕೆಲವು ಭಾಗಗಳು ಮತ್ತು ಜಮ್ಮು ಪ್ರದೇಶದ ಪೂಂಚ್ ಮತ್ತು ರಾಜೌರಿ ಪ್ರದೇಶಗಳನ್ನು ಒಳಗೊಂಡಿರುವ ಈ ಪ್ರದೇಶಗಳ ರಸ್ತೆ ಪರಿಸ್ಥಿತಿ, ಹವಾಮಾನ ಮತ್ತು ಇಲ್ಲಿನ ಪ್ರವೇಶದ ಬಗ್ಗೆ ವಿವರವಾದ ವರದಿಯನ್ನು ತಕ್ಷಣ ಸಲ್ಲಿಸುವಂತೆ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ ಆಡಳಿತವನ್ನು ಕೇಳಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ (National Conference) ಮತ್ತು ಮೆಹಬೂಬಾ ಮುಫ್ತಿ (PDP) ಕಳೆದ ವಾರ ಚುನಾವಣೆಯನ್ನು ಮುಂದೂಡದಂತೆ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದರು. “ಮುಂದೂಡುವ ಬೇಡಿಕೆ ಎಲ್ಲ ಪಕ್ಷಗಳಿಂದ ಬಂದಿಲ್ಲ. ವಿಶೇಷ ಎಂದರೆ ಚುನಾವಣಾ ಆಯೋಗಕ್ಕೆ ಪತ್ರ ಬರೆದ ಕೆಲವರು ಸ್ಪರ್ಧಿಸುತ್ತಿಲ್ಲ” ಎಂದು ಅಬ್ದುಲ್ಲಾ ತಿಳಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿ ಮಿಯಾನ್ ಅಲ್ತಾಫ್ ವಿರುದ್ಧ ಅನಂತ್‌ನಾಗ್-ರಾಜೌರಿಯಿಂದ ಸ್ಪರ್ಧಿಸುತ್ತಿರುವ ಮೆಹಬೂಬಾ ಮುಫ್ತಿ, “ಎಲ್ಲರೂ ನನ್ನ ವಿರುದ್ಧ ಗುಂಪುಗೂಡಿದ್ದಾರೆ. ಯಾಕೆಂದರೆ ಅವರು ನನ್ನನ್ನು ಸಂಸತ್ತಿನಲ್ಲಿ ನೋಡಲು ಬಯಸುವುದಿಲ್ಲ. ಜನರು, ಧಾರ್ಮಿಕ ಮತ್ತು ಪಕ್ಷಾತೀತವಾಗಿ ನನ್ನ ಬೆಂಬಲಕ್ಕೆ ಬರುತ್ತಿದ್ದಾರೆ. ಆದ್ದರಿಂದ ಅವರು ಚುನಾವಣೆಗಳನ್ನು ಮುಂದೂಡಲು ಮತ್ತು ತಿರುಚಲು ಚುನಾವಣಾ ಆಯೋಗವನ್ನು ಬಳಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

ಮೇ 7ರಂದು ಮೂರನೇ ಹಂತದಲ್ಲಿ ಒಟ್ಟು 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಈ ಪೈಕಿ ಶೇ. 18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ ಎಂದು ತಿಳಿದುಬಂದಿದೆ. ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಹಾಗೂ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ADR) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮೂರನೇ ಹಂತದ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ ಎಂದು ತಿಳಿದುಬಂದಿದೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ. ಅಭ್ಯರ್ಥಿಗಳು ಚುನಾವಣೆ ಆಯೋಗಕ್ಕೆ ನೀಡಿರುವ ಮಾಹಿತಿ ಆಧರಿಸಿ ವರದಿ ತಯಾರಿಸಲಾಗಿದೆ.

Continue Reading

ಪ್ರಮುಖ ಸುದ್ದಿ

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Labour Day: ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ.

VISTARANEWS.COM


on

labour Day
Koo

ಬೆಂಗಳೂರು: ಕಾರ್ಮಿಕರು ಯಾವುದೇ ಸಮಾಜ ಅಥವಾ ದೇಶದ ಶಕ್ತಿ. ಅವರಿಂದಲೇ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಕಾರ್ಮಿಕರು ರಾಷ್ಟ್ರೀಯ ಸಂಪತ್ತು. ಹೀಗೆ ಹಲವು ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ನೆರವಾ ಗುವ ಕಾರ್ಮಿಕರಿಗಾಗಿಯೇ ಒಂದು ದಿನವಿದೆ. ಅದುವೇ ಕಾರ್ಮಿಕರ ದಿನ. ಅಂದರೆ ಮೇ1. ಜಗತ್ತಿನ ಹಲವಾರು ದೇಶಗಳಲ್ಲಿ ಕಾರ್ಮಿಕ ದಿನವನ್ನು (Labour Day ) ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ಸಂದರ್ಭವನ್ನು ‘ಮೇ ದಿನ’ ಅಥವಾ ಕಾರ್ಮಿಕರ ದಿನ ಎಂದೂ ಕರೆಯಲಾಗುತ್ತದೆ. ಈ ದಿನವನ್ನು ಕೆಲಸ ಮಾಡುವವರಿಗೆ ವಿಶ್ರಾಂತಿ ದಿನವಾಗಿ ಆಚರಿಸಲಾಗುತ್ತದೆ

ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ. ಕಾರ್ಮಿಕ ದಿನವನ್ನು ವಿಶ್ವದಾದ್ಯಂತ ಹಲವಾರು ದೇಶಗಳಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ವಿಶೇಷ ಸಂದರ್ಭದ ಇತಿಹಾಸ, ಮಹತ್ವ ಅರಿಯೋಣ.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಇತಿಹಾಸ

ಅಂತಾರರಾಷ್ಟ್ರೀಯ ಕಾರ್ಮಿಕ ದಿನದ ಇತಿಹಾಸವು 1889 ರಲ್ಲಿ ಯುರೋಪ್, ಪ್ಯಾರಿಸ್​​ನಲ್ಲಿ ನಡೆದ ಸೋಶಿಯಲಿಸ್ಟ್​ ಪಾರ್ಟಿಗಳ ಮೊದಲ ಸಭೆ (ಇಂಟರ್​ನ್ಯಾಷನಲ್​ ಕಾಂಗ್ರೆಸ್​​) ಮೇ 1 ರಂದು ನಡೆಯಿತು. ಅದನ್ನು ಕಾರ್ಮಿಕರಿಗೆ ಸಮರ್ಪಿಸಲು ಮತ್ತು ಅದನ್ನು ಅಂತರರಾಷ್ಟ್ರೀಯ ಕಾರ್ಮಿಕ ದಿನ ಎಂದು ಘೋಷಣೆ ಮಾಡಲಾಯಿತು. 1886 ರಲ್ಲಿ, ಅಮೆರಿಕದ ಕೆಲವು ಭಾಗಗಳಲ್ಲಿ ಕಾರ್ಮಿಕರು ಗರಿಷ್ಠ ಎಂಟು ಗಂಟೆಗಳ ಕೆಲಸದ ದಿನಕ್ಕೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು. ಮುಷ್ಕರದ ಮೂರನೇ ದಿನ ಚಿಕಾಗೋದಲ್ಲಿ ಹಿಂಸಾಚಾರ ಉಂಟಾಯಿತು. ಈ ಘಟನೆಯನ್ನು ‘ದಿ ಹೇಮಾರ್ಕೆಟ್ ಅಫೇರ್’ ಎಂದು ಕರೆಯಲಾಯಿತು. ಇದು ಅಂತರರಾಷ್ಟ್ರೀಯ ಕಾರ್ಮಿಕ ದಿನದ ಸ್ಥಾಪನೆಗೆ ಕಾರಣವಾಯಿತು.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಮಹತ್ವ

ಕಾರ್ಮಿಕರ ಹೋರಾಟ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸುವುದು, ಅವರ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಅವರನ್ನು ಶೋಷಣೆಗೆ ಒಳಗಾಗದಂತೆ ತಡೆಯುವುದು ಕಾರ್ಮಿಕ ದಿನಾಚರಣೆಯ ಉದ್ದೇಶ. ಈ ಸಂದರ್ಭದಲ್ಲಿ, ಕಾರ್ಮಿಕರು ನ್ಯಾಯಯುತ ವೇತನ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗೆ ಒತ್ತಾಯಿಸಿ ಬೀದಿಗಳಲ್ಲಿ ಜಾಥಾ ನಡೆಸುತ್ತಾರೆ. ಮೇ ದಿನದಿಂದ ಕಾರ್ಮಿಕರು ಮತ್ತು ಕಾರ್ಮಿಕ ಚಳುವಳಿಯು ಮಾಡಿದ ಐತಿಹಾಸಿಕ ಹೋರಾಟಗಳು ಮತ್ತು ಲಾಭಗಳನ್ನು ಸ್ಮರಿಸಲಾಗುತ್ತದೆ.

ಇದನ್ನೂ ಓದಿ: Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಧ್ಯೇಯ

ಪ್ರತಿ ವರ್ಷ, ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಆಚರಣೆಗಾಗಿ ಹೊಸ ಥೀಮ್ ಅನ್ನು ಘೋಷಿಸಲಾಗುತ್ತದೆ. ಬದಲಾಗುತ್ತಿರುವ ಹವಾಮಾನದಲ್ಲಿ ಕೆಲಸದಲ್ಲಿ ಸುರಕ್ಷತೆ ಮತ್ತು ಆರೋಗ್ಯವನ್ನು ಖಚಿತಪಡಿಸಿಕೊಳ್ಳುವುದು ಈ ವರ್ಷದ ಧ್ಯೇಯ.

ಕಾರ್ಮಿಕರ ದಿನದ ಬಗ್ಗೆ ವಾಸ್ತವಾಂಶಗಳು

ಮೊದಲ ಬಾರಿಗೆ ಯುಎಸ್ ಕಾರ್ಮಿಕ ದಿನವನ್ನು ಸೆಪ್ಟೆಂಬರ್ 5, 1882ರ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ಕೇಂದ್ರ ಕಾರ್ಮಿಕ ಒಕ್ಕೂಟವು ಯೋಜಿಸಿತು. ಕಾರ್ಮಿಕ ಚಳುವಳಿಯನ್ನು ಗೌರವಿಸುವ ದಿನವನ್ನು ಆಯೋಜಿಸುವ ಕಲ್ಪನೆ ಕೆನಡಾದಲ್ಲಿ ಹುಟ್ಟಿತು. 1872 ರಲ್ಲಿ ಮುಷ್ಕರ ನಿರತ ಕಾರ್ಮಿಕರಿಗೆ ಬೆಂಬಲವನ್ನು ತೋರಿಸಲು ಅವರು ‘ಒಂಬತ್ತು ಗಂಟೆಗಳ ಚಳುವಳಿ’ ನಡೆಸಿದರು.

ಒರೆಗಾನ್ 1887 ರಲ್ಲಿ ಕಾರ್ಮಿಕ ದಿನವನ್ನು ಕಾನೂನುಬದ್ಧ ರಜಾದಿನವಾಗಿ ಆಚರಿಸಿದ ಮೊದಲ ದೇಶ . 19ನೇ ಶತಮಾನದಲ್ಲಿ ಅಮೆರಿಕನ್ನರು ವಾರದಲ್ಲಿ ಏಳು ದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ನ್ಯೂಯಾರ್ಕ್ ನಗರದಲ್ಲಿ ಮೊದಲ ಬಾರಿ ಮೆರವಣಿಗೆ ನಡೆಸಿದ ಜಾಗದಲ್ಲಿ ಇನ್ನೂ ಕಾರ್ಮಿಕ ದಿನದ ಮೆರವಣಿಗೆ ಮಾಡಲಾಗುತ್ತದೆ. 1882 ರ ಕಾರ್ಮಿಕ ಮೆರವಣಿಗೆಯ ಉತ್ತರದ 20 ಬ್ಲಾಕ್​​ಗಳಲ್ಲಿನಡೆಯುತ್ತದೆ.

Continue Reading

Lok Sabha Election 2024

Parliament Flashback: 1996ರಲ್ಲಿ ಬಿಜೆಪಿ ಮೊದಲ ಬಾರಿ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದು ಹೇಗೆ?

Parliament Flashback: 1996ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 545ರಲ್ಲಿ 161 ಸ್ಥಾನ ಗೆದ್ದ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ 15 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್‌ ಕೇವಲ 140 ಸೀಟುಗಳಿಗೆ ಸೀಮಿತವಾಯಿತು. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರಿಂದ ರಾಷ್ಟ್ರಪತಿಯವರು ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದರು.

VISTARANEWS.COM


on

Parliament Flashback
Koo

ಬೆಂಗಳೂರು: 1991ರ ಚುನಾವಣೆಯಲ್ಲಿ (Parliament Flashback) ಬಹುಮತ ಕೊರತೆ ಎದುರಿಸುತ್ತಿದ್ದ ಕಾಂಗ್ರೆಸ್‌, ಪಿ.ವಿ.ನರಸಿಂಹ ರಾವ್‌ ನೇತೃತ್ವದಲ್ಲಿ ಹಾಗೂ ಹೀಗೂ ಐದು ವರ್ಷ ಆಡಳಿತ ನಡೆಸಿತು. ಆದರೆ ರಾಜೀವ್‌ ಗಾಂಧಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ ಭ್ರಷ್ಟಾಚಾರ ಆರೋಪಗಳು ನರಸಿಂಹ ರಾವ್‌ ಸರ್ಕಾರದ ಅವಧಿಯಲ್ಲಿ ಇನ್ನೂ ಜೋರಾಗಿ ಕೇಳಿ ಬಂದವು. ನರಸಿಂಹ ರಾವ್‌ ಸಂಪುಟದ ಏಳು ಸಚಿವರು ನಾನಾ ಹಗರಣಗಳಲ್ಲಿ ಸಿಲುಕಿ ರಾಜೀನಾಮೆ ನೀಡಬೇಕಾಯಿತು. ಸ್ವತಃ ಪ್ರಧಾನಿ ನರಸಿಂಹ ರಾವ್‌ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿ ಬಂತು.
ಇದರ ಜತೆಗೆ ಕಾಶ್ಮೀರದಲ್ಲಿ ಭಯೋತ್ಪಾದನೆ ಭುಗಿಲೆದ್ದಿತು. ಕಾಂಗ್ರೆಸ್‌ ನ ತುಷ್ಟೀಕರಣ ರಾಜಕಾರಣದ ವಿರುದ್ಧ ಬಹುಸಂಖ್ಯಾತ ಹಿಂದೂಗಳು ದನಿ ಎತ್ತಲಾರಂಭಿಸಿದರು. ಇನ್ನೊಂದೆಡೆ ಕಾಂಗ್ರೆಸ್‌ ಪಕ್ಷದೊಳಗೆ ಬಂಡಾಯ ತೀವ್ರವಾಯಿತು. ಎನ್‌.ಡಿ.ತಿವಾರಿ, ಅರ್ಜುನ್‌ ಸಿಂಗ್‌ರಂಥ ಹಿರಿಯ ನಾಯಕರು ಕಾಂಗ್ರೆಸ್‌ನಿಂದ ಸಿಡಿದು ಆಲ್‌ ಇಂಡಿಯಾ ಇಂದಿರಾ ಕಾಂಗ್ರೆಸ್‌(ತಿವಾರಿ ಬಣ) ಸ್ಥಾಪಿಸಿದರು. ತಮಿಳುನಾಡಿನ ಜಿ.ಕೆ.ಮೂಪನಾರ್‌ ತಮಿಳ್‌ ಮಾನಿಲ ಕಾಂಗ್ರೆಸ್‌ ಕಟ್ಟಿದರು.

ದೊಡ್ಡ ಪಕ್ಷವಾದ ಬಿಜೆಪಿ

1996ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 545ರಲ್ಲಿ 161 ಸ್ಥಾನ ಗೆದ್ದ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ 15 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್‌ ಕೇವಲ 140 ಸೀಟುಗಳಿಗೆ ಸೀಮಿತವಾಯಿತು. ಕಾಂಗ್ರೆಸ್‌ ಬಂಡಾಯ ಪಕ್ಷವಾದ ತಮಿಳ್‌ ಮಾನಿಲ ಕಾಂಗ್ರೆಸ್‌ 20 ಮತ್ತು ಎನ್‌ ಡಿ ತಿವಾರಿ ಬಣ 4 ಸೀಟುಗಳನ್ನು ಗೆದ್ದುಕೊಂಡಿತು. ಜನತಾ ದಳ 46 ಸ್ಥಾನಗಳಲ್ಲಿ ಜಯ ಗಳಿಸಿತು. ಸಿಪಿಎಂ 32 ಸ್ಥಾನಗಳಲ್ಲಿ ಗೆದ್ದಿತು.
ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರಿಂದ ರಾಷ್ಟ್ರಪತಿಯವರು ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದರು. ಅಟಲ್‌ ಬಿಹಾರಿ ವಾಜಪೇಯಿ ಅವರು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ- ಸುಷ್ಮಾ ಸ್ವರಾಜ್‌ ಮಧ್ಯೆ ಐತಿಹಾಸಿಕ ಕದನ!

1999ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿತ್ತು. ಇದಕ್ಕೆ ಕಾರಣ ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಮತ್ತು ಬಿಜೆಪಿಯ ಫೈರ್‌ ಬ್ರಾಂಡ್‌ ನಾಯಕಿ, ದಿಲ್ಲಿಯ ಮುಖ್ಯಮಂತ್ರಿಯೂ ಆಗಿದ್ದ ಸುಷ್ಮಾ ಸ್ವರಾಜ್‌ ನಡುವಿನ ಮುಖಾಮುಖಿ.

ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ರಾಜೀವ್‌ ಗಾಂಧಿ ಅವರ ಪರಮಾಪ್ತರಾಗಿದ್ದ ಕ್ಯಾಪ್ಟನ್‌ ಸತೀಶ್‌ ಶರ್ಮಾ ಅವರನ್ನು ಬಿಜೆಪಿ ಅಭ್ಯರ್ಥಿ ಡಾ. ಸಂಜಯ್‌ ಸಿಂಗ್‌ ಸೋಲಿಸಿದ್ದರು. ಹಾಗಾಗಿ ಅಲ್ಲಿ ಸುಲಭವಾಗಿ ಗೆಲ್ಲುವ ವಿಶ್ವಾಸ ಸೋನಿಯಾಗಿರಲಿಲ್ಲ. ಹಾಗಾಗಿ ಸೋನಿಯಾ ಗಾಂಧಿ ಹಿತೈಷಿಗಳೆಲ್ಲ ಸೇರಿ ಲೆಕ್ಕಾಚಾರ ಹಾಕಿ ಆರಿಸಿದ ಮತ್ತೊಂದು ಕ್ಷೇತ್ರವೇ ಬಳ್ಳಾರಿ. ಏಕೆಂದರೆ 1952ರಿಂದ 1999ರವರೆಗೆ ನಡೆದ 12 ಚುನಾವಣೆಗಳಲ್ಲೂ ಕಾಂಗ್ರೆಸ್‌ ಬಳ್ಳಾರಿಯಲ್ಲಿ ಜಯ ಸಾಧಿಸಿತ್ತು.
ಹೈದರಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿಗೆ ಬಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದರು.

ಸೋನಿಯಾ ನಾಮಪತ್ರದ ಬೆನ್ನಿಗೇ ಸುಷ್ಮಾ ಸ್ವರಾಜ್‌ ಅವರನ್ನು ಕಣಕ್ಕಿಳಿಸಿ ಕಾಂಗ್ರೆಸ್‌ಗೆ ಬಿಜೆಪಿ ನಡುಕ ಹುಟ್ಟಿಸಿತು. ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಅವರ ಚುನಾವಣಾ ಪ್ರಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿತು. ವಿದೇಶಿ ಸೊಸೆ ಮತ್ತು ಸ್ವದೇಶಿ ಮಗಳ ನಡುವಿನ ಸ್ಪರ್ಧೆ ಎಂದೇ ಮಾಧ್ಯಮಗಳು ಬಣ್ಣಿಸಿದವು. ಸುಷ್ಮಾ ಸ್ವರಾಜ್‌ ಅವರು ಕನ್ನಡದಲ್ಲೇ ಭಾಷಣ ಮಾಡಿ ಅಚ್ಚರಿ ಮೂಡಿಸಿದರು. ಕಾಂಗ್ರೆಸ್‌ ಮತ್ತು ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಇಲ್ಲಿಗೆ ಬಂದು ಪ್ರಚಾರ ಮಾಡಿದರು. ಆದರೆ ಅಂತಿಮವಾಗಿ ಸೋನಿಯಾ ಗಾಂಧಿ ಅವರು 56,100 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಇದನ್ನೂ ಓದಿ: Parliament Flashback: ಇಂದಿರಾ ಗಾಂಧಿಯ ತುರ್ತು ಪರಿಸ್ಥಿತಿಯ ಎಫೆಕ್ಟ್‌; 1977ರಲ್ಲಿ ಧೂಳಿಪಟವಾಗಿದ್ದ ಕಾಂಗ್ರೆಸ್‌!

ಅತ್ತ ಅಮೇಠಿಯಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆದ್ದ ಸೋನಿಯಾ ಗಾಂಧಿ ಬಳ್ಳಾರಿ ಕ್ಷೇತ್ರ ತೊರೆದರು. ಸುಷ್ಮಾ ಸ್ವರಾಜ್‌ ಇಲ್ಲಿ ಸೋತರು. ಆದರೆ ಪ್ರತಿವರ್ಷ ವರ ಮಹಾಲಕ್ಷ್ಮಿ ದಿನ ಬಳ್ಳಾರಿಗೆ ಬಂದು ಪೂಜೆಯಲ್ಲಿ ಭಾಗಿಯಾಗುತ್ತಿದ್ದರು. ಅವರ ಸ್ಪರ್ಧೆ ಬಳ್ಳಾರಿಯಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಿತು. ಮುಂದೆ 2004, 2009, 20014 ಮತ್ತು 20019ರ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಜಯ ದಾಖಲಿಸಿದ್ದೇ ಇದಕ್ಕೆ ಸಾಕ್ಷಿ.

Continue Reading
Advertisement
2nd PUC Paper Leak
ಕರ್ನಾಟಕ11 mins ago

2nd PUC Paper Leak: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ವಜಾಗೊಂಡಿದ್ದ ಎಸ್‌ಡಿಎ ಮರು ನೇಮಕ!

Lok Sabha Election
Lok Sabha Election 202415 mins ago

Lok Sabha Election: ಕಳೆದ ಬಾರಿಗೆ ಹೋಲಿಸಿದರೆ ಮೊದಲೆರಡು ಹಂತಗಳ ಮತದಾನದ ಪ್ರಮಾಣದಲ್ಲಿ ಕುಸಿತ; ಇಲ್ಲಿದೆ ಅಂಕಿ-ಅಂಶ

T20 World Cup
ಪ್ರಮುಖ ಸುದ್ದಿ15 mins ago

T20 World Cup : ಈ ದಿನದಂದು ವಿಶ್ವ ಕಪ್​ಗಾಗಿ ಯುಎಸ್​ಎಗೆ ಹೊರಡಲಿದೆ ಟೀಮ್ ಇಂಡಿಯಾ

Kantesh
ಪ್ರಮುಖ ಸುದ್ದಿ40 mins ago

Kanthesh : ಅಶ್ಲೀಲ ವಿಡಿಯೊ ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದ ಈಶ್ವರಪ್ಪ ಪುತ್ರ ಕಾಂತೇಶ್​​

Election Commission
Lok Sabha Election 202449 mins ago

Election Commission: ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ; ಹೊಸ ವೇಳಾಪಟ್ಟಿ ಇಂತಿದೆ

Hassan Pen drive Case
ಪ್ರಮುಖ ಸುದ್ದಿ53 mins ago

Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

IPL 2024
ಪ್ರಮುಖ ಸುದ್ದಿ1 hour ago

IPL 2024 : ಅತಿ ವೇಗದ ಬೌಲರ್​ ಮಾಯಾಂಕ್​ ಯಾದವ್​ಗೆ ಮತ್ತೆ ಗಾಯ?

labour Day
ಪ್ರಮುಖ ಸುದ್ದಿ2 hours ago

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Parliament Flashback
Lok Sabha Election 20242 hours ago

Parliament Flashback: 1996ರಲ್ಲಿ ಬಿಜೆಪಿ ಮೊದಲ ಬಾರಿ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದು ಹೇಗೆ?

Viral Video
ವೈರಲ್ ನ್ಯೂಸ್2 hours ago

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ19 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌