Indian Students In Canada: ಕೆನಡಾದಲ್ಲಿ ಭಾರತದ 700 ವಿದ್ಯಾರ್ಥಿಗಳಿಗೆ ಗಡಿಪಾರು ಭೀತಿ, ಪಂಜಾಬ್‌ ವೀಸಾ ದಂಧೆ ಕಾರಣ? Vistara News
Connect with us

ದೇಶ

Indian Students In Canada: ಕೆನಡಾದಲ್ಲಿ ಭಾರತದ 700 ವಿದ್ಯಾರ್ಥಿಗಳಿಗೆ ಗಡಿಪಾರು ಭೀತಿ, ಪಂಜಾಬ್‌ ವೀಸಾ ದಂಧೆ ಕಾರಣ?

Indian Students In Canada: ಕೆನಡಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ 700 ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ಪಂಜಾಬ್‌ನವರಾಗಿದ್ದಾರೆ. ಹಾಗಾಗಿ, ಪಂಜಾಬ್‌ನಲ್ಲಿ ನಕಲಿ ವೀಸಾ ದಂಧೆ ನಡೆದಿದೆ ಎಂದೇ ಹೇಳಲಾಗುತ್ತಿದೆ.

VISTARANEWS.COM


on

700 Indian students to face deportation from Canada due to fake visa documents
ಸಾಂದರ್ಭಿಕ ಚಿತ್ರ.
Koo

ಒಟ್ಟಾವ: ವಿದೇಶದಲ್ಲಿ ದೊರೆಯುವ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣ ಪಡೆಯಬೇಕು, ಅದಾದ ಬಳಿಕ ಒಳ್ಳೆಯ ಉದ್ಯೋಗ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬುದು ಭಾರತದಿಂದ ವಿದೇಶಕ್ಕೆ ಹಾರುವ ವಿದ್ಯಾರ್ಥಿಗಳ ಕನಸಾಗಿರುತ್ತದೆ. ಹೀಗೆ, ಉಜ್ವಲ ಭವಿಷ್ಯದ ಕನಸು ಇಟ್ಟುಕೊಂಡು ಕೆನಡಾಗೆ ತೆರಳಿದ ಭಾರತದ ಸುಮಾರು 700 ವಿದ್ಯಾರ್ಥಿಗಳಿಗೆ ಗಡಿಪಾರು (Indian Students In Canada) ಭೀತಿ ಎದುರಾಗಿದೆ. ಭಾರತದ 700 ವಿದ್ಯಾರ್ಥಿಗಳು ಹೊಂದಿರುವ ವೀಸಾ ಹಾಗೂ ದಾಖಲಾತಿ ಪ್ರಮಾಣಪತ್ರಗಳು ನಕಲಿ ಎಂಬುದನ್ನು ಕೆನಡಾ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಹಾಗಾಗಿ, ಭಾರತದ ವಿದ್ಯಾರ್ಥಿಗಳನ್ನು ಶೀಘ್ರದಲ್ಲೇ ಗಡಿಪಾರು ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

2018-19ರಲ್ಲಿ ಉನ್ನತ ಶಿಕ್ಷಣ ಪಡೆಯಲು ಕೆನಡಾಗೆ ತೆರಳಿದ ಸಾವಿರಾರು ವಿದ್ಯಾರ್ಥಿಗಳಲ್ಲಿ ಒಂದಷ್ಟು ಜನರ ವಿದ್ಯಾಭ್ಯಾಸ ಪೂರ್ಣಗೊಂಡಿದೆ. ಇನ್ನೂ ಕೆಲವರು ಕೆಲಸಕ್ಕೂ ಸೇರಿ, ಉದ್ಯೋಗದ ಅನುಮತಿ ಪಡೆದಿದ್ದಾರೆ. ಇವರಲ್ಲಿ ಒಂದಷ್ಟು ಜನ ಕೆನಡಾದಲ್ಲಿಯೇ ವಾಸಿಸಲು ಕಾಯಂ ವೀಸಾಗೆ ಅರ್ಜಿ ಸಲ್ಲಿಸಿದಾಗ ಭಾರತದ 700 ವಿದ್ಯಾರ್ಥಿಗಳ ವೀಸಾ ಹಾಗೂ ದಾಖಲಾತಿ ಪ್ರಮಾಣಪತ್ರಗಳೇ ನಕಲಿ ಎಂಬುದು ಗೊತ್ತಾಗಿದೆ. ಕೆನಡಿಯನ್‌ ಬಾರ್ಡರ್‌ ಸೆಕ್ಯುರಿಟಿ ಏಜೆನ್ಸಿಯು (CBSA) ಈಗಾಗಲೇ ವಿದ್ಯಾರ್ಥಿಗಳಿಗೆ ಗಡಿಪಾರು ಪತ್ರಗಳನ್ನು ನೀಡಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಯಲಾಯ್ತು ಪಂಜಾಬ್‌ ವೀಸಾ ದಂಧೆ

ಕೆನಡಾದಲ್ಲಿ ನಕಲಿ ದಾಖಲೆಗಳ ಸಲ್ಲಿಕೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ 700 ವಿದ್ಯಾರ್ಥಿಗಳು ಬಹುತೇಕ ವಿದ್ಯಾರ್ಥಿಗಳು ಪಂಜಾಬ್‌ನವರೇ ಆಗಿದ್ದಾರೆ. ಹಾಗಾಗಿ, ಪಂಜಾಬ್‌ನಲ್ಲಿ ನಕಲಿ ವೀಸಾ ದಂಧೆ ನಡೆದಿದೆ ಎಂದು ತಿಳಿದುಬಂದಿದೆ. ಅದರಲ್ಲೂ, ಜಲಂಧರ್‌ ಮೂಲದ ಎಜುಕೇಷನ್‌ ಆ್ಯಂಡ್‌ ಮೈಗ್ರೇಷನ್‌ ಸರ್ವಿಸಸ್‌ ಸಂಸ್ಥೆಯ ಮೂಲಕವೇ ಪಡೆದ ವೀಸಾಗಳು ನಕಲಿ ಎಂಬುದು ತಿಳಿದುಬಂದಿದ್ದು, ಇದರ ಮಾಲೀಕ ಬ್ರಿಜೇಶ್‌ ಮಿಶ್ರಾ ದಂಧೆಕೋರ ಎಂದು ಹೇಳಲಾಗುತ್ತಿದೆ.

ಬಿಹಾರ ಮೂಲದ ಬ್ರಿಜೇಶ್‌ ಮಿಶ್ರಾ ಜಲಂಧರ್‌ನಲ್ಲಿ ಎಜುಕೇಷನ್‌ ಆ್ಯಂಡ್‌ ಮೈಗ್ರೇಷನ್‌ ಸರ್ವಿಸಸ್‌ ಸಂಸ್ಥೆ ನಡೆಸುತ್ತಿದ್ದು, 2018-19ರಲ್ಲಿ ಕೆನಡಾಗೆ ತೆರಳಿದ ವಿದ್ಯಾರ್ಥಿಗಳಿಗೆ ವೀಸಾ ಕೊಡಿಸಿದ್ದಾನೆ. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಟ್ಯೂಷನ್‌ ಶುಲ್ಕ ಸೇರಿ 16 ಲಕ್ಷ ರೂಪಾಯಿ ಪಡೆದಿದ್ದಾನೆ. ಈಗ ಈತ ನೀಡಿದ ವೀಸಾಗಳು ನಕಲಿ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದಷ್ಟೇ ಜಲಂಧರ್‌ ಜಿಲ್ಲಾಧಿಕಾರಿಯು ಸಂಸ್ಥೆಯ ಪರವಾನಗಿ ರದ್ದುಗೊಳಿಸಿದ್ದಾರೆ ಎಂದೂ ಮೂಲಗಳು ತಿಳಿಸಿವೆ.

ಕೇಂದ್ರದ ಮಧ್ಯಸ್ಥಿಕೆಗೆ ಅಕಾಲಿ ದಳ ಮನವಿ

ಇದರ ಬೆನ್ನಲ್ಲೇ ಕೆನಡಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತದ ವಿದ್ಯಾರ್ಥಿಗಳ ನೆರವಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನೆರವಿಗೆ ಬರಬೇಕು ಎಂದು ಶಿರೋಮಣಿ ಅಕಾಲಿ ದಳ (SAD) ಮುಖ್ಯಸ್ಥ ಸುಖ್‌ಬೀರ್‌ ಸಿಂಗ್‌ ಬಾದಲ್‌ ಅವರು ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರವು ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ, ವಿದ್ಯಾರ್ಥಿಗಳಿಗೆ ನೆರವು ನೀಡಬೇಕು ಎಂಬುದಾಗಿ ಕೋರಿದ್ದಾರೆ. ಇದುವರೆಗೆ ವಿದೇಶಾಂಗ ಸಚಿವಾಲಯದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ: Fake Documents | ವೀಸಾಕ್ಕೆ ಭಾರತದ ವಿದ್ಯಾರ್ಥಿಗಳು ನಕಲಿ ದಾಖಲೆ ನೀಡುತ್ತಾರಾ? ಜರ್ಮನಿ ರಾಯಭಾರಿ ಹೇಳಿದ್ದೇನು?

ದೇಶ

ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಹುತಾತ್ಮನಂತೆ ನಟಿಸ್ತಾ ಇರೋ ರಾಹುಲ್ ಗಾಂಧಿ: ಬಿಜೆಪಿ

ಕರ್ನಾಟಕದಲ್ಲಿ ಜನರ ಅನುಭೂತಿ ಗಿಟ್ಟಿಸುವುದಕ್ಕಾಗಿ ರಾಹುಲ್ ಗಾಂಧಿ (Rahul Gandhi) ಅನರ್ಹತೆ ವಿಚಾರವನ್ನು ಮುಂದಿಟ್ಟುಕೊಂಡು ರಂಪ ಮಾಡುತ್ತಿದ್ದಾರೆ ಎಂದು ರವಿಶಂಕರ್​ ಪ್ರಸಾದ್ ಆರೋಪಿಸಿದ್ದಾರೆ.

VISTARANEWS.COM


on

rahul gandhi will act like a martyr with an eye on karnataka elections bjp
Koo

ಪಟಾನಾ : ಸಂಸತ್​​ನಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ (Rahul Gandhi) ತಮ್ಮ ತಪ್ಪನ್ನು ಮುಚ್ಚಿಡುವ ಜತೆಗೆ ಕರ್ನಾಟಕದ ಚುನಾವಣೆ ಮೇಲೆ ಕಣ್ಣಿಟ್ಟು ಹುತಾತ್ಮನಂತೆ ನಟಿಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ರವಿಶಂಕರ್​ ಪ್ರಸಾದ್ ಲೇವಡಿ ಮಾಡಿದ್ದಾರೆ. ಪಟನಾದ ಬಿಜೆಪಿ ಕಚೇರಿಯಲ್ಲಿ ಶನಿವಾರ (ಮಾರ್ಚ್​ 25ರಂದು) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಡನ್​ನಲ್ಲಿ ದೇಶದ ಸಮಗ್ರತೆಗೆ ಧಕ್ಕೆ ತರುವಂಥ ಮಾತನ್ನಾಡಿರುವ ಅವರು, ವಿಷಯದಿಂದ ತಪ್ಪಿಸಿಕೊಳ್ಳಲು ಸಂಸತ್ ಸದಸ್ಯತ್ವ ಅನರ್ಹತೆಯ ವಿಚಾರವನ್ನೇ ರಂಪ ಮಾಡಿ ಅನುಕಂಪ ಗಿಟ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆಗೂ ಉದ್ಯಮಿ ಗೌತಮ್​ ಅದಾನಿ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಇನ್ನೊಬ್ಬರ ಬಗ್ಗೆ ಹೀನ ಮಾತುಗಳನ್ನಾಡುವ ಚಾಳಿ ಹೊಂದಿರುವ ರಾಹುಲ್ ಗಾಂಧಿ, ಈ ಬಾರಿ ಹಿಂದುಳಿದ ಜಾತಿಯೊಂದರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ. ಆ ಆರೋಪಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಅಮಾಯಕರಂತೆ ವರ್ತಿಸುತ್ತಿದ್ದಾರೆ. ತಮ್ಮ ತಪ್ಪಿಗೆ ಕ್ಷಮೆ ಕೇಳದ ಕಾರಣ ಸೂರತ್​ ಕೋರ್ಟ್ ಅವರಿಗೆ ಜೈಲು ಶಿಕ್ಷೆ ವಿಧಿಸಿದೆ ಎಂದು ರವಿಶಂಕರ್​ ಪ್ರಸಾದ್​ ಕಿಡಿ ಕಾರಿದರು.

ಕಾಂಗ್ರೆಸ್​ನ ಹಿರಿಯ ನ್ಯಾಯವಾದಿಗಳು ಈ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿಲ್ಲ ಎಂಬುದೇ ಅಚ್ಚರಿಯ ವಿಷಯ. ಅದೂ ಅಲ್ಲದೆ ಸಂಸತ್​ನಿಂದ ಅನರ್ಹಗೊಳ್ಳುವುದು ಇದೇ ಮೊದಲ ಪ್ರಕರಣವಲ್ಲ. ಆರು ಮಂದಿ ಬಿಜೆಪಿ ಸದಸ್ಯರು ಸೇರಿದಂತೆ ಇದುವರೆಗೆ ಒಟ್ಟು 32 ನಾಯಕರು ಲೋಕಸಭೆಯಿಂದ ಅನರ್ಹರಾಗಿದ್ದಾರೆ. ಆರ್​ಜೆಡಿ ನಾಯಕ ಲಾಲು ಪ್ರಸಾದ್ ಯಾದವ್​ ಕೂಡ ಈ ಪಟ್ಟಿಯಲ್ಲಿದ್ದಾರೆ. ಅಂತೆಯೇ ಪಟನಾ ಕೋರ್ಟ್​ ಸೇರಿದಂತೆ ಏಳು ಕೋರ್ಟ್​​ಗಳಲ್ಲಿ ರಾಹುಲ್ ಗಾಂಧಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್​ಗಳಿವೆ ಎಂದು ರವಿಶಂಕರ್​ ಪ್ರಸಾದ್ ಹೇಳಿದರು.

ರಾಹುಲ್ ಗಾಂಧಿಯ ಅನರ್ಹತೆಯ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್​, ಕರ್ನಾಟಕದ ಚುನಾವಣೆಯಲ್ಲಿ ಜನರ ಅನುಭೂತಿಯನ್ನು ಪಡೆಯಲು ಯತ್ನಿಸುತ್ತಿದೆ. ಇದು ತಟಸ್ಥ ನಿರ್ಧಾರವಾಗಿದ್ದು ನ್ಯಾಯಾಲಯದ ಆದೇಶದ ಮೇರೆಗೆ ಜನಪ್ರತಿನಿಧಿಗಳ ಕಾಯ್ದೆಯಡಿ ಅವರನ್ನು ಅನರ್ಹಗೊಳಿಸಲಾಗಿದೆ. ಆದಾಗ್ಯೂ, ರಾಹುಲ್ ಗಾಂಧಿ ಹಿಂದುಳಿದ ಜಾತಿಗಳ ವಿರುದ್ಧ ನೀಡುತ್ತಿರುವ ಹೇಳಿಕೆಗಳನ್ನು ಜನರ ಮುಂದೆ ಇಡುವುದಕ್ಕಾಗಿ ಬಿಜೆಪಿ ರಾಷ್ಟ್ರವ್ಯಾಪಿ ಅಭಿಯಾನ ಕೈಗೊಳ್ಳಲಿದೆ ಎಂದು ಹೇಳಿದರು.

ಇದನ್ನೂ ಓದಿ : 2013ರಲ್ಲಿ ರಾಹುಲ್‌ ಗಾಂಧಿ ಸುಗ್ರೀವಾಜ್ಞೆ ಹರಿಯದಿದ್ದರೆ ಈಗ ಅನರ್ಹರಾಗುತ್ತಿರಲಿಲ್ಲ, ಏನದು ಸುಗ್ರೀವಾಜ್ಞೆ?

ರಾಹುಲ್​ ಗಾಂಧಿ ವಿದೇಶಕ್ಕೆ ಹೋಗಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಮೊಸಳೆ ಕಣ್ಣೀರು ಇಡುತ್ತಿದ್ದಾರೆ. ಅವರ ಪಕ್ಷ ಸೋತಾಗ ಆ ರೀತಿ ಮಾಡುವುದು ಅವರ ಹವ್ಯಾಸ. ಚುನಾವಣೆಯಲ್ಲಿ ಕಾಂಗ್ರೆಸ್​ ಸೋತರೆ ಪ್ರಜಾಪ್ರಭುತ್ವಕ್ಕೆ ಅಪಾಯ ಎಂದು ಹೇಳುತ್ತಾರೆ. ಚುನಾವಣಾ ಆಯೋಗ ಪಕ್ಷಪಾತಿ ಎಂದು ದೂರುತ್ತಾರೆ. ನ್ಯಾಯಾಂಗ ವ್ಯವಸ್ಥೆ ಬಲ ಕಳೆದುಕೊಂಡಿದೆ ಎಂದು ನುಡಿಯುತ್ತಾರೆ ಎಂಬುದಾಗಿ ಪ್ರಸಾದ್​ ಕಟಕಿಯಾಡಿದರು.

ಬಲಿಷ್ಠ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪಗಳನ್ನು ಮಾಡುವುದಕ್ಕೆ ಕಾಂಗ್ರೆಸ್​ಗೆ ನಾಚಿಕೆಯಾಗಬೇಕು. ಮೋದಿಯವರ ಆಡಳಿತದಲ್ಲಿ ಭಾರತ ಹೊಸ ಯುಗದತ್ತ ಸಾಗುತ್ತಿದೆ. ಅವರ ಶ್ರಮದಿಂದಾಗಿ ಭಾರತ ವಿಶ್ವದ ಐದನೇ ಶ್ರೀಮಂತ ದೇಶ ಎನಿಸಿಕೊಂಡಿದೆ. ತಮ್ಮ ಫೋನ್​ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬುದು ಕೂಡ ರಾಹುಲ್​ ಗಾಂಧಿಯ ಹಸಿ ಸುಳ್ಳಿನ ಹೇಳಿಕೆ ಎಂದು ಅವರು ಹೇಳಿದ್ದಾರೆ.

Continue Reading

ದೇಶ

Rahul Gandhi Disqualified : ನಿಮ್ಮ ರೂಲ್ಸ್​ ಗಾಂಧಿ ಫ್ಯಾಮಿಲಿಗೆ ಅನ್ವಯವಾಗಲ್ಲ; ಕಾಂಗ್ರೆಸ್​ ಸಂಸದನ ಕಿಡಿ!

ರಾಹುಲ್​ ಗಾಂಧಿಯ ತಂದೆ ಹಾಗೂ ಅಜ್ಜಿ ದೇಶಕ್ಕಾಗಿ ಪ್ರಾಣ ಸಮರ್ಪಿಸಿದ್ದಾರೆ . ಅವರನ್ನು ವಿಶೇಷ ಎಂದು ಪರಿಗಣಿಸುವಂತೆ ರಾಜ್ಯಸಭಾ ಸದಸ್ಯ ಪ್ರಮೋದ್ ತಿವಾರಿ ಹೇಳಿದ್ದಾರೆ.

VISTARANEWS.COM


on

Your rules dont apply to the Gandhi family Spark of Congress MP
Koo

ನವ ದೆಹಲಿ : ದೇಶದ ಸಾಮಾನ್ಯ ನಾಗರಿಕರಿಗಾಗಿ ಮಾಡಿರುವ ಕಾನೂನು ಗಾಂಧಿ ಕುಟುಂಬದವರಿಗೆ ಅನ್ವಯಿಸುವುದಿಲ್ಲ. ಹೀಗಾಗಿ ಸೂರತ್​ ಕೋರ್ಟ್​​ ರಾಹುಲ್​ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ್ದು ಹಾಗೂ ಸಂಸತ್​ನಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದ್ದು ಸರಿಯಲ್ಲ ಎಂಬುದಾಗಿ ಕಾಂಗ್ರೆಸ್​ ರಾಜ್ಯ ಸಭಾ ಸದಸ್ಯ ಪ್ರಮೋದ್​ ತಿವಾರಿ ಅಭಿಪ್ರಾಯಪಟ್ಟಿದ್ದಾರೆ.

ನ್ಯೂಸ್ ಏಜೆನ್ಸಿ ಎಎನ್​ಐ ಜತೆ ಮಾತನಾಡಿದ ಅವರು, ರಾಹುಲ್​ ಗಾಂಧಿಯವರು ಗಾಂಧಿ ಕುಟುಂಬಕ್ಕೆ ಸೇರಿದವರಾಗಿರುವ ಕಾರಣ ಅವರನ್ನು ವಿಶೇಷ ನಾಗರಿಕರೆಂದು ಪರಿಗಣಿಸಬೇಕು. ಅವರ ಅಜ್ಜಿ ಹಾಗೂ ತಂದೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಹೀಗಾಗಿ ಕಾನೂನಿನಲ್ಲಿ ಅವರಿಗೆ ಕನಿಷ್ಠ ಶಿಕ್ಷೆ ವಿಧಿಸಬೇಕು. ಬಿಜೆಪಿ ರಾಹುಲ್ ಮೇಲಿನ ಭಯದಿಂದಲೇ ಅವರನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡಿದೆ ಎಂಬುದಾಗಿ ಇದೇ ವೇಳೆ ಆರೋಪಿಸಿದರು.

ಇದನ್ನೂ ಓದಿ : ರಾಹುಲ್ ಗಾಂಧಿ ಅನರ್ಹತೆ ಬೆನ್ನಲ್ಲೇ ವೈರಲ್ ಆಗ್ತಿದೆ ಬಿಜೆಪಿ ನಾಯಕಿ ಖುಷ್ಬು ಹಳೇ ಟ್ವೀಟ್​; ಶಿಕ್ಷೆ ಇಲ್ವಾ ಎನ್ನುತ್ತಿದ್ದಾರೆ ಕಾಂಗ್ರೆಸ್​ ನಾಯಕರು

ರಾಹುಲ್ ಗಾಂಧಿ ಅವರನ್ನು ಸಂಸತ್​ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಅವರು ಈ ಹೇಳಿಕೆ ನೀಡಿದ್ದಾರೆ. ಇದೇ ವೇಳೆ ಅವರು ಬಿಜೆಪಿ ಸರಕಾರ ಅದಾನಿ ಹಗರದಲ್ಲಿ ಭಾಗಿಯಾಗಿದೆ. ರಾಹುಲ್ ಗಾಂಧಿ ಅದನ್ನು ಬಯಲುಗೊಳಿಸುತ್ತಾರೆ ಎಂಬ ಭಯದಲ್ಲಿ ಜೈಲಿಗೆ ಕಳುಹಿಸಲು ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ.

ತಿವಾರಿ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ಕೊಟ್ಟಿದ್ದು, ಅವರೇನು ದೇಶದ ರಾಜನೇ ಎಂದು ಪ್ರಶ್ನಿಸಿದ್ದಾರೆ. ಪಕ್ಷದ ವಕ್ತಾರ ಶೆಹಜಾದ್ ಪೂನವಾಲಾ ಮಾತನಾಡಿ, ರಾಹುಲ್ ಗಾಂಧಿ ಕಾನೂನಿಗಿಂತ ದೊಡ್ಡವರೇ? ಸಂವಿಧಾನಕ್ಕೂ ಮೀರಿದವರೇ? ರಾಹುಲ್​ ಗಾಂಧಿಗೆ ಹಿಂದುಳಿದ ಜನಾಂಗವನ್ನು ನಿಂದನೆ ಮಾಡುವ ಅವಕಾಶ ಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆಗೆ ಕಾರಣರಾದವರು ಯಾರು?

ರಾಹುಲ್ ಗಾಂಧಿ ಅವರು ಲೋಕಸಭೆಯಿಂದ ಅನರ್ಹವಾಗಲು(Rahul Gandhi Disqualified) ಕಾರಣವಾದ ಆ ‘ಮೋದಿ’ಯ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. 2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ರ್ಯಾಲಿಯೊಂದರಲ್ಲಿ ರಾಹುಲ್ ಗಾಂಧಿ ಅವರು, ಕಳ್ಳರ ಹೆಸರೆಲ್ಲ ಮೋದಿ ಅಡ್ಡಹೆಸರನ್ನು ಏಕೆ ಹೊಂದಿರುತ್ತವೆ ಎಂದು ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಅವರು ಹಿಂದುಳಿದ ಸಮುದಾಯಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಗುಜರಾತ್‌ನ ವ್ಯಕ್ತಿಯೊಬ್ಬರು ರಾಹುಲ್ ಗಾಂಧಿ ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಆ ವ್ಯಕ್ತಿಯೇ ‘ಪೂರ್ಣೇಶ್ ಮೋದಿ'(Purnesh Modi). ರಾಹುಲ್ ಅವರು ಲೋಕಸಭೆಯಿಂದ ಅನರ್ಹರಾಗಲು ಇವರೇ ನೇರ ಕಾರಣ!

ಯಾರು ಈ ಪೂರ್ಣೇಶ್ ಮೋದಿ?

57 ವರ್ಷದ ಪೂರ್ಣೇಶ್ ಮೋದಿ ಅವರು ಹಾಲಿ ಶಾಸಕ ಹಾಗೂ ಮಾಜಿ ಸಚಿವರಾಗಿದ್ದಾರೆ. 1965ರ ಅಕ್ಟೋಬರ್ 22ರಂದು ಜನಿಸಿದ್ದಾರೆ. ತಂದೆ ಈಶ್ವರಲಾಲ್ ಛೋಟಾಲಾಲ್ ಮೋದಿ ಮತ್ತು ತಾಯಿ ಹಸುಮತಿಬೆನ್ ಈಶ್ವರಿಲಾಲ್ ಮೋದಿ. ಬಿಕಾಂ ಹಾಗೂ ಕಾನೂನು ಪದವೀಧರರೂ ಹೌದು. ಇವರ ಪತ್ನಿ ಹೆಸರು ಬಿನಾಬೆನ್ ಮೋದಿ.

ಪೂರ್ಣೇಶ್ ಅವರು ಸೂರತ್ ಮೋಧ್ವನಿಕ್ ಸಮಸ್ತ ಪಂಚ್ ಟ್ರಸ್ಟೀ ಕೂಡ ಆಗಿದ್ದಾರೆ. ಜತೆಗೆ ಸಾರ್ವಜನಿಕ ಎಜುಕೇಷನ್ ಸೊಸೈಟಿಯ ಸದಸ್ಯರೂ ಹೌದು. ಸಮಸ್ತ ಗುಜರಾತ್ ಮೋಧ ಮೋದಿ ಸಮಾಜ ಟ್ರಸ್ಟ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ವೃತ್ತಿಯಿಂದ ನ್ಯಾಯವಾದಿಯಾಗಿರುವ ಪೂರ್ಣೇಶ್ ಅವರು 1984ರಲ್ಲಿ ಬಿಜೆಪಿಯನ್ನು ಸೇರ್ಪಡೆಯಾದರು. ಬೂತ್ ಮಟ್ಟದಿಂದ ಕಾರ್ಯನಿರ್ವಹಿಸಿದ ಪೂರ್ಣೇಶ್ ಅವರು ಬಳಿಕ ವಾರ್ಡ್‌ ಯುವ ಘಟಕದ ಅಧ್ಯಕ್ಷರಾದರು. 1995ರಲ್ಲಿ ಸೂರತ್ ಸಿಟಿ ಬಿಜೆಪಿ ಕಾರ್ಯಕಾರಿ ಸಮಿತಿಯ ಸದಸ್ಯರಾದರು. 2000 ಮತ್ತು 2005ರ ನಡುವೆ ಪೂರ್ಣೇಶ್ ಅವರು ಮುನ್ಸಿಪಲ್ ಸದಸ್ಯರಾಗಿದ್ದರು.

ಗುಜರಾತ್‌ ವಿಧಾನಸಭೆಗೆ ಆಯ್ಕೆ

ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2013ರಲ್ಲಿ ಸೂರತ್ ವೆಸ್ಟ್ ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು. 2017ರ ವಿಧಾನಸಭೆ ಚುನಾವಣೆ ವೇಳೆಯೂ ಅವರು ಸೂರತ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಮುಂದೆ 2022ರಲ್ಲಿ ಕಾಂಗ್ರೆಸ್‌ನ ಸಂಜಯ್ ಆರ್ ಶಾ ಅವರನ್ನು ಸೋಲಿಸಿ ಮತ್ತೆ ಸೂರತ್ ಈಸ್ಟ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು.

ಇದನ್ನೂ ಓದಿ: Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್​ ಶಾಕ್​; ಸಂಸದ ಸ್ಥಾನದಿಂದ ಅನರ್ಹ

ರಾಹುಲ್ ಗಾಂಧಿ ಅವರು ಚುನಾವಣಾ ರ್ಯಾಲಿಯಲ್ಲಿ ಮೋದಿ ಸಮುದಾಯದ ವಿರುದ್ಧ ಅಪಮಾನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ, ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಸುದೀರ್ಘ ವಿಚಾರಣೆ ನಡೆದು ಸೂರತ್ ಕೋರ್ಟ್ ಅಂತಿಮವಾಗಿ, ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು 2 ವರ್ಷ ಶಿಕ್ಷೆಗೆ ಗುರಿಪಡಿಸಿದೆ.

Continue Reading

ದೇಶ

ವಿಸ್ತಾರ ಸಂಪಾದಕೀಯ: ಅಮೆರಿಕದಲ್ಲಿ ಹಾರಾಡಿದ ತ್ರಿವರ್ಣ ಧ್ವಜ; ಖಲಿಸ್ತಾನಿಗಳಿಗೆ ದೇಶಪ್ರೇಮಿಗಳ ತಿರುಗೇಟು

ಸಿಖ್ ಧರ್ಮ ಎಂಬುದು ಶತಮಾನಗಳಿಂದ ಹಿಂದೂಗಳ ಜತೆಗೆ ಅನ್ಯೋನ್ಯತೆಯಿಂದ ಇರುವ ಧರ್ಮ. ಅವರು ಬೇರೆ ಎಂದು ಹಿಂದೂಗಳಿಗೆ ಎಂದೂ ಅನಿಸಿಯೇ ಇಲ್ಲ. ಇಂಥವರ ನಡುವೆ ಪ್ರತ್ಯೇಕತೆಯ ವಿಷಬೀಜ ಬಿತ್ತಲು ಯತ್ನಿಸುವ ದೇಶವಿರೋಧಿ ಸಂಚನ್ನು ಈಗಲೇ ಹೊಸಕಿ ಹಾಕಬೇಕಿದೆ.

VISTARANEWS.COM


on

Tricolor flag flown in America Patriots strike back at Khalistanis
Koo

ಅಮೆರಿಕದ ಕಾನ್ಸುಲೇಟ್ ಕಚೇರಿ ಎದುರು ಸಾವಿರಾರು ಭಾರತೀಯರು ತ್ರಿವರ್ಣ ಧ್ವಜ ಹಾರಿಸಿ ಭಾರತದ ಪರ ಘೋಷಣೆ ಮೊಳಗಿಸಿದ್ದಾರೆ. ಹಿಂದೂ, ಮುಸ್ಲಿಂ, ಸಿಖ್ ಸೇರಿದಂತೆ ಎಲ್ಲ ಧರ್ಮೀಯರೂ ಇದರಲ್ಲಿ ಭಾಗವಹಿಸಿದ್ದು ಗಮನಾರ್ಹ. ಪಾಕ್ ಪ್ರೇರಿತ ಸಿಖ್ ಪ್ರತ್ಯೇಕತಾವಾದಿಗಳಿಗೆ ಇದು ತಕ್ಕ ತಿರುಗೇಟಾಗಿದೆ. ಕಳೆದ ಭಾನುವಾರ ಖಲಿಸ್ತಾನಿಗಳ ಗುಂಪು ಇಂಡಿಯನ್ ಕಾನ್ಸುಲೇಟ್ ಕಚೇರಿ ಮೇಲೆ ದಾಳಿ ಮಾಡಿ ತ್ರಿವರ್ಣ ಧ್ವಜವನ್ನು ಕೆಳಗಿಸಿ ಅವಮಾನ ಮಾಡಿತ್ತು. ಇವರನ್ನು ಪತ್ತೆಹಚ್ಚಿ ಸೂಕ್ತ ಶಿಕ್ಷೆಯನ್ನು ಅಲ್ಲಿನ ಸರ್ಕಾರಗಳು ವಿಧಿಸಬೇಕು ಅಥವಾ ಭಾರತಕ್ಕೆ ಹಸ್ತಾಂತರಿಸಬೇಕು. ಇದು ರಾಜನೀತಿಯ ಮಟ್ಟದಲ್ಲಿ ಆಗಬೇಕಾದ ಉಪಕ್ರಮ. ಈ ಬಗ್ಗೆ ಉಭಯ ದೇಶಗಳ ಸರ್ಕಾರಗಳು ಕ್ರಮ ತೆಗೆದುಕೊಳ್ಳಬೇಕಿದೆ. ಆದರೆ ನೈಜ ಭಾರತೀಯರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸಬೇಕೋ ಆ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂಬುದು ನಮ್ಮ ಹೆಮ್ಮೆಗೆ ಕಾರಣವಾಗಿದೆ.

ಪಂಜಾಬ್‌ನಲ್ಲಿ ಖಲಿಸ್ತಾನಿಗಳು ಈಗಾಗಲೇ ತಮ್ಮ ನೆಲೆಯನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಪಾಕ್‌ ಪ್ರೇರಿತ ಡ್ರೋನ್‌ಗಳ ಮೂಲಕ ಪೂರೈಕೆಯಾಗುವ ಶಸ್ತ್ರಾಸ್ತ್ರಗಳು ಹಾಗೂ ಮಾದಕ ದ್ರವ್ಯಗಳ ಮೂಲಕ ಪಂಜಾಬ್‌ನ ಯುವಜನತೆಯನ್ನು ಹಾದಿ ತಪ್ಪಿಸಲು ಯತ್ನಿಸುತ್ತಿದ್ದಾರೆ. ಇವರು ಎಷ್ಟು ಬೆಳೆದಿದ್ದಾರೆ ಎಂದರೆ, ಇತ್ತೀಚೆಗೆ ಅಲ್ಲಿನ ತರಣ್ ತಾರಣ್ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ರಾಕೆಟ್ ಲಾಂಚರ್‌ನಿಂದ ದಾಳಿ ನಡೆಸಲಾಗಿತ್ತು. ಪಂಜಾಬ್ ಗುಪ್ತಚರ ಇಲಾಖೆ ಪ್ರಧಾನ ಕಚೇರಿ ಮೇಲೆಯೂ ಇದೇ ರೀತಿಯ ದಾಳಿ ನಡೆಸಲಾಗಿತ್ತು. ಇವರಿಗೆ ಬೆಂಬಲವಾಗಿ ದೇಶದಾಚೆಯ ಕೆಲವು ಪ್ರತ್ಯೇಕತಾವಾದಿ ಸಿಖ್ಖರ ಗುಂಪುಗಳು, ಖಲಿಸ್ತಾನ್ ಪರ ಸಂಘಟನೆಗಳೂ ವರ್ತಿಸುತ್ತಿವೆ. ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮತ್ತು ಅಮೆರಿಕದಲ್ಲಿ ಇವು ಹೆಚ್ಚಾಗಿವೆ. ಇವರ ಟಾರ್ಗೆಟ್‌ ಎಂದರೆ ಅಲ್ಲಿನ ಭಾರತೀಯರು, ಅವರ ಶ್ರದ್ಧಾಕೇಂದ್ರಗಳಾದ ದೇವಾಲಯಗಳು ಹಾಗೂ ಕಾನ್ಸುಲೇಟ್‌ಗಳು. ಇತ್ತೀಚಿನ ದಿನಗಳಲ್ಲಿ ಅನೇಕ ದೇವಾಲಯಗಳನ್ನು ಹಾನಿಗೊಳಪಡಿಸಲಾಗಿದೆ. ಈ ಸಂಘಟನೆಗಳು ವಿನಾಕಾರಣ ಭಾರತೀಯರನ್ನು ಕೆಣಕುತ್ತಿವೆ.

ಇದಕ್ಕೆ ತಕ್ಕ ಉತ್ತರವನ್ನು ಭಾರತೀಯರು ನೀಡಿದ್ದಾರೆ. ಈವರೆಗೆ ಇದನ್ನೆಲ್ಲ ತಾಳ್ಮೆಯಿಂದ ಸಹಿಸಿಕೊಂಡಿದ್ದ ಅನಿವಾಸಿ ಭಾರತೀಯರು ಈಗ ತಿರುಗಿ ಬಿದ್ದಿದ್ದಾರೆ. ಅಮೆರಿಕ ಮಾತ್ರವಲ್ಲ, ವಿಶ್ವದ ಮೂಲೆ ಮೂಲೆಗಳಲ್ಲಿ ಅನಿವಾಸಿ ಭಾರತೀಯರು ಒಗ್ಗಟ್ಟಿನಿಂದ ಇದ್ದಾರೆ ಮತ್ತು ಸದಾ ಭಾರತದ ಪರ ದನಿ ಎತ್ತುತ್ತಿದ್ದಾರೆ. ವಿದೇಶಗಳಲ್ಲಿನ ಭಾರತ ವಿರೋಧಿ ಚಟುವಟಿಕೆ ವಿರುದ್ಧ ಭಾರತ ಸರ್ಕಾರ ಈಗಾಗಲೇ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಪ್ರತೀಕಾರದ ಕ್ರಮವಾಗಿ ಭಾರತವು ದಿಲ್ಲಿಯಲ್ಲಿನ ಬ್ರಿಟನ್ ದೂತಾವಾಸ ಕಚೇರಿಯಲ್ಲಿನ ಹೆಚ್ಚುವರಿ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು. ಖಲಿಸ್ತಾನಿಗಳಿಗೆ ಅನಿವಾಸಿ ಭಾರತೀಯರು ಇಷ್ಟೊಂದು ಸದರವಾಗಿರುವುದೇಕೆ? ಇವರಿಗೆ ಭದ್ರತೆಯಿಲ್ಲವೆಂದು ಖಲಿಸ್ತಾನಿಗಳು ಭಾವಿಸಿರಬಹುದು. ಆದರೆ ಅನಿವಾಸಿ ಭಾರತೀಯರ ನೆರವಿಗೆ ಭಾರತ ಸದಾ ಸನ್ನದ್ಧವಾಗಿದೆ. ಈ ಸಂದೇಶವನ್ನು ನಾವು ರವಾನಿಸಬೇಕು. ಅನಿವಾಸಿ ಭಾರತೀಯರೂ ತಾವು ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶವನ್ನು ನೀಡಬೇಕು.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಕೇಂದ್ರೀಯ ತನಿಖಾ ದಳಗಳ ದುರುಪಯೋಗ ಆರೋಪ; ಪಾರದರ್ಶಕತೆ ಅಗತ್ಯ

ಇದರ ಜತೆಗೆ ಭಾರತದಲ್ಲಿ ಕೂಡ ಕೇಂದ್ರ ಸರ್ಕಾರ ಸಿಖ್ ಫಾರ್ ಜಸ್ಟಿಸ್, ವಾರಿಸ್ ಪಂಜಾಜ್ ದೇ ಇತ್ಯಾದಿ ಖಲಿಸ್ತಾನ್‌ ಪರ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಆರಂಭಿಸಿದೆ. ಪಂಜಾಬಿನಲ್ಲಿ ಪ್ರತ್ಯೇಕತೆಯ ಬೀಜ ಬಿತ್ತುತ್ತಿರುವ ಅಮೃತ್ ಪಾಲ್ ಸಿಂಗ್‌ನನ್ನು ಬೇಟೆಯಾಡಲು ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆತನ ಹಲವಾರು ಬೆಂಬಲಿಗರನ್ನು ಬಂಧಿಸಿದ್ದಾರೆ. ಸಿಖ್ ಧರ್ಮ ಎಂಬುದು ಶತಮಾನಗಳಿಂದ ಹಿಂದೂಗಳ ಜತೆಗೆ ಎರಕವಾಗಿ ಅನ್ಯೋನ್ಯತೆಯಿಂದ ಇರುವ ಧರ್ಮ. ಅವರು ಬೇರೆ ಎಂದು ಹಿಂದೂಗಳಿಗೆ ಎಂದೂ ಅನಿಸಿಯೇ ಇಲ್ಲ. ಇಂಥವರ ನಡುವೆ ಪ್ರತ್ಯೇಕತೆಯ ವಿಷಬೀಜ ಬಿತ್ತಲು ಯತ್ನಿಸುವ ದೇಶವಿರೋಧಿ ಸಂಚನ್ನು ಈಗಲೇ ಹೊಸಕಿ ಹಾಕಬೇಕಿದೆ. ಇದನ್ನು ಪೋಷಿಸುತ್ತಿರುವ ಕೆನಡಾ ಹಾಗೂ ಬ್ರಿಟನ್‌ನ ಕೆಲವು ರಾಜಕಾರಣಿಗಳ ಬಣ್ಣವನ್ನೂ ಬಯಲು ಮಾಡಬೇಕಿದೆ.

Continue Reading

ಟಾಪ್ 10 ನ್ಯೂಸ್

ವಿಸ್ತಾರ TOP 10 NEWS: ರಾಜ್ಯಾದ್ಯಂತ ಮೋದಿ ಸಂಚಾರದಿಂದ, ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Edited by

vistara top 10 news modi rally in davanagere to congress first list and more news
Koo

1. Modi in Karnataka: ಕಾರ್ಯಕರ್ತನ ಕಪಾಳಕ್ಕೇ ಹೊಡೆದವರು ಜನರಿಗೆ ಗೌರವ ನೀಡುತ್ತಾರಾ?: ಸಿದ್ದು ವಿರುದ್ಧ ಮೋದಿ ವಾಗ್ದಾಳಿ
ಯಾವ ಪಕ್ಷದಲ್ಲಿ ತನ್ನ ಕಾರ್ಯಕರ್ತನಿಗೇ ಗೌರವ ನೀಡದೆ ಕಪಾಳಕ್ಕೆ ಹೊಡೆಯಲಾಗುತ್ತದೆಯೋ ಆ ಪಕ್ಷವು ಜನತಾ ಜನಾರ್ದನನಿಗೆ ಹೇಗೆ ಗೌರವ ನೀಡುತ್ತದೆ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ (Modi in Karnataka) ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Modi in Karnataka: ನಾನು ಅತಿಥಿ ಅಲ್ಲ; ಇದೇ ಮಣ್ಣಿನ ಮಗ: ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ
ಚುನಾವಣೆಗಳು ಹತ್ತಿರವಾಗುತ್ತಿರುವಂತೆ ಚಿಕ್ಕಬಳ್ಳಾಪುರದ ನೆಲದಲ್ಲಿ ನಿಂತು, ತಾವೂ ಇದೇ ಮಣ್ಣಿನ ಮಗ ಎಂದು ಪ್ರಧಾನಿ ನರೇಂದ್ರ ಮೋದಿ (Modi in Karnataka) ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಶ್ರೀ ಸತ್ಯ ಸಾಯಿ ರಾಜೇಶ್ವರಿ ಮೆಮೋರಿಯಲ್‌ ಬ್ಲಾಕ್‌ ಉದ್ಘಾಟನೆ ನೆರವೇರಿಸಿದ ನಂತರ ಮೋದಿ ಈ ಮಾತನ್ನು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮೋದಿ ಪ್ರವಾಸದ ಕುರಿತು ಎಲ್ಲ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

3. Congress First List: ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: ವರುಣಾದಿಂದ ಸಿದ್ದರಾಮಯ್ಯ, ದೇವನಹಳ್ಳಿಯಲ್ಲಿ ಮುನಿಯಪ್ಪ
ರಾಜ್ಯ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಸ್ಪರ್ಧಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. 124 ಕ್ಷೇತ್ರಗಳಿಗೆ ಸ್ಪರ್ಧಿಗಳ ಹೆಸರು ಅಂತಿಮಗೊಳಿಸಲಾಗಿದೆ. ಈ ನಡುವೆ ಮುನಿಯಪ್ಪ ಅವರು ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರು ರಾಜ್ಯ ರಾಜಕಾರಣಕ್ಕೆ ಮರಳಿದ್ದಾರೆ. ಮುನಿಯಪ್ಪ ದೇವನಹಳ್ಳಿಯಿಂದ ನಿಲ್ಲಲಿದ್ದಾರೆ ಎಂದು ವಿಸ್ತಾರ ನ್ಯೂಸ್‌ ನಾಲ್ಕು ತಿಂಗಳ ಹಿಂದೆಯೇ ವರದಿ ಮಾಡಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಮತ್ತಷ್ಟು ಓದಿಗಾಗಿ: Congress ticket : ಆರು ಹಾಲಿ ಕಾಂಗ್ರೆಸ್‌ ಶಾಸಕರ ಟಿಕೆಟ್‌ ಹೋಲ್ಡ್‌, ಮೂರು ಕಡೆ ಪಕ್ಷ ಬಿಟ್ಟು ಹೋದವರಿಗಾಗಿ ವೇಟಿಂಗ್‌!

4. Rahul Gandhi: ಕ್ಷಮೆಯಾಚಿಸಲು ನಾನು ಸಾವರ್ಕರ್‌ ಅಲ್ಲ, ಗಾಂಧಿ; ಅನರ್ಹತೆ ಬಳಿಕ ಕೇಂದ್ರಕ್ಕೆ ರಾಹುಲ್‌ ಚಾಟಿ
ಮಾನಹಾನಿ ಪ್ರಕರಣದಲ್ಲಿ ಸಿಲುಕಿ, ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಅನರ್ಹಗೊಂಡ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. “ನನ್ನನ್ನು ಬಂಧಿಸಿ, ಜೈಲಿಗೆ ಕಳುಹಿಸಿ. ಆದರೆ, ನಾನು ದೇಶದ ಜನರ ಪರವಾಗಿ ಮಾತನಾಡುವುದನ್ನು ನಿಲ್ಲಿಸುವುದಿಲ್ಲ. ಅದಾನಿ ಪ್ರಕರಣದ ಕುರಿತು ಮಾತನಾಡುವುದನ್ನು ಬಿಡುವುದಿಲ್ಲ” ಎಂದು ಹೇಳಿದ್ದಾರೆ. ಹಾಗೆಯೇ, ಬಿಜೆಪಿ ಆಗ್ರಹದಂತೆ ಕ್ಷಮೆಯಾಚಿಸಲು ನಾನು ಸಾವರ್ಕರ್‌ ಅಲ್ಲ, ಗಾಂಧಿ ಎಂದು ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Panchamasali Reservation : ಪಂಚಮಸಾಲಿ ಹೋರಾಟದಲ್ಲಿ ಒಡಕು, ಮುಸ್ಲಿಮರಿಂದ ಕಿತ್ತು ಕೊಟ್ಟ ಮೀಸಲಾತಿ ಬೇಡ ಎಂದ ಕಾಶಪ್ಪನವರ್
ರಾಜ್ಯ ಸರ್ಕಾರ ಪರಿಷ್ಕೃತ ಮೀಸಲಾತಿ ನೀತಿ ಮೂಲಕ ಲಿಂಗಾಯತ ಪಂಚಮಸಾಲಿ (Panchamasali Reservation) ಸಮುದಾಯಕ್ಕೆ 2ಡಿ ಪ್ರವರ್ಗದಡಿ ಶೇ. 7ರಷ್ಟು ಮೀಸಲಾತಿ (ಹಿಂದಿನ 3ಸಿಗಿಂತ ಎರಡು ಶೇಕಡಾ ಹೆಚ್ಚು) ನೀಡಿದ್ದನ್ನು ಹೋರಾಟ ಸಮಿತಿ ಒಪ್ಪಿಕೊಂಡು ಎರಡು ವರ್ಷಗಳ ಹೋರಾಟವನ್ನು ಹಿಂದೆ ಪಡೆದಿದೆ. ಆದರೆ, ಈ ವಿಚಾರ ಸಮಿತಿಯಲ್ಲಿ ಬಿರುಕು ಮೂಡಿಸಿದೆ. ಹೋರಾಟದ ಮುಂಚೂಣಿಯಲ್ಲಿದ್ದ ಕಾಂಗ್ರೆಸ್‌ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರು ಈ ಮೀಸಲಾತಿಯನ್ನು ಧಿಕ್ಕರಿಸಿದ್ದಾರೆ. ಮುಸ್ಲಿಮರಿಂದ ಕಿತ್ತುಕೊಡುವ ಮೀಸಲಾತಿ ಬೇಡ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Covid-19 Cases: ದೇಶದಲ್ಲಿ ಮತ್ತೆ ಕೊವಿಡ್​ ಆತಂಕ; 146 ದಿನಗಳಲ್ಲೇ ಗರಿಷ್ಠ ಮಟ್ಟದ ಕೊರೊನಾ ಕೇಸ್​ ದಾಖಲು
ದೇಶದಲ್ಲಿ ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ, ಕೊರೊನಾ ಸಾಂಕ್ರಾಮಿಕವೂ ಮತ್ತೆ ಹೆಚ್ಚುತ್ತಿದೆ. ಈಗೊಂದು ವಾರದಿಂದ ಪ್ರತಿದಿನ ದಾಖಲಾಗುವ ಕೊರೊನಾ ಕೇಸ್​​ಗಳ ಸಂಖ್ಯೆ (Covid-19 Cases) ಏರಿಕೆಯಾಗುತ್ತಿದೆ. 24ಗಂಟೆಯಲ್ಲಿ 1590 ಕೊರೊನಾ ಕೇಸ್​ಗಳು ದಾಖಲಾಗಿದ್ದು, ಇದು ಕಳೆದ 146 ದಿನಗಳಲ್ಲೇ ಗರಿಷ್ಠ ಮಟ್ಟದ ಹೆಚ್ಚಳ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಾಗೇ, 24ಗಂಟೆಯಲ್ಲಿ 910 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯೀಗ 8601ಕ್ಕೆ ತಲುಪಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Amritpal Singh: ಜಾಕೆಟ್‌ ಧರಿಸಿ, ಬಿಂದಾಸ್‌ ಆಗಿ ಪಟಿಯಾಲದಲ್ಲೇ ಓಡಾಡಿಕೊಂಡಿದ್ದ ಅಮೃತ್‌ ಪಾಲ್‌, ಇಲ್ಲಿದೆ ವಿಡಿಯೊ
ಖಲಿಸ್ತಾನಿಗಳ ನಾಯಕ, ಪಂಜಾಬ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದ ಅಮೃತ್‌ಪಾಲ್‌ ಸಿಂಗ್‌ (Amritpal Singh) ಬಂಧನಕ್ಕೆ ಒಂದು ವಾರದಿಂದ ಪಂಜಾಬ್‌ ಪೊಲೀಸರು ಹರಸಾಹಸಪಡುತ್ತಿದ್ದಾರೆ. ಮಾರ್ಚ್‌ 18ರಿಂದಲೂ ಪೊಲೀಸರು ಅಮೃತ್‌ಪಾಲ್‌ಗಾಗಿ ಶೋಧ ನಡೆಸುತ್ತಿದ್ದರೂ ಇದುವರೆಗೂ ಆತನನ್ನು ಬಂಧಿಸಲು ಸಾಧ್ಯವಾಗಿಲ್ಲ. ಇದು ಗುಪ್ತಚರ ವೈಫಲ್ಯ ಎಂದು ಪಂಜಾಬ್‌ ಹಾಗೂ ಹರಿಯಾಣ ಹೈಕೋರ್ಟ್‌ ಛೀಮಾರಿ ಹಾಕಿದರೂ ಇದುವರೆಗೆ ಬಂಧಿಸಲು ಆಗಿಲ್ಲ. ಇದರ ಬೆನ್ನಲ್ಲೇ, ಅಮೃತ್‌ಪಾಲ್‌ ಸಿಂಗ್‌ ಪಂಜಾಬ್‌ನ ಪಟಿಯಾಲದಲ್ಲಿಯೇ ಓಡಾಡಿಕೊಂಡಿದ್ದ ವಿಡಿಯೊ ಈಗ ಲಭ್ಯವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. PAK VS AFG: ಪಾಕಿಸ್ತಾನ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫಘಾನಿಸ್ತಾನ
ಅನುಭವಿ ಮೊಹಮ್ಮದ್‌ ನಬಿ(Mohammad Nabi) ಅವರ ಆಲ್​ರೌಂಡರ್​ ಆಟದ ನೆರವಿನಿಂದ ಪಾಕಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಫಘಾನಿಸ್ತಾನ ತಂಡ ಆರು ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿತು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪಾಕಿಸ್ತಾನ ವಿರುದ್ಧ ಮೊಟ್ಟ ಮೊದಲ ಗೆಲುವು ದಾಖಲಿಸಿ ಇತಿಹಾಸ ನಿರ್ಮಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. ಹೊಸ ಅಂಕಣ: ಸೈಬರ್ ಮಿತ್ರ: ಜಾಣರಾಗಿ, ಜಾಗರೂಕರಾಗಿರಿ!
ವಿಶ್ವದಾದ್ಯಂತ ಸೈಬರ್ ವಂಚಕರು ನಮ್ಮ ಎರಡು ದುರ್ಬಲತೆಯನ್ನು ಬಳಸಿಕೊಳ್ಳಲು ನೋಡುತ್ತಿರುತ್ತಾರೆ. ಮೊದಲನೆಯದು ಭಯ, ಎರಡನೆಯದು ದುರಾಸೆ. ಹಾಗಾಗಿ, ಇಂದಿನ ಈ ಸೈಬರ್ ಬ್ರಹ್ಮಾಂಡದಲ್ಲಿ ವ್ಯವಹರಿಸುವಾಗ ಜಾಣರಾಗಿ, ಜಾಗರೂಕರಾಗಿರಿ. ಸುಖವಾದ ಸೈಬರ್ ಸರ್ಫ್‌ಗೆ ಹನ್ನೆರಡು ಸೂತ್ರಗಳು ಇಲ್ಲಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Viral News: ತನ್ನ ಶಿಕ್ಷಣಕ್ಕೆ ಕೂಡಿಟ್ಟಿದ್ದ ಹಣ ಅಣ್ಣನ ಮದುವೆಗೆ ಬಳಕೆ; ಅಪ್ಪ-ಅಮ್ಮನ ವಿರುದ್ಧವೇ ಕೇಸ್‌ ದಾಖಲಿಸಿದ ಪುತ್ರಿ!
ಆಸ್ತಿ ವಿಚಾರದಲ್ಲಿ ಇಲ್ಲವೇ ಕೌಟುಂಬಿಕ ಜಗಳದ ವಿಚಾರದಲ್ಲಿ ಮಕ್ಕಳು ತಂದೆ-ತಾಯಿ ವಿರುದ್ಧ ಪ್ರಕರಣ ದಾಖಲಿಸುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದೆ. ಆದರೆ ಇಲ್ಲೊಬ್ಬ ಹೆಣ್ಣು ಮಗಳು ತನ್ನ ಶಿಕ್ಷಣಕ್ಕೆಂದು ದೊಡ್ಡಮ್ಮ ಕೊಟ್ಟಿದ್ದ ಹಣವನ್ನು ತಂದೆ-ತಾಯಿಯು ತನ್ನ ಅಣ್ಣನ ಮದುವೆಗೆ ಬಳಸಿದರು ಎನ್ನುವ ಕಾರಣಕ್ಕೆ ಪೋಷಕರ ವಿರುದ್ಧವೇ ಪ್ರಕರಣ (Viral News) ದಾಖಲಿಸಿದ್ದಾಳೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. PUC Exam 2023 : ದ್ವಿತೀಯ ಪಿಯುಸಿ ಪರೀಕ್ಷೆ; ವಿಷಯವಾರು ಮಾದರಿ ಉತ್ತರ ಪ್ರಕಟ
  2. Veerappan Daughter: ವೀರಪ್ಪನ್‌ ಮಗಳು ವಿಜಯಲಕ್ಷ್ಮೀ ಸಿನಿರಂಗಕ್ಕೆ ಎಂಟ್ರಿ
  3. Wall collapse: ತಡೆಗೋಡೆ ನಿರ್ಮಾಣ ವೇಳೆ ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ್ಯು
  4. ಮಕ್ಕಳ ಕಥೆ: ಮುಗ್ಧ ಶಿಷ್ಯರು ಮತ್ತು ಕುದುರೆ ಮೊಟ್ಟೆ
  5. Pakistan Economic Crisis: ಚುನಾವಣೆ ನಡೆಸಲೂ ಕಾಸಿಲ್ಲ ನಮ್ಮ ಬಳಿ ಎಂದ ಪಾಕಿಸ್ತಾನ ರಕ್ಷಣಾ ಸಚಿವ
  6. KPSC Recruitment 2023 : ಪಿಯುಸಿ ಓದಿದವರಿಗೆ ಕಿರಿಯ ಲೆಕ್ಕ ಸಹಾಯಕರಾಗುವ ಅವಕಾಶ; ಇಂದಿನಿಂದ ಅರ್ಜಿ ಸಲ್ಲಿಕೆ ಶುರು
  7. Yogi Adityanath: ನಿರಂತರ 6 ವರ್ಷ ಸಿಎಂ, ಯೋಗಿ ಹೊಸ ದಾಖಲೆ; ಬುಲ್ಡೋಜರ್​ ಬಾಬಾನಿಂದ ವಿಕಾಸ ಪುರುಷನವರೆಗೆ…
Continue Reading
Advertisement
Check astrological predictions for all signs here
ಪ್ರಮುಖ ಸುದ್ದಿ51 mins ago

Horoscope Today : ತುಲಾ ರಾಶಿಯವರಿಗೆ ಪ್ರಭಾವಿ ಜನರ ಬೆಂಬಲ; ನಿಮ್ಮ ರಾಶಿ ಭವಿಷ್ಯ ಹೇಗಿದೆ?

Sphoorti Salu
ಸುವಚನ51 mins ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Uttara Kannada News
ಉತ್ತರ ಕನ್ನಡ5 hours ago

Uttara Kannada News: ವಾಕ್ಪ್ರತಿಯೋಗಿತಾ ಸ್ಪರ್ಧೆ; ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆ ಉತ್ತಮ ಸಾಧನೆ

Modi in Karnataka
ಕರ್ನಾಟಕ6 hours ago

Modi in Karnataka: ಮೋದಿ ರೋಡ್ ಶೋ ವೇಳೆ ಭದ್ರತಾ ವೈಫಲ್ಯ; ನಿಷೇಧಿತ ಪ್ರದೇಶಕ್ಕೆ ನುಗ್ಗಿದ ಇಬ್ಬರು ವಶಕ್ಕೆ

rahul-gandhi-will-act-like-a-martyr-with-an-eye-on-karnataka-elections-bjp
ದೇಶ6 hours ago

ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಹುತಾತ್ಮನಂತೆ ನಟಿಸ್ತಾ ಇರೋ ರಾಹುಲ್ ಗಾಂಧಿ: ಬಿಜೆಪಿ

Your rules don't apply to the Gandhi family; Spark of Congress MP!
ದೇಶ7 hours ago

Rahul Gandhi Disqualified : ನಿಮ್ಮ ರೂಲ್ಸ್​ ಗಾಂಧಿ ಫ್ಯಾಮಿಲಿಗೆ ಅನ್ವಯವಾಗಲ್ಲ; ಕಾಂಗ್ರೆಸ್​ ಸಂಸದನ ಕಿಡಿ!

Zaheer Khan: Team India is still sailing in an old boat; Why did Zaheer Khan say this?
ಕ್ರಿಕೆಟ್7 hours ago

Zaheer Khan: ಟೀಮ್​ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ; ಜಹೀರ್​ ಖಾನ್​ ಹೀಗೆ ಹೇಳಿದ್ದು ಏಕೆ?

Amit Shah to visit karnataka on march 26 and Participate in various programmes
ಕರ್ನಾಟಕ7 hours ago

Amit Shah Visit: ಭಾನುವಾರ ಅಮಿತ್‌ ಶಾ ರಾಜ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

heavy rainfall likely to occur at isolated places in the karnataka on March 26 and 27
ಕರ್ನಾಟಕ7 hours ago

Karnataka Rain: ಮಾ.26, 27 ರಂದು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

Tricolor flag flown in America; Patriots strike back at Khalistanis
ದೇಶ7 hours ago

ವಿಸ್ತಾರ ಸಂಪಾದಕೀಯ: ಅಮೆರಿಕದಲ್ಲಿ ಹಾರಾಡಿದ ತ್ರಿವರ್ಣ ಧ್ವಜ; ಖಲಿಸ್ತಾನಿಗಳಿಗೆ ದೇಶಪ್ರೇಮಿಗಳ ತಿರುಗೇಟು

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ51 mins ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ5 days ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ5 days ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ5 days ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ6 days ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ6 days ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ7 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ7 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ7 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ1 week ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ1 week ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!