Better life in 2023 | ಈ ವರ್ಷ ಉತ್ತಮ ಜೀವನ, ಇದು ಶೇ.75 ಭಾರತೀಯರ ಅಭಿಪ್ರಾಯ - Vistara News

ದೇಶ

Better life in 2023 | ಈ ವರ್ಷ ಉತ್ತಮ ಜೀವನ, ಇದು ಶೇ.75 ಭಾರತೀಯರ ಅಭಿಪ್ರಾಯ

YouGov ಕೈಗೊಂಡ ಸಮೀಕ್ಷೆಯಲ್ಲಿ ಶೇ.21ರಷ್ಟು ಜನರು ತಮ್ಮ ಬದುಕಿನಲ್ಲಿ ಅಂಥ ಯಾವುದೇ ವ್ಯತ್ಯಾಸಗಳು ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ(Better life in 2023).

VISTARANEWS.COM


on

Better Life in 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.75ರಷ್ಟು ನಗರ ಭಾರತೀಯರು 2023ರಲ್ಲಿ ಉತ್ತಮ ಜೀವನದ (Better life in 2023) ನಿರೀಕ್ಷೆಯಲ್ಲಿದ್ದಾರೆಂಬ ಸಂಗತಿಯು ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. 2022ರಲ್ಲಿ ಡಿಸೆಂಬರ್‌ನಲ್ಲಿ YouGov ಈ ಬಗ್ಗೆ ಸಮೀಕ್ಷೆ ಕೈಗೊಂಡಿತ್ತು. ಈ ಸಮೀಕ್ಷೆಯಲ್ಲಿ ಸುಮಾರು 1006 ನಗರವಾಸಿಗಳು ಪಾಲ್ಗೊಂಡಿದ್ದರು.

ಶೇ.75 ಜನರು 2023ರಲ್ಲಿ ತಮ್ಮ ಜೀವನ ಉತ್ತಮವಾಗುವ ನಿರೀಕ್ಷೆ ಎಂದು ಹೇಳಿಕೊಂಡಿದ್ದರೆ, ಶೇ.21 ಜನರು ಅಂಥ ವ್ಯತ್ಯಾಸವೇನೂ ಆಗುವುದಿಲ್ಲ. ಕೇವಲ 4 ಪ್ರತಿಶತ ಜನರು 2023ರಲ್ಲಿ ತಮ್ಮ ಜೀವನ ಇನ್ನಷ್ಟು ಹದಗೆಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ಶೇ.63ರಷ್ಟು ಭಾರತೀಯ 2022 ತಮ್ಮ ಪಾಲಿಗೆ ಉತ್ತಮ ವರ್ಷವಾಗಿತ್ತು ಎಂದೂ ಹೇಳಿಕೊಂಡಿದ್ದಾರೆ.

ಸಾಂಕ್ರಾಮಿಕ ರೋಗವು ಕಳೆದ ಕೆಲವು ವರ್ಷಗಳಿಂದ ಅವರನ್ನು ಹೆಚ್ಚು ಸಮತೋಲಿತವಾಗಿಸಿದೆ ಎಂದು ಶೇ.25ರಷ್ಟು ಭಾರತೀಯರು ತಿಳಿಸಿದ್ದಾರೆ. ಶೇ. 18 ಜನರು ಸಾಂಕ್ರಾಮಿಕ ರೋಗದ ನಂತರ ಹೆಚ್ಚು ಜಾಗರೂಕರಾಗಿದ್ದೇವೆ ಎಂದು ಭಾವಿಸಿದ್ದಾರೆ. ಶೇ.13ರಷ್ಟು ಜನರು ಮುಂಬರುವ ದಿನಗಳ ಬಗ್ಗೆ ಹೆಚ್ಚು ಆಶಾವಾದಿಗಳಾಗಿದ್ದಾರೆ ಎಂಬ ಸಂಗತಿಯೂ ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ | Gautam Adani | ಅದಾನಿ ಸೇರಿದಂತೆ 3 ಮಂದಿ ಭಾರತೀಯರು ಫೋರ್ಬ್ಸ್‌ ಏಷ್ಯಾ ದಾನಿಗಳ ಪಟ್ಟಿಯಲ್ಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯ ತಿಥಿಯಾದ ಮೇ 21ರಂದು ಭಾರತದಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. 1991ರಲ್ಲಿ ಈ ದಿನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲಾಗಿತ್ತು. ಭಯೋತ್ಪಾದನಾ ವಿರೋಧಿ ದಿನದ (Anti Terrorism Day) ಇತಿಹಾಸ ಮತ್ತು ಅದರ ಆಚರಣೆ ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

By

Anti Terrorism Day
Koo

ಪ್ರತಿ ವರ್ಷ ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನು (Anti Terrorism Day) ಆಚರಿಸಲಾಗುತ್ತದೆ. ಈ ದಿನ ಯುವಕರಿಗೆ ಭಯೋತ್ಪಾದನೆ (Terrorism) ಮತ್ತು ಇದರಿಂದಾಗುವ ಸಾವು ನೋವು ಮತ್ತು ಜೀವನದ ಮೇಲೆ ಅದರ ದುಷ್ಪರಿಣಾಮದ ಬಗ್ಗೆ ಜಾಗೃತಿ (awareness) ಮೂಡಿಸಲಾಗುತ್ತದೆ. ಈ ದಿನವು ಸಮಾಜ ವಿರೋಧಿ ಕೃತ್ಯದ ವಿರುದ್ಧ ಜನರಲ್ಲಿ ಅರಿವು ಮೂಡಿಸುತ್ತದೆ.

ರಾಷ್ಟ್ರೀಯ ಸಾಮರಸ್ಯವನ್ನು ಉತ್ತೇಜಿಸುವುದು, ಭಯೋತ್ಪಾದನೆಯನ್ನು ತಗ್ಗಿಸುವುದು ಮತ್ತು ಎಲ್ಲಾ ಜಾತಿ, ಧರ್ಮ, ಲಿಂಗಗಳ ಜನರನ್ನು ಒಂದುಗೂಡಿಸುವುದು ಭಯೋತ್ಪಾದನಾ ವಿರೋಧಿ ದಿನದ ಮುಖ್ಯ ಉದ್ದೇಶವಾಗಿದೆ. ವಿಶ್ವದಾದ್ಯಂತ ಹೆಚ್ಚುತ್ತಿರುವ ‘ಭಯೋತ್ಪಾದನೆ’ ಹಿನ್ನೆಲೆಯಲ್ಲಿ ಈ ದಿನವು ಈಗ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದೆ.

ಪ್ರತಿ ದಿನವೂ ವಿಶ್ವದ ಒಂದಲ್ಲ ಒಂದು ಕಡೆ ಭಯೋತ್ಪಾದಕ ಕೃತ್ಯದ ಬಗ್ಗೆ ಸುದ್ದಿಗಳು ಬರುತ್ತಲೇ ಇರುತ್ತವೆ. ಮೂಲಭೂತವಾಗಿ ಭಯೋತ್ಪಾದಕರು ಸಾಮಾನ್ಯ ಜನರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸಲು ಬಯಸುತ್ತಾರೆ. ಯಾವುದೇ ರೀತಿಯ ಪಶ್ಚಾತ್ತಾಪವಿಲ್ಲದೆ ಅವರು ಅಮಾಯಕ ಜನರ ಸಾವಿಗೆ ಕಾರಣರಾಗುತ್ತಾರೆ. ಇಂಥ ಭಯೋತ್ಪಾದನೆ ಚಟುವಟಿಕೆಗಳ ವಿರುದ್ಧ ಹೋರಾಡುವ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯಲು ಭಾರತ ಸರ್ಕಾರ ಪ್ರತಿ ವರ್ಷ ಭಯೋತ್ಪಾದನೆ ವಿರೋಧಿ ದಿನವನ್ನು ಆಚರಿಸುತ್ತಿದೆ.

ಮೇ 21ರಂದು ಈ ದಿನಾಚರಣೆ ಏಕೆ?

1991ರ ಮೇ 21ರಂದು ಭಾರತದ ಏಳನೇ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ಅನಂತರ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ಅಧಿಕೃತ ಘೋಷಣೆಯನ್ನು ಮಾಡಲಾಯಿತು. ಶ್ರೀಲಂಕಾದ ತಮಿಳು ಉಗ್ರರ ಸಂಚಿನಿಂದಾಗಿ ತಮಿಳುನಾಡಿನಲ್ಲಿ ರಾಜೀವ್‌ ಗಾಂಧಿ ಅವರು ಕೊಲ್ಲಲ್ಪಟ್ಟರು. ಬಳಿಕ ವಿ. ಪಿ. ಸಿಂಗ್ ನೇತೃತ್ವದ ಕೇಂದ್ರ ಸರ್ಕಾರವು ಮೇ 21 ಅನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಈ ದಿನದಂದು ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಗುತ್ತದೆ.


ಈ ದಿನದ ಹಿಂದಿನ ಇತಿಹಾಸ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ತಮಿಳುನಾಡಿನ ಶ್ರೀಪೆರಂಬದೂರ್‌ಗೆ ರ‍್ಯಾಲಿಯಲ್ಲಿ ಭಾಗವಹಿಸಲು ತೆರಳಿದ್ದರು. ಲಿಬರೇಶನ್ ಆಫ್ ತಮಿಳು ಟೈಗರ್ಸ್ ಈಳಂ (ಎಲ್‌ಟಿಟಿಇ) ಭಯೋತ್ಪಾದಕ ಗುಂಪಿನ ಸದಸ್ಯಳಾಗಿದ್ದ ಮಹಿಳೆಯೊಬ್ಬಳು ರಾಜೀವ್‌ ಗಾಂಧಿ ಮುಂದೆ ಅಭಿಮಾನದ ನಾಟಕ ಆಡಿದಳು. ಆಕೆ ತನ್ನ ಬಟ್ಟೆಯ ಒಳಗೆ ಸ್ಫೋಟಕಗಳನ್ನು ಇರಿಸಿಕೊಂಡಿದ್ದಳು. ರಾಜೀವ್‌ ಬಳಿಗೆ ಬಂದು ಅವರ ಪಾದಗಳನ್ನು ಸ್ಪರ್ಶಿಸಬೇಕೆಂದು ಬಾಗಿದಳು. ಇದ್ದಕ್ಕಿದ್ದಂತೆ ಬಾಂಬ್ ಸ್ಫೋಟ ಸಂಭವಿಸಿ ರಾಜೀವ್‌ ಸೇರಿದಂತೆ ಸುಮಾರು 25 ಮಂದಿ ಸಾವನ್ನಪ್ಪಿದರು.

ಹೇಗೆ ಆಚರಣೆ?

ಭಯೋತ್ಪಾದನೆ ಮತ್ತು ಹಿಂಸಾಚಾರದ ಅಪಾಯಗಳ ಕುರಿತು ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಚರ್ಚೆಗಳನ್ನು ಆಯೋಜಿಸಲಾಗುತ್ತದೆ. ಭಯೋತ್ಪಾದನೆಯ ದುಷ್ಪರಿಣಾಮಗಳು ಮತ್ತು ಅದರ ಅನಂತರದ ಪರಿಣಾಮಗಳನ್ನು ಎತ್ತಿ ತೋರಿಸಲು ಸಾಮೂಹಿಕ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಭಯೋತ್ಪಾದನೆಯ ಪರಿಣಾಮಗಳನ್ನು ಜನರಿಗೆ ತಿಳಿಸಲು ರ‍್ಯಾಲಿ ಮತ್ತು ಮೆರವಣಿಗೆಗಳನ್ನು ಆಯೋಜಿಸುತ್ತದೆ. ರಾಜೀವ್ ಗಾಂಧಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

ಆಚರಣೆಯ ಮಹತ್ವ

ಭೀಕರ ಭಯೋತ್ಪಾದಕ ದಾಳಿಯ ಹಿನ್ನೋಟ ಗಮನಿಸಿದರೆ ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರದ ಮೇಲಿನ ದಾಳಿಯನ್ನು ನಾವು ಮರೆಯಲು ಸಾಧ್ಯವಿಲ್ಲ. ಅದೇ ರೀತಿ ಮುಂಬಯಿ ಮೇಲಿನ ಪಾಕಿಸ್ತಾನ ಪ್ರೇರಿತ 26/11 ದಾಳಿ ಕೂಡ ಇದಕ್ಕಿಂತ ಹೊರತಾಗಿಲ್ಲ. ಇಂಥ ಭಯೋತ್ಪಾದನೆಯನ್ನು ವಿರೋಧಿಸಲು ಮತ್ತು ಮಾನವೀಯತೆಯೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸಲು ಭಯೋತ್ಪಾದನಾ ವಿರೋಧಿ ದಿನವು ಮಹತ್ವದ ಸಂದೇಶ ಸಾರುತ್ತದೆ. ಭಯೋತ್ಪಾದನೆಯು ಮನುಷ್ಯರ ಹಕ್ಕುಗಳ ಮೇಲಿನ ದಾಳಿ ಎಂಬುದರಲ್ಲಿ ಸಂದೇಹವಿಲ್ಲ. ಆದ್ದರಿಂದ ನಾವೆಲ್ಲ ಒಗ್ಗೂಡಿ ಪರಸ್ಪರ ಪ್ರೀತಿ, ಕಾಳಜಿ ತೋರುವ ಮೂಲಕ ಭಯೋತ್ಪಾದನೆ ಪಿಡುಗನ್ನು ಸಂಪೂರ್ಣವಾಗಿ ತೊಡೆದುಹಾಕಲು ಪ್ರಯತ್ನಿಸಬೇಕಿದೆ.

ಭಯೋತ್ಪಾದಕರಿಗೆ ಧರ್ಮವಿಲ್ಲ. ಅವರಿಗೆ ವಿನಾಶದ ಭಾಷೆ ಮಾತ್ರ ಅರ್ಥವಾಗುತ್ತದೆ. ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನವು ಭಾರತದಲ್ಲಿ ಒಂದು ಪ್ರಮುಖ ದಿನವಾಗಿದೆ. ಏಕೆಂದರೆ ಇದು ಜನರು ತಮ್ಮ ದೈನಂದಿನ ಜೀವನದಲ್ಲಿ ಜಾಗರೂಕರಾಗಿರಲು ಪ್ರೇರೇಪಿಸುತ್ತದೆ. ಜನರು ತಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಸಾಮರಸ್ಯದಿಂದ ಸಹಬಾಳ್ವೆ ನಡೆಸಲು ಪ್ರೋತ್ಸಾಹಿಸುವ ಮೂಲಕ ಇದು ಶಾಂತಿಯನ್ನು ಉತ್ತೇಜಿಸುತ್ತದೆ. ಸಮಾಜವನ್ನು ಶಾಂತಿಯುತವಾಗಿ ಇಡುವುದು ಎಷ್ಟು ಮುಖ್ಯ ಎಂಬ ಅರಿವು ಮೂಡಿಸುತ್ತದೆ. ಭಯೋತ್ಪಾದನೆಯ ವಿರುದ್ಧ ನಾವೆಲ್ಲರೂ ಕೈಜೋಡಿಸೋಣ.

Continue Reading

ದೇಶ

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

ಮಹಾರಾಷ್ಟ್ರದಲ್ಲಿ 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಇದರಿಂದಾಗಿ ಬಾಲಕಿಯು ಗರ್ಭ ಧರಿಸಿದ್ದು, ಗರ್ಭಪಾತ ಮಾಡಿಸಲು ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬಯಲಾಗಿದೆ.

VISTARANEWS.COM


on

Mobile
Koo

ಮುಂಬೈ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಭಾರತ ಸೇರಿ ಜಗತ್ತು ಏಳಿಗೆ ಹೊಂದಲು ಕಾರಣವಾಗಿದೆ. ಆದರೆ, ಇದೇ ತಂತ್ರಜ್ಞಾನವು ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಅದರಲ್ಲೂ, ಸಣ್ಣ ಮಕ್ಕಳಿಂದ ಹಿಡಿದು, ಹಿರಿಯರವರೆಗೆ ಲಭ್ಯ ಇರುವ ಸ್ಮಾರ್ಟ್‌ಫೋನ್‌ಗಳು (Smart Phones) ಅತ್ಯಾಚಾರ, ಲೈಂಗಿಕ ಕಿರುಕುಳ, ಕೊಲೆ, ಸುಲಿಗೆಗೆ ದಾರಿ ಮಾಡಿಕೊಡುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದಲ್ಲಿ (Maharashtra) 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ.

ಹೌದು, ಬಾಲಕನು ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ ಪರಿಣಾಮ, ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಮೂರು ತಿಂಗಳು ಗರ್ಭಿಣಿಯಾಗಿರುವ ಬಾಲಕಿಯನ್ನು ಪೋಷಕರು ಮುಂಬೈನಲ್ಲಿರುವ ವಾಶಿ ಜನರಲ್‌ ಹಾಸ್ಪಿಟಲ್‌ಗೆ ಕರೆದುಕೊಂಡು ಹೋಗಿ, ಗರ್ಭಪಾತ ಮಾಡಿಸಲು ಮುಂದಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದಾದ ಬಳಿಕ ಪೊಲೀಸರು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

physical Abuse

“ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ವಿರುದ್ಧ ಪೋಕ್ಸೊ, ಐಪಿಸಿಯ ಸೆಕ್ಷನ್‌ 376 ಸೇರಿ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಾದ ಬಳಿಕ ಪ್ರಕರಣವನ್ನು ಖಂಡೇಶ್ವರ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ. ಮಕ್ಕಳ ಕಲ್ಯಾಣ ಆಯೊಗವು ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ. ಇಂತಹ ಪ್ರಕರಣಗಳು ಬೆಳಕಿಗೆ ಬರುವ ಕಾರಣದಿಂದಾಗಿಯೇ, ಮಕ್ಕಳಿಗೆ ಮೊಬೈಲ್‌ ಕೊಡಬಾರದು, ಕೊಟ್ಟರೂ ಅವರು ಏನು ಮಾಡುತ್ತಾರೆ ಎಂಬುದರ ಮೇಲೆ ಪೋಷಕರು ಗಮನ ಇಡಬೇಕು ಎಂದು ತಜ್ಞರು ಹೇಳುತ್ತಲೇ ಇರುತ್ತಾರೆ.

ಇದನ್ನೂ ಓದಿ: ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

Continue Reading

Lok Sabha Election 2024

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

ಮುಂಬೈನ ರಹೇಜಾ ಕಾಲೇಜಿಗೆ ತೆರಳಿದ 101 ವರ್ಷದ ನಿವೃತ್ತ ಯೋಧ ಕಾರ್ಖನೀಸ್‌ ಅವರು ಮತದಾನ ಮಾಡುವ ಮೂಲಕ ಯುವಕರು ಸೇರಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಇವರು ಮತದಾನ ಮಾಡಲು ತೆರಳಿದ ಫೋಟೊವನ್ನು ಮುಂಬೈ ಪೊಲೀಸರು ಪೋಸ್ಟ್‌ ಮಾಡಿದ್ದಾರೆ. ಸಾವಿರಾರು ಜನ ಪೋಸ್ಟ್‌ಗೆ ಲೈಕ್‌ ಒತ್ತುವ ಜತೆಗೆ, ಯೋಧರ ಉತ್ಸಾಹ, ಕರ್ತವ್ಯ ಪ್ರಜ್ಞೆಯನ್ನು ಕೊಂಡಾಡಿದ್ದಾರೆ.

VISTARANEWS.COM


on

Army Officer
Koo

ಮುಂಬೈ: ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ (ಮೇ 20) ಐದನೇ ಹಂತದ ಮತದಾನ (Lok Sabha Election) ನಡೆದಿದೆ. ಬಹುತೇಕ ಕಡೆ ಶಾಂತಿಯುತವಾಗಿಯೇ ಮತದಾನ ನಡೆದಿದೆ. ಮೂರನೇ ಹಂತದಲ್ಲಿ ಕೇವಲ ಶೇ.57.5ರಷ್ಟು ಮತದಾನ (Voter Turnout) ದಾಖಲಾಗಿದೆ. ಇದರ ಮಧ್ಯೆಯೇ, ಮುಂಬೈನಲ್ಲಿ 101ನೇ ವಯಸ್ಸಿನಲ್ಲೂ ನಿವೃತ್ತ ಯೋಧರೊಬ್ಬರು (Retired Army Officer) ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಯುವಕರು ಸೇರಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಅವರು ಮತದಾನ ಮಾಡಿದ ಫೋಟೊಗಳು ಈಗ ವೈರಲ್‌ ಆಗಿವೆ.

ಮುಂಬೈ ಪೊಲೀಸರು ನಿವೃತ್ತ ಯೋಧ ಮತದಾನ ಮಾಡಿದ ಫೋಟೊವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. “ನೀವು ಮತದಾನವನ್ನು ತಪ್ಪಿಸಿಕೊಳ್ಳಲು 101 ಕಾರಣಗಳನ್ನು ಕೊಡಬಹುದು. ಆದರೆ, ನಿವೃತ್ತ ಯೋಧರಾದ ಕಾರ್ಖನೀಸ್‌ ಅವರು 101ನೇ ವಯಸ್ಸಿನಲ್ಲೂ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಮಾದರಿ ಎನಿಸಿದ್ದಾರೆ. ಇವರು ಮುಂಬೈನ ರಹೇಜಾ ಕಾಲೇಜಿಗೆ ತೆರಳಿ ಮತದಾನ ಮಾಡಿದ್ದು, ನಮ್ಮ ಸಿಬ್ಬಂದಿಯು ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡರು” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ನಿವೃತ್ತ ಯೋಧರ ಕರ್ತವ್ಯಪ್ರಜ್ಞೆಗೆ ಜಾಲತಾಣಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಇಳಿ ವಯಸ್ಸಿನಲ್ಲೂ ಮತದಾನ ಮಾಡಿದ ನಿವೃತ್ತ ಯೋಧನಿಗೆ ನನ್ನ ಸೆಲ್ಯೂಟ್‌” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. “ನಿಜವಾಗಿಯೂ ಇದು ಸ್ಫೂರ್ತಿದಾಯಕ. 98 ವರ್ಷದ ನನ್ನ‌ ಅಜ್ಜಿಯು ಕೂಡ ಇಂದು ಮತ ಚಲಾಯಿಸಿದ್ದಾರೆ. ಇನ್ನು ಯೋಧನಿಗೆ ಸಹಾಯ ಮಾಡಿದ ಪೊಲೀಸ್‌ ಸಿಬ್ಬಂದಿಗೂ ಧನ್ಯವಾದಗಳು” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್‌ಸ್ಟಾಗ್ರಾಂ ಪೋಸ್ಟ್‌ಅನ್ನು ಸಾವಿರಾರು ಜನ ಲೈಕ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ.

ಇದನ್ನೂ ಓದಿ: Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Continue Reading

ದೇಶ

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

Rahul Gandhi: ಇದಕ್ಕೆ ನಿದರ್ಶನ ಎಂಬಂತೆ, ರಾಯ್‌ಬರೇಲಿಯ ಗ್ರಾಮವೊಂದರಲ್ಲಿ ಜನರು ರಾಹುಲ್‌ ಗಾಂಧಿ ಅವರ ಎದುರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗಿದ್ದಾರೆ. ಇದನ್ನು ಕೇಳುತ್ತಲೇ ರಾಹುಲ್‌ ಗಾಂಧಿ ಅವರು ಕೈ ಮುಗಿದು ಗ್ರಾಮದಿಂದ ತೆರಳಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ರಾಯ್‌ಬರೇಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕೇರಳದ ವಯನಾಡು ಜತೆಗೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲೂ ಕಣಕ್ಕಿಳಿದಿದ್ದಾರೆ. ಸೋನಿಯಾ ಗಾಂಧಿ ಅವರು ಸ್ಪರ್ಧಿಸುತ್ತಿದ್ದ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿಯಲ್ಲಿ ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ, ರಾಹುಲ್‌ ಗಾಂಧಿ ಅವರಿಗೆ ಹಲವೆಡೆ ಜನ ಜೈ ಶ್ರೀರಾಮ್‌ (Jai Shri Ram) ಎಂದು ಘೋಷಣೆ ಕೂಗಿ ಸ್ವಾಗತಿಸುತ್ತಿದ್ದಾರೆ.

ಇದಕ್ಕೆ ನಿದರ್ಶನ ಎಂಬಂತೆ, ರಾಯ್‌ಬರೇಲಿಯ ಗ್ರಾಮವೊಂದರಲ್ಲಿ ಜನರು ರಾಹುಲ್‌ ಗಾಂಧಿ ಅವರ ಎದುರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗಿದ್ದಾರೆ. ಇದನ್ನು ಕೇಳುತ್ತಲೇ ರಾಹುಲ್‌ ಗಾಂಧಿ ಅವರು ಕೈ ಮುಗಿದು ಗ್ರಾಮದಿಂದ ತೆರಳಿದ್ದಾರೆ. ರಾಯ್‌ಬರೇಲಿಯ ಮತ್ತೊಂದು ಕಡೆಯೂ ರಾಹುಲ್‌ ಗಾಂಧಿ ಅವರಿಗೆ ಜೈ ಶ್ರೀ ರಾಮ್‌ ಎಂದು ಘೋಷಣೆ ಕೂಗಿ ಜನ ಸ್ವಾಗತಿಸಿದ್ದಾರೆ. ಈ ಎರಡೂ ವಿಡಿಯೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಹನುಮಾನ್‌ ದೇಗುಲಕ್ಕೆ ಭೇಟಿ

ರಾಯ್‌ಬರೇಲಿಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ತೆರಳಿದ ರಾಹುಲ್‌ ಗಾಂಧಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನೂ ಕೆಲವೊಬ್ಬರು, ಅವಸರ ಅವಸರದಲ್ಲಿ ಪೂಜೆ ಮಾಡುವುದು, ದೇವರ ಮೇಲೆ ಪೂಜಾ ಸಾಮಗ್ರಿಗಳನ್ನು ಎಸೆಯುವುದು ನೋಡಿದರೆ ಇವರು ಎಂತಹ ಹಿಂದು ಎಂಬುದು ಗೊತ್ತಾಗುತ್ತದೆ ಎಂಬುದಾಗಿ ಟೀಕಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ಬಹಿಷ್ಕರಿಸಿದ ಕಾರಣ ಕಾಂಗ್ರೆಸ್‌ ನಾಯಕರ ಎದುರು ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗುತ್ತಾರೆ. ಅದೇ ರೀತಿ, ರಾಹುಲ್‌ ಗಾಂಧಿ ಅವರ ಎದುರು ಕೂಡ ಜನ ಜೈ ಶ್ರೀರಾಮ್‌ ಎಂಬುದಾಗಿ ಕೂಗಿದ್ದಾರೆ. 2004ರಿಂದ ಸೋನಿಯಾ ಗಾಂಧಿ ಅವರು ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರು. ಅವರೀಗ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾರಣ ಅವರ ಪುತ್ರ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿಯಲ್ಲಿ ನಾಮಪತ್ರ ಕೂಡ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Continue Reading
Advertisement
Anti Terrorism Day
ದೇಶ7 mins ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ37 mins ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Prajwal Revanna Case
ಕರ್ನಾಟಕ6 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ6 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20246 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ6 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ7 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ7 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ7 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ8 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ16 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌