Dr Priya Dies: 8 ತಿಂಗಳ ಗರ್ಭಿಣಿಯಾಗಿದ್ದ ಖ್ಯಾತ ನಟಿ ಪ್ರಿಯಾ ಹೃದಯಾಘಾತಕ್ಕೆ ಬಲಿ - Vistara News

ಕಿರುತೆರೆ

Dr Priya Dies: 8 ತಿಂಗಳ ಗರ್ಭಿಣಿಯಾಗಿದ್ದ ಖ್ಯಾತ ನಟಿ ಪ್ರಿಯಾ ಹೃದಯಾಘಾತಕ್ಕೆ ಬಲಿ

Dr Priya Dies: ವೃತ್ತಿಯಲ್ಲಿ ವೈದ್ಯೆಯೂ ಆಗಿದ್ದ ಪ್ರಿಯಾ ಅವರು ಕಿರುತೆರೆಯಲ್ಲಿ ಮನೋಜ್ಞ ನಟನೆ ಮೂಲಕ ಜನಪ್ರಿಯತೆ ಗಳಿಸಿದ್ದರು. ಇನ್ನೊಂದು ತಿಂಗಳಾಗಿದ್ದರೆ ಅವರು ಮಗುವನ್ನು ಮುದ್ದಾಡುತ್ತಿದ್ದರು.

VISTARANEWS.COM


on

Actor Dr Priya Dies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಮಲಯಾಳಂ ಕಿರುತೆರೆಯ ಖ್ಯಾತ ನಟಿ ಡಾ. ಪ್ರಿಯಾ ಅವರು ಹೃದಯಾಘಾತದಿಂದ (Heart Attack) ಮಂಗಳವಾರ (ಅಕ್ಟೋಬರ್‌ 31) (Dr Priya Dies) ಮೃತಪಟ್ಟಿದ್ದಾರೆ. ಡಾ. ಪ್ರಿಯಾ (35) ಅವರಿಗೆ ಹೃದಯಸ್ತಂಭನ (Cardiac Arrest) ಉಂಟಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು 8 ತಿಂಗಳ ತುಂಬು ಗರ್ಭಿಣಿಯಾಗಿದ್ದು, ಇನ್ನೊಂದು ತಿಂಗಳು ಇದ್ದಿದ್ದರೆ ಮಗುವನ್ನು ಮುದ್ದಾಡುತ್ತಿದ್ದರು. ನಟಿಯ ನಿಧನಕ್ಕೆ ಮಲಯಾಳಂನ ಖ್ಯಾತ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

ಚೆಕ್‌ಅಪ್‌ಗೆ ಹೋದಾಗಲೇ ಹೃದಯಸ್ತಂಭನ

ನಟಿ ಡಾ. ಪ್ರಿಯಾ ಅವರು ತುಂಬು ಗರ್ಭಿಣಿಯಾದ ಕಾರಣ ನಿತ್ಯದ ಚೆಕ್‌ಅಪ್‌ಗಾಗಿ ಆಸ್ಪತ್ರೆಗೆ ತೆರಳಿದ್ದರು. ಇದೇ ವೇಳೆ ಅವರಿಗೆ ಹೃದಯಸ್ತಂಭನ ಉಂಟಾಗಿದೆ ಎಂದು ತಿಳಿದುಬಂದಿದೆ. ಚಿಕಿತ್ಸೆ ಆರಂಭಿಸಿದರೂ ಅವರು ಕೆಲವೇ ನಿಮಿಷಗಳಲ್ಲಿ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ. ಇನ್ನು ನಟಿಯ ಗರ್ಭದಲ್ಲಿದ್ದ ಮಗುವಿನ ಸ್ಥಿತಿಯೂ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ನಟ ಕಿಶೋರ್‌ ಸತ್ಯ ಸಂತಾಪ

“ಮಲಯಾಳಂ ಟಿವಿ ಇಂಡಸ್ಟ್ರಿಗೆ ಮತ್ತೊಂದು ಆಘಾತವಾಗಿದೆ. ನಿತ್ಯದ ಚೆಕ್‌ಅಪ್‌ಗೆ ಹೋದ ಡಾ.ಪ್ರಿಯಾ ಅವರಿಗೆ ಹೃದಯಾಘಾತ ಉಂಟಾಗಿದ್ದು, ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಗರ್ಭಿಣಿಯಾಗಿದ್ದ ಅವರು ಆರೋಗ್ಯದಿಂದ ಇದ್ದರು. ಇಂತಹ ದುಃಖವನ್ನು ಪ್ರಿಯಾ ಅವರ ಪೋಷಕರು ಹಾಗೂ ಪತಿ ಹೇಗೆ ಸಹಿಸುತ್ತಾರೆ ಎಂಬುದೇ ಗೊತ್ತಾಗುತ್ತಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ನಟ ಕಿಶೋರ್‌ ಸತ್ಯ ಸಂತಾಪ ಸೂಚಿಸಿದ್ದಾರೆ. ಕರುತಮುತ್ತು ಶೋ ಸೇರಿ ಹಲವು ಧಾರಾವಾಹಿಗಳಲ್ಲಿ ಡಾ. ಪ್ರಿಯಾ ನಟಿಸಿ ಖ್ಯಾತಿ ಗಳಿಸಿದ್ದರು. ಇವರ ಜತೆ ಕಿಶೋರ್‌ ಸತ್ಯ ಅವರೂ ನಟಿಸಿದ್ದರು. ವೃತ್ತಿಯಲ್ಲಿ ವೈದ್ಯೆಯಾಗಿದ್ದ ಪ್ರಿಯಾ ಅವರು ನಟನೆಯಿಂದಲೂ ಜನಪ್ರಿಯರಾಗಿದ್ದರು. ಮದುವೆಯಾದ ಬಳಿಕ ಇವರು ನಟನೆಯಿಂದ ಬಿಡುವು ಪಡೆದಿದ್ದರು.

ಇದನ್ನೂ ಓದಿ: Renjusha Menon: ಮಲಯಾಳಂ ಖ್ಯಾತ ನಟಿ ರೆಂಜೂಷಾ ಮೆನನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಎರಡು ದಿನಗಳ ಹಿಂದಷ್ಟೇ ಮಲಯಾಳಂ ಚಲನಚಿತ್ರ ಮತ್ತು ಟಿವಿ ಧಾರಾವಾಹಿ ನಟಿ ರೆಂಜೂಷಾ ಮೆನನ್ ಅವರ ಶವ ಪತ್ತೆಯಾಗಿತ್ತು. ಸೋಮವಾರ (ಅ.30) ಅವರ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಅವರಿಗೆ ಕೇವಲ 35 ವರ್ಷ ವಯಸ್ಸಾಗಿತ್ತು. ನಟಿ ತನ್ನ ಕುಟುಂಬದೊಂದಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದು, ಶ್ರೀಕರಿಯಂ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Kavitha Gowda: ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಜೋಡಿ ಸಾಕಷ್ಟು ಮನೆಮಾತಾಗಿತ್ತು. ಸೀರಿಯಲ್, ಸಿನಿಮಾ, ನಟನೆಯಲ್ಲಿ ಬ್ಯುಸಿಯಿರುವ ಜೋಡಿ ಇದೀಗ ಸಂಭ್ರಮದ ವಿಚಾರವನ್ನು ಹಂಚಿಕೊಂಡಿದೆ. ಇಬ್ಬರೂ ಲಾಕ್‌ಡೌನ್ ಸಮಯಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕವಿತಾ ಗೌಡ ಹಿರಿತೆರೆಯಲ್ಲಿ ಶ್ರೀನಿವಾಸ ಕಲ್ಯಾಣ, ಫಸ್ಟ್ ಲವ್, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಗೋವಿಂದಾ ಗೋವಿಂದ, ಹುಟ್ಟುಹಬ್ಬದ ಶುಭಾಶಯಗಳು ಸೇರಿದಂತೆ ಚಿತ್ರಗಳಲ್ಲಿ ನಟಿಸಿದ್ದರು.

VISTARANEWS.COM


on

Kavitha Gowda chandan expected First Child
Koo

ಲಕ್ಷ್ಮೀ ಬಾರಮ್ಮ ಖ್ಯಾತಿಯ ಚಂದನ್ ಕುಮಾರ್ ಮತ್ತು ಕವಿತಾ (Actor Chandan ) ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಜೋಡಿ ಸಾಕಷ್ಟು ಮನೆಮಾತಾಗಿತ್ತು. ಸೀರಿಯಲ್, ಸಿನಿಮಾ, ನಟನೆಯಲ್ಲಿ ಬ್ಯುಸಿಯಿರುವ ಜೋಡಿ ಇದೀಗ ಸಂಭ್ರಮದ ವಿಚಾರವನ್ನು ಹಂಚಿಕೊಂಡಿದೆ. 

ಇನ್‌ಸ್ಟಾ ಪೋಸ್ಟ್‌ ಮೂಲಕ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ್ದಾರೆ.

ಇಬ್ಬರೂ ಲಾಕ್‌ಡೌನ್ ಸಮಯಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Lakshmi Baramma Serial: ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಿಂದ ಹೊರಬಂದ್ರಾ ಕೀರ್ತಿ ಪಾತ್ರಧಾರಿ? ಸೀರಿಯಲ್‌ ನೋಡಲ್ಲ ಅಂದ್ರು ಫ್ಯಾನ್ಸ್‌!

ಕವಿತಾ ಗೌಡ ಹಿರಿತೆರೆಯಲ್ಲಿ ಶ್ರೀನಿವಾಸ ಕಲ್ಯಾಣ, ಫಸ್ಟ್ ಲವ್, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಗೋವಿಂದಾ ಗೋವಿಂದ, ಹುಟ್ಟುಹಬ್ಬದ ಶುಭಾಶಯಗಳು ಸೇರಿದಂತೆ ಚಿತ್ರಗಳಲ್ಲಿ ನಟಿಸಿದ್ದರು. ಪತಿ ಚಂದನ್ ಗೌಡ ಜೊತೆ ಹೋಟೆಲ್ ಉದ್ಯಮದಲ್ಲೂ ಸಕ್ರಿಯರಾಗಿದ್ದಾರೆ. 

ಕವಿತಾ ಗೌಡ ಹಾಗೂ ಚಂದನ್‌ ಒಬ್ಬರನ್ನೊಬ್ಬರು ಪ್ರೀತಿಸಿ, ಹಸೆಮಣೆ ಏರಿದ್ದ ಜೋಡಿ ನಟನೆ ಮತ್ತು ಉದ್ಯಮ ಎರಡಲ್ಲೂ ಒಬ್ಬರಿಗೊಬ್ಬರು ಸಾಥ್ ನೀಡುತ್ತಾ ಸಾಗುತ್ತಿದ್ದಾರೆ. ಕವಿತಾ ಗೌಡ ಕೆಲ ವರ್ಷಗಳ ಕಾಲ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ನಟಿಸಿ, ನಂತರ ‘ವಿದ್ಯಾ ವಿನಾಯಕ’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು.ಅತ್ತ ನಟಿ ಕವಿತಾ ಗೌಡ ಅವರು ಕೂಡ ತಮಿಳಿನ ‘ಅನ್ಬೇ ಶಿವಂ’ ಧಾರಾವಾಹಿಯಲ್ಲಿ ನಟಿಸುವುದರ ಜೊತೆಗೆ ಒಂದಷ್ಟು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದಾರೆ.

Continue Reading

ಕಿರುತೆರೆ

Bhavya Gowda: ಡ್ರಿಪ್ಸ್‌ ಹಾಕಿದ್ದರೂ ಶೂಟಿಂಗ್‌ಗೆ ಬರಲೇ ಬೇಕು ಅಂದ್ರು ಎಂದ ʻಗೀತಾ ಧಾರಾವಾಹಿʼ ನಟಿ ಭವ್ಯಾ ಗೌಡ!

Bhavya Gowda: 2020 ಜನವರಿ 6ರಂದು ‘ಗೀತಾ’ ಧಾರಾವಾಹಿ ಪ್ರಸಾರವನ್ನು ಆರಂಭಿಸಿತ್ತು. ಕೆ ಎಸ್ ರಾಮ್‌ಜೀ ಅವರು ಗಗನಾ ಎಂಟರ್‌ಪ್ರೈಸಸ್‌ನಡಿ ಈ ಧಾರಾವಾಹಿಯ ನಿರ್ಮಾಣ ಮಾಡಿದ್ದರು. ಗೀತಾ ಧಾರಾವಾಹಿಯು 2022ರಲ್ಲಿ ಬೆಂಗಾಳಿ ಭಾಷೆಗೆ ‘ಫೆರಾರಿ ಸೋಮ ಫೆರಾರಿ ಮನ್’ ಆಗಿ ಪ್ರಸಾರ ಆಗುತ್ತಲಿದೆ. ಇದೀಗ ನಟಿ ಭವ್ಯಾ ಗೌಡ(Bhavya Gowda)ಸ್ಟಾರ್ ಸುವರ್ಣ ವಾಹಿನಿಯ ಸುವರ್ಣ ಸೂಪರ್ ಸ್ಟಾರ್ ಕಾರ್ಯಕ್ರಮದಲ್ಲಿ ಶೂಟಿಂಗ್ ಸಮಯದ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.

VISTARANEWS.COM


on

Bhavya Gowda shares her experiences during shooting
Koo

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʻಗೀತಾʼ ಧಾರಾವಾಹಿ ಖ್ಯಾತಿಯ ನಟಿ ಭವ್ಯಾ ಗೌಡ(Bhavya Gowda)ಸ್ಟಾರ್ ಸುವರ್ಣ ವಾಹಿನಿಯ ಸುವರ್ಣ ಸೂಪರ್ ಸ್ಟಾರ್ ಕಾರ್ಯಕ್ರಮದಲ್ಲಿ ಶೂಟಿಂಗ್ ಸಮಯದ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.

ʻʻರೀಲ್ಸ್‌ ಮಾಡೋವಷ್ಟು ಸುಲಭವಲ್ಲ ಶೂಟಿಂಗ್. ಯಾವುದೋ ವಿಡಿಯೊಗೆ ಲಿಪ್‌ ಸಿಂಕ್‌ ಮಾಡೋದು ಬೇರೆ. ಆದರೆ ನಟನೆಯಲ್ಲಿ ಭಾವನೆಗಳನ್ನು ತೋರಿಸಬೇಕು. ವಾಯ್ಸ್ ಓವರ್ ಕೊಡಬೇಕು. ಹೀಗೆ ಸಾವಿರ ಜವಾಬ್ದಾರಿಗಳು ನಮ್ಮ ಮೇಲಿರುತ್ತದೆʼʼಎಂದರು ಭವ್ಯಾ.

ಇದನ್ನೂ ಓದಿ: Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

ದುಡಿಮೆ ಹಿಂದಿನ ಕಷ್ಟ ಯಾರಿಗೂ ಗೊತ್ತಿಲ್ಲ. ಒಂದೊಮ್ಮೆ ತುಮಕೂರಿನಲ್ಲಿ ಫುಡ್ ಪಾಯಿಸನ್ ಆಗಿತ್ತು.ಡಾಕ್ಟರ್ ಬಳಿ ಹೋಗಿ ಡ್ರಿಪ್ಸ್ ಹಾಕಿಸಿಕೊಂಡು ಬಂದಿದ್ದೆ.ಡ್ರಿಪ್ಸ್ ಹಾಕಿಸಿಕೊಂಡಿದ್ದೇನೆ ಶೂಟಿಂಗ್ ಕಷ್ಟ ಎಂದರೂ ಅದೆಲ್ಲ ನಮಗೆ ಗೊತ್ತಿಲ್ಲ ಬನ್ನಿ ಎಂದರು. ಆಗ ಹೋಗಲೇ ಬೇಕಾಯಿತು.

ಗೀತಾ ಧಾರಾವಾಹಿ ಆರಂಭದಲ್ಲಿ ಸಾಕಷ್ಟು ಟ್ರೋಲ್‌ಗೆ ಗುರಿಯಾಗಿತ್ತು. ಧಾರಾವಾಹಿ ಬಿಡುತ್ತೇನೆ ಎಂದು ಭವ್ಯಾ ಅವರು ನಿರ್ದೇಶಕರ ಬಳಿ ಅದೆಷ್ಟೋ ಬಾರಿ ಹೇಳಿದ್ದೂ ಇದೆ ಅಂತೆ. ಕೊನೆಗೆ ನಿರ್ದೇಶಕರ ಪಾಸಿಟಿವ್‌ ಮಾತುಗಳೇ ನನ್ನನ್ನು ಪ್ರೋತ್ಸಾಹಿಸಿದ್ದು ಎಂದು ನಟಿ ಹೇಳಿಕೊಂಡಿದ್ದಾರೆ.

2020 ಜನವರಿ 6ರಂದು ‘ಗೀತಾ’ ಧಾರಾವಾಹಿ ಪ್ರಸಾರವನ್ನು ಆರಂಭಿಸಿತ್ತು. ಕೆ ಎಸ್ ರಾಮ್‌ಜೀ ಅವರು ಗಗನಾ ಎಂಟರ್‌ಪ್ರೈಸಸ್‌ನಡಿ ಈ ಧಾರಾವಾಹಿಯ ನಿರ್ಮಾಣ ಮಾಡಿದ್ದರು.

Continue Reading

ಕಿರುತೆರೆ

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Vijay Deverakonda: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Vijay Devarakonda announces new film
Koo

ಬೆಂಗಳೂರು: ʻಲೈಗರ್‌ʼ ಸಿನಿಮಾ ಸೋಲಿನ ಬಳಿಕ ನಟ ವಿಜಯ್‌ ದೇವರಕೊಂಡ (Vijay Deverakonda) ಯಾವ ಸಿನಿಮಾವನ್ನು ಮಾಡಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದಾದ ಬಳಿ ಸಾಕಷ್ಟು ಸಿನಿಮಾಗಳು ತೆರೆ ಕಂಡವು. ʻಖುಷಿʼ ಹಾಗೂ ʻಫ್ಯಾಮಿಲಿ ಸ್ಟಾರ್‌ʼ ಸಿನಿಮಾಗಳು ರಿಲೀಸ್‌ ಆದರೂ ತಕ್ಕ ಮಟ್ಟಿಗೆ ಸಕ್ಸೆಸ್‌ ಏನು ಆಗಿಲ್ಲ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.

ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ರವಿ ಕರಣ್ ಕೋಲಾ (Ravi Kiran Kola) ನಿರ್ದೇಶನವಿದೆ. ರವಿಕಿರಣ್ ಕೋಲಾ ಅವರು ‘ರಾಜಾ ವರು ರಾಣಿ ಗಾರು’ (Raja Vaaru Rani Gaaru) ಮತ್ತು ‘ಅಶೋಕ ವನಮ್ಲೋ ಅರ್ಜುನ ಕಲ್ಯಾಣಂ'(Ashoka Vanamlo Arjuna Kalyanam) ಸಿನಿಮಾಗೆ ಹೆಸರುವಾಸಿಯಾಗಿದ್ದಾರೆ. ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ಬಿಡುಗಡೆಯ ದಿನಾಂಕ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

Continue Reading

ಕಿರುತೆರೆ

Amruthadhare Serial : ಐಸ್ ಥರ ಕರಗಿಹೋಯ್ತು ಭೂಮಿಕಾ-ಗೌತಮ್‌ ಮುನಿಸು!

Amruthadhare Serial : ಭೂಮಿಕಾ ಮತ್ತು ಗೌತಮ್‌ ನಡುವೆ ಶಕುಂತಲ ಕುತಂತ್ರ ವರ್ಕೌಟ್‌ ಆಗಿತ್ತು. ಯಾವಾಗ ಗೌತಮ್‌ ಸ್ನೇಹಿತ ಆನಂದ್‌ ಭೂಮಿಕಾಗೆ ತಪ್ಪಿನ ಅರಿವು ಮನವರಿಕೆ ಮಾಡಿಕೊಟ್ಟರೋ ಆಗಲೇ ಭೂಮಿಕಾ ಗಂಡನ ಜತೆ ರಾಜಿ ಮಾಡಿಕೊಳ್ಳುತ್ತಾಳೆ. ರಾತ್ರಿ ಮಲಗುವಾಗ ಭೂಮಿಕಾ ತಪ್ಪಿನ ಅರಿವಾಗಿ ಗೌತಮ್‌ ಬಳಿ ಕ್ಷಮೆ ಕೇಳುತ್ತಾಳೆ. ಬಿಕ್ಕಿ ಬಿಕ್ಕಿ ಅಳುತ್ತಾಳೆ. ಗೌತಮ್‌ ಕೂಡ ಸಮಾಧಾನ ಮಾಡಿ, ನಿಮ್ಮ ಮುಖದಲ್ಲಿ ನಗು ಇದ್ದರೆ ಚೆಂದ ಎಂದು ಭೂಮಿಕಾಗೆ ಸಮಾಧಾನ ಮಾಡುತ್ತಾರೆ.

VISTARANEWS.COM


on

Amruthadhare Serial Bhumika-Gautham angryness has melted like ice
Koo

ಬೆಂಗಳೂರು: ಜೀ ಕನ್ನಡ ಧಾರಾವಾಹಿಯಲ್ಲಿ ʻಅಮೃತಧಾರೆʼ (Amruthadhare Serial) ಪ್ರಸಾರ ಕಾಣುತ್ತಿದೆ. ಈಗಾಗಲೇ ಭೂಮಿಕಾ ಮತ್ತು ಗೌತಮ್‌ ನಡುವೆ ಬಿರುಕು ಉಂಟಾಗಿ ಈಗ ಐಸ್ ಥರ ಕೋಪ‌ ಕರಗಿ ರಾಜಿ ಕೂಡ ಮಾಡಿಕೊಂಡಿದ್ದಾರೆ. ಭೂಮಿಕಾ ಮತ್ತು ಗೌತಮ್‌ ನಡುವೆ ಶಕುಂತಲ ಕುತಂತ್ರ ವರ್ಕೌಟ್‌ ಆಗಿತ್ತು. ಯಾವಾಗ ಗೌತಮ್‌ ಸ್ನೇಹಿತ ಆನಂದ್‌ ಭೂಮಿಕಾಗೆ ತಪ್ಪಿನ ಅರಿವು ಮನವರಿಕೆ ಮಾಡಿಕೊಟ್ಟರೋ ಆಗಲೇ ಭೂಮಿಕಾ ಗಂಡನ ಜತೆ ರಾಜಿ ಮಾಡಿಕೊಳ್ಳುತ್ತಾಳೆ.

ಗೌತಮ್‌ ತಮ್ಮ ಪಾರ್ಥ ಹಾಗೂ ಭೂಮಿಕಾ ತಂಗಿ ಅಪ್ಪಿ ಒಬ್ಬರಿಗೊಬ್ಬರು ಪ್ರೀತಿಸುತ್ತಿರುವುದು ಗೊತ್ತಿರುವ ವಿಚಾರ. ಈಗಾಗಲೇ ಭೂಮಿಗೆ ಈ ಪ್ರೀತಿ ವಿಚಾರ ಗೊತ್ತಾಗಿ ಪಾರ್ಥನಿಗೆ ಬುದ್ಧಿವಾದ ಹೇಳಿದ್ದಾರೆ. ಪ್ರೀತಿ ಎಂದರೆ ಜವಬ್ಧಾರಿ ಎಂದು ಪಾರ್ಥಗೆ ತಿಳಿ ಹೇಳಿದ್ದಾಳೆ ಭೂಮಿಕಾ. ಅತ್ತ ಗೌತಮ್‌ ತಾಯಿ ಶಕುಂತಲಾ ಮಗ ಮತ್ತು ಸೊಸೆ ಒಂದಾಗಬಾರದೆಂದು ಹೊಂಚು ಹಾಕುತ್ತಿದ್ದಾಳೆ.

ಭೂಮಿಕಾಗೆ ಕೋಚಿಂಗ್‌ ಸೆಂಟರ್‌ನಲ್ಲಿ ಪಾಠ ಮಾಡಬೇಕು ಎಂಬ ಆಸೆ. ಗೌತಮ್‌ ಪರ್‌ಮಿಶನ್‌ ಸಿಕ್ಕ ಬಳಿಕ ಕೋಚಿಂಗ್‌ಗೆ ಬರುತ್ತಾರೆ. ಅಲ್ಲಿ ಆದದ್ದೇ ಬೇರೆ. ಅಲ್ಲಿ ಹೋಗುತ್ತಿದ್ದಂತೆ ಬೋರ್ಡ್‌ ಮೆಂಬರ್‌ ಆಗಿ ಆಯ್ಕೆ ಮಾಡಿರುತ್ತಾರೆ. ಇದರಿಂದ ಸಹುದ್ಯೋಗಿಗಳು ಚುಚ್ಚಿ ಮಾತನಾಡಿದ್ದಾರೆ. ಗೌತಮ್ ಹೆಂಡತಿಗೆ ಸುಲಭವಾಗಿ ಬೋರ್ಡ್ ಮೆಂಬರ್ ಪಟ್ಟ ಸಿಕ್ಕಿದೆ. ಟ್ಯಾಲೆಂಟ್ ಗಿಂತಲೂ ಹಣಕ್ಕೆ ಹೆಚ್ಚು ಆದ್ಯತೆ ಎಂದಿದ್ದಾರೆ. ಇದೆಲ್ಲವೂ ಭೂಮಿಕಾಳ ಮನಸ್ಸಿಗೆ ಘಾಸಿ ಮಾಡಿದೆ. ಶಕುಂತಲಾ ಬೋರ್ಡ್‌ಗೆ ಕಾಲ್ ಮಾಡಿ ನಾವು ಡೊನೇಷನ್ ಕೊಡುತ್ತಿದ್ದೇವೆ. ನನ್ನ ಸೊಸೆಗೆ ದೊಡ್ಡ ಸ್ಥಾನವನ್ನು ಕೊಡಿ ಎಂದು ತಾಕೀತು ಮಾಡಿದ್ದಾಳೆ .ಭೂಮಿಕಾ ಮನೆಗೆ ಬಂದವಳೇ ಗೌತಮ್ ಮೇಲೆ ಕೂಗಾಡಲು ಶುರು ಮಾಡುತ್ತಾಳೆ.

ಗೌತಮ್‌ ಮೇಲೆ ಭೂಮಿಕಾ ಕೂಗಾಡಿದ ಬಳಿಕ ಆನಂದ್‌ ಸಮಾಧಾನ ಮಾಡುತ್ತಾನೆ. ಗೌತಮ್‌ ಬಗ್ಗೆ ಅರಿಯದೇ ಮಾತನಾಡಬೇಡಿ ಎಂದು ಭೂಮಿಕಾಗೆ ತಿಳಿ ಹೇಳುತ್ತೇನೆ. ಈ ರೀತಿ ಬೋರ್ಡ್‌ ಮೆಂಬರ್‌ ಆಗಿ ಆಯ್ಕೆ ಮಾಡಿದ್ದು ಗೌತಮ್‌ಗೆ ಗೊತ್ತಿಲ್ಲ ಎಂದು ಆನಂದ್‌ ಹೇಳಿದಾಗ ಭೂಮಿಕಾಗೆ ತಪ್ಪಿನ ಅರಿವಾಗುತ್ತದೆ. ಅತ್ತ ಗೌತಮ್‌ಗೆ ಕೂಡ ಶಕುಂತಲ ಕುತಂತ್ರ ಅರಿವಾಗದೇ ಹೋಗುತ್ತದೆ.

ಇದನ್ನೂ ಓದಿ: Amruthadhare Serial: ಕೆಂಪು ಗುಲಾಬಿಯಂತೆ ಕಂಗೊಳಿಸಿದ ʻಮಹಿಮಾʼ; ಸಾರಾ ಅಣ್ಣಯ್ಯ ಹೊಸ ಲುಕ್‌!

ಮಧ್ಯರಾತ್ರಿ ಐಸ್‌ಕ್ರೀಮ್ ತಿಂತಿದ್ದಾರೆ ಗೌತಮ್-ಭೂಮಿಕಾ

ರಾತ್ರಿ ಮಲಗುವಾಗ ಭೂಮಿಕಾ ತಪ್ಪಿನ ಅರಿವಾಗಿ ಗೌತಮ್‌ ಬಳಿ ಕ್ಷಮೆ ಕೇಳುತ್ತಾಳೆ. ಬಿಕ್ಕಿ ಬಿಕ್ಕಿ ಅಳುತ್ತಾಳೆ. ಗೌತಮ್‌ ಕೂಡ ಸಮಾಧಾನ ಮಾಡಿ, ನಿಮ್ಮ ಮುಖದಲ್ಲಿ ನಗು ಇದ್ದರೆ ಚೆಂದ ಎಂದು ಭೂಮಿಕಾಗೆ ಸಮಾಧಾನ ಮಾಡುತ್ತಾರೆ. ಆ ಬಳಿಕ ಜೋಡಿ ಮಧ್ಯರಾತ್ರಿ ಕೂತು ಐಸ್‌ಕ್ರೀಮ್‌ ತಿಂದು ರಾಜಿಯಾಗಿ ಖುಷಿಯಲ್ಲಿ ಇರುತ್ತಾರೆ.

ಅಮೃತಧಾರೆ ಧಾರಾವಾಹಿ ʻಬಢೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ನಟ ರಾಜೇಶ್ ಅವರು ಗೌತಮ್ ಎನ್ನುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading
Advertisement
Ramanagara News
ಕರ್ನಾಟಕ3 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ3 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ3 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ4 hours ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ4 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ4 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ4 hours ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ4 hours ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest5 hours ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ7 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ9 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ9 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ22 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌