A 16-year-old girl was called home and raped by minor boys Sexual Assault : 16ರ ಬಾಲಕಿಯನ್ನು ಮನೆಗೆ ಕರೆಸಿ ಅತ್ಯಾಚಾರ ಮಾಡಿದ ಮೂವರು ಬಾಲಕರು - Vistara News

ದೇಶ

Sexual Assault : 16ರ ಬಾಲಕಿಯನ್ನು ಮನೆಗೆ ಕರೆಸಿ ಅತ್ಯಾಚಾರ ಮಾಡಿದ ಮೂವರು ಬಾಲಕರು

ಬಾಲಕ ಪರಿಚಿತನಾಗಿದ್ದ ಕಾರಣ ಬಾಲಕಿ ಅತನ ಮನೆಗೆ ಹೋಗಿದ್ದಳು. ಈ ವೇಳೆ ಆಕೆಯನ್ನು ಕೂಡಿ ಹಾಕಿ ದೌರ್ಜನ್ಯ(Sexual Assault) ಎಸಗಿದ್ದಾರೆ.

VISTARANEWS.COM


on

Physical Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲೂಧಿಯಾನ: ಪರಿಚಯದ ಬಾಲಕಿಯೊಬ್ಬಳನ್ನು ಮನೆಗೆ ಕರೆಸಿದ ಮೂವರು ಬಾಲಕರು ಸೇರಿದಂತೆ ಐವರು ಅತ್ಯಾಚಾರ (Sexual Assault) ಮಾಡಿದ ಘಟನೆ ಲೂಧಿಯಾನದಲ್ಲಿ ನಡೆದಿದೆ. ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪೊಲೀಸರು ಮೂವರನ್ನು ಪೋಕ್ಸೊ ಕಾಯ್ದೆಯಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನಿಬ್ಬರು ತಲೆ ಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಬಾಲಕರೆಲ್ಲರೂ ಶಾಲೆ ಹೋಗುವುದನ್ನು ಬಿಟ್ಟು ಅಲೆಯುತ್ತಿದ್ದವರು ಎಂದು ಪೊಲೀಸರು ತಿಳಿಸಿದ್ದಾರೆ.

ಮಗಳು ಮೂರು ದಿನಗಳಿಂದ ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ಬಾಲಕಿಯ ತಾಯಿ ಪ್ರಶ್ನಿಸಿದ್ದಾರೆ. ಆ ವೇಳೆ ಆಕೆ ತನ್ನನ್ನು ಪರಿಚಯದ ಬಾಲಕನೊಬ್ಬ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿರುವುದನ್ನು ತಿಳಿಸಿದ್ದಳು. ಪರಿಚಯದ ಬಾಲಕ ತನ್ನ ಕಾಲೊನಿಯ ಮನೆಯೊಂದಕ್ಕೆ ಕರೆದಿದ್ದ. ನಾನು ಹೋದಾಗ ಅಲ್ಲಿ ಇನ್ನೂ ನಾಲ್ಕು ಮಂದಿ ಇದ್ದರು. ಬೆದರಿದ ನಾನು ವಾಪಸ್​ ಬರಲು ಯತ್ನಿಸಿದಾಗ ಕೂಡಿ ಹಾಕಿ ಅತ್ಯಾಚಾರ ಮಾಡಿದರು ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

ಇದನ್ನೂ ಓದಿ : ಹಲವು ಜೀವಗಳನ್ನು ಉಳಿಸಿ ಉಸಿರು ತೊರೆದ 16 ತಿಂಗಳ ಮಗು! ಅತ್ಯಂತ ಕಿರಿಯ ವಯಸ್ಸಿನ ಅಂಗದಾನಿ

ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಕಾಲೊನಿಗೆ ಹೋಗಿದ್ದಾರೆ. ಈ ವೇಳೆ ಐವರೂ ಜತೆಯಾಗಿದ್ದರು. ಅವರಲ್ಲಿ ಮೂವರು ಅಪ್ರಾಪ್ತ ವಯಸ್ಸಿನ ಬಾಲಕರನ್ನು ಪೊಲೀಸರು ಸುತ್ತುವರಿದು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಇಬ್ಬರು ಆರೋಪಿಗಳು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ ಎಂದು ಎಚ್ಚರಿಸಿದ್ದ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರಿಗೆ ಯೋಗಿ ಆದಿತ್ಯನಾಥ್‌ ತಿರುಗೇಟು ನೀಡಿದ್ದರು. “ನಾವೇನೂ ಅಣುಬಾಂಬ್‌ಗಳನ್ನು ಫ್ರಿಡ್ಜ್‌ನಲ್ಲಿ ಇರಿಸಲು ತಯಾರಿಸಿಲ್ಲ. ಇದು ಹೊಸ ಭಾರತ. ನಮ್ಮ ತಂಟೆಗೆ ಬಂದರೆ ಯಾರನ್ನೂ ನಾವು ಬಿಡುವುದಿಲ್ಲ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ಭಾರತ ಕಳೆದ 10 ವರ್ಷಗಳಲ್ಲಿ ಕಂಡುಕೊಂಡಿದೆ” ಎಂದು ಹೇಳಿದ್ದರು. ಈಗ ಮೋದಿ ಕೂಡ ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: “ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ಅದರ ಬಳಿ ಅಣು ಬಾಂಬ್‌ಗಳು ಇವೆ. ಹಾಗಾಗಿ, ಪಾಕಿಸ್ತಾನಕ್ಕೆ ಭಾರತ ಗೌರವ ನೀಡಬೇಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನದ ಬಳಿ ಅಣು ಬಾಂಬ್‌ ಇವೆ ಎಂಬುದಾಗಿ ಕಾಂಗ್ರೆಸ್‌ (Congress) ಹೇಳುತ್ತದೆ. ಆದರೆ, ಅವುಗಳನ್ನು ನಿರ್ವಹಣೆ ಮಾಡುವಷ್ಟು ಹಣವೇ ಪಾಕಿಸ್ತಾನದ ಬಳಿ ಇಲ್ಲ” ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ನರೇಂದ್ರ ಮೋದಿ ಮಾತನಾಡಿದರು. “ಪಾಕಿಸ್ತಾನದ ಕುರಿತು ಕಾಂಗ್ರೆಸ್‌ ನಾಯಕರು ಹೆಚ್ಚು ಚಿಂತಿತರಾಗಿದ್ದಾರೆ. ನೆರೆಯ ರಾಷ್ಟ್ರದ ಬಳಿ ಅಣು ಬಾಂಬ್‌ಗಳಿವೆ ಎಂಬುದಾಗಿ ಅವರು ಹೆದರಿಸುತ್ತಾರೆ. ಆದರೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್‌ಗಳಿವೆ ಹಾಗೂ ಅವುಗಳನ್ನು ನಿರ್ವಹಣೆ ಮಾಡಲು ಆಗದಂತಹ, ಅದಕ್ಕೆ ಹಣವೇ ಇಲ್ಲದಂತಹ ಪರಿಸ್ಥಿತಿ ಪಾಕಿಸ್ತಾನಕ್ಕೆ ಎದುರಾಗಿದೆ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ನಾಯಕರನ್ನು ಜನ ಯಾವುದೇ ಕಾರಣಕ್ಕೂ ನಂಬಬಾರದು. ಅವರು ವೋಟ್‌ ಜಿಹಾದ್‌ಗೆ ಕರೆ ನೀಡುತ್ತಾರೆ. ಸಮಾಜವನ್ನು ಒಡೆಯುವುದು ಅವರ ಉದ್ದೇಶವಾಗಿದೆ. ಮಾಫಿಯಾವನ್ನು ಸಮಾಜವಾದಿ ಪಕ್ಷವು ಈಗಲೂ ಬೆಂಬಲಿಸುತ್ತದೆ. ಇನ್ನು, ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡುತ್ತಲೇ ಬಂದಿತು. ಆದರೆ, ಕಾಂಗ್ರೆಸ್‌ ದಾಳಿ ಮಾಡಿದವರಿಗೇ ಕ್ಲೀನ್‌ಚಿಟ್‌ ನೀಡುವ ಮೂಲಕ ತನ್ನ ನಿಲುವು ಯಾರ ಪರ ಎಂಬುದನ್ನು ಸಾಬೀತುಪಡಿಸಿತು” ಎಂದು ಮೋದಿ ಹೇಳಿದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Continue Reading

ದೇಶ

Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Narendra Modi: ದೇಶದ ಸಂವಿಧಾನಕ್ಕೆ ಮೊದಲು ತಿದ್ದುಪಡಿ ತಂದಿದ್ದು ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರು ಅವರು. ಸಂವಿಧಾನಕ್ಕೆ ಧಕ್ಕೆ ತಂದವರು ಯಾರು ಎಂಬ ಪ್ರಶ್ನೆಯನ್ನು ಅವರಿಗೆ ಮೊದಲು ಕೇಳಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲು ತಿದ್ದುಪಡಿ ಮಾಡಿದರು. ಇದಾದ ಬಳಿಕ ಎಲ್ಲ ಪೀಳಿಗೆಗಳ ಕುಟುಂಬಸ್ಥರು ಹಲವು ರೀತಿಯಲ್ಲಿ ಸಂವಿಧಾನಕ್ಕೆ ಧಕ್ಕೆ ತಂದರು ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳುವ ಜತೆಗೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಸಂವಿಧಾನ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಗಾಂಧಿ ಕುಟುಂಬಸ್ಥರ ವಿರುದ್ಧ ನರೇಂದ್ರ ಮೋದಿ ಟೀಕಿಸಿದ್ದಾರೆ. “ನೆಹರು ಅವರಿಂದ ಹಿಡಿದು ರಾಹುಲ್‌ ಗಾಂಧಿವರೆಗೆ ನಾಲ್ಕು ಪೀಳಿಗೆಗಳು (Gandhi Family) ಸಂವಿಧಾನಕ್ಕೆ ಧಕ್ಕೆ ತಂದಿವೆ” ಎಂದು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದ ವೇಳೆ ಪ್ರಸ್ತಾಪಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 400ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದರೆ ಸಂವಿಧಾನ ಬದಲಾಯಿಸುತ್ತದೆ ಎಂಬುದಾಗಿ ಪ್ರತಿಪಕ್ಷಗಳು ಆರೋಪಿಸುತ್ತಿವೆ ಎಂಬ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ದೇಶದ ಸಂವಿಧಾನಕ್ಕೆ ಮೊದಲು ತಿದ್ದುಪಡಿ ತಂದಿದ್ದು ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರು ಅವರು. ಸಂವಿಧಾನಕ್ಕೆ ಧಕ್ಕೆ ತಂದವರು ಯಾರು ಎಂಬ ಪ್ರಶ್ನೆಯನ್ನು ಅವರಿಗೆ ಮೊದಲು ಕೇಳಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲು ತಿದ್ದುಪಡಿ ಮಾಡಿದರು. ಇದಾದ ಬಳಿಕ ಎಲ್ಲ ಪೀಳಿಗೆಗಳ ಕುಟುಂಬಸ್ಥರು ಹಲವು ರೀತಿಯಲ್ಲಿ ಸಂವಿಧಾನದ ಆಶಯಕ್ಕೆ ಧಕ್ಕೆ ತಂದರು” ಎಂದು ಹೇಳಿದರು.

“ಜವಾಹರ ಲಾಲ್‌ ನೆಹರು ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟುಮಾಡಿದರು. ನೆಹರು ಅವರ ಪುತ್ರಿ ಇಂದಿರಾ ಗಾಂಧಿ ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು ನ್ಯಾಯಾಲಯದ ಆದೇಶವನ್ನೇ ಹಿಂದಕ್ಕೆ ತಳ್ಳಿದರು. ಇಂದಿರಾ ಗಾಂಧಿ ಅವರ ಪುತ್ರ ರಾಜೀವ್‌ ಗಾಂಧಿ ಅವರು ಶಾ ಬಾನೋ ಪ್ರಕರಣದಲ್ಲಿ ಕೋರ್ಟ್‌ ತೀರ್ಮಾನವನ್ನೇ ಬದಲಿಸಿದರು. ಇದಕ್ಕಾಗಿ ಅವರು ಸಂವಿಧಾನಕ್ಕೆ ತಿದ್ದುಪಡಿ ತಂದರು. ಇನ್ನು ರಾಹುಲ್‌ ಗಾಂಧಿ ಅವರು ಮನಮೋಹನ್‌ ಸಿಂಗ್‌ ಸರ್ಕಾರವು 2013ರಲ್ಲಿ ಹೊರಡಿಸಿದ್ದ ಸುಗ್ರೀವಾಜ್ಞೆಯ ಪ್ರತಿಯನ್ನೇ ಹರಿದುಹಾಕಿದರು. ಇದೆಲ್ಲ ಸಂವಿಧಾನಕ್ಕೆ ಗಾಂಧಿ ಕುಟುಂಬಸ್ಥರು ತಂದ ಧಕ್ಕೆಯಾಗಿದೆ” ಎಂದು ಮೋದಿ ವಾಗ್ದಾಳಿ ನಡೆಸಿದರು.

“ಹೀಗೆ ಜವಾಹರ ಲಾಲ್‌ ನೆಹರು ಅವರಿಂದ ಹಿಡಿದು ರಾಹುಲ್‌ ಗಾಂಧಿವರೆಗೆ ನಾಲ್ಕೂ ಪೀಳಿಗೆಗಳ ನಾಯಕರು ಸಂವಿಧಾನವನ್ನು ಒಂದಲ್ಲ ಒಂದು ರೀತಿಯಲ್ಲಿ ಹಾಳು ಮಾಡಿದ್ದಾರೆ. ಆದರೆ, ನಮ್ಮ ಸರ್ಕಾರವು ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆ ತರುವುದಿಲ್ಲ. ಇದೇ ಕಾರಣಕ್ಕಾಗಿಯೇ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ನಾನು ಬಿಡುವುದಿಲ್ಲ ಎಂಬುದಾಗಿ ಹೇಳುತ್ತಿದ್ದೇನೆ” ಎಂದು ತಿಳಿಸಿದರು. “ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತಾರೆ. ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ” ಎಂಬುದು ಕಾಂಗ್ರೆಸ್‌ ನಾಯಕರ ಆರೋಪವಾಗಿದೆ.

ಇದನ್ನೂ ಓದಿ: PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Continue Reading

ದೇಶ

Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

Narayana Murthy: ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅವಶ್ಯಕತೆ, ಆಧುನಿಕ ಜಗತ್ತಿನಲ್ಲಿ ಅದರ ಬಳಕೆಯ ವ್ಯಾಪ್ತಿಯನ್ನು ನಾನು ಅರ್ಥ ಮಾಡಿಕೊಳ್ಳುತ್ತಿದ್ದೇನೆ. ಆದರೆ, ಇದು ಮನುಷ್ಯನ ಕೆಲಸಕ್ಕೆ ಪರ್ಯಾಯವಾಗುವುದಿಲ್ಲ. ಮನುಷ್ಯನ ಕೆಲಸದ ಬದಲಾಗಿ ಇದೇ ಕೆಲಸ ಮಾಡುವುದಿಲ್ಲ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ತಿಳಿಸಿದ್ದಾರೆ.

VISTARANEWS.COM


on

Narayana Murthy
Koo

ಬೆಂಗಳೂರು: ಆಧುನಿಕ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವು ಪ್ರಬಲವಾಗುತ್ತಿದೆ. ಅದರಲ್ಲೂ, ಪ್ರಬಂಧ ಬರೆಯುವುದರಿಂದ ಹಿಡಿದು ಕೋಡ್‌ ರಚನೆವರೆಗೆ ಎಐ ಆಧಾರಿತ ಚಾಟ್‌ಬಾಟ್‌ಗಳು (ಚಾಟ್‌ಜಿಪಿಟಿ) ಮನುಷ್ಯನ ಉದ್ಯೋಗಕ್ಕೇ ಕತ್ತರಿ ಹಾಕುತ್ತವೆ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲಕ್ಷಾಂತರ ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ಕಡಿತದ ಕುರಿತು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಕೃತಕ ಬುದ್ಧಿಮತ್ತೆಯಿಂದ ಜನರ ಉದ್ಯೋಗಗಳಿಗೆ ಕತ್ತರಿ ಬೀಳುವುದಿಲ್ಲ” ಎಂದಿದ್ದಾರೆ.

“ಜಗತ್ತಿನಲ್ಲಿ ದೇವರ ಅದ್ಭುತ ಸೃಷ್ಟಿ ಎಂದರೆ ಅದು ಮನುಷ್ಯನ ಮೆದುಳು, ಬುದ್ಧಿಶಕ್ತಿ. 1975ರಲ್ಲೂ ತಂತ್ರಜ್ಞಾನದಲ್ಲಿ ಬದಲಾವಣೆಗಳು ಆದಾಗ ಜನರ ಉದ್ಯೋಗಗಳಿಗೆ ಕತ್ತರಿ ಬೀಳುತ್ತದೆ. ಸಾಫ್ಟ್‌ವೇರ್‌ ಡೆವಲೆಪ್‌ಮೆಂಟ್‌ ಶುರುವಾದಾಗ ಇದು ಮನುಷ್ಯನನ್ನು ಅಪಾಯಕ್ಕೆ ತಳ್ಳುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ, ಕಾಲಾನಂತರದಲ್ಲಿ ಜನರ ಉದ್ಯೋಗಗಳು ಜಾಸ್ತಿಯಾದವೇ ಹೊರತು, ಉದ್ಯೋಗಗಳ ಕೊರತೆ, ಕುಂಠಿತ ಆಗಲಿಲ್ಲ. ಹಾಗಾಗಿ, ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳ ಕಡಿತವಾಗುವುದಿಲ್ಲ. ಅದರಲ್ಲೂ, ಭಾರತವು ತಂತ್ರಜ್ಞಾನದ ಅಳವಡಿಕೆಯಲ್ಲಿ ಒಂದು ಹೆಜ್ಜೆ ಮುಂದಿದೆ. ಭಾರತೀಯರ ಎದುರು ಹಲವು ಸಾಧ್ಯತೆಗಳು ಇವೆ” ಎಂದು ಮನಿ ಕಂಟ್ರೋಲ್‌ಗೆ ನೀಡಿದ ಸಂದರ್ಶನದ ವೇಳೆ ಪ್ರಸ್ತಾಪಿಸಿದ್ದಾರೆ.

“ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅವಶ್ಯಕತೆ, ಆಧುನಿಕ ಜಗತ್ತಿನಲ್ಲಿ ಅದರ ಬಳಕೆಯ ವ್ಯಾಪ್ತಿಯನ್ನು ನಾನು ಅರ್ಥ ಮಾಡಿಕೊಳ್ಳುತ್ತಿದ್ದೇನೆ. ಆದರೆ, ಇದು ಮನುಷ್ಯನ ಕೆಲಸಕ್ಕೆ ಪರ್ಯಾಯವಾಗುವುದಿಲ್ಲ. ಮನುಷ್ಯನ ಕೆಲಸದ ಬದಲಾಗಿ ಇದೇ ಕೆಲಸ ಮಾಡುವುದಿಲ್ಲ. ಮನುಷ್ಯನ ಮೆದುಳಿಗೆ ಸಮನಾಗಿ ಕೆಲಸ ಮಾಡುವ ತಂತ್ರಜ್ಞಾನ ಇದುವರೆಗೆ ಬಂದಿಲ್ಲ. ತಂತ್ರಜ್ಞಾನವು ಮನುಷ್ಯನ ಕೆಲಸವನ್ನು ಸುಲಭಗೊಳಿಸುವ ಸಾಧನವಾಗಿದೆ ಅಷ್ಟೆ. ಇದರಿಂದ ಉದ್ಯೋಗಗಳಿಗೆ ಕತ್ತರಿ ಬೀಳುತ್ತದೆ ಎಂದು ನನಗೆ ಅನಿಸುವುದಿಲ್ಲ” ಎಂದರು.

ಭಾರತದ ಆರ್ಥಿಕತೆಯು ಪ್ರಪಂಚದ ಹಲವು ರಾಷ್ಟ್ರಗಳೊಂದಿಗೆ ಸ್ಪರ್ಧಿಸಬೇಕಾದರೆ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಎನ್.ಆರ್.ನಾರಾಯಣ ಮೂರ್ತಿ ಅವರು ಕೆಲ ತಿಂಗಳ ಹಿಂದೆ ಹೇಳಿದ್ದು ಭಾರಿ ಚರ್ಚೆಗೆ ಕಾರಣವಾಗಿತ್ತು. “ಭಾರತದ ಕೆಲಸದ ಉತ್ಪಾದಕತೆಯು ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ. ಚೀನಾದಂತಹ ದೇಶಗಳೊಂದಿಗೆ ಸ್ಪರ್ಧಿಸಲು, ಭಾರತದ ಯುವಕರು ಹೆಚ್ಚುವರಿ ಗಂಟೆಗಳ ಕೆಲಸವನ್ನು ಮಾಡಬೇಕಾಗುತ್ತದೆ. ಎರಡನೇ ಮಹಾಯುದ್ಧದ ನಂತರ ಜಪಾನ್ ಮತ್ತು ಜರ್ಮನಿ ಯುವಕರು ಇದೇ ರೀತಿ ಮಾಡಿದ್ದರು” ಎಂದಿದ್ದರು. ಇದರ ಕುರಿತು ಪರ-ವಿರೋಧಗಳ ಚರ್ಚೆಯಾಗಿತ್ತು.

ಇದನ್ನೂ ಓದಿ: Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Continue Reading

ಉದ್ಯೋಗ

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Job Alert: ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ (Bandhan Bank) ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ (Bandhan Bank Assistant Notification 2024). 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ (Job Alert).

ವಿದ್ಯಾರ್ಹತೆ ಮತ್ತು ವಯೋಮಿತಿ

ದ್ವಿತೀಯ ಪಿಯುಸಿ ಪಾಸಾದವರು, ಪದವಿ ಪಡೆದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿದರವರು ಅರ್ಜಿ ಸಲ್ಲಿಬಹುದು. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಅಂದರೆ ಅಭ್ಯರ್ಥಿಗಳು 1994ರ ಏಪ್ರಿಲ್‌ 3 ಮತ್ತು 2006ರ ಏಪ್ರಿಲ್‌ 3ರೊಳಗೆ ಜನಿಸಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ

ಸಂದರ್ಶನ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆನ್‌ಲೈನ್‌ ಮೂಲಕ ಸಂದರ್ಶನ ನಡೆಯಲಿದೆ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಕಾರ್ಯ ವೈಖರಿ

ಆಯ್ಕೆಯಾಗುವ ಉದ್ಯೋಗಿಗಳು ಗ್ರಾಹಕರ ಖಾತೆಗಳನ್ನು ನಿರ್ವಹಿಸುವುದು, ಹಣ ವರ್ಗಾವಣೆಗಳು ಮತ್ತು ಠೇವಣಿಗಳನ್ನು ಪ್ರಕ್ರಿಯೆ ನಡೆಸುವುದು, ಡ್ರಾಫ್ಟ್‌ ಮತ್ತು ಚೆಕ್‌ ನೀಡುವುದು, ಲಾಕರ್‌ಗಳ ನಿರ್ವಹಣೆ, ಗ್ರಾಹಕರ ಪ್ರಶ್ನೆಗಳಿಗೆ ಉತ್ತರ ನೀಡುವುದು ಮತ್ತು ಸಮಸ್ಯೆಗಳನ್ನು ಪರಿಹರಿಸುವುದು, ಬ್ಯಾಂಕಿನ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವುದು, ಕ್ಯಾಶ್ ನಿರ್ವಹಣೆ ಮುಂತಾದ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

ಬ್ಯಾಂಕ್‌ ಬಗ್ಗೆ

ಕೋಲ್ಕತ್ತಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಂಧನ್‌ ಬ್ಯಾಂಕ್‌ ದೇಶದ 34 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ. ಬ್ಯಾಂಕ್‌ಗೆ ಸುಮಾರು 2.51 ಕೋಟಿ ಗ್ರಾಹಕರಿದ್ದಾರೆ.

Bandhan Bankನ ಸಹಾಯಕ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸಹಿ, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ಎಚ್‌ಆರ್‌ ವಿಭಾಗದ ಫೋನ್‌ ನಂಬರ್‌: 7501496783 ಅಥವಾ ಇಮೇಲ್‌ hrraj.bankingofficial@gmail.com ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

Continue Reading
Advertisement
HD Revanna case Hearing in Holenarasipura sexual assault case adjourned to Monday
ಹಾಸನ4 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

Kanguva Film Suriya-Bobby Deol's war scene with 10,000 people
ಕಾಲಿವುಡ್7 mins ago

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

karnataka weather Forecast
ಮಳೆ9 mins ago

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Narendra Modi
ದೇಶ10 mins ago

ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

IPL 2024
ಪ್ರಮುಖ ಸುದ್ದಿ12 mins ago

IPL 2024 : ಆರ್​ಸಿಬಿ ವಿರುದ್ಧ ವೇಗದ ಬೌಲರ್​ ಕಣಕ್ಕೆ; ಚೆನ್ನೈ ತಂಡದಲ್ಲಿ ಸಂಭ್ರಮ

SubAir facility
ಕ್ರೀಡೆ23 mins ago

SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

Lokayukta Raid
ಕರ್ನಾಟಕ28 mins ago

Lokayukta Raid: ಲೋಕಾಯುಕ್ತ ದಾಳಿ; 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಎಫ್‌ಡಿಎ

Health Tips Kannada sleepy is good
ಆರೋಗ್ಯ30 mins ago

Health Tips Kannada: ಕೂತಲ್ಲೇ ತೂಕಡಿಸುತ್ತೀರಾ? ಇದು ಒಳ್ಳೆಯದು!

Jr NTR and Prashanth Neel get the title Dragon from Karan
ಬಾಲಿವುಡ್35 mins ago

Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

Narendra Modi
ದೇಶ46 mins ago

Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ11 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌