ತನ್ನ ಅಜ್ಜನಿಗಾದ ಸ್ಥಿತಿ ಯಾರಿಗೂ ಆಗಬಾರದು ಎಂದು ರಸ್ತೆ ಗುಂಡಿಗಳನ್ನೆಲ್ಲ ಏಕಾಂಗಿಯಾಗಿ ಮುಚ್ಚಿದ 13ವರ್ಷದ ಬಾಲಕ - Vistara News

ದೇಶ

ತನ್ನ ಅಜ್ಜನಿಗಾದ ಸ್ಥಿತಿ ಯಾರಿಗೂ ಆಗಬಾರದು ಎಂದು ರಸ್ತೆ ಗುಂಡಿಗಳನ್ನೆಲ್ಲ ಏಕಾಂಗಿಯಾಗಿ ಮುಚ್ಚಿದ 13ವರ್ಷದ ಬಾಲಕ

ಬಾಲಕನ ಹೆಸರು ಮಸೀಲ್​ಮಣಿ. ಈತ ಪುದುಚೇರಿಯ ಸೆಂಧಂತ್ ಏರಿಯಾದ ನಿವಾಸಿ. ಈತನ ಏಕಾಂಗಿ ಹೋರಾಟವನ್ನು ಸ್ಥಳೀಯರೆಲ್ಲ ಶ್ಲಾಘಿಸುತ್ತಿದ್ದಾರೆ. ಜನಪ್ರತಿನಿಧಿಗಳನ್ನು ಇನ್ನಾದೂ ಬುದ್ಧಿಕಲಿಯಲಿ ಎನ್ನುತ್ತಿದ್ದಾರೆ.

VISTARANEWS.COM


on

A boy Repairs Pothole After his Grandfather get Accident In Puducherry
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುದುಚೇರಿ: ರಸ್ತೆ ಗುಂಡಿ ಎಂಬುದು ಜಾಗತಿಕ ಸಮಸ್ಯೆ. ಭಾರತದಲ್ಲಂತೂ ಪ್ರತಿ ರಾಜ್ಯ, ಪ್ರತಿ ಜಿಲ್ಲೆ, ಪ್ರತಿನಗರಗಳಲ್ಲೂ ಒಂದಲ್ಲ ಒಂದು ಕಡೆ ಗುಂಡಿ ಬಿದ್ದ ರಸ್ತೆ (Pothole)ಯನ್ನು ನೋಡಿಯೇ ನೋಡುತ್ತೇವೆ. ಹೀಗೆ ಪುದುಚೇರಿಯಲ್ಲೂ ಕೂಡ ರಸ್ತೆಯಲ್ಲಿ ಗುಂಡಿ ಬಿದ್ದು, ಆ ಗುಂಡಿಯ ಕಾರಣಕ್ಕೆ ಹಿರಿಯ ನಾಗರಿಕರೊಬ್ಬರು ಬೈಕ್​​ನಿಂದ ಬಿದ್ದು ಏಟು ಮಾಡಿಕೊಂಡಿದ್ದಾರೆ. ಇಷ್ಟೇ ಆದರೆ ಅದು ದೊಡ್ಡ ಸುದ್ದಿ ಎಂದು ಹಲವರಿಗೆ ಅನ್ನಿಸಲಿಕ್ಕಿಲ್ಲ, ಆದರೆ ಆ ವಯಸ್ಸಾದ ನಾಗರಿಕ ರಸ್ತೆ ಗುಂಡಿಯಲ್ಲಿ ಬೈಕ್​​ನಿಂದ ಬಿದ್ದ ನಂತರ ಅವರ ಮೊಮ್ಮಗ ಮಾಡಿದ ಕೆಲಸವೀಗ ಸಖತ್​ ಸುದ್ದಿಯಾಗಿದೆ ಮತ್ತು ಆ ಹುಡುಗ ಮಾದರಿ ಎನ್ನಿಸಿದ್ದಾನೆ.

ಬಾಲಕನ ಹೆಸರು ಮಸೀಲ್​ಮಣಿ. ಈತ ಪುದುಚೇರಿಯ ಸೆಂಧಂತ್ ಏರಿಯಾದ ನಿವಾಸಿ. ಆತನ ಅಜ್ಜ ರೈತರು. ಇತ್ತೀಚೆಗೆ ಸ್ಕೂಟರ್​​ನಲ್ಲಿ ಪುದುಚೇರಿ-ಪತುಕನ್ನು ಮಾರ್ಗದಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿದ್ದ ಗುಂಡಿಯ ಕಾರಣಕ್ಕೆ ಬಿದ್ದು ಕಾಲು ಮುರಿದುಕೊಂಡಿದ್ದರು. ಅದನ್ನು ನೋಡಿ ಮಸೀಲ್​ಮಣಿ ತುಂಬ ನೊಂದುಕೊಂಡಿದ್ದ. ತನ್ನ ಅಜ್ಜನಿಗಾದ ಸ್ಥಿತಿ ಇನ್ಯಾರಿಗೂ ಬರಬಾರದು. ಯಾರೂ ಅಪಘಾತಕ್ಕೀಡಾಗಬಾರದು ಎಂಬ ಕಾರಣಕ್ಕೆ, ಆತ ಬಿದ್ದ ಗುಂಡಿಗೆ ಸಿಮೆಂಟ್​ ತುಂಬಲು ನಿರ್ಧರಿಸಿ, ಅದನ್ನು ಒಬ್ಬನೇ ಕಾರ್ಯಗತಗೊಳಿಸಿದ. ಅಷ್ಟೇ ಅಲ್ಲ, ಅಲ್ಲೇ ಅಕ್ಕಪಕ್ಕದಲ್ಲಿದ್ದ ಎಲ್ಲ ಗುಂಡಿಗಳನ್ನೂ ಒಬ್ಬನೇ ಮುಚ್ಚಿದ್ದಾನೆ.

ಇದನ್ನೂ ಓದಿ: ಇಂಜಿನಿಯರ್​​ ಪಾಲಿಗೆ ಸಾವಿನ ಕೂಪವಾದ ರಸ್ತೆ ಗುಂಡಿ; ನಿಯಂತ್ರಣ ತಪ್ಪಿ ಬಿದ್ದ ಯುವತಿ ಮೇಲೆ ಟ್ರಕ್​ ಹರಿದು ದುರ್ಮರಣ

ಈ ಹುಡುಗ ಮೊದಲು ತನ್ನ ಹಳ್ಳಿಯಲ್ಲೆಲ್ಲ ಅಡ್ಡಾಡಿದ. ಒಂದೊಂದು ಕಡೆಗೂ ಬಿದ್ದಿದ್ದ ಮರಳು, ಜಲ್ಲಿಕಲ್ಲು ಅವನಿಗೆ ಸಿಕ್ಕವು. ಸಿಮೆಂಟ್​ ಆ ಹುಡುಗನ ಮನೆಯೇ ಇತ್ತು. ಬೇಕಾದ ವಸ್ತುಗಳನ್ನೆಲ್ಲ ಸಂಗ್ರಹಿಸಿ, ಪುದುಚೇರಿ-ಪತುಕನ್ನು ರಸ್ತೆಯಲ್ಲಿ ಬಿದ್ದಿದ್ದ ಎಲ್ಲ ಗುಂಡಿಗಳನ್ನೂ ಮುಚ್ಚಿದ್ದಾನೆ. ಅವನ ಕಾರ್ಯವನ್ನು ಸ್ಥಳೀಯರು ಶ್ಲಾಘಿಸಿದ್ದಾರೆ. ನೆರೆಹೊರೆಯವರೆಲ್ಲ ಸೇರಿ ಬಾಲಕನಿಗೆ ಶಾಲು ಹೊದೆಸಿ ಸನ್ಮಾನಿಸಿದ್ದಾರೆ. ಇನ್ನು ಮಾಜಿ ಶಾಸಕ ವಯ್ಯಾಪುರಿ ಮಣಿಕ್​ನಂದನ್​ ಅವರು ಒಂದು ಪುಸ್ತಕವನ್ನು ಕೊಟ್ಟು ಅಭಿನಂದಿಸಿದ್ದಾರೆ

ದೇಶ ಮಟ್ಟದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Drugs Smuggling: ಗುಜರಾತ್‌ ಕರಾವಳಿ ಪ್ರದೇಶದಲ್ಲಿ ಕರಾವಳಿ ರಕ್ಷಣಾ ಪಡೆ, ಭ್ರಷ್ಟಾಚಾರ ನಿಗ್ರಹ ದಳ (ATS) ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಹಡಗನ್ನು ವಶಪಡಿಸಿಕೊಳ್ಳಲಾಗಿದೆ. 600 ಕೋಟಿ ರೂ. ಮೌಲ್ಯದ ಮಾದಕವಸ್ತುವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Drugs Smuggling
Koo

ಗಾಂಧಿನಗರ: ಗುಜರಾತ್‌ ಬಳಿಯ ಸಾಗರ ಪ್ರದೇಶದಲ್ಲಿ (Gujarat) ಮಹತ್ವದ ಕಾರ್ಯಾಚರಣೆಯೊಂದನ್ನು ನಡೆಸಲಾಗಿದ್ದು, ಪಾಕಿಸ್ತಾನದ ಹಡಗನ್ನು ತಡೆಯಲಾಗಿದೆ. ಹಡಗಿನಲ್ಲಿ 600 ಕೋಟಿ ರೂ. ಮೌಲ್ಯದ 14 ಕೆ.ಜಿ ಮಾದಕವಸ್ತು ಸಿಕ್ಕಿದ್ದು, ಅಕ್ರಮ ಸಾಗಣೆ ಹಿನ್ನೆಲೆಯಲ್ಲಿ ಪಾಕಿಸ್ತಾನದ (Pakistan) 14 ಜನರನ್ನು ಬಂಧಿಸಲಾಗಿದೆ. ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ಮಾದಕವಸ್ತು ಸಾಗಣೆ (Drugs Smuggling) ಮಾಡಲಾಗುತ್ತಿರುವ ಕುರಿತು ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿದೆ.

ನಿಖರ ಮಾಹಿತಿ ಮೇರೆಗೆ ಕರಾವಳಿ ರಕ್ಷಣಾ ಪಡೆ, ಭ್ರಷ್ಟಾಚಾರ ನಿಗ್ರಹ ದಳ (ATS) ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. “ಪಾಕಿಸ್ತಾನದ 14 ನಾಗರಿಕರನ್ನು ಬಂಧಿಸಲಾಗಿದ್ದು, ಮಾದಕವಸ್ತುವನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಕುರಿತು ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ಕರಾವಳಿ ರಕ್ಷಣಾ ಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಮಾದಕವಸ್ತು ಸಾಗಣೆ ಮಾಡುತ್ತಿದ್ದ ಹಡಗನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳು ಕರಾವಳಿ ರಕ್ಷಣಾ ಪಡೆಯ ಒಂದು ನೌಕೆ ಹಾಗೂ ವಿಮಾನವನ್ನು ಬಳಸಿಕೊಳ್ಳಲಾಗಿದೆ. ರಾಜರತನ್‌ ಎಂಬ ನೌಕೆಯ ಮೂಲಕ ಅಧಿಕಾರಿಗಳು ಬೆನ್ನತ್ತಿ ಪಾಕಿಸ್ತಾನದ ನೌಕೆಯನ್ನು ಹಿಡಿಯಲಾಗಿದೆ. ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಶಂಕಾಸ್ಪದ ಹಡಗನ್ನು ತಡೆದ, ಪರಿಶೀಲನೆ ನಡೆಸಿದಾಗ ಡ್ರಗ್ಸ್‌ ಜಾಲ ಬಯಲಾಗಿದೆ” ಎಂದು ತಿಳಿಸಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಗುಜರಾತ್‌ ಸಾಗರ ಪ್ರದೇಶದಲ್ಲಿ ಇರಾನ್‌ನಿಂದ ಸಾಗಿಸಲಾಗುತ್ತಿದ್ದ ಸುಮಾರು 3 ಸಾವಿರ ಕೆ.ಜಿ ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿತ್ತು. ನೌಕಾಪಡೆಯ ಪ್ರಕಾರ 3,089 ಕಿಲೋಗ್ರಾಂಗಳಷ್ಟು ಚರಸ್, 158 ಕೆಜಿ ಮೆಥಾಂಫೆಟಮೈನ್ ಮತ್ತು 25 ಕೆಜಿ ಮಾರ್ಫಿನ್ ಅನ್ನು ಒಳಗೊಂಡಿರುವ ಈ ಮಾದಕವಸ್ತು ವಶಪಡಿಸಿಕೊಳ್ಳುವಿಕೆಯು ಇತ್ತೀಚಿನ ದಿನಗಳಲ್ಲಿ ಬೃಹತ್‌ ಪ್ರಮಾಣದ್ದಾಗಿದೆ. ಪೋರಬಂದರ್‌ನ ಬಂದರಿನಲ್ಲಿ ನಡೆಸಿದ ಕಾರ್ಯಾಚರಣೆಯ ನಂತರ ಐವರು ವಿದೇಶಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿತ್ತು.

ಫೆಬ್ರವರಿ 27ರಂದು ಬಂಧಿತ ದೋಣಿ, ಸಿಬ್ಬಂದಿ ಮತ್ತು ನಿಷಿದ್ಧ ಮಾದಕ ವಸ್ತುಗಳನ್ನು ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲಾಯಿತು. ಕಣ್ಗಾವಲು ಕಾರ್ಯಾಚರಣೆಯ ಸಮಯದಲ್ಲಿ P8I LRMR ವಿಮಾನವು ಮಾಹಿತಿ ಸಂಗ್ರಹಿಸಿದ್ದು, ನಂತರ ಪ್ರತಿಕ್ರಿಯೆಯಾಗಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಅನುಮಾನಾಸ್ಪದ ದೋಣಿಯನ್ನು ಯಶಸ್ವಿಯಾಗಿ ಪ್ರತಿಬಂಧಿಸಿ ಸೆರೆಹಿಡಿಯಲಾಯಿತು.

ಇದನ್ನೂ ಓದಿ: Student Death: ಅಮೆರಿಕದಲ್ಲಿ ಡ್ರಗ್ಸ್‌ ಗ್ಯಾಂಗ್‌ನಿಂದ ಅಪಹೃತನಾದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

Continue Reading

ದೇಶ

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Trinmool Congress:ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಟಿಎಂಸಿಯ ಕಾರ್ಯಕರ್ತನ ಬರ್ಬರ ಕೊಲೆಯಾಗಿದೆ. ಪ್ರತ್ಯೇಕ ಘಟನೆಯಲ್ಲಿ ಬಿಜೆಪಿ ನಾಯಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

VISTARANEWS.COM


on

Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ (Trinmool Congress)ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಟಿಎಂಸಿ(TMC)ಯ ಕಾರ್ಯಕರ್ತನ ಬರ್ಬರ ಕೊಲೆಯಾಗಿದೆ. ಪ್ರತ್ಯೇಕ ಘಟನೆಯಲ್ಲಿ ಬಿಜೆಪಿ ನಾಯಕಿ(BJP Leader)ಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಬಾಗುಯಾಟಿ ಜಿಲ್ಲೆಯಲ್ಲಿ ಟಿಎಂಸಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತು. ಈ ಘಟನೆಯಲ್ಲಿ ಪೋಟ್ಲಾ ಎಂದೇ ಜನಪ್ರಿಯತೆ ಪಡೆದಿದ್ದ ಟಿಎಂಸಿ ಕಾರ್ಯಕರ್ತ ಸಂಜೀವ್‌ ದಾಸ್‌(Sanjeev Das) ಹತ್ಯೆಯಾಗಿದ್ದಾರೆ.

ನಿನ್ನೆ ತಡರಾತ್ರಿ ಅರ್ಜುನ್‌ಪುರದ ಪಶ್ಚಿಮ್‌ಪುರ ಪ್ರದೇಶದಲ್ಲಿ ಟಿಎಂಸಿಯ ಒಂದು ಬಣ ಕರೆಂಟ್‌ ಕಟ್‌ ಮಾಡಿದ ವಿಚಾರಕ್ಕೆ ಜಗಳ ಶುರುವಾಗಿತ್ತು. ಎರಡೂ ತಂಡಗಳ ಜಗಳ ತಾರಕಕ್ಕೇರಿ ಮಾರಾಮಾರಿ ನಡೆದಿದೆ. ಪರಸ್ಪರ ದೊಣ್ಣೆ, ಕಲ್ಲಿನಿಂದ ಬಡಿದಾಟ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಂಜೀವ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾಗುವ ಮೊದಲೇ ಆತ ಕೊನೆಯುಸಿರೆಳೆದಿದ್ದ. ಇನ್ನು ಘಟನೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯಲ್ಲಿ ಒಟ್ಟು 11 ಕೇಸ್‌ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಲ್ಲೇಟು ಬಿದ್ದು ಕೆಳಗೆ ಬಿದ್ದಿದ್ದ ಸಂಜೀವ್‌ ಮೇಲೆ ದುಷ್ಕರ್ಮಿಗಳು ರಾಡ್‌ನಿಂದ ದಾಳಿ ನಡೆಸಿದ್ದರು ಎನ್ನಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜನರ ವಿರುದ್ಧ ಕೇಸ್‌ ದಾಖಲಾಗಿದ್ದು, ಅವರನ್ನು ಅರೆಸ್ಟ್‌ ಮಾಡಲಾಗಿದೆ. ಘಟನೆ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಸಂಜೀವ್‌ ದಾಸ್‌ ಹತ್ಯೆಗೆ ಖಂಡನೆ ವ್ಯಕ್ತಪಡಿಸಿರುವ ಅವರ ಕುಟುಂಬಸ್ಥರು ದುರ್ಘಟನೆಗೆ ಟಿಎಂಸಿಯನ್ನೇ ಹೊಣೆಯನ್ನಾಗಿದೆ.

ಬಿಜೆಪಿ ನಾಯಕಿ ಮೇಲೆ ಮಾರಣಾಂತಿಕ ಹಲ್ಲೆ

ಮತ್ತೊಂದೆಡೆ ದಕ್ಷಿಣ ಕೋಲ್ಕತಾದ ಆನಂದಪುರದಲ್ಲಿ ಬಿಜೆಪಿ ನಾಯಕಿ ಸರಸ್ವತಿ ಸರ್ಕಾರ್‌ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆದಿದೆ. ಟಿಎಂಸಿ ಕಾರ್ಯಕರ್ತರು ಸರಸ್ವತಿ ಮೇಲೆ ಹರಿತವಾದ ಆಯುಧದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಚುನಾವಣಾ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಟಿಎಂಸಿ ನಾಯಕರ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ. ಆಕೆ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನು ಈ ವಿಡಿಯೋವನ್ನು ಬಿಜೆಪಿ ಐಟಿ ಸೆಲ್‌ ನಿರ್ವಾಹಕ ಅಮಿತ್‌ ಮಾಳವಿಯಾ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತರಾಗಿಲ್ಲ. ಬಿಜೆಪಿ ಕಸ್ಬಾ ಮಂಡಲ ಅಧ್ಯಕ್ಷೆ ಸರಸ್ವತಿ ಸರ್ಕಾರ್‌ ಮೇಲೆ ಟಿಎಂಸಿ ಗೂಂಡಾಗಳು ಹಲ್ಲೆ ಮಾಡಿದ್ದಾರೆ. ಬಂಗಾಳದ ಜನತೆ ಇದಕ್ಕೆ ತಕ್ಕ ಪಾಠ ಕಲಿಸೇ ಕಲಿಸುತ್ತಾರೆ.

ಇದನ್ನೂ ಓದಿ:Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

ಸರಸ್ವತಿ ಗಂಭೀರವಾಗಿ ಗಾಯಗೊಂಡು ಪೊಲೀಸ್‌ ಠಾಣೆಯಲ್ಲಿ ಕುಳಿತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಬ್ಯಾನರ್‌ ಕಟ್ಟುತಿದ್ದ ಬಿಜೆಪಿಯ ಇಬ್ಬರು ಕಾರ್ಯಕರ್ತರ ಮೇಲೆ ಗೂಂಡಾಗಳು ದಾಳಿ ಮಾಡಿದ್ದರು, ಅದನ್ನು ತಡೆಯಲು ಮುಂದಾದ ಸರಸ್ವತಿ ಮೇಲೆ ದಾಳಿ ನಡೆದಿದೆ. ಇನ್ನು ಟಿಎಂಸಿ ಗೂಂಡಾ ವರ್ತನೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

 
    
  


  

   

Continue Reading

ದೇಶ

Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

Amit Shah: ಉತ್ತರ ಪ್ರದೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸುತ್ತದೆ ಎಂಬುದಾಗಿ ಅವರು ಸುಳ್ಳು ಹೇಳುತ್ತಿದ್ದಾರೆ. ಮೋದಿ ಅವರು ಮೀಸಲಾತಿಯ ಬೆಂಬಲಿಗರಾಗಿದ್ದಾರೆ ಎಂದು ಅಮಿತ್‌ ಶಾ ಹೇಳಿದ್ದಾರೆ.

VISTARANEWS.COM


on

Amit Shah
Koo

ಲಖನೌ:‌ ಕರ್ನಾಟಕ, ತೆಲಂಗಾಣದಲ್ಲಿ ಒಬಿಸಿ ಮೀಸಲಾತಿಯನ್ನು ಮುಸ್ಲಿಮರಿಗೆ (Muslims Reservation) ನೀಡಿರುವ ವಿಚಾರವು ಲೋಕಸಭೆ ಚುನಾವಣೆಯ ಪ್ರಮುಖ ವಿಷಯವಾಗಿದೆ. ಮೀಸಲಾತಿ ವಿಷಯವು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಮಧ್ಯೆ ತೀವ್ರ ವಾಗ್ವಾದ, ಟೀಕೆ, ಆಕ್ರೋಶಗಳಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ, “ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಒಬಿಸಿ ಮೀಸಲಾತಿಯನ್ನು (OBC Reservation) ಮತ್ತೆ ಒಬಿಸಿಗೇ ನೀಡಲಾಗುವುದು” ಎಂದು ಅಮಿತ್‌ ಶಾ (Amit Shah) ಪುನರುಚ್ಚರಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಅವರು, “ಬಿಜೆಪಿಯು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುತ್ತದೆ ಎಂಬುದಾಗಿ ರಾಹುಲ್‌ ಗಾಂಧಿ ಅವರು ಸುಳ್ಳು ಹಬ್ಬಿಸುತ್ತಿದ್ದಾರೆ. ಸುಳ್ಳುಗಳಲ್ಲೇ ರಾಹುಲ್‌ ಗಾಂಧಿ ಅವರು ಚುನಾವಣೆ ಮುಗಿಸುತ್ತಿದ್ದಾರೆ. ಆದರೆ, ಒಂದು ನೆನಪಿರಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಅಷ್ಟೇ ಅಲ್ಲ, ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲ್ಲ ಹಾಗೂ ಬೇರೆಯವರಿಗೂ ಬಿಡಲ್ಲ. ಇದು ಮೋದಿ ಅವರ ಗ್ಯಾರಂಟಿಯಾಗಿದೆ” ಎಂಬುದಾಗಿ ಅಮಿತ್‌ ಶಾ ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿಯನ್ನು ಬೆಂಬಲಿಸುತ್ತಾರೆ. ನರೇಂದ್ರ ಮೋದಿ ಸರ್ಕಾರ 400 ಕ್ಷೇತ್ರಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಿರುವ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗೆ ನೀಡಲಾಗುತ್ತದೆ. ಇದು ಮೋದಿ ಅವರ ಗ್ಯಾರಂಟಿಯಾಗಿದೆ. ರಾಹುಲ್‌ ಗಾಂಧಿ ಅವರಿಗೆ ವಾಸ್ತವದ ಅರಿವಿಲ್ಲ. ಕೇಂದ್ರದಲ್ಲಿ ಎರಡು ಅವಧಿಯಲ್ಲಿ ಬಿಜೆಪಿಯೇ ಬಹುಮತದ ಸರ್ಕಾರ ರಚಿಸಿ, ಆಡಳಿತ ನಡೆಸಿದೆ ಎಂಬುದರ ಅರಿವಿಲ್ಲ. ಎರಡು ಅವಧಿ ಆಡಳಿತ ನಡೆಸಿದರು ಬಿಜೆಪಿಯು ಮೀಸಲಾತಿಯನ್ನು ತೆಗೆದಿಲ್ಲ” ಎಂದು ತಿಳಿಸಿದರು.

ಮೀಸಲಾತಿ ಕುರಿತ ಚರ್ಚೆಯ ಮಧ್ಯೆಯೇ, ಆರ್‌ಎಸ್‌ಎಸ್‌ ಮೀಸಲಾತಿಯನ್ನು ಬೆಂಬಲಿಸುತ್ತದೆ ಎಂದು ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ ಎಂದು ಹೇಳಿರುವ ವಿಡಿಯೊ ಹರಿದಾಡುತ್ತಿದೆ. ಆದರೆ, ಸಂಘ ಪರಿವಾರವು ಮೊದಲಿನಿಂದಲೂ ಮೀಸಲಾತಿಯನ್ನು ಬೆಂಬಲಿಸುತ್ತಲೇ ಬಂದಿದೆ. ಮುಂದಿನ ದಿನಗಳಲ್ಲೂ ಆರ್‌ಎಸ್‌ಎಸ್‌ ಮೀಸಲಾತಿಯನ್ನು ಬೆಂಬಲಿಸುತ್ತದೆ. ಸಮುದಾಯಗಳಿಗೆ ಎಲ್ಲಿಯವರೆಗೆ ಮೀಸಲಾತಿಯ ಅವಶ್ಯಕತೆ ಇದೆಯೋ, ಅಲ್ಲಿಯವರೆಗೆ ಮೀಸಲಾತಿಯನ್ನು ಮುಂದುವರಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Continue Reading

ದೇಶ

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Mohan Bhagwat: ಸಾಂವಿಧಾನಿಕವಾಗಿ ನೀಡಿರುವ ಎಲ್ಲ ಮೀಸಲಾತಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘವು ಬೆಂಬಲಿಸುತ್ತಿದೆ. ಮೊದಲು ಕೂಡ ಬೆಂಬಲಿಸಿದೆ. ಈಗಲೂ ಬೆಂಬಲ ನೀಡುತ್ತದೆ ಎಂಬುದಾಗಿ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಮೀಸಲಾತಿ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ತಿಕ್ಕಾಟ ಶುರುವಾಗಿರುವ ಮಧ್ಯೆಯೇ ಮೋಹನ್‌ ಭಾಗವತ್‌ ಹೇಳಿಕೆ ಪ್ರಾಮುಖ್ಯ ಪಡೆದಿದೆ.

VISTARANEWS.COM


on

Mohan Bhagwat
Koo

ಹೈದರಾಬಾದ್: ಕರ್ನಾಟಕದಲ್ಲಿ ಇತರೆ ಹಿಂದುಳಿದ ವರ್ಗಗಳ (OBC) ಮೀಸಲಾತಿಯನ್ನು ರಾಜ್ಯ ಸರ್ಕಾರವು ಮುಸ್ಲಿಮರಿಗೆ ನೀಡಿರುವುದು ದೇಶ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಇದು ಲೋಕಸಭೆ ಚುನಾವಣೆಯ (Lok Sabha Election 2024) ಪ್ರಮುಖ ಚರ್ಚೆಯ ವಿಷಯವಾಗಿದೆ. ಮೀಸಲಾತಿ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಮಧ್ಯೆ ತೀವ್ರ ವಾಗ್ವಾದ ನಡೆಯುತ್ತಿದೆ. ಇದರ ಬೆನ್ನಲ್ಲೇ, “ರಾಷ್ಟ್ರೀಯ ಸ್ವಯಂಸೇವಕ ಸಂಘವು (RSS) ಮೀಸಲಾತಿಯನ್ನು (Reservation) ಬೆಂಬಲಿಸುತ್ತದೆ” ಎಂಬುದಾಗಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ ಎಂದು ಹೇಳಿರುವ ವಿಡಿಯೊ ಹರಿದಾಡುತ್ತಿದೆ. ಆದರೆ, ಸಂಘ ಪರಿವಾರವು ಮೊದಲಿನಿಂದಲೂ ಮೀಸಲಾತಿಯನ್ನು ಬೆಂಬಲಿಸುತ್ತಲೇ ಬಂದಿದೆ. ಮುಂದಿನ ದಿನಗಳಲ್ಲೂ ಆರ್‌ಎಸ್‌ಎಸ್‌ ಮೀಸಲಾತಿಯನ್ನು ಬೆಂಬಲಿಸುತ್ತದೆ. ಸಮುದಾಯಗಳಿಗೆ ಎಲ್ಲಿಯವರೆಗೆ ಮೀಸಲಾತಿಯ ಅವಶ್ಯಕತೆ ಇದೆಯೋ, ಅಲ್ಲಿಯವರೆಗೆ ಮೀಸಲಾತಿಯನ್ನು ಮುಂದುವರಿಸಬೇಕು” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ ಕುರಿತು ಜನರಿಗೆ ತಪ್ಪು ಕಲ್ಪನೆಗಳಿವೆ. ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ. ಆದರೆ, ಹೊರಗಡೆ ಆ ಕುರಿತು ಹೇಳುವುದಿಲ್ಲ ಅಷ್ಟೆ ಎಂಬಂತೆ ಬಿಂಬಿಸಲಾಗುತ್ತಿದೆ. ಸಾಂವಿಧಾನಿಕವಾಗಿ ನೀಡಲಾಗಿರುವ ಮೀಸಲಾತಿಯನ್ನು ನಾವು ಬೆಂಬಲಿಸುತ್ತೇವೆ. ಇದರಿಂದ ಸಮುದಾಯಗಳಿಗೆ ಅಗತ್ಯ ಸೌಕರ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಹಾಗಾಗಿ, ಯಾರೂ ಆರ್‌ಎಸ್‌ಎಸ್‌ ಕುರಿತು ತಪ್ಪು ಮಾಹಿತಿಯನ್ನು ಹರಡಬಾರದು” ಎಂಬುದಾಗಿ ಮೋಹನ್‌ ಭಾಗವತ್‌ ಮನವಿ ಮಾಡಿದರು.

ಕೆಲ ದಿನಗಳ ಹಿಂದಷ್ಟೇ ರಾಹುಲ್‌ ಗಾಂಧಿ ಅವರು ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದೇಶದ ವೈವಿಧ್ಯತೆಯನ್ನು ಹಾಳು ಮಾಡುತ್ತವೆ. ಸಂವಿಧಾನವನ್ನು ಬದಲಾಯಿಸುವುದು ಬಿಜೆಪಿಯ ಕುತಂತ್ರವಾಗಿದೆ. ಜನ ಧರ್ಮ, ಸಮುದಾಯಗಳ ಆಚರಣೆಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವ ಮೂಲಕ ಸಮಾಜದಲ್ಲಿ ಸಂಘರ್ಷ ಉಂಟುಮಾಡಿದೆ” ಎಂದು ವಯನಾಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Lok Sabha Election 2024 ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಸತ್ಯ; ನಮ್ಮ ಬಳಿ ದಾಖಲೆ ಇದೆ ಎಂದ ಪ್ರಲ್ಹಾದ್‌ ಜೋಶಿ

Continue Reading
Advertisement
POCSO Case 7 year old girl attempted to rape on pretext of giving her chocolates
ಕರ್ನಾಟಕ4 mins ago

POCSO Case: ಚಾಕೋಲೆಟ್‌ ಕೊಡೋದಾಗಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರು ಯುವಕರಿಗೆ ಧರ್ಮದೇಟು

Ishan Kishan
ಕ್ರೀಡೆ27 mins ago

Ishan Kishan: ಐಪಿಎಲ್​ ನೀತಿ ಸಂಹಿತೆ ಉಲ್ಲಂಘನೆ; ಇಶಾನ್​ ಕಿಶನ್​ಗೆ ಬಿತ್ತು ದಂಡದ ಬರೆ

5 PM for 5 years if Congress comes to power says PM Narendra Modi
Lok Sabha Election 202428 mins ago

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

Summer Fashion
ಫ್ಯಾಷನ್42 mins ago

Summer Fashion: ಬೇಸಿಗೆಯಲ್ಲಿ ಕ್ರಾಪ್‌ ಟೀ ಶರ್ಟ್‌ ಸ್ಟೈಲಿಂಗ್‌ಗೆ 3 ಐಡಿಯಾ

Drugs Smuggling
ದೇಶ47 mins ago

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Shiva Rajkumar Graces Muhurtha Of Father Kannada Movie
ಸ್ಯಾಂಡಲ್ ವುಡ್48 mins ago

Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

Hassan Pen Drive Case
ಕರ್ನಾಟಕ55 mins ago

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202460 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ದೇಶ1 hour ago

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Crime News
ವೈರಲ್ ನ್ಯೂಸ್1 hour ago

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202460 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20246 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ9 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌