Women's Reservation Bill : ರಾಜೀವ್​ ಗಾಂಧಿಯಿಂದ ಹಿಡಿದು ಮೋದಿಯವರೆಗೆ; ಮಹಿಳಾ ಮೀಸಲಾತಿ ವಿಧೇಯಕ ಸಾಗಿ ಬಂದ ಹಾದಿ - Vistara News

ದೇಶ

Women’s Reservation Bill : ರಾಜೀವ್​ ಗಾಂಧಿಯಿಂದ ಹಿಡಿದು ಮೋದಿಯವರೆಗೆ; ಮಹಿಳಾ ಮೀಸಲಾತಿ ವಿಧೇಯಕ ಸಾಗಿ ಬಂದ ಹಾದಿ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಮಸೂದೆಯನ್ನು (Women’s Reservation Bill) ಅಂಗೀಕರಿಸಿದ ಕೀರ್ತಿಯನ್ನು ಪಡೆಯುತ್ತದೆ. ಆದರೆ ಈ ಹಿಂದೆ ಸತತ ಸರ್ಕಾರಗಳು ಭಾರತೀಯ ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯದ ಪ್ರಶ್ನೆಯನ್ನು ಚರ್ಚಿಸಿವೆ.

VISTARANEWS.COM


on

women's Reservation bill
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಸೋಮವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ (Women’s Reservation Bill) ಅಂಗೀಕರಿಸಿದೆ. ಮಹಿಳೆಯರಿಗೆ ಸಂಸತ್ತಿನಲ್ಲಿ ಶೇಕಡಾ 33ರಷ್ಟು ಮೀಸಲಾತಿ ನೀಡುವ ಈ ಮಸೂದೆ ಇದಾಗಿದೆ. ಅಂದರೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಕಲ್ಪಿಸಲಿದೆ. ಇದು ಭಾರತೀಯ ರಾಜಕೀಯದಲ್ಲಿ ದೀರ್ಘಕಾಲದಿಂದ ಬಿಸಿಬಿಸಿ ಚರ್ಚೆಗೆ ಕಾರಣವಾದ ವಿಷಯವೂ ಹೌದು.

ಲೋಕ ಸಭೆ ಚುನಾವಣೆ ಸಮೀಪವಿರುವ ಕಾರಣ ಮೋದಿ ಸರ್ಕಾರವು ಮಹಿಳೆಯರ ಮತದ ಮೇಳೆ ಕಣ್ಣಿಟ್ಟು ವಿಧೇಯಕ ಮಂಡಿಸುತ್ತಿದೆ ಎಂಬ ವಿಶ್ಲೇಷಣೆಯೂ ಇದೆ. ಆದಾಗ್ಯೂ ಮಸೂದೆಯು ದೀರ್ಘಕಾಲದಿಂದ ಆಗಾಗ ಮುನ್ನಲೆಗೆ ಬರುತ್ತಿತ್ತು ಪುರುಷ ಪ್ರಾಬಲ್ಯದ ಪಕ್ಷಗಳು ಮಾತ್ರ ಇದನ್ನು ನಿರಂತರ ವಿರೋಧಿಸಿದ್ದವು. ಹೀಗಾಗಿ ಎಂದೋ ಜಾರಿಯಾಗಬೇಕಾಗಿದ್ದ ಕಾನೂನು ಇಷ್ಟೊಂದು ವಿಳಂಬವಾಗಿದೆ. 2014 ಮತ್ತು 2019ರ ಚುನಾವಣಾ ಪ್ರಣಾಳಿಕೆಯಲ್ಲಿ ಸ್ವತಃ ಬಿಜೆಪಿಯೇ ಕಾಯಿದೆ ಮಾಡುವ ಭರವಸೆ ಕೊಟ್ಟಿತ್ತು. ಮೋದಿ ಎರಡೂ ಅವಧಿಯಲ್ಲಿ ಪೂರ್ಣ ಬಹುಮತದ ಸರ್ಕಾರವನ್ನು ಮುನ್ನಡೆಸಿದ್ದರು. ಆದಾಗ್ಯೂ ಅಧಿಕಾರ ಹಿಡಿದು 10ನೇ ವರ್ಷ ಸಾಗುತ್ತಿರುವ ಅವಧಿಯಲ್ಲಿ ವಿಧೇಯಕ ಮಂಡಿಸಿದೆ. ಬಹುಮತ ಸರ್ಕಾರವಾಗಿರುವ ಕಾರಣ ಕಾಯಿದೆಯಾಗುವುದು ನಿಶ್ಚಿತ. ಇವೆಲ್ಲದರ ನಡುವೆಯೂ ಈ ಹಿಂದೆ ರಾಜೀವ್ ಗಾಂಧಿ, ಪಿ.ವಿ.ನರಸಿಂಹ ರಾವ್, ಕರ್ನಾಟಕದವರೇ ಆದ ಎಚ್.ಡಿ.ದೇವೇಗೌಡ ಅವರೂ ಮಹಿಳಾ ಪ್ರಾತಿನಿಧ್ಯ ನೀಡಲು ಈ ಕಾಯಿದೆಗೆ ತಮ್ಮ ಕೊಡುಗೆಗಳನ್ನು ನೀಡಿದ್ದಾರೆ ಎಂಬುದನ್ನು ಇಲ್ಲಿ ಉಲ್ಲೇಖಿಸಲೇಬೇಕು.

ಮೀಸಲಾತಿಯ ಬಗ್ಗೆ ಚರ್ಚೆಗಳು ಸ್ವಾತಂತ್ರ್ಯ ಪೂರ್ವದಿಂದಲೂ ಇದ್ದರೂ, 1987ರಲ್ಲಿ ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೊದಲ ಬಾರಿಗೆ ಇದನ್ನು ಪ್ರಸ್ತಾಪಿಸಿತ್ತು.

ಇದನ್ನೂ ಓದಿ : Women’s Reservation Bill: ಮಹಿಳಾ ಮೀಸಲು ವಿಧೇಯಕ ಮಂಡನೆ! ಹೊಸ ಸಂಸತ್ತಿನ ಮೊದಲ ಬಿಲ್ ಇದು

ಮಹಿಳಾ ಮೀಸಲಾತಿ ವಿಧೇಯಕದ ಸಾಗಿ ಹಾದಿಯ ಸಂಕ್ಷಿಪ್ತ ವಿವರ ಇಲ್ಲಿದೆ

  • 1987ರಲ್ಲಿ ಆಗಿನ ಪ್ರಧಾನಿ ರಾಜೀವ್ ಗಾಂಧಿ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ಸಚಿವೆ ಮಾರ್ಗರೇಟ್ ಆಳ್ವ ನೇತೃತ್ವದಲ್ಲಿ 14 ಸದಸ್ಯರ ಸಮಿತಿ ರಚಿಸಿತ್ತು. ಈ ಸಮಿತಿಯು ಮಹಿಳಾ ಪ್ರಾತಿನಿಧ್ಯದ ಕುರಿತು ಅಧ್ಯಯನ ನಡೆಸಿತ್ತು. ಸಮಿತಿಯು ಮಾಡಿದ 353 ಶಿಫಾರಸುಗಳಲ್ಲಿ ಪ್ರಮುಖವಾದದ್ದು ಚುನಾವಣಾ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಸ್ಥಾನಗಳ ಮೀಸಲಾತಿ ಕಲ್ಪಿಸುವುದು.
  • 1992 ರಲ್ಲಿ, ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರ ಸರ್ಕಾರವು 73 ಮತ್ತು 74 ನೇ ಸಾಂವಿಧಾನಿಕ ತಿದ್ದುಪಡಿ ಕಾಯ್ದೆಗಳನ್ನು ಅಂಗೀಕರಿಸಿತು. ಇದು ದೇಶಾದ್ಯಂತ ಅಧ್ಯಕ್ಷರ ಕಚೇರಿ ಸೇರಿದಂತೆ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡಾ 33.3 ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸಿತು.
  • 1996 ರಲ್ಲಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸರ್ಕಾರವು ಮೊದಲ ಮಹಿಳಾ ಮೀಸಲಾತಿ ವಿಧೇಯಕ ಮಂಡಿಸಿತ್ತು. ಸಂವಿಧಾನ (81 ನೇ ತಿದ್ದುಪಡಿ) ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳಲ್ಲಿ ಮೀಸಲಾತಿ ಕಲ್ಪಿಸುವುದಾಗಿತ್ತು.
  • ಮಹಿಳಾ ಮೀಸಲಾತಿ ವಿಧೇಯಕವು ಹಿಂದುಳಿದ ವರ್ಗಗಳ ಮಹಿಳೆಯರಿಗೂ ಸಮಾನ ಪ್ರಯೋಜನ ನೀಡುತ್ತದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು. ಅಧ್ಯಯನಕ್ಕಾಗಿ ಮಮತಾ ಬ್ಯಾನರ್ಜಿ, ಸುಷ್ಮಾ ಸ್ವರಾಜ್, ನಿತೀಶ್ ಕುಮಾರ್, ಶರದ್ ಪವಾರ್ ಮತ್ತು ಇತರ ಪಕ್ಷಗಳ ಹಲವಾರು ಹಿರಿಯ ನಾಯಕರನ್ನು ಒಳಗೊಂಡ 21 ಸದಸ್ಯರ ಸಂಸತ್ತಿನ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ವರದಿಯ ನಂತರ ಅದೇ ವರ್ಷ ಮಸೂದೆಯನ್ನು ಮತ್ತೆ ಮಂಡಿಸಲಾಯಿತು. ಆದರೆ ಆ ಬಾರಿ ಅದಕ್ಕೆ ರಾಜಕೀಯ ಇಚ್ಛಾಶಕ್ತಿಯ ನೆರವು ದೊರೆಯಲಿಲ್ಲ.
  • 1997ರಲ್ಲಿ ದೇವೇಗೌಡರಿಂದ ಅಧಿಕಾರ ವಹಿಸಿಕೊಂಡ ಐ.ಕೆ.ಗುಜ್ರಾಲ್ ಅವರ ಅಡಿಯಲ್ಲಿ, ಸರ್ಕಾರವು ಎರಡು ಸುತ್ತಿನ ಸರ್ವಪಕ್ಷ ಸಭೆಗಳನ್ನು ನಡೆಸಿತು. ಮೇ 1997 ರಲ್ಲಿ ಮಸೂದೆಯನ್ನು ಮತ್ತೆ ಕೈಗೆತ್ತಿಕೊಂಡಾಗ ಒಬಿಸಿ ನಾಯಕರಿಂದ ವಿರೋಧ ಎದುರಾಯಿತು. ಎಸ್ಸಿ-ಎಸ್ಟಿ ಮಹಿಳೆಯರಂತೆ ಒಬಿಸಿ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೆ, ವಿಧೇಯಕ ವ್ಯರ್ಥ ಎಂಬುದೇ ಅವರ ಆಕ್ಷೇಪವಾಗಿತ್ತು.
  • 1997ರಲ್ಲಿ, ರಾಜೀವ್ ಗಾಂಧಿ ಹತ್ಯೆಯ ಬಗ್ಗೆ ನ್ಯಾಯಮೂರ್ತಿ ಎಂ.ಸಿ.ಜೈನ್ ಆಯೋಗದ ವರದಿಯ ಬಗ್ಗೆ ಆಕ್ರೋಶ ವ್ಯಕ್ತಗೊಂಡಿತು. ಇದರ ಪರಿಣಾಮವಾಗಿ ಕಾಂಗ್ರೆಸ್ ಪಕ್ಷ ಐಕೆ ಗುಜ್ರಾಲ್​ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿತು. ಈ ವೇಳೆ ವಿಧೇಯಕ ರದ್ದಾಯಿತು.
  • 1998 ರಲ್ಲಿ, ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯ ಸುಮಿತ್ರಾ ಮಹಾಜನ್ ಅವರಂತಹ ನಾಯಕಿಯರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರವು ಮೀಸಲಾತಿ ಮಸೂದೆ ಅಂಗೀಕರಿಸಬೇಕೆಂದು ಒತ್ತಾಯಿಸಿದರು. ವಿಧೇಯಕ ಮಂಡಿಸಲು ಕಾನೂನು ಸಚಿವ ಎಂ.ತಂಬಿ ದುರೈ ಎದ್ದು ನಿಂತಾಗ ಮತ್ತು ಆರ್​ಜೆಡಿ ಸಂಸದ ಸುರೇಂದ್ರ ಪ್ರಕಾಶ್ ಯಾದವ್ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಕರಡು ಪ್ರತಿಯನ್ನು ತಂಬಿ ದುರೈ ಅವರ ಕೈಯಿಂದ ಕಿತ್ತು ಹರಿದು ಹಾಕಿದ್ದರು. ಅದಕ್ಕೆ ಲಾಲು ಪ್ರಸಾದ್ ಮತ್ತು ಮುಲಾಯಂ ಸಿಂಗ್ ಯಾದವ್ ಅವರಂತಹ ಒಬಿಸಿ ನಾಯಕರ ಬೆಂಬಲವಿತ್ತು. 1998ರ ಡಿಸೆಂಬರ್​ನಲ್ಲಿ ಈ ವಿಧೇಯಕವನ್ನು ಮಂಡಿಸಲೇಬೇಕು ಎಂದು ಪಟ್ಟು ಹಿಡಿದಿದ್ದ ಮಮತಾ ಬ್ಯಾನರ್ಜಿ ಸ್ಪೀಕರ್​ ಮೇಜಿನ ಕಡೆಗೆ ಹೋಗುತ್ತಿದ್ದ ವೇಳೆ ಸಮಾಜವಾದಿ ಪಕ್ಷದ ನಾಯಕ ದರೋಗಾ ಪ್ರಸಾದ್ ಸರೋಜ್ ತಡೆದಿದ್ದರು. ಈ ವೇಳೆ ಮಮತಾ ಬ್ಯಾನರ್ಜಿ ಅವರ ಕಾಲರ್​​ಪಟ್ಟಿ ಹಿಡಿದು ಎಳೆದಿದ್ದು ದೊಡ್ಡ ಸುದ್ದಿಯಾಗಿತ್ತು.
  • 1999ರಲ್ಲಿ ಜಯಲಲಿತಾ ಅವರು ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡ ನಂತರ ಲೋಕಸಭೆಯನ್ನು ವಿಸರ್ಜಿಸಲಾಯಿತು. ಈ ವೇಳೆ ಮಸೂದೆ ಮತ್ತೆ ರದ್ದಾಯಿತು. ಮತ್ತೆ ವಾಜಪೇಯಿ ನೇತೃತ್ವ ಕೇಂದ್ರ ಸರ್ಕಾರ ಆಯ್ಕೆಯಾಗಿ ಅದೇ ವರ್ಷದ ಚಳಿಗಾಲದ ಅಧಿವೇಶನದಲ್ಲಿ, ಕಾನೂನು ಸಚಿವ ಸಚಿವ ರಾಮ್ ಜೇಠ್ಮಲಾನಿ ಅವರ ಮೂಲಕ 85 ನೇ ತಿದ್ದುಪಡಿಗೆ ಅನುಮೋದನೆ ನೀಡಲಾಯಿತು. ಈ ವೇಳೆಯೂ ಆರ್​ಜೆಡಿ ಹಾಗೂ ಎಸ್ಪಿ ನಾಯಕರು ಕಲಾಪದಲ್ಲಿ ದೊಂಬಿ ಎಬ್ಬಿಸಿದ್ದರು.
  • ಆ ಬಳಿಕದ ವರ್ಷಗಳಲ್ಲಿ ಈ ವಿಷಯವು ಬಿಕ್ಕಟ್ಟಿನಲ್ಲೇ ಉಳಿಯಿತು. ಚುನಾವಣಾ ಆಯೋಗವು 2000ರಲ್ಲಿ ಮಹಿಳಾ ಮೀಸಲಾತಿಯ ಬಗ್ಗೆ ರಾಜಕೀಯ ಪಕ್ಷಗಳ ಅಭಿಪ್ರಾಯವನ್ನು ಕೇಳಿತು.
  • 2003ರಲ್ಲಿ, ವಾಜಪೇಯಿ ಸರ್ಕಾರವು ಸರ್ವಪಕ್ಷ ಸಭೆಯನ್ನು ಕರೆಯಿತು. ಇದರಲ್ಲಿ ಪ್ರಧಾನಿ ವಾಜಪೇಯಿ ಅವರು ಮತ್ತೊಮ್ಮೆ ಮೀಸಲಾತಿಗೆ ಒಮ್ಮತ ಮತ್ತು ಬೆಂಬಲವನ್ನು ಗಳಿಸಲು ಪ್ರಯತ್ನಿಸಿದರು. ಅಲ್ಲೂ ಅವರು ವಿಫಲರಾದರು.
  • ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜೀವ್ ಗಾಂಧಿ ಅವರ ಪ್ರಯತ್ನಗಳನ್ನು ಮುಂದುವರಿಸಿದರು. 2005ರಲ್ಲಿ ಬೆಂಬಲ ಪಡೆಯುವ ಉದ್ದೇಶದಿಂದ ಸೋನಿಯಾ ಗಾಂಧಿ ಅವರು ಎಡ ಪಕ್ಷಗಳೊಂದಿಗೆ ಸಭೆ ನಡೆಸಿದ್ದರು. ಮಹಿಳಾ ಮೀಸಲಾತಿ ಮಸೂದೆಯನ್ನು ಮರಳಿ ತರುವುದು ಸೇರಿದಂತೆ ಮೂರು ವಿಷಯಗಳ ಬಗ್ಗೆ ಒಮ್ಮತವನ್ನು ಗಳಿಸಲು ಮನಮೋಹನ್ ಸಿಂಗ್ ಅವರು ಬಿಜೆಪಿಯ ನೆರವನ್ನೂ ಕೋರಿದ್ದರು.
  • 2008 ರಲ್ಲಿ ಮನಮೋಹನ್​ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಎಲ್ಲಾ ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಮಹಿಳೆಯರಿಗೆ ಕಾಯ್ದಿರಿಸಲು ಸಂವಿಧಾನ (108 ನೇ ತಿದ್ದುಪಡಿ) ಕಾಯಿದೆ 2008 ಅನ್ನು ರಾಜ್ಯಸಭೆಯಲ್ಲಿ ಮಂಡಿಸಿತ . 2010ರಲ್ಲಿ ಸಿಂಗ್ ಅವರ ಕ್ಯಾಬಿನೆಟ್ ವಿಧೇಯಕವನ್ನು ಅನುಮೋದಿಸಿತು. ರಾಜ್ಯಸಭೆಯಲ್ಲಿಯೂ ಅಂಗೀಕರಿಸಲಾಯಿತು. ಆದಾಗ್ಯೂ, ಇದು ಲೋಕಸಭೆಯಲ್ಲಿ ಮಂಡನೆಯಾಗಲೇ ಇಲ್ಲ. ಲೋಕ ಸಭೆಯ ವಿಸರ್ಜನೆ ಬಳಿಕ ವಿಧೇಯಕಕ್ಕೆ ಮತ್ತೆ ತೊಡಕುಂಟಾಯಿತು.
  • 2013ರಲ್ಲಿ ಮನ್​ಮೋಹನ್​ ಸಿಂಗ್ ನೇತೃತ್ವದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಮಹಿಳೆಯರ ಸ್ಥಿತಿಯ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚಿಸಿತು. ಚುನಾವಣಾ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಸ್ಥಾನಗಳನ್ನು ಕಾಯ್ದಿರಿಸಬೇಕು ಎಂದು ಶಿಫಾರಸು ಮಾಡಿತು.
  • 2014ರಿಂದ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ (2014, 2019) ಮಹಿಳಾ ಮೀಸಲಾತಿಯ ಭವರಸೆ ನೀಡುತ್ತಲೇ ಬಂದಿದೆ. ಅಂತಿಮವಾಗಿ ಇದೀಗ ಮಂಡನೆ ಮಾಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Jayant Sinha: ವೋಟೂ ಹಾಕಿಲ್ಲ..ಪ್ರಚಾರಕ್ಕೂ ಬಂದಿಲ್ಲ; ಜಯಂತ್‌ ಸಿನ್ಹಾಗೆ ಬಿಜೆಪಿ ಶೋಕಾಸ್‌ ನೊಟೀಸ್‌

Jayant Sinha:ಈ ಬಾರಿ ಜಯಂತ್‌ ಸಿನ್ಹಾ ಬದಲಿಗೆ ಮನೀಶ್ ಜೈಸ್ವಾಲ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಅಭ್ಯರ್ಥಿಯ ಘೋಷಣೆಯಾದ ಬಳಿಕ ಜಯಂತ್ ಸಿನ್ಹಾ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಇದಕ್ಕೂ ಮುನ್ನ ಮಾರ್ಚ್ ನಲ್ಲಿ ಟ್ವೀಟ್ ಮಾಡಿದ್ದ ಜಯಂತ್ ಸಿನ್ಹಾ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದೇ ಇರುವ ಇಂಗಿತ ವ್ಯಕ್ತಪಡಿಸಿದ್ದರು.

VISTARANEWS.COM


on

Jayant Sinha
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯಲ್ಲಿ ಈ ಬಾರಿ ಟಿಕೆಟ್‌ ಸಿಗದೇ ಬೇಸರಗೊಂಡು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಕೇಂದ್ರ ಸಚಿವ, ಸಂಸದ ಜಯಂತ್ ಸಿನ್ಹಾ(Jayant Sinha)ಗೆ ಬಿಜೆಪಿ ಶೋಕಾಸ್‌ ನೊಟೀಸ್(Show cause Notice) ಜಾರಿ ಮಾಡಿದೆ. ಜಯಂತ್‌ ಸಿನ್ಹಾ ನಿನ್ನೆ ನಡೆದಿದ್ದ 5 ನೇ ಹಂತದ ಚುನಾವಣೆ(Fifth phase Election) ವೇಳೆ ಜಯಂತ್ ಸಿನ್ಹಾ ಮತದಾನ ಮಾಡಿರಲಿಲ್ಲ. ಅದೂ ಅಲ್ಲದೇ ಪಕ್ಷದ ಪರವಾಗಿ ಪ್ರಚಾರ ಕಾರ್ಯದಲ್ಲೂ ಭಾಗಿಯಾಗಿರಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಪಕ್ಷದ ವರಿಷ್ಠರು ಕಾರಣ ವಿವರಿಸುವಂತೆ ಒತ್ತಾಯಿಸಿ ನೊಟೀಸ್ ಜಾರಿಗೊಳಿಸಿದೆ.

ಜಾರ್ಖಂಡ್ ನ ಹಜಾರಿಬಾಗ್ ಕ್ಷೇತ್ರದಿಂದ ಕಳೆದ ಬಾರಿ ಗೆಲುವು ಸಾಧಿಸುವಲ್ಲಿ ಯಶಸ್ವಿ ಆಗಿದ್ದ ಸಿನ್ಹಾ ಅವರಿಗೆ ಈ ಬಾರಿ ಪಕ್ಷ ಟಿಕೆಟ್‌ ನೀಡಿರಲಿಲ್ಲ. ಈ ಬಾರಿ ಜಯಂತ್‌ ಸಿನ್ಹಾ ಬದಲಿಗೆ ಮನೀಶ್ ಜೈಸ್ವಾಲ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಅಭ್ಯರ್ಥಿಯ ಘೋಷಣೆಯಾದ ಬಳಿಕ ಜಯಂತ್ ಸಿನ್ಹಾ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಇದಕ್ಕೂ ಮುನ್ನ ಮಾರ್ಚ್ ನಲ್ಲಿ ಟ್ವೀಟ್ ಮಾಡಿದ್ದ ಜಯಂತ್ ಸಿನ್ಹಾ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದೇ ಇರುವ ಇಂಗಿತ ವ್ಯಕ್ತಪಡಿಸಿದ್ದರು. ಇದೇ ಮಾದರಿಯಲ್ಲಿ ದೆಹಲಿಯ ಸಂಸದ ಗೌತಮ್ ಗಂಭೀರ್ ಸಹ ತಮ್ಮನ್ನು ಪಕ್ಷದ ಎಲ್ಲಾ ಹುದ್ದೆ ಮತ್ತು ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದರು. ಅಲ್ಲದೇ ಚುನಾವಣಾ ಪ್ರಚಾರ ಕಾರ್ಯದಲ್ಲೂ ಅವರು ಭಾಗಿಯಾಗಿರಲಿಲ್ಲ.

ಇದೀಗ ಅವರಿಗೆ ನೊಟೀಸ್‌ ಜಾರಿಗೊಳಿಸಿರುವ ಬಿಜೆಪಿ, ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದಾಗಿನಿಂದ ನೀವು ಸಂಘಟನಾ ಕಾರ್ಯ ಮತ್ತು ಚುನಾವಣಾ ಪ್ರಚಾರದಲ್ಲಿ ಯಾವುದೇ ಆಸಕ್ತಿ ವಹಿಸುತ್ತಿಲ್ಲ. ನಿಮಗೆ ಮತ ಚಲಾಯಿಸುವ ಅಗತ್ಯವಿದೆ ಎಂದೆನಿಸಲೂ ಇಲ್ಲ. ನಿಮ್ಮ ನಡವಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಈ ಬಗ್ಗೆ ತಕ್ಷಣ ಕಾರಣ ಸಮೇತ ವಿವರಿಸುವಂತೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಸಾಹು ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಅದೂ ಅಲ್ಲದೇ ಕೇವಲ ಎರಡು ದಿನಗಳಲ್ಲಿ ತಮ್ಮ ನಿಲುವನ್ನು ವಿವರಿಸುವಂತೆ ಪಕ್ಷ ಸಿನ್ಹಾ ಅವರನ್ನು ಕೇಳಿದೆ. ಇನ್ನು ಪಕ್ಷದ ವರಷ್ಠರು ಕಳಿಸಿರುವ ಈ ನೊಟೀಸ್‌ಗೆ ಸಿನ್ಹಾ ಇನ್ನೂ ಪ್ರತಿಕ್ರಿಯಿಸಿಲ್ಲ. ಸಿನ್ಹಾ ಅವರು 2019 ರಲ್ಲಿ ಕಾಂಗ್ರೆಸ್‌ನ ಗೋಪಾಲ್ ಸಾಹು ಅವರನ್ನು ಸೋಲಿಸಿ 4.79 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.

ಇದನ್ನೂ ಓದಿ: Lok Sabha Election: 5ನೇ ಹಂತದಲ್ಲಿ ಕೇವಲ ಶೇ.57.5ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Continue Reading

ವೈರಲ್ ನ್ಯೂಸ್

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Viral Video: ತೆಲಂಗಾಣದ ಪೆಟ್ರೋಲ್‌ ಬಂಕ್‌ನಲ್ಲಿ ಲಾರಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕೂಡಲೇ ಸಿಬ್ಬಂದಿ ಏಕಾಂಗಿಯಾಗಿ ನಂದಿಸಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸಿಬ್ಬಂದಿಯ ಸಮಯೋಚಿತ ನಿರ್ಧಾರವನ್ನು, ಧೈರ್ಯವನ್ನು ಹಲವರು ಮುಕ್ತಕಂಠದಿಂದ ಹೊಗಳಿದ್ದಾರೆ. ಈತನೇ ನಿಜವಾದ ಹೀರೋ ಎಂದು ಅನೇಕರು ಶ್ಲಾಘಿಸಿದ್ದಾರೆ.

VISTARANEWS.COM


on

Viral Video
Koo

ಹೈದರಾಬಾದ್‌: ದೇಶದಲ್ಲಿ ತಾಪಮಾನ ಹೆಚ್ಚಾಗುತ್ತಿದೆ. ಇತ್ತೀಚೆಗೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ತಾಪಮಾನ ಗಣನೀಯವಾಗಿ ಕಡಿಮೆಯಾಗುತ್ತಿಲ್ಲ. ಅತ್ಯಧಿಕ ಉಷ್ಣಾಂಶದ ಕಾರಣದಿಂದ ದೇಶದ ಹಲವೆಡೆ ನಿಲ್ಲಿಸಿದ್ದ, ಚಲಿಸುತ್ತಿರುವ ವಾಹನಗಳು ಬೆಂಕಿಗಾಹುತಿಯಾಗುವ ಘಟನೆ ಪದೇ ಪದೆ ಘಟಿಸುತ್ತಲೇ ಇದೆ. ಸದ್ಯ ಅಂತಹದ್ದೇ ಒಂದು ದುರಂತ ತೆಲಂಗಾಣದಲ್ಲಿ ನಡೆದಿದ್ದು, ಪೆಟ್ರೋಲ್‌ ಬಂಕ್‌ ಉದ್ಯೋಗಿಯೊಬ್ಬರ ಸಮಯಪ್ರಜ್ಞೆಯಿಂದ ಬಹು ದೊಡ್ಡ ಅನಾಹುತವೊಂದು ತಪ್ಪಿದೆ. ಸಿಬ್ಬಂದಿ ಬೆಂಕಿ ನಂದಿಸಲು ಏಕಾಂಗಿಯಾಗಿ ನಡೆಸುತ್ತಿರುವ ಪ್ರಯತ್ನ ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸದ್ಯ ವೈರಲ್‌ ಆಗಿದೆ (Viral Video).

ತೆಲಂಗಾಣದ ಯಾದಾದ್ರಿ ಭುವನಗಿರಿಯ ಉಪನಗರದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಇಂಧನ ಹಾಕಿಸಿಕೊಳ್ಳಲು ಟ್ರಕ್ಕೊಂದು ಪೆಟ್ರೋಲ್‌ ಬಂಕ್‌ ಪ್ರವೇಶಿಸುತ್ತದೆ. ಬಿಸಿಲಿನ ಝಳಕ್ಕೆ ಇದ್ದಕ್ಕಿದ್ದಂತೆ ಟ್ರಕ್‌ನ ಇಂಧನ ಟ್ಯಾಂಕ್‌ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಳ್ಳುತ್ತದೆ. ಚಾಲಕ ಮತ್ತು ನಿರ್ವಾಹಕ ಕೂಡಲೇ ಟ್ರಕ್‌ನಿಂದ ಜಿಗಿದು ಪಾರಾಗುತ್ತಾರೆ.

ಸ್ಫೋಟದ ಶಬ್ದಕ್ಕೆ ಎಲ್ಲರೂ ದಂಗಾಗಿ ನಿಲ್ಲುತ್ತಾರೆ. ಈ ವೇಳೆ ಕೂಡಲೆ ಎಚ್ಚೆತ್ತುಕೊಳ್ಳುವ ಪೆಟ್ರೋಲ್‌ ಬಂಕ್‌ ಸಿಬ್ಬಂದಿಯೋರ್ವರು ಧೈರ್ಯದಿಂದ ಮುನ್ನುಗ್ಗಿ ಅಗ್ನಿಶಾಮಕ ಯಂತ್ರ (Fire extinguisher)ವನ್ನು ಹಿಡಿದು ಉರಿಯುತ್ತಿರುವ ಟ್ರಕ್ ಕಡೆಗೆ ಧಾವಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಾರೆ.

ಅವರ ಆರಂಭಿಕ ಪ್ರಯತ್ನಗಳ ಹೊರತಾಗಿಯೂ, ಅಗ್ನಿಶಾಮಕ ಸಿಲಿಂಡರ್ ಖಾಲಿಯಾದ ನಂತರ ಬೆಂಕಿ ಮತ್ತೆ ಹೊತ್ತಿಕೊಂಡಿತು. ಕೂಡಲೇ ಅವರು ಮತ್ತೊಂದು ಅಗ್ನಿಶಾಮಕವನ್ನು ತಂದು ಬೆಂಕಿಯನ್ನು ನಿಯಂತ್ರಿಸುವ ಸಾಹಸವನ್ನು ಮುಂದುವರಿಸಿದರು. ಅವರ ಧೈರ್ಯದಿಂದ ಪ್ರೇರಿತರಾಗಿ ಬಂಕ್‌ನಲ್ಲಿದ್ದ ಇತರರು ಸಹ ಕೈ ಜೋಡಿಸತೊಡಗಿದರು. ಎಲ್ಲರ ಪ್ರಯತ್ನದ ಫಲವಾಗಿ, ಸತತ ಹೋರಾಟದ ನಂತರ ಬೆಂಕಿ ನಿಯಂತ್ರಣಕ್ಕೆ ಬಂತು. ಈ ಮೂಲಕ ಸಂಭವಿಸಬಹುದಾದ ದೊಡ್ಡ ಅನಾಹುತವೊಂದು ತಪ್ಪಿತು. ಅದು ಪೆಟ್ರೋಲ್‌ ಬಂಕ್‌ ಆಗಿರುವ ಕಾರಣ ತುಸು ಹೆಚ್ಚು ಕಡಿಮೆಯಾಗಿದ್ದರೂ ಬಹು ದೊಡ್ಡ ಸ್ಫೋಟ ಸಂಭವಿಸುವ ಸಾಧ್ಯತೆ ಇತ್ತು. ಸಿಬ್ಬಂದಿಯ ಸಮಯೋಚಿತ ಕಾರ್ಯದಿಂದಾಗಿ ಆಪತ್ತು ಕೂದಲೆಳೆ ಅಂತರದಲ್ಲಿ ತಪ್ಪಿತು.

ನೆಟ್ಟಿಗರಿಂದ ಮೆಚ್ಚುಗೆ

ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಅಪ್‌ಲೋಡ್‌ ಅದ ಕೆಲವೇ ಕ್ಷಣಗಳಲ್ಲಿ ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ಹಲವು ಲೈಕ್‌ ಬಟನ್‌ ಒತ್ತಿದರೆ ಇನ್ನು ಕೆಲವರು ಸಿಬ್ಬಂದಿಯ ಸಮಯೋಚಿತ ನಿರ್ಧಾರವನ್ನು, ಧೈರ್ಯವನ್ನು ಮುಕ್ತಕಂಠದಿಂದ ಹೊಗಳಿದ್ದಾರೆ.

ʼʼಬೆಂಕಿ ನಂದಿಸಲು ಏಕಾಂಗಿಯಾಗಿ ಹೋರಾಡಿದ ಸಿಬ್ಬಂದಿಗೆ ಅತ್ಯಂತ ಶೂರ ಎನ್ನುವ ಅವಾರ್ಡ್‌ ಕೊಡಬೇಕು. ಒಂದು ವೇಳೆ ಸ್ಥಳದಲ್ಲಿ ನಾನು ಇದ್ದಿದ್ದರೆ ಇತರರಂತೆ ಓಡಿ ಹೋಗುತ್ತಿದ್ದೆʼʼ ಎಂದು ಒಬ್ಬರು ಪ್ರಾಮಾಣಿಕವಾಗಿ ಹೇಳಿಕೊಂಡಿದ್ದಾರೆ.

ʼʼಈ ಸಿಬ್ಬಂದಿಯ ಧೈರ್ಯಕ್ಕೆ ಹ್ಯಾಟ್ಸಾಫ್‌ʼʼ ಎಂದು ಮತ್ತೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ. ʼʼಬೆಂಕಿ ಆಕಸ್ಮಿಕದಿಂದ ಪಾರಾಗುವುದು ಹೇಗೆ ಎನ್ನುವ ಬಗ್ಗೆ ಈತನಿಗೆ ತರಬೇತಿ ಸಿಕ್ಕಿರಬೇಕು. ಅದಕ್ಕೆ ಆತ ಧೈರ್ಯವಾಗಿ ಮುನ್ನುಗ್ಗಿದ್ದಾನೆʼʼ ಎಂದು ಇನ್ನೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ʼʼಆತನ ಧೈರ್ಯಕ್ಕೆ ಪ್ರಶಸ್ತಿ ಕೊಡಲೇಬೇಕುʼʼ ಎಂದು ಮಗದೊಬ್ಬರು ಆಗ್ರಹಿಸಿದ್ದಾರೆ. ಈತನೇ ನಿಜವಾದ ಹೀರೋ ಎಂದು ಅನೇಕರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:Weight Lose: ತೂಕ ಇಳಿಸಲು ಬಯಸುವಿರಾ? ಈ ಸಂಗತಿ ತಿಳಿದಿರಲಿ

Continue Reading

Lok Sabha Election 2024

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Prashant Kishor: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಮೊದಲ 5 ಹಂತಗಳ ಮತದಾನ ಮುಗಿದಿದೆ. ಇನ್ನು ಎರಡು ಹಂತಗಳ ಮತದಾನ ಬಾಕಿ ಇದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ. ಆದಾಗ್ಯೂ ಅವರು ರಾಜ್ಯವಾರು ಫಲಿತಾಂಶಗಳನ್ನು ಊಹಿಸಲು ನಿರಾಕರಿಸಿದ್ದಾರೆ.

ಮೋದಿ ಬ್ರ್ಯಾಂಡ್‌ ಕುಸಿತ

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Continue Reading

ದೇಶ

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

Crime News: ಮಹಾರಾಷ್ಟ್ರದಲ್ಲಿ ಸ್ಪೋರ್ಟ್ಸ್‌ ಕಾರು ಓಡಿಸಿ ಇಬ್ಬರ ಸಾವಿನ ಕಾರಣನಾದ ಅಪ್ರಾಪ್ತ ವಯಸ್ಕನಿಗೆ ಜಾಮೀನು ಸಿಕ್ಕ ವಿಚಾರ ಸೋಮವಾರ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಇದೀಗ ಕಾರು ಚಲಾಯಿಸಿ ಅಪಘಾತ ನಡೆಸಿದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಅಪ್ರಾಪ್ತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದು ಮತ್ತು ಅವರಿಗೆ ಮಾದಕ ವಸ್ತುಗಳನ್ನು ಒದಗಿಸುವ ಕಾರಣ ನೀಡಿ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತರಿಗೆ ಮದ್ಯ ನೀಡಿದ ಬಾರ್‌ ಮಾಲೀಕನ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Crime News
Koo

ಮುಂಬೈ: ಮಹಾರಾಷ್ಟ್ರದಲ್ಲಿ ಸ್ಪೋರ್ಟ್ಸ್‌ ಕಾರು ಓಡಿಸಿ ಇಬ್ಬರ ಸಾವಿನ ಕಾರಣನಾದ ಅಪ್ರಾಪ್ತ ವಯಸ್ಕನಿಗೆ ಜಾಮೀನು ಸಿಕ್ಕ ವಿಚಾರ ಸೋಮವಾರ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಜತೆಗೆ ಕೋರ್ಟ್‌ನ ತೀರ್ಪಿಗೆ ಟೀಕೆಯೂ ವ್ಯಕ್ತವಾಗಿತ್ತು. ಇದೀಗ ಕಾರು ಚಲಾಯಿಸಿ ಅಪಘಾತ ನಡೆಸಿದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಪುಣೆಯ ಕಲ್ಯಾಣಿ ನಗರದಲ್ಲಿ ಭಾನುವಾರ ಮುಂಜಾನೆ ಅಪಘಾತ ನಡೆದು ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೃತಪಟ್ಟಿದ್ದರು (Crime News).

17 ವರ್ಷದ ವೇದಾಂತ್‌ ಅಗರ್‌ವಾಲ್‌ ಐಷಾರಾಮಿ ಪೋರ್ಷೆ ಕಾರನ್ನು ಗಂಟೆಗೆ 200 ಕಿ.ಮೀ. ವೇಗದಲ್ಲಿ ಓಡಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಧ್ಯಪ್ರದೇಶದ ಎಂಜಿನಿಯರ್‌ಗಳಾದ 24 ವರ್ಷದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಪುಣೆ ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ಘಟನೆ ಬಗ್ಗೆ ಮಾಹಿತಿ ನೀಡಿ, ʼʼಸ್ಥಳೀಯ ಪಬ್‌ ಒಂದರಲ್ಲಿ ವೇದಾಂತ್‌ ಅಗರ್‌ವಾಲ್‌ ಮತ್ತು ಆತನ ಸ್ನೇಹಿತರು ಪಾರ್ಟಿ ಮಾಡಿ ಮದ್ಯ ಸೇವಿಸಿದ್ದರು. ಮಹಾರಾಷ್ಟ್ರದಲ್ಲಿ 25 ವರ್ಷಕ್ಕಿಂತ ಕೆಳಗಿನವರು ಮದ್ಯ ಸೇವಿಸುವುದು ನಿಷಿದ್ಧ. ಹೀಗಾಗಿ ಅಪ್ರಾಪ್ತರಿಗೆ ಮದ್ಯ ನೀಡಿದ ಬಾರ್‌ ಮಾಲೀಕನ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆʼʼ ಎಂದು ತಿಳಿಸಿದ್ದಾರೆ.

15 ಗಂಟೆಯೊಳಗೆ ಜಾಮೀನು

ವೇದಾಂತ್‌ ಅಗರ್‌ವಾಲ್‌ ಚಲಾಯಿಸುತ್ತಿದ್ದ ಕಾರಿನಲ್ಲಿ ಒಟ್ಟು ಮೂವರಿದ್ದರು. ಅಪಘಾತಕ್ಕೀಡಾಗುತ್ತಿದ್ದಂತೆ ಸ್ಥಳೀಯರೆಲ್ಲ ಒಟ್ಟುಗೂಡಿ ಸೆರೆ ಹಿಡಿದು ಥಳಿಸಿ ಅವರನ್ನು ಪೊಲೀಸರಿಗೆ ಒಪ್ಪಿಸಿದ್ದರು. ಈ ಪೈಕಿ ಓರ್ವ ತಪ್ಪಿಸಿಕೊಂಡಿದ್ದ. ಆದರೆ ದುರಂತ ಎಂದರೆ ವೇದಾಂತ್‌ ಅಗರ್‌ವಾಲ್‌ನ ಬಂಧನವಾದ ಕೇವಲ 15 ಗಂಟೆಗಳಲ್ಲೇ ಬಾಲಾಪರಾಧಿ ನ್ಯಾಯ ಮಂಡಳಿಯು ಆತನಿಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಅಪರಾಧಿ ಯೆರವಾಡಾದ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು, ಕುಡಿತದ ಅಭ್ಯಾಸಕ್ಕೆ ಚಿಕಿತ್ಸೆ ಪಡೆಯಬೇಕು ಮತ್ತು ಮನೋವೈದ್ಯಕೀಯ ಮೌಲ್ಯಮಾಪನ ಹಾಗೂ ಚಿಕಿತ್ಸೆಗೆ ಒಳಗಾಗಬೇಕು ಎಂಬ ಷರತ್ತು ವಿಧಿಸಿತ್ತು. ಈ ತೀರ್ಪಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಜಾಮೀನು ನಿರ್ಧಾರವನ್ನು ಪುಣೆ ಪೊಲೀಸರೂ ವಿರೋಧಿಸಿದ್ದು, ವೇದಾಂತ್‌ ಅಗರ್‌ವಾಲ್‌ನನ್ನು ವಿಚಾರಣೆಗೆ ಒಳಪಡಿಸಲು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. “ಈ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಐಪಿಸಿಯ ಸೆಕ್ಷನ್ 304ರ ಅಡಿಯಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಇದು ಜಾಮೀನು ರಹಿತ ಸೆಕ್ಷನ್ ಆಗಿದ್ದು, ಇದು ಘೋರ ಅಪರಾಧ” ಎಂದು ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ತಿಳಿಸಿದ್ದಾರೆ.

ಇದೀಗ ಪುಣೆ ಪೊಲೀಸರು ಬಾಲಕನ ತಂದೆ, ಸ್ಥಳೀಯ ಪ್ರಮುಖ ಬಿಲ್ಡರ್ ವಿಶಾಲ್‌ ಅಗರ್‌ವಾಲ್‌ನನ್ನು ಬಂಧಿಸಿದ್ದಾರೆ. ಅಪ್ರಾಪ್ತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದು ಮತ್ತು ಅವರಿಗೆ ಮಾದಕ ವಸ್ತುಗಳನ್ನು ಒದಗಿಸುವ ಕಾರಣ ನೀಡಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಶ್ರೀಮಂತನ ಮಗನಿಗೆ 15 ಗಂಟೆಯೊಳಗೆ ಜಾಮೀನು! ಪ್ರಬಂಧ ಬರೆಯುವ ಶಿಕ್ಷೆ!

Continue Reading
Advertisement
murder Case in Vijayapura
ವಿಜಯಪುರ3 mins ago

Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

Jayant Sinha
ದೇಶ3 mins ago

Jayant Sinha: ವೋಟೂ ಹಾಕಿಲ್ಲ..ಪ್ರಚಾರಕ್ಕೂ ಬಂದಿಲ್ಲ; ಜಯಂತ್‌ ಸಿನ್ಹಾಗೆ ಬಿಜೆಪಿ ಶೋಕಾಸ್‌ ನೊಟೀಸ್‌

Katrina Kaif And Vicky Kaushal Together In London
ಸಿನಿಮಾ11 mins ago

Katrina Kaif: ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಪತಿ ಜತೆ ಲಂಡನ್‌ನಲ್ಲಿ ಜಾಲಿ ಮೂಡ್‌!

gold rate today sruthi hassan
ಚಿನ್ನದ ದರ22 mins ago

Gold Rate Today: ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ, ಗ್ರಾಹಕರಿಗೆ ತುಸು ನಿರಾಳ

India Head Coach
ಕ್ರೀಡೆ29 mins ago

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

Viral Video
ವೈರಲ್ ನ್ಯೂಸ್38 mins ago

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Contaminated Water
ಮೈಸೂರು46 mins ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Viral video
ವೈರಲ್ ನ್ಯೂಸ್52 mins ago

Chudidar Gang: ಚಡ್ಡಿ ಗ್ಯಾಂಗ್ ಆಯ್ತು, ಈಗ ದರೋಡೆಕೋರರ ಚೂಡಿದಾರ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ; ಹುಷಾರ್! ವಿಡಿಯೊ ನೋಡಿ

Actor Upendra Ajaneesh Visited Hangary To Record Music
ಸ್ಯಾಂಡಲ್ ವುಡ್1 hour ago

Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

RCB
ಕ್ರೀಡೆ1 hour ago

RCB: ಅಮೆರಿಕದ ಘಟಿಕೋತ್ಸವದಲ್ಲೂ ಆರ್​ಸಿಬಿಯದ್ದೇ ಹವಾ: ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌