New Parliament Building: ನೂತನ ಸಂಸತ್‌ ಭವನದ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಿದ ಟಿಎಂಸಿ, ಆಪ್‌; ಕೊಟ್ಟ ಕಾರಣ ಹೀಗಿದೆ - Vistara News

ದೇಶ

New Parliament Building: ನೂತನ ಸಂಸತ್‌ ಭವನದ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಿದ ಟಿಎಂಸಿ, ಆಪ್‌; ಕೊಟ್ಟ ಕಾರಣ ಹೀಗಿದೆ

New Parliament Building: ನೂತನ ಸಂಸತ್‌ ಭವನದ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಮೇ 28ರಂದು ಉದ್ಘಾಟನೆ ಮಾಡಲಿದ್ದಾರೆ. ಇದರ ಬೆನ್ನಲ್ಲೇ, ಆಪ್‌ ಹಾಗೂ ಟಿಎಂಸಿ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ತೀರ್ಮಾನಿಸಿವೆ.

VISTARANEWS.COM


on

19 political parties boycotted new parliament building inauguration
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದ ಶಕ್ತಿಕೇಂದ್ರವಾಗಿ ರೂಪುಗೊಂಡಿರುವ ನೂತನ ಸಂಸತ್‌ ಭವನದ ಉದ್ಘಾಟನೆಗೆ (New Parliament Building) ದಿನಾಂಕ ನಿಗದಿಯಾಗಿದೆ. ಮೇ 28ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರ ಉಪಸ್ಥಿತಿಯಲ್ಲಿ ಸಂಸತ್‌ ಭವನವನ್ನು ಉದ್ಘಾಟಿಸಲಿದ್ದಾರೆ. ಇದರ ಮಧ್ಯೆಯೇ, ಪ್ರತಿಭಟನೆಯ ರೂಪವಾಗಿ ತೃಣಮೂಲ ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷವು ಸಂಸತ್‌ ಭವನದ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ತೀರ್ಮಾನಿಸಿವೆ.

ಸಂಸತ್‌ ಭವನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉದ್ಘಾಟನೆ ಮಾಡಿಸಬೇಕಿತ್ತು. ಆದರೆ, ದ್ರೌಪದಿ ಮುರ್ಮು ಅವರು ಉದ್ಘಾಟನೆ ಮಾಡುತ್ತಿಲ್ಲ. ರಾಷ್ಟ್ರಪತಿ ಅವರಿಗೆ ಅವಮಾನ ಮಾಡಿದ ಕಾರಣ ನಾವು ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ತೀರ್ಮಾನಿಸಿದ್ದೇವೆ ಎಂದು ಆಮ್‌ ಆದ್ಮಿ ಪಕ್ಷ ಹಾಗೂ ತೃಣಮೂಲ ಕಾಂಗ್ರೆಸ್‌ ತಿಳಿಸಿವೆ. ಮೊದಲು ತೃಣಮೂಲ ಕಾಂಗ್ರೆಸ್‌ ಬಹಿಷ್ಕಾರ ಘೋಷಿಸಿತು. ನಂತರ ಆಮ್‌ ಆದ್ಮಿ ಪಕ್ಷವೂ ಇದೇ ತೀರ್ಮಾನ ತೆಗೆದುಕೊಂಡಿತು.

ಟಿಎಂಸಿ ನಾಯಕ ಟ್ವೀಟ್

ಇದನ್ನೂ ಓದಿ: New Parliament Building: ಸಂಸತ್‌ ಭವನ ಉದ್ಘಾಟನೆ ಯಾರಿಂದ? ರಾಷ್ಟ್ರಪತಿಯೋ? ಪ್ರಧಾನಿಯೋ? ಇಲ್ಲಿದೆ ಮಾಹಿತಿ

ಸಂಸತ್‌ ಭವನದ ಉದ್ಘಾಟನೆಗೆ ದಿನಾಂಕ ನಿಗದಿಯಾದಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ ಭವನವನ್ನು ಉದ್ಘಾಟನೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಇದಕ್ಕೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. “ಸಾಂವಿಧಾನಿಕ ಶ್ರೇಷ್ಠ ಹುದ್ದೆಯಲ್ಲಿರುವ ರಾಷ್ಟ್ರಪತಿ ಅಥವಾ ಉಪ ರಾಷ್ಟ್ರಪತಿ ಅವರೇ ನೂತನ ಸಂಸತ್‌ ಭವನವನ್ನು ಉದ್ಘಾಟಿಸಬೇಕು” ಎಂದು ಆಗ್ರಹಿಸಿದ್ದವು. ಆದರೆ, ಈಗ ಸಂಸತ್‌ ಭವನದ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಸಿದ್ಧವಾಗಿದ್ದು, ಮೋದಿ ಹಾಗೂ ಸ್ಪೀಕರ್‌ ಉದ್ಘಾಟಿಸಲಿದ್ದಾರೆ.

ಹೇಗಿದೆ ನೂತನ ಸಂಸತ್‌ ಭವನ?

ಸೆಂಟ್ರಲ್​ ವಿಸ್ಟಾ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ ನೂತನ ಸಂಸತ್​ ಕಟ್ಟಡ ನಿರ್ಮಿಸಲಾಗಿದೆ. ಈ ನೂತನ ಕಟ್ಟಡ 65 ಸಾವಿರ ಚದರ ಮೀಟರ್ ಪ್ರದೇಶಕ್ಕೆ ವ್ಯಾಪಿಸಿದೆ. ಲೋಕಸಭೆ ಮತ್ತು ರಾಜ್ಯ ಸಭೆ ಕಾರ್ಯ-ಕಲಾಪಗಳಿಗಾಗಿ ಎರಡು ದೊಡ್ಡ-ವಿಶಾಲವಾದ ಸಭಾಂಗಣಗಳನ್ನು ಹೊಂದಿದೆ. ಒಂದು ಗ್ರಂಥಾಲಯ, ಸಂಸದರ ಕಚೇರಿಗಳು, ಸಭೆಗಳಿಗಾಗಿ ಸಮಿತಿ ರೂಮ್​​ಗಳು ಮತ್ತಿತರ ಸೌಕರ್ಯಗಳನ್ನು ಹೊಂದಿರಲಿದೆ. ಲೋಕಸಭೆ ಕಲಾಪ ನಡೆಯುವ ಹಾಲ್​ಗಳಲ್ಲಿ 888 ಸಂಸದರು ಮತ್ತು ರಾಜ್ಯ ಸಭೆ ಕಲಾಪ ನಡೆಯುವಲ್ಲಿ 384 ಸಂಸದರು ಕುಳಿತುಕೊಳ್ಳಬಹುದಾಗಿದೆ. ಅಂದಹಾಗೆ, ಲೋಕಸಭೆ ಹಾಲ್​​ಅನ್ನು ರಾಷ್ಟ್ರಪಕ್ಷಿ ನವಿಲು ಮತ್ತು ರಾಜ್ಯಸಭೆಯನ್ನು ಕಮಲದ ಹೂವಿನ ಥೀಮ್​​ನಲ್ಲಿ ನಿರ್ಮಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabah Election : ಹೇಮಮಾಲಿನಿಗೆ ಅವಹೇಳನ; ಕಾಂಗ್ರೆಸ್​ ನಾಯಕ ಸುರ್ಜೇವಾಲಾಗೆ 48 ಗಂಟೆ ನಿಷೇಧ

Lok Sabah Election: ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಷಯದಲ್ಲಿ ಹೊರಡಿಸಲಾದ ಅಥವಾ ನಂತರ ಅವರಿಗೆ ನೀಡಿರುವ ಆದೇಶದಲ್ಲಿ ಯಾವುದೇ ಪೂರ್ವಾಗ್ರಹವಿಲ್ಲ. ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರದ ಸಮಯದಲ್ಲಿ ಸುರ್ಜೇವಾಲಾ ನೀಡಿದ ಹೇಳಿಕೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ದುರ್ನಡತೆಗಾಗಿ ರಣದೀಪ್ ಸುರ್ಜೆವಾಲಾ ಅವರಿಗೆ ಛೀಮಾರಿ ಹಾಕಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಹಿನ್ನೆಲೆಯ (Lok Sabah Election) ಪ್ರಚಾರ ಸಭೆಯಲ್ಲಿ ಬಿಜೆಪಿ ನಾಯಕಿ ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ಹೇರಿದೆ. ಮಾಲಿನಿ ಬಗ್ಗೆ “ಅಮಾನವೀಯ, ಅನಾಗರಿಕ ಮತ್ತು ಅಶ್ಲೀಲ” ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಚುನಾವಣಾ ಆಯೋಗವು ಸುರ್ಜೆವಾಲಾ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ. ಸುರ್ಜೆವಾಲಾ ಅವರ ಉತ್ತರದಲ್ಲಿ ನೀಡಿದ ಹೇಳಿಕೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಷಯದಲ್ಲಿ ಹೊರಡಿಸಲಾದ ಅಥವಾ ನಂತರ ಅವರಿಗೆ ನೀಡಿರುವ ಆದೇಶದಲ್ಲಿ ಯಾವುದೇ ಪೂರ್ವಾಗ್ರಹವಿಲ್ಲ. ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರದ ಸಮಯದಲ್ಲಿ ಸುರ್ಜೇವಾಲಾ ನೀಡಿದ ಹೇಳಿಕೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ದುರ್ನಡತೆಗಾಗಿ ರಣದೀಪ್ ಸುರ್ಜೆವಾಲಾ ಅವರಿಗೆ ಛೀಮಾರಿ ಹಾಕಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

ಸಂವಿಧಾನದ 324 ನೇ ವಿಧಿ ಮತ್ತು ಈ ನಿಟ್ಟಿನಲ್ಲಿ ಇರುವ ಎಲ್ಲ ಅಧಿಕಾರಗಳ ಅಡಿಯಲ್ಲಿ, ಆಯೋಗವು ಏಪ್ರಿಲ್ 16 ರಂದು ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಸುರ್ಜೇವಾಲಾ ಅವರಿಗೆ ನಿಷೇಧ ಹೇರುತ್ತದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಂದರ್ಶನಗಳು, ಮಾಧ್ಯಮಗಳಲ್ಲಿ ಸಾರ್ವಜನಿಕ ಹೇಳಿಕೆಗಳು (ಎಲೆಕ್ಟ್ರಾನಿಕ್, ಮುದ್ರಣ, ಸಾಮಾಜಿಕ ಮಾಧ್ಯಮ) ಇತ್ಯಾದಿಗಳನ್ನು ನಡೆಸುವಂತಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಈ ಹೇಳಿಕೆಗಳು “ಅತ್ಯಂತ ಅಮಾನವೀಯ, ಅಶ್ಲೀಲ ಮತ್ತು ಅನಾಗರಿಕ” ಮತ್ತು ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆಯ ನಿಬಂಧನೆಗಳ ಉಲ್ಲಂಘನೆಯಾಗಿದೆ. ಕಳೆದ ತಿಂಗಳು ಪಕ್ಷಗಳಿಗೆ ಚುನಾವಣಾ ಆಯೋಗ ನೀಡಿದ ಸಲಹೆಯನ್ನು ಇಲ್ಲಿ ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮೊದಲ ನಿಷೇಧ

ಈ ಲೋಕಸಭಾ ಚುನಾವಣಾ ಚಕ್ರದಲ್ಲಿ ಚುನಾವಣಾ ಆಯೋಗವು ವಿಧಿಸಿದ ಮೊದಲ ಪ್ರಚಾರ ನಿಷೇಧ ಇದಾಗಿದೆ. ಬಿಜೆಪಿಯನ್ನು ಟೀಕಿಸುವಾಗ ಸುರ್ಜೆವಾಲಾ ಅವರು ಹೇಮಾ ಮಾಲಿನಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಆ ವಿಡಿಯೊವನ್ನು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಹಂಚಿಕೊಂಡ ನಂತರ ಈ ವಿವಾದ ಉದ್ಭವಿಸಿದೆ.

ಸುರ್ಜೇವಾಲಾ ಅವರ ಹೇಳಿಕೆಯನ್ನು “ಅಶ್ಲೀಲ, ಲೈಂಗಿಕ ಮತ್ತು ಅವಮಾನಕರ” ಎಂದು ಖಂಡಿಸಿ ಬಿಜೆಪಿ ತಕ್ಷಣ ಚುನಾವಣಾ ಆಯೋಗಕ್ಕೆ ದೂರು ನೀಡಿತು. ಸುರ್ಜೆವಾಲಾ ತಮ್ಮನ್ನು ಸಮರ್ಥಿಸಿಕೊಂಡಿದ್ದು, ವೀಡಿಯೊವನ್ನು ನಕಲಿ ಮತ್ತು ತಿರುಚಲಾಗಿದೆ ಎಂದು ಹೇಳಿದ್ದಾರೆ. ಬಿಜೆಪಿ ಸಂಸದರನ್ನು ನೋಯಿಸುವ ಅಥವಾ ಅವಮಾನಿಸುವ ಉದ್ದೇಶ ನನಗಿಲ್ಲ ಎಂದು ಅವರು ಪ್ರತಿಪಾದಿಸಿದರು.

Continue Reading

ದೇಶ

Kanker Encounter: ಎನ್‌ಕೌಂಟರ್‌ನಲ್ಲಿ 18 ಮಾವೋವಾದಿಗಳ ಹತ್ಯೆಗೈದ ಭದ್ರತಾ ಪಡೆ

Kanker Encounter: ದೇಶದಲ್ಲಿ ಲೋಕದಭಾ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಭದ್ರತಾ ಸಿಬ್ಬಂದಿ 18 ಮಾವೋವಾದಿಗಳನ್ನು ಕೊಂದಿದ್ದಾರೆ. ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಿಎಸ್ಎಫ್ ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ ಕಂಕರ್‌ನ ಚೋಟೆಬೆಟಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಬಿನಗುಂಡ ಪ್ರದೇಶದಲ್ಲಿ ಈ ಜಂಟಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಮೂವರು ಭದ್ರತಾ ಪಡೆಯ ಸಿಬ್ಬಂದಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Kanker Encounter
Koo

ರಾಯ್‌ಪುರ: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ (Kanker Encounter)ನಲ್ಲಿ ಕನಿಷ್ಠ 18 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಗಡಿ ಭದ್ರತಾ ಪಡೆ ಮಂಗಳವಾರ ತಿಳಿಸಿದೆ. ಈ ವೇಳೆ ಮೂವರು ಭದ್ರತಾ ಪಡೆಯ ಸಿಬ್ಬಂದಿ ಗಾಯಗೊಂಡಿದ್ದಾರೆ.

ʼʼಗುಪ್ತಚರದ ಖಚಿತ ಮಾಹಿತಿಯ ಮೇರೆಗೆ ಬಿಎಸ್ಎಫ್ (BSF) ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ (DRG) ಕಂಕರ್‌ನ ಚೋಟೆಬೆಟಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಬಿನಗುಂಡ ಪ್ರದೇಶದಲ್ಲಿ ಈ ಜಂಟಿ ಕಾರ್ಯಾಚರಣೆ ನಡೆಸಿತುʼʼ ಎಂದು ಕೇಂದ್ರ ಪೊಲೀಸ್ ಪಡೆ ತಿಳಿಸಿದೆ. ಕಾರ್ಯಾಚರಣೆಯ ವೇಳೆ ಬಿಎಸ್ಎಫ್ ತಂಡವು ಸಿಪಿಐ ಮಾವೋವಾದಿಗಳಿಂದಲೂ ಭಾರೀ ಗುಂಡಿನ ದಾಳಿಯನ್ನು ಎದುರಿಸಬೇಕಾಯಿತು.

ಶಸ್ತ್ರಾಸ್ತ್ರ ವಶ

ಎನ್‌ಕೌಂಟರ್‌ ನಡೆದ ಸ್ಥಳದಿಂದ 18 ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್ಎಫ್ ತಿಳಿಸಿದೆ. ಕಾರ್ಯಾಚರಣೆಯ ಸ್ಥಳದಿಂದ ಏಳು ಎಕೆ ಸರಣಿ ರೈಫಲ್‌ಗಳು ಮತ್ತು ಮೂರು ಲೈಟ್ ಮೆಷಿನ್ ಗನ್‌ಗಳನ್ನೂ (LMGs) ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ಚಕಮಕಿ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಕಂಕರ್ ಪೊಲೀಸ್ ವರಿಷ್ಠಾಧಿಕಾರಿ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾರೆ. ಗಾಯಗೊಂಡ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಹತರಾದ ಮಾವೋವಾದಿಗಳ ಪೈಕಿ ಉನ್ನತ ನಕ್ಸಲ್ ನಾಯಕ ಶಂಕರ್ ರಾವ್ ಕೂಡ ಸೇರಿದ್ದಾನೆ. ಪೊಲೀಸ್ ಅಧಿಕಾರಿಗಳ ಪ್ರಕಾರ ಶಂಕರ್‌ ತಲೆಗೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಛತ್ತೀಸ್‌ಗಢವು ಹಲವು ದಶಕಗಳಿಂದ ನಕ್ಸಲೈಟ್‌, ಮಾವೋವಾದಿಗಳ ಭೀತಿ ಎದುರಿಸುತ್ತಿದೆ. ವಿಶೇಷವಾಗಿ ಬಸ್ತಾರ್ ಪ್ರದೇಶವು ನಕ್ಸಲ್ ಚಟುವಟಿಕೆಗಳ ಕೇಂದ್ರ ಸ್ಥಾನವಾಗಿದೆ. ಇಲ್ಲಿ ಆಗಾಗ ಹಿಂಸಾಚಾರ ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ ನಡೆಯುತ್ತಲೇ ಇರುತ್ತದೆ. ನಕ್ಸಲರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವುದು, ಸ್ಥಳೀಯ ಅಭಿವೃದ್ಧಿಗೆ ಆದ್ಯತೆ ನೀಡುವುದು ಮತ್ತು ಶರಣಾಗುವ ನಕ್ಸಲರಿಗೆ ಪುನರ್ವಸತಿ ಕಲ್ಪಸಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಆದಾಗ್ಯೂ ಈ ಪ್ರಯತ್ನಗಳ ಹೊರತಾಗಿಯೂ ರಾಜ್ಯದಲ್ಲಿ ನಕ್ಸಲ್ ಹಾವಳಿ ಮುಂದುವರಿದಿದೆ.

ಕೆಲವು ದಿನಗಳ ಹಿಂದೆ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ನಕ್ಸಲ್‌ ಸಾವನ್ನಪ್ಪಿದ್ದ. ಕೊಯಲಿಬೇಡಾ ಪೊಲೀಸ್ ಠಾಣೆ ವ್ಯಾಪ್ತಿಯ ಚಿಲ್ಪಾರಸ್ ಗ್ರಾಮದ ಬಳಿಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ತಂಡವು ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿತ್ತು.

ಇದನ್ನೂ ಓದಿ: Encounter In Kanker: ಭದ್ರತಾ ಪಡೆಗಳೊಂದಿಗೆ ಎನ್‌ಕೌಂಟರ್‌; ಓರ್ವ ನಕ್ಸಲ್‌ ಸಾವು

ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಗಡಿ ಭದ್ರತಾ ಪಡೆ ಜಂಟಿಯಾಗಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಈ ವೇಳೆ ಗುಂಡಿನ ಚಕಮಕಿ ನಡೆದಿತ್ತು. ಸಾವನ್ನಪ್ಪಿದ ನಕ್ಸಲ್‌ನ ಶವ, ಶಸ್ತ್ರಾಸ್ತ್ರ ಮತ್ತು ಸ್ಫೋಟಕ ವಸ್ತುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿತ್ತು. ಅದಕ್ಕೂ ಮೊದಲು ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ ಮತ್ತು ಮಾವೋವಾದಿ ಸಾವನ್ನಪ್ಪಿದ್ದರು. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಛೋಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹಿಡೂರ್ ಗ್ರಾಮದ ಬಳಿಯ ಕಾಡಿನಲ್ಲಿ ಗುಂಡಿನ ಚಕಮಕಿ ನಡೆದಿತ್ತು.

Continue Reading

ಧಾರ್ಮಿಕ

Ram Navami: ನಾಳೆ ದೇಶಾದ್ಯಂತ ರಾಮ ನವಮಿ ಸಂಭ್ರಮ; ಈ ದಿನದ ಮಹತ್ವವೇನು ಗೊತ್ತೇ ?

Ram Navami: ಈಗ ಪ್ರತಿಯೊಬ್ಬರ ಮನದಲ್ಲೂ ರಾಮನಾಮ ಮೊಳಗುತ್ತಿದೆ. ಯಾಕೆಂದರೆ ರಾಮ ಜನ್ಮ ದಿನದ ಉತ್ಸವ ರಾಮ ನವಮಿ ಆಚರಣೆಗೆ ದೇಶವೇ ಸಜ್ಜಾಗಿದೆ. ದೇಶಾದ್ಯಂತ ಇರುವ ರಾಮ ಮಂದಿರಗಳು ಅಲಂಕಾರಗೊಂಡು ವೈಭವದಿಂದ ರಾಮನ ಹುಟ್ಟುಹಬ್ಬ ಆಚರಣೆಗೆ ಕಾಯುತ್ತಿದೆ.

VISTARANEWS.COM


on

By

Ram Navami
Koo

ಪ್ರತಿ ವರ್ಷದಂತೆ ಈ ಬಾರಿಯು ಭಗವಾನ್ ಶ್ರೀ ರಾಮನ (sriram) ಜನ್ಮ ದಿನವಾದ ರಾಮ ನವಮಿ (Ram Navami) ಮತ್ತೆ ಬಂದಿದೆ. ದೇಶಾದ್ಯಂತ ರಾಮ ನವಮಿ ಉತ್ಸವಕ್ಕೆ ರಾಮ ಭಕ್ತರು ಸಜ್ಜಾಗಿದ್ದಾರೆ. ರಾಮ ಮಂದಿರಗಳನ್ನೂ (ram mandir) ಸುಂದರವಾಗಿ ಅಲಂಕರಿಸಿ ಅತ್ಯಂತ ವೈಭವದಿಂದ ಉತ್ಸವವನ್ನು ಆಚರಿಸಲು ಸಿದ್ದತೆಗಳು ಭರದಿಂದ ಸಾಗುತ್ತಿದೆ.

ರಾಮ ನವಮಿಯಂದು ಸಾಮಾನ್ಯವಾಗಿ ರಾಮ ಭಕ್ತು (Ram Bhaktas) ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಹಲವಾರು ಮಂದಿ ಉಪವಾಸ (fasting) ವ್ರತವನ್ನು ಆಚರಿಸುತ್ತಾರೆ. ದೇವಾಲಯಗಳಲ್ಲಿ (temple) ಆಧ್ಯಾತ್ಮಕ ಪ್ರವಚನ, ಭಜನೆ, ಸಂಕೀರ್ತನೆಗಳನ್ನು ಆಯೋಜಿಸಲಾಗುತ್ತದೆ. ತೊಟ್ಟಿಲಲ್ಲಿ ಪುಟ್ಟ ರಾಮನನ್ನು ಇಟ್ಟು ತೂಗಿ ಪೂಜೆ ಸಲ್ಲಿಸಲಾಗುತ್ತದೆ. ಒಟ್ಟಿನಲ್ಲಿ ಈ ದಿನ ಎಲ್ಲರೂ ರಾಮನ ಭಕ್ತಿಯಲ್ಲಿ ಮಿಂದೇಳುತ್ತಾರೆ.

ರಾಮ ನವಮಿ ಆಚರಣೆ ಯಾವಾಗ?

ಶ್ರೀ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಜನಿಸಿದ್ದಾನೆ. ಹೀಗಾಗಿ ಹಿಂದೂ ಚಾಂದ್ರಮಾನ ಪಂಚಾಂಗದಲ್ಲಿ ಬರುವ ಏಪ್ರಿಲ್ 17 ಬುಧವಾರದಂದು ರಾಮನವಮಿಯನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: Ram Mandir : ರಾಮನವಮಿಯಂದು ವಿತರಿಸಲು ಅಯೋಧ್ಯೆಗೆ 1,11,111 ಕೆ.ಜಿ ಲಡ್ಡು ಕಳುಹಿಸಿದ ರಾಮಭಕ್ತರು

ರಾಮ ನವಮಿ ದಿನ ಮಧ್ಯಾಹ್ನ ಗಂಟೆ 11.03 ರಿಂದ 1.38 ವಿಶೇಷವೆಂದು ಪರಿಗಣಿಸಲಾಗಿದೆ. ರಾಮ ನವಮಿ ತಿಥಿಯು ಏಪ್ರಿಲ್ 16ರಂದು ಬೆಳಗ್ಗೆ 1.23ಕ್ಕೆ ಪ್ರಾರಂಭವಾಗಿ ಏಪ್ರಿಲ್ 17ರಂದು ರಾತ್ರಿ 3.14 ಕ್ಕೆ ಮುಕ್ತಾಯವಾಗುತ್ತದೆ.


ರಾಮ ನವಮಿಯ ಇತಿಹಾಸವೇನು?

ಹಿಂದೂ ಪುರಾಣಗಳಲ್ಲಿ ಅತ್ಯಂತ ಶ್ರೇಷ್ಠ ವ್ಯಕ್ತಿಯೆಂದೇ ಪರಿಗಣಿಸಲ್ಪಟ್ಟಿರುವ ಭಗವಾನ್ ರಾಮನ ರಾಮ ನವಮಿಯಂದು ಜನ್ಮ ತಾಳಿದ್ದನು. ಹಿಂದೂ ಕ್ಯಾಲೆಂಡರ್‌ನಲ್ಲಿ ಸಾಂಪ್ರದಾಯಿಕವಾಗಿ ಚೈತ್ರ ಮಾಸದ ಒಂಬತ್ತನೇ ದಿನದಂದು ರಾಮ ನವಮಿಯನ್ನು ಆಚರಿಸಲಾಗುತ್ತದೆ. ಶ್ರೀರಾಮನು ವಿಷ್ಣುವಿನ ಏಳನೇ ಅವತಾರವೆಂದು ನಂಬಲಾಗುತ್ತದೆ. ಸದಾಚಾರ ಮತ್ತು ಸದ್ಗುಣಗಳ ಪ್ರತಿಪಾದಕನೆಂದು ರಾಮನನ್ನು ಕರೆಯಲಾಗುತ್ತದೆ. ಅನೇಕ ಶತಮಾನಗಳಿಂದ ರಾಮ ನವಮಿಯನ್ನು ಅತ್ಯಂತ ವೈಭವಾಗಿ ಆಚರಿಸಲಾಗುತ್ತದೆ.

ರಾಮ ನವಮಿ ಆಚರಣೆ ಏಕೆ ?

ಪ್ರಪಂಚದಾದ್ಯಂತದ ಹಿಂದೂಗಳು ಅಪಾರ ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದ್ದಾರೆ. ರಾಮ ನವಮಿಯು ಧರ್ಮ ಅಥವಾ ಸದಾಚಾರದ ನಿರಂತರ ಮೌಲ್ಯಗಳನ್ನು ಗೌರವಿಸುವ ಆಚರಣೆಯಾಗಿದೆ. ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಇದು ಸೂಚಿಸುತ್ತದೆ. ಭಗವಾನ್ ರಾಮನ ಕರ್ತವ್ಯ, ಗೌರವ ಮತ್ತು ತ್ಯಾಗದ ಉದಾಹರಣೆಯು ಜನರಲ್ಲಿ ನೈತಿಕ ತತ್ತ್ವ ಗಳನ್ನು ಸಂರಕ್ಷಿಸಲು ಮತ್ತು ಸದ್ಗುಣಶೀಲ ಜೀವನವನ್ನು ನಡೆಸಲು ಪ್ರೇರೇಪಿಸುತ್ತದೆ.


ಹೇಗೆ ಆಚರಣೆ ?

ರಾಮ ನವಮಿಯನ್ನು ಭಾರತದಲ್ಲಿ ಜನರು ಬಹಳ ಉತ್ಸಾಹ ಮತ್ತು ಆಸಕ್ತಿಯಿಂದ ಆಚರಿಸುತ್ತಾರೆ. ಭಗವಾನ್ ರಾಮನ ಸಣ್ಣ ವಿಗ್ರಹವನ್ನು ಪೀಠದ ಮೇಲೆ ಇರಿಸಲಾಗುತ್ತದೆ. ಮನೆಗಳನ್ನು ಸ್ವಚ್ಛಗೊಳಿಸುತ್ತಾರೆ ಮತ್ತು ಅಲಂಕರಿಸಲಾಗುತ್ತದೆ. ಮನೆ ಬಾಗಿಲಲ್ಲಿ ರಂಗೋಲಿಗಳನ್ನು ಬರೆಯಲಾಗುತ್ತದೆ. ಭಗವಾನ್ ರಾಮನಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಉಪವಾಸ, ಮೆರವಣಿಗೆ, ಮಹಾಕಾವ್ಯ ರಾಮಾಯಣ ಪಠಿಸುವುದು ಮತ್ತು ಕೇಳುವುದು, ಹವನಗಳಂತ ವಿವಿಧ ಆಚರಣೆಗಳಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ. ರಾಮ ನವಮಿಯು ಒಂಬತ್ತು ದಿನಗಳ ಚೈತ್ರ ನವರಾತ್ರಿ ಉತ್ಸವದ ಅಂತ್ಯವನ್ನು ಸೂಚಿಸುತ್ತದೆ. ಈ ಸಂದರ್ಭದಲ್ಲಿ ಜಾತಿ, ಧರ್ಮ ಮತ್ತು ರಾಷ್ಟ್ರೀಯತೆಯನ್ನು ಮೀರಿ ಎಲ್ಲ ಸಮುದಾಯಗಳು ಏಕತೆ ಮತ್ತು ಸಾಮರಸ್ಯದಿಂದ ಹಬ್ಬದಲ್ಲಿ ಪಾಲ್ಗೊಳ್ಳುತ್ತದೆ.


ಅಯೋಧ್ಯೆಯತ್ತ ಎಲ್ಲರ ಚಿತ್ತ

ಉತ್ತರಪ್ರದೇಶದ ಅಯೋಧ್ಯೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಯಾಕೆಂದರೆ ರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ಬಳಿಕ ಮೊದಲ ಬಾರಿಗೆ ಹೊಸ ಮಂದಿರದಲ್ಲಿ ರಾಮನ ಜನ್ಮ ದಿನವನ್ನು ಆಚರಿಸಲಾಗುತ್ತದೆ. ಈಗಾಗಲೇ ಇಲ್ಲಿ ಸಾಕಷ್ಟು ತಯಾರಿಗಳು ನಡೆದಿದ್ದು, ವಿಶ್ವದ ಗಮನ ಸೆಳೆದಿದೆ. ಹೊರದೇಶಗಳಲ್ಲೂ ಆಚರಣೆ ರಾಮ ಜನ್ಮದಿನವನ್ನು ಭಾರತದಲ್ಲಿ ಮಾತ್ರವಲ್ಲ ನೇಪಾಳ, ಬಾಂಗ್ಲಾದೇಶದ ಹಿಂದೂಗಳೂ ಅತ್ಯಂತ ವೈಭವದಿಂದ ಆಚರಿಸುತ್ತಾರೆ. ಉತ್ತರ ಅಮೆರಿಕ ಮತ್ತು ಯುರೋಪ್ ನ ಕೆಲವು ರಾಷ್ಟ್ರಗಳಲ್ಲೂ ರಾಮನವಮಿಯನ್ನು ಆಚರಿಸಲಾಗುತ್ತದೆ.

Continue Reading

ವಾಣಿಜ್ಯ

Indian stock market: ಸೆನ್ಸೆಕ್ಸ್ ಕುಸಿತ: ಭಾರತೀಯ ಷೇರು ಮಾರುಕಟ್ಟೆಗೆ ಭಾರಿ ಹೊಡೆತ

Indian stock market: ನಿರಂತರ ಮೂರು ದಿನಗಳಿಂದ ಸೆನ್ಸೆಕ್ಸ್ ಕುಸಿಯುತ್ತಿದ್ದು, ಇಂದು ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟವಾಗಿದೆ. ನಿಫ್ಟಿ ಸೂಚ್ಯಂಕದಲ್ಲಿ ಸುಮಾರು 650 ಪಾಯಿಂಟ್‌ಗಳನ್ನು ಕಳೆದುಕೊಂಡಿದೆ.

VISTARANEWS.COM


on

By

Indian stock market
Koo

ಮುಂಬಯಿ: ಕಳೆದ ಮೂರು ದಿನಗಳಿಂದ ಭಾರತೀಯ ಷೇರು ಮಾರುಕಟ್ಟೆಯಲ್ಲಿ (Indian stock market) ತೀವ್ರ ಕುಸಿತವಾಗುತ್ತಿದ್ದು, ನಾಲ್ಕನೇ ದಿನದ ವೇಳೆಗೆ ನಿಫ್ಟಿ (Nifty) ಸೂಚ್ಯಂಕದಲ್ಲಿ (index) ಸುಮಾರು 650 ಪಾಯಿಂಟ್‌ಗಳನ್ನು ಕಳೆದುಕೊಂಡು ನೇರ ನಷ್ಟವನ್ನು ಅನುಭವಿಸಿದೆ. ಏಪ್ರಿಲ್ 16ರಂದು ನಿಫ್ಟಿ 50 ಸೂಚ್ಯಂಕವು 22,125 ಮಟ್ಟದಲ್ಲಿ ವಹಿವಾಟು ಆರಂಭಿಸಿ 22,103 ಅಂಕಗಳಿಗೆ ತಲುಪಿತು.

ಬಿಎಸ್‌ಇ (BSE) ಸಂವೇದಿ ಸೂಚ್ಯಂಕವು 72,892 ರಲ್ಲಿ ವಹಿವಾಟು ಪ್ರಾರಂಭಿಸಿ ಮೂರು ಸೆಷನ್‌ಗಳಲ್ಲಿ ಸುಮಾರು 2,184 ಪಾಯಿಂಟ್‌ಗಳನ್ನು ಕಳೆದುಕೊಂಡಿತ್ತು. ಬ್ಯಾಂಕ್ ನಿಫ್ಟಿ (bank nifty) 47,436 ಮಟ್ಟದಲ್ಲಿ ವಹಿವಾಟು ಪ್ರಾರಂಭಿಸಿ ಕನಿಷ್ಠ 47,316 ಅನ್ನು ತಲುಪಿದೆ.

ಎಷ್ಟು ನಷ್ಟ ?

ಕಳೆದ ಮೂರು ಅವಧಿಗಳಲ್ಲಿ ನಿಫ್ಟಿ 50 ಸೂಚ್ಯಂಕವು ಸುಮಾರು 650 ಪಾಯಿಂಟ್‌ಗಳನ್ನು ಕಳೆದುಕೊಂಡಿದೆ. ಬಿಎಸ್‌ಇ ಸೆನ್ಸೆಕ್ಸ್ ಸುಮಾರು 2,200 ಪಾಯಿಂಟ್‌ಗಳನ್ನು ಕಳೆದುಕೊಂಡಿದೆ ಮತ್ತು ಬ್ಯಾಂಕ್ ನಿಫ್ಟಿ ಸೂಚ್ಯಂಕ 2,700 ಪಾಯಿಂಟ್‌ಗಳಷ್ಟು ಕುಸಿತ ಕಂಡಿದೆ. ಈ ಮಧ್ಯೆ ಸ್ಮಾಲ್-ಕ್ಯಾಪ್ ಸೂಚ್ಯಂಕವು ಸುಮಾರು ಶೇಕಡಾ 1ರಷ್ಟು ಮತ್ತು ಮಿಡ್ ಕ್ಯಾಪ್ ಸೂಚ್ಯಂಕವು ಸುಮಾರು ಶೇ. 0.40 ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

ಸೆನ್ಸೆಕ್ಸ್ ಕುಸಿತಕ್ಕೆ ಕಾರಣ ?

ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯು ಸ್ಟಾಕ್ ಮಾರುಕಟ್ಟೆಯ ಕುಸಿತಕ್ಕೆ ಕಾರಣ ಎನ್ನಲಾಗಿದೆ. ಯುದ್ಧ ಪರಿಸ್ಥಿತಿಯು ಇಲ್ಲಿ ಭೌಗೋಳಿಕ ರಾಜಕೀಯ ಅನಿಶ್ಚಿತತೆಯನ್ನು ಉಂಟು ಮಾಡಿದೆ.

ಜಾಗತಿಕ ಮಾರುಕಟ್ಟೆ ಸ್ಥಿತಿ ?

ಯುಎಸ್ ಷೇರು ಮಾರುಕಟ್ಟೆಯು ಶುಕ್ರವಾರ ತೀವ್ರ ನಷ್ಟ ಅನುಭವಿಸಿದ್ದರಿಂದ ವಿಶ್ವ ಮಟ್ಟದಲ್ಲೇ ಷೇರುಗಳು ಹೆಚ್ಚಾಗಿ ಮಾರಾಟವಾಗಿವೆ. ಏಷ್ಯಾದ ಮಾರುಕಟ್ಟೆಗಳಾದ ನಿಕ್ಕಿ, ಹ್ಯಾಂಗ್ ಸೆಂಗ್, ಕೊಸ್ಪಿಯಲ್ಲಿ ಸೋಮವಾರ ಹೆಚ್ಚಿನ ಒತ್ತಡ ಕಂಡು ಬಂದಿದೆ.


ಕಚ್ಚಾ ತೈಲ ಬೆಲೆ ?

ಕಚ್ಚಾ ತೈಲ ಬೆಲೆಗಳು ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಳೆದ ಆರು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ. ಮಾರ್ಚ್ 2024 ರಲ್ಲಿ ಸುಮಾರು ಶೇ. 6 ರಷ್ಟು ಹೆಚ್ಚಳವಾಗಿದ್ದು, ಏಪ್ರಿಲ್‌ನಲ್ಲಿ ಈಗಾಗಲೇ ಶೇ. 3 ರಷ್ಟು ಏರಿಕೆಯಾಗಿದೆ. ಹೀಗೆಯೇ ಕಚ್ಚಾ ತೈಲ ಬೆಲೆ ಏರಿಕೆಯಾದರೆ ಸ್ಥಳೀಯ ಕರೆನ್ಸಿ ಮತ್ತು ಹಣದುಬ್ಬರದ ಮೇಲೆ ಒತ್ತಡ ಉಂಟುಮಾಡುತ್ತದೆ.

ಯುಎಸ್ ಡಾಲರ್ ಮೌಲ್ಯ ?

ಯುಎಸ್ ಡಾಲರ್ ಮೌಲ್ಯ ನಿರಂತರವಾಗಿ ಏರುತ್ತಿದ್ದು, ಯುಎಸ್ ಡಾಲರ್ ಸೂಚ್ಯಂಕವು 106ಕ್ಕೆ ಸಮೀಪಿಸಿದೆ. ಜಪಾನಿನ ಯೆನ್ ವಿರುದ್ಧ 34 ವರ್ಷಗಳ ಗರಿಷ್ಠ ಮಟ್ಟವನ್ನು ಯುಎಸ್ ಡಾಲರ್ ತಲುಪಿದೆ. ಇದು ಭಾರತೀಯ ಷೇರು ಮಾರುಕಟ್ಟೆ ಸೇರಿದಂತೆ ಜಾಗತಿಕ ಇಕ್ವಿಟಿ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ.

Continue Reading
Advertisement
2nd PUC Exam
ಕರ್ನಾಟಕ10 mins ago

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಏ.18ರವರೆಗೆ ಅವಕಾಶ

Lok Sabha Election
ದೇಶ13 mins ago

Lok Sabah Election : ಹೇಮಮಾಲಿನಿಗೆ ಅವಹೇಳನ; ಕಾಂಗ್ರೆಸ್​ ನಾಯಕ ಸುರ್ಜೇವಾಲಾಗೆ 48 ಗಂಟೆ ನಿಷೇಧ

Kanker Encounter
ದೇಶ18 mins ago

Kanker Encounter: ಎನ್‌ಕೌಂಟರ್‌ನಲ್ಲಿ 18 ಮಾವೋವಾದಿಗಳ ಹತ್ಯೆಗೈದ ಭದ್ರತಾ ಪಡೆ

Karnataka weather Forecast
ಮಳೆ50 mins ago

Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

Oil Pulling
ಆರೋಗ್ಯ52 mins ago

Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

UPSC Results 2023
ಪ್ರಮುಖ ಸುದ್ದಿ56 mins ago

UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

Take action to close failed borewell says Vijayanagara DC MS Diwakar
ವಿಜಯನಗರ1 hour ago

Vijayanagara News: ವಿಫಲ ಕೊಳವೆಬಾವಿ ಮುಚ್ಚಲು ಕ್ರಮವಹಿಸಿ: ಡಿಸಿ ಎಂ.ಎಸ್. ದಿವಾಕರ್‌

Job Alert
ಉದ್ಯೋಗ1 hour ago

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Kalaburagi MP Dr. Umesh Jadav spoke in booth level workers meeting Chittapur assembly constituency
ಕಲಬುರಗಿ1 hour ago

Lok Sabha Election 2024: ಕೋಲಿ ಸಮುದಾಯದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ. ಉಮೇಶ್ ಜಾಧವ್ ಕಿಡಿ

Maddur MLA Uday election campaign in various places of Maddur taluk
ಮಂಡ್ಯ1 hour ago

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ14 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌