Delhi MCD Election| 134 ವಾರ್ಡ್​ಗಳನ್ನು ಗೆದ್ದ ಆಪ್​; ಪ್ರಧಾನಿ ನರೇಂದ್ರ ಮೋದಿಯವರಿಂದ ಆಶೀರ್ವಾದ ಕೋರಿದ ಕೇಜ್ರಿವಾಲ್​ - Vistara News

ದಿಲ್ಲಿ ಪಾಲಿಕೆ ಚುನಾವಣೆ

Delhi MCD Election| 134 ವಾರ್ಡ್​ಗಳನ್ನು ಗೆದ್ದ ಆಪ್​; ಪ್ರಧಾನಿ ನರೇಂದ್ರ ಮೋದಿಯವರಿಂದ ಆಶೀರ್ವಾದ ಕೋರಿದ ಕೇಜ್ರಿವಾಲ್​

ಆಮ್​ ಆದ್ಮಿ ಪಕ್ಷ ಇತ್ತೀಚೆಗೆ ರಾಷ್ಟ್ರಮಟ್ಟದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಸಕಲ ಪ್ರಯತ್ನ ಮಾಡುತ್ತಿದೆ. ಈ ಹೊತ್ತಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಗೆದ್ದಿದ್ದು ಆ ಪಕ್ಷಕ್ಕೆ ವರದಾನ ಆಗಲಿದೆ.

VISTARANEWS.COM


on

AAP wins 134 Ward Kejriwal seeks PM Modi blessing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಗೆಲುವು ಸಾಧಿಸುತ್ತಿದ್ದಂತೆ, ಪಕ್ಷದ ನಾಯಕರು, ಪ್ರಮುಖರು, ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಪಕ್ಷದ ಪ್ರಧಾನ ಕಚೇರಿಯ ಹೊರಗೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್​ ‘ನಾವೆಲ್ಲರೂ ಒಟ್ಟಾಗಿ ಭ್ರಷ್ಟಾಚಾರ ತೊಡೆದು ಹಾಕಬೇಕು. ದೆಹಲಿಯನ್ನು ಸ್ವಚ್ಛಗೊಳಿಸಬೇಕು. ಯಾರೆಲ್ಲ ನಮಗೆ ಮತ ಹಾಕಿದ್ದಾರೋ, ಅವರಿಗೆ ಧನ್ಯವಾದಗಳು. ಹಾಗೇ, ಯಾರೆಲ್ಲ ನಮಗೆ ಮತ ಹಾಕಿಲ್ಲವೋ, ಅವರ ಸಮಸ್ಯೆಗಳನ್ನೇ ನಾವು ಮೊದಲು ಪರಿಹಾರ ಮಾಡುತ್ತೇವೆ’ ಎಂದು ಹೇಳಿದರು. ಹಾಗೇ, ‘ಹಾಗೇ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ನಮಗೆ, ದೆಹಲಿಗೆ ಅತ್ಯುತ್ತಮ ಆಡಳಿತ ನೀಡಲು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಬೇಕು’ ಎಂದೂ ಹೇಳಿದ್ದಾರೆ.

ದೆಹಲಿ ಮಹಾನಗರ ಪಾಲಿಕೆಯಲ್ಲಿ ಒಟ್ಟು 250 ವಾರ್ಡ್​ಗಳಿದ್ದು, ಡಿಸೆಂಬರ್​ 4ರಂದು ಚುನಾವಣೆ ನಡೆದಿತ್ತು. ಇಂದು ಬೆಳಗ್ಗೆಯಿಂದ ಪ್ರಾರಂಭವಾದ ಮತಎಣಿಕೆ ಈಗ ಮುಕ್ತಾಯವಾಗಿದ್ದು, 134 ವಾರ್ಡ್​​ಗಳನ್ನು ಆಮ್​ ಆದ್ಮಿ ಪಕ್ಷ ಗೆದ್ದುಕೊಂಡಿದೆ. ಹಾಗೇ, ಬಿಜೆಪಿ 104 ವಾರ್ಡ್​ಗಳಲ್ಲಿ, ಕಾಂಗ್ರೆಸ್​ 9 ಮತ್ತು ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಳೆದ 15 ವರ್ಷಗಳಿಂದಲೂ ಮಹಾನಗರ ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿಯೇ ಹಿಡಿದಿತ್ತು. 2012ರಲ್ಲಿ ಆಮ್​ ಆದ್ಮಿ ಪಕ್ಷ ಅಸ್ತಿತ್ವಕ್ಕೆ ಬಂದ ಮೇಲೆ 2017ರಲ್ಲಿ ಮೊಟ್ಟಮೊದಲಿಗೆ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಅದರಲ್ಲಿ ಸೋತಿತ್ತು. ಈ ಸಲ ಎರಡನೇ ಬಾರಿಗೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿತ್ತು, ಭರ್ಜರಿಯಾಗಿಯೇ ಗೆಲುವು ಪಡೆದಿದೆ. ಆಪ್​ ಇದೇ ಮೊದಲ ಬಾರಿಗೆ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದಂತಾಗಿದೆ.

ಆಮ್​ ಆದ್ಮಿ ಪಕ್ಷ ಇತ್ತೀಚೆಗೆ ರಾಷ್ಟ್ರಮಟ್ಟದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಸಕಲ ಪ್ರಯತ್ನ ಮಾಡುತ್ತಿದೆ. ಪಂಜಾಬ್​ ಚುನಾವಣೆಯಲ್ಲಿ ಗೆದ್ದು, ಅಲ್ಲಿ ಸರ್ಕಾರ ರಚನೆ ಮಾಡಿದ ಬೆನ್ನಲ್ಲೇ, ಹಿಮಾಚಲ ಪ್ರದೇಶ, ಗುಜರಾತ್​ ವಿಧಾನಸಭೆ ಚುನಾವಣೆಗಳಲ್ಲೂ ಸ್ಪರ್ಧಿಸಿದೆ. ಇದೇ ಹೊತ್ತಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಜಯ ದೊರೆತಿದ್ದು, ಪಕ್ಷದ ಪಾಲಿಗೆ ಬಹುದೊಡ್ಡ ವರದಾನ ಆಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Delhi MCD Election| ಗೆಲುವಿನೆಡೆಗೆ ಹೆಜ್ಜೆ ಹಾಕುತ್ತಿರುವ ಆಮ್​ ಆದ್ಮಿ ಪಕ್ಷ; ಸದ್ಯ ಬಿಜೆಪಿಗೆ 60 ವಾರ್ಡ್​​ಗಳಲ್ಲಿ ಗೆಲುವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಿಲ್ಲಿ ಪಾಲಿಕೆ ಚುನಾವಣೆ

Delhi Mayor Polls: ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದ ಸುಪ್ರೀಂ, ಆಪ್‌ಗೆ ಭಾರಿ ಮುನ್ನಡೆ

Delhi Mayor Polls: ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದರಿಂದ ಬಿಜೆಪಿ ಹಾಗೂ ಆಪ್‌ ನಡುವಿನ ಬಿಕ್ಕಟ್ಟು ಬಹುತೇಕ ಬಗೆಹರಿದಂತಾಗಿದೆ.

VISTARANEWS.COM


on

Delhi Mayor Polls
Koo

ನವದೆಹಲಿ: ಮಹಾನಗರ ಪಾಲಿಕೆಯ ಮೇಯರ್‌ ಆಯ್ಕೆಯ ಕಗ್ಗಂಟಿನ (Delhi Mayor Polls) ವಿಚಾರದಲ್ಲಿ ಬಿಜೆಪಿ ವಿರುದ್ಧ ಆಪ್‌ಗೆ ಭಾರಿ ಮುನ್ನಡೆ ದೊರೆತಿದೆ. “ಮೇಯರ್‌ ಆಯ್ಕೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಪ್ರಸ್ತಾಪಿಸಿದ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ” ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಹಾಗೆಯೇ, ೨೪ ಗಂಟೆಯೊಳಗೆ ಮೇಯರ್‌ ಆಯ್ಕೆಗೆ ಚುನಾವಣೆ ನಡೆಸಿ ಎಂದು ಲೆಫ್ಟಿನೆಂಟ್‌ ಗವರ್ನರ್‌ಗೆ ಸೂಚಿಸಿದೆ.

“ದೆಹಲಿ ಮೇಯರ್‌ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ. ಇದರ ಕುರಿತು ಕಾನೂನಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ” ಎಂದು ಆಪ್‌ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೇಯರ್‌ ಆಯ್ಕೆಗೆ ಜನವರಿ ೬, ೨೪ ಹಾಗೂ ಫೆಬ್ರವರಿ ೬ರಂದು ಸಭೆ ನಡೆಸಲಾಗಿತ್ತು. ಆದರೆ, ಬಿಜೆಪಿ-ಆಪ್‌ ಗಲಾಟೆಯಿಂದಾಗಿ ಆಯ್ಕೆ ಸಾಧ್ಯವಾಗಿರಲಿಲ್ಲ.

ಇದುವರೆಗೆ, ಪಾಲಿಕೆಯ ಸಭೆಯಲ್ಲಿ ಬಿಜೆಪಿಯ ನಾಮನಿರ್ದೇಶಿತ ಸದಸ್ಯರಿಗೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಮೊದಲು ಮತದಾನ ಮಾಡಲು ಅವಕಾಶ ನೀಡಿದ ಕಾರಣ ಆಪ್‌ ಆಕ್ರೋಶ ವ್ಯಕ್ತಪಡಿಸಿದೆ. ಪ್ರತಿ ಸಭೆಯಲ್ಲಿಯೂ ನಾಮನಿರ್ದೇಶಿತ ಸದಸ್ಯರಿಗೆ ಮೊದಲು ಮತದಾನದ ಅವಕಾಶ ನೀಡಿದ ಕಾರಣ ಬೇಸತ್ತ ಆಪ್‌ ಕೋರ್ಟ್‌ ಮೊರೆ ಹೋಗಿದೆ.

ಇದನ್ನೂ ಓದಿ: Delhi Mayor Polls: ದಿಲ್ಲಿ ಮಹಾನಗರ ಪಾಲಿಕೆ ಸಭೆ ಮುಂದೂಡಿಕೆ, ಮತ್ತೆ ಆಯ್ಕೆಯಾಗಲಿಲ್ಲ ಮೇಯರ್! ಆಪ್ ಕೋರ್ಟ್ ಮೊರೆ?

Continue Reading

ದಿಲ್ಲಿ ಪಾಲಿಕೆ ಚುನಾವಣೆ

Delhi MCD Ruckus | ದೆಹಲಿಯಲ್ಲಿ ಬೀದಿಗೆ ಬಂದ ಬಿಜೆಪಿ, ಆಪ್‌ ಜಗಳ, ಮತ ಹಾಕಿದ ಜನರಿಗೇ ನಾಚಿಕೆಯಾಗುವಂತೆ ಕಿತ್ತಾಟ

ದೆಹಲಿ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಆಪ್‌ ಕೌನ್ಸಿಲರ್‌ಗಳ ಕಿತ್ತಾಟವು ಮುಗಿಲುಮುಟ್ಟಿದೆ. ಕೆಲ ದಿನಗಳ ಹಿಂದೆ ಪಾಲಿಕೆಯ ಕಚೇರಿಯಲ್ಲಿ ನಡೆದಿದ್ದ ಗಲಾಟೆ (Delhi MCD Ruckus) ಈಗ ಬೀದಿಗೆ ಬಂದಿದೆ.

VISTARANEWS.COM


on

Delhi MCD Ruckus
Koo

ನವದೆಹಲಿ: ಮುನ್ಸಿಪಲ್‌ ಕಾರ್ಪೊರೇಷನ್‌ ಆಫ್‌ ದೆಹಲಿ (MCD)ಯ ಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಆಫ್‌ ಕೌನ್ಸಿಲರ್‌ಗಳ ಮಧ್ಯೆ ನಡೆಯುತ್ತಿರುವ ಗಲಾಟೆಯೀಗ (Delhi MCD Ruckus) ಬೀದಿಗೆ ಬಂದಿದೆ. ಮೇಯರ್‌ ಚುನಾವಣೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು, ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಇಂತಹವರಿಗೆ ನಾವು ಮತ ಹಾಕಿದೆವಾ ಎಂದು ಜನ ಬೇಸರ ವ್ಯಕ್ತಪಡಿಸುವಷ್ಟರ ಮಟ್ಟಿಗೆ ಕಾದಾಟ ತಾರಕಕ್ಕೇರಿದೆ.

ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಪ್ರತಿಭಟನೆ
ಲೆಫ್ಟಿನೆಂಟ್‌ ಗವರ್ನರ್‌ ಅವರು ಮಹಾನಗರ ಪಾಲಿಕೆಯ ಸ್ಪೀಕರ್‌ ಆಗಿ ಬಿಜೆಪಿಯ ಸತ್ಯ ಶರ್ಮಾ ಅವರನ್ನು ನೇಮಿಸಿದ ಕಾರಣ ಬಿಜೆಪಿ ಹಾಗೂ ಲೆಫ್ಟಿನೆಂಟ್‌ ಗವರ್ನರ್‌ ವಿರುದ್ಧ ಆಪ್‌ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಕೌನ್ಸಿಲರ್‌ಗಳು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮೇಲೆ ಜಲಫಿರಂಗಿ
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದು, ಗುಂಪನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿಯ ಇಬ್ಬರು ಮಹಿಳಾ ಕೌನ್ಸಿಲರ್‌ಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಇದರಿಂದಾಗಿ ಪೊಲೀಸರು ಜಲಫಿರಂಗಿ ಪ್ರಯೋಗಿಸಬೇಕಾಯಿತು.

ಏಕೆ ಇಷ್ಟೊಂದು ಗಲಾಟೆ?
ಜನವರಿ 6ರಂದು ನಡೆದ ಮೊದಲ ಸಭೆಯ ವೇಳೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ತಾತ್ಕಾಲಿಕವಾಗಿ ಬಿಜೆಪಿಯ ಸತ್ಯ ಶರ್ಮಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುತ್ತಿದ್ದಂತೆ ಸಭೆಯಲ್ಲಿ ಸಂಘರ್ಷ ಶುರುವಾಯಿತು. ಶರ್ಮಾ ಅವರು ಮೊದಲಿಗೆ, ನಾಮನಿರ್ದೇಶನಗೊಂಡ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆಪ್ ಸದಸ್ಯರು, ನಾಮನಿರ್ದೇಶನಗೊಂಡ ಸದಸ್ಯರಿಗಿಂತ ಮೊದಲು, ಚುನಾಯಿತ ಸದಸ್ಯರಿಗೆ ಪ್ರಮಾಣವಚನ ಬೋಧಿಸಬೇಕು ಎಂದು ಪಟ್ಟು ಹಿಡಿದರು. ಆಗ ಬಿಜೆಪಿ ಮತ್ತು ಆಪ್ ಸದಸ್ಯರ ಮಧ್ಯೆ ಜಟಾಪಟಿ ಶುರುವಾಯಿತು.

ಹೊಸದಾಗಿ ಚುನಾಯಿತವಾದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ಗೆ 10 ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಸಕ್ಸೇನಾ ಅವರು ಶುಕ್ರವಾರ ಮೇಯರ್ ಚುನಾವಣೆಯ ಅಧ್ಯಕ್ಷತೆ ವಹಿಸಲು ಬಿಜೆಪಿ ಕೌನ್ಸಿಲರ್ ಸತ್ಯ ಶರ್ಮಾ ಅವರನ್ನು ತಾತ್ಕಾಲಿಕ ಸ್ಪೀಕರ್ ಎಂದು ಘೋಷಿಸಿದರು. ಮೇಯರ್ ಆಯ್ಕೆಯ ಹಿನ್ನೆಲೆಯು ಆಪ್ ಮತ್ತು ಬಿಜೆಪಿ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ | Delhi Mayor Polls | ಮಾರಾಮಾರಿ ನಡುವೆ ದಿಲ್ಲಿ ಪಾಲಿಕೆ ಸಭೆ ಮುಂದೂಡಿಕೆ, ನಡೆಯಲಿಲ್ಲ ಮೇಯರ್ ಎಲೆಕ್ಷನ್!

Continue Reading

ದಿಲ್ಲಿ ಪಾಲಿಕೆ ಚುನಾವಣೆ

Delhi MCD Election | ಆಪ್​ ವಿರುದ್ಧ ಸೋತಿದ್ದರೂ ಮೇಯರ್​-ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ

ಆಮ್​ ಆದ್ಮಿ ಪಕ್ಷದಿಂದ ಶೆಲ್ಲಿ ಒಬೆರಾಯ್​ ಮೇಯರ್​ ಸ್ಥಾನಕ್ಕೆ ಮತ್ತು ಆಲೆ ಮೊಹಮ್ಮದ್​ ಇಕ್ಬಾಲ್​ ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳಾಗಿದ್ದಾರೆ.

VISTARANEWS.COM


on

Rekha Gupta is Delhi BJP Mayor candidate
ರೇಖಾ ಗುಪ್ತಾ ಮತ್ತು ಶೆಲ್ಲಿ ಓಬೆರಾಯ್​
Koo

ನವ ದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷದ ಎದುರು ಸೋತಿದ್ದ ಬಿಜೆಪಿ, ಅಷ್ಟು ಸುಲಭಕ್ಕೆ ಅಲ್ಲಿನ ಪಟ್ಟ ಬಿಟ್ಟುಕೊಡುವ ಹಾಗೆ ಕಾಣುತ್ತಿಲ್ಲ. ಡಿಸೆಂಬರ್​ 4ರಂದು ದೆಹಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಒಟ್ಟು 250 ವಾರ್ಡ್​ಗಳಿಗೆ ನಡೆದ ಎಲೆಕ್ಷನ್​​ನಲ್ಲಿ ಆಮ್​ ಆದ್ಮಿ ಪಕ್ಷ 134 ಸೀಟುಗಳನ್ನು ಗೆದ್ದಿದ್ದರೆ, ಬಿಜೆಪಿ 104 ವಾರ್ಡ್​ಗಳಲ್ಲಿ ಜಯಸಾಧಿಸಿತ್ತು. ಈ ಮೂಲಕ ಕಳೆದ 15ವರ್ಷಗಳಿಂದಲೂ ದೆಹಲಿ ಮಹಾನಗರ ಪಾಲಿಕೆಯಲ್ಲಿ ಇದ್ದ ಬಿಜೆಪಿ ಆಡಳಿತ ಕೊನೆಗೊಂಡಿತ್ತು.

ಗೆದ್ದ ಪಕ್ಷದಿಂದಲೇ ಮೇಯರ್​ ಮತ್ತು ಉಪಮೇಯರ್​ಗಳನ್ನು ಆಯ್ಕೆ ಮಾಡಲಾಗುತ್ತದೆ. ದೆಹಲಿ ಮಹಾನಗರ ಪಾಲಿಕೆಯ ಚುಕ್ಕಾಣಿ ಹಿಡಿದ ಆಮ್​ ಆದ್ಮಿ ಪಕ್ಷ ಜನವರಿ 6ರಂದು ಮೇಯರ್​ ಮತ್ತು ಉಪಮೇಯರ್​ ಸ್ಥಾನದ ಆಯ್ಕೆ ಪ್ರಕ್ರಿಯೆಯನ್ನು ನಿಗದಿಪಡಿಸಿತ್ತು. ಇಂದು ನಾಮಪತ್ರ ಸಲ್ಲಿಸಲು ಕೊನೇ ದಿನವಾಗಿತ್ತು. ಇದೇ ವೇಳೆ ಬಿಜೆಪಿ ಯೂಟರ್ನ್​ ಹೊಡೆದಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಇದೀಗ ಮೇಯರ್​-ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅದರಂತೆ ಮೇಯರ್​ ಸ್ಥಾನಕ್ಕೆ ಬಿಜೆಪಿ ರೇಖಾ ಗುಪ್ತಾರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು, ಉಪಮೇಯರ್ ಸ್ಥಾನಕ್ಕೆ ಕಮಲ್ ಬಾಗ್ರಿ ಅವರನ್ನು ಕಣಕ್ಕಿಳಿಸಿದೆ. ಇವರಿಬ್ಬರೂ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಇದರಲ್ಲಿ ರೇಖಾಗುಪ್ತಾ ಶಾಲಿಮಾರ್ ಬಾಘ್​​ನ ಕೌನ್ಸಿಲರ್​ ಆಗಿದ್ದು, ಮೂರು ಅವಧಿಗೆ ಆಡಳಿತ ನಡೆಸಿದ ಅನುಭವಿ. ಹಾಗೇ, ಕಮಲ್​ ಬಾಗ್ರಿಯವರು ರಾಮ್​ ನಗರ ವಾರ್ಡ್​​ನ ಕೌನ್ಸಿಲರ್​. ಮೇಯರ್​ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು. ಗೆದ್ದ ಪಕ್ಷದವರೇ ಆಯ್ಕೆಯಾಗಬೇಕು ಎಂದೇನೂ ಇಲ್ಲ. ಹಾಗಾಗಿಯೇ ನಾವು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದೆ. ಇನ್ನೊಂದೆಡೆ ಆಮ್​ ಆದ್ಮಿ ಪಕ್ಷದಿಂದ ಶೆಲ್ಲಿ ಒಬೆರಾಯ್​ ಮೇಯರ್​ ಅಭ್ಯರ್ಥಿಯಾಗಿದ್ದು, ಉಪಮೇಯರ್​ ಸ್ಥಾನಕ್ಕೆ ಆಲೆ ಮೊಹಮ್ಮದ್​ ಇಕ್ಬಾಲ್​ ಅವರನ್ನು ಅಭ್ಯರ್ಥಿಯನ್ನಾಗಿಸಿದೆ.

ಇದನ್ನೂ ಓದಿ: Delhi MCD Election | ದೆಹಲಿ ಪಾಲಿಕೆ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಿಂದ ಆಪರೇಷನ್‌ ಕಮಲ?

Continue Reading

ದಿಲ್ಲಿ ಪಾಲಿಕೆ ಚುನಾವಣೆ

BJP Poaching AAP | ದೆಹಲಿಯ ಒಬ್ಬ ಕೌನ್ಸಿಲರ್‌ಗೆ ಬಿಜೆಪಿ 10 ಕೋಟಿ ರೂ. ಆಫರ್‌, ಆಪ್‌ ಗಂಭೀರ ಆರೋಪ

ದೆಹಲಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗಾಣಿಸಿದ ಆಪ್‌ ಈಗ ಬಿಜೆಪಿ ವಿರುದ್ಧ “ಕುದುರೆ ವ್ಯಾಪಾರ”ದ (BJP Poaching AAP) ಆರೋಪ ಮಾಡಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ, ಬಿಜೆಪಿಯ ೧೫ ವರ್ಷಗಳ ಆಡಳಿತವನ್ನು ಕೊನೆಗಾಣಿಸಿದ ಆಪ್‌ ಈಗ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದೆ. “ಆಪ್‌ನ ೧೦ ಕೌನ್ಸಿಲರ್‌ಗಳ ಖರೀದಿಗೆ ಬಿಜೆಪಿ ೧೦೦ ಕೋಟಿ ರೂಪಾಯಿಯ ಆಫರ್‌ (BJP Poaching AAP) ನೀಡಿದೆ” ಎಂದು ಆಪ್‌ ಕೌನ್ಸಿಲರ್‌ಗಳು ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದಾರೆ.

“ಪಾಲಿಕೆ ಚುನಾವಣೆಯಲ್ಲಿ ಸೋತ ಬಿಜೆಪಿಯು ಹೊಲಸು ರಾಜಕಾರಣ ಮಾಡುತ್ತಿದೆ. ಹಣಬಲದಿಂದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ. ಆಪ್‌ನ ಒಬ್ಬ ಕೌನ್ಸಿಲರ್‌ಗೆ ೧೦ ಕೋಟಿ ರೂ. ಆಫರ್‌ ನೀಡಿದೆ. ಒಬ್ಬ ಕೌನ್ಸಿಲರ್‌ಗೆ ತಲಾ ೧೦ ಕೋಟಿ ರೂ. ನೀಡಿ, ಒಟ್ಟು ೧೦ ಕೌನ್ಸಿಲರ್‌ಗಳನ್ನು ಸೆಳೆಯುವ ತಂತ್ರ ಬಿಜೆಪಿಯದ್ದಾಗಿದೆ. ಹಾಗೆಯೇ, ಒಂದು ಕ್ರಾಸ್‌ ವೋಟಿಂಗ್‌ಗೆ ೫೦ ಲಕ್ಷ ರೂ. ಫಿಕ್ಸ್‌ ಮಾಡಿದೆ. ಆ ಮೂಲಕ ದೆಹಲಿ ಪಾಲಿಕೆಯಲ್ಲಿ ಆಪ್‌ ಆಡಳಿತ ನಡೆಸುವುದನ್ನು ತಡೆಯಲು ಬಿಜೆಪಿ ಎಲ್ಲ ಪ್ರಯತ್ನ ಮಾಡುತ್ತಿದೆ” ಎಂದು ಆಪ್‌ ಕೌನ್ಸಿಲರ್‌ಗಳಾದ ಡಾ.ರೊನಾಕ್ಷಿ ಶರ್ಮಾ, ಅರುಣ್‌ ನವಾರಿಯಾ ಹಾಗೂ ಜ್ಯೋತಿ ರಾಣಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

ಇದಕ್ಕೂ ಮೊದಲು, ಬಿಜೆಪಿ ಕೂಡ ಆಪ್‌ ವಿರುದ್ಧ ಇದೇ ಆರೋಪ ಮಾಡಿದೆ. ಬಿಜೆಪಿ ಕೌನ್ಸಿಲರ್‌ಗಳಿಗೆ ಆಪ್‌ ಆಮಿಷ ಒಡ್ಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ದೆಹಲಿ ಮಹಾನಗರ ಪಾಲಿಕೆಯ ೨೫೦ ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಆಪ್‌ ೧೩೪, ಬಿಜೆಪಿ ೧೦೪ ಹಾಗೂ ಕಾಂಗ್ರೆಸ್‌ ೯ ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ | Delhi MCD Election| ದೆಹಲಿ ಮಹಾನಗರ ಪಾಲಿಕೆ ಆಪ್​ ಮಡಿಲಿಗೆ; ಬಿಜೆಪಿಯ 15 ವರ್ಷಗಳ ಆಡಳಿತ ಅಂತ್ಯ

Continue Reading
Advertisement
MDH everest spices row
ದೇಶ16 mins ago

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Narendra Modi and Siddaramaiah
ರಾಜಕೀಯ26 mins ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ26 mins ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

baba ramdev supreme court
ಪ್ರಮುಖ ಸುದ್ದಿ27 mins ago

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Murder Case in raichur
ರಾಯಚೂರು31 mins ago

Murder Case : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

Lok Sabha Election-2024
Latest36 mins ago

Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

Lok Sabha Election 2024 KP Nanjundi resigns from Legislative Council
Lok Sabha Election 202456 mins ago

Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

gold rate today kajal
ಚಿನ್ನದ ದರ1 hour ago

Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Bengaluru Karaga 2024
ಬೆಂಗಳೂರು1 hour ago

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

balakot airstrike RKS bhadauria
ಪ್ರಮುಖ ಸುದ್ದಿ1 hour ago

Balakot Airstrike: ನಮ್ಮ ಯೋಧರ ಕೂದಲೂ ಕೊಂಕದಂತೆ ಪಾಕ್‌ ವಾಯುಪಡೆ ಭೇದಿಸಿ ದಾಳಿ ನಡೆಸಲಾಗಿತ್ತು: ಮಾಜಿ ಐಎಎಫ್‌ ಮುಖ್ಯಸ್ಥ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು20 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ21 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು24 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌