AAP Poster Campaign: ಮೋದಿ ಓಡಿಸಿ, ದೇಶ ಉಳಿಸಿ ಬಳಿಕ ದೇಶಾದ್ಯಂತ ಆಪ್‌ನಿಂದ ಪೋಸ್ಟರ್ ಕ್ಯಾಂಪೇನ್ ಶುರು! - Vistara News

ದೇಶ

AAP Poster Campaign: ಮೋದಿ ಓಡಿಸಿ, ದೇಶ ಉಳಿಸಿ ಬಳಿಕ ದೇಶಾದ್ಯಂತ ಆಪ್‌ನಿಂದ ಪೋಸ್ಟರ್ ಕ್ಯಾಂಪೇನ್ ಶುರು!

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ವಿರುದ್ಧ ತಿರುಗಿ ಬಿದ್ದಿರುವ ಆಮ್ ಆದ್ಮಿ ಪಾರ್ಟಿ(AAP), ದೇಶಾದ್ಯಂತ ಅವರ ವಿರುದ್ಧ ಪೋಸ್ಟರ್ ವಾರ್ ಆರಂಭಿಸಿದೆ. ಏಪ್ರಿಲ್ 10ರಿಂದ ದೇಶ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಈ ಕ್ಯಾಂಪೇನ್ ಆರಂಭವಾಗಲಿದೆ ಎಂದು ಆಪ್ ಹೇಳಿದೆ(AAP Poster Campaign).

VISTARANEWS.COM


on

AAP's pan-India poster campaign targeting PM starts today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮೋದಿಯನ್ನು ಓಡಿಸಿ, ದೇಶವನ್ನು ಉಳಿಸಿ ಅಭಿಯಾನದ ಬಳಿಕ ಆಮ್ ಆದ್ಮಿ ಪಾರ್ಟಿ(AA), ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಪೋಸ್ಟರ್ ಕ್ಯಾಂಪೇನ್ (poster campaign) ಗುರುವಾರ ಆರಂಭಿಸಿದೆ. ಒಟ್ಟು 11 ಭಾಷೆಗಳಲ್ಲಿ ದೇಶಾದ್ಯಂತ ಮೋದಿ ವಿರೋಧಿ ಪೋಸ್ಟರ್‌ಗಳನ್ನು ಪ್ರದರ್ಶಿಸಿದೆ. ಈ ಹಿಂದೆ, ಮೋದಿಯನ್ನು ಓಡಿಸಿ, ದೇಶವನ್ನು ಉಳಿಸಿ ಪೋಸ್ಟರ್‌ಗಳನ್ನು ದಿಲ್ಲಿಯ ಬೀದಿಗಳಲ್ಲಿ ಅಂಟಿಸಲಾಗಿತ್ತು. ಈ ಸಂಬಂಧ ದಿಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ನೂರು ಎಫ್ಐಆರ್‌ಗಳನ್ನು ದಾಖಲಿಸಿದ್ದಾರೆ(AAP Poster Campaign).

ಪೋಸ್ಟರ್ ವಾರ್ ಲಾಂಚ್ ಮಾಡಿದ ಆಪ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ಟೀಕೆ ಮಾಡಿದೆ. ಮೋದಿ ಅವರ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಪ್ರಶ್ನೆ ಎತ್ತಲಾಗಿದೆ. ಭಾರತದ ಪ್ರಧಾನಿ ಓದು ಬರಹ ಕಲಿತವರು ಆಗಬೇಕೆ ಬೇಡ್ವೇ ಎಂದು ಕೇಳಿದೆ. ಎಎಪಿ ಮಾರ್ಚ್ 30 ರಂದು ದೇಶಾದ್ಯಂತ ರಾಜ್ಯಗಳಲ್ಲಿ ಪೋಸ್ಟರ್‌ಗಳನ್ನು ಪ್ರದರ್ಶಿಸುತ್ತದೆ. ಪಕ್ಷದ ಎಲ್ಲಾ ರಾಜ್ಯ ಘಟಕಗಳಿಗೆ ಆಯಾ ರಾಜ್ಯಗಳಲ್ಲಿ ಪೋಸ್ಟರ್‌ಗಳನ್ನು ಅಂಟಿಸಲು ಸೂಚಿಸಲಾಗಿದೆ. ಪೋಸ್ಟರ್‌ಗಳನ್ನು 11 ಭಾಷೆಗಳಲ್ಲಿ ಮುದ್ರಿಸಲಾಗಿದೆ ಎಂದು ದೆಹಲಿ ಎಎಪಿ ಮುಖ್ಯಸ್ಥ ಗೋಪಾಲ್ ರೈ ಪಿಟಿಐಗೆ ತಿಳಿಸಿದ್ದಾರೆ.

ಭಾರತದ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಆಪ್ ಮೋದಿ ವಿರೋಧಿ ಪೋಸ್ಟರ್ ಕ್ಯಾಂಪೇನ್ ಆರಂಭಿಸಲಿದೆ. ಆಪ್ 22 ರಾಜ್ಯಗಳಲ್ಲಿ ಪೋಸ್ಟರ್‌ಗಳನ್ನು ಪ್ರದರ್ಶಿಸಲಿದೆ. ಆಪ್ ಹಾಕಿರುವ ಪೋಸ್ಟರ್‌ಗಳು ಹಿಂದಿ ಮತ್ತು ಇತರ ಪ್ರಾದೇಶಿಕ ಭಾಷೆಗಳಾದ ಪಂಜಾಬಿ, ಗುಜರಾತಿ, ಒಡಿಯಾ ಇತ್ಯಾದಿ ಭಾಷೆಗಳಲ್ಲಿ ಇರಲಿದೆ ಎಂದು ಗೋಪಾಲ್ ರೈ ಹೇಳಿದ್ದಾರೆ.

ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಂತ್ಯ ಮಾಡುತ್ತಿದ್ದಾರೆ. ಭಾರತವನ್ನು ಪ್ರತಿಪಕ್ಷ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಮೋದಿ ಹೊರಟಿದ್ದಾರೆ. ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆಪ್ ದೂರಿದೆ. ಮೋದಿ ಅವರು ಅಧಿಕಾರದಲ್ಲಿರುವತನಕ ಭಾರತವು ಬಿಕ್ಕಟ್ಟು ಎದುರಿಸಲಿದೆ ಎಂದು ಮತದಾರರಿಗೆ ಅನಿಸುತ್ತಿದೆ. ಮೋದಿ ಪ್ರಧಾನಿಯಾಗಿ ಇರುವ ತನಕ ಯುವಕರು, ರೈತರ ಮತ್ತು ಹಣದುಬ್ಬರ ಸಮಸ್ಯೆ ಬಗೆಹರಿಯುವುದಿಲ್ಲ. ಏಪ್ರಿಲ್ 10ರಿಂದ ಆಪ್ ದೇಶದ ಎಲ್ಲ ವಿವಿಗಳಲ್ಲಿ ಪೋಸ್ಟರ್ ಕ್ಯಾಂಪ್ ಆರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: AAP : ಆಪ್‌ ರಾಜ್ಯ ಘಟಕದ ಮುಖಂಡನ ಮೇಲೆ ಹಲ್ಲೆಗೆ ಯತ್ನ

ಕಳೆದ ವಾರ, ರಾಷ್ಟ್ರ ರಾಜಧಾನಿಯಾದ್ಯಂತ ಗೋಡೆಗಳು ಮತ್ತು ವಿದ್ಯುತ್ ಕಂಬಗಳ ಮೇಲೆ ಮೋದಿ ಹಟಾವೋ, ದೇಶ್ ಬಚಾವೋ (ಮೋದಿಯನ್ನು ಓಡಿಸಿ, ಭಾರತವನ್ನು ಉಳಿಸಿ) ಎಂಬ ಪೋಸ್ಟರ್‌ಗಳು ಕಾಣಿಸಿಕೊಂಡವು, ಈ ಘಟನೆಗೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಪ್ರಧಾನಿ ಮೋದಿಯನ್ನು ಪದಚ್ಯುತಗೊಳಿಸುವಂತೆ ಕೋರಿ ಸಾವಿರಾರು ಪೋಸ್ಟರ್‌ಗಳು ರಾಷ್ಟ್ರ ರಾಜಧಾನಿಯಲ್ಲಿ ಕಂಡುಬಂದ ನಂತರ ದೆಹಲಿ ಪೊಲೀಸರು 100 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಆಪ್‌ನ ಪ್ರಮುಖ ಸಚಿವರಾಗಿದ್ದ ಸತ್ಯೇಂದ್ರ ಜೈನ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿವೆ. ಇವರಿಬ್ಬರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಲಾಗಿದೆ. ಏತನ್ಮಧ್ಯೆ, ದೇಶದ ಬಹಳಷ್ಟು ಪ್ರತಿಪಕ್ಷಗಳ ನಾಯಕರು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿವೆ. ಪ್ರತಿಪಕ್ಷ ನಾಯಕರನ್ನು ಟಾರ್ಟೆಗ್ ಮಾಡಲಾಗುತ್ತಿದೆ. ಕೇಂದ್ರ ಸಂಸ್ಥೆಗಳಾದ ಸಿಬಿಐ, ಇಡಿಗಳನ್ನು ಬಳಸಿಕೊಂಡು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ಮೋದಿ ವಿರುದ್ದ ದೇಶಾದ್ಯಂತ ತನ್ನ ಕ್ಯಾಂಪೇನ್ ಆರಂಭಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Mani Shankar Aiyar: ಮಣಿಶಂಕರ್‌ ಅಯ್ಯರ್ ಮತ್ತೊಂದು ವಿವಾದ;‌ ಪಾಕ್‌ ಬಳಿಕ ಚೀನಾ ಪರ ಬ್ಯಾಟಿಂಗ್‌!

Mani Shankar Aiyar: ʼ1962ರಲ್ಲಿ ಚೀನಾ ಭಾರತದ ಮೇಲೆ ಆಕ್ರಮಣ ನಡೆಸಿದ ಆರೋಪವಿದೆʼ ಎಂದು ಉಲ್ಲೇಖಿಸುವ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಮಣಿಶಂಕರ್‌ ಅಯ್ಯರ್‌, ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಭಾರತ ಪಾಕಿಸ್ತಾನಕ್ಕೆ ಗೌರವ ಕೊಡಬೇಕು ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು.

VISTARANEWS.COM


on

Mani Shankar Aiyar
Koo

ನವದೆಹಲಿ: ಕಾಂಗ್ರೆಸ್ (Congress) ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ (Mani Shankar Aiyar) ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ʼ1962ರಲ್ಲಿ ಚೀನಾ ಭಾರತದ ಮೇಲೆ ಆಕ್ರಮಣ ನಡೆಸಿದ ಆರೋಪವಿದೆʼ ಎಂದು ಉಲ್ಲೇಖಿಸುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮಂಗಳವಾರ ವಿದೇಶಿ ಕರೆಸ್ಪಾಂಡೆಂಟ್ಸ್ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಣಿಶಂಕರ್ ಅಯ್ಯರ್ ನೀಡಿದ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಅಗುತ್ತಿದ್ದಂತೆ ಕಾಂಗ್ರೆಸ್‌ ಎಚ್ಚೆತ್ತುಕೊಂಡು ಸ್ಪಷ್ಟನೆ ನೀಡಲು ಮುಂದಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಈ ಬಗ್ಗೆ ಮಾತನಾಡಿ, ಮಣಿಶಂಕರ್‌ ಅಯ್ಯರ್‌ ಕ್ಷಮೆಯಾಚಿಸಿದ್ದಾರೆ ಎಂದು ತಿಳಿಸಿದ್ದಾರೆ. ʼʼಮಣಿಶಂಕರ್ ಅಯ್ಯರ್ ಅವರು ʼಆಕ್ರಮಣದ ಆರೋಪʼ ಎಂಬ ಪದವನ್ನು ತಪ್ಪಾಗಿ ಬಳಸಿದ್ದಕ್ಕಾಗಿ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ ಮತ್ತು ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲʼʼ ಎಂದು ಹೇಳಿದ್ದಾರೆ.

ಜತೆಗೆ ಜೈರಾಮ್ ರಮೇಶ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2020ರ ಮೇಯಲ್ಲಿ ನಡೆದ ಚೀನೀಯರ ಅತಿಕ್ರಮಣಕ್ಕೆ ಸಂಬಂಧಿಸಿ ನರೇಂದ್ರ ಮೋದಿ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಜತೆಗೆ “ಅಯ್ಯರ್ ಅವರು ವಯಸ್ಸಿನ ಕಾರಣದಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆʼʼ ಎಂದೂ ಸ್ಪಷ್ಟನೆ ನೀಡಿದ್ದಾರೆ.

ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ‘Nehru’s First Recruits’ ಪುಸ್ತಕ ಬಿಡುಗಡೆ ಸಮಾರಂಭದ ವಿಡಿಯೊದಲ್ಲಿ ಮಣಿಶಂಕರ್ ಅಯ್ಯರ್ ʼʼ1962ರ ಅಕ್ಟೋಬರ್‌ನಲ್ಲಿ ಚೀನೀಯರು ಭಾರತದ ಮೇಲೆ ಆಕ್ರಮಣ ಮಾಡಿದ್ದರು ಎಂಬ ಆರೋಪವಿದೆʼʼ ಎಂದು ಹೇಳಿರುವುದು ಕಂಡು ಬಂದಿದೆ. ಬಳಿಕ ಅವರು ಈ ಬಗ್ಗೆ ಮಾತನಾಡಿ, “ವಿದೇಶಿ ಕರೆಸ್ಪಾಂಡೆಂಟ್ಸ್ ಕ್ಲಬ್‌ನಲ್ಲಿ ‘ಚೀನಾದ ಆಕ್ರಮಣ’ಕ್ಕೆ ಮೊದಲು ‘ಆಪಾದಿತ’ ಎಂಬ ಪದವನ್ನು ತಪ್ಪಾಗಿ ಬಳಸಿದ್ದಕ್ಕಾಗಿ ನಾನು ಮುಕ್ತವಾಗಿ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆʼʼ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಹೇಳಿದ್ದೇನು?

ಇನ್ನು ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ. ಅಯ್ಯರ್ ಹೇಳಿಕೆಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ತಿರುಗೇಟು ನೀಡಿ, ‘ʼNehru’s First Recruits’ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ಮಣಿಶಂಕರ್‌ ಅಯ್ಯರ್‌ ಅವರು, 1962ರಲ್ಲಿ ನಡೆದ ಚೀನಾದ ಆಕ್ರಮಣವನ್ನು ‘ಆಪಾದಿತ’ ಎಂದು ಉಲ್ಲೇಖಿಸಿದ್ದಾರೆ. ಇದು ನಾಚಿಕೆಗೇಡಿನ ಹೇಳಿಕೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಯುಎನ್ಎಸ್‌ಸಿಯಲ್ಲಿನ ಶಾಶ್ವತ ಸ್ಥಾನದ ಮೇಲಿನ ಭಾರತದ ಹಕ್ಕನ್ನು ನೆಹರೂ ಚೀನೀಯರ ಪರವಾಗಿ ಬಿಟ್ಟುಕೊಟ್ಟದ್ದರು. ರಾಹುಲ್ ಗಾಂಧಿ ಚೀನಾ ಜತೆಗಿನ ರಹಸ್ಯ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ರಾಜೀವ್ ಗಾಂಧಿ ಫೌಂಡೇಶನ್ ಚೀನಾದ ರಾಯಭಾರ ಕಚೇರಿಯಿಂದ ಹಣವನ್ನು ಸ್ವೀಕರಿಸಿದೆ ಮತ್ತು ಚೀನೀ ಕಂಪನಿಗಳಿಗೆ ಮಾರುಕಟ್ಟೆ ಪ್ರವೇಶವನ್ನು ಶಿಫಾರಸು ಮಾಡುವ ವರದಿಗಳನ್ನು ಪ್ರಕಟಿಸಿದೆ. ಇದರ ಆಧಾರದ ಮೇಲೆ ಸೋನಿಯಾ ಗಾಂಧಿ ಅವರ ಯುಪಿಎ ಸರ್ಕಾರ ಚೀನಾದ ಸರಕುಗಳಿಗೆ ಭಾರತೀಯ ಮಾರುಕಟ್ಟೆಯನ್ನು ತೆರೆದಿತ್ತು. ಈಗ ಕಾಂಗ್ರೆಸ್ ನಾಯಕ ಅಯ್ಯರ್ ಚೀನಾದ ಆಕ್ರಮಣ ಕೇವಲ ಆರೋಪ ಎಂದು ಕರೆಯುತ್ತಿದ್ದಾರೆʼʼ ಎಂದು ಅಮಿತ್ ಮಾಳವೀಯ ದೂರಿದ್ದಾರೆ. ʼʼಕಾಂಗ್ರೆಸ್‌ಗೆ ಚೀನಾದ ಮೇಲೇಕೆ ಇಷ್ಟೊಂದು ಪ್ರೀತಿ?ʼʼ ಎಂದೂ ಪ್ರಶ್ನಿಸಿದ್ದಾರೆ.

ಇದಕ್ಕೆ ಜೈರಾಮ್‌ ರಮೇಶ್‌ ಪ್ರತಿಕ್ರಿಯಿಸಿ, “1962ರಲ್ಲಿ ನಿಜವಾಗಿಯೂ ಚಿನಾದಿಂದ ಆಕ್ರಮಣ ನಡೆದಿದೆ. ಇದು ಕೇವಲ ಆರೋಪವಲ್ಲ. 1962ರ ಅಕ್ಟೋಬರ್ 20ರಂದು ಭಾರತದ ಮೇಲೆ ಚೀನಾದ ಆಕ್ರಮಣ ಆರಂಭವಾಗಿತ್ತು. 2020ರ ಮೇ ಆರಂಭದಲ್ಲಿಯೂ ಲಡಾಖ್‌ನಲ್ಲಿ ಚೀನಾದ ಅತಿಕ್ರಮಣ ಮತ್ತೆ ನಡೆಯಿತು. ಇದರಲ್ಲಿ ನಮ್ಮ 40 ಸೈನಿಕರು ಹುತಾತ್ಮರಾಗಿದ್ದರು” ಎಂದು ರಮೇಶ್ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಮಣಿಶಂಕರ್‌ ಅಯ್ಯರ್‌, ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಭಾರತ ಪಾಕಿಸ್ತಾನಕ್ಕೆ ಗೌರವ ಕೊಡಬೇಕು ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ʼʼಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕುʼʼ ಎಂದು ಹೇಳಿದ್ದರು.

ಇದನ್ನೂ ಓದಿ: Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

Continue Reading

ಪ್ರಮುಖ ಸುದ್ದಿ

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

Prajwal Revanna Case: ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪೆನ್​ಡ್ರೈವ್ ಮೂಲಕ ಪ್ರಸರಣಗೊಂಡ ಅಶ್ಲೀಲ ವಿಡಿಯೊಗಳ ಪ್ರಕರಣದ (Prajwal Revanna Case) ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ವಾಪಸ್​ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಏರ್​ ಟಿಕೆಟ್​ ಬುಕ್ ಮಾಡಿದ ವಿವರ ‘ವಿಸ್ತಾರನ್ಯೂಸ್​’ಗೆ ಲಭ್ಯವಾಗಿದೆ. ಪ್ರಕರಣದ ತನಿಖೆ ನಡೆಸುವ ಎಸ್​ಐಟಿ ಪ್ರಜ್ವಲ್ ರೇವಣ್ಣಗಾಗಿ ಕಾಯುತ್ತಿದ್ದು ಭಾರತಕ್ಕೆ ಬಂದ ತಕ್ಷಣ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಟಿಕೆಟ್​ ಬುಕ್​ ಮಾಡಿಕೊಂಡಿದ್ದು ಅಲ್ಲಿಂದಲೇ ಅವರನ್ನು ಎಸ್​ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಿದ್ದಾರೆ.

ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ. ಎಸ್​ಐಟಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸುವುದಕ್ಕಿಂತ ಮೊದಲೇ ಅವರು ಭಾರತದಿಂದ ಹೊರಟ್ಟಿದ್ದರು. ಪ್ರಕರಣ ಕಾವು ಪಡೆದು ಪ್ರತಿಭಟನೆ ಹಾಗೂ ಧರಣಿಗಳು ನಡೆಯುವ ಸಂದರ್ಭದಲ್ಲಿ ದೇಶದಿಂದ ದೂರವಿದ್ದರು. ಎಸ್​ಐಟಿ ಪೊಲೀಸರು ಪ್ರಜ್ವಲ್​ ವಶಕ್ಕೆ ಪಡೆಯಲು ನಾನಾ ರಾಜತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕಾಯಬೇಕಾಯಿತು. ಅಂತಿಮವಾಗಿ ಕೇಂದ್ರ ಸರ್ಕಾರ ಸೇರಿದಂತೆ ಎಲ್ಲರ ಒತ್ತಾಯ ಹಾಗೂ ತಮಗೆ ಹಾಜರಾಗಲು ನೀಡಿದ ನೋಟಿಸ್​ನ ಗಡುವು ಮುಗಿದ ಕಾರಣ ಜರ್ಮನಿಯಿಂದ ಬರಲಿದ್ದಾರೆ.

ಪ್ರಜ್ವಲ್‌ ರೇವಣ್ಣ ಮೇ 31ರ ಮೊದಲು ಬರಲೇಬೇಕು! ಕಾರಣ ಇಲ್ಲಿದೆ

ಅಶ್ಲೀಲ ವಿಡಿಯೋ ವೈರಲ್ (pen drive case video viral) ಪ್ರಕರಣದಲ್ಲಿ ವಿಶೇಷ ತನಿಖಾ ತಂಡಕ್ಕೆ ಬೇಕಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal Revanna Case) ನಾಪತ್ತೆಯಾಗಿ ಒಂದು ತಿಂಗಳ ಬಳಿಕ ಹೊಸ ವಿಡಿಯೋ ಮೂಲಕ ಪ್ರತ್ಯಕ್ಷವಾಗಿದ್ದಾರೆ. ಆದರೆ ಅವರು ದೇಶದೊಳಗೇ ಇದ್ದುಕೊಂಡೇ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದರೇ ಎಂಬ ಸಂಶಯವೂ ವ್ಯಕ್ತವಾಗಿದೆ.

ಇದನ್ನೂ ಓದಿ: Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

ನಿನ್ನೆ ಹೊಸ ವಿಡಿಯೋ ಮಾಡಿ ಹರಿಬಿಟ್ಟಿರುವ ಪ್ರಜ್ವಲ್‌, ಶುಕ್ರವಾರ, ಮೇ 31ರಂದು ಎಸ್‌ಐಟಿ (SIT) ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಸದ್ಯ ವಿಡಿಯೋವನ್ನು ಎಸ್‌ಐಟಿ ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದೆ. ವಿಡಿಯೋದ ಮೂಲ ಯಾವುದು, ಯಾವ ಐಪಿ ಅಡ್ರೆಸ್‌ನಿಂದ ಆಪ್‌ಲೋಡ್ ಆಗಿದೆ ಎಂಬುದರ ಪತ್ತೆಗೆ‌ ಎಸ್‌ಐಟಿ ಮುಂದಾಗಿದೆ. ವಿಡಿಯೋ ಮೊದಲು ತಲುಪಿದ್ದು ಯಾರಿಗೆ, ಎಲ್ಲಿಂದ, ವಿಡಿಯೋ ಮಾಡಿರುವ ಮದರ್ ಡಿವೈಸ್ ಮಾಹಿತಿ ಪತ್ತೆಗೆ ಎಸ್‌ಐಟಿ ಯತ್ನಿಸುತ್ತಿದೆ. ಶುಕ್ರವಾರ ಪ್ರಜ್ವಲ್‌ ಎಸ್ಐಟಿ ಮುಂದೆ ಹಾಜರಾಗದಿದ್ದಲ್ಲಿ ಮದರ್ ಡಿವೈಸ್ ಲೋಕೆಷನ್ ಪತ್ತೆಗೆ ಯತ್ನಿಸುವ ಸಂಭವ ಇದೆ. ಸದ್ಯ ಪ್ರಜ್ವಲ್ ರೇವಣ್ಣ ಬರುವವರೆಗೂ ಕಾಯಲು ಇಷ್ಟವಿಲ್ಲದ ಎಸ್ಐಟಿ, ಅದಕ್ಕೂ ಮುನ್ನವೇ ಪತ್ತೆ ಮಾಡಿ ಬಂಧಿಸುವ ಚಿಂತನೆ ನಡೆಸಿದೆ.

ಯಾಕೆ ಮೇ 31 ?

ಮೇ 31ರಂದು ಪ್ರಜ್ವಲ್‌ ರೇವಣ್ಣ ಅವರ ಕಳೆದ ಬಾರಿಯ ಸಂಸದ ಸ್ಥಾನ ಅವಲಂಬಿಸಿ ನೀಡಲಾದ ರಾಜತಾಂತ್ರಿಕ ಪಾಸ್‌ಪೋರ್ಟ್‌ನ (Diplomatic passport) ಅವಧಿ ಅಂತ್ಯವಾಗಲಿದೆ. ಈ ಸಲ ಚುನಾಯಿತರಾದರೆ ಅವರು ಹೊಸದಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮಾಡಿಸಿಕೊಳ್ಳಬೇಕಿದೆ. ಹೀಗಾಗಿ ಹಳೆಯ ಪಾಸ್‌ಪೋರ್ಟ್‌ನಲ್ಲಿ ಓಡಾಡಲು ಸಾಧ್ಯವಿಲ್ಲ. ಇದೇ ಕಾರಣಕ್ಕಾಗಿ ಪ್ರಜ್ವಲ್‌ ಮೇ 31ನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಪ್ರಜ್ವಲ್ ರೇವಣ್ಣ ವಿರುದ್ಧದ ಎಸ್ಐಟಿ ತನಿಖೆ ಮಹತ್ವದ ಹಂತ ತಲುಪಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಲಾಗಿದೆ. ಪ್ರಜ್ವಲ್ ರೇವಣ್ಣ ಬಂದ ಬಳಿಕ ತನಿಖೆ ಮಾಡಬೇಕಿದೆ. ಅಶ್ಲೀಲ ವಿಡಿಯೋಗಳನ್ನು ಮಾಡಲಾದ ಡಿವೈಜ್ ಅನ್ನು ಪತ್ತೆಹಚ್ಚಬೇಕಿದೆ. ಅಶ್ಲೀಲ ವಿಡಿಯೋಗಳ ಕುರಿತು ಫಾರೆನ್ಸಿಕ್ ರಿಪೋರ್ಟ್‌ಗಾಗಿ ಎಸ್ಐಟಿ ಕಾಯುತ್ತಿದೆ. FSL ರಿಪೋರ್ಟ್ ಎಸ್ಐಟಿ ಕೈ ಸೇರಿದ ಕೂಡಲೇ ಚಾರ್ಜ್‌ಶೀಟ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್ ರೇವಣ್ಣ ಹೇಳಿಕೆ ದಾಖಲಿಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ.

ಜೂನ್ ಮೊದಲ ವಾರದಲ್ಲಿ ಪ್ರಜ್ವಲ್ ಬಂದಿದ್ದೇ ಆದಲ್ಲಿ ತನಿಖೆ ನಡೆಸಿ ಸ್ಟೇಟ್ಮೆಂಟ್ ದಾಖಲಿಸಲಿದ್ದಾರೆ. ಒಂದು ವೇಳೆ ಪ್ರಜ್ವಲ್ ಜೂನ್‌ನಲ್ಲಿ ವಾಪಸ್ ಬರದೇ ಇದ್ದಲ್ಲಿ, ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ನ್ಯಾಯಾಲಯಕ್ಕೆ ಅಬ್‌ಸ್ಕಾಂಡ್‌ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ.

ಗೃಹ ಸಚಿವರು ಏನೆಂದರು?

ಪ್ರಜ್ವಲ್ ವಿಡಿಯೋ ರಿಲೀಸ್ ವಿಚಾರದಲ್ಲಿ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ (home minister G Parameshwara) ಹೇಳಿಕೆ ನೀಡಿದ್ದಾರೆ. “ಮೇ 31ರಂದು ಪ್ರಜ್ವಲ್‌ ಸಂಸದ ಸ್ಥಾನ ಅಂತ್ಯವಾಗಲಿದೆ. ಆಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಸೀಜ್ ಆಗುತ್ತದೆ. ಇದೆಲ್ಲವನ್ನು ತಿಳಿದುಕೊಂಡು ಬರಲು ಯೋಚನೆ ಮಾಡಿದ್ದಾರೆ ಅನ್ಸುತ್ತೆ” ಎಂದಿದ್ದಾರೆ.

“ದೇಶದೊಳಗೆ ಏನು ಪ್ರಯತ್ನ ‌ಮಾಡಬೇಕು ನಾವು ಮಾಡಿದ್ದೇವೆ. ಕೇಂದ್ರ ಸರ್ಕಾರಕ್ಕೆ ಬರೆದಿದ್ದೇವೆ, ಕೇಂದ್ರ ಗೃಹ ಇಲಾಖೆಗೆ ವಾರೆಂಟ್ ಬಗ್ಗೆ ತಿಳಿಸಿದ್ದೇವೆ. ಬ್ಲೂ ಕಾರ್ನರ್ ನೋಟೀಸ್ (blue corner notice) ಇಶ್ಯೂ ಆಗಿದೆ. ಪ್ರಜ್ವಲ್‌ ಬರದೇ ಹೋದರೆ ಇಂಟರ್‌ಪೋಲ್‌ನವರು (Interpol) ಲೊಕೇಶನ್‌ ತಿಳಿದುಕೊಂಡು ನಮಗೆ ಮಾಹಿತಿ ನೀಡುವುದು ಎಂದಿತ್ತು. ಇಂತಹ ಸಂದರ್ಭದಲ್ಲಿ ನಾನು ಬರ್ತೇನೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ. ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ” ಎಂದಿದ್ದಾರೆ.

ಈ ಸಲ ಸುಮ್ಮನಿರೋಲ್ಲ ಎಸ್‌ಐಟಿ

ಪ್ರಜ್ವಲ್ ರೇವಣ್ಣ ವಿಡಿಯೋ ಬಿಟ್ಟ ಬೆನ್ನಲ್ಲೇ ಎಸ್ಐಟಿ ಅಲರ್ಟ್ ಆಗಿದೆ. ವಿಡಿಯೋ ಬಿಟ್ಟಿದ್ದು ಎಲ್ಲಿಂದ, ಯಾವ ದೇಶದಿಂದ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ ಕಳೆದ ಬಾರಿ ಕೂಡ ಪ್ರಜ್ವಲ್ ರೇವಣ್ಣ ಇದೇ ರೀತಿ ಕಾಲಾವಕಾಶ ಕೋರಿದ್ದರು. ಹೇಳಿದಂತೆ ವಿಚಾರಣೆಗೆ ಹಾಜರಾಗದೆ ದೂರ ಉಳಿದಿದ್ದರು. ಈ ಬಾರಿಯೂ ಹಾಗೆಯೇ ಮಾಡುವ ಸಾಧ್ಯತೆ ಕೂಡ ಇದೆ. ಹೀಗಾಗಿ ಈಗಲೇ ಪ್ರಜ್ವಲ್ ರೇವಣ್ಣ ಕಾಂಟ್ಯಾಕ್ಟ್‌ಗೆ ಎಸ್‌ಐಟಿ ಮುಂದಾಗಿದೆ.

ಕೇಂದ್ರ ತನಿಖಾ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಇಂಟರ್‌ಪೋಲ್‌ಗೂ ಎಸ್‌ಐಟಿ ಮಾಹಿತಿ ಕೋರಲಿದೆ. ಈಗಾಗಲೇ ಪ್ರಜ್ವಲ್‌ ವಿರುದ್ಧ ಲುಕ್‌ಔಟ್‌ ನೋಟೀಸ್‌ (lookout notice) ಹಾಗೂ ಬ್ಲೂ ಕಾರ್ನರ್‌ ನೋಟೀಸ್‌ ಜಾರಿ ಮಾಡಲಾಗಿದೆ. ಆತನ ವಿರುದ್ಧ ಆರೆಸ್ಟ್ ವಾರಂಟ್ ಕೂಡ ಇದೆ. ಹೀಗಾಗಿ ಎಸ್‌ಐಟಿ ಒಂದು ತಿಂಗಳಿಂದ ಏರ್‌ಪೋರ್ಟ್‌ನಲ್ಲೇ ಠಿಕಾಣಿ ಹೂಡಿದೆ. ಏರ್‌ಪೋರ್ಟ್‌ನಿಂದ ಹೊರಕ್ಕೆ ಕಾಲಿಡುವ ಮೊದಲೇ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣನನ್ನು ವಶಕ್ಕೆ ಪಡೆದು ಎಸ್‌ಐಟಿಗೆ ಒಪ್ಪಿಸಲಿದ್ದಾರೆ.

Continue Reading

ಪ್ರಮುಖ ಸುದ್ದಿ

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

VISTARANEWS.COM


on

Bomb Threat
Koo

ಹೈದರಾಬಾದ್: ದೇಶದ ಮೂಲೆ ಮೂಲೆಯಿಂದ ದಿನ ಬೆಳಗ್ಗೆದ್ದ ಬಾಂಬ್​ ಬೆದರಿಕೆಯ (Bomb Threat) ಸುದ್ದಿಗಳು ಹರದಿ ಬರುತ್ತಿವೆ. ಅಂತೆಯೇ ಮಂಗಳವಾರ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರ ಅಧಿಕೃತ ನಿವಾಸ ಪ್ರಜಾ ಭವನಕ್ಕೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರೆ ಮಾಡಿದ ವ್ಯಕ್ತಿ ‘ಡಯಲ್-100’ ಗೆ ಕರೆ ಮಾಡಿ ಬಾಂಬ್ ಇರಿಸಲಾಗಿದೆ ಮತ್ತು ಅದು ಹೈದರಾಬಾದ್ ನಗರದ ಪ್ರಜಾ ಭವನದಲ್ಲಿ ಸ್ಫೋಟಗೊಳ್ಳುತ್ತದೆ ಎಂದು ಎಚ್ಚರಿಸಿದ್ದ. ಬಳಿಕ ಅದು ಹುಸಿ ಬಾಂಬ್​ ಕರೆ ಎಂದು ಗೊತ್ತಾಗಿದೆ.

ಫೋನ್ ಕರೆ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ಆವರಣದಲ್ಲಿ ಶೋಧ ನಡೆಸಿದ್ದಾರೆ.. ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಮತ್ತು ಬಾಂಬ್ ಬೆದರಿಕೆ ಕರೆ ಹುಸಿ ಎಂದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹುಸಿ ಕರೆ ಹೈದರಾಬಾದ್​ನಿಂದ ಮಾಡಲಾಗಿದೆ. ಕರೆ ಮಾಡಿದವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಪ್ರಾಥಮಿಕ ತನಿಖೆಯ ಸಮಯದಲ್ಲಿ, ಕರೆ ಮಾಡಿದವರು ಬೆಳಿಗ್ಗೆಯಿಂದ ಇಂತಹ ಕರೆಗಳನ್ನು ಮಾಡುತ್ತಿದ್ದರು ಎಂದು ತಿಳಿದುಬಂದಿದೆ ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ: Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

ಇದಕ್ಕೂ ಮುನ್ನ ತೆಲಂಗಾಣದ ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಿ.ಅನಸೂಯಾ ಅವರು ಪ್ರಜಾ ಭವನಕ್ಕೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಉಪ ಮುಖ್ಯಮಂತ್ರಿಯ ಕುಟುಂಬ ಸದಸ್ಯರನ್ನು ಭೇಟಿಯಾಗಿ ಈ ವಿಷಯದ ಬಗ್ಗೆ ಚರ್ಚಿಸಿದರು. ಸಂದರ್ಶಕರನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಮತ್ತು ಪ್ರಜಾ ಭವನದಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಪ್ರಜಾ ಭವನದ ಒಂದು ಭಾಗವನ್ನು ವಾರಕ್ಕೆ ಎರಡು ಬಾರಿ ನಡೆಯುವ ಕುಂದುಕೊರತೆ ನಿವಾರಣಾ ಸಭೆಯಾದ ‘ಪ್ರಜಾ ವಾಣಿ’ ಕಾರ್ಯಕ್ರಮಕ್ಕೆ ಬಳಸಲಾಗುತ್ತದೆ.

Continue Reading

ಪ್ರಮುಖ ಸುದ್ದಿ

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Lok Sabha Election : ಏಪ್ರಿಲ್ 19ರಂದು ಚುನಾವಣೆಗಳು ಪ್ರಾರಂಭವಾದಾಗಿನಿಂದ ಪ್ರಮುಖ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ 3 ಪ್ರತಿಶತದಷ್ಟು ಪ್ರಗತಿ ಕಂಡಿದೆ. ಕಡಿಮೆ ಮತದಾನ ಹಾಗೂ ಸರ್ಕಾರದ ಅಸ್ಥಿರತೆಯ ಬಗ್ಗೆ ಇದ್ದ ಆರಂಭಿಕ ಕಳವಳಗಳು ನಿಧಾನವಾಗಿದೆ. ಆದರೆ, ಫಿಯರ್ ಗೇಜ್ ಇಂಡಿಯಾ ವಿಐಎಕ್ಸ್ ಪ್ರಕಾರ ಮಾರುಕಟ್ಟೆ ಚಂಚಲತೆ ಮುಂದುವರಿದಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election) ಆರು ಹಂತಗಳ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಆನ್​ಲೈನ್​ ಸ್ಟಾಕ್ ಟ್ರೇಡಿಂಗ್ ಮತ್ತು ಹೂಡಿಕೆ ಸಂಸ್ಥೆಯಾಗಿರುವ ಐಐಎಫ್ಎಲ್ ಸೆಕ್ಯುರಿಟೀಸ್ ತನ್ನ ಸಮೀಕ್ಷೆಯನ್ನು ಪ್ರಕಟಿಸಿದೆ. ಅದರ ಪ್ರಕಾರ ಈ ಬಾರಿ ಬಿಜೆಪಿ 320 ಸ್ಥಾನಗಳನ್ನು ಸಲೀಸಾಗಿ ಗೆಲ್ಲಲಿದೆ. ಇದು 2019ರ 303 ಸೀಟ್​ಗಳಿಂತ ಅಧಿಕ. ಆರನೇ ಹಂತದ ಮತದಾನ ಸೇರಿದಂತೆ ಬಿಜೆಪಿಗೆ ಹೆಚ್ಚು ಮತಗಳು ಬೀಳುವ ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ 3 ಶೇಕಡಾ ಮತ ಚಲಾವಣೆ ಕುಸಿತ ಕಂಡಿದೆ. (ಹಿಂದಿಯೇತರ ರಾಜ್ಯಗಳಲ್ಲಿ 0.6 ಶೇಕಡಾ ಕುಸಿತ) ಇದು ಬಿಜೆಪಿಗೆ ನಷ್ಟ ಎಂದು ಅಂದಾಜಿಸಲಾಗುತ್ತದೆ. ಇದರ ಹೊರತಾಗಿಯೂ, ಉತ್ತರ ಪ್ರದೇಶ (ಎಸ್ಪಿ-ಬಿಎಸ್ಪಿ ಮೈತ್ರಿಯ ಅನುಪಸ್ಥಿತಿ), ಒಡಿಶಾ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸಿಗುವ ಸ್ಥಾನಗಳ ಲಾಭಗಳ ಮೂಲಕ ಬಿಜೆಪಿ ಬಹುಮತ ಹೆಚ್ಚಿಸಿಕೊಳ್ಳಲಿದೆ ಎಂದು ಬ್ರೋಕರೇಜ್ ಸಂಸ್ಥೆ ಅಂದಾಜಿಸಿದೆ.

ಒಟ್ಟು ಆರು ಹಂತಗಳ ಮತದಾನ ಮುಕ್ತಾಯವಾಗಿದ್ದು ಶೇಕಡಾ 89ರಷ್ಟು ಮತಗಳು ಚಲಾವಣೆಯಾಗಿದೆ. ಈ 486 ಸ್ಥಾನಗಳ ಪೈಕಿ ಬಿಜೆಪಿ 278 ಸ್ಥಾನಗಳಲ್ಲಿ ಗೆಲುವು ಸಾಧಿಸಿಲಿದೆ. ಜೂನ್ 1 ರಂದು ನಡೆಯಲಿರುವ ಕೊನೆಯ ಹಂತದ ಚುನಾವಣೆಗೆ ಮುಂಚಿತವಾಗಿ ಮೊದಲ ಎರಡು ಹಂತಗಳಲ್ಲಿ ಮತದಾನದ ಪ್ರಮಾಣ ಕುಸಿತ ಕಂಡಿದೆ. ಆದಾಗ್ಯೂ ಬಿಜೆಪಿ 320ರ ಗಡಿ ಮುಟ್ಟುವುದು ಖಚಿತ ಎಂದು ಅದು ಅಂದಾಜಿಸಿದೆ. ಇದೇ ವೇಳೆ ಕೊನೇ ಹಂತದ ಮತದಾನ 2019 ರ ಮಟ್ಟಕ್ಕಿಂತ ಸ್ವಲ್ಪ ಕಡಿಮೆಯಾಗಬಹುದು ಸಮೀಕ್ಷೆ ಹೇಳಿದೆ.

ಏಪ್ರಿಲ್ 19ರಂದು ಚುನಾವಣೆಗಳು ಪ್ರಾರಂಭವಾದಾಗಿನಿಂದ ಪ್ರಮುಖ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ 3 ಪ್ರತಿಶತದಷ್ಟು ಪ್ರಗತಿ ಕಂಡಿದೆ. ಕಡಿಮೆ ಮತದಾನ ಹಾಗೂ ಸರ್ಕಾರದ ಅಸ್ಥಿರತೆಯ ಬಗ್ಗೆ ಇದ್ದ ಆರಂಭಿಕ ಕಳವಳಗಳು ನಿಧಾನವಾಗಿದೆ ಕಡಿಮೆಯಾಗಿದೆ. ಆದರೆ, ಫಿಯರ್ ಗೇಜ್ ಇಂಡಿಯಾ ವಿಐಎಕ್ಸ್ ಪ್ರಕಾರ ಮಾರುಕಟ್ಟೆ ಚಂಚಲತೆ ಮುಂದುವರಿದಿದೆ.

ಇದನ್ನೂ ಓದಿ: Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

1951-67ನ್ನು ಹೊರತುಪಡಿಸಿ ಭಾರತದಲ್ಲಿ ಸತತವಾಗಿ ನಡೆದ 3 ಲೋಕಸಭಾ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳಗೊಂಡ ಉದಾಹರಣೆಗಳು ಇಲ್ಲ. ಅಂತೆಯೇ 2014 ಮತ್ತು 2019 ರ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳ ಕಂಡ ನಂತರ 2024 ರ ಚುನಾವಣೆಯಲ್ಲಿ ಯಥಾವತ್​ ಪ್ರಮಾಣ ಸ್ವಲ್ಪ ಕುಸಿತ ಕಂಡಿದೆ ಎಂದು ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

ಐಐಎಫ್ಎಲ್ ಸೆಕ್ಯುರಿಟೀಸ್ ಪ್ರಕಾರ, ಉತ್ತರ ಪ್ರದೇಶದಲ್ಲಿ ಬಿಜೆಪಿ 2019 ರ ಒಟ್ಟು ಸ್ಥಾನಕ್ಕೆ ಇನ್ನೂ 10 ಸ್ಥಾನಗಳನ್ನು ಸೇರ್ಪಡೆಗೊಳಿಸಲಿದೆ. ಅಂದರೆ ಒಟ್ಟು 80ರಲ್ಲಿ 72 ಬಿಜೆಪಿ ಪಾಲಾಗಲಿದೆ. 2019ರಲ್ಲಿ ಅದು 62 ಆಗಿತ್ತು. ನರೇಂದ್ರ ಮೋದಿ ನೇತೃತ್ವದ ಪಕ್ಷವು ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ 2019ಕ್ಕಿಂತ ತಲಾ 5 ಹೆಚ್ಚುವರಿ ಸ್ಥಾನಗಳನ್ನು ಗಳಿಸಲದೆ. ಬಂಗಾಳದಲ್ಲಿ 18ರಿಂದ 23ಕ್ಕೆ ಏರಿಕೆಯಾದರೆ, ಒಡಿಶಾದಲ್ಲಿ 8ರಿಂದ 13ಕ್ಕೆ ಜಿಗಿಯಲಿದೆ. ಅಲ್ಲದೆ, ತೆಲಂಗಾಣ ಮತ್ತು ಆಂಧ್ರಪ್ರದೇಶ ತಲಾ 3 ಸ್ಥಾನಗಳನ್ನು ಪಡೆಯಲಿದೆ.

ಬೇಸ್​ ಪಾಯಿಂಟ್​ಗಳ ಕುಸಿತ

6 ಹಂತಗಳ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮತದಾನದ ಪ್ರಮಾಣದಲ್ಲಿ ಸರಾಸರಿ 150 ಬೇಸಿಸ್ ಪಾಯಿಂಟ್​​ಗಳ ಕುಸಿತ ಕಂಡುಬಂದಿದೆ. ಮೊದಲ ಹಂತದಲ್ಲಿ ಮತದಾನದ 400 ಬೇಸಿಸ್ ಪಾಯಿಂಟ್​ಗಳ ಕುಸಿತ ಹೋಲಿಸಿದರೆ ಇದು ಕಡಿಮೆ. ಹಂತ 4 ಮತ್ತು 5ನೇ ಹಂತದಲ್ಲಿ 2019 ಕ್ಕೆ ಹೋಲಿಸಿದರೆ ಅಲ್ಪ ಏರಿಕೆ ಕಂಡಿದ್ದು. 6 ನೇ ಹಂತವು ಅಲ್ಪ ಕುಸಿತ ದಾಖಲಾಗಿದೆ ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

2019 ರ ಚುನಾವಣೆಗೆ ಹೋಲಿಸಿದರೆ 486 ಸ್ಥಾನಗಳಲ್ಲಿ ಒಟ್ಟು 156 ಸ್ಥಾನಗಳಲ್ಲಿ ಮತದಾನದ ಪ್ರಮಾಣ ಹೆಚ್ಚಾಗಿದೆ ಎಂದು ಐಐಎಫ್ಎಲ್ ಸೆಕ್ಯುರಿಟೀಸ್ ತಿಳಿಸಿದೆ.

ಅನಿರೀಕ್ಷಿತ ಫಲಿತಾಂಶ ಅಸಾಧ್ಯ

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರಿ ಪ್ರಮಾಣದ ಮತ ಹಂಚಿಕೆ ವ್ಯತ್ಯಾಸ ಆಗಿದೆ. ಹೀಗಾಗಿ 2024 ರ ಚುನಾವಣೆಯ ಫಲಿತಾಂಶ 2004 ರ ಚುನಾವಣೆಗಳಂತೆ ಅಚ್ಚರಿಯ ಫಲಿತಾಂಶವನ್ನು ಪ್ರಕಟಿಸುವುದಿಲ್ಲ ಎಂದು ಐಐಎಫ್ಎಲ್ ದೃಢವಾಗಿ ಹೇಳಿದೆ.

ಕರ್ನಾಟಕದಲ್ಲಿ ನಷ್ಟ

“ಮೈತ್ರಿ / ಅಭ್ಯರ್ಥಿ ಆಯ್ಕೆ ಸಮಸ್ಯೆಗಳಿಂದಾಗಿ ರಾಜಸ್ಥಾನ, ಕರ್ನಾಟಕ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಜೆಪಿಗೆ ನಷ್ಟವಾಗಬಹುದು. ಆದರೆ, ಮಹಾರಾಷ್ಟ್ರದಲ್ಲಿ ಎನ್​ಡಿಎ 2 ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲಿದೆ ಎಂದು ಅಂದಾಜಿಸಿದೆ. 2019 ರಲ್ಲಿ 224 ಸ್ಥಾನಗಳಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮತ ಪಡೆಯುವ ಮೂಲಕ ಬಿಜೆಪಿ ತನ್ನ ಬಹುಮತವನ್ನು ಉಳಿಸಿಕೊಳ್ಳುತ್ತದೆ ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

Continue Reading
Advertisement
Ambareesh Birthday
ಸಿನಿಮಾ23 mins ago

Ambareesh Birthday: ರೆಬಲ್‌ ಸ್ಟಾರ್‌ 72 ನೇ ಹುಟ್ಟುಹಬ್ಬ; ಅಂಬಿ ಸ್ಮರಣಾರ್ಥ ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ

Ambareesh Birthday heartfelt note By sumalatha
ಸ್ಯಾಂಡಲ್ ವುಡ್28 mins ago

Ambareesh Birthday: ಅಂಬಿ ನೆನೆದು ಸುಮಲತಾ ಭಾವನಾತ್ಮಕ ಪೋಸ್ಟ್‌ !

Vastu Tips
ಧಾರ್ಮಿಕ37 mins ago

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು

Mani Shankar Aiyar
ದೇಶ47 mins ago

Mani Shankar Aiyar: ಮಣಿಶಂಕರ್‌ ಅಯ್ಯರ್ ಮತ್ತೊಂದು ವಿವಾದ;‌ ಪಾಕ್‌ ಬಳಿಕ ಚೀನಾ ಪರ ಬ್ಯಾಟಿಂಗ್‌!

Uttarakaanda Movie Shivarajkumar Visits Savadatti Yallamma Temple After Uttarakaanda Movie
ಸ್ಯಾಂಡಲ್ ವುಡ್59 mins ago

Uttarakaanda Movie:  ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ ಕುಮಾರ್​

school reopen
ಪ್ರಮುಖ ಸುದ್ದಿ1 hour ago

School Reopen: ಬನ್ನಿ ಮಕ್ಕಳೇ ಶಾಲೆಗೆ! ರಜೆ ಮುಗೀತು, ಇಂದಿನಿಂದ ಕ್ಲಾಸ್‌ ಶುರು

Nawaz Sharif
ವಿದೇಶ1 hour ago

Nawaz Sharif: “ಕಾರ್ಗಿಲ್‌ ಯುದ್ಧ ನಮ್ಮಿಂದಲೇ ಆಗಿರುವ ಅತಿದೊಡ್ಡ ಪ್ರಮಾದ”- 23 ವರ್ಷಗಳ ಬಳಿಕ ತಪ್ಪೊಪ್ಪಿಕೊಂಡ ಪಾಕ್‌

prajwal revanna case mattress
ಪ್ರಮುಖ ಸುದ್ದಿ2 hours ago

Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

AC Side Effects
ಆರೋಗ್ಯ2 hours ago

AC Side Effects: ಅತಿಯಾದ ಎಸಿ ಬಳಕೆಯಿಂದ ಏನಾಗುತ್ತದೆ ಎಂಬ ಅರಿವಿರಲಿ

karnataka weather forecast
ಮಳೆ3 hours ago

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು23 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌