Delhi Liquor Scam: ಸಿಸೋಡಿಯಾ ಬಂಧನ ಬೆನ್ನಲ್ಲೇ ಆಪ್‌ ಸಂಸದ ಸಂಜಯ್‌ ಸಿಂಗ್‌ ಸೇರಿ ಹಲವರನ್ನು ಬಂಧಿಸಿದ ಪೊಲೀಸರು - Vistara News

ದೇಶ

Delhi Liquor Scam: ಸಿಸೋಡಿಯಾ ಬಂಧನ ಬೆನ್ನಲ್ಲೇ ಆಪ್‌ ಸಂಸದ ಸಂಜಯ್‌ ಸಿಂಗ್‌ ಸೇರಿ ಹಲವರನ್ನು ಬಂಧಿಸಿದ ಪೊಲೀಸರು

Delhi Liquor Scam:‌ ಮನೀಷ್‌ ಸಿಸೋಡಿಯಾ ಬಂಧನದ ಬೆನ್ನಲ್ಲೇ ದೆಹಲಿ ಪೊಲೀಸರು ಆಪ್‌ ಸಂಸದ ಸಂಜಯ್‌ ಸಿಂಗ್‌ ಸೇರಿ ಹಲವರನ್ನು ಬಂಧಿಸಿದ್ದಾರೆ. ತಮ್ಮ ಪಕ್ಷದ ನಾಯಕರ ಬಂಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅರವಿಂದ್‌ ಕೇಜ್ರಿವಾಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Sanjay Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ದೆಹಲಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಅವರನ್ನು ಬಂಧಿಸಿದ ಬೆನ್ನಲ್ಲೇ ಆಪ್‌ ಸಂಸದ ಸಂಜಯ್‌ ಸಿಂಗ್‌ ಸೇರಿ ಹಲವು ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಆಪ್ ಸಂಸದ ಸಂಜಯ್‌ ಸಿಂಗ್‌ ಅವರ ಟ್ವಿಟರ್‌ ಖಾತೆಯಿಂದಲೇ ಮಾಹಿತಿ ನೀಡಲಾಗಿದೆ. “ದೆಹಲಿ ಪೊಲೀಸರು ನನ್ನನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲ, ಸಚಿವ ಗೋಪಾಲ್‌ ರಾಯ್‌, ಶಾಸಕ ರಿತುರಾಜ್‌ ಝಾ, ದಿನೇಶ್‌ ಮೊಹನಿಯಾ, ರೋಹಿತ್‌ ಮೆಹ್ರುಲಿಯಾ, ಆದಿಲ್‌ ಖಾನ್‌ ಸೇರಿ ಹಲವು ಕೌನ್ಸಿಲರ್‌ಗಳು ಹಾಗೂ ಆಪ್‌ ಕಾರ್ಯಕರ್ತರನ್ನು ಬಂಧಿಸಿ ಫತೇಪುರ್‌ ಬೇರಿ ಪೊಲೀಸ್‌ ಠಾಣೆಯಲ್ಲಿ ಇರಿಸಲಾಗಿದೆ” ಎಂದು ಸಿಂಗ್‌ ತಿಳಿಸಿದ್ದಾರೆ.

ಯಾವ ಕಾರಣಕ್ಕಾಗಿ ಸಂಜಯ್‌ ಸಿಂಗ್‌ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆಯೇ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಸಿಸೋಡಿಯಾ ಸೇರಿ ಹಲವರ ಬಂಧನದ ಕುರಿತು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Manish Sisodia Arrested: ಅಬಕಾರಿ ನೀತಿ ಹಗರಣ, ದೆಹಲಿ ಡಿಸಿಎಂ ಮನೀಷ್‌ ಸಿಸೋಡಿಯಾ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

LPG Price Cut: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 30 ರೂ. ಕಡಿಮೆ ಮಾಡಿವೆ. ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ.

VISTARANEWS.COM


on

LPG Price Cut
Koo

ನವದೆಹಲಿ: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 30 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,646 ರೂ. ಆಗಿದೆ. ಹಿಂದೆ 1,676 ರೂ. ಆಗಿತ್ತು. ಮುಂಬೈಯಲ್ಲಿಯೂ 30 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,598 ರೂ.ಗೆ ನಿಗದಿಪಡಿಸಲಾಗಿದೆ. ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,756 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಸತತ ಇಳಿಕೆ

ಕಳೆದ ಕೆಲವು ತಿಂಗಳಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗುತ್ತಿದೆ. ಜೂನ್‌ 1ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ 69.50 ರೂ. ಕಡಿಮೆ ಆಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ. ಇನ್ನು ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ., ಚೆನ್ನೈನಲ್ಲಿ 818.50 ರೂ. ಇದೆ. ವಿಶೇಷವೆಂದರೆ ಕಳೆದ ವರ್ಷ ಜೂನ್‌ನಲ್ಲಿ ದೆಹಲಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,103 ರೂ. ಇತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 200 ರೂ.ಗಳ ಕಡಿತವನ್ನು ಘೋಷಿಸಿ 903 ರೂ.ಗೆ ಇಳಿಸಿದವು. ಬಳಿಕ 2024ರ ಮಾರ್ಚ್‌ನಲ್ಲಿ ಬೆಲೆಯನ್ನು ಮತ್ತೂ 100 ರೂ. ಕಡಿತಗೊಳಿಸಲಾಯಿತು.

ಇದನ್ನೂ ಓದಿ: Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Continue Reading

ದೇಶ

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

Water Tank Collapsed: ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. 12 ಮಂದಿಯನ್ನು ಅವಶೇಷದಡಿಯಿಂದ ಹೊರಗೆಳೆದಿದ್ದು, ಅವರ ಸ್ಥಿತಿ ಬಹಳ ಗಂಭೀರವಾಗಿದೆ. ಸ್ಥಳದಲ್ಲಿ ಅಗ್ನಿ ಶಾಮಕ ದಳ, ಪೊಲೀಸರು, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

VISTARANEWS.COM


on

Water tank Collapsed
Koo

ಮಥುರಾ: ಉತ್ತರಪ್ರದೇಶದ ಮಥುರಾ(Mathura)ದಲ್ಲಿ ವಾಟರ್‌ ಟ್ಯಾಂಕ್‌ ಕುಸಿದು(Water Tank Collapsed) ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವಶೇಷದಡಿಯಲ್ಲಿ ಅನೇಕ ಮನೆಗಳು ಸಿಲುಕಿಕೊಂಡಿವೆ. ಯುಪಿ ಆವಾಸ್‌ ವಿಕಾಸ್‌ ಪರಿಷತ್‌ ಅಭಿವೃದ್ಧಿಪಡಿಸಿರುವ ಕೃಷ್ಣ ವಿಹಾರ್‌ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಹತ್ತಿರ ಮನೆಗಳಿಗೆ ಭೀಕರ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. 12 ಮಂದಿಯನ್ನು ಅವಶೇಷದಡಿಯಿಂದ ಹೊರಗೆಳೆದಿದ್ದು, ಅವರ ಸ್ಥಿತಿ ಬಹಳ ಗಂಭೀರವಾಗಿದೆ. ಸ್ಥಳದಲ್ಲಿ ಅಗ್ನಿ ಶಾಮಕ ದಳ, ಪೊಲೀಸರು, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ

ಬರೋಬ್ಬರಿ 2.5 ಲಕ್ಷ ಲೀಟರ್‌ ನೀರಿನ ಟ್ಯಾಂಕ್‌ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಇದೆ. NDRF ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭದಲ್ಲಿ ಅವಶೇಷದಡಿಯಲ್ಲಿ ಸಿಲುಕಿದ್ದ ನಾಲ್ವರನ್ನು ಹೊರತೆಗೆಯಲಾಗಿತ್ತು. ಬಳಿಕ ಈ ಸಂಖ್ಯೆ 12ಕ್ಕೆ ಏರಿಕೆ ಆಗಿತ್ತು. ಆ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಶೈಲೇಂದ್ರ ಸಿಂಗ್‌ ಹೇಳಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ಸೇರಿದಂತೆ ಜಿಲ್ಲೆಯ ಎಲ್ಲಾ ಉನ್ನತ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಆಹಾರ ಮತ್ತು ವಸತಿ ಸೌಲಭ್ಯ ಕಲ್ಪಿಸಲು ಕಂದಾಯ ಇಲಾಖೆ ಶ್ರಮಿಸುತ್ತಿದೆ.

ಎರಡೂ ವರ್ಷಗಳ ಹಿಂದೆ ನಿರ್ಮಾಣ

2021ರಲ್ಲಿ ಈ ಟ್ಯಾಂಕ್‌ನ ಕಾಮಗಾರಿ ಪೂರ್ಣಗೊಂಡಿತ್ತು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಗಂಗಾಜಲ ಕುಡಿಯುವ ನೀರಿನ ಯೋಜನೆಯಡಿ 6 ಕೋಟಿ ರೂ. ವೆಚ್ಚದಲ್ಲಿ ಜಲ ನಿಗಮದಿಂದ ಟ್ಯಾಂಕ್‌ ನಿರ್ಮಿಸಲಾಗಿದೆ ಎಂದು ತಿಳಿಸಿದರು. ಕೇವಲ ಮೂರು ವರ್ಷಗಳಲ್ಲಿ ಕಟ್ಟಡ ಕುಸಿತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು. ಇನ್ನು ಘಟನಾ ಸ್ಥಳಕ್ಕೆ ಭಾರತೀಯ ಸೇನೆಯ ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

Continue Reading

ದೇಶ

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

New Criminal Law: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದ್ದು, ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ. ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ.

VISTARANEWS.COM


on

New Criminal Law
Koo

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದೆ (New Criminal Law). ಹೊಸ ಕಾನೂನಿನ ಪ್ರಕಾರ ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ.

ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ. ಈ ಕಾನೂನಿನ ಪ್ರಕಾರ ಯಾವುದೇ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕ ಮಾರ್ಗದಲ್ಲಿ ಸಂಚರಿಸುವ ಯಾವುದೇ ವ್ಯಕ್ತಿಗೆ ಅಪಾಯ ಅಥವಾ ಗಾಯವನ್ನು ಉಂಟು ಮಾಡಿದರೆ 5 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.

ಭಾನುವಾರ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನೀರಿನ ಬಾಟಲಿಗಳು ಮತ್ತು ಗುಟ್ಕಾ ಮಾರಾಟ ಮಾಡುವ ಬೀದಿ ವ್ಯಾಪಾರಿಯನ್ನು ಗುರುತಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಬೀದಿ ವ್ಯಾಪಾರಿಯ ತಾತ್ಕಾಲಿಕ ಅಂಗಡಿಯು ರಸ್ತೆಗೆ ಅಡ್ಡವಾಗಿ ನಿಂತಿತ್ತು. ಅದನ್ನು ಸ್ಥಳಾಂತರಿಸಲು ಪೊಲೀಸ್‌ ಸಿಬ್ಬಂದಿ ಕೇಳಿಕೊಂಡರೂ ಒಪ್ಪದೇ ಇದ್ದಾಗ ಎಫ್ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಬೀದಿ ಬದಿ ವ್ಯಾಪಾರಿ ಭಾನುವಾರ ರಾತ್ರಿ ನವದೆಹಲಿ ರೈಲ್ವೆ ನಿಲ್ದಾಣದ ಬಳಿಯ ಪಾದಚಾರಿ ಮೇಲ್ಸೇತುವೆಯ ಕೆಳಗೆ ತನ್ನ ಅಂಗಡಿಯನ್ನು ನಿಲ್ಲಿಸಿದ್ದ ಎಂದು ಹೇಳಲಾಗಿದೆ. “ಆ ವ್ಯಾಪಾರಿಯು ಬೀದಿಯಲ್ಲಿ ನೀರಿನ ಬಾಟಲಿ, ಬೀಡಿ ಮತ್ತು ಸಿಗರೇಟುಗಳನ್ನು ಮಾರಾಟ ಮಾಡುತ್ತಿದ್ದ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಆತನ ಅಂಗಡಿ ಅಡ್ಡಿಯಾಗುತ್ತಿತ್ತು. ರಸ್ತೆಯಿಂದ ಅಂಗಡಿಯನ್ನು ತೆರವುಗೊಳಿಸುವಂತೆ ಸಬ್ ಇನ್ಸ್‌ಪೆಕ್ಟರ್ ಆ ವ್ಯಾಪಾರಿ ಬಳಿ ಹಲವು ಬಾರಿ ಮನವಿ ಮಾಡಿದರು. ಆದರೆ ಆತ ಅದಕ್ಕೆ ಒಪ್ಪಲಿಲ್ಲ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ವ್ಯಾಪಾರಿಯನ್ನು ಬಿಹಾರದ ಪಾಟ್ನಾ ಮೂಲದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.

ಏನಿದು ಹೊಸ ಕಾನೂನು?

ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆ ಪಡೆಯಿತು. ಆದರೆ ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.

ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಇವೇ ಆ ಮೂರು ಹೊಸ ಕಾನೂನುಗಳು. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ

Continue Reading

ದೇಶ

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Parliament Sessions: ಎರಡು ದಿನಗಳ ವಿರಾಮದ ನಂತರ ಸಂಸತ್‌ ಕಲಾಪ ಇಂದು ಮತ್ತೆ ಆರಂಭವಾಗಲಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ವಾರ ಸಂಸತ್ತು ಬಿಸಿ ಏರಿದ ಚರ್ಚೆಗೆ ಸಾಕ್ಷಿಯಾಗುವ ಎಲ್ಲ ಲಕ್ಷಣಗಳಿವೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿನ ಅಕ್ರಮ, ಅಗ್ನಿಪಥ್ ಯೋಜನೆ ಮುಂತಾದ ಪ್ರಮುಖ ವಿಷಯಗಳ ಮೇಲೆ ಪ್ರತಿಪಕ್ಷಗಳ ಇಂಡಿ ಒಕ್ಕೂಟ ಎನ್‌ಡಿಎ ಸರ್ಕಾರದ ಮೇಲೆ ದಾಳಿ ನಡೆಸಲು ಸಜ್ಜಾಗಿದೆ. ಸಂಸತ್ತು ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ನೋಡಿ.

VISTARANEWS.COM


on

Parliament Sessions
Koo

ನವದೆಹಲಿ: ಎರಡು ದಿನಗಳ ವಿರಾಮದ ನಂತರ ಸಂಸತ್‌ ಕಲಾಪ (Parliament Sessions) ಇಂದು ಮತ್ತೆ ಆರಂಭವಾಗಲಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ವಾರ ಸಂಸತ್ತು ಬಿಸಿ ಏರಿದ ಚರ್ಚೆಗೆ ಸಾಕ್ಷಿಯಾಗುವ ಎಲ್ಲ ಲಕ್ಷಣಗಳಿವೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)ಯಲ್ಲಿನ ಅಕ್ರಮ, ಅಗ್ನಿಪಥ್ ಯೋಜನೆ ಮುಂತಾದ ಪ್ರಮುಖ ವಿಷಯಗಳ ಮೇಲೆ ಪ್ರತಿಪಕ್ಷಗಳ ಇಂಡಿ ಒಕ್ಕೂಟ ಎನ್‌ಡಿಎ ಸರ್ಕಾರದ ಮೇಲೆ ದಾಳಿ ನಡೆಸಲು ಸಜ್ಜಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಮತ್ತು ಹಣದುಬ್ಬರದ ಜತೆಗೆ ಪ್ರತಿಪಕ್ಷಗಳು ಭಾರತದಲ್ಲಿ ನಿರುದ್ಯೋಗ ಸಮಸ್ಯೆಗಳ ಬಗ್ಗೆಯೂ ಧ್ವನಿ ಎತ್ತುವ ಸಾಧ್ಯತೆಯಿದೆ.

ನೀಟ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಶುಕ್ರವಾರ ಕೋಲಾಹಲ ನಡೆದ ಕಾರಣ ಸ್ಪೀಕರ್‌ ಓಂ ಬಿರ್ಲಾ ಅವರು ಲೋಕಸಭೆ ಅಧಿವೇಶನವನ್ನು ಸೋಮವಾರಕ್ಕೆ ಮುಂದೂಡಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವನ್ನು ಆದ್ಯತೆಯ ಮೇರೆಗೆ ಚರ್ಚಿಸುವ ನಿರ್ಣಯವನ್ನು ಅಂಗೀಕರಿಸುವಂತೆ ಇಂಡಿ ಒಕ್ಕೂಟದ ಸದಸ್ಯರು ಕೋರಿದ ಬಳಿಕ ಗದ್ದಲ ಪ್ರಾರಂಭವಾಗಿತ್ತು. ಈ ಕೋಲಾಹಲದ ಮಧ್ಯೆ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮೊದಲು ಮಧ್ಯಾಹ್ನ 12ರವರೆಗೆ ಮತ್ತು ನಂತರ ಜುಲೈ 1ರವರೆಗೆ ಮುಂದೂಡಿದ್ದರು.

ಇವತ್ತು ಏನಾಗಲಿದೆ?

ಪ್ರತಿಪಕ್ಷಗಳ ನಾಯಕ ರಾಹುಲ್‌ ಗಾಂಧಿ ಅವರು, ʼʼನೀಟ್‌ ವಿವಾದ ಅತ್ಯಂತ ಪ್ರಮುಖವಾದುದು. ಈ ವಿಚಾರವಾಗಿ ಚರ್ಚೆ ನಡೆಸಲು ಪಟ್ಟು ಹಿಡಿಯುತ್ತೇವೆʼʼ ಎಂದು ಈ ಹಿಂದೆಯೇ ಘೋಷಿಸಿದ್ದಾರೆ. ಶುಕ್ರವಾರ ಈ ಬಗ್ಗೆ ಪ್ರಸ್ತಾವಿಸಿದ್ದರೂ, ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಸದನವು ಕೈಗೆತ್ತಿಕೊಳ್ಳಲಿರುವುದರಿಂದ ನೀಟ್ ಕುರಿತು ಚರ್ಚೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಓಂ ಬಿರ್ಲಾ ಹೇಳಿದ್ದರಿಂದ ಸದನದಲ್ಲಿ ಗದ್ದಲ ಏರ್ಪಟ್ಟಿತ್ತು.

ನೀಟ್ ವಿವಾದದ ಬಗ್ಗೆ ಚರ್ಚಿಸಲು ಪ್ರತಿಪಕ್ಷಗಳು ಒತ್ತಾಯಿಸಿದ್ದರಿಂದ ಇತ್ತ ರಾಜ್ಯಸಭೆಯಲ್ಲಿಯೂ ಕೋಲಾಹಲ ನಡೆಯಿತು. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇತರ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಇಂದು ಉಭಯ ಸದನಗಳಲ್ಲಿ ಈ ಬಗ್ಗೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಗ್ನಿಪಥ್ ಯೋಜನೆ, ಹಣದುಬ್ಬರ ಮತ್ತು ನಿರುದ್ಯೋಗದಂತಹ ಇತರ ವಿಷಯಗಳನ್ನು ಇಂಡಿ ಬಣದ ನಾಯಕರು ಪ್ರಸ್ತಾವಿಸಲಿದ್ದು, ನೀಟ್ ವಿಷಯದ ಬಗ್ಗೆ ಸಂಸತ್ತಿನ ನಿಯಮ 267ರ ಅಡಿ ಚರ್ಚೆಗೆ ಒತ್ತಾಯಿಸಲಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ಸದಸ್ಯ ಮತ್ತು ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ. ಬಿಜೆಪಿ ಹಿರಿಯ ನಾಯಕಿ ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿ, ಸಂಸದೆ ಬಾನ್ಸುರಿ ಸ್ವರಾಜ್ ಅವರು ಈ ನಿರ್ಣಯವನ್ನು ಅನುಮೋದಿಸಲಿದ್ದಾರೆ.

ಲೋಕಸಭೆಯಲ್ಲಿ ವಂದನಾ ನಿರ್ಣಯದ ಮೇಲಿನ ಚರ್ಚೆಗೆ 16 ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಇದಕ್ಕೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಿದ್ದಾರೆ. ರಾಜ್ಯಸಭೆಯಲ್ಲಿ ಇದಕ್ಕಾಗಿ 21 ಗಂಟೆಗಳನ್ನು ಮೀಸಲಿಡಲಾಗಿದೆ.

ಭಾನುವಾರ ರಾಹುಲ್‌ ಗಾಂಧಿ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿ, ʼʼಪ್ರತಿಪಕ್ಷ ಪ್ರಜಾಪ್ರಭುತ್ವದ ಮುಖ್ಯ ಭಾಗ. ನಿಮ್ಮ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪ್ರಸ್ತಾವಿಸುವುದಾಗಿ ಭರವಸೆ ನೀಡುತ್ತೇನೆ. ಆ ಮೂಲಕ ನಾನು ನಿಮ್ಮ ಧ್ವನಿಯನ್ನು ಎತ್ತುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ತೀವ್ರ ಹೋರಾಟದ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Continue Reading
Advertisement
Actor Darshan is like my son says hamsalekha
ಸ್ಯಾಂಡಲ್ ವುಡ್14 mins ago

Actor Darshan: ದರ್ಶನ್ ನನ್ನ ಮಗು, ಆತ ಕೊಟ್ಟ ಕೊಡುಗೆ ಕಡೆ ನೋಡೋಣ ಎಂದ ಹಂಸಲೇಖ!

Rohit Sharma
ಪ್ರಮುಖ ಸುದ್ದಿ43 mins ago

Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

LPG Price Cut
ವಾಣಿಜ್ಯ43 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

kidanp case
ಕ್ರೈಂ50 mins ago

Kidnap Case: ಹಿಂದೂ ಹುಡುಗನ ಜೊತೆಗೆ ಮುಸ್ಲಿಂ ಹುಡುಗಿ ನಾಪತ್ತೆ, ಕಿಡ್ನಾಪ್‌ ದೂರು

Rakshak Bullet Washed His Father grave
ಸ್ಯಾಂಡಲ್ ವುಡ್55 mins ago

Rakshak Bullet: ಅಜ್ಜಿ-ತಂದೆಯ ಸಮಾಧಿ ತೊಳೆದು ವಿಶೇಷ ವಿಡಿಯೊ ಮಾಡಿದ ರಕ್ಷಕ್ ಬುಲೆಟ್

Team India Captain
ಕ್ರೀಡೆ1 hour ago

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Water tank Collapsed
ದೇಶ1 hour ago

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

New Criminal Law
ದೇಶ1 hour ago

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

Actor Darshan In Central Jail remembering mother and son
ಕ್ರೈಂ1 hour ago

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Rakshit Shetty Visited Koragajja Temple And Prayed
ಸಿನಿಮಾ2 hours ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು22 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌