Adani Hindenburg Row: ಅದಾನಿ ಗ್ರೂಪ್‌ ಬಗ್ಗೆ ಹಿಂಡನ್‌ಬರ್ಗ್‌ ವರದಿ, ತನಿಖೆಗೆ ಸುಪ್ರೀಂ ನೇತೃತ್ವದಲ್ಲಿಯೇ ಸಮಿತಿ ರಚನೆ - Vistara News

ದೇಶ

Adani Hindenburg Row: ಅದಾನಿ ಗ್ರೂಪ್‌ ಬಗ್ಗೆ ಹಿಂಡನ್‌ಬರ್ಗ್‌ ವರದಿ, ತನಿಖೆಗೆ ಸುಪ್ರೀಂ ನೇತೃತ್ವದಲ್ಲಿಯೇ ಸಮಿತಿ ರಚನೆ

Adani Hindenburg Row: ಕೇಂದ್ರ ಸರ್ಕಾರದ ಶಿಫಾರಸನ್ನು ತಿರಸ್ಕರಿಸಿದ ನ್ಯಾಯಾಲಯವು, ಹೂಡಿಕೆದಾರರ ಹಿತದೃಷ್ಟಿಯಿಂದಾಗಿ ತಾನೇ ಸಮಿತಿ ರಚಿಸುವುದಾಗಿ ತಿಳಿಸಿದೆ.

VISTARANEWS.COM


on

Adani Hindenburg Row
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಕುರಿತು ಹಿಂಡನ್‌ಬರ್ಗ್‌ ವರದಿಯ (Adani Hindenburg Row) ಉಲ್ಲೇಖಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ನೀಡಿದ ವರದಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್‌, ತಾನೇ ಸಮಿತಿ ರಚಿಸುವುದಾಗಿ ತಿಳಿಸಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟಾದಂತಾಗಿದೆ.

“ಸಮಿತಿ ರಚನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹಲವು ತಜ್ಞರ ಹೆಸರುಗಳನ್ನು ಒಳಗೊಂಡ ಮುಚ್ಚಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡಿದೆ. ಆದರೆ, ಪ್ರಕರಣದಲ್ಲಿ ಪಾರದರ್ಶಕತೆಯ ಅವಶ್ಯಕತೆ ಇರುವುದರಿಂದ ಕೇಂದ್ರದ ಶಿಫಾರಸುಗಳನ್ನು ತಿರಸ್ಕರಿಸಲಾಗುತ್ತಿದೆ. ಇದಕ್ಕೆ ಕೋರ್ಟ್‌ ಸಮ್ಮತಿ ನೀಡಿದರೆ, ಇದು ಸರ್ಕಾರ ರಚಿಸಿದ ಸಮಿತಿ ಎನಿಸುತ್ತದೆ. ಹಾಗಾಗಿ, ತನಿಖೆಗೆ ಸುಪ್ರೀಂ ಕೋರ್ಟ್‌ ನೇತೃತ್ವದಲ್ಲಿಯೇ ಸಮಿತಿ ರಚಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದೆ.

ಭಾರತದ ಹೂಡಿಕೆದಾರರ ಹಿತದೃಷ್ಟಿಯಿಂದಾಗಿ ಸುಪ್ರೀಂ ಕೋರ್ಟ್‌ ಸಮಿತಿ ರಚಿಸಲಿದೆ ಎಂದು ತಿಳಿಸಿದೆ. ಗೌತಮ್‌ ಅದಾನಿ ಗ್ರೂಪ್‌ನಲ್ಲಿ ಭಾರತದ ನಾಗರಿಕರು ಹಣ ಹೂಡಿಕೆ ಮಾಡಿರುವುದರಿಂದ, ಅವರ ಸುರಕ್ಷತೆ ದೃಷ್ಟಿಯಿಂದಾಗಿ ತನಿಖೆಗೆ ಆದೇಶಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಸಲ್ಲಿಸಲಾಗಿದೆ.

ಇದನ್ನೂ ಓದಿ: Adani HIndenburg Row: ಅದಾನಿ ಕೇಸ್‌; ಮುಚ್ಚಿದ ಲಕೋಟೆಯಲ್ಲಿ ನೀಡಿದ ಕೇಂದ್ರದ ವರದಿ ತಿರಸ್ಕರಿಸಿದ ಸುಪ್ರೀಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Yogi Adityanath: ʼಅಕ್ಬರ್‌ಪುರʼದ ಮೇಲೆ ಯೋಗಿ ಆದಿತ್ಯನಾಥ್ ಮಾಸ್ಟರ್‌ ಸ್ಟ್ರೋಕ್‌; ಹೆಸರು ಬದಲಾವಣೆಯ ಸೂಚನೆ

Yogi Adityanath: ಭಾರತದಿಂದ ಗುಲಾಮಗಿರಿಯ ಅವಶೇಷಗಳನ್ನು ತೆಗೆದು ಹಾಕುವುದು ಮತ್ತು ಪರಂಪರೆಯನ್ನು ಗೌರವಿಸುವುದು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ‘ಪಂಚ ಪ್ರಾಣ್’ ಗೆ ಪೂರಕವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಕ್ಬರ್‌ಪುರದ ಹೆಸರನ್ನು ಬದಲಾಯಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಇದರ ಜತೆಗೆ ಮುಂದಿನ ದಿನಗಳಲ್ಲಿ ಆಲಿಗಢ, ಆಜಾಮ್‌ಗಢ, ಷಹಜಾನ್‌ಪುರ, ಗಾಜಿಯಾಬಾದ್‌, ಫಿರೋಜಾಬಾದ್‌, ಫಾರೂಕ್‌ಬಾದ್‌ ಮತ್ತು ಮೊರದಾಬಾದ್‌ ಹೆಸರು ಕೂಡ ಬದಲಾಗಲಿದೆ.

VISTARANEWS.COM


on

Yogi Adityanath
Koo

ಲಕ್ನೋ: ಭಾರತದಿಂದ ಗುಲಾಮಗಿರಿಯ ಅವಶೇಷಗಳನ್ನು ತೆಗೆದು ಹಾಕುವುದು ಮತ್ತು ಪರಂಪರೆಯನ್ನು ಗೌರವಿಸುವುದು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ‘ಪಂಚ ಪ್ರಾಣ್’ (ಐದು ಪ್ರತಿಜ್ಞೆಗಳು)ಗೆ ಪೂರಕವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅಕ್ಬರ್‌ಪುರ (Akbarpur)ದ ಹೆಸರನ್ನು ಬದಲಾಯಿಸುವ ಬಗ್ಗೆ ಸುಳಿವು ನೀಡಿದ್ದಾರೆ.

“ಅಕ್ಬರ್‌ಪುರ ಹೆಸರನ್ನು ಉಚ್ಚರಿಸುವುದು ಸರಿ ಬರುವುದಿಲ್ಲ. ಹೀಗಾಗಿ ವಿಶ್ವಾಸ ಇಡಿ, ಈ ಎಲ್ಲ ವಿಚಾರಗಳು ಬದಲಾಗುತ್ತವೆ. ಈ ಹೆಸರನ್ನು ಬದಲಾಯಿಸಲಿದ್ದೇವೆ. ನಾವು ವಸಾಹತುಶಾಹಿಯ ಎಲ್ಲ ಗುರುತು, ಅವಶೇಷಗಳನ್ನು ನಮ್ಮ ರಾಷ್ಟ್ರದಿಂದ ನಿರ್ಮೂಲನೆ ಮಾಡಬೇಕು ಮತ್ತು ನಮ್ಮ ಪರಂಪರೆಯನ್ನು ಗೌರವಿಸಬೇಕು” ಎಂದು ಯೋಗಿ ಆದಿತ್ಯನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಅಕ್ಬರ್‌ಪುರ ಹೊರತಾಗಿ ರಾಜ್ಯದ ಇತರ ಕೆಲವು ಜಿಲ್ಲೆಗಳ ಹೆಸರುಗಳೂ ಬದಲಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಆಲಿಗಢ, ಆಜಾಮ್‌ಗಢ, ಷಹಜಾನ್‌ಪುರ, ಗಾಜಿಯಾಬಾದ್‌, ಫಿರೋಜಾಬಾದ್‌, ಫಾರೂಕ್‌ಬಾದ್‌ ಮತ್ತು ಮೊರದಾಬಾದ್‌ ಹೆಸರು ಕೂಡ ಬದಲಾಗಲಿದೆ ಎಂದು ಮೂಲಗಳು ಸೂಚನೆ ನೀಡಿವೆ. ಯೋಗಿ ಆದಿತ್ಯನಾಥ್ ಅವರು 2017ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಗುಲಾಮಗಿರಿಯ ಚಿಹ್ನೆಗಳನ್ನು ನಿರ್ಮೂಲನೆ ಮಾಡುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈ ಪ್ರಯತ್ನದ ಭಾಗವಾಗಿ ರಾಜ್ಯದ ಹಲವು ರಸ್ತೆಗಳು, ಉದ್ಯಾನವನಗಳು, ಜಂಕ್ಷನ್‌ಗಳು ಮತ್ತು ಕಟ್ಟಡಗಳಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿಡಲಾಗಿದೆ.

ಲಕ್ನೋವೊಂದರಲ್ಲೇ ಅಟಲ್ ಬಿಹಾರಿ ವಾಜಪೇಯಿ ರಸ್ತೆ, ಅಟಲ್ ಜಂಕ್ಷನ್‌, ಅಟಲ್ ಬಿಹಾರಿ ವಾಜಪೇಯಿ ಕಾನ್ಫರೆನ್ಸ್ ಸೆಂಟರ್, ಅಟಲ್ ಸೇತುವೆ, ಅಟಲ್ ಬಿಹಾರಿ ಕಲ್ಯಾಣ ಮಂಟಪ ಇದೆ. ಇದಲ್ಲದೆ ದೇಶದ ನಾಲ್ಕನೇ ಅತ್ಯಂತ ಜನನಿಬಿಡ ಜಂಕ್ಷನ್ ಆಗಿರುವ ಮುಘಲ್ಸರಾಯ್ ರೈಲ್ವೆ ನಿಲ್ದಾಣವನ್ನು ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ.

2019ರ ಕುಂಭಮೇಳಕ್ಕೆ ಸ್ವಲ್ಪ ಮೊದಲು ರಾಜ್ಯ ಸರ್ಕಾರವು ಅಲಹಾಬಾದ್ ಅನ್ನು ಪ್ರಯಾಗ್‌ರಾಜ್‌ ಎಂದು ಮರುನಾಮಕರಣ ಮಾಡಿತ್ತು. ಈ ಐತಿಹಾಸಿಕ ಸ್ಥಳದ ಮೂಲ ಹೆಸರು ಪ್ರಯಾಗ್‌ರಾಜ್. ಇದನ್ನು ಮೊಘಲರು ‘ಅಲಹಾಬಾದ್’ ಎಂದು ಬದಲಾಯಿಸಿದರು ಎನ್ನುವ ವಾದವಿದೆ. ಫೈಜಾಬಾದ್‌ ಅನ್ನು ಅಯೋಧ್ಯೆ ಎಂದೂ ಝಾನ್ಸಿ ರೈಲು ನಿಲ್ದಾಣವನ್ನು ರಾಣಿ ಲಕ್ಷ್ಮೀ ಭಾಯಿ ಸ್ಟೇಷನ್‌ ಎಂದೂ ಬದಲಾಯಿಸಲಾಗಿದೆ.

ಇತ್ತೀಚೆಗೆ ಆಲಿಗಢವನ್ನು ಹರಿಗಢ ಎಂದು ಬದಲಾಯಿಸಬೇಕು ಎನ್ನುವ ಕೂಗು ಕೇಳಿ ಬಂದಿದ್ದು, ಫಿರೋಜಾಬಾದ್‌ ಅನ್ನು ಚಂದ್ರ ನಗರ್‌ ಆಗಿ ಮರುನಾಮಕರಣ ಮಾಡಲು ಆಗ್ರಹಿಸಲಾಗಿದೆ. ಜತೆಗೆ ಮೈನ್‌ಪುರಿ ಜಿಲ್ಲೆಯ ಹೆಸರನ್ನು ಮಾಯಾಪುರಿಯನ್ನಾಗಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ. ಸಚಿವೆ ಗುಲಾಬ್‌ ದೇವಿ ಅವರು ತಮ್ಮ ಜಿಲ್ಲೆಯಾದ ಸಂಭಾಲ್‌ ಹೆಸರನ್ನು ಪೃಥ್ವಿರಾಜ್‌ ನಗರ ಅಥವಾ ಕಲ್ಕಿ ನಗರ ಎಂದು ಬದಲಾಯಿಸಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕರಾದ ದೇವಮಣಿ ದ್ವಿವೇದಿ ಕೂಡ ಸುಲ್ತಾನ್‌ಪುರ ಜಿಲ್ಲೆಯನ್ನು ಖುಷ್ಬಾವನ್‌ಪುರವನ್ನಾಗಿಸಬೇಕು ಎಂದು ಹೇಳಿದ್ದಾರೆ. ಗಾಝಿಪುರದ ಹೆಸರನ್ನು ಗಾಧಿಪುರಿಯಾಗಿಸುವ ಬಗ್ಗೆಯೂ ಬೇಡಿಕೆ ಕೇಳಿ ಬಂದಿದೆ.

ಇದನ್ನೂ ಓದಿ: Encounter in UP: ಯೋಗಿ ನಾಡಿನಲ್ಲಿ ಮತ್ತೊಂದು ಎನ್‌ಕೌಂಟರ್‌, ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಬಲಿ!

Continue Reading

ದೇಶ

Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

Mani Shankar Aiyar: ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಮಣಿಶಂಕರ್‌ ಅಯ್ಯರ್‌, ಭಾರತ ಪಾಕಿಸ್ತಾನಕ್ಕೆ ಗೌರವ ಕೊಡಬೇಕು ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ ಎಂದರು.

VISTARANEWS.COM


on

mani shankar iyer
Koo

ನವದೆಹಲಿ: ಕಾಂಗ್ರೆಸ್‌ ಪಾಕಿಸ್ತಾನದ ಫಾಲೋವರ್‌ ಪಕ್ಷ ಎಂದು ಪದೇ ಪದೇ ಬಿಜೆಪಿ ಜಡಿಯುತ್ತಿದ್ದರೂ ಒಂದಿಲ್ಲೊಂದು ಒಂದು ಪಾಕ್‌(Pakistan) ಪರ ಹೇಳಿಕೆ ನೀಡಿ ಕಾಂಗ್ರೆಸ್‌ ನಾಯಕರು ಪಕ್ಷಕ್ಕೆ ಮುಜುಗರ ತರುತ್ತಲೇ ಇದ್ದಾರೆ. ಅಲ್ಲದೇ ಬಿಜೆಪಿ ಆರೋಪಕ್ಕೆ ಆಹಾರವಾಗುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ನಾಯಕರು ಪಾಕ್‌ ಪರವಾಗಿ ಬ್ಯಾಟಿಂಗ್‌ ಬೀಸಿ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇದೀಗ ಕಾಂಗ್ರೆಸ್ (Congress) ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ (Mani Shankar Aiyar) ಅವರು ಪಾಕ್‌ ಪರ ಹೇಳಿಕೆ ನೀಡಿ ವಿವಾದಕ್ಕಿಡಾಗಿದ್ದಾರೆ. ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಿಜೆಪಿ ತೀವ್ರವಾಗಿ ಖಂಡಿಸಿದೆ.

ವೈರಲ್‌ ಆಗಿರುವ ವಿಡಿಯೋದಲ್ಲೇನಿದೆ?

ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಮಣಿಶಂಕರ್‌ ಅಯ್ಯರ್‌, ಭಾರತ ಪಾಕಿಸ್ತಾನಕ್ಕೆ ಗೌರವ ಕೊಡಬೇಕು ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜೊತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ.. ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ. ಒಂದು ವೇಳೆ ಅವರನ್ನು ದ್ವೇಷಿಸಿದರೆ ಹುಚ್ಚನೊಬ್ಬ ಬಂದು ಬಾಂಬ್‌ ಸ್ಫೋಟಿಸುತ್ತಾನೆ ಎಂದು ಹೇಳಿದರು. ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದೆ.

ಈ ಹಿಂದೆಯೂ ಒಮ್ಮೆ ಮಣಿಶಂಕರ್‌ ಅಯ್ಯರ್‌ ಪಾಕ್‌ ಪರ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಪಾಕಿಸ್ತಾನೀಯರನ್ನು ಅವರು “ಭಾರತದ ಅತಿದೊಡ್ಡ ಆಸ್ತಿ” ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು. “ನನ್ನ ಅನುಭವದ ಪ್ರಕಾರ, ಪಾಕಿಸ್ತಾನಿಯರು ಬಹುಶಃ ಎದುರಿನವರಿಗೆ ಅತಿ ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸುವ ಜನರು. ನಾವು ಸ್ನೇಹಪರರಾಗಿದ್ದರೆ ಅವರು ಅತಿಯಾದ ಸ್ನೇಹಪರರಾಗಿರುತ್ತಾರೆ ಮತ್ತು ನಾವು ದ್ವೇಷಿಸಿದರೆ ಅವರು ತುಂಬಾ ದ್ವೇಷಿಸಬಲ್ಲರು. ಪಾಕಿಸ್ತಾನದಂತೆ ನನ್ನನ್ನು ತೆರೆದ ತೋಳುಗಳಿಂದ ಸ್ವಾಗತಿಸಿದ ಇನ್ನೊಂದು ದೇಶಕ್ಕೆ ನಾನು ಯಾವತ್ತೂ ಹೋಗಿಲ್ಲ” ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದರು.

ಇದನ್ನೂ ಓದಿ: Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

ಎರಡು ದಿನಗಳ ಹಿಂದೆ ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌(Mahender Pratap Singh) 2019ರಲ್ಲಿ ನಡೆದ ಪುಲ್ವಾಮಾ ದಾಳಿ(Pulwama attack) ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದರು.

Continue Reading

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ದೇಶ

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

NEET-UG: ನೀಟ್-ಯುಜಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರು ಅಭ್ಯರ್ಥಿಗಳಿಂದ ತಲಾ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಅವರನ್ನು ತೇರ್ಗಡೆ ಮಾಡುವುದಾಗಿ ಭರವಸೆ ನೀಡಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕ ಮತ್ತು ಇತರ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮತ್ತು ಕೆಲವು ನೀಟ್-ಯುಜಿ ಆಕಾಂಕ್ಷಿಗಳ ನಡುವೆ ಒಪ್ಪಂದ ನಡೆದಿತ್ತು. ಅದರ ಪ್ರಕಾರ ಅಭ್ಯರ್ಥಿಗಳು ತಮಗೆ ಗೊತ್ತಿಲ್ಲದ ಪ್ರಶ್ನೆಗೆ ಉತ್ತರ ಬರೆಯದೆ ಹಾಗೆ ಖಾಲಿ ಬಿಡಬೇಕಿತ್ತು. ಪರೀಕ್ಷೆಯ ನಂತರ ಉತ್ತರ ಪತ್ರಿಕೆಯನ್ನು ಸಂಗ್ರಹಿಸಿ ಆ ಖಾಲಿ ಸ್ಥಳವನ್ನು ಭರ್ತಿ ಮಾಡುವುದಾಗಿ ಒಪ್ಪಂದ ನಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಭೌತಶಾಸ್ತ್ರ ಶಿಕ್ಷಕ ತುಷಾರ್ ಭಟ್ ಮತ್ತು ಪರಶುರಾಮ್ ರಾಯ್, ಆರಿಫ್ ವೋರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

NEET-UG
Koo

ಗಾಂಧಿನಗರ: ನೀಟ್-ಯುಜಿ (NEET-UG) ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರು ಅಭ್ಯರ್ಥಿಗಳಿಂದ ತಲಾ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಅವರನ್ನು ತೇರ್ಗಡೆ ಮಾಡುವುದಾಗಿ ಭರವಸೆ ನೀಡಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕ ಮತ್ತು ಇತರ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಭಾನುವಾರ (ಮೇ 5) ನೀಟ್-ಯುಜಿ ಪರೀಕ್ಷೆ ನಡೆಸಿತ್ತು. ಈ ವೇಳೆ ಗೋಧ್ರಾ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಕಲು ನಡೆದಿದೆ ಎಂಬ ಸುಳಿವು ಜಿಲ್ಲಾಧಿಕಾರಿಗೆ ದೊರೆತ ನಂತರ ತನಿಖೆ ನಡೆಸಲಾಗಿತ್ತು. ಈ ವೇಳೆ ವಂಚನೆಯ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು

ಸದ್ಯ ಭೌತಶಾಸ್ತ್ರ ಶಿಕ್ಷಕ ತುಷಾರ್ ಭಟ್ ಮತ್ತು ಪರಶುರಾಮ್ ರಾಯ್, ಆರಿಫ್ ವೋರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತುಷಾರ್ ಭಟ್‌ ಕಾರಿನಲ್ಲಿ 7 ಲಕ್ಷ ರೂ. ಪತ್ತೆಯಾಗಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ. ಇದು ಅಭ್ಯರ್ಥಿಯೊಬ್ಬರನ್ನು ಮೆರಿಟ್ ಪಟ್ಟಿಗೆ ಸೇರಿಸಲು ಸಹಾಯ ಮಾಡುವಂತೆ ವೋರಾ ಮುಂಗಡವಾಗಿ ಪಾವತಿಸಿದ ಮೊತ್ತ ಎಂದು ಪೊಲೀಸರು ತಿಳಿಸಿದ್ದಾರೆ.

ವಂಚನೆ ಹೇಗೆ?

ವಿಚಾರಣೆ ವೇಳೆ ವಂಚನೆಯ ಜಾಲದ ವಿವರ ಬೆಳಕಿಗೆ ಬಂದಿದೆ. ಆರೋಪಿಗಳು ಮತ್ತು ಕೆಲವು ನೀಟ್-ಯುಜಿ ಆಕಾಂಕ್ಷಿಗಳ ನಡುವೆ ಒಪ್ಪಂದ ನಡೆದಿತ್ತು. ಅದರ ಪ್ರಕಾರ ಅಭ್ಯರ್ಥಿಗಳು ತಮಗೆ ಗೊತ್ತಿಲ್ಲದ ಪ್ರಶ್ನೆಗೆ ಉತ್ತರ ಬರೆಯದೆ ಹಾಗೆ ಖಾಲಿ ಬಿಡಬೇಕಿತ್ತು. ಪರೀಕ್ಷೆಯ ನಂತರ ಉತ್ತರ ಪತ್ರಿಕೆಯನ್ನು ಸಂಗ್ರಹಿಸಿ ಆ ಖಾಲಿ ಸ್ಥಳವನ್ನು ಭರ್ತಿ ಮಾಡುವುದಾಗಿ ಒಪ್ಪಂದ ನಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಜಿಲ್ಲಾ ಶಿಕ್ಷಣ ಅಧಿಕಾರಿಯ ದೂರಿನ ಮೇರೆಗೆ ಗೋಧ್ರಾ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯ್ ಜಲರಾಮ್ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತುಷಾರ್ ಭಟ್ ನೀಟ್‌ ಕೇಂದ್ರದ ಉಪ ಅಧೀಕ್ಷಕರಾಗಿ ನೇಮಕಗೊಂಡಿದ್ದರು. ತನಿಖೆ ವೇಳೆ ಅವರ ಮೊಬೈಲ್‌ನಲ್ಲಿ ಸಾಕ್ಷಿ ದೊರೆತಿದೆ. ಪರಶುರಾಮ್ ರಾಯ್ ವ್ಯಾಟ್‌ಆ್ಯಪ್‌ ಮೂಲಕ ಕಳುಹಿಸಿದ 16 ಅಭ್ಯರ್ಥಿಗಳ ಪಟ್ಟಿ ಕಂಡು ಬಂದಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಪಟ್ಟಿಯ ಬಗ್ಗೆ ಕೇಳಿದಾಗ ತುಷಾರ್‌ ಭಟ್‌, ಇವರು ತಮ್ಮ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಎಂದು ಹೇಳಿದ್ದಾರೆ. ಈ ಅಭ್ಯರ್ಥಿಗಳು ಬಿಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಲು ತಲಾ 10 ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾ ಶಿಕ್ಷಣ ಅಧಿಕಾರಿ ಕಿರಿತ್ ಪಟೇಲ್ ತಿಳಿಸಿದ್ದಾರೆ.

ಸದ್ಯ ತುಷಾರ್‌ ಭಟ್‌ ಅವರ ಮೊಬೈಲ್‌ ಫೋನ್‌, ನಗದು ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಮೂವರು ಆರೋಪಿಗಳ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿದೆ ಎಂದು ಗೋಧ್ರಾ ತಾಲೂಕು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Continue Reading
Advertisement
murder case kalaburagi
ಕಲಬುರಗಿ38 seconds ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

gold rate today
ಚಿನ್ನದ ದರ14 mins ago

Gold Rate Today: ಅಕ್ಷಯ ತದಿಗೆಯಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ; ಬಂಗಾರ ಕೊಳ್ಳಲು ಮುಗಿಬಿದ್ದ ಜನ; ದರಗಳು ಹೀಗಿವೆ

Yogi Adityanath
ದೇಶ14 mins ago

Yogi Adityanath: ʼಅಕ್ಬರ್‌ಪುರʼದ ಮೇಲೆ ಯೋಗಿ ಆದಿತ್ಯನಾಥ್ ಮಾಸ್ಟರ್‌ ಸ್ಟ್ರೋಕ್‌; ಹೆಸರು ಬದಲಾವಣೆಯ ಸೂಚನೆ

mani shankar iyer
ದೇಶ18 mins ago

Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

ICMR Dietary Guidelines
ಆರೋಗ್ಯ31 mins ago

ICMR Dietary Guidelines: ಬೊಜ್ಜು ತಡೆಯಲು ಏನು ಮಾಡಬೇಕು? ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಶೋಧನಾ ಸಂಸ್ಥೆ

Murder Case
ಬೆಂಗಳೂರು35 mins ago

Murder case : ಪ್ರೀತಿ ವಿಷ್ಯಕ್ಕೆ ಬೀದಿ ಹೆಣವಾದ! ಮಗನ ಡೆಡ್‌ಬಾಡಿ ನೋಡಿ ಮೂರ್ಛೆ ಹೋದ ತಾಯಿ

pm narendra modi basava jayanti 2024
ಪ್ರಮುಖ ಸುದ್ದಿ1 hour ago

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

Sharia law
ವಿದೇಶ1 hour ago

Sharia Law: “ಅಮೆರಿಕನ್ನರ ಮೇಲೂ ಷರಿಯಾ ಕಾನೂನು ಹೇರಲಾಗುತ್ತದೆ…”; ಸಂಚಲನ ಮೂಡಿಸಿದ ವೈರಲ್‌ ವಿಡಿಯೋ

Rain Effect In karnataka
ಮಳೆ1 hour ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

NEET-UG
ದೇಶ1 hour ago

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect In karnataka
ಮಳೆ1 hour ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ8 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ15 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ16 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ17 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ23 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ23 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ24 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು1 day ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 day ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಟ್ರೆಂಡಿಂಗ್‌