ರೈಲ್ವೆ ಸ್ಟೇಶನ್​​ ಟಿವಿ ಪರದೆ ಮೇಲೆ ಪ್ರಸಾರವಾದ ಅಶ್ಲೀಲ ವಿಡಿಯೊ; ಪ್ರಯಾಣಿಕರಿಗೆ ಮುಜುಗರ, ಅದನ್ನೂ ಚಿತ್ರೀಕರಿಸಿ ವೈರಲ್ ಮಾಡಿದ ಮಂದಿ! - Vistara News

ದೇಶ

ರೈಲ್ವೆ ಸ್ಟೇಶನ್​​ ಟಿವಿ ಪರದೆ ಮೇಲೆ ಪ್ರಸಾರವಾದ ಅಶ್ಲೀಲ ವಿಡಿಯೊ; ಪ್ರಯಾಣಿಕರಿಗೆ ಮುಜುಗರ, ಅದನ್ನೂ ಚಿತ್ರೀಕರಿಸಿ ವೈರಲ್ ಮಾಡಿದ ಮಂದಿ!

ರೈಲ್ವೆ ಪೊಲೀಸರು ಈ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ರೈಲ್ವೆ ಸ್ಟೇಶನ್​​ನ ಪ್ಲಾಟ್​ಫಾರ್ಮ್​​ನ ಟಿವಿಗಳಲ್ಲಿ ಜಾಹೀರಾತು ಪ್ರಸಾರ ಮಾಡಲು ಗುತ್ತಿಗೆ ತೆಗೆದುಕೊಂಡಿದ್ದ ದತ್ತಾ ಸ್ಟುಡಿಯೊ ಕಂಪನಿ ಪ್ರೈವೇಟ್​ ಲಿಮಿಟೆಡ್​​ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.

VISTARANEWS.COM


on

Adult Film For 3 Minutes In Patna Railway Station
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಿಹಾರದ ಪಾಟ್ನಾ ರೈಲ್ವೆ ಸ್ಟೇಶನ್​​ನ 10ನೇ ಪ್ಲಾಟ್​ಫಾರ್ಮ್​​ನಲ್ಲಿ ರೈಲಿಗಾಗಿ ಕಾಯುತ್ತ ಕುಳಿತ ನೂರಾರು ಪ್ರಯಾಣಿಕರು ತೀವ್ರ ಮುಜುಗರಕ್ಕೀಡಾದ ಸನ್ನಿವೇಶ ಎದುರಾಯಿತು. ಪ್ಲಾಟ್​ಫಾರ್ಮ್​ನಲ್ಲಿ ಅಳವಡಿಸಲಾಗಿದ್ದ ಟಿವಿಯಲ್ಲಿ ಒಮ್ಮೆಲೇ ಅಶ್ಲೀಲ ಸಿನಿಮಾದ ವಿಡಿಯೊ ಪ್ರದರ್ಶನವಾಯಿತು. ಅದೂ ಮೂರು ನಿಮಿಷಗಳ ಕಾಲ ಆ ಸೆಕ್ಸ್​ ವಿಡಿಯೊ ಪ್ಲೇ ಆಗಿದೆ. ಇದು ನಡೆದಿದ್ದು ಭಾನುವಾರ ಬೆಳಗ್ಗೆ 9.30ರ ಹೊತ್ತಿಗೆ. ಟಿವಿ ಪರದೆ ಮೇಲೆ ಜಾಹೀರಾತು ಪ್ರಸಾರ ಆಗಬೇಕಿತ್ತು. ಅದರ ಬದಲಿಗೆ ಅಶ್ಲೀಲ ಸಿನಿಮಾ ಪ್ರದರ್ಶನಗೊಂಡಿದ್ದು ಪ್ರಯಾಣಿಕರೆಲ್ಲ ಒಮ್ಮೆ ಶಾಕ್​ ಆಗಿದ್ದರು. ಈ ವಿಡಿಯೊ ಬ್ಲರ್​ ಆದ ರೂಪದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಕೂಡ ವೈರಲ್ ಆಗುತ್ತಿದೆ.

ಇದೀಗ ರೈಲ್ವೆ ಪೊಲೀಸರು ಈ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ರೈಲ್ವೆ ಸ್ಟೇಶನ್​​ನ ಪ್ಲಾಟ್​ಫಾರ್ಮ್​​ನ ಟಿವಿಗಳಲ್ಲಿ ಜಾಹೀರಾತು ಪ್ರಸಾರ ಮಾಡಲು ಗುತ್ತಿಗೆ ತೆಗೆದುಕೊಂಡಿದ್ದ ದತ್ತಾ ಸ್ಟುಡಿಯೊ ಕಂಪನಿ ಪ್ರೈವೇಟ್​ ಲಿಮಿಟೆಡ್​​ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಅಷ್ಟೇ ಅಲ್ಲ, ಗುತ್ತಿಗೆಯನ್ನು ರದ್ದುಗೊಳಿಸಲಾಗಿದೆ. ಏಜೆನ್ಸಿಯನ್ನು ಬ್ಲ್ಯಾಕ್​ಲಿಸ್ಟ್​ಗೆ ಹಾಕಲಾಗಿದ್ದು, ಅದು ಯಾವೆಲ್ಲ ಟಿವಿ ಸ್ಕ್ರೀನ್​​ಗಳನ್ನು ಗುತ್ತಿಗೆ ಪಡೆದಿತ್ತು, ಅವಿಷ್ಟನ್ನೂ ಹಿಂಪಡೆಯಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊ ತೋರಿಸಿ, ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಶಿಕ್ಷಕ ಬಂಧನ

ಟಿವಿ ಪರದೆ ಮೇಲೆ ಪ್ರಸಾರವಾದ ವಿಡಿಯೊವನ್ನು ಒಂದಷ್ಟು ಜನ ನಿಂತು ವಿಡಿಯೊ ಮಾಡಿಕೊಂಡು, ಕೂಡಲೇ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಕೆಲವರು ಅದನ್ನು ಬ್ಲರ್​ ಮಾಡಿ ವೈರಲ್ ಮಾಡಿದ್ದಾರೆ. ಟ್ವಿಟರ್​ನಲ್ಲಿ ಬಿಹಾರ ಮುಖ್ಯಮಂತ್ರಿ ಮತ್ತು ರೈಲ್ವೆ ಇಲಾಖೆಯನ್ನು ಟ್ಯಾಗ್​ಕೂಡ ಮಾಡುತ್ತಿದ್ದಾರೆ. ಇನ್ನು ಘಟನೆ ಬಗ್ಗೆ ಪೊಲೀಸರು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳು ಪ್ರತ್ಯೇಕವಾಗಿ ತನಿಖೆ ಕೈಗೊಂಡಿದ್ದಾರೆ. ಈ ವಿಡಿಯೊ ಪ್ರದರ್ಶನದ ಬೆನಲ್ಲೇ ಸ್ಟೇಶನ್​ ಆಪರೇಟರ್​ ನಾಪತ್ತೆಯಾಗಿದ್ದು, ಅವನಿಗಾಗಿ ಹುಡುಕಾಟ ನಡೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವೈರಲ್ ನ್ಯೂಸ್

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

Viral Video: ಶಾಲೆ ಎನ್ನುವುದು ಪವಿತ್ರ ಜಾಗ. ಇದೇ ಕಾರಣಕ್ಕೆ ಹಿರಿಯರು ಶಾಲೆಗಳನ್ನು ದೇವಾಲಯಕ್ಕೆ ಹೋಲಿಸಿದ್ದರು. ಆದರೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕಾದ ಶಿಕ್ಷಕನೇ ಅಡ್ಡ ದಾರಿ ಹಿಡಿದರೆ? ಮಕ್ಕಳು ಪಾಠ ಕಲಿಸುತ್ತಾರೆ. ಹೇಗೆ ಎನ್ನುವುದನ್ನು ಈ ವಿಡಿಯೊದಲ್ಲಿ ನೋಡಿ.

VISTARANEWS.COM


on

viral video
Koo

ಛತ್ತೀಸ್‌ಗಢ: ಈಗಿನ ವಿದ್ಯಾರ್ಥಿಗಳು ಎಲ್ಲದಕ್ಕೂ ಬಹುಬೇಗ ಪ್ರತಿಕ್ರಿಯಿಸುವ ಗುಣಗಳನ್ನು ಮೈಗೂಡಿಸಿಕೊಂಡಿರುತ್ತಾರೆ. ನೆಗಟಿವ್‌ ಇರಲಿ ಪಾಸಿಟಿವ್‌ ಇರಲಿ ತುರ್ತಾಗಿ ಸ್ಪಂದಿಸುತ್ತಾರೆ. ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ. ಮದ್ಯ ಸೇವಿಸಿಕೊಂಡೇ ಶಾಲೆಗೆ ಬಂದ ಶಿಕ್ಷಕನಿಗೆ ವಿದ್ಯಾರ್ಥಿಗಳೇ ತಕ್ಕ ಪಾಠ ಕಲಿಸಿದ್ದಾರೆ. ಆತನಿಗೆ ಚಪ್ಪಲಿ ಎಸೆದು ವಿದ್ಯಾರ್ಥಿಗಳು ಓಡಿಸಿದ ಘಟನೆ ನಡೆದಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಘಟನೆಯ ವಿವರ

ಛತ್ತೀಸ್‌ಗಢದ ಬಸ್ತಾರ್‌ನ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕ ಕುಡಿದ ಅಮಲಿನಲ್ಲಿ ಶಾಲಾ ಆವರಣಕ್ಕೆ ಪ್ರವೇಶಿಸುತ್ತಿದ್ದಂತೆ ಬಾಲಕರು ಮತ್ತು ಬಾಲಕಿಯರು ಗುಂಪುಗೂಡಿ ಆತನತ್ತ ಚಪ್ಪಲಿಗಳನ್ನು ಎಸೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಶಿಕ್ಷಕನು ಅಂತಿಮವಾಗಿ ತನ್ನ ಬೈಕ್‌ ಹತ್ತಿ ಶಾಲೆ ಆವರಣದಿಂದ ಹೊರಟು ಹೋಗುತ್ತಾನೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. “ಬಸ್ತಾರ್‌ನ ಶಾಲೆಯೊಂದಕ್ಕೆ ಶಿಕ್ಷಕ ಕುಡಿದು ಬಂದಾಗ ವಿದ್ಯಾರ್ಥಿಗಳು ತಕ್ಕ ಪಾಠ ಕಲಿಸಿದರು. ಆತ ವಿದ್ಯಾರ್ಥಿಗಳಿಗೆ ಕಲಿಸುವ ಬದಲು ಅವರನ್ನು ನಿಂದಿಸುತ್ತಿದ್ದ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ಶಿಕ್ಷಕನತ್ತ ಚಪ್ಪಲಿಗಳನ್ನು ಎಸೆದು ಆತನನ್ನು ಸ್ಥಳದಿಂದ ಓಡಿಸಿದರು. ಈ ಘಟನೆಯು ವಿಡಿಯೊದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟು ಹಾಕಿದೆʼʼ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಸದ್ಯ ಈ ವಿಡಿಯೊವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ.

ಕಾರಣವೇನು?

ʼʼಈ ಶಿಕ್ಷಕ ಪ್ರತೀ ದಿನ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಿದ್ದು, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ಬೈಯುತ್ತಿದ್ದ. ಶಿಕ್ಷಕನ ಈ ವರ್ತನೆಯಿಂದ ಬೇಸತ್ತಿದ್ದ ವಿದ್ಯಾರ್ಥಿಗಳು ಒಗ್ಗಟ್ಟಿನಿಂದ ಆತನಿಗೆ ಪಾಠ ಕಲಿಸಲು ತೀರ್ಮಾನಿಸಿದ್ದರು. ಅದರಂತೆ ಎಂದಿನಂತೆ ಆತ ಕುಡಿದು ಶಾಲೆ ಆವರಣಕ್ಕೆ ಬರುತ್ತಿದ್ದಂತೆ ಕ್ರಮ ಕೈಗೊಂಡಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ನೆಟ್ಟಿಗರಿಂದ ಮೆಚ್ಚುಗೆ

ವಿದ್ಯಾರ್ಥಿಗಳ ಈ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಕುಡುಕ ಶಿಕ್ಷಕನಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ತಿಳಿಸಿದ್ದಾರೆ. ʼʼಛತ್ತೀಸ್‌ಗಢದಲ್ಲಿ ಪ್ರತಿ ದಿನ ಇಂತಹ ಘಟನೆ ನಡೆಯುತ್ತಲೇ ಇರುತ್ತದೆ. ಇದೇ ಕಾರಣಕ್ಕೆ ಸರ್ಕಾರ ಶಾಲೆಗಳ ಉಸ್ತುವಾರಿಯನ್ನು ಖಾಸಗಿ ಕಂಪೆನಿಗಳಿಗೆ ವಹಿಸುತ್ತಿದೆʼʼ ಎಂದು ಒಬ್ಬರು ತಿಳಿಸಿದ್ದಾರೆ. ʼʼಮೊದಲೇ ಬಸ್ತಾರ್‌ನಲ್ಲಿ ಶಿಕ್ಷಕರ ಕೊರತೆ ಇದೆ. ಇನ್ನು ಇದ್ದ ಕೆಲವರ ಸ್ಥಿತಿ ಇಂತಹದ್ದು. ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎನ್ನುವ ವಿಶ್ವಾಸವಿದೆʼʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್ನು ಹಲವು ನೆಟ್ಟಿಗರು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: Ticket to lovebirds: ಸಾರಿಗೆ ಬಸ್ಸಲ್ಲಿ ಅಜ್ಜಿ-ಮೊಮ್ಮಗಳಿಗೆ ಉಚಿತ ಪ್ರಯಾಣ; 4 ಲವ್ ಬರ್ಡ್ಸ್‌ಗೆ 444 ರೂ. ಟಿಕೆಟ್!

ಹಿಂದೆಯೂ ನಡೆದಿತ್ತು

ಮದ್ಯ ಸೇವಿಸಿ ಶಿಕ್ಷಕರು ಶಾಲೆಗೆ ಬರುತ್ತಿರುವ ಘಟನೆ ಹಿಂದೆಯೂ ವರದಿಯಾಗಿತ್ತು. ಕಳೆದ ತಿಂಗಳು ಇದೇ ಬಸ್ತಾರ್‌ ಜಿಲ್ಲೆಯ ಸರ್ಕಾರಿ ಶಾಲೆಯೊಂದಕ್ಕೆ ಕುಡುಕ ಶಿಕ್ಷಕನೊಬ್ಬ ಮದ್ಯದ ಬಾಟಲಿ ತೆಗೆದುಕೊಂಡೇ ಬಂದಿದ್ದ. ಈ ವಿಡಿಯೊ ಕೂಡ ಇಂಟರ್‌ನೆಟ್‌ನಲ್ಲಿ ಭಾರೀ ಸದ್ದು ಮಾಡಿತ್ತು. ಜತೆಗೆ ಕೆಲವು ದಿನಗಳ ಹಿಂದೆ ಮಧ್ಯ ಪ್ರದೇಶದ ಜಬಲ್‌ಪುರದ ಶಾಲೆಯೊಂದಕ್ಕೆ ಶಿಕ್ಷಕನೊಬ್ಬ ತೂರಾಡಿಕೊಂಡೆ ಬಂದಿದ್ದ. ಬಳಿಕ ಆತನನ್ನು ಅಮಾನತುಗೊಳಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಾಣಿಜ್ಯ

SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

SBI Debit Cards: ಏಪ್ರಿಲ್‌ 1ರಿಂದ ಎಸ್‌ಬಿಐ ಡೆಬಿಟ್ ಕಾರ್ಡ್‌ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬೀಳಲಿದೆ. ವಾರ್ಷಿಕ ನಿರ್ವಹಣಾ ಶುಲ್ಕವನ್ನು ಹೆಚ್ಚಿಸುವುದಾಗಿ ಬ್ಯಾಂಕ್‌ ಘೋಷಿಸಿದೆ.

VISTARANEWS.COM


on

SBI Debit Cards
Koo

ನವದೆಹಲಿ: ನೀವು ಎಸ್‌ಬಿಐ (State Bank of India)ಯ ಡೆಬಿಟ್‌ ಕಾರ್ಡ್‌ ಹೊಂದಿದ್ದೀರಾ? ಹಾಗಾದರೆ ನಿಮಗಿದು ಬ್ಯಾಡ್‌ ನ್ಯೂಸ್‌. ಯಾಕೆಂದರೆ ಎಸ್‌ಬಿಐ ಕೆಲವು ವರ್ಗದ ಡೆಬಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದ ವಾರ್ಷಿಕ ನಿರ್ವಹಣಾ ಶುಲ್ಕವನ್ನು ಹೆಚ್ಚಿಸುವುದಾಗಿ ಘೋಷಿಸಿದೆ (SBI Debit Cards). ಹೊಸ ದರಗಳು ಹೊಸ ಹಣಕಾಸು ವರ್ಷದ ಮೊದಲ ದಿನವಾದ ಏಪ್ರಿಲ್ 1ರಿಂದ ಜಾರಿಗೆ ಬರಲಿವೆ ಎಂದು ಎಸ್‌ಬಿಐ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಯಾವೆಲ್ಲ ಕಾರ್ಡ್‌ಗಳಿಗೆ ಅನ್ವಯ?

ಡೆಬಿಟ್ ಕಾರ್ಡ್‌ಗಳಾದ ಕ್ಲಾಸಿಕ್ / ಸಿಲ್ವರ್ / ಗ್ಲೋಬಲ್, ಯುವ / ಗೋಲ್ಡ್, ಪ್ಲಾಟಿನಂ ಮತ್ತು ಪ್ರೈಡ್ / ಪ್ರೀಮಿಯಂ ಬಿಸಿನೆಸ್ ವಿಭಾಗಗಳಿಗೆ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ವಿವಿಧ ವಿಭಾಗಗಳಲ್ಲಿ ವಾರ್ಷಿಕ ನಿರ್ವಹಣಾ ಶುಲ್ಕವನ್ನು 75 ರೂ. ಹೆಚ್ಚಿಸಲಾಗಿದೆ ಎಂದು ಎಸ್‌ಬಿಐ ತಿಳಿಸಿದೆ.

ಡೆಬಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದ ಇತರ ಶುಲ್ಕಗಳನ್ನು ಸಹ ಉಲ್ಲೇಖಿಸಲಾಗಿದೆ. ಇವುಗಳಲ್ಲಿ ಡೆಬಿಟ್ ಕಾರ್ಡ್‌ಗಳ ವಿತರಣೆ ಮತ್ತು ಬದಲಾವಣೆಯೂ ಸೇರಿವೆ. ಗ್ರಾಹಕರು ಡೆಬಿಟ್ ಕಾರ್ಡ್ ಬದಲಾಯಿಸಲು (300 ರೂ. ಮತ್ತು ಜಿಎಸ್‌ಟಿ), ನಕಲಿ ಪಿನ್ / ಪಿನ್ ರಿಜನರೇಷನ್‌ (50 ರೂ. ಪ್ಲಸ್ ಜಿಎಸ್‌ಟಿ)ಗೆ ಶುಲ್ಕ ಪಾವತಿಸಬೇಕಾಗುತ್ತದೆ. ಅಂತಾರಾಷ್ಟ್ರೀಯ ವಹಿವಾಟುಗಳಂತಹ ಸೇವೆಗಳ ಫೀಸ್‌ ಬಗ್ಗೆಯೂ ಎಸ್‌ಬಿಐ ಉಲ್ಲೇಖಿಸಿದೆ. ಎಲ್ಲ ಶುಲ್ಕಗಳು ಶೇ. 18 ರಷ್ಟು ಜಿಎಸ್‌ಟಿಯನ್ನು ಒಳಗೊಂಡಿದೆ.

  • ಎಸ್‌ಬಿಐ ಕ್ಲಾಸಿಕ್, ಸಿಲ್ವರ್, ಗ್ಲೋಬಲ್, ಕಾಂಟ್ಯಾಕ್ಟ್‌ಲೆಸ್ ಡೆಬಿಟ್ ಕಾರ್ಡ್‌ಗಳ ಗ್ರಾಹಕರು ವಾರ್ಷಿಕ 200 ರೂ. ನಿರ್ವಹಣಾ ಶುಲ್ಕ ಮತ್ತು ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ. ಪ್ರಸ್ತುತ ಈ ಕಾರ್ಡ್‌ಗಳಿಗೆ 125 ರೂ. ಶುಲ್ಕ + ಜಿಎಸ್‌ಟಿ ಪಾವತಿಸಬೇಕಿದೆ.
  • ಯುವ, ಗೋಲ್ಡ್, ಕಾಂಬೋ ಡೆಬಿಟ್ ಕಾರ್ಡ್, ಮೈ ಕಾರ್ಡ್ (ಇಮೇಜ್ ಕಾರ್ಡ್)ಗೆ ಏಪ್ರಿಲ್‌ 1ರಿಂದ 250 ರೂ. + ಜಿಎಸ್‌ಟಿ ನಿರ್ವಹಣಾ ಶುಲ್ಕ ಪಾವತಿಸಬೇಕು (ಇದುವರೆಗೆ 175 ರೂ. + ಜಿಎಸ್‌ಟಿ ಇತ್ತು). ಎಸ್‌ಬಿಐ ಪ್ಲಾಟಿನಂ ಡೆಬಿಟ್ ಕಾರ್ಡ್‌ಗಳಿಗೆ 250 ರೂ. ಬದಲಿಗೆ 325 ರೂ. + ಜಿಎಸ್‌ಟಿ ವಾರ್ಷಿಕ ಶುಲ್ಕ ಪಾವತಿಸಬೇಕು.
  • ಪ್ರೈಡ್ ಮತ್ತು ಪ್ರೀಮಿಯಂ ಬ್ಯುಸಿನೆಸ್ ಡೆಬಿಟ್ ಕಾರ್ಡ್‌ಗಳ ವಾರ್ಷಿಕ ನಿರ್ವಹಣೆ ಶುಲ್ಕವು ಈಗಿನ 350 ರೂ. + ಜಿಎಸ್‌ಟಿಯಿಂದ 425 ರೂ. + ಜಿಎಸ್‌ಟಿಗೆ ಹೆಚ್ಚಾಗುತ್ತದೆ.

ಇದನ್ನೂ ಓದಿ: LIC News: ಎಲ್‌ಐಸಿ ಈಗ ನಂಬರ್‌ ಒನ್‌ ಜಾಗತಿಕ ವಿಮೆ ಬ್ರಾಂಡ್!‌

ಕ್ರೆಡಿಟ್‌ ಕಾರ್ಡ್‌ನಲ್ಲಿಯೂ ಬದಲಾವಣೆ

ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್‌ಗಳ ಕನಿಷ್ಠ ದಿನದ ಬಿಲ್ ಲೆಕ್ಕಾಚಾರ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಘೋಷಿಸಿದೆ. ಕೆಲವು ವಿಶೇಷ ಕ್ರೆಡಿಟ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಕ್ರೆಡಿಟ್ ಕಾರ್ಡ್‌ಗಳ ಮೂಲಕ ದರ ಪಾವತಿಗಳನ್ನು ಮಾಡುವಾಗ ರಿವಾರ್ಡ್ ಪಾಯಿಂಟ್‌ಗಳನ್ನು ಪಡೆಯುವುದಿಲ್ಲ. ಇದುವರೆಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ದರ ಪಾವತಿ ಮಾಡುವವರಿಗೆ ರಿವಾರ್ಡ್ ಪಾಯಿಂಟ್ಸ್‌ ಸಿಗುತ್ತಿತ್ತು. ಇದುವರೆಗೆ ಗಳಿಸಿರುವ ರಿವಾರ್ಡ್ ಪಾಯಿಂಟ್‌ಗಳು 2024ರ ಏಪ್ರಿಲ್ 15ರ ನಂತರ ಮುಕ್ತಾಯಗೊಳ್ಳಲಿವೆ. ಅಂದರೆ ರಿವಾರ್ಡ್ ಪಾಯಿಂಟ್ಸ್‌ ಪಡೆದಿದ್ದರೆ ಈ ಅವಧಿಯೊಳಗೆ ಬಳಸಿಕೊಳ್ಳಬೇಕು. ಎಸ್‌ಬಿಐ ದೇಶದ ಎರಡನೇ ಅತಿದೊಡ್ಡ ಕ್ರೆಡಿಟ್ ಕಾರ್ಡ್ ವಿತರಕನಾಗಿದ್ದು, 18 ದಶಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಇತರರನ್ನು ಬೆದರಿಸುವುದು ಕಾಂಗ್ರೆಸ್‌ನ ಸಂಸ್ಕೃತಿ; ಮುಖ್ಯ ನ್ಯಾಯಮೂರ್ತಿಗೆ ಬರೆದ ವಕೀಲರ ಪತ್ರಕ್ಕೆ ಮೋದಿ ಪ್ರತಿಕ್ರಿಯೆ

Narendra Modi: ಪಟ್ಟಭದ್ರ ಹಿತಾಸಕ್ತಿ ಗುಂಪು ನ್ಯಾಯಾಂಗದ ಮೇಲೆ ಒತ್ತಡ ಹೇರಲು ಮತ್ತು ನ್ಯಾಯಾಲಯಗಳನ್ನು ದೂಷಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ನೂರಾರು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಬರೆದ ಪತ್ರಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ ಹೀಗಿದೆ.

VISTARANEWS.COM


on

modi
Koo

ನವದೆಹಲಿ: ಪಟ್ಟಭದ್ರ ಹಿತಾಸಕ್ತಿ ಗುಂಪು ನ್ಯಾಯಾಂಗದ ಮೇಲೆ ಒತ್ತಡ ಹೇರಲು ಮತ್ತು ನ್ಯಾಯಾಲಯಗಳನ್ನು ದೂಷಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ನೂರಾರು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ (DY Chandrachud) ಅವರಿಗೆ ಪತ್ರ ಬರೆದ ನಂತರ ಪ್ರಧಾನಿ ನರೇಂದ್ರ ಮೋದಿ (Narendra Modi) ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಮೋದಿ ಅವರು, ʼʼಇತರರನ್ನು ಬೆದರಿಸುವುದು ಕಾಂಗ್ರೆಸ್‌ನ ಸಂಸ್ಕೃತಿ. ಐದು ದಶಕಗಳ ಹಿಂದೆ ಕಾಂಗ್ರೆಸ್‌ ನಾಯಕರು ‘ಬದ್ಧ ನ್ಯಾಯಾಂಗ’ಕ್ಕೆ ಕರೆ ನೀಡಿದ್ದರು. ಅವರು ನಾಚಿಕೆಯಿಲ್ಲದೆ ತಮ್ಮ ಸ್ವಾರ್ಥ ಹಿತಾಸಕ್ತಿಗಳಿಗಾಗಿ ಇತರರಿಂದ ಬದ್ಧತೆಯನ್ನು ಬಯಸುತ್ತಾರೆ. ಆದರೆ ಅವರು ರಾಷ್ಟ್ರದ ಬಗ್ಗೆ ಯಾವುದೇ ಬದ್ಧತೆಯಿಂದ ತೋರುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ʼʼ140 ಕೋಟಿ ಭಾರತೀಯರು ಅವರನ್ನು ತಿರಸ್ಕರಿಸುವುದರಲ್ಲಿ ಆಶ್ಚರ್ಯವೇನಿಲ್ಲʼʼ ಎಂದು ಹೇಳಿದ್ದಾರೆ.

ವಕೀಲರು ಬರೆದ ಪತ್ರದಲ್ಲೇನಿದೆ?

ದೇಶದ 600ಕ್ಕೂ ಹೆಚ್ಚು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದು, “ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ತರುತ್ತಿರುವ ಬೆಳವಣಿಗೆಗಳ” ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಪಟ್ಟಭದ್ರ ಹಿತಾಸಕ್ತ ಗುಂಪು ನ್ಯಾಯಾಲಯದ ತೀರ್ಪುಗಳ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದೆ” ಎಂದು ದೂರಿದ್ದಾರೆ.

ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಸೇರಿದಂತೆ 600 ಮಂದಿ ವಕೀಲರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. “ಪಟ್ಟಭದ್ರ ಹಿತಾಸಕ್ತಿಯ ಗುಂಪುಗಳು ನ್ಯಾಯಾಂಗ ಪ್ರಕ್ರಿಯೆಗಳನ್ನು ನಾಜೂಕಾಗಿ ನಿರ್ವಹಿಸಲು, ನ್ಯಾಯಾಲಯದ ತೀರ್ಪುಗಳ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿರುವುದು; ಆಧಾರರಹಿತ ಆರೋಪಗಳು ಮತ್ತು ರಾಜಕೀಯ ಅಜೆಂಡಾಗಳನ್ನು ಮುಂದಿಟ್ಟು ನ್ಯಾಯಾಂಗದ ಖ್ಯಾತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿರುವುದನ್ನು” ವಕೀಲರು ಖಂಡಿಸಿದ್ದಾರೆ.

“ಭ್ರಷ್ಟಾಚಾರದ ಆರೋಪ ಹೊತ್ತಿರುವ ರಾಜಕೀಯ ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಇದು ಸ್ಪಷ್ಟವಾಗಿ ಕಂಡುಬರುತ್ತಿದೆ. ಅಲ್ಲಿ ನ್ಯಾಯಾಲಯದ ನಿರ್ಧಾರಗಳನ್ನು ತಮಗೆ ಬೇಕಾದ ಹಾಗೆ ತಿರುಚುವ, ನ್ಯಾಯಾಂಗಕ್ಕೆ ಕಳಂಕ ಉಂಟುಮಾಡುವ ಪ್ರಯತ್ನಗಳು ಹೆಚ್ಚು ಸ್ಪಷ್ಟವಾಗಿ ಕಂಡುಬರುತ್ತಿವೆ” ಎಂದು ಪತ್ರದಲ್ಲಿ ದೂರಲಾಗಿದೆ.

“ಒಂದು ಆತಂಕಕಾರಿ ತಂತ್ರವೆಂದರೆ‌, ನ್ಯಾಯಾಲಯಗಳ ಈಗಿನ ಕಾರ್ಯವೈಖರಿಯನ್ನು ಉದ್ದೇಶಪೂರ್ವಕ ʼಕಲ್ಪಿತ ಸುವರ್ಣಯುಗ’ಕ್ಕೆ ಹೋಲಿಸುವುದು, ಸುಳ್ಳು ನಿರೂಪಣೆಯೊಂದಿಗೆ ನ್ಯಾಯಾಂಗದ ಕಾರ್ಯನಿರ್ವಹಣೆಯ ಕುರಿತು ಅಪಕಲ್ಪನೆ ಮೂಡಿಸುವುದು. ಇಂತಹ ಸುಳ್ಳು ನಿರೂಪಣೆಗಳು ನ್ಯಾಯಾಂಗದ ಫಲಿತಾಂಶಗಳ ಮೇಲೆ ದುಷ್ಪ್ರಭಾವ ಬೀರುವ ಮತ್ತು ನ್ಯಾಯಾಂಗದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಕುಗ್ಗಿಸುವ ಉದ್ದೇಶವನ್ನು ಹೊಂದಿವೆ” ಎಂದು ವಕೀಲರು ಆಪಾದಿಸಿದ್ದಾರೆ.

ಇದನ್ನೂ ಓದಿ: CJI DY Chandrachud: 600 ವಕೀಲರಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ; ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗೆಗೆ ಕಳವಳ

ಈ ಪತ್ರವು “ಬೆಂಚ್ ಫಿಕ್ಸಿಂಗ್‌” ಬಗ್ಗೆ ಕಳವಳ ವ್ಯಕ್ತಪಡಿಸಿದೆ. “ನ್ಯಾಯಾಂಗ ಪೀಠಗಳ ಸಂಯೋಜನೆಯ ಮೇಲೆ ಪ್ರಭಾವ ಬೀರಲು ಮತ್ತು ನ್ಯಾಯಾಧೀಶರ ಸಮಗ್ರತೆಯ ಮೇಲೆ ಹಾನಿಯೆಸಗಲು ಪ್ರಯತ್ನಗಳನ್ನು ಮಾಡಲಾಗಿದೆ. ಈ ಕ್ರಮಗಳು ನ್ಯಾಯಾಂಗಕ್ಕೆ ಅಗೌರವ ಮಾತ್ರವಲ್ಲದೆ ಕಾನೂನು ಮತ್ತು ನ್ಯಾಯದ ತತ್ವಗಳಿಗೆ ಹಾನಿಯುಂಟುಮಾಡುತ್ತವೆ” ಎಂದಿದೆ. “ಅವರು ನಮ್ಮ ನ್ಯಾಯಾಲಯಗಳನ್ನು ಕಾನೂನಿನ ಆಡಳಿತವಿಲ್ಲದ ದೇಶಗಳಿಗೆ ಹೋಲಿಸುವ ಮಟ್ಟಕ್ಕೆ ಇಳಿದಿದ್ದಾರೆ” ಎಂದು ಆರೋಪಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Actor Govinda: ಶಿವಸೇನೆ ನಾಯಕನ ಜತೆ ನಟ ಗೋವಿಂದಾ ಚರ್ಚೆ; ಚುನಾವಣಾ ಕಣಕ್ಕೆ ಎಂಟ್ರಿ?

Actor Govinda: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಚರ್ಚಿಸಲು ನಟ ಗೋವಿಂದ ಅವರು ಶಿವಸೇನೆ (ಏಕನಾಥ್‌ ಶಿಂಧೆ ಬಣ) ನಾಯಕರೊಬ್ಬರ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Actor Govinda
Koo

ಮುಂಬೈ: ಲೋಕಸಭೆ ಚುನಾವಣೆಗೆ (Lok Sabha Election 2024) ಕೆಲವೇ ದಿನಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ನಟ, ನಟಿಯರು, ಸಮಾಜ ಸೇವಕರು ಸೇರಿ ಹಲವರನ್ನು ಕಣಕ್ಕೆ ಇಳಿಸುತ್ತಿವೆ. ಇದರ ಬೆನ್ನಲ್ಲೇ, ಬಾಲಿವುಡ್‌ ನಟ ಗೋವಿಂದ (Actor Govinda) ಅವರು ಶಿವಸೇನೆ (ಏಕನಾಥ್‌ ಶಿಂಧೆ) (Shiv Sena) ನಾಯಕರೊಬ್ಬರನ್ನು ಭೇಟಿಯಾಗಿದ್ದು, ಮುಂಬೈ ವಾಯವ್ಯ ಕ್ಷೇತ್ರದಿಂದ (North West Mumbai) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮಾರ್ಚ್‌ ತಿಂಗಳ ಆರಂಭದಲ್ಲಿ ನಟ ಗೋವಿಂದ ಅವರು ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರನ್ನು ಭೇಟಿಯಾಗಿದ್ದರು. ಇದಾದ ಬಳಿಕವೇ, ನಟ ಗೋವಿಂದ ಅವರು ಕೂಡ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಮತ್ತೆ ಶಿವಸೇನೆ ನಾಯಕರೊಬ್ಬರನ್ನು ಗೋವಿಂದ ಅವರು ಭೇಟಿಯಾಗಿದ್ದು, ವದಂತಿಗಳ ತೀವ್ರತೆ ಇನ್ನೂ ಜಾಸ್ತಿಯಾಗಿದೆ. ಆದಾಗ್ಯೂ, ಸ್ಪರ್ಧೆ ಕುರಿತು ಗೋವಿಂದ ಅವರಾಗಲಿ, ಶಿವಸೇನೆಯಾಗಿ ಇದುವರೆಗೆ ಯಾವುದೇ ಘೋಷಣೆ ಮಾಡಿಲ್ಲ.

ಮೂಲಗಳ ಪ್ರಕಾರ, ನಟ ಗೋವಿಂದ ಅವರು ಜುಹುವಿನಲ್ಲಿ ಶಿವಸೇನೆ ನಾಯಕ ಕೃಷ್ಣ ಹೆಗಡೆ ಅವರನ್ನು ಭೇಟಿಯಾಗಿ, ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Rekha Patra: ಸಂದೇಶ್‌ಖಾಲಿ ಸಂತ್ರಸ್ತೆಗೆ ಟಿಕೆಟ್‌ ನೀಡಿದ ಬಿಜೆಪಿ; ಯಾರಿವರು ರೇಖಾ ಪಾತ್ರಾ?

ನಟ ಗೋವಿಂದಗೆ ಇದು 2ನೇ ಇನ್ನಿಂಗ್ಸ್‌

ಹೀರೋ ನಂಬರ್‌ 1 ಖ್ಯಾತಿಯ ನಟ ಗೋವಿಂದ ಅವರು ಮತ್ತೆ ಚುನಾವಣಾ ರಾಜಕೀಯಕ್ಕೆ ಇಳಿದರೆ, ಇದು ಅವರಿಗೆ ಎರಡನೇ ಇನ್ನಿಂಗ್ಸ್‌ ಆಗಲಿದೆ. ಗೋವಿಂದ ಅವರು 2004ರಲ್ಲಿ ಮುಂಬೈ ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಅಷ್ಟೇ ಅಲ್ಲ, ಬಿಜೆಪಿಯ ರಾಮ್‌ ನಾಯಕ್‌ ಅವರನ್ನು ಗೋವಿಂದ ಸೋಲಿಸಿದ್ದರು. ಆದರೆ, ಕಾರಣಾಂತರಗಳಿಂದ ಗೋವಿಂದ ಅವರು ಬಳಿಕ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಈಗ ಶಿವಸೇನೆ ಮೂಲಕ ಅವರು ಮತ್ತೆ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂದೇ ಹೇಳಲಾಗುತ್ತಿದೆ.

ನಸೀಬ್‌, ಹೀರೋ ನಂಬರ್‌ 1, ಪಾರ್ಟ್‌ನರ್‌, ರಾಜು ಬಾಬು, ಕೂಲಿ ನಂಬರ್‌ 1, ಧುಲೆ ರಾಜ ಸೇರಿ ಹಲವು ಸಿನಿಮಾಗಳಲ್ಲಿ ನಟಿಸುವ ಮೂಲಕ ಸೈ ಎನಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
viral video
ವೈರಲ್ ನ್ಯೂಸ್4 mins ago

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

BJP State Vice President Malavika Avinash latest statement
ಬೆಂಗಳೂರು8 mins ago

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Lok Sabha Election 2024 Prajwal Revanna gets Rs 40 crore worth asset
Lok Sabha Election 20249 mins ago

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Uttara Kannada Lok Sabha constituency Congress candidate Dr Anjali Nimbalkar latest statement
ಉತ್ತರ ಕನ್ನಡ12 mins ago

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Rameswaram cafe bomb blast case
ಬೆಂಗಳೂರು38 mins ago

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rajasthan Royals
ಪ್ರಮುಖ ಸುದ್ದಿ49 mins ago

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

SBI Debit Cards
ವಾಣಿಜ್ಯ52 mins ago

SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

Rishabh Pant -IPL 2024
ಕ್ರೀಡೆ1 hour ago

Rishabh Pant : ಡೆಲ್ಲಿ ಪರ 100ನೇ ಪಂದ್ಯವಾಡಿದ ರಿಷಭ್ ಪಂತ್​!

Parliament Flashback
ಕರ್ನಾಟಕ2 hours ago

Parliament Flashback: ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದು, ಬಿಜೆಪಿಯಿಂದ ಸ್ಪರ್ಧಿಸಿದಾಗ ಸೋತು ಹೋಗಿದ್ದ ಒಡೆಯರ್‌!

Lok Sabha Election 2024 HD Kumaraswamy to file nomination for Mandya Lok Sabha seat on April 4
ಕರ್ನಾಟಕ2 hours ago

Lok Sabha Election 2024: ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಮುಖಂಡರ ಸಮನ್ವಯ ಸಭೆ ಯಶಸ್ವಿ; ಏ. 4ಕ್ಕೆ ಹೆಚ್ಡಿಕೆ ನಾಮಪತ್ರ ಸಲ್ಲಿಕೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20248 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20249 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ16 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌