Shraddha Case | ಅಫ್ತಾಬ್​​ಗೆ ತಿಂಗಳಿಗೆ ಬೇಕಾಗುತ್ತಿತ್ತು 20 ಸಾವಿರ ಲೀ.ಗೂ ಅಧಿಕ ನೀರು; ವಾಟರ್​ ಬಿಲ್ ಕೂಡ ಸಾಕ್ಷಿ! - Vistara News

ದಿಲ್ಲಿ ಮರ್ಡರ್

Shraddha Case | ಅಫ್ತಾಬ್​​ಗೆ ತಿಂಗಳಿಗೆ ಬೇಕಾಗುತ್ತಿತ್ತು 20 ಸಾವಿರ ಲೀ.ಗೂ ಅಧಿಕ ನೀರು; ವಾಟರ್​ ಬಿಲ್ ಕೂಡ ಸಾಕ್ಷಿ!

ದೆಹಲಿಯಲ್ಲಿ ಒಂದು ಕುಟುಂಬಕ್ಕೆ ತಿಂಗಳಿಗೆ 20 ಸಾವಿರ ಲೀಟರ್​ ನೀರು ಉಚಿತ. ಅದಕ್ಕಿಂತಲೂ ಹೆಚ್ಚಾಗಿ ಬಳಕೆ ಮಾಡಿದರೆ ಮಾತ್ರ ಅವರಿಗೆ ನೀರಿನ ಬಿಲ್​ ಬರುತ್ತದೆ. ಆತನ ಫ್ಲ್ಯಾಟ್​​ನಲ್ಲಿ ಕುಟುಂಬ ಸಮೇತ ಇದ್ದವರಿಗೂ ಇಷ್ಟು ಪ್ರಮಾಣದ ನೀರು ತಿಂಗಳಿಗೆ ಸಾಕಾಗುತ್ತಿತ್ತು.

VISTARANEWS.COM


on

Aftab Poonawala Water bill is Also Clues For Cops
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಇಲ್ಲಿನ ಮೆಹ್ರೌಲಿಯಲ್ಲಿ ನಡೆದ ಶ್ರದ್ಧಾ ವಾಳ್ಕರ್​​ ಕೊಲೆ ಕೇಸ್​ ತನಿಖೆ ಮುಂದುವರಿಸಿದಷ್ಟೂ ಒಂದೊಂದೇ ವಿಷಯಗಳು ಹೊರಬೀಳುತ್ತಿವೆ. ಆಕೆಯನ್ನು ಹತ್ಯೆ ಮಾಡಿ, 35 ಪೀಸ್​ಗಳನ್ನಾಗಿ ಮಾಡಿ ಫ್ರಿಜ್​​ನಲ್ಲಿಟ್ಟ ವಿಕೃತ ಹಂತಕ ಅಫ್ತಾಬ್ ಪೂನಾವಾಲಾ, ಬಳಿಕ ಆಕೆಯ ದೇಹ ವಾಸನೆ ಬಾರದಂತೆ ತಡೆಯಲು ಏನೆನೆಲ್ಲ ಪ್ರಯತ್ನ ಪಟ್ಟ ಎಂಬುದನ್ನು ಈಗಾಗಲೇ ಪೊಲೀಸರು ಹೇಳಿದ್ದಾರೆ. ಆತ ಶ್ರದ್ಧಾಳನ್ನು ಕೊಲೆ ಮಾಡಿದಾಗಿನಿಂದಲೂ ಯಥೇಚ್ಛವಾಗಿ ನೀರಿನ ಬಳಕೆ ಮಾಡುತ್ತಿದ್ದ ಎಂಬ ಹೊಸ ಮಾಹಿತಿಯನ್ನು ಈಗ ಪೊಲೀಸರು ಬಿಚ್ಚಿಟ್ಟಿದ್ದಾರೆ.

ದೆಹಲಿಯಲ್ಲಿ ಒಂದು ಕುಟುಂಬಕ್ಕೆ ತಿಂಗಳಿಗೆ 20 ಸಾವಿರ ಲೀಟರ್​ ನೀರು ಉಚಿತ. ಅದಕ್ಕಿಂತಲೂ ಹೆಚ್ಚಾಗಿ ಬಳಕೆ ಮಾಡಿದರೆ ಮಾತ್ರ ಅವರಿಗೆ ನೀರಿನ ಬಿಲ್​ ಬರುತ್ತದೆ. ಆತನ ಫ್ಲ್ಯಾಟ್​​ನಲ್ಲಿ ಕುಟುಂಬ ಸಮೇತ ಇದ್ದವರಿಗೂ ಇಷ್ಟು ಪ್ರಮಾಣದ ನೀರು ತಿಂಗಳಿಗೆ ಸಾಕಾಗುತ್ತಿತ್ತು. ಆದರೆ ಶ್ರದ್ಧಾಳನ್ನು ಕೊಂದ ಬಳಿಕ ಒಬ್ಬನೇ ಇದ್ದ ಅಫ್ತಾಬ್​ಗೆ ತಿಂಗಳಿಗೆ 20 ಸಾವಿರ ಲೀಟರ್​ಗೂ ಅಧಿಕ ನೀರು ಬೇಕಾಗಿತ್ತು. ಆತ ಫ್ರಿಜ್​​ನಲ್ಲಿಟ್ಟಿದ್ದ ಪೀಸ್​​ಗಳನ್ನು ಎಸೆಯುವಾಗ ಬ್ಯಾಗ್​​ನಲ್ಲಿ ತುಂಬುವಾಗ ಇನ್ನಷ್ಟು ಚಿಕ್ಕದಾಗಿ ತುಂಡರಿಸುತ್ತಿದ್ದ. ಆ ಶಬ್ದ ಕೇಳಬಾರದು ಎಂಬ ಕಾರಣಕ್ಕೆ ನೀರಿನ ನಲ್ಲಿಯನ್ನು ಆನ್​ ಮಾಡಿ ಇಡುತ್ತಿದ್ದ. ನೀರಿನ ಶಬ್ದ ದೊಡ್ಡದಾಗಿ ಕೇಳಿದರೆ, ಮೃತ ದೇಹ ಕತ್ತರಿಸುವ ಶಬ್ದ ಕೇಳೋದಿಲ್ಲ ಎಂಬ ಮುನ್ನೆಚ್ಚರಿಕೆ ಅವನದಾಗಿತ್ತು. ಇನ್ನು ಶ್ರದ್ಧಾಳ ತುಂಡಾದ ದೇಹಗಳನ್ನು ತೊಳೆಯಲು ಯಥೇಚ್ಛವಾಗಿ ಬಿಸಿ ನೀರು ಬಳಸುತ್ತಿದ್ದ, ರಾಸಾಯನಿಕಗಳನ್ನು ಮಿಶ್ರಣ ಮಾಡಿಕೊಳ್ಳಲೂ ಅವನಿಗೆ ಹೆಚ್ಚುವರಿ ನೀರು ಬೇಕಾಗಿತ್ತು. ಅಷ್ಟೇ ಅಲ್ಲ, ಹತ್ಯೆ ನಡೆದ ಬಳಿಕ ಫ್ಲ್ಯಾಟ್​​ನ್ನು ಸ್ವಚ್ಛಗೊಳಿಸಲು ವಿಪರೀತ ಎನ್ನುವಷ್ಟು ನೀರು ಖಾಲಿ ಮಾಡಿದ್ದ. ಒಟ್ಟಾರೆ ತಿಂಗಳಿಗೆ ಅವನಿಗೆ 20 ಸಾವಿರ ಲೀಟರ್​ಗೂ ಅಧಿಕ ನೀರು ಬೇಕಾಗಿತ್ತು. ಇದರಿಂದಾಗಿ ಅಫ್ತಾಬ್​ 300 ರೂಪಾಯಿ ನೀರಿನ​ ಬಿಲ್​ ಪಾವತಿಸುವುದು ಇನ್ನೂ ಬಾಕಿ ಇದೆ ಎಂಬುದು ಪೊಲೀಸ್​ ತನಿಖೆ ವೇಳೆ ಗೊತ್ತಾಗಿದೆ. ಅವನ ನೀರಿನ ಬಿಲ್​​ನ್ನೂ ಕೂಡ ಪೊಲೀಸರು ಈ ಕೇಸ್​​ನ ಪುರಾವೆಯನ್ನಾಗಿ ಪರಿಗಣಿಸಿದ್ದಾರೆ.

ಶ್ರದ್ಧಾಳನ್ನು ಅಫ್ತಾಬ್​ ಮೇ ತಿಂಗಳಲ್ಲಿ ಹತ್ಯೆ ಮಾಡಿದ್ದಾನೆ. ಆದರೆ ಈಗ ಶ್ರದ್ಧಾಳ ಪಾಲಕರು ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ನಡೆಸಿದಾಗಲೇ ಆಕೆಯ ಹತ್ಯೆಯಾಗಿದ್ದು ಬೆಳಕಿಗೆ ಬಂದಿದೆ. ಆದರೆ ಅದು ಅಂತಿಂಥಾ ಹತ್ಯೆಯಲ್ಲ, ದೇಶವನ್ನೇ ನಡುಗಿಸಿದ ಭಯಾನಕ ಹತ್ಯೆ ಎಂಬ ಸತ್ಯವೂ ಗೊತ್ತಾಗಿದೆ. ಕೊಲೆಯಾಗಿ ಆರು ತಿಂಗಳೇ ಕಳೆದು ಹೋಗಿರುವುದರಿಂದ ಸಾಕ್ಷಿ ಸಂಗ್ರಹಣೆಯೂ ಕಷ್ಟವಾಗಿದೆ. ಈ ಮಧ್ಯೆ ಮೆಹ್ರೌಲಿ ಬಳಿಯ ಅರಣ್ಯ ಪ್ರದೇಶದ ಸಮೀಪ ಇದ್ದ ಸಿಸಿಟಿವಿ ಕ್ಯಾಮರಾದ ಫೂಟೇಜ್​ ಸಿಕ್ಕಿದ್ದು, ಅದರಲ್ಲಿ ಅಫ್ತಾಬ್​ಗೆ ಸಂಬಂಧಪಟ್ಟ ಮಹತ್ವದ ದಾಖಲೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Delhi Crime | ವಿಕೃತ ಹಂತಕ ಅಫ್ತಾಬ್‌ ನಾರ್ಕೊ ಟೆಸ್ಟ್‌ಗೆ ಕೋರ್ಟ್‌ ಅಸ್ತು, ಏನಿದು ಪರೀಕ್ಷೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಿಲ್ಲಿ ಮರ್ಡರ್

Murder: ಕಪಾಟಿನಲ್ಲಿತ್ತು ಯುವತಿಯ ಶವ; ಲಿವ್ ಇನ್‌ ಸಂಬಂಧದಲ್ಲಿದ್ದ ಗೆಳೆಯ ನಾಪತ್ತೆ!

Murder: ಮಗಳ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ತಂದೆ ಆಕೆಯನ್ನು ಹುಡುಕಿಕೊಂಡು ಆಕೆ ವಾಸವಿದ್ದ ದೆಹಲಿಯ ದ್ವಾರಕಾ ಪ್ರದೇಶದಲ್ಲಿದ್ದ ಅಪಾರ್ಟ್ ಮೆಂಟ್ ಗೆ ಬಂದಾಗ ಮನೆಯ ಕಪಾಟಿನಲ್ಲಿ ಮಗಳ ಶವ ಪತ್ತೆಯಾಗಿದೆ. ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಆಕೆಯ ಸಂಗಾತಿ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

VISTARANEWS.COM


on

By

Murder
Koo

ಹೊಸದಿಲ್ಲಿ: ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ (Leave in relationship) ಯುವತಿಯೊಬ್ಬಳು ಶವವಾಗಿ (Murder) ಮನೆಯ ಕಪಾಟಿನಲ್ಲಿ ಪತ್ತೆಯಾಗಿರುವ ಘಟನೆ ಹೊಸದಿಲ್ಲಿಯ (delhi) ದ್ವಾರಕಾದಲ್ಲಿ (dwaraka) ನಡೆದಿದೆ.

ದ್ವಾರಕಾದ ದಾಬ್ರಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದ ರುಖ್ಸರ್ ರಜಪೂತ್ (26) ಕೊಲೆಯಾದ ಯುವತಿ. ಗೆಳೆಯ ವಿಪಾಲ್ ಟೈಲರ್ ಆಕೆಯನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ.

ಮೀರತ್‌ನಲ್ಲಿ ವಾಸವಾಗಿರುವ ರುಖ್ಸರ್ ರಜಪೂತ್ ಳ ತಂದೆ ಮಗಳನ್ನು ಹುಡುಕಿಕೊಂಡು ಬುಧವಾರ ರಾತ್ರಿ ಬಂದಾಗ ಆಕೆ ಕೊಲೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Assault Case : ಆಫೀಸ್‌ನಲ್ಲಿ ಟಾರ್ಚರ್‌ ಕೊಟ್ಟ ಮೇಲಾಧಿಕಾರಿಗೆ ಸುಪಾರಿ ಕೊಟ್ಟು ಹೊಡೆಸಿದ್ರು ಸಿಬ್ಬಂದಿ!

ಒಂದೂವರೆ ವರ್ಷಗಳ ಹಿಂದೆ ಭೇಟಿ

ರಜಪೂತ್ ಗುಜರಾತ್‌ನಲ್ಲಿ ಕರಕುಶಲ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಳು. ಒಂದೂವರೆ ವರ್ಷಗಳ ಹಿಂದೆ ಅಲ್ಲಿ ಆಕೆ ವಿಪಾಲ್‌ನನ್ನು ಭೇಟಿಯಾಗಿದ್ದಳು. ದೆಹಲಿಗೆ ಬಂದ ಬಳಿಕ ಅವರಿಬ್ಬರೂ ಒಟ್ಟಿಗೆ ವಾಸಿಸುತ್ತಿರುವ ವಿಷಯ ಆಕೆಯ ತಂದೆ ಮುಸ್ತಾಕಿನ್ ಮತ್ತು ಅವರ ಕುಟುಂಬಕ್ಕೆ ತಿಳಿದಿತ್ತು.

ತಂದೆಗೆ ಕೊನೆಯ ಕರೆ

ರುಖ್ಸರ್ ರಜಪೂತ್ ಬುಧವಾರ ಮಧ್ಯಾಹ್ನ ತಂದೆ ಮೊಹಮ್ಮದ್ ಮುಸ್ತಾಕಿನ್ ಅವರಿಗೆ ಕರೆ ಮಾಡಿದ್ದರು. ಆಗ ಆಕೆ ತುಂಬಾ ಅಸಮಾಧಾನದಿಂದ ಇದ್ದಿದ್ದು ಕಂಡು ಬಂದಿತ್ತು. ಸಂಜೆ ವೇಳೆಗೆ ಆಕೆಯ ಫೋನ್ ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಆತಂಕದಿಂದ ಮುಸ್ತಾಕಿನ್ ಅವರು ರಾತ್ರಿಯೇ ರುಖ್ಸಾರ್‌ನನ್ನು ಹುಡುಕಿಕೊಂಡು ತಮ್ಮ ಸಂಬಂಧಿಕರೊಂದಿಗೆ ದೆಹಲಿಗೆ ಬಂದಿದ್ದರು.

ಅವರು ರಜಪೂತ್ ವಾಸವಿದ್ದ ಅಪಾರ್ಟ್ ಮೆಂಟ್ ಗೆ ಬಂದಾಗ ಮನೆಗೆ ಹೊರಗಿನಿಂದ ಬೀಗ ಹಾಕಲಾಗಿತ್ತು. ಅವರು ಬೀಗ ಎಲ್ಲಿ ಇಡುತ್ತಾರೆ ಎಂಬುದು ತಿಳಿದಿದ್ದ ಮುಸ್ತಾಕಿನ್ ಮನೆಯ ಬೀಗ ತೆರೆದು ಒಳಗೆ ಬಂದು ಹುಡುಕಿದಾಗ ಕಪಾಟಿನಲ್ಲಿ ರಜಪೂತ್ ಅವರ ಶವ ಪತ್ತೆಯಾಗಿದೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೇಹದ 15ಕ್ಕೂ ಹೆಚ್ಚು ಕಡೆ ಗಾಯ

ರುಖ್ಸರ್ ರಜಪೂತ್ ನ ಮುಖದ ಮೇಲೆ ಆಳವಾದ ಗಾಯಗಳು ಸೇರಿ ದೇಹದಾದ್ಯಂತ 15ಕ್ಕೂ ಹೆಚ್ಚು ಗಾಯಗಳಿದ್ದವು. ಮೇಲ್ನೋಟಕ್ಕೆ, ಮಹಿಳೆಯನ್ನು ಕತ್ತು ಹಿಸುಕಿ ಕೊಂದು ಹಾಕಲಾಗಿದೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೆಳೆಯ ನಾಪತ್ತೆ

ರುಖ್ಸರ್ ರಜಪೂತ್ ನ ಗೆಳೆಯ ವಿಪಾಲ್ ಟೈಲರ್ ನಾಪತ್ತೆಯಾಗಿರುವುದರಿಂದ ಆತನೇ ಪ್ರಮುಖ ಆರೋಪಿಯಾಗಿರಬಹುದು ಎಂದು ಶಂಕಿಸಲಾಗಿದೆ. ವಿಪಾಲ್ ಟೈಲರ್ ಎಂಬಾತನೊಂದಿಗೆ ಸುಮಾರು ಒಂದೂವರೆ ತಿಂಗಳಿನಿಂದ ಈ ಅಪಾರ್ಟ್ ಮೆಂಟ್ ನಲ್ಲಿ ರುಖ್ಸರ್ ರಜಪೂತ್ ವಾಸವಾಗಿದ್ದಳು. ರುಖ್ಸರ್ ರಜಪೂತ್ ಮದುವೆಯಾಗಿರುವುದಾಗಿ ಹೇಳಲಾಗಿದ್ದು, ಈ ಕುರಿತು ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಉಪ ಆಯುಕ್ತ (ದ್ವಾರಕಾ) ಅಂಕಿತ್ ಸಿಂಗ್ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ದಾಬ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದು, ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದ ಎಂದು ಸಿಂಗ್ ಹೇಳಿದರು.

ಮುಸ್ತಾಕಿಮ್ ಹೇಳಿಕೆಯನ್ನು ಆಧರಿಸಿ ಕೊಲೆ ಪ್ರಕರಣವನ್ನು ದಾಖಲಿಸಿರುವ ಪೊಲೀಸರು ಆರೋಪಿಗಾಗಿ ಪತ್ತೆ ಹಚ್ಚಲು ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆಗಾಗಿ ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದಿಲ್ಲಿ ಮರ್ಡರ್

ಶ್ರದ್ಧಾ ವಾಳ್ಕರ್​ ಹತ್ಯೆ ಪ್ರಕರಣದಲ್ಲಿ ಸಿದ್ಧವಾಯ್ತು 3000 ಪುಟಗಳ ಕರಡು ಆರೋಪ ಪಟ್ಟಿ; ಕಾನೂನು ತಜ್ಞರಿಂದ ಪರಿಶೀಲನೆ

ಅಫ್ತಾಬ್​ ಮೇ ತಿಂಗಳಲ್ಲಿಯೇ ಶ್ರದ್ಧಾಳನ್ನು ಕೊಂದಿದ್ದರೂ ಅದು ಗೊತ್ತಾಗದಂತೆ ಭಾರಿ ನಾಟಕವಾಡಿದ್ದ. ತಿಂಗಳುಗಳ ಕಾಲ ಆಕೆಯ ಸೋಷಿಯಲ್​ ಮೀಡಿಯಾವನ್ನು ಆತನೇ ಹ್ಯಾಂಡಲ್​ ಮಾಡುವ ಮೂಲಕ, ಆಕೆ ಬದುಕಿದ್ದಾಳೆ ಎಂದು ಬಿಂಬಿಸಿದ್ದ.

VISTARANEWS.COM


on

draft chargesheet of Shraddha Walkar murder case Ready By Delhi Police
ಅಫ್ತಾಬ್​ ಮತ್ತು ಶ್ರದ್ಧಾ ವಾಳ್ಕರ್​
Koo

ನವ ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಶ್ರದ್ಧಾ ವಾಳ್ಕರ್ (Shraddha Walkar)​ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಸುಮಾರು 3000 ಪುಟಗಳ ಕರಡು ಚಾರ್ಜ್​ಶೀಟ್​ ಸಿದ್ಧಪಡಿಸಿ ಇಟ್ಟಿದ್ದಾರೆ. ವಿಧಿವಿಜ್ಞಾನ ವರದಿಗಳು ಮತ್ತು ಎಲೆಕ್ಟ್ರಾನಿಕ್ ಪುರಾವೆಗಳು ಅಂದರೆ ಇಮೇಲ್​, ಮೊಬೈಲ್ ಫೋಟೋಗ್ರಾಫ್​, ಹಣ ವರ್ಗಾವಣೆ ದಾಖಲೆಗಳನ್ನು ಒಳಗೊಂಡಂತೆ ಸುಮಾರು 100 ಸಾಕ್ಷಿಗಳನ್ನು ಈ ಚಾರ್ಜ್​​ಶೀಟ್​​ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಈ ಕರಡು ದಾಖಲೆಯನ್ನು ಕಾನೂನು ತಜ್ಞರು ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲೇ ಅಂತಿಮ ಆರೋಪ ಪಟ್ಟಿ ಸಿದ್ಧವಾಗಲಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ದೆಹಲಿಯಲ್ಲಿ 2022ರ ಮೇ ತಿಂಗಳಲ್ಲಿ ನಡೆದಿದ್ದ ಶ್ರದ್ಧಾ ವಾಳ್ಕರ್​ ಭೀಕರ ಹತ್ಯೆ ಪ್ರಕರಣ ಇತ್ತೀಚೆಗಷ್ಟೇ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ನ್ಯಾಯಾಂಗ ಬಂಧನದಲ್ಲಿಯೇ ಇದ್ದಾನೆ. ಈತ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದು, ಆಕೆಯ ಶವವನ್ನು 35ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿದ್ದ. ಬಳಿಕ 300 ಲೀಟರ್​ ಸಾಮರ್ಥ್ಯದ ಫ್ರಿಜ್​ ಖರೀದಿಸಿ ಆ ಶವದ ತುಂಡುಗಳನ್ನು ಅದರಲ್ಲಿ ಇಟ್ಟಿದ್ದ. ನಂತರ ತಮ್ಮ ಅಪಾರ್ಟ್​ಮೆಂಟ್​ ಸಮೀಪವೇ ಇದ್ದಿದ್ದ ಮೆಹ್ರೌಲಿ ಅರಣ್ಯದ ಹಲವು ಭಾಗಗಳಲ್ಲಿ ಅವುಗಳನ್ನು ಎಸೆದಿದ್ದ. ಮೆಹ್ರೌಲಿ ಅರಣ್ಯವನ್ನು ಜಾಲಾಡಿದಾಗ ಹಲವು ಮೂಳೆಗಳು ಪತ್ತೆಯಾಗಿದ್ದು, ಅವೆಲ್ಲ ಶ್ರದ್ಧಾಳದ್ದೇ ಎಂದೂ ಡಿಎನ್​ಎ ಪರೀಕ್ಷೆಯಲ್ಲಿ.

ಇದನ್ನೂ ಓದಿ: Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

ಅಫ್ತಾಬ್​ ಮೇ ತಿಂಗಳಲ್ಲಿಯೇ ಶ್ರದ್ಧಾಳನ್ನು ಕೊಂದಿದ್ದರೂ ಅದು ಗೊತ್ತಾಗದಂತೆ ಭಾರಿ ನಾಟಕವಾಡಿದ್ದ. ತಿಂಗಳುಗಳ ಕಾಲ ಆಕೆಯ ಸೋಷಿಯಲ್​ ಮೀಡಿಯಾವನ್ನು ಆತನೇ ಹ್ಯಾಂಡಲ್​ ಮಾಡುವ ಮೂಲಕ, ಆಕೆ ಬದುಕಿದ್ದಾಳೆ ಎಂಬುದನ್ನು ಬಿಂಬಿಸಲು ಹೋಗಿದ್ದ. ಶ್ರದ್ಧಾ ತಂದೆ-ತಾಯಿಯಿಂದ ದೂರವಾಗಿದ್ದರೂ, ಕೆಲವು ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಳು. ಆದರೆ ಬರುಬರುತ್ತ ಆಕೆ ಸಂಪರ್ಕಕ್ಕೆ ಸಿಗದಂತಾದಾಗ ಶ್ರದ್ಧಾಳ ತಂದೆಯ ಸ್ನೇಹಿತರೊಬ್ಬರು ಅನುಮಾನ ವ್ಯಕ್ತಪಡಿಸಿದ್ದರು. ಆಕೆಯ ತಂದೆಗೆ ಈ ವಿಚಾರವನ್ನು ಹೇಳಿದ್ದರು. ಅದರ ಬೆನ್ನಲ್ಲೇ ಶ್ರದ್ಧಾಳ ಅಪ್ಪ ದೂರು ದಾಖಲು ಮಾಡಿದ್ದರು. ತನಿಖೆ ನಡೆಸಿದಾಗ ಆಕೆ ಕೊಲೆಯಾಗಿದ್ದು ಗೊತ್ತಾಗಿದೆ. ನವೆಂಬರ್​ 12ರಂದು ಅಫ್ತಾಬ್​ ಅರೆಸ್ಟ್​ ಆಗಿದ್ದಾನೆ ಮತ್ತು ಕೊಲೆಯನ್ನು ತಾನೇ ಮಾಡಿದ್ದಾಗಿಯೂ ಒಪ್ಪಿಕೊಂಡಿದ್ದಾನೆ.

Continue Reading

ಕ್ರೈಂ

Shraddha Murder Case | ಶ್ರದ್ಧಾಳ ದೇಹ ಕತ್ತರಿಸಲು ಅಫ್ತಾಬ್​ ಬಳಸಿದ್ದು ಯಾವ ಆಯುಧ?-ಕೊನೆಗೂ ಬಯಲಾಯ್ತು ಸತ್ಯ!

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು.

VISTARANEWS.COM


on

Shraddha Murder Case
Koo

ನವ ದೆಹಲಿ: ಲಿವ್​ ಇನ್​ ಸಂಗಾತಿಯಿಂದ ಬರ್ಬರವಾಗಿ ಹತ್ಯೆಗೀಡಾದ ಶ್ರದ್ಧಾ ವಾಳ್ಕರ್​​ ಕೇಸ್​ ತನಿಖೆ ಮುಂದುವರಿದೆ. ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ದೆಹಲಿಯ ತಿಹಾರ್​ ಜೈಲಿನಲ್ಲಿದ್ದು, ಮತ್ತೊಂದೆಡೆ ಅವನ ವಿಚಾರಣೆಯೂ ನಡೆಯುತ್ತಿದೆ. ಅಫ್ತಾಬ್ ಮತ್ತು ಶ್ರದ್ಧಾ ಬೇರೆ ಧರ್ಮದವರು. ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್​ ಜತೆ ಬದುಕುತ್ತಿದ್ದಳು. ಕಳೆದ ಮೇ ತಿಂಗಳಲ್ಲಿ ಅಫ್ತಾಬ್​ ಆಕೆಯನ್ನು ಕೊಂದು, 35 ತುಂಡುಗಳಾಗಿ ಕತ್ತರಿಸಿ, ಅವುಗಳನ್ನೆಲ್ಲ ಫ್ರಿಜ್​​ನಲ್ಲಿಟ್ಟುಕೊಂಡಿದ್ದ. ಬಳಿಕ ತಮ್ಮ ಅಪಾರ್ಟ್​​ಮೆಂಟ್​​ಗೆ ಸಮೀಪದಲ್ಲೇ ಇರುವ ಮೆಹ್ರೌಲಿ ಅರಣ್ಯದಲ್ಲಿ ಎಸೆದಿದ್ದ. ಗುರುಗ್ರಾಮದ ಬಳಿಯ ಅರಣ್ಯದಲ್ಲೂ ಕೆಲವು ತುಂಡುಗಳನ್ನು ಎಸೆದಿದ್ದ.

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು. ಅಫ್ತಾಬ್​ ಶ್ರದ್ಧಾಳ ದೇಹವನ್ನು ಯಾವ ಆಯುಧದಿಂದ ಕತ್ತರಿಸಿದ್ದಾನೆ ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಆ ಮೂಳೆಗಳನ್ನು ಇನ್ನಷ್ಟು ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಈಗ ಹೊರಬಿದ್ದಿದೆ. ಅಫ್ತಾಬ್​ ಪೂನಾವಾಲಾ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಕೊಂದು, ಬಳಿಕ ಗರಗಸದಲ್ಲಿ ಆಕೆಯ ದೇಹವನ್ನು ತುಂಡರಿಸಿದ್ದಾನೆ ಎಂಬುದು ಗೊತ್ತಾಗಿದೆ.

ಅಫ್ತಾಬ್​ ಪೂನಾವಾಲಾ ಅಪಾರ್ಟ್​ಮೆಂಟ್​​ನಿಂದ ಪೊಲೀಸರು ಹಲವು ಬಗೆಯ ಮಾರಕಾಸ್ತ್ರಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಆದರೆ ಅದರಲ್ಲಿ ಶ್ರದ್ಧಾಳನ್ನು ತುಂಡರಿಸಲು ಆತ ಯಾವ ಆಯುಧ ಬಳಸಿದ್ದ ಗೊತ್ತಾಗಿರಲಿಲ್ಲ. ಅಫ್ತಾಬ್​ ಮಂಪರು ಪರೀಕ್ಷೆ ವೇಳೆ, ತಾನು ಚೀನಿ ಕ್ಲೀವರ್ (ಮಾಂಸವನ್ನು ಕತ್ತರಿಸಲು ಬಳಸುವ ದೊಡ್ಡ ಚಾಕು) ಬಳಸಿದ್ದಾಗಿ ಹೇಳಿಕೊಂಡಿದ್ದಾನೆ ಎಂಬ ವರದಿ ಬಂದಿದ್ದರೂ, ಅದು ಸ್ಪಷ್ಟವಾಗಿರಲಿಲ್ಲ.

ಇದನ್ನೂ ಓದಿ: Shraddha Murder Case| ಹೌದು ನಾನೇ ಶ್ರದ್ಧಾಳ ಕೊಲೆ ಮಾಡಿದೆ; ಮಂಪರು ಪರೀಕ್ಷೆಯಲ್ಲೂ ಅದೇ ಉತ್ತರ ಕೊಟ್ಟ ಅಫ್ತಾಬ್​

Continue Reading

ದಿಲ್ಲಿ ಮರ್ಡರ್

Shraddha Walkar | ತನ್ನ ಕುಟುಂಬದ ಸದಸ್ಯರ ಭೇಟಿಗೆ ನಿರಾಕರಿಸುತ್ತಿರುವ ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್

ಶ್ರದ್ಧಾ ವಾಳ್ಕರ್ (Shraddha Walkar) ಕೊಲೆ ಆರೋಪಿ, 28 ವರ್ಷದ ಅಫ್ತಾಬ್ ಪೂನಾವಾಲ ನವೆಂಬರ್ 26ರಿಂದ ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದಾನೆ.

VISTARANEWS.COM


on

Aaftab used Chinese knife To Cut Shraddha Body
Koo

ನವದೆಹಲಿ: ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾ ವಾಳ್ಕರಳನ್ನು (Shraddha Walkar) ತುಂಡು ತುಂಡಾಗಿ ಕತ್ತರಿಸಿ ಭಯಾನಕವಾಗಿ ಕೊಲೆ ಮಾಡಿದ್ದ ಆರೋಪಿ ಅಫ್ತಾಬ್ ಪೂನಾವಾಲ (Aftab Poonawala) ಈಗ ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಆತನನ್ನು ಭೇಟಿಯಾಗಲು ಬಂದ ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾಗಲು ನಿರಾಕರಿಸುತ್ತಿದ್ದಾನೆಂದು ತಿಳಿದು ಬಂದಿದೆ.

28 ವರ್ಷದ ಅಫ್ತಾಬ್‌ ನವೆಂಬರ್ 26ರಿಂದ ತಿಹಾರ್ ಜೈಲಿನಲ್ಲಿದ್ದಾನೆ. ಆತ ತನ್ನನ್ನು ಯಾರು ಭೇಟಿ ಮಾಡಬೇಕೆಂಬ ಕುರಿತು ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ಇನ್ನಷ್ಟೇ ನೀಡಬೇಕಿದೆ. ನಿಯಮಗಳ ಪ್ರಕಾರ, ಜೈಲಿನಲ್ಲಿರುವ ವ್ಯಕ್ತಿ ವಾರಕ್ಕೆ ಎರಡು ಸಾರಿ, ತನ್ನ ಕುಟುಂಬದವರನ್ನು ಭೇಟಿ ಮಾಡಲು ಅವಕಾಶವಿದೆ.

ಸದ್ಯ ಜೈಲಿನಲ್ಲಿ ತನ್ನ ಪಾಡಿಗೆ ತಾನು ಇರುತ್ತಿರುವ ಆರೋಪಿ ಪೂನಾವಾಲ ಈ ವಾರದ ಬಳಿಕ, ಯಾರನ್ನೋ ಭೇಟಿಯಾಗುವ ಬಗ್ಗೆ ಸಹ ಕೈದಿಗಳ ಜತೆಗೆ ಮಾತನಾಡಿಕೊಂಡಿದ್ದಾನೆಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಆತ ಇದವರೆಗೂ ಯಾರನ್ನು ಭೇಟಿ ಮಾಡಬೇಕೆಂಬ ಮಾಹಿತಿಯನ್ನು ಹಂಚಿಕೊಂಡಿಲ್ಲ. ಜತೆಗೆ, ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾಗಲೂ ಮುಂದಾಗುತ್ತಿಲ್ಲ.

ಇದನ್ನೂ ಓದಿ | Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

Continue Reading
Advertisement
IPL 2024
ಪ್ರಮುಖ ಸುದ್ದಿ3 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ3 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ4 hours ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ4 hours ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ4 hours ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ4 hours ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ4 hours ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Lok Sabha Election
ದೇಶ5 hours ago

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Award Ceremony
ಬೆಂಗಳೂರು5 hours ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ8 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ8 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ9 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ9 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ10 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ16 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ21 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ22 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌