Agnipath protest: ಹಿಂಸಾನಿರತ ಯುವಕರಿಗೆ ಸೇನೆ ಸೇರಲು ಅವಕಾಶ ಸಿಗದು? - Vistara News

ದೇಶ

Agnipath protest: ಹಿಂಸಾನಿರತ ಯುವಕರಿಗೆ ಸೇನೆ ಸೇರಲು ಅವಕಾಶ ಸಿಗದು?

Agnipath protest : ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ, ದೊಂಬಿ ಎಬ್ಬಿಸುತ್ತಿರುವ ಸೇನಾ ಸೇರ್ಪಡೆ ಆಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ ಕಾದಿದೆ ಎಂದು ವಾಯುಸೇನೆ ಮುಖ್ಯಸ್ಥರೇ ಎಚ್ಚರಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅಗ್ನಿಪಥ್‌ ವಿರುದ್ಧ ಅಗ್ನಿಜ್ವಾಲೆ (Agnipath protest) ಸೃಷ್ಟಿಸುತ್ತಿರುವ ಯುವಕರಿಗೆ ಮುಂದೆ ಸೇನೆ ಸೇರಲು ಅವಕಾಶ ಸಿಗದೆ ಹೋಗಬಹುದು ಎಂಬ ಎಚ್ಚರಿಕೆಯ ಮಾತೊಂದು ಕೇಳಿಬಂದಿದೆ. ಪ್ರಸಕ್ತ ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ಸೇನೆ ಸೇರಲು ಸಿದ್ಧತೆ ನಡೆಸುತ್ತಿರುವವರು ಎಂದು ಹೇಳಲಾದ ಯುವಕರು ಭಾರಿ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಒಂದೊಮ್ಮೆ ಈ ವಿವಾದವೆಲ್ಲ ತಣ್ಣಗಾಗಿ ಸೇನಾ ನೇಮಕಾತಿ ಆರಂಭವಾದರೂ ಆಗ ಈ ಹಿಂಸಾನಿರತರಿಗೆ ಅವಕಾಶ ಸಿಗದೆ ಹೋಗಬಹುದು ಎಂದು ಎಚ್ಚರಿಸಲಾಗಿದೆ.

ಈ ಎಚ್ಚರಿಕೆಯ ಮಾತನ್ನು ಆಡಿದವರು ವಾಯು ಸೇನಾ ಮುಖ್ಯಸ್ಥರಾಗಿರುವ ವಿ.ಆರ್‌. ಚೌಧರಿ. ಈಗ ದೊಡ್ಡ ಮಟ್ಟದಲ್ಲಿ ಹಿಂಸಾಚಾರದಲ್ಲಿ ತೊಡಗಿರುವ ಯುವಕರು ಮುಂದೆ ಸೇನೆ ಸೇರ್ಪಡೆಯ ನೇಮಕಾತಿ ನಡೆಯುವ ಸಂದರ್ಭದಲ್ಲಿ ದೊಡ್ಡ ಬೆಲೆಯನ್ನೇ ತೆರಬೇಕಾದೀತು ಎಂದು ಹೇಳಿದ್ದಾರೆ.

ಯಾವುದೇ ಅಭ್ಯರ್ಥಿ ಸೇನೆಯನ್ನು ಸೇರಬೇಕು ಎಂದರೆ ಪೊಲೀಸ್‌ ಕ್ಲಿಯರೆನ್ಸ್‌ ಅಗತ್ಯವಾಗುತ್ತದೆ. ಈಗ ದೊಂಬಿಯಲ್ಲಿ ಭಾಗವಹಿಸಿದವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದರೆ ಅವರಿಗೆ ಕ್ಲಿಯರೆನ್ಸ್‌ ಕೊಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರಿಗೆ ನೇಮಕಾತಿಯಲ್ಲಿ ಅವಕಾಶ ದೊರೆಯದೆ ಹೋಗಬಹುದು ಎಂದು ಚೌಧರಿ ಹೇಳಿದರು.

ನಾವು ಈ ತರದ ಪ್ರತಿಭಟನೆಯನ್ನು ನಿರೀಕ್ಷೆ ಮಾಡಿರಲೇ ಇಲ್ಲ. ನಾವು ಇಂಥ ಹಿಂಸಾಚಾರವನ್ನು ಖಂಡಿಸುತ್ತೇವೆ. ಇದು ಪರಿಹಾರವಲ್ಲ ಎಂದ ಅವರು, ಸೇನೆ ನೇಮಕಾತಿಯಲ್ಲಿ ಪೊಲೀಸ್‌ ವೆರಿಫಿಕೇಶನ್‌ ಅತ್ಯಂತ ಪ್ರಮುಖ ಭಾಗವಾಗಿರುತ್ತದೆ. ಇಂಥ ದೊಂಬಿಯಲ್ಲಿ ಭಾಗವಹಿಸಿದವರಿಗೆ ಕ್ಲಿಯರೆನ್ಸ್‌ ಸಿಗದಿರಬಹುದು ಎಂದರು ಚೌಧರಿ.
ಅಗ್ನಿಪಥ್‌ ಅತ್ಯುತ್ತಮ ಯೋಜನೆಯಾಗಿದೆ ಎಂದು ಹೇಳಿದ ಅವರು, ಯಾರಾದರೂ ಯುವಕರಿಗೆ ಇದರ ಬಗ್ಗೆ ಗೊಂದಲಗಳಿದ್ದರೆ ಸಮೀಪದ ಮಿಲಿಟರಿ ನೆಲೆ, ವಾಯುಪಡೆ ಇಲ್ಲವೇ ನೌಕಾಪಡೆಗಳ ಕಚೇರಿಗಳಿಗೆ ಭೇಟಿ ನೀಡಿ ಸಂಶಯ ಪರಿಹರಿಸಿಕೊಳ್ಳಬಹುದು ಎಂದರು.
ಎಲ್ಲ ಯುವಕರು ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳಬೇಕು ಮತ್ತು ಯೋಜನೆಯ ಸಂಪೂರ್ಣ ವಿಚಾರವನ್ನು ಅರ್ಥ ಮಾಡಿಕೊಳ್ಳಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಯೋಜನೆಯ ಲಾಭವನ್ನು ಪಡೆಯಬೇಕು ಎಂದರು ಚೌಧರಿ. ಇದನ್ನೂ ಓದಿ| Agnipath : ಸೇನೆ ಸೇರಲು ಯುವಕರಿಗೆ ಸುವರ್ಣ ಅವಕಾಶ; ಅಗ್ನಿಪಥ್‌ ಯೋಜನೆಗೆ ಕೇಂದ್ರದ ಅನುಮೋದನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಮೆಟ್ರೊ ರೈಲಿನೊಳಗೆ ʼವಿದ್ಯಾವಂತ ಮಹಿಳೆಯರುʼ ಫೈಟ್‌ ಹೇಗಿದೆ ನೋಡಿ!

ದೆಹಲಿ ಮೆಟ್ರೋದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ ಇಬ್ಬರು ಮಹಿಳೆಯರು ಹೊಡೆದಾಡಿಕೊಂಡ ವಿಡಿಯೋ ಎಕ್ಸ್ ನಲ್ಲಿ ವೈರಲ್ (Viral Video) ಆಗಿದೆ. ಇದರಲ್ಲಿ ಒಬ್ಬ ಮಹಿಳೆ ಮತ್ತೊಬ್ಬರು ಮೆಟ್ರೋದಲ್ಲಿ ಕುಡಿದಿದ್ದಾರೆ ಎಂದು ಆರೋಪಿಸಿದ್ದು ಹೊಡೆದಾಟಕ್ಕೆ ಕಾರಣವಾಗಿದೆ.

VISTARANEWS.COM


on

By

Viral Video
Koo

ದೆಹಲಿ ಮೆಟ್ರೋ (delhi metro) ಎಲ್ಲರಿಗೂ ಈಗ ಹಾಸ್ಯದ ಕೇಂದ್ರವಾಗಿದೆ ಎನ್ನಬಹುದು. ಯಾಕೆಂದರೆ ಒಂದಲ್ಲ ಒಂದು ಕಾರಣಕ್ಕೆ ದೆಹಲಿ (delhi) ಮೆಟ್ರೋ ನಿರಂತರ ಸುದ್ದಿಯಾಗುತ್ತಲೇ ಇದೆ. ಇದೀಗ ಮೆಟ್ರೋದಲ್ಲಿ ಮಹಿಳೆಯರಿಬ್ಬರು ಹೊಡೆದಾಡಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ. ದೆಹಲಿ ಮೆಟ್ರೋ ಬಗ್ಗೆ ಎಲ್ಲರೂ ಮತ್ತೊಮ್ಮೆ ತಮಾಷೆ ಮಾಡುವಂತಾಗಿದೆ.

ದೆಹಲಿ ಮೆಟ್ರೋದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ ಇಬ್ಬರು ಮಹಿಳೆಯರು ಹೊಡೆದಾಡಿಕೊಂಡ ವಿಡಿಯೋ ಎಕ್ಸ್ (x) ನಲ್ಲಿ ವೈರಲ್ ಆಗಿದೆ. ಇದರಲ್ಲಿ ಒಬ್ಬ ಮಹಿಳೆ ಮತ್ತೊಬ್ಬರು ಮೆಟ್ರೋದಲ್ಲಿ ಕುಡಿದಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಹೊಡೆದಾಟಕ್ಕೆ ಕಾರಣವಾಗಿದೆ. ಮಹಿಳೆಯರಿಬ್ಬರು ಪರಸ್ಪರ ಕೂದಲು ಎಳೆದುಕೊಂಡು ಹೊಡೆದಾಡುತ್ತಿದ್ದರೆ ಉಳಿದವರು ನೋಡಿ ನಗುತ್ತಾ ವಿಡಿಯೋ ಮಾಡುತ್ತಿದ್ದರು.

ಎಕ್ಸ್ ನಲ್ಲಿ ಈ ವಿಡಿಯೋವನ್ನು ರಾಹುಲ್ ಶೈನಿ ಎಂಬವರು ಹಂಚಿಕೊಂಡಿದ್ದು, “ದಯೆಯುಳ್ಳ ಜನರ ದೆಹಲಿ ಎಂದಾದರೂ ಸುಧಾರಿಸುತ್ತದೆಯೇ? ಅದೇ ಪ್ರಸಿದ್ಧ ಸ್ಥಳವಾದ ಮೆಟ್ರೋದಲ್ಲಿ ಮತ್ತೆ ಮಹಿಳೆಯರ ನಡುವೆ ಜಗಳವಾಯಿತು…!! ನಂತರ ಪರಸ್ಪರ ಕಪಾಳ ಮೋಕ್ಷ ಮತ್ತು ಜಗಳ ನಡೆಯಿತು. ಜಗಳದ ನಂತರ ಇಬ್ಬರು ಮಹಿಳೆಯರು.” ಎಂಬ ಶೀರ್ಷಿಕೆ ನೀಡಲಾಗಿದೆ.


ವೈರಲ್ ಆದ ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಂದಿ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಅನೇಕರು ದೆಹಲಿ ಮೆಟ್ರೋಗೆ ಇಂತಹ ಘಟನೆಗಳನ್ನು “ಸಾಮಾನ್ಯ” ಎಂದು ಹೇಳಿದ್ದಾರೆ. ಕೆಲವರು ಇದನ್ನು ಹಾಸ್ಯ ಮಾಡಿದ್ದಾರೆ. ಶುಕ್ರವಾರ ಬೆಳಗ್ಗೆ ಹಂಚಿಕೊಂಡಿರುವ ಈ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ.

ಇದನ್ನೂ ಓದಿ: Viral Video: ಮಕ್ಕಳು ಆಟವಾಡ್ತಿದ್ದ ವಾಟರ್‌ ಪಾರ್ಕ್‌ಗೆ ಏಕಾಏಕಿ ನುಗ್ಗಿದ ಬುಲ್ಡೋಜರ್‌; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

ಇದಕ್ಕೆ ಪ್ರತಿಕ್ರಿಯಿಸಿರುವ ಒಬ್ಬ ಬಳಕೆದಾರ, ಮೆಟ್ರೋ ಎಂದಿಗೂ ನಿರಾಶೆಗೊಳಿಸುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ದೆಹಲಿ ಮೆಟ್ರೋ ಮತ್ತೊಂದು ಹಾಸ್ಯ ಕುಚ್ ಭೀ ಹೋಥಾ ಕಭಿ ಭಿ (ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು)” ಎಂದು ಸೇರಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು ಹಾಸ್ಯಮಯವಾಗಿ, “ಅಸ್ಲಿ ರೆಸ್ಲಿಂಗ್ ಟು ಮೆಟ್ರೋ ಮತ್ತು ಇಂಡಿಯನ್ ರೈಲ್ವೇ ಮೈ ಹೋತಿ ಹೈ (ನಿಜವಾದ ಕುಸ್ತಿ ದೆಹಲಿ ಮೆಟ್ರೋದಲ್ಲಿ ನಡೆಯುತ್ತದೆ)” ಎಂದು ಸೇರಿಸಿದ್ದಾರೆ. ಮತ್ತೊಬ್ಬರು, ಈ ಸಮಸ್ಯೆಯು ಇಂದು ಚಿಕ್ಕದಾಗಿ ಕಾಣಿಸಬಹುದು, ಆದರೆ ನಾಳೆ ಇದು ಬಹಳ ಮಹತ್ವದ್ದಾಗಬಹುದು. ದೆಹಲಿ ಮೆಟ್ರೋ ನಲ್ಲಿ ಹೊಡೆದಾಡುವ ಜನರಿಗೆ ದಂಡ ವಿಧಿಸಬೇಕು. ಎಂದು ಹೇಳಿದ್ದಾರೆ.

Continue Reading

ದೇಶ

Ramoji Rao passed away: ಮಾಧ್ಯಮ ಲೋಕದ ದಿಗ್ಗಜ ಇನ್ನಿಲ್ಲ; ರಾಮೋಜಿ ರಾವ್ ವಿಧಿವಶ

Ramoji Rao passed away: ವೈದ್ಯಕೀಯ ಪರೀಕ್ಷೆಯ ನಂತರ ಹೃದಯ ಸ್ಟೆಂಟ್ ಹಾಕಲಾಯಿತು. ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತು. ಅವರ ಸ್ಥಿತಿ ಗಂಭೀರವಾಗಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಮುಂಜಾನೆ ಸಾವನ್ನಪ್ಪಿದ್ದಾರೆ. ಸದ್ಯ ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನೆ ಮಾಡಲಾಗಿದೆ. ರಾಮೋಜಿ ರಾವ್ ಅವರ ನಿವಾಸದಲ್ಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

VISTARANEWS.COM


on

Ramoji Rao passed away
Koo

ಹೈದರಾಬಾದ್‌: ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್(Ramoji Rao passed away) ಅವರು ಇಂದು ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌(Hyderabad)ನ ಸ್ಟಾರ್ ಆಸ್ಪತ್ರೆಯಲ್ಲಿ ಬೆಳಗಿನ ಜಾವ 3:45ಕ್ಕೆ ಕೊನೆಯುಸಿರೆಳೆದರು. ಇದೇ ತಿಂಗಳ 5ರಂದು ಹೃದಯ ಸಂಬಂಧಿ ಸಮಸ್ಯೆಯಿಂದ ಉಸಿರಾಟಕ್ಕೆ ತೀವ್ರ ತೊಂದರೆಯಾಗಿತ್ತು.ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯಕೀಯ ಪರೀಕ್ಷೆಯ ನಂತರ ಹೃದಯ ಸ್ಟೆಂಟ್ ಹಾಕಲಾಯಿತು. ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತು. ಅವರ ಸ್ಥಿತಿ ಗಂಭೀರವಾಗಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಮುಂಜಾನೆ ಸಾವನ್ನಪ್ಪಿದ್ದಾರೆ. ಸದ್ಯ ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನೆ ಮಾಡಲಾಗಿದೆ. ರಾಮೋಜಿ ರಾವ್ ಅವರ ನಿವಾಸದಲ್ಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ರಾಮೋಜಿ ರಾವ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ರಾಮೋಜಿ ರಾವ್ ಅವರು ಕರುಳಿನ ಕ್ಯಾನ್ಸರ್‌ಗೆ ತುತ್ತಾಗಿದ್ದರು. ಬಳಿಕ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿತ್ತು. ಕ್ಯಾನ್ಸರ್‌ಗಿಂತ ರಾಮೋಜಿ ರಾವ್ ಅವರು ಗುಣಮುಖರಾಗಿದ್ದರು ಎಂದು ಕುಟುಂಬ ವರ್ಗದ ಮೂಲಗಳು ಮಾಹಿತಿ ನೀಡಿವೆ. ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ಅವರು, ವಿಶ್ವದ ಅತಿದೊಡ್ಡ ಥೀಮ್ ಪಾರ್ಕ್ ಮತ್ತು ಫಿಲ್ಮ್ ಸ್ಟುಡಿಯೋ, ರಾಮೋಜಿ ಫಿಲ್ಮ್ ಸಿಟಿಯನ್ನು ಸ್ಥಾಪಿಸಿದರು. ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಕಂಪನಿಗಳಾಗಿವೆ.

ರಾಮೋಜಿ ರಾವ್ ಅವರು 1984 ರ ಸೂಪರ್‌ ಹಿಟ್‌ ರೊಮ್ಯಾಂಟಿಕ್ ಸಿನಿಮಾ ಶ್ರೀವಾರಿಕಿ ಪ್ರೇಮಲೇಖ ಚಿತ್ರದೊಂದಿಗೆ ಚಲನಚಿತ್ರ ನಿರ್ಮಾಪಕರಾಗಿ ಸಿನಿರಂಗಕ್ಕೆ ಕಾಲಿಟ್ಟರು. ಅವರು ಮಯೂರಿ, ಪ್ರತಿಭಟನಾ, ಮೌನ ಪೋರಾಟಂ, ಮನಸು ಮಮತಾ, ಚಿತ್ರಂ, ಮತ್ತು ನುವ್ವೆ ಕಾವಲಿ ಮುಂತಾದ ಹಲವಾರು ಶ್ರೇಷ್ಠ ಚಿತ್ರಗಳನ್ನು ನಿರ್ಮಿಸಿದರು. ಅವರ ಚಲನಚಿತ್ರಗಳು ಪ್ರತಿಷ್ಠಿತ ನಂದಿ, ಫಿಲ್ಮ್‌ಫೇರ್ ಮತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಹಲವಾರು ಬಾರಿ ಗೆದ್ದವು.

ಭಾರತ ಸರ್ಕಾರವು ರಾಮೋಜಿ ರಾವ್ ಅವರಿಗೆ ಪತ್ರಿಕೋದ್ಯಮ, ಸಾಹಿತ್ಯ, ಸಿನಿಮಾ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅವರ ಅಮೂಲ್ಯ ಕೊಡುಗೆಗಳಿಗಾಗಿ 2016 ರಲ್ಲಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮವಿಭೂಷಣವನ್ನು ನೀಡಿ ಗೌರವಿಸಿದೆ.

ಇದನ್ನೂ ಓದಿ:Viral Video: ಮಕ್ಕಳು ಆಟವಾಡ್ತಿದ್ದ ವಾಟರ್‌ ಪಾರ್ಕ್‌ಗೆ ಏಕಾಏಕಿ ನುಗ್ಗಿದ ಬುಲ್ಡೋಜರ್‌; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

Continue Reading

ದೇಶ

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

ಮಳೆಯ ಸೌಂದರ್ಯವನ್ನು ಅನುಭವಿಸಲು ಮಲೆನಾಡಿಗೆ ಹೋಗಬೇಕಿಲ್ಲ. ಯಾಕೆಂದರೆ ಬೆಂಗಳೂರಿನ ಸುತ್ತಮುತ್ತಲಿರುವ ಕೆಲವು ತಾಣಗಳು ಮಳೆಗಾಲದ ಅದ್ಭುತ ನೋಟವನ್ನು ತೆರೆದಿಡುತ್ತದೆ. ಈ ಬಾರಿ ಮಳೆಗಾಲದಲ್ಲಿ ಮನೆಯಲ್ಲೇ ಸುಮ್ಮನೆ ಹೊದಿಕೆ ಹೊದ್ದು ಮಲಗುವ ಬದಲು ಬೆಂಗಳೂರು ಸುತ್ತಮುತ್ತಲೂ ಇರುವ ಸುಂದರ ತಾಣಗಳಿಗೆ (Monsoon Tour) ಭೇಟಿ ನೀಡೋಣ. ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳೋಣ.

VISTARANEWS.COM


on

By

Monsoon Tour
Koo

ಸುರಿಯುತ್ತಿರುವ ಮಳೆಯ ನಡುವೆ ಹೊರಗೆ ಹೋಗುವುದು ಬೇಜಾರು. ಆದರೆ ಪ್ರಕೃತಿಯ ಸೌಂದರ್ಯ ಎದ್ದು ಕಾಣುವುದೇ ಮಳೆಗಾಲದಲ್ಲಿ (Monsoon Tour). ಈ ಸಂದರ್ಭದಲ್ಲಿ ದೂರ ಹೋಗುವುದು ಅಸಾಧ್ಯವಾದರೂ ಹತ್ತಿರ ಇರುವ ಕೆಲವು ತಾಣಗಳಲ್ಲಿ (tourist place) ಸುತ್ತಾಡಬಹುದು. ಮಳೆಯ ನಡುವೆ ಸುತ್ತಮುತ್ತಲಿನ ಪರಿಸರದಲ್ಲಿ (nature) ಕಾಣುವ ಹೊಸತನದ ಚಿಗುರನ್ನು ನೋಡಿ ಆನಂದಿಸಬಹುದು.

ಮಳೆಯ ಸೌಂದರ್ಯವನ್ನು ಅನುಭವಿಸಲು ಮಲೆನಾಡಿಗೆ (malenadu) ಹೋಗಬೇಕಿಲ್ಲ. ಯಾಕೆಂದರೆ ಬೆಂಗಳೂರಿನ (bengaluru) ಸುತ್ತಮುತ್ತಲಿರುವ ಕೆಲವು ತಾಣಗಳು ಮಳೆಗಾಲದ ಅದ್ಭುತ ನೋಟವನ್ನು ತೆರೆದಿಡುತ್ತದೆ. ಪ್ರಾಚೀನ ಭಾರತೀಯ ದೇವಾಲಯಗಳು ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ವಾಸ್ತುಶಿಲ್ಪದ ಪರಂಪರೆಯನ್ನು ಪ್ರದರ್ಶಿಸುತ್ತವೆ. ಈ ಪವಿತ್ರ ತಾಣಗಳು ಕೇವಲ ಪೂಜಾ ಸ್ಥಳಗಳಲ್ಲ. ಇತಿಹಾಸ, ಕಲೆ ಮತ್ತು ಆಧ್ಯಾತ್ಮಿಕತೆಯ ಭಂಡಾರಗಳಾಗಿವೆ. ಇವುಗಳಲ್ಲಿ ಹಲವು ದೇವಾಲಯ ನಮ್ಮ ಬೆಂಗಳೂರಿನ ಸುತ್ತಮುತ್ತಲಿದೆ. ಈ ಬಾರಿ ಮಳೆಗಾಲದಲ್ಲಿ ಈ ಎಂಟು ದೇವಾಲಯಗಳಲ್ಲಿ ಹೆಜ್ಜೆ ಹಾಕಿ ಮಳೆಗಾಲದ ನೆನಪನ್ನು ಬೆಚ್ಚಗೆ ಮನದಲ್ಲಿ ತುಂಬಿ ಇಡೋಣ.


1. ಚೆನ್ನಕೇಶವ ದೇವಸ್ಥಾನ

ಹಾಸನ ಜಿಲ್ಲೆಯಲ್ಲಿರುವ 12ನೇ ಶತಮಾನದ ಬೇಲೂರಿನ ಚೆನ್ನಕೇಶವ ದೇವಾಲಯವು ತನ್ನ ಸಂಕೀರ್ಣವಾದ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಗಳಿಗೆ ಹೆಸರುವಾಸಿಯಾಗಿದೆ. ಇದು ನಕ್ಷತ್ರಾಕಾರದ ದೇವಾಲಯವಾಗಿದ್ದು, ಹಿಂದೂ ದೇವರಾದ ವಿಷ್ಣುವಿಗೆ ಸಮರ್ಪಿತವಾಗಿದೆ.


2. ಕೋಟಿಲಿಂಗೇಶ್ವರ ದೇವಸ್ಥಾನ

ಬೃಹತ್ ಶಿವಲಿಂಗಕ್ಕೆ ಹೆಸರುವಾಸಿಯಾಗಿರುವ ಈ ದೇವಾಲಯವು ವಿಶ್ವದ ಅತಿದೊಡ್ಡ ಲಿಂಗಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಕೋಟಿಲಿಂಗೇಶ್ವರ ದೇವಸ್ಥಾನ ಕೋಲಾರದಲ್ಲಿದೆ.


3. ಹೊಯ್ಸಳೇಶ್ವರ ದೇವಸ್ಥಾನ

12ನೇ ಶತಮಾನದ ಈ ದೇವಾಲಯವು ಹಾಸನ ಜಿಲ್ಲೆಯಲ್ಲಿದೆ ಮತ್ತು ಇದು ಶಿವನಿಗೆ ಸಮರ್ಪಿತವಾಗಿದೆ. ಹೊಯ್ಸಳ ವಾಸ್ತುಶೈಲಿಗೆ ಹೆಸರುವಾಸಿಯಾದ. ಇದು ಹಳೇಬೀಡುನಲ್ಲಿರುವ ಅತಿ ದೊಡ್ಡ ದೇವಾಲಯವಾಗಿದೆ.

Monsoon Tour


4. ಶ್ರೀ ರಂಗನಾಥಸ್ವಾಮಿ ದೇವಸ್ಥಾನ

ಮೈಸೂರಿನ ಸಮೀಪ ಶ್ರೀರಂಗಪಟ್ಟಣದಲ್ಲಿರುವ ಈ ದೇವಾಲಯವು ಕರ್ನಾಟಕದಲ್ಲಿಯೇ ಅತಿ ದೊಡ್ಡದಾಗಿದೆ ಮತ್ತು ವಿಷ್ಣುವಿನ ರೂಪವಾದ ರಂಗನಾಥನಿಗೆ ಸಮರ್ಪಿತವಾಗಿದೆ. ವೈಷ್ಣವ ಸಂಪ್ರದಾಯದ 108 ಅಭಿಮಾನ ಕ್ಷೇತ್ರಗಳಲ್ಲಿ ಒಂದಾಗಿ ಇದು ವಿಶೇಷ ಸ್ಥಾನವನ್ನು ಹೊಂದಿದೆ.


5. ಲೇಪಾಕ್ಷಿ ದೇವಸ್ಥಾನ

ಬೆಂಗಳೂರಿನಿಂದ ಇದು ತುಂಬ ದೂರ ಏನಿಲ್ಲ. ಆಂಧ್ರಪ್ರದೇಶದ ಅನಂತಪುರದಲ್ಲಿದೆ ಲೇಪಾಕ್ಷಿ ದೇವಾಲಯ. ಇಲ್ಲಿನ ಅದ್ಭುತ ವಿಜಯನಗರ ವಾಸ್ತುಶಿಲ್ಪ ಮತ್ತು ಪ್ರಸಿದ್ಧ ನೇತಾಡುವ ಸ್ತಂಭಗಳು ಪ್ರವಾಸಿಗರಲ್ಲಿ ಬೆರಗು ಮೂಡಿಸುತ್ತದೆ. 16 ನೇ ಶತಮಾನದಲ್ಲಿ ನಿರ್ಮಿಸಲಾದ ಈ ದೇವಾಲಯದ ಸಂಕೀರ್ಣ ಕೆತ್ತನೆಗಳು ಮತ್ತು ವರ್ಣಚಿತ್ರಗಳು ನಯನ ಮನೋಹರವಾಗಿದೆ.


6. ಭೋಗ ನಂದೀಶ್ವರ ದೇವಸ್ಥಾನ

ನಂದಿ ಬೆಟ್ಟದ ತಪ್ಪಲಿನಲ್ಲಿರುವ ಈ ದೇವಾಲಯದ ಸಂಕೀರ್ಣವು ಶಿವನಿಗೆ ಸಮರ್ಪಿತವಾಗಿದೆ ಮತ್ತು ದ್ರಾವಿಡ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ. ನಿಖರವಾದ ಮೂಲಗಳು ತಿಳಿದಿಲ್ಲವಾದರೂ ವಾಸ್ತುಶಿಲ್ಪವು 9ನೇ – 10ನೇ ಶತಮಾನದ ಹಿಂದಿನದು ಎಂದು ನಂಬಲಾಗಿದೆ.


7. ಶ್ರೀ ಚಾಮುಂಡೇಶ್ವರಿ ದೇವಸ್ಥಾನ

ಮೈಸೂರಿನಲ್ಲಿರುವ ವಿಶ್ವಪ್ರಸಿದ್ಧ ಈ ದೇವಾಲಯವು ಚಾಮುಂಡಿ ಬೆಟ್ಟದ ಮೇಲಿದೆ ಮತ್ತು ದುರ್ಗದ ರೂಪವಾದ ಚಾಮುಂಡೇಶ್ವರಿ ದೇವಿಯನ್ನು ಇಲ್ಲಿ ಪೂಜಿಸಲಾಗುತ್ತದೆ.

ಇದನ್ನೂ ಓದಿ: Sri Lanka Tour: ಕಡಿಮೆ ವೆಚ್ಚದಲ್ಲಿ ಶ್ರೀಲಂಕಾ ಪ್ರವಾಸ; ಐಆರ್‌ಸಿಟಿಸಿ ಸ್ಪೆಷಲ್‌ ಪ್ಯಾಕೇಜ್‌


8. ತಲಕಾಡು ಪಂಚಲಿಂಗ ದೇವಾಲಯಗಳು

ತಲಕಾಡು ಶಿವನಿಗೆ ಅರ್ಪಿತವಾದ ಪಂಚಲಿಂಗ ದೇವಾಲಯಗಳು ಸೇರಿದಂತೆ ಹಲವಾರು ಪುರಾತನ ದೇವಾಲಯಗಳಿಗೆ ನೆಲೆಯಾಗಿದೆ. ಪಂಚ ಲಿಂಗ ದರ್ಶನವು ಸಾಮಾನ್ಯವಾಗಿ ಪ್ರತಿ ಹನ್ನೆರಡು, ಏಳು, ಐದು ಅಥವಾ ಮೂರು ವರ್ಷಗಳಿಗೊಮ್ಮೆ ನಡೆಯುವ ಪ್ರಮುಖ ಕಾರ್ಯಕ್ರಮವಾಗಿದ್ದು, ಆಶೀರ್ವಾದ ಪಡೆಯಲು ಭಕ್ತರು ಐದು ದೇವಾಲಯಗಳಿಗೆ ಭೇಟಿ ನೀಡುತ್ತಾರೆ.

Continue Reading

ದೇಶ

Narendra Modi: ಹಂಗಾಮಿ ಪ್ರಧಾನಿ ಮೋದಿಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು!

Narendra Modi: ನರೇಂದ್ರ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಮಾತ್ರವಲ್ಲ, ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು. ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಕೂಡ ಇದ್ದರು. ಇನ್ನು, ಮೋದಿ ಅವರಿಗೆ ರಾಷ್ಟ್ರಪತಿ ಅವರು ಸಕ್ಕರೆ ಮಿಶ್ರಿತ ಮೊಸರು ತಿನ್ನಿಸುವ ಮೂಲಕ ಶುಭ ಹಾರೈಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಎನ್‌ಡಿಎ ಮೈತ್ರಿಕೂಟದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ (ಜೂನ್‌ 6) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಎನ್‌ಡಿಎ (NDA) ಮೈತ್ರಿಕೂಟದ ಪಕ್ಷಗಳು ಬೆಂಬಲ ನೀಡಿರುವ ಪತ್ರದೊಂದಿಗೆ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾದ ಅವರು ಹಕ್ಕು ಮಂಡಿಸಿದ್ದಾರೆ. ಇನ್ನು, ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿ ಅವರಿಗೆ ದ್ರೌಪದಿ ಮುರ್ಮು ಅವರು ಸಕ್ಕರೆ ಮಿಶ್ರಣ ಆಗಿರುವ ಮೊಸರನ್ನು ತಿನ್ನಿಸಿ, ಶುಭ ಕೋರಿದ್ದಾರೆ. ಈ ಫೋಟೊ ಈಗ ವೈರಲ್‌ ಆಗಿದೆ.

ಮತ್ತೊಂದೆಡೆ, ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅಧಿಕೃತ ಮಾಹಿತಿ ನೀಡಿದ್ದಾರೆ. “ನರೇಂದ್ರ ಮೋದಿ ಅವರು ಪ್ರಧಾನಿಯಾಗಿ, ಹಲವು ಸಂಸದರು ಸಚಿವರಾಗಿ ಜೂನ್‌ 9ರಂದು ಸಂಜೆ 7.15ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ” ಎಂದು ರಾಷ್ಟ್ರಪತಿಯವರ ಕಚೇರಿಯು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ದೇಶ-ವಿದೇಶಗಳ ನೂರಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ನರೇಂದ್ರ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಮಾತ್ರವಲ್ಲ, ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು. ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಸೇರಿ ಹಲವು ನಾಯಕರು ಇದ್ದರು.

ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಮುನ್ನ ನಡೆದ ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ನಿತೀಶ್‌ ಕುಮಾರ್‌ ಅವರು ಹೊಗಳಿದರು. “ಮುಂದಿನ ಸಲವೂ ನೀವೇ ಸ್ಪರ್ಧೆಗೆ ನಿಂತರೆ, ಈಗ ಅಲ್ಲಲ್ಲಿ ಗೆಲುವು ಸಾಧಿಸಿರುವ ಇಂಡಿಯಾ ಒಕ್ಕೂಟದ ಯಾವೊಬ್ಬರೂ ಗೆಲ್ಲುವುದಿಲ್ಲ. ಎಲ್ಲರೂ ನಿಮ್ಮೆದುರು ಸೋತು ಹೋಗುತ್ತಾರೆ. ಅವರು ಎಂದಿಗೂ ದೇಶಕ್ಕಾಗಿ ಕೆಲಸ ಮಾಡಿಲ್ಲ. ಅವರಿಂದ ದೇಶಕ್ಕೆ ಯಾವ ಸೇವೆಯೂ ಸಿಕ್ಕಿಲ್ಲ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ದೇಶ ಏಳಿಗೆ ಹೊಂದುತ್ತಿದೆ” ಎಂಬುದಾಗಿ ನಿತೀಶ್‌ ಕುಮಾರ್‌ ಹೇಳಿದರು. ಆಗ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕರು. ಸಭೆಯಲ್ಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಾಡಿದರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಮೋದಿ ಮೂರನೇ ಅವಧಿ, ಆಗಲಿ ಇನ್ನಷ್ಟು ವಿಕಾಸದ ಬುನಾದಿ

Continue Reading
Advertisement
Viral Video
ವೈರಲ್ ನ್ಯೂಸ್3 mins ago

Viral Video: ಮೆಟ್ರೊ ರೈಲಿನೊಳಗೆ ʼವಿದ್ಯಾವಂತ ಮಹಿಳೆಯರುʼ ಫೈಟ್‌ ಹೇಗಿದೆ ನೋಡಿ!

crime news
ಕರ್ನಾಟಕ15 mins ago

ಸಂಬಂಧ ಕಡಿಯಲು ಸೆಂಟಿಮೆಂಟ್ ಬೇಕಿಲ್ಲ, ಕ್ಷುಲ್ಲಕ ಕಾರಣ ಸಾಕು; ಪತಿಯ ಪೊಸೇಸೀವ್‌ನೆಸ್‌ಗೆ ಬೇಸತ್ತ ಪತ್ನಿ ಪರಾರಿ

Viral Video
ವೈರಲ್ ನ್ಯೂಸ್22 mins ago

Viral Video: ಗ್ರಹಚಾರ ಕೆಟ್ಟಾಗ ಕಾರಿನ ಚಕ್ರ ಕಳಚಿ ತಲೆಗೆ ಅಪ್ಪಳಿಸಬಹುದು! ವಿಡಿಯೊ ನೋಡಿ

Ramoji Rao passed away
ದೇಶ32 mins ago

Ramoji Rao passed away: ಮಾಧ್ಯಮ ಲೋಕದ ದಿಗ್ಗಜ ಇನ್ನಿಲ್ಲ; ರಾಮೋಜಿ ರಾವ್ ವಿಧಿವಶ

Vastu Tips
ಧಾರ್ಮಿಕ55 mins ago

Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

Monsoon Tour
ದೇಶ56 mins ago

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

Karnataka Weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Rishabh Pant
ಪ್ರಮುಖ ಸುದ್ದಿ2 hours ago

Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

Health Tips Kannada
ಆರೋಗ್ಯ2 hours ago

Health Tips Kannada: ಯಾವ ಬೀಜ ತಿಂದರೆ ನಮ್ಮ ಆರೋಗ್ಯಕ್ಕೆ ಏನು ಪ್ರಯೋಜನ?

Health Tips
ಆರೋಗ್ಯ3 hours ago

Health Tips: ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಿಕೊಳ್ಳಬೇಕೆ? ಈ ಆಹಾರ ಸೇವಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ15 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌