AIADMK Quits NDA: ಬಿಜೆಪಿ ಜತೆಗೆ ಮೈತ್ರಿ ಇಲ್ಲ; ಎಐಎಡಿಎಂಕೆ ಅಧಿಕೃತ ಘೋಷಣೆ! ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ - Vistara News

ದೇಶ

AIADMK Quits NDA: ಬಿಜೆಪಿ ಜತೆಗೆ ಮೈತ್ರಿ ಇಲ್ಲ; ಎಐಎಡಿಎಂಕೆ ಅಧಿಕೃತ ಘೋಷಣೆ! ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ

AIADMK Quits NDA: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರ ಕಾರಣಕ್ಕಾಗಿಯೇ ಬಿಜೆಪಿ ಜತೆಗಿನ ಮೈತ್ರಿಗೆ ಅಂತ್ಯ ಹಾಡಿದ್ದೇವೆ ಎಂದು ಎಐಎಡಿಎಂಕೆ ಹೇಳಿದೆ.

VISTARANEWS.COM


on

Annamalai and EPS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ, ತಮಿಳುನಾಡು: ತಮ್ಮ ಪಕ್ಷದ ನಾಯಕರನ್ನು ಅವಮಾನಿಸುತ್ತಿರುವ ಬಿಜೆಪಿ ಜತೆಗೆ ಸಖ್ಯವನ್ನು ಕಡಿದುಕೊಂಡಿರುವುದಾಗಿ ಇತ್ತೀಚೆಗಷ್ಟೇ ಎಐಎಡಿಎಂಕೆ ನಾಯಕರೊಬ್ಬರು ಹೇಳಿದ್ದರು. ಇದೀಗ, ಭಾರತೀಯ ಜನತಾ ಪಾರ್ಟಿ ಜತೆಗಿನ ಮೈತ್ರಿಯನ್ನು ಮುರಿದುಕೊಂಡಿರುವುದಾಗಿ ಸೋಮವಾರ ಎಐಎಡಿಎಂಕೆ ಅಧಿಕೃತವಾಗಿ ಘೋಷಿಸಿದೆ(AIADMK Quits NDA). ಅಲ್ಲದೇ, ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಪ್ರಕಟಿಸಿದೆ. ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈಯ (Tamil Nadu BJP President K Annamalai) ಅವರ ನಿರಂತರವಾಗಿ ಮಾಜಿ ಮುಖ್ಯಮಂತ್ರಿಗಳಾದ ಜಯಲಲಿತಾ, ಎಂಜಿಆರ್ ಹಾಗೂ ಅಣ್ಣಾದೊರೈ ಜತೆಗೆ ಸಮಾಜ ಸುಧಾರಕ ಪೆರಿಯಾರ್ ವಿರುದ್ಧ ಅವಮಾನಕರ ಹೇಳಿಕೆಗಳನ್ನು ನೀಡುತ್ತಿದ್ದರು. ಇದೇ ಕಾರಣಕ್ಕಾಗಿ ಬಿಜೆಪಿ ಜತೆಗಿನ ಮೈತ್ರಿ ಮುರಿದುಕೊಂಡು, ಎನ್‌ಡಿಎದಿಂದ ಹೊರ ಬಂದಿರುವುದಾಗಿ ಪಕ್ಷವು ಹೇಳಿದೆ.

ಬಿಜೆಪಿ ಜತೆಗಿನ ಮೈತ್ರಿ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಕುರಿತು ಎಐಎಡಿಎಂಕೆ ಸೋಮವಾರ ಸಭೆ ನಡೆಸಿತು. ಈ ಸಭೆಯಲ್ಲಿ ಅವವಿರೋಧವಾಗಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಕಳೆದ ಒಂದು ವರ್ಷದ ಬಿಜೆಪಿ ನಾಯಕತ್ವವು ಪಕ್ಷದ ಪ್ರಧಾನ ಕಾರ್ಯದರ್ಶಿ ಇಪಿಎಸ್, ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಮಾಜಿ ಮುಖ್ಯಮಂತ್ರಿಗಳ ಅನಗತ್ಯವಾಗಿ ಟೀಕೆ ಮಾಡುತ್ತಾ ಬರುತ್ತಿದೆ. ಇದರಿಂದ ಬೇಸತ್ತು ಮೈತ್ರಿ ಮುರಿದುಕೊಳ್ಳುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಎಐಎಡಿಎಂಕೆ ಡೆಪ್ಯುಟಿ ಕೋಆರ್ಡಿನೇಟರ್ ಕೆ ಪಿ ಮುನುಸಾಮಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎನ್‍‌ಡಿಎದಿಂದ ಹೊರ ಬಂದಿರುವ ಎಐಎಡಿಎಂಕೆ ಪ್ರತಿಪಕ್ಷಗಳು ಕೂಟವಾದ ಇಂಡಿಯಾ ಅಲೈನ್ಸ್ ಭಾಗ ಕೂಡ ಆಗಿಲ್ಲ. ಹಾಗಾಗಿ, ಮುಂಬರುವ ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವುದಾಗಿ ಘೋಷಿಸಿದೆ. ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಹದಗೆಟ್ಟ ಸಂಬಂಧಗಳ ಬಗ್ಗೆ ತಿಂಗಳುಗಳ ಊಹಾಪೋಹಗಳ ನಂತರ ಪಕ್ಷವು ಈ ಪ್ರಮುಖ ನಿರ್ಧಾರಕ್ಕೆ ಬಂದಿದೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಎಐಎಡಿಎಂಕೆ ನಾಯಕರ ವಿರುದ್ಧ ಪದೇ ಪದೇ ಟೀಕೆಗಳ್ನು ಮಾಡಿದ್ದಾರೆ. ಅವರ ಈ ಟೀಕೆಗಳಿಗೆ ಬಿಜೆಪಿಯ ಉನ್ನತ ನಾಯಕತ್ವದ ಬೆಂಬಲ ಇದ್ದಂತೆ ಕಾಣುತ್ತಿತ್ತು.

ಬಿಜೆಪಿ ಅಧ್ಯಕ್ಷನಾಗಲು ಅಣ್ಣಾಮಲೈ ಅಯೋಗ್ಯ ಎಂದ ಎಐಎಡಿಎಂಕೆ ನಾಯಕ

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (Tamil Nadu BJP President K. Annamalai) ಅವರು ಮಾಡುತ್ತಿರುವ ಟೀಕೆಗಳಿಂದ ಬೇಸತ್ತಿರುವ ಎಐಎಡಿಎಂಕೆಯನ್ನು ಮೈತ್ರಿಯನ್ನು ಮುಂದುವರಿಸದಿರಲು ನಿರ್ಧರಿಸಿದೆ. ಈ ವಿಷಯವನ್ನು ಸ್ವತಃ ಎಐಎಡಿಎಂಕೆಯ ಹಿರಿಯ ನಾಯಕ ಡಿ ಜಯಕುಮಾರ್ ಅವರು ಒಂದು ವಾರದ ಹಿಂದೆ ತಿಳಿಸಿದ್ದರು.

ತಮಿಳುನಾಡಿನ ಹಿರಿಯ ನಾಯಕ ಅಣ್ಣಾದೊರೈ, ಸಮಾಜ ಸುಧಾರಕ ಪೆರಿಯಾರ್ ಮತ್ತು ಎಐಎಡಿಎಂಕೆ ಸಂಸ್ಥಾಪಕ ಎಂಜಿಆರ್ ಅವರ ಕುರಿತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಆ ಕಾರಣಕ್ಕಾಗಿಯೇ ನಾವು ಅವರ(ಬಿಜೆಪಿ) ಜತೆ ಹೋಗದಿರಲು ನಿರ್ಧರಿಸಿದ್ದೇವೆ. ಸದ್ಯಕ್ಕಂತೂ ಮೈತ್ರಿ ಖತಂ ಆಗಿದೆ. ಚುನಾವಣೆ ಸಂದರ್ಭದಲ್ಲಿ ಈ ಬಗ್ಗೆ ಯೋಚಿಸೋಣ ಎಂದು ಎಐಎಡಿಎಂಕೆ ನಾಯಕ ಡಿ ಜಯಕುಮಾರ್ ಅವರು ಹೇಳಿದ್ದರು.

ಈ ಸುದ್ದಿಯನ್ನೂ ಓದಿ: BJP Politics : ನಾಗಲ್ಯಾಂಡ್, ಮೇಘಾಲಯ, ಪುದುಚೇರಿ ರಾಜ್ಯಗಳಿಗೆ ಬಿಜೆಪಿ ಅಧ್ಯಕ್ಷರ ನೇಮಕ! ಕರ್ನಾಟಕಕ್ಕೆ ಯಾವಾಗ?

ಅಣ್ಣಾಮಲೈ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಲು ಅಯೋಗ್ಯರಾಗಿದ್ದಾರೆ. ಅವರು ತಮ್ಮನ್ನ ತಾವು ಪ್ರೊಜೆಕ್ಟ್ ಮಾಡಿಕೊಳ್ಳಲು ತಮಿಳುನಾಡಿನ ಹಿರಿಯ ನಾಯಕರನ್ನು ಹೀಯಾಳಿಸುತ್ತಿದ್ದಾರೆ ಎಂದು ಎಐಎಡಿಎಂಕೆ ಜಯಕುಮಾರ್ ಅವರು ಹೇಳಿದ್ದರು.

ಈ ಹಿಂದೆ, ಪಕ್ಷದ ಧೀಮಂತ ನಾಯಕಿ ಜಯಲಲಿತಾ ಅವರ ಕುರಿತು ಅಣ್ಣಾಮಲೈ ಅವರು ಟೀಕೆ ಮಾಡಿದ್ದರು. ಎಐಎಡಿಎಂಕೆ ಕುರಿತು ಟೀಕೆಗಳನ್ನು ಮಾಡದಂತೆ ಅಣ್ಣಾಮಲೈ ಅವರನ್ನು ನಿರ್ಬಂಧಿಸಬೇಕು ಎಂದು ಎಐಎಡಿಎಂಕೆ ನಾಯಕರು ಬಿಜೆಪಿಯ ಹಿರಿಯ ನಾಯಕರಿಗೆ ಕೋರಿದ್ದರು. ನಮ್ಮ ಪಕ್ಷದ ಮಾಜಿ ಮುಖ್ಯಮಂತ್ರಿಗಳನ್ನು ಹೀಯಾಳಿಸುವುದನ್ನು ಪಕ್ಷದ ಕಾರ್ಯಕರ್ತರು ಇನ್ನು ಸಹಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

Lok Sabha Election 2024: ಬಿಹಾರದ ಗೋಪಾಲ್‌ಗಂಜ್‌ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಸತ್ಯೇಂದ್ರ ಬೈಥಾ ಚುನಾವಣಾ ಪ್ರಚಾರಕ್ಕೆ ಕತ್ತೆ ಮೇಲೆ ತೆರಳುವ ಮೂಲಕ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆಗೂ ಕತ್ತೆ ಮೇಲೆಯೇ ತೆರಳಿದ್ದರು. ಸತ್ಯೇಂದ್ರ ಬೈಥಾ ಆಗಮಿಸುತ್ತಿದ್ದಂತೆ ಅನೇಕರು ಮನೆಯಿಂದ ಹೊರಗೆ ಬಂದು ಅವರ ಜತೆ ಫೋಟೊ ಕ್ಲಿಕ್ಕಿಸುತ್ತಿದ್ದಾರೆ.

VISTARANEWS.COM


on

Lok Sabha Election 2024
Koo

ಪಟನಾ: ಲೋಕಸಭಾ ಚುನಾವಣೆಯ (Lok Sabha Election 2024) 4 ಹಂತಗಳ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಇನ್ನುಳಿದ 3 ಹಂತಗಳಿಗೆ ಭರದ ಸಿದ್ದತೆ ನಡೆಯುತ್ತಿದೆ. ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಕೆ, ಪ್ರಚಾರದ ಭರಾಟೆಯಲ್ಲಿ ನಿರತರಾಗಿದ್ದಾರೆ. ಕೆಲವು ಕ್ಷೇತ್ರಗಳು ಘಟಾನುಘಟಿ ಸ್ಪರ್ಧಿಗಳ ಕಾರಣದಿಂದ ದೇಶದ ಗಮನ ಸೆಳೆದರೆ, ಇನ್ನು ಹಲವೆಡೆ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ವಿಭಿನ್ನ ಕಸರತ್ತು ನಡೆಸಿ ಸುದ್ದಿಯಾಗುತ್ತಿದ್ದಾರೆ. ಇದೇ ರೀತಿ ಇಲ್ಲಿಯೊಬ್ಬರು ಸ್ಪರ್ಧಿ ತಮ್ಮ ವಿಶಿಷ್ಟ ಪ್ರಚಾರದಿಂದ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕತ್ತೆ ಮೇಲೆ ತೆರಳುವ ಮೂಲಕ ಬಿಹಾರದ ಸ್ವತಂತ್ರ ಅಭ್ಯರ್ಥಿಯೊಬ್ಬರು ಇಡೀ ದೇಶವೇ ತಮ್ಮ ತಿರುಗಿ ನೋಡುವಂತೆ ಮಾಡಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಬಿಹಾರದ ಗೋಪಾಲ್‌ಗಂಜ್‌ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಸತ್ಯೇಂದ್ರ ಬೈಥಾ ಈ ರೀತಿ ಗಮನ ಸೆಳೆದವರು. ಗೋಪಾಲ್‌ಗಂಜ್‌ ಶ್ಯಾಮ್‌ಪುರ ನಿವಾಸಿಯಾದ ಅವರು ಚುನಾವಣಾ ಪ್ರಚಾರ ಮಾತ್ರವಲ್ಲ ನಾಮಪತ್ರ ಸಲ್ಲಿಕೆಗೂ ಕತ್ತೆ ಮೇಲೆಯೇ ತೆರಳಿದ್ದರು. ಸದ್ಯ ಅವರು ನಾಮಪತ್ರ ಸಲ್ಲಿಕೆಗೆ ಕತ್ತೆ ಮೇಲೆ ಮೆರವಣಿಗೆ ಮೂಲಕ ಸಾಗುತ್ತಿರುವ ವಿಡಿಯೊ ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಸತ್ಯೇಂದ್ರ ಬೈಥಾ ಹೇಳೋದೇನು?

ಹೊಸ ರೀತಿಯ ಪ್ರಚಾರ ಶೈಲಿಯ ಬಗ್ಗೆ ಮಾತನಾಡುವ ಸತ್ಯೇಂದ್ರ ಬೈಥಾ, ʼʼದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಾಗಿದೆ. ಹೀಗಾಗಿ ದುಬಾರಿ ಹಣ ಪಾವತಿಸಿ ನನ್ನಂತಹ ಅದೆಷ್ಟೋ ಜನರಿಗೆ ವಾಹನದಲ್ಲಿ ಸಂಚರಿಸಲು ಕಷ್ಟವಾಗುತ್ತಿದೆ. ಹೀಗಾಗಿ ಕತ್ತೆ ಮೇಲೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ನಿರ್ಧರಿಸಿದ್ದೇನೆ ನಾಮಪತ್ರ ಸಲ್ಲಿಕೆಗೂ ನಾನು ಕತ್ತೆ ಮೇಲೆಯೇ ತೆರಳಿದ್ದೆʼʼ ಎಂದು ಅವರು ವಿವರಿಸಿದ್ದಾರೆ. ಸತ್ಯೇಂದ್ರ ಬೈಥಾ ಆಗಮಿಸುತ್ತಿದ್ದಂತೆ ಅನೇಕರು ಮನೆಯಿಂದ ಹೊರಗೆ ಬಂದು ಅವರ ಜತೆ ಫೋಟೊ ಕ್ಲಿಕ್ಕಿಸುತ್ತಿದ್ದಾರೆ.

ಭರವಸೆ

ಒಂದು ವೇಳೆ ಚುನಾವಣೆಯಲ್ಲಿ ಗೆದ್ದರೆ ಜನರಿಗಾಗಿ ಯಾವೆಲ್ಲ ಕೆಲಸಗಳನ್ನು ಮಾಡ ಬಯಸುತ್ತೀರಿ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ʼʼಜಿಲ್ಲೆಯಲ್ಲಿ ಸಕ್ಕರೆ ಖಾರ್ಖಾನೆ ಮತ್ತು ವಿಶ್ವ ವಿದ್ಯಾನಿಲಯ ತೆರೆಯಲು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುತ್ತೇನೆ. ಶುಚಿತ್ವಕ್ಕೂ ನಾನು ಒತ್ತು ಕೊಡುತ್ತೇನೆ. ಈ ಹಿಂದೆ ಅನೇಕ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದ ನಂತರ ಐದು ವರ್ಷಗಳ ಕಾಲ ಜಿಲ್ಲೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಅವರು ದೆಹಲಿ ಅಥವಾ ಪಾಟನಾದಲ್ಲಿ ವಾಸಿಸುತ್ತಿದ್ದರು. ಆದರೆ ನಾನು ಹಾಗಲ್ಲ. ನಾನು ಸ್ಥಳೀಯ ನಿವಾಸಿಯಾಗಿದ್ದು, ಸಾರ್ವಜನಿಕರಿಗೆ ದಿನದ 24 ಗಂಟೆಯೂ ಲಭ್ಯವಿರಲಿದ್ದೇನೆʼʼ ಎಂದು ಭರವಸೆ ನೀಡಿದ್ದಾರೆ.

ನೆಟ್ಟಿಗರ ಪ್ರತಿಕ್ರಿಯೆ

ಇನ್ನು ಕತ್ತೆ ಸವಾರಿಗೆ ನೆಟ್ಟಿಗರು ವಿದ ವಿಧವಾಗಿ ಪ್ರತಿಕ್ರಿಯಿಸಿದ್ದಾರೆ. ʼʼಇದು ಬಹಳ ಮಜವಾಗಿದೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಪಾಪದ ಪ್ರಾಣಿಗೆ ಈ ರೀತಿಯ ಹಿಂಸೆ ನೀಡುತ್ತಿರುವುದು ಎಷ್ಟು ಸರಿ?ʼʼ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ. ʼʼಈ ರೀತಿ ಪ್ರಾಣಿ ಬಳಕೆಗೆ ಅನುಮತಿ ಇದೆಯೇ?ʼʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೊ ಚರ್ಚೆ ಹುಟ್ಟು ಹಾಕಿದ್ದಂತೂ ಸತ್ಯ.

ಗೋಪಾಲ್‌ಗಂಜ್‌ನಲ್ಲಿ ಮೇ 25ರಂದು 6ನೇ ಹಂತದಲ್ಲಿ ಮತದಾನ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಅಲೋಕ್‌ ಕುಮಾರ್‌ ಸುಮನ್‌ ಮತ್ತು ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟದಿಂದ ಚಂಚಲ್‌ ಕುಮಾರ್‌ ಪಾಸ್ವಾನ್‌ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

Continue Reading

ಅಂಕಣ

ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

ರಾಜಮಾರ್ಗ ಅಂಕಣ: ಅದು 1984ರಲ್ಲಿ ಮುಂಬೈಯಲ್ಲಿ ಜನ್ಮ ತಾಳಿದ ಮತ್ತು ಇಂದು ಭಾರತದ ನೂರಾರು ನಗರಗಳಿಗೆ ವಿಸ್ತರಿಸಿರುವ ಭಾರತದ ಟಾಪ್ ಮೋಸ್ಟ್ ಐಸ್ ಕ್ರೀಮ್ ಬ್ರಾಂಡ್ ಬೆಳೆದು ನಿಂತ ಕಥೆ ತುಂಬಾ ರೋಚಕ. ಅದರ ಹಿಂದಿರುವ ವಿಶನರಿ ಒಬ್ಬ ಹಣ್ಣಿನ ವ್ಯಾಪಾರಿಯ ಮಗ. ಅವರು ಮೂಲತಃ ಮುಲ್ಕಿಯವರು. ಹೆಸರು ರಘುನಂದನ್ ಶ್ರೀನಿವಾಸ್ ಕಾಮತ್.

VISTARANEWS.COM


on

natural ice cream 1 rajamarga coumn
Koo

ಮಂಗಳೂರಿನ ಒಬ್ಬ ಸಾಮಾನ್ಯ ಹಣ್ಣಿನ ವ್ಯಾಪಾರಿಯ ಮಗ 300 ಕೋಟಿ ರೂ. ವಾರ್ಷಿಕ ಆದಾಯದ ಕಂಪೆನಿಯನ್ನು ಕಟ್ಟಿದ ಕಥೆ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ʼನ್ಯಾಚುರಲ್ ಐಸ್ ಕ್ರೀಮ್’ (ಣಾಇಂದು ಯಾರಿಗೆ ಗೊತ್ತಿಲ್ಲ ಹೇಳಿ? ವೆನಿಲ್ಲಾ, ಸ್ಟ್ರಾಬೆರಿ, ಚಾಕೊಲೇಟ್ ಮೊದಲಾದ ಕೃತಕ ಫ್ಲೇವರಗಳ ಈ ಕಾಲದಲ್ಲಿ ತಾಜಾ ಹಣ್ಣುಗಳ ರುಚಿ ರುಚಿಯಾದ ತಿರುಳನ್ನು ಬೆರೆಸಿ ತಯಾರಿಸಿರುವ ಸ್ವಾದಿಷ್ಟವಾದ ಐಸ್ ಕ್ರೀಂ ಯಾರಿಗೆ ಇಷ್ಟ ಆಗೋದಿಲ್ಲ ಹೇಳಿ?

ಅದು 1984ರಲ್ಲಿ ಮುಂಬೈಯಲ್ಲಿ ಜನ್ಮ ತಾಳಿದ ಮತ್ತು ಇಂದು ಭಾರತದ ನೂರಾರು ನಗರಗಳಿಗೆ ವಿಸ್ತರಿಸಿರುವ ಭಾರತದ ಟಾಪ್ ಮೋಸ್ಟ್ ಐಸ್ ಕ್ರೀಮ್ ಬ್ರಾಂಡ್ ಬೆಳೆದು ನಿಂತ ಕಥೆ ತುಂಬಾ ರೋಚಕ. ಅದರ ಹಿಂದಿರುವ ವಿಶನರಿ ಒಬ್ಬ ಹಣ್ಣಿನ ವ್ಯಾಪಾರಿಯ ಮಗ. ಅವರು ಮೂಲತಃ ಮುಲ್ಕಿಯವರು. ಹೆಸರು ರಘುನಂದನ್ ಶ್ರೀನಿವಾಸ್ ಕಾಮತ್.

15ನೆಯ ವರ್ಷಕ್ಕೆ ಮುಂಬೈಗೆ ಹೊರಟರು

ಅವರ ತಂದೆ ಮೂಲ್ಕಿಯಲ್ಲಿ ಒಬ್ಬ ಸಣ್ಣ ಹಣ್ಣಿನ ವ್ಯಾಪಾರಿ ಆಗಿದ್ದರು. ಈ ಹುಡುಗ ರಘುನಂದನ್ ಕಾಮತ್ ಮನೆಯ ಏಳು ಮಂದಿ ಮಕ್ಕಳಲ್ಲಿ ಅತ್ಯಂತ ಕಿರಿಯರು. ಹುಟ್ಟಿದ್ದು 1954ರಲ್ಲಿ. ಮನೆಯಲ್ಲಿ ತೀವ್ರ ಬಡತನ ಇದ್ದ ಕಾರಣ ಶಿಕ್ಷಣ ಅರ್ಧಕ್ಕೆ ನಿಂತಿತು. ಅಪ್ಪನ ಜೊತೆ ಹೋಗಿ ಹಣ್ಣುಗಳನ್ನು ಕಿತ್ತು ತರುವುದು, ಒಳ್ಳೆಯ ಹಣ್ಣುಗಳನ್ನು ಆಯುವುದು ಅವರ ಕೆಲಸ. ಮುಂದೆ ಹಸಿವು ತಡೆಯಲು ಕಷ್ಟ ಆದಾಗ ಹದಿನೈದನೇ ವರ್ಷಕ್ಕೇ ಮುಂಬೈಗೆ ಪ್ರಯಾಣ ಬೆಳೆಸಿದರು.

ಅಲ್ಲಿ ಅವರ ಅಣ್ಣನ ಸಣ್ಣ ಹೋಟೆಲು ಇತ್ತು. ಅಲ್ಲಿ ಕೆಲಸ ಮಾಡುತ್ತ ರಘುನಂದನ್ ಹೋಟೆಲ್ ಕೆಲಸ ಕಲಿತರು. ಅಣ್ಣನ ಹೋಟೆಲಿನಲ್ಲಿ ವಿವಿಧ ಕಂಪೆನಿಯ ಐಸ್ ಕ್ರೀಮ್ ದೊರೆಯುತ್ತಿದ್ದವು. ಅವುಗಳೆಲ್ಲವೂ ಕೃತಕವಾದ ಫ್ಲೇವರ್ ಹೊಂದಿದ್ದವು. ನಾವ್ಯಾಕೆ ತಾಜಾ ಹಣ್ಣಿನ ತಿರುಳು ಇರುವ ಐಸ್ ಕ್ರೀಂ ಮಾಡಬಾರದು? ಎಂಬ ಯೋಚನೆಯು ಅವರ ಪುಟ್ಟ ಮೆದುಳಿಗೆ ಬಂದಿತು. ಅದನ್ನು ಅವರ ತನ್ನ ಅಣ್ಣನ ಜೊತೆಗೆ ಚರ್ಚೆ ಮಾಡಿದಾಗ ಅಣ್ಣ ರಿಸ್ಕ್ ತೆಗೆದುಕೊಳ್ಳಲು ಒಪ್ಪಲಿಲ್ಲ. ಬಂಡವಾಳ ಹಾಕೋದು ಸಾಧ್ಯವೇ ಇಲ್ಲ ಎಂದು ಬಿಟ್ಟರು. ಆದರೆ ರಘುನಂದನ್ ಕನಸು ಸಾಯಲೇ ಇಲ್ಲ.

1983ರಲ್ಲಿ ಜುಹೂನಲ್ಲಿ ಅವರ ಒಂದು ಸಣ್ಣ ಹೋಟೆಲು ಆರಂಭ ಮಾಡಿದರು.

ರಘುನಂದನ್ ಆರಂಭ ಮಾಡಿದ 200 ಚದರಡಿ ಜಾಗದ ಉಸಿರು ಕಟ್ಟುವ ಸಣ್ಣ ಹೋಟೆಲು ಅದು. ನಾಲ್ಕು ಜನ ಕೆಲಸದವರು. ಒಟ್ಟು ಆರು ಟೇಬಲಗಳು. ಪಾವ್ ಬಾಜಿ ಮತ್ತು ಕೆಲವೇ ಕೆಲವು ತಾಜಾ ಹಣ್ಣಿನ ಐಸ್ ಕ್ರೀಂ ತಯಾರಿಸಿ ಗ್ರಾಹಕರ ಮುಂದೆ ಅವರು ಇರಿಸಿದರು. ಆರಂಭದಲ್ಲಿ ಅನಾನಸು, ದ್ರಾಕ್ಷಿ, ಪಪ್ಪಾಯ, ಚಿಕ್ಕು, ಸೀಬೆ, ಮಾವು, ದಾಳಿಂಬೆ ಮೊದಲಾದ ಹಣ್ಣುಗಳ ಐಸ್ ಕ್ರೀಮ್ ರೆಡಿ ಆದವು.

ಮುಂಬೈಯ ಗ್ರಾಹಕರಿಗೆ ಈ ನ್ಯಾಚುರಲ್ ಐಸ್ ಕ್ರೀಂ ಭಾರೀ ಇಷ್ಟ ಆಯ್ತು. ಜನರು ಕ್ಯೂ ನಿಂತು ಐಸ್ ಕ್ರೀಮ್ ಚಪ್ಪರಿಸಿ ತಿಂದರು. ಜುಹೂ ನಗರದ ರಸ್ತೆಗಳಲ್ಲಿ ಇವರ ಕ್ರೀಮ್ ಪಾರ್ಲರ್ ಕಾರಣಕ್ಕೆ ಟ್ರಾಫಿಕ್ ಜಾಮ್ ಆಯಿತು! ಒಂದು ವರ್ಷ ಮುಗಿಯುವುದರ ಒಳಗೆ ಹತ್ತು ಹಣ್ಣಿನ ತಿರುಳು ಇರುವ ಐಸ್ ಕ್ರೀಮಗಳನ್ನು ಅವರು ರೆಡಿ ಮಾಡಿದ್ದರು. ಜನರಿಗೆ ತುಂಬಾ ತಾಜಾ ಆದ ಹಾಗೂ ಸ್ವಾದಿಷ್ಟತೆ ಇರುವ ಈ ಹಣ್ಣುಗಳ ಐಸ್ ಕ್ರೀಂ ರುಚಿ ತುಂಬಾನೇ ಇಷ್ಟ ಆಯ್ತು. ಕ್ರಮೇಣ ಪಾವ್ ಭಾಜಿ ನಿಲ್ಲಿಸಿ ಅವರು ಐಸ್ ಕ್ರೀಂ ಕಾರ್ನರ್ ಮಾತ್ರ ಮುಂದುವರೆಸಿದರು.

ನ್ಯಾಚುರಲ್ ಐಸ್ ಕ್ರೀಮ್ ಅಂದರೆ ರಾಜಿಯೇ ಇಲ್ಲದ ಗುಣಮಟ್ಟ ಮತ್ತು ಸ್ವಾದ

ರಘುನಂದನ್ ಕಾಮತ್ ಅವರ ದಣಿವರಿಯದ ಅದ್ಭುತ ಉತ್ಸಾಹ, ಸಂಶೋಧನಾ ಪ್ರವೃತ್ತಿ, ಗ್ರಾಹಕರ ಅಭಿರುಚಿ ರೀಡ್ ಮಾಡುವ ಕೌಶಲ ಮತ್ತು ಗುಣಮಟ್ಟ ಕಾಪಾಡುವ ಆಸ್ತೆ………ಇವುಗಳಿಂದ NATURALS ICE CREAM ಮುಂಬೈ ಮಹಾನಗರದ ಭಾರೀ ದೊಡ್ಡ ಬ್ರಾಂಡ್ ಆಗಿ ಬೆಳೆಯಲು ಹೆಚ್ಚು ವರ್ಷ ಬೇಕಾಗಲಿಲ್ಲ. Taste the original ಅನ್ನುವುದು ಅದರ ಟ್ಯಾಗ್ ಲೈನ್ ಆಗಿತ್ತು.

ಕೇವಲ ಹತ್ತು ವರ್ಷಗಳ ಅವಧಿಯಲ್ಲಿ ಮುಂಬೈಯಲ್ಲಿ ಐದು ಸುಸಜ್ಜಿತ ಕ್ರೀಮ್ ಪಾರ್ಲರ್ ಉದ್ಘಾಟನೆ ಆದವು. ಪೇರಳೆ, ಸೀಯಾಳ, ಹಲಸಿನ ಹಣ್ಣು, ಮಸ್ಕ್ ಮೇಲನ್, ಕಲ್ಲಂಗಡಿ, ಮಾವಿನ ಹಣ್ಣು, ಲಿಚ್ಚಿ, ಫಿಗ್, ಸೀತಾ ಫಲ, ಜಾಮೂನ್, ತಾಳೆ ಹಣ್ಣು, ನೇರಳೆ ಹಣ್ಣುಗಳ ಐಸ್ ಕ್ರೀಂಗಳು ಭಾರೀ ಜನಪ್ರಿಯವಾದವು.

ಜಾಹೀರಾತಿಗೆ ವಿನಿಯೋಗ ಮಾಡಿದ್ದು 1% ದುಡ್ಡು ಮಾತ್ರ!

ಪಾರ್ಲರಗಳಲ್ಲಿ ಗ್ರಾಹಕರ ಅಭಿರುಚಿಗೆ ಅನುಗುಣವಾದ ವಾತಾವರಣವು ರೆಡಿ ಆಯ್ತು. ತರಬೇತು ಆದ ಸಿಬ್ಬಂದಿ ವರ್ಗ ಗ್ರಾಹಕರ ಸೇವೆಗೆ ಸಿದ್ಧವಾಯಿತು. ಗುಣಮಟ್ಟ ಮತ್ತು ಸ್ವಾದ ಚೆನ್ನಾಗಿದ್ದ ಕಾರಣ ಕಾಮತರು ಕೇವಲ ಒಂದು ಶೇಕಡಾ ವ್ಯಾಪಾರದ ದುಡ್ಡನ್ನು ಜಾಹೀರಾತಿಗೆ ಖರ್ಚು ಮಾಡಿದರು. ಅವರ ಐಸ್ ಕ್ರೀಮ್ ಗೆ ಅವರೇ ಬ್ರಾಂಡ್ ರಾಯಭಾರಿ ಆದರು. ಗ್ರಾಹಕರ ಬಾಯಿಂದ ಬಾಯಿಗೆ ತಲುಪುವ ಮೆಚ್ಚುಗೆಯ ಮಾತುಗಳೇ ಕಂಪೆನಿಗೆ ಜಾಹೀರಾತು ಆದವು. ಗ್ರಾಹಕರ ವಿಶ್ವಾಸವು ಹೆಚ್ಚಿದಂತೆ ಅವರ ಐಸ್ ಕ್ರೀಂ ಬಹಳ ದೊಡ್ಡ ಬ್ರಾಂಡ್ ಆಗಿ ಬೆಳೆಯಿತು.

ನಾವೀನ್ಯತೆ, ಸಂಶೋಧನೆ ಮತ್ತು ಬ್ರಾಂಡಿಂಗ್!

ಮುಂದೆ ದೂರದ ಊರುಗಳಿಂದ ಬೇಡಿಕೆ ಬಂದಾಗ ಐಸ್ ಕ್ರೀಂ ಸಾಗಾಟವು ತೊಂದರೆ ಆಯಿತು. ಆಗ ಕಾಮತರು ವಿಶೇಷವಾದ ಥರ್ಮೋಕೊಲ್ ಪ್ಯಾಕೇಜಿಂಗ್ ಇಂಡಸ್ಟ್ರಿ ಆರಂಭ ಮಾಡಿದರು. ಅದರಿಂದ ಐಸ್ ಕ್ರೀಮನ್ನು ದೀರ್ಘ ಕಾಲಕ್ಕೆ ಕಾಪಿಡಲು ಸಾಧ್ಯ ಆಯ್ತು. ರಘುನಂದನ್ ಕಾಮತ್ ಅವರ ಉತ್ಸಾಹಕ್ಕೆ ಎಣೆಯೇ ಇರಲಿಲ್ಲ. ಅವರು ಶುದ್ಧವಾದ ಹಾಲು, ಫಾರ್ಮ್ ಫ್ರೆಶ್ ತೋಟದ ಹಣ್ಣುಗಳು ಇಡೀ ವರ್ಷ ದೊರೆಯುವಂತೆ ಮಾಡಿದರು. ಕೆಲವೇ ಕೆಲವು ಸೀಸನಲ್ ಹಣ್ಣುಗಳ ಐಸ್ ಕ್ರೀಮ್ ಕೂಡ ಸಿದ್ಧವಾಯಿತು. ಎಲ್ಲಾ ಹಣ್ಣುಗಳನ್ನು ಅವರು ರೈತರಿಂದ ನೇರ ಖರೀದಿ ಮಾಡಿದರು. ಇದೆಲ್ಲದರ ಫಲವಾಗಿ ನ್ಯಾಚುರಲ್ ಐಸ್ ಕ್ರೀಂ ಕಂಪೆನಿಯು ಮುಂಬೈ ಮಹಾನಗರದ ಹೊರಗೆ ತನ್ನ ಶಾಖೆಗಳನ್ನು ತೆರೆಯಿತು. ಫ್ರಾಂಚೈಸಿಗಳಿಗೆ ಭಾರೀ ಬೇಡಿಕೆ ಬಂದಿತು.

ನ್ಯಾಚುರಲ್ ಐಸ್ ಕ್ರೀಂ ಬ್ರಾಂಡಿನ ಸೀಮೋಲ್ಲಂಘನ!

2015ರ ಹೊತ್ತಿಗೆ ಕಂಪೆನಿಯು 125 ಹಣ್ಣುಗಳ ತಿರುಳು ಇರುವ ಐಸ್ ಕ್ರೀಮ್ ರೆಡಿ ಮಾಡಿತು. ನೂರು ಕೋಟಿ ಟರ್ನ್ ಓವರ್ ದಾಖಲು ಮಾಡಿತು. ಭಾರತದ ನೂರಾರು ನಗರಗಳನ್ನು ತಲುಪಿತು. ಕೋಟಿ ಕೋಟಿ ಗ್ರಾಹಕರ ನಾಲಗೆಯಲ್ಲಿ ಸ್ವಾದದ ಸಿಗ್ನೇಚರ್ ಮಾಡಿ ಜನಪ್ರಿಯ ಆಯಿತು. 2020ರ ಹೊತ್ತಿಗೆ ಕಂಪೆನಿಯು ವಾರ್ಷಿಕ 330 ಕೋಟಿ ಟರ್ನ್ ಓವರ್ ದಾಖಲಿಸಿ ಭಾರೀ ದೊಡ್ಡ ದಾಖಲೆಯನ್ನು ಮಾಡಿತು. ಒಮ್ಮೆ 2009ರಲ್ಲಿ 3000 ಕಿಲೋಗ್ರಾಂ ತೂಗುವ ಒಂದೇ ಫ್ಲೇವರ್ ಇರುವ ಕ್ರೀಮ್ ಸ್ಲಾಬ್ ರೆಡಿ ಮಾಡಿ ಲಿಮ್ಕಾ ದಾಖಲೆ ಕೂಡ ಬರೆಯಿತು. ಅವರ ಸೌತೆಕಾಯೀ ತಿರುಳಿನ ಐಸ್ ಕ್ರೀಂ ರಾಷ್ಟ್ರೀಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯಿತು.

ಈಗ ನ್ಯಾಚುರಲ್ ಐಸ್ ಕ್ರೀಂಗೆ ಸ್ಪರ್ಧೆಯೇ ಇಲ್ಲ!

ಈಗ ರಘುನಂದನ್ ಕಾಮತ್ ಅವರ ಮಗ ಸಿದ್ಧಾಂತ ಕಾಮತ್ ಅಪ್ಪನ ಉದ್ಯಮದಲ್ಲಿ ಕೈ ಜೋಡಿಸಿದ್ದಾರೆ. ಭಾರತದ 150 ಮಹಾನಗರಗಳಲ್ಲಿ ಇಂದು ನ್ಯಾಚುರಲ್ ಐಸ್ ಕ್ರೀಮಿನ ಔಟ್ ಲೆಟ್ ಇವೆ. ಹನ್ನೊಂದು ರಾಜ್ಯಗಳ ಮಾರ್ಕೆಟ್ ಗೆದ್ದು ಆಗಿದೆ. ನೂರಾ ಹತ್ತೊಂಬತ್ತು ಫ್ರಾಂಚೈಸಿ ಸ್ಟೋರ್ ಇವೆ. ವಿದೇಶದ ನಗರಗಳಿಗೆ ನ್ಯಾಚುರಲ್ ಐಸ್ ಕ್ರೀಂ ತಲುಪಿಸುವ ಪ್ರಯತ್ನಗಳು ಆರಂಭ ಆಗಿವೆ. ಇಂದು ನ್ಯಾಚುರಲ್ ಐಸ್ ಕ್ರೀಂ ಭಾರತದ ಟಾಪ್ 3 ಫ್ಲೇವರಗಳಲ್ಲಿ ಸ್ಥಾನ ಪಡೆದಿದೆ! ಅದರ ಹಿಂದೆ ರಘುನಂದನ್ ಕಾಮತ್ ಎಂಬ ಉದ್ಯಮಿಯ ಪರಿಶ್ರಮ ಮತ್ತು ದುಡಿಮೆ ಇವೆ.

ಸಜ್ಜನಿಕೆಯ ಸಾಕಾರ ಮೂರ್ತಿ ಅವರು.

ಅಂತಹ ರಘುನಂದನ್ ಕಾಮತ್ ಅವರನ್ನು ಒಂದು ಸಮ್ಮೇಳನದಲ್ಲಿ ನಾನು ಭೇಟಿ ಮಾಡಿದ್ದೆ. ಅಂದು ಅವರು ಹೇಳಿದ ಮಾತು ನನಗೆ ಅದ್ಭುತವಾದ ಸ್ಫೂರ್ತಿ ನೀಡಿತ್ತು.

‘ವೆನಿಲ್ಲಾ, ಸ್ಟ್ರಾಬೆರಿ, ಚಾಕೊಲೇಟ್ ಮೊದಲಾದ ಕೃತಕ ಫ್ಲೇವರ್ ರೆಡಿ ಮಾಡಲು ನಾನು ಹೊರಟಿದ್ದರೆ ಇಷ್ಟೆಲ್ಲ ಕಷ್ಟ ಪಡುವ ಅಗತ್ಯವೇ ಇರಲಿಲ್ಲ. ಗ್ರಾಹಕರಿಗೆ ತಾಜಾ ಹಣ್ಣುಗಳ ಸ್ವಾದವನ್ನು ಐಸ್ ಕ್ರೀಂ ಮಾಧ್ಯಮದ ಮೂಲಕ ನೀಡಬೇಕು ಎಂಬುದು ನನ್ನ ಬಯಕೆ ಆಗಿತ್ತು. ಜನರಿಗೂ ಅದು ಇಷ್ಟ ಆಯ್ತು. ಇದು ನನ್ನ ಸಾಧನೆ ಏನೂ ಇಲ್ಲ. ನಾನು ನಂಬಿರುವ ದೇವರು ನನ್ನ ಕೈಯನ್ನು ಹಿಡಿದು ಮುನ್ನಡೆಸುತ್ತಿದ್ದಾರೆ’ ಎಂದಿದ್ದರು.

ಅಂತಹ ಕಾಮತರು ನಿನ್ನೆ ಮುಂಬೈಯಲ್ಲಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸು. ಸೊನ್ನೆಯಿಂದ ಉದ್ಯಮದ ಮಹಾ ಸಾಮ್ರಾಜ್ಯವನ್ನು ಕಟ್ಟಿದ ಆ ಚೇತನಕ್ಕೆ ನಮ್ಮ ಶ್ರದ್ಧಾಂಜಲಿ ಇರಲಿ.

ಭರತ ವಾಕ್ಯ

ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ ಹೆಚ್ಚಿನ ನಗರಗಳಲ್ಲಿ ನ್ಯಾಚುರಲ್ ಐಸ್ ಕ್ರೀಂ ಔಟ್‌ಲೆಟ್‌ಗಳಿವೆ. ಒಮ್ಮೆ ಭೇಟಿ ಕೊಡಿ ಮತ್ತು ತೋಟದ ಹಣ್ಣುಗಳ ಫ್ರೆಶ್ ರುಚಿ ಇರುವ ಐಸ್ ಕ್ರೀಂ ನೀವು ಸವಿದು ಇಷ್ಟಪಟ್ಟರೆ ನಮ್ಮ ರಘುನಂದನ್ ಕಾಮತ್ ಅವರಿಗೊಂದು ಶ್ರದ್ಧಾಂಜಲಿ ಹೇಳಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

Continue Reading

ಶ್ರದ್ಧಾಂಜಲಿ

Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

Raghunandan Kamath: ರಘುನಂದನ್ ಅವರ ನ್ಯಾಚುರಲ್ ಐಸ್ಕ್ರೀಂ 135ಕ್ಕೂ ಹೆಚ್ಚು ಔಟ್‌ಲೆಟ್‌ಗಳನ್ನು ಹೊಂದಿದೆ. ವಾರ್ಷಿಕವಾಗಿ 400 ಕೋಟಿ ರೂ.ಗೂ ಅಧಿಕ ವಹಿವಾಟು ನಡೆಸುತ್ತಿದೆ. ಇವರ ಕಂಪನಿ ದೇಶದ ಟಾಪ್ 10 ಕಂಪನಿಗಳಲ್ಲಿ ಒಂದಾಗಿದೆ.

VISTARANEWS.COM


on

naturals ic cream raghunandan kamath
Koo

ಮುಂಬಯಿ: ಜನಪ್ರಿಯ ನ್ಯಾಚುರಲ್ಸ್ ಬ್ರಾಂಡ್‌ ಐಸ್‌ಕ್ರೀಂ (Naturals Ice cream) ಔಟ್‌ಲೆಟ್‌ಗಳನ್ನು ದೇಶಾದ್ಯಂತ ಸ್ಥಾಪಿಸಿ ಖ್ಯಾತಿ ಗಳಿಸಿ ʼದೇಶದ ಐಸ್‌ಕ್ರೀಂ ಮ್ಯಾನ್ʼ (India’s Ice cream man) ಎಂದೇ ಖ್ಯಾತಿ ಪಡೆದಿದ್ದ ಕರ್ನಾಟಕದ ಮಂಗಳೂರು ಮೂಲದ ರಘುನಂದನ್ ಕಾಮತ್ (75) (Raghunandan Kamath) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಇವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಪತ್ನಿ, ಪುತ್ರರನ್ನು ಅಗಲಿದ್ದಾರೆ.

ಮೂಲ್ಕಿಯಲ್ಲಿ ಜನಿಸಿದ್ದ ರಘುನಂದನ್ ಅವರು ತಮ್ಮ ತಂದೆಯಿಂದ ಹಣ್ಣಿನ ವ್ಯಾಪಾರ ಹಾಗೂ ವಿವಿಧ ಹಣ್ಣುಗಳ ವಿಶಿಷ್ಟತೆಗಳನ್ನು ಚೆನ್ನಾಗಿ ಅರ್ಥ ಮಾಡಿಕೊಂಡು, ಅದನ್ನು ವಿಶಿಷ್ಟ ರೀತಿಯಲ್ಲಿ ಐಸ್‌ಕ್ರೀಂನಲ್ಲಿ ಪ್ರಯೋಗಿಸಿದರು. ಇವರು ತಮ್ಮ 14ನೇ ವಯಸ್ಸಿನಲ್ಲಿ ಶಾಲೆ ತೊರೆದು ಮುಂಬೈಗೆ ತೆರಳಿ ಅಲ್ಲಿ ಸೋದರರ ಹೋಟೆಲ್‌ನಲ್ಲಿ ಕೆಲಸ ಆರಂಭಿಸಿದ್ದರು. ಬಳಿಕ 1984ರಲ್ಲಿ ನ್ಯಾಚುರಲ್ ಐಸ್‌ಕ್ರೀಂ ಎಂಬ ಸಂಸ್ಥೆಯನ್ನು ಕೇವಲ 4 ಸಿಬ್ಬಂದಿಯೊಂದಿಗೆ ಆರಂಭಿಸಿದರು.

ಗ್ರಾಹಕರನ್ನು ತಮ್ಮತ್ತ ಸೆಳೆಯಲು ಪಾವ್ ಭಾಜಿ ಜೊತೆ ಐಸ್‌ಕ್ರೀಂ ಕೊಡಲು ಆರಂಭಿಸಿದರು. ಇದಾದ ಕೆಲವೇ ದಿನಗಳಲ್ಲಿ ಇವರ ಐಸ್‌ಕ್ರೀಂ ಜನಪ್ರಿಯತೆ ಹೆಚ್ಚಾಗಿ, ಮಾರುಕಟ್ಟೆಯಲ್ಲಿ ನ್ಯಾಚುರಲ್‌ ಐಸ್ಕ್ರೀಂ ರಾರಾಜಿಸಲು ಆರಂಭಿಸಿತು. ಇದಾದ ಮೊದಲ ವಾರದಲ್ಲಿಯೇ ಮುಂಬಯಿಯ ಜುಹೂದಲ್ಲಿದ್ದ ಅಂಗಡಿ ಒಂದೇ ವರ್ಷದಲ್ಲಿ 5 ಲಕ್ಷ ರೂ. ವಹಿವಾಟು ದಾಖಲಿಸಿತು. ಪ್ರಸ್ತುತ ರಘುನಂದನ್ ಅವರ ನ್ಯಾಚುರಲ್ ಐಸ್ಕ್ರೀಂ 135ಕ್ಕೂ ಹೆಚ್ಚು ಔಟ್‌ಲೆಟ್‌ಗಳನ್ನು ಹೊಂದಿದೆ. ವಾರ್ಷಿಕವಾಗಿ 400 ಕೋಟಿ ರೂ.ಗೂ ಅಧಿಕ ವಹಿವಾಟು ನಡೆಸುತ್ತಿದೆ. ಇವರ ಕಂಪನಿ ದೇಶದ ಟಾಪ್ 10 ಕಂಪನಿಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: HD Deve Gowda: ಈ ಅವಮಾನದಿಂದ ಪಾರು ಮಾಡು: 93ರ ಜನ್ಮದಿನಂದು ದೇವೇಗೌಡರ ಮೌನ ಪ್ರಾರ್ಥನೆ

Continue Reading

ದೇಶ

Fire Accident: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಕೊಂಡ ಬೆಂಕಿ; 10 ಮಂದಿ ಭಕ್ತರ ಸಜೀವ ದಹನ

Fire Accident: ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅವಘಡದಲ್ಲಿ 8 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್‌ಗೆ ಬೆಂಕಿ ಹತ್ತಿಕೊಂಡು ಈ ಅವಘಡ ನಡೆದಿದೆ. ಉತ್ತರ ಪ್ರದೇಶದ ಮಥುರಾ ಮತ್ತು ವೃಂದಾವನಕ್ಕೆ ತೀರ್ಥಯಾತ್ರೆಯಿಂದ ಕೈಗೊಂಡು ಹಿಂದಿರುಗುತ್ತಿದ್ದಾಗ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಭಕ್ತರು ಸುಟ್ಟು ಕರಕಲಾಗಿದ್ದಾರೆ. ಬಸ್‌ನಲ್ಲಿ ಪಂಜಾಬ್ ಮೂಲದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 60ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು.

VISTARANEWS.COM


on

Fire Accident
Koo

ಚಂಡಿಗಢ: ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅವಘಡದಲ್ಲಿ 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್‌ಗೆ ಬೆಂಕಿ ಹತ್ತಿಕೊಂಡು ಈ ಅವಘಡ ನಡೆದಿದೆ. ಉತ್ತರ ಪ್ರದೇಶದ ಮಥುರಾ ಮತ್ತು ವೃಂದಾವನಕ್ಕೆ ತೀರ್ಥಯಾತ್ರೆಯಿಂದ ಕೈಗೊಂಡು ಹಿಂದಿರುಗುತ್ತಿದ್ದಾಗ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಭಕ್ತರು ಸುಟ್ಟು ಕರಕಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ (Fire Accident).

ಬಸ್‌ನಲ್ಲಿ ಪಂಜಾಬ್ ಮೂಲದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 60ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಶನಿವಾರ ಮುಂಜಾನೆ 1.30ರ ಸುಮಾರಿಗೆ ಬಸ್‌ನ ಹಿಂಭಾಗದಲ್ಲಿ ಬೆಂಕಿಯ ಕಿಡಿ ಹತ್ತಿಕೊಂಡಿರುವುದು ಗಮನಿಸಿ ಚಾಲಕನನ್ನು ಎಚ್ಚರಿಸಲು ಪ್ರಯತ್ನಿಸಿದ್ದೆವು. ಆದರೆ ಅಷ್ಟರಲ್ಲಿ ಅವಘಡ ಸಂಭವಿಸಿತು ಎಂದು ಬದುಕುಳಿದವರು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಬೆಂಕಿಯನ್ನು ನೋಡಿದ ಬೈಕ್ ಸವಾರನೊಬ್ಬ ಬಸ್ ಅನ್ನು ಹಿಂಬಾಲಿಸಿ ನಿಲ್ಲಿಸಲು ಚಾಲಕನಿಗೆ ಎಚ್ಚರಿಕೆ ನೀಡಿದ್ದ. ಬಳಿಕ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಬಸ್‌ನ ಮುಂಭಾಗದಲ್ಲಿದ್ದ ಹಲವರನ್ನು ರಕ್ಷಿಸಲಾಯಿತು. ಬೆಂಕಿ ಕಾಣಿಸಿಕೊಳ್ಳಲಿರುವ ಕಾರಣ ಇನ್ನೂ ಪತ್ತೆಯಾಗಿಲ್ಲ. ಘಟನೆ ಬಗ್ಗೆ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರಕ್​ಗೆ ಬಸ್ ಡಿಕ್ಕಿ ಹೊಡೆದು ಐವರು ಸಾವು

ಜೈಪುರ: ರಾಜಸ್ಥಾನ- ಉತ್ತರ ಪ್ರದೇಶ ಮಾರ್ಗದ ಭರತ್‌ಪುರದಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಚಾಲಕನ ತಪ್ಪಿನಿಂದಾಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟ್ರಕ್ ಎರಡೂ ಜೈಪುರದಿಂದ ಆಗ್ರಾಕ್ಕೆ ಹೋಗುತ್ತಿದ್ದವು. ಟ್ರಕ್​ಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿತ್ತು.

ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ

ಕೊಪ್ಪಳ: ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಕೊಪ್ಪಳ ತಾಲೂಕಿನ‌ ನಿಂಗಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮಸ್ಥರಾದ ಬಸವರಾಜ (22), ಮುತ್ತಪ್ಪ (22), ಕೊಂಡಪ್ಪ (60) ಮೃತರು. ಹುಲಿಗೆಮ್ಮ ದೇವಸ್ಥಾನಕ್ಕೆ ಹೋಗಿ ಮರಳಿ ಊರಿಗೆ ಹೋಗುವಾಗ ದುರ್ಘಟನೆ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

ಮತ ಚಲಾಯಿಸಿ ತೆರಳುತ್ತಿದ್ದ 6 ಮಂದಿ ಸಜೀವ ದಹನ

ಅಮರಾವತಿ: ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆಯಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಹೊತ್ತಿ ಉರಿದು 6 ಮಂದಿ ಸಜೀವ ದಹನವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಲವು ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿರಾಲಾದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಅದು ಚಾಲಕನ ನಿಯಂತ್ರಣ ಕಳೆದುಕೊಂಡು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆಯಿತು. ಬಳಿಕ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ್ದು ಸಂಪೂರ್ಣವಾಗಿ ಸುಟ್ಟು ಹೋಗಿದೆ. 

ಇದನ್ನೂ ಓದಿ: Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Continue Reading
Advertisement
Singer Suchitra makes shocking aligeations against shahrukh khan
ಬಾಲಿವುಡ್8 mins ago

Singer Suchitra: ಶಾರುಖ್ – ಕರಣ್ ಸಲಿಂಗಿಗಳು ಎಂದು ಹೇಳಿ ವಿವಾದ ಸೃಷ್ಟಿಸಿದ ತಮಿಳು ಗಾಯಕಿ!

Lok Sabha Election 2024
ವೈರಲ್ ನ್ಯೂಸ್18 mins ago

Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

IPL 2024
ಕ್ರೀಡೆ19 mins ago

IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

natural ice cream 1 rajamarga coumn
ಅಂಕಣ26 mins ago

ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

naturals ic cream raghunandan kamath
ಶ್ರದ್ಧಾಂಜಲಿ52 mins ago

Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

IPL 2024
ಪ್ರಮುಖ ಸುದ್ದಿ57 mins ago

IPL 2024 : ಸಹ ಆಟಗಾರ ರೊಮಾರಿಯೊ ಶೆಫರ್ಡ್​ಗೆ ಆಟೋಗ್ರಾಫ್​ ಕೊಟ್ಟ ರೋಹಿತ್​ , ಚಿತ್ರಗಳು ಇಲ್ಲಿವೆ

Kajal Aggarwal Kannappa Movie Entry
ಟಾಲಿವುಡ್1 hour ago

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

White House
ವಿದೇಶ1 hour ago

White House: ಭಾರತದಲ್ಲಿದೆ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ: ಅಮೆರಿಕದ ಮೆಚ್ಚುಗೆ; ಮೋದಿ ನಾಯಕತ್ವಕ್ಕೂ ಸಿಕ್ತು ಶಹಬ್ಬಾಸ್‌ಗಿರಿ

IPL 2024
ಕ್ರೀಡೆ1 hour ago

IPL 2024 : ಆರ್​ಸಿಬಿ- ಚೆನ್ನೈ ಪಂದ್ಯದ ವೇಳೆ ಮಳೆ ಬಂದು ರದ್ದಾದರೆ ಮುಂದೇನಾಗುವುದು?

hd deve gowda birthday
ಪ್ರಮುಖ ಸುದ್ದಿ1 hour ago

HD Deve Gowda: ಈ ಅವಮಾನದಿಂದ ಪಾರು ಮಾಡು: 93ರ ಜನ್ಮದಿನಂದು ದೇವೇಗೌಡರ ಮೌನ ಪ್ರಾರ್ಥನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ14 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌