ಕಾಂಗ್ರೆಸ್‌ ಅಧ್ಯಕ್ಷತೆಗೆ ಇಂದು ಚುನಾವಣೆ, ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೆ ಕ್ಷಣಗಣನೆ - Vistara News

ದೇಶ

ಕಾಂಗ್ರೆಸ್‌ ಅಧ್ಯಕ್ಷತೆಗೆ ಇಂದು ಚುನಾವಣೆ, ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೆ ಕ್ಷಣಗಣನೆ

ಶತಮಾನ ದಾಟಿರುವ ಭಾರತೀಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಗಾದಿಗೆ ಇಂದು ಐದನೇ ಬಾರಿಯ ಚುನಾವಣೆ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್‌ ಸ್ಪರ್ಧಿಗಳಾಗಿದ್ದಾರೆ.

VISTARANEWS.COM


on

AICC president
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಪಕ್ಷದ (ಎಐಸಿಸಿ) ಅತ್ಯುನ್ನತ ಹುದ್ದೆಗೆ ಇಂದು ಮತದಾನ ನಡೆಯಲಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ.

ಮತದಾನಕ್ಕಾಗಿ ಕೆಪಿಸಿಸಿ ಕಚೇರಿಯಲ್ಲಿ ಒಟ್ಟು 3 ಬೂತ್ ವ್ಯವಸ್ಥೆ ಮಾಡಲಾಗಿದ್ದು, ಪ್ರದೇಶ ಚುನಾವಣಾಧಿಕಾರಿಯಾಗಿ ನಾಚಿಯಪ್ಪನ್ ನೇಮಕ ಮಾಡಲಾಗಿದೆ. ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಬಳ್ಳಾರಿಯ ಬಳ್ಳಾರಿಯ ಸಂಗನಕಲ್ಲುನಲ್ಲಿ ರಾಹುಲ್ ಮತದಾನ ಮಾಡಲಿದ್ದಾರೆ. ಅಧ್ಯಕ್ಷ ಸ್ಥಾನದ ಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿಗಳು ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ಮತದಾನ ಮಾಡಲಿದ್ದಾರೆ.

ಪ್ರದೇಶ ಕಾಂಗ್ರೆಸ್‌ ಸಮಿತಿಯ 40ಕ್ಕೂ ಅಧಿಕ ಮಂದಿ ಸದಸ್ಯರು ಭಾರತ್ ಜೋಡೋ ಯಾತ್ರೆಯಲ್ಲಿರುವುದರಿಂದ ಅವರಿಗೂ ಬಳ್ಳಾರಿಯಲ್ಲೇ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಮತದಾನಕ್ಕೆ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುತ್ತದೆ. ದೇಶಾದ್ಯಂತ ಒಟ್ಟು 9100 ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 503 ಮಂದಿ ಮತದಾನಕ್ಕೆ ಅರ್ಹರಿದ್ದಾರೆ. 479 ಪಿಸಿಸಿ ಮೆಂಬರ್ಸ್ ಹಾಗೂ ಸಿಎಲ್‌ಪಿ ವತಿಯಿಂದ 15 ಮಂದಿ, ರಾಜ್ಯವನ್ನು ಪ್ರತಿನಿಧಿಸುವ ಎಐಸಿಸಿ ಸದಸ್ಯರು ಸೇರಿದಂತೆ ಒಟ್ಟು 503 ಜನ ಮತದಾನ ಮಾಡಲಿದ್ದಾರೆ. ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ | Congress President | ಅಧ್ಯಕ್ಷ ಚುನಾವಣೆಗೆ ಮುನ್ನವೇ ಕಾಂಗ್ರೆಸ್‌ ಮಹತ್ವದ ಬದಲಾವಣೆ, ಏನದು?

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಇದು ಐದನೇ ಚುನಾವಣೆಯಾಗಿದೆ. ಮೊದಲ ಚುನಾವಣೆಯಲ್ಲಿ ಸುಭಾಸ್ ಚಂದ್ರ ಬೋಸ್ ಹಾಗೂ ಪಟ್ಟಾಭಿ ಸೀತಾರಾಮಯ್ಯ ನಡುವೆ ಪೈಪೋಟಿ ಇತ್ತು. ಸುಭಾಸ್ ಚಂದ್ರ ಬೋಸ್ ಗೆಲುವು ದಾಖಲಿಸಿದ್ದರು. 1950ರಲ್ಲಿ ನಡೆದ ಚುನಾವಣೆಯಲ್ಲಿ ಆಚಾರ್ಯ ಕೃಪಲಾನಿ ಹಾಗೂ ಪುರುಷೋತ್ತಮ ದಾಸ ಟಂಡನ್ ನಡುವೆ ಪೈಪೋಟಿಯಿತ್ತು. ಪುರುಷೋತ್ತಮ ದಾಸ ಟಂಡನ್ ಜಯ ಗಳಿಸಿದ್ದರು. 1997ರಲ್ಲಿ ಸೀತಾರಾಮ್ ಕೇಸರಿ ಗೆಲುವು ಕಂಡಿದ್ದರು. 2000ರಲ್ಲಿ ಸೋನಿಯಾ ಗಾಂಧಿ ಗೆದ್ದು ಜಿತೇಂದ್ರ ಪ್ರಸಾದ್ ಸೋಲು ಅನುಭವಿಸಿದ್ದರು.

ಪ್ರಸ್ತುತ 2022ರಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರು ನಡುವೆ ಪೈಪೋಟಿ ನಡೆದಿದೆ. ಮಲ್ಲಿಕಾರ್ಜುನ ಖರ್ಗೆಗೆ ಗಾಂಧಿ ಕುಟುಂಬದ ಬೆಂಬಲವಿದೆ. ಶಶಿ ತರೂರ್‌ಗೆ ತಮ್ಮ ರಾಜ್ಯದ ಮುಖಂಡರಿಂದಲೂ ಬೆಂಬಲ ಸಾಕಷ್ಟು ಇಲ್ಲ. ಹಾಗಾಗಿ ಬಹುತೇಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಖಚಿತ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Parliament Session: ವಕ್ಫ್ ಕಾಯ್ದೆ 1995ರ ತಿದ್ದುಪಡಿ ಮಸೂದೆ ಇಂದು ಮಂಡನೆ ಸಾಧ್ಯತೆ; ಅಧಿವೇಶನದ Live ಇಲ್ಲಿ ನೋಡಿ

Parliament Session: ಸಂಸತ್‌ನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನ ಎರಡು ದಿನಗಳ ಬಿಡುವಿನ ಬಳಿಕ ಇಂದು ಪುನರಾರಂಭವಾಗಲಿದೆ. ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಇಂದು ಸಂಸತ್‌ನಲ್ಲಿ ವಿಧೇಯಕ ಮಂಡಿಸುವ ಸಾಧ್ಯತೆ ಇದೆ. ಈಗಾಗಲೇ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಸಂಸತ್‌ನಲ್ಲಿ ಕೋಲಾಹಲ ನಡೆಯಲಿದೆ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನ (Parliament Session) ಎರಡು ದಿನಗಳ ಬಿಡುವಿನ ಬಳಿಕ ಇಂದು ಪುನರಾರಂಭವಾಗಲಿದ್ದು, ಕಾವೇರಿದ ಚರ್ಚೆಗೆ ಉಭಯ ಸದನಗಳು ಸಾಕ್ಷಿಯಾಗಲಿವೆ. ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ (Waqf Act) ತಿದ್ದುಪಡಿ ತರಲು ಮುಂದಾಗಿದ್ದು, ಇಂದು ಸಂಸತ್‌ನಲ್ಲಿ ವಿಧೇಯಕ ಮಂಡಿಸುವ ಸಾಧ್ಯತೆ ಇದೆ. ಈಗಾಗಲೇ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಸಂಸತ್‌ನಲ್ಲಿ ಕೋಲಾಹಲ ನಡೆಯಲಿದೆ.

ಜತೆಗೆ ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಧನವಿನಿಯೋಗ ಮಸೂದೆ ಮತ್ತು ಹಣಕಾಸು ಮಸೂದೆಯನ್ನು ಮಂಡಿಸಲಿದ್ದಾರೆ. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಮೀಸಲಾತಿ ನೀಡುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಪ್ರಸ್ತುತ ಗೋವಾ ವಿಧಾನಸಭೆಯಲ್ಲಿ ಎಸ್‌ಟಿ ಸಮುದಾಯಕ್ಕೆ ಯಾವುದೇ ಸ್ಥಾನಗಳನ್ನು ಕಾಯ್ದಿರಿಸಲಾಗಿಲ್ಲ.

ರಾಜ್ಯಸಭೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ತೈಲ ಕ್ಷೇತ್ರಗಳು (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆಯನ್ನು ಪರಿಚಯಿಸಲಿದ್ದಾರೆ.

ಚರ್ಚೆ ಹುಟ್ಟು ಹಾಕಿದ ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಸ್ತಾವ

ಸದ್ಯ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರದ ನಿರ್ಧಾರ ವ್ಯಾಪಕ ಚರ್ಚೆ ಹುಟ್ಟು ಹಾಕಿದೆ. ʼʼಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಕಾನೂನನ್ನು ತಿದ್ದುಪಡಿ ಮಾಡಬೇಕೆಂದು ಮುಸ್ಲಿಂ ಸಮುದಾಯದಿಂದ ಬೇಡಿಕೆಗಳು ಬಂದಿವೆ. ಪ್ರಸ್ತುತ ವಕ್ಫ್ ಮಂಡಳಿಗಳು ತೆಗೆದುಕೊಂಡ ನಿರ್ಧಾರವನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ ಎನ್ನುವ ನಿಯಮವಿದೆ. ಈಗ ತಿದ್ದುಪಡಿ ಮಸೂದೆಯು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕಾಯ್ದೆಗೆ ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ರಚನೆ

ಅದೇ ರೀತಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ (Public Accounts Committee) ಸೇರಿದಂತೆ ಪ್ರಮುಖ ಸಂಸದೀಯ ಸಮಿತಿಗಳು ರಚಿಸಲಾಗುತ್ತಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್, ಡಿಎಂಕೆ ನಾಯಕ ಟಿ.ಆರ್.ಬಾಲು, ಬಿಜೆಪಿ ಮುಖಂಡರಾದ ಅನುರಾಗ್ ಠಾಕೂರ್, ರವಿಶಂಕರ್ ಪ್ರಸಾದ್, ತೇಜಸ್ವಿ ಸೂರ್ಯ, ಟಿಎಂಸಿ ನಾಯಕ ಸೌಗತ ರೇ ಮತ್ತು ಎಸ್‌ಪಿ ಮುಖಂಡ ಧರ್ಮೇಂದ್ರ ಯಾದವ್ ಪಿಎಸಿಯ ಸದಸ್ಯರಾಗಿದ್ದಾರೆ.

ಪಿಎಸಿ ಹೊರತುಪಡಿಸಿ ಸಾರ್ವಜನಿಕ ಉದ್ಯಮಗಳ ಸಮಿತಿ, ಅಂದಾಜುಗಳ ಸಮಿತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ, ಲಾಭದಾಯಕ ಹುದ್ದೆಯ ಜಂಟಿ ಸಮಿತಿ ಮತ್ತು ಇತರ ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯನ್ನು ಚುನಾವಣೆ ಇಲ್ಲದೆ ರಚಿಸಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರದಲ್ಲೇ ಸಮಿತಿಗಳ ಅಧ್ಯಕ್ಷರನ್ನು ನಾಮನಿರ್ದೇಶನ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ: Waqf Act: ವಕ್ಫ್‌ ಮಂಡಳಿ ಪರಮಾಧಿಕಾರಕ್ಕೆ ಮೋದಿ ಮೂಗುದಾರ; ಏನೆಲ್ಲ ತಿದ್ದುಪಡಿ? 9.4 ಲಕ್ಷ ಎಕರೆ ಯಾರ ಪಾಲು?

Continue Reading

ದೇಶ

Electrocution: ಡಿಜೆ ವಾಹನಕ್ಕೆ ಹೈಟೆನ್ಷನ್‌ ವಿದ್ಯುತ್‌ ತಂತಿ ತಗುಲಿ ಆಘಾತ; 8 ಮಂದಿ ಭಕ್ತರ ಸಾವು

Electrocution: ಬಿಹಾರದ ಹಾಜಿಪುರ ಜಿಲ್ಲೆಯ ಸುಲ್ತಾನ್‌ಪುರ ಗ್ರಾಮದಲ್ಲಿ ಸೋಮವಾರ ಮುಂಜಾನೆ ಡಿಜೆ ವಾಹನಕ್ಕೆ ವಿದ್ಯುತ್‌ ತಂತಿ ತಗುಲಿ ವಿದ್ಯುದಾಘಾತದಿಂದ ಸುಮಾರು 8 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಹರಿಹರನಾಥ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರ ಮೆರವಣಿಗೆ ಸಂದರ್ಭದಲ್ಲಿ ಈ ಅವಘಡ ನಡೆದಿದೆ.

VISTARANEWS.COM


on

Electrocution
Koo

ಪಾಟ್ನಾ: ಬಿಹಾರದ ಹಾಜಿಪುರ ಜಿಲ್ಲೆಯ ಸುಲ್ತಾನ್‌ಪುರ ಗ್ರಾಮದಲ್ಲಿ ಸೋಮವಾರ ಮುಂಜಾನೆ ಡಿಜೆ ವಾಹನಕ್ಕೆ ವಿದ್ಯುತ್‌ ತಂತಿ ತಗುಲಿ ವಿದ್ಯುದಾಘಾತದಿಂದ (Electrocution) ಸುಮಾರು 8 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಹರಿಹರನಾಥ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರ ಮೆರವಣಿಗೆ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಮೃತರನ್ನು ಕನ್ವರ್‌ ಯಾತ್ರಾರ್ಥಿಗಳು ಎಂದು ಗುರುತಿಸಲಾಗಿದೆ.

ಮೃತರು ಹಾಜಿಪುರದ ಕೈಗಾರಿಕಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ಸುಲ್ತಾನ್‌ಪುರದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಹೇಗಾಯ್ತು ದುರಂತ?

ಶ್ರಾವಣ ಮಾಸದ ಹಿನ್ನಲೆಯಲ್ಲಿ ಈ ಗ್ರಾಮದ ಯುವಕರು ಪ್ರತಿ ಸೋಮವಾರ ಹರಿಹರನಾಥ ದೇವಸ್ಥಾನಕ್ಕೆ ಜಲಾಭಿಷೇಕ ಮಾಡಲು ಮೆರವಣಿಗೆ ಮೂಲಕ ತೆರಳುವುದು ವಾಡಿಕೆ. ಅದರಂತೆ ಆಗಸ್ಟ್‌ 5ರಂದೂ (ಇಂದು) ಈ ಯುವಕರ ತಂಡ ಟ್ರ್ಯಾಕ್ಟರ್‌ ಟ್ರಾಲಿಗೆ ದೊಡ್ಡ ದೊಡ್ಡ ಸೌಂಡ್‌ ಬಾಕ್ಸ್‌ ಅಳವಡಿಸಿ ಡಿಜೆ ವ್ಯವಸ್ಥೆ ಮಾಡಿದ್ದರು. ಈ ಟ್ರ್ಯಾಕ್ಟರ್‌ ಚಲಿಸುವಾಗ ರಸ್ತೆಯಲ್ಲಿದ್ದ ಹೈಟೆನ್ಷನ್‌ ತಂತಿಗೆ ತಗುಲಿ ಅಪಘಡ ಸಂಭವಿಸಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ʼʼವೈಶಾಲಿ ಜಿಲ್ಲೆಯ ಹಾಜಿಪುರ-ಜಂಡಾಹಾ ರಸ್ತೆಯ ನೈಪರ್ ಗೇಟ್ ಬಳಿಯ ಚೌಹರ್ಮಲ್ ಸ್ಥಳದಲ್ಲಿ ಈ ಅಪಘಾತ ಸಂಭವಿಸಿದೆ. ಮಾಹಿತಿ ಪಡೆದ ಪೊಲೀಸರು ಗಾಯಾಳುಗಳನ್ನು ಹಾಜಿಪುರ ಸದರ್ ಆಸ್ಪತ್ರೆಗೆ ದಾಖಲಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ. ಹಾಜಿಪುರದ ಪಹೇಲಾಜಾ ಘಾಟ್‌ನಿಂದ ಜಲಾಭಿಷೇಕಕ್ಕೆ ಅಗತ್ಯವಾದ ನೀರು ಸಂಗ್ರಹಿಸಿ ಬಾಬಾ ಹರಿಹರನಾಥ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

“ಭಕ್ತರು ಬಾಬಾ ಧಾಮ್‌ಗೆ ತೆರಳುತ್ತಿದ್ದ ಡಿಜೆ ಟ್ರಾಲಿ 11,000 ವೋಲ್ಟ್ ತಂತಿಯ ಸಂಪರ್ಕಕ್ಕೆ ಬಂದ ಕಾರಣ ಶಾಕ್‌ ಹೊಡೆದು ಎಂಟು ಜನರು ಸಾವನ್ನಪ್ಪಿದ್ದಾರೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸ್ಥಳೀಯರು ವಿದ್ಯುತ್‌ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿಸದ್ದಾರೆ. ಇಷ್ಟು ದೊಡ್ಡ ಆಘಾತ ನಡೆದರೂ ತಕ್ಷಣ ಸ್ಪಂದಿಸಲಿಲ್ಲ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಆಗಸ್ಟ್ 1ರಂದು ಜಾರ್ಖಂಡ್‌ನಲ್ಲಿಯೂ ಇದೇ ರೀತಿಯ ದುರಂತ ಸಂಭವಿಸಿತ್ತು. ಲತೇಹರ್ ಜಿಲ್ಲೆಯಲ್ಲಿ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಮಂದಿ ಕನ್ವರ್‌ ಯಾತ್ರಾರ್ಥಿಗಳು ಮೃತಪಟ್ಟಿದ್ದರು. ಮುಂಜಾನೆ 3 ಗಂಟೆ ಸುಮಾರಿಗೆ ಬಾಲುಮಠ್ ಪೊಲೀಸ್ ಠಾಣೆ ಪ್ರದೇಶದ ತಾಮ್ ತಾಮ್ ತೋಲಾ ಬಳಿ ಈ ಘಟನೆ ನಡೆದಿದ್ದು, ದಿಯೋಘರ್‌ನ ಬಾಬಾ ಬೈದ್ಯನಾಥ ದೇವಸ್ಥಾನದಿಂದ ಹಿಂದಿರುಗುತ್ತಿದ್ದಾಗ ಭಕ್ತರಿದ್ದ ವಾಹನವು ಕಂಬಕ್ಕೆ ಡಿಕ್ಕಿ ಹೊಡೆದಿತ್ತು.

ದೇಗುಲದ ಗೋಡೆ ಕುಸಿದು 9 ಮಕ್ಕಳ ದಾರುಣ ಸಾವು

ಭೋಪಾಲ್‌: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಶಾಹಪುರದ ಹರ್ದೌಲ್ ಬಾಬಾ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಈ ದಾರುಣ ಘಟನೆ ನಡೆದಿತ್ತು.

ಇದನ್ನೂ ಓದಿ: Waqf Board: ಜಾಮಾ ಮಸೀದಿ ಸೇರಿ ವಕ್ಫ್‌ ಬೋರ್ಡ್‌ಗೆ ಕಾಂಗ್ರೆಸ್‌ ನೀಡಿದ 123 ಆಸ್ತಿ ಸ್ವಾಧೀನಕ್ಕೆ ಕೇಂದ್ರ ಸರ್ಕಾರ ನಿರ್ಧಾರ!

Continue Reading

ಪ್ರಮುಖ ಸುದ್ದಿ

Court Verdict: 31 ವರ್ಷ ಲೈಂಗಿಕ ಸಂಬಂಧ, ನಂತರ ಪುರುಷನ ಮೇಲೆ ರೇಪ್ ಕೇಸ್! ನ್ಯಾಯಾಲಯ ಹೇಳಿದ್ದೇನು ನೋಡಿ

Court Verdict: 31 ವರ್ಷಗಳಿಂದ ಪುರುಷನೊಂದಿಗೆ ಒಪ್ಪಿತ ದೈಹಿಕ ಸಂಬಂಧದಲ್ಲಿದ್ದು, ನಂತರ ಆತನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ ಮಹಿಳೆಯ ದೂರನ್ನು ಬಾಂಬೇ ಹೈಕೋರ್ಟ್‌ ರದ್ದುಗೊಳಿಸಿದೆ.

VISTARANEWS.COM


on

court verdict
Koo

ಮುಂಬಯಿ: 31 ವರ್ಷಗಳಿಂದ ಪುರುಷನೊಂದಿಗೆ ಲೈಂಗಿಕ ಸಂಬಂಧ (Physical relationship) ಹೊಂದಿದ್ದು ನಂತರ ಆತನ ವಿರುದ್ಧ ರೇಪ್‌ ಕೇಸ್‌ (Physical abuse) ದಾಖಲಿಸಿದ ಮಹಿಳೆಯ ದೂರನ್ನು ಬಾಂಬೆ ಹೈಕೋರ್ಟ್ (Bombay High Court Verdict) ರದ್ದುಗೊಳಿಸಿದೆ. 73 ವರ್ಷದ ಪುರುಷನ ಈಕೆ ದೂರು ದಾಖಲಿಸಿದ್ದು, 1987ರಿಂದ 2017ರವರೆಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಳು.

ಮಹಿಳೆ 2018ರವರೆಗೆ ಯಾವುದೇ ಪ್ರಕರಣವನ್ನು ಪುರುಷನ ವಿರುದ್ಧ ದಾಖಲಿಸಿಲ್ಲ. ಆದ್ದರಿಂದ ಇದು ಒಪ್ಪಿತ ಸಂಬಂಧವಾಗಿದ್ದು, ಇಬ್ಬರ ನಡುವಿನ ಸಂಬಂಧ ಹಳಸಿದಾಗ ದೂರು ದಾಖಲಿಸುವಂತಹ ಪ್ರಕರಣ ಇದಾಗಿದೆ ಎಂದು ನ್ಯಾಯಾಲಯ ಹೇಳಿದೆ. ವರದಿಗಳ ಪ್ರಕಾರ ಮಹಿಳೆ 1987ರಿಂದ ಪುರುಷನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಆ ಸಮಯದಲ್ಲಿ, ಪುರುಷನು ಬಲವಂತವಾಗಿ ಲೈಂಗಿಕ ಸಂಬಂಧ ಹೊಂದುವುದಾಗಿ ಮಹಿಳೆಗೆ ಒತ್ತಡ ಹಾಕಿದ್ದ ಎನ್ನಲಾಗಿದೆ.

ಎಫ್‌ಐಆರ್‌ನ ಪ್ರಕಾರ, 1987ರಿಂದ 2017 ರವರೆಗೆ ಕಲ್ಯಾಣ್, ಭಿವಂಡಿ ಮತ್ತು ಇತರ ಸ್ಥಳಗಳ ವಿವಿಧ ಹೋಟೆಲ್‌ಗಳಲ್ಲಿ 31 ವರ್ಷಗಳ ಕಾಲ ಪುರುಷ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈಗಾಗಲೇ ಮದುವೆಯಾಗಿದ್ದ ಪುರುಷ, ಮಹಿಳೆಯನ್ನು ತನ್ನ ಎರಡನೇ ಹೆಂಡತಿ ಎಂದು ಘೋಷಣೆ ಮಾಡಿ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದನಂತೆ. 1993 ರಲ್ಲಿ ಅವಳ ಕುತ್ತಿಗೆಗೆ ಮಂಗಳಸೂತ್ರ ಕಟ್ಟಿದ್ದನಂತೆ. ಈ ಭರವಸೆಗಳೊಂದಿಗೆ ಆತ ಮಹಿಳೆಯನ್ನು ಬೇರೆಯವರೊಂದಿಗೆ ಮದುವೆಯಾಗದಂತೆ ತಡೆದಿದ್ದನಂತೆ.

1996 ರಲ್ಲಿ ಪುರುಷನಿಗೆ ಹೃದಯಾಘಾತವಾದ ನಂತರ ಮಹಿಳೆ ಆತನ ಕಂಪನಿಯನ್ನು ನೋಡಿಕೊಳ್ಳಲು ಪ್ರಾರಂಭಿಸಿದಳು. ಆದರೆ ನಂತರ ಸೆಪ್ಟೆಂಬರ್ 2017 ರಲ್ಲಿ ಮಹಿಳೆಯ ತಾಯಿಗೆ ಕ್ಯಾನ್ಸರ್ ಪತ್ತೆಯಾಗಿದ್ದರಿಂದ ಮಹಿಳೆ ತನ್ನ ಕೆಲಸಕ್ಕೆ ರಜೆ ಹಾಕಿದಳು. ಕಂಪನಿಗೆ ವಾಪಸ್ ಬಂದಾಗ ಕಂಪನಿ ಸೇರಿದಂತೆ ಕಚೇರಿ ಬಂದ್ ಆಗಿದ್ದನ್ನ ತಿಳಿದುಕೊಂಡಳಂತೆ. ಈ ವೇಳೆ ಆಕೆ ಕಂಪನಿ ಮಾಲೀಕನನ್ನು ಸಂಪರ್ಕಿಸಿದಾಗ ಆತ ಅವಳನ್ನು ಮದುವೆಯಾಗಲು ಮತ್ತು ಭೇಟಿಯಾಗಲು ನಿರಾಕರಿಸಿದನಂತೆ. ಜೊತೆಗೆ ಬ್ಯಾಂಕಿಂಗ್, ಆದಾಯ ತೆರಿಗೆ, ಕಂಪನಿಗೆ ಸಂಬಂಧಿಸಿದ ಒಪ್ಪಂದ ಮತ್ತು ಚಿನ್ನದ ಮಂಗಳಸೂತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳಲು ನಿರಾಕರಿಸಿದನಂತೆ.

ಮಹಿಳೆಯ ಆರೋಪಗಳನ್ನು ಕೇಳಿದ ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ನೀಲಾ ಗೋಖಲೆ ನೇತೃತ್ವದ ನ್ಯಾಯಾಲಯವು ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಲು ನಿರಾಕರಿಸಿತು. ಪ್ರಕರಣವು ಒಮ್ಮತದ ಸಂಬಂಧವನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಕಕ್ಷಿದಾರರು 31 ವರ್ಷಗಳಿಂದ ಲೈಂಗಿಕ ಸಂಬಂಧದಲ್ಲಿ ತೊಡಗಿದ್ದರು. ಆದರೂ 31 ವರ್ಷದ ನಡುವೆ ಈ ಸಂಬಂಧಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ. ಇದೀಗ ಕಕ್ಷಿದಾರರ ನಡುವಿನ ಸಂಬಂಧವು ಹಳಸಿದ್ದು ಇದೇ ಕಾರಣದಿಂದ ಪೊಲೀಸ್ ದೂರು ದಾಖಲಿಸಿರುವಂತಹ ಪ್ರಕರಣ ಇದಾಗಿದೆ ಎಂದು ಹೇಳಿದರು.

ಮಹಿಳೆ ವಿದ್ಯಾವಂತಳಾಗಿದ್ದು, ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಎರಡನೇ ಮದುವೆ ಕಾನೂನುಬಾಹಿರವಾಗಿದ್ದರೂ ಎರಡನೇ ಮದುವೆಯ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ. ವಿಚ್ಛೇದನ ಅಂಗೀಕಾರವಾಗುವವರೆಗೆ ಎರಡನೇ ಮದುವೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿದಿದ್ದರೂ ಮಹಿಳೆ ಎರಡನೇ ಮದುವೆಯ ಭರವಸೆಯನ್ನು ಒಪ್ಪಿಕೊಂಡಿದ್ದಾಳೆ ಎಂದು ಎಫ್‌ಐಆರ್ ಸೂಚಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದರು.

ಅಲ್ಲದೇ ಪುರುಷ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡಿ ನಿನ್ನನ್ನು ಮದುವೆಯಾಗುತ್ತೇನೆಂದು ಮಹಿಳೆಗೆ ಭರವಸೆ ನೀಡಿದ್ದನೆಂಬ ಬಗ್ಗೆಯೂ ದೂರಿನಲ್ಲಿ ಉಲ್ಲೇಖವಾಗಿಲ್ಲ. 31 ವರ್ಷದಲ್ಲಿ ಮಹಿಳೆ ಪುರುಷನ ಸಂಬಂಧದಿಂದ ಹಿಂದೆ ಸರಿಯುವ ಅಥವಾ ದೂರು ನೀಡುವ ಅವಕಾಶವಿದ್ದರೂ ಆಕೆ ಅಂತಹ ಕೆಲಸ ಮಾಡಿಲ್ಲ ಎಂದು ಹೇಳಿದ ನ್ಯಾಯಾಲಯವು ಪ್ರಕರಣವನ್ನು ರದ್ದುಗೊಳಿಸಿತು.

ಇದನ್ನೂ ಓದಿ: ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

Continue Reading

ಕ್ರೀಡೆ

Independence Day 2024: ಸ್ವಾತಂತ್ರ್ಯಪೂರ್ವದಲ್ಲಿ ಭಾರತದ ಎದುರು ಸೋಲುವ ಭಯ; ಹಾಕಿ ತಂಡವನ್ನೇ ಒಲಿಂಪಿಕ್ಸ್‌ಗೆ ಕಳುಹಿಸಿರಲಿಲ್ಲ ಗ್ರೇಟ್‌ ಬ್ರಿಟನ್‌!

Independence Day 2024: ಸ್ವಾತಂತ್ರ್ಯ ಪೂರ್ವದಲ್ಲಿ, ಹಾಲಿ ಹಾಕಿ ಚಾಂಪಿಯನ್‌ ಆಗಿದ್ದ ಗ್ರೇಟ್‌ ಬ್ರಿಟನ್‌ 1928, 1932 ಮತ್ತು 1936ರಲ್ಲಿ ಧ್ಯಾನ್‌ ಚಂದ್‌ ನೇತೃತ್ವದ ಭಾರತೀಯ ಹಾಕಿ ತಂಡದ ಎದುರು ಸೋತು ಅವಮಾನ ಅನುಭವಿಸುವ ಭಯದಿಂದ ತನ್ನ ತಂಡವನ್ನೇ ಒಲಿಂಪಿಕ್ಸ್‌ಗೆ ಕಳುಹಿಸಲಿಲ್ಲ! ತನ್ನ ವಸಾಹತು ದೇಶವಾದ ಭಾರತದ ಎದುರು ಸೋತರೆ ಪ್ರತಿಷ್ಠೆಗೆ ಧಕ್ಕೆ ಆಗುತ್ತದೆ ಎನ್ನುವುದು ಬ್ರಿಟಿಷರ ಲೆಕ್ಕಾಚಾರವಾಗಿತ್ತು. ಕೊನೆಗೆ 1948ರ ಒಲಿಂಪಿಕ್ಸ್‌ನಲ್ಲಿ ಸ್ವತಂತ್ರ ಭಾರತದ ಎದುರು ಬ್ರಿಟನ್‌ ತನ್ನ ತಂಡವನ್ನು ಕಳುಹಿಸಿತು. ಆದರೆ ಈ ಕೂಟದಲ್ಲಿ ಭಾರತೀಯ ತಂಡವು ಗ್ರೇಟ್‌ ಬ್ರಿಟನ್‌ ತಂಡವನ್ನು ಹೀನಾಯವಾಗಿ ಸೋಲಿಸಿ ಚಾಂಪಿಯನ್‌ ಆಯಿತು!

VISTARANEWS.COM


on

By

Independence Day 2024
Koo

ಪ್ಯಾರಿಸ್‌ನಲ್ಲಿ ಆರಂಭವಾಗಿರುವ ಒಲಿಂಪಿಕ್ಸ್‌ನಲ್ಲಿ (paris olympics 2024) ಸರಬ್ಜೋತ್‌ ಸಿಂಗ್‌ (Bronze Medalist Sarabjot Singh), ಮನು ಭಾಕರ್​ (Bronze Medalist Manu Bhaker) ಮತ್ತು ಸ್ವಪ್ನಿಲ್‌ ಈಗಾಗಲೇ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಹಾಗೆ ನೋಡಿದರೆ ಸ್ವಾತಂತ್ರ್ಯ ಪೂರ್ವವೇ ನಮ್ಮ ಕ್ರೀಡಾಪಟುಗಳು ಬಂಗಾರದ ಸಾಧನೆ ಮಾಡಿದ್ದರು. ಸ್ವತಂತ್ರ ಭಾರತದಲ್ಲಿ (Independence Day 2024) ನಮ್ಮ ಕ್ರೀಡಾಪಟುಗಳ ಸಾಧನೆಯೂ ಗಮನಾರ್ಹ. ಆದರೆ ತೀರಾ ಆಶಾದಾಯಕವೇನೂ ಅಲ್ಲ. ಭಾರತ ಒಲಿಂಪಿಕ್ ಇತಿಹಾಸದಲ್ಲಿ ಇದುವರೆಗೆ 10 ಚಿನ್ನದ ಪದಕಗಳು ಸೇರಿ ಒಟ್ಟು 35 ಪದಕಗಳನ್ನು ಗೆದ್ದಿದೆ. ಆ ಸುವರ್ಣ ಕ್ಷಣ ಯಾವುದು, ಹೇಗಿತ್ತು ಎನ್ನುವ ಕುರಿತು ಮಾಹಿತಿ ಇಲ್ಲಿದೆ. ವಿಶೇಷವೆಂದರೆ ಸ್ವಾತಂತ್ರ್ಯ ಪೂರ್ವದಲ್ಲಿ, ಹಾಲಿ ಹಾಕಿ ಚಾಂಪಿಯನ್‌ ಆಗಿದ್ದ ಗ್ರೇಟ್‌ ಬ್ರಿಟನ್‌ 1928, 1932 ಮತ್ತು 1936ರಲ್ಲಿ ಧ್ಯಾನ್‌ ಚಂದ್‌ ನೇತೃತ್ವದ ಭಾರತೀಯ ಹಾಕಿ ತಂಡದ ಎದುರು ಸೋತು ಅವಮಾನ ಅನುಭವಿಸುವ ಭಯದಿಂದ ತನ್ನ ತಂಡವನ್ನೇ ಒಲಿಂಪಿಕ್ಸ್‌ಗೆ ಕಳುಹಿಸಲಿಲ್ಲ! ತನ್ನ ವಸಾಹತು ದೇಶವಾದ ಭಾರತದ ಎದುರು ಸೋತರೆ ಪ್ರತಿಷ್ಠೆಗೆ ಧಕ್ಕೆ ಆಗುತ್ತದೆ ಎನ್ನುವುದು ಬ್ರಿಟಿಷರ ಲೆಕ್ಕಾಚಾರವಾಗಿತ್ತು. ಕೊನೆಗೆ 1948ರ ಒಲಿಂಪಿಕ್ಸ್‌ನಲ್ಲಿ ಸ್ವತಂತ್ರ ಭಾರತದ ಎದುರು ಬ್ರಿಟನ್‌ ತನ್ನ ತಂಡವನ್ನು ಕಳುಹಿಸಿತು. ಆದರೆ ಈ ಕೂಟದಲ್ಲಿ ಭಾರತೀಯ ತಂಡವು ಗ್ರೇಟ್‌ ಬ್ರಿಟನ್‌ ತಂಡವನ್ನು ಹೀನಾಯವಾಗಿ ಸೋಲಿಸಿ ಚಾಂಪಿಯನ್‌ ಆಯಿತು! 1928ರಲ್ಲಿ ಮೊದಲ ಬಾರಿ ಭಾರತೀಯ ಹಾಕಿ ತಂಡ ಮೊದಲ ಬಾರಿ ಒಲಿಂಪಿಕ್ಸ್‌ ಪ್ರವೇಶಿಸಿತ್ತು. ಗಮನಾರ್ಹ ಸಂಗತಿ ಎಂದರೆ ಈಗ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ‌‌ನಲ್ಲಿ ಭಾರತೀಯ ಹಾಕಿ ತಂಡ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್‌‌ನನ್ನು ರೋಚಕವಾಗಿ ಸೋಲಿಸಿ ಸೆಮಿ ಫೈನಲ್‌‌ಗೆ ಲಗ್ಗೆ ಹಾಕಿದೆ.

ಜಾಗತಿಕ ಕ್ರೀಡಾಕೂಟವಾದ ಒಲಿಂಪಿಕ್ಸ್​ನಲ್ಲಿ ಭಾರತ ಇದುವರೆಗೂ ಹೆಚ್ಚಿನ ಪದಕ ಗೆದ್ದಿಲ್ಲ. ಆದರೆ ಪುರುಷರ ಹಾಕಿಯಲ್ಲಿ 8 ಬಾರಿ ಸ್ವರ್ಣ ಗೆದ್ದ ಏಕೈಕ ತಂಡವೆಂಬ ಹೆಗ್ಗಳಿಕೆಯನ್ನು ಭಾರತ ತಂಡ ಇನ್ನೂ ಉಳಿಸಿಕೊಂಡಿದೆ.

Independence Day 2024
Independence Day 2024


1928ರಲ್ಲಿ ಮೊದಲ ಚಿನ್ನ

1928ರಲ್ಲಿ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತದ ಹಾಕಿ ಸ್ವರ್ಣ ಯುಗ ಆರಂಭವಾಯಿತು. ಮುಂದೆ ಮೂರು ದಶಕಗಳ ಕಾಲ ಇದು ಮುಂದುವರಿಯಿತು. ಹಾಲೆಂಡ್ ತಂಡವನ್ನು 6-0 ಅಂತರದಿಂದ ಸೋಲಿಸುವ ಮೂಲಕ ಭಾರತೀಯರು ಹಾಕಿಯಲ್ಲಿ ಚೊಚ್ಚಲ ಒಲಿಂಪಿಕ್ ಚಿನ್ನ ಗೆದ್ದರು. ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಭಾರತ ಬಾರಿಸಿದ 29 ಗೋಲುಗಳಲ್ಲಿ 14 ಗೋಲುಗಳನ್ನು ಧ್ಯಾನ್ ಚಂದ್ ಅವರೇ ಹೊಡೆದಿದ್ದರು. ಈ ಒಲಿಂಪಿಕ್‌ಗೆ ಗ್ರೇಟ್ ಬ್ರಿಟನ್ ತನ್ನ ಹಾಕಿ ತಂಡವನ್ನು ಕಳುಹಿಸರಲಿಲ್ಲ. ಏಕೆಂದರೆ ಒಲಿಂಪಿಕ್ಸ್‌ಗೆ ಸ್ವಲ್ಪ ಮೊದಲು ಗ್ರೇಟ್ ಬ್ರಿಟನ್ ಭಾರತದ ಎದುರು 4-0 ಅಂತರದಿಂದ ಸೋಲಿಸಲ್ಪಟ್ಟಿತು. ಇದು ‘ವಸಾಹತುಶಾಹಿಗಳು’ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ತಮ್ಮ ‘ವಸಾಹತು’ವನ್ನು ಕಳೆದುಕೊಳ್ಳುವ ಭಯದಲ್ಲಿದೆ ಎಂಬ ಚರ್ಚೆ ಹುಟ್ಟು ಹಾಕಿತ್ತು. ಈ ಮುಜುಗರವೇ ಬೇಡ ಎಂದು ಗ್ರೇಟ್‌ ಬ್ರಿಟನ್‌ ಹಾಕಿ ತಂಡವನ್ನೇ ಕಳುಹಿಸಿರಲಿಲ್ಲ ಎನ್ನಲಾಗುತ್ತದೆ!

1932ರಲ್ಲಿ ಎರಡನೇ ಪದಕ

1928ರಲ್ಲಿ ಭಾರತ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ಮಾತ್ರ ಲಾಸ್ ಏಂಜಲೀಸ್ ಕ್ರೀಡಾಕೂಟದಲ್ಲಿ ಹಾಕಿ ಗೌರವಕ್ಕಾಗಿ ಪ್ರವೇಶ ಪಡೆಯಿತು. ಇದರಲ್ಲಿ ಭಾರತೀಯರು ಜಪಾನ್ ಅನ್ನು 11- 1ರಿಂದ ಸೋಲಿಸಿ ಬಳಿಕ ಯುನೈಟೆಡ್ ಸ್ಟೇಟ್ ಅನ್ನು 24- 1ರಿಂದ ಪರಾಭವಗೊಳಿಸಿ ಮತ್ತೊಂದು ಚಿನ್ನದ ಪದಕವನ್ನು ಮಡಿಲಿಗೆ ಹಾಕಿಕೊಂಡಿತ್ತು.

Independence Day 2024
Independence Day 2024


1936ರಲ್ಲಿ ಗೋಲ್ಡನ್ ಹ್ಯಾಟ್ರಿಕ್

1928 ಮತ್ತು 1932ರಲ್ಲಿ ಹಾಕಿ ಜಗತ್ತನ್ನು ಭಾರತ ಸಮಗ್ರವಾಗಿ ಗೆದ್ದಿದ್ದರೂ, 1936ರಲ್ಲಿ ಬರ್ಲಿನ್ ಕ್ರೀಡಾಕೂಟ ವಿಶೇಷವಾಗಿತ್ತು. ಧ್ಯಾನ್ ಚಂದ್ ನೇತೃತ್ವದಲ್ಲಿ ಭಾರತೀಯರು ಆ ಬಾರಿಯೂ ಸವಾಲನ್ನು ಎದುರಿಸಿದರು. ಜರ್ಮನಿಯನ್ನು 8-1ರಿಂದ ಸೋಲಿಸಿ ಸತತ ಮೂರನೇ ಒಲಿಂಪಿಕ್ ಚಿನ್ನವನ್ನು ಗೆದ್ದರು.

Independence Day 2024
Independence Day 2024


1948ರಲ್ಲಿ ಸ್ವತಂತ್ರ ಭಾರತದ ಮೊದಲ ಚಿನ್ನ

ಭಾರತವು ವಸಾಹತುಶಾಹಿಯಾಗಿ ಉಳಿಯುವವರೆಗೂ ಒಲಿಂಪಿಕ್ ಹಾಕಿಯಿಂದ ದೂರ ಉಳಿದಿದ್ದ ಗ್ರೇಟ್ ಬ್ರಿಟನ್ ಸ್ವತಂತ್ರ ಭಾರತವನ್ನು ಎದುರಿಸಲು ಸಜ್ಜಾಯಿತು. ಈ ಸಂದರ್ಭದಲ್ಲೂ ಭಾರತವು ಬ್ರಿಟಿಷರನ್ನು 4-0 ಗೋಲುಗಳಿಂದ ಸೋಲಿಸಿ ಹಾಕಿ ಯುದ್ಧವನ್ನು ಗೆದ್ದಿತು. ಕೆಸರುಮಯವಾದ ಟರ್ಫ್ ಮತ್ತು ಹಗುರವಾದ ಮಳೆಯ ಕಾರಣದಿಂದ ಈ ಆಟ ಸಾಕಷ್ಟು ಕಠಿಣ ಸವಾಲನ್ನು ಒಡ್ಡಿತ್ತು. ಆದರೂ ಭಾರತೀಯರು ತಮ್ಮ ಅತ್ಯುತ್ತಮ ಚೆಂಡಿನ ನಿಯಂತ್ರಣ, ನಿಖರವಾದ ಪಾಸಿಂಗ್ ಮತ್ತು ಬುದ್ಧಿವಂತ ಆಟದಿಂದ ಬ್ರಿಟಿಷ್ ತಂಡವನ್ನು ಸೋಲಿಸಿ ಚಾರಿತ್ರಿಕ ಜಯ ದಾಖಲಿಸಿತು.

1952ರಲ್ಲಿ ಬಲ್ಬೀರ್ ಮ್ಯಾಜಿಕ್

ಹಾಲೆಂಡ್ ವಿರುದ್ಧದ 1952ರ ಹಾಕಿ ಫೈನಲ್ ಎರಡು ಕಾರಣಗಳಿಗಾಗಿ ಹೆಚ್ಚು ನಿರೀಕ್ಷೆ ಮೂಡಿಸಿತ್ತು. ಮೊದಲನೆಯದಾಗಿ ಮಳೆಯು ನೆಲವನ್ನು ತೇವಗೊಳಿಸಿದ್ದು ಮಾತ್ರವಲ್ಲ ಹೆಚ್ಚು ಜಾರುವಂತೆ ಮಾಡಿತ್ತು. ಪರಿಸ್ಥಿತಿಗಳು ಭಾರತೀಯರಿಗಿಂತ ಡಚ್ಚರಿಗೆ ಹೆಚ್ಚು ಅನುಕೂಲಕರವೆಂದು ನಿರೀಕ್ಷಿಸಲಾಗಿತ್ತು. ಎರಡನೆಯದಾಗಿ ಭಾರತೀಯರು ಬಲ್ಬೀರ್ ಸಿಂಗ್ ಸೀನಿಯರ್ ಮೇಲೆ ಹೆಚ್ಚು ಅವಲಂಬಿತರಾಗಿದ್ದರು. ಆದರೆ ಭಾರತೀಯರು ಫೈನಲ್‌ನಲ್ಲಿ 3- 1ರಿಂದ ಹಾಲೆಂಡ್ ಅನ್ನು ಸೋಲಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಬಲ್ಬೀರ್ ಸಿಂಗ್ ಸೀನಿಯರ್ ಮತ್ತೊಮ್ಮೆ ತಾರೆಯಾದರು. 13 ಭಾರತೀಯ ಗೋಲುಗಳಲ್ಲಿ 9 ಗೋಲುಗಳನ್ನು ಅವರೇ ಹೊಡೆದಿದ್ದರು.

ಒಲಿಂಪಿಕ್ಸ್‌ ಇತಿಹಾಸದಲ್ಲಿ ಭಾರತದ ಕ್ರೀಡಾಪಟುವೊಬ್ಬರು ವೈಯಕ್ತಿಕ ವಿಭಾಗದಲ್ಲಿ ಪದಕ ಜಯಿಸಿದ್ದು 1952ರಲ್ಲಿ. ಮಹಾರಾಷ್ಟ್ರದ ಖಾಸಾಬಾ ದಾದಾ ಸಾಹೆಬ್‌ ಜಾಧವ್‌ ಕುಸ್ತಿಯ ಫ್ರೀಸ್ಟೈಲ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. ಒಲಿಂಪಿಕ್ಸ್‌ ಇತಿಹಾಸದಲ್ಲಿ ಭಾರತದ ಕ್ರೀಡಾಪಟುವೊಬ್ಬರು ವೈಯಕ್ತಿಕ ವಿಭಾಗದಲ್ಲಿ ಗೆದ್ದ ಮೊದಲ ಪದಕ ಇದಾಗಿತ್ತು.

Independence Day 2024
Independence Day 2024


1956ರಲ್ಲಿ ಐದನೇ ಚಿನ್ನ

ಮೆಲ್ಬೋರ್ನ್‌ನಲ್ಲಿ ನಡೆದ ಫೈನಲ್‌ ಪಂದ್ಯವು ಪಾಕಿಸ್ತಾನದ ವಿರುದ್ಧ ಒಲಿಂಪಿಕ್‌ ಹಂತದಲ್ಲಿ ಭಾರತದ ಮೊದಲ ಕೂಟವಾಗಿತ್ತು. ಎರಡೂ ತಂಡಗಳ ಆಟಗಾರರ ಮೇಲೆ ಸಾಕಷ್ಟು ನಿರೀಕ್ಷೆಯ ತೂಗುಕತ್ತಿ ತೂಗುತ್ತಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ಬೆಳ್ಳಿ ಪದಕ ಗೆದ್ದು ಬೀಗಿದರೆ, ಭಾರತವು 1-0 ಗೋಲುಗಳ ಕಿರಿದಾದ ಅಂತರದಿಂದ ಚಿನ್ನವನ್ನು ಗೆದ್ದುಕೊಂಡಿತ್ತು.

1964ರಲ್ಲಿ ಮರಳಿ ಚಿನ್ನ

ಭಾರತವು ಪಾಕಿಸ್ತಾನವನ್ನು 1-0 ಗೋಲುಗಳಿಂದ ಸೋಲಿಸುವ ಮೂಲಕ ವಿಶ್ವ ಹಾಕಿಯಲ್ಲಿ ತನ್ನ ಪ್ರಾಬಲ್ಯವನ್ನು ಮರುಸ್ಥಾಪಿಸಿತು. ಎರಡು ಉತ್ತಮ ತಂಡಗಳು ಗೆಲ್ಲಲು ಸಾಕಷ್ಟು ಪರಿಶ್ರಮ ಪಟ್ಟಿತು. ಭಾರತವು ಅಂತಿಮವಾಗಿ ಕಡಿಮೆ ಅಂತರದಿಂದ ವಿಜಯಿಯಾಯಿತು.

Independence Day 2024
Independence Day 2024


1980ರಲ್ಲಿ ಕೊನೆಯ ಹಾಕಿ ಚಿನ್ನ

ಭಾರತ 16 ವರ್ಷಗಳ ಅನಂತರ ಮಾಸ್ಕೋದಲ್ಲಿ 4– 3 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿ ಚಿನ್ನವನ್ನು ಗೆದ್ದುಕೊಂಡಿತು. ಆದರೆ ಇದು ಒಲಂಪಿಕ್ ಹಾಕಿಯಲ್ಲಿ ಭಾರತದ ಕೊನೆಯ ಚಿನ್ನದ ಪದಕವಾಯಿತು.

1996ರಲ್ಲಿ ಟೆನಿಸ್​ನಲ್ಲಿ ಮೊದಲ ಪದಕ

1996ರಲ್ಲಿ ಅಮೆರಿಕದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತ ಏಕೈಕ ಕಂಚಿನ ಪದಕ ಜಯಿಸಿತ್ತು. ಲಿಯಾಂಡರ್‌ ಪೇಸ್‌ ಟೆನಿಸ್‌ ಸಿಂಗಲ್ಸ್‌ ವಿಭಾಗದಲ್ಲಿ ಕಂಚು ಜಯಿಸಿದ್ದರು. ವೈಯಕ್ತಿಕ ವಿಭಾಗದಲ್ಲಿ 44 ವರ್ಷಗಳ ಬಳಿಕ ಭಾರತಕ್ಕೆ ಒಲಿದ ಪದಕ ಇದಾಗಿತ್ತು. ಇಲ್ಲಿ ಲಿಯಾಂಡರ್‌ ಪೇಸ್‌ ಬ್ರೆಜಿಲ್‌ನ ಫೆರ್ನಾಂಡೊ ಮೆಲಿಗಿನಿ ಅವರನ್ನು ಮಣಿಸಿ ಪದಕಕ್ಕೆ ಕೊರಳೊಡ್ಡಿದ್ದರು.

Independence Day 2024
Independence Day 2024


2000ರಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ

2000ದಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದ್ದ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಆಂಧ್ರ ಪ್ರದೇಶ ಮೂಲದ ಕರ್ಣಂ ಮಲ್ಲೇಶ್ವರಿ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದರು. ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಮೊಟ್ಟ ಮೊದಲ ಮಹಿಳಾ ಕ್ರೀಡಾಪಟು ಎನಿಸಿಕೊಂಡಿದ್ದರು. 69 ಕೆಜಿ ವಿಭಾಗದಲ್ಲಿ ಮಲ್ಲೇಶ್ವರಿ ಈ ಸಾಧನೆ ಮಾಡಿದ್ದರು.

2004ರಲ್ಲಿ ಒಂದು ಪದಕ

2004ರಲ್ಲಿ ಗ್ರೀಸ್‌ನ ಅಥೆನ್ಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಏಕೈಕ ಪದಕ ಮಾತ್ರ ಲಭಿಸಿತು. ರಾಜಸ್ಥಾನದ ಶೂಟರ್‌ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಪುರುಷರ ಡಬಲ್‌ ಟ್ರಾಯಪ್‌ ವಿಭಾಗದಲ್ಲಿ ಬೆಳ್ಳಿ ಪದಕಕ್ಕೆ ಗುರಿ ಇರಿಸಿ ಈ ಪದಕ ತಂದುಕೊಟ್ಟಿದ್ದರು. ಈ ಸಾಧನೆಯೊಂದಿಗೆ ವೈಯಕ್ತಿಕ ವಿಭಾಗದಲ್ಲಿ ರಜತ ಗೆದ್ದ ಮೊದಲ ಭಾರತೀಯರೆನಿಸಿದರು.

Independence Day 2024
Independence Day 2024


2008ರಲ್ಲಿ ಮೊದಲ ವೈಯಕ್ತಿಕ ಚಿನ್ನ

ಖಾಸಾಬಾ ದಾದಾ ಸಾಹೇಬ್‌ ಜಾಧವ್‌ ಬಳಿಕ 2008ರ ಚೀನದ ಬೀಜಿಂಗ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ಅಭಿನವ್ ಬಿಂದ್ರಾ ವೈಯಕ್ತಿಕ ಚಿನ್ನದ ಕನಸು ನನಸು ಮಾಡಿದರು. ಬಿಂದ್ರಾ ಅವರ ಸಾಧನೆ ರಾತ್ರೋರಾತ್ರಿ ಅವರನ್ನು ದೇಶಾದ್ಯಂತ ಪ್ರಸಿದ್ಧರನ್ನಾಗಿ ಮಾಡಿತು.

ಒಲಿಂಪಿಕ್ಸ್‌ ಭಾರತದ ಕ್ರೀಡಾ ಇತಿಹಾಸದಲ್ಲೇ ಅತ್ಯಂತ ಅವಿಸ್ಮರಣೀಯ ಕೂಟ ಇದಾಗಿದೆ. ಸ್ವತಂತ್ರ ಭಾರತದಲ್ಲಿ ವೈಯಕ್ತಿಕ ವಿಭಾಗದಲ್ಲಿ ಮೊದಲ ಸ್ವರ್ಣ ಸಾಧನೆ ಮಾಡಿದ್ದು ಇದೇ ಕೂಟದಲ್ಲಿ. ಅಲ್ಲದೆ ಮೊಟ್ಟ ಮೊದಲ ಬಾರಿಗೆ ಒಂದೇ ಕೂಟದಲ್ಲಿ 3 ಪದಕಗಳು ಭಾರತದ ಪಾಲಾಗಿದ್ದವು.

ಅಭಿನವ್‌ ಬಿಂದ್ರ 10 ಮೀ. ಏರ್‌ ರೈಫ‌ಲ್‌ನಲ್ಲಿ ಸ್ವರ್ಣ ಗೆದ್ದು ಇತಿಹಾಸ ನಿರ್ಮಿಸಿದ್ದರು. ಕುಸ್ತಿಪಟು ಸುಸೀಲ್‌ ಕುಮಾರ್‌ ಪುರುಷರ ಕುಸ್ತಿಯ 75 ಕೆಜಿ ವಿಭಾಗದಲ್ಲಿ ಕಂಚು ಗೆದ್ದರೆಮ ಬಾಕ್ಸಿಂಗ್‌ನಲ್ಲಿ ವಿಜೇಂದರ್‌ ಸಿಂಗ್‌ 66 ಕೆಜಿ ವಿಭಾಗದಲ್ಲಿ ಕಂಚು ಜಯಿಸಿದ್ದರು.

2012ರಲ್ಲಿ ಆರು ಪದಕ

ಲಂಡನ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತ ಅಮೋಘ ಸಾಧನೆಯೊಂದನ್ನು ಮಾಡಿತು. ಶೂಟಿಂಗ್‌, ಬಾಕ್ಸಿಂಗ್‌, ಬ್ಯಾಡ್ಮಿಂಟನ್‌, ಕ್ಷೇತ್ರಕ್ಕೆ ಹೊಸ ಆಯಾಮ ಸೃಷ್ಟಿಸಿದ ಕೂಟ ಇದಾಗಿತ್ತು. 2 ಬೆಳ್ಳಿ ಹಾಗೂ 4 ಕಂಚಿನ ಪದಕಗಳು ಭಾರತದ ಪಾಲಾದವು. ಶೂಟಿಂಗ್‌ನಲ್ಲಿ ವಿಜಯ್‌ ಕುಮಾರ್‌ 25 ಮೀ. ರ್ಯಾಪಿಟ್‌ ಫೈರ್‌ ಪಿಸ್ತೂಲ್‌ನಲ್ಲಿ ಬೆಳ್ಳಿ ಗೆದ್ದರೆ, ಸುಶೀಲ್‌ ಕುಮಾರ್‌ ಪುರುಷರ 66 ಕೆಜಿ ಫ್ರೀ ಸ್ಟೈಲ್‌ನಲ್ಲಿ ರಜತ ಸಾಧನೆಯೊಂದಿಗೆ ಸತತ 2ನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದರು. ಮತ್ತೊಬ್ಬ ಶೂಟರ್‌ ಗಗನ್‌ ನಾರಂಗ್‌ (10 ಮೀ ಏರ್‌ ರೈಫ‌ಲ್‌), ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌, ಬಾಕ್ಸರ್‌ ಮೇರಿ ಕೋಮ್‌ ಹಾಗೂ ಮತ್ತೊಬ್ಬ ಕುಸ್ತಿಪಟು ಯೋಗೇಶ್ವರ್‌ ದತ್‌ ಕಂಚಿನ ಪದಕ ಜಯಿಸಿದರು.

2016ರಲ್ಲಿ ಬೆಳ್ಳಿ, ಕಂಚು

ಲಂಡನ್‌ನಲ್ಲಿ ಅರ್ಧ ಡಜನ್‌ ಪದಕ ಗೆದ್ದಿದ್ದ ಭಾರತದ ಕ್ರೀಡಾಪಟುಗಳ ಮೇಲೆ ರಿಯೋ ಒಲಿಂಪಿಕ್ಸ್‌ನಲ್ಲಿ ಅಪಾರ ಪದಕ ನಿರೀಕ್ಷೆ ಮಾಡಲಾಗಿತ್ತು. ಆದರೆ, ಈ ಎಲ್ಲ ನಿರೀಕ್ಷೆ ಹುಸಿಗೊಂಡಿತು.

ಭಾರತ ಕೇವಲ 2 ಪದಕಕ್ಕೆ ಮಾತ್ರ ಸೀಮಿತವಾಯಿತು. ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು ಕೊನೆಯ ಹಂತದಲ್ಲಿ ಎಡವಿ ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಆದರೆ, ಸಿಂಧು ಬ್ಯಾಡ್ಮಿಂಟನ್‌ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಶಟ್ಲರ್‌ ಎನಿಸಿಕೊಂಡರು. ಇತ್ತೀಚೆಗೆ ಕುಸ್ತಿಗೆ ನಿವೃತ್ತಿ ಹೇಳಿದ್ದ ಸಾಕ್ಷಿ ಮಲಿಕ್‌ ಕೂಡ ಈ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಜಯಿಸಿದ್ದರು.

Independence Day 2024
Independence Day 2024


2021ರಲ್ಲಿ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಚಿನ್ನ

ಕೊರೊನಾ ಮಹಾಮಾರಿ ಸಾಂಕ್ರಾಮಿಕ ರೋಗದಿಂದ ಹಲವು ಕಟ್ಟುಪಾಡುಗಳ ನಡುವೆ ಜಪಾನ್​ನ ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಈ ಕ್ರೀಡಾ ಕೂಟದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. 

ಇದನ್ನೂ ಓದಿ: Manu Bhaker: ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್

ಪಿ ವಿ ಸಿಂಧು ಕಂಚಿನ ಪದಕ ಜಯಿಸಿ ಸತತವಾಗಿ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಸಾಧನೆ ಮಾಡಿದರು. ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದು 1980ರ ಬಳಿಕ ಮೊದಲ ಬಾರಿಗೆ ಒಲಿಂಪಿಕ್ ಹಾಕಿಯಲ್ಲಿ ಪದಕ ಗೆದ್ದು ಸಂಭ್ರಮಿಸಿತ್ತು.

ಬಾಕ್ಸರ್​ ಲವ್ಲೀನಾ ಬೋರ್ಗೊಹೈನ್ ಕಂಚು ಗೆದ್ದರೆ, ಮೀರಾಬಾಯಿ ಚಾನು ಬೆಳ್ಳಿಯೊಂದಿಗೆ ಮಿನುಗಿದರು. ಕುಸ್ತಿಪಟು ರವಿ ದಹಿಯಾ ಬೆಳ್ಳಿ, ಬಜರಂಗ್ ಪೂನಿಯಾ ಕಂಚು ಗೆದ್ದರು.​

Continue Reading
Advertisement
Drowned in water
ಚಿಕ್ಕೋಡಿ46 seconds ago

Drowned in water : ಆಟವಾಡುತ್ತಾ ಕಾಲುವೆಗೆ ಕಾಲು ಜಾರಿ ಬಿದ್ದು 4 ವರ್ಷದ ಬಾಲಕ ಸಾವು

Gold Rate Today
ಚಿನ್ನದ ದರ14 mins ago

Gold Rate Today: ಸತತ ಎರಡನೆ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Actor Darshan wife Vijayalakshmi darshan temple run
ಸ್ಯಾಂಡಲ್ ವುಡ್14 mins ago

Actor Darshan: ದರ್ಶನ್‌ ಬಿಡುಗಡೆಗಾಗಿ ವಿಜಯಲಕ್ಷ್ಮಿ ಹಾಗೂ ಅಳಿಯ ಟೆಂಪಲ್ ರನ್‌

Road Accident
ಬೆಂಗಳೂರು29 mins ago

Road Accident: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು; ಬೈಕ್‌ ಅಪಘಾತದಲ್ಲಿ ಸವಾರರಿಬ್ಬರು ಮೃತ್ಯು

Rahul Gandhi
ವೈರಲ್ ನ್ಯೂಸ್36 mins ago

Rahul Gandhi: ರಾಹುಲ್ ಗಾಂಧಿ ಅಲ್ಲ, ರಾಹುಲ್ ಖಾನ್! ಪಾಕಿಸ್ತಾನದ ಟಿವಿಯಲ್ಲಿ ಬಿಸಿಬಿಸಿ ಚರ್ಚೆ!

police inspector death thimmegowda
ಬೆಂಗಳೂರು49 mins ago

Inspector Death: ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ, ಎರಡು ತಿಂಗಳ ಹಿಂದೆ ಟ್ರಾನ್ಸ್‌ಫರ್‌ ಆಗಿದ್ದ ಸಿಸಿಬಿ ಎಸ್‌ಐ

Road Accident
ತುಮಕೂರು49 mins ago

Road Accident : ಬಲ ತಿರುವು ಪಡೆಯುವಾಗ ಬೈಕ್‌ ಸವಾರನ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್‌; ಸಿಸಿ ಕ್ಯಾಮೆರಾದಲ್ಲಿ ಅಪಘಾತ ಸೆರೆ

Pot holes in Belgavi
ಬೆಳಗಾವಿ53 mins ago

Pot Holes: ರಾಜ್ಯ ಹೆದ್ದಾರಿಯ ಯಮಸ್ವರೂಪಿ ರಸ್ತೆ ಗುಂಡಿಗೆ ಗ್ರಾಪಂ ಸದಸ್ಯ ಬಲಿ

Double Ismart Trailer Ram Pothineni Sanjay Dutt
ಟಾಲಿವುಡ್59 mins ago

Double iSmart Trailer:  ಡಬಲ್ ಇಸ್ಮಾರ್ಟ್ ಟ್ರೈಲರ್‌ ಔಟ್‌; ಅಬ್ಬರಿಸಿದ ಸಂಜಯ್ ದತ್‌!

thawar chand gehlot cm siddaramaiah Governor versus state
ಪ್ರಮುಖ ಸುದ್ದಿ1 hour ago

CM Siddaramaiah: ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌? ಇಂದು ರಾಜ್ಯಪಾಲರಿಂದ ನಿರ್ಧಾರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ22 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌