ಏಡ್ಸ್ ನಿಯಂತ್ರಣ ಸೊಸೈಟಿಗಳ ನೌಕರರ ವೇತನ ಹೆಚ್ಚಿಸಿದ ಕೇಂದ್ರ ಸರ್ಕಾರ - Vistara News

ಆರೋಗ್ಯ

ಏಡ್ಸ್ ನಿಯಂತ್ರಣ ಸೊಸೈಟಿಗಳ ನೌಕರರ ವೇತನ ಹೆಚ್ಚಿಸಿದ ಕೇಂದ್ರ ಸರ್ಕಾರ

ಹೆಚ್ಐವಿ ಹರಡುವುದನ್ನು ತಡೆಗಟ್ಟಲು ಮತ್ತು ಅದರ ಹರಡುವಿಕೆಯನ್ನು ನಿಯಂತ್ರಿಸಲು ಸ್ಥಾಪಿಸಲಾಗಿರುವ ಸೊಸೈಟಿಯಲ್ಲಿನ ಗುತ್ತಿಗೆ ಆಧಾರಿತ ನೌಕರರ ವೇತನವನ್ನು 220ರೂ. ಹೆಚ್ಚಿಸಲಾಗಿದೆ.

VISTARANEWS.COM


on

AIDS Control Societies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೆಚ್ಐವಿ ಹರಡುವುದನ್ನು ತಡೆಗಟ್ಟಲು ಮತ್ತು ಅದರ ಹರಡುವಿಕೆಯನ್ನು ನಿಯಂತ್ರಿಸಲು ಸ್ಥಾಪಿಸಲಾಗಿರುವ ಸೊಸೈಟಿಯಲ್ಲಿನ (AIDS Control Societies) ಗುತ್ತಿಗೆ ಆಧಾರಿತ ನೌಕರರ ವೇತನವನ್ನು ಕೇಂದ್ರ ಸರ್ಕಾರ ಶೇ.10 ರಷ್ಟು ಹೆಚ್ಚಿಸಿದೆ.

ರಾಷ್ಟ್ರೀಯ ಏಡ್ಸ್‌ ನಿಯಂತ್ರಣ ಸಂಸ್ಥೆ (NACO) ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಬೆಂಬಲದೊಂದಿಗೆ ರಾಷ್ಟ್ರೀಯ ಏಡ್ಸ್‌ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೊಸೈಟಿಗಳ ನೌಕರರಿಗೆ ಈ ಹೆಚ್ಚಳ ಕಳೆದ ಏಪ್ರಿಲ್‌ನಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.

ಜಿಲ್ಲಾ ಸೊಸೈಟಿಗಳಲ್ಲಿನ ಸಹಾಯಕರು, ಡಾಟಾ ಎಂಟ್ರಿ ಆಪರೇಟರ್‌, ಜೂನಿಯರ್‌ ಅಕೌಂಟೆಂಟ್‌ಗಳು ಇದರ ಲಾಭ ಪಡೆಯಲಿದ್ದಾರೆ. ಇದುವರೆಗೆ ಇವರು 17,780 ರೂ.ಗಳನ್ನು ವೇತನ ಪಡೆಯುತ್ತಿದ್ದರು. ಇದನ್ನು ಈಗ 18,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಅಂದರೆ 220 ರೂ. ಹೆಚ್ಚಿದಂತಾಗಲಿದೆ.

ಹೆಚ್.ಐ.ವಿ ಸೋಂಕಿಗೆ ಸಂಬಂಧಿಸಿದ ಕಾಯಿಲೆ ಮತ್ತು ಮರಣ ಪ್ರಮಾಣವನ್ನು ಕಡಿಮೆ ಮಾಡಲು, ಸೋಂಕಿನಿಂದ ಉಂಟಾಗುವ ಸಾಮಾಜಿಕ ಮತ್ತು ಆರ್ಥಿಕ ಪರಣಾಮವನ್ನು ನಿಯಂತ್ರಿಸಲು. ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣದಲ್ಲಿ ತಾಂತ್ರಿಕ ನೆರವು ನೀಡಲು ಈ ಸೊಸೈಟಿಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ | ಪುಣ್ಯಕೋಟಿ ದತ್ತು ಯೋಜನೆಗೆ ಸರ್ಕಾರಿ ನೌಕರರ ಒಂದು ದಿನದ ವೇತನ ದೇಣಿಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Smoking Effects: ಮಹಿಳೆಯರೇ, ಧೂಮಪಾನದಿಂದ ನಿಮ್ಮ ಆರೋಗ್ಯದ ಮೇಲಾಗುವ ಪರಿಣಾಮದ ಅರಿವಿದೆಯೇ?

Smoking effects: ಪುರುಷರು ಮಹಿಳೆಯರೆಂಬ ಭೇದವಿಲ್ಲದೆ ಇತ್ತೀಚೆಗಿನ ದಿನಗಳಲ್ಲಿ ಸಾಕಷ್ಟು ಮಂದಿ ಧೂಮಪಾನದ ಚಟಕ್ಕೆ ದಾಸರಾಗುತ್ತಿದ್ದಾರೆ. ಪುರುಷರ ಆರೋಗ್ಯವನ್ನು ಕಾಡುವಂತೆಯೇ ಸಹಜವಾಗಿಯೇ ಮಹಿಳೆಯರ ಆರೋಗ್ಯಕ್ಕೂ ಇದು ಮಾರಕ. ಆದರೆ ಮಹಿಳೆಯ ವಿಚಾರಕ್ಕೆ ಬಂದರೆ, ಈ ಚಟದ ಪರಿಣಾಮ ಮಹಿಳೆಯರನ್ನು ಸ್ವಲ್ಪ ಹೆಚ್ಚೇ ಕಾಡುತ್ತದೆ. ಕಾರಣ ಮಹಿಳೆಯರ ಹಾರ್ಮೋನು, ಆಕೆಗೆ ಪ್ರಕೃತಿದತ್ತವಾಗಿ ಬಂದಿರುವ ತಾಯಿಯಾಗುವ ಹೊಣೆ ಇತ್ಯಾದಿ. ಬನ್ನಿ, ಮಹಿಳೆಯರು ಧೂಮಪಾನಿಗಳಾದರೆ, ಯಾವೆಲ್ಲ ಆರೋಗ್ಯ ಸಮಸ್ಯೆಗಳು ಅವರನ್ನು ಕಾಡುವ ಅಪಾಯ ಹೆಚ್ಚು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Smoking Effects
Koo

ಧೂಮಪಾನ, ಮದ್ಯಪಾನಗಳೆಂಬ ಚಟವು ಆರೋಗ್ಯಕ್ಕೆ ಹಾನಿಕರ ಎಂಬ ಸತ್ಯ ಎಲ್ಲರಿಗೂ ತಿಳಿದಿದೆ. ಆದರೂ, ಚಟದಿಂದ ಹೊರಕ್ಕೆ ಬರುವುದು ಸಾಧ್ಯವಾಗುವುದು ಕೆಲವರಿಗೆ ಮಾತ್ರ. ಹೊರಕ್ಕೆ ಬರಬೇಕು ಅಂದುಕೊಳ್ಳುವಷ್ಟರಲ್ಲಿ, ಆರೋಗ್ಯವು ಸರಿಪಡಿಸಲಾಗದ ಹಂತಕ್ಕೆ ತಲುಪಿರುತ್ತದೆ. ಪುರುಷರು ಮಹಿಳೆಯರೆಂಬ ಬೇಧವಿಲ್ಲದೆ ಇತ್ತೀಚೆಗಿನ ದಿನಗಳಲ್ಲಿ ಧೂಮಪಾನದ ಚಟಕ್ಕೆ ದಾಸರಾಗುತ್ತಿದ್ದಾರೆ. ಪುರುಷರ ಆರೋಗ್ಯವನ್ನು ಕಾಡುವಂತೆಯೇ ಸಹಜವಾಗಿಯೇ ಮಹಿಳೆಯರ ಆರೋಗ್ಯಕ್ಕೂ ಇದು ಮಾರಕ. ಆದರೆ ಮಹಿಳೆಯ ವಿಚಾರಕ್ಕೆ ಬಂದರೆ, ಈ ಚಟದ ಪರಿಣಾಮ ಮಹಿಳೆಯರನ್ನು ಸ್ವಲ್ಪ ಹೆಚ್ಚೇ ಕಾಡುತ್ತದೆ. ಕಾರಣ ಮಹಿಳೆಯರ ಹಾರ್ಮೋನು, ಆಕೆಗೆ ಪ್ರಕೃತಿದತ್ತವಾಗಿ ಬಂದಿರುವ ತಾಯಿಯಾಗುವ ಹೊಣೆ ಇತ್ಯಾದಿ. ಬನ್ನಿ, ಮಹಿಳೆಯರು ಧೂಮಪಾನಿಗಳಾದರೆ, ಯಾವೆಲ್ಲ ಆರೋಗ್ಯ ಸಮಸ್ಯೆಗಳು ಆಕೆಯನ್ನು ಕಾಡುವ ಅಪಾಯ ಹೆಚ್ಚು ಎಂಬುದನ್ನು (smoking effects) ವಿವರವಾಗಿ ನೋಡೋಣ.

Cancer Patient Resting Spinach Benefits

ಕ್ಯಾನ್ಸರ್‌

ಧೂಮಪಾನದಿಂದ ಕಾರ್ಸಿನೋಜೆನ್‌ಗಳು ಡಿಎನ್‌ಎ ಮಟ್ಟದಲ್ಲಿ ದೇಹಕ್ಕೆ ಹಾನಿ ಮಾಡುವುದಲ್ಲದೆ, ಕ್ಯಾನ್ಸರ್‌ನ ಜೀವಕೋಶಗಳು ಬೆಳೆಯುವುದನ್ನು ಪ್ರೋತ್ಸಾಹಿಸುತ್ತದೆ. ಮುಖ್ಯವಾಗಿ, ಶ್ವಾಸಕೋಶಗಳು, ಸ್ತನ, ಕಿಡ್ನಿ ಹಾಗೂ ಗರ್ಭಕಂಠದ ಕ್ಯಾನ್ಸರ್‌ ಧೂಮಪಾನದಿಂದಲೂ ಬರುವ ಸಾಧ್ಯತೆಗಳು ಹೆಚ್ಚು. ಧೂಮಪಾನವನ್ನು ತ್ಯಜಿಸುವುದರಿಂದ ಕ್ಯಾನ್ಸರ್‌ನ ಭಯದಿಂದ ಖಂಡಿತವಾಗಿಯೂ ದೂರವಿರಬಹುದು. ಆಗಾಗ ಪರೀಕ್ಷೆ, ವ್ಯಾಯಾಮ, ಸರಿಯಾದ ಆಹಾರ ಹಾಗೂ ಆರೋಗ್ಯಕರ ಜೀವನಶೈಲಿಯಿಂದ ಆರೋಗ್ಯ ಸಾಧ್ಯ.

Heart Attack

ಹೃದಯದ ಕಾಯಿಲೆ

ಸಿಗರೇಟಿನಲ್ಲಿರುವ ನಿಕೋಟಿನ್‌ ಹಾಗೂ ಇತರ ರಾಸಾಯಿಕಗಳಿಂದ ರಕ್ತನಾಳಗಳು ಸಂಕುಚಿತವಾಗುವುದಲ್ಲದೆ, ಅಧಿಕ ರಕ್ತದೊತ್ತಡದಂಥ ಸಮಸ್ಯೆಗಳೂ ಆಗಬಹುದು. ಇದರಿಂದ ಹೃದಯಾಘಾತ, ಪಾರ್ಶ್ವವಾಯು ಮತ್ತಿತರ ಸಮಸ್ಯೆಗಳು ಬರುವ ಅಪಾಯ ಹೆಚ್ಚು.

Breathing problem

ಉಸಿರಾಟದ ಕಾಯಿಲೆಗಳು

ಧೂಮಪಾನದಿಂದ ಶ್ವಾಸಕೋಶದ ಕಾಯಿಲೆಗಳು ಬರುವ ಸಂಭವ ಅತ್ಯಂತ ಹೆಚ್ಚು. ಕ್ರೋನಿಕ್‌ ಅಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ ಎಂಬ ಅಪಾಯಕಾರಿ ಶ್ವಾಸಕೋಶದ ಕಾಯಿಲೆ, ಶ್ವಾಸಕೋಶದ ಕ್ಯಾನ್ಸರ್‌ ಬರಬಹುದು. ಸಿಗರೇಟು ಬಿಟ್ಟು, ಉತ್ತಮ ಆಹಾರ ಶೈಲಿ ಹಾಗೂ ಆರೋಗ್ಯಕರ ಜೀವನಶೈಲಿಯಿಂದ ಈ ಅಪಾಯವನ್ನು ತಪ್ಪಿಸಬಹುದು.

ಸಂತಾನೋತ್ಪತ್ತಿಯ ಸಮಸ್ಯೆ

ಧೂಮಪಾನದ ಅಭ್ಯಾಸವು ನೇರವಾಗಿ ನಿಮ್ಮ ಹಾರ್ಮೋನುಗಳ ಮೇಲೆ ಪರಿಣಾಮ ಬೀರುವುದರಿಂದ ಸಂತಾನೋತ್ಪತ್ತಿಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಬಹುಬೇಗನೆ ಮೆನೋಪಾಸ್‌ ಆಗುವುದು, ಮಕ್ಕಳನ್ನು ಮಾಡಿಕೊಳ್ಳಲು ತೊಂದರೆಯಾಗುವುದು, ಗರ್ಭದಲ್ಲಿರುವ ಮಗುವಿಗೆ ಸಮಸ್ಯೆಗಳಾಗುವುದು ಇತ್ಯಾದಿ ಸಮಸ್ಯೆಗಳು ಮಹಿಳೆಯರನ್ನು ತೀವ್ರವಾಗಿ ಕಾಡಬಹುದು.

Rheumatoid Arthritis

ಸಂಧಿವಾತ

ಧೂಮಪಾನವು ನಮ್ಮ ದೇಹದಲ್ಲಿ ಕ್ಯಾಲ್ಶಿಯಂ ಹೀರಿಕೆಗೆ ಅಡ್ಡಿ ಉಂಟು ಮಾಡುತ್ತದೆ. ಇದು ಎಲುಬಿನ ಸಾಂದ್ರತೆಯ ಮೇಲೆ ಪರಿಣಾಮ ಬೀರುವುದರಿಂದ ಕ್ಯಾಲ್ಶಿಯಂ ಕೊರತೆಯಿಂದಾಗಿ ಸಂಧಿವಾತ, ಮೂಳೆ ಸವೆತದಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

ಬಹುಬೇಗನೆ ಮುಪ್ಪಿನ ಲಕ್ಷಣಗಳು

ಧೂಮಪಾನ ಮಾಡುವುದರಿಂದ ಚರ್ಮದಲ್ಲಿ ರಕ್ತಪರಿಚಲನೆಗೆ ಅಡ್ಡಿಯುಂಟಾಗುತ್ತದೆ. ಇದರಿಂದ ಚರ್ಮ ಸುಕ್ಕಾಗುವುದು, ನಿರಿಗೆಗಳು ಉಂಟಾಗಿ ಬಹುಬೇಗನೆ ನಿಜವಾದ ವಯಸ್ಸಿಗಿಂತ ಹೆಚ್ಚು ವಯಸ್ಸಾದಂತೆ ಕಾಣಿಸಬಹುದು. ಮಹಿಳೆಯರ ಸೌಂದರ್ಯದ ಮೇಲೆ ಇದು ಬೀರುವ ಪರಿಣಾಮ ಹೆಚ್ಚು.

Immunity Against Diseases Lemon Water Benefits

ರೋಗನಿರೋಧಕ ಶಕ್ತಿಯ ಕೊರತೆ

ಧೂಮಪಾನದಿಂದ ರೋಗನಿರೋಧಕತೆಯ ಮೇಲೆ ಪರಿಣಾಮ ಬೀರಬಹುದು. ರೋಗ ನಿರೋಧಕ ಶಕ್ತಿ ಕುಂಠಿತವಾಗಿ ಸುಲಭವಾಗಿ ರೋಗಗಳಿಗೆ ತುತ್ತಾಗಬಹುದು. ಸರಿಯಾದ ನಿದ್ದೆ, ಆರೋಗ್ಯಕರ ಆಹಾರ ಮತ್ತು ಜೀವನಶೈಲಿಯ ಜೊತೆಗೆ ಧೂಮಪಾನವನ್ನು ತ್ಯಜಿಸಿದರೆ, ಮತ್ತೆ ಮೊದಲಿನಂತಾಗಬಹುದು.

Pregnancy

ಗರ್ಭಧಾರಣೆ ಸಮಸ್ಯೆಗಳು

ಮಹಿಳೆಯರಲ್ಲಿ ಮುಖ್ಯವಾಗಿ ಕಾಣುವ ಸಮಸ್ಯೆ ಎಂದರೆ ಅದು ಗರ್ಭಧಾರಣೆಗೆ ಸಂಬಂಧಿಸಿದ್ದು. ಧೂಮಪಾನದ ಚಟವಿರುವ ಮಹಿಳೆಯರಲ್ಲಿ, ಗರ್ಭಸ್ರಾವ, ಗರ್ಭಪಾತ, ಮಗುವಿನ ಬೆಳವಣಿಗೆಯಲ್ಲಿ ಕುಂಠಿತ ಮತ್ತಿತರ ಸಮಸ್ಯೆಗಳು ಕಾಡಬಹುದು.

Girl lying on the bed, period, stomach pain, menstrual cycle

ಋತುಚಕ್ರದ ಸಮಸ್ಯೆಗಳು

ಧೂಮಪಾನದಿಂದಾಗಿ ಹಾರ್ಮೋನಿನ ಸಮಸ್ಯೆಗಳು ಸಹಜವಾಗಿರುವ ಕಾರಣ ಋತುಚಕ್ರದ ಸಮಸ್ಯೆಗಳೂ ಕೂಡಾ ಕಾಣಿಸಬಹುದು. ಬಹುಬೇಗನೆ ಮೆನೋಪಾಸ್‌ ಕೂಡಾ ಆಗಬಹುದು.

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?ಇದನ್ನೂ ಓದಿ:

ದೈಹಿಕ ಫಿಟ್‌ನೆಸ್‌ ಕೊರತೆ

ಎಲ್ಲಕ್ಕಿಂತ ಮುಖ್ಯವಾಗಿ ಧೂಮಪಾನ ಮಾಡುವುದರಿಂದ ಫಿಟ್‌ನೆಸ್‌ನ ಸಮಸ್ಯೆಯೂ ಕಾಡಬಹುದು. ಶ್ವಾಸಕೋಶದ ಶಕ್ತಿ ಸಾಮರ್ಥ್ಯದಲ್ಲಿ ಇಳಿಮುಖವಾಗುವುದರಿಂದ ಇವು ನೇರವಾಗಿ ಇಡೀ ದೇಹದ ಮಾಂಸಖಂಡ ಹಾಗೂ ದೈಹಿಕ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ.

Continue Reading

ದೇಶ

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Serial Bride: ಅರೇಂಜ್‌ ಮ್ಯಾರೇಜ್‌ ಹೆಸರಿನಲ್ಲಿ ಮಹಿಳೆಯು ಹಲವರಿಗೆ ವಂಚಿಸಿದ್ದಳು. ತಾನು ಸೇರಿ ಏಳು ಜನರ ಗ್ಯಾಂಗ್‌ ಕಟ್ಟಿದ್ದ ಮಹಿಳೆಯು, ವಯಸ್ಸಾದರೂ ಮದುವೆಯಾಗದವರು, ಕಂಕಣ ಭಾಗ್ಯ ಕೂಡಿ ಬರದವರು, ಹೆಂಡತಿ ತೀರಿಕೊಂಡ ಬಳಿಕ ಒಂಟಿಯಾದವರನ್ನು ಗುರುತಿಸಿ, ಅವರನ್ನು ಮದುವೆಯಾಗುತ್ತಿದ್ದಳು. ಬಳಿಕ ಅವರ ಹಣ, ಚಿನ್ನ ಕದ್ದು ಪರಾರಿಯಾಗುತ್ತಿದ್ದಳು. ಈಗ ಈಕೆ ಜೈಲಿನಲ್ಲಿದ್ದು, ಎಚ್‌ಐವಿ ದೃಢಪಟ್ಟಿದೆ. ಇದು ಈಗ ಪೊಲೀಸರು ಹಾಗೂ ವೈದ್ಯಾಧಿಕಾರಿಗಳಿಗೆ ಹೊಸ ಆತಂಕ ತಂದೊಡ್ಡಿದೆ.

VISTARANEWS.COM


on

Serial Bride
Koo

ಲಖನೌ: ದೇಶದ ಹಲವೆಡೆ ಹತ್ತಾರು ಜನರನ್ನು ನಂಬಿಸಿ, ಅವರನ್ನು ಮದುವೆಯಾಗಿ, ಬಳಿಕ ಅವರ ಚಿನ್ನ ಹಾಗೂ ನಗದನ್ನು ದೋಚಿ ಪರಾರಿಯಾಗುತ್ತಿದ್ದ, ಸೀರಿಯಲ್‌ ಬ್ರೈಡ್‌ (ಸರಣಿ ಮದುಮಗಳು ಅಥವಾ Serial Bride) ಎಂದೇ ಖ್ಯಾತಿಯಾಗಿದ್ದ ಮಹಿಳೆಗೆ ಈಗ ಎಚ್‌ಐವಿ ದೃಢಪಟ್ಟಿರುವುದು ವೈದ್ಯಕೀಯ ವರದಿಗಳಿಂದ ಸಾಬೀತಾಗಿದೆ. ಇದು ಈಗ ಪೊಲೀಸರಿಗೆ ಮತ್ತೊಂದು ಸವಾಲಾಗಿದ್ದು, ಈಕೆಯನ್ನು ಮದುವೆಯಾಗಿದ್ದ ಮಾಜಿ ಪತಿಯರನ್ನು ಹುಡುಕಲು ಉತ್ತರ ಪ್ರದೇಶ (Uttar Pradesh) ಹಾಗೂ ಉತ್ತರಾಖಂಡದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಅರೇಂಜ್‌ ಮ್ಯಾರೇಜ್‌ ಹೆಸರಿನಲ್ಲಿ ಮಹಿಳೆಯು ಹಲವರಿಗೆ ವಂಚಿಸಿದ್ದಳು. ತಾನು ಸೇರಿ ಏಳು ಜನರ ಗ್ಯಾಂಗ್‌ ಕಟ್ಟಿದ್ದ ಮಹಿಳೆಯು, ವಯಸ್ಸಾದರೂ ಮದುವೆಯಾಗದವರು, ಕಂಕಣ ಭಾಗ್ಯ ಕೂಡಿ ಬರದವರು, ಹೆಂಡತಿ ತೀರಿಕೊಂಡ ಬಳಿಕ ಒಂಟಿಯಾದವರನ್ನು ಗುರುತಿಸಿ, ಅವರನ್ನು ಮದುವೆಯಾಗುತ್ತಿದ್ದಳು. ಮದುವೆಯಾದ ಬಳಿಕ ಗ್ಯಾಂಗ್‌ನ ಸದಸ್ಯರನ್ನು ತನ್ನ ಸಂಬಂಧಿಕರು ಎಂದು ನೂತನ ವರಗಳಿಗೆ ಪರಿಚಯ ಮಾಡಿಸುತ್ತಿದ್ದಳು. ಇದಾದ ಬಳಿಕ, ಆ ವ್ಯಕ್ತಿಯ ಬಳಿಯ ನಗದು, ಚಿನ್ನಾಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದಳು.

World Aids Vaccine Day

ಹೀಗೆ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಹಲವರಿಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆ ಹಾಗೂ ಆರು ಆರೋಪಿಗಳನ್ನು ಬಂಧಿಸಿದ್ದರು. ಮಹಿಳೆಯ ಸೇರಿ ಏಳು ಜನರನ್ನು ಮುಜಫ್ಫರ್‌ನಗರ ಜೈಲಿನಲ್ಲಿ ಇರಿಸಲಾಗಿದೆ. ಇತ್ತೀಚೆಗೆ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಜಿಲ್ಲಾಸ್ಪತ್ರೆಯ ವೈದ್ಯರು ನೀಡಿದ ವರದಿಯಲ್ಲಿ, ಮಹಿಳೆಗೆ ಏಡ್ಸ್‌ ಇರುವುದು ಪತ್ತೆಯಾಗಿದೆ. ಇದು ಈಗ ಭೀಕರ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಯನ್ನು ತಂದೊಡ್ಡಿದೆ.

“ಮಹಿಳೆಯು ಹಲವು ಜನರಿಗೆ ವಂಚಿಸಿದ್ದು, ಹತ್ತಾರು ಜನರು ಈಕೆಯ ಜತೆ ದೈಹಿಕ ಸಂಪರ್ಕಕ್ಕೆ ಬಂದಿದ್ದಾರೆ. ಈಗ ಮಹಿಳೆಗೆ ಎಚ್‌ಐವಿ ಇದೆ ಎಂಬುದು ಇತ್ತೀಚಿನ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ. ಈಕೆಯ ಜತೆ ಲೈಂಗಿಕ ಸಂಪರ್ಕ ಹೊಂದಿದವರು, ಮದುವೆಯಾದವರನ್ನು ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಹುಡುಕಲಾಗುತ್ತಿದೆ” ಎಂದು ಮುಜಫ್ಫರ್‌ನಗರ ಜೈಲು ಎಸ್‌ಪಿ ಸೀತಾರಾಮ್‌ ಶರ್ಮಾ ಅವರು ಸುದ್ದಿಗಾರರರಿಗೆ ಮಾಹಿತಿ ನೀಡಿದ್ದಾರೆ. ಇನ್ನು, ಈಕೆಯನ್ನು ಮದುವೆಯಾದವರು ಕೂಡಲೇ ಎಚ್‌ಐವಿ ತಪಾಸಣೆ ಮಾಡಿಸಿಕೊಳ್ಳಿ ಎಂಬುದಾಗಿ ವೈದ್ಯಾಧಿಕಾರಿಗಳು ಕರೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Sebi Fines: ವಂಚನೆ ಪ್ರಕರಣ; ಟಿವಿ ನಿರೂಪಕ, ವಿಶ್ಲೇಷಕನಿಗೆ ತಲಾ 1 ಕೋಟಿ ರೂ. ದಂಡ ವಿಧಿಸಿದ ಸೆಬಿ

Continue Reading

ಆರೋಗ್ಯ

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Weight loss Tips: ವಯಸ್ಸೆಂಬುದು ಒಂದು ಸಂಖ್ಯೆ ಮಾತ್ರ ಎನ್ನುವವರು ಲೋಕದ ತುಂಬೆಲ್ಲ ಇದ್ದಾರೆ. ಹಾಗಾದರೆ ವಯಸ್ಸೆಷ್ಟು ಎಂದು ಕೇಳಿದರೆ, ಅದೊಂದು ಸಂಖ್ಯೆಯನ್ನು ಹೇಳಲು ಸಿದ್ಧರಿರುವುದಿಲ್ಲ! ವಯಸ್ಸನ್ನು ಹೇಳಿದರೂ ಹೇಳದಿದ್ದರೂ ಆಗುವುದಂತೂ ಹೌದಲ್ಲ? ಅದರಲ್ಲೂ ನಮ್ಮ ಅಂಗಾಂಗಗಳು ತಮ್ಮ ಕ್ಷಮತೆಯಲ್ಲಿ ಅದನ್ನು ತೋರಿಸಿಯೇ ಬಿಡುತ್ತವೆ. ಉದಾ, ಹಿಂದೊಮ್ಮೆ ಕಲ್ಲನ್ನಾದರೂ ತಿಂದು ಕರಗಿಸುತ್ತಿದ್ದ ಹೊಟ್ಟೆ, ಈಗೀಗ ಊಟವನ್ನೇ ಅರಗಿಸುವುದಕ್ಕೆ ಉಸ್ಸಪ್ಪ ಎನ್ನುವುದಾದರೆ, ವಯಸ್ಸು 40 ದಾಟಿದ್ದು ಹೌದು ಎಂದರ್ಥ. ಹಾಗಾದರೆ ಪ್ರಾಯ 40 ಆದ ಮೇಲೆ ದೇಹದ ಕೊಬ್ಬು ಕರಗಿಸುವುದು ಹೇಗೆ?

VISTARANEWS.COM


on

Weight Loss Tips
Koo

ಹಿಂದೆ ಕಲ್ಲನ್ನಾದರೂ ತಿಂದು (Weight loss Tips) ಕರಗಿಸುತ್ತಿದ್ದ ಹೊಟ್ಟೆ, ಈಗೀಗ ಊಟವನ್ನೇ ಅರಗಿಸುವುದಕ್ಕೆ ಉಸ್ಸಪ್ಪ ಎನ್ನುವುದಾದರೆ, ವಯಸ್ಸು 40 ದಾಟಿದ್ದು ಹೌದು ಎಂದರ್ಥ. ಈ ಗುಟ್ಟನ್ನು ದೇಹದ ಚಯಾಪಚಯ ಹೇಳಿಯೇ ಬಿಡುತ್ತದೆ. ತಿಂದಿದ್ದು ಕರಗುತ್ತಿಲ್ಲ ಎಂದಾದರೆ ಆ ಕೊಬ್ಬೆಲ್ಲ ಕುಳಿತುಕೊಳ್ಳುವುದು ದೇಹದಲ್ಲೇ ತಾನೆ? ಹಾಗಾದರೆ ಪ್ರಾಯ 40 ಆದ ಮೇಲೆ ದೇಹದ ಕೊಬ್ಬು ಕರಗಿಸುವುದು ಹೇಗೆ?

Weight Loss Benefits Of Eating Roasted Peanuts Daily

ವಯಸ್ಸೆಂಬುದು ಒಂದು ಸಂಖ್ಯೆ ಮಾತ್ರ ಎನ್ನುವವರು ಲೋಕದ ತುಂಬೆಲ್ಲ ಇದ್ದಾರೆ. ಹಾಗಾದರೆ ವಯಸ್ಸೆಷ್ಟು ಎಂದು ಕೇಳಿದರೆ, ಅದೊಂದು ಸಂಖ್ಯೆಯನ್ನು ಹೇಳಲು ಸಿದ್ಧರಿರುವುದಿಲ್ಲ! ಇರಲಿ, ವಿಷಯ ಅದಲ್ಲ. ವಯಸ್ಸನ್ನು ಹೇಳಿದರೂ ಹೇಳದಿದ್ದರೂ, ಆಗುವುದಂತೂ ಹೌದಲ್ಲ. ಅದರಲ್ಲೂ ನಮ್ಮ ಅಂಗಾಂಗಗಳು ತಮ್ಮ ಕ್ಷಮತೆಯಲ್ಲಿ ಅದನ್ನು ತೋರಿಸಿಯೇ ಬಿಡುತ್ತವೆ. ಉದಾ, ಹಿಂದೊಮ್ಮೆ ಕಲ್ಲನ್ನಾದರೂ ತಿಂದು ಕರಗಿಸುತ್ತಿದ್ದ ಹೊಟ್ಟೆ, ಈಗೀಗ ಊಟವನ್ನೇ ಅರಗಿಸುವುದಕ್ಕೆ ಉಸ್ಸಪ್ಪ ಎನ್ನುವುದಾದರೆ, ವಯಸ್ಸು ೪೦ ದಾಟಿದ್ದು ಹೌದು. ಈ ಗುಟ್ಟನ್ನು ದೇಹದ ಚಯಾಪಚಯ ಹೇಳಿಯೇ ಬಿಡುತ್ತದೆ. ತಿಂದಿದ್ದು ಕರಗುತ್ತಿಲ್ಲ ಎಂದಾದರೆ ಆ ಕೊಬ್ಬೆಲ್ಲ ಕುಳಿತುಕೊಳ್ಳುವುದು ದೇಹದಲ್ಲೇ ತಾನೆ? ಹಾಗಾದರೆ ಪ್ರಾಯ 40 ಆದ ಮೇಲೆ ದೇಹದ ಕೊಬ್ಬು ಕರಗಿಸುವುದು ಹೇಗೆ? ಹೆಚ್ಚಿನ ಸಾರಿ ತೂಕ ಕರಗಿಸುವ ಭರದಲ್ಲಿ ಚುಟುಕು ಡಯೆಟ್‌ಗಳ ಮೊರೆ ಹೋಗುತ್ತೇವೆ. ಆಗದಿರುವಂಥ ಸರ್ಕಸ್‌ಗಳಲ್ಲಿ ತೊಡಗಿಸಿಕೊಳ್ಳುತ್ತೇವೆ. ಇದರ ಪರಿಣಾಮವೇನೆಂದರೆ ದೇಹದಲ್ಲಿ ಕೊಬ್ಬು ಕರಗುವ ಬದಲು, ನೀರಿನಿಂದ ಇರುವಂಥ ತೂಕ ಮಾತ್ರವೇ ಕ್ಷಿಪ್ರವಾಗಿ ಕರಗುತ್ತದೆ. ಅದೂ ಇಲ್ಲದಿದ್ದರೆ ಸ್ನಾಯುಗಳು ಮಾಯವಾಗಿ ದೇಹ ತೊಂದರೆಗೆ ಸಿಲುಕುತ್ತದೆ. ಇದರ ಜೊತೆಗೆ ತಪ್ಪಾಗಿ ವ್ಯಾಯಾಮಗಳನ್ನೂ ಮಾಡಿದರೆ, ಗಾಯಗಳ ಸಮಸ್ಯೆ ತಲೆದೋರುತ್ತದೆ. ಪ್ರಾಯ ಹೆಚ್ಚುತ್ತಿದ್ದಂತೆ ಗಾಯ ಮಾಯುವುದು ನಿಜಕ್ಕೂ ಕಷ್ಟ. ಹಾಗಾದರೆ ಸುಸ್ಥಿರವಾಗಿ ಮತ್ತು ಸುರಕ್ಷಿತವಾಗಿ ತೂಕ ಇಳಿಸುವುದಕ್ಕೆ 40ರ ನಂತರ ಏನು ಮಾಡಬೇಕು?

Dieting concept. Healthy Food. Beautiful Young Asian Woman

ಆಹಾರದ ಬಗ್ಗೆ ಗಮನ

ಬೆಳಗಿನ ಉಪಾಹಾರದಲ್ಲಿ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್‌ ಒದಗಿಸಬೇಕು ಜೊತೆಗೆ ಕ್ಯಾಲರಿ ಇಳಿಸಬೇಕು. ಅಂದರೆ, ನಿಮಗೆ ಬೆಳಗ್ಗೆ 1200 ಕ್ಯಾಲರಿಯ ಆಹಾರ ಬೇಕು ಎಂದಿದ್ದರೆ, ಅದನ್ನು ಅಂದಾಜು 900 ಕ್ಯಾಲರಿಗಳಿಗೆ ಇಳಿಸುವುದು. ಈ ಆಹಾರದಲ್ಲಿ ಪ್ರೊಟೀನ್‌ ಮತ್ತು ಸಂಕೀರ್ಣ ಪಿಷ್ಟಗಳು ಭರಿತವಾಗಿ ಇರಬೇಕು. ಇದರಿಂದ ಶರೀರ ಸೊರಗುವುದಿಲ್ಲ ಮತ್ತು ಹಸಿವೂ ಆಗುವುದಿಲ್ಲ. ದೇಹಕ್ಕೆ ಬೇಕಾದ ಉಳಿದ 300 ಕ್ಯಾಲರಿಯನ್ನು ಶರೀರ ತನ್ನ ಕೊಬ್ಬಿನ ದಾಸ್ತಾನಿನಿಂದ ತೆಗೆದುಕೊಳ್ಳುತ್ತದೆ. ಇದನ್ನು ಎಲ್ಲಾ ಹೊತ್ತಿನ ಆಹಾರಗಳಲ್ಲೂ ಕ್ರಮೇಣ ಅಳವಡಿಸಿಕೊಳ್ಳಬಹುದು. ಋತುಮಾನದ ಸೊಪ್ಪು-ಹಣ್ಣು-ತರಕಾರಿಗಳು ಊಟದಲ್ಲಿ ಸಾಕಷ್ಟಿರಲಿ. ಇದರಿಂದ ನಾರು ಭರಪೂರ ದೊರೆಯುತ್ತದೆ. ಖನಿಜಗಳು ಕೊರತೆಯಾಗದಂತೆ ನೋಡಿಕೊಳ್ಳಲು ಇದಿಷ್ಟು ಆಹಾರಗಳು ಸಾಕಾಗುತ್ತವೆ. ಜೊತೆಗೆ ಚೆನ್ನಾಗಿ ನೀರು ಕುಡಿಯಿರಿ.

Asia woman doing yoga fitness exercise Inflammation

ವ್ಯಾಯಾಮ

ಯೋಗದಂಥ ವ್ಯಾಯಾಮಗಳು ಸರಳ ಎನ್ನಿಸಿದರೂ ಹಲವು ರೀತಿಯಲ್ಲಿ ಪ್ರಯೋಜನಕಾರಿ. ದೇಹ-ಮನಸ್ಸುಗಳನ್ನು ಶಾಂತವಾಗಿಸುವುದರ ಜೊತೆಗೆ, ದೇಹದ ವಿವಿಧ ಸ್ನಾಯುಗಳನ್ನು ಸಶಕ್ತಗೊಳಿಸುತ್ತವೆ. ಕೀಲುಗಳ ಆರೋಗ್ಯ ಸುಧಾರಿಸಿ ದೇಹದ ನಮ್ಯತೆಯನ್ನೂ ಹೆಚ್ಚಿಸುತ್ತದೆ. ಇವೆಲ್ಲ ಕ್ರಮೇಣ ನೆರವಾಗುವುದು ದೇಹದ ಕೊಬ್ಬು ಕರಗಿಸುವಲ್ಲಿ.

ಇದನ್ನೂ ಓದಿ: Seeds For Men Sexual Power: ಪುರುಷರ ಲೈಂಗಿಕ ಶಕ್ತಿ ಹೆಚ್ಚಳಕ್ಕೆ ಈ ಬೀಜಗಳು ಪರಿಣಾಮಕಾರಿ!

ಕಾರ್ಡಿಯೊ

ಇದಕ್ಕಾಗಿ ಥ್ರೆಡ್‌ಮಿಲ್‌ಗಳ ಮೇಲೆ ಉಸಿರುಗಟ್ಟಿ ಓಡಬೇಕೆಂದಿಲ್ಲ. ಸರಳವಾಗಿ ಬೀಸು ನಡಿಗೆ, ಜಾಗಿಂಗ್‌ ಸಹ ಸಾಕಾಗುತ್ತದೆ. ನಿಮ್ಮಿಷ್ಟದ ಇಂಥ ಯಾವುದೇ ವ್ಯಾಯಾಮ ಮಾಡಬಹುದು. ಕಾರ್ಡಿಯೊ ವ್ಯಾಯಾಮಗಳು ದೇಹಕ್ಕೆ ಆಮ್ಲಜನಕದ ಪ್ರಮಾಣವನ್ನು ಹೆಚ್ಚಿಸಿ, ಹೃದಯದ ಆರೋಗ್ಯ ಹೆಚ್ಚಿಸುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ ಕ್ಯಾಲರಿ ಕರಗುವ ಪ್ರಮಾಣವನ್ನು ಅಧಿಕಗೊಳಿಸುತ್ತವೆ.

May Improve Sleep Quality Fish Benefits

ನಿದ್ದೆ

ಆರೋಗ್ಯದ ವಿಷಯ ಹೇಳುವಾಗ ನಿದ್ದೆಯನ್ನುಳಿದು ಮುಂದೆ ಹೋಗುವಂತೆಯೇ ಇಲ್ಲ. ತೂಕ ಇಳಿಸುವುದು, ಫಿಟ್‌ನೆಸ್‌ ಇತ್ಯಾದಿಗಳ ವಿಷಯ ಮಾತಾಡುವಾಗ ನಿದ್ದೆಯನ್ನು ಸಂಪೂರ್ಣ ಮರೆತೇ ಬಿಟ್ಟಿರುತ್ತೇವೆ. ದೇಹದ ರಿಪೇರಿಗೆ ಅಗತ್ಯ ಅವಕಾಶವನ್ನು ನೀಡದಿದ್ದರೆ ಯಾವುದೂ ಸರಿಯಾಗಿ ಆಗುವುದಿಲ್ಲ. ಆದರೆ ದಿನಕ್ಕೆ ಕಡ್ಡಾಯ 7-8 ತಾಸು ನಿದ್ದೆ ಮಾಡಿ. ಜೊತೆಗೆ, ನಿದ್ರೆಗೆಟ್ಟರೆ ತೂಕ ಹೆಚ್ಚುತ್ತದೆ. ನಿದ್ದೆ ಇಲ್ಲದಿದ್ದರೆ ಮಾನಸಿಕ ಒತ್ತಡ ಹೆಚ್ಚುತ್ತದೆ, ಇದರಿಂದಲೂ ತೂಕ ಏರುತ್ತದೆ. ಮತ್ತೆ ತೂಕ ಇಳಿಸುವುದು ಹೇಗೆ ಸಾಧ್ಯ?

Continue Reading

ಆರೋಗ್ಯ

Health Tips Kannada: ಕುಂಬಳಕಾಯಿ ಬೀಜದಲ್ಲಿದೆ ನಮ್ಮ ಆರೋಗ್ಯದ ಗುಟ್ಟು!

Health Tips Kannada: ʻಅಲ್ಲೇನಿದೆ? ಕುಂಬಳಕಾಯಿ!ʼ ಎಂದು ಸಸಾರ ಮಾಡುವಂತಿಲ್ಲ ಈ ತರಕಾರಿಯನ್ನು. ಕುಂಬಳಕಾಯಿಯ ಸತ್ವಗಳ ಬಗ್ಗೆ ತಿಳಿದರೆ, ಆಡಿಕೊಳ್ಳುವ ಬಾಯಿಗಳೆಲ್ಲ ಮುಚ್ಚಿಕೊಳ್ಳಬಹುದು. ಇಡೀ ಕುಂಬಳಕಾಯಿ ಬಿಡಿ, ಅದರ ಬೀಜಗಳ ಮಹಾತ್ಮೆಯನ್ನು ತಿಳಿದುಕೊಂಡರೂ ಸಾಕು ಎಷ್ಟೊಂದು ಆರೋಗ್ಯಕರ ಲಾಭಗಳನ್ನು ಪಡೆಯಬಹುದು ಗೊತ್ತೇ? ಹೆಚ್ಚಿನ ಮಾಹಿತಿ ಈ ಲೇಖನದಲ್ಲಿದೆ.

VISTARANEWS.COM


on

Health Tips Kannada
Koo

ಕುಂಬಳಕಾಯಿ ಎನ್ನುತ್ತಿದ್ದಂತೆ (Health Tips Kannada) ಹೆಗಲು ಮುಟ್ಟಿಕೊಳ್ಳುವ ವಿಷಯ ಅಲ್ಲವಿದು. ಕುಂಬಳಬೀಜದ ವಿಷಯ ನಾವಿಲ್ಲಿ ಮಾತಾಡುತ್ತಿರುವುದು. ʻಅಲ್ಲೇನಿದೆ. ಬರೀ ಕುಂಬಳಕಾಯಿʼ ಎನ್ನುವಂಥ ಮಾತುಗಳಿಂದ ಅದೊಂದು ಕೇವಲವಾದ ವಸ್ತು ಎನ್ನುವಂಥ ಭಾವ ಮೂಡುತ್ತದೆ. ಆದರೆ ಕುಂಬಳಕಾಯಿಯ ಸತ್ವಗಳ ಬಗ್ಗೆ ತಿಳಿದರೆ, ಆಡಿಕೊಳ್ಳುವ ಬಾಯಿಗಳೆಲ್ಲ ಮುಚ್ಚಿಕೊಳ್ಳಬಹುದು. ಇಡೀ ಕುಂಬಳಕಾಯಿ ಬಿಡಿ, ಅದರ ಬೀಜಗಳ ಮಹಾತ್ಮೆಯನ್ನು ತಿಳಿದುಕೊಂಡರೂ ಸಾಕು. ನಾವಿಂದು ಮಾಡುವುದಕ್ಕೆ ಹೊರಟಿರುವುದು ಅದನ್ನೇ… ಕುಂಬಳ ಬೀಜಗಳ ಸದ್ಗುಣಗಳನ್ನು ತಿಳಿಯಲು. ಹಲವು ಸಮಸ್ಯೆಗಳಿಗೆ ಸರಳ ಸಮಾಧಾನದಂತೆ ಈ ಪುಟ್ಟ ಬೀಜಗಳು ಕಂಡುಬರುತ್ತವೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು, ಹೃದಯದ ಆರೋಗ್ಯ ಸುಧಾರಿಸುವವರೆಗೆ ಹಲವು ರೀತಿಯಲ್ಲಿ ಕುಂಬಳಬೀಜ ನಮಗೆ ಉಪಕಾರಿಯಾಗಬಲ್ಲದು. ಹಲವು ರೀತಿಯ ಖನಿಜಗಳು ಮತ್ತು ವಿಟಮಿನ್‌ಗಳಿಂದ ಸಮೃದ್ಧವಾಗಿರುವ ಈ ಜೀವಗಳು, ಹಸಿವಾದಾಗ ಅಥವಾ ಕಳ್ಳ ಹಸಿವೆಯನ್ನು ನಿವಾರಿಸುವುದನ್ನು ಸುಮ್ಮನೆ ಬಾಯಾಡುವುದಕ್ಕೆ ಜೊತೆಯಾಗುತ್ತವೆ. ಇದನ್ನು ಗೋಡಂಬಿಯಂತೆ ಹಲವು ಖಾದ್ಯಗಳಿಗೆ ಬಳಸಬಹುದು. ಚಿಟಿಕೆ ಉಪ್ಪಿನೊಂದಿಗೆ ಹುರಿದರೆ, ಚಹಾ ಜೊತೆಗೆ ಬಾಯಿಗೆಸೆದುಕೊಳ್ಳಬಹುದು.

Immunity Against Diseases Kantola Benefits

ಪ್ರತಿರೋಧಕತೆ ಹೆಚ್ಚಳ

ವಿಟಮಿನ್‌ ಇ ಮತ್ತು ಜಿಂಕ್‌ ಸತ್ವಗಳಿಂದ ಸಮೃದ್ಧವಾಗಿರುವ ಈ ಬೀಜಗಳು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಲ್ಲವು. ಸೋಂಕುಗಳ ವಿರುದ್ಧ ಹೋರಾಡುವಂಥ ಸಾಮರ್ಥ್ಯ ವಿಟಮಿನ್‌ ಇ ಗಿದೆ. ದೇಹದಲ್ಲಿ ಅಂಡಲೆಯುವ ಮುಕ್ತ ಕಣಗಳನ್ನು ಕಟ್ಟಿಹಾಕುವ ಸಾಧ್ಯತೆಯೂ ಇ ಜೀವಸತ್ವಕ್ಕಿದೆ. ಪ್ರತಿರೋಧಕ ಶಕ್ತಿಯನ್ನು ಜಾಗೃತಗೊಳಿಸುವ ಬಗ್ಗೆ ಸತುವಿನ ಕಾರ್ಯಸಾಮರ್ಥ್ಯ ಕಡಿಮೆಯೇನಿಲ್ಲ. ಹಾಗಾಗಿ ಮಳೆಗಾಲದ ಸೋಂಕುಗಳನ್ನು ಮಟ್ಟ ಹಾಕುವುದಕ್ಕೆ ಉಳಿದೆಲ್ಲ ಕ್ರಮಗಳ ಜೊತೆಗೆ ಕುಂಬಳಬೀಜ ಬಾಯಾಡಿಸುವುದನ್ನು ಮರೆಯಬೇಡಿ.

Vastu Tips

ನಿದ್ದೆ ಹೆಚ್ಚಳ

ಕುಂಬಳಬೀಜದಲ್ಲಿ ಟ್ರಿಪ್ಟೊಫ್ಯಾನ್‌ ಎಂಬ ಅಮೈನೊ ಆಮ್ಲವಿದೆ. ಇದು ಸೆರೊಟೋನಿನ್‌ ಮತ್ತು ಮೆಲಟೋನಿನ್‌ನಂಥ ಹ್ಯಾಪಿ ಹಾರ್ಮೋನುಗಳ ಉತ್ಪಾದನೆಗೆ ಪ್ರಚೋದನೆ ನೀಡುತ್ತದೆ. ಈ ಹಾರ್ಮೋನುಗಳು ನಮ್ಮ ಮೂಡ್‌ ಮತ್ತು ನಿದ್ದೆಯನ್ನು ನಿಯಂತ್ರಿಸುತ್ತವೆ. ಹಾಗಾಗಿ ನಿದ್ರಾಹೀನತೆಯನ್ನು ದೂರ ಮಾಡಿ, ಕಣ್ತುಂಬಾ ನಿದ್ದೆ ತರಿಸಿ, ದೇಹ-ಮನಸ್ಸುಗಳ ಆರೋಗ್ಯವನ್ನು ಕಾಪಾಡುವಲ್ಲಿ ಈ ಕಿರುಬೀಜಗಳದ್ದು ದೊಡ್ಡ ಕಾಣಿಕೆ.

ಉತ್ಕರ್ಷಣ ನಿರೋಧಕತೆ

ಇದರಲ್ಲಿ ವಿಟಮಿನ್‌ ಇ ಮಾತ್ರವಲ್ಲ, ದೊಡ್ಡ ಪ್ರಮಾಣದಲ್ಲಿ ಕೆರೊಟಿನಾಯ್ಡ್‌ಗಳೂ ಇವೆ. ಇವೆಲ್ಲ ದೇಹವನ್ನು ಉರಿಯೂತದಿಂದ ಕಾಪಾಡುವ ಗುಣವನ್ನು ಹೊಂದಿವೆ. ದೇಹದ ಕೋಶಗಳನ್ನು ಮುಕ್ತಕಣಗಳಿಂದ ಕಾಪಾಡಿ, ಅವುಗಳ ಜೀವಿತಾವಧಿಯನ್ನು ಹೆಚ್ಚಿಸುತ್ತವೆ. ಇದರಿಂದ ದಾಂಗುಡಿಯಿಡುವ ಮಾರಕ ರೋಗಗಳನ್ನು ದೂರ ಮಾಡುವುದಕ್ಕೆ ಸಾಧ್ಯವಾಗುತ್ತದೆ.

healthy internal organs of human digestive system

ಜೀರ್ಣಕಾರಿ

ಇದರಲ್ಲಿರುವ ನಾರಿನಂಶದಿಂದಾಗಿ ಜೀರ್ಣಾಂಗಗಳ ಆರೋಗ್ಯ ಸುಧಾರಿಸುತ್ತದೆ. ಮಲಬದ್ಧತೆಯನ್ನು ನಿವಾರಿಸಿ, ಪಚನಕ್ರಿಯೆಯನ್ನು ಚುರುಕಾಗಿಸುತ್ತದೆ. ನಾರುಯುಕ್ತ ಆಹಾರಗಳು ಜೀರ್ಣಾಂಗಗಳ ಆರೋಗ್ಯಕ್ಕೆ ಮಾತ್ರವಲ್ಲ, ತೂಕ ಇಳಿಕೆಗೂ ಸೂಕ್ತವಾದವು. ಇಂಥ ಆಹಾರಗಳು ಬೇಗನೇ ಹೊಟ್ಟೆ ತುಂಬಿದ ಅನುಭವವನ್ನು ನೀಡಿ, ಬೇಗ ಹಸಿವಾಗದಂತೆ ತಡೆಯುತ್ತವೆ.

ಮೆಗ್ನೀಶಿಯಂ ವಿಫುಲ

ದೇಹದ ಹಲವು ಕೆಲಸಗಳನ್ನು ನಿರ್ವಹಿಸುವುದಕ್ಕೆ ನಮಗೆ ಮೆಗ್ನೀಶಿಯಂ ಅಗತ್ಯವಾದ ಖನಿಜ. ರಕ್ತದೊತ್ತಡ ಸಮತೋಲನದಲ್ಲಿ ಇರಿಸುವುದು, ಸ್ನಾಯು ಮತ್ತು ನರಗಳ ಆರೋಗ್ಯ ರಕ್ಷಣೆ, ಮೂಳೆಗಳನ್ನು ಭದ್ರಗೊಳಿಸುವುದು ಮತ್ತು ದೇಹಕ್ಕೆ ಬೇಕಾದ ಶಕ್ತಿ ಒದಗಿಸುವಂಥ ಹಲವು ಕೆಲಸಗಳು ಈ ಖನಿಜದ ಪಾಲಿಗಿದೆ. ಜೊತೆಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ, ಬದುಕಿನ ಸ್ವಾಸ್ಥ್ಯ ಹೆಚ್ಚಿಸುವುದಕ್ಕೆ ಮೆಗ್ನೀಶಿಯಂ ಬೇಕು. ಈ ಖನಿಜ ಕುಂಬಳ ಬೀಜದಲ್ಲಿ ಹೇರಳವಾಗಿದೆ.

Obese male suffering from chest pain high blood pressure cholesterol level Sesame Benefits

ಕೊಲೆಸ್ಟ್ರಾಲ್‌ ಕಡಿಮೆ

ಕುಂಬಳಕಾಯಿ ಬೀಜಗಳಲ್ಲಿ ಆರೋಗ್ಯಯುತ ಕೊಬ್ಬು ಮತ್ತು ಪ್ರೊಟೀನ್‌ಗಳು ತುಂಬಿವೆ. ಆರೋಗ್ಯಕರ ಕೊಬ್ಬಿನ ಸೇವನೆಯಿಂದ ದೇಹದಲ್ಲಿರುವ ಕೊಲೆಸ್ಟ್ರಾಲ್‌ನಂಥ ಬೇಡದ ಕೊಬ್ಬು ಜಮೆಯಾಗುವುದನ್ನು ತಡೆಯಬಹುದು. ಇದರಿಂದ ಹೃದಯದ ತೊಂದರೆಗಳನ್ನೂ ದೂರ ಇರಿಸಬಹುದು. ಹಾಗಾಗಿ ಸುಮ್ಮನೆ ತಿನ್ನಿ, ಹುರಿದು ತಿನ್ನಿ, ಟೋಸ್ಟ್‌ ಮಾಡಿ ತಿನ್ನಿ, ಬೇರೆ ಖಾದ್ಯಗಳಿಗೆ ಬಳಸಿ- ಹೇಗಾದರೂ ಸರಿ, ಕುಂಬಳ ಬೀಜವನ್ನು ನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಿ, ಆರೋಗ್ಯ ಹೆಚ್ಚಿಸಿಕೊಳ್ಳಿ.

Continue Reading
Advertisement
murder case anekal
ಕ್ರೈಂ13 mins ago

Murder Case: ಬಾರ್‌ನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

lk advani
ಪ್ರಮುಖ ಸುದ್ದಿ36 mins ago

LK Advani: ಮಾಜಿ ಉಪ ಪ್ರಧಾನಿ ಎಲ್‌ ಕೆ ಆಡ್ವಾಣಿ ಅಸ್ವಸ್ಥ, ಏಮ್ಸ್‌ಗೆ ದಾಖಲು

Smoking Effects
ಆರೋಗ್ಯ46 mins ago

Smoking Effects: ಮಹಿಳೆಯರೇ, ಧೂಮಪಾನದಿಂದ ನಿಮ್ಮ ಆರೋಗ್ಯದ ಮೇಲಾಗುವ ಪರಿಣಾಮದ ಅರಿವಿದೆಯೇ?

Vastu Tips
ಧಾರ್ಮಿಕ1 hour ago

Vastu Tips: ಬಾತ್ ರೂಮ್‌ನಲ್ಲಿ ಈ ವಸ್ತುಗಳಿದ್ದರೆ ಕುಟುಂಬಕ್ಕೆ ಭಾರಿ ಸಂಕಷ್ಟ!

Karnataka Weather
ಕರ್ನಾಟಕ1 hour ago

Karnataka Weather: ಇಂದು ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಹಲವೆಡೆ ಶಾಲೆಗಳಿಗೆ ರಜೆ!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯವರು ತಮಗೆ ಸಂಬಂಧಪಡದ ವಿಷಯದಲ್ಲಿ ಮೂಗು ತೂರಿಸುವುದು ಬೇಡ!

ollie robinson
ಪ್ರಮುಖ ಸುದ್ದಿ8 hours ago

Ollie Robinson: 6, 6nb, 4, 6, 4, 6nb, 4, 6nb, 1; ಒಂದೇ ಓವರ್‌ನಲ್ಲಿ 43 ರನ್‌ ಕೊಟ್ಟ ಇಂಗ್ಲೆಂಡ್‌ ಬೌಲರ್; Video ಇದೆ

Serial Bride
ದೇಶ8 hours ago

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Demand to provide job reservation for Kannadigas; Massive Dharani sathyagraha on July 1 from Karave
ಕರ್ನಾಟಕ9 hours ago

Bengaluru News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ; ಕರವೇಯಿಂದ ಜು.1ರಂದು ಬೃಹತ್ ಧರಣಿ ಸತ್ಯಾಗ್ರಹ

Attica Babu
ಕರ್ನಾಟಕ10 hours ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌